Explainer: ಹಿಮಾಚಲದಲ್ಲಿ ಖಲಿಸ್ತಾನ್‌ ಹೆಜ್ಜೆ: ಏನಿದರ ಹಕೀಕತ್?‌ - Vistara News

EXPLAINER

Explainer: ಹಿಮಾಚಲದಲ್ಲಿ ಖಲಿಸ್ತಾನ್‌ ಹೆಜ್ಜೆ: ಏನಿದರ ಹಕೀಕತ್?‌

ಹಿಮಾಚಲ ಪ್ರದೇಶದ ವಿಧಾನಸಭೆಯ ಮುಂದೆ ಖಲಿಸ್ತಾನಿ ಗುಂಪುಗಳ ಧ್ವಜಗಳ ಪ್ರತ್ಯಕ್ಷವಾಗಿವೆ. ಖಲಿಸ್ತಾನ ಚಳವಳಿ ಮತ್ತೆ ಜೀವ ತುಂಬಿಕೊಳ್ಳುತ್ತಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಿಮಾಚಲ ಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಗಳು ನಡೆಯಲು ಇನ್ನು ಆರು ತಿಂಗಳು ಬಾಕಿ ಇದೆ. ಇದೇ ಸಂದರ್ಭದಲ್ಲಿ ಇಲ್ಲಿನ ಧರ್ಮಶಾಲಾದಲ್ಲಿರುವ ವಿಧಾನಸಭೆ ಕಟ್ಟಡದ ಮುಂದೆ ಖಲಿಸ್ತಾನ ಚಳವಳಿಯ ಪರವಾದ ಧ್ವಜಗಳು ತೂಗಾಡಿವೆ. ವಿಧಾನಸಭೆಯ ಗೇಟ್‌ನಲ್ಲಿ ಈ ಧ್ವಜಗಳನ್ನು ಕಟ್ಟಲಾಗಿದೆ. ಹಿಮಾಚಲ ಪ್ರದೇಶದ ವಿಶೇಷ ತನಿಖಾ ದಳ ಈ ಘಟನೆಯ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಈ ಘಟನೆಗೆ ಸಂಬಂಧಿಸಿ ಖಲಿಸ್ತಾನ ಚಳವಳಿಯ ಪರ ಒಲವುಳ್ಳ ʼಸಿಖ್ಸ್‌ ಫಾರ್‌ ಜಸ್ಟಿಸ್‌ʼ ಸಂಘಟನೆಯ ನಾಯಕ ಗುರುಪತವಂತ್‌ ಸಿಂಗ್‌ ಪನ್ನು ಎಂಬಾತನ ಮೇಲೆ ಕೇಸು ದಾಖಲಿಸಲಾಗಿದೆ. ಈ ಸಂಘಟನೆಯನ್ನು ಈ ಹಿಂದೆಯೇ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA) ಅಡಿಯಲ್ಲಿ ನಿಷೇಧಿಸಲಾಗಿತ್ತು. ಜೂನ್‌ 6ರಂದು ಹಿಮಾಚಲ ಪ್ರದೇಶದಲ್ಲಿ ಪ್ರತಿಭಟನೆ ನಡೆಸುವುದಾಗಿ ಪನ್ನು ಬೆದರಿಕೆ ಒಡ್ಡಿದ ಬಳಿಕ, ರಾಜ್ಯಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ.

ಪಕ್ಕದ ರಾಜ್ಯದ ಕಂಪನ
ಪಂಜಾಬ್‌ಗೆ ಒತ್ತಿಕೊಂಡೇ ಇರುವ ಹಿಮಾಚಲ ಪ್ರದೇಶದಲ್ಲಿ ಖಲಿಸ್ತಾನ ಚಳವಳಿಯ ಕುರುಹುಗಳು ಹಾಗೂ ಕಂಪನಗಳು ಕಂಡುಬರುತ್ತಿರುವುದು ಇದೇ ಮೊದಲಲ್ಲ.

2021ರಲ್ಲಿ ಇದೇ ಪನ್ನು, ರಾಜ್ಯದಲ್ಲಿ ತ್ರಿವರ್ಣಧ್ವಜ ಹಾರಿಸಲು ಬಿಡುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್‌ ಅವರಿಗೆ ಬೆದರಿಕೆ ಒಡ್ಡಿದ್ದ. ಹಿಮಾಚಲ ಪ್ರದೇಶ ರಾಜ್ಯವು ಅವಿಭಜಿತ ಪಂಜಾಬ್‌ನ ಭಾಗ ಎಂದೇ ಖಲಿಸ್ತಾನ್‌ ಚಳವಳಿಗಾರರು ಪ್ರತಿಪಾದಿಸುತ್ತಾರೆ. ಅದೇ ತಿಂಗಳು, ಪಂಜಾಬ್-‌ ಹಿಮಾಚಲ ಗಡಿಪ್ರದೇಶದಿಂದ ಹತ್ತು ಕಿಲೋಮೀಟರ್‌ ದೂರದಲ್ಲಿರುವ ನೈನಾದೇವಿ ದೇವಸ್ಥಾನದ ಬಳಿಯ ಮೈಲಿಗಲ್ಲುಗಳನ್ನು ಒಡೆದು ಹಾಕಿದ್ದ ಖಲಿಸ್ತಾನಿ ಉಗ್ರರು, ʼವೆಲ್‌ಕಮ್‌ ಟು ಖಲಿಸ್ತಾನ್‌ʼ ʼಖಲಿಸ್ತಾನ್‌ ಗಡಿ ಇಲ್ಲಿಂದ ಆರಂಭವಾಗುತ್ತದೆʼ ಇತ್ಯಾದಿ ಬರಹಗಳನ್ನು ಬರೆದಿದ್ದರು.

ಈ ವರ್ಷ ಮಾರ್ಚ್‌ನಲ್ಲಿ ಹಿಮಾಚಲ ಪ್ರದೇಶ ಸರಕಾರ, ಖಲಿಸ್ತಾನ ಚಳವಳಿಯ ಮುಖಂಡನಾಗಿದ್ದ ಜರ್ನೈಲ್‌ಸಿಂಗ್‌ ಭಿಂದ್ರಾನ್‌ವಾಲೆಯ ಚಿತ್ರಗಳನ್ನು ಹೊಂದಿರುವ ಧ್ವಜಗಳನ್ನು ಪ್ರದರ್ಶಿಸುವ ವಾಹನಗಳಿಗೆ ಪ್ರವೇಶ ನಿಷೇಧಿಸಿತ್ತು. ಇದಕ್ಕೆ ಪ್ರತಿಯಾಗಿ, ಸಿಖ್ಸ್‌ ಫಾರ್‌ ಜಸ್ಟಿಸ್‌ ಸಂಘಟನೆಯು, ಶಿಮ್ಲಾದ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಏಪ್ರಿಲ್‌ 29ರಂದು ಖಲಿಸ್ತಾನ ಧ್ವಜವನ್ನು ಹಾರಿಸುವುದಾಗಿ ಬೆದರಿಕೆ ಒಡ್ಡಿತ್ತು. ಏಪ್ರಿಲ್‌ 29, ಖಲಿಸ್ತಾನದ ಘೋಷಣೆ ದಿನ.

ಪ್ರವಾಸೋದ್ಯಮಕ್ಕೆ ಧಕ್ಕೆ
ಹಿಮಾಚಲ ಪ್ರದೇಶದ ಸೃಷ್ಟಿಯಾದುದು ಪಂಜಾಬ್‌ನ ವಿಭಜನೆಯಿಂದ. 1966ರಲ್ಲಿ ಪಂಜಾಬ್‌ನ್ನು ಎರಡಾಗಿಸಿ ಹಿಮಾಚಲ ಪ್ರದೇಶ ಸೃಷ್ಟಿಸಲಾಯಿತು. ಅಲ್ಲಿಂದಾಚೆಗೆ ಪಂಜಾಬ್‌ನಲ್ಲಿ ಹುಟ್ಟಿಕೊಂಡ ಖಲಿಸ್ತಾನ ಚಳವಳಿ, ಉಗ್ರವಾದದತ್ತ ತಿರುಗಿ 1980- 1990ರ ದಶಕಗಳಲ್ಲಿ ತೀವ್ರ ಚಟುವಟಿಕೆಗಳನ್ನು ದಾಖಲಿಸಿತು. ಆದರೆ ಹಿಮಾಚಲದಲ್ಲಿ ಇವರ ಹೆಚ್ಚಿನ ಹಾವಳಿಯೇನೂ ಇರಲಿಲ್ಲ. ಆದರೆ ಇಲ್ಲಿನ ಆದಾಯದ ಮೂಲಾಧಾರವಾದ ಪ್ರವಾಸೋದ್ಯಮವನ್ನು ಅಸ್ತವ್ಯಸ್ತಗೊಳಿಸಿ ಅದರಿಂದ ಲಾಭ ಮಾಡಿಕೊಳ್ಳುವ ಬಯಸುವ ಕೆಲವು ಕಿಡಿಗೇಡಿ ಶಕ್ತಿಗಳು ತಮ್ಮ ಕಾರ್ಯಾಚರಣೆಗೆ ಖಲಿಸ್ತಾನದ ಹೆಸರನ್ನು ಬಳಸಿಕೊಳ್ಳುತ್ತಿವೆ ಎಂದು ಕೆಲವು ವಿಶ್ಲೇಷಕರು ಹೇಳುತ್ತಾರೆ.

ಇತ್ತೀಚೆಗಷ್ಟೇ ಆಮ್‌ ಆದ್ಮಿ ಪಾರ್ಟಿ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಮುಖ್ಯಸ್ಥ ಹರ್‌ಪ್ರೀತ್‌ ಸಿಂಗ್‌ ಬೇಡಿ ಎಂಬಾತನನ್ನು ಹೊರಹಾಕಿತ್ತು. ಖಲಿಸ್ತಾನ ಬೇಡಿಕೆಯನ್ನು ಟ್ವಿಟ್ಟರ್‌ನಲ್ಲಿ ಬಹಿರಂಗವಾಗಿ ಈತ ಬೆಂಬಲಿಸಿದ್ದೇ ಇದಕ್ಕೆ ಕಾರಣ.

ಹಿಮಾಚಲಪ್ರದೇಶದಲ್ಲಿ ಖಲಿಸ್ತಾನ ಚಳವಳಿಯ ಕೂಗು ಅಷ್ಟೇನೂ ಪರಿಣಾಮಕಾರಿ ಆಗಲಾರದು ಎಂಬ ವಾದ ಇದೆ. ಯಾಕೆಂದರೆ ಇಲ್ಲಿರುವವರಲ್ಲಿ ಶೇ.95 ಮಂದಿ ಹಿಂದೂಗಳು. ಆದ್ದರಿಂದ ಇಲ್ಲಿ ಪ್ರತ್ಯೇಕತಾವಾದ ಪರಿಣಾಮಕಾರಿ ಆಗಲಾರದು ಎನ್ನಲಾಗುತ್ತಿದೆ.

ಆದರೆ ಪಂಜಾಬ್‌ನಲ್ಲಿ ಖಲಿಸ್ತಾನ ಚಳವಳಿ ಮತ್ತೆ ಜೀವ ತುಂಬಿಕೊಳ್ಳಲು ಯತ್ನಿಸುತ್ತಿರುವುದಂತೂ ನಿಜ. ಇದಕ್ಕೆ ಪಾಕಿಸ್ತಾನ ಹಾಗೂ ಕೆನಡಾಗಳಿಂದ ಕಾರ್ಯಾಚರಿಸುತ್ತಿರುವ ಪ್ರತ್ಯೇಕತಾವಾದಿ ಶಕ್ತಿಗಳು ಬೆಂಬಲ ನೀಡುತ್ತಿವೆ.

ಖಲಿಸ್ತಾನ ಉಗ್ರವಾದದ ಜನನ


ಖಲಿಸ್ತಾನ ಹೋರಾಟದ ಬೀಜಗಳು 1947ರಿಂದಲೂ ಇದ್ದವು. ವಿಭಜನೆಯ ಸಂದರ್ಭದಲ್ಲಿ ಸಂಭವಿಸಿದ ರಕ್ತಪಾತ, ಹಿಂಸೆ, ಸಿಕ್ಖರ ವಲಸೆಗಳು ಸಿಕ್ಖರ ಮನದಲ್ಲಿ ಸೃಷ್ಟಿಸಿದ ಕ್ಷೋಭೆ ಇದಕ್ಕೆ ಮೂಲ ಕಾರಣ. ನಂತರದ ದಿನಗಳಲ್ಲಿ, ಭಾರತ ಸರಕಾರ ಪಂಜಾಬ್‌ನ ಸಿಕ್ಖರಿಗೆ ಸೂಕ್ತವಾದ ರಕ್ಷಣೆ, ಅಭಿವೃದ್ಧಿ ಕಲ್ಪಿಸುತ್ತಿಲ್ಲ ಎಂಬ ಆಕ್ಷೇಪದೊಂದಿಗೆ, ಖಲಿಸ್ತಾನಕ್ಕಾಗಿ ಪ್ರತ್ಯೇಕ ರಾಷ್ಟ್ರ ಬೇಕೆಂಬ ಸಿದ್ಧಾಂತದೊಂದಿಗೆ ಈ ಹೋರಾಟ ಹುಟ್ಟಿಕೊಂಡಿತು. ಬಹುಬೇಗ ಉಗ್ರವಾದಕ್ಕೆ ತಿರುಗಿತು.

ಭಿಂದ್ರಾನ್‌ವಾಲೆ ಎಂಬ ರಾಕ್ಷಸ
80ರ ದಶಕದಲ್ಲಿ ಜರ್ನೈಲ್‌ಸಿಂಗ್‌ ಭಿಂದ್ರಾನ್‌ವಾಲೆ ಎಂಬ ಭಯೋತ್ಪಾದಕ ಈ ಚಳವಳಿಗೆ ಹಿಂಶಾತ್ಮಕ ಸ್ವರೂಪ ನೀಡಿದ. ನಿರುದ್ಯೋಗಿ ಸಿಖ್‌ ಯುವಕರನ್ನು ಒಟ್ಟುಗೂಡಿಸಿ ಅವರಿಗೆ ಬಂದೂಕು ತರಬೇತಿ ನೀಡಿ, ಭಯೋತ್ಪಾದನೆಗೆ ಇಳಿಸಿದ. 1982-83ರ ಅವಧಿಯಲ್ಲಿ ನಡೆದ ಹಿಂಸಾತ್ಮಕ ಘಟನೆಗಳಲ್ಲಿ ನಾನೂರಕ್ಕೂ ಹೆಚ್ಚು ಜನ ಅಸುನೀಗಿದರು. ಅತ್ತ ಪಾಕಿಸ್ತಾನ ಇದನ್ನು ಲಾಭಕರವಾಗಿ ಬಳಸಿಕೊಂಡು, ಶಸ್ತ್ರಾಸ್ತ್ರಗಳನ್ನು ಈ ಭಯೋತ್ಪಾದಕರಿಗೆ ಪೂರೈಸತೊಡಗಿತು.

ಭಿಂದ್ರಾನ್‌ವಾಲೆ ಕಾಲದಲ್ಲಿ ಪಂಜಾಬ್‌ನಲ್ಲಿ ಹಲವಾರು ರಾಜಕೀಯ ನಾಯಕರ ಕಗ್ಗೊಲೆ ನಡೆಯಿತು. ಆರಂಭದಲ್ಲಿ ಶಿರೋಮಣಿ ಅಕಾಲಿ ದಳವನ್ನು ಮಟ್ಟ ಹಾಕಲು ಭಿಂದ್ರಾನ್‌ವಾಲೆಯನ್ನು ಬಳಸಿಕೊಂಡ ಕೆಲವು ರಾಜಕೀಯ ನಾಯಕರು, ನಂತರ ಆತನನ್ನು ಹಣಿಯಲು ಮುಂದಾದರು. ಭಿಂದ್ರಾನ್‌ವಾಲೆ ಸಿಕ್ಖರ ಪವಿತ್ರ ತಾಣ ಅಮೃತಸರದ ಸ್ವರ್ಣಮಂದಿರದಲ್ಲಿ ಜೊತೆಗಾರರ ಜೊತೆ ಬಿಡಾರ ಹೂಡಿದ. ಆತನನ್ನು ಮಟ್ಟಹಾಕಲು ಇಂದಿರಾ ಗಾಂಧಿ ಸರಕಾರ 1984ರಲ್ಲಿ ಆಪರೇಶನ್‌ ಬ್ಲೂಸ್ಟಾರ್‌ ಕಾರ್ಯಾಚರಣೆ ನಡೆಸಿತು. ಸ್ವರ್ಣಮಂದಿರ ರಕ್ತಸಿಕ್ತವಾಯಿತು. ಭಿಂದ್ರಾನ್‌ವಾಲೆ ಮತ್ತು ಸಹಚರರನ್ನು ಪೂರ್ತಿಯಾಗಿ ಸಾಯಿಸಲಾಯಿತು.

ಇದನ್ನೂ ಓದಿ: Explainer: ನೀಟ್‌ ಪರೀಕ್ಷೆ ತಮಿಳುನಾಡಿಗೆ ಬೇಡವಂತೆ, ರಾಷ್ಟ್ರಪತಿಗಳತ್ತ ವಿಧೇಯಕ

ಈ ಕಾರ್ಯಾಚರಣೆಯಿಂದ ಸಿಕ್ಖರಲ್ಲಿ ಮಡುಗಟ್ಟಿದ ಆಕ್ರೋಶದ ಪರಿಣಾಮವೇ 1984ರಲ್ಲಿ ಸಂಭವಿಸಿದ ಇಂದಿರಾ ಗಾಂಧಿಯವರ ಹತ್ಯೆ ಮತ್ತು ಅದನ್ನು ಅನುಸರಿಸಿ ದಿಲ್ಲಿಯಲ್ಲಿ ನಡೆದ ಸಿಖ್‌ ಹತ್ಯಾಕಾಂಡ.

ಮತ್ತೆ ಚಿಗುರಿದ ದುಷ್ಟಬೀಜ
ಇದರ ನಂತರ ಖಲಿಸ್ತಾನ ಚಳವಳಿ ಬಹುತೇಕ ತಣ್ಣಗಾಗಿತ್ತು. ಆದರೆ ಕೆನಡಾದಲ್ಲಿ ನೆಲೆಯೂರಿ ಕುಳಿತ ಕೆಲವು ಖಲಿಸ್ತಾನ ಸಹಾನುಭೂತಿಪರ ನಾಯಕರು, ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಲೇ ಇದ್ದಾರೆ. ಇತ್ತೀಚಿನ ಉದಾಹರಣೆ ಎಂದರೆ ಸಿಖ್‌ ರೈತರು ದಿಲ್ಲಿಯಲ್ಲಿ ನಡೆಸಿದ ರೈತಕಾಯಿದೆ ವಿರೋಧಿ ಪ್ರತಿಭಟನೆಗಳಲ್ಲಿ ಸೇರಿಕೊಂಡ ಖಲಿಸ್ತಾನ ಶಕ್ತಿಗಳು. ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಖಲಿಸ್ತಾನ್ ಧ್ವಜ ಹಾಗೂ ಭಿಂದ್ರಾನ್‌ವಾಲೆ ಪೋಷ್ಟರ್‌ಗಳು ರಾರಾಜಿಸಿದವು.

ಇದನ್ನೂ ಓದಿ: Explainer: ಶ್ರೀಲಂಕಾದಲ್ಲಿ ಮತ್ತೆ ಎಮರ್ಜೆನ್ಸಿ, ಹಸಿವು, ಪ್ರತಿಭಟನೆ, ಹಾಹಾಕಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

ಲೋಕಸಭಾ ಚುನಾವಣೆ ಕೊನೆಯ ಹಂತದಲ್ಲಿದೆ. ಈಗ ಎಲ್ಲರ ದೃಷ್ಟಿ ಫಲಿತಾಂಶದತ್ತ ನೆಟ್ಟಿದೆ. ಈ ನಡುವೆ ಎಕ್ಸಿಟ್ ಪೋಲ್ ನುಡಿಯುವ ಭವಿಷ್ಯದ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ. ಕಳೆದ ನಾಲ್ಕು ಲೋಕ ಸಭಾ ಚುನಾವಣೆಯಲ್ಲಿ ಎಕ್ಸಿಟ್ ಪೋಲ್ (Exit Poll) ನುಡಿದಿರುವ ಭವಿಷ್ಯ ಎಷ್ಟು ನಿಜವಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ. ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

Exit Polls
Koo

ಲೋಕಸಭೆ ಚುನಾವಣೆ-2024ರ (Loksabha election-2024) ಕೊನೆಯ ಹಂತದ ಮತದಾನ (voting) ಮುಗಿದ ಬಳಿಕ ಪ್ರಸಾರವಾಗಲಿರುವ ಎಕ್ಸಿಟ್ ಪೋಲ್ ಗಳ (Exit Poll) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಜೂನ್ 1ರಂದು ಎಂಟು ರಾಜ್ಯಗಳ (states) 59 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಸಂಜೆ 6:30ಕ್ಕೆ ಮತಗಟ್ಟೆ ಸಮೀಕ್ಷೆ ಪ್ರಕಟವಾಗಲಿದೆ.

ಅಭಿಪ್ರಾಯ ಸಂಗ್ರಹಕ್ಕಿಂತ (opinion polls) ಎಕ್ಸಿಟ್ ಪೋಲ್ ಭಿನ್ನವಾಗಿರುತ್ತದೆ. ಎಕ್ಸಿಟ್ ಪೋಲ್ ಮತದಾನ ಮುಗಿದ ಅನಂತರ ತೆಗೆದುಕೊಳ್ಳಲಾಗುವ ಮತದಾರರ ಸಮೀಕ್ಷೆಯಾಗಿದೆ. ಜನರು ಹೇಗೆ ಮತ ಚಲಾಯಿಸಿದ್ದಾರೆ ಎಂಬ ಟ್ರೆಂಡ್ ಇದು ನೀಡುತ್ತದೆ.

ನಿರ್ದಿಷ್ಟ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯು ತನ್ನ ಪ್ರತಿಸ್ಪರ್ಧಿಗಿಂತ ಮುಂದಿದ್ದಾರೆ ಎಂಬ ನಿಖರವಾದ ಮಾಹಿತಿಯನ್ನು ಇದು ಒದಗಿಸುತ್ತದೆ. ಚುನಾವಣೆ ಆರಂಭಕ್ಕೂ ಮುನ್ನ ಅಭಿಪ್ರಾಯ ಸಂಗ್ರಹಣೆ ನಡೆಸಲಾಗುತ್ತದೆ. ಇದಕ್ಕಾಗಿ ಜನ ಯಾವ ಪಕ್ಷಕ್ಕೆ ಮತ ಹಾಕಬೇಕು ಎಂದು ಮತಗಟ್ಟೆಯವರು ಕೇಳುತ್ತಾರೆ. ಆದರೆ ಎಕ್ಸಿಟ್ ಪೋಲ್‌ಗಳಲ್ಲಿ ಜನರು ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂಬುದನ್ನು ಕಂಡುಕೊಳ್ಳುತ್ತಾರೆ.

ಎಕ್ಸಿಟ್ ಪೋಲ್‌ಗಳು ಎಷ್ಟು ನಿಖರವಾಗಿರುತ್ತದೆ?

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ.

ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಕಳೆದ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳು ಏನು ಭವಿಷ್ಯ ನುಡಿದಿವೆ ಮತ್ತು ನಿಜವಾದ ಫಲಿತಾಂಶಗಳು ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

2019ರ ಎಕ್ಸಿಟ್ ಪೋಲ್‌ಗಳು

ಇಂಡಿಯಾ ಟುಡೇ- ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಎನ್ ಡಿ ಎ: 339-365, ಯುಪಿಎ: 77-108
ನ್ಯೂಸ್ 24-ಟುಡೇಸ್ ಚಾಣಕ್ಯ ಪ್ರಕಾರ ಎನ್ ಡಿ ಎ-350, ಯುಪಿಎ-95
ನ್ಯೂಸ್ 18-ಐಪಿಎಸ್ ಒಎಸ್ ಪ್ರಕಾರ ಎನ್ ಡಿ ಎ- 336, ಯುಪಿಎ- 124
ಟೈಮ್ಸ್ ನೌ- ವಿಎಂಆರ್ ಪ್ರಕಾರ ಎನ್ ಡಿ ಎ- 306, ಯುಪಿಎ-132
ಇಂಡಿಯಾ ಟಿವಿ-ಸಿಎನ್ ಎಕ್ಸ್ ಪ್ರಕಾರ ಎನ್ ಡಿಎ-300, ಯುಪಿಎ-120
ಎಬಿಪಿ-ಸಿಎಸ್ ಡಿಎಸ್ ಪ್ರಕಾರ ಎನ್ ಡಿಎ- 277, ಯುಪಿಎ- 130
ಇಂಡಿಯಾ ನ್ಯೂಸ್-ಪೋಲ್ ಸ್ಟಾರ್ಟ್ ಪ್ರಕಾರ ಎನ್ ಡಿಎ- 287, ಯುಪಿಎ- 130
2019ರ ಅಂತಿಮ ಫಲಿತಾಂಶ ಹೀಗಿತ್ತು: ಎನ್ ಡಿ ಎ-353, ಯುಪಿಎ-91

2014ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್– ಸಿಎಸ್ ಡಿಎಸ್–ಲೋಕ್ ನೀತಿ ಪ್ರಕಾರ ಎನ್ ಡಿ ಎ – 276, ಯುಪಿಎ -97, ಇತರೆ-148
ಇಂಡಿಯಾ ಟುಡೇ–ಸಿಸೆರೊ ಪ್ರಕಾರ ಎನ್ ಡಿ ಎ-272, ಯುಪಿಎ-115, ಇತರೆ- 156
ಸುದ್ದಿ 24–ಚಾಣಕ್ಯ ಪ್ರಕಾರ ಎನ್‌ಡಿಎ-340, ಯುಪಿಎ-70, ಇತರೆ-133
ಟೈಮ್ಸ್ ನೌ–ಒ ಆರ್ ಜಿ ಪ್ರಕಾರ ಎನ್‌ಡಿಎ- 249, ಯುಪಿಎ-148, ಇತರೆ- 146
ಎಬಿಪಿ ನ್ಯೂಸ್–ನೀಲ್ಸನ್ ಪ್ರಕಾರ ಎನ್‌ಡಿಎ-274, ಯುಪಿಎ-97, ಇತರೆ-165
ಎನ್ ಡಿ ಟಿವಿ –ಹಂಸ ಸಂಶೋಧನೆ ಪ್ರಕಾರ ಎನ್‌ಡಿಎ-279, ಯುಪಿಎ-103, ಇತರೆ-161
2014ರ ಫಲಿತಾಂಶ ಹೀಗಿತ್ತು: ಎನ್‌ಡಿಎ-336, ಯುಪಿಎ-66, ಇತರೆ-147 ಇದರಲ್ಲಿ ಬಿಜೆಪಿ 282, ಕಾಂಗ್ರೆಸ್ 44 ಸ್ಥಾನಗಳನ್ನು ಗಳಿಸಿತ್ತು.

2009ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್ – ದೈನಿಕ್ ಭಾಸ್ಕರ್ ಪ್ರಕಾರ ಯುಪಿಎ 185– 205, ಎನ್‌ಡಿಎ 165– 185, ತೃತೀಯ ರಂಗ 110– 130, ನಾಲ್ಕನೇ ರಂಗ 25–35
ಸ್ಟಾರ್-ನೀಲ್ಸನ್ ಪ್ರಕಾರ ಯುಪಿಎ 199, ಎನ್‌ಡಿಎ 196, ತೃತೀಯ ರಂಗ 100, ನಾಲ್ಕನೇ ರಂಗ 36
ಭಾರತ ಟಿವಿ – ಸಿ ವೋಟರ್ ಪ್ರಕಾರ ಯುಪಿಎ 189–201, ಎನ್‌ಡಿಎ 183–195, ತೃತೀಯ ರಂಗ 105–121
2009ರ ಫಲಿತಾಂಶ ಹೀಗಿತ್ತು: ಯುಪಿಎ-262, ಎನ್‌ಡಿಎ-159, ತೃತೀಯ ರಂಗ-79, ನಾಲ್ಕನೇ ರಂಗ-27. ಇದರಲ್ಲಿ ಕಾಂಗ್ರೆಸ್- 206, ಬಿಜೆಪಿ 116 ಸ್ಥಾನಗಳನ್ನು ಗೆದ್ದುಕೊಂಡಿತ್ತು.

2004ರ ಎಕ್ಸಿಟ್ ಪೋಲ್‌ಗಳು

ಎನ್ ಡಿ ಟಿವಿ- ಎಸಿ ನೀಲ್ಸನ್ ಪ್ರಕಾರ ಎನ್ ಡಿ ಎ 230-250, ಕಾಂಗ್ರೆಸ್ 190-205, ಇತರೆ 100-120
ಆಜ್ತಕ್ ಒಆರ್ ಜಿ-ಮಾರ್ಗ್ ಪ್ರಕಾರ ಎನ್ ಡಿ ಎ 248, ಕಾಂಗ್ರೆಸ್-190, ಇತರೆ-105
ಸ್ಟಾರ್‌ನ್ಯೂಸ್ ಸಿ-ವೋಟರ್ ಪ್ರಕಾರ ಎನ್ ಡಿ ಎ 263-275, ಕಾಂಗ್ರೆಸ್ 174-186, ಇತರೆ 86-98
2004ರ ಫಲಿತಾಂಶ ಹೀಗಿತ್ತು: ಯುಪಿಎ- 208, ಎನ್‌ಡಿಎ- 181, ಎಡರಂಗ- 59. ಇದರಲ್ಲಿ ಕಾಂಗ್ರೆಸ್ 145, ಬಿಜೆಪಿ 138 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಎಷ್ಟು ನಿಖರ?

ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಗಳ ಮತಗಟ್ಟೆ ಸಮೀಕ್ಷೆಗಳಲ್ಲಿ ಮೂರು ಬಾರಿ ಬಹುತೇಕ ನಿಖರವಾಗಿತ್ತು. ಆದರೆ 2004ರಲ್ಲಿ ಮಾತ್ರ ಸಮೀಕ್ಷೆ ಸುಳ್ಳಾಗಿತ್ತು. ಇದೀಗ 2024 ಸಮೀಕ್ಷೆ ಕುತೂಹಲ ಮೂಡಿಸಿದೆ.

Continue Reading

Lok Sabha Election 2024

Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವನ್ನು ಎದುರು ನೋಡುತ್ತಿರುವಾಗಲೇ ಎಲ್ಲರ ದೃಷ್ಟಿ ಈಗ ಎಕ್ಸಿಟ್ ಪೋಲ್ ನತ್ತ ನೆಟ್ಟಿದೆ. ಈ ಮೂಲಕ ಚುನಾವಣಾ ಆಯೋಗದ (Election Commission) ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ಸುಳಿವು ಜನರಿಗೆ ಲಭ್ಯವಾಗುತ್ತದೆ. ಬಹುತೇಕ ಬಾರಿ ಎಕ್ಸಿಟ್ ಪೋಲ್ (Exit Poll) ಸಮೀಕ್ಷೆ ನಿಜವಾಗಿದ್ದರೂ ಹಲವು ಬಾರಿ ಉಲ್ಟಾ ಆಗಿದೆ. ಅದು ಯಾವಾಗ, ಎಲ್ಲಿ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Exit Poll
Koo

ಲೋಕಸಭಾ ಚುನಾವಣೆಯ (Loksabha election-2024) ಅಂತಿಮ ಹಂತದ ಮತದಾನ (voting) ಜೂನ್ 1ರಂದು ನಡೆಯಲಿದ್ದು, ಜೂನ್ 4ರಂದು ಏಳು ಹಂತದ ಮತದಾನದ ಫಲಿತಾಂಶ ಹೊರಬೀಳಲಿದೆ. ರಾಜಕೀಯ ನಾಯಕರು (political leaders), ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ (Exit Poll) ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ (Election Commission) ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಸಮೀಕ್ಷೆಗಳು ಬಹುತೇಕ ಯಾವಾಗಲೂ ನಿಖರವಾಗಿವೆಯೇ ಇದ್ದರೂ ಕೆಲವು ಬಾರಿ ತಪ್ಪಾಗಿದ್ದೂ ಇದೆ. ತೀವ್ರವಾದ ಪರಿಶೀಲನೆ, ಚರ್ಚೆಯ ಬಳಿಕವೂ ಎಕ್ಸಿಟ್ ಪೋಲ್‌ಗಳು ಯಾವಾಗಲೂ ಅಂತಿಮ ಫಲಿತಾಂಶಗಳನ್ನು ನಿಖರವಾಗಿ ಹೇಳುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ ಒಟ್ಟು ಐದು ಬಾರಿ ಎಕ್ಸಿಟ್‌ ಪೋಲ್‌ ಭವಿಷ್ಯ ಸುಳ್ಳಾಗಿದೆ. ಈ ಕುರಿತ ಹಿನ್ನೋಟ ಇಲ್ಲಿದೆ.
2004ರ ಲೋಕಸಭಾ ಚುನಾವಣೆ

2004ರಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ರಾಜ್ಯಗಳ ಚುನಾವಣೆಗಳಲ್ಲಿ ಭರ್ಜರಿ ಜಯ ಗಳಿಸಿ, ಆಡಳಿತಾರೂಢ ಬಿಜೆಪಿಯು ‘ಇಂಡಿಯಾ ಶೈನಿಂಗ್’ ಬ್ಯಾನರ್ ಅಡಿಯಲ್ಲಿ ಅವಧಿಪೂರ್ವವೇ ಲೋಕಸಭೆ ಚುನಾವಣೆ ಎದುರಿಸಿತು. ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ನಾಯಕರು ಭಾರಿ ಆತ್ಮವಿಶ್ವಾಸದಿಂದಿದ್ದರು. ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎಗೆ 240ರಿಂದ 250 ಸ್ಥಾನಗಳು ಬರಲಿವೆ ಎಂದು ಭವಿಷ್ಯ ನುಡಿದಿದ್ದವು. ಆದರೆ ನಿಜವಾದ ಫಲಿತಾಂಶಗಳು ಬಂದಾಗ ಸಂಖ್ಯೆಗಳು ಸಂಪೂರ್ಣವಾಗಿ ವಿರುದ್ಧವಾಗಿದ್ದವು. ಎನ್‌ಡಿಎ ಕೇವಲ 181 ಸೀಟುಗಳನ್ನು ಗೆಲ್ಲಲು ಸಾಧ್ಯವಾಯಿತು. 218 ಸ್ಥಾನಗಳನ್ನು ಗಳಿಸಿದ ಯುಪಿಎ ಮಿತ್ರ ಪಕ್ಷಗಳ ನೆರವಿನಿಂದ ಕೇಂದ್ರದಲ್ಲಿ ಅಧಿಕಾರ ನಡೆಸಿತು.


2015ರ ದೆಹಲಿ ಅಸೆಂಬ್ಲಿ ಚುನಾವಣೆ

2015ರ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 70ರಲ್ಲಿ 67 ಸ್ಥಾನಗಳನ್ನು ಗಳಿಸಿ ಅಭೂತಪೂರ್ವ ಜಯ ಸಾಧಿಸಿತು. ಆದರೆ ಮತದಾನದ ದಿನದಂದು ನಡೆಸಿದ ಎಕ್ಸಿಟ್ ಪೋಲ್‌ಗಳು ಆಪ್‌ಗೆ ಸ್ಪಷ್ಟ ಬಹುಮತ ಎಂದು ಹೇಳಿತ್ತಾದರೂ, 50ರಷ್ಟು ಸೀಟು ಬರಬಹುದು ಎಂದಿತ್ತು. ಆದರೆ ಆಪ್‌ ಎಲ್ಲರ ನಿರೀಕ್ಷೆಗೂ ಮೀರಿದಷ್ಟು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಮೂಲಕ, ಜನರ ತೀರ್ಪನ್ನು ಸ್ಪಷ್ಟವಾಗಿ ಗುರುತಿಸಲು ಎಕ್ಸಿಟ್‌ ಪೋಲ್‌ಗಳು ವಿಫಲವಾಗಿದ್ದವು.

2015ರ ಬಿಹಾರ ವಿಧಾನಸಭಾ ಚುನಾವಣೆ

2015ರ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ತೀವ್ರ ಪೈಪೋಟಿಯಿಂದ ಕೂಡಿತ್ತು. ಯಾವುದೇ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯುವುದಿಲ್ಲ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಈ ಮುನ್ಸೂಚನೆಯ ಹೊರತಾಗಿಯೂ ಆರ್‌ಜೆಡಿ-ಜೆಡಿಯು-ಕಾಂಗ್ರೆಸ್ ಒಕ್ಕೂಟವು ಭರ್ಜರಿ ಜಯ ಸಾಧಿಸಿತು. ಲಾಲು ಪ್ರಸಾದ್ ಅವರ ಆರ್‌ಜೆಡಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2017

ನೋಟು ಅಮಾನ್ಯೀಕರಣದ ಅನಂತರ ನಡೆದ 2017ರ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯ ಸಮೀಕ್ಷೆಗಳು ಭಾರಿ ಕುತೂಹಲ ಮೂಡಿಸಿದ್ದವು. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ ಸರಳ ಬಹುಮತಕ್ಕೂ ಕೆಲವು ಸ್ಥಾನಗಳು ಕೊರತೆ ಆಗಲಿವೆ. ಬಿಜೆಪಿಗೆ ಹೆಚ್ಚೆಂದರೆ 185ರಿಂದ 200 ಸ್ಥಾನಗಳು ಬರಬಹುದು ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಎಸ್‌ಪಿ-ಕಾಂಗ್ರೆಸ್‌ ಮೈತ್ರಿಕೂಟ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲಿದೆ ಎಂದು ಹೇಳಲಾಗಿತ್ತು. ಆದರೆ ಎಲ್ಲ ಮತಗಟ್ಟೆ ಸಮೀಕ್ಷೆಗಳಿಗೆ ವ್ಯತಿರಿಕ್ತವಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಒಟ್ಟು 403 ಸೀಟುಗಳಲ್ಲಿ 312 ಸೀಟುಗಳನ್ನು ಗೆದ್ದುಕೊಂಡಿತು. 2012ರ ಚುನಾವಣೆಯಲ್ಲಿ ಕೇವಲ 47 ಸ್ಥಾನ ಗಳಿಸಿದ್ದ ಬಿಜೆಪಿಗೆ 2017ರಲ್ಲಿ ಭರ್ಜರಿ ಜಯ ಸಾಧಿಸಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಸರ್ಕಾರ ರಚಿಸಿತು. ಆ ಚುನಾವಣೆಯಲ್ಲಿ ಬಿಎಸ್‌ಪಿ ಕೇವಲ 19 ಸ್ಥಾನ ಗೆದ್ದಿತು. ಎಸ್ಪಿಗೆ ಕೇವಲ 47 ಸೀಟುಗಳು ಸಿಕ್ಕಿದವು. ಕಾಂಗ್ರೆಸ್‌ಗೆ ಕೇವಲ 7 ಸ್ಥಾನಗಳು ಲಭಿಸಿದವು. ಮತಗಟ್ಟೆ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ಪರ ಭಾರಿ ಅಲೆ ಇರುವುದನ್ನು ಗುರುತಿಸುವಲ್ಲಿ ವಿಫವಾದವು.

ಇದನ್ನೂ ಓದಿ: PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

2014ರ ಲೋಕಸಭಾ ಚುನಾವಣೆ

2014ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಲಿದೆ ಎಂದು ಹೇಳಿತ್ತು. ಆದರೆ ಬಿಜೆಪಿಯೊಂದೇ ಸರಳ ಬಹುಮತಕ್ಕೆ ಅಗತ್ಯವಾದ 272 ಸಂಖ್ಯೆ ಪಡೆಯುವುದಿಲ್ಲ ಎಂದು ಬಹುತೇಕ ಸಮೀಕ್ಷೆಗಳು ಹೇಳಿದ್ದವು. ಟುಡೇಸ್‌ ಚಾಣಕ್ಯ ಸಮೀಕ್ಷೆಯೊಂದು ಮಾತ್ರ ಬಿಜೆಪಿಗೆ 291 ಸೀಟು ಬರಬಹುದು ಎಂದು ಹೇಳಿತ್ತು. ಆದರೆ ಅಂತಿಮ ಫಲಿತಾಂಶದಲ್ಲಿ ಬಿಜೆಪಿಗೆ ಭರ್ಜರಿ 282 ಸೀಟುಗಳು ಲಭಿಸಿದವು. ಎನ್‌ಡಿಎ ಸೀಟುಗಳ ಸಂಖ್ಯೆ 300 ದಾಟಿತು. ಕಾಂಗ್ರೆಸ್ ಕೇವಲ 44 ಸ್ಥಾನಗಳಿಗೆ ಸೀಮಿತವಾಯಿತು. ಬಿಜೆಪಿ ಮತ್ತು ಎನ್‌ಡಿಎಯ ಭಾರಿ ಗೆಲುವಿನ ಸುಳಿವು ಮತಗಟ್ಟೆ ಸಮೀಕ್ಷೆಗಳಿಗೆ ಸಿಕ್ಕಿರಲಿಲ್ಲ. ಹಾಗಾಗಿ ಮತಗಟ್ಟೆ ಸಮೀಕ್ಷೆಗಳು ಎಲ್ಲ ಕಾಲಕ್ಕೂ ಸರಿಯಾಗಿಯೇ ಇರುತ್ತವೆ ಎಂದು ಹೇಳಲಾಗುವುದಿಲ್ಲ.

Continue Reading

Lok Sabha Election 2024

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಈ ಬಾರಿ ಲೋಕ ಸಭಾ ಚುನಾವಣಾ ಪ್ರಚಾರದ ಅಂತ್ಯವನ್ನು ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ನಡೆಸಲಿದ್ದಾರೆ. ಇಲ್ಲಿ ಸುಮಾರು 45 ಗಂಟೆಗಳ ಕಾಲ ಅವರು ಕಳೆಯಲಿದ್ದಾರೆ.

VISTARANEWS.COM


on

By

PM Modi
Koo

ಲೋಕಸಭಾ ಚುನಾವಣೆ- 2024ರ (Loksabha election-2024) ಬಿಜೆಪಿ ಪ್ರಚಾರ ಕಾರ್ಯವನ್ನು ಅಂತ್ಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಕನ್ಯಾಕುಮಾರಿಗೆ ತೆರಳಲಿದ್ದು, ( Kanyakumari) ಇಲ್ಲಿನ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ (Vivekananda Rock Memorial) ಮೇ 30ರಿಂದ ಜೂನ್ 1ರವರೆಗೆ ಒಟ್ಟು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ.

ಇದೇ ಸ್ಥಳದಲ್ಲಿ ಭಾರತದ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು 1892ರಲ್ಲಿ ಮೂರು ದಿನಗಳ ಕಾಲ ಧ್ಯಾನ ಮಾಡಿ ಜ್ಞಾನೋದಯವನ್ನು ಪಡೆದಿದ್ದರು.

2019ರ ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಮೋದಿ ಅವರು ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿ 15 ಗಂಟೆಗಳ ‘ಏಕಾಂತವಾಸ್’ (ಏಕಾಂತ ಧ್ಯಾನ) ಕೈಗೊಂಡಿದ್ದರು.

2014 ರಲ್ಲಿ ಮಹಾರಾಷ್ಟ್ರದ ಪ್ರತಾಪಗಢಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. 1659ರ ನವೆಂಬರ್ ನಲ್ಲಿ ಬಿಜಾಪುರದ ಆದಿಲ್ ಶಾಹಿ ಸುಲ್ತಾನರ ಸೇನಾಪತಿ ಅಫ್ಜಲ್ ಖಾನ್ ಅವರನ್ನು ಕೊಂದು ಯುದ್ಧದಲ್ಲಿ ಗೆದ್ದ ಛತ್ರಪತಿ ಶಿವಾಜಿಗೆ ಗೌರವ ಸಲ್ಲಿಸಿದರು. ಈ ವಿಜಯವು ಮರಾಠಾ ಸಾಮ್ರಾಜ್ಯದ ಮುಖ್ಯಸ್ಥನಾಗಿ ಶಿವಾಜಿಯ ಪಟ್ಟಾಭಿಷೇಕಕ್ಕೆ ದಾರಿ ಮಾಡಿಕೊಟ್ಟಿತು. ಇದನ್ನು ಹಿಂದವಿ ಸ್ವರಾಜ್ ಎಂದು ಛತ್ರಪತಿ ಶಿವಾಜಿ ಕರೆದರು.

ಇದೀಗ ಜೂನ್ 4 ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಮೋದಿ ಕನ್ಯಾಕುಮಾರಿ ಪ್ರವಾಸ ಯೋಜನೆ ಹಾಕಿಕೊಂಡಿದ್ದಾರೆ.


ವಿವೇಕಾನಂದ ಬಂಡೆಯ ಮಹತ್ವ ಏನು?

ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು.

ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.

ಸ್ವಾಮಿ ರಾಮಕೃಷ್ಣಾನಂದರಿಗೆ 1894ರಲ್ಲಿ ವಿವೇಕಾನಂದರು, ಭಾರತೀಯ ಬಂಡೆಯ ಕೊನೆಯ ತುಣುಕಿನ ಮೇಲೆ ಕುಳಿತು ನಾನು ಒಂದು ಯೋಜನೆಯನ್ನು ಕಂಡಿದ್ದೇನೆ. ಸನ್ಯಾಸಿಗಳು ಅಲೆದಾಡುತ್ತಾ ಜನರಿಗೆ ಆಧ್ಯಾತ್ಮಿಕತೆಯನ್ನು ಕಲಿಸುವುದು ಹುಚ್ಚುತನ. ಬಡವರು ಅತ್ಯಂತ ಕಷ್ಟವಾದ ಜೀವನ ನಡೆಸುತ್ತಿರುವುದು ಅವರ ಅಜ್ಞಾನದಿಂದಾಗಿ. ನಾವು ಅದನ್ನು ಹೋಗಲಾಡಿಸುವ ಬದಲು ಅವರ ರಕ್ತವನ್ನು ಹೀರುತ್ತಿದ್ದೇವೆ ಮತ್ತು ಅವರನ್ನು ಪಾದದಡಿಯಲ್ಲಿ ತುಳಿಯುತ್ತಿದ್ದೇವೆ ಎಂದು ಹೇಳಿದ್ದರು.

1963ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಶತಮಾನೋತ್ಸವದ ಮುನ್ನಾದಿನ ಆರ್‌ಎಸ್‌ಎಸ್ ಕಾರ್ಯಕರ್ತ ಏಕನಾಥ್ ರಾನಡೆ ನೇತೃತ್ವದ ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಈ ಸ್ಥಳವನ್ನು ನೆನಪಿಸಿತ್ತು. ಇದನ್ನು 1970 ರಲ್ಲಿ ರಾಷ್ಟ್ರಪತಿ ವಿ.ವಿ.ಗಿರಿ ಅವರು ಔಪಚಾರಿಕವಾಗಿ ಉದ್ಘಾಟಿಸಿದರು.

ಒಂದು ನಂಬಿಕೆಯ ಪ್ರಕಾರ ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿರುವಾಗ ಇದೇ ಬಂಡೆಯ ಮೇಲೆ ಒಂದೇ ಕಾಲಿನ ಮೇಲೆ ಧ್ಯಾನ ಮಾಡುತ್ತಿದ್ದಳು.

ವವತುರೈನಿಂದ 15 ನಿಮಿಷಗಳ ದೋಣಿ ಸಂಚಾರದ ಮೂಲಕ ಕಲ್ಲಿನ ದ್ವೀಪವನ್ನು ಪ್ರವೇಶಿಸಬಹುದು. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ.


ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು.

ಈ ಬಾರಿ ತಮಿಳುನಾಡಿನ ಕನ್ಯಾಕುಮಾರಿಯನ್ನು ಅವರು ಧ್ಯಾನ ಮಾಡಲು ಅವರು ಆಯ್ಕೆ ಮಾಡಿರುವುದು ಈ ವರ್ಷದ ಚುನಾವಣಾ ಪ್ರಚಾರದ ಸಮಯದಲ್ಲಿ ಅವರ ಪಕ್ಷ ದಕ್ಷಿಣ ಭಾರತದಲ್ಲಿ ಬಲವಾಗಿರುವುದನ್ನು ಸೂಚಿಸುತ್ತದೆ. ಕಳೆದ ಮೂರು ವರ್ಷಗಳಲ್ಲಿ ಅವರ ಒಟ್ಟು ಪ್ರವಾಸಗಳಲ್ಲಿ ಮೂರನೇ ಒಂದು ಭಾಗದಷ್ಟು ಅವರು ದಕ್ಷಿಣ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು. 2024ರಲ್ಲಿ ತಮಿಳುನಾಡಿಗೆ ಏಳು ಭಾರಿ ಭೇಟಿ ನೀಡಿದ್ದಾರೆ.

ದಕ್ಷಿಣದ ರಾಜ್ಯಗಳ ಮೇಲೆ ದೃಷ್ಟಿ

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕವು ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ 131 ಸ್ಥಾನಗಳನ್ನು ಹೊಂದಿವೆ. ತಮಿಳುನಾಡುವೊಂದೇ ಸಂಸತ್ತಿನಲ್ಲಿ 39 ಸ್ಥಾನಗಳನ್ನು ಹೊಂದಿದೆ. ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು.

ಮೋದಿ ಭೇಟಿಗೆ ಸಿದ್ಧತೆ ಏನು?

ಗುರುವಾರ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಪ್ರಧಾನಿಯವರ 45 ಗಂಟೆಗಳ ವಾಸ್ತವ್ಯ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸುಮಾರು 2,000 ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

ತಿರುನೆಲ್ವೇಲಿ ವ್ಯಾಪ್ತಿಯ ಡಿಐಜಿ ಪ್ರವೇಶ್ ಕುಮಾರ್ ಅವರು ಪೊಲೀಸ್ ವರಿಷ್ಠಾಧಿಕಾರಿ ಇ. ಸುಂದರವತನಂ ಅವರೊಂದಿಗೆ ಇಲ್ಲಿನ ಕಲ್ಲಿನ ಸ್ಮಾರಕ, ಬೋಟ್ ಜೆಟ್ಟಿ, ಹೆಲಿಪ್ಯಾಡ್ ಮತ್ತು ರಾಜ್ಯ ಅತಿಥಿ ಗೃಹದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಪ್ರಚಾರವನ್ನು ಮುಗಿಸಿದ ಅನಂತರ ಪ್ರಧಾನಿ ಗುರುವಾರ ಮಧ್ಯಾಹ್ನ ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಸಂಜೆ ಕನ್ಯಾಕುಮಾರಿಯಲ್ಲಿರುವ ರಾಜ್ಯ ಅತಿಥಿ ಗೃಹ ತಲುಪಿ ದೋಣಿ ಮೂಲಕ ವಿವೇಕಾನಂದ ಕಲ್ಲಿನ ಸ್ಮಾರಕಕ್ಕೆ ತೆರಳಲಿದ್ದಾರೆ. ಅವರು ಶನಿವಾರ ಮಧ್ಯಾಹ್ನದವರೆಗೆ ಅಲ್ಲಿಯೇ ಇರುತ್ತಾರೆ ಎನ್ನಲಾಗಿದೆ.

ಮೋದಿ ಶನಿವಾರ ಸಂಜೆ ವೇಳೆಗೆ ಕನ್ಯಾಕುಮಾರಿ ಹೆಲಿಪ್ಯಾಡ್ ತಲುಪಿ ತಿರುವನಂತಪುರಕ್ಕೆ ಹಿಂತಿರುಗಿ ಅದೇ ದಿನ ದೆಹಲಿಗೆ ತೆರಳಲಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವು ಪ್ರಧಾನಿಯವರ ಈ ಭೇಟಿಗೆ ಅನುಮತಿಯನ್ನು ವಿರೋಧಿಸಿ ಪ್ರಸ್ತುತ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆ ಮತ್ತು ನಡೆಯುತ್ತಿರುವ ಪ್ರವಾಸೋದ್ಯಮ ಋತುವನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

Continue Reading

ವಿದೇಶ

Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

ವಿಮಾನಗಳಲ್ಲಿ ಪ್ರಕ್ಷುಬ್ಧತೆಯ (Flight Turbulence) ಸಮಯದಲ್ಲಿ ಸುರಕ್ಷಿತವಾಗಿರಲು ಪ್ರಯಾಣಿಕರಿಗೆ ಅಮೆರಿಕದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್‌, ವಿಮಾನ ಸಿಬ್ಬಂದಿ ಪಾಲಿಸಬಹುದಾದ ಮತ್ತು ಪ್ರಯಾಣಿಕರು ನಿರ್ವಹಿಸಬೇಕಾದ ಮಾರ್ಗಸೂಚಿಯನ್ನು ನೀಡಿದೆ. ಈ ಕುರಿತ ವಿವರಣೆ ಇಲ್ಲಿದೆ. ವಿಮಾನದೊಳಗಿನ ಪ್ರಕ್ಷುಬ್ಧತೆ (Flight Turbulence) ಎಂದರೇನು, ಇದರಿಂದ ಪಾರಾಗುವುದು ಹೇಗೆ ಎಂಬ ಮಾಹಿತಿಯೂ ಇಲ್ಲಿದೆ.

VISTARANEWS.COM


on

By

Flight Turbulence
Koo

ವಿಮಾನ (flight) ಹಾರುವಾಗ ವಾಯು ಒತ್ತಡದಿಂದ ಕೆಲವೊಮ್ಮೆ ಪ್ರಕ್ಷುಬ್ಧತೆ (Flight Turbulence) ಉಂಟಾಗುತ್ತದೆ. ವಿಮಾನ ನಡುಗುತ್ತದೆ. ಈ ಸಂದರ್ಭದಲ್ಲಿ ಹಠಾತ್ ಆಘಾತಗಳು ಸಂಭವಿಸಿ ಸಾವು ನೋವು ಉಂಟಾಗುವುದೂ ಇದೆ. ಇಂಥ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಪರಿಸ್ಥಿತಿಯನ್ನು ಶಾಂತವಾಗಿ ನಿಭಾಯಿಸಬೇಕಾಗುತ್ತದೆ. ಇತ್ತೀಚೆಗೆ ಸಿಂಗಾಪುರ ಏರ್‌ಲೈನ್ಸ್ (singapore airlines) ವಿಮಾನ ಇಂಥದ್ದೇ ಪರಿಸ್ಥಿತಿಗೆ ಒಳಗಾಗಿ ಪ್ರಯಾಣಿಕರೊಬ್ಬರು ಸಾವಿಗೀಡಾಗಿ, ಹಲವರು ಪ್ರಯಾಣಿಕರು ಗಾಯಗೊಂಡಿದ್ದರು. ಲಂಡನ್‌ನಿಂದ ಸಿಂಗಾಪುರಕ್ಕೆ ಹಾರುತ್ತಿದ್ದ ಬೋಯಿಂಗ್ 777-312ER ವಿಮಾನ 321ರಲ್ಲಿದ್ದ ಪ್ರಯಾಣಿಕರು ವಾಯು ಪ್ರಕ್ಷುಬ್ಧತೆಯ ಭಯಾನಕತೆಯನ್ನು ಅನುಭವಿಸಬೇಕಾಯಿತು.

ವಾಯು ಪ್ರಕ್ಷುಬ್ಧತೆ ಎಂದರೇನು?

ವಾಯು ಪ್ರಕ್ಷುಬ್ಧತೆಯು ಭೂಮಿಯ ವಾತಾವರಣದಲ್ಲಿ ಗಾಳಿಯ ಅನಿಯಮಿತ ಮತ್ತು ಅನಿರೀಕ್ಷಿತ ಚಲನೆಯಿಂದ ಉಂಟಾಗುತ್ತದೆ. ಇದು ವಿಮಾನ ಹಾರಾಟದ ಸಮಯದಲ್ಲಿ ಅಪಘಾತಕ್ಕೆ ಕಾರಣವಾಗುತ್ತದೆ. ವೇಗವಾಗಿ ವಾಹನ ಓಡಿಸುತ್ತಿದ್ದಾಗ ಯಾವ ಸೂಚನಾ ಫಲಕ ಇಲ್ಲದೆ ಹಠಾತ್‌ ಹಂಪ್‌ ಎದುರಾದಾಗ ಏನಾಗುತ್ತದೋ ವಿಮಾನದೊಳಗೆ ಹಾಗೆಯೇ ಆಗುತ್ತದೆ. ವಿಮಾನವು ಚಾಲಕನ ನಿಯಂತ್ರಣ ಕಳೆದುಕೊಂಡು ಪತನಗೊಳ್ಳುವಂತಾಗುತ್ತದೆ.

ಆಗ ಏನು ಮಾಡಬೇಕು?

ಯಾವಾಗಲೂ ಸೀಟ್ ಬೆಲ್ಟ್ ಧರಿಸಿ ಸುರಕ್ಷಿತವಾಗಿ ಕುಳಿತಿರಬೇಕು. ಸೈನ್ ಆಫ್ ಆಗಿದ್ದರೂ, ಅದನ್ನು ಬಿಗಿಯಾಗಿ ಇರಿಸಬೇಕು.
ಸಿಬ್ಬಂದಿಯ ಸೂಚನೆಗಳನ್ನು ಅನುಸರಿಸಿ. ಅವರ ಮಾತನ್ನು ಕೇಳಿ. ಪ್ರಕ್ಷುಬ್ಧತೆಯನ್ನು ನಿಭಾಯಿಸಲು ಅವರಿಗೆ ತರಬೇತಿ ನೀಡಲಾಗಿರುತ್ತದೆ. ಪ್ರಕ್ಷುಬ್ಧತೆಯ ಸಮಯದಲ್ಲಿ ಕ್ಯಾಬಿನ್ ಸುತ್ತಲೂ ಚಲಿಸುವುದನ್ನು ತಪ್ಪಿಸಿ ಮತ್ತು ಆತಂಕದಿಂದ ಕಿರುಚದೇ ಮೌನವಾಗಿ ಕುಳಿತುಕೊಳ್ಳಿ.

ಕ್ಯಾಬಿನ್‌ನಲ್ಲಿ ಇಟ್ಟಿರುವ ವಸ್ತುಗಳು ಮೈಮೇಲೆ ಬೀಳದಂತೆ ಸುರಕ್ಷಿತವಾಗಿರಿಸಿ. ಸೋರಿಕೆ ಅಥವಾ ಬೀಳುವಿಕೆಯನ್ನು ತಪ್ಪಿಸಲು ವಸ್ತುಗಳನ್ನು ಓವರ್ ಹೆಡ್ ವಿಭಾಗಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಿ.
ಪ್ರಕ್ಷುಬ್ಧತೆ ಸಾಮಾನ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಶಾಂತವಾಗಿರಿ ಮತ್ತು ಭಯಭೀತರಾಗಬೇಡಿ. ರೆಸ್ಟ್ ರೂಮ್‌ ಅನ್ನು ಬಳಸಬೇಕಾದರೆ ಎದ್ದೇಳುವ ಮೊದಲು ಶಾಂತ ಕ್ಷಣಕ್ಕಾಗಿ ಕಾಯಿರಿ. ಸ್ಥಿರತೆಗಾಗಿ ಹ್ಯಾಂಡ್ರೈಲ್‌ಗಳನ್ನು ಬಳಸಿ.

ವಾಯು ಪ್ರಕ್ಷುಬ್ಧತೆಗೆ ಕಾರಣಗಳೇನು?

ಚಂಡಮಾರುತ, ಜೆಟ್ ಸ್ಟ್ರೀಮ್‌ ಅಥವಾ ಗಾಳಿಯ ಒತ್ತಡದಲ್ಲಿನ ಬದಲಾವಣೆಗಳಿಂದ ವಾಯು ಪ್ರಕ್ಷುಬ್ಧತೆ ಉಂಟಾಗಬಹುದು. ಹವಾಮಾನ ಬದಲಾವಣೆಗಳಿಂದಾಗಿ ಗಾಳಿಯ ಪ್ರಕ್ಷುಬ್ಧತೆಯು ಆಗಾಗ ಸಂಭವಿಸುತ್ತದೆ ಎನ್ನುತ್ತಾರೆ ತಜ್ಞರು. ತೀವ್ರವಾದ ಪ್ರಕ್ಷುಬ್ಧ ಘಟನೆಗಳು ಅಪರೂಪ. ಪೈಲಟ್‌ಗಳು ಅವುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತರಬೇತಿ ಪಡೆದಿರುತ್ತಾರೆ.

ಇದನ್ನೂ ಓದಿ: Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

ಮಾಜಿ ಪೈಲೆಟ್ ಹೇಳಿದ್ದೇನು?

43 ವರ್ಷಗಳ ಅನುಭವ ಹೊಂದಿರುವ ನಿವೃತ್ತ ಪೈಲಟ್ ಕ್ಯಾಪ್ಟನ್ ಕ್ರಿಸ್ ಹ್ಯಾಮಂಡ್ ಅವರು ಈ ಪರಿಸ್ಥಿತಿಯನ್ನು ಹೀಗೆ ವಿವರಿಸುತ್ತಾರೆ: ಇಂಥ ಸಂದರ್ಭದಲ್ಲಿ ಪ್ರಯಾಣಿಕರನ್ನು ಹೆಚ್ಚು ಸಮಾಧಾನದಿಂದ ಇರಿಸುವಂತೆ ಮಾಡುವ ಜವಾಬ್ದಾರಿ ಪೈಲಟ್‌ನದ್ದಾಗಿದೆ. ಎಲ್ಲಕ್ಕಿಂತ ಪೈಲಟ್‌ ತಾನು ಸಮಾಧಾನದಿಂದ ಇದ್ದು, ವಿವೇಚನೆ ಮತ್ತು ಅನುಭವ ಬಳಸಿ ವಿಮಾನವನ್ನು ನಿಯಂತ್ರಿಸಬೇಕಾಗುತ್ತದೆ. ಅನುಭವಿ ಚಾಲಕರು ಇಂಥ ಸನ್ನಿವೇಶವನ್ನು ಯಶಸ್ವಿಯಾಗಿ ನಿಭಾಯಿಸಿ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡುತ್ತಾರೆ.

Continue Reading
Advertisement
Dead Body Found Bodies found floating in Cauvery river
ಕ್ರೈಂ36 seconds ago

Dead Body Found : ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು

Ram Charan Instagram story of daughter Klin Kaara receiving bujji
ಟಾಲಿವುಡ್1 min ago

Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

Kedar Jadhav Retirement
ಕ್ರಿಕೆಟ್10 mins ago

Kedar Jadhav Retirement: ಧೋನಿ ಶೈಲಿಯಲ್ಲೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದಾರ್​ ಜಾಧವ್

Nishant Agarwal
ದೇಶ14 mins ago

Nishant Agarwal: ಬ್ರಹ್ಮೋಸ್‌ ಕ್ಷಿಪಣಿ ಕುರಿತು ಪಾಕ್‌ಗೆ ಮಾಹಿತಿ; ಮಾಜಿ ಎಂಜಿನಿಯರ್‌ ನಿಶಾಂತ್‌ ಅಗರ್ವಾಲ್‌ಗೆ ಜೀವಾವಧಿ ಶಿಕ್ಷೆ!

Bangalore Rain
ಕರ್ನಾಟಕ16 mins ago

Bangalore Rain: ಮಳೆ ಹಾನಿ ಬಗ್ಗೆ ಬೆಸ್ಕಾಂಗೆ ದೂರುಗಳ ಸುರಿಮಳೆ; ಉರುಳಿ ಬಿದ್ದ 176 ವಿದ್ಯುತ್ ಕಂಬ, 9 ಟ್ರಾನ್ಸ್‌ಫಾರ್ಮರ್‌ಗೆ ಹಾನಿ

Karnataka Rain
ಮಳೆ35 mins ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Rishab Shetty Shivamma Yarehanchinala Official Trailer out
ಸ್ಯಾಂಡಲ್ ವುಡ್38 mins ago

Rishab Shetty: ರಿಷಬ್ ನಿರ್ಮಾಣದ ‘ಶಿವಮ್ಮ’ ಟ್ರೈಲರ್‌ ಔಟ್‌; ಜೂನ್‌ 14ಕ್ಕೆ ತೆರೆಗೆ

Mira Road Tragedy
ಕ್ರೀಡೆ44 mins ago

Mira Road Tragedy: ಸಿಕ್ಸರ್​ ಬಾರಿಸಿ ಮರು ಕ್ಷಣವೇ ಪ್ರಾಣ ಕಳೆದುಕೊಂಡ ಕ್ರಿಕೆಟಿಗ​; ದುರಂತ ವಿಡಿಯೊ ವೈರಲ್​

Shivamogga Lok Sabha Constituency
ಶಿವಮೊಗ್ಗ50 mins ago

Shivamogga Lok Sabha Constituency: ತ್ರಿಕೋನ ಕದನದ ಶಿವಮೊಗ್ಗದಲ್ಲಿ ಯಾರಿಗೆ ವಿಜಯದ ಮಾಲೆ?

Pakistan Army
ವಿದೇಶ50 mins ago

Pakistan Army: ಪಾಕಿಸ್ತಾನ ಸೇನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೊದಲ ಮಹಿಳಾ ಬ್ರಿಗೇಡಿಯರ್ ಆಗಿ ಇತಿಹಾಸ ಬರೆದ ಡಾ. ಹೆಲೆನ್ ಮೇರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ35 mins ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 hour ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌