ಆಷಾಢದಲ್ಲಿ ದೂರುವಿರುವ ನವಜೋಡಿಗಾಗಿಯೇ ನಡೆಯುತ್ತೆ ಈ ವಿಶೇಷ ಜಾತ್ರೆ! - Vistara News

ಚಾಮರಾಜನಗರ

ಆಷಾಢದಲ್ಲಿ ದೂರುವಿರುವ ನವಜೋಡಿಗಾಗಿಯೇ ನಡೆಯುತ್ತೆ ಈ ವಿಶೇಷ ಜಾತ್ರೆ!

ಆಷಾಡ ಮಾಸದಲ್ಲಿ ನವದಂಪತಿಗಳು ನಾನೊಂದು ತೀರಾ ನೀನೊಂದು ತೀರಾವೆಂದು ದೂರ ಇರುವುದು ಸಂಪ್ರದಾಯ. ಗಡಿಜಿಲ್ಲೆ ಚಾಮರಾಜನಗರದಲ್ಲಿ ನಡೆಯುವ ಈ ರಥೋತ್ಸವ ದೂರವಿರುವ ದಂಪತಿಗಳನ್ನು ಒಂದೂಗೂಡಿಸುತ್ತದೆ.

VISTARANEWS.COM


on

ಆಷಾಢ
ಶ್ರೀ ಚಾಮರಾಜೇಶ್ವರ ರಥೋತ್ಸವ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಆಷಾಢ ಮಾಸದಲ್ಲಿ ನವ ವಿವಾಹಿತರು ಒಂದು ತಿಂಗಳುಗಳ ಕಾಲ ಪರಸ್ಪರ ದೂರ ಇರುವುದು ಸಂಪ್ರದಾಯ. ಆಷಾಢ ಪ್ರಾರಂಭವಾಗುವುದಕ್ಕಿಂತ ಮೊದಲೇ ನವ ವಿವಾಹಿತೆ ಗಂಡನ ಮನೆಯಿಂದ ತವರು ಮನೆ ಸೇರುತ್ತಾಳೆ. ಈ ಒಂದು ತಿಂಗಳು ಪತಿ ಹೆಂಡತಿ ಮನೆಗೆ ಬರುವಂತಿಲ್ಲ. ಹೀಗೆ ದೂರವಿರುವ ನವ ವಿವಾಹಿತರಿಗೆ ಪರಸ್ಪರ ಭೇಟಿಯಾಗಲು ಅವಕಾಶ ನೀಡಲೆಂದೇ ಒಂದು ಜಾತ್ರೆ ನಡೆಯುತ್ತದೆ. ಅದು ಚಾಮರಾಜೇಶ್ವರ ಜಾತ್ರೆ!

ಆಷಾಢ ಮಾಸದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಜಾತ್ರೆ ನೆಪದಲ್ಲಿ ನವವಿವಾಹಿತರು ಒಂದೆಡೆ ಸೇರಿ ಹಬ್ಬವನ್ನು ಆಚರಿಸುತ್ತಾರೆ. ಜಾತ್ರೆಯಲ್ಲಿ ಜೋಡಿಯಾಗಿ ಓಡಾಡಿ, ರಥಕ್ಕೆ ಹಣ್ಣು ದವನ ಎಸೆದು ಹರಕೆ ತೀರಿಸುತ್ತಾರೆ.

ನವಜೋಡಿಗಳ ಜಾತ್ರೆ ಸಂಭ್ರಮ

ಜಾತ್ರೆಯಲ್ಲಿ ಕಣ್ಣಾಯಿಸಿದ ಕಡೆಯೆಲ್ಲಾ ನವದಂಪತಿಗಳೇ ಕಂಡು ಬಂದರು. ಕೈ ಕೈ ಹಿಡಿದು ಸುತ್ತಾಡುವ ಚಿತ್ರಣ ಸಾಮಾನ್ಯವಾಗಿತ್ತು. ಸಂಭ್ರಮದ ಜಾತ್ರೆಯಲ್ಲಿ ನವವಿವಾಹಿತರು ಕಂಡಿದ್ದನ್ನೆಲ್ಲ ಕೊಂಡು ಸಂತಸಪಟ್ಟರು.

ಚಾಮರಾಜೇಶ್ವರ ರಥೋತ್ಸವವು ನವದಂಪತಿಗಳ ಜಾತ್ರೆ ಎಂದೇ ಪ್ರಸಿದ್ದಿ ಪಡೆದಿದೆ. ಗಡಿಜಿಲ್ಲೆ ಚಾಮರಾಜನಗರದಲ್ಲಿ ಬುಧವಾರ ಐದು ವರ್ಷಗಳ ಬಳಿಕ ಶ್ರೀ ಚಾಮರಾಜೇಶ್ವರ ರಥೋತ್ಸವ ನಡೆಸಲಾಯಿತು. ರಥೋತ್ಸವಕ್ಕೆ ಮೈಸೂರು ರಾಜವಂಶಸ್ಥ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರು ಚಾಲನೆ ನೀಡಿದರು. ಇದಕ್ಕೂ ಮೊದಲು‌ ಚಾಮರಾಜೇಶ್ವರ ದೇವರಿಗೆ ರಾಜವಂಶದ ಕಡೆಯಿಂದ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ | ಆಷಾಢ ಮಾಸದ ಮೊದಲ ಶುಕ್ರವಾರ; ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

ಹೊಸ ರಥ ಹೆಚ್ಚಿಸಿದ ಸಂಭ್ರಮ

2017ರಲ್ಲಿ ಕಿಡಿಗೇಡಿಯೊಬ್ಬ ಹಚ್ಚಿದ ಬೆಂಕಿಗೆ ಚಾಮರಾಜೇಶ್ವರನ ರಥ ಸುಟ್ಟು ಭಸ್ಮವಾಗಿತ್ತು. ಹೀಗಾಗಿ ಕಳೆದ ಐದು ವರ್ಷಗಳಿಂದ ಈ ರಥೋತ್ಸವ ನಡೆದಿರಲಿಲ್ಲ. ಈಗ 1.20 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ರಥ ನಿರ್ಮಿಸಲಾಗಿದ್ದು, ಆಷಾಡ ಮಾಸದ ಪೂರ್ಣಿಮೆಯ ದಿನದಂದು ಪೂರ್ವಾಷಾಢ ನಕ್ಷತ್ರದಲ್ಲಿ ಚಾಮರಾಜೇಶ್ವರನ ರಥೋತ್ಸವ ಅದ್ಧೂರಿಯಾಗಿ ಜರುಗಿದೆ.

ಹೊಸ ರಥ ಆಕರ್ಷಕವಾಗಿದ್ದು, ವೀರಭದ್ರೇಶ್ವರಸ್ವಾಮಿ, ದಕ್ಷಿಣಾಮೂರ್ತಿ, ಅಘೋರ, ಅಷ್ಟದಿಕ್ಪಾಲಕರು ಸೇರಿದಂತೆ ೧೮೦ ದೇವರ ಚಿತ್ರ ಕೆತ್ತಲಾಗಿದೆ. ೧೮೫೭ ರಿಂದ ಇಲ್ಲಿ ರಥೋತ್ಸವ ನಡೆಸಿಕೊಂಡು ಬರಲಾಗುತ್ತಿದೆ. ಆಷಾಢ ಮಾಸದಲ್ಲಿ ಬರುವ ಪೂರ್ವಾಷಾಢ ನಕ್ಷತ್ರ ಚಾಮರಾಜ ಒಡೆಯರ್‌ ಅವರ ಜನ್ಮ ನಕ್ಷತ್ರವಾಗಿರುವುದರಿಂದ ಅಂದೇ ರಥೋತ್ಸವ ನಡೆಸಿಕೊಂಡು ಬರಲಾಗಿದೆ.

ಇದನ್ನೂ ಓದಿ | ಭದ್ರಾವತಿ: 24 ವರ್ಷಗಳ ನಂತರ ನಡೆದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Karnataka Weather Forecast : ಸೋಮವಾರ ದಾವಣಗೆರೆ, ಕೊಡಗು ಸುತ್ತಮುತ್ತ ಮಳೆಯಾಗಿದ್ದು, ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇತ್ತು. ಜು.2ರಂದು ರಾಜ್ಯಾದ್ಯಂತ ಮಳೆಯಾಗುವ (Rain News) ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ದಾವಣಗೆರೆ: ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗದಲ್ಲಿ ಮಳೆಯು (Rain News) ಅಬ್ಬರಿಸುತ್ತಿದೆ. ಸೋಮವಾರ (ಜು.1) ದಾವಣಗೆರೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ (Karnataka weather Forecast) ಮಳೆಯಾಗಿದೆ. ನಗರದ ಕೆಬಿ ಬಡಾವಣೆ, ಪಿಜೆ ಬಡಾವಣೆಯ ರಸ್ತೆಗಳಲ್ಲಿ ನೀರು ತುಂಬಿ ಹರಿದಿದೆ. ಇತ್ತ ಕೊಡಗಿನಲ್ಲೂ ಆರಿದ್ರಾ ಮಳೆ ಅಬ್ಬರಕ್ಕೆ ನದಿ ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.

ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಮುಳುಗಡೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಪಂಚಗಂಗಾ ಒಳಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ. ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ. ಕೊಲ್ಹಾಪುರ ಜಿಲ್ಲೆಯ ಶಿಂಗನಾಪುರ ಬಳಿ ಇರುವ ಸೇತುವೆ ಮುಳುಗಡೆಗೊಂಡಿದ್ದು, ವಾಹಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಇತ್ತ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೊಲ್ಹಾಪುರ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

ಒಳನಾಡಿನಲ್ಲಿ ಮುಂಗಾರು ಸಕ್ರಿಯ

ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಕ್ರಿಯವಾಗಿದ್ದರೆ, ಕರಾವಳಿಯಲ್ಲಿ ಸಾಧಾರಣವಾಗಿತ್ತು. ಕೊಡಗಿನ ವಿರಾಜಪೇಟೆಯಲ್ಲಿ 13 ಸೆಂ.ಮೀ ಮಳೆಯಾಗಿದೆ. ಜತೆಗೆ ಭಾಗಮಂಡಲ 11, ಆಗುಂಬೆ 9, ಸಿದ್ದಾಪುರ 8, ಕಮ್ಮರಡಿ 8 ಹಾಗೂ ಕುಂದಾಪುರ 7 ಸೆಂ.ಮೀ ಮಳೆಯಾಗಿದೆ. ಉಳಿದಂತೆ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ.

ಕರಾವಳಿಯಲ್ಲಿ ತಗ್ಗಿದ ಮಳೆ ಅಬ್ಬರ

ಜು.2ರಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಅಬ್ಬರವು ತಗ್ಗಿದೆ. ಉತ್ತರ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ತಲುಪಲಿದೆ. ದಕ್ಷಿನ ಒಳನಾಡಿನ ಹಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದ್ದು, ಗರಿಷ್ಟ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 27 ಹಾಗೂ 21 ಡಿ.ಸೆ ಇರಲಿದೆ.

ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಜಾರುವ ಬಂಡೆಗಳ ಮೇಲೆ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಜಲಪಾತಗಳ ಮಧ್ಯೆ ಹೋಗಿ ಜಾರುವ ಬಂಡೆಗಳ ಮೇಲೆ ಸ್ವಲ್ಪ ಯಾಮಾರಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಬಂಡೆಗಳ ಮೇಲೆ ಹತ್ತಿ ಅಪಾಯದ ಸ್ಥಳದಲ್ಲಿ ಡ್ಯಾನ್ಸ್ ಮಾಡುತ್ತಾ ಮೋಜು ಮಸ್ತಿ ಮಾಡುತ್ತಿದ್ದಾರೆ. ನಿರಂತರವಾಗಿ ನೀರು ಹರಿದು ಬಂಡೆ ತೀವ್ರವಾಗಿ ಜಾರುತ್ತಿರುತ್ತೆ. ಈ ಹಿಂದೆಯೂ ಬಿದ್ದು ಕೈ-ಕಾಲು ಮುರಿದುಕೊಂಡಿದ್ದಾರೆ, ಜೀವ ಕಳೆದುಕೊಂಡಿದ್ದಾರೆ. ಬಂಡೆಗಳ ಮೇಲೆ ಹತ್ತದಂತೆ ನಾಮಫಲಕ ಇದ್ದರೂ ಪ್ರವಾಸಿಗರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಇತ್ತ ಪೊಲೀಸರು ಗಸ್ತು ತಿರುಗುತ್ತಿದ್ದರೂ ಕಣ್ತಪ್ಪಿಸಿ ಬಂಡೆ ಹತ್ತುತ್ತಿದ್ದಾರೆ. ಜಲಪಾತಗಳ ಬಳಿ ಕಾರು ನಿಲ್ಲಿಸಿಕೊಂಡು ರಸ್ತೆ ಬದಿಯೂ ಕುಣಿದು ಕುಪ್ಪಳಿಸುತ್ತಾ, ಇತರೆ ವಾಹನಗಳಿಗೂ ಅಡ್ಡಿಯಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

Karnataka Rain : ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಕಲಬುರಗಿಯಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದಿದೆ. ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಬೆಂಗಳೂರಲ್ಲಿ ಅಂಡರ್‌ಪಾಸ್‌ ಜಲಾವೃತಗೊಂಡಿತ್ತು.

VISTARANEWS.COM


on

By

karnataka Weather Forecast
Koo

ಕಲಬುರಗಿ/ಕೊಪ್ಪಳ: ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಕಲಬುರಗಿಯಲ್ಲಿ ಸಿಡಿಲು ಬಡಿದು ಮನೆಯೊಂದು ಹೊತ್ತಿ ಉರಿದಿದೆ. ಕಲಬುರಗಿ ತಾಲೂಕಿನ ಹೊನ್ನ ಕಿರಣಗಿ ಗ್ರಾಮದಲ್ಲಿ‌ಘಟನೆ ನಡೆದಿದೆ.

ರಾಜಕುಮಾರ್ ನಿಂಗಯ್ಯ ಕೋಣಿನ್ ಅವರ ಮನೆಗೆ ಸಿಡಿಲು ಬಡಿದಿದ್ದು, ಸ್ವಲ್ಪದರಲ್ಲೆ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿಯನ್ನು ‌ನಂದಿಸಿದ್ದಾರೆ. ಫರತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಡಗಿನಲ್ಲಿ ಮುಂದುವರೆದ ಆರಿದ್ರಾ ಮಳೆ

ಕೊಡಗಿನಲ್ಲಿ ಆರಿದ್ರಾ ಮಳೆ ಅಬ್ಬರಕ್ಕೆ ನದಿ ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.

ಅಂಡರ್‌ ಪಾಸ್‌ ಜಲಾವೃತ

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಅಂಡರ್ ಪಾಸ್‌ನಲ್ಲಿ ನೀರು ನಿಂತಿದೆ. ನಿನ್ನೆ ಸುರಿದ ಮಳೆಗೆ ಅಂಡರ್ ಪಾಸ್ ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಕೂಡ್ಲಿಗಿಯಲ್ಲಿ ಮಳೆಗಾಗಿ ವಿಶೇಷ ಪೂಜೆ

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಮತ್ತೊಂದು ಕಡೆ ಮಳೆಗಾಗಿ ವಿಶೇಷ ಪೂಜೆ ನಡೆದಿದೆ. ವಿಜಯನಗರದ ಕೂಡ್ಲಿಗಿ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಳೆಗಾಗಿ ಕೊಂತೆಮ್ಮ ಗಂಗೆ ಪೂಜೆಯನ್ನು ಗ್ರಾಮಸ್ಥರು ನೆರವೇರಿಸಿದ್ದಾರೆ. ಪಂಚ ಮುತ್ತೈದೆಯರು, ಪಂಚ ಕನ್ನಿಕೇಯರಿಂದ ವರುಣನ ಕೃಪೆಗಾಗಿ ಕೊಂತೆಮ್ಮ ಗಂಗೆ ಪೂಜೆ ಸಲ್ಲಿಸಿದರು.

ಮೂರು ಕಾಲು ದಾರಿ ಸೇರುವ ವೃತ್ತದಲ್ಲಿ ನೀರು ತುಂಬಿದ ಕುಂಬವೊಂದನ್ನು ಅಲಂಕಾರ ಮಾಡಿ, ಅದನ್ನೇ ಮಳೆ ಕೊಂತೆಮ್ಮಳೆಂದು ವಿಧಿವತ್ತಾಗಿ ಪಂಚ ಮುತ್ತೈದೆಯರಿಂದ ಪ್ರತಿಷ್ಠಾಪನೆ ಮಾಡಿ ಮಳೆಗಾಗಿ ವಿಶೇಷ ಪೂಜೆ ನೆರವೇರಿಸಿದರು.

ಇದನ್ನೂ ಓದಿ: Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

ಸೇತುವೆ ಮುಳುಗಡೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಪಂಚಗಂಗಾ ಒಳಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ. ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ.

ಕೊಲ್ಹಾಪುರ ಜಿಲ್ಲೆಯ ಶಿಂಗನಾಪುರ ಬಳಿ ಇರುವ ಸೇತುವೆ ಮುಳುಗಡೆಗೊಂಡಿದ್ದು, ವಾಹಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಇತ್ತ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೊಲ್ಹಾಪುರ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Karnataka Weather Forecast : ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲೂ ಗುಡುಗು ಮಳೆ

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 30 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಅಲರ್ಟ್‌

ಜು.1ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಜು.1ರಿಂದ ಕೊಡಗಿಗೆ ಭಾರಿ ವಾಹನಗಳ ಓಡಾಟ ನಿಷೇಧ

ಕೊಡಗು: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ (Rain Effect), ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜುಲೈ 1 ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು. ಆದರೆ ಗುಡ್ಡದ ಬದಿಯಿಂದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ.

ಯಾವೆಲ್ಲ ವಾಹನಗಳಿಗೆ ನಿರ್ಬಂಧ?

ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.

ಈ ವಾಹನಗಳಿಗೆ ವಿನಾಯಿತಿ

ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಆದೇಶ ಮೀರಿದರೆ ದಂಡ ಪ್ರಯೋಗ

ಈ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ. ಜತೆಗೆ ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸುವಂತೆ ತಿಳಿಸಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Karnataka Weather Forecast : ಭಾನುವಾರ ಬೆಂಗಳೂರು, ಕಲಬುರಗಿ, ಕೊಪ್ಪಳ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕೊಡಗಿನಲ್ಲಿ ಮಳೆ ಎಫೆಕ್ಟ್‌ನಿಂದಾಗಿ (Rain News) ಭಾರಿ ಗಾತ್ರದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಮೋಡ ಕವಿದ ವಾತಾವರಣ (Karnataka Weather Forecast) ಇತ್ತು. ಮಧ್ಯಾಹ್ನದ ಹೊತ್ತು ಕೆಲವೊಮ್ಮೆ ಜಿಟಿ ಜಿಟಿ ಮಳೆಯ (Rain News) ಸಿಂಚನವಾಗುತ್ತಿತ್ತು. ಭಾನುವಾರ ಗಾಳಿಯೊಂದಿಗೆ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್‌ವೃತ್ತ, ಕಾರ್ಪೋರೇಶನ್ ಸರ್ಕಲ್‌, ಕೆಆರ್‌ ಮಾರ್ಕೆಟ್, ಶೇಷಾದ್ರಿಪುರಂ, ಗಾಂಧಿನಗರ, ಶಿವಾಜಿನಗರ. ವಿಧಾನಸೌಧ ಸುತ್ತಮುತ್ತ ಮಳೆಯಾಗಿದೆ. ಇತ್ತ ದಿಢೀರ್‌ ಬಂದ ಮಳೆಗೆ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಯಿತು.

ಇತ್ತ ಕಲಬುರಗಿಯಲ್ಲಿ ಭಾನುವಾರ ವರುಣನ ಆರ್ಭಟ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದು,ಜನ ಜೀವನ ಅಸ್ತವ್ಯಸ್ತವಾಗಿತ್ತು. ಕೊಪ್ಪಳದಲ್ಲೂ ಕಳೆದ ಒಂದು ವಾರ ಬಿಡುವು ನೀಡಿದ್ದ ಮಳೆರಾಯ ಭಾನುವಾರ ಅಬ್ಬರಿಸಿದ್ದ. ಕೊಪ್ಪಳ ತಾಲೂಕಿನ‌ ಹಿರೇಸಿಂದೋಗಿ ಸುತ್ತಮುತ್ತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಭಾರಿ ಮಳೆ ಎಫೆಕ್ಟ್‌ ರಾ.ಹೆ 275ರಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ, ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಜುಲೈ 1ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ಗುಡ್ಡದ ಬದಿಯಿಂದ ಮಣ್ಣು ಕುಸಿತಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು.

ಭೋರ್ಗರೆದ ಧನುಷ್ ಕೋಟಿ ಜಲಪಾತ

ಮೈಸೂರಿನ ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ ಹಿನ್ನೆಲೆಯಲ್ಲಿ ಧನುಷ್ ಕೋಟಿ ಜಲಪಾತ ಭೋರ್ಗರೆದಿದೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತಕ್ಕೆ ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ.

ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಯ ಒಳಹರಿವು ಹೆಚ್ಚಳಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ, ಬಾವನಸೌದತ್ತಿ ಸಂಪರ್ಕಿಸುವ ಹಳೆ ಸೇತುವೆ ಜಲಾವೃತಗೊಂಡಿದೆ.

ಕರಾವಳಿಗೆ ಭಾರಿ ಮಳೆ ಮುನ್ಸೂಚನೆ

ಜುಲೈ 1ರಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆಯಿದೆ ಹಾಗೂ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
Latest1 min ago

Viral Video: ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಪ್ಲೀಸ್‌ ಎಂದ ಸಂಸದೆ; ಹೆಂಗಸರನ್ನು ನೋಡಲ್ಲ ಎಂದ ಸ್ಪೀಕರ್‌!

Viral Video
Latest9 mins ago

Viral Video: ಪ್ರೇಯಸಿಯ ಕಣ್ಮುಂದೆಯೇ ಆಕೆಯ ತಂದೆಯನ್ನು ಬರ್ಬರವಾಗಿ ಕೊಂದ ಪ್ರಿಯಕರ!

Dating Application
Latest17 mins ago

Dating Application: ಡೇಟಿಂಗ್‌ ನೆಪದಲ್ಲಿ ಕೆಫೆಗೆ ಕರೆದ ಮಹಿಳೆ ಹೀಗಾ ಮಾಡೋದು?

Special awareness programme on drug abuse illegal trafficking
ಬೆಂಗಳೂರು22 mins ago

Bengaluru News: ಮಾದಕ ದ್ರವ್ಯ ಅಕ್ರಮ ಸಾಗಾಟ; ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು

Monsoon session
ಕರ್ನಾಟಕ23 mins ago

Monsoon session: ರಾಜ್ಯ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್‌; ದಿನಾಂಕ ಫೈನಲ್ ಮಾಡಿದ ಸಿಎಂ

UPSC 2024
ಪ್ರಮುಖ ಸುದ್ದಿ27 mins ago

UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

Kabzaa movie Appreciation Letter from Union Finance Ministry to Sri siddeshwar Enterprises
ಕರ್ನಾಟಕ56 mins ago

Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

Parliament Sessions
ಪ್ರಮುಖ ಸುದ್ದಿ1 hour ago

Parliament Sessions : ರಾಹುಲ್ ಗಾಂಧಿಯಿಂದ ಹಿಂದೂಗಳಿಗೆ ಅವಮಾನ: ಬಿಜೆಪಿ ಆರೋಪ

Reliance Jio
ಕರ್ನಾಟಕ1 hour ago

Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

Parliament Sessions
ದೇಶ1 hour ago

Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌