ನೌಕರ ಮಿತ್ರ | ಶಿಶುಪಾಲನಾ ರಜೆಯ ಸೌಲಭ್ಯ ಯಾರೆಲ್ಲಾ ಪಡೆಯಬಹುದು? - Vistara News

ನೌಕರರ ಕಾರ್ನರ್

ನೌಕರ ಮಿತ್ರ | ಶಿಶುಪಾಲನಾ ರಜೆಯ ಸೌಲಭ್ಯ ಯಾರೆಲ್ಲಾ ಪಡೆಯಬಹುದು?

ʼನೌಕರ ಮಿತ್ರʼ ಇದು ಸರ್ಕಾರಿ ನೌಕರರಿಗಿರುವ ಸಮಸ್ಯೆ, ಗೊಂದಲವನ್ನು ದೂರ ಮಾಡುವ ಅಂಕಣ. ಪ್ರತಿ ದಿನ ನಿಮ್ಮ ವಿಸ್ತಾರ ನ್ಯೂಸ್‌ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಸರ್ಕಾರಿ ನೌಕರರು ರಜೆ, ವೇತನ, ಪಿಂಚಣಿ, ಇಲಾಖಾವಿಚಾರಣೆ, ಪದೋನ್ನತಿ ಮುಂತಾದ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ತಮ್ಮ ಸಮಸ್ಯೆ, ಪ್ರಶ್ನೆಗಳನ್ನು ಕಾಮೆಂಟ್‌ ಮೂಲಕ ಕೇಳಿದಲ್ಲಿ, ತಜ್ಞರಿಂದ ಉತ್ತರ ಪಡೆದು ಇಲ್ಲಿ ಪ್ರಕಟಿಸಲಾಗುತ್ತದೆ.

VISTARANEWS.COM


on

Q & A
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Naukra Mitra

ನಿಮ್ಮ ಪ್ರಶ್ನೆ : ನಾನು ಸರ್ಕಾರಿ ಶಾಲೆಯಲ್ಲಿ ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸಿದ್ದು, ಎರಡನೇ ಮಗುವಿನ ಹೆರಿಗೆಯು 03-೦1-202೨ ರಂದು ಆಗಿರುತ್ತದೆ. ನಾನು ಆಗ 180 ದಿವಸ ಪ್ರಸೂತಿ ರಜೆ ಪಡೆದಿದ್ದು, ನಾನೀಗ ಶಿಶುಪಾಲನಾ ರಜೆಯನ್ನು ತೆಗೆದುಕೊಳ್ಳಬಹುದೇ ?
-ಕಸ್ತೂರಿ. ಎಂ. ಮಂಗಳೂರು

ತಜ್ಞರು ನೀಡಿದ ಉತ್ತರ: ದಿನಾಂಕ: 21-06-2021ರ ಸರ್ಕಾರಿ ಆದೇಶದಂತೆ (ಸಂಖ್ಯೆ: ಆಇ 4(ಇ) ಸೇನಿಸೇ 2021) ಸರ್ಕಾರಿ ಮಹಿಳಾ ನೌಕರರಿಗೆ ಇಡೀ ಸೇವಾವಧಿಯಲ್ಲಿ 180 ದಿನಗಳ ಶಿಶುಪಾಲನಾ ರಜೆಯನ್ನು ಸಕ್ಷಮ ಪ್ರಾಧಿಕಾರವು ಮಂಜೂರು ಮಾಡಬಹುದೆಂದು ಸೂಚಿಸಿದೆ.

ಈ ರಜೆಯನ್ನು ನಿಮ್ಮ ಮಗುವು 18 ವರ್ಷವಾಗುವವರೆಗೆ ಆರೈಕೆಗಾಗಿ ಒಂದು ಸಲಕ್ಕೆ 15 ದಿನಗಳಿಗಿಂತ ಕಡಿಮೆ ಇಲ್ಲದಂತೆ ಪಡೆಯಬಹುದು. ಆದ್ದರಿಂದ ನೀವು ಈಗ ಶಿಶುಪಾಲನಾ ರಜೆಯನ್ನು ಈ ಆದೇಶದ ನಿಬಂಧನೆಗಳಿಗನುಸಾರ ಮಂಜೂರು ಮಾಡಿಸಿಕೊಳ್ಳಬಹುದು.

ತಜ್ಞರ ಪರಿಚಯ: ಸರ್ಕಾರಿ ನೌಕರರಿಗಿರುವ ಹಕ್ಕು, ಸೇವಾ ಕಾನೂನು, ನೀತಿಗಳ ಕುರಿತು ಆಳವಾಗಿ ಅಭ್ಯಾಸ ನಡೆಸಿರುವ ಲ. ರಾಘವೇಂದ್ರ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಿರಂತರವಾಗಿ ದನಿ ಎತ್ತುತ್ತಾ ಬಂದವರು.
ವಿಜ್ಞಾನ ಪದವಿಯೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಿಕೋದ್ಯಮ ಮತ್ತು ಶೀಘ್ರಲಿಪಿ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸೇವಾ ಕಾನೂನು, ಇಲಾಖಾ ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 300ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸೇವಾ ಕಾನೂನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅನೇಕ ಲೇಖನಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಇದನ್ನೂ ಓದಿ | ಸರ್ಕಾರಿ ನೌಕರರ ʼಕರ್ನಾಟಕ ಆರೋಗ್ಯ ಸಂಜೀವಿನಿʼ ಜಾರಿಗೆ ಪ್ರತ್ಯೇಕ ಸೆಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC 2024 Exam 2: ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಮಾಡಲು ಉದ್ದೇಶಿಸಲಾಗಿದ್ದ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಲಾಗಿದೆ. ಮೇ 29ರಿಂದ ಜೂ.6ರವರೆಗೆ ಈ ವಿಶೇಷ ತರಗತಿಗಳು ನಡೆಯಲಿವೆ. ಇನ್ನು ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2 ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಲಿದೆ

VISTARANEWS.COM


on

SSLC Exam 2024
Koo

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2

ಎಸ್ಎಸ್ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ (Karnataka SSLC 2024 Exam 2) ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಲಿದೆ. ಈ ಹಿಂದೆ ಜೂನ್‌ 7ರಿಂದ 14ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆ-2 ನಿಗದಿಯಾಗಿತ್ತು. ಆದರೆ, ಪರೀಕ್ಷೆ ಮುಂದೂಡಿಕೆಯಾಗಿದ್ದು, ಜೂನ್‌ 14ರಿಂದ ಪರೀಕ್ಷೆ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLC Result 2024 SSLC 2nd and 3rd exam aspirants to have special classes

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಇದನ್ನೂ ಓದಿ | SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

Continue Reading

ಕರ್ನಾಟಕ

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

Pratibha Puraskar: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

VISTARANEWS.COM


on

Pratibha Puraskar
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ (Pratibha Puraskar) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.

ಅರ್ಜಿ ಸಲ್ಲಿಸಲು ಗಮನಿಸಬೇಕಾದ ಅಂಶಗಳು

  • ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು.
  • ರಾಜ್ಯ ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ.
  • ವಿದ್ಯಾರ್ಥಿಯು 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
  • ವಿದ್ಯಾರ್ಥಿ, ತಂದೆ-ತಾಯಿಯ ದೂರವಾಣಿ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸುವುದು.
  • ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಧೃಡಿಕೃತ ಅಂಕಪಟ್ಟಿ, ತಂದೆ, ತಾಯಿಯ ಇಲಾಖಾ ಗುರುತಿನ ಚೀಟಿ ಅಥವಾ ಸೇವಾ ಧೃಢೀಕರಣ ಪ್ರಮಾಣ ಪತ್ರ (KSGEA News Blogನಲ್ಲಿ ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಲಭ್ಯವಿದೆ) ಮತ್ತು ಪೋಷಕರ ಸಹಿ ಸೇರಿ ಅಗತ್ಯ ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ 5 ಎಂ.ಬಿ. ಸೈಜ್ ಮೀರದಂತೆ ಅಪ್‌ಲೋಡ್ ಮಾಡುವುದು.
  • ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ ಸಂಪರ್ಕಿಸಿ: ಸುರೇಶ್ ಎನ್. ಕಛೇರಿ ವ್ಯವಸ್ಥಾಪಕರು, 080 22354784/83

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ. (https://forms.gle/vRzQ4toZuE7N8c4G9 OR https://bit.ly/ksgea2024pp)

ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

Continue Reading

ಕರ್ನಾಟಕ

MLC Election: ಪರಿಷತ್‌ ಚುನಾವಣೆಗೂ ಮುನ್ನ ಒಪಿಎಸ್‌ ಮರು ಜಾರಿಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

MLC Election: ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಒಪಿಎಸ್ ಜಾರಿ ಮಾಡಲು ಚಿಂತನೆ ಮಾಡುತ್ತಿದೆ ಎನ್ನಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕರು ಕೂಡ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ (MLC Election) ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚುನಾವಣೆಯಲ್ಲಿ (Legislative Council Elections) ಆರೂ ಸ್ಥಾನಗಳನ್ನೂ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ ರೂಪಿಸುತ್ತಿದೆ. ಈ ನಡುವೆ ಮತದಾರರನ್ನು ಸೆಳೆಯಲು ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವ ಭಾವಿ ಸಭೆಯಲ್ಲೂ ಒಪಿಎಸ್ (Old Pension Scheme) ಜಾರಿ ಬಗ್ಗೆ ಚರ್ಚೆಯಾಗಿರುವುದು ಕಂಡುಬಂದಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪರಿಷತ್‌ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್, ಕೆ.ಕೆ. ಮಂಜುನಾಥ್, ಚಂದ್ರಶೇಖರ ಪಾಟೀಲ್, ಶ್ರೀನಿವಾಸ ಹಾಗೂ ರಾಮೋಜಿ,‌ ಮರಿತ್ತಿಬ್ಬೇಗೌಡ ಭಾಗಿಯಾಗಿದ್ದರು. ಈ ವೇಳೆ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ, ತನ್ವೀರ್ ಸೇಠ್, ವಸಂತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

ಒಪಿಎಸ್ ಮರು ಜಾರಿ ಮಾಡಿದ್ರೆ ಗೆಲುವು ಖಚಿತ

ರಾಜ್ಯದಲ್ಲಿ ಒಪಿಎಸ್ ಮರು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರೆ ಗೆಲುವು ಖಚಿತ. ಹೀಗಾಗಿ ಒಪಿಎಸ್ ಬಗ್ಗೆ ಸರ್ಕಾರದ ನಿಲುವಿನ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡಿ ಎಂದು ಸಿಎಂ ಬಳಿ ಆಯನೂರು ಮಂಜುನಾಥ್ ಸೇರಿ ಕೈ ಅಭ್ಯರ್ಥಿಗಳು ಸಭೆಯಲ್ಲಿ ಮನವಿ ಮಾಡಿದ್ದಾರೆ. ಹೀಗಾಗಿ ನೌಕರರ ಮತದಾರರನ್ನು ಸೆಳೆಯಲು ಒಪಿಎಸ್‌ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ‌ ಬಳಿಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ ಸಜ್ಜಾಗಿದ್ದು, 6 ವಿಧಾನ ಪರಿಷತ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಕೈ ಅಭ್ಯರ್ಥಿಗಳ ಪಟ್ಟಿ

  1. ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್
  2. ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
  3. ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
  4. ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
  5. ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್
  6. ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ

ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
ನಾಮಪತ್ರ ಪರಿಶೀಲನೆ: ಮೇ 17, 2024
ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
ಮತದಾನ: ಜೂನ್‌ 03, 2024
ಫಲಿತಾಂಶ: ಜೂನ್‌ 06, 2024

Continue Reading

ನೌಕರರ ಕಾರ್ನರ್

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

7th Pay Commission: 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

7th Pay Commission
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು (7th Pay Commission) ಮಾರ್ಚ್‌ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿತ್ತು. ವರದಿ ಸ್ವೀಕರಿಸಿದ ನಂತರ ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಿ, ಬಳಿಕ ವೇತನ ಹೆಚ್ಚಳದ ಸಂಬಂಧಿತ ಶಿಫಾರಸು ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಇದೀಗ 7ನೇ ವೇತನ ಆಯೋಗ ಶಿಫಾರಸಿನಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ (Salary Hike) ಎಂಬ ಮಾಹಿತಿ ಇಲ್ಲಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತ್ತು. ಈ ಮೊದಲು ನೌಕರರಿಗೆ ಶೇ.40ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದರು. ಆದರೆ, ವರದಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು ಮಾಡಲಾಗಿತ್ತು. ಇದರ ಜತೆಗೆ ಮೂಲ ವೇತನವನ್ನು (Basic salary) 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿತ್ತು.

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.

ಅದೇ ರೀತಿ ಎ ವಲಯದಲ್ಲಿ ಕಾರ್ಯ ನಿರ್ವಹಿಸುವ ಎ ಮತ್ತು ಬಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು 17,000 ರೂ. ವೇತನ ಇದ್ದರೆ, ಶೇ. 31 ತುಟ್ಟಿ ಭತ್ಯೆ (5270 ರೂ.), ಫಿಟ್ಮೆಂಟ್‌ ಶೇ.27.50 (4675 ರೂ.) ಸೇರಿ ಒಟ್ಟು 26945 ರೂ ವೇತನ ಸಿಗುತ್ತಿತ್ತು. ಆದರೆ, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27000 ಇದ್ದರೆ, ತುಟ್ಟಿ ಭತ್ಯೆ ಶೇ.8.5 (2298 ರೂ.), ಮನೆ ಬಾಡಿಗೆ ಭತ್ಯೆ ಶೇ.20 (5400 ರೂ.), ನಗರ ಪರಿಹಾರ ಭತ್ಯೆ(ಸಿಸಿಎ) 900 ಸೇರಿ ಒಟ್ಟು 35,595 ವೇತನ ಸಿಗಲಿದೆ. ಇದು 6ನೇ ವೇತನ ಆಯೋಗದ ಅವಧಿಯಲ್ಲಿ 27,545 ರೂ. ಆಗಿದೆ. ಪರಿಷ್ಕೃತ ವೇತನದಲ್ಲಿ 8,050 ರೂ. ಹೆಚ್ಚಳವಾಗಲಿದೆ.

ವೇತನ ರಚನೆ ಮತ್ತು ವ್ಯತ್ಯಾಸದ ಪಟ್ಟಿ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗದ ವರದಿ ಸ್ವೀಕಾರ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ

Continue Reading
Advertisement
World Aids Vaccine Day
ದೇಶ27 mins ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Dina Bhavishya
ಭವಿಷ್ಯ27 mins ago

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

ipl 2024
ಪ್ರಮುಖ ಸುದ್ದಿ5 hours ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ5 hours ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ6 hours ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು6 hours ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ6 hours ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ6 hours ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ7 hours ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ9 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ23 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌