Bheemana Amavasya | ಸರ್ವ ಮಂಗಳಕಾರಕ ಭೀಮನ ಅಮಾವಾಸ್ಯೆ; ವ್ರತಾಚರಣೆ ಹೇಗೆ? - Vistara News

ಧಾರ್ಮಿಕ

Bheemana Amavasya | ಸರ್ವ ಮಂಗಳಕಾರಕ ಭೀಮನ ಅಮಾವಾಸ್ಯೆ; ವ್ರತಾಚರಣೆ ಹೇಗೆ?

ಆಷಾಢ ಕೃಷ್ಣ ಅಮಾವಾಸ್ಯೆ (ಜು.28) ಭೀಮೇಶ್ವರ ವ್ರತದ ದಿನ (Bheemana Amavasya). ಜ್ಯೋತಿರ್ಭೀಮೇಶ್ವರ ವ್ರತದ ಹಿನ್ನೆಲೆ ಏನು? ವ್ರತಾಚರಣೆ ಹೇಗೆ? ಪೂಜಿಸುವಾಗ ಏನೆಂದು ಪ್ರಾರ್ಥನೆ ಮಾಡಬೇಕೆಂಬ ಮಾಹಿತಿ ಈ ಲೇಖನದಲ್ಲಿದೆ.

VISTARANEWS.COM


on

Bheemana Amavasya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Bheemana Amavasya

ಮೇಧಾ ಪ್ರಹ್ಲಾದಾಚಾರ್ಯ ಜೋಶಿ
ವ್ರತ ಎಂದರೆ ನಿಷ್ಠೆ ಎಂದು ಅರ್ಥ. ದೇವತೆಗಳಲ್ಲಿ ನಾವು ತೋರಿಸುವ ಭಕ್ತಿ ಗೌರವಗಳು ವ್ರತದ ಮೂಲಕ ಪೂಜಾರೂಪದಲ್ಲಿ ಆಚರಿಸಲ್ಪಡುತ್ತವೆ. ಪ್ರತಿ ವ್ರತದಲ್ಲಿ ಆಚರಣೆಗೆ ಪೂರ್ವಸಿದ್ಧತೆ ಆವಶ್ಯಕವಾಗಿರುತ್ತದೆ. ಕಾಲಕ್ಕೆ ತಕ್ಕಂತೆ ಪೂಜಾದ್ರವ್ಯಗಳನ್ನು ಬಳಸಿಕೊಂಡು ಕೆಲವು ವಿಶಿಷ್ಟ ನಿಯಮಗಳನ್ನು ಪಾಲಿಸಿ ವ್ರತಗಳನ್ನು ಮಾಡಬೇಕಾಗುತ್ತದೆ.

ನಮ್ಮ ಸನಾತನ ಹಿಂದೂಸಂಪ್ರದಾಯದಲ್ಲಿ ದೇವರು-ದೇವತೆಗಳ ಪೂಜೆ ಅಷ್ಟೇ ಅಲ್ಲದೇ ಪವಿತ್ರವಾದ ಕೆಲವು ಸಂಬಂಧಗಳನ್ನು ಪೂಜೆಮಾಡುವ ಮೂಲಕ ಆ ಸಂಬಂಧಗಳನ್ನು ಗೌರವಿಸುವ ಸಂಪ್ರದಾಯವು ಆಚರಣೆಯಲ್ಲಿದೆ. ಭಾರತೀಯ ಸಂಪ್ರದಾಯದಲ್ಲಿ ಪತಿಯನ್ನು ದೇವರೆಂದು ಭಾವಿಸಿ, ಪೂಜಿಸುವ ಸಂಪ್ರದಾಯಗಳು ಬಹಳ ಪುರಾತನ ಕಾಲದಿಂದಲೂ ಇದೆ. ಪತಿಯ ಆಯು, ಆರೋಗ್ಯವೃದ್ಧಿಯಾಗಬೇಕು, ಎಲ್ಲ ಕ್ಷೇತ್ರದಲ್ಲೂ ಯಶಸ್ಸು ಸಿಗಬೇಕೆಂದು ಪ್ರಾರ್ಥಿಸಿ ಅನೇಕ ವ್ರತಗಳನ್ನು ಮಾಡುವ ಸಂಪ್ರದಾಯ ಬಂದಿದೆ.

ವಟ ಸಾವಿತ್ರಿ ಪೂಜೆ, ಮಂಗಳಗೌರೀ ಪೂಜೆ, ಗೌರೀಹರ ಪೂಜೆ ಹಾಗೆಯೇ ಈ ಭೀಮನ ಅಮಾವಾಸ್ಯೆಯು ಒಂದು. ಸ್ತ್ರೀಯರಿಗೆ ಕುಂಕುಮವೇ ಅಮೂಲ್ಯವಾದ ಆಭರಣ. ಪತಿಯ ಸಕಲ ಆಪತ್ತುಗಳೆಲ್ಲ ಕಳೆದು ದೀರ್ಘಾಯುಷ್ಯವನ್ನು ಹೊಂದಲಿ ಎಂದು ಉಮಾ-ಮಹೇಶ್ವರರಲ್ಲಿ ಪ್ರಾರ್ಥಿಸಿ ವಿಧಾನ ಪೂರ್ವಕವಾಗಿ ಪೂಜಿಸುವುದೇ ಈ ಭೀಮನ ಅಮಾವಾಸ್ಯೆ. ಉದ್ದೇಶ್ಯ ಒಂದೇ ಆದರೂ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆ ಕಂಡುಬರುತ್ತದೆ. ಹಾಗೆಯೇ ಆಚರಣೆಯಲ್ಲಿಯೂ ವೈವಿಧ್ಯತೆಯನ್ನು ಕಾಣಬಹುದು.

ಉತ್ತರ ಕರ್ನಾಟಕದಲ್ಲಿ ದಿವಶೀ ಅಮಾವಾಸ್ಯೆ ಎಂದು, ದಕ್ಷಿಣಕನ್ನಡದಲ್ಲಿ ಆಟಿ ಅಮಾವಾಸ್ಯೆ ಎಂದು, ಉತ್ತರ ಕನ್ನಡದ ಕಡೆಗೆ ಕೊಡೆ ಅಮಾವಾಸ್ಯೆ ಎಂದು, ಮೈಸೂರು ಬೆಂಗಳೂರು ಪ್ರಾಂತ್ಯದಲ್ಲಿ ಭೀಮನ ಅಮಾವಾಸ್ಯೆ (Bheemana Amavasya) ಮತ್ತು ಪತಿಸಂಜೀವಿನೀವ್ರತ ಎಂದು ಹೀಗೆ ಅನೇಕ ಹೆಸರುಗಳಿಂದ ಈ ವ್ರತ ಪ್ರಸಿದ್ಧಿಪಡೆದಿದೆ.

ಈ ವ್ರತವನ್ನು ವಿವಾಹಿತರಷ್ಟೇ ಅಲ್ಲದೆ ಅವಿವಾಹಿತ ಕನ್ಯೆಯರೂ ಆಚರಿಸುವ ಪದ್ಧತಿಯುಂಟು. ವಿವಾಹಿತ ಹೆಣ್ಣುಮಗಳು ತನ್ನ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರೆ, ಅವಿವಾಹಿತ ಕನ್ಯೆಯರು ಸದ್ಗುಣಿಯಾದ ಪತಿದೊರೆಯಲಿ ದಾಂಪತ್ಯಜೀವನ ಗೌರೀಹರರಂತೆ ಇರಲಿ ಎಂದು ಪ್ರಾರ್ಥಿಸುತ್ತಾರೆ.

ವ್ರತದ ಹಿನ್ನೆಲೆ ಏನು?

ಹಿಂದೊಮ್ಮೆ ಋಷಿಗಳೆಲ್ಲರು ಸೂತರನ್ನು ಕೇಳಿದರು. “ಸರ್ವಶಾಸ್ತ್ರಗಳನ್ನು ಬಲ್ಲ ಮಹಾನುಭಾರವರಾದ ಸೂತರೆ ನಾರಿಯ ದೀರ್ಘಸೌಮಂಗಲ್ಯಕ್ಕಾಗಿ ಯಾವ ವ್ರತವನ್ನು ಆಚರಿಸಬೇಕುʼʼ ಎಂದು. ಅದಕ್ಕೆ ಸೂತರು ಭೀಮನ ಅಮಾವಾಸ್ಯೆ ಎಂಬ ಒಂದು ಪವಿತ್ರವಾದ ವ್ರತವನ್ನು ಉಪದೇಶಿಸಿದರು. ಇದನ್ನು ಆಷಾಢ ಕೃಷ್ಣ ಅಮಾವಾಸ್ಯೆಯಂದು ಹೆಣ್ಣುಮಕ್ಕಳು ತಮ್ಮ ದೀರ್ಘಸೌಮಾಂಗಲ್ಯಕ್ಕಾಗಿ ಆಚರಿಸಬೇಕು. ಹಾಗೆಯೇ ಅದರ ಹಿನ್ನೆಲೆಯನ್ನು ವಿವರಿಸುತ್ತ ಸೂತರು ಕಥೆಯೊಂದನ್ನು ಹೇಳುತ್ತಾರೆ. ಈ ಕಥೆ ಹೀಗಿದೆ;

ಹಿಂದೆ ಸೌರಾಷ್ಟ್ರದೇಶದಲ್ಲಿ ವಜ್ರಬಾಹು ಎಂಬ ರಾಜನಿದ್ದ. ಪರಮ ಧಾರ್ಮಿಕನು, ಪ್ರಜಾಪಾಲನಾತತ್ಪರನೂ ಆದ ಆ ರಾಜನಿಗೆ ಸರ್ವಶಾಸ್ತ್ರಸಂಪನ್ನನು, ಶತ್ರುನಿಗ್ರಹನಿಸ್ಸೀಮನೂ ಮತ್ತು ಅತಿಸುಂದರನಾದ  ವಿಜಯಶೇಖರನೆಂಬ ಮಗನಿದ್ದನು. ವಿಜಯಶೇಖರನು ದುರ್ದೈವವಶಾತ್ ಅಕಾಲಮರಣವನ್ನು ಹೊಂದಿದನು. ದುಃಖದಿಂದ ಬಳಲಿದ ತಂದೆ-ತಾಯಿಗಳು ತಾರುಣ್ಯಕ್ಕೆ ಕಾಲಿಟ್ಟ ಮಗನ ವಿವಾಹವನ್ನೂ ನೋಡಲಿಲ್ಲ ಎಂದು ಪರಿತಪಿಸಿದರು. ಆಗ ಮಗನ ಮೃತದೇಹಕ್ಕೆ ವಿವಾಹ ಮಾಡೋಣ ಎಂದು ಯೋಚಿಸಿದರು. ಯಾರು ನಮ್ಮ ಮಗನ ಮೃತದೇಹದೊಂದಿಗೆ ವಿವಾಹವಾಗುತ್ತಾರೆ ಅವರಿಗೆ ಒಂದು ಲಕ್ಷಚಿನ್ನದ ನಾಣ್ಯಗಳನ್ನು ಕೊಡುವುದಾಗಿ ಪಟ್ಟಣದ ತುಂಬೆಲ್ಲ ಡಂಗುರ ಸಾರುತ್ತಾರೆ.

ಇದನ್ನು ಕೇಳಿದ ಮಾಧವ ಎಂಬಾತ ತನ್ನ ಹೆಂಡಿತಿ ಸುಶೀಲೆ ಎಂಬುವಳಿಗೆ ಈ ಎಲ್ಲ ವೃತ್ತಾಂತವನ್ನು ತಿಳಿಸುತ್ತಾನೆ. ಆ ದಂಪತಿಗಳಿಗೆ ಐದುಜನ ಹೆಣ್ಣು ಮಕ್ಕಳು ಮತ್ತು ಒಂಬತ್ತು ಜನ ಗಂಡುಮಕ್ಕಳು. ತುಂಬಾ ಬಡತನ. ದಾರಿದ್ರ್ಯದಿಂದ ವ್ಯಥೆಪಡುತ್ತಿರುವ ಆ ಮಾಧವ, ನಮ್ಮ ಒಬ್ಬ ಮಗಳನ್ನು ರಾಜನ ಮಗನಿಗೆ ವಿವಾಹಮಾಡೋಣವೇ ? ಅದರಿಂದ ಬಂದ ಧನದಿಂದ ಉಳಿದವರಾದರೂ ಸುಖದಿಂದ ಬಾಳಬಹುದಲ್ಲವೇ ಎಂದು ಹೆಂಡತಿಯನ್ನು ಕೇಳಿದ. ಅದಕ್ಕೆ ಅವಳು ಕುರೂಪಿಯಾಗಲಿ ಷಂಢನಾಗಲಿ ವೃದ್ಧನೇ ಆಗಲಿ ಆದರೆ ಬದುಕಿರುವವನಿಗೆ ಮಾತ್ರ ನಮ್ಮ ಮಗಳನ್ನು ಧಾರೆ ಎರೆಯೋಣ ಎನ್ನುತ್ತಾಳೆ.

ಆದರೆ ದಾರಿದ್ರ್ಯದಿಂದ ಬೇಸತ್ತ ಮಾಧವ ತನ್ನ ಮಗಳನ್ನು ಕರೆದುಕೊಂಡು ಹೋಗಿ ರಾಜನ ಮಗನ ಮೃತದೇಹದೊಂದಿಗೆ ವಿವಾಹಮಾಡಿಸುತ್ತಾನೆ. ರಾಜನು ಸಕಲ ಮರ್ಯಾದೆ ವೈಭವಗಳಿಂದ ಸೊಸೆಯನ್ನು ಪಲ್ಲಕ್ಕಿಯಲ್ಲಿ ಕರೆತಂದು ಕೊನೆಗೆ ಸ್ಮಶಾನದಲ್ಲಿ ಮಗನ ಮೃತದೇಹದೊಂದಿಗೆ ಬಿಟ್ಟು ಹೋಗುತ್ತಾನೆ. ಸ್ಮಶಾನದಲ್ಲಿ ಗೂಬೆಗಳ ಧ್ವನಿಬಿಟ್ಟರೆ ಇನ್ನೊಂದು ಶಬ್ದವಿಲ್ಲ. ಅಲ್ಲಿಯೇ ಪತಿಯನ್ನು ಬಿಟ್ಟು ಹೋದರೆ ಪತಿವ್ರತಾಧರ್ಮ ಕೆಡುವುದೆಂಬ ಧರ್ಮಸಂಕಟ. ಏನು ಮಾಡಲಿ ಎಂದು ದುಃಖದಿಂದ ಪರಿತಪಿಸುತ್ತ ಭಕ್ತಿಯಿಂದ ಪರಮಾತ್ಮನನ್ನು ಪ್ರಾರ್ಥಿಸುತ್ತಾಳೆ.

“ಹೇ ಅನಾಥ ರಕ್ಷಕನೇ, ಮಾರ್ಕಾಂಡೇಯರನ್ನು ಬದುಕಿಸಿದಂತೆ ನನ್ನ ಪತಿಯನ್ನು ಬದುಕಿಸಿಕೊಡುʼʼ ಎಂದು ಪರಿಪರಿಯಾಗಿ ದುಃಖದಿಂದ ಪ್ರಾರ್ಥಿಸುತ್ತಾಳೆ. ಮೇಲುಧ್ವನಿಯಿಂದ ಬಹಳವಾಗಿ ರೋದಿಸುತ್ತಾಳೆ. ಆಗ ಆಕಾಶಮಾರ್ಗದಲ್ಲಿ ಸಂಚರಿಸುತ್ತಿರುವ ಶಿವಪಾರ್ವತಿಯರಿಗೆ ಅವಳ ಆರ್ತನಾದವು ಕೇಳಿಸುತ್ತದೆ. ಯಾರದೀ ಆಕ್ರಂದನ ಎಂದು ಪಾರ್ವತಿಯು ನೋಡುತ್ತಾಳೆ. ಆ ಬಾಲಿಕೆಯ ಪ್ರಕಾಶಮಾನವಾದ ತೇಜಸ್ಸು ಶಿವಪಾರ್ವತಿಯರನ್ನು ಅವಳೆಡೆಗೆ ಬರುವಂತೆ ಮಾಡುತ್ತದೆ.

ತಕ್ಷಣವೇ ಆ ಸ್ಮಶಾನದಲ್ಲಿ ಶಿವಪಾರ್ವತಿಯರು ಅವಳಿಗೆ ಪ್ರತ್ಯಕ್ಷರಾಗುತ್ತಾರೆ. ಅವರನ್ನುಕಂಡ ಆ ಬಾಲಕಿ ಸಾಷ್ಟಾಂಗವೆರಗಿ ತನ್ನ ದೀನಪರಿಸ್ಥಿತಿಯನ್ನು ತೊಡಿಕೊಳ್ಳುತ್ತಾಳೆ. ತನ್ನ ಗಂಡನನ್ನು ಹೇಗಾದರೂ ಬದುಕಿಸಬೇಕೆಂದು ಪರಿಪರಿಯಾಗಿ ಪ್ರಾರ್ಥಿಸುತ್ತಾಳೆ. ಅದಕ್ಕೆ ಈಶ್ವರನು ಕೇಳು ಮಗಳೆ ಸ್ತ್ರೀಯರಿಗೆ ದೀರ್ಘಸೌಮಂಗಲ್ಯದ ವೃದ್ಧಿಗೆ ಸಕಲ ಮಂಗಳಕರವಾದ ಪುತ್ರ-ಪೌತ್ರಾಭಿವೃದ್ಧಿಗೆ ಕಾರಣವಾದ ಒಂದು ವ್ರತವಿದೆ. ಅದನ್ನು ಹೇಳುವೆ ಭಕ್ತಿಯಿಂದ ಆ ವ್ರತವನ್ನಾಚರಿಸು. ಇಂದು ಅಮಾವಾಸ್ಯೆ ಆದ್ದರಿಂದ ಇಂದೇ ಈ ವ್ರತವನ್ನು ಆಚರಿಸು ಎಂದನು.

Bheemana Amavasya

ಶುದ್ಧ ಸ್ನಾನಾದಿಗಳನ್ನು ಮಾಡಿ ಪೂಜೆಯ ಸ್ಥಳವನ್ನು ಶೋಧಿಸಿ ಸರ್ವತೋಭದ್ರಮಂಡಲವನ್ನು ಬರೆದು ಅಕ್ಕೆಯ ರಾಶಿಯ ಮೇಲೆ ಮಣ್ಣಿನಿಂದ ಎರಡು ದೀಪಸ್ಥಂಭಗಳನ್ನು ಮಾಡಿ ಪಾರ್ವತಿಸಮೇತನಾದ ಜ್ಯೋತಿರ್ನಾಮಕನಾದ ನನ್ನನ್ನು ಪೂಜಿಸು. ಗೋದೀಹಿಟ್ಟಿನಿಂದ ಮಾಡಿದ ಪದಾರ್ಥವನ್ನು ನಿವೇದಿಸು. ಹೀಗೆ ಮಾಡಿದಲ್ಲಿ ಸಕಲ ಇಷ್ಟಾರ್ಥವನ್ನು ಹೊಂದುವೆ ಎಂದು ಶಿವ ನುಡಿದನು. ಅಂತೆಯೇ ಆ ಬಾಲೆ ಚಾಚೂತಪ್ಪದಂತೆ ಭಾಗೀರಥಿಯಲ್ಲಿ ಮಿಂದು ಭಕ್ತಿಯಿಂದ ಆ ವ್ರತವನ್ನು ಆಚರಿಸುತ್ತಾಳೆ. ಕೊನೆಯಲ್ಲಿ ಗೋಧೀಹಿಟ್ಟಿನಿಂದ ಮಾಡಿದ ಬೇಳೆ ಭಂಡಾರವನ್ನು ನಿವೇದಿಸುತ್ತಾಳೆ.

ಅಣ್ಣತಮ್ಮಂದಿರಿದ್ದರೆ ಆ ಭಂಡಾರವನ್ನು ಒಡೆದು ಕೊಡುತ್ತಿದ್ದರು ಎಂದು ದುಃಖಿಸಿದಾಗ ಸಾಕ್ಷಾತ್ ನಂದಿವಾಹನನಾದ ಶಿವನೇ ಅವಳಿಗೆ ಬೇಳೆ ಭಂಡಾರವನ್ನು ಒಡೆದು ಕೊಡುತ್ತಾನೆ. ಹೀಗೆ ಜ್ಯೋತಿಸ್ಥಂಭವನ್ನು ಪೂಜಿಸಿ ಗೌರೀಹರರ ಕೃಪೆಗೆ ಪಾತ್ರಳಾಗಿ ಮೃತನಾದ ತನ್ನ ಪತಿಯನ್ನು ಬದುಕಿಸಿಕೊಳ್ಳುತ್ತಾಳೆ. ನಂತರ ಶಿವನ ಅನುಗ್ರಹದಿಂದ ಅಲ್ಲಿಯೇ ಅವರಿಗೊಂದು ಪಟ್ಟಣವೂ ನಿರ್ಮಾಣವಾಗುತ್ತದೆ. ಸಕಲ ಐಶ್ವರ್ಯಗಳನ್ನು ಹೊಂದಿ ಅನೇಕವರ್ಷಗಳಕಾಲ ಸಂತೋಷದಿಂದ ಜೀವನ ಸಾಗಿಸುತ್ತಾರೆ. ಇದು ಭವಿಷ್ಯೋತ್ತರಪುರಾಣದಲ್ಲಿ ಬಂದ ದೀಪಸ್ತಂಭ ಗೌರೀ ವ್ರತ. ಇದೇ ಭೀಮನ ಅಮಾವಾಸ್ಯೆ ಎಂದು ಪ್ರಸಿದ್ಧಿಯನ್ನು ಪಡೆಯಿತು.

ವ್ರತ ಆಚರಣೆ ಹೇಗೆ?

ಆಷಾಢ ಕೃಷ್ಣ ಅಮಾವಾಸ್ಯೆಯಂದು ಸ್ತ್ರೀಯರು ಶುದ್ಧವಾಗಿ ಎಣ್ಣೆಸ್ನಾನಾದಿಗಳನ್ನು ಮಾಡಿ, ಶುದ್ಧಬಟ್ಟೆಯನ್ನು ತೊಟ್ಟು ಎರಡು ದೀಪಸ್ತಂಭಗಳನ್ನು ಸ್ಥಾಪಿಸಬೇಕು. ಜೊತೆಗೆ ಉಮಾಮಹೇಶ್ವರರ ಚಿತ್ರವನ್ನು ಇಡಬೇಕು. ತುಪ್ಪ ಅಥವಾ ಎಳ್ಳೆಣ್ಣೆಯಿಂದ ದೀಪವನ್ನು ಪ್ರಜ್ವಾಲಿಸಬೇಕು. ಸರ್ವವಿಘ್ನಪರಿಹಾರಕನಾದ ಮಹಾಗಣಪತಿಯನ್ನು ಮೊದಲು ಪೂಜಿಸಬೇಕು. ದೀಪಸ್ತಂಭದಲ್ಲಿ ಶಿವಪಾರ್ವತಿಯರ ಧ್ಯಾನ ಆವಾಹನಾದಿಗಳನ್ನು ಮಾಡಿ ಷೋಡಶೋಪಚಾರ ಪೂಜೆಯನ್ನು ಮಾಡಬೇಕು.

ಒಂಬತ್ತು ಎಳೆಯ ದಾರವನ್ನು ಅರಿಶಿನ ಕುಂಕುಮದಿಂದ ಪೂಜಿಸಿ ಅದಕ್ಕೆ ಒಂಬತ್ತು ಗಂಟುಗಳನ್ನು ಹಾಕಬೇಕು. ಗೋದೀಹಿಟ್ಟಿನಿಂದ ಮಾಡಿದ ಕಡುಬು (ಹೂರಣ ತುಂಬಿದ ಕಡಬು) ನೈವೇದ್ಯ ತೋರಿಸಬೇಕು. ಮನೆಯ ಹೊಸ್ತಿಲ ಮೇಲೆ ಬೇಳೆಯ ಭಂಡಾರವನ್ನಿಟ್ಟು ಅಣ್ಣತಮ್ಮಂದಿರ ಮೊಳಕೈಯಿಂದ ಆ ಭಂಡಾರವನ್ನು ಒಡಿಸಿ ಅವರ ಕೈಯಿಂದಲೇ ಆಶೀರ್ವಾದರೂಪವಾಗಿ ಅದನ್ನು ಸ್ವೀಕರಿಸುವ ಸಂಪ್ರದಾಯವೂ ಇದೆ. ಪೂಜಿಸಿದ ದಾರವನ್ನು ಬಲಗೈಗೆ ಕಟ್ಟಿಕೊಳ್ಳಬೇಕು. ನಂತರ ಗೌರಿಗೆ ಉಡಿಯನ್ನು ತುಂಬಿ ಹೂರಣದ ಆರತಿಯನ್ನು ಮಾಡಬೇಕು.

ವಿವಾಹಿತ ಸ್ತ್ರೀಯರು ತಮ್ಮ ಪತಿಯ ಪಾದತೋಳೆದು ತಿಲಕವಿಟ್ಟು ನಮಸ್ಕರಿಸಿ ದೀರ್ಘಸೌಮಂಗಲ್ಯವನ್ನು ಪ್ರಾರ್ಥಿಸಿ ಆರತಿಯನ್ನು ಮಾಡಬೇಕು. ನಂತರ ಎಲ್ಲ ಗುರುಹಿರಿಯರಿಗೆ ನಮಸ್ಕರಿಸಿ ಎಲ್ಲರ ಆಶೀರ್ವಾದವನ್ನು ಪಡೆಯಬೇಕು. ಸಾಯಂಕಾಲದ ಸಮಯದಲ್ಲಿ ಮನೆಗೆ ಮುತ್ತೈದೆಯರನ್ನು ಕರೆದು ಅರಶಿನ ಕುಂಕುಮ ಬಳೆ ಕುಪ್ಪುಸದ ಖಣ ಎಲೆ ಅಡಿಕೆ ದಕ್ಷಿಣೆ ಇತ್ಯಾದಿ ಮಂಗಳ ದ್ರವ್ಯಗಳನ್ನು ಕೊಟ್ಟು ಆಶೀರ್ವಾದ ಪಡೆಯಬೇಕು. ಪಾರ್ವತಿಯು ಸಂತಾನ, ಸಮೃದ್ಧಿ, ಪಾತಿವ್ರತ್ಯ, ಹಾಗೂ ಶಕ್ತಿಯ ಸಂಕೇತಳು. ಆದ್ದರಿಂದ ಸ್ತ್ರೀಯರು ಆ ದಿನದಂದು ದಾಂಪತ್ಯಕ್ಕೆ ಅಭಿಮಾನಿಗಳಾದ ಉಮಾಮಹೇಶ್ವರರ ಪೂಜೆಯನ್ನು ವಿಶೇಷವಾಗಿ ಮಾಡುತ್ತಾರೆ.

ಏನೆಂದು ಪ್ರಾರ್ಥಸಿಬೇಕು?

ಮೃತ್ಯುಂಜಯ ನಮಸ್ತುಭ್ಯಂ ತವ ಮೇ ಸೂತ್ರಧಾರಣಾತ್ |
ಸೌಭಾಗ್ಯಂ ಧನಧಾನ್ಯಂ ಚ ಪ್ರಜಾವೃದ್ಧಿಂ ಸದಾ ಕುರು ||

ಉಮಾ ವೈ ವಾಕ್ ಸಮುದ್ದಿಷ್ಟಾ ಮನೋ ರುದ್ರ ಉದಾಹೃತಃ |
ತದೇತತ್ ಮಿಥುನಂ ಜ್ಞಾತ್ವಾ ನ ದಾಂಪತ್ಯಾತ್ ವಿಹೀಯತೇ ||

ನಮ್ಮ ಭಾರತೀಯ ಸಂಪ್ರದಾಯವೆಂದರೆ ಸಕಲ ಜಾತಿಮತಧರ್ಮಗಳನ್ನು ಏಕತೆಯಿಂದ ಕಾಣುವ ಸಂಸ್ಕೃತಿ. ಆದ್ದರಿಂದ ಈ ಪೂಜೆಯು ಯಾವುದೇ ಒಂದು ಧರ್ಮಕ್ಕಾಗಲಿ ಜಾತಿಗಾಗಲಿ ಸೀಮಿತಗೊಂಡಿಲ್ಲ. ಎಲ್ಲ ಸುಮಂಗಲಿಯರೂ ಅವಶ್ಯವಾಗಿ ಆಚರಿಸಬಹುದಾದ ವ್ರತ ಇದು.

ನಮ್ಮ ನಮ್ಮ ಅನುಕೂಲಗಳಿಗೆ ತಕ್ಕಂತೆ ವೈಭವ ಅವಶ್ಯವಾಗಿ ಮಾಡಬೇಕು. ಆದರೆ ವೈಭವ ಆಡಂಬರಗಳೆ ಮುಖ್ಯವಲ್ಲ. ಪೂಜೆಯಲ್ಲಿ ಬೇಕಾದ ಮುಖ್ಯಸಾಮಗ್ರಿ ಭಕ್ತಿ. ಆದ್ದರಿಂದ ಯಥಾಯೋಗ್ಯವಾಗಿ ಭಕ್ತಿವಿಶ್ವಾಸಗಳಿಂದ ಪೂಜೆಯನ್ನು ಮಾಡುವುದೇ ಅತಿ ಪ್ರಧಾನ.

ಇದನ್ನು ಓದಿ | Soma Pradosham 2022 | ಇಂದು ಸೋಮ ಪ್ರದೋಷ; ಇದರ ಮಹತ್ವವೇನು? ಪೂಜೆ ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading

ಧಾರ್ಮಿಕ

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

ಶ್ರೀ ಶಂಕರರು (Shankara Jayanti 2024) ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡಿದ್ದರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತಿದ್ದರು. ಸಂನ್ಯಾಸಕ್ಕೆ ತಾಯಿಯ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಆಗ ತಾಯಿ ಒಪ್ಪಲೇಬೇಕಾಯಿತು.

VISTARANEWS.COM


on

Shankara Jayanti 2024
Koo

ಶಂಕರಾಚಾರ್ಯರು (Shankara Jayanti 2024) ಜೀವಿಸಿದ್ದು ಕೇವಲ 32 ವರ್ಷ. ಆದರೆ ಅವರು ಸಾಧಿಸಿದ್ದು ಅಪಾರ. ಹಿಂದೂ ಧರ್ಮದ ಏಳಿಗೆಗೆ ಅವರ ಕೊಡುಗೆ ಅಮೂಲ್ಯ. ಶಂಕರರ ಬದುಕಿನ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ.

Adi Shankaracharya Jayanti
  1. ಶ್ರೀ ಶಂಕರರು ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡುಬಿಟ್ಟರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತರು. ಸಾಮಾನ್ಯರಿಗೆ ಒಂದು ವೇದವನ್ನು ಅರ್ಥ ಮಾಡಿಕೊಳ್ಳಲೇ ಹತ್ತಾರು ವರ್ಷಗಳು ಬೇಕು.
  2. ಶಂಕರಾಚಾರ್ಯರು ಜನಿಸಿದ್ದು ಕೇರಳ ಕಾಲಟಿ ಎಂಬ ಪುಟ್ಟ ಗ್ರಾಮದಲ್ಲಿ. ತಂದೆಯನ್ನು ಕಳೆದುಕೊಂಡರು. ತಾಯಿ ಅವರನ್ನು ಬೆಳೆಸಿದರು. ಅವರು ಸಂನ್ಯಾಸ ಸ್ವೀಕರಿಸಲು ಒಂದು ಪುಟ್ಟ ಪವಾಡವನ್ನೇ ಮಾಡಬೇಕಾಯಿತು. ಸಂನ್ಯಾಸಕ್ಕೆ ತಾಯಿ ಆರ್ಯಾಂಬೆಯವರ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಮಗ ಬದುಕುತ್ತಾನಲ್ಲ ಎಂಬ ಭರವಸೆಯೊಂದಿಗೆ ತಾಯಿ ಒಪ್ಪಿದರು.
  3. ಹದಿನಾರು ವರ್ಷ ಪ್ರಾಯ ಆಗುವುದರೊಳಗಾಗಿ ಅವರು ಉಪನಿಷತ್, ಬ್ರಹ್ಮಸೂತ್ರ, ಭಗವದ್ಗೀತೆಗಳಿಗೆ ಭಾಷ್ಯವನ್ನು ರಚಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
  4. ಭಾರತದಾದ್ಯಂತ ‘ದಿಗ್ವಿಜಯ ಯಾತ್ರೆʼ ಕೈಗೊಂಡರು. ವೇದವಿರೋಧಿಗಳನ್ನು ವಾಗ್ವಾದಕ್ಕೆ ಕರೆದರು. ಏಕಾಂಗಿಯಾಗಿ ಚರ್ಚೆ, ವಿಚಾರಮಂಡನೆ, ವಾದಗಳ‌ ಮೂಲಕ ಬ್ರಹ್ಮವಾದಕ್ಕೆ ಎಳೆತಂದರು. ದೇಶದುದ್ದಗಲಕ್ಕೂ ಸಂಚರಿಸಿ, ಅಲ್ಲಿಯ ವಿದ್ವಾಂಸರನ್ನು, ಜನರನ್ನು, ರಾಜರನ್ನು ವೈದಿಕತೆಗೆ ತಂದರು.
  5. ಆರು ಮತಗಳನ್ನು ಖಂಡಿಸಿ ತಮ್ಮ ಮತವನ್ನು ಸ್ಥಾಪಿಸಿದ ಪರಿಣಾಮ ಅವರನ್ನು ‘ಷಣ್ಮತ ಖಂಡನಾಚಾರ್ಯ’ ಮತ್ತು ಷಣ್ಮತ ಪ್ರತಿಷ್ಠಾಪನಾಚಾರ್ಯ’ ಎಂದು ಕರೆಯಲಾಯಿತು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು.
  6. ಧರ್ಮವನ್ನು ಉಳಿಸಿ ಬೆಳೆಸುವ ಉದ್ದೇಶಕ್ಕಾಗಿ ಮಠಗಳ ಪರಿಕಲ್ಪನೆಯನ್ನು ತಂದರು. ಮಠ ಮತ್ತು ಯತಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂಬ ಆಶಯ ಅವರದಾಗಿತ್ತು. ದೇಶದ ಉದ್ದಗಲಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಅವುಗಳಲ್ಲಿ ಮುಖ್ಯವಾದದ್ದು ಶೃಂಗೇರಿಯ ಮಠ. ಇತರವು ಪೂರ್ವದಲ್ಲಿ ಪುರಿ, ಪಶ್ಚಿಮದಲ್ಲಿ ದ್ವಾರಕಾ, ಉತ್ತರದಲ್ಲಿ ಬದರೀನಾಥ, ಕಂಚಿಯ ಕಾಮಕೋಟಿಗಳಲ್ಲಿವೆ.
  7. ಸೂರ್ಯ- ಗಣಪತಿ- ಅಂಬಿಕಾ- ಶಿವ- ವಿಷ್ಣುಗಳನ್ನು ಪೂಜಿಸುವ ಪಂಚಾಯತನ ಪೂಜೆಯನ್ನು ತಂದರು. ಈ ದೇವತೆಗಳನ್ನು ಭಾರತದ ಐದು ಕಡೆಗಳಲ್ಲಿ ಸಿಗುವ ಸ್ಫಟಿಕ, ಶೋಣಾಭದ್ರ, ಸ್ವರ್ಣಮುಖಿ, ಬಾಣಲಿಂಗ, ಸಾಲಿಗ್ರಾಮ ಎಂಬ ಕಲ್ಲಿನ ಮೂಲಕ ಪೂಜಿಸಲಾಗುತ್ತದೆ.
  8. ಮೂವತ್ತೆರಡು ವರ್ಷಗಳಲ್ಲಿ ಹಲವು ಮನುಷ್ಯರು ಸೇರಿ ಹಲವು ಜನ್ಮಗಳಲ್ಲಿ ಮಾಡುವಷ್ಟು ಕೆಲಸವನ್ನು ಮಾಡಿ ಮುಗಿಸಿದರು. ಭಾಷ್ಯಗಳನ್ನು ಹೊರತುಪಡಿಸಿ ನೂರಾರು ಸ್ತೋತ್ರ – ಸಾಹಿತ್ಯಗಳನ್ನು ರಚಿಸಿದರು.
  9. ಮೂರು ಸೂತ್ರಗಳಲ್ಲಿ ಶ್ರೀ ಶಂಕರರ ಉಪದೇಶವನ್ನು ಸೂತ್ರೀಕರಿಸಬಹುದು- “ಅಹಂ ಬ್ರಹ್ಮಾಸ್ಮಿ” (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), “ತತ್ ತ್ವಮ್ ಅಸಿ” (ನೀನು ಅದೇ ಆತ್ಮದಿಂದ ಆಗಿರುವೆ) ಮತ್ತು ಜೀವಶ್ಶಿವೋಹಂʼ (ಜೀವನೇ ಶಿವ) ಎಂಬುದು ಅದ್ವೈತ ತತ್ವದ ಮೂಲ ಮಂತ್ರಗಳು. ಇದಲ್ಲದೇ ಪರಮಾತ್ಮ ಮಾತ್ರ ಸತ್ಯ; ಈ ಜಗತ್ತಿನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ “ಸರ್ವಂ ಬ್ರಹ್ಮಮಯಂ ಜಗತ್” (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.
Continue Reading

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ಪ್ರಮುಖ ಸುದ್ದಿ

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024: ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

VISTARANEWS.COM


on

Akshaya Tritiya 2024
Koo

ಅಕ್ಷಯ ತೃತೀಯ (Akshaya Tritiya 2024) ಅಂದರೆ ಚಿನ್ನ- ಬೆಳ್ಳಿ (gold, silver) ಖರೀದಿಸಬೇಕು ಎಂಬುದು ಸಾಮಾನ್ಯ ನಂಬಿಕೆ. ಆದರೆ ಇದು ಮಾತ್ರವಲ್ಲ. ಸಂಪತ್ತು ಎಂದು ಕರೆಸಿಕೊಳ್ಳುವ ಯಾವುದನ್ನೇ ಆದರೂ ಇಂದು ನೀವು ಖರೀದಿಸಬಹುದು ಅಥವಾ ಹೊಂದಬಹುದು. ಅದರಿಂದ ಆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ. ಈ ಹಿಂದಿನ ಕಾಲದಲ್ಲಿ ಕೃಷಿಪ್ರಧಾನ ಸಮಾಜದಲ್ಲಿ ಅಕ್ಕಿ ರಾಗಿ ಗೋಧಿಯಂಥ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುತ್ತಿದ್ದರು.

ಹಿಂದೂಗಳಿಗೆ ಸಂಪತ್ತಿನ ಪುಣ್ಯ ಫಲ ನೀಡುವ ಹಬ್ಬ. ಅಕ್ಷಯ ತೃತೀಯದಂದು (Akshaya Tritiya 2024) ಶುಭ, ಅಶುಭ ಮುಹೂರ್ತಗಳನ್ನು ನೋಡದೇ ಯಾವುದೇ ಕಾರ್ಯವನ್ನು ಪ್ರಾರಂಭಿಸಬಹುದು ಎಂಬ ಮಾತಿದೆ. ಉತ್ತರ ಭಾರತದಲ್ಲಿ ಅಖಾ ತೀಜ್ ಎಂದೂ ಕರೆಯಲ್ಪಡುವ ಈ ಮಂಗಳಕರ ದಿನ ಅಪಾರ ಪ್ರಾಮುಖ್ಯತೆ ಹೊಂದಿದೆ. ಈ ದಿನದಂದು ಪ್ರಾರಂಭಿಸಿದ ಯಾವುದೇ ಕಾರ್ಯ ಯಾವಾಗಲೂ ಯಶಸ್ವಿಯಾಗುತ್ತದೆ ಎಂಬ ನಂಬಿಕೆ. ಖರೀದಿಸಿದ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ.

ಈ ದಿನವು ಅದೃಷ್ಟ, ಯಶಸ್ಸು ಮತ್ತು ಅದೃಷ್ಟದ ಲಾಭದ ಸಂಕೇತವಾಗಿದೆ. ಅಕ್ಷಯ ತೃತೀಯದಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಅಕ್ಷಯ ತೃತೀಯವನ್ನು ಭಾರತ ಮತ್ತು ನೇಪಾಳದ ಅನೇಕ ಪ್ರದೇಶಗಳಲ್ಲಿ ಹಿಂದೂಗಳು ಮತ್ತು ಜೈನರು ಹೊಸ ಉದ್ಯಮಗಳು, ಮದುವೆಗಳು, ದಾನ, ಮತ್ತು ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತಾರೆ. ಅಂದು ಚಿನ್ನ, ಬೆಳ್ಳಿ, ವಾಹನ ಖರೀದಿಸಿ ತಂದರೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂದು ಹಲವರು ನಂಬುತ್ತಾರೆ.

ಸಂಸ್ಕೃತದಲ್ಲಿ ಅಕ್ಷಯ ಪದವು “ಅಭ್ಯುದಯ, ಭರವಸೆ, ಸಂತೋಷ, ಯಶಸ್ಸು” ಎಂಬ ಅರ್ಥದಲ್ಲಿ “ಎಂದಿಗೂ ಕಡಿಮೆಯಾಗುವುದಿಲ್ಲ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ನೆಲೆಯಲ್ಲಿರುತ್ತಾರೆ ಎಂದು ನಂಬಲಾಗಿದೆ.

ಅಕ್ಷಯ ತೃತೀಯ ಆಚರಣೆಯ ಇತಿಹಾಸದ ಪ್ರಕಾರ ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಹೀಗಾಗಿ ಭಕ್ತರು ಅಕ್ಷಯ ತೃತೀಯವನ್ನು ಪರಶುರಾಮನ ಜನ್ಮ ದಿನವಾಗಿ ಆಚರಿಸುತ್ತಾರೆ. ಅಕ್ಷಯ ತೃತೀಯದ ಆಚರಣೆಗಳು ಅಕ್ಷಯ ತೃತೀಯದಂದು ಭಕ್ತರು ಪವಿತ್ರ ಸ್ನಾನ ಮಾಡುವ ಮೂಲಕ ಮತ್ತು ಹಳದಿ ವೇಷಭೂಷಣದಲ್ಲಿ ತಮ್ಮನ್ನು ತಾವು ಅಲಂಕರಿಸಿಕೊಳ್ಳುವುದರೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ಈ ದಿನ ವಿಶೇಷವಾಗಿ ವಿಷ್ಣು ಸಹಸ್ರನಾಮ ಮತ್ತು ವಿಷ್ಣು ಚಾಲೀಸಾದ ಪಠಣಗಳೊಂದಿಗೆ ಭಗವಾನ್ ವಿಷ್ಣುವಿಗೆ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ.

ಚಿನ್ನ, ಬೆಳ್ಳಿ ಏಕೆ ಖರೀದಿಸಬೇಕು?

ದಂತಕಥೆಯ ಪ್ರಕಾರ, ಅಕ್ಷಯ ತೃತೀಯದಲ್ಲಿ, ಸಂಪತ್ತಿನ ದೇವತೆಯಾದ ಕುಬೇರನು ಭಗವಾನ್ ಶಿವ ಮತ್ತು ಬ್ರಹ್ಮನಿಂದ ಆಶೀರ್ವಾದವನ್ನು ಪಡೆದನು, ಅಲಕಾಪುರಿ ಎಂದು ಕರೆಯಲ್ಪಡುವ ಲೋಕವನ್ನು ಸ್ವಾಧೀನಪಡಿಸಿಕೊಂಡ. ಪರಿಣಾಮವಾಗಿ, ಈ ದಿನ ಕುಬೇರನ ಹೆಸರಿನಲ್ಲಿ ಚಿನ್ನದ ಆಭರಣಗಳು ಮತ್ತು ಆಸ್ತಿಗಳನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಇದಲ್ಲದೇ ಅಕ್ಕಿ ಕೊಳ್ಳುವವರು, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರು, ಯಾವುದೇ ರೀತಿಯ ಹೊಸ ವಸ್ತುಗಳು ಅಥವಾ ಪಾತ್ರೆಗಳನ್ನು ಖರೀದಿಸುವವರು- ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

ಇದನ್ನೂ ಓದಿ: Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

Continue Reading
Advertisement
isis link ummer abdul rehman mariyam
ಕ್ರೈಂ2 mins ago

ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

Murder case in davangere
ದಾವಣಗೆರೆ3 mins ago

Murder case : ಕೊಳೆತ ಶವದಲ್ಲಿದ್ದ ಕಿವಿಯೋಲೆಯಿಂದಲೇ ಸಿಕ್ಕಿಬಿದ್ದರು ಹಂತಕರು

Terrorists Killed
ದೇಶ10 mins ago

Terrorists Killed:ಭಾರತೀಯ ಸೇನೆಯ ಭರ್ಜರಿ ಬೇಟೆ- ನಾಲ್ವರು ಉಗ್ರರು ಮಟ್ಯಾಶ್‌!

Startup Investment
ವಾಣಿಜ್ಯ13 mins ago

Startup Investment : ಡ್ರಿಂಕ್​​ಪ್ರೈಮ್​ ವಿಸ್ತರಣಾ ಯೋಜನೆಯಲ್ಲಿ ಎಸ್​​ಐಡಿಬಿಐ ಹಣಕಾಸು ಸಂಸ್ಥೆಯ ಹೂಡಿಕೆ

Virat Kohli
ಕ್ರೀಡೆ18 mins ago

Virat Kohli: ನಿವೃತ್ತಿಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ ವಿರಾಟ್​ ಕೊಹ್ಲಿ; ಅಭಿಮಾನಿಗಳಿಗೆ ಆತಂಕ

Bhavani Singh pankaj shivanna couple expecting-their first child
ಕಿರುತೆರೆ27 mins ago

Bhavani Singh: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಸುಬ್ಬಲಕ್ಷ್ಮಿ ಸಂಸಾರʼ ಧಾರಾವಾಹಿ ನಟ!

ರಾಜಕೀಯ42 mins ago

HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

Bomb threat
ದೇಶ52 mins ago

Bomb threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಟಿಶ್ಯೂ ಪೇಪರ್‌ನಲ್ಲಿ ಬಂದಿತ್ತು ಸಂದೇಶ

sunil chhetri
ಕ್ರೀಡೆ1 hour ago

Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ

Success Story
ದೇಶ1 hour ago

Success Story: ರಾಧಾಮಣಿ ಅಮ್ಮಂಗೆ ವಯಸ್ಸು ಕೇವಲ ನಂಬರ್‌ ಅಷ್ಟೇ; 73 ವರ್ಷದ ಇವರ ಬಳಿ ಇದೆ ಬರೋಬ್ಬರಿ 11 ವಾಹನಗಳ ಲೈಸನ್ಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌