ನೂತನ ರಾಷ್ಟ್ರ ಲಾಂಛನ ವಿರೋಧಿಗಳನ್ನು ಅರ್ಬನ್‌ ನಕ್ಸಲ್ಸ್‌ ಎಂದು ಕರೆದ ವಿವೇಕ್‌ ಅಗ್ನಿಹೋತ್ರಿ - Vistara News

ದೇಶ

ನೂತನ ರಾಷ್ಟ್ರ ಲಾಂಛನ ವಿರೋಧಿಗಳನ್ನು ಅರ್ಬನ್‌ ನಕ್ಸಲ್ಸ್‌ ಎಂದು ಕರೆದ ವಿವೇಕ್‌ ಅಗ್ನಿಹೋತ್ರಿ

ನೂತನ ರಾಷ್ಟ್ರ ಲಾಂಛನಕ್ಕೆ ವ್ಯಕ್ತವಾಗುತ್ತಿರುವ ವಿರೋಧವನ್ನು ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಖಂಡಿಸಿದ್ದಾರೆ. ಎರಡು ಟ್ವೀಟ್‌ಗಳ ಮೂಲಕ ವಿರೋಧಿಗಳನ್ನು ವ್ಯಂಗ್ಯಮಾಡಿದ್ದಾರೆ.

VISTARANEWS.COM


on

Vivek Agnihotri
ವಿವೇಕ್‌ ಅಗ್ನಿಹೋತ್ರಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನೂತನ ಸಂಸತ್‌ ಭವನದ ಮೇಲೆ ನಿರ್ಮಾಣಗೊಂಡ ರಾಷ್ಟ್ರ ಲಾಂಛನಕ್ಕೆ ಒಂದು ವರ್ಗದ ಜನರು ವಿರೋಧ ವ್ಯಕ್ತಪಡಿಸುತ್ತಿದ್ದರೆ, ಇನ್ನೊಂದಷ್ಟು ಮಂದಿ ಅದನ್ನು ಸಮರ್ಥಿಸಿಕೊಂಡು, ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿದ್ದಾರೆ. ಅವರಲ್ಲಿ ಒಬ್ಬರು ಚಿತ್ರ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ. ನೂತನವಾಗಿ ನಿರ್ಮಾಣ ಮಾಡಲಾದ ರಾಷ್ಟ್ರೀಯ ಲಾಂಛನದಲ್ಲಿ ಸಿಂಹಗಳ ಮುಖ ಕ್ರೂರತೆಯನ್ನು ಬಿಂಬಿಸುತ್ತದೆ. ಇದು ಮೂಲ ಲಾಂಛನದಂತೆ ಇಲ್ಲ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್‌ ಮತ್ತು ಇತರ ಪ್ರತಿಪಕ್ಷಗಳ ಪ್ರಮುಖರನ್ನು ವಿವೇಕ್‌ ಅಗ್ನಿಹೋತ್ರಿ ʼಅರ್ಬನ್‌ ನಕ್ಸಲರುʼ ಎಂದು ಕರೆದಿದ್ದಾರೆ.

ರಾಷ್ಟ್ರ ಲಾಂಛನಕ್ಕೆ ವ್ಯಕ್ತವಾಗುತ್ತಿರುವ ವಿರೋಧವನ್ನು ಖಂಡಿಸಿ ಟ್ವೀಟ್‌ ಮಾಡಿದ ವಿವೇಕ್‌ ಅಗ್ನಿಹೋತ್ರಿ, ʼಆಯಾಮವನ್ನು ಬದಲಿಸಿ, ಅದರಲ್ಲೂ ಕೆಳಭಾಗದಿಂದ ಸೆರೆಹಿಡಿಯಲಾದ ಫೋಟೋದಿಂದ ಕೂಡ ಈ ಅರ್ಬನ್‌ ನಕ್ಸಲ್‌ಗಳನ್ನು ಮೂರ್ಖರನ್ನಾಗಿಸಬಹುದು ಎಂಬುದನ್ನು ಸಂಸತ್‌ ಭವನದ ಮೇಲಿರುವ ಹೊಸ ರಾಷ್ಟ್ರೀಯ ಲಾಂಛನ ತೋರಿಸಿಕೊಟ್ಟಿದೆʼ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ʼಈ ಅರ್ಬನ್‌ ನಕ್ಸಲರಿಗೆ ಬೇಕಾಗಿರುವುದು ಹಲ್ಲುಗಳಿಲ್ಲದ, ಬಾಯಿ ಮುಚ್ಚಿಕೊಂಡಿರುವ ಸಿಂಹ. ಅವರು ಸಿಂಹಗಳನ್ನೂ ಸಾಕುಪ್ರಾಣಿಯಂತೆ ನೋಡಲು ಬಯಸುತ್ತಿದ್ದಾರೆʼ ಎಂದು ವ್ಯಂಗ್ಯವಾಡಿದ್ದಾರೆ.

ಮಹುವಾ ಟೀಕೆ
ಕಾಂಗ್ರೆಸ್‌ನ ಜೈರಾಮ್‌ ರಮೇಶ್‌, ಅಧೀರ್‌ ರಂಜನ್‌ ಚೌಧರಿ ಸೇರಿ ಹಲವು ನಾಯಕರು ರಾಷ್ಟ್ರಲಾಂಛನವನ್ನು ವಿರೋಧಿಸಿದ್ದಾರೆ. ಅದರೊಂದಿಗೆ, ಇತ್ತೀಚೆಗಷ್ಟೇ ಕಾಳಿ ಮಾತೆ ಬಗ್ಗೆ ಸಲ್ಲದ ಮಾತುಗಳನ್ನಾಡಿ ವಿವಾದ ಹುಟ್ಟುಹಾಕಿದ್ದ ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೋಯಿತ್ರಾ ಕೂಡ ರಾಷ್ಟ್ರ ಲಾಂಛನದ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ʼಈ ಲಾಂಛನದಲ್ಲಿ ಸತ್ಯಮೇವ ಜಯತೆ ಇದ್ದಲ್ಲಿ, ಸಂಘಿಮೇವ ಜಯತೆʼ ಎಂಬ ವಾಕ್ಯ ಇದ್ದರೆ ಇನ್ನಷ್ಟು ಪರಿಪೂರ್ಣವಾಗುತ್ತಿತ್ತುʼ ಎಂದು ಹೇಳಿದ್ದರು. ಅದನ್ನು ಬಿಜೆಪಿ ನಾಯಕರು ವಿರೋಧಿಸಿದ್ದು, ʼ ಮಹುವಾ ಮೊಯಿತ್ರಾ ನಾವೀನ್ಯತೆಯನ್ನು ಅರೆದು ಕುಡಿದ ತಜ್ಞೆʼ ಎಂದು ಅಪಹಾಸ್ಯ ಮಾಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ಲಾಂಛನವನ್ನು ಕೆಳಭಾಗದಿಂದ ತೆಗೆದ ಫೋಟೋ ವೈರಲ್‌ ಆಗ್ತಿದೆ; ಶಿಲ್ಪಿ ಸುನಿಲ್‌ ಡಿಯೋರ್‌ ಸ್ಪಷ್ಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Narendra Modi: ನರೇಂದ್ರ ಮೋದಿ ಅವರನ್ನು ನೋಡುತ್ತಲೇ ಜಾರ್ಜಿಯಾ ಮೆಲೋನಿ ಖುಷಿಯಾದರು. ನಗುತ್ತಲೇ ಕೈಮುಗಿದು ಮೋದಿ ಅವರನ್ನು ತಮ್ಮ ದೇಶಕ್ಕೆ ಸ್ವಾಗತಿಸಿದರು. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೂರನೇ ಬಾರಿಗೆ ಪ್ರಧಾನಿಯಾಗಿದ್ದಕ್ಕೂ ಮೆಲೋನಿ ಅವರು ಅಭಿನಂದನೆ ತಿಳಿಸಿದರು ಎಂದು ತಿಳಿದುಬಂದಿದೆ. ಇನ್ನು, ಇಬ್ಬರೂ ಆತ್ಮೀಯವಾಗಿ ಮಾತುಕತೆ ನಡೆಸಿದ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ರೋಮ್:‌ 50ನೇ ಆವೃತ್ತಿಯ ಜಿ 7 ಶೃಂಗಸಭೆಯಲ್ಲಿ (G 7 Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಇಟಲಿಯ ಅಪುಲಿಯಾಗೆ ತೆರಳಿದ್ದಾರೆ. ಇನ್ನು, ಜಿ 7 ಸಭೆ ನಡೆಯುವ ಸ್ಥಳಕ್ಕೆ ತೆರಳಿದ ನರೇಂದ್ರ ಮೋದಿ ಅವರಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ನಮಸ್ತೆ ಎಂದು ಕೈಮುಗಿದು ಭಾರತದ ಸಂಪ್ರದಾಯದಂತೆ ಸ್ವಾಗತಿಸಿದ್ದಾರೆ. ಮೋದಿ ಹಾಗೂ ಮೆಲೋನಿ ಅವರು ಆತ್ಮೀಯ ಸ್ನೇಹಿತರಾಗಿದ್ದು, ಇಬ್ಬರೂ ಕೆಲ ನಿಮಿಷ ಆತ್ಮೀಯವಾಗಿ ಮಾತುಕತೆ ನಡೆಸಿರುವ ವಿಡಿಯೊ ವೈರಲ್‌ ಆಗಿದೆ.

ಭಾರತವು ಜಿ7 ರಾಷ್ಟ್ರಗಳ ಒಕ್ಕೂಟದ ಸದಸ್ಯ ರಾಷ್ಟ್ರವಾಗಿರದಿದ್ದರೂ ಜಾರ್ಜಿಯಾ ಮೆಲೋನಿ ಅವರು ನರೇಂದ್ರ ಮೋದಿ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದಾರೆ. ಮೋದಿ ಅವರು ಶುಕ್ರವಾರ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್‌, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಸೇರಿ ಹಲವು ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನೂ ಹಲವು ನಾಯಕರೊಂದಿಗೆ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಮೋದಿ+ಮೆಲೋನಿ= ಮೆಲೋಡಿ ಎಂದೇ ಟ್ರೋಲ್‌

ನರೇಂದ್ರ ಮೋದಿ ಹಾಗೂ ಜಾರ್ಜಿಯಾ ಮೆಲೋನಿ ಅವರ ಫೋಟೊ ಹಾಗೂ ವಿಡಿಯೊಗಳು ದೇಶದಲ್ಲಿ ಜಾಸ್ತಿ ಟ್ರೋಲ್‌ ಆಗುತ್ತಿರುತ್ತವೆ. ಅದರಲ್ಲೂ, ಮೋದಿ ಹಾಗೂ ಮೆಲೋನಿ ಎಂಬ ಪದಗಳನ್ನು ಸೇರಿಸಿ ಮೆಲೋಡಿ ಎಂದೇ ಕರೆಯುತ್ತಾರೆ. ಈಗ ಮೋದಿ ಅವರು ಇಟಲಿಗೆ ಹೋಗಿದ್ದು, ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮೆಲೋಡಿ ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

2023ರ ಡಿಸೆಂಬರ್‌ 2ರಂದು ಯುಎಇ ದೇಶದ ರಾಜಧಾನಿ ದುಬೈನಲ್ಲಿ ನಡೆದ 28ನೇ ಕಾನ್ಫರೆನ್ಸ್‌ ಆಫ್‌ ದಿ ಪಾರ್ಟೀಸ್‌ (COP28) ಶೃಂಗಸಭೆಯಲ್ಲಿ ನರೇಂದ್ರ ಮೋದಿ ಹಾಗೂ ಜಾರ್ಜಿಯಾ ಮೆಲೋನಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಇದೇ ವೇಳೆ ಜಾರ್ಜಿಯಾ ಮೆಲೋನಿ ಅವರು ನರೇಂದ್ರ ಮೋದಿ ಅವರ ಜತೆ ಸೆಲ್ಫಿ ತೆಗೆಸಿಕೊಂಡಿದ್ದರು. “ಸಿಒಪಿ28 ಸಭೆಯಲ್ಲಿ ಆತ್ಮೀಯ ಸ್ನೇಹಿತರು” ಎಂದು ಒಕ್ಕಣೆ ಬರೆದಿದ್ದರು. ಅಷ್ಟೇ ಅಲ್ಲ, ಮೆಲೋನಿ+ಮೋದಿ= ಮೆಲೋಡಿ ಎಂಬ ಅರ್ಥ ಬರುವ ಕಾರಣ ಮೆಲೋಡಿ ಎಂಬ ಹ್ಯಾಶ್‌ ಟ್ಯಾಗ್‌ ಬಳಸಿದ್ದರು. ಈ ಫೋಟೊ ಭಾರಿ ವೈರಲ್‌ ಆಗಿದ್ದು, ಸಾವಿರಾರು ಜನ ಪ್ರತಿಕ್ರಿಯಿಸಿದ್ದರು.

ಮೋದಿಯನ್ನು ಹಾಡಿ ಹೊಗಳಿದ್ದ ಮೆಲೋನಿ

ಜಾರ್ಜಿಯಾ ಮೆಲೋನಿ ಅವರು ಇದಕ್ಕೂ ಮೊದಲು ನರೇಂದ್ರ ಮೋದಿ ಅವರನ್ನು ಹೊಗಳಿದ್ದರು. ರೈಸಿನಾ ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಜಾರ್ಜಿಯಾ ಮೆಲೋನಿ, “ನರೇಂದ್ರ ಮೋದಿ ಅವರು ವಿಶ್ವದ ನಾಯಕರಲ್ಲಿಯೇ ಹೆಚ್ಚು ಪ್ರೀತಿಗೆ ಪಾತ್ರರಾಗಿದ್ದಾರೆ. ಅವರು ಧೀಮಂತ ನಾಯಕರು ಎಂಬುದು ಸಾಬೀತಾಗಿದೆ. ಇದಕ್ಕಾಗಿ ಮೋದಿ ಅವರಿಗೆ ಅಭಿನಂದನೆಗಳು” ಎಂದಿದ್ದರು. “ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಾಗೂ ಇಟಲಿ ಸಂಬಂಧ ಮತ್ತಷ್ಟು ವೃದ್ಧಿಯಾಗುತ್ತಿದೆ. ಉಭಯ ದೇಶಗಳ ಸಂಬಂಧವನ್ನು ವ್ಯೂಹಾತ್ಮಕ ಸಂಬಂಧವಾಗಿ ಮಾರ್ಪಡಿಸಲು ನಾವು ಉತ್ಸುಕರಾಗಿದ್ದೇವೆ. ಇದರಿಂದ ಎರಡೂ ದೇಶಗಳ ಸಂಬಂಧ ಇನ್ನಷ್ಟು ವೃದ್ಧಿಯಾಗಲಿದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ: Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

Continue Reading

ದೇಶ

Raaj Kumar Anand: ಆಪ್‌ ಮಾಜಿ ಸಚಿವ ರಾಜ್‌ ಕುಮಾರ್‌ ಆನಂದ್‌ ಶಾಸಕ ಸ್ಥಾನದಿಂದಲೂ ಅನರ್ಹ; ಕಾರಣ ಇಲ್ಲಿದೆ

Raaj Kumar Anand: ರಾಜ್‌ ಕುಮಾರ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಮ್‌ ಆದ್ಮಿ ಪಕ್ಷವನ್ನು ತೊರೆದು, ಅವರು ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆಯಾಗಿದ್ದರು. ಅಷ್ಟೇ ಅಲ್ಲ, ಬಿಎಸ್‌ಪಿ ಸೇರಿ, ನವದೆಹಲಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರ ಕುರಿತಂತೆ ಪ್ರತಿಕ್ರಿಯಿಸಬೇಕು ಎಂಬುದಾಗಿ ಸ್ಪೀಕರ್‌ ಅವರಿಗೆ ನೋಟಿಸ್‌ ನೀಡಿದ್ದರು. ಆದರೆ, ನೋಟಿಸ್‌ಗೆ ರಾಜ್‌ ಕುಮಾರ್‌ ಆನಂದ್‌ ಪ್ರತಿಕ್ರಿಯೆ ನೀಡಿರಲಿಲ್ಲ.

VISTARANEWS.COM


on

Raaj Kumar Anand
Koo

ನವದೆಹಲಿ: ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾದ ಬೆನ್ನಲ್ಲೇ ದೆಹಲಿ ವಿಧಾನಸಭೆ ಸದಸ್ಯತ್ವದಿಂದ ಶಾಸಕ ರಾಜ್‌ ಕುಮಾರ್‌ ಆನಂದ್‌ ಅವರನ್ನು ಅನರ್ಹಗೊಳಿಸಲಾಗಿದೆ. ಈ ಕುರಿತು ಸ್ಪೀಕರ್‌ ರಾಮ್‌ ನಿವಾಸ್‌ ಗೋಯಲ್‌ (Ram Niwas Goel) ಮಾಹಿತಿ ನೀಡಿದ್ದಾರೆ. ರಾಜ್‌ ಕುಮಾರ್‌ ಆನಂದ್‌ ಅವರು ಆಮ್‌ ಆದ್ಮಿ ಪಕ್ಷದ ನಾಯಕರಾಗಿದ್ದರು. ಅಲ್ಲದೆ, ಇವರು ದೆಹಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಈಗ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

“ರಾಜ್‌ ಕುಮಾರ್‌ ಆನಂದ್‌ ಅವರಿಗೆ ಜೂನ್‌ 10ರೊಳಗೆ ಪ್ರತಿಕ್ರಿಯೆ ನೀಡಬೇಕು ಎಂದು ನೋಟಿಸ್‌ ನೀಡಲಾಗಿತ್ತು ಆದರೆ, ಅವರು ನೋಟಿಸ್‌ಗೆ ಇದುವರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಜೂನ್‌ 11ರಂದು ಹಾಜರಾಗಬೇಕು ಎಂದು ಕೂಡ ಅದೇ ನೋಟಿಸ್‌ನಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೂ, ಅವರು ಹಾಜರಾಗಿಲ್ಲ. ಜೂನ್‌ 14ರವರೆಗೆ ಹಾಜರಾಗಲು ಕೂಡ ಸಮಯಾವಕಾಶ ನೀಡಲಾಗಿತ್ತು. ಹೀಗಿದ್ದರೂ ಅವರು ಹಾಜರಾಗಿಲ್ಲ. ಹಾಗಾಗಿ, ವಿಧಾನಸಭೆಯಿಂದ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ” ಎಂದು ಸ್ಪೀಕರ್‌ ತಿಳಿಸಿದ್ದಾರೆ.

ಯಾಕಾಗಿ ಅನರ್ಹ?

ರಾಜ್‌ ಕುಮಾರ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಮ್‌ ಆದ್ಮಿ ಪಕ್ಷವನ್ನು ತೊರೆದು, ಅವರು ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆಯಾಗಿದ್ದರು. ಅಷ್ಟೇ ಅಲ್ಲ, ಬಿಎಸ್‌ಪಿ ಸೇರಿ, ನವದೆಹಲಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಹಾಗಾಗಿ, ಅವರಿಗೆ ಸ್ಪೀಕರ್‌ ರಾಮ್‌ ನಿವಾಸ್‌ ಗೋಯಲ್‌ ಅವರು ನೋಟಿಸ್‌ ಜಾರಿಗೊಳಿಸಿದ್ದರು. ರಾಜ್‌ ಕುಮಾರ್‌ ಆನಂದ್‌ ಅವರು 2020ರ ವಿಧಾನಸಭೆ ಚುನಾವಣೆಯಲ್ಲಿ ಆಪ್‌ನಿಂದ ಸ್ಪರ್ಧಿಸಿ, ಪಟೇಲ್‌ ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಇವರಿಗೆ ಸಚಿವ ಸ್ಥಾನವನ್ನೂ ನೀಡಲಾಗಿತ್ತು.

ಏಪ್ರಿಲ್‌ 10ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ

ಕಳೆದ ಏಪ್ರಿಲ್‌ 10ರಂದು ರಾಜ್‌ ಕುಮಾರ್‌ ಆನಂದ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಜತೆಗೆ ಆಮ್‌ ಆದ್ಮಿ ಪಕ್ಷವನ್ನೂ ತೊರೆದಿದ್ದರು. “ದೆಹಲಿಯ ಸಮಾಜ ಕಲ್ಯಾಣ ಖಾತೆ ಸಚಿವ ಸ್ಥಾನ ಹಾಗೂ ಆಮ್‌ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಮಾರ್ಚ್‌ 21ರಂದೇ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವಾಗಿದೆ. ಇದುವರೆಗೆ ಅವರು ರಾಜೀನಾಮೆ ನೀಡಿಲ್ಲ. ಆಮ್‌ ಆದ್ಮಿ ಪಕ್ಷವು ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಭ್ರಷ್ಟರ ಜತೆ ಕೆಲಸ ಮಾಡಲು ಇಷ್ಟಪಡುವುದಿಲ್ಲ. ಹಾಗಾಗಿ ಪಕ್ಷದಿಂದ ಹೊರಬಂದಿರುವೆ” ಎಂದು ರಾಜ್‌ ಕುಮಾರ್‌ ಆನಂದ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಆಮ್‌ ಆದ್ಮಿ ಪಕ್ಷದ ಕುರಿತು ರಾಜ್‌ ಕುಮಾರ್‌ ಆನಂದ್‌ ಅವರು ಹಲವು ಆರೋಪ ಮಾಡಿದರು. “ಆಪ್‌ನಲ್ಲಿ ದಲಿತ ಸಚಿವರು, ಶಾಸಕರು ಹಾಗೂ ಕೌನ್ಸಿಲರ್‌ಗಳಿಗೆ ಗೌರವ ಇಲ್ಲ. ಪಕ್ಷದಲ್ಲಿ ದಲಿತರಿಗೆ ಮೋಸ ಮಾಡಲಾಗುತ್ತಿದೆ. ಇಂತಹ ವಾತಾವರಣದಲ್ಲಿ ನನಗೆ ಕೆಲಸ ಮಾಡಲು ಆಗುವುದಿಲ್ಲ. ನಾನು ರಾಜೀನಾಮೆ ನೀಡಿರುವ ಸಂದರ್ಭದ ಕುರಿತು ಮಾತನಾಡಬೇಕಿಲ್ಲ. ಯಾವಾಗ ಹೈಕೋರ್ಟ್‌ ಜಾಮೀನು ಅರ್ಜಿ ತಿರಸ್ಕರಿಸಿತೋ, ದೊಡ್ಡ ಪ್ರಮಾದವೇ ನಡೆದಿದೆ ಎಂಬುದು ತಿಳಿಯಿತು. ಹಾಗಾಗಿ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ವಜಾ-ನ್ಯಾಯಾಂಗ ಬಂಧನ ವಿಸ್ತರಣೆ

Continue Reading

ದೇಶ

Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Ram Mandir: ಅಯೋಧ್ಯೆಯಲ್ಲಿರುವ ರಾಮಮಂದಿರವನ್ನು ಸ್ಫೋಟಿಸುವ ಕುರಿತು ಜೈಶೆ ಮೊಹಮ್ಮದ್‌ ಉಗ್ರರು ಬೆದರಿಕೆ ಹಾಕಿದ ಆಡಿಯೊ ವೈರಲ್‌ ಆಗಿದೆ. ಇದರ ಬೆನ್ನಲ್ಲೇ, ರಾಮಮಂದಿರದ ಸುತ್ತಮುತ್ತ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಮನಗರಿಯ ಎಲ್ಲೆಡೆ ವಾಹನಗಳ ತಪಾಸಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

Ram Mandir
Koo

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು (Ram Mandir) ಸ್ಫೋಟಿಸಲಾಗುವುದು ಎಂದು ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ. ರಾಮಮಂದಿರದ ಮೇಲೆ ಬಾಂಬ್‌ ದಾಳಿ‌ (Bomb Threat) ಮಾಡಲಾಗುವುದು ಎಂದು ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆಯ (Jaish-e-Mohammed) ಆಡಿಯೊ ವೈರಲ್‌ ಆದ ಬೆನ್ನಲ್ಲೇ, ರಾಮಮಂದಿರದ ಸುತ್ತಲೂ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಮಮಂದಿರ ಸ್ಫೋಟಿಸುವ ಕುರಿತು ಜೈಶೆ ಮೊಹಮ್ಮದ್‌ ಉಗ್ರರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ರಾಮಮಂದಿರ ಸುತ್ತಮುತ್ತ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿಟಿವಿಗಳ ಮೂಲಕ ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ. ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳ ಕೂಡ ಅಯೋಧ್ಯೆಯಲ್ಲಿ ಹೆಚ್ಚು ಅಲರ್ಟ್‌ ಆಗಿವೆ. ಅಯೋಧ್ಯೆಯ ಇಂಚಿಂಚೂ ಪ್ರದೇಶದ ಮೇಲೆ ಭದ್ರತಾ ಸಿಬ್ಬಂದಿಯು ನಿಗಾ ಇರಿಸಿದ್ದಾರೆ. ವಾಹನಗಳ ತಪಾಸಣೆಯೂ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು 2024ರ ಜನವರಿ 22ರಂದು ರಾಮಮಂದಿರದಲ್ಲಿ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಇದಾದ ಬಳಿಕ ದೇಶ-ವಿದೇಶಗಳಿಂದ ರಾಮನ ಭಕ್ತರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ನಿತ್ಯ ಸರಾಸರಿ ಒಂದು ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಪಡೆಯುತ್ತಿದ್ದಾರೆ. ರಾಮಮಂದಿರ ನಿರ್ಮಾಣದ ಬಳಿಕ ಅಯೋಧ್ಯೆಯು ದೇಶದ ಪ್ರಮುಖ ಯಾತ್ರಾಸ್ಥಳವಾಗಿ ಬದಲಾಗಿದೆ. ಇದರ ಬೆನ್ನಲ್ಲೇ, ರಾಮಮಂದಿರವನ್ನು ಸ್ಫೋಟಿಸುವ ಕುರಿತು ಉಗ್ರರು ಬೆದರಿಕೆ ಹಾಕಿದ್ದಾರೆ.

ಜಮ್ಮು-ಕಾಶ್ಮೀರದ ಮೂರು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಲ್ಲಿಯೇ ಉಗ್ರರು ದಾಳಿ ನಡೆಸಿದ್ದಾರೆ. ರಿಯಾಸಿ ಜಿಲ್ಲೆಯ ಮೂಲಕ ವೈಷ್ಣೋದೇವಿ ಯಾತ್ರೆಗೆ ತೆರಳುತ್ತಿದ್ದ ಹಿಂದು ಯಾತ್ರಿಕರ ವಾಹನದ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ದೋಡಾ ಹಾಗೂ ಕಥುವಾ ಜಿಲ್ಲೆಯಲ್ಲಿಯೂ ಉಗ್ರರು ದಾಳಿ ನಡೆಸಿದ್ದಾರೆ. ಹಾಗಾಗಿ, ಕಾಶ್ಮೀರದಲ್ಲಿಯೂ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ನರೇಂದ್ರ ಮೋದಿ ಅವರೇ ಖುದ್ದಾಗಿ ಸಭೆ ನಡೆಸಿ, ಉಗ್ರರಿಗೆ ತಿರುಗೇಟು ನೀಡಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ‘ಯೂಸ್‌ಲೆಸ್’ ಎಂದ ಸಮಾಜವಾದಿ ಪಕ್ಷದ ನಾಯಕ; ಬಿಜೆಪಿ ಆಕ್ರೋಶ

Continue Reading

ಟಾಲಿವುಡ್

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Pawan Kalyan: ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು.

VISTARANEWS.COM


on

Pawan Kalyan Fan Narendra cut hairs after Five Years
Koo

ಬೆಂಗಳೂರು: ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ (Telugu Desam Party), ಬಿಜೆಪಿ ಮತ್ತು ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿ (Jana Sena Party)ಯ ಎನ್‌ಡಿಎ (NDA) ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು (ಜೂನ್‌ 12) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡರು. 2019ರ ಚುನಾವಣೆಯಲ್ಲಿ ಪವನ್‌ ಕಲ್ಯಾಣ್‌ ಎರಡೂ ಕ್ಷೇತ್ರಗಳಲ್ಲಿ ಸೋತು ನಗೆಪಾಟಲಿಗೀಡಾಗಿದ್ದರು. ಆ ಸಮಯದಲ್ಲಿ ಪವನ್‌ ಅವರ ಫ್ಯಾನ್‌ ತೋಟ ನರೇಂದ್ರ ಅವರು ಪವನ್ ಗೆದ್ದೇ ಗೆಲ್ಲುತ್ತಾರೆಂದು ಸವಾಲು ಹಾಕಿ, ಪವನ್ ಗೆಲ್ಲುವವರೆಗೂ ತಲೆಗೂದಲು ಕತ್ತರಿವುದಿಲ್ಲ ಎಂದು ಪ್ರಮಾಣ ಮಾಡಿದ್ದರು. ಇದೀಗ ಕೂದಲಿಗೆ ಕತ್ತರಿ ಹಾಕಿದ್ದಾರೆ.

ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು. ಹಾಗಾಗಿ ಆ ಸಮಯದಲ್ಲಿ ನರೇಂದ್ರ ಅವರು ಪ್ರಮಾಣ ಮಾಡಿದರು. ಪವನ್ ಕಲ್ಯಾಣ್ ಗೆದ್ದು ವಿಧಾನಸಭೆಗೆ ಕಾಲಿಡುವವರೆಗೂ ಕೂದಲಿಗೆ ಕತ್ತರಿ ಹಾಕಲ್ಲ ಎಂದು. ಇದೀಗ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡಿದ್ದಾರೆ. ಐದು ವರ್ಷಗಳ ಕಾಲ ಕೂದಲು ಬೆಳೆಸುತ್ತಲೇ ಪಕ್ಷಕ್ಕಾಗಿ ದುಡಿದ ನರೇಂದ್ರ ಕೊನೆಗೂ ಕೂದಲಿಗೆ ಕತ್ತರಿ ಹಾಕಿದ್ದಾರೆ.

ಇದನ್ನೂ ಓದಿ: Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

ಪವನ್ ಕಲ್ಯಾಣ್ ಸೇರಿದಂತೆ ಜನಸೇನಾದ 21 ಅಭ್ಯರ್ಥಿಗಳು ಈ ಬಾರಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದರು. ಎದುರಾಳಿ ವೈಸಿಪಿ ಅಭ್ಯರ್ಥಿ ವಂಗಾ ಗೀತ ವಿರುದ್ಧ ಭಾರಿ ಅಂತರದ ಜಯವನ್ನು ಪವನ್ ಕಲ್ಯಾಣ್ ಪಡೆದಿದ್ದಾರೆ. 

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ ಮೋದಿ ಅವರು ನಾಯ್ಡು ಅವರಿಗೆ ಶುಭ ಕೋರಿದರು. ನಂತರ ಪವನ್‌ ಕಲ್ಯಾಣ್‌ ಅವರು ತಮ್ಮ ಸಹೋದರ ಚಿರಂಜೀವಿ ಕೂಡ ಇಲ್ಲೇ ಇದ್ದಾರೆ ಎಂದು ಮೋದಿ ಅವರಿಗೆ ಹೇಳಿದರು. ಆಗ ಮೋದಿ ಅವರು ಚಿರಂಜೀವಿ ಬಳಿ ಹೋಗಿ, ಅವರ ಹಾಗೂ ಪವನ್‌ ಕಲ್ಯಾಣ್‌ ಕೈ ಹಿಡಿದು ವೇದಿಕೆಗೆ ಕರೆತಂದರು. ಬಳಿಕ ಮೂವರೂ ಕೈ ಎತ್ತಿದರು. ಆ ಮೂಲಕ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು.

Continue Reading
Advertisement
Narendra Modi
ದೇಶ9 mins ago

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Bagalkot News
ಕರ್ನಾಟಕ19 mins ago

Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

Petrodollar Deal
ವಿದೇಶ31 mins ago

Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

Raaj Kumar Anand
ದೇಶ51 mins ago

Raaj Kumar Anand: ಆಪ್‌ ಮಾಜಿ ಸಚಿವ ರಾಜ್‌ ಕುಮಾರ್‌ ಆನಂದ್‌ ಶಾಸಕ ಸ್ಥಾನದಿಂದಲೂ ಅನರ್ಹ; ಕಾರಣ ಇಲ್ಲಿದೆ

Star Saree Fashion
ಫ್ಯಾಷನ್1 hour ago

Star Saree Fashion: ರೇಷ್ಮೆ ಸೀರೆಯಲ್ಲಿ ನಟಿ ಕೀರ್ತಿ ಸುರೇಶ್‌ರಂತೆ ಗ್ಲಾಮರಸ್‌ ಆಗಿ ಕಾಣಿಸಬೇಕೆ? 5 ಟಿಪ್ಸ್ ಫಾಲೋ ಮಾಡಿ!

Sonakshi Sinha
Latest1 hour ago

Sonakshi Sinha: ನಟಿ ಸೋನಾಕ್ಷಿ ಸಿನ್ಹಾ ಐಷಾರಾಮಿ ಅಪಾರ್ಟ್‌ಮೆಂಟ್ ಹೇಗಿದೆ? ವಿಡಿಯೊ ನೋಡಿ!

Karnataka Weather Forecast
ಮಳೆ1 hour ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Gangster Ravi Pujari
ಕರ್ನಾಟಕ1 hour ago

Gangster Ravi Pujari: ಭೂಗತ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

BS Yediyurappa
ಕರ್ನಾಟಕ1 hour ago

BS Yediyurappa: ಪೋಕ್ಸೊ ಕೇಸ್;‌ ಮಾಜಿ ಸಿಎಂಗೇ ಹೀಗಾದರೆ ಜನರ ಗತಿ ಏನು? ಸರ್ಕಾರಕ್ಕೆ ಕೋರ್ಟ್‌ ಚಾಟಿ!

Allergic Asthma
ಆರೋಗ್ಯ1 hour ago

Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌