Vistara Interview | ಕಂಟೆಂಟ್‌ ಸಿನಿಮಾಗಳಿಗೆ ನನ್ನ ಆದ್ಯತೆ: ಏಕ್‌ ಲವ್‌ ಯಾ ಖ್ಯಾತಿಯ ರೀಷ್ಮಾ ನಾಣಯ್ಯ - Vistara News

ಸಿನಿಮಾ

Vistara Interview | ಕಂಟೆಂಟ್‌ ಸಿನಿಮಾಗಳಿಗೆ ನನ್ನ ಆದ್ಯತೆ: ಏಕ್‌ ಲವ್‌ ಯಾ ಖ್ಯಾತಿಯ ರೀಷ್ಮಾ ನಾಣಯ್ಯ

ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟಿ ರೀಷ್ಮಾ ನಾಣಯ್ಯ (Reeshma Nanaiah) `ವಿಸ್ತಾರʼದೊಂದಿಗೆ ತಮ್ಮ ಸಿನಿ ಅನುಭವವನ್ನು ಹಂಚಿಕೊಂಡಿದ್ದಾರೆ. ಅವರ ವಿಶೇಷ ಸಂದರ್ಶನದ ಸಾರ ಇಲ್ಲಿದೆ.

VISTARANEWS.COM


on

ರೀಷ್ಮಾ ನಾಣಯ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಜೋಗಿʼ ಪ್ರೇಮ್‌ ನಿರ್ದೇಶನದ ʼಏಕ್‌ ಲವ್‌ ಯಾʼ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಭರ್ಜರಿ ಎಂಟ್ರಿ ನೀಡಿದವರು ನಟಿ ರೀಷ್ಮಾ ನಾಣಯ್ಯ (Reeshma Nanaiah). ‘ಏಕ್ ಲವ್ ಯಾ’ ತೆರೆಗೆ ಬರುವುದಕ್ಕೂ ಮುನ್ನವೇ ‘ರಾಣ’ ಸಿನಿಮಾದ ಶೂಟಿಂಗ್ ಮುಗಿಸಿದ್ದ ಅವರು ಇದೀಗ ಗೋಲ್ಡನ್‌ ಸ್ಟಾರ್‌ ಗಣೇಶ್‌ ಮತ್ತು ನಿರ್ದೇಶಕ ಪ್ರೀತಂ ಗುಬ್ಬಿ ಅವರ ʻಬಾನದಾರಿಯಲ್ಲಿʼ ಸಿನಿಮಾಗೆ ಬಣ್ಣ ಹಚ್ಚಲಿದ್ದಾರೆ.

ತಮ್ಮ ಸಿನಿಮಾ ಯಾನದ ಕುರಿತು ಸಾಕಷ್ಟು ವಿಚಾರಗಳನ್ನು ಅವರು ʻವಿಸ್ತಾರʼ ಜತೆ ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ಪಾಲಿಗೆ ರೀಷ್ಮಾ ನಾಣಯ್ಯ ತುಂಬಾ ಲಕ್ಕಿ ಗರ್ಲ್‌ ಎಂಬ ಮಾತು ಗಾಂಧಿನಗರದಲ್ಲಿದೆ. ಸಾಲು ಸಾಲು ಸಿನಿಮಾಗಳು ನಿಮ್ಮ ಕೈಯಲ್ಲಿವೆ. ಹೇಗಿತ್ತು ನಿಮ್ಮ ಸ್ಯಾಂಡಲ್‌ವುಡ್‌ ಎಂಟ್ರಿ?

ಸ್ಯಾಂಡಲ್‌ವುಡ್‌ನಲ್ಲಿ ಎಂಟ್ರಿ ನೀಡುವಾಗ ನಾನು ತುಂಬಾ ಚಿಕ್ಕವಳಿದ್ದೆ. ನಾನು ಆಗಷ್ಟೇ ಪಿಯು ಮುಗಿಸಿದ್ದೆ. 17 ವರ್ಷ ಇದ್ದಾಗಲೇ ನಾನು ಇಂಡಸ್ಟ್ರಿಗೆ ಕಾಲಿಟ್ಟಿದ್ದೆ. ಚಿಕ್ಕವಳಾಗಿರುವಾಗಲೇ ಬರಬೇಕೆಂಬ ಆಸೆಯಿತ್ತು. ಏಕ್‌ ಲವ್‌ ಯಾ ಸಿನಿಮಾದಲ್ಲಿಯೂ ಫ್ರೆಶ್‌ ಫೇಸ್‌ ಹುಡುಕುತ್ತಿದ್ದರು. ನನ್ನ ಪೋಟೋಸ್‌ ನೋಡಿ ಅವರು ಆಯ್ಕೆ ಮಾಡಿದರು. ಅಲ್ಲಿಂದ ಸಿನಿ ಜರ್ನಿ ಶುರುವಾಯಿತು.

– ಏಕ್‌ ಲವ್‌ ಯಾ ಸಿನಿಮಾ ದೊಡ್ಡ ಸದ್ದು ಮಾಡಿತ್ತು. ಕೊರೊನಾ ಕಂಟಕದ ಹೊತ್ತಲ್ಲೇ ಸಿನಿಮಾ ಶೂಟಿಂಗ್‌ ನಡೀತಾ ಇತ್ತು. ಏಕ್‌ ಲವ್‌ ಯಾ ಚಿತ್ರಕ್ಕೆ ನಿಮ್ಮ ಆಯ್ಕೆ ಆಗಿದ್ದು ಹೇಗೆ?

ಪ್ರೇಮ್‌ ಅವರು ಯಾವಾಗಲೂ ಹೊಸಬರನ್ನು ಸ್ಕ್ರೀನ್‌ ಮೇಲೆ ತರಲು ಯೋಚಿಸುತ್ತಿರುತ್ತಾರೆ. ಕನ್ನಡ ಹುಡುಗಿಯೇ ಬೇಕು ಎಂದು ಪ್ರೇಮ್ ಅವರು ಫಿಕ್ಸ್‌ ಆಗಿದ್ದರು. ರಕ್ಷಿತಾ ಅವರು ಕೂಡ ಫೋಟೊ ನೋಡಿ ಇಷ್ಟಪಟ್ಟರು. ಆ ಪಾತ್ರಕ್ಕೆ ನಾನು ಹೊಂದುತ್ತೇನೆ ಎಂದು ಆಯ್ಕೆ ಮಾಡಿದರು.

ಇದನ್ನೂ ಓದಿ | Cinedubs Mobile App | ವಿಕ್ರಾಂತ್‌ ರೋಣ ಸಿನಿಮಾ ಮೂಲಕ ಬರುತ್ತಿದೆ ಸಿನಿಡಬ್ಸ್‌ ಆ್ಯಪ್‌; ಏನಿದರ ವಿಶೇಷತೆ?

– ದೊಡ್ಡ ಡೈರೆಕ್ಟರ್, ದೊಡ್ಡ ಬ್ಯಾನರ್‌ ಮೂಲಕ ಮೊದಲ ಹೆಜ್ಜೆ ಇಟ್ಟಿದ್ದು ನೀವು.‌ ಇದು ನಿಮ್ಮ ಸಿನಿ ಕರಿಯರ್‌ಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ. ಒಟ್ಟಾರೆ ಏಕ್‌ ಲವ್‌ ಯಾ ಬಗ್ಗೆ ಹೇಳುವುದಾದರೆ?

ನಟಿಯಾಗಲು ತುಂಬಾನೇ ಕಷ್ಟ. ಅದು ಸುಲಭದ ಮಾತಲ್ಲ. ಈ ರೀತಿ ದೊಡ್ಡ ಮಟ್ಟದಲ್ಲಿ ಲಾಂಚ್‌ ಆಗಿರುವುದು ತುಂಬಾ ಅಪರೂಪ. ಇದು ನನ್ನ ಅದೃಷ್ಟ ಎಂದು ಹೇಳಲು ಇಷ್ಟ ಪಡುತ್ತೇನೆ. ಈ ಸಿನಿಮಾ ನನಗೆ ಖುಷಿ ಕೊಟ್ಟಿದೆ. ಪ್ರೇಮ್‌ ಅವರ ಜತೆ ಕೆಲಸ ಮಾಡಿರುವುದು ಖುಷಿ ಇದೆ.

– ಮೊದಲ ದಿನ, ಮೊದಲ ದೃಶ್ಯ ಹೇಗಿತ್ತು? ಹೇಗೆ ಪ್ರಿಪೇರ್‌ ಆಗಿ ಹೋಗಿದ್ದಿರಿ?

ಏಕ್‌ ಲವ್‌ ಯಾದಲ್ಲಿ ಆಯ್ಕೆ ಆದ ಮೇಲೆ, ನನಗೆ ಮತ್ತು ನಟ ರಾಣ ಅವರಿಗೆ ವರ್ಕ್‌ಶಾಪ್‌ ಇಟ್ಟಿದ್ದರು. ಸಹ ನಿರ್ದೇಶಕ ಪ್ರೀತಂ ಗುಬ್ಬಿ ನಮಗೆ ಹೇಳಿಕೊಡುತ್ತಿದ್ದರು. ನಮ್ಮ ಸೀನ್‌ಗಳನ್ನು ಶೂಟ್‌ ಮಾಡುವ ಮೊದಲು ನಾವು ತಯಾರಿ ಮಾಡಿಕೊಂಡು ಹೊರಡುತ್ತಿದ್ದೆವು.

– ಮೊದಲ ಸಿನಿಮಾ ಧೈರ್ಯ ಸ್ವಲ್ಪ ಕಡಿಮೆನೆ ಇರುತ್ತೆ. ಹೇಗೆ ಫೇಸ್‌ ಮಾಡಿದ್ರಿ ಎಲ್ಲವನ್ನೂ?

ಆ ಸಮಯದಲ್ಲಿ ನನಗೆ ಅಭ್ಯಾಸದ ಕಡೆ ತುಂಬಾ ಗಮನವಿತ್ತು. ಸಿನಿಮಾ ಎಂದರೆ ನನಗೆ ಏನೂ ತಿಳಿದಿರಲಿಲ್ಲ. ಆಗ ಪ್ರೇಮ್‌ ಅವರು ಪ್ರತಿ ಫ್ರೇಮ್‌ ಮತ್ತು ಕ್ಯಾಮೆರಾ ಮುಂದೆ ನಿಭಾಯಿಸುವ ಕಲೆಯನ್ನು ಹೇಳಿಕೊಟ್ಟರು. ಇಡೀ ತಂಡ ನನಗೆ ಸಹಾಯ ಮಾಡಿದೆ. ಆರಂಭದಿಂದ ಕೊನೆಯವರೆಗೂ ಪ್ರತಿ ಸೀನ್‌ನಲ್ಲಿ ಹೇಳಿಕೊಟ್ಟಿದ್ದಾರೆ.

– ಏಕ್‌ ಲವ್‌ ಯಾ ಸಿನಿಮಾ ಹಿಟ್‌ ಆದ ಬಳಿಕ ಸಾಲು ಸಾಲು ಸಿನಿಮಾಗಳು ಬರ್ತಿವೆ. ಸಿನಿಮಾಗಳನ್ನ ಹೇಗೆ ಚೂಸ್‌ ಮಾಡ್ತೀರಾ?

ಏಕ್‌ ಲವ್‌ ಯಾ ಸಿನಿಮಾ ನಂತರ ಹೆಚ್ಚಾಗಿ ನಾನು ಸ್ಕ್ರಿಪ್ಟ್‌ಗೆ ಪ್ರಾಮುಖ್ಯತೆ ನೀಡುತ್ತೇನೆ. ಕಟೆಂಟ್‌ ಫಿಲ್ಮ್‌ ನನ್ನ ಮೊದಲ ಪ್ರಾಧಾನ್ಯತೆ. ಏಕ್‌ ಲವ್‌ ಯಾ ಸಿನಿಮಾ ಆದ ನಂತರವೂ ನಾನು ಪ್ರೇಮ್‌ ಅವರ ಮಾರ್ಗದರ್ಶನ ಪಡೆದುಕೊಳ್ಳುತ್ತಿದ್ದೇನೆ. ಹಾಗಾಗಿ ಯಾವುದೇ ಸಿನಿಮಾ ಒಪ್ಪಿಕೊಳ್ಳುವಾಗ ಅವರ ಗೈಡೆನ್ಸ್‌ ಇದ್ದೇ ಇರುತ್ತದೆ.

– ಸಿನಿಮಾ ಆಯ್ಕೆ ವಿಚಾರದಲ್ಲಿ ಕುಟುಂಬದವರು ಸಾಥ್‌ ಕೊಡ್ತಾರಾ?

ಏನಾದರೂ ಒಳ್ಳೆಯ ಕಥೆ ಬಂದರೆ ಮೊದಲು ನನ್ನ ತಂದೆಯ ಬಳಿ ಕೇಳುತ್ತೇನೆ. ಪ್ರತಿ ಬಾರಿ ಕುಟುಂಬದವರೊಂದಿಗೆ ಚರ್ಚಿಸಿ ನಂತರ ನಾನು ಸಿನಿಮಾ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ.

– ಏಕ್‌ ಲವ್‌ ಯಾ ಆಗ್ತಿದ್ದಂತೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರ ಜತೆಗೆ ಬಣ್ಣ ಹಚ್ಚಿದ್ದೀರಿ. ‘ಬಾನ ದಾರಿಯಲ್ಲಿ’ ಸಿನಿಮಾ ತನ್ನ ಫಸ್ಟ್‌ ಲುಕ್‌ನಿಂದಲೇ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ನಿಮ್ಮ ಪಾತ್ರದ ಹೇಗಿದೆ?

ನನ್ನ ಸಿನಿಮಾ ನೀವು ನೋಡುವುದಾದರೆ ಬೇರೆ ಬೇರೆ ಶೇಡ್‌ನಲ್ಲಿ ಮಾಡುತ್ತಿದ್ದೇನೆ. ʻಬಾನದಾರಿಯಲ್ಲಿʼ ಸಿನಿಮಾಗೆ ವೈಲ್ಡ್‌ ಲೈಫ್‌ ಫೋಟೊಗ್ರಾಫರ್‌ ಆಗಿ ಬಣ್ಣ ಹಚ್ಚಿದ್ದೇನೆ. ಈ ಚಿತ್ರದಲ್ಲಿ ಸಖತ್‌ ಬೋಲ್ಡ್‌ ಆಗಿ, ಅವಳ ಪಾಡಿಗೆ ಅವಳು ಖುಷಿಯಾಗಿ ಇರುವ ಪಾತ್ರವನ್ನು ನಿಭಾಯಿಸುತ್ತಿದ್ದೇನೆ.

– ವೈಲ್ಡ್‌ ಲೈಫ್‌ ಫೋಟೊಗ್ರಾಫರ್‌ ಪಾತ್ರ ನಿರ್ವಹಿಸಿದ್ದೀರಿ. ಈ ಪಾತ್ರಕ್ಕಾಗಿ ನಿಮ್ಮ ತಯಾರಿ ಹೇಗಿತ್ತು?

ನನಗೆ ಪೋಟೋಗ್ರಫಿ ಹೊಸತಲ್ಲ. ನಾನು ಈಗಾಗಲೇ ಈ ಬಗ್ಗೆ ಅಭ್ಯಾಸದಲ್ಲಿಯೂ ತೊಡಗಿಸಿಕೊಂಡಿದ್ದೇನೆ. ನನಗೆ ಹೊಸತು ಎಂದು ಯಾವತ್ತೂ ಅನಿಸಿಲ್ಲ. ಫೋಟೋಗ್ರಾಫರ್‌ ಅವರ ಬಾಡಿ ಲಾಂಗ್ವೇಜ್‌ ನೋಡಿ ಕಲಿಯುತ್ತಿದ್ದೇನೆ. ಸಾಕಷ್ಟು ವಿಡಿಯೊ ನೋಡಿ ನೋಡಿ ಕಲಿಯುತ್ತಿದ್ದೇನೆ. ಈ ಪಾತ್ರ ಅಷ್ಟೇನೂ ಕಷ್ಟಕರ ಎಂದೆನಿಸಿಲ್ಲ. ಸಿನಿಮಾ ನೋಡುವಾಗ ಪ್ರೇಕ್ಷಕರು ಇದೆಲ್ಲವನ್ನೂ ಗಮನಿಸುತ್ತಾರೆ.

– ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರ ಜೊತೆ ಶೂಟಿಂಗ್‌ ಅನುಭವ ಹೇಗಿತ್ತು?

ಇನ್ನೂ ನನ್ನ ಪೋರ್ಷನ್‌ ಶೂಟಿಂಗ್‌ ಆಗಿಲ್ಲ. ಆಗಸ್ಟ್‌ನಲ್ಲಿ ಶೂಟಿಂಗ್‌ ಆಗಲಿದೆ. ನನ್ನ ಪೋರ್ಷನ್‌ ಪ್ರಮುಖವಾಗಿ ಸೌತ್‌ ಆಫ್ರಿಕಾದಲ್ಲಿ ನಡೆಯಲಿದೆ. ಬೆಂಗಳೂರಿನಲ್ಲಿ ಇನ್ನೂ ಶೂಟಿಂಗ್‌ ಆಗಬೇಕಿದೆ. ಅವರೊಂದಿಗೆ ನಟಿಸಲು ಉತ್ಸುಕಳಾಗಿದ್ದೇನೆ.

– ಬಾನದಾರಿಯಲ್ಲಿ ಸಿನಿಮಾ ಜತೆಯಲ್ಲೇ ರಾಣ ಹಾಗೂ ಮಾರ್ಗ ಕೂಡ ರಿಲೀಸ್‌ಗೆ ರೆಡಿಯಾಗಿವೆ. ಈ ಸಿನಿಮಾಗಳ ಬಗ್ಗೆ ರೀಷ್ಮಾ ನಾಣಯ್ಯ ಅವರ ಹೋಪ್‌ ಏನು?

ರಾಣ ಈಗಾಗಲೇ ಶೂಟಿಂಗ್‌ ಮುಗಿದಿದೆ. ಆದರೆ ಮಾರ್ಗ ಇನ್ನೂ ಶುರುವಾಗಬೇಕಷ್ಟೇ. ಇನ್ನೂ ರಾಣ ರಿಲೀಸ್‌ ಆಗಲು ಡೇಟ್‌ ಫಿಕ್ಸ್‌ ಆಗಬೇಕಷ್ಟೇ. ನಟ ಶ್ರೇಯಸ್‌ ಅವರು ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಒಂದು ಹಾಡು ಚೆನ್ನಾಗಿ ಮೂಡಿ ಬರುತ್ತಿದೆ. ಅದು ನನಗೆ ಪ್ರಿಯವಾಗಿದ್ದು.

– ನಿಮ್ಮ ಸ್ಟಡೀಸ್‌ಗೆ ನಿಮ್ಮ ಸಿನಿಮಾ ಕರಿಯರ್‌ ಅಡ್ಡಿ ಅಂತಾ ಯಾವಾಗಾದ್ರೂ ಅನಿಸಿದ್ದು ಉಂಟಾ?

ಸಿನಿಮಾ ಕರಿಯರ್‌ ಎಷ್ಟು ಮುಖ್ಯವೋ ಎಜುಕೇಶನ್‌ ಮುಗಿಸಿವುದೂ ನನಗೆ ಅಷ್ಟೇ ಮುಖ್ಯ. ಎರಡನ್ನೂ ಬ್ಯಾಲೆನ್ಸ್‌ ಮಾಡುತ್ತಿದ್ದೇನೆ. ಟೀಚರ್ಸ್‌ ಕೂಡ ಸಪೋರ್ಟ್‌ ಮಾಡುತ್ತಿದ್ದಾರೆ.

– ನಿಮಗೆ ಯಾವ ಸಬ್ಜೆಕ್ಟ್‌ ಅಂದ್ರೆ ತುಂಬಾ ಇಷ್ಟ?

ನಾನು ಜರ್ನಲಿಸಮ್‌, ಸೈಕಾಲಜಿ, ಮತ್ತು ಕಮ್ಯೂನಿಕೇಟಿವ್‌ ಇಂಗ್ಲಿಷ್‌ ಓದುತ್ತಿದ್ದೇನೆ. ಜರ್ನಲಿಸಮ್‌ ನನ್ನ ಇಷ್ಟವಾದ ವಿಷಯ. ಮುಂದೆ ಜರ್ನಲಿಸಮ್‌ ಅಥವಾ ಸೈಕಾಲಜಿ ಓದಬೇಕೆಂಬ ಆಸೆ ಇದೆ.

– ಫ್ರೀ ಟೈಂನಲ್ಲಿ ಏನ್‌ ಮಾಡ್ತೀರಾ? ಯಾವ ಅಡುಗೆ ತುಂಬಾ ಇಷ್ಟವಾಗುತ್ತೆ ತಿನ್ನೋದಕ್ಕೆ? ವೆಜ್‌ ಅಥವಾ ನಾನ್‌ ವೆಜ್?

ನೃತ್ಯ ತುಂಬಾ ಇಷ್ಟ. ಸಮಯ ಸಿಕ್ಕಾಗೆಲ್ಲ ಡ್ಯಾನ್ಸ್‌ ಮಾಡುತ್ತೇನೆ. ನಾನು ನಾನ್‌ ವೆಜ್‌ ತುಂಬಾ ಇಷ್ಟ ಪಡುತ್ತೇನೆ. ಆದರೆ ಅಡುಗೆ ಮಾಡುವುದಿಲ್ಲ. ತಿನ್ನುವುದು ತುಂಬಾ ಇಷ್ಟ.

– ನಿಮ್ಮ ಸಿನಿಮಾ ಕರಿಯರ್‌ ವಿಚಾರದಲ್ಲಿ ಅಪ್ಪ, ಅಮ್ಮನ ಟಿಪ್ಸ್‌ ಹೇಗೆ ಸಹಾಯ ಮಾಡುತ್ತೆ?

ನನ್ನ ಕುಟುಂಬ ನನ್ನ ಪರವಾಗಿ ನಿಲ್ಲುತ್ತದೆ. ಯಾವತ್ತೂ ನನ್ನ ಆಯ್ಕೆ ಕುರಿತು ಬೇಡ ಎಂದು ಹೇಳುವುದಿಲ್ಲ. ನನಗೆ ಯಾವಾಗ ಸಿನಿಮಾದಲ್ಲಿ ಅವಕಾಶ ಬಂದಿತ್ತೋ ಆಗಲೇ ನನಗೆ ಅವರು ಸಾಥ್‌ ಕೊಟ್ಟರು. ಮೂಲ ಶಿಸ್ತನ್ನು ಯಾವಾಗಲೂ ಮರೆಯಬೇಡ ಎಂದು ಹೇಳುತ್ತಿರುತ್ತಾರೆ.

– ನಿಮಗೆ ಇಂತಹದ್ದೇ ಒಂದು ಮಹತ್ವಾಕಾಂಕ್ಷೆಯ ಪಾತ್ರ ಮಾಡಬೇಕು ಅನ್ನೋ ಆಸೆ ಇದೆಯಾ?
ನಟನೆಗೆ ಅವಕಾಶ ಇರುವ ಯಾವ ಪಾತ್ರ ಮಾಡಲೂ ನಾನು ಸಿದ್ಧ. ಸಿನಿಮಾ ಐತಿಹಾಸಿಕ ಆಗಿದ್ದರೆ ಇನ್ನೂ ಖುಷಿ.

ಇದನ್ನೂ ಓದಿ | IMDb top 10 films | ಜನಪ್ರಿಯ ಭಾರತೀಯ ಫಿಲಂಗಳ ರೇಟಿಂಗ್: ಮೊದಲ ಸ್ಥಾನದಲ್ಲಿ ಯಾವ ಸಿನಿಮಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಸಿನಿಮಾ

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Mother Teresa Series: ಮದರ್ ಥೆರೆಸಾ ಅವರ ಬಾಲ್ಯ, ಹರೆಯದ ಜೀವನ ಹೇಗಿತ್ತು. ಹಾಗೂ ಅವರ ಹಿರಿಯ ವಯಸಿನಲ್ಲಿ ನಡೆದ ಘಟನೆಗಳು, ಸಮಾಜಸೇವೆ ಇದನ್ನೆಲ್ಲ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಮೂಲಕ ನಿರ್ದೇಶಕ ಚಂದ್ರಶೇಖರ್ ಹೇಳ ಹೊರಟಿದ್ದಾರೆ. ಮೂರು ಸೀಜನ್‌ನಲ್ಲಿ ಒಟ್ಟು 30 ಎಪಿಸೋಡ್ ಗಳಲ್ಲಿ ಮದರ್ ಥೆರೆಸಾ ಅವರ  ಕಥೆ ಮೂಡಿಬರಲಿದೆ.

VISTARANEWS.COM


on

Mother Teresa Series life in the works
Koo

ಬೆಂಗಳೂರು: ಮಲಯಾಳಂ ಚಿತ್ರರಂಗದಲ್ಲಿ ದೊಡ್ಡ  ಹೆಸರು  ಮಾಡಿರುವ  ಪಿ ಚಂದ್ರಕುಮಾರ್ ಅವರು ʻಮದರ್ ಥೆರೆಸಾʼ ಸಿರೀಸ್‌ (Mother Teresa Series) ಮಾಡಲು ಮುಂದಾಗಿದ್ದಾರೆ. ಹಿಂದಿ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ತಯಾರಾಗಲಿರುವ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಸುಮಾರು 30 ಕೋಟಿ ರೂ.ಗಳ‌ ಬಿಗ್ ಬಜೆಟ್‌ನಲ್ಲಿ ಚಿತ್ರತಂಡ ನಿರ್ಮಾಣ ಮಾಡುತ್ತಿದೆ ಎಂದು ವರದಿಯಾಗಿದೆ. ವಿಶೇಷವಾಗಿ ಈ ವೆಬ್ ಸರಣಿಯಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮದರ್‌ ಥೆರೆಸಾ ಬಗ್ಗೆ ಮೂರು ವರ್ಷಗಳಿಂದ ಪಿ. ಚಂದ್ರಕುಮಾರ್‌ ಮಾಹಿತಿ ಹಲೆ ಹಾಕಿದ್ದರು.

ಮದರ್ ಥೆರೆಸಾ ಅವರ ಬಾಲ್ಯ, ಹರೆಯದ ಜೀವನ ಹೇಗಿತ್ತು. ಹಾಗೂ ಅವರ ಹಿರಿಯ ವಯಸಿನಲ್ಲಿ ನಡೆದ ಘಟನೆಗಳು, ಸಮಾಜಸೇವೆ ಇದನ್ನೆಲ್ಲ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಮೂಲಕ ನಿರ್ದೇಶಕ ಚಂದ್ರಶೇಖರ್ ಹೇಳ ಹೊರಟಿದ್ದಾರೆ. ರೋಮ್‌, ಜೆರುಸಲೆನಿಯಂ, ಟೆಥ್‌ಲೆಹೆಮ್, ಮ್ಯಾಸಿಡೋನಿಯಾ, ಇಟಲಿಯಂತಹ ಸ್ಥಳಗಳ ಜತೆಗೆ ಮದರ್ ಥೆರೆಸಾ ಅವರ ಜೀವನದ ಮೇಲೆ ಪ್ರಭಾವ ಬೀರಿದ ಪಶ್ಚಿಮ ಬಾಂಗಾಳ, ಬಾಂಗ್ಲಾದೇಶ, ಮುಂಬೈ, ಕೇರಳ. ಬಿಹಾರ. ಕರ್ನಾಟಕ ಮುಂತಾದ ಪ್ರಮುಖ ಸ್ಥಳಗಳಲ್ಲೆ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ನಿರ್ಮಾಪಕ ಚಂದ್ರಶೇಖರ್ ಈ ಬಗ್ಗೆ ಮಾತನಾಡಿ ʻʻಮಲಯಾಳಂ, ತಮಿಳು, ತೆಲುಗು, ಹಿಂದಿಯಲ್ಲಿ ಹಲವಾರು  ಸಿನಿಮಾ‌ಗಳನ್ನು ನಿರ್ಮಿಸಿದ್ದೆ. ಈ ಸಿರೀಸ್‌ ಕನ್ನಡದಲ್ಲಿಯೂ ಬರುತ್ತಿದೆ. ಯಂಗ್ ಥೆರೆಸಾ ಪಾತ್ರಕ್ಕಾಗಿ ಹುಡಕಾಟ ನಡೆದಿದೆ. ನಾಲ್ಕು ವರ್ಷದ ಹಿಂದೆಯೇ ಇದರ  ಪ್ಲ್ಯಾನ್ ಮಾಡಿದ್ದೆವು. ಮೂರು ಸೀಜನ್‌ನಲ್ಲಿ ಒಟ್ಟು 30 ಎಪಿಸೋಡ್ ಗಳಲ್ಲಿ ಮದರ್ ಥೆರೆಸಾ ಅವರ  ಕಥೆ ಮೂಡಿಬರಲಿದೆ. ಮುಂದಿನ ತಿಂಗಳು ಚಿತ್ರೀಕರಣ ಪ್ರಾರಂಭಿಸುತ್ತಿದ್ದೇವೆ. ಒಟಿಟಿ ಪ್ಲಾಟ್ ಫಾರ್ಮ್‌ನಲ್ಲಿ ಈ ಸೀರೀಸ್  ರಿಲೀಸಾಗಲಿದ್ದು, ಈ ಬಗ್ಗೆ ಮಾತುಕತೆ ಕೂಡ  ನಡೆಯುತ್ತಿದೆʼʼಎಂದರು.

ಪಿ.ಸುಕುಮಾರ್ ಅವರ  ಛಾಯಾಗ್ರಹಣ, ಜರೀ ಅಮರದೇವ ಅವರ ಸಂಗೀತ ಇದ್ದು, ಅನಿತಾ ಮೆನ್ನನ್, ತನಿಮಾ ಮೆನ್ನನ್,  ಸಾಪಿಕೌರ್, ಜೋಷಿ ಜೋಸೆಫ್ ಪ್ರಮುಖ ತಾರಾಗಣದಲ್ಲಿದ್ದಾರೆ.

Continue Reading

ಬಾಲಿವುಡ್

Cannes 2024: ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಶ್ವೇತ ವರ್ಣದ ಗೌನ್​ ಧರಿಸಿ ಮಿಂಚಿದ ಕಿಯಾರ! ಇಲ್ಲಿದೆ ವಿಡಿಯೊ

Cannes 2024: ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಬೆನ್ನಲ್ಲೇ ರೆಡ್ ಕಾರ್ಪೆಟ್ ಮೇಲೆ ನಟಿ ಕಿಯಾರಾ ಆಡ್ವಾಣಿ ಹೆಜ್ಜೆ ಇಡಲು ಸಜ್ಜಾಗಿದ್ದಾರೆ.

VISTARANEWS.COM


on

Kiara Advani Makes Cannes Debut In Thigh-High Slit Dress
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಬೆನ್ನಲ್ಲೇ ರೆಡ್ ಕಾರ್ಪೆಟ್ ಮೇಲೆ ನಟಿ ಕಿಯಾರಾ ಆಡ್ವಾಣಿ ಹೆಜ್ಜೆ ಇಡಲು ಸಜ್ಜಾಗಿದ್ದಾರೆ. ಕಿಯಾರಾ ಆಡ್ವಾಣಿ ಇದೀಗ ತಮ್ಮ ಲುಕ್‌ನ ವಿಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೊವನ್ನು ಹಂಚಿಕೊಂಡ ಕಿಯಾರಾ, “ರಿವೇರಿಯಾದಲ್ಲಿ ರೆಂಡೆಜ್ವಸ್ (ನೀಲಿ ಹೃದಯದ ಎಮೋಜಿ)” ಎಂದು ಶೀರ್ಷಿಕೆ ನೀಡಿದ್ದಾರೆ. ಕಿಯಾರ ಉಡುಪನ್ನು ಲಕ್ಷ್ಮಿ ಲೆಹರ್ ಮತ್ತು ಪ್ರಬಲ್ ಗುರುಂಗ್ ಅವರು ವಿನ್ಯಾಸಗೊಳಿಸಿದ್ದಾರೆ. ಅಭಿಮಾನಿಯೊಬ್ಬರು ಕಿಯಾರ ಪೋಸ್ಟ್‌ಗೆ “ಅತ್ಯಂತ ಸುಂದರ ಮಹಿಳೆ” ಎಂದು ಕಮೆಂಟ್‌ ಮಾಡಿದ್ದಾರೆ. ಕಿಯಾರ ಮಿಲ್ಕಿ ವೈಟ್​ ಬಣ್ಣದ ಗೌನ್ ಬಟ್ಟೆ ಧರಿಸಿದ್ದರು. ಗೌನ್‌ ಕಟ್‌ ರೀತಿ ಉಡುಪನ್ನು ಧರಿಸಿದ್ದರು. ಮ್ಯಾಚಿಂಕ್‌ ಕಿವಿಯೋಲೆಯೊಂದಿಗೆ ಅತ್ಯಂತ ಸುಂದರವಾಗಿ ಕಂಡರು ಕಿಯಾರ. ಕಾರ್‌ನಲ್ಲಿ ಅಪ್ಸರಂತೆ ಇಳಿದು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ಅವರೂ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದರು. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿತ್ತು.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಲಿಪಾಲಾ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. 

ಇದನ್ನೂ ಓದಿ: Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

ಗೇಮ್ ಚೇಂಜರ್ ಚಿತ್ರದಲ್ಲಿ ಕಿಯಾರಾ!

ಎಸ್ ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ಗೇಮ್ ಚೇಂಜರ್ ಚಿತ್ರದಲ್ಲಿ ಕಿಯಾರಾ ಕಾಣಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಈ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ. ನಟ ಯಶ್ (Yash) ನಾಯಕನಟನಾಗಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದಲ್ಲಿ ಕಿಯಾರಾ (kiara) ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕರೀನಾ ಕಪೂರ್ (kareena kapoor) ಟಾಕ್ಸಿಕ್ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂಬ ಸುದ್ದಿಯ ಬಳಿಕ ಇದೀಗ ಕಿಯಾರಾ ಅಡ್ವಾಣಿಯೂ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಈ ಚಿತ್ರದಲ್ಲಿ ಕಿಯಾರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮೂವರು ಪ್ರಮುಖರು ನಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರೀನಾ ಕಪೂರ್ ಖಾನ್ ಮತ್ತು ಕಿಯಾರಾ ಅಡ್ವಾಣಿ ಈಗಾಗಲೇ ಚಿತ್ರತಂಡಕ್ಕೆ ಸೇರಿಕೊಂಡಿದ್ದಾರೆ. ಚಿತ್ರದಲ್ಲಿ ಯಶ್ ಅವರ ಸಹೋದರಿಯಾಗಿ ಕರೀನಾ ನಟಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಆದರೆ ನಿರ್ಮಾಪಕರಿಂದ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ.

Continue Reading

ಬಾಲಿವುಡ್

Singer Suchitra: ಶಾರುಖ್ – ಕರಣ್ ಸಲಿಂಗಿಗಳು ಎಂದು ಹೇಳಿ ವಿವಾದ ಸೃಷ್ಟಿಸಿದ ತಮಿಳು ಗಾಯಕಿ!

Singer Suchitra: ಸಂದರ್ಶನದಲ್ಲಿ, ಸುಚಿತ್ರಾ ತನ್ನ ಮಾಜಿ ಪತಿ ಕಾರ್ತಿಕ್ ಕುಮಾರ್ ‘ಸಲಿಂಗಕಾಮಿ’ ಎಂದು ಹೇಳಿಕೊಂಡಿದ್ದಾರೆ. ಲಂಡನ್ ಪ್ರವಾಸದ ವೇಳೆ ಮಾಜಿ ಪತಿ ಕಾರ್ತಿಕ್ ಕುಮಾರ್, ಶಾರುಖ್ ಮತ್ತು ಕರಣ್ ಒಟ್ಟಿಗೇ ಪಾರ್ಟಿಗಳಿಗೆ ತೆರಳಿದ್ದರು ಎಂದು ಸುಚಿತ್ರಾ ಹೇಳಿದ್ದಾರೆ. ಸಲಿಂಗಕಾಮಿಗಳಿಗೆ ಕಾನೂನುಬದ್ಧವಾಗಿ ಅವಕಾಶವಿರುವ ದೇಶಗಳಿಗೆ ಅವರು ಹೋಗುತ್ತಾರೆ ಎಂದಿದ್ದಾರೆ.

VISTARANEWS.COM


on

Singer Suchitra makes shocking aligeations against shahrukh khan
Koo

ಬೆಂಗಳೂರು: ಗಾಯಕಿ ಸುಚಿತ್ರಾ ರಾಮದುರೈ (Singer Suchitra) ಅವರು ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಮತ್ತು ಸೂಪರ್ ಸ್ಟಾರ್ ಶಾರುಖ್ ಖಾನ್ ಬಗ್ಗೆ ಕೆಲವು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಮಾಜಿ ಪತಿ ನಟ ಕಾರ್ತಿಕ್ ಕುಮಾರ್, ನಟರಾದ ಧನುಷ್, ವಿಜಯ್, ಕಮಲ್ ಹಾಸನ್, ನಟಿ ತ್ರಿಶಾ ಸೇರಿದಂತೆ ಹಲವರ ಬಗ್ಗೆ ನಾನಾ ರೀತಿಯಲ್ಲಿ ಆರೋಪ ಮಾಡಿದ್ದಾರೆ. ಕಾರ್ತಿಕ್, ಧನುಷ್ ಇಬ್ಬರೂ ಸಲಿಂಗಕಾಮಿಗಳು ಎಂದಿದ್ದಾರೆ.

ಸಂದರ್ಶನದಲ್ಲಿ, ಸುಚಿತ್ರಾ ತನ್ನ ಮಾಜಿ ಪತಿ ಕಾರ್ತಿಕ್ ಕುಮಾರ್ ‘ಸಲಿಂಗಕಾಮಿ’ ಎಂದು ಹೇಳಿಕೊಂಡಿದ್ದಾರೆ. ಲಂಡನ್ ಪ್ರವಾಸದ ವೇಳೆ ಮಾಜಿ ಪತಿ ಕಾರ್ತಿಕ್ ಕುಮಾರ್, ಶಾರುಖ್ ಮತ್ತು ಕರಣ್ ಒಟ್ಟಿಗೇ ಪಾರ್ಟಿಗಳಿಗೆ ತೆರಳಿದ್ದರು ಎಂದು ಸುಚಿತ್ರಾ ಹೇಳಿದ್ದಾರೆ. ಸಲಿಂಗಕಾಮಿಗಳಿಗೆ ಕಾನೂನುಬದ್ಧವಾಗಿ ಅವಕಾಶವಿರುವ ದೇಶಗಳಿಗೆ ಅವರು ಹೋಗುತ್ತಾರೆ ಎಂದಿದ್ದಾರೆ. ಈ ಬಗ್ಗೆ ಕಾರ್ತಿಕ್ ಖುದ್ದು ನನಗೆ ಈ ವಿಷಯ ಹೇಳಿದ್ದರು. ಕರಣ್- ಶಾರುಖ್ ಸಲಿಂಗಕಾಮಿಗಳಿಗೆ ಸ್ವತಂತ್ರವಾಗಿರುವ ಅವಕಾಶವಿರುವ ಜಾಗಗಳಿಗೆ ಹೋಗುತ್ತಾರೆ. ಅಲ್ಲಿ ನಡೆಯುವ ಪಾರ್ಟಿಗಳಿಗೆ ಗೇಗಳ ರೀತಿ ವೇಷ ಬದಲಿಸಿಕೊಂಡು ಅವರೊಟ್ಟಿಗೆ ಸೇರಿ ಪಾರ್ಟಿಯಲ್ಲಿ ಸೇರಿಕೊಳ್ಳುತ್ತಾರೆ. ಕಾರ್ತಿಕ್ ಕೂಡ ಅಲ್ಲಿ ಹೋದಾಗ ಅವರಿಬ್ಬರನ್ನು ಭೇಟಿ ಮಾಡಿದ್ದಾಗಿ ಹೇಳಿದ್ದರುʼʼಎಂದರು.

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸುಚಿತ್ರಾ ತಮಿಳು ಚಿತ್ರರಂಗದಲ್ಲಿ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಎಕ್ಸ್‌ಕ್ಯೂಸ್ ಮಿ, ಎನ್ ಇಧಯಂ ಸೇರಿದತೆ ಅನೇಕ ಹಿಟ್‌ ಹಾಡುಗಳನ್ನು ಹಾಡಿದ್ದಾರೆ. ಸುಚಿತ್ರಾ ಈ ಹಿಂದೆ ಕಮಲ್‌ ಹಾಸನ್‌ ಬಗ್ಗೆಯೂ ಹೇಳಿಕೆ ನೀಡಿದ್ದರು. ʻʻಕಮಲ್‌ ಅವರು ಹೆಚ್ಚಾಗಿ ಕುರ್ತಾ ರೀತಿಯ ಬಟ್ಟೆಗಳನ್ನು ಧರಿಸುತ್ತಾರೆ. ‘ವಿಶ್ವರೂಪಂ’ ಚಿತ್ರದಲ್ಲಿ ಕ್ಲಾಸಿಕಲ್ ಡ್ಯಾನ್ಸ್ ಕಲಿಸುವಾಗ ಕಮಲ್ ಎಕ್ಸ್‌ಪ್ರೇಶನ್ ಬಹುತೇಕ ಟ್ರಾನ್ಸ್‌ಜೆಂಡರ್ ರೀತಿ ಇರುತ್ತದೆʼʼಎಂದಿದ್ದರು.

ಇದೆಲ್ಲದರ ಜತೆಗೆ ಧನುಷ್‌ ಮತ್ತು ಐಶ್ವರ್ಯಾ ಅವರ ಡಿವೋರ್ಸ್‌ ವಿಚಾರವಾಗಿಯೂ ಮಾತನಾಡಿದ್ದಾರೆ. ಧನುಷ್‌ ಮತ್ತು ಐಶ್ವರ್ಯಾ ಅವರಿಗೆ ದಾಂಪತ್ಯ ಜೀವನ ಸಾಕಾಗಿದೆ. ಇಬ್ಬರೂ ಬೇರೆಯವರ ಜತೆ ಡೇಟಿಂಗ್‌ ನಡೆಸುತ್ತಿದ್ದಾರೆ. ಐಶ್ವರ್ಯಾ ಮಕ್ಕಳಿಗೆ ಒಳ್ಳೆಯ ತಾಯಿಯಾಗಲಿಲ್ಲ. ಒಬ್ಬರಿಗೊಬ್ಬರು ಮೋಸ ಮಾಡುತ್ತಾ ಇರುವ ಬದಲು ದೂರಾಗೋಣ ಎಂದು ನಿರ್ಧರಿಸಿದ್ದಾರೆʼʼಎಂದಿದ್ದಾರೆ. ಸುಚಿತ್ರಾ ಅವರು ಸ್ಟ್ಯಾಂಡಪ್ ಕಮಿಡಿಯನ್, ನಟ ಕಾರ್ತಿಕ್ ಕುಮಾರ್ ಅವರನ್ನು ಹಿಂದೆ ಮದುವೆ ಆಗಿದ್ದರು. ಈಗ ಜೋಡಿ ದೂರವಾಗಿದೆ.

Continue Reading
Advertisement
Road Accident
ಬೆಂಗಳೂರು ಗ್ರಾಮಾಂತರ5 mins ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Hyderabadi Biryani
ಪ್ರಮುಖ ಸುದ್ದಿ19 mins ago

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Job Alert
ಉದ್ಯೋಗ23 mins ago

Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Sangeetha Sringeri Wore Lioness Logo On Her Belt
ಬಿಗ್ ಬಾಸ್26 mins ago

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

swati maliwal bibhav kumar
ಪ್ರಮುಖ ಸುದ್ದಿ40 mins ago

Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

PM Modi wishes HD Deve Gowda on his 93rd birthday Jackfruit gift to former PM
ರಾಜಕೀಯ40 mins ago

HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

Virat kohli
ಕ್ರೀಡೆ49 mins ago

Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

Robbery case
ವಿಜಯಪುರ56 mins ago

Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

Nitin Gadkari
Lok Sabha Election 20241 hour ago

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Mother Teresa Series life in the works
ಸಿನಿಮಾ1 hour ago

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ17 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌