ನಮ್ಮೂರ ಮಗಳು ರಾಷ್ಟ್ರಪತಿ ಆಗ್ತಾಳೆ; ದ್ರೌಪದಿ ಮುರ್ಮು ಹುಟ್ಟೂರಲ್ಲಿ ಸಂಭ್ರಮ, ಲಡ್ಡು ತಯಾರಿಕೆ - Vistara News

ದೇಶ

ನಮ್ಮೂರ ಮಗಳು ರಾಷ್ಟ್ರಪತಿ ಆಗ್ತಾಳೆ; ದ್ರೌಪದಿ ಮುರ್ಮು ಹುಟ್ಟೂರಲ್ಲಿ ಸಂಭ್ರಮ, ಲಡ್ಡು ತಯಾರಿಕೆ

ದ್ರೌಪದಿ ಮುರ್ಮು ಹುಟ್ಟಿ ಬೆಳೆದ ಒಡಿಶಾದ ಉಪರ್ಬೇಡ ಹಳ್ಳಿಯ ರಸ್ತೆಗಳೆಲ್ಲ ಸಿಂಗಾರಗೊಂಡಿವೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಇಲ್ಲಿ ಸಾಂಪ್ರದಾಯಿಕ ನೃತ್ಯ, ಹಾಡು ಪ್ರದರ್ಶನವೂ ನಡೆಯಲಿದೆ.

VISTARANEWS.COM


on

ancestral village
ದ್ರೌಪದಿ ಮುರ್ಮೂ ಹುಟ್ಟೂರಲ್ಲಿ ಸಂಭ್ರಮ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಬೆಳಗ್ಗೆ 11ಗಂಟೆಗೆ ಪ್ರಾರಂಭವಾಗಿದೆ. ಇನ್ನೂ ಫಲಿತಾಂಶ ಹೊರಬಿದ್ದಿಲ್ಲ. ಸಂಜೆ ಹೊತ್ತಿಗೆ ರಾಷ್ಟ್ರಪತಿ ಯಾರೆಂದು ಅಧಿಕೃತ ಮಾಹಿತಿ ಹೊರಬೀಳಲಿದೆ. ಈ ಮಧ್ಯೆ ಎನ್‌ಡಿಎ ಒಕ್ಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಹುಟ್ಟೂರಾದ ಒಡಿಶಾದ ಉಪರ್ಬೇಡ ಹಳ್ಳಿಯಲ್ಲಿ ಈಗಾಗಲೇ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಹೇಗೆ ಲೆಕ್ಕಾಚಾರ ಹಾಕಿ ನೋಡಿದರೂ ದ್ರೌಪದಿ ಮುರ್ಮು ಗೆಲುವು ನಿಶ್ಚಿತ ಎಂಬ ವಾತಾವರಣವೇ ಇರುವುದರಿಂದ ಮುರ್ಮು ಊರಲ್ಲೀಗ ಸಿಹಿ ತಯಾರಿಕೆ ಭರ್ಜರಿಯಾಗಿಯೇ ನಡೆಯುತ್ತಿದೆ.

ಒಡಿಶಾದ ಉಪರ್ಬೇಡ ಹಳ್ಳಿ, ರಾಜ್ಯ ರಾಜಧಾನಿ ಭುವನೇಶ್ವರದಿಂದ 280ಕಿಮೀ ದೂರದಲ್ಲಿದೆ. ಬೆಳಗ್ಗೆ ಮತ ಎಣಿಕೆ ಪ್ರಾರಂಭವಾಗುವುದಕ್ಕೂ ಮುಂಚಿತವಾಗಿಯೇ ಈ ಊರಲ್ಲಿ ಸಿಹಿ ತಯಾರು ಮಾಡಲು ತೊಡಗಿದ್ದಾರೆ. ʼಈ ಪುಟ್ಟ, ದುರ್ಗಮ ಹಳ್ಳಿಯಲ್ಲಿ ಹುಟ್ಟಿದ ದ್ರೌಪದಿ ಮುರ್ಮು ಇಂದು ದೇಶದ ರಾಷ್ಟ್ರಪತಿಯಾಗಲಿದ್ದಾರೆ. ಇದು ನಿಜಕ್ಕೂ ನಮ್ಮೆಲ್ಲರಿಗೂ ಹೆಮ್ಮೆಯ ಕ್ಷಣ. ಒಡಿಶಾದ ಮಗಳು ಅವರುʼ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಇಡೀ ಊರಿಗೆ ಲಾಡು ಹಂಚಿ, ಸಂಭ್ರಮಾಚರಣೆ ಮಾಡಲು ಇವರೆಲ್ಲ ನಿರ್ಧರಿಸಿದ್ದಾರೆ. ಸುಮಾರು 20ಸಾವಿರ ಲಡ್ಡುಗಳನ್ನು ‌ ಈಗಾಗಲೇ ತಯಾರಿಸಿ ಇಟ್ಟಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮವೊಂದು ಹಳ್ಳಿಯ ಹಿರಿಯರನ್ನು ಮಾತನಾಡಿಸಿದಾಗ, ಅವರು ತುಂಬ ಉತ್ಸಾಹದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ʼನಾನಂತೂ ಸಿಕ್ಕಾಪಟೆ ಖುಷಿಯಾಗಿದ್ದೇನೆ ಇಂದು. ನಾವೆಲ್ಲ ಸೇರಿ ಲಡ್ಡು ತಯಾರು ಮಾಡಿಟ್ಟಿದ್ದೇವೆ. ಮುರ್ಮು ರಾಷ್ಟ್ರಪತಿ ಎಂದು ಘೋಷಣೆಯಾಗುವುದನ್ನೇ ಕಾಯುತ್ತಿದ್ದೇವೆʼ ಎಂದು ಹೇಳಿದ್ದಾರೆ.

ದ್ರೌಪದಿ ಮುರ್ಮು ಬುಡಕಟ್ಟು ಜನಾಂಗದ ಮಹಿಳೆ. ಅವರ ಪೂರ್ವಜರು ನೆಲೆಸಿದ್ದ ಉಪರ್ಬೇಡದಲ್ಲಿ ಈಗಲೂ ಇವರಿಗಾಗಿ ಒಂದು ಮನೆಯಿದೆ. ಮುರ್ಮು ತಂದೆ ಇಲ್ಲಿಯೇ ನೆಲೆಸಿದ್ದರು. ಈಗ ಅವರು ಬದುಕಿಲ್ಲದ ಕಾರಣ ಮುರ್ಮು ಸಂಬಂಧಿ ದುಲಾರಾಮ್‌ ತುಡು ಎಂಬುವರು ಈ ಮನೆಯಲ್ಲಿ ವಾಸವಾಗಿದ್ದಾರೆ. ಫಲಿತಾಂಶ ಬರುತ್ತಿದ್ದಂತೆ ಇಲ್ಲಿ ಬುಡಕಟ್ಟು ಸಂಪ್ರದಾಯದ ಜಾನಪದ ನೃತ್ಯ, ಹಾಡು ಪ್ರದರ್ಶನ ನಡೆಯಲಿದೆ. ರಸ್ತೆಗಳನ್ನೆಲ್ಲ ಅಲಂಕರಿಸಲಾಗಿದೆ.

ಇದನ್ನೂ ಓದಿ: ಮುರ್ಮು VS ಸಿನ್ಹಾ: ಇಂದು ಹೊರಬೀಳಲಿದೆ ರಾಷ್ಟ್ರಪತಿ ಚುನಾವಣೆ ಫಲಿತಾಂಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ranbir Kapoor: ಮೋದಿಯದ್ದು ‘ಆಯಸ್ಕಾಂತದಂಥ ವ್ಯಕ್ತಿತ್ವ’ ಎಂದ ರಣಬೀರ್‌ ಕಪೂರ್;‌ ಕನ್ನಡಿಗನಿಗೆ ನಟ ಹೇಳಿದ ಕತೆ ಏನು?

Ranbir Kapoor: ರಾಜಕೀಯದ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ನಿಖಿಲ್‌ ಕಾಮತ್‌ ಕೇಳಿದ ಪ್ರಶ್ನೆಗೆ ರಣಬೀರ್‌ ಕಪೂರ್‌ ಉತ್ತರಿಸಿದರು. ರಣಬೀರ್‌ ಕಪೂರ್‌ ಸೇರಿ ಹಲವು ನಟರು, ನಿರ್ದೇಶಕರು ಮೋದಿ ಅವರನ್ನು ಭೇಟಿಯಾಗಲು ಹೋದಾಗ ಮೋದಿ ಅವರು ಹೇಗೆ ಪ್ರತಿಕ್ರಿಯಿಸಿದರು ಎಂಬುದು ಸೇರಿ ಹಲವು ವಿಷಯಗಳ ಕುರಿತು ರಣಬೀರ್‌ ಕಪೂರ್‌ ಪ್ರಸ್ತಾಪಿಸಿದರು.

VISTARANEWS.COM


on

Ranbir Kapoor
Koo

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತ ಸೇರಿ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯದ ಹೊರತಾಗಿಯೂ ಮೋದಿ ಅವರ ಶ್ರಮ, ವ್ಯಕ್ತಿತ್ವವನ್ನು ಮೆಚ್ಚುವವರಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ನರೇಂದ್ರ ಮೋದಿ ಅವರ ಕುರಿತು ಬಾಲಿವುಡ್‌ ನಟ ರಣಬೀರ್‌ ಕಪೂರ್‌ (Ranbir Kapoor) ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಜೆರೋದಾ ಸಂಸ್ಥಾಪಕ, ಕನ್ನಡಿಗ ನಿಖಿಲ್‌ ಕಾಮತ್‌ (Nikhil Kamath) ಅವರೊಂದಿಗಿನ ಪಾಡ್‌ಕಾಸ್ಟ್‌ ವೇಳೆ ರಣಬೀರ್‌ ಕಪೂರ್‌ ಅವರು ಮೋದಿ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಾಜಕೀಯದ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ನಿಖಿಲ್‌ ಕಾಮತ್‌ ಕೇಳಿದ ಪ್ರಶ್ನೆಗೆ ರಣಬೀರ್‌ ಕಪೂರ್‌ ಉತ್ತರಿಸಿದರು. “ನಾನು ರಾಜಕೀಯದ ಬಗ್ಗೆ ಜಾಸ್ತಿ ಯೋಚಿಸುವುದಿಲ್ಲ. ಆದರೆ, 4-5 ವರ್ಷಗಳ ಹಿಂದೆ ನಾನು ಸೇರಿ ಹಲವು ನಟರು ಹಾಗೂ ನಿರ್ದೇಶಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಹೋಗಿದ್ದೆವು. ನೀವು ಮೋದಿ ಅವರು ಹೇಗೆ ಮಾತನಾಡುತ್ತಾರೆ ಎಂಬುದನ್ನು ಟಿ.ವಿಯಲ್ಲಿ ನೋಡಿರುತ್ತೀರಿ. ನಮಗೂ ಕೂಡ ಅವರ ಆಯಸ್ಕಾಂತದಂತಹ ವ್ಯಕ್ತಿತ್ವದ ಅರಿವಾಯಿತು” ಎಂಬುದಾಗಿ ರಣಬೀರ್‌ ಕಪೂರ್‌ ಹೇಳಿದರು.

“ನಾವು ಅವರನ್ನು ಭೇಟಿಯಾಗಲು ಹೋಗಿದ್ದೆವು. ನಾವು ಕುಳಿತಿದ್ದಾಗ ಅವರು ಬಂದು ನಮ್ಮ ಜತೆ ಕುಳಿತರು. ಅವರು ಪ್ರತಿಯೊಬ್ಬರ ಜತೆಗೂ ಮಾತನಾಡಿದರು. ಪ್ರತಿಯೊಬ್ಬರ ವೈಯಕ್ತಿಕ ವಿಚಾರಗಳ ಬಗ್ಗೆ ಕೇಳಿದರು. ಆಗ ನನ್ನ ತಂದೆಯು ಚಿಕಿತ್ಸೆ ಪಡೆಯುತ್ತಿದ್ದರು. ಅದರ ಬಗ್ಗೆಯೂ ಮೋದಿ ಅವರು ಕೇಳಿದರು. ವಿಕ್ಕಿ ಕೌಶಲ್‌, ಕಿರಣ್‌ ಜೋಹರ್‌ ಸೇರಿ ಹಲವರ ವೈಯಕ್ತಿಕ ವಿಚಾರಗಳ ಕುರಿತು ಕೂಡ ಮೋದಿ ಮಾತನಾಡಿದರು. ಅದ್ಭುತ ವ್ಯಕ್ತಿಗಳು, ಸಾಧಕರು ಮಾತ್ರ ಇಷ್ಟೊಂದು ಶ್ರಮ ವಹಿಸಲು ಸಾಧ್ಯ. ಶಾರುಖ್‌ ಖಾನ್‌ ಸೇರಿ ಹಲವು ಸಾಧಕರು ಇಷ್ಟು ಶ್ರಮ ಹಾಕಲು ಸಾಧ್ಯ” ಎಂಬುದಾಗಿ ರಣಬೀರ್‌ ಕಪೂರ್‌ ಅವರು ಮೋದಿ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಿಖಿಲ್‌ ಕಾಮತ್‌ ಕೂಡ ಬಣ್ಣನೆ

ನರೇಂದ್ರ ಮೋದಿ ಅವರ ಜತೆಗೆ ಸಮಯ ಕಳೆದ ಅನುಭವದ ಕುರಿತು ನೀವು ಹೇಳಿ ಎಂಬುದಾಗಿ ರಣಬೀರ್‌ ಕಪೂರ್‌ ಅವರು ಕೇಳಿದಾಗ ನಿಖಿಲ್‌ ಕಾಮತ್‌ ಕೂಡ ಮೋದಿ ಬಗ್ಗೆ ಮೆಚ್ಚಗೆಯ ಮಾತುಗಳನ್ನಾಡಿದ್ದರು. “ನರೇಂದ್ರ ಮೋದಿ ಅವರ ಜತೆ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾದೆ. ನಾವು ಅಮೆರಿಕದಲ್ಲಿದ್ದಾಗ ಮೋದಿ ಅವರು ನಿರಂತರವಾಗಿ ಕಾರ್ಯಕ್ರಮಗಳಲ್ಲಿ ಭೇಟಿಯಾಗುತ್ತಿದ್ದರು. ಅವರು ಬೆಳಗ್ಗೆಯಿಂದ ರಾತ್ರಿವರೆಗೆ ಒಂದಲ್ಲ ಒಂದು ಕಾರ್ಯಕ್ರಮ, ಚಟುವಟಿಕೆಯಲ್ಲಿ ತೊಡಗಿರುತ್ತಿದ್ದರು. ಅವರ ವಯಸ್ಸಿನಲ್ಲಿ, ಅವರಷ್ಟು ಶ್ರಮ ವಹಿಸುವುದು ನನಗೆ ಅಚ್ಚರಿಯಾಯಿತು. ಅವರು ಕೂಡ ನನಗೆ ಸ್ಫೂರ್ತಿ” ಎಂದು ನಿಖಿಲ್‌ ಕಾಮತ್‌ ತಿಳಿಸಿದ್ದಾರೆ.

ಇದನ್ನೂ ಓದಿ: Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

Continue Reading

ದೇಶ

Physical Abuse: ತಂಗಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ, ಕೊಲೆ; ಕೇಸ್‌ ಮುಚ್ಚಲು ತಾಯಿಯೇ ಸಾಥ್!

Physical Abuse: ಬಾಲಕಿ ಮೇಲೆ ಸಹೋದರನೇ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 50ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕುಟುಂಬಸ್ಥರ ಹೇಳಿಕೆಯಲ್ಲಿ ವ್ಯತ್ಯಾಸವಾದ ಕಾರಣ ಕೂಲಂಕಷ ತನಿಖೆ ನಡೆಸಿದ್ದಾರೆ. ಆಗ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

VISTARANEWS.COM


on

Physical Abuse
Koo

ಭೋಪಾಲ್:‌ ಮಧ್ಯಪ್ರದೇಶದ ರೇವಾದಲ್ಲಿ (Reva Case) 9 ವರ್ಷದ ತಂಗಿಯ ಮೇಲೆ 13 ವರ್ಷದ ಅಣ್ಣನು ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣ (Physical Abuse) ದೇಶಾದ್ಯಂತ ಸುದ್ದಿಯಾಗಿದೆ. ಅಶ್ಲೀಲ ವಿಡಿಯೊ ವೀಕ್ಷಿಸಿದ ಬಳಿಕ ಆತನು ತಂಗಿಯ ಮೇಲೆ ಅತ್ಯಾಚಾರ ಎಸಗಿ, ಕತ್ತುಹಿಸುಕಿ ಕೊಲೆ ಮಾಡಿರುವ ಕೇಸ್‌ಗೆ ಈಗ ಹೊಸದೊಂದು ತಿರುವು ಸಿಕ್ಕಿದೆ. ಬಾಲಕನು ಅತ್ಯಾಚಾರ ಎಸಗಿದ ಬಳಿಕ ಬಾಲಕಿಯನ್ನು ಕತ್ತು ಹಿಸುಕುವ ವೇಳೆ ಆತನ ತಾಯಿ ಹಾಗೂ ಇಬ್ಬರು ಅಕ್ಕಂದಿರು ಕೂಡ ಇದ್ದರು. ಹತ್ಯೆಯ ಬಳಿಕ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದರು ಎಂಬ ಭೀಕರ ಮಾಹಿತಿ ಲಭ್ಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 50ಕ್ಕೂ ಹೆಚ್ಚು ಜನರು ವಿಚಾರಣೆ ನಡೆಸಿದ್ದು, ತನಿಖೆಯ ಬಳಿಕ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಏಪ್ರಿಲ್‌ 24ರಂದೇ ಪ್ರಕರಣ ನಡೆದಿದೆ. ಮೊದಲು ಬಾಲಕನು ಅಶ್ಲೀಲ ವಿಡಿಯೊ ನೋಡಿದ್ದಾನೆ. ಇದಾದ ಬಳಿಕ ಕಾಮೋದ್ರೇಕಗೊಂಡ ಆತನು 9 ವರ್ಷದ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕನ ಕೃತ್ಯವು ಆತನ ತಾಯಿ ಹಾಗೂ 17 ಮತ್ತು 18 ವರ್ಷದ ಸಹೋದರಿಯರಿಗೆ ಗೊತ್ತಿದೆ. ತಾಯಿಯ ಎದುರೇ ಬಾಲಕನು ಕತ್ತು ಹಿಸುಕಿದ್ದಾನೆ ಎಂಬುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

Crime News
Crime News

ಪೊಲೀಸರು ಹೇಳುವುದಿಷ್ಟು…

“ಬಾಲಕನು ಅಶ್ಲೀಲ ವಿಡಿಯೊ ವೀಕ್ಷಿಸಿದ ಬಳಿಕ ತಂಗಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಬಾಲಕಿಯು ತಂದೆ ಹೇಳುತ್ತೇನೆ ಎಂದು ಹೆದರಿಸಿದ್ದಾಳೆ. ಆಗ ಬಾಲಕಿಯ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲ, ಬೆದರಿಕೆಯಿಂದ ವಿಚಲಿತನಾದ ಬಾಲಕನು ಮಲಗಿದ್ದ ತಾಯಿಯನ್ನು ಎಬ್ಬಿಸಿದ್ದಾನೆ. ಆಗ ತಾಯಿಯ ಎದುರೇ ಬಾಲಕಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ತಾಯಿ ಹಾಗೂ ಆತನ ಇಬ್ಬರು ಸಹೋದರಿಯರು ಕೇಸ್‌ ಮುಚ್ಚಿಹಾಕಲು ಸಹಾಯ ಮಾಡಿದ್ದಾರೆ” ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಕತೆ ಕಟ್ಟಿದರು

ಬಾಲಕಿಯ ಕೊಲೆಯ ಬಳಿಕ ಬಾಲಕನ ತಾಯಿ ಹಾಗೂ ಇಬ್ಬರು ಸಹೋದರಿಯರು ಕತೆ ಕಟ್ಟಿದ್ದಾರೆ. ಬಾಲಕಿಗೆ ವಿಷಕಾರಿ ಕೀಟವೊಂದು ಕಚ್ಚಿದೆ ಎಂಬುದಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ಶವ ತೆಗೆದುಕೊಂಡು ಹೋಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ನಿರಾಕರಿಸಿದಾಗ ಸರ್ಕಾರಿ ಆಸ್ಪತ್ರೆಗೆ ಸಾಗಣೆ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಸುಳ್ಳು ವರದಿ ನೀಡದೆ, ಬಾಲಕಿಯನ್ನು ಅತ್ಯಾಚಾರದ ಬಳಿಕ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದಾದ ಬಳಿಕ ಪ್ರಕರಣ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿ ಆತನ ಕುಟುಂಬಸ್ಥರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Sexual Harassment: ರಿಕ್ಷಾದಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಚಾಲಕ

Continue Reading

ಪರಿಸರ

International Tiger Day 2024: 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಶೇ. 95ರಷ್ಟು ಕುಸಿತ!

ಜಗತ್ತಿನಲ್ಲಿ ಇಂದು ಶೇ. 97ಕ್ಕಿಂತ ಹೆಚ್ಚು ಸ್ಥಳೀಯ ಹುಲಿಗಳು ಕಣ್ಮರೆಯಾಗಿವೆ. ಇದು ಮೊದಲ ಬಾರಿಗೆ 2010 ರಲ್ಲಿ ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲು (International Tiger Day 2024) ಪ್ರೇರೇಪಿಸಿತ್ತು. ಇದರ ಮುಖ್ಯ ಉದ್ದೇಶ ಹುಲಿಗಳ ಸಂಖ್ಯೆಯಲ್ಲಿ ಇಳಿಮುಖವಾಗುವುದನ್ನು ತಡೆಯುವ ಗುರಿಯನ್ನು ಹೊಂದಿದೆ. ವಿಶೇಷವೆಂದರೆ ಹುಲಿಗಳು ಭಾರತದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿವೆ.

VISTARANEWS.COM


on

By

International Tiger Day 2024
Koo

ವಿನಾಶದ ಅಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ (save tiger) ಜಾಗೃತಿ ಮೂಡಿಸುವ ಸಲುವಾಗಿ (public awareness) ಪ್ರತಿ ವರ್ಷ ಜುಲೈ 29ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು (International Tiger Day 2024) ಆಚರಿಸಲಾಗುತ್ತದೆ. ಹುಲಿ ಸಂರಕ್ಷಣಾ ಪ್ರಯತ್ನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ.

ಜಗತ್ತಿನಲ್ಲಿ ಇಂದು ಶೇ. 97ಕ್ಕಿಂತ ಹೆಚ್ಚು ಸ್ಥಳೀಯ ಹುಲಿಗಳು ಕಣ್ಮರೆಯಾಗಿವೆ. ಇದು ಮೊದಲ ಬಾರಿಗೆ 2010ರಲ್ಲಿ ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲು ಪ್ರೇರೇಪಿಸಿತ್ತು. ಇದರ ಮುಖ್ಯ ಉದ್ದೇಶ ಹುಲಿಗಳ ಸಂಖ್ಯೆಯಲ್ಲಿ ಇಳಿಮುಖವಾಗುವುದನ್ನು ತಡೆಯುವ ಗುರಿಯನ್ನು ಹೊಂದಿದೆ. ಅಂತಾರಾಷ್ಟ್ರೀಯ ಹುಲಿ ದಿನವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸುವ ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಗತಿಕವಾಗಿ ಜಾಗೃತಿ ಮೂಡಿಸುವ ದಿನವಾಗಿದೆ.

International Tiger Day 2024
International Tiger Day 2024


ಭಾರತದಲ್ಲಿ ಹುಲಿಗಳ ಸಂಖ್ಯೆ

2023ರ ಏಪ್ರಿಲ್ ನಲ್ಲಿ ಬಿಡುಗಡೆಯಾದ ಹುಲಿ ಗಣತಿಯ ಪ್ರಕಾರ ಭಾರತದಲ್ಲಿ ಕೇವಲ 3,167 ಹುಲಿಗಳಿವೆ. ಆಘಾತಕಾರಿ ಸಂಗತಿಯೆಂದರೆ ಈ ಸಂಖ್ಯೆಯು ಜಾಗತಿಕ ಹುಲಿ ಜನಸಂಖ್ಯೆಯ ಶೇ. 75ರಷ್ಟಾಗಿದೆ.

ಹುಲಿಯು ಭಾರತದ ರಾಷ್ಟ್ರೀಯ ಪ್ರಾಣಿಯಾಗಿದೆ. ಆದರೆ ಕ್ಷೀಣಿಸುತ್ತಿರುವ ಸಂಖ್ಯೆಯು ಆತಂಕವನ್ನು ಉಂಟು ಮಾಡಿದೆ. ಯಾಕೆಂದರೆ ಹುಲಿಗಳು ಭಾರತದ ಸಾಂಸ್ಕೃತಿಕ ಪರಂಪರೆಯ ಅತ್ಯಗತ್ಯ ಭಾಗವಾಗಿದ್ದು ಅದು ಪರಿಸರ ವ್ಯವಸ್ಥೆಗಳನ್ನು ಸಮತೋಲನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಹುಲಿಗಳ ಸಂಖ್ಯೆ ಕ್ಷೀಣಿಸಲು ಕಾರಣವೇನು?

ಹುಲಿಗಳು ಪ್ರಾಣಿ ಸಾಮ್ರಾಜ್ಯದ ಭವ್ಯ ಜೀವಿಗಳು. ಬಿಳಿ ಹುಲಿ, ರಾಯಲ್ ಬೆಂಗಾಲ್ ಹುಲಿ ಮತ್ತು ಸೈಬೀರಿಯನ್ ಹುಲಿಗಳಂತಹ ಜಾತಿಗಳನ್ನು ಇವು ಒಳಗೊಂಡಿವೆ. ಹವಾಮಾನ ಬದಲಾವಣೆ, ಅಕ್ರಮ ವನ್ಯಜೀವಿ ಮಾರಾಟ ಮತ್ತು ಆವಾಸಸ್ಥಾನದ ನಷ್ಟ ಸೇರಿದಂತೆ ಹಲವಾರು ತೊಂದರೆಗಳು ಅವುಗಳ ಸಂಖ್ಯೆಯಲ್ಲಿ ತ್ವರಿತ ಕುಸಿತಕ್ಕೆ ಕಾರಣವಾಗಿದೆ.

International Tiger Day 2024
International Tiger Day 2024


ಅಂತಾರಾಷ್ಟ್ರೀಯ ಹುಲಿ ದಿನದ ಸಂದೇಶವೇನು?

2024ರ ಜುಲೈ 29ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಹುಲಿ ಸಂರಕ್ಷಣೆ ಮತ್ತು ಈ ಪ್ರಾಣಿಗಳು ಎದುರಿಸುತ್ತಿರುವ ತುರ್ತು ಬೆದರಿಕೆಗಳಾದ ಆವಾಸಸ್ಥಾನದ ನಷ್ಟ, ಬೇಟೆಯಾಡುವುದು ಮತ್ತು ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.

ಹುಲಿಗಳ ಸಂರಕ್ಷಿತ ಪ್ರದೇಶಗಳನ್ನು ವಿಸ್ತರಿಸುವುದು- ಹುಲಿಗಳು ಅಭಿವೃದ್ಧಿ ಹೊಂದಲು ಮತ್ತು ಮುಕ್ತವಾಗಿ ತಿರುಗಾಡಲು ಸುರಕ್ಷಿತ ಆವಾಸಸ್ಥಾನಗಳನ್ನು ಖಚಿತಪಡಿಸಿಕೊಳ್ಳುವುದು, ಸುಸ್ಥಿರ ಜೀವನೋಪಾಯವನ್ನು ಉತ್ತೇಜಿಸುವುದು- ವನ್ಯಜೀವಿಗಳನ್ನು ಸಂರಕ್ಷಿಸುವಾಗ ಆರ್ಥಿಕ ಪ್ರಯೋಜನಗಳನ್ನು ಖಾತರಿಪಡಿಸುವ ಹುಲಿ- ಸ್ನೇಹಿ ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳಲು ಸ್ಥಳೀಯ ಸಮುದಾಯಗಳನ್ನು ಉತ್ತೇಜಿಸುವ ಥೀಮ್ ಅನ್ನು ಈ ವರ್ಷದ ಅಂತಾರಾಷ್ಟ್ರೀಯ ಹುಲಿ ದಿನ ಹೊಂದಿದೆ.

ಅಂತಾರಾಷ್ಟ್ರೀಯ ಹುಲಿ ದಿನದ ಇತಿಹಾಸ

2010ರಲ್ಲಿ ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ಶೃಂಗಸಭೆಯ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಇದಕ್ಕೆ ವಿಶ್ವದ ಬಹುತೇಕ ರಾಷ್ಟ್ರಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ಮತ್ತು ಹುಲಿ ಸಂರಕ್ಷಣೆಗೆ ಮೀಸಲಾಗಿರುವ ಸಂರಕ್ಷಣಾ ಗುಂಪುಗಳು ಬೆಂಬಲವನ್ನು ಸೂಚಿಸಿತ್ತು.

ಹುಲಿಗಳು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಲು ಸಂಘಟಿತ ಪ್ರಯತ್ನಗಳ ತುರ್ತು ಅಗತ್ಯವನ್ನು ಗುರುತಿಸಿ ಟೈಗರ್ ರೇಂಜ್ ದೇಶಗಳು ಹುಲಿ ಸಂರಕ್ಷಣೆ ಮತ್ತು ಅದು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಒಂದು ದಿನವನ್ನು ಮೀಸಲಿಡಲು ನಿರ್ಧರಿಸಿದೆ. ಅವರು ಜುಲೈ 29 ಅನ್ನು ಅಂತಾರಾಷ್ಟ್ರೀಯ ಹುಲಿ ದಿನಕ್ಕಾಗಿ ಆಯ್ಕೆ ಮಾಡಿದರು. ಇದು ಶೃಂಗಸಭೆಯ ಮೊದಲ ಮತ್ತು ಕೊನೆಯ ದಿನಗಳ ನಡುವಿನ ಮಧ್ಯಭಾಗವನ್ನು ಗುರುತಿಸುತ್ತದೆ. ಇದು ಹುಲಿಗಳನ್ನು ಉಳಿಸಲು ನಡೆಯುತ್ತಿರುವ ಜಾಗತಿಕ ಪ್ರಯತ್ನವನ್ನು ಸಂಕೇತಿಸುತ್ತದೆ.

International Tiger Day 2024
International Tiger Day 2024


ಅಂತಾರಾಷ್ಟ್ರೀಯ ಹುಲಿ ದಿನಾಚರಣೆ 2024ರ ಮಹತ್ವ

ಹುಲಿಗಳು ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಸಾಂಪ್ರದಾಯಿಕ ಪ್ರಾಣಿಯಾಗಿದೆ. ಆದರೆ ಇವುಗಳು ಗಂಭೀರ ಬೆದರಿಕೆಗಳನ್ನು ಎದುರಿಸುತ್ತಿವೆ ಮತ್ತು ಅಂತಾರಾಷ್ಟ್ರೀಯ ಹುಲಿ ದಿನವು ಅವುಗಳ ದುರವಸ್ಥೆಯ ಬಗ್ಗೆ ಜಾಗೃತಿ ಮೂಡಿಸಲು ಮೀಸಲಾಗಿದೆ. ಈ ದಿನದಂದು ಹುಲಿ ಸಂರಕ್ಷಣೆಯ ತುರ್ತು ಅಗತ್ಯವನ್ನು ಒತ್ತಿಹೇಳಲು ಸಮಾಜದ ಎಲ್ಲಾ ವರ್ಗಗಳ ಜನರು ಒಟ್ಟಾಗಿ ಸೇರುತ್ತಾರೆ.

ಇದನ್ನೂ ಓದಿ: Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

ಹುಲಿಗಳ ಬಗೆಗಿನ ಆಸಕ್ತಿದಾಯಕ ಸಂಗತಿಗಳು

  • – ಸುಮಾರು ಎರಡು ಮಿಲಿಯನ್ ವರ್ಷಗಳಿಂದ ಹುಲಿಗಳು ಭೂಮಿ ಮೇಲೆ ಇವೆ.
  • – ಕಳೆದ 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಸುಮಾರು ಶೇ. 95ರಷ್ಟು ಕಡಿಮೆಯಾಗಿದೆ.
  • – ಭಾರತವು 3000ಕ್ಕೂ ಹೆಚ್ಚು ಹುಲಿಗಳನ್ನು ಹೊಂದಿದ್ದು, ಇದು ವಿಶ್ವದಲ್ಲೇ ಅತಿ ಹೆಚ್ಚು.
  • – ಹುಲಿಗಳು ಹೆಚ್ಚಾಗಿ ನಿಧಾನವಾಗಿ ಹೆಚ್ಚು ದೂರದವರೆಗೆ ನಡೆಯುತ್ತವೆ.
  • – ಒಂದು ಹುಲಿ ಸಾಮಾನ್ಯವಾಗಿ ರಾತ್ರಿ ಬೇಟೆಯಾಡಲು ಸುಮಾರು 6ರಿಂದ 12 ಮೈಲುಗಳಷ್ಟು ದೂರದವರೆಗೆ ಪ್ರಯಾಣಿಸುತ್ತದೆ.
  • – ಹುಲಿಗಳು ಸಾಮಾನ್ಯವಾಗಿ ತಮ್ಮ ಬೇಟೆಯನ್ನು ಕೊಲ್ಲುವ ಸ್ಥಳದಲ್ಲಿ ತಿನ್ನುವುದಿಲ್ಲ. ಅದನ್ನು ದೂರದವರೆಗೆ ಕೊಂಡು ಹೋಗಿ ಗೌಪ್ಯವಾದ ಪ್ರದೇಶದಲ್ಲಿ ತಿನ್ನುತ್ತದೆ.
Continue Reading

ದೇಶ

OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!

OBC Reservation: ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಲು ಬಿಹಾರ ವಿಧಾನಸಭೆ 2023ರ ನವೆಂಬರ್‌ನಲ್ಲಿ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತು. ಇದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿಗಳು ಸಲ್ಲಿಕೆಯಾಗಿದ್ದವು.

VISTARANEWS.COM


on

OBC Reservation
Koo

ಪಟನಾ/ನವದೆಹಲಿ: ಬಿಹಾರದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳ ಮೀಸಲಾತಿ (OBC Reservation) ಪ್ರಮಾಣವನ್ನು ಶೇ.50ರಿಂದ ಶೇ.65ಕ್ಕೆ ಏರಿಕೆ ಮಾಡುವ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ಅವರ ಕನಸಿಗೆ ಸುಪ್ರೀಂ ಕೋರ್ಟ್‌ ತಣ್ಣೀರೆರಚಿದೆ. ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ಪಟನಾ ಹೈಕೋರ್ಟ್‌ ಕೆಲ ದಿನಗಳ ಹಿಂದೆ ನೀಡಿದ್ದ ತಡೆಯಾಜ್ಞೆಯ ಆದೇಶವನ್ನು ಸುಪ್ರೀಂ ಕೋರ್ಟ್‌ (Supreme Court) ಎತ್ತಿಹಿಡಿದಿದೆ. ಇದರೊಂದಿಗೆ ನಿತೀಶ್‌ ಕುಮಾರ್‌ ಅವರಿಗೆ ಭಾರಿ ಮುಖಭಂಗವಾಗಿದೆ.

ಪಟನಾ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಹಾರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ತೀರ್ಮಾನಿಸಿದೆ. ಮೀಸಲಾತಿ ಹೆಚ್ಚಿಸುವ ರಾಜ್ಯ ಸರ್ಕಾರದ ತೀರ್ಮಾನ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಜೂನ್‌ 20ರಂದು ವಿಚಾರಣೆ ನಡೆಸಿದ್ದ ಪಟನಾ ಹೈಕೋರ್ಟ್‌, “ಮೀಸಲಾತಿ ಹೆಚ್ಚಿಸುವ ತೀರ್ಮಾನವು ಕಾನೂನಿನಲ್ಲಿ ಕೆಟ್ಟ ಪದ್ಧತಿಯಾಗಿದ್ದು, ಸಮಾನತೆ ಷರತ್ತಿನ ವಿರುದ್ಧವಾಗಿದೆ” ಎಂದು ಹೇಳಿ, ಮೀಸಲಾತಿಗೆ ತಡೆಯಾಜ್ಞೆ ನೀಡಿತ್ತು.

ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಲು ಬಿಹಾರ ವಿಧಾನಸಭೆ 2023ರ ನವೆಂಬರ್‌ನಲ್ಲಿ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತು. ಪರಿಷ್ಕೃತ ಮೀಸಲಾತಿ ಕೋಟಾದಲ್ಲಿ ಎಸ್‌ಸಿ ವರ್ಗಕ್ಕೆ ಶೇ. 20, ಎಸ್‌ಟಿ ವರ್ಗಕ್ಕೆ ಶೇ. 2, ಒಬಿಸಿ ವರ್ಗಕ್ಕೆ ಶೇ.18 ಮತ್ತು ಇಬಿಸಿ ವರ್ಗಕ್ಕೆ ಶೇ. 25ರಷ್ಟು ಮೀಸಲಾತಿ ನೀಡಲಾಗಿದೆ.

ಬಿಹಾರದಲ್ಲಿರುವ ಒಟ್ಟು 13.07 ಕೋಟಿ ಜನಸಂಖ್ಯೆಯಲ್ಲಿ ಶೇ.63ರಷ್ಟು ಜನ ಇತರೆ ಹಿಂದುಳಿದ ವರ್ಗಗಳು (OBC) ಹಾಗೂ ಅತ್ಯಂತ ಹಿಂದುಳಿದ ವರ್ಗಗಳ ಉಪ ಪಂಗಡಗಳ ಜನರೇ ಇರುವ ಕಾರಣ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ತೀರ್ಮಾನಿಸಲಾಗಿತ್ತು. ಆದಾಗ್ಯೂ, ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ, ಯಾವುದೇ ರಾಜ್ಯದ ಮೀಸಲಾತಿ ಪ್ರಮಾಣವು ಶೇ.50ಕ್ಕಿಂತ ಜಾಸ್ತಿ ಇರಬಾರದು. ಹಾಗಾಗಿ, ನ್ಯಾಯಾಲಯವು ಪಟನಾ ಹೈಕೋರ್ಟ್‌ ತೀರ್ಪನ್ನು ಎತ್ತಿಹಿಡಿದಿದೆ ಎಂದು ತಿಳಿದುಬಂದಿದೆ.

ಜಾತಿಗಣತಿಯ ಪ್ರಮುಖ ಅಂಶಗಳು

ಬಿಹಾರದಲ್ಲಿ ನಡೆಸಿದ ಜಾತಿಗಣತಿ ವರದಿ ಪ್ರಕಾರ, ಅತ್ಯಂತ ಹಿಂದುಳಿದ ಜಾತಿಯ ಜನ (extremely backward caste – EBC) 36.01%, ಹಿಂದುಳಿದ ಸಮುದಾಯ (Other Backward Caste – OBC) 27.12% ಮತ್ತು ಸಾಮಾನ್ಯ ವರ್ಗ 15.52% ಇದ್ದಾರೆ. ಪರಿಶಿಷ್ಟ ಜಾತಿಯವರು 19.65% ಮತ್ತು ಪರಿಶಿಷ್ಟ ಪಂಗಡದವರು 1.68% ಇದ್ದಾರೆ. OBCಗಳಲ್ಲಿ ಯಾದವರು 14.26%ರಷ್ಟಿದ್ದರೆ, ಕುಶ್ವಾಹಾ ಮತ್ತು ಕುರ್ಮಿಗಳು ಕ್ರಮವಾಗಿ 4.27% ಮತ್ತು 2.87% ಜನಸಂಖ್ಯೆಯನ್ನು ಹೊಂದಿದ್ದಾರೆ. ಭೂಮಿಹಾರ್‌ಗಳು 2.86 ಪ್ರತಿಶತ, ಬ್ರಾಹ್ಮಣರು 3.66 ಪ್ರತಿಶತ, ಮುಸಾಹರ್‌ಗಳು 3 ಪ್ರತಿಶತ ಇದ್ದಾರೆ.

ಇದನ್ನೂ ಓದಿ: Union Budget 2024: ಪ್ರಧಾನಿ ಮೋದಿ ಕುರ್ಚಿ ಉಳಿಸೋಕೆ ಆಂಧ್ರ, ಬಿಹಾರಕ್ಕೆ ವಿಶೇಷ ಅನುದಾನ: ಸಿಎಂ ಕಿಡಿ

Continue Reading
Advertisement
Money Guide
ಮನಿ-ಗೈಡ್12 mins ago

Money Guide: ಷೇರು V/S ಚಿನ್ನ: ಹೂಡಿಕೆಗೆ ಯಾವುದು ಬೆಸ್ಟ್‌? ಇಲ್ಲಿದೆ ತಜ್ಞರ ಸಲಹೆ

Actor Darshan Jail And Gave vijayalakshmi Prasada To Husband
ಸ್ಯಾಂಡಲ್ ವುಡ್19 mins ago

Actor Darshan: ದರ್ಶನ್ ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Road Accident
ವಿಜಯಪುರ25 mins ago

Road Accident : ಮಿನಿ ಟ್ರಕ್‌ ಪಲ್ಟಿಯಾಗಿ 30ಕ್ಕೂ ಅಧಿಕ ಮಂದಿಗೆ ಗಾಯ; ಬಸ್‌ನಿಂದ ಬಿದ್ದು ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿ

Karnataka Flood
ಪ್ರಮುಖ ಸುದ್ದಿ34 mins ago

Karnataka Flood: ನೆರೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಲು 6 ತಂಡ ರಚಿಸಿದ ಬಿಜೆಪಿ; ನಾಳೆಯಿಂದ ಪ್ರವಾಸ

Viral News
Latest47 mins ago

Viral News: ʼಎಣ್ಣೆ ಹೊಡೆಯಿರಿ, ಇಂಗ್ಲಿಷ್‌ ಕಲಿಯಿರಿʼ ಎಂದು ಬೋರ್ಡ್‌ ಹಾಕಿದ್ದ ಮದ್ಯದಂಗಡಿ ಮಾಲೀಕನಿಗೆ ದಂಡ!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024: ಮತ್ತೊಂದು ಕಂಚಿನ ಪದಕದ ಸನಿಹ ಮನು ಭಾಕರ್, ನಾಳೆ ಇತಿಹಾಸ ಸೃಷ್ಟಿ?

Business Ideas
Latest2 hours ago

Business Ideas: 20 ದೇಶಗಳಿಗೆ ಮಣ್ಣಿನ ಪಾತ್ರೆಗಳ ರಫ್ತು; ವರ್ಷಕ್ಕೆ 5 ಕೋಟಿ ರೂ. ಗಳಿಸುತ್ತಿದೆ ಈ ಕುಟುಂಬ!

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ
ಕರ್ನಾಟಕ2 hours ago

KRS Dam: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

signal free corridor
ಪ್ರಮುಖ ಸುದ್ದಿ2 hours ago

Signal-Free Corridor: ಬೆಂಗಳೂರಿನಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

karnataka rain
ಮಳೆ2 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ2 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ22 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

ಟ್ರೆಂಡಿಂಗ್‌