‌Terror Accused | ಕಾಶ್ಮೀರಕ್ಕೆ ತೆರಳಲು ಪ್ಲ್ಯಾನ್ ಮಾಡಿದ್ದ ಶಂಕಿತ ಉಗ್ರ ಅಖ್ತರ್‌! - Vistara News

ಕರ್ನಾಟಕ

‌Terror Accused | ಕಾಶ್ಮೀರಕ್ಕೆ ತೆರಳಲು ಪ್ಲ್ಯಾನ್ ಮಾಡಿದ್ದ ಶಂಕಿತ ಉಗ್ರ ಅಖ್ತರ್‌!

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದುಪಡಿಸಿದಾಗ ಸೈನ್ಯದ ವಿರುದ್ಧ ಸಮರ ಸಾರಲು ಶಂಕಿತ ಉಗ್ರ (‌Terror Accused) ನಿರ್ಧರಿಸಿದ್ದ. ಕಾಶ್ಮೀರಿ ಮುಸ್ಲಿಮರ ಮೇಲೆ ಸೈನಿಕರು ದೌರ್ಜನ್ಯ ನಡೆಸುತ್ತಿದ್ದಾರೆ, ನಾವು ಸೈನ್ಯದ ವಿರುದ್ಧ ಸಮರ ಸಾರಬೇಕು ಎಂದು ಟೆಲಿಗ್ರಾಮ್‌ನಲ್ಲಿ ಯುವಕರನ್ನು ಪ್ರಚೋದಿಸುತ್ತಿದ್ದ ಎಂಬ ವಿಚಾರ ತಿಳಿದು ಬಂದಿದೆ.

VISTARANEWS.COM


on

Terror Accused
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಿಲಕ್‌ ನಗರದಲ್ಲಿ ಸೆರೆಯಾಗಿರುವ ಶಂಕಿತ ಉಗ್ರ (‌Terror Accused) ಅಖ್ತರ್ ಹುಸೇನ್ ಅಲಿಯಾಸ್ ಅಬ್ದುಲ್ ಹುಸೇನ್ ಲಷ್ಕರ್ ಧರ್ಮಾಂಧತೆ ಬೆಳೆಸಿಕೊಂಡಿದ್ದ. ಹೀಗಾಗಿ ಧರ್ಮಯುದ್ಧ ಎಂಬಂತೆ ಭಾರತದಲ್ಲಿ ಕುಕೃತ್ಯಕ್ಕೆ ಸಂಚು ರೂಪಿಸಿದ್ದ. ಅಲ್ಲದೆ, ಕೆಲವೇ ದಿನಗಳಲ್ಲಿ ಕಾಶ್ಮೀರಕ್ಕೆ ತೆರಳಲು ಬಿಗ್‌ ಪ್ಲ್ಯಾನ್ ಮಾಡಿದ್ದ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಅಸ್ಸಾಂ ಮೂಲದ ತೆಲಿತಿಕಾರ್ ಗ್ರಾಮದ ಅಬ್ದುಲ್ ಖಾದರ್ ಲಷ್ಕರ್‌ ಎಂಬಾತನ ಮಗ ಅಬ್ದುಲ್ ಹುಸೇನ್ ಲಷ್ಕರ್‌ (ಅಖ್ತರ್ ಹುಸೇನ್) ಕೆಲಸ ಅರಸಿ ಬಂದು, ನಗರದ ತಿಲಕನಗರ ಉಸ್ಮಾನ್ ಘನಿ ಮಸೀದಿ ಹತ್ತಿರ ವಾಸವಿದ್ದ. ಫುಡ್‌ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಖ್ತರ್ ಹುಸೇನ್ ರಾತ್ರಿ ವೇಳೆಯಲ್ಲೇ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ. ಧರ್ಮಾಂಧನಾಗಿ ಭಾರತವವನ್ನು ದ್ವೇಷಿಸುತ್ತಿದ್ದ ಈತ ಅಲ್‌ಖೈದಾಗೆ ಸಂಬಂಧಿಸಿದ ವೆಬ್‌ಸೈಟ್‌ಗಳನ್ನು ಫಾಲೋ ಮಾಡುತ್ತಿದ್ದ.

ಈ ವೇಳೆ ಸೌದಿ ಅರೇಬಿಯಾ ಹಾಗೂ ಅಫ್ಘಾನಿಸ್ತಾನ ಭಯೋತ್ಪಾದಕ ಹ್ಯಾಂಡ್ಲರ್‌ಗಳ ಸಂಪರ್ಕ ಸಿಕ್ಕಿತ್ತು. ಉಗ್ರರ ಹ್ಯಾಂಡ್ಲರ್‌ನಿಂದ ಭಯೋತ್ಪಾದನಾ ಚಟುವಟಿಕೆ ಚುರುಕಾಯಿತು. ಬೆಂಗಳೂರಲ್ಲಿ ಯುವಕರನ್ನು ಸೆಳೆಯಲು ಬಿಗ್ ಪ್ಲ್ಯಾನ್ ಮಾಡಿದ್ದ ಅಖ್ತರ್, ಉಗ್ರ ಸಂಘಟನೆಯನ್ನು ಆ್ಯಕ್ಟಿವ್ ಮಾಡಲು ಟೆಲಿಗ್ರಾಮ್‌ ಮೊರೆ ಹೋಗಿದ್ದ. The eagle Of kohrasun and hinder egle ಟೆಲಿಗ್ರಾಮ್ ಗ್ರೂಪ್ ರಚಿಸಿ‌ ಧರ್ಮ ಯುದ್ಧವನ್ನು ಮಾಡಲು ಪ್ರಚೋದನೆ ಮಾಡಲು ಸಂಚು ರೂಪಿಸಿದ್ದನು.

ಇದನ್ನೂ ಓದಿ | Terrorist arrest | ಒಂದೂವರೆ ವರ್ಷದಿಂದ ಬೆಂಗಳೂರಿನಲ್ಲಿದ್ದ ಶಂಕಿತ ಉಗ್ರ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದುಪಡಿಸಿದಾಗ ಸೈನ್ಯದ ವಿರುದ್ಧ ಸಮರ ಸಾರಲು ಈತ ನಿರ್ಧರಿಸಿದ್ದ. ಟೆಲಿಗ್ರಾಮ್‌ನಲ್ಲಿ ಕಾಶ್ಮೀರಿ ಮುಸ್ಲಿಮರ ಮೇಲೆ ಸೈನಿಕರು ದೌರ್ಜನ್ಯ ನಡೆಸುತ್ತಿದ್ದಾರೆ. ನಾವು ಸೈನ್ಯದ ವಿರುದ್ಧ ಸಮರ ಸಾರಬೇಕು ಎಂದು ಯುವಕರನ್ನು ಪ್ರಚೋದಿಸುತ್ತಿದ್ದ. ಈ ನಿಟ್ಟಿನಲ್ಲಿ ಬೆಂಗಳೂರಿನ ಯುವಕರನ್ನು ಕಾಶ್ಮೀರ ಹಾಗೂ ಅಫ್ಘಾನಿಸ್ತಾನದ ಖೋರಾಸಸ್‌ಗೆ ಕಳುಹಿಸಲು ಸಂಚು ಮಾಡಿದ್ದ.

ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ, ರಾಷ್ಟ್ರ ದ್ರೋಹ, ವಿಧ್ವಂಸಕ ಕೃತ್ಯಕ್ಕೆ ಯುವಕರಿಗೆ ಪ್ರಚೋದಿಸಲು ಕಾಶ್ಮೀರಕ್ಕೆ ತೆರಳಿ, ಭಾರತದಲ್ಲಿ ಹಲವು ಕಡೆ ಬಾಂಬ್‌ ಸ್ಫೋಟ ಮಾಡುವ ಬಗ್ಗೆ ಈತ ಸ್ಕೆಚ್‌ ಹಾಕಿದ್ದ. ಈ ಹಿನ್ನೆಲೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಉಗ್ರ ಅಖ್ತರ್ ಹುಸೇನ್, ರಾತ್ರಿ ವೇಳೆಯಲ್ಲೇ ಬೆಂಗಳೂರಿನ ಸೂಕ್ಷ್ಮ ಪ್ರದೇಶವನ್ನು ಹುಡುಕುತ್ತಿದ್ದ. ಈ ಎಲ್ಲ ಮಾಹಿತಿ ತನಿಖಾ ಸಂಸ್ಥೆಗಳಿಂದ ಸಿಸಿಬಿಗೆ ರವಾನೆಯಾಗಿತ್ತು. ಎನ್.ಐ.ಎ ಹಾಗೂ ಐ.ಬಿ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ತಿಲಕ್ ನಗರದಲ್ಲಿ ಶಂಕಿತ ಉಗ್ರ ಅಖ್ತರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಪ್ರಕರಣ ದಾಖಲು: ಅಖ್ತರ್‌ ಹುಸೇನ್ ವಿರುದ್ಧ ಸಿಸಿಬಿ ಅಧಿಕಾರಿಗಳು ನೀಡಿದ ದೂರಿನ ಅನ್ವಯ ತಿಲಕ್‌ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A (ಕೋಮುಗಲಭೆ) 123 (ಗಲಭೆಗೆ ಸಂಚು),121 (ವಿಧ್ವಂಸಕ ಕೃತ್ಯಕ್ಕೆ ಸಂಚು),120B (ಒಳ ಸಂಚು), ಸೆಕ್ಷನ್ 15 (ಟೆರರಿಸ್ಟ್ ಆ್ಯಕ್ಟ್),16 (ಪನಿಶ್ಮೆಂಟ್ ಫಾರ್ ಟೆರರಿಸ್ಟ್ ಆ್ಯಕ್ಟ್) ,18 (ಉಗ್ರ ಸಂಘಟನೆಗೆ ಪ್ರೇರೇಪಣೆ) ಕಾನೂನು ಬಾಹಿರ ಚಟುವಟಿಕೆಗಳ ನಿರ್ಬಂಧ ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಷ್ಕ್ರಿಯವಾದ ಎಟಿಸಿ?
ಭಯೋತ್ಪಾದನಾ ಚಟುವಟಿಕೆಗಳ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬಹು ನಿರೀಕ್ಷೆ ಮೂಡಿಸಿದ್ದ ಭಯೋತ್ಪಾದನಾ ನಿಗ್ರಹ ದಳ (ಎಟಿಸಿ) ಪ್ರಾರಂಭಿಕ ಹಂತದಲ್ಲಿ ಸಾಕಷ್ಟು ಭರವಸೆ ಮೂಡಿಸಿತ್ತು. ಆದರೆ ಸಿಸಿಬಿಯಿಂದ ಬೇರ್ಪಟ್ಟ ಬಳಿಕ ಎಟಿಸಿ ಬಗ್ಗೆ ಪೊಲೀಸ್ ಇಲಾಖೆಯಲ್ಲೇ ನಿರಾಸಕ್ತಿ ಮೂಡಿದೆ.

ನಗರದಲ್ಲಿ ಉಗ್ರರು ಸಿಕ್ಕಿಬಿದ್ದರೂ ಈ ವಿಂಗ್‌ಗೆ ಮಾಹಿತಿ ಸಿಗುವುದು ತಡವಾಗಿ, ಕೇಂದ್ರದ ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ (ಎಟಿಎಸ್)ನಂತೆ ಬೆಂಗಳೂರಿನ ಎಟಿಸಿ ಕಾರ್ಯನಿರ್ವಹಿಸುತ್ತದೆ ಎಂಬ ಭರವಸೆ ಇತ್ತು. ಅದೇ ರೀತಿ ಆರಂಭದ ದಿನಗಳಲ್ಲಿ ಸಿಸಿಬಿಯಲ್ಲಿ ಈ ಸ್ಪೆಷಲ್ ಸ್ಕ್ವಾಡ್ ಭರವಸೆ ಮೂಡಿಸಿತ್ತು. ಬಳಿಕ ಈ ವಿಭಾಗದ ಕಾರ್ಯದಕ್ಷತೆ ಕಡಿಮೆಯಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಹಾಲಿ ಎಟಿಸಿಯಲ್ಲಿ ಒಬ್ಬ ಎಸಿಪಿ, ಒಬ್ಬ ಇನ್‌ಸ್ಪೆಪೆಕ್ಟರ್ ಹಾಗೂ ಒಬ್ಬ ಪಿಸಿ ಇದ್ದಾರೆ. ಸಿಸಿಬಿಯಲ್ಲಿ ಸಂದೀಪ್ ಪಾಟೀಲ್ ಜಂಟಿ ಪೊಲೀಸ್ ಆಯುಕ್ತರಾಗಿದ್ದ ವೇಳೆ ಎಟಿಸಿ ರಚನೆಯಾಗಿತ್ತು. ಈಗ ಸಿಸಿಬಿಯಿಂದ ಬೇರೆಯಾಗಿರುವ ಎಟಿಸಿ ಘಟಕ ಆಂತರಿಕ ಭದ್ರತಾ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕೇರಳದ ಸಲೀಂ ಹಾಗೂ ಪಾಕ್‌ನ ಐಎಸ್‌ಐಗೆ ಮಾಹಿತಿ ನೀಡ್ತಿದ್ದವನ ಬಂಧನ ಮಾಡಿದ್ದಷ್ಟೆ ಎಟಿಸಿಯ ಕೆಲಸವಾಗಿದೆ. ಆದರೆ, ಈ ಹಿಂದೆ ಕೇಂದ್ರದಿಂದ ಎನ್‌ಐಎ ಬಂದು ಶ್ರೀರಾಮಪುರದಲ್ಲಿ ಶಂಕಿತ ಉಗ್ರ ತಾಲೀಬ್‌ನನ್ನು ಬಂಧಿಸಿದ ವಿಚಾರ ಎಟಿಸಿಗೆ ಗೊತ್ತಾಗಿದ್ದೇ ತೀರ ತಡವಾಗಿ. ಹೀಗಾಗಿ ಈ ವಿಭಾಗ ನಿಷ್ಕ್ರಿಯವಾಗಿದೆಯೇ ಎಂಬ ಪ್ರಶ್ನೆಗಳು ಮೂಡಿವೆ.

ಇದನ್ನೂ ಓದಿ | Terror Accused | ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ, ಒಂದೇ ದಿನ ಇಬ್ಬರು ಅರೆಸ್ಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Modi 3.0 Cabinet: ಮೋದಿ 3.0 ಸಚಿವ ಸಂಪುಟದಲ್ಲಿ ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Koo

ಬೆಂಗಳೂರು: ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ.

ಕರ್ನಾಟಕದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತೆ ಹಣಕಾಸು ಖಾತೆ ನೀಡಲಾಗಿದ್ದು, ಕಳೆದ ಬಾರಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಪ್ರಲ್ಹಾದ್‌ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ ಖಾತೆ ನೀಡಲಾಗಿದೆ. ಇನ್ನು ಮಂಡ್ಯ ಸಂಸದ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಿಕ್ಕಿದೆ. ಬೆಂ.ಉತ್ತರ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ, ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ನೀಡಲಾಗಿದೆ.

ಯಾರಿಗೆ ಯಾವ ಖಾತೆ?

1.ನಿರ್ಮಲಾ ಸೀತಾರಾಮನ್‌– ಹಣಕಾಸು ಖಾತೆ (ಸಂಪುಟ ದರ್ಜೆ)
2.ಪ್ರಲ್ಹಾದ್‌ ಜೋಶಿ– ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ (ಸಂಪುಟ ದರ್ಜೆ)
3.ಎಚ್‌.ಡಿ.ಕುಮಾರಸ್ವಾಮಿ– ಉಕ್ಕು ಮತ್ತು ಕೈಗಾರಿಕೆ ಖಾತೆ (ಸಂಪುಟ ದರ್ಜೆ)
4.ಶೋಭಾ ಕರಂದ್ಲಾಜೆ– ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ರಾಜ್ಯ ಖಾತೆ)
5. ವಿ.ಸೋಮಣ್ಣ- ಜಲಶಕ್ತಿ ಹಾಗೂ ರೈಲ್ವೆ ಖಾತೆ (ರಾಜ್ಯ ಖಾತೆ)

ಎನ್‌ಡಿಎ ಮೈತ್ರಿಕೂಟದ 30 ಸಂಸದರು ಕ್ಯಾಬಿನೆಟ್‌ ದರ್ಜೆಯ ಸ್ಥಾನ ನೀಡಲಾಗಿದೆ. ಹಾಗೆಯೇ ಐವರಿಗೆ ಸ್ವತಂತ್ರ ನಿರ್ವಹಣೆ ಮತ್ತು ‌36 ಸಂಸದರನ್ನು ರಾಜ್ಯ ಸಹಾಯಕ ಸಚಿವರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ | Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Continue Reading

ತುಮಕೂರು

Shira News: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಟಿ.ಬಿ.ಜಯಚಂದ್ರ

Shira News: ಶಿರಾ ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಕೇಂದ್ರದಲ್ಲಿ ಸೋಮವಾರ ಶಾಸಕ ಟಿ.ಬಿ. ಜಯಚಂದ್ರ, ರೈತರಿಗೆ ಬಿತ್ತನೆ ಬೀಜ ವಿತರಿಸಿದರು.

VISTARANEWS.COM


on

Sowing seed distribution in Shira by MLA TB Jayachandra
Koo

ಶಿರಾ: ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳುವಂತೆ ಶಾಸಕ ಟಿ.ಬಿ.ಜಯಚಂದ್ರ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ (Shira News) ನೀಡಿದರು.

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ, ಮುಂಗಾರು ಹಂಗಾಮಿಗೆ ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಬಿತ್ತನೆ ಬೀಜ ವಿತರಿಸಿ, ಬಳಿಕ ಅವರು ಮಾತನಾಡಿದರು.

ಇದನ್ನೂ ಓದಿ: Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ರೈತರಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಸರ್ಕಾರದ ರಿಯಾಯಿತಿ ದರದ ಬೀಜ, ಗೊಬ್ಬರ ಹಾಗೂ ಕೃಷಿ ಸಲಕರಣೆಗಳನ್ನು ರೈತರು ಪಡೆದುಕೊಂಡು ಉತ್ತಮ ಕೃಷಿ ಕೈಗೊಳ್ಳಬೇಕು. ಮುಂಗಾರು ಹಂಗಾಮಿಗೆ ಬೀಜಗಳನ್ನು ರೈತರ ಬೇಡಿಕೆಗೆ ಅನುಗುಣವಾಗಿ ವಿತರಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ನಾಗರಾಜು, ತಹಸೀಲ್ದಾರ್ ದತ್ತಾತ್ರೇಯ ಗಾದ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಕಾಂಗ್ರೆಸ್ ಯುವ ಮುಖಂಡ ಅಜಯ್ ಗಾಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

ಶಿರಾ: ಪರಿಸರ ಸಂರಕ್ಷಣೆಗೆ ಇಂದು ತುರ್ತು ಆದ್ಯತೆ ನೀಡಬೇಕಾಗಿದೆ. ಪರಿಸರ ದಿನಾಚರಣೆಯು ಕೇವಲ ಒಂದು ದಿನ ಮತ್ತು ಪ್ರಚಾರಕ್ಕೆ ಸೀಮಿತವಾಗದೇ ಇದು ನಿತ್ಯೋತ್ಸವ ಆಗಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಕರೆ ನೀಡಿದರು.

ನಗರದ ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆವರಣದಲ್ಲಿ ಸೋಮವಾರ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ನಮ್ಮ ಸುತ್ತಮುತ್ತಲಿನ ಪರಿಸರ ಕಲುಷಿತಗೊಂಡಿದೆ. ನಾವು ಸೇವಿಸುವ ಗಾಳಿ, ನೀರು ಎಲ್ಲವೂ ಕಲುಷಿತಗೊಂಡಿವೆ. ನಗರದಲ್ಲಿ ಕೈಗಾರಿಕೆಗಳು ಹೆಚ್ಚಾಗುತ್ತಿದ್ದು, ಇದರಿಂದಾಗಿ ನಿತ್ಯವೂ ಪರಿಸರ ಹಾನಿಯಾಗುತ್ತಿದೆ ಎಂದ ಅವರು, ಪ್ರಕೃತಿ ನಮಗೆ ಎಲ್ಲವೂ ನೀಡಿದೆ. ಆದರೆ ನಾವು ಪ್ರಕೃತಿಯ ಮೇಲೆ ದಾಳಿ ನಡೆಸುತ್ತಿದ್ದೇವೆ. ಪ್ರಕೃತಿಯನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಪರಿಸರ ಸಂರಕ್ಷಣೆಯ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ. ನಗರಗಳು ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆಗಳು ಬೆಳೆಯುತ್ತಿವೆ. ಈ ಎಲ್ಲಾ ಬೆಳೆವಣಿಗೆಗಳು ಪರಿಸರದ ಮೇಲೆ ಮಾರಕ ಪರಿಣಾಮ ಬೀರುತ್ತಿವೆ. ಎಲ್ಲಿ ಮಳೆ ಬರಬೇಕು ಅಲ್ಲಿ ಮಳೆ ಆಗುತ್ತಿಲ್ಲ. ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯಿಂದ ಇಂತಹ ಪ್ರಕೃತಿಕ ವಿಕೋಪಗಳು ನಡೆಯುತ್ತಿವೆ. ಈ ಎಲ್ಲಾ ವಿಕೋಪಗಳಿಗೆ ಮನುಷ್ಯನೇ ಕಾರಣ. ಈ ಹಿನ್ನೆಲೆಯಲ್ಲಿ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಈ ಸಂದರ್ಭದಲ್ಲಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ವೆಂಕಟೇಶಯ್ಯ, ಆರ್‌ಎಫ್‌ಒ ನವನೀತ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ನಗರಸಭೆ ಪೌರಾಯುಕ್ತ ರುದ್ರೇಶ್, ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಬಾಯಿ, ಕಾಂಗ್ರೆಸ್ ಮುಖಂಡ ಅಜೇಯ ಗಾಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Banavasi News: ಬನವಾಸಿ ಪಟ್ಟಣದಲ್ಲಿ ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day celebration in Banavasi
Koo

ಬನವಾಸಿ: ಜೀವ ಸಂಕುಲದ ಉಳಿವಿನಲ್ಲಿ ಪರಿಸರದ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ಸಂರಕ್ಷಿಸಿ ತಮ್ಮ ಜವಾಬ್ದಾರಿ‌ ನಿರ್ವಹಿಸಬೇಕಿದೆ ಎಂದು ಡಬ್ಲ್ಯೂಎಚ್ಆರ್ ಆರ್.ಕೆ ಫೌಂಡೇಶನ್‌ನ ಜಿಲ್ಲಾಧ್ಯಕ್ಷೆ ಅರ್ಚನಾ ಜಯಪ್ರಕಾಶ್ ನಾಯ್ಕ್ (Banavasi News) ಹೇಳಿದರು.

ಪಟ್ಟಣದಲ್ಲಿ ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಮ್ಮ ಸುತ್ತಮುತ್ತನಲ್ಲಿರುವ ನೈಸರ್ಗಿಕ ತಾಣವನ್ನು ನೋಡಲು ಹೊರ ರಾಜ್ಯ ಹಾಗೂ ದೇಶ, ವಿದೇಶಗಳಿಂದ ಬರುತ್ತಾರೆ ಎಂದರೆ ಅದಕ್ಕೆ ಕಾರಣ ಇಲ್ಲಿನ ಪರಿಸರ ಸಂಪತ್ತು. ಇದನ್ನು ಇನ್ನಷ್ಟು ಬೆಳೆಸಿ, ಉಳಿಸಿಕೊಂಡು ಹೋಗಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Money Guide: ಹೆಚ್ಚಿನ ಬಡ್ಡಿ ಮಾತ್ರವಲ್ಲ, ಪಿಪಿಎಫ್ ನಿಂದ ಇನ್ನೂ ಏನೇನು ಪ್ರಯೋಜನ?

ಈ ಪರಿಸರ ಮುಂದಿನ ತಲೆಮಾರಿನವರಿಗೆ ಉಳಿಯುವ ಉದ್ದೇಶದಿಂದ ಇಂತಹ ಕಾರ್ಯಕ್ರಮದ ಮೂಲಕ ನಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕಾಗಿದೆ‌. ಅತ್ಯಗತ್ಯವಾಗಿ ನಾವೆಲ್ಲರೂ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದ ಅಧ್ಯಕ್ಷೆ ಸೀಮಾವತಿ ಕೆರೊಡಿ ಮಾತನಾಡಿ, ಇಂದು ನಮಗೆ ನಮ್ಮ ಸುತ್ತಮುತ್ತಲಿನಲ್ಲಿ ಸಾಕಷ್ಟು ಅರಣ್ಯ ಇದೆ ಎಂದು ಎನಿಸಬಹುದು ಆದರೆ ದಶಕಗಳು ಕಳೆದಂತೆ ಜನಸಂಖ್ಯೆ ಹೆಚ್ಚಳ, ಕಾರ್ಖಾನೆಗಳು, ಪ್ಲಾಸ್ಟಿಕ್ ಉತ್ಪನ್ನ ಬಳಕೆಯಿಂದ ಶುದ್ಧ ಗಾಳಿ, ನೀರನ್ನು ಹಣ ನೀಡಿ ಖರೀದಿಸುವಂತ ಸ್ಥಿತಿ ಬರಬಹುದು ಆ ಸ್ಥಿತಿಗೆ ತಲುಪಬಾರದು ಎಂದರೆ ಪ್ರತಿಯೊಬ್ಬರು ಇಂದಿನಿಂದಲೇ ಒಂದೊಂದು ಗಿಡ ನೆಡಬೇಕು, ಅದರ ಪಾಲನೆ ಮಾಡಬೇಕು. ಪರಿಸರ ಸಂರಕ್ಷಣೆಗೆ ಪ್ರಮುಖ ಆದ್ಯತೆ ನೀಡಬೇಕು ಎಂದರು.

ಇದೇ ವೇಳೆ ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದ ನೂತನ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಿ, ಸನ್ಮಾನಿಸಲಾಯಿತು.

ಇದನ್ನೂ ಓದಿ: Shira News: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

ಕಾರ್ಯಕ್ರಮದಲ್ಲಿ ಡಬ್ಲ್ಯೂಎಚ್ಆರ್‌ ಆರ್.ಕೆ. ಫೌಂಡೇಶನ್‌ನ ಪದಾಧಿಕಾರಿಗಳು, ಸದಸ್ಯರು ಇದ್ದರು.

Continue Reading

ಕರ್ನಾಟಕ

Vinay Kulkarni: ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆ; ಸಿಬಿಐ ವಿಶೇಷ ಕೋರ್ಟ್‌ನ ತೀರ್ಪು ಎತ್ತಿ ಹಿಡಿದ ಸುಪ್ರೀಂ

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ದೋಷಾರೋಪ ಮತ್ತು ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಶಾಸಕ ವಿನಯ್‌ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಆದರೆ, ವಿನಯ್ ಕುಲಕರ್ಣಿ ವಿರುದ್ಧ ಹೊರಿಸಿರುವ ಆರೋಪ ಸರಿ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

VISTARANEWS.COM


on

Vinay Kulkarni
Koo

ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್‌ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆಯಾಗಿದೆ. ವಿನಯ್ ಕುಲಕರ್ಣಿ ವಿರುದ್ಧ ಹೊರಿಸಿರುವ ಆರೋಪ ಸರಿ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಈ ಮೂಲಕ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಸೋಮವಾರ ಎತ್ತಿ ಹಿಡಿದಿದೆ.

ವಿಚಾರಣಾ ನ್ಯಾಯಾಲಯದ ತೀರ್ಪನ್ನು ಈ ಹಿಂದೆ ಎತ್ತಿ ಹಿಡಿದಿದ್ದ ಹೈಕೋರ್ಟ್‌ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಮೂರ್ತಿಗಳಾದ ಪಿ.ವಿ. ಸಂಜಯ್ ಕುಮಾರ್ ಮತ್ತು ಅಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ನಿರಾಕರಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು.

ತಮ್ಮ ವಿರುದ್ಧ ಹೊರಿಸಲಾಗಿರುವ ದೋಷಾರೋಪ ಮತ್ತು ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ವಿನಯ್‌ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಏ.8ರಂದು ಪ್ರಕರಣದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನ್ಯಾಯಪೀಠ, ಶಾಸಕ ವಿನಯ್​ ಕುಲಕರ್ಣಿ ವಿರುದ್ಧ ಚಾರ್ಜ್‌ಶೀಟ್‌ ಕೈಬಿಡಲು ನಿರಾಕರಿಸಿತ್ತು. ಹೀಗಾಗಿ ವಿನಯ್‌ ಕುಲಕರ್ಣಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಕೂಡ ವಿಚಾರಣಾ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿದೆ.

ಇದನ್ನೂ ಓದಿ | R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್‌.ಅಶೋಕ್‌

ಏನಿದು ಪ್ರಕರಣ?

ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡ ಅವರನ್ನು 2016ರ ಜೂನ್‌ 15ರಂದು ಬರ್ಬರವಾಗಿ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ 2020ರ ನವೆಂಬರ್‌ನಲ್ಲಿ ವಿನಯ್‌ ಕುಲಕರ್ಣಿ ಅವರ ಬಂಧನವಾಗಿತ್ತು. ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಕಂಡರೂ ಶಾಸಕನಿಗೆ ಧಾರವಾಡ ಜಿಲ್ಲೆ ಪ್ರವೇಶದ ಮೇಲಿರುವ ನಿರ್ಬಂಧ ತೆರವು ಮಾಡಿಲ್ಲ.

Continue Reading
Advertisement
ಕರ್ನಾಟಕ38 seconds ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sowing seed distribution in Shira by MLA TB Jayachandra
ತುಮಕೂರು12 mins ago

Shira News: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಟಿ.ಬಿ.ಜಯಚಂದ್ರ

World Environment Day celebration in Banavasi
ಉತ್ತರ ಕನ್ನಡ14 mins ago

Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Vinay Kulkarni
ಕರ್ನಾಟಕ1 hour ago

Vinay Kulkarni: ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆ; ಸಿಬಿಐ ವಿಶೇಷ ಕೋರ್ಟ್‌ನ ತೀರ್ಪು ಎತ್ತಿ ಹಿಡಿದ ಸುಪ್ರೀಂ

Modi 3.0 Cabinet
ಪ್ರಮುಖ ಸುದ್ದಿ1 hour ago

Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Students Fashion
ಫ್ಯಾಷನ್1 hour ago

Students Fashion: ಕಾಲೇಜು ಹುಡುಗಿಯರ ಫ್ಯಾಷನ್‌ ಲಿಸ್ಟ್‌ಗೆ ಸೇರಿದ ಮಾರ್ಬಲ್‌ ಪ್ರಿಂಟೆಡ್‌ ಕ್ರಾಪ್‌ ಟಾಪ್ಸ್!

Suresh Gopi
ದೇಶ2 hours ago

Suresh Gopi: ಸಚಿವ ಸ್ಥಾನಕ್ಕೆ ಬಿಜೆಪಿಯ ಸುರೇಶ್‌ ಗೋಪಿ ರಾಜೀನಾಮೆ; ಮಹತ್ವದ ಸ್ಪಷ್ಟನೆ ಕೊಟ್ಟ ಸಂಸದ

Medical student commits suicide in Bengaluru
ಬೆಂಗಳೂರು2 hours ago

Medical Student : ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

Shivaraj Kumar
ಕರ್ನಾಟಕ2 hours ago

Shivaraj Kumar: ನನ್ನ ಹೆಂಡತಿ ಗೆಲ್ಲಲಿ ಎಂದು ಆಸೆ ಪಟ್ಟಿದ್ದು ತಪ್ಪಾ?: ನಟ ಶಿವರಾಜ್‌ ಕುಮಾರ್‌

Money Guide
ಮನಿ ಗೈಡ್2 hours ago

Money Guide: ಹೆಚ್ಚಿನ ಬಡ್ಡಿ ಮಾತ್ರವಲ್ಲ, ಪಿಪಿಎಫ್ ನಿಂದ ಇನ್ನೂ ಏನೇನು ಪ್ರಯೋಜನ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌