ವಿಸ್ತಾರ ಮೀಡಿಯಾ: ಏನು, ಎತ್ತ? | ಸಿಇಒ, ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮುಕ್ತ ಮಾತು - Vistara News

ಪ್ರಮುಖ ಸುದ್ದಿ

ವಿಸ್ತಾರ ಮೀಡಿಯಾ: ಏನು, ಎತ್ತ? | ಸಿಇಒ, ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮುಕ್ತ ಮಾತು

ವಿಸ್ತಾರ ಮೀಡಿಯಾ ಪ್ರೈ. ಲಿ. ಸಂಸ್ಥೆಯ ಟಿವಿ ಚಾನೆಲ್‌ನ ಲೋಗೊ ಮತ್ತು ವಿಸ್ತಾರ ಡಿಜಿಟಲ್ ನ್ಯೂಸ್ ವೆಬ್‌ಸೈಟ್ ಅನಾವರಣಗೊಂಡಿದೆ. ಈ ಮಾಧ್ಯಮ ಸಂಸ್ಥೆ ಆರಂಭಿಸಿರುವ ಉದ್ದೇಶ ಏನು? ಇದರ ಗುರಿ ಏನು? ಧ್ಯೇಯ ಧೋರಣೆಗಳೇನು ಎಂಬ ಬಗ್ಗೆ ಸಂಸ್ಥೆಯ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು ಇಲ್ಲಿ ಮುಕ್ತವಾಗಿ ವಿವರಿಸಿದ್ದಾರೆ.

VISTARANEWS.COM


on

Hariprakash Konemane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಮಸ್ಕಾರ..
ನಾನು ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಬರೊಬ್ಬರಿ ಇಪ್ಪತ್ತು ವರ್ಷಗಳಾದವು. ಇದುವರೆಗೆ ಹೆಚ್ಚು ಕಾಲ ಮುದ್ರಣ ಮಾಧ್ಯಮದಲ್ಲಿ, ಅಲ್ಪಕಾಲ ಟಿವಿ ಮಾಧ್ಯಮದಲ್ಲಿ ಕೆಲಸ ಮಾಡಿ ಇದೀಗ ಸಂಪೂರ್ಣವಾಗಿ ಡಿಜಿಟಲ್ ಮತ್ತು ಟಿವಿ ಮಾಧ್ಯಮದ ಕಡೆಗೆ ಮುಖ ಮಾಡಿದ್ದೇನೆ.

ಈ ಬದಲಾವಣೆ ಪರ್ವದಲ್ಲಿ ಅನೇಕರು ಅನೇಕ ತೆರನಾದ ಪ್ರಶ್ನೆಗಳನ್ನು ಕೇಳಿದ್ದಾರೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ, ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ಆ ಎಲ್ಲ ಸಂಗತಿಗಳನ್ನು ಒಂದೆಡೆ ಕ್ರೋಡೀಕರಿಸಿ, ಹಲವು ವಿಚಾರಗಳಿಗೆ ಸಂಬಂಧಿಸಿದ ಅಭಿಪ್ರಾಯ / ನಿಲುವನ್ನು ಹಂಚಿಕೊಳ್ಳುವ ಪುಟ್ಟ ಯತ್ನ ನನ್ನದು. ಇದನ್ನು ನನ್ನೆಲ್ಲ ಓದುಗರು ಹಾಗೂ ವೀಕ್ಷಕರೊಂದಿಗಿನ ಮುಕ್ತ ಮಾತು ಎಂದರೆ ಚೆನ್ನ.

ಪ್ರಶ್ನೆ: ಮುದ್ರಣ ಮಾಧ್ಯಮ ಕ್ಷೇತ್ರದಲ್ಲೇ ಬಹುಕಾಲ ಇದ್ದವರು ನೀವು. ಈ ಹಿಂದೆ ವಿಜಯವಾಣಿ ಸಂಪಾದಕರಾಗಿದ್ದಿರಿ, ಇದೀಗ ವಿಜಯಕರ್ನಾಟಕ ಪತ್ರಿಕೆ ಸಂಪಾದಕ ಸ್ಥಾನ ತೊರೆದು ಡಿಜಿಟಲ್ ಮಾಧ್ಯಮ ಮತ್ತು ಟಿವಿಯತ್ತ ಬಂದಿದ್ದೀರಿ. ಈ ಮಹತ್ವದ ನಿರ್ಧಾರಕ್ಕೆ ಮುಖ್ಯ ಕಾರಣ ಏನು?

ಉತ್ತರ: ಒಟ್ಟಾರೆ ಮಾಧ್ಯಮ ಕ್ಷೇತ್ರವೇ ವೇಗವಾಗಿ ಬದಲಾಗುತ್ತಿದೆ. ಬದಲಾಗುತ್ತಿದೆ ಎಂದರೆ ತಪ್ಪಾಗಬಹುದು. ಅದಕ್ಕಿಂತ ಹೆಚ್ಚಾಗಿ Evolve ಆಗುತ್ತಿದೆ / ವಿಕಾಸವಾಗುತ್ತಿದೆ ಎಂಬುದು ಸರಿಯಾದ ಹೇಳಿಕೆ. ಸಂಘಜೀವಿಯಾದ ಮಾನವ ತನ್ನದೇ ಸ್ಥಳೀಯ ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿಯಬೇಕೆಂಬುದರ ಜತೆಗೆ ಪ್ರಪಂಚದ ಬೇರೆಡೆಗಳಲ್ಲೂ ಏನಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಹಿಂದೆಂದಿಗಿಂತಲೂ ಇಂದು ಹೆಚ್ಚು ಕುತೂಹಲಿಯಾಗಿದ್ದಾನೆ. ಆ ಹಂಬಲದ ಜತೆಗೆ, ಇಂದು, ಆತನಿಗೆ ಅದರ ಅನಿವಾರ್ಯತೆಯೂ ಬಂದೊದಗಿದೆ.

ಕಾಲಾನುಕ್ರಮದಲ್ಲಿ, ತಂತ್ರಜ್ಞಾನ ವಿಕಾಸಗೊಂಡಂತೆ ಮಾಹಿತಿಯನ್ನು ಪಡೆಯುವ ಅಥವಾ ಆ ಮಾಹಿತಿಯನ್ನು Consumption ಮಾಡುವ ವಿಧಾನದಲ್ಲಿ ತೀವ್ರತರವಾದ ಬದಲಾವಣೆ ಆಗುತ್ತಿದೆ. ಜನರು ತಮ್ಮ ಕೈಲಿರುವ ಮೊಬೈಲ್ ಫೋನ್‌, ಲ್ಯಾಪ್ ಟಾಪ್, ಡೆಸ್ಕ್ ಟಾಪ್, ಟ್ಯಾಬ್‌ಗಳ ಮೂಲಕವೇ ಇಡೀ ಜಗತ್ತನ್ನು ನೋಡಲು, ತಿಳಿಯಲು ಬಯಸುತ್ತಿದ್ದಾರೆ. ಈ ಹಿಂದೆಲ್ಲ ಓದಲು ಪುಸ್ತಕಗಳು, ಪತ್ರಿಕೆಗಳು ಇತ್ಯಾದಿ; ಆಡಿಯೊ ಕೇಳಲು ರೇಡಿಯೊ; ವಿಡಿಯೊ ವೀಕ್ಷಿಸಲು ಟಿವಿ, ಸಿಡಿಗಳ ಮೊರೆ ಹೋಗಬೇಕಿತ್ತು. ಕೇವಲ ಸಂವಹನ, ಸಂಭಾಷಣೆಯ ಮಾಧ್ಯಮವಾಗಿ ಎಂಟ್ರಿ ಪಡೆದ ಮೊಬೈಲ್ ಲೆಕ್ಕ (Compute) ಮಾಡಲೆಂದು ಬಂದ ಕಂಪ್ಯೂಟರ್‌ಗಳು ಈಗ ಆ ಮೂರೂ ಅಂಶಗಳನ್ನು ಒಳಗೊಂಡಿವೆ. ಅಂದರೆ ಅಕ್ಷರ, ಆಡಿಯೊ, ವಿಡಿಯೊಗಳನ್ನು ಒಟ್ಟಿಗೇ ಒದಗಿಸುತ್ತಿದೆ. ಈ ಕ್ಷೇತ್ರದಲ್ಲಿ ಭವಿಷ್ಯದಲ್ಲೂ ಕೂಡ ಕ್ಷಿಪ್ರಗತಿಯ ಬದಲಾವಣೆ ಆಗುವುದಿದೆ. ಈ ವಾಸ್ತವದ ತಳಹದಿಯಲ್ಲಿ ಮಾಧ್ಯಮ ಸಂಸ್ಥೆ ಕಟ್ಟುವ ಬಯಕೆಯನ್ನು ನಾವು ಹೊಂದಿದ್ದೇವೆ.

ಪ್ರಶ್ನೆ: ಹಾಗಾದರೆ ಪ್ರಿಂಟ್ ಮಾಧ್ಯಮಕ್ಕೆ ಭವಿಷ್ಯವೇ ಇಲ್ಲವೇ?
ಉತ್ತರ: ಪ್ರಿಂಟ್ ಮಾಧ್ಯಮಕ್ಕೆ ಭವಿಷ್ಯ ಇದೆ ಅಥವಾ ಇಲ್ಲ ಎಂಬ ಎರಡೂ ವಾದಗಳು ಸತ್ಯ. ಹೌದು, ಈಗಿರುವ ಫಾರ್ಮೇಟ್‌ನಲ್ಲಿ ಮುಂದುವರಿದರೆ ಪ್ರಿಂಟ್ ಮಾಧ್ಯಮಕ್ಕೆ ಭವಿಷ್ಯ ಇಲ್ಲ. ಫಾರ್ಮೇಟ್ ಬದಲಿಸಿಕೊಂಡರೆ ಪ್ರಿಂಟ್ ಮಾಧ್ಯಮಕ್ಕೆ ಭವಿಷ್ಯ ಇದೆ. ನಿನ್ನೆ ಮೊನ್ನೆ ನಡೆದ ಹಳೆಯ ಘಟನೆಗಳನ್ನು ವರದಿ ಮಾಡುವುದಕ್ಕಷ್ಟೇ ಪತ್ರಿಕೆಗಳನ್ನು ಪ್ರಿಂಟ್ ಮಾಡುವುದು It is a national waste in my opinion! ಇದನ್ನು ಯಾರೂ ಅನ್ಯಥಾ ಭಾವಿಸಬಾರದು.

ಪ್ರಶ್ನೆ: ಈಗಾಗಲೇ ಡಿಜಿಟಲ್ ಮಾಧ್ಯಮದಲ್ಲಿ ಸಾಕಷ್ಟು ಪ್ಲೇಯರ್‌ಗಳಿದ್ದಾರೆ. ಡಿಜಿಟಲ್ ಮಾಧ್ಯಮ ಸಂಸ್ಥೆಗಳಿವೆ. ಟಿವಿ ಚಾನೆಲ್‌ಗಳೂ ಇವೆ. ಇಷ್ಟೆಲ್ಲದರ ನಡುವೆ ಹೊಸ ಮಾಧ್ಯಮಕ್ಕೆ ಸ್ಥಳಾವಕಾಶ (Space) ಇದೆಯೇ?

ಉತ್ತರ: ನೋಡಿ, ಯಾವುದಕ್ಕೂ, ಯಾರೊಬ್ಬರಿಗೂ ಎಲ್ಲೂ ಸ್ಪೇಸ್ ರಿಸರ್ವ್ ಆಗಿರುವುದಿಲ್ಲ. ಭಾರತದಂತಹ ಜನದಟ್ಟಣೆಯ ದೇಶದಲ್ಲಂತೂ ಸ್ಪೇಸ್ ರಿಸರ್ವ್ ಆಗಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ ಅದನ್ನೇ ಪಾಸಿಟಿವ್ ಆಗಿ ನೋಡಿದರೆ, ಭಾರತದಂತಹ ದೇಶದಲ್ಲಿ ಅಗಾಧ ಜನಸಂಖ್ಯೆಯ ಅವಶ್ಯಕತೆಗಳನ್ನು ಪೂರೈಸಲು ಅದೆಷ್ಟೇ ಸೇವಾಕರ್ತರು ಬಂದರೂ ಎಲ್ಲ ಕ್ಷೇತ್ರಗಳಲ್ಲಿ ಸ್ಪೇಸ್ ಸಿಕ್ಕೇ ಸಿಗುತ್ತದೆ. ಅಂದರೆ ಎಷ್ಟೇ ಹೊಸ ಹೊಸ ಸಂಸ್ಥೆಗಳು ಬಂದರೂ ಎಲ್ಲರನ್ನೂ ತಲುಪಲಾಗದಷ್ಟು ದೊಡ್ಡ, ಸಂಕೀರ್ಣ, ವೈವಿಧ್ಯಮಯ ದೇಶ ನಮ್ಮದು. ನಾವು ಹೇಗೆ ವಿಚಾರಗಳನ್ನು ಗ್ರಹಿಸುತ್ತೇವೆ ಮತ್ತು ಪ್ರಸ್ತುತಪಡಿಸುತ್ತೇವೆ ಎಂಬುದರ ಮೇಲೆ ಸ್ಪೇಸ್ ಇದೆಯೇ ಇಲ್ಲವೇ ಎಂಬುದು ನಿರ್ಧರಿತವಾಗುತ್ತದೆ. ಉದಾ: ಕನ್ನಡ ಮಾಧ್ಯಮ ಲೋಕದಲ್ಲಿ ವಿಜಯ ಕರ್ನಾಟಕ ಪತ್ರಿಕೆ ಬರುವ ಮುನ್ನ ʼಮುದ್ರಣ ಮಾಧ್ಯಮದಲ್ಲಿ ಈಗಾಗಲೇ ದಿಗ್ಗಜರಿದ್ದಾರೆ ಎಲ್ಲಿ ಸ್ಪೇಸ್ ಇದೆ?ʼ ಎಂಬ ಪ್ರಶ್ನೆ ಇತ್ತು. ಅದರ ಬೆನ್ನಲ್ಲೇ ವಿಜಯವಾಣಿ ಪತ್ರಿಕೆ ಬಂದಾಗಲಂತೂ ಇದೇ ಪ್ರಶ್ನೆಯನ್ನು ಹೋದಲ್ಲಿ ಬಂದಲ್ಲಿ ಕೇಳುತ್ತಿದ್ದರು. ವಿಜಯ ಕರ್ನಾಟಕವನ್ನು ನಂಬರ್ ಒನ್ ಪತ್ರಿಕೆ ಮಾಡಲು ಆರೇಳು ವರ್ಷ ಹಿಡಿಯಿತು. ಆದರೆ ವಿಜಯವಾಣಿ ಪತ್ರಿಕೆ ಕೇವಲ 24 ತಿಂಗಳಲ್ಲಿ ನಂಬರ್ ಒನ್ ಪತ್ರಿಕೆಯಾಗಿ ದೇಶದ ಮಾಧ್ಯಮ ಇತಿಹಾಸದಲ್ಲಿ ಹೊಸ ದಾಖಲೆ ಬರೆಯಿತು. ಹೊಸ ಪತ್ರಿಕೆ ಆಗಮನದಿಂದ ಕನ್ನಡದ ಪತ್ರಕರ್ತರಿಗೆ, ಓದುಗರಿಗೆ, ವಿತರಕರಿಗೆ, ಜಾಹೀರಾತುದಾರರಿಗೆ ದೊಡ್ಡ ಲಾಭ ಆಯಿತು. ಕನ್ನಡ ಮಾಧ್ಯಮ ಅಗಾಧವಾಗಿ ವಿಸ್ತಾರವಾಯಿತು. ಆ ವಿಷಯದಲ್ಲಿ ಡಾ. ವಿಜಯ ಸಂಕೇಶ್ವರರಿಗೆ ನನ್ನದೊಂದು ದೊಡ್ಡ ಸಲಾಮು ಸದಾ ಇರುತ್ತದೆ. ಇನ್ನೂ ಒಂದು ವಿಚಾರ ಏನೆಂದರೆ ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು ಬರುವ ಪೂರ್ವದಲ್ಲಿ ಹಾಗೂ ಆನಂತರ ಅನೇಕ ಪತ್ರಿಕೆಗಳು ಬಂದಿದ್ದವು. ಅವೆಲ್ಲವೂ ಬದುಕಲಿಲ್ಲ, ಬಾಳಲಿಲ್ಲ. ವೆರಿ ಸಿಂಪಲ್ ಆಗಿ ಹೇಳಬೇಕೆಂದರೆ ಹುಟ್ಟುವ ಪ್ರತಿ ಮಗು ನನಗೆಲ್ಲಿ ಸ್ಪೇಸ್ ಎಂದು ಕೇಳಿದ್ದರೆ ಜಗತ್ತು ಏನಾಗುತ್ತಿತ್ತು? ಹುಟ್ಟಿದ ಮಕ್ಕಳೆಲ್ಲ ಬಾಳುತ್ತಾರಾ? ಈ ವಿಷಯದಲ್ಲಿ ಡಾರ್ವಿನ್ನನ ಥಿಯರಿ ಹೆಚ್ಚು ಪ್ರಸ್ತುತ. ಫಿಟ್ ಆ್ಯಂಡ್ ಫೈನ್ ಆಗಿರಬೇಕೆನ್ನುವವರಿಗೆ ಸ್ಪೇಸ್ ಸದಾ ಇದ್ದೇ ಇರುತ್ತದೆ.

ಪ್ರಶ್ನೆ: ಹಾಗಾದರೆ ಕರ್ನಾಟಕದ ಡಿಜಿಟಲ್ ಹಾಗೂ ಟಿವಿ ಕ್ಷೇತ್ರದಲ್ಲಿ ಓದುಗರು ಮತ್ತು ವೀಕ್ಷಕರನ್ನು ಪಡೆಯಲು ದೊಡ್ಡ ಹಗ್ಗ ಜಗ್ಗಾಟ ಶುರುವಾಗುತ್ತದೆಯೇ?

ಉತ್ತರ: ಖಂಡಿತ ಇಲ್ಲ, ಇದು ಒಬ್ಬರ ಗ್ರಾಹಕರನ್ನು ಇನ್ನೊಬ್ಬರು ಸೆಳೆಯುವ ಮಾತಲ್ಲ.

ನಾವು ಸ್ಪೇಸ್ ಪಡೆದುಕೊಳ್ಳಲು ಇನ್ನೊಬ್ಬರು ಕಳೆದುಕೊಳ್ಳಬೇಕೆಂದಿಲ್ಲ. ಒಬ್ಬರ ಬೆಳೆವಣಿಗೆಗೆ ಮತ್ತು ಇನ್ನೊಬ್ಬರ ಅವನತಿಗೆ ಅದರದ್ದೇ ಆದ ಕಾರ್ಯಕಾರಣಗಳಿರುತ್ತವೆ.

ಉದಾಹರಣೆಗೆ ನಾನು ಪ್ರಧಾನ ಸಂಪಾದಕನಾಗಿ ಕೆಲಸ ಮಾಡಿದ ವಿಜಯವಾಣಿ ಹಾಗೂ ವಿಜಯ ಕರ್ನಾಟಕ ಪತ್ರಿಕೆಗಳ ಸಫಲತೆಯಲ್ಲಿ ಒಬ್ಬರ ಗ್ರಾಹಕರನ್ನು ಇನ್ನೊಬ್ಬರು ಕಿತ್ತುಕೊಳ್ಳುವ ಆಟ ನಡೆಯಲೇ ಇಲ್ಲ. ಬದಲಾಗಿ ಸ್ಪರ್ಧಾತ್ಮಕತೆಯಲ್ಲಿ ಎಲ್ಲರೂ ಒಂದಿಷ್ಟು ಹೊಸತನ ಮತ್ತು ಹೊಸ ಗ್ರಾಹಕರನ್ನು ಪಡೆದರು. ಆ ಎರಡೂ ಸಂದರ್ಭಗಳಲ್ಲಿ ಕನ್ನಡ ಪತ್ರಿಕೆಗಳ ಓದುಗರ ಸಂಖ್ಯೆ ಹಿಗ್ಗಿತು. ಹೊಸ ಓದುಗರನ್ನು ಸೆಳೆಯುವ ಯತ್ನದಲ್ಲಿ ಯಶಸ್ಸು ಸಿಕ್ಕಿತು.

ಒಟ್ಟಿನಲ್ಲಿ, ಹೊಸತನ ತರಬಲ್ಲ ಮಾಧ್ಯಮಗಳು ಬಂದರೆ, ಮಾರುಕಟ್ಟೆ ತನ್ನಿಂತಾನೆ ವಿಸ್ತರಿಸುತ್ತದೆ ಎನ್ನುವುದು ಸ್ಥಾಪಿತವಾಗಿದೆ. ಇದರಿಂದ ಇಡೀ ಮಾಧ್ಯಮ ಲೋಕಕ್ಕೆ ಲಾಭವಾಗಿದೆ. ವಿಸ್ತಾರ, ಹೆಸರಿಗೆ ತಕ್ಕಂತೆ ಮಾಧ್ಯಮ ಜಗತ್ತನ್ನೂ, ಜನರ ಮನಸ್ಸನ್ನೂ ವಿಸ್ತರಿಸುವ ಪ್ರಯತ್ನ ಮಾಡಲಿದೆ.  ಇದುವರೆಗೆ ಯಾರೂ ತಲುಪದ ಗಮ್ಯವನ್ನು ತಲುಪಬೇಕೆಂಬ ಹಂಬಲ ಇದೆ, ಗುರಿ ಇದೆ. ಆ ನಿಟ್ಟಿನಲ್ಲಿ ಸ್ಪಷ್ಟವಾದ ಕಾರ್ಯಸೂಚಿಯನ್ನು ಸಿದ್ಧಪಡಿಸಿಕೊಂಡು ಹೆಜ್ಜೆ ಮುಂದಿಡುತ್ತಿದ್ದೇವೆ.

ಸಂಸ್ಥೆಯ ಚೇರ್ಮನ್‌ ಮತ್ತು ಎಂ.ಡಿ. ಎಚ್. ವಿ. ಧರ್ಮೇಶ್, ಸಂಸ್ಥೆಯ ನಿರ್ದೇಶಕರಾದ ಶ್ರೀನಿವಾಸ ಹೆಬ್ಬಾರ್ ಅವರ ಜತೆ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ

ಪ್ರಶ್ನೆ: ಮಾಧ್ಯಮ ಸಂಸ್ಥೆ ಆರಂಭಕ್ಕೆ ದೊಡ್ಡ ಮಟ್ಟದ ಹೂಡಿಕೆ ಬೇಕಾಗುತ್ತದಲ್ಲವೇ? ಬರೀ ಪತ್ರಕರ್ತರಾಗಿದ್ದ ನೀವು ಮಾಧ್ಯಮ ಸಂಸ್ಥೆ ಆರಂಭಿಸುವುದರ ಹಿಂದಿನ ಹೂಡಿಕೆದಾರರು ಯಾರು? ರಾಜಕೀಯದವರೇನಾದರೂ…

ಉತ್ತರ: ಪ್ರಸಕ್ತ ಸನ್ನಿವೇಶದಲ್ಲಿ ಇದು ಎಲ್ಲರೂ ಕೇಳುವ ಮತ್ತು ಉತ್ತರಿಸಲೇಬೇಕಾದ ಮುಖ್ಯ ವಿಚಾರ. ಮಾಧ್ಯಮವೂ ಸೇರಿದಂತೆ ಯಾವುದೇ ಸಂಸ್ಥೆಯನ್ನು ಆರಂಭಿಸಲು ಈಗ ಬಂಡವಾಳ ಅಥವಾ ಹೂಡಿಕೆ ಸಮಸ್ಯೆಯೇ ಅಲ್ಲ. ಶ್ರೀಮಂತರು ಮಾತ್ರ ಸಂಸ್ಥೆ ಕಟ್ಟಬಹುದು ಎಂಬ ಹಳೆಯ ಸೂತ್ರ ಈಗ ಬದಲಾಗಿದೆ. ಕೈಯಲ್ಲಿ ಒಂದು ರೂ. ಇಲ್ಲದಿದ್ದರೂ ಪ್ರತಿಭೆ, ಐಡಿಯಾ ಮತ್ತು ಕೌಶಲ ಇದ್ದರೆ ಈಗ ಯಾರು ಬೇಕಾದರು ಹೊಸ ಸಂಸ್ಥೆಯನ್ನು ಕಟ್ಟಿ ಬೆಳೆಸಬಹುದು. ಇಂಥ ಕಡೆ ಹಣ ಹೂಡಲು ದೇಶದಿಂದ ಮಾತ್ರವಲ್ಲ, ವಿದೇಶಗಳಿಂದಲೂ ಸಾಕಷ್ಟು ಉತ್ಸಾಹಿಗಳು ಮುಂದೆ ಬರುತ್ತಾರೆ. ವೃತ್ತಿಪರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಈ ವ್ಯವಸ್ಥೆಯಲ್ಲಿನ ಮತ್ತೊಂದು ಹೆಚ್ಚುಗಾರಿಕೆ. ನಮ್ಮ ದೇಶದಲ್ಲಿ ಹಲವಾರು ಪ್ರತಿಭಾವಂತರು ಯಾವುದೇ ಸ್ವಂತ ಬಂಡವಾಳದ ಬಲ ಇಲ್ಲದೆ ಸ್ಟಾರ್ಟ್ಅಪ್ ಆರಂಭಿಸಿ ಸಾವಿರ ಕೋಟಿ ರೂ. ವಹಿವಾಟು ದಾಟಿರುವ ಸಾಧನೆ ನಮ್ಮ ಕಣ್ಣ ಮುಂದೆಯೇ ಇದೆ.

ಖಡಾಖಂಡಿತವಾಗಿ ಹೇಳಬೇಕಾದ ಸಂಗತಿಯೆಂದರೆ ನಮ್ಮ ಸಂಸ್ಥೆ ರಾಜಕೀಯದವರ ಹಣವನ್ನು ಇಲ್ಲಿಯವರೆಗೆ ಪಡೆದಿಲ್ಲ ಮತ್ತು ಮುಂದೆಯೂ ಪಡೆಯುವುದಿಲ್ಲ. ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಕೇಂದ್ರ ಸರ್ಕಾರದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಾಯಿತ ಸಂಸ್ಥೆ. ಹೀಗಾಗಿ ನಮ್ಮ ಸಂಸ್ಥೆಯ ಪ್ರಮೋಟರ್, ಡೈರೆಕ್ಟರ್ ಮಂಡಳಿ, ಹೂಡಿಕೆ, ನೆಟ್‌ವರ್ತ್ , ಆಡಿಟ್ ರಿಪೋರ್ಟ್ ಎಲ್ಲವೂ ಆಸಕ್ತರ ವೀಕ್ಷಣೆಗೆ ಲಭ್ಯವಿದೆ. ಮುಖ್ಯವಾಗಿ ನಮ್ಮ ಸಂಸ್ಥೆಯ ಎಂ.ಡಿ. ಶ್ರೀ ಎಚ್. ವಿ. ಧರ್ಮೇಶ್ ಮೊದಲ ತಲೆಮಾರಿನ ಯಶಸ್ವೀ ಉದ್ಯಮಿ. ನಮ್ಮೊಂದಿಗೆ ಸೇರಿ ಈಗ ಮಾಧ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡಿದ್ದಾರೆ. ಅವರಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ರಾಜಕೀಯದ ಸಂಬಂಧ ಇಲ್ಲವೇ ಇಲ್ಲ. ನಮ್ಮ ಸಂಸ್ಥೆಯ ನಿರ್ದೇಶಕರಾದ ಶ್ರೀ ಶ್ರೀನಿವಾಸ ಹೆಬ್ಬಾರ್​ ಅವರು ಟ್ರಾನ್ಸ್​ಪೋರ್ಟ್​ ಉದ್ಯಮದ ಜತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವವರು. ಪರಿಸರ ಸಂರಕ್ಷಣೆ, ಆರೋಗ್ಯ, ಶಿಕ್ಷಣ, ಗೋ ಸಂರಕ್ಷಣೆ, ಸ್ವಚ್ಛತೆ ಮೊದಲಾದ ಕ್ಷೇತ್ರಗಳಲ್ಲಿ ಕೊಡುಗೆ ಸಲ್ಲಿಸುತ್ತಿರುವವರು. ಇದೀಗ ನಾವು ಹೊಸ ಮಾಧ್ಯಮ ಸಂಸ್ಥೆ ಆರಂಭಿಸಿದ್ದೇವೆ. ಈ ಡಿಜಿಟಲ್ ಮಾಧ್ಯಮ ಕ್ಷೇತ್ರ ಅತ್ಯಂತ ಪಾರದರ್ಶಕತೆ ಬಯಸುತ್ತದೆ ಮತ್ತು ರಾಜಕೀಯ ಸತ್ಯನಿಷ್ಠುರತೆ ನಿರೀಕ್ಷಿಸುತ್ತದೆ ಎಂಬ ಅರಿವು ನಮಗಿದೆ.

ಪ್ರಶ್ನೆ: ನೀವು ಆರಂಭಿಸಿರುವ ಪತ್ರಿಕೋದ್ಯಮದ ಸ್ವರೂಪ ಹೇಗಿರುತ್ತದೆ? ನಿಮ್ಮ ವೈಚಾರಿಕ ನಿಲುವು ಯಾವುದು?

ಉತ್ತರ: ಕೆಲ ವರ್ಷಗಳಿಂದೀಚೆಗೆ ಮಾಧ್ಯಮ ಸಂಸ್ಥೆಗಳ ಸುತ್ತ ಅನುಮಾನದ ಹುತ್ತ ಆವರಿಸಿಕೊಳ್ಳುತ್ತಿರುವುದು ನಿಜ. ಕೆಲ ಮಾಧ್ಯಮ ಸಂಸ್ಥೆಗಳು ಪಕ್ಷಗಳ, ರಾಜಕಾರಣಿಗಳ ಪರ ಇದ್ದಾರೆ ಎಂಬ ಭಾವನೆ ಇದೆ. ಕೆಲ ಸಂದರ್ಭಗಳಲ್ಲಿ ಕೆಲವು ಪತ್ರಕರ್ತರೇ ಭ್ರಷ್ಟಾಚಾರದಂತಹ ಪ್ರಕರಣಗಳಲ್ಲಿ ಭಾಗಿಯಾದ ಆರೋಪಗಳೂ ಬಂದಿವೆ. ಆಗಲೇ ಪ್ರಸ್ತಾಪಿಸಿದಂತೆ, ನಾವು ಪ್ರಾರಂಭಿಸಿರುವ ಡಿಜಿಟಲ್ ಮಾಧ್ಯಮ ಕ್ಷೇತ್ರದ ಅತಿ ದೊಡ್ಡ ಗ್ರಾಹಕರು ಸಾಮಾಜಿಕ ಜಾಲತಾಣದ ಸಕ್ರಿಯ ಬಳಕೆದಾರರು. ಈ ಬಳಕೆದಾರರು ಜಗತ್ತಿನ ಎಲ್ಲರನ್ನೂ ಪ್ರಶ್ನಿಸಬಲ್ಲರು. ಅವರು ಮಾಧ್ಯಮ ಕ್ಷೇತ್ರವನ್ನೂ ಪ್ರಶ್ನಿಸುತ್ತಿದ್ದಾರೆ. ಅನೇಕ ಸಂದರ್ಭಗಳಲ್ಲಿ ಪ್ರಮಾದ, ಲೋಪಗಳನ್ನು ಬಯಲಿಗೆಳೆಯುತ್ತಿದ್ದಾರೆ. ಇದನ್ನು ನಾನು ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇನೆ. ಅಂತಹ ನಾಗರಿಕರ ಕಣ್ಣಲ್ಲಿ ಮಾಧ್ಯಮ ಘನತೆ ಕಳೆದುಕೊಳ್ಳುವಂತಾಗಿದೆ. ಅದಕ್ಕೆ ನಾನಾ ಕಾರಣಗಳಿವೆ. ಅದರ ಗೋಜಿಗೆ ನಾನು ಹೋಗುವುದಿಲ್ಲ. ಆದರೆ ನಮ್ಮ ಮುಖ್ಯ ಗಮನ ಮಾಧ್ಯಮಕ್ಕೆ ಘನತೆ ತಂದುಕೊಡುವುದರ ಕಡೆಗೆ ಮಾತ್ರ.

ಬಾಲಗಂಗಾಧರ ತಿಲಕರು, ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್, ಡಿ. ವಿ. ಗುಂಡಪ್ಪನವರೆಲ್ಲ ಪತ್ರಕರ್ತರಾಗಿದ್ದವರು. ಆ ನಂತರವೂ ಪತ್ರಿಕೋದ್ಯಮದ ಘನತೆಯ ತೇರನ್ನು ಅನೇಕ ಮಹನೀಯರು ಮುಂದಕ್ಕೆ ಎಳೆದಿದ್ದಾರೆ. ಅವರು ಹಾಕಿದ ಮಾರ್ಗದಲ್ಲಿ ಮುಂದೆ ಸಾಗಿ ಈ ಕ್ಷೇತ್ರದ ಘನತೆ, ಗೌರವ ಹಾಗೂ ಹೊಣೆಗಾರಿಕೆಯನ್ನು ಮೆರೆಯುವುದು ನಮ್ಮ ಪರಮ ಧ್ಯೇಯ.

ಈ ಕಾರಣಕ್ಕಾಗಿ ಮೊದಲಿಗೆ ನಾವು ಯಾವುದೇ ಪಕ್ಷ ಮತ್ತು ರಾಜಕಾರಣಿಗಳ ಪರ ವಹಿಸುವುದಿಲ್ಲ. ಯಾವುದೇ ಸಮುದಾಯದ ಪಕ್ಷಪಾತಿಗಳಾಗುವುದಿಲ್ಲ. ಸತ್ಯ ಹಾಗೂ ರಾಷ್ಟ್ರಹಿತದ ಪ್ರಶ್ನೆ ಬಂದಾದ ಯಾವುದೇ ಮುಲಾಜಿಗೆ ಒಳಗಾಗುವುದಿಲ್ಲ. ನಮಗೆ ದೇಶ ಮೊದಲೇ ಹೊರತು ಬೇರೇನೂ ಅಲ್ಲ. ಜನಪರ ಮತ್ತು ಜನಪ್ರಿಯತೆ ಈ ಎರಡರಲ್ಲಿ ಆಯ್ಕೆ ಪ್ರಶ್ನೆ ಬಂದಾಗ ಜನಪರವೇ ಮಿಗಿಲಾಗುತ್ತದೆ. ಮುಖ್ಯವಾಗಿ ನಾವು ಕಿರುಚಾಡುವುದಿಲ್ಲ. ನಮ್ಮ ಮಾಧ್ಯಮ ಸಂಸ್ಥೆಯ ಸುದ್ದಿಯಲ್ಲಿ ಸತ್ಯದ ಶಕ್ತಿ ಮತ್ತು ನಿಖರತೆ ಇರುತ್ತದೆ. ಸುದ್ದಿಯೇ ಮಾತನಾಡಿ, ಪತ್ರಕರ್ತ ಕಡಿಮೆ ಮಾತನಾಡುವಂತೆ ನೋಡಿಕೊಳ್ಳುತ್ತೇವೆ. ಹೀಗಾಗಿಯೇ, ನಿಖರ. ಜನಪರ. – ಇವೇ ಮೌಲ್ಯಗಳನ್ನು ನಮ್ಮ ಮಾಧ್ಯಮಸಂಸ್ಥೆಯ ಧ್ಯೇಯವಾಕ್ಯವಾಗಿಯೂ ನಮ್ಮ ವಿಸ್ತಾರ ಬ್ರ್ಯಾಂಡ್‌ನ ಟ್ಯಾಗ್‌ಲೈನ್‌ ಆಗಿಯೂ ಇಟ್ಟುಕೊಂಡಿದ್ದೇವೆ.

ಪ್ರಶ್ನೆ: ಕನ್ನಡ‌‌ ಭಾಷೆ, ನೆಲ, ಜಲ, ಸಂಸ್ಕೃತಿಯ ಹಿತರಕ್ಷಣೆಯ ವಿಚಾರದಲ್ಲಿ ನಮ್ಮ ನಿಲುವೇನು?
ಉತ್ತರ: ಈ‌ ವಿಷಯದಲ್ಲಿ ನಾವು ಅಪ್ಪಟ ಕನ್ನಡಿಗರು ಮತ್ತು ಕನ್ನಡಪರರು. ಭಾಷೆ, ನೆಲ, ಜಲ, ಸಂಸ್ಕೃತಿ ಹಿತದ ವಿಚಾರದಲ್ಲಿ ರಾಜಿಯೇ ಇಲ್ಲದ ಕಠಿಣ ನಿಲುವು ನಮ್ಮದು. ಈ ವಿಷಯದಲ್ಲಿ ನಾವೇ ಮುಂಚೂಣಿಯಲ್ಲಿ ನಿಲ್ಲುತ್ತೇವೆ. ಇನ್ನೂ ಸ್ಪಷ್ಟಪಡಿಸಬೇಕೆಂದರೆ ಕನ್ನಡ – ಕರ್ನಾಟಕದ ವಿಷಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ನಿಲುವೇ ನಮ್ಮ ನಿಲುವು. ಜೈ ಭಾರತ ಜನನಿಯ ತನುಜಾತೇ, ಜಯ ಹೇ ಕರ್ನಾಟಕ ಮಾತೆ. ಕರ್ನಾಟಕ ಮಾತೆ, ಆ ಮೂಲಕ ಭಾರತ ಮಾತೆ…

ಕರ್ನಾಟಕ ಇಲ್ಲದೇ ಭಾರತ ಇಲ್ಲ. ಭಾರತ ಇರದೇ ಕರ್ನಾಟಕ ಇರಲಾರದು. ರಾಜ್ಯ‌ ಮತ್ತು ರಾಷ್ಟ್ರದ ಸಂಬಂಧ ಎಂದೆಂದಿಗೂ ಅವಿನಾಭಾವ, ಅವಿಚ್ಛಿನ್ನ.  ಭಾಷೆಯ ವಿಚಾರದಲ್ಲೂ ನಮ್ಮ ನಿಲುವು ಅದೇ. ಕನ್ನಡದ‌ ಪರ ಸದಾ ಕೈ ಎತ್ತುತ್ತೇವೆ. ಧ್ವನಿ ಎತ್ತುತ್ತೇವೆ. ಕನ್ನಡಕ್ಕಾಗಿ ಬೇರೆ ಭಾಷೆಯನ್ನು ದ್ವೇಷಿಸುವುದಿಲ್ಲ. ಭಾಷೆ ಎಂದರೆ ಕೇವಲ ಸಂವಹನ ಸಾಧನ ಅಲ್ಲ, ಅದು ಸಂಸ್ಕೃತಿಯ ವಾಹಕ. ಅದು ಸಣ್ಣದೇ ಇರಲಿ, ದೊಡ್ಡದೇ ಇರಲಿ. ಭಾರತದ ಎಲ್ಲ ಭಾಷೆಗಳೂ ಸಮಾನ ಮತ್ತು ಸರ್ವಶಕ್ತ. ನಾವು ಮೊದಲು ಕನ್ನಡಪರರು.

ಪ್ರಶ್ನೆ: ಸಂಸ್ಥೆಯನ್ನು ಯಶಸ್ವಿಯಾಗಿ ಕಟ್ಟಿ ಬೆಳೆಸಲು ಉತ್ತಮ ತಂಡ ಬೇಕು. ‌ನಿಮ್ಮ ಜತೆ ಅಂತಹ ತಂಡ ಇದೆಯೆ?

ಉತ್ತರ: ನಮ್ಮ ಆಲೋಚನೆಗಳು ಎಷ್ಟೇ ಉದಾತ್ತವಾಗಿದ್ದರೂ, ಕಾರ್ಯಸಾಧುವಾಗಿದ್ದರೂ, ಅದನ್ನು ಕಾರ್ಯರೂಪಕ್ಕೆ ತರಲು ಉತ್ತಮ ಮಾನವ ಸಂಪನ್ಮೂಲ, ಅಂದರೆ ಪಕ್ವಗೊಂಡ ಮೆದುಳುಗಳು ಬೇಕು ಎಂಬುದು ನಮಗೆ ಚೆನ್ನಾಗಿ ತಿಳಿದಿದೆ. ಅತ್ಯಂತ ಸಂತೋಷದ ಸಂಗತಿ ಎಂದರೆ ನಾವು ನವ ಮಾಧ್ಯಮ ಸಂಸ್ಥೆ ಕಟ್ಟಲು ಮುಂದಾದಾಗ ಕನ್ನಡ ಪತ್ರಿಕೋದ್ಯಮದಲ್ಲಿ ಪಳಗಿದ, ಶುದ್ಧ ಮನಸ್ಸಿನ ಅತ್ಯುತ್ತಮ ಪತ್ರಕರ್ತರು ನಮ್ಮ ಜತೆಯಾದದ್ದು. ಹಿರಿಯರು, ಮಧ್ಯಮ ಅನುಭವಿಗಳು ಮತ್ತು ಯುವಕರು ಹೀಗೆ ಮೂರು ಜನರೇಶನ್ನಿಗೆ ಈ ಕಂಪನಿಯನ್ನು ಸದೃಢವಾಗಿ ಮುನ್ನಡೆಸಬಲ್ಲ ಬ್ಲೆಂಡೆಡ್ ಪತ್ರಕರ್ತರ ತಂಡ ನಮ್ಮ ಸಂಸ್ಥೆಯ ಭವಿಷ್ಯದ ಸೂಚನೆ. ಇಲ್ಲಿ ನಾವು ಡಿಜಿಟಲ್, ಪ್ರಿಂಟ್ ಹಾಗೂ ಟಿವಿ ಮಾಧ್ಯಮದಿಂದ ಆಯ್ದ ಪತ್ರಕರ್ತರ ಸಮತೋಲಿತ ತಂಡವನ್ನು ಕಟ್ಟಿದ್ದೇವೆ.

ಪ್ರಶ್ನೆ: ಎಲ್ಲ ಸುದ್ದಿ ಸಂಸ್ಥೆಗಳೂ ತಾವು ಜನಪರ, ಪಕ್ಷಪಾತ ರಹಿತ ಎಂದೇ ಕಾರ್ಯ ಆರಂಭಿಸುತ್ತವೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಯಾವ ರೀತಿ ಬೆಳವಣಿಗೆಗಳಾಗಿವೆ ಎಂಬುದನ್ನು ನಾವು ನೋಡಿದ್ದೇವೆ. ನಿಮ್ಮ ಮೇಲೆ ಹೇಗೆ ನಂಬಿಕೆ ಇಡುವುದು?

ಉತ್ತರ: ಈಗಾಗಲೇ ಹೇಳಿದಂತೆ, ಕನ್ನಡದ ಅತ್ಯುತ್ತಮ, ಅನುಭವಿ ಹಾಗೂ ಗೌರವಯುತ ಪತ್ರಕರ್ತರ ತಂಡ ನಮ್ಮ ಜತೆಗಿದೆ. ಹೀಗಾಗಿ ಉತ್ತಮ ವಿಷಯ (Content) ನಮ್ಮಿಂದ ನಿಮಗೆ ದೊರಕುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇದೇ ವಿಷಯ ವಸ್ತುವನ್ನು ಈಗಿನ ಕಾಲಕ್ಕೆ, ಜನರ ಅನುಕೂಲಕ್ಕೆ ತಕ್ಕಂತೆ ಪ್ರಸ್ತುತಪಡಿಸುವಲ್ಲೂ ನಾವು ಸಫಲರಾಗುತ್ತೇವೆ ಎಂಬ ನಂಬಿಕೆ ಮತ್ತು ಸ್ಪಷ್ಟತೆ ನಮಗಿದೆ. ಇನ್ನು ವಿಶ್ವಾಸ ಗಳಿಸುವುದು ಕಾಲಕ್ಕೆ ಬಿಟ್ಟ ವಿಚಾರ. ಯಾವುದೇ ವ್ಯಕ್ತಿ, ವಿಚಾರದ ಮೇಲೆ ನಂಬಿಕೆ, ವಿಶ್ವಾಸ ಮೂಡಲು ಅದರದ್ದೇ ಆದ ಸಮಯ ಬೇಕು. ಈ ಸಮಯದಲ್ಲಿ ನಮ್ಮ ನಡವಳಿಕೆಯನ್ನು ಸಮಾಜ ಅಳೆಯುತ್ತದೆ. ನಡೆ ಹಾಗೂ ನುಡಿಯಲ್ಲಿನ ವ್ಯತ್ಯಾಸವನ್ನು ಅದೇ ಸಮಾಜ ಅಳೆದು ನೋಡುತ್ತದೆ. ನಡೆ ಹಾಗೂ ನುಡಿಯಲ್ಲಿ ವ್ಯತ್ಯಾಸ ಇಲ್ಲದೇ ಇದ್ದಲ್ಲಿ ಮಾತ್ರ ಸಮಾಜ ನಮ್ಮನ್ನು ನಂಬುತ್ತದೆ. ಆ ವಿಶ್ವಾಸ ಗಳಿಸಲು ನಾವು ಪ್ರತಿ ಕ್ಷಣವೂ ಶ್ರಮಿಸುತ್ತೇವೆ. ಇಂದು ವಿಸ್ತಾರ ಡಿಜಿಟಲ್ ಆವೃತ್ತಿಯನ್ನು ಲೋಕಾರ್ಪಣೆ ಮಾಡಿದ್ದೇವೆ. ಇಷ್ಟರಲ್ಲೇ ಟಿವಿ ಮೂಲಕವೂ ನಿಮ್ಮ ಮನೆ ಹಾಗೂ ಮನವನ್ನು ತಲುಪುತ್ತೇವೆ.

ಪ್ರಶ್ನೆ: ಈಗಿನ ʼಸೋಷಿಯಲ್ ಮೀಡಿಯಾ ಜಮಾನಾʼದಲ್ಲಿ ಸಾಂಸ್ಥಿಕ ಡಿಜಿಟಲ್ ಮೀಡಿಯಾದ ಪ್ರಸ್ತುತತೆ ಏನು?
ಉತ್ತರ: ನಾವು ಡೆಮಾಕ್ರಟಿಕ್ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ  ಸಂವಿಧಾನಬದ್ಧ ಮಾನ್ಯತೆ ಇದೆ. ಅದೇ ಸಂದರ್ಭದಲ್ಲಿ ಸಾಂಸ್ಥಿಕ ವ್ಯವಸ್ಥೆಗೂ ಅದೇ ಸಂವಿಧಾನ ಅವಕಾಶ ನೀಡಿದೆ. ಸಾಮಾಜಿಕ ಮಾಧ್ಯಮದ ವಿಚಾರಕ್ಕೆ ಬರುವುದಾದರೆ, ವ್ಯಕ್ತಿ ತನ್ನ ಅನಿಸಿಕೆಯನ್ನು ಇತಿಮಿತಿಯಲ್ಲಿ ವ್ಯಕ್ತಪಡಿಸಬಹುದು. ಆದರೆ ಮಾಧ್ಯಮ ಸಂಸ್ಥೆಯಲ್ಲಿ ಅನಿಸಿಕೆ ಎನ್ನುವುದು ವಿವಿಧ ಹಂತಗಳಲ್ಲಿ ಪರಿಷ್ಕರಣೆಗೆ ಒಳಪಡುತ್ತದೆ.

ಅದಕ್ಕಿಂತ ಮುಖ್ಯವಾಗಿ ಸಾಂಸ್ಥಿಕ ವ್ಯವಸ್ಥೆಯಲ್ಲಿ ಒಡಮೂಡುವ ಸುದ್ದಿ ಹೊಣೆಗಾರಿಕೆಯಿಂದ ಕೂಡಿರುತ್ತದೆ. ಅಭಿಪ್ರಾಯ-ಕೇಂದ್ರಿತ ಸಾಮಾಜಿಕ ಮಾಧ್ಯಮಗಳ ಸಂಖ್ಯೆ ಹೆಚ್ಚಾದಷ್ಟೂ ಸಾಂಸ್ಥಿಕ ಮಾದ್ಯಮಗಳ ಈ ಹೊಣೆಗಾರಿಕೆ ಪ್ರಜ್ಞೆಯೂ‌ ಹೆಚ್ಚಾಗುತ್ತಲೇ ಹೋಗುತ್ತದೆ. ಎಲ್ಲರೂ ವಿಶ್ವಾಸಾರ್ಹ ಮಾಹಿತಿ / ಸುದ್ದಿ ಬಯಸುವ ಕಾಲಮಾನದಲ್ಲಿ, ಸಾಂಸ್ಥಿಕ ಮೀಡಿಯಾದ ಮಹತ್ವ ಮುಂಬರುವ ದಿನಗಳಲ್ಲಿ‌ ಇನ್ನಷ್ಟು ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನ ಬೇಡ.

ವಿಶ್ವಾಸವಿರಲಿ
ವಿಸ್ತಾರ ವೆಬ್‌ಸೈಟ್  : www.vistaranews.com
ಸೋಷಿಯಲ್ ಮೀಡಿಯಾ ವಿವರಗಳು:
Face book: www.facebook.com/vistaranews
Instagram: www.instagram.com/vistaranews/
Twitter: twitter.com/VistaraNews
Koo : www.kooapp.com/profile/vistaranews

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Narayana Murthy : ಕಳೆದ ವರ್ಷ ನವೆಂಬರ್ 10ರಂದು ಬೆಂಗಳೂರಿನಲ್ಲಿ ಜನಿಸಿದ ಏಕಾಗ್ರ ರೋಹನ್ ಮೂರ್ತಿ, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಮೂರನೇ ಮೊಮ್ಮಗಳು. ಏಕಾಗ್ರಹ ರೋಹನ್ ಮೂರ್ತಿ ಮತ್ತು ಅಪರ್ಣಾ ಕೃಷ್ಣನ್ ಅವರ ಪುತ್ರ. ಕೃಷ್ಣ ಮತ್ತು ಅನೌಷ್ಕಾ, ಅಕ್ಷತಾ ಮೂರ್ತಿ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿಯರಾಗಿದ್ದಾರೆ.

VISTARANEWS.COM


on

Narayana Murthy
Koo

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಅವರ ಮೊಮ್ಮಗ ಏಕಾಗ್ರ ರೋಹನ್ ಕೇವಲ ಐದು ತಿಂಗಳ ವಯಸ್ಸಿನಲ್ಲಿ ಇನ್ಫೋಸಿಸ್​ ಸಂಸ್ಥೆಯಿಂದ 4.2 ಕೋಟಿ ರೂ.ಗಳ ಲಾಭಾಂಶವನ್ನು ಪಡೆದುಕೊಂಡಿದ್ದಾರೆ. ನಾರಾಯಣ ಮೂರ್ತಿ ಅವರು ಕಳೆದ ತಿಂಗಳು ಇನ್ಫೋಸಿಸ್​​ನ 240 ಕೋಟಿ ಮೌಲ್ಯದ 15 ಲಕ್ಷ ಷೇರುಗಳನ್ನು (0.04% ಪಾಲನ್ನು ಪುಟ್ಟ ಬಾಲಕನಿಗೆ ನೀಡಿದ್ದರು. ಆ ಷೇರುಗಳಿಗೆ ಈಗ ದೊಡ್ಡ ಮೊತ್ತದ ಡಿವಿಡೆಂಡ್​ ಸಿಕ್ಕಿದೆ.

ಎಕ್ಸ್​ಚೇಂಜ್​ ಫೈಲಿಂಗ್ ಪ್ರಕಾರ, ಏಕಾಗ್ರ ಇನ್ಫೋಸಿಸ್​ನ 15,00,000 ಷೇರುಗಳನ್ನು ಹೊಂದಿದ್ದಾನೆ. ಈ ವ್ಯವಹಾರವನ್ನು “ಆಫ್-ಮಾರ್ಕೆಟ್” ನಡೆಸಲಾಯಿತು ಎಂದು ಫೈಲಿಂಗ್ ಬಹಿರಂಗಪಡಿಸಿದೆ.

ಕಳೆದ ವರ್ಷ ನವೆಂಬರ್ 10ರಂದು ಬೆಂಗಳೂರಿನಲ್ಲಿ ಜನಿಸಿದ ಏಕಾಗ್ರ ರೋಹನ್ ಮೂರ್ತಿ, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಮೂರನೇ ಮೊಮ್ಮಗಳು. ಏಕಾಗ್ರಹ ರೋಹನ್ ಮೂರ್ತಿ ಮತ್ತು ಅಪರ್ಣಾ ಕೃಷ್ಣನ್ ಅವರ ಪುತ್ರ. ಕೃಷ್ಣ ಮತ್ತು ಅನೌಷ್ಕಾ, ಅಕ್ಷತಾ ಮೂರ್ತಿ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿಯರಾಗಿದ್ದಾರೆ.

ಶೇಕಡಾ 30ರಷ್ಟು ಲಾಭ ಹೆಚ್ಚಳ

ಇನ್ಫೋಸಿಸ್ ನಾಲ್ಕನೇ ತ್ರೈಮಾಸಿಕದಲ್ಲಿ ಲಾಭದಲ್ಲಿ 30% ಹೆಚ್ಚಳವನ್ನು ಘೋಷಿಸಿದೆ. ಕಳೆದ ವರ್ಷದ 6,128 ಕೋಟಿ ರೂ.ಗೆ ಹೋಲಿಸಿದರೆ 7,969 ಕೋಟಿ ರೂ.ಗೆ ತಲುಪಿದೆ. ಆದಾಯವು 37,923 ಕೋಟಿ ರೂ.ಗೆ ಸ್ವಲ್ಪ ಏರಿಕೆ ಕಂಡಿದೆ. ಮಾರ್ಚ್ 2024 ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ, ಒಟ್ಟು ಲಾಭವು 8.9% ರಷ್ಟು ಏರಿಕೆಯಾಗಿ 26,233 ಕೋಟಿ ರೂ.ಗೆ ತಲುಪಿದೆ/ ಕಾರ್ಯಾಚರಣೆಗಳಿಂದ ವಾರ್ಷಿಕ ಆದಾಯವು 4.7% ರಷ್ಟು ಏರಿಕೆಯಾಗಿ 1,53,670 ಕೋಟಿ ರೂ.ಗೆ ತಲುಪಿದೆ. ಇನ್ಫೋಸಿಸ್ ಮಂಡಳಿಯು 2024ರ ಹಣಕಾಸು ವರ್ಷದಲ್ಲಿ ಪ್ರತಿ ಷೇರಿಗೆ 20 ರೂ.ಗಳ ಅಂತಿಮ ಲಾಭಾಂಶ ಶಿಫಾರಸು ಮಾಡಿದೆ. ಜೊತೆಗೆ ಪ್ರತಿ ಷೇರಿಗೆ 8 ರೂ.ಗಳ ವಿಶೇಷ ಲಾಭಾಂಶವನ್ನು ಶಿಫಾರಸು ಮಾಡಿದೆ. ಹೆಚ್ಚುವರಿಯಾಗಿ, ಇನ್ಫೋಸಿಸ್ ಜರ್ಮನಿಯ ಇನ್-ಟೆಕ್ ಸಂಸ್ಥೆಯನ್ನು 450 ಮಿಲಿಯನ್ ಯುರೋಗಳ ಒಪ್ಪಂದದಲ್ಲಿ ಸ್ವಾಧೀನಪಡಿಸಿಕೊಳ್ಳಲು ಯೋಜಿಸಿದೆ.

ಇದನ್ನೂ ಓದಿ: CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ

ಮುಂದಿನ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ 1-3% ಆದಾಯದ ಬೆಳವಣಿಗೆಯನ್ನು ನಿರೀಕ್ಷಿಸುತ್ತದೆ. ಸಂಶೋಧನಾ ಸಂಸ್ಥೆ ಮೋತಿಲಾಲ್ ಓಸ್ವಾಲ್ ಪ್ರಕಾರ, 2025ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಆದಾಯ ನಿರೀಕ್ಷೆಗಿಂತ ಕಡಿಮೆಯಾಗಿದೆ. ಆದರೆ ಇನ್ಫೋಸಿಸ್ ಮಧ್ಯಮಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದು ಎಂದು ಅವರು ಊಹೆ ಮಾಡಿದ್ದಾರೆ. ಇನ್ಫೋಸಿಸ್ 2025 ರ ಹಣಕಾಸು ವರ್ಷದ ನಂತರ ವೇಗವಾಗಿ ಬೆಳೆಯಲು ಪ್ರಾರಂಭಿಸಬಹುದು ಎಂದು ಹೇಳಿದೆ. ಟಿಸಿಎಸ್​ನಂತ ಕಂಪನಿಗಳಿಗೆ ಹೋಲಿಸಿದರೆ ಇನ್ಪೋಸಿಸ್​ ಷೇರುಗಳು ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಬಿಸಿನೆಸ್ ಟುಡೇ ವರದಿ ಮಾಡಿದೆ.

Continue Reading

ರಾಜಕೀಯ

Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

Neha Murder Case: ಇದನ್ನು ಲವ್‌ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತನಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಆರ್.‌ ಆಶೋಕ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Neha Murder case Congress creates jihadi Karnataka R Ashok
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಕೊಲೆ (Neha Murder Case) ಮಾಡಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಆರ್. ಅಶೋಕ್‌ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್‌ ಜಿಹಾದ್‌, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್‌ ಜಿಹಾದ್‌ಗೆ ಕಾಂಗ್ರೆಸ್‌ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಕರ್ನಾಟಕವನ್ನು ಡಾನ್‌ಗಳು ನಡೆಸುತ್ತಿರುವಂತಹ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದರು.

ಇದನ್ನು ಲವ್‌ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತನಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.

ಲವ್‌ ಜಿಹಾದ್‌ ಮಾಡುವವರಿಗೆ ಪಾಸ್‌ಪೋರ್ಟ್‌

ಲವ್‌ ಜಿಹಾದ್‌, ಕೊಲೆ, ಗಲಭೆ ಮಾಡುವವರಿಗೆ ಮಾಡುವವರಿಗೆ ಪಾಸ್‌ಪೋರ್ಟ್‌ ಹಾಗೂ ವೀಸಾ ನೀಡಲಾಗಿದೆ. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿದ್ದಕ್ಕೆ ಆ ಪ್ರಕರಣವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಾಗ ಪೊಲೀಸರು ಏನೂ ಮಾಡಲಿಲ್ಲ. ಬಾಂಬ್‌ ಸ್ಪೋಟವನ್ನು ಸಚಿವರೇ ವ್ಯಾಪಾರದ ವ್ಯಾಜ್ಯ ಎಂದರು. ರಾಮೋತ್ಸವದಲ್ಲಿ ಜೈ ಶ್ರೀರಾಮ್‌ ಎಂದಾಗ ಮುಸ್ಲಿಮರು ಹಲ್ಲೆ ಮಾಡಿದ್ದರು. ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ಗದಗದಲ್ಲಿ ಒಂದೇ ಕುಟುಂಬದ ಕೊಲೆಯಾಗಿದೆ. ಕುಣಿಗಲ್‌ನಲ್ಲಿ ಬಿಜೆಪಿ ಬೆಂಬಲಿಗನ ತೋಟಕ್ಕೆ ಬೆಂಕಿ ಹಚ್ಚಲಾಗಿದೆ. ಚಿತ್ರನಟಿಗೆ ಹಲ್ಲೆ ಮಾಡಲಾಗಿದೆ. ಕೋಲಾರದಲ್ಲಿ ಶ್ರೀರಾಮನ ಫ್ಲೆಕ್ಸ್‌ ಕಿತ್ತುಹಾಕುವ ಕೆಲಸ ನಡೆದಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ ಏನೂ ಮಾಡಿಲ್ಲ. ಓಲೈಕೆ ರಾಜಕಾರಣ ಪರಾಕಾಷ್ಠೆಗೆ ತಲುಪಿದೆ ಎಂದು ದೂರಿದರು.

ಕಾಂಗ್ರೆಸ್‌ನ ಹೊಸ ತೆರಿಗೆ

ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದು, ಒಬ್ಬ ಬಿಲ್ಡರ್‌ 7-8 ಕೋಟಿ ರೂ. ಕಾಂಗ್ರೆಸ್‌ಗೆ ಕೊಡಬೇಕಿದೆ. ಇದೇ ಕಾಂಗ್ರೆಸ್‌ನ ಹೊಸ ತೆರಿಗೆ. ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳನ್ನು ತೆರಿಗೆಯ ಮೂಲಕವೇ ನೀಡಲಾಗುತ್ತಿದೆ. ಯಾವುದೇ ಯೋಜನೆಯನ್ನು ಜೇಬಿನಿಂದ ನೀಡುತ್ತಿಲ್ಲ. ಇದರಿಂದ ಸಂಗ್ರಹವಾದ ಹಣವನ್ನು ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ. ಜೆಸಿಬಿಯಲ್ಲಿ ಅಗೆಯುವಂತೆ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರ್.‌ ಅಶೋಕ್‌ ಕಿಡಿಕಾರಿದರು.

ಕಾಂಗ್ರೆಸ್‌ ಕೋಟ್ಯಂತರ ಜನರಿಗೆ ಚೊಂಬು ನೀಡಿದೆ. 10 ಕೆಜಿ ಅಕ್ಕಿ ಎಂದು ಹೇಳಿ ಒಂದು ಕೆಜಿ ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಲಾಗಿದೆ. ಕೃಷ್ಣೆಯ ಕಣ್ಣೀರು ಒರೆಸಲು 50 ಸಾವಿರ ಕೋಟಿ ರೂ. ಎಂದು 5 ರೂಪಾಯಿ ನೀಡಿಲ್ಲ. ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲೂ ಹಗರಣ ಮಾಡಲಾಗಿದೆ. ಭೂಮಿ, ಆಕಾಶ, ಪತ್ರಿಕಾ ರಂಗದಲ್ಲೂ ಕಾಂಗ್ರೆಸ್‌ ಲೂಟಿ ಮಾಡಿದೆ. ಜನರಿಗೆ ಒಂದು ಚೊಂಬು ನೀರು ಕೂಡ ನೀಡಿಲ್ಲ ಎಂದರು.

ಕಾಂಗ್ರೆಸ್‌ಗೆ ಸವಾಲು

ದೇಶ ಆಳಿದ ಹಾಗೂ ರಾಜ್ಯವನ್ನು ಆಳುತ್ತಿರುವ ಕಾಂಗ್ರೆಸ್‌ ಸರ್ಕಾರ ಏನು ಕೊಡುಗೆ ನೀಡಿದೆ ಎನ್ನುವುದನ್ನು ತಿಳಿಸಲಿ. ಈ ಬಾರಿ ಕರ್ನಾಟಕದ ಜಿಡಿಪಿ ದೇಶದ ಜಿಡಿಪಿಗಿಂತ ಕಡಿಮೆಯಾಗಿದೆ. ರಾಜ್ಯದ ಆರ್ಥಿಕ ಸ್ಥಿತಿ ಏನು ಎನ್ನುವುದನ್ನು ಬಜೆಟ್‌ನಲ್ಲಿ ತಿಳಿಸಿಲ್ಲ. ಈ ಬಾರಿಯ ಆದಾಯ ತೀವ್ರವಾಗಿ ಇಳಿಕೆಯಾಗಿದೆ. ಅಭಿವೃದ್ಧಿ ಕಾರ್ಯಗಳು ಇಲ್ಲವಾಗಿರುವುದರಿಂದ ಜಿಡಿಪಿ ಬೆಳೆಯುವುದಿಲ್ಲ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading

Lok Sabha Election 2024

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

VVPAT Verification: ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ.

VISTARANEWS.COM


on

evm vvpat verification lok sbha election 2024
Koo

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

Continue Reading

ಕರ್ನಾಟಕ

Neha Murder Case: ಲವ್ ಜಿಹಾದ್ ಸಮರ್ಥಿಸಿಕೊಂಡಿದ್ದ ಕೈಗಳಿಂದಲೇ ಆರೋಪಿ ರಕ್ಷಣೆಗೆ ಹೊಂಚು: ಜೆಡಿಎಸ್‌ ಕಿಡಿ

Neha Murder Case: ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರ್ಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

VISTARANEWS.COM


on

Neha Murder case JDS slams hands for defending love jihad to protect accused
Koo

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳನ್ನು ಪ್ರೀತಿಸಲು ನಿರಾಕರಣೆ ಮಾಡಿದಳು ಎಂಬ ಕಾರಣಕ್ಕೆ ಮಾಡಿದ ಹತ್ಯೆ (‌Neha Murder Case) ಪ್ರಕರಣ ಖಂಡನೀಯ. ಜೀವ ತೆಗೆದ ಪಾಪಿಯನ್ನು ಸುಮ್ಮನೆ ಬಿಡಬಾರದು. ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ. ಲವ್ ಜಿಹಾದ್ (Love Jihad) ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ನೇಹಾ ಹಿರೇಮಠ (Neha Heremath) ಅವರನ್ನು ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ಜೆಡಿಎಸ್‌ (JDS Karnataka) ಕಿಡಿಕಾರಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಆರೋಪ ಮಾಡಿದೆ.

ಜೆಡಿಎಸ್‌ ಪೋಸ್ಟ್‌ನಲ್ಲೇನಿದೆ?

ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದೆ.

ಇದನ್ನೂ ಓದಿ: Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರ್ಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಪರಮ ಪಾಪಿಯನ್ನು ಸುಮ್ಮನೆ ಬಿಡಬಾರದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರಕಾರ ಕಟ್ಟೆಚ್ಚರ ವಹಿಸಬೇಕು. ಆ ನತದೃಷ್ಟ ವಿದ್ಯಾರ್ಥಿನಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜೆಡಿಎಸ್ ತಿಳಿಸಿದೆ.

ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್‌ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್‌, ಫಯಾಜ್‌ ಐಸಿಸ್‌ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಆತ ಎಲ್ಲಿ ತರಬೇತಿ ಪಡೆದಿದ್ದಾನೆ? ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಬೆಳೆಸಿದ ವಿಷಬೀಜವಿದು. ಕಾಂಗ್ರೆಸ್ ಹುಟ್ಟಿದಾಗ ಆ ಪಕ್ಷದ ನಾಯಕರು ಬ್ರಿಟಿಷರ ಪರವಿದ್ದರು. ಈಗ ಮುಸ್ಲಿಮರು, ಕೊಲೆಗಡುಕರ ಪರ‌ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹಚ್ಚಿಸಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಿ ಅವರ ಮನೆಯನ್ನು ಬಹಿಷ್ಕರಿಸಬೇಕು. ವಕೀಲರು ಅವನ ಪರ ವಾದ ಮಾಡಲು ನಿಲ್ಲಬಾರದು. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತೆದೆಯೋ ಅಲ್ಲಿಯವರೆಗೆ ಈ ರೀತಿ ಕೊಲೆಗಳು ಆಗುತ್ತಲೇ ಇರುತ್ತವೆ ಎಂದು ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಹಾಡಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್‌ಗೆ ಭೇಟಿ ನೀಡಿ ನೇಹಾ ಕುಟುಂಬದವರಿಗೆ ಸಾಂತ್ವನ ಹೇಳಿದ ಬಸವರಾಜ ಬೊಮ್ಮಾಯಿ, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗಿನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದವರು ಕಗ್ಗೊಲೆಯಾಗಿದೆ. ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೇಲೆ ಹಲ್ಲೆಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗೂಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಹೇಳಿದರು.

ಇದನ್ನು ಕೇವಲ ವೈಯಕ್ತಿಕ ಘಟನೆ ಎಂದು ನೋಡಬಾರದು. ಇಂಥದ್ದು ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ? ಈ ಸರ್ಕಾರದ ಅವಧಿಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗಿನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ ಕಮಿಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಲ್ಲ ಕುಟುಂಬಗಳು ಭಯಭೀತರಾಗಿದ್ದಾರೆ. ಅಪರಾಧ ವಿಭಾಗದ ಡಿಜಿಪಿ ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕುಟುಂಬಕ್ಕೆ ಸಾಂತ್ವನ

ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

ಇದನ್ನೂ ಓದಿ: Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Continue Reading
Advertisement
Fraud Case in Bengaluru
ಬೆಂಗಳೂರು3 mins ago

Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Jackfruit benefits
ಆರೋಗ್ಯ4 mins ago

Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

Narayana Murthy
ಪ್ರಮುಖ ಸುದ್ದಿ5 mins ago

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Neha Murder case Congress creates jihadi Karnataka R Ashok
ರಾಜಕೀಯ6 mins ago

Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

Group Clash
ಕರ್ನಾಟಕ15 mins ago

Group Clash: ರಾಮ ನವಮಿಯಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ; ಇಬ್ಬರಿಗೆ ಚಾಕು ಇರಿತ

IPL 2024
ಕ್ರಿಕೆಟ್16 mins ago

IPL 2024: ಅಭ್ಯಾಸದ ವೇಳೆ ರಾಹುಲ್​ಗೆ ಪತ್ನಿಯಿಂದ ಸಾಥ್​; ವಿಡಿಯೊ ವೈರಲ್​

Rain in Karnataka
ಮಳೆ31 mins ago

Weather Report: ಬೆಂಗಳೂರಿನ ಜನ ಮಳೆಗಾಗಿ ಮೇವರೆಗೆ ಕಾಯಬೇಕು!

Tumkur Lok Sabha constituency BJP candidate Somanna election campaign in various places of Koratagare
ತುಮಕೂರು36 mins ago

Lok Sabha Election 2024: ಕೇಂದ್ರಿಯ ವಿದ್ಯಾಲಯ ಸ್ಥಾಪನೆಗೆ ನನ್ನನ್ನು ಬೆಂಬಲಿಸಿ: ವಿ. ಸೋಮಣ್ಣ

Lok Sabha Election 2024
Lok Sabha Election 202439 mins ago

Lok Sabha Election 2024: ಹಕ್ಕು ಚಲಾಯಿಸಿ ಮಾದರಿಯಾದ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ

Yuva Movie streaming ott yuva rajkumar
ಸ್ಯಾಂಡಲ್ ವುಡ್40 mins ago

Yuva Movie: ಒಟಿಟಿಗೆ ಬಂದಾಯ್ತು ʻಯುವʼ: ಸಿನಿಮಾ ನೋಡಬಹುದು, ಆದರೆ….

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ2 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ12 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌