ವಿಸ್ತಾರ ನ್ಯೂಸ್‌ ವೆಬ್‌ಸೈಟ್‌ ಮತ್ತು ಚಾನೆಲ್‌ ಲೋಗೊ ಅನಾವರಣ: ಸಿಎಂ ಬಸವರಾಜ ಬೊಮ್ಮಾಯಿ ಉಪಸ್ಥಿತಿ - Vistara News

ಕರ್ನಾಟಕ

ವಿಸ್ತಾರ ನ್ಯೂಸ್‌ ವೆಬ್‌ಸೈಟ್‌ ಮತ್ತು ಚಾನೆಲ್‌ ಲೋಗೊ ಅನಾವರಣ: ಸಿಎಂ ಬಸವರಾಜ ಬೊಮ್ಮಾಯಿ ಉಪಸ್ಥಿತಿ

ಕನ್ನಡ ನಾಡಿನ ಮಾಧ್ಯಮ ಲೋಕದ ವಿಭಿನ್ನ ಪ್ರಯತ್ನವಾಗಿ ವಿಸ್ತಾರ ಮೀಡಿಯಾ ವೆಬ್‌ಸೈಟ್‌ ಹಾಗೂ ಲೋಗೊವನ್ನು ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಅನಾವರಣಗೊಳಿಸಲಾಯಿತು.

VISTARANEWS.COM


on

vistara news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಮಾಧ್ಯಮ ಲೋಕದಲ್ಲಿ ವಿನೂತನ ಪ್ರಯತ್ನವಾದ ವಿಸ್ತಾರ ನ್ಯೂಸ್‌ ವೆಬ್‌ಸೈಟ್‌ ಹಾಗೂ ಲೋಗೊ ಅನಾವರಣವನ್ನು ನಾಡಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಿದರು.

ಬೆಂಗಳೂರಿನ ಎಫ್‌ಕೆಸಿಸಿಐನ ಸರ್‌. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಾಡಿನ ವಿವಿಧ ಗಣ್ಯ ಉದ್ಯಮಿಗಳು, ಜನಪ್ರತಿನಿಧಿಗಳು, ಸಾಹಿತಿಗಳು, ಲೇಖಕರು, ವಿವಿಧ ಮಾಧ್ಯಮ ಪ್ರತಿನಿಧಿಗಳು, ಪತ್ರಿಕೋದ್ಯಮ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅನಾವರಣಗೊಂಡಿತು.

ಅನಾವರಣಕ್ಕೂ ಮುನ್ನ ಪ್ರಾಸ್ತಾವಿಕವಾಗಿ ಮಾತನಾಡಿದ ವಿಸ್ತಾರ ಮೀಡಿಯಾ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ ಕೋಣೆಮನೆ, ಮಾಧ್ಯಮ ನಾಲ್ಕನೇ ಅಂಗವಾಗಿ ಇದುವರೆಗೂ ಉಳಿದ ಮೂರು ಅಂಗಗಳಿಗೆ ಪ್ರತ್ಯೇಕವಾದದ್ದು ಎಂಬ ಭಾವನೆ ಇದೆ. ಇಂತಹ ಆಕ್ಷೇಪ ಸಮಾಜದಲ್ಲಿಯೂ ಇದೆ. ವರದಿ ಮಾಡುವುದು, ಟೀಕೆ ಮಾಡುವುದು, ವಿಶ್ಲೇಷಣೆ ಮಾಡುವುದು ಮಾತ್ರವೇ ನಮ್ಮ ಹೊಣೆಗಾರಿಕೆ ಎಂದು ತಿಳಿದಂತಿದೆ.

ಈ ದೇಶದಲ್ಲಿ ಯಾವುದೆಲ್ಲ ಒಳಿತಾಗಿದೆಯೋ, ಅದೆಲ್ಲದಕ್ಕೂ ಮಾಧ್ಯಮ ಕಾರಣ, ಈ ವ್ಯವಸ್ಥೆಯನ್ನು ಬಡಿದೆಬ್ಬಿಸಲು ಮಾಧ್ಯಮ ಕಾರಣ ಎಂದು ನಾವು ತಿಳಿದರೆ, ಇಲ್ಲಿರುವ ದೋಷಗಳಿಗೂ ನಾವು ಹೊಣೆ ಹೊರಬೇಕಾಗುತ್ತದೆ. ಇದೇ ವಿಸ್ತಾರ ಮೀಡಿಯಾದ ಆಶಯ. ಪಾರದರ್ಶಕತೆಗೆ ಮಾಧ್ಯಮ ಪರ್ಯಾಯವಾದಾಗ ಸಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಚೇರ್ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಚ್‌.ವಿ. ಧರ್ಮೇಶ್‌, ನಿರ್ದೇಶಕರಾದ ಶ್ರೀನಿವಾಸ ಹೆಬ್ಬಾರ್‌, ಕೂ ಸಾಮಾಜಿಕ ಜಾಲತಾಣದ ಸಹ ಸ್ಥಾಪಕ ಅಪ್ರಮೇಯ ರಾಧಾಕೃಷ್ಣ, ಓಪನ್‌ ಡಾಟ್ ಮನಿ ಜಾಲತಾಣದ ಸಹ ಸ್ಥಾಪಕ ಅನೀಶ್‌ ಅಚ್ಯುತನ್‌, ಫ್ರೀಡಂ ಆ್ಯಪ್‌ನ ಸ್ಥಾಪಕ ಹಾಗೂ ಸಿಇಒ ಸಿ.ಎಸ್‌. ಸುಧೀರ್‌, ಎಫ್‌ಕೆಸಿಸಿಐ ಅಧ್ಯಕ್ಷ ಡಾ. ಸಿ.ಎ. ಐ.ಎಸ್‌. ಪ್ರಸಾದ್‌, ವಿಸ್ತಾರ ನ್ಯೂಸ್‌ ಎಕ್ಸೆಕ್ಯೂಟಿವ್‌ ಎಡಿಟರ್‌ ಶರತ್‌ ಎಂ.ಎಸ್‌. ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kannada- Marathi Row: ಮಹಾರಾಷ್ಟ್ರ ಸದನದಲ್ಲಿ ಕನ್ನಡ ಪರ ದನಿ, ಗಡಿಯಲ್ಲಿ ಮರಾಠಿ ದಬ್ಬಾಳಿಕೆಗೆ ಪ್ರತಿಭಟನೆ

Kannada- Marathi Row: ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಮಹಾರಾಷ್ಟ್ರದ ಜತ್ ತಾಲೂಕಿನ ಸಂಖ್ ಉಪತಹಶೀಲ್ದಾರ್ ಕಚೇರಿ ಮುಂದೆ ಗಡಿ ಕನ್ನಡಿಗರು ಪ್ರತಿಭಟನೆ ನಡೆಸಿದರು. ಜತ್ ತಾಲೂಕಿನ ಗಡಿ ನಾಡು ಕನ್ನಡ ಸಂಘದವರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಮಹಾರಾಷ್ಟ್ರದ ಸದನದಲ್ಲಿಯೂ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕದ ವಿಚಾರವನ್ನು ಜತ್ ತಾಲೂಕಿನ ಶಾಸಕ ವಿಕ್ರಮ್ ಸಾವಂತ ಪ್ರಸ್ತಾಪಿಸಿದರು.

VISTARANEWS.COM


on

kannada marathi row
Koo

ಬೆಳಗಾವಿ: ಮಹಾರಾಷ್ಟ್ರದಲ್ಲಿ (Maharashtra) ಬೆಳಗಾವಿ ಗಡಿ (Belagavi news) ಕನ್ನಡಿಗರ ಹೋರಾಟ (Kannada- Marathi Row) ಜೋರಾಗಿದ್ದು, ಮಹಾರಾಷ್ಟ್ರ ಸರ್ಕಾರದ ದಬ್ಬಾಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರಿ ಕನ್ನಡ ಶಾಲೆಗಳಿಗೆ (Govt kannada schools) ಮರಾಠಿ ಶಿಕ್ಷಕರ (Teachers) ನೇಮಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಮಹಾರಾಷ್ಟ್ರದ ಜತ್ ತಾಲೂಕಿನ ಸಂಖ್ ಉಪತಹಶೀಲ್ದಾರ್ ಕಚೇರಿ ಮುಂದೆ ಗಡಿ ಕನ್ನಡಿಗರು ಪ್ರತಿಭಟನೆ ನಡೆಸಿದರು. ಜತ್ ತಾಲೂಕಿನ ಗಡಿ ನಾಡು ಕನ್ನಡ ಸಂಘದವರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಟಿಇಟಿ ಪರೀಕ್ಷೆಯನ್ನು ಸಹ ಮರಾಠಿ ಮಾಧ್ಯಮದಲ್ಲೆ ಮಹಾರಾಷ್ಟ್ರ ಶಿಕ್ಷಣ ಇಲಾಖೆ ನಡೆಸುತ್ತಿದ್ದು, 500 ಪ್ರಶಿಕ್ಷಣಾರ್ಥಿಗಳ ಪೈಕಿ ಕೇವಲ ಒಬ್ಬಿಬ್ಬರು ಮಾತ್ರ ಪಾಸ್ ಆಗುತ್ತಿದ್ದಾರೆ. ಟಿಇಟಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮಕ್ಕೂ ಅವಕಾಶ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಜತ್ತ, ಅಕ್ಕಲಕೋಟ ತಾಲ್ಲೂಕಿನಲ್ಲಿ ಅತಿ ಹೆಚ್ಚು ಕನ್ನಡಿಗರು ಇದ್ದಾರೆ. ಹೀಗಾಗಿ ಗಡಿ ಕನ್ನಡಿಗರ ಹಿತ ಕಾಪಾಡಿ ಎಂದು ಒತ್ತಾಯಿಸಲಾಯಿತು.

ಸದನದಲ್ಲಿ ವಿಕ್ರಮ್‌ ಸಾವಂತ ಪ್ರಸ್ತಾಪ

ಈ ನಡುವೆ, ಮಹಾರಾಷ್ಟ್ರದ ಸದನದಲ್ಲಿಯೂ ಗಡಿ ಕನ್ನಡಿಗರ ಸಮಸ್ಯೆ ಪ್ರಸ್ತಾಪವಾಗಿದೆ. ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕದ ವಿಚಾರವನ್ನು ಜತ್ ತಾಲೂಕಿನ ಶಾಸಕ ವಿಕ್ರಮ್ ಸಾವಂತ ಸದನದಲ್ಲಿ ಪ್ರಸ್ತಾಪಿಸಿದರು.

ಕರ್ನಾಟಕದ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಇರುವ ಹಾಗೇ ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡ ಭಾಷಿಕರು ಇದ್ದಾರೆ. ಜತ್, ಅಕ್ಕಲಕೋಟ ತಾಲ್ಲೂಕಿನಲ್ಲಿ ಹೆಚ್ಚು ಕನ್ನಡ ಭಾಷಿಕರು ಇದ್ದಾರೆ. ಇಲ್ಲಿನ‌ ಸರ್ಕಾರಿ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದು ಗಡಿ ಭಾಗದ ಕನ್ನಡಿಗರಲ್ಲಿ ಮಹಾರಾಷ್ಟ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬ ಭಾವನೆ ಮೂಡಿಸಿದೆ. ಸರ್ಕಾರ ತಕ್ಷಣವೇ ಗಡಿ ಭಾಗದ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸರ್ಕಾರಿ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಶಾಸಕ ವಿಕ್ರಮ ಸಾವಂತ ಸದನದಲ್ಲಿ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯನವರಿಗೂ ಗಮನ ಹರಿಸಲು ಆಗ್ರಹ

ಬೆಳಗಾವಿ: ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿಯ ಕನ್ನಡ ಶಾಲೆಗಳಿಗೆ (Kannada Schools) ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯ ಹಾಳು ಮಾಡುತ್ತಿರುವ ಮಹಾರಾಷ್ಟ್ರ ಸರ್ಕಾರದ (Maharashtra Government) ಕನ್ನಡ ವಿರೋಧಿ ನೀತಿಯನ್ನು ಪ್ರತಿಭಟಿಸುವ ಕುರಿತು ಈಗ ಕನ್ನಡಿಗರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ (Belagavi News) ಬರೆದಿದ್ದಾರೆ.

ಈ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಇತರರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ಗಮನ ಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ ಎಂದು ಹೇಳಿದ್ದಾರೆ.

ಸಾಂಗ್ಲಿ ಜಿಲ್ಲಾ ಪಂಚಾಯಿತಿಯು ಇತ್ತೀಚೆಗೆ ಕನ್ನಡ ಶಾಲೆಗಳಿಗಾಗಿ ನೇಮಕ ಮಾಡಿದ 24 ಶಿಕ್ಷಕರ ಪೈಕಿ ಕೇವಲ ನಾಲ್ವರು ಮಾತ್ರ ಕನ್ನಡಿಗರಾಗಿದ್ದಾರೆ. ಕನ್ನಡ ಡಿ.ಎಡ್. ಪದವಿ ಪಡೆದ ನೂರಾರು ಶಿಕ್ಷಕರು ಕನ್ನಡ ಪ್ರದೇಶಗಳಲಿದ್ದು ಅವರನ್ನು ಕನ್ನಡ ಶಾಲೆಗಳಿಗೆ ನೇಮಕ ಮಾಡದೇ ಮರಾಠಿ ಶಿಕ್ಷಕರನ್ನು ನೇಮಕ ಮಾಡುತ್ತಿರುವ ಅಲ್ಲಿಯ ಸರ್ಕಾರದ ಕ್ರಮವು ದುರದ್ದೇಶಪೂರಿತವಾಗಿದೆ. ಈ ಕ್ರಮದ ವಿರುದ್ಧ ಅಲ್ಲಿಯ ಕನ್ನಡಿಗರು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಅವರ ಬೆನ್ನಿಗೆ ಕರ್ನಾಟಕ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

Continue Reading

ಅಂಕಣ

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

ನನ್ನ ದೇಶ ನನ್ನ ದನಿ ಅಂಕಣ: ಐವತ್ತು ವರ್ಷಗಳ ಹಿಂದೆಯೇ ನಿರಂಜನರು “ಕಿರಿಯರ ವಿಶ್ವಕೋಶ” ತಂದರು. ಇಂದಿನಂತೆ ಕಂಪ್ಯೂಟರ್, ಅಂತರಜಾಲ, ಫೋನ್, ಇತ್ಯಾದಿ ಇಲ್ಲದ ಆ ಕಾಲಘಟ್ಟದಲ್ಲಿ ನಿರಂಜನ ಅವರ ಸಂಗ್ರಹ, ಸಂಪಾದನೆ ಮತ್ತು ಪ್ರಸ್ತಾವನೆಗಳು ನಿಜವಾಗಿಯೂ ಸಾಹಸವೇ. ವಿವಿಧ ಪ್ರವರ್ಗಗಳ ಅವರ ಕೃತಿಗಳನ್ನು, ಸಂಪಾದಿತ ಕೃತಿಗಳನ್ನು ನೋಡುವಾಗ, ನಿರಂಜನರು ಅದೆಂತಹ ಅದ್ಭುತ ಸಾಧಕರು, ಎನಿಸಿ ಗೌರವ ಇನ್ನಷ್ಟು ಹೆಚ್ಚಾಗುತ್ತದೆ.

VISTARANEWS.COM


on

niranjana ನನ್ನ ದೇಶ ನನ್ನ ದನಿ ಅಂಕಣ
Koo

ನಿರಂಜನ ಅವರ ಜನ್ಮ ಶತಮಾನೋತ್ಸವ

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath ನನ್ನ ದೇಶ ನನ್ನ ದನಿ

ನನ್ನ ದೇಶ ನನ್ನ ದನಿ ಅಂಕಣ: “ಇಡೀ ಜಗತ್ತಿನ ಇತಿಹಾಸವನ್ನು (History) ಕನ್ನಡದಲ್ಲಿ ಬರೆಯಬೇಕು ಎನಿಸುತ್ತಿದೆ” ಎಂದು ಆಸೆಪಟ್ಟಿದ್ದರು ನಿರಂಜನ (Niranjana).

ಇದೀಗ ಲೇಖಕ, ಸಂಪಾದಕ, ಕಾದಂಬರಿಕಾರ, ಅಪರೂಪದ ಸಾಧಕ “ನಿರಂಜನ” (ಜನನ : ಜೂನ್ 1924) ಅವರ ಶತಮಾನೋತ್ಸವ. ನಿರಂಜನ ಎಂದರೆ ಜ್ಞಾನ, ದೋಷರಹಿತವಾದುದು ಎಂಬೆಲ್ಲಾ ಅರ್ಥಗಳಿವೆ. ಶಿವ ಎನ್ನುವ ಅರ್ಥವೂ ಇದೆ. ಮೂಲತಃ ಕುಳಕುಂದ ಶಿವ ರಾವ್ ಆಗಿದ್ದ ಅವರು “ನಿರಂಜನ” ಎಂಬ ಕಾವ್ಯನಾಮ ಬಳಸಿದುದು ಅನ್ವರ್ಥವೇ ಆಗಿತ್ತು. ಕನ್ನಡ ಸಾಹಿತ್ಯದಲ್ಲಿ ಶಿವರಾಮ ಕಾರಂತರಂತೆ, ಮಹತ್ತ್ವದ ಮತ್ತು ಬಹು-ಆಯಾಮದ ಸಾಹಿತ್ಯ ರಚನೆ ಮಾಡಿದವರು ವಿರಳ. ಆದರೆ ಎಚ್ಚೆಸ್ಕೆ, ನಿರಂಜನ ಅವರನ್ನು ಈ ಕ್ಷಣಕ್ಕೆ ನೆನಪು ಮಾಡಿಕೊಳ್ಳಬಹುದು. ಸ್ವಯಂಭೂ, ಸ್ವಯಂಘೋಷಿತ ಸಾಹಿತ್ಯ ಧುರಂಧರ ಭಯಂಕರರ ಮಾಫಿಯಾದ ಅಬ್ಬರದಲ್ಲಿ, ಪ್ರಶಸ್ತಿ – ಸ್ಥಾನಮಾನ ಇತ್ಯಾದಿಗಳಿಗೆ ಹಾತೊರೆಯದೆ ತಮ್ಮ ಪಾಡಿಗೆ ತಾವು ಶುದ್ಧ ಸಾಹಿತ್ಯ ಸೇವೆಯನ್ನು ವ್ರತದಂತೆ ಪಾಲಿಸಿದವರು ಈ ಎಚ್ಚೆಸ್ಕೆ, ನಿರಂಜನ ಅಂತಹವರು.

1982ರಲ್ಲಿ ಒಮ್ಮೆ ಹೀಗಾಯಿತು. ಆಕಾಶವಾಣಿಯಲ್ಲಿ ಸಂಸ್ಕೃತ ವಾರ್ತೆಗಳು ಆರಂಭವಾದವು. ಕನ್ನಡದ ನಮ್ಮ ಸಮಾಜವಾದೀ, ಸಾಮ್ಯವಾದೀ ಲೇಖಕರು ಭಾರೀ ಗದ್ದಲವೆಬ್ಬಿಸಿದರು. ಅವರದ್ದೇ ನಿಯಂತ್ರಣದ ಪತ್ರಿಕೆಗಳನ್ನು ಓದಿದರೆ, ಏನೋ ಆಗಬಾರದ್ದು ಆಗಿಹೋಗಿದೆ, ಪ್ರಳಯವೇ ಆಗುತ್ತಿದೆ, ಎಂಬಂತಹ ಅಭಿಪ್ರಾಯ ಮೂಡುತ್ತಿತ್ತು. ಒಂದು ಪ್ರತಿಭಟನಾ ಸಭೆಯನ್ನೇ ಆಯೋಜಿಸಲಾಯಿತು. ನಾನೂ ಸಭಿಕನಾಗಿ ಹೋಗಿದ್ದೆ. ನಿರಂಜನ ಅವರದ್ದೇ ಅಧ್ಯಕ್ಷತೆ. ಒಬ್ಬೊಬ್ಬರಾಗಿ “ಕೆಲವೇ ಕೆಲವು ನಿಮಿಷಗಳ ಈ ಸಂಸ್ಕೃತ ವಾರ್ತೆಯ ಪ್ರಸಾರದಿಂದ” ಹೇಗೆ ಮತ್ತು ಎಷ್ಟು ಅನಾಹುತವಾಗುತ್ತಿದೆ, ಎಂದೆಲ್ಲಾ ಕೂಗಾಡತೊಡಗಿದರು. ಅನಂತರ ನಮ್ಮ ಸಮಾಜವಾದೀ ಲೇಖಕ ಮಿತ್ರ ಕಾಳಪ್ಪನವರು ಎದ್ದು ಮೈಕ್ ಮುಂದೆ ನಿಂತು ರೋದಿಸಲು ಪ್ರಾರಂಭಿಸಿದರು. “ನೋಡಿ, ಸತ್ತ ಭಾಷೆ ಸಂಸ್ಕೃತಕ್ಕೆ ಮಣೆ ಹಾಕಲಾಗುತ್ತಿದೆ. ಆದರೆ ಜನಭಾಷೆ ಉರ್ದುವಿಗೆ ಸ್ಥಾನವಿಲ್ಲ” ಇತ್ಯಾದಿ ಗಳಹತೊಡಗಿದರು. ತಡೆಯಲಾರದೆ, ನಾನು ಎದ್ದು ನಿಂತು ಗಟ್ಟಿಯಾಗಿ “ಎರಡಕ್ಕೂ ಹೋಲಿಕೆಯಿಲ್ಲ, ಉರ್ದುವಿಗೆ ಆಕಾಶವಾಣಿಯಲ್ಲಿ ಪ್ರತ್ಯೇಕ ಸ್ಟೇಷನ್ ಇದೆ” ಎಂದು ಆಕ್ಷೇಪಿಸಿದೆ. ನಮ್ಮ ಕಾಳಪ್ಪನವರಿಗೆ ಬರೀ ದ್ವೇಷ, ಪೂರ್ವಗ್ರಹಗಳೇ ಹೊರತು ಮಾಹಿತಿಯೂ ಇಲ್ಲ, ತಿಳಿವಳಿಕೆಯೂ ಇಲ್ಲ. ಸಭಾಂಗಣದಲ್ಲಿ ಆಗ ಗಲಾಟೆಯೇ ಆಗಿಹೋಯಿತು. ಸಭೆಯನ್ನೇ ಮುಗಿಸಬೇಕಾಯಿತು. ನಾನು ನೇರವಾಗಿ ಸಭಾಧ್ಯಕ್ಷರಾದ ನಿರಂಜನ ಅವರಲ್ಲಿಗೇ ಹೋಗಿ, ಪ್ರತ್ಯೇಕ ಉರ್ದು ಸ್ಟೇಷನ್ ಇರುವುದನ್ನು, ಸಂಸ್ಕೃತದಲ್ಲಿ ಕೇವಲ ಕೆಲವು ನಿಮಿಷಗಳ ವಾರ್ತೆ ಮಾತ್ರ ಬರುತ್ತಿದೆ, ಎಂಬಿತ್ಯಾದಿ ವಿವರ ಹೇಳಿದೆ. ಸಜ್ಜನರಾದ ಅವರು “You have a valid point” ಎಂದು ಒಪ್ಪಿಕೊಂಡರು.

ನವಕರ್ನಾಟಕ ಪ್ರಕಾಶನದ ಮಹತ್ತ್ವದ ಯೋಜನೆಗಳಲ್ಲೊಂದು ನಿರಂಜನ ಅವರು ಸಂಪಾದಕರಾಗಿದ್ದ 25 ಸಂಪುಟಗಳ “ವಿಶ್ವಕಥಾಕೋಶ” ಸರಣಿ. ಈ ಕಟ್ಟಿನಲ್ಲಿ ಧರಣಿ ಮಂಡಲ ಮಧ್ಯದೊಳಗೆ, ಆಫ್ರಿಕಾದ ಹಾಡು, ಕಾಡಿನಲ್ಲಿ ಬೆಳದಿಂಗಳು, ಚೆಲುವು, ಸುಭಾಷಿಣಿ, ವಿಚಿತ್ರ ಕಕ್ಷಿದಾರ, ಮಂಜು ಹೂವಿನ ಮದುವಣಿಗ, ಬೂದು ಬಣ್ಣದ ಕಾಂಗರೂ, ಹೆಜ್ಜೆಗುರುತು, ಅರಬಿ, ನೆತ್ತರು ದೆವ್ವ, ಬಾವಿ ಕಟ್ಟೆಯ ಬಳಿ, ಅದೃಷ್ಟ, ಸಜ್ಜನನ ಸಾವು, ಡೇಗೆ ಹಕ್ಕಿ, ಅವಸಾನ, ತಾತನ ಹುಟ್ಟುಹಬ್ಬ, ಬಾಲ ಮೇಧಾವಿ, ಇಬ್ಬರು ಗೆಳೆಯರು, ಅಬಿಂದಾ ಸಯೀದಾ, ನಿಗೂಢಸೌಧ, ಬೆಳಗಾಗುವ ಮುನ್ನ, ಮರಳುಗಾಡಿನ ಮದುವೆ, ಕಿವುಡು ವನದೇವತೆ, ಸಾವಿಲ್ಲದವರು ಸಂಪುಟಗಳಿವೆ.

ಜಗತ್ತಿನ ನೂರಾರು ದೇಶಗಳ ಹಲವು ನೂರು ಪ್ರಾತಿನಿಧಿಕ ಕಥೆಗಳು. ಅತ್ಯದ್ಭುತ ಸಂಚಯವದು. ನಿರಂಜನ ಅವರ ಸಂಪಾದಕತ್ವ ಎಂದರೆ, ಅಂತಹ ಯೋಜನೆಯ ಸತ್ತ್ವ ಏನು, ಪ್ರಾಮುಖ್ಯ ಏನು ಎಂದು ಅರಿಯಲು ಆ ಸಂಪುಟಗಳನ್ನೇ ಓದಬೇಕು, ಮುಖ್ಯವಾಗಿ ಆ ಎಲ್ಲ ಸಂಪುಟಗಳಿಗೆ ನಿರಂಜನ ಅವರು ಸಂಪಾದಕರಾಗಿ ಬರೆದ ಪ್ರಸ್ತಾವನೆಗಳನ್ನೂ ಓದಬೇಕು. ಆಯಾ ಸಂಕಲನದಲ್ಲಿ ಇರುವ ಕತೆಗಳು ಯಾವೆಲ್ಲ ದೇಶಗಳಿಗೆ ಸೇರಿವೆಯೋ, ಆ ದೇಶಗಳ ಪುಟ್ಟ ಸಾಂಸ್ಕೃತಿಕ ಇತಿಹಾಸವನ್ನೇ ಅವರು ನೀಡಿದ್ದಾರೆ. ಅದೊಂದು ದಾಖಲೆ, ಅದೊಂದು ಅದ್ಭುತ. ನಿರಂಜನ ಅವರು ಒಂದು ಚಿಕ್ಕ ಕಿಂಡಿಯಲ್ಲಿ ಜಗತ್ತಿನ ವಿಶ್ವರೂಪ ದರ್ಶನವನ್ನೇ ಮಾಡಿಸಿದ್ದರು, ಮಾಡಿಸಿದ್ದಾರೆ (ಮುಂದೆ ಪ್ರಕಾಶಕರು ಈ ಪ್ರಸ್ತಾವನೆಗಳನ್ನೇ ಪ್ರತ್ಯೇಕ ಸಂಪುಟವನ್ನಾಗಿ ಹೊರತಂದು ಮೆಚ್ಚುವಂತಹ ಕೆಲಸ ಮಾಡಿದರು).

ಈ “ವಿಶ್ವಕಥಾಕೋಶ” ಸಂಪುಟಗಳ ಒಂದು ಸರಣಿಯ ಲೋಕಾರ್ಪಣೆಗೆ, ನನ್ನ ನೆಚ್ಚಿನ ಅಂಕಣಕಾರರಾದ ಹಾ.ಮಾ.ನಾಯಕರು ಬಂದಿದ್ದರು. ಒಂದೇ ವೇದಿಕೆಯಲ್ಲಿ ಹಾ.ಮಾ.ನಾಯಕರನ್ನು, ನಿರಂಜನರನ್ನು ನೋಡುವ ಭಾಗ್ಯ ನಮ್ಮದು. ಲೋಕಾರ್ಪಣೆಯಾದ ಸರಣಿಗಳಲ್ಲಿ ರಷ್ಯನ್ ಕತೆಗಳೂ ಇದ್ದವು. ಲೋಕಾರ್ಪಣೆ ಮಾಡಿದ ಹಾ.ಮಾ.ನಾಯಕರು “ಈ ಸಂಕಲನಗಳಲ್ಲಿ ದಸ್ತಯೇವ್ ಸ್ಕಿ, ತೋಲ್ಸ್ ತೋಯ್ ಎಂಬ ಪ್ರಯೋಗಗಳಿವೆ, ನಮಗೆಲ್ಲಾ ಸುಪರಿಚಿತವಾಗಿರುವ ದಾಸ್ತೋವಸ್ಕಿ, ಟಾಲ್ ಸ್ಟಾಯ್ ಎಂಬ ಪದಗಳನ್ನೇ ಪ್ರಯೋಗಿಸಬಹುದಿತ್ತು” ಎಂದು ಅಭಿಪ್ರಾಯಪಟ್ಟರು. ಅದಕ್ಕೆ ಉತ್ತರವಾಗಿ ನಿರಂಜನರು “ನಾಯಕರೇ, ನಮಗೆ ಹೆಚ್ಚು ಪರಿಚಯವಿರುವ ಹೆಸರುಗಳು ಎರಡೋ ಮೂರೋ. ಆದರೆ, ಈ ಎಲ್ಲ ದೇಶಗಳ ಕತೆಗಳಲ್ಲಿ ಅಲ್ಲಿನ ನೂರಾರು ಹೆಸರುಗಳಿವೆ. ಅಲ್ಲಿನ ಸ್ಥಳೀಯವಾದ ಮತ್ತು ಅವರು ಬಳಸುವ ಮೂಲ-ಪ್ರಯೋಗಗಳನ್ನೇ ಬಳಸಿದ್ದೇವೆ. ನಮಗೆ ಪರಿಚಯವಿರುವ ಕೆಲವು (ಅಪಭ್ರಂಶವಾಗಿಹೋಗಿರುವ) ಪ್ರಯೋಗಗಳನ್ನು ಮಾತ್ರ ಉಳಿಸಿಕೊಳ್ಳಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದರು.

ನನಗಂತೂ ನಿರಂಜನರ ಪರಿಕಲ್ಪನೆ ಅದ್ಭುತ ಎನಿಸಿತು.

ಕಾರಣಾಂತರಗಳಿಂದ ನಮ್ಮ ಮೇಲೆ ಮುಗಿಬಿದ್ದಿರುವ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಧ್ವಾನದ ಕಾರಣಕ್ಕೆ ಮೂಲ ಉಚ್ಚಾರಣೆಗಳಿಗೂ, ನಾವು ಬಳಸುತ್ತಿರುವ ಉಚ್ಚಾರಣೆಗಳಿಗೂ ಅರ್ಥಾತ್ ಸಂಬಂಧವೇ ಇಲ್ಲ ಎನ್ನುವಂತಾಗಿದೆ. ಹತ್ತಾರು ವರ್ಷಗಳಿಂದ ಸೀತಾರಾಮ ಗೋಯಲ್ ಅವರ “ವಾಯ್ಸ್ ಆಫ್ ಇಂಡಿಯಾ” ಸರಣಿಯ ಸಂಪಾದಕನಾಗಿ, ಈ ಗ್ರಂಥಗಳಲ್ಲಿ ಬರುವ ಸಾವಿರಾರು ಹೆಸರುಗಳಿಗೆ, ಸ್ಥಳನಾಮಗಳಿಗೆ ಮೂಲ ಉಚ್ಚಾರಣೆಗಳನ್ನು ದೊರಕಿಸಿಕೊಳ್ಳಲು, ಪ್ರತಿಬಾರಿಯೂ ಅಪಾರ ಪರಿಶ್ರಮ ಹಾಕಬೇಕಾಗುತ್ತಿದೆ. ಪ್ರತಿಬಾರಿಯೂ ನಿರಂಜನರಂತಹ ಧೀಮಂತರು ನೆನಪಾಗುತ್ತಾರೆ, ಎಂದರೆ ಉತ್ಪ್ರೇಕ್ಷೆಯಲ್ಲ.

ಉದಾಹರಣೆಗೆ, ಉತ್ತರ ಪ್ರದೇಶದ “ಅಮೇಠಿ” (ಸರಿಯಾದ ಪ್ರಯೋಗ) ಕ್ಷೇತ್ರವು, ಸಂಜಯ ಗಾಂಧಿ ಅವರ ಕಾಲದಿಂದಲೂ “ಖ್ಯಾತಿ” ಪಡೆದಿದೆ. ರೋಮನ್ ಲಿಪಿಯ ಅದ್ವಾನದ ಕಾರಣದಿಂದ (ನಾಲ್ಕೈದು ದಶಕಗಳಿಂದಲೂ) ಕನ್ನಡದ ಪತ್ರಿಕೆಗಳಲ್ಲಿ, ವಾಹಿನಿಗಳಲ್ಲಿ ಮತ್ತು ಪುಸ್ತಕಗಳಲ್ಲಿ ಬಹುಪಾಲು “ಅಮೇಥಿ” ಎಂದೇ ಬಳಸಲಾಗುತ್ತಿದೆ! ಅಂತೆಯೇ, ಚೀನಾ ದೇಶದ Sinkiang / Xinjiang ಅನ್ನು ಸಿಂಕಿಯಾಂಗ್ ಎಂದೇ ಅನೇಕ ಕಡೆ ಉಲ್ಲೇಖಿಸಲಾಗಿದೆಯಾದರೂ, ಸರಿಯಾದ ಪ್ರಯೋಗ “ಶಿಂಜಾಂಗ್” ಆಗಿದೆ.

ನಿರಂಜನ ಅವರು ಆ ಕಾಲದಲ್ಲಿ ಮೂಲ ಉಚ್ಚಾರಣೆಗಳಿಗಾಗಿ ಅದೆಷ್ಟು ಶ್ರಮ ಹಾಕಿದರೋ, ಏನೋ?! ಐವತ್ತು ವರ್ಷಗಳ ಹಿಂದೆಯೇ ನಿರಂಜನರು “ಕಿರಿಯರ ವಿಶ್ವಕೋಶ” ತಂದರು. ಇಂದಿನಂತೆ ಕಂಪ್ಯೂಟರ್, ಅಂತರಜಾಲ, ಫೋನ್, ಇತ್ಯಾದಿ ಇಲ್ಲದ ಆ ಕಾಲಘಟ್ಟದಲ್ಲಿ ನಿರಂಜನ ಅವರ ಸಂಗ್ರಹ, ಸಂಪಾದನೆ ಮತ್ತು ಪ್ರಸ್ತಾವನೆಗಳು ನಿಜವಾಗಿಯೂ ಸಾಹಸವೇ. ವಿವಿಧ ಪ್ರವರ್ಗಗಳ ಅವರ ಕೃತಿಗಳನ್ನು, ಸಂಪಾದಿತ ಕೃತಿಗಳನ್ನು ನೋಡುವಾಗ, ನಿರಂಜನರು ಅದೆಂತಹ ಅದ್ಭುತ ಸಾಧಕರು, ಎನಿಸಿ ಗೌರವ ಇನ್ನಷ್ಟು ಹೆಚ್ಚಾಗುತ್ತದೆ.

ಅಂದಿನ ಆ ಲೋಕಾರ್ಪಣೆ ಸಮಾರಂಭದಲ್ಲಿ, ನಿರಂಜನರು “ಇಡೀ ಜಗತ್ತಿನ ಇತಿಹಾಸವನ್ನು ಕನ್ನಡದಲ್ಲಿ ಬರೆಯಬೇಕು ಎನಿಸುತ್ತಿದೆ” ಎಂದು ಆಸೆಪಟ್ಟಿದ್ದರು. ವಿಲ್ ಡ್ಯೂರಾಂಟ್ ಅವರ “ದ ಸ್ಟೋರಿ ಆಫ್ ಸಿವಿಲೈಸೇಷನ್” ಬೃಹತ್ ಸಂಪುಟಗಳನ್ನು ನೋಡುವಾಗ, ನಿರಂಜನರದ್ದೇ ನೆನಪು. ಆರೋಗ್ಯ ಚೆನ್ನಾಗಿದ್ದಿದ್ದರೆ ಅಂತಹುದನ್ನು ಅವರು ಖಂಡಿತವಾಗಿಯೂ ಸಾಧಿಸುತ್ತಿದ್ದರು.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: “ನೀವು ಭಾರತೀಯರೋ, ರಾಷ್ಟ್ರೀಯರೋ?” ಎಮರ್ಜೆನ್ಸಿಯ ಕರಾಳ ನೆನಪು

Continue Reading

ಕ್ರೈಂ

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

Dengue fever: ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಕ್ಷತಾ (13) ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ.

VISTARANEWS.COM


on

dengue fever hassan girl death
Koo

ಹಾಸನ: ಡೆಂಗ್ಯು ಜ್ವರದ (Dengue fever) ಪರಿಣಾಮ ಬಾಲಕಿಯೊಬ್ಬಳು (Girl death) ಮೃತಪಟ್ಟಿದ್ದಾಳೆ. ರಾಜ್ಯದಲ್ಲಿ ದಿನೇ ದಿನೆ ಡೆಂಗ್ಯು ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಸಣ್ಣ ಮಕ್ಕಳಲ್ಲಿ ಇದು ಮಾರಣಾಂತಿಕವಾಗುತ್ತಿರುವುದು ಆತಂಕ ಮೂಡಿಸಿದೆ.

ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಕ್ಷತಾ (13) ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ. ಕಳೆದ ಬುಧವಾರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಕ್ಷತಾ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರಾದ ಅಕ್ಷತಾಳ ಪೋಷಕರು ಕೂಲಿ ಕೆಲಸ ಮಾಡುವ ಬಡವರಾಗಿದ್ದಾರೆ.

ಗುಣಮಖಳಾಗದಿದ್ದಾಗ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಚೇತರಿಸಿಕೊಳ್ಳದ ಅಕ್ಷತಾಳನ್ನು ನಂತರ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಖಾಸಗಿ ಆಸ್ಪತ್ರೆ ವೈದ್ಯರು ಹೇಳಿದ್ದರು. ಬಳಿಕ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.

ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಯುವಕನ ಬಲಿ

ಬೆಂಗಳೂರು: ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ (Dengue Fever) ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಗ್ಯುವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ (BBMP Health Audit) ಖಚಿತಪಡಿಸಿದೆ.

ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯು ಕಾರಣವವಾಗಿದೆ. ಆದರೆ 80ರ ವೃದ್ಧೆಯ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಗರದಲ್ಲಿ ಸದ್ಯ 1743 ಆಕ್ಟಿವ್ ಡೆಂಗ್ಯು ಕೇಸ್‌ಗಳು ಇವೆ.

ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

ಇದೂವರೆಗೂ ನಗರದಲ್ಲಿ ಇಬ್ಬರು ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ. ಸಿವಿ ರಾಮನ್ ನಗರದ 27 ವರ್ಷದ ಯುವಕ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದು, ಈತ ತೀವ್ರ ಜ್ವರದಿಂದ ಬಳಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: Dengue Fever: ರಾಯಚೂರಲ್ಲಿ 6 ವರ್ಷದ ಮಗುವಿಗೆ ಡೆಂಗ್ಯೂ; ದಾವಣಗೆರೆ ಜಿಲ್ಲೆಯಲ್ಲಿ 142 ಪ್ರಕರಣಗಳು ಪತ್ತೆ!

Continue Reading

ಮಳೆ

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಹಗುರದಿಂದ ಕೂಡಿದ ಮಳೆ ಸುರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (rain News) ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (karnataka Weather Forecast) ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆಯು ಮುಂದುವರಿದಿದೆ. ಗುಡುಗು ಸಹಿತ ಗಾಳಿಗೆ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌


ಮಳೆಗಾಲಕ್ಕೆ ತಕ್ಕಂತೆ (Monsoon Footwear Fashion) ಪ್ರತಿಯೊಬ್ಬರ ಫುಟ್‌ವೇರ್‌ ಸ್ಟೈಲಿಂಗ್‌ ಕೂಡ ಬದಲಾಗುತ್ತದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ಗಳು ವಿನೂತನ ಮಾದರಿಯ ಬಗೆಬಗೆಯ ವಿನ್ಯಾಸದ ವಾಟರ್‌ಪ್ರೂಫ್‌ ಹಾಗೂ ಸ್ಕಿಡ್‌ ಆಗದ ಫುಟ್‌ವೇರ್​​ಗಳು ಲಗ್ಗೆ ಇಟ್ಟಿವೆ.

Monsoon Footwear Fashion

ವೈವಿಧ್ಯಮಯ ಫುಟ್‌ವೇರ್ಸ್

ಅವುಗಳಲ್ಲಿ ಫಂಕಿ ಕ್ರೂಕ್ಸ್‌, ಫ್ಲಿಪ್‌ಫ್ಲಾಪ್‌, ಜೆಲ್ಲಿ ಫ್ಲಾಟ್ಸ್, ವೆಡ್ಜಸ್‌ ಬೆಲ್ಲಿ ಶೂಸ್‌, ಸ್ಕಿಪ್ಪರ್‌ ಕ್ಲಾಗ್ಸ್‌, ಕ್ಯಾನ್ವಾಸ್‌, ಬ್ಯಾಲೇರಿನಾ ಫ್ಲಾಟ್‌ ಸ್ಯಾಂಡಲ್ಸ್, ಮಾನ್ಸೂನ್‌ ಸ್ನೀಕರ್‌, ರೈನ್‌ ಶೂ, ಅಕ್ವಾ ಶೂಸ್‌, ಗಮ್‌ ಬೂಟ್ಸ್, ಫೋಮ್‌ ಕ್ಲಾಗ್ಸ್ ಸೇರಿದಂತೆ ಮೆನ್ಸ್‌ ಹಾಗೂ ವುಮೆನ್ಸ್‌ ಕೆಟಗರಿಯಲ್ಲಿ ನಾನಾ ಬಗೆಯವು ಬಿಡುಗಡೆಗೊಂಡಿದ್ದು, ಮಾರಾಟ ಹೆಚ್ಚಾಗಿಯೇ ಸಾಗಿದೆ ಎನ್ನುತ್ತಾರೆ ಫುಟ್‌ವೇರ್‌ ಶೋರೂಂವೊಂದರ ಮಾರಾಟಗಾರರು.

ಸೀಸನ್‌ಗೆ ಬದಲಾಗುವ ಫುಟ್‌ವೇರ್ಸ್

ಸಮ್ಮರ್‌ ಸೀಸನ್‌ನಿಂದ ಮಾನ್ಸೂನ್‌ ಸೀಸನ್‌ಗೆ ಕಾಲಿಡುವಾಗ ಫುಟ್‌ವೇರ್‌ ಫ್ಯಾಷನ್‌ ಕೂಡ ಸಾಕಷ್ಟು ಬದಲಾಗುತ್ತದೆ. ಗ್ರ್ಯಾಂಡ್‌ ಲುಕ್‌ ನೀಡುವ ಸ್ಯಾಂಡಲ್ಸ್‌ ಆಗಲಿ, ವೆಲ್ವೆಟ್‌ ಹಾಗೂ ಡಿಸೈನರ್‌ ಶೂಗಳನ್ನಾಗಲಿ ಈ ಮಳೆಗಾಲದಲ್ಲಿ ಧರಿಸಿ ಹೊರಾಂಗಣದಲ್ಲಿ ಓಡಾಡಲು ಸಾಧ್ಯವಿಲ್ಲ! ಹಾಗಾಗಿ ಮಳೆಗಾಲಕ್ಕೆ ನೀರಿನಲ್ಲಿ ನೆನೆದರೂ, ತೊಪ್ಪೆಯಾದರೂ, ವಾಶ್‌ ಮಾಡಿದರೂ ಹಾಳಾಗದ ಮೆಟೀರಿಯಲ್‌ನ ಫುಟ್‌ವೇರ್‌ಗಳನ್ನು ಧರಿಸುವುದು, ವಾಕ್‌ ಮಾಡುವಾಗ ಸ್ಕಿಡ್‌ ಆಗದ, ಜಾರದ ಫುಟ್‌ವೇರ್‌ಗಳನ್ನು ಧರಿಸುವುದು ಅವಶ್ಯವಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಅದರಲ್ಲೂ ಪ್ರತಿನಿತ್ಯ ಹೆಚ್ಚು ಓಡಾಡುವ ವ್ಯಾಪಾರಸ್ಥರು, ಉದ್ಯೋಗಸ್ಥರು ಹೆಚ್ಚಾಗಿ ಕಂಫರ್ಟಬಲ್‌ ಜೊತೆಗೆ ಸೀಸನ್‌ ಮುಗಿಯುವವರೆಗೂ ಬಾಳಿಕೆ ಬರುವಂತಹ ಫುಟ್‌ವೇರ್‌ಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಅವರು.

ಬೂಟ್ಸ್-ಶೂ-ಸ್ಯಾಂಡಲ್ಸ್-ಫ್ಲಿಪ್‌-ಫ್ಲಾಪ್‌

ಮಳೆಗಾಲದಲ್ಲಿ ಫ್ಯಾಷನ್‌ ಲುಕ್‌ಗಾಗಿ ಮಾತ್ರವಲ್ಲ, ನಿಮ್ಮ ಕಂಫರ್ಟಬಲಿಟಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವುದು ಜಾಣತನ. ಔಟ್‌ಡೋರ್‌ನಲ್ಲಿ ಹೆಚ್ಚು ಓಡಾಡುವವರು ಹಾಗೂ ಕೆಲಸ ಮಾಡುವವರು ಬೂಟ್ಸ್​​​ಗಎ ಮೊರೆ ಹೋದರೆ, ಮಹಿಳೆಯರು ಸ್ಯಾಂಡಲ್ಸ್‌ ಹಾಗೂ ಫ್ಲಿಪ್‌-ಫ್ಲಾಪ್‌ಗಳನ್ನು ಚೂಸ್‌ ಮಾಡುತ್ತಾರೆ. ಇನ್ನು ಹುಡುಗಿಯರು ಕ್ರೂಕ್ಸ್‌ ಹಾಗೂ ಬ್ಯಾಲೇರಿನಾ ಶೂಗಳಂತವನ್ನು ಸೆಲೆಕ್ಟ್‌ ಮಾಡುತ್ತಾರೆ ಎನ್ನುತ್ತಾರೆ ಫುಟ್‌ವೇರ್‌ ಮಾರಾಟಗಾರರು.

ಫುಟ್‌ವೇರ್‌ ಸೆಲೆಕ್ಷನ್‌ ಹೀಗಿರಲಿ

  • – ಫ್ಯಾಷನ್‌ಗಿಂತ ಹೆಚ್ಚಾಗಿ ಆರಾಮದಾಯಕವಾಗಿರಲಿ.
  • – ಫುಟ್‌ವೇರ್‌ ಒದ್ದೆಯಾಗಿದ್ದಲ್ಲಿ, ಒಣಗಿಸಿ, ಧರಿಸಿ.
  • – ಗುಣಮಟ್ಟದ ಫುಟ್‌ವೇರ್ ಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Team India Coach
ಕ್ರೀಡೆ2 mins ago

Team India Coach: ಟೀಮ್​ ಇಂಡಿಯಾ ಕೋಚ್​ ಆಯ್ಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಜಯ್‌ ಶಾ

kannada marathi row
ಪ್ರಮುಖ ಸುದ್ದಿ18 mins ago

Kannada- Marathi Row: ಮಹಾರಾಷ್ಟ್ರ ಸದನದಲ್ಲಿ ಕನ್ನಡ ಪರ ದನಿ, ಗಡಿಯಲ್ಲಿ ಮರಾಠಿ ದಬ್ಬಾಳಿಕೆಗೆ ಪ್ರತಿಭಟನೆ

Food for Concentration
ಆರೋಗ್ಯ32 mins ago

Food for Concentration: ಈ ಆಹಾರಗಳ ಸೇವನೆಯಿಂದ ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತವಾಗಬಹುದು!

Grand Marriage
Latest32 mins ago

Grand Marriage: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ರಾಜಮಾರ್ಗ ಅಂಕಣ virat kohli rohit sharma
ಅಂಕಣ51 mins ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

niranjana ನನ್ನ ದೇಶ ನನ್ನ ದನಿ ಅಂಕಣ
ಅಂಕಣ1 hour ago

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

dengue fever hassan girl death
ಕ್ರೈಂ1 hour ago

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ITR Filing
ಮನಿ-ಗೈಡ್2 hours ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

karnataka weather Forecast
ಮಳೆ2 hours ago

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Mosquito Repellents
ಆರೋಗ್ಯ3 hours ago

Mosquito Repellents: ರಾಸಾಯನಿಕದ ಅಪಾಯ ಏಕೆ? ಸೊಳ್ಳೆ ಓಡಿಸಲು ಇಲ್ಲಿವೆ 10 ನೈಸರ್ಗಿಕ ವಿಧಾನಗಳು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌