Guru Sandesha | ಉನ್ನತ ಸ್ಥಾನವಲ್ಲ; ಆದರ್ಶ ಮುಖ್ಯ - Vistara News

ಅಧ್ಯಾತ್ಮ

Guru Sandesha | ಉನ್ನತ ಸ್ಥಾನವಲ್ಲ; ಆದರ್ಶ ಮುಖ್ಯ

ಪ್ರಪಂಚದಲ್ಲಿ ಅನೇಕರಿಗೆ ತಮ್ಮ ವ್ಯಕ್ತಿತ್ವ ಗುಣನಡತೆಗಿಂತಲೂ, ತಾವಿರುವ ಸ್ಥಾನ, ಅಧಿಕಾರ, ಪದವಿಗಳ ಬಗ್ಗೆ ವಿಶೇಷ ಒಲವು-ಅಹಂಕಾರವಿರುತ್ತದೆ. ಎಲ್ಲರೂ ಗೌರವ ನೀಡಬೇಕೆಂಬ ನಿರೀಕ್ಷೆಯಲ್ಲಿರುತ್ತಾರೆ. ಆದರೆ ವಾಸ್ತವದಲ್ಲಿ ಗೌರವ ಪಡೆಯುವ ಮಾರ್ಗ ಯಾವುದು?

VISTARANEWS.COM


on

veerendra heggade
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Guru Sandesha

ಪ್ರಪಂಚದಲ್ಲಿ ಅನೇಕರಿಗೆ ತಮ್ಮ ವ್ಯಕ್ತಿತ್ವ ಗುಣನಡತೆಗಿಂತಲೂ, ತಾವಿರುವ ಸ್ಥಾನ, ಅಧಿಕಾರ, ಪದವಿಗಳ ಬಗ್ಗೆ ವಿಶೇಷ ಒಲವು-ಅಹಂಕಾರವಿರುತ್ತದೆ. ಅಂಥ ಅಹಂಕಾರದ ಹಿನ್ನೆಲೆಯಲ್ಲೇ ಅವರು ಎಲ್ಲೆಲ್ಲೂ ಗೌರವ ಸ್ಥಾನ, ಪದವಿಗಳ ನಿರೀಕ್ಷೆಯಲ್ಲಿರುತ್ತಾರೆ. ಆದರೆ ವಾಸ್ತವದಲ್ಲಿ ಗೌರವ ಪಡೆಯುವ ಮಾರ್ಗ ಯಾವುದು? ಎಂಬುದನ್ನು ನಿರೂಪಿಸುವ ಪ್ರಸಂಗವೊಂದು ಇಲ್ಲಿದೆ.

ಜಪಾನಿನಲ್ಲಿ ಸಂತರಾದ ಮೇಹಜೀ ಎಂಬವರು ತಮ್ಮ ಪಾಂಡಿತ್ಯ ಮತ್ತು ವೈರಾಗ್ಯಪೂರ್ಣ ಸ್ವಭಾವದಿಂದಾಗಿ ವಿಖ್ಯಾತರಾಗಿದ್ದರು. ಜಿಜ್ಞಾಸುಗಳು ಅವರ ಬಳಿ ಬಂದು ತಮ್ಮ ಸಮಸ್ಯೆಗಳನ್ನು ನಿವೇದಿಸಿ, ಸೂಕ್ತ ಪರಿಹಾರವನ್ನು ಪಡೆಯುತ್ತಿದ್ದರು. ಒಮ್ಮೆ ಜಪಾನಿನ ಪ್ರಾಂತವೊಂದರ ರಾಜ್ಯಪಾಲರಾದ ಕಿಯಾಜಾರಿ ಎಂಬವರು ಅವರ ಬಳಿ ಬಂದರು. ಹಾಗೂ ತಮ್ಮ ಉನ್ನತ ಪ್ರಕಾರದ ಅಹಂಕಾರದಿಂದ ಸಂತರನ್ನು ಭೇಟಿಯಾಗಲು ಪತ್ರ ಬರೆದರು. ಪತ್ರದಲ್ಲಿ ಕಿಯಾಜಾರಿಯವರ ಪದವಿ-ಹುದ್ದೆಯ ಉಲ್ಲೇಖವಿತ್ತು.

ಪತ್ರವನ್ನು ಓದಿದ ಸಂತರು ರಾಜ್ಯಪಾಲರ ಸಹಾಯಕ ಸಚಿವನನ್ನು ಕರೆದು ಹೇಳಿದರು; ”ನೀವು ನಿಮ್ಮ ರಾಜ್ಯಪಾಲರಿಗೆ ತಿಳಿಸಿ, ನನಗೆ ರಾಜನೀತಿಯಲ್ಲಿ ಆಸಕ್ತಿಯಿಲ್ಲ. ಕೇವಲ ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಚರ್ಚಿಸಬಯಸುತ್ತೇನೆ ಎಂಬ ಸಂದೇಶವನ್ನು ರಾಜ್ಯಪಾಲರಿಗೆ ಮುಟ್ಟಿಸಿ” ಎಂದರು. ಸಹಾಯಕನು ಸಂತರ ಮಾತುಗಳನ್ನು ರಾಜ್ಯಪಾಲರಿಗೆ ತಿಳಿಸಿದಾಗ ಅವರಿಗೆ ಪಶ್ಚಾತ್ತಾಪವಾಗಿ, ಅವರು ಸಂತರನ್ನು ಸ್ವತಃ ಭೇಟಿಯಾಗಿ ಆಶೀರ್ವಾದ ಪಡೆಯಲು ಬಯಸಿದರು. ಅಂತೆಯೇ ಸಂತರ ಬಳಿಗೆ ಕೇವಲ ತಮ್ಮ ಹೆಸರನ್ನು ಮಾತ್ರ ಬರೆದಿದ್ದ ಚೀಟಿಯೊಂದನ್ನು ಕಳುಹಿಸಿದಾಗ ಸಂದರ್ಶನಕ್ಕೆ ಅನುಮತಿ ದೊರಕಿತು. ಸಂತರು ಹಾಗೂ ರಾಜ್ಯಪಾಲರು ಲೋಕಾಭಿರಾಮವಾಗಿ ಧರ್ಮ-ಕರ್ಮ, ದೇವರು ಮೊದಲಾದ ವಿಷಯಗಳನ್ನು ಚರ್ಚಿಸಿದರು.

ಕೊನೆಗೆ ಸಂತರಿಗೆ ಧನ್ಯವಾದಗಳನ್ನು ಅರ್ಪಿಸಿದ ರಾಜ್ಯಪಾಲರು ನನಗೆ ತಮ್ಮ ಸಂದೇಶದಿಂದ ಮಾರ್ಗದರ್ಶನ ನೀಡಿ ಎಂದು ಕೇಳಿಕೊಂಡರು. ಆಗ ಸಂತರು ಹೇಳಿದರು ಧರ್ಮದ ಸಾರವು ಸೇವೆ, ಪರೋಪಕಾರ, ನ್ಯಾಯ, ಕರುಣೆಗ ಳಂಥ ಸದ್ಗುಣಗಳಲ್ಲಿ ಅಡಗಿದೆ ಎಂದರು. ಇದನ್ನು ಕೇಳಿ ಅರ್ಥಮಾಡಿಕೊಂಡ ರಾಜ್ಯಪಾಲರು ಸಂತರು ನೀಡಿದ ಮಾರ್ಗದರ್ಶನದಂತೆ ನಡೆಯಲು ನಿರ್ಧರಿಸಿದರು.

ಈ ಪ್ರಪಂಚದಲ್ಲಿ ಉನ್ನತ ತತ್ವಾದರ್ಶಗಳು ಮುಖ್ಯ. ಸ್ಥಾನ, ಪದವಿಗಳು ಮುಖ್ಯವಲ್ಲ. ಇದನ್ನು ಅರ್ಥಮಾಡಿಕೊಂಡಾಗ ಪ್ರಗತಿಯ ದಾರಿ ಗೋಚರಿಸುತ್ತದೆ.

ಇದನ್ನೂ ಓದಿ| ಪುರಾಣ ಕತೆ: ಬ್ರಹ್ಮಚಾರಿ ಹನುಮಂತನಿಗೂ ಒಬ್ಬ ಮಗನಿದ್ದ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Vastu Tips: ನೆಲ ಒರೆಸುವಾಗಲೂ ವಾಸ್ತು ನಿಯಮ ಪಾಲಿಸಲೇಬೇಕು!

ಮನೆಯನ್ನು ಸ್ವಚ್ಛ ಮಾಡುವಾಗಲೂ ಪಾಲಿಸಬೇಕಾದ ವಾಸ್ತು ನಿಯಮಗಳಿವೆ. ಅದರಲ್ಲೂ ಮನೆ ಒರೆಸುವ ಕುರಿತು ವಾಸ್ತು ಶಾಸ್ತ್ರದಲ್ಲಿ (Vastu Tips) ಏನು ಹೇಳಿದೆ ಗೊತ್ತೇ? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಮನೆಯ (home) ಒಳಾಂಗಣ, ಹೊರಾಂಗಣ ಸ್ವಚ್ಛತೆ (cleaning) ಬಗ್ಗೆ ನಾವೆಲ್ಲ ಅತೀ ಹೆಚ್ಚು ಕಾಳಜಿ ವಹಿಸುತ್ತೇವೆ. ಆದರೆ ಇದರಲ್ಲೂ ವಾಸ್ತು ನಿಯಮ (Vastu Tips) ಪಾಲಿಸುವುದು ಬಹು ಮುಖ್ಯ ಎಂಬುದನ್ನು ಮರೆಯಬಾರದು. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ಮನೆಯಿಂದ ಕಸ (garbage) ಹೊರಗೆ ಹಾಕುವ, ಕೊಳಕು ನೀರು ಹೊರ ಚೆಲ್ಲುವ ಬಗ್ಗೆಯೂ ವಾಸ್ತು ಶಾಸ್ತ್ರದಲ್ಲಿ ನಿಯಮಗಳಿವೆ. ಇದನ್ನು ಪಾಲಿಸಿದರೆ ಮನೆಯ ವಾಸ್ತುವಿಗೆ ಬಹಳ ಒಳ್ಳೆಯದು.

ಲಕ್ಷ್ಮಿ ದೇವಿಯು ಯಾವಾಗಲೂ ಸ್ವಚ್ಛವಾಗಿರುವ ಮನೆಗಳಲ್ಲಿ ನೆಲೆಸುತ್ತಾಳೆ. ಮನೆಯನ್ನು ಸ್ವಚ್ಛಗೊಳಿಸುವುದು ಮತ್ತು ಒರೆಸುವುದು ನಿತ್ಯ ಮಾಡಲೇಬೇಕಾದ ಸಾಮಾನ್ಯ ವಿಷಯ. ಮನೆಯ ಕೊಳೆಯನ್ನು ನಿತ್ಯ ಶುಚಿಗೊಳಿಸುವುದರಿಂದ ಮನೆಯಿಂದ ರೋಗಗಳನ್ನು ದೂರ ಮಾಡಬಹುದು ಮತ್ತು ಲಕ್ಷ್ಮಿ ದೇವಿಯು ಮನೆಯಲ್ಲಿ ಸಂತೋಷವಾಗಿ ನೆಲೆಯಾಗುವಂತೆ ಮಾಡಬಹುದು. ವಾಸ್ತು ಶಾಸ್ತ್ರದಲ್ಲಿ ನೆಲ ಒರೆಸುವ ಕೆಲವು ನಿಯಮಗಳನ್ನು ಉಲ್ಲೇಖಿಸಲಾಗಿದೆ. ಮನೆಯ ಸ್ವಚ್ಛತೆ ಮಾಡುವ ನೆಲ ಒರೆಸುವಾಗ ಕೆಲವು ತಪ್ಪುಗಳನ್ನು ಅಪ್ಪಿತಪ್ಪಿಯೂ ಮಾಡಬಾರದು.


ಮಾಪ್ ಅನ್ನು ಬಾಲ್ಕನಿಯಲ್ಲಿ ಇಡಬೇಡಿ

ಮನೆಯ ಬಾಲ್ಕನಿಯಲ್ಲಿ ಮಾಪ್ ಅನ್ನು ಎಂದಿಗೂ ನಿಲ್ಲಿಸಬಾರದು. ಮಾಪ್ ಮಾಡುವಾಗ ಬಟ್ಟೆಯನ್ನು ಹಿಸುಕಿ ಮತ್ತು ಸರಿಯಾದ ಸ್ಥಳದಲ್ಲಿ ಇರಿಸಿ. ಇದನ್ನು ಮಾಡದಿದ್ದರೆ, ಭಾರೀ ನಷ್ಟವನ್ನು ಅನುಭವಿಸಬೇಕಾಗಬಹುದು.

ತಕ್ಷಣ ಮಾಪ್ ಮಾಡಬಾರದು

ಮನೆಯಿಂದ ಯಾರಾದರೂ ಹೊರಗೆ ಹೋಗುತ್ತಿದ್ದರೆ ಅವರು ಹೋದ ತಕ್ಷಣ ನೆಲವನ್ನು ಒರೆಸಬಾರದು. ಹೀಗೆ ಮಾಡುವುದರಿಂದ ಹೊರಗೆ ಹೋದವರ ಆರೋಗ್ಯ ಕೆಡುತ್ತದೆ. ಅವರು ತಮ್ಮ ಕೆಲಸ ಅಥವಾ ವ್ಯವಹಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗಬಹುದು.

ಮುರಿದ ಬಕೆಟ್ ಬಳಸದಿರಿ

ಜ್ಯೋತಿಷ್ಯಶಾಸ್ತ್ರದ ಪ್ರಕಾರ ನೆಲವನ್ನು ಒರೆಸುವಾಗ ತಪ್ಪಾಗಿಯೂ ಮುರಿದ ಬಕೆಟ್‌ನಲ್ಲಿ ನೆಲವನ್ನು ಒರೆಸದಂತೆ ವಿಶೇಷ ಕಾಳಜಿ ವಹಿಸಿ. ಮುರಿದ ಬಕೆಟ್ ಕೆಂಪು ಬಣ್ಣದಲ್ಲಿರಬಾರದು. ಅಪ್ಪಿತಪ್ಪಿಯೂ ಮಧ್ಯಾಹ್ನ ನೆಲವನ್ನು ಒರೆಸಬಾರದು. ಬೆಳಗ್ಗೆ ನೆಲವನ್ನು ಒರೆಸುವುದು ಸರಿಯಾದ ಸಮಯ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ Vastu Tips: ಮನೆಯಲ್ಲಿ ಚಪ್ಪಲಿ, ಶೂ ಎಲ್ಲೆಂದರಲ್ಲಿ ಇಟ್ಟು ಸಂಕಷ್ಟ ಮೈಮೇಲೆ ಎಳೆದುಕೊಳ್ಳಬೇಡಿ!

ಹೊಸ್ತಿಲಲ್ಲಿ ನೀರು ಸುರಿಯಬಾರದು

ಹೆಚ್ಚಿನ ಜನರು ಇದನ್ನು ಮಾಡುತ್ತಾರೆ. ನೆಲವನ್ನು ಒರೆಸಿದ ಅನಂತರ ಅವರು ಹೊಸ್ತಿಲಲ್ಲಿ ಕೊಳಕು ನೀರನ್ನು ಸುರಿಯುತ್ತಾರೆ. ಆದರೆ ಇದನ್ನು ಮಾಡುವುದು ತುಂಬಾ ಅಶುಭವೆಂದು ಪರಿಗಣಿಸಲಾಗಿದೆ. ವಾಸ್ತವವಾಗಿ, ಮನೆಯ ಹೊಸ್ತಿಲನ್ನು ಲಕ್ಷ್ಮಿ ದೇವಿಯ ಪ್ರವೇಶ ಎಂದು ಪರಿಗಣಿಸಲಾಗುತ್ತದೆ. ಅಲ್ಲಿ ಕೊಳಕು ನೀರನ್ನು ಸುರಿದರೆ ಲಕ್ಷ್ಮಿ ದೇವಿಗೆ ಅವಮಾನ ಮಾಡಿದಂತೆ. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮೇಲೆ ಕೋಪಗೊಳ್ಳಬಹುದು.

Continue Reading

ಧಾರ್ಮಿಕ

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು

ನಮ್ಮ ದೈನಂದಿನ ಜೀವನದಲ್ಲಿ ವಾಸ್ತು ಶಾಸ್ತ್ರದ (Vastu Tips) ಪ್ರಭಾವವು ಗಾಢವಾಗಿದೆ. ಮನೆ ಅಥವಾ ಕಾರ್ಯಸ್ಥಳದೊಳಗೆ ಸರಿಯಾದ ವಸ್ತುಗಳನ್ನು ಸರಿಯಾದ ಸ್ಥಳಗಳಲ್ಲಿ ಇರಿಸಿದಾಗ ಅವು ಶಕ್ತಿಯ ಹರಿವನ್ನು ಸಮನ್ವಯಗೊಳಿಸುತ್ತವೆ. ಉತ್ತಮ ಆರೋಗ್ಯ, ಆರ್ಥಿಕ ಸ್ಥಿರತೆ ಮತ್ತು ಸಂತೋಷವನ್ನು ನೀಡುವ ಉಡುಗೊರೆಗಳನ್ನು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದ್ದು, ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವಾಗ ಹೆಚ್ಚು ಚಿಂತೆ ಮಾಡದೇ ಇವುಗಳನ್ನು ಆಯ್ಕೆ ಮಾಡಬಹುದು.

VISTARANEWS.COM


on

By

Vastu Tips
Koo

ಉಡುಗೊರೆಗಳನ್ನು (Gift) ಸ್ವೀಕರಿಸುವುದು ಯಾರಿಗೆ ಇಷ್ಟವಿಲ್ಲ? ಪ್ರತಿಯೊಬ್ಬರೂ ಉಡುಗೊರೆ ನೀಡುವಾಗ ಅದು ತೆಗೆದುಕೊಳ್ಳುವವರ ಮನಕ್ಕೆ ಇಷ್ಟವಾಗುವಂತಿರಬೇಕು ಎಂದು ಎಲ್ಲರೂ ಬಯಸುತ್ತಾರೆ. ಉಡುಗೊರೆಗಳು ಪ್ರೀತಿಯ ಶುದ್ಧ ಸೂಚಕವಾಗಿದೆ ಮತ್ತು ಅವು ಭಾವನಾತ್ಮಕ ಮತ್ತು ಆಂತರಿಕ ಮೌಲ್ಯವನ್ನು ಹೊಂದಿರುತ್ತದೆ. ಹೀಗಾಗಿ ಪ್ರೀತಿ ಪಾತ್ರರಿಗೆ ಉಡುಗೊರೆಗಳನ್ನು ಆಯ್ಕೆ ಮಾಡುವಾಗ ಯೋಚನೆ ಕಾಡುವುದು ಸಹಜ.

ನಾವು ಕೊಡುವ ಉಡುಗೊರೆಯು ಸ್ವೀಕರಿಸುವವರ ಜೀವನಕ್ಕೆ ಸಮೃದ್ಧಿ (prosperity), ಸಕಾರಾತ್ಮಕತೆ (positivity) ಮತ್ತು ಸಾಮರಸ್ಯವನ್ನು (harmony) ತರುವಂತೆ ಇರಬೇಕು ಎನ್ನುತ್ತದೆ ವಾಸ್ತುಶಾಸ್ತ್ರ (Vastu Tips). ಉಡುಗೊರೆಗಳನ್ನು ಆಯ್ಕೆ ಮಾಡಲು ವಾಸ್ತು ಶಾಸ್ತ್ರವು ಕೆಲವೊಂದು ಮಾರ್ಗದರ್ಶನವನ್ನು ನೀಡುತ್ತದೆ.

ವಾಸ್ತು ತತ್ತ್ವಗಳೊಂದಿಗೆ ಜೋಡಿಸಲಾದ ಉಡುಗೊರೆಯನ್ನು ಪ್ರೀತಿ ಪಾತ್ರರಿಗೆ ನೀಡಿದಾಗ ಇದು ಕೇವಲ ವಸ್ತುವನ್ನು ನೀಡುವುದಿಲ್ಲ. ಅದರೊಂದಿಗೆ ಅದೃಷ್ಟ ಮತ್ತು ಧನಾತ್ಮಕ ಶಕ್ತಿಯನ್ನು ನೀಡುತ್ತೀರಿ.

ಸ್ವೀಕರಿಸುವವರ ಯೋಗಕ್ಷೇಮ ಮತ್ತು ಯಶಸ್ಸನ್ನು ಹೆಚ್ಚಿಸುವ ನಿರ್ದಿಷ್ಟ ಉಡುಗೊರೆಗಳನ್ನು ವಾಸ್ತು ಶಾಸ್ತ್ರವು ಸೂಚಿಸುತ್ತದೆ. ಈ ಉಡುಗೊರೆಗಳು ಯಾವುದೇ ಚಿಂತೆ ಇಲ್ಲದೆ ಆಯ್ಕೆ ಮಾಡಬಹುದು. ಇದು ಉಡುಗೊರೆ ಸ್ವೀಕರಿಸುವವರ ಪರಿಸರದಲ್ಲಿನ ಶಕ್ತಿಯನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಜೀವನದ ವಿವಿಧ ಅಂಶಗಳಲ್ಲಿ ಅವರಿಗೆ ಅನುಕೂಲಕರವಾಗಿರುತ್ತದೆ.

ಸಮೃದ್ಧಿ ಮತ್ತು ಸಕಾರಾತ್ಮಕತೆಯನ್ನು ತರುವ 7 ಅದೃಷ್ಟದ ಉಡುಗೊರೆಗಳು

ಲಾಫಿಂಗ್ ಬುದ್ಧ

ಲಾಫಿಂಗ್ ಬುದ್ಧ ಅನೇಕರ ಕಚೇರಿ ಮತ್ತು ಮನೆಗಳಲ್ಲಿ ಕಂಡುಬರುವ ಜನಪ್ರಿಯ ಅಲಂಕಾರಿಕ ವಸ್ತುವಾಗಿದೆ. ಹರ್ಷಚಿತ್ತದ ವ್ಯಕ್ತಿ ಯಾವುದೇ ಜಾಗದಲ್ಲಿ ಸಂತೋಷವನ್ನು ತರುತ್ತದೆ ಎನ್ನುವ ನಂಬಿಕೆ ಇದೆ. ಫೆಂಗ್ ಶೂಯಿ ತತ್ತ್ವಗಳ ಪ್ರಕಾರ ರೋಮಾಂಚಕ ಮತ್ತು ಮಂಗಳಕರ ಶಕ್ತಿಯನ್ನು ಇದು ಸೃಷ್ಟಿಸುತ್ತದೆ.


ಗಣೇಶ ವಿಗ್ರಹ

ಗಣೇಶ ಹೊಸ ಆರಂಭ ಮತ್ತು ಯಶಸ್ಸಿನ ದೇವರು. ಗಣೇಶನ ಪ್ರತಿಮೆಯನ್ನು ನೀಡುವುದು ಉಡುಗೊರೆ ಸ್ವೀಕರಿಸುವವರಿಗೆ ಆಶೀರ್ವಾದವನ್ನು ಕೊಡುತ್ತದೆ. ಈ ಪ್ರತಿಮೆಯು ಶಕ್ತಿ, ಬುದ್ಧಿವಂತಿಕೆ ಮತ್ತು ಜೀವನದಲ್ಲಿ ಸವಾಲುಗಳನ್ನು ಜಯಿಸುವ ಸಾಮರ್ಥ್ಯವನ್ನು ಪ್ರತಿನಿಧಿಸುತ್ತದೆ.


ಶ್ರೀ ಮೇರು ಯಂತ್ರ

ಮೇರು ಶ್ರೀ ಯಂತ್ರವು ತನ್ನ ಆರಾಧಕರಿಗೆ ಶಾಂತಿ, ಸಂತೋಷ, ಜನಪ್ರಿಯತೆ, ಶಕ್ತಿ, ಅಧಿಕಾರ, ಸಂಪತ್ತು, ಸಮೃದ್ಧಿ ಮತ್ತು ಯಶಸ್ಸನ್ನು ತರುತ್ತದೆ. ಸಮರ್ಪಣೆ ಮತ್ತು ನಂಬಿಕೆಯಿಂದ ಇದನ್ನು ಪೂಜಿಸಿದರೆ ಆಶೀರ್ವಾದ ಸಿಗುತ್ತದೆ ಎನ್ನುವ ನಂಬಿಕೆ ಇದೆ.


ರಾಧಾ ಕೃಷ್ಣನ ವಿಗ್ರಹ

ಶುಭ ಸೂಚಕವಾಗಿ ರಾಧಾ ಕೃಷ್ಣನ ವಿಗ್ರಹವನ್ನು ಉಡುಗೊರೆಯಾಗಿ ನೀಡಬಹುದು. ಇದು ನಿಮ್ಮ ಜೀವನದಲ್ಲಿ ಆಳವಾದ ಶಾಂತಿ, ಸಮೃದ್ಧ ಪ್ರೀತಿ ಮತ್ತು ಬಲವಾದ ಸಮರ್ಪಣೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

ವಾಸ್ತು ಆಮೆ

ಆಮೆಗಳು ಅದೃಷ್ಟ ಮತ್ತು ದೀರ್ಘಾಯುಷ್ಯವನ್ನು ಪ್ರತಿನಿಧಿಸುತ್ತವೆ. ಆದ್ದರಿಂದ, ಗಾಜಿನ ಅಥವಾ ಸ್ಫಟಿಕ ಆಮೆಯನ್ನು ಉಡುಗೊರೆಯಾಗಿ ನೀಡುವುದು ಅವರಿಗೆ ಮಾಡುವ ಯಾವುದೇ ಕೆಲಸದಲ್ಲಿ ಅದೃಷ್ಟ ಮತ್ತು ಯಶಸ್ಸನ್ನು ತರುತ್ತದೆ.

ಚೈಮ್ಸ್

ವಿಂಡ್ ಚೈಮ್ ಗಳು ಕೇವಲ ಅಲಂಕಾರಕ್ಕಾಗಿ ಮಾತ್ರವಲ್ಲ. ಅವುಗಳು ಅದೃಷ್ಟ, ಸಮೃದ್ಧಿ ಮತ್ತು ಪಾಲಿಸಬೇಕಾದ ನೆನಪುಗಳನ್ನು ಸಂಕೇತಿಸುತ್ತವೆ. ಅದರ ಸುಮಧುರ ರಾಗಗಳು ಮನಸ್ಸನ್ನು ಶಾಂತಗೊಳಿಸುತ್ತದೆ. ಉತ್ಸಾಹವನ್ನು ಹೆಚ್ಚಿಸುತ್ತವೆ. ಮನೆಗೆ ಧನಾತ್ಮಕ ಶಕ್ತಿ ಮತ್ತು ಶಾಂತಿಯುತ ವಾತಾವರಣವನ್ನು ತುಂಬುತ್ತದೆ.

ಇದನ್ನೂ ಓದಿ: Vastu Tips: ಆರ್ಥಿಕ ಪ್ರಗತಿಗೆ ಈ ವಾಸ್ತು ಟಿಪ್ಸ್‌ ಫಾಲೋ ಮಾಡಿ


ಗೋಮತಿ ಚಕ್ರ ವೃಕ್ಷ

ಗೋಮತಿ ಚಕ್ರವನ್ನು ಉಡುಗೊರೆಯಾಗಿ ನೀಡುವುದು ಆಧ್ಯಾತ್ಮಿಕ ಮಹತ್ವದಿಂದ ತುಂಬಿದ ಅರ್ಥಪೂರ್ಣ ಸೂಚಕವಾಗಿದೆ. ಗೋಮತಿ ನದಿಯಲ್ಲಿ ಹೆಚ್ಚಾಗಿ ಕಂಡುಬರುವ ಈ ಪವಿತ್ರ ಕಲ್ಲುಗಳು ಸಕಾರಾತ್ಮಕ ಶಕ್ತಿ ಮತ್ತು ರಕ್ಷಣಾತ್ಮಕ ಗುಣಗಳಿಂದ ಮೌಲ್ಯಯುತವಾಗಿವೆ. ಗೋಮತಿ ಚಕ್ರವನ್ನು ನೀಡುವುದು ಸ್ವೀಕರಿಸುವವರಿಗೆ ಸಮೃದ್ಧಿ ಮತ್ತು ಅದೃಷ್ಟವನ್ನು ಆಶೀರ್ವಾದಿಸುತ್ತದೆ.

Continue Reading

ಪ್ರಮುಖ ಸುದ್ದಿ

ಗುರು ಸಕಲಮಾ ಆತ್ಮಕಥನ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳುʼ ಮುಖಪುಟ ಅನಾವರಣ

ಅಧ್ಯಾತ್ಮದ ಹಾದಿ ಕಷ್ಟದ್ದು, ನಮಗಲ್ಲ ಎಂದು ಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಇದೆ. ಗೃಹಸ್ಥ ಆಶ್ರಮದಲ್ಲಿದ್ದುಕೊಂಡೇ ಅಧ್ಯಾತ್ಮದ ಹಾದಿಯಲ್ಲಿ ಪಯಣಿಸಬಹುದು. ತಂತ್ರಮಾರ್ಗದ ಬಗೆಗೆ ಇಂದು ಸಮಾಜದಲ್ಲಿ ಗೊಂದಲಗಳಿವೆ, ತಪ್ಪು ತಿಳುವಳಿಕೆಗಳೂ ಇವೆ ಎಂದು ಗುರು ಸಕಲಮಾ ನುಡಿದರು. ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಕೃತಿಯ ಮುಖಪುಟವನ್ನು ಸಾಹಿತಿ ಜೋಗಿ ಅನಾವರಣಗೊಳಿಸಿದರು.

VISTARANEWS.COM


on

ಹಿಮಾಲಯ book cover page launch 2
Koo

ಹಿಮಾಲಯದ ಗುರು ಪರಂಪರೆ ಅವಿನಾಶಿ: ಗುರು ಸಕಲಮಾ

ಬೆಂಗಳೂರು: ಅಧ್ಯಾತ್ಮದ (Spirituality) ಬಗ್ಗೆ ಸಮಾಜದಲ್ಲಿ ಇರುವ ತಪ್ಪು ತಿಳುವಳಿಕೆಗಳು, ಭಯಗಳಿಂದಾಗಿ ಮೊದಲಿನಷ್ಟು ಮೌಲ್ಯಯುತವಾಗಿ ಅದನ್ನು ನಮಗೆ ಉಳಿಸಿಕೊಳ್ಳಲಾಗಿಲ್ಲ. ಆದರೆ, ನಾವು ಅದನ್ನು ಕಳೆದುಕೊಂಡಿಲ್ಲ. ಯಾರು ಏನೇ ಪ್ರಯತ್ನ ಮಾಡಿದರೂ ಇದನ್ನು ನಾಶ ಮಾಡಲು ಸಾಧ್ಯವಿಲ್ಲ. ಈ ನಮ್ಮ ಸಂಸ್ಕೃತಿ ಅವಿನಾಶಿ ಎಂದು ಹಿಮಾಲಯ ಯೋಗಿ ಸ್ವಾಮಿ ರಾಮ (Swami Rama) ಹಾಗೂ ಬಹುಶ್ರುತ ವಿದ್ವಾಂಸ ಡಾ. ಆರ್‌ ಸತ್ಯನಾರಾಯಣ (Dr. R Satyanarayana) ಅವರ ನೇರ ಶಿಷ್ಯೆ, ಶ್ರೀವಿದ್ಯಾ ಗುರು ಸಕಲಮಾ (Guru Sakalamaa) ಅವರು ಹೇಳಿದ್ದಾರೆ.

ಅವರು ತಮ್ಮ, ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಪುಸ್ತಕದ ಇಂಗ್ಲೀಷ್‌ ಹಾಗೂ ಕನ್ನಡ ಆತ್ಮಚರಿತ್ರೆಯ ಮುಖಪುಟ ಅನಾವರಣ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಅಧ್ಯಾತ್ಮದ ಹಾದಿ ಕಷ್ಟದ್ದು, ನಮಗಲ್ಲ ಎಂದು ಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಇದೆ. ಆದರೆ ಇದಕ್ಕೆ ಇನ್ನೊಂದು ಮುಖವಿದೆ ಅದು ತಂತ್ರಶಾಸ್ತ್ರ. ತಂತ್ರ ನಿಮ್ಮನ್ನು ನೀವು ಹೇಗಿದ್ದೇವೋ ಹಾಗೆಯ ಸ್ವೀಕರಿಸುತ್ತದೆ. ಗೃಹಸ್ಥ ಆಶ್ರಮದಲ್ಲಿದ್ದುಕೊಂಡೇ ನೀವು ಅಧ್ಯಾತ್ಮ ದ ಹಾದಿಯಲ್ಲಿ ಪಯಣಿಸಬಹುದು. ಈ ತಂತ್ರದ ಬಗೆಗೆ ಇಂದು ಸಮಾಜದಲ್ಲಿ ಗೊಂದಲಗಳಿವೆ, ತಪ್ಪು ತಿಳುವಳಿಕೆಗಳೂ ಇವೆ. ಇದು ಇವತ್ತಿನ ಸಮಸ್ಯೆಯಲ್ಲ. ಶಂಕರಾಚಾರ್ಯರ ಕಾಲದಿಂದಲೂ ಇತ್ತು. ಅವರು ಇದಕ್ಕೆ ಅಂಟಿದ ಜಾಡ್ಯಗಳನ್ನು ಕಿತ್ತೆಸೆದು ಅದನ್ನು ಪ್ರವರ್ಧಮಾನಕ್ಕೆ ತರಲು ಶ್ರಮಿಸಿದರು ಎಂದರು.

ನನ್ನಮ್ಮ ನನಗೆ ಋಷಿಮುನಿಗಳ ಕತೆಗಳನ್ನೆಲ್ಲ ಹೇಳುವಾಗ ಈ ಕತೆಗಳ ಋಷಿಮುನಿಗಳಿಗೂ ನಮಗೂ ಸಂಬಂಧವಿಲ್ಲ, ಅವರು ಯಾವುದೋ ಲೋಕದಲ್ಲಿ ಕೂತಿರುವವರು. ನನಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದೇ ನಾನಂದುಕೊಂಡಿದ್ದೆ. ಆದರೆ, ಶ್ರದ್ಧೆಯಿಂದ ನೀವು ಈ ಲೋಕಕ್ಕೆ ಬಂದರೆ, ಇವು ಕತೆಗಳಲ್ಲ, ಅಧ್ಯಾತ್ಮಿಕ ಸತ್ಯಗಳು ಎಂಬುದು ನಿಮಗೆ ಗೋಚರವಾಗಬಹುದು. ನೀವು ಬಯಸಿದಲ್ಲಿ, ಈ ಪುಸ್ತಕದಲ್ಲಿ ಬಂದಿರುವ ಋಷಿಮುನಿಗಳನ್ನೆಲ್ಲ ನೀವು ಭೇಟಿ ಮಾಡಬಹುದು. ನಿಮ್ಮ ಕನಸಿನಲ್ಲೂ ಅವರು ಬಂದು ನಿಮ್ಮ ಜೊತೆ ಮಾತನಾಡಬಹುದು. ಪಕ್ಕದಲ್ಲೇ ಗೆಳೆಯನ ರೀತಿಯಲ್ಲಿ ಬಂದು ನಿಮಗೆ ಅರಿವು ಮೂಡಿಸಿ ಹೋಗಬಹುದು. ಅವರೆಲ್ಲ ಬೇರೊಂದು ಲೋಕದಲ್ಲಿ ಕುಳಿತು, ಈ ಲೋಕಕಲ್ಯಾಣಕ್ಕಾಗಿ ಕಂಕಣ ಬದ್ಧರಾಗಿ ನಿಂತಿದ್ದಾರೆ, ಸದಾ ನಮ್ಮನ್ನು ಪೊರೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಬದುಕಿನ ಪಯಣದಲ್ಲಿ ಗುರುವಿನ ಸ್ಥಾನ ದೊಡ್ಡದು. ನಾನು, ನನ್ನದು ಎಂಬುದನ್ನು ಬಿಟ್ಟಾಗ ಗುರು ಸಿಕ್ಕುತ್ತಾನೆ. ಗುರುವಿನ ಅನ್ವೇಷಣೆಯಲ್ಲಿ ನಾವಿದ್ದೇವೆ ಎಂಬುದು ಅನೇಕ ಸಾರಿ ನಮಗೆ ಅರಿವೇ ಇರುವುದಿಲ್ಲ. ಅದಕ್ಕಾಗಿಯೇ, ಅರಿವೇ ಗುರುವು ಗುರುವೇ ಅರಿವು. ಗುರು ಸಿಕ್ಕ ಮೇಲೆ ಕೆಲವರಿಗೆ ಅರಿವು ಸಿಕ್ಕರೆ, ಇನ್ನು ಕೆಲವರಿಗೆ ಅರಿವಾಗಿ ಗುರು ಬೇಕು ಅನಿಸುತ್ತದೆ ಎಂದು ಹೇಳಿದರು.

ಹಿಮಾಲಯ book cover page launch 2

ಕನ್ನಡಪ್ರಭದ ಪುರವಣಿ ಸಂಪಾದಕ, ಸಾಹಿತಿ ಜೋಗಿ (Writer Jogi) ಮಾತನಾಡಿ, ಒಂದು ಪುಸ್ತಕವನ್ನು ಗೆಲ್ಲಿಸುವ ಅಂಶಗಳೆಂದರೆ ಮುಗ್ದತೆ ಹಾಗೂ ಪ್ರಾಮಾಣಿಕತೆ. ಇಂದು ಎಷ್ಟೋ ಪುಸ್ತಕಗಳು ಅಪ್ರಾಮಾಣಿಕವಾಗಿ ಇರುತ್ತದೆ, ಪುಸ್ತಕದ ಕೆಲವು ಪುಟಗಳನ್ನು ತೆರೆದು ನೋಡಿದ ತಕ್ಷಣ ಇದು ಪ್ರಾಮಾಣಿಕವೋ, ಅಪ್ರಾಮಾಣಿಕವೋ ಎಂಬುದು ಅರ್ಥವಾಗುತ್ತದೆ. ಈ ಪುಸ್ತಕ ಕೆಲವು ಪುಟಗಳನ್ನು ಮುಂಚಿತವಾಗಿ ಓದಿದ್ದರಿಂದ ನನಗೆ ಇದರಲ್ಲಿ ಮುಗ್ಧತೆ ಹಾಗೂ ಪ್ರಾಮಾಣಿಕತೆ ಎದ್ದು ಕಾಣುತ್ತಿವೆ. ಹಾಗಾಗಿ ಇದು ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ ಎಂದರು.

ಇಂದು ಪಾರಲೌಕಿಕ ಅಂದ ತಕ್ಷಣ ನಮಗೊಂದು ತಪ್ಪು ಕಲ್ಪನೆಯಿದೆ. ನಮಗೆ ಆ ವೇಷವನ್ನು ತೊಟ್ಟುಕೊಳ್ಳುವ ಧೈರ್ಯ ಇದೆಯೇ? ನಾವು ಆ ಜಗತ್ತಿಗೆ ಹೋಗಬಲ್ಲೆವಾ? ಇತ್ಯಾದಿ ಪ್ರಶ್ನೆಗಳು ನಮ್ಮನ್ನು ಕಾಡಿ ನಾವು ಅದರ ಗೊಡವೆಗೇ ಹೋಗುವುದಿಲ್ಲ. ಪುರಂದರ ದಾಸರೇ ʻಇಷ್ಟು ದಿನ ಈ ವೈಕುಂಠ ಎಷ್ಟು ದೂರ ಎನ್ನುತಲಿದ್ದೆʼ ಎಂದು ಬರೆಯುವ ಮೂಲಕ ವೈಕುಂಠ ಇಲ್ಲೇ ಇದ್ದರೂ, ಅಲ್ಲಿದೆ ಎಂದು ತಿಳಿದಿದ್ದೆ ಎನ್ನುವ ಸತ್ಯವನ್ನು ಹೇಳಿದ್ದಾರೆ. ಈ ಪುಸ್ತಕ ಈ ರೀತಿಯಲ್ಲಿ ಅಂಜಿಕೆಗಳನ್ನು ದೂರ ಮಾಡಿ ಸಂಕೋಚದ ತೆರೆಯನ್ನು ಸರಿಸಲು ದಾರಿದೀಪವಾಗಬಹುದು ಎಂದರು.

ಜೀವನದಲ್ಲಿ ನಾವು ಕಳೆದುಕೊಳ್ಳುವುದು ಅಪನಂಬಿಕೆಯಿಂದ. ನಮ್ಮಲ್ಲಿ ಅಪನಂಬಿಕೆಯಿದೆ ಎಂದರೆ ಅದು ನಮ್ಮ ವ್ಯಕ್ತಿತ್ವದ ದೋಷವೇ ಹೊರತು ಗುರುವಿನ ದೋಷವಲ್ಲ. ಒಂದು ಕತೆಯ ಒಳಗೆ ನನಗೆ ಹೋಗಲಾಗದಿದ್ದರೆ, ಅದು ಆ ಕಥನದ ದೋಷವಲ್ಲ, ಆ ಕಥನವನ್ನು ಸ್ವೀಕರಿಸುವ ಅನುಭವದ ಕೊರತೆಯೇ ಕಾರಣ. ಮನುಷ್ಯ ಎಲ್ಲ ದುಃಖಗಳನ್ನೂ, ಸುಖವನ್ನು ಬದುಕಿನಲ್ಲಿ ಅನುಭವಿಸಿದ ಮೇಲೆ ಒಂದು ಹುಡುಕಾಟ ಹಾದಿಯತ್ತ ಹೊರಳುತ್ತಾನೆ. ಈ ಹಾದಿಯಲ್ಲಿ ಸಿಗುವ ಗುರು ಯಾವುದೇ ರೂಪದಲ್ಲಿರಬಹುದು. ಇಂಥ ಸಂದರ್ಭ ನಂಬಿಕೆ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. ಪುಸ್ತಕ ಜಗತ್ತಿಗೆ ಇಂಥದ್ದೊಂದು ಸಮಾರಂಭ ಬೇಕಿದೆ. ಮುಖಪುಟ ಅನಾವರಣವನ್ನೂ ಸಂಭ್ರಮಿಸುವ ಈ ನಡೆ ಪುಸ್ತಕ ಜಗತ್ತಿನಲ್ಲಿ ಸ್ವಾಗತಾರ್ಹ ಎಂದೂ ಅವರು ಹೇಳಿದರು.

ಸಕಲಮಾ ಅವರ ಯುಟ್ಯೂಬ್ ಅನಾವರಣಗೊಳಿಸಿದ ಕಾಂತಾರ (Kantara Movie) ಖ್ಯಾತಿಯ ನಟಿ ಸಪ್ತಮಿ ಗೌಡ (Saptami Gowda) ಮಾತನಾಡಿ, ಮುಖಪುಟವನ್ನು ನೋಡಿ ಪುಸ್ತಕವನ್ನು ಅಳೆಯಬೇಡಿ ಎಂಬ ಇಂಗ್ಲೀಷ್‌ ನುಡಿಗಟ್ಟಿದೆ. ಆದರೆ, ಸಾಮಾನ್ಯವಾಗಿ ನಾವು ಮುಖಪುಟವನ್ನು, ಟ್ರೈಲರ್‌ಗಳನ್ನು ನೋಡಿ ಅಳೆಯುವ ಪರಿಸ್ಥಿತಿ ಈಗ ಎಲ್ಲೆಡೆ ಇದೆ. ಒಳ ಹೂರಣ ಇದ್ದರೆ ಸಿನಿಮಾವಿರಲಿ, ಪುಸ್ತಕವಿರಲಿ ಗೆದ್ದೇ ಗೆಲ್ಲುತ್ತದೆ ಎಂಬುದು ನಾನು ಕಾಂತಾರದಿಂದ ಕಲಿತ ಪಾಠ ಎಂದರು.

ಒಂದು ಸಿನಿಮಾ ಮಾಡುವಂತೆ, ಪುಸ್ತಕ ಬರೆಯುವುದೂ ಕೂಡಾ ಸಾಕಷ್ಟು ಶ್ರಮ ಬೇಡುವ ಕೆಲಸ. ಅದರ ಹಿಂದೆ ಅಪಾರ ಶ್ರದ್ಧೆಯಿದೆ. ಸಿನಿಮಾ ಮಂದಿ ತಮ್ಮ ಸಿನಿಮಾದ ಕುತೂಹಲ ಮೊದಲೇ ಹೆಚ್ಚಿಸಲು ಟ್ರೈಲರ್, ಟೀಸರ್‌ ಬಿಡುಗಡೆಯನ್ನು ಇಟ್ಟುಕೊಳ್ಳುತ್ತಾರೆ. ಹಾಗಾಗಿ, ಪುಸ್ತಕವನ್ನೂ ಹೆಚ್ಚು ಮಂದಿಗೆ ತಲುಪಿಸಲು, ಕುತೂಹಲ ಹುಟ್ಟು ಹಾಕಿಲು ಇಂಥ ಮುಖಪುಟ ಅನಾವರಣದಂತಹ ಕಾರ್ಯಕ್ರಮಗಳು ನಡೆಯಬೇಕು. ಜನರು ಸೇರಬೇಕು. ಓದುವ ಪರಂಪರೆ ಹೆಚ್ಚಬೇಕು ಎಂದರು.

ಗುರು ಯಾರೇ ಇರಲಿ, ಅವರ ಮೇಲೆ ನಮಗೆ ನಂಬಿಕೆ ಇರಬೇಕು. ಜೀವನದಲ್ಲಿ ಕಲಿಯುವ ಹಾದಿ ದೊಡ್ಡದಿದೆ. ಆ ಸಂದರ್ಭ ಗುರು ತಿದ್ದಿದ್ದನ್ನು ನಾವು ಕಲಿತುಕೊಳ್ಳುವ ಆಸಕ್ತಿ ಇರಬೇಕು. ಅದಕ್ಕಾಗಿ ಗುರು ತೋರಿದ ಹಾದಿಯಲ್ಲಿ ನಾವು ನಡೆಯಬೇಕು ಎಂದೂ ಹೇಳಿದರು.

ಜುಲೈ 21ರಂದು ಚಂಡೀಗಢದಲ್ಲಿ ಆಂಗ್ಲ ಭಾಷೆಯ `Messages from the Himalayan Sages- Timely and Timeless’ ಹಾಗೂ ಸೆಪ್ಟೆಂಬರ್22ರಂದು ಬೆಂಗಳೂರಿನ ಗಾಯನ ಸಮಾಜದಲ್ಲಿ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಕನ್ನಡ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. ಗುರು ಸಕಲಮಾ ಅವರ ಯುಟ್ಯೂಬ್‌ ಲಿಂಕ್- https://youtube.com/@gurusakalamaa?feature=shared

ಇದನ್ನೂ ಓದಿ: ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Continue Reading

ಧಾರ್ಮಿಕ

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

ಶನಿಯ ವಕ್ರದೃಷ್ಟಿಯ ಪರಿಣಾಮಗಳ ಬಗ್ಗೆ ಹೆಚ್ಚಿನವರು ಕೇಳಿರುತ್ತಾರೆ, ಇನ್ನು ಕೆಲವರು ಅನುಭವಿಸಿರುತ್ತಾರೆ. ಇದರಿಂದ ಪಾರಾಗಲು ಹಲವಾರು ಪರಿಹಾರ ಮಾರ್ಗಗಳನ್ನು ಹೇಳಲಾಗಿದೆ. ಜೂನ್ 6ರಂದು ಶನಿ ಜಯಂತಿ. ಈ ದಿನ ಕೆಲವು ಅನುಷ್ಠಾನಗಳನ್ನು ಮಾಡುವುದರಿಂದ ಶನಿಯ ವಕ್ರ ದೃಷ್ಟಿಯಿಂದ ಪಾರಾಗಲು (Remedies For SadeSati) ಸಾಧ್ಯವಿದೆ .

VISTARANEWS.COM


on

By

Remedies For SadeSati
Koo

ಜೀವನದಲ್ಲಿ ಏನಾದರೂ ಕೆಟ್ಟದಾದರೆ ಶನಿಯ (shani) ವಕ್ರ ದೃಷ್ಟಿ ಅಥವಾ ಸಾಡೇ ಸಾಥ್ ಪರಿಣಾಮ (Remedies For SadeSati) ಎನ್ನುವ ಅನುಮಾನ ಕೆಲವರನ್ನು ಕಾಡುತ್ತದೆ. ನಾವು ತಿಳಿದೋ ತಿಳಿಯದೆಯೋ ಮಾಡುವ ಕರ್ಮಕ್ಕೆ ತಕ್ಕ ಪ್ರತಿಫಲ ಕೊಡುವ ಶನಿ ದೇವನ ಬಗ್ಗೆ ಭಕ್ತಿಗಿಂತ ಭಯ ಪಡುವವರೇ ಅಧಿಕ. ಆದರೆ ಶನಿ ದೇವನೂ ಶ್ರದ್ಧಾ ಭಕ್ತಿಗೆ ಮೆಚ್ಚುತ್ತಾನೆ ಹಾಗೂ ಭಕ್ತರ ಅಭೀಷ್ಟೆಗಳನ್ನು ಈಡೇರಿಸುತ್ತಾನೆ.

ಶನಿಯ ವಕ್ರ ದೃಷ್ಟಿ ನಮ್ಮ ಮೇಲೆ ಬಿದ್ದರೆ ಅದರಿಂದ ಪಾರಾಗಲು ಕೆಲವೊಂದು ಪರಿಹಾರ ಕ್ರಮಗಳನ್ನು ಪುರಾಣಗಳಲ್ಲಿ ಹೇಳಲಾಗಿದೆ. ಜೂನ್ 6ರಂದು ಶನಿ ಜಯಂತಿ (Shani Jayanti). ಈ ದಿನ ಇವುಗಳನ್ನು ಅನುಷ್ಠಾನಗೊಳಿಸಿದರೆ ಕಷ್ಟಗಳಿಂದ ಪಾರಾಗಬಹುದು.

1. ಬೆನ್ನು ನೋವು ಅಥವಾ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರೆ ಶನಿ ಜಯಂತಿಯ ದಿನದಂದು ಕಪ್ಪು ಉಂಡೆಯನ್ನು ಕಪ್ಪು ಬಟ್ಟೆಯಲ್ಲಿ ಕಟ್ಟಿ ದೇವಸ್ಥಾನದ ಮೂಲೆಯಲ್ಲಿ ಇರಿಸಿ. ಶನಿದೇವನ ಮಂತ್ರವಾದ “ಓಂ ಶ್ರೀಂ ಹ್ರೀಂ ಶಾಂ ಶನೈಶ್ಚರಾಯ ನಮಃ” ಎಂಬುದಾಗಿ 21 ಬಾರಿ ಜಪಿಸಿ.

2. ಮಕ್ಕಲಾಗದೇ ಇದ್ದರೆ ದಂಪತಿ ಶನಿ ಜಯಂತಿಯ ದಿನದಂದು ಮನೆಯ ಚಾವಣಿ, ಬಾಲ್ಕನಿ ಅಥವಾ ಮನೆಯ ಹೊರಗೆ ಪಕ್ಷಿಗಳಿಗೆ ಆಹಾರ ಮತ್ತು ನೀರನ್ನು ಇರಿಸಿ. ಇಲ್ಲಿ ನೆನಪಿಡಬೇಕಾದ ಅಂಶವೆಂದರೆ ಆಹಾರ ಮತ್ತು ನೀರು ಪಕ್ಷಿಗಳಿಗೆ ಇಡಬೇಕೇ ಹೊರತು ಪಾರಿವಾಳಗಳಿಗೆ ಅಲ್ಲ. ಇದರೊಂದಿಗೆ 51 ಬಾರಿ ಓಂ ಶ್ರೀಂ ಹ್ರೀಂ ಶಾಂ ಶನೈಶ್ಚರಾಯ ನಮಃ ಎಂದು ಜಪಿಸಿ.

3. ಮನೆಯ ಸಂತೋಷ ಮತ್ತು ಅದೃಷ್ಟವನ್ನು ಹೆಚ್ಚಿಸಲು ಬಯಸಿದರೆ ಶನಿ ಜಯಂತಿಯ ದಿನದಂದು ದೇವಸ್ಥಾನದಲ್ಲಿ ಕಪ್ಪು ಬಟ್ಟೆಯನ್ನು ಅರ್ಪಿಸಿ. 11 ಬಾರಿ ಶಂ ಹ್ರೀಂ ಶಾಂ ಶನೈಶ್ಚರಾಯ ನಮಃ.ಮಂತ್ರವನ್ನು ಜಪಿಸಿ.

4. ಕುಟುಂಬದ ಸದಸ್ಯರೊಂದಿಗೆ ಸಮಸ್ಯೆಗಳಿದ್ದರೆ ಶನಿ ಜಯಂತಿಯ ದಿನದಂದು ಶನಿ ದೇವರನ್ನು ಧ್ಯಾನಿಸುವಾಗ ದೇವಸ್ಥಾನದಲ್ಲಿ ಒಂದು ಹಿಡಿ ಇಡೀ ಉಂಡೆಯನ್ನು ಅರ್ಪಿಸಿ ಮತ್ತು 21 ಬಾರಿ ಜಪಿಸಿ. ಓಂ ಶ್ರೀ ಶಾಂ ಶ್ರೀ ಶನೈಶ್ಚರಾಯ ನಮಃ ಮಂತ್ರವನ್ನು ಜಪಿಸಿ.

5. ಜೀವನದಲ್ಲಿ ಸತತವಾಗಿ ಅಸಂಖ್ಯಾತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಶನಿ ಜಯಂತಿಯ ದಿನದಂದು ಕೈಯ ಉದ್ದದ 19 ಪಟ್ಟು ಕಪ್ಪು ದಾರವನ್ನು ತೆಗೆದುಕೊಂಡು ಅದನ್ನು ಮಾಲೆಯ ರೂಪದಲ್ಲಿ ಮಾಡಿ ಕುತ್ತಿಗೆಗೆ ಧರಿಸಿ. 108 ಬಾರಿ ಓಂ ಶ್ರೀಂ ಶ್ರೀಂ ಶ್ರೀಂ ಶನೈಶ್ಚರಾಯ ನಮಃ ಮಂತ್ರವನ್ನು ಜಪಿಸಿ.

6. ಯಾವುದೇ ಕೆಲಸ ಮಾಡಲು ಮನಸ್ಸಿಲ್ಲದಿದ್ದರೆ ಅಥವಾ ಕೆಲಸದ ಸಮಯದಲ್ಲಿ ಸೋಮಾರಿತನವನ್ನು ಅನುಭವಿಸಿದರೆ ಶನಿ ಜಯಂತಿಯ ದಿನ ಶನಿದೇವನ ಈ ಹತ್ತು ನಾಮಗಳಾದ ಕೋನಸ್ತ ಪಿಂಗಲೋ ಬಭ್ರುಃ ಕೃಷ್ಣ ರೌದ್ರೋಂತಕೋ ಯಮ: ಸೌರಿಃ ಶನೈಶ್ಚರೋ ಮಂದಃ ಪಿಪ್ಪಲಾದೇನ್ ಎಂಬುದಾಗಿ 108 ಬಾರಿ ಜಪಿಸಬೇಕು.

7. ಜೀವನದಿಂದ ಶತ್ರುಗಳನ್ನು ದೂರ ಮಾಡಲು ಶನಿ ಜಯಂತಿಯ ದಿನದಂದು ಸ್ನಾನದ ಅನಂತರ ಶನಿದೇವನ ಮಂತ್ರವಾದ ಓಂ ಐಂ ಶ್ರೀಂ ಹ್ರೀಂ ಶನೈಶ್ಚರಾಯ ನಮಃ ಎಂಬುದಾಗಿ 11 ಬಾರಿ ಜಪಿಸಬೇಕು.

8. ಮನದಲ್ಲಿ ಸದಾ ಸಕಾರಾತ್ಮಕತೆ ಇರಬೇಕು ಮತ್ತು ಮನಸ್ಸಿನಲ್ಲಿ ಹೊಸ ಆಲೋಚನೆಗಳು ಬರುತ್ತಿರಬೇಕೆಂದು ಬಯಸಿದರೆ ಶನಿ ಜಯಂತಿಯ ದಿನದಂದು ಮನೆಯ ಮುಖ್ಯದ್ವಾರದಲ್ಲಿ ಸಾಸಿವೆ ಎಣ್ಣೆಯನ್ನು ಹಚ್ಚಿ. 21 ಬಾರಿ ಓಂ ಶಂ ಶನ್ಯೈ ನಮಃ ಮಂತ್ರವನ್ನು ಜಪಿಸಿ.

9. ಶನಿ ಜಯಂತಿಯ ದಿನ ಸಂಜೆ ಶನಿದೇವನ ಮಂತ್ರವಾದ ಶಂ ಓಂ ಶಂ ನಮಃ ಅನ್ನು ಜಪಿಸಬೇಕು. ಇದರಿಂದ ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶವನ್ನು ಪಡೆಯುತ್ತೀರಿ ಮತ್ತು ಜೀವನದಲ್ಲಿ ಖಂಡಿತವಾಗಿಯೂ ಯಶಸ್ವಿಯಾಗುತ್ತೀರಿ.

10. ಕಬ್ಬಿಣದಿಂದ ಮಾಡಿದ ವಸ್ತುವನ್ನು ಯಾವಾಗಲೂ ನಿಮ್ಮ ಬಳಿ ಇಟ್ಟುಕೊಳ್ಳಿ. ಜೊತೆಗೆ 11 ಬಾರಿ ಓಂ ಐಂ ಹ್ರೀಂ ಶ್ರೀಂ ಶನೈಶ್ಚರಾಯ ನಮಃ ಎಂದು ಜಪಿಸಿದರೆ ಖಿನ್ನತೆಯಿಂದ ಶೀಘ್ರದಲ್ಲೇ ಪರಿಹಾರವನ್ನು ಪಡೆಯುತ್ತೀರಿ ಮತ್ತು ಯಾವುದೇ ವಿಷಯದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತೀರಿ.

ಇದನ್ನೂ ಓದಿ: Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

21. ಸಣ್ಣಪುಟ್ಟ ವಿಚಾರಗಳಿಗೆ ಸಂಗಾತಿಯೊಂದಿಗೆ ಸದಾ ಜಗಳ ನಡೆಯುತ್ತಿದ್ದರೆ ಶನಿ ಜಯಂತಿಯ ದಿನ ಶುಚಿಯಾಗಿ ಶುಭ್ರವಾದ ಬಟ್ಟೆಗಳನ್ನು ಧರಿಸಿ ಶನಿದೇವನನ್ನು ಸ್ಮರಿಸಿ ನಮಸ್ಕರಿಸಿ. ಅಲ್ಲದೆ ಸಾಸಿವೆ ಎಣ್ಣೆ, ಎಳ್ಳುವನ್ನು ಶನಿ ದೇವರಿಗೆ ಅರ್ಪಿಸಿ ಮತ್ತು ಶನಿದೇವನ ಶಂ ಶನೈಶ್ಚರಾಯ ನಮಃ ಮಂತ್ರವನ್ನು 21 ಬಾರಿ ಜಪಿಸಿ.

22. ಶನಿ ಜಯಂತಿಯ ದಿನದಂದು ಮನೆಯಲ್ಲಿ ಶಿವನ ಚಿತ್ರದ ಮುಂದೆ ಆಸನವನ್ನು ಇಟ್ಟು ಶಿವನ ಓಂ ನಮಃ ಶಿವಾಯ ಮಂತ್ರವನ್ನು 108 ಬಾರಿ ಜಪಿಸಿ. ಇದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಅಖಂಡವಾಗಿ ಉಳಿಯುತ್ತದೆ.

Continue Reading
Advertisement
CM Siddaramaiah
ಪ್ರಮುಖ ಸುದ್ದಿ2 mins ago

CM Siddaramaiah: ಕರ್ನಾಟಕದಲ್ಲಿ ವಾಸಿಸುತ್ತಿರುವ ಪರ ಭಾಷಿಕರು ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

Tumkur DC Shubha Kalyan inaugurated the Janaspandana programme in Koratagere
ತುಮಕೂರು13 mins ago

Koratagere News: ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ; ಡಿಸಿ ಶುಭ‌ ಕಲ್ಯಾಣ್

Power cut There will be power outage in various parts of Bengaluru on June 22
ಕರ್ನಾಟಕ14 mins ago

Power Cut: ಬೆಂಗಳೂರಿನ ವಿವಿಧ ಕಡೆ ಜೂ. 22ರಂದು ವಿದ್ಯುತ್‌ ವ್ಯತ್ಯಯ

Arvind Kejriwal
ದೇಶ15 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್;‌ ಕೊನೆಗೂ ಸಿಕ್ಕಿತು ಜಾಮೀನು

Vijayanagara DC MS Diwakar meeting with officials of various departments
ವಿಜಯನಗರ17 mins ago

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Action will be taken to ensure that the Anganwadi workers do not suffer in any way says Minister Lakshmi Hebbalkar
ಬೆಂಗಳೂರು22 mins ago

Lakshmi Hebbalkar: ಲಕ್ಷ್ಮೀ ಹೆಬ್ಬಾಳಕರ್ ಭರವಸೆ; ಅಂಗನವಾಡಿ ನೌಕರರ ಮುಷ್ಕರ ವಾಪಸ್‌

Mecca Heatwave Death
ಪ್ರಮುಖ ಸುದ್ದಿ47 mins ago

Mecca Heatwave Death : ಮೆಕ್ಕಾದಲ್ಲಿ ನಿಧನ ಹೊಂದಿದ ಹಜ್​ ಯಾತ್ರಿಗಳಿಗೆ ಅಲ್ಲೇ ಸಂಸ್ಕಾರ; ಹಜ್​ ಕಮಿಟಿ ಮಾಹಿತಿ

CM Siddaramaiah
ಕರ್ನಾಟಕ1 hour ago

CM Siddaramaiah: ಪೆಟ್ರೋಲ್‌ ಬೆಲೆ ಏರಿಸಿದ್ದು ಗ್ಯಾರಂಟಿಗೋ? ಅಭಿವೃದ್ಧಿಗೋ? ಸಿದ್ದರಾಮಯ್ಯ ಹೀಗಂತಾರೆ!

Virat kohli
ಪ್ರಮುಖ ಸುದ್ದಿ1 hour ago

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Darshan Arrested
ಕರ್ನಾಟಕ2 hours ago

Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌