ವಿಸ್ತಾರ Explainer | ಬ್ರಿಟನ್‌ ಪ್ರಧಾನಿ ಆಯ್ಕೆಗೆ ಮತದಾನದ ಮೇಲೆ ಮತದಾನ! ರಿಷಿ ಸುನಕ್ ಎಲ್ಲಿ? - Vistara News

EXPLAINER

ವಿಸ್ತಾರ Explainer | ಬ್ರಿಟನ್‌ ಪ್ರಧಾನಿ ಆಯ್ಕೆಗೆ ಮತದಾನದ ಮೇಲೆ ಮತದಾನ! ರಿಷಿ ಸುನಕ್ ಎಲ್ಲಿ?

ಬ್ರಿಟನ್‌ ಪ್ರಧಾನಿ ಪದವಿಗೆ ಆಡಳಿತ ಕನ್ಸರ್ವೇಟಿವ್‌ ಪಕ್ಷದ ಒಳಗೇ ಮತದಾನದ ಮೇಲೆ ಮತದಾನದ ಸರಣಿ ನಡೆಯುತ್ತಿದೆ. ಈ ಪ್ರಕ್ರಿಯೆ ಹೇಗಿರಲಿದೆ? ರಿಷಿ ಸುನಕ್ ಯಾವ ಹಂತದಲ್ಲಿದ್ದಾರೆ?

VISTARANEWS.COM


on

rishi sunak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೋರಿಸ್ ಜಾನ್ಸನ್ ನಂತರ ಬ್ರಿಟನ್ ಪ್ರಧಾನಿಯಾಗುವ ಹೊಸ ನಾಯಕನನ್ನು ಸೆಪ್ಟೆಂಬರ್ 5ರಂದು ಘೋಷಿಸಲಾಗುವುದು ಎಂದು ಬ್ರಿಟನ್‌ನ ಆಡಳಿತ ನಡೆಸುತ್ತಿರುವ ಕನ್ಸರ್ವೇಟಿವ್ ಪಕ್ಷ ಹೇಳಿದೆ. ಬೋರಿಸ್ ಜಾನ್ಸನ್ ಇತ್ತೀಚೆಗೆ ತಮ್ಮ ಸರ್ಕಾರದಲ್ಲಿ ನಡೆದ ರಾಜೀನಾಮೆಗಳ ಸರಣಿಯ ನಂತರ ಕೆಳಗಿಳಿದಿದ್ದಾರೆ. ಆದರೆ ಅವರ ನಂತರದ ಪ್ರಧಾನಿಯ ಆಯ್ಕೆ ಆಗುವ ತನಕ ಪ್ರಧಾನಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಇನ್‌ಫೋಸಿಸ್‌ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್‌ ಟಾಪ್‌ 3 ಸ್ಪರ್ಧಿಗಳಲ್ಲಿ ಒಬ್ಬರೆನಿಸಿದ್ದಾರೆ.

ಬ್ರಿಟನ್‌ನಲ್ಲಿ ಎರಡು ಪ್ರಮುಖ ರಾಜಕೀಯ ಪಕ್ಷಗಳಿವೆ- ಕನ್ಸರ್ವೇಟಿವ್‌ ಪಕ್ಷ (ಇದನ್ನು ಟೋರಿ ಪಾರ್ಟಿ ಎಂದೂ ಕರೆಯಲಾಗುತ್ತದೆ) ಹಾಗೂ ಲೇಬರ್‌ ಪಾರ್ಟಿ. ಸದ್ಯ ಬ್ರಿಟನ್‌ನಲ್ಲಿ ಆಡಳಿತ ನಡೆಸುತ್ತಿರುವುದು ಕನ್ಸರ್ವೇಟಿವ್‌ ಪಕ್ಷ. ಈಗ ನಡೆಯುತ್ತಿರುವುದು ಸಾರ್ವತ್ರಿಕ ಚುನಾವಣೆಯಲ್ಲ. ಆಡಳಿತ ಪಕ್ಷದೊಳಗೇ ನಾಯಕನ ಬದಲಾವಣೆ. ಶಾಸಕಾಂಗ ಪಕ್ಷದ ಹೊಸ ನಾಯಕ, ಪ್ರಧಾನಿಯಾಗುತ್ತಾರೆ.

ಸದ್ಯ ಬ್ರಿಟನ್‌ ಪ್ರಧಾನಿಯ ಹುದ್ದೆಗೆ ಕನ್ಸರ್ವೇಟಿವ್ ಪಕ್ಷದ ಎಂಟು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ- ರಿಷಿ ಸುನಕ್‌, ಲಿಜ್ ಟ್ರಸ್, ನಾಧಿಮ್ ಜಹಾವಿ, ಜೆರೆಮಿ ಹಂಟ್, ಕೆಮಿ ಬಡೆನೋಚ್, ಸುಯೆಲ್ಲಾ ಬ್ರವರ್‌ಮನ್, ಪೆನ್ನಿ ಮೊರ್ಡಾಂಟ್ ಮತ್ತು ಟಾಮ್ ತುಗೆಂದಟ್.‌ ಸದ್ಯ ಎರಡು ರೌಂಡ್‌ಗಳ ಮತದಾನದ ಬಳಿಕ ಐವರು ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ- ರಿಷಿ ಸುನಕ್‌, ಪೆನ್ನಿ ಮೋರ್ಡಾಂಟ್‌, ಲಿಜ್‌ ಟ್ರಸ್‌, ಕೆಮಿ ಬಡೆನೋಚ್‌ ಮತ್ತು ಟಾಮ್‌ ತುಗೆಂದಟ್.‌

ಇನ್ನಿಬ್ಬರು ಸಚಿವರು- ಸಾಜಿದ್ ಜಾವಿದ್ ಮತ್ತು ರೆಹಮಾನ್ ಚಿಸ್ತಿ- ಈ ಹಿಂದೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಅಂತಿಮ ಪಟ್ಟಿಯನ್ನು ಪ್ರಕಟಿಸುವ ಮೊದಲು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದರು.

ಯಾರು ಸ್ಪರ್ಧಿಸಬಹುದು?
ಪ್ರಧಾನಿ ಹುದ್ದೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮಗೆ ಕನಿಷ್ಠ 20 ಸಂಸದರ ಬೆಂಬಲವಿದೆ ಎಂದು ಸಾಬೀತುಪಡಿಸಬೇಕಾಗುತ್ತದೆ. ಒಬ್ಬ ಪ್ರಪೋಸರ್, ಇನ್ನೊಬ್ಬ ಅನುಮೋದಕ ಮತ್ತು 18 ಇತರರು. ರಿಷಿ ಸುನಕ್‌ ಈಗಾಗಲೇ ತಮಗೆ 40ಕ್ಕೂ ಅಧಿಕ ಸಂಸದರ ಬೆಂಬಲವಿದೆ ಎಂದು ತೋರಿಸಿದ್ದಾರೆ.

ನಾಯಕನನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ?

uk parliment

ಕನ್ಸರ್ವೇಟಿವ್ ಪಕ್ಷವು ಎರಡು ಹಂತದ ನಾಯಕತ್ವದ ಆಯ್ಕೆ ಪ್ರಕ್ರಿಯೆಯ ಮೂಲಕ ತನ್ನ ನಾಯಕನನ್ನು ಆಯ್ಕೆ ಮಾಡುತ್ತದೆ. ಅಭ್ಯರ್ಥಿಗಳ ಸಂಖ್ಯೆಯನ್ನು ಇಳಿಸಲು ಟೋರಿ ಸಂಸದರು ರಹಸ್ಯ ಮತದಾನದ ಸರಣಿಯನ್ನು ನಡೆಸುತ್ತಾರೆ. ಇದು ಬ್ಯಾಲೆಟ್‌ ಪೇಪರ್‌ಗಳ ಮೂಲಕ ನಡೆಯುತ್ತದೆ. ಮೊದಲ ಸುತ್ತಿನಲ್ಲಿ 358 ಟೋರಿ ಸಂಸದರು ಮತ ಚಲಾಯಿಸುತ್ತಾರೆ. ಒಬ್ಬರಿಗೆ ಒಂದೇ ಮತ. ಇದರಲ್ಲಿ ಸಂಸದರು ತಾವು ಯಾರಿಗೆ ಅನುಮೋದಿಸಿದೆವೋ ಅವರಿಗೇ ಮತ ಹಾಕಬೇಕೆಂದಿಲ್ಲ. ಈ ಸುತ್ತಿನಲ್ಲಿ ಅಭ್ಯರ್ಥಿಗಳು ಕನಿಷ್ಠ 30 ಮತಗಳನ್ನು ಗಳಿಸಬೇಕು. ಅದಕ್ಕಿಂತ ಕಡಿಮೆ ಮತ ಪಡೆದವರನ್ನು ಸ್ಪರ್ಧೆಯಿಂದ ಹೊರಗೆ ಹಾಕಲಾಗುತ್ತದೆ. ಜುಲೈ 13ರಂದು ಈ ಮತದಾನ ನಡೆಯಿತು.

ಜುಲೈ 14ರಂದು ಎರಡನೇ ಹಂತದ ಮತದಾನ ನಡೆದಿದೆ. ಇದರಲ್ಲೂ ಕೆಳ ಶ್ರೇಣಿಯ ಅಭ್ಯರ್ಥಿಯನ್ನು ಹೊರಹಾಕಲಾಗುತ್ತದೆ. ಮುಂದಿನ ವಾರದಲ್ಲಿ ಹೆಚ್ಚಿನ ಮತಪತ್ರಗಳನ್ನು ನಡೆಸಲಾಗುವುದು, ಪ್ರತಿ ಸುತ್ತಿನಲ್ಲಿ ಕೆಳ ಶ್ರೇಯಾಂಕದ ಅಭ್ಯರ್ಥಿಯನ್ನು ಹೊರಹಾಕಲಾಗುತ್ತದೆ. ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದ್ದಷ್ಟೂ ಈ ಎಲಿಮಿನೇಷನ್‌ ಹಂತಗಳೂ ಹೆಚ್ಚುತ್ತವೆ. ಈ ಪ್ರಕ್ರಿಯೆ ಸಾಮಾನ್ಯವಾಗಿ ಒಂದರಿಂದ ಎರಡು ವಾರ ತೆಗೆದುಕೊಳ್ಳುತ್ತದೆ. ರಿಷಿ, ಲಿಜ್‌ ಟ್ರಸ್‌ ಮತ್ತು ಪೆನ್ನಿ ಮೊರ್ಡಾಂಟ್‌ ನಡುವೆ ಪ್ರಬಲ ಪೈಪೋಟಿಯ ನಿರೀಕ್ಷೆ ಇದೆ.

ಕೊನೆಯ ಸುತ್ತಿನಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ಆಗಸ್ಟ್‌ ಪೂರ್ತಿ ಈ ಇಬ್ಬರು ಸ್ಪರ್ಧಿಗಳ ಪ್ರಚಾರ ನಡೆಯಲಿದೆ. ಟೋರಿ ಪಕ್ಷದ ಸದಸ್ಯರು ಬ್ಯಾಲೆಟ್‌ ಪೇಪರ್‌ ಮೂಲಕ ವಿಜೇತರನ್ನು ಆಯ್ಕೆ ಮಾಡುತ್ತಾರೆ. ದೇಶಾದ್ಯಂತ ಇರುವ ಪಕ್ಷದ ಸರಿಸುಮಾರು 160,000- 200,000 ಸದಸ್ಯರು ಮತದಾನ ಮಾಡುತ್ತಾರೆ. ಇವರು ಪಕ್ಷದಲ್ಲಿ ಕನಿಷ್ಠ ಮೂರು ತಿಂಗಳ ಹಿಂದೆ ಸದಸ್ಯತ್ವ ನೋಂದಣಿ ಮಾಡಿಸಿಕೊಂಡಿರಬೇಕು. ಕೆಲವೊಮ್ಮೆ, ಈ ಕಾರ್ಯವಿಧಾನದ ಮೂಲಕ ಆಯ್ಕೆಯಾದ ಪ್ರಧಾನ ಮಂತ್ರಿಗಳು ಜನಾದೇಶವನ್ನು ಪಡೆಯಲು ಸಾರ್ವತ್ರಿಕ ಚುನಾವಣೆಯನ್ನೂ ಕರೆಯಬಹುದು.

2019ರ ಜುಲೈನಲ್ಲಿ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಜಾನ್ಸನ್ ಡಿಸೆಂಬರ್‌ನಲ್ಲಿ ಚುನಾವಣೆಗೆ ಕರೆ ನೀಡಿದ್ದರು. ಆದರೆ 2007ರಲ್ಲಿ ಗೋರ್ಡನ್ ಬ್ರೌನ್ ಅವರು ಲೇಬರ್ ಪಕ್ಷದ ಪ್ರಧಾನ ಮಂತ್ರಿ ಟೋನಿ ಬ್ಲೇರ್ ಅವರಿಂದ ಅಧಿಕಾರ ವಹಿಸಿಕೊಂಡಾಗ ಚುನಾವಣೆಗೆ ಹೋಗಿರಲಿಲ್ಲ.

ಹಸ್ಟಿಂಗ್ಸ್ ಎಂದರೇನು?

ಅಂತಿಮ ಇಬ್ಬರು ಅಭ್ಯರ್ಥಿಗಳು ಆಗಸ್ಟ್‌ನಲ್ಲಿ ಎರಡನೇ ಸುತ್ತಿನ ಪ್ರಚಾರ ಮಾಡುತ್ತಾರೆ. ಈ ಪ್ರಚಾರ ಕಾರ್ಯಕ್ರಮವನ್ನು ʻಹಸ್ಟಿಂಗ್ಸ್’ ಎಂದು ಕರೆಯಲಾಗುತ್ತದೆ. ಇದು ಸಾಮಾನ್ಯವಾಗಿ ಮತದಾರರ ಮುಂದೆ ಭಾಷಣಗಳನ್ನು ಒಳಗೊಂಡಿರುತ್ತದೆ. ಮತಪತ್ರಗಳನ್ನು ಆಗಸ್ಟ್‌ನಲ್ಲಿ ಸದಸ್ಯರಿಗೆ ಕಳುಹಿಸಲಾಗುತ್ತದೆ. ಅಂತಿಮ ಫಲಿತಾಂಶ ಸೆಪ್ಟೆಂಬರ್ 5ರಂದು ಪ್ರಕಟವಾಗುತ್ತದೆ.

ರಾಣಿಯ ಪಾತ್ರ

queen elizabeth

ಸಂಪ್ರದಾಯದ ಪ್ರಕಾರ, ನಿರ್ಗಮನ ಪ್ರಧಾನ ಮಂತ್ರಿಯು ಕೊನೆಯ ಬಾರಿಗೆ ಹೌಸ್ ಆಫ್ ಕಾಮನ್ಸ್ ಮುಂದೆ ಭಾಷಣ ಮಾಡಬಹುದು. ನಂತರ 10 ಡೌನಿಂಗ್ ಸ್ಟ್ರೀಟ್‌ನಿಂದ ಹೊರಬಿದ್ದು ಬಕಿಂಗ್‌ಹ್ಯಾಮ್ ಅರಮನೆಯಲ್ಲಿ ರಾಣಿಯನ್ನು ಭೇಟಿ ಮಾಡುತ್ತಾರೆ. ಅಲ್ಲಿ ತನ್ನ ರಾಜೀನಾಮೆಯನ್ನು ರಾಣಿಯ ಮುಂದೆ ಇಡುತ್ತಾರೆ. ರಾಣಿಯು ಪ್ರಧಾನ ಮಂತ್ರಿಯ ರಾಜೀನಾಮೆಯನ್ನು ಅಂಗೀಕರಿಸುತ್ತಾರೆ. ನಂತರ ಹೊಸ ನಾಯಕ ರಾಣಿಯನ್ನು ಭೇಟಿಯಾಗಿ ಹೊಸ ಸರ್ಕಾರ ರಚಿಸಲು ಅನುಮತಿ ಪಡೆಯುತ್ತಾರೆ. ರಾಣಿ ಒಪ್ಪಿಗೆ ನೀಡುತ್ತಾರೆ. ಭಾರತದಲ್ಲಿ ರಾಷ್ಟ್ರಪತಿ ಮಾಡುವ ʻಸಹಿ ಹಾಕುವʼ ಕೆಲಸವನ್ನು ಇಲ್ಲಿ ರಾಣಿ ಮಾಡುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 (Climate Plan) ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021 ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

VISTARANEWS.COM


on

By

Climate Plan
Koo

ಬೆಂಗಳೂರು: ಕರ್ನಾಟಕ (karnataka) ಸರ್ಕಾರ (government) 2021ರಲ್ಲಿ ಸಿದ್ಧಪಡಿಸಲಾದ ಹವಾಮಾನ ಕ್ರಿಯಾ ಯೋಜನೆ (Climate Plan) ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದೆ. ಈ ಬಾರಿ ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲ (worst droughts) ಎದುರಾಗಿದೆ. ಆದರೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ. ಈ ನಡುವೆ ಇದೀಗ ಹವಾಮಾನ ಕ್ರಿಯಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

42 ವಿವಿಧ ಇಲಾಖೆಗಳೊಂದಿಗೆ ಹಲವು ಬಾರಿ ಸಭೆ ನಡೆಸಿದ ಅಭಿವೃದ್ಧಿ ಆಯುಕ್ತರು, ಜೂನ್‌ನಲ್ಲಿ ಮಾದರಿ ನೀತಿ ಸಂಹಿತೆ ಹಿಂಪಡೆದ ಅನಂತರ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದರೊಂದಿಗೆ ಹವಾಮಾನ ಯೋಜನೆಯನ್ನು ಜಾರಿಗೆ ತಂದ ಮೊದಲ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಲಿದೆ ಎಂದು ತಿಳಿಸಿದ್ದರು. ಹವಾಮಾನ ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ ನಿರ್ದಿಷ್ಟ ಯೋಜನೆಗಳು, ಕಾರ್ಯಕ್ಷಮತೆ ಸೂಚಕಗಳು ಮತ್ತು ಗುರಿಗಳನ್ನು ಸಿದ್ಧಪಡಿಸಲು ನಾವು ಎಲ್ಲಾ ಇಲಾಖೆಗಳಿಗೆ ತಿಳಿಸಿದ್ದೇವೆ. ಮಾದರಿ ನೀತಿ ಸಂಹಿತೆ ಹಿಂತೆಗೆದುಕೊಂಡ ತಕ್ಷಣ ನಾವು ಸಚಿವ ಸಂಪುಟದ ಮುಂದೆ ಸಲ್ಲಿಕೆ ಮಾಡಲು ಯೋಜಿಸಿದ್ದೇವೆ ಎಂದು ಅಭಿವೃದ್ಧಿ ಆಯುಕ್ತ ಡಾ. ಶಾಲಿನಿ ರಜನೀಶ್ ಹೇಳಿದ್ದಾರೆ.

ಶೀಘ್ರ ಜಾರಿಯಾಗಬೇಕು

ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಮೇಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕು ಎನ್ನುತ್ತಾರೆ ತಜ್ಞರು. ಪರಿಸರ ಇಲಾಖೆಯ ಅಧಿಕಾರಿಯ ಪ್ರಕಾರ, ಕ್ರಿಯಾ ಯೋಜನೆಯಲ್ಲಿ ಸೂಚಿಸಲಾದ ಕ್ರಮಗಳನ್ನು ಸಂಯೋಜಿಸಲು ಮತ್ತು ತಮ್ಮ ಗುರಿಗಳನ್ನು ಸಲ್ಲಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಕೆಲಸ ಮಾಡಬೇಕಾಗುತ್ತದೆ. ಪ್ರಸ್ತುತ ಕಾರ್ಯನಿರ್ವಹಣೆಯೊಂದಿಗೆ ಬೇಸ್‌ಲೈನ್‌ನಂತೆ ಕಾರ್ಯನಿರ್ವಹಿಸುವ ಪಟ್ಟಿಯನ್ನು ಸಿದ್ಧಪಡಿಸಬೇಕು. ಉದಾಹರಣೆಗೆ, ಅರಣ್ಯ ಇಲಾಖೆಯು ತಾನು ಯೋಜಿಸಿರುವ ಅರಣ್ಯೀಕರಣದ ಪ್ರಮಾಣ ಮತ್ತು ಐದು ವರ್ಷಗಳಲ್ಲಿ ಗುರಿಯನ್ನು ಸಲ್ಲಿಸಬೇಕು ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಏನೆಲ್ಲಾ ಒಳಗೊಂಡಿರುತ್ತದೆ?

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಸಿದ್ಧಪಡಿಸಿದ ಕ್ರಿಯಾ ಯೋಜನೆಯು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹಲವಾರು ಮಧ್ಯಸ್ಥಿಕೆಗಳು ಮತ್ತು ಮೌಲ್ಯಮಾಪನ ತಂತ್ರಗಳನ್ನು ಸೂಚಿಸುತ್ತದೆ. ಕೃಷಿ, ತೋಟಗಾರಿಕೆ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು 10 ಇತರ ಕ್ಷೇತ್ರಗಳಲ್ಲಿ ಕ್ರಮಗಳನ್ನು ಜಾರಿಗೆ ತರಲು 2025 ಮತ್ತು 2030 ರ ನಡುವೆ ರಾಜ್ಯಕ್ಕೆ 52,827 ಕೋಟಿ ರೂಪಾಯಿ ಅಗತ್ಯವಿದೆ ಎಂದು ಯೋಜನೆ ಸೂಚಿಸುತ್ತದೆ.

ಹಣಕಾಸು ಅಂದಾಜು ಹೆಚ್ಚಳ ಸಾಧ್ಯತೆ

ಅರಣ್ಯೀಕರಣದಿಂದ ನವೀಕರಿಸಬಹುದಾದ ಶಕ್ತಿಯ ಬಳಕೆಯವರೆಗೆ, ಯೋಜನೆಯು ಪ್ರತಿಯೊಂದು ಇಲಾಖೆಗೆ ಕ್ರಮಗಳನ್ನು ಸೂಚಿಸುತ್ತದೆ.

ಹಣಕಾಸಿನ ಅಂದಾಜುಗಳನ್ನು 2021ರಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಈಗ ಹೆಚ್ಚಾಗಿರಬಹುದು. ಕ್ರಿಯಾ ಯೋಜನೆಯು ಹಣವನ್ನು ಸಂಗ್ರಹಿಸಲು ಹಲವಾರು ಹಣಕಾಸು ವಿಧಾನಗಳನ್ನು ರೂಪಿಸುತ್ತದೆ. ನಾವು ಇಲಾಖೆ-ನಿರ್ದಿಷ್ಟ ಯೋಜನೆಗಳನ್ನು ಹೊಂದಬಹುದು ಎಂದು ಕ್ರಿಯಾ ಯೋಜನೆ ತಯಾರಿಕೆಯ ಭಾಗವಾಗಿದ್ದ ಪ್ರೊ. ಕೃಷ್ಣ ರಾಜ್ ಹೇಳಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.


ಖಾಸಗಿ ಹೂಡಿಕೆಗಳನ್ನು ಆಕರ್ಷಿಸುವುದರಿಂದ ಹಿಡಿದು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಉತ್ತಮ ಬಳಕೆಗೆ, ಯೋಜನೆಯು ವಿವಿಧ ಹಣಕಾಸು ವಿಧಾನಗಳನ್ನು ವಿವರಿಸುತ್ತದೆ.ಬರ ಮತ್ತು ಪ್ರವಾಹಗಳ ಆವರ್ತನ ಹೆಚ್ಚಾಗಿದೆ. ತಾಪಮಾನ ಮತ್ತು ಮಳೆಯ ಮಾದರಿಗಳು ಅನಿರೀಕ್ಷಿತವಾಗಿವೆ. ಇವುಗಳು ಅನೇಕ ಕ್ಷೇತ್ರಗಳ ಮೇಲೆ, ವಿಶೇಷವಾಗಿ ಕೃಷಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಕೃಷಿಯ ಮೇಲೆ ಪರಿಣಾಮ ಬೀರಿದರೆ, ಅದು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಕ್ರಮವನ್ನು ಕಾರ್ಯಗತಗೊಳಿಸುವುದು ನಿರ್ಣಾಯಕವಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ಬರ ಪರಿಸ್ಥಿತಿ ಮತ್ತು ನೀರಿನ ಕೊರತೆಯಿಂದಾಗಿ ಅಧಿಕಾರಿಗಳು ಮತ್ತು ನಾಗರಿಕರಲ್ಲಿ ಜಾಗೃತಿ ಹೆಚ್ಚಾಗಿದೆ ಮತ್ತು ಆದ್ದರಿಂದ ಈ ಕ್ರಮಕ್ಕೆ ಇದು ಸರಿಯಾದ ಸಮಯ ಎಂದು ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ಏನು ಕ್ರಮ ?

ಕೃಷಿಗೆ ಶುಷ್ಕ- ಋತುವಿಗೆ ಸಂಬಂಧಿಸಿದ ವಿವಿಧ ಬೆಳೆ ಯೋಜನೆ, ನಿಖರವಾದ ನೀರಾವರಿ ತಂತ್ರಜ್ಞಾನ ಅಳವಡಿಕೆ. ಅರಣ್ಯಕ್ಕೆ ಹವಾಮಾನಕ್ಕೆ ಪೂರಕವಾದ ಅರಣ್ಯೀಕರಣ ಕಾರ್ಯಕ್ರಮಗಳು, ಜಾನುವಾರುಗಳ ಸಮಗ್ರ ರೋಗಗಾಲ ಮೇಲೆ ಕಣ್ಗಾವಲು ಮತ್ತು ತಕ್ಷಣ ಪ್ರತಿಕ್ರಿಯೆ ನೀಡಲು ಕ್ರಮ. ಅಂತರ್ಜಲ ಹೆಚ್ಚಳಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದು. ಶಕ್ತಿ ಮೂಲಗಳಲ್ಲಿ ನವೀಕರಿಸಬಹುದಾದ ವಸ್ತುಗಳ ಮೇಲೆ ಹೆಚ್ಚಿನ ಗಮನ ಹರಿಸುವುದು ಮೊದಲಾದವುಗಳನ್ನು ಹವಾಮಾನ ಕ್ರಿಯಾ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ.

Continue Reading

ರಾಜಕೀಯ

POK Explainer in Kannada: ಪಾಕ್ ಆಕ್ರಮಿತ ಕಾಶ್ಮೀರ ಕುರಿತ 15 ಕುತೂಹಲಕಾರಿ ಸಂಗತಿಗಳು

POK Explainer in Kannada: ಕಾಶ್ಮೀರದ ಭಾಗವಾಗಿರುವ ಪಾಕ್ ಆಕ್ರಮಿತ ಕಾಶ್ಮೀರ (Pakistan Occupied Kashmir) ನಿರಂತರ ಚರ್ಚೆಯಲ್ಲಿರುವ ಪ್ರದೇಶ. ಸುಮಾರು 52 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಪಿಒಕೆ ಅಭಿವೃದ್ಧಿ ವಿಚಾರದಲ್ಲಿ ಇನ್ನೂ ಹಿಂದುಳಿದಿದೆ. ಇದಕ್ಕೆ ಮುಖ್ಯ ಕಾರಣ ಈ ಪ್ರದೇಶದ ಆಡಳಿತವನ್ನು ಪಾಕಿಸ್ತಾನ ಸರ್ಕಾರ ನಿಯಂತ್ರಿಸುತ್ತಿರುವುದು. ಆದರೂ ಇಲ್ಲಿನ ಕುರಿತು ತಿಳಿದುಕೊಳ್ಳಬೇಕಾದ ಹಲವಾರು ಪ್ರಮುಖ ಅಂಶಗಳಿವೆ. ಪಿಒಕೆ ಕುರಿತ ಮಹತ್ವದ ಮಾಹಿತಿ ಇಲ್ಲಿದೆ.

VISTARANEWS.COM


on

By

POK Explainer in Kannada
Koo

ಪಾಕಿಸ್ತಾನವು (pakistan) 1947ರಲ್ಲಿ ಅಕ್ರಮವಾಗಿ ಆಕ್ರಮಿಸಿಕೊಂಡಿರುವ (POK Explainer in Kannada) ಕಾಶ್ಮೀರದ (kashmir) ಭಾಗಗಳನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (Pakistan Occupied Kashmir) ಎಂದು ಕರೆಯಲಾಗುತ್ತದೆ. ಪಾಕಿಸ್ತಾನವು ಪಿಒಕೆಯನ್ನು (POK) ಎರಡು ಭಾಗಗಳಾಗಿ ವಿಂಗಡಿಸಿದೆ. ಒಂದು ಆಜಾದ್ ಕಾಶ್ಮೀರ (Azad Kashmir) ಹಾಗೂ ಮತ್ತೊಂದು ಗಿಲ್ಗಿಟ್-ಬಾಲ್ಟಿಸ್ತಾನ್ (Gilgit-Baltistan). ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನಸಂಖ್ಯೆ 2020ರಲ್ಲಿ ಸುಮಾರು 52 ಲಕ್ಷ ಇತ್ತು. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಈಗ ದಂಗೆ ಭುಗಿಲೆದ್ದಿದೆ. ಅಲ್ಲಿಯ ಜನ, ಭಾರತದ ಜತೆ ವೀಲೀನವಾಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ಅನಂತರ ಈಗ ಭಾರತೀಯ ಜನರು ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳುವಂತೆ ಭಾರತ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಕಾರಣಗಳೂ ಇವೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಸಂಬಂಧಿಸಿದ ಅನೇಕ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ.


ಪಿಒಕೆ ಎಂದರೇನು?

ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದ್ದು, 1947ರಲ್ಲಿ ಪಾಕಿಸ್ತಾನದಿಂದ ಆಕ್ರಮಣಕ್ಕೊಳಗಾದ ಜಮ್ಮು ಮತ್ತು ಕಾಶ್ಮೀರದ ಭಾಗವಾಗಿದೆ.

1. ಪಿಒಕೆಯನ್ನು ಆಡಳಿತಾತ್ಮಕವಾಗಿ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಇದನ್ನು ಅಧಿಕೃತವಾಗಿ ಜಮ್ಮು ಮತ್ತು ಕಾಶ್ಮೀರ ಮತ್ತು ಗಿಲ್ಗಿಟ್- ಬಾಲ್ಟಿಸ್ತಾನ್ ಎಂದು ಕರೆಯಲಾಗುತ್ತದೆ. ಪಾಕಿಸ್ತಾನದಲ್ಲಿ ‘ಆಜಾದ್ ಜಮ್ಮು ಮತ್ತು ಕಾಶ್ಮೀರ’ವನ್ನು ಆಜಾದ್ ಕಾಶ್ಮೀರ ಎಂದೂ ಕರೆಯುತ್ತಾರೆ.

2. ಪಾಕ್ ಆಕ್ರಮಿತ ಕಾಶ್ಮೀರದ ಮುಖ್ಯಸ್ಥರು ಅಧ್ಯಕ್ಷರಾಗಿದ್ದರೆ, ಪ್ರಧಾನಮಂತ್ರಿಗಳು ಮಂತ್ರಿಗಳ ಮಂಡಳಿಯಿಂದ ಬೆಂಬಲಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾರೆ.

3. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ತನ್ನ ಸ್ವ-ಆಡಳಿತ ಅಸೆಂಬ್ಲಿ ಎಂದು ಹೇಳಿಕೊಂಡಿದೆ. ಆದರೆ ವಾಸ್ತವವೆಂದರೆ ಅದು ಪಾಕಿಸ್ತಾನದ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತದೆ.

4. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮೂಲ ಕಾಶ್ಮೀರದ ಒಂದು ಭಾಗವಾಗಿದೆ. ಇದರ ಗಡಿಗಳು ಪಾಕಿಸ್ತಾನದ ಪಂಜಾಬ್ ಪ್ರದೇಶ, ವಾಯವ್ಯ, ಅಫ್ಘಾನಿಸ್ತಾನದ ವಖಾನ್ ಕಾರಿಡಾರ್, ಚೀನಾದ ಕ್ಸಿನ್‌ಜಿಯಾಂಗ್ ಪ್ರದೇಶ ಮತ್ತು ಭಾರತದ ಕಾಶ್ಮೀರದ ಪೂರ್ವಕ್ಕೆ ಸ್ಪರ್ಶಿಸುತ್ತವೆ.

5. ಗಿಲ್ಗಿಟ್- ಬಾಲ್ಟಿಸ್ತಾನ್‌ವನ್ನು ತೆಗೆದುಹಾಕಿದರೆ, ಆಜಾದ್ ಕಾಶ್ಮೀರದ ಪ್ರದೇಶವು 13,300 ಚದರ ಕಿಲೋಮೀಟರ್‌ಗಳಷ್ಟು ಅಂದರೆ ಸರಿಸುಮಾರು ಭಾರತದ ಕಾಶ್ಮೀರದ ಸುಮಾರು 3 ಪಟ್ಟು ವಿಶಾಲವಾಗಿದೆ ಮತ್ತು ಅದರ ಜನಸಂಖ್ಯೆಯು ಸುಮಾರು 52 ಲಕ್ಷ.

6. ಆಜಾದ್ ಕಾಶ್ಮೀರದ ರಾಜಧಾನಿ ಮುಜಫರಾಬಾದ್. ಇದು 10 ಜಿಲ್ಲೆಗಳು, 33 ತೆಹಸಿಲ್‌ಗಳು ಮತ್ತು 182 ಫೆಡರಲ್ ಕೌನ್ಸಿಲ್‌ಗಳನ್ನು ಹೊಂದಿದೆ.

7. ಪಾಕ್ ಆಕ್ರಮಿತ ಕಾಶ್ಮೀರದ ದಕ್ಷಿಣ ಭಾಗದಲ್ಲಿ 8 ಜಿಲ್ಲೆಗಳಿವೆ. ಮಿರ್ ಪುರ್, ಭಿಂಬರ್, ಕೋಟ್ಲಿ, ಮುಜಫರಾಬಾದ್, ಬಾಗ್, ನೀಲಂ, ರಾವಲಕೋಟ್ ಮತ್ತು ಸುಧಾನೋತಿ.

8. ಪಾಕ್ ಆಕ್ರಮಿತ ಕಾಶ್ಮೀರದ ಹುಂಜಾ-ಗಿಲ್ಗಿಟ್, ಶಕ್ಸ್‌ಗಾಮ್ ಕಣಿವೆ, ರಕ್ಸಾಮ್ ಮತ್ತು ಬಾಲ್ಟಿಸ್ತಾನ್ ಪ್ರದೇಶವನ್ನು 1963ರಲ್ಲಿ ಪಾಕಿಸ್ತಾನವು ಚೀನಾಕ್ಕೆ ಹಸ್ತಾಂತರಿಸಿತು. ಈ ಪ್ರದೇಶವನ್ನು ಸೆಡೆಡ್ ಪ್ರದೇಶ ಅಥವಾ ಟ್ರಾನ್ಸ್-ಕಾರಕೋರಂ ಟ್ರ್ಯಾಕ್ಟ್ ಎಂದು ಕರೆಯಲಾಗುತ್ತದೆ.

9. ಪಿಒಕೆಯ ಜನರು ಮುಖ್ಯವಾಗಿ ಕೃಷಿ ಮಾಡುತ್ತಾರೆ. ಅವರ ಮುಖ್ಯ ಆದಾಯದ ಮೂಲಗಳು ಜೋಳ, ಗೋಧಿ, ಅರಣ್ಯ ಮತ್ತು ಜಾನುವಾರುಗಳು.

10. ಈ ಪ್ರದೇಶದಲ್ಲಿ ಕಡಿಮೆ ದರ್ಜೆಯ ಕಲ್ಲಿದ್ದಲು ನಿಕ್ಷೇಪಗಳಿವೆ, ಸೀಮೆಸುಣ್ಣದ ನಿಕ್ಷೇಪಗಳು, ಬಾಕ್ಸೈಟ್ ನಿಕ್ಷೇಪಗಳು ಕಂಡುಬರುತ್ತವೆ. ಕೆತ್ತಿದ ಮರದ ವಸ್ತುಗಳು, ಜವಳಿ ಮತ್ತು ಕಾರ್ಪೆಟ್‌ಗಳ ತಯಾರಿಕೆಯು ಈ ಪ್ರದೇಶಗಳಲ್ಲಿ ನೆಲೆಗೊಂಡಿರುವ ಕೈಗಾರಿಕೆಗಳ ಮುಖ್ಯ ಉತ್ಪನ್ನಗಳಾಗಿವೆ.

11. ಈ ಪ್ರದೇಶದಲ್ಲಿನ ಕೃಷಿ ಉತ್ಪನ್ನಗಳಲ್ಲಿ ಅಣಬೆ, ಜೇನು, ವಾಲ್ನಟ್, ಸೇಬು, ಚೆರ್ರಿ, ಔಷಧೀಯ ಗಿಡಮೂಲಿಕೆ ಮತ್ತು ಸಸ್ಯಗಳು, ರಾಳ, ಮೇಪಲ್ ಮರಗಳು ಸೇರಿವೆ.

12. ಈ ಪ್ರದೇಶದಲ್ಲಿ ಶಾಲೆಗಳು ಮತ್ತು ಕಾಲೇಜುಗಳ ಕೊರತೆಯಿದೆ. ಆದರೆ ಈ ಪ್ರದೇಶವು ಶೇ. 72ರಷ್ಟು ಸಾಕ್ಷರತೆಯನ್ನು ಹೊಂದಿದೆ.

13. ಪಾಷ್ಟೋ, ಉರ್ದು, ಕಾಶ್ಮೀರಿ ಮತ್ತು ಪಂಜಾಬಿಯಂತಹ ಭಾಷೆಗಳನ್ನು ಇಲ್ಲಿನ ಜನರು ಪ್ರಮುಖವಾಗಿ ಮಾತನಾಡುತ್ತಾರೆ.

14. ಪಾಕ್ ಆಕ್ರಮಿತ ಕಾಶ್ಮೀರ ತನ್ನದೇ ಆದ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಅನ್ನು ಸಹ ಹೊಂದಿದೆ.


ವಿವಾದದ ಮೂಲ ಏನು?

1947ರಲ್ಲಿ ಪಾಕಿಸ್ತಾನದ ಪಷ್ಟೂನ್ ಬುಡಕಟ್ಟು ಜನಾಂಗದವರು ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ಮಾಡಿದರು. ಇವರಿಗೆ ಪಾಕ್‌ ಸೇನೆಯ ಕುಮ್ಮಕ್ಕು ಇತ್ತು. ಆಗ ಈ ನಿರ್ಣಾಯಕ ಪರಿಸ್ಥಿತಿಯನ್ನು ನಿಭಾಯಿಸಲು ಆ ಕಾಲದ ಆಡಳಿತಗಾರ ಜಮ್ಮು ಮತ್ತು ಕಾಶ್ಮೀರದ ಮಹಾರಾಜ ಹರಿ ಸಿಂಗ್ ಅವರು ಭಾರತ ಸರ್ಕಾರದಿಂದ ಮಿಲಿಟರಿ ಸಹಾಯವನ್ನು ಕೋರಿದರು ಮತ್ತು ಅಂದಿನ ಭಾರತದ ಗವರ್ನರ್ ಜನರಲ್ ಮೌಂಟ್ ಬ್ಯಾಟನ್ ಅವರು 26 ಅಕ್ಟೋಬರ್ 1947ರಂದು ಒಪ್ಪಂದಕ್ಕೆ ಸಹಿ ಹಾಕಿದರು. ಇದರಲ್ಲಿ ಮೂರು ವಿಷಯಗಳು ರಕ್ಷಣೆ, ವಿದೇಶಾಂಗ ವ್ಯವಹಾರಗಳು ಮತ್ತು ಸಂವಹನಗಳು ಭಾರತಕ್ಕೆ ಹಸ್ತಾಂತರಿಸಲಾಯಿತು. ಈ ವಿಷಯಗಳನ್ನು ಹೊರತುಪಡಿಸಿ, ಜಮ್ಮು ಮತ್ತು ಕಾಶ್ಮೀರವು ತನ್ನ ಎಲ್ಲಾ ನಿರ್ಧಾರಗಳಿಗೆ ಮುಕ್ತವಾಗಿತ್ತು.

ಒಪ್ಪಂದದ ಈ ಸೇರ್ಪಡೆಯ ಆಧಾರದ ಮೇಲೆ ಭಾರತ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯಪ್ರವೇಶಿಸುವ ಸಂಪೂರ್ಣ ಹಕ್ಕನ್ನು ಹೊಂದಿದೆ ಎಂದು ಹೇಳುತ್ತದೆ. ಮತ್ತೊಂದೆಡೆ ಪಾಕಿಸ್ತಾನ ಇದನ್ನು ಒಪ್ಪುವುದಿಲ್ಲ.

ಪಾಕಿಸ್ತಾನದ ವಾದ ಏನು?

ಕಾಶ್ಮೀರದ ಮೇಲಿನ ಪಾಕಿಸ್ತಾನದ ಹಕ್ಕು 1993ರ ಘೋಷಣೆಯನ್ನು ಆಧರಿಸಿದೆ. ಈ ಘೋಷಣೆಯ ಪ್ರಕಾರ ಪಾಕಿಸ್ತಾನ ಸರ್ಕಾರದ ಆಡಳಿತವನ್ನು ಸ್ಥಾಪಿಸಬೇಕಾದ 5 ರಾಜ್ಯಗಳಲ್ಲಿ ಜಮ್ಮು ಮತ್ತು ಕಾಶ್ಮೀರವೂ ಸೇರಿದೆ. ಆದರೆ ಪಾಕಿಸ್ತಾನದ ಈ ಹೇಳಿಕೆಯನ್ನು ಭಾರತ ಎಂದಿಗೂ ಒಪ್ಪಲಿಲ್ಲ.

ಎರಡು ಭಾಗಗಳಾಗಿ ವಿಂಗಡಣೆ

ಭಾರತ ಮತ್ತು ಪಾಕಿಸ್ತಾನದ ನಡುವಿನ 1947ರ ಯುದ್ಧದ ಅನಂತರ ಕಾಶ್ಮೀರ ಆಡಳಿತವನ್ನು ಎರಡು ಭಾಗಗಳಾಗಿ ವಿಂಗಡಿಸಲಾಯಿತು. ಭಾರತದಿಂದ ಬೇರ್ಪಟ್ಟ ಕಾಶ್ಮೀರದ ಭಾಗವು ಜಮ್ಮು ಮತ್ತು ಕಾಶ್ಮೀರದ ಉಪಖಂಡವಾಯಿತು ಮತ್ತು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಗಡಿಯಿಂದ ಸಮೀಪದಲ್ಲಿದ್ದ ಕಾಶ್ಮೀರದ ಭಾಗವನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಎಂದು ಕರೆಯಲಾಯಿತು.

ಆಜಾದ್ ಕಾಶ್ಮೀರ

ಭಾರತದ ಕಾಶ್ಮೀರದ ಪಶ್ಚಿಮ ಭಾಗಕ್ಕೆ ಹೊಂದಿಕೊಂಡಿದೆ. 2011ರ ಹೊತ್ತಿಗೆ, ಆಜಾದ್ ಕಾಶ್ಮೀರದ ಜಿಡಿಪಿ 3.2 ಶತಕೋಟಿ ಡಾಲರ್ ಎಂದು ಅಂದಾಜಿಸಲಾಗಿದೆ. ಐತಿಹಾಸಿಕವಾಗಿ ಆಜಾದ್ ಕಾಶ್ಮೀರದ ಆರ್ಥಿಕತೆಯು ಕೃಷಿಯ ಮೇಲೆ ಅವಲಂಬಿತವಾಗಿದೆ. ಕಡಿಮೆ ಎತ್ತರದ ಪ್ರದೇಶಗಳಲ್ಲಿ ಹೆಚ್ಚಿನ ಜನಸಂಖ್ಯೆಯು ಗೋಧಿ, ಬಾರ್ಲಿ, ಕಾರ್ನ್ (ಮೆಕ್ಕೆಜೋಳ) ಮಾವು, ರಾಗಿ ಮುಂತಾದ ಬೆಳೆಗಳನ್ನು ಬೆಳೆಯುತ್ತದೆ.

ದಕ್ಷಿಣ ಜಿಲ್ಲೆಗಳಲ್ಲಿ, ಪಾಕಿಸ್ತಾನಿ ಸಶಸ್ತ್ರ ಪಡೆಗಳಿಗೆ ಅನೇಕ ಪುರುಷರನ್ನು ನೇಮಿಸಿಕೊಳ್ಳಲಾಗಿದೆ. ಇತರ ಸ್ಥಳೀಯರು ಯುರೋಪ್ ಅಥವಾ ಮಧ್ಯಪ್ರಾಚ್ಯದ ದೇಶಗಳಿಗೆ ಪ್ರಯಾಣಿಸುತ್ತಾರೆ. ಅಲ್ಲಿ ಅವರು ಕಾರ್ಮಿಕ-ಆಧಾರಿತ ಉದ್ಯೋಗಗಳಲ್ಲಿ ಕೆಲಸ ಮಾಡುತ್ತಾರೆ.

ಇದನ್ನೂ ಓದಿ: PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

ಉತ್ತರ ಪ್ರದೇಶ

ಗಿಲ್ಗಿಟ್ ಪ್ರದೇಶವನ್ನು ಕಾಶ್ಮೀರದ ಮಹಾರಾಜರು ಬ್ರಿಟಿಷ್ ಸರ್ಕಾರಕ್ಕೆ ಗುತ್ತಿಗೆ ನೀಡಿದರು. ಬಾಲ್ಟಿಸ್ತಾನ್ 1947ರಲ್ಲಿ ಪಾಕಿಸ್ತಾನದಿಂದ ಆಕ್ರಮಿಸಲ್ಪಟ್ಟ ಪಶ್ಚಿಮ ಲಡಾಖ್ ಪ್ರಾಂತ್ಯದ ಪ್ರದೇಶವಾಗಿತ್ತು. ಈ ಪ್ರದೇಶವು ವಿವಾದಿತ ಜಮ್ಮು ಮತ್ತು ಕಾಶ್ಮೀರ ಪ್ರದೇಶದ ಭಾಗವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಅತ್ಯಂತ ಕಳಪೆ ಸ್ಥಿತಿಯಲ್ಲಿದೆ. ಪಾಕಿಸ್ತಾನವು ಈ ಪ್ರದೇಶದ ಮೇಲೆ ಹಿಡಿತ ಹೊಂದಿದೆ. ಆದರೆ ಈ ಪ್ರದೇಶವನ್ನು ಪಾಕಿಸ್ತಾನವು ಉದ್ದೇಶಪೂರ್ವಕವಾಗಿ ಅಭಿವೃದ್ಧಿಪಡಿಸಿಲ್ಲ. ಆದ್ದರಿಂದ ಈ ಪ್ರದೇಶದ ಬಡ ಜನರನ್ನು ಭಯೋತ್ಪಾದಕರಂತೆ ತರಬೇತಿ ನೀಡಲು ಮತ್ತು ಭಾರತವನ್ನು ಅಸ್ಥಿರಗೊಳಿಸಲು ಬಳಸಿಕೊಳ್ಳುತ್ತಿದೆ.

Continue Reading

ದೇಶ

Narendra Modi : 2019ರಲ್ಲಿ ಬಿಹಾರದ ಒಂದು ಕ್ಷೇತ್ರದಲ್ಲಿ ಸೋತಿದ್ದೆವು; ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದ ಮೋದಿ

Narendra Modi: ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

VISTARANEWS.COM


on

Narendra modi
Koo

ಬೆಂಗಳೂರು: ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ 2019ರ ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಬಿಹಾರದಲ್ಲಿ ಒಂದು ಸ್ಥಾನ ಕಳೆದುಕೊಂಡಿತ್ತು. ಈ ಬಾರಿ ಈ ಬಾರಿ ನಾವು ಒಂದನ್ನೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi ) ಹೇಳಿದ್ದಾರೆ. ಎನ್​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಎಲ್ಲ ಸೀಟ್​ಗಳನ್ನು ಗೆಲ್ಲುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷ ಜೆಡಿಯು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ರೋಡ್ ಶೋ (Modi Patna Road Show) ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆಡಳಿತಾರೂಢ ಮೈತ್ರಿಕೂಟವು 2019 ರ ಲೋಕಸಭಾ ಚುನಾವಣೆಗಿಂತ ರಾಜ್ಯದಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಕಳೆದ ಬಾರಿ ಕಳೆದುಕೊಂಡ ಏಕೈಕ ಕ್ಷೇತ್ರವನ್ನು ಸಹ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

ರಾಜ್ಯ ಮತ್ತು ಅದರ ಜನರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದೇನೆ. ನಾನು ಹಲವಾರು ಕೆಲಸಕ್ಕಾಗಿ ಆಗಾಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದೇನೆ. ನನಗೆ ಇಲ್ಲಿ ಬಹಳ ಹಳೆಯ ಸಂಪರ್ಕಗಳಿವೆ ಎಂಬುದಾಗಿ ಅವರು ಹೇಳಿಕೊಂಡರು.

ಮುಂದುವರಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಪೂರ್ವ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ಭಾರಿ ಪ್ರಮಾಣದಲ್ಲಿ ವಿಸ್ತರಿಸಲಿದೆ. ಇದು ಎನ್​ಡಿಎಯ 400 ಸ್ಥಾನಗಳ ಗಡಿ ಸುಲಭವಾಗಿ ತಲುಪಲು ನೆರವಾಗುತ್ತದೆ ಎಂದು ಹೇಳಿದರು. ಪೂರ್ವ ಭಾರತದಲ್ಲಿ ಬಿಜೆಪಿಯ ಏಳಿಗೆಯ ಬಗ್ಗೆ ಕೇಳಿದಾಗ, ವಲಯವನ್ನು ಬೆಳವಣಿಗೆಯ ಎಂಜಿನ್ ಆಗಿ ಅಭಿವೃದ್ಧಿಪಡಿಸಲು ವಿಶೇಷ ಗಮನ ಹರಿಸುವ ಬಗ್ಗೆ ಪ್ರಧಾನಿ ಮಾತನಾಡಿದರು.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ನೀವು ನನ್ನ 2013 ರ ಭಾಷಣವನ್ನು ಆಲಿಸಿದ್ದರೆ ನೆನಪಿರಬಹುದು. ನಾನು ಪ್ರಧಾನಿ ಆಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಲು ಬಯಸಿದ ವೇಳೆ ಪೂರ್ವ ಭಾರತವನ್ನು ಬೆಳವಣಿಗೆಯ ಎಂಜಿನ್ ಆಗಿ ಪರಿವರ್ತಿಸಿದ್ದೆನೆ ಎಂದು ನಾನು ಹೇಳಿದ್ದೆ” ಎಂದು ಅವರು ಪಾಟ್ನಾದಲ್ಲಿ ರೋಡ್ ಶೋ ನಡೆಸುವಾಗ ಹೇಳಿದರು.

ನಾವು ಮೂಲಸೌಕರ್ಯ, ಆರೋಗ್ಯ ಇತ್ಯಾದಿಗಳ ಮೇಲೆ ಗಮನ ಹರಿಸಿದ್ದೇವೆ. ಈ ಸಮೀಕ್ಷೆಯನ್ನು ಪರಿಗಣಿಸಿದರೆ, ಪೂರ್ವ ಭಾರತದ ಚುನಾವಣಾ ಫಲಿತಾಂಶಗಳು ಅದನ್ನು ಪ್ರತಿಬಿಂಬಿಸಲಿವೆ. ಜನರು ಆಶ್ಚರ್ಯಚಕಿತರಾಗಲಿದ್ದಾರೆ. ತೆಲಂಗಾಣ, ಒಡಿಶಾ, ಬಂಗಾಳ, ಬಿಹಾರ, ಜಾರ್ಖಂಡ್, ಅಸ್ಸಾಂನಲ್ಲಿ ಬಿಜೆಪಿ ಹೊಸ ಹುಟ್ಟುಪಡೆಯಲಿಎ ಎಂದು ಹೇಳಿದರು.

Continue Reading

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading
Advertisement
Swati Maliwal
ಪ್ರಮುಖ ಸುದ್ದಿ2 mins ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ21 mins ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ52 mins ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ55 mins ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Narendra Modi
ಪ್ರಮುಖ ಸುದ್ದಿ1 hour ago

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Viral Video
ವೈರಲ್ ನ್ಯೂಸ್1 hour ago

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

Chaya Singh
ಕರ್ನಾಟಕ2 hours ago

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

former MLC Arun Shahapur latest Statement
ಬೆಂಗಳೂರು2 hours ago

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

HD Revanna Released first reaction after release will be acquitted of all charges
ರಾಜಕೀಯ2 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

Income Tax office
ಪ್ರಮುಖ ಸುದ್ದಿ2 hours ago

Income Tax Office : ಆದಾಯ ತೆರಿಗೆ ಕಚೇರಿಯಲ್ಲಿ ಬೆಂಕಿ ಅವಘಡ; ಒಂದು ಸಾವು; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Released first reaction after release will be acquitted of all charges
ರಾಜಕೀಯ2 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20247 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ8 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು9 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ16 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಟ್ರೆಂಡಿಂಗ್‌