ಕೋಟಿ ಹಣವಷ್ಟೇ ಅಲ್ಲ, ಅರ್ಪಿತಾ ಮುಖರ್ಜಿ ಮನೆಯಲ್ಲಿ ಸಿಕ್ಕಿವೆ ರಾಶಿ ರಾಶಿ ಲೈಂಗಿಕ ಆಟಿಕೆಗಳು ! - Vistara News

ದೇಶ

ಕೋಟಿ ಹಣವಷ್ಟೇ ಅಲ್ಲ, ಅರ್ಪಿತಾ ಮುಖರ್ಜಿ ಮನೆಯಲ್ಲಿ ಸಿಕ್ಕಿವೆ ರಾಶಿ ರಾಶಿ ಲೈಂಗಿಕ ಆಟಿಕೆಗಳು !

ಅರ್ಪಿತಾ ಮುಖರ್ಜಿ ಮನೆಯಲ್ಲಿ ಇ ಡಿ ನಿರಂತರವಾಗಿ ರೇಡ್‌ ಮಾಡುತ್ತಿದೆ. ಆಕೆಗೆ ಸೇರಿದ ಅನೇಕ ಫ್ಲ್ಯಾಟ್‌ಗಳು, ಮನೆಗಳನ್ನು ಶೋಧಿಸಲಾಗಿದ್ದು ಭರ್ಜರಿ ಹಣ ಪತ್ತೆಯಾಗಿದೆ. ಇದೀಗ ಸೆಕ್ಸ್‌ ಟಾಯ್ಸ್‌ಗಳು ಕೂಡ ಸಿಕ್ಕಿವೆ.

VISTARANEWS.COM


on

Arpita Mukherjee Sex Toys
ಅರ್ಪಿತಾ ಮುಖರ್ಜಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತ: ಪಶ್ಚಿಮ ಬಂಗಾಳ ಶಾಲಾ ನೇಮಕಾತಿಯಲ್ಲಿ ನಡೆದ ಹಗರಣದಲ್ಲಿ ಪಾರ್ಥ ಚಟರ್ಜಿ ಹೆಸರು ಮುನ್ನೆಲೆಗೆ ಬಂದಾಗಿನಿಂದಲೂ ಅವರ ಆಪ್ತೆ ಅರ್ಪಿತಾ ಮುಖರ್ಜಿ ಕೂಡ ಟ್ರೆಂಡಿಂಗ್‌ನಲ್ಲಿದ್ದಾಳೆ. ಅರ್ಪಿತಾ ಮುಖರ್ಜಿ ಮನೆಯಲ್ಲಿ ಕೋಟಿಕೋಟಿ ಹಣ ಪತ್ತೆಯಾಗಿದೆ. ಹಣ ಎಣಿಸುವ ಯಂತ್ರ ಹಿಡಿದು ಈಕೆಯ ಮನೆಯ ಮೇಲೆ ರೇಡ್‌ ಮಾಡುತ್ತಿರುವ ಇ ಡಿ, ಸಿಕ್ಕ ಹಣ ಹೊತ್ತೊಯ್ಯಲು ಟ್ರಕ್‌ಗಳನ್ನು ಬಳಸಿಕೊಳ್ಳುತ್ತಿದೆ. ಅರ್ಪಿತಾ ಮನೆಯಲ್ಲಿ ಈಗಾಗಲೇ 50 ಕೋಟಿ ರೂಪಾಯಿಗೂ ಅಧಿಕ ನಗದು, ಅಪಾರ ಚಿನ್ನಾಭರಣಗಳು ಪತ್ತೆಯಾಗಿದ್ದು ಜಗಜ್ಜಾಹೀರಾಗಿದೆ. ಆದರೆ ಈಗ ಇನ್ನೊಂದು ಕುತೂಹಲಕಾರಿ ಸಂಗತಿ ಹೊರಬಿದ್ದಿದೆ.

ಅರ್ಪಿತಾ ಮನೆಯಲ್ಲಿ ಬರೀ ಹಣವಷ್ಟೇ ಅಲ್ಲ, ಅಪಾರ ಪ್ರಮಾಣದ ಸೆಕ್ಸ್‌ ಟಾಯ್ಸ್‌ (ಲೈಂಗಿಕ ಆಟಿಕೆಗಳು-ಲೈಂಗಿಕ ಸುಖಕ್ಕಾಗಿ ಬಳಸುವ ವಸ್ತುಗಳು)ಗಳು ಕೂಡ ಪತ್ತೆಯಾಗಿವೆ ಎಂದು ಇಡಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಲೈಂಗಿಕ ಆಟಿಕೆಗಳು 5-6 ಸಿಕ್ಕಿದ್ದರೆ ದೊಡ್ಡ ಸುದ್ದಿಯಾಗುತ್ತಿರಲಿಲ್ಲವೇನೋ, ಆದರೆ ಇವೂ ಕೂಡ ರಾಶಿರಾಶಿ ಪತ್ತೆಯಾಗಿವೆ. ಇವನ್ನೆಲ್ಲ ಅರ್ಪಿತಾ ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದಿರಬಹುದು ಎಂದೂ ಹೇಳಲಾಗಿದೆ. ಹಾಗೇ, ಇದರೊಂದಿಗೆ ನೂರಾರು ಬೆಳ್ಳಿಯ ತಟ್ಟೆಗಳು ಅರ್ಪಿತಾ ಮುಖರ್ಜಿ ಮನೆಯಲ್ಲಿ ಸಿಕ್ಕಿವೆ. ಬಂಗಾಳಿ ಸಂಪ್ರದಾಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗೆ ನೀಡಲಾಗುವ ಇಂಥ ಬೆಳ್ಳಿಯ ತಟ್ಟೆಗಳು ಅರ್ಪಿತಾ ಮನೆಯಲ್ಲಿ ಸಿಕ್ಕಿದ್ದೂ ಕುತೂಹಲಕ್ಕೆ ಕಾರಣವಾಗಿದೆ.ಸಂಚಿನಲ್ಲಿ ನನ್ನನ್ನು ಸಿಲುಕಿಸಲಾಗಿದೆ

ಆಪ್ತೆ ಅರ್ಪಿತಾ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿದೆ. ಆಕೆ ಇಡಿ ಎದುರು ನನ್ನದೇನೂ ತಪ್ಪಿಲ್ಲ. ಎಲ್ಲವೂ ಪಾರ್ಥಗೆ ಸೇರಿದ್ದು ಎಂದು ಹೇಳಿಯಾಗಿದೆ. ಅಷ್ಟಾದರೂ ಪಾರ್ಥ ಚಟರ್ಜಿ ತಮ್ಮನ್ನು ತಾವು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ʼಇವೆಲ್ಲ ನನ್ನ ವಿರುದ್ಧ ವ್ಯವಸ್ಥಿತವಾಗಿ ಹೆಣೆಯಲಾದ ಸಂಚು. ನಾನೀಗ ಏನನ್ನೂ ಹೇಳುವುದಿಲ್ಲ. ಕಾಲವೇ ಎಲ್ಲವನ್ನೂ ಹೇಳುತ್ತದೆʼ ಎಂದು ಪಾರ್ಥ ಹೇಳಿದ್ದಾರೆ. ಇಡಿಯಿಂದ ಬಂಧಿಸಲ್ಪಟ್ಟ ಮೇಲೆ ಇದು ಅವರ ಮೊದಲ ಹೇಳಿಕೆ. ಹಾಗೇ, ಇಂದು ಅರ್ಪಿತಾ ಮುಖರ್ಜಿಯನ್ನು ವೈದ್ಯಕೀಯ ಚಿಕಿತ್ಸೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದಾಗ ಆಕೆ ಪ್ರತಿಭಟಿಸಿದ್ದಾಳೆ. ದೊಡ್ಡದಾಗಿ ಅಳುತ್ತ ನೆಲದ ಮೇಲೆ ಬಿದ್ದಿದ್ದಾಳೆ. ಆದರೂ ಆಕೆಯನ್ನು ಬಲವಂತವಾಗಿ ಆಸ್ಪತ್ರೆಯೊಳಗೆ ಕರೆದುಕೊಂಡು ಹೋಗಲಾಯಿತು.

ಇದನ್ನೂ ಓದಿ: Video: ಅರ್ಪಿತಾ ಮುಖರ್ಜಿ ಮನೆಯಲ್ಲಿ ಇ.ಡಿಗೆ ಸಿಕ್ಕ ಹಣ ಸಾಗಿಸಲು ಬಂತು ಭಾರಿ ಗಾತ್ರದ ಟ್ರಕ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಭಾರತೀಯರು ರಷ್ಯಾಕ್ಕೆ ವೀಸಾ ಇಲ್ಲದೇ (Russia Tourism) ತೆರಳಬಹುದು. ಈ ಕುರಿತು ಮಾತುಕತೆ ಜೂನ್‌ನಲ್ಲಿ ಪ್ರಾರಂಭವಾಗಲಿದೆ. ರಷ್ಯಾ ಮತ್ತು ಭಾರತವು ವೀಸಾ-ಮುಕ್ತ ಗುಂಪು ಪ್ರವಾಸಿ ವಿನಿಮಯದ ಮೂಲಕ ಪ್ರವಾಸೋದ್ಯಮ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

VISTARANEWS.COM


on

By

Russia Tourism
Koo

ವಿಶ್ವವನ್ನು ಸುತ್ತಬೇಕು (world tour) ಎನ್ನುವ ಆಸೆ ಉಳ್ಳ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು (indians) ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ (Russia Tourism) ಮಾಡಬಹುದು. ಪ್ರವಾಸೋದ್ಯಮ ಕ್ಷೇತ್ರವನ್ನು ಹೆಚ್ಚಿಸಲು ಎರಡೂ ದೇಶಗಳು ಪ್ರಯಾಣದ ಪರಿಸ್ಥಿತಿಗಳನ್ನು ಸರಾಗಗೊಳಿಸಲು ಯೋಜನೆ ರೂಪಿಸುತ್ತಿವೆ.

ರಷ್ಯಾ ಮತ್ತು ಭಾರತ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಮಾನದಂಡಗಳನ್ನು ಅಂತಿಮಗೊಳಿಸಲು ಸಮಾಲೋಚನೆಗಳನ್ನು ಜೂನ್‌ ನಿಂದ ಪ್ರಾರಂಭಿಸಲಿದೆ. ವೀಸಾ ಮುಕ್ತ ಗುಂಪು ಪ್ರವಾಸಿ ವಿನಿಮಯವನ್ನು ಪ್ರಾರಂಭಿಸಿದ ಅನಂತರ ಭಾರತೀಯರು ರಷ್ಯಾಕ್ಕೆ ಸುಲಭವಾಗಿ ಪ್ರಯಾಣಿಸಬಹುದು.

ರಷ್ಯಾದ ಆರ್ಥಿಕ ಅಭಿವೃದ್ಧಿ ಸಚಿವಾಲಯದ ಬಹುಪಕ್ಷೀಯ ಆರ್ಥಿಕ ಸಹಕಾರ ಮತ್ತು ವಿಶೇಷ ಯೋಜನೆಗಳ ವಿಭಾಗದ ನಿರ್ದೇಶಕಿ ನಿಕಿತಾ ಕೊಂಡ್ರಾಟ್ಯೆವ್, ಭಾರತವು ಆಂತರಿಕ ರಾಜ್ಯ ಸಮನ್ವಯದ ಅಂತಿಮ ಹಂತದಲ್ಲಿದೆ ಎಂದು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ರಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ವಿಚಾರಗಳಿವೆ.

ರಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣ

ರಷ್ಯಾ ಮತ್ತು ಭಾರತದ ನಡುವಿನ ಮಾತುಕತೆಗಳು ಇನ್ನೂ ನಡೆಯುತ್ತಿವೆ ಮತ್ತು ಜೂನ್‌ನಲ್ಲಿ ಪ್ರಯಾಣವನ್ನು ಸರಾಗಗೊಳಿಸುವ ದ್ವಿಪಕ್ಷೀಯ ಒಪ್ಪಂದದ ಕುರಿತು ಉಭಯ ರಾಷ್ಟ್ರಗಳು ಸಮಾಲೋಚನೆಗಳನ್ನು ಪ್ರಾರಂಭಿಸುತ್ತವೆ. ಅಂತಿಮಗೊಳಿಸುವಿಕೆಯ ಅನಂತರ ರಷ್ಯಾ ಮತ್ತು ಭಾರತವು ಒಟ್ಟಾಗಿ ವೀಸಾ- ಮುಕ್ತ ಗುಂಪು ಪ್ರವಾಸಿ ವಿನಿಮಯವನ್ನು ಪ್ರಾರಂಭಿಸುತ್ತದೆ ಎಂದು ರಷ್ಯಾದ ಸಚಿವರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.


ಯಾವಾಗ ಸಾಧ್ಯವಾಗುತ್ತದೆ?

ಕಜಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಥಿಕ ವೇದಿಕೆ “ರಷ್ಯಾ- ಇಸ್ಲಾಮಿಕ್ ವರ್ಲ್ಡ್: ಕಜಾನ್‌ಫೋರಮ್ 2024” ಭಾಗದಲ್ಲಿ ಸಚಿವರು ಈ ವರ್ಷದ ಅಂತ್ಯದ ವೇಳೆಗೆ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

“ವೀಸಾ-ಮುಕ್ತ ಗುಂಪು ಪ್ರವಾಸಿ ವಿನಿಮಯ ಕೇಂದ್ರಗಳನ್ನು ಪ್ರಾರಂಭಿಸಲು ಸಜ್ಜಾಗುತ್ತಿರುವಂತೆ ರಷ್ಯಾ ಮತ್ತು ಭಾರತವು ತಮ್ಮ ಪ್ರವಾಸೋದ್ಯಮ ಸಂಬಂಧಗಳನ್ನು ಬಲಪಡಿಸಲು ಸಜ್ಜಾಗಿದೆ. ಎರಡು ರಾಷ್ಟ್ರಗಳ ನಡುವಿನ ಮೊದಲ ಸುತ್ತಿನ ಸಮಾಲೋಚನೆಯನ್ನು ಜೂನ್‌ನಲ್ಲಿ ನಿಗದಿಪಡಿಸಲಾಗಿದೆ. ಇದು ದ್ವಿಪಕ್ಷೀಯ ಒಪ್ಪಂದವನ್ನು ಅಂತಿಮಗೊಳಿಸುವ ಗುರಿಯನ್ನು ಹೊಂದಿದೆ.


ಪ್ರಸ್ತುತ ಯಾರಿಗಿದೆ ಅವಕಾಶ?

ರಷ್ಯಾ ಈಗ ಚೀನಾ ಮತ್ತು ಇರಾನ್‌ನ ಜನರಿಗೆ ತನ್ನ ವೀಸಾ ಮುಕ್ತ ಪ್ರವಾಸಿ ವಿನಿಮಯ ಕಾರ್ಯಕ್ರಮದ ಮೂಲಕ ವೀಸಾ ಮುಕ್ತವಾಗಿ ಪ್ರವೇಶಿಸಲು ಅವಕಾಶ ನೀಡುತ್ತದೆ. ಸಚಿವರ ಪ್ರಕಾರ, ಕಾರ್ಯಕ್ರಮದ ಯಶಸ್ಸನ್ನು ಭಾರತದೊಂದಿಗೆ ಪುನರಾವರ್ತಿಸುವ ಗುರಿಯನ್ನು ದೇಶ ಹೊಂದಿದೆ. ರಷ್ಯಾ ಮತ್ತು ಚೀನಾ ನಡುವೆ ಮತ್ತು ರಷ್ಯಾ ಮತ್ತು ಇರಾನ್ ನಡುವೆ ವೀಸಾ-ಮುಕ್ತ ಗುಂಪು ಪ್ರವಾಸಿ ವಿನಿಮಯವು 2023ರ ಆಗಸ್ಟ್ 1ರಂದು ಪ್ರಾರಂಭವಾಯಿತು.

Continue Reading

ದೇಶ

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

VISTARANEWS.COM


on

Constitution
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳ ನಾಯಕರ ಹೇಳಿಕೆಗಳು ಮೊನಚಾಗಿವೆ. ಆರೋಪ, ಪ್ರತ್ಯಾರೋಪ, ವಾಗ್ದಾಳಿ, ವಾಗ್ಬಾಣಗಳ ಜತೆಗೆ ವೈಯಕ್ತಿಕ ನಿಂದನೆ, ಆರೋಪಗಳು ಕೂಡ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. “ರಾಹುಲ್‌ ಗಾಂಧಿ ಅವರು ಸಭೆ-ಸಮಾವೇಶಗಳಲ್ಲಿ ಜನರಿಗೆ ಚೀನಾ ಸಂವಿಧಾನ ಪ್ರದರ್ಶಿಸುತ್ತಿದ್ದಾರೆ” ಎಂದು ಸಿಎಂ ಆರೋಪಿಸಿದ್ದಾರೆ. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ.

“ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ. ರಾಹುಲ್‌ ಗಾಂಧಿ ಅವರು ಚೀನಾ ಸಂವಿಧಾನವನ್ನು ಜನರಿಗೆ ಪ್ರದರ್ಶಿಸುತ್ತಿದ್ದಾರೆಯೇ? ಈ ಕುರಿತು ಪರಿಶೀಲನೆ ಆಗಬೇಕು” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಪೋಸ್ಟ್‌ ಮಾಡಿದ್ದಾರೆ.

“ನಮ್ಮ ಸಂವಿಧಾನವು ನೀಲಿ ಕವರ್‌ ಹೊಂದಿದ್ದು, ಮೂಲಭೂತ ಕರ್ತವ್ಯಗಳ ಬಗ್ಗೆ ಉಲ್ಲೇಖವಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂಬುದಾಗಿ ಮೂಲಭೂತ ಕರ್ತವ್ಯವು ತಿಳಿಸುತ್ತದೆ. ಆದರೆ, ರಾಹುಲ್‌ ಗಾಂಧಿ ಅವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೇ ಕಾರಣಕ್ಕಾಗಿ ಅವರು ಚೀನಾ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಿರುಗಾಡುತ್ತಿರಬಹುದು” ಎಂದು ಕೂಡ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.

ಕಾಂಗ್ರೆಸ್‌ ತಿರುಗೇಟು

ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಕಾಂಗ್ರೆಸ್‌ ಶಾಸಕ ಅಬ್ದುಲ್‌ ರಶೀದ್‌ ಮೊಂಡಲ್‌ ತಿರುಗೇಟು ನೀಡಿದ್ದಾರೆ. “ಭಾರತ ಸಂವಿಧಾನದ ಕವರ್‌ಗಳ ಬಣ್ಣವು ಬೇರೆ ಬೇರೆ ಇದೆ. ಕವರ್‌ ಬಣ್ಣ ಬೇರೆಯಾದರೂ ಸಂವಿಧಾನದ ಆಶಯಗಳು ಒಂದೇ ಆಗಿವೆ. ಅಷ್ಟಕ್ಕೂ ನಾವು ಬಣ್ಣವನ್ನು ಓದುವುದಿಲ್ಲ. ಸಂವಿಧಾನದ ಆಶಯ, ಉದ್ದೇಶಗಳನ್ನು ಪಾಲಿಸುತ್ತೇವೆ” ಎಂದಿದ್ದಾರೆ. “ಭಾರತ ಸಂವಿಧಾನದ ಪಾಕೆಟ್‌ ಎಡಿಷನ್‌ನ ಪ್ರತಿಯು ನೀಲಿ ಬಣ್ಣದ ಕವರ್‌ ಹೊಂದಿದೆ” ಎಂದು ಕೂಡ ಕೆಲ ಜಾಲತಾಣಿಗರು ಹಿಮಂತ ಬಿಸ್ವಾ ಶರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Continue Reading

Lok Sabha Election 2024

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

ಶಿಕ್ಷಣ, ಉದ್ಯೋಗಗಳು ಟ್ರಾನ್ಸ್‌ಜೆಂಡರ್‌ಗಳ ವಿರುದ್ಧದ ತಾರತಮ್ಯವನ್ನು ಕೊನೆಗೊಳಿಸುವುದು. ಅಧ್ಯಯನ ಮಾಡಲು, ಶಿಕ್ಷಕರಾಗಲು, ವಕೀಲರಾಗಲು, ಪೊಲೀಸ್‌ ಸೇವೆಗೆ ಸೇರಲು ಮತ್ತು ಜೀವನದ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಬಯಸುವ ಟ್ರಾನ್ಸ್‌ಜೆಂಡರ್‌ಗಳು ಇದ್ದಾರೆ. ಆದರೆ ನಾವು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದಾಗ ಸಾಕಷ್ಟು ಹಿನ್ನಡೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಹಿಮಾಚಲ ಪ್ರದೇಶ ರಾಜ್ಯ ಚುನಾವಣಾ ಆಯೋಗದ ರಾಯಭಾರಿ (Election Icon) ತೃತೀಯಲಿಂಗಿ ಮಾಯಾ ಠಾಕೂರ್.

VISTARANEWS.COM


on

By

Election Icon
Koo

ಶಿಮ್ಲಾ: ವಿದ್ಯಾರ್ಥಿಗಳಿಂದ (students) ನಿಂದನೆ ಮತ್ತು ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಶಿಕ್ಷಕರ (teachers) ಹಿಂಜರಿಕೆಯಿಂದ 9ನೇ ತರಗತಿಯಲ್ಲೇ ಆಕೆ ಶಾಲೆ (school) ಬಿಡಬೇಕಾಯಿತು. ಆದರೆ ಈಗ ಆಕೆ ಹಿಮಾಚಲ ಪ್ರದೇಶ (himachal pradesh) ರಾಜ್ಯ ಚುನಾವಣಾ ಆಯೋಗದ (Election Icon) ಚುನಾವಣಾ ರಾಯಭಾರಿ! ಆಕೆಯೇ ತೃತೀಯಲಿಂಗಿ ಮಾಯಾ ಠಾಕೂರ್.

ಶಿಮ್ಲಾ ಸಂಸದೀಯ ಕ್ಷೇತ್ರದ ಅಡಿಯಲ್ಲಿ ಸೋಲನ್ ಜಿಲ್ಲೆಯ ಕುನಿಹಾರ್ ಪ್ರದೇಶದ ಕೋಠಿ ಗ್ರಾಮದಿಂದ ಬಂದ ಠಾಕೂರ್, ಆಗ ಪರಿಸ್ಥಿತಿ ತುಂಬಾ ಕಠೋರವಾಗಿತ್ತು. ಗ್ರಾಮಸ್ಥರು ನನ್ನನ್ನು ಗ್ರಾಮದಿಂದಲೇ ಹೊರಹಾಕುವಂತೆ ಕುಟುಂಬವನ್ನು ಒತ್ತಾಯಿಸಲು ಪ್ರಾರಂಭಿಸಿದ್ದರು ಎನ್ನುವುದನ್ನು ನೆನಪಿಸಿಕೊಂಡರು.

ಶೌಚಾಲಯವನ್ನು ಬಳಸಲು ಅನುಮತಿಸದ ಮಟ್ಟಿಗೆ ಶಾಲೆಯಲ್ಲಿನ ದೌರ್ಜನ್ಯ ಮತ್ತು ತಾರತಮ್ಯದ ಬಗ್ಗೆ ನಾನು ನನ್ನ ಕುಟುಂಬ ಸದಸ್ಯರಿಗೆ ಹೇಳಿದಾಗ, ಅವರು ನಾನು ಶಾಲೆಯನ್ನು ಬಿಡಲು ಬಯಸುತ್ತಿದ್ದೇನೆ ಎಂದು ಭಾವಿಸಿದರು. ಅವಕಾಶವನ್ನು ನೀಡಿದರೆ ನಾನು ನನ್ನ ಶಿಕ್ಷಣವನ್ನು ಪುನರಾರಂಭಿಸಲು ಬಯಸುತ್ತೇನೆ ಎಂದು ಅವರು ಅರ್ಥ ಮಾಡಿಕೊಳ್ಳಲಿಲ್ಲ. ಜೀವನದ ಪ್ರತಿ ಹಂತದಲ್ಲೂ ನನ್ನಂಥವರು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ವಿಷಾದಿಸಿದರು.

ಸಾಧಿಸುವ ಇಚ್ಛೆ ಇದೆ

ಶಿಕ್ಷಣ, ಉದ್ಯೋಗಗಳು ಟ್ರಾನ್ಸ್‌ಜೆಂಡರ್‌ಗಳ ವಿರುದ್ಧದ ತಾರತಮ್ಯವನ್ನು ಕೊನೆಗೊಳಿಸುವುದು. ಅಧ್ಯಯನ ಮಾಡಲು, ಶಿಕ್ಷಕರಾಗಲು, ವಕೀಲರಾಗಲು, ಪೊಲೀಸ್‌ ಸೇವೆಗೆ ಸೇರಲು ಮತ್ತು ಜೀವನದ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಬಯಸುವ ಟ್ರಾನ್ಸ್‌ಜೆಂಡರ್‌ಗಳು ಇದ್ದಾರೆ. ಆದರೆ ನಾವು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದಾಗ ಸಾಕಷ್ಟು ಹಿನ್ನಡೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಗಂಡಾಗಿ ಹುಟ್ಟಿದ್ದೇನೆ. ಆದರೆ ನನ್ನನ್ನು ಮಹಿಳೆ ಎಂದು ಗುರುತಿಸಿಕೊಂಡಿದ್ದೇನೆ. ನಾವು ಯುನಿಸೆಕ್ಸ್ ಮತ್ತು ನಪುಂಸಕರಲ್ಲ. ಜನರು ನಮ್ಮನ್ನು ನಪುಂಸಕರೆಂದು ಅಂತರವನ್ನು ಕಾಯ್ದುಕೊಳ್ಳುತ್ತಾರೆ ಎಂದು ಹೇಳಿದರು.

ಜಾಗೃತಿ ಅಗತ್ಯ

ಉತ್ತರಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಪರಿಸ್ಥಿತಿ ಉತ್ತಮವಾಗಿದೆ. ತಮ್ಮ ಆಯ್ಕೆಯ ಜೀವನವನ್ನು ನಡೆಸುವ ಹಕ್ಕನ್ನು ಹೊಂದಿರುವ ಟ್ರಾನ್ಸ್‌ಜೆಂಡರ್‌ಗಳಿಗೆ ಸಾಮಾಜಿಕ ಸ್ವೀಕಾರಕ್ಕಾಗಿ ಜಾಗೃತಿ ಮೂಡಿಸುವ ಅಗತ್ಯವಿದೆ. ಆದರೆ ನಮ್ಮ ವಿರುದ್ಧ ನಡೆಯುವ ದೌರ್ಜನ್ಯದ ವಿರುದ್ಧ ದೂರುಗಳನ್ನು ಪೊಲೀಸರು ದಾಖಲಿಸಿಕೊಳ್ಳುವುದಿಲ್ಲ ಎಂದು ದೂಷಿಸಿದರು.

ಇದನ್ನೂ ಓದಿ: Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

ಈ ಹಿಂದೆ ದೆಹಲಿಯ ಎನ್‌ಜಿಒದಲ್ಲಿ ಕೆಲಸ ಮಾಡಿದ್ದ ಠಾಕೂರ್, ಕೆನಡಾದಂತಹ ದೇಶಗಳ ರೀತಿಯಲ್ಲಿ ಶೈಕ್ಷಣಿಕ ಪಠ್ಯಕ್ರಮದಲ್ಲಿ ಟ್ರಾನ್ಸ್‌ಜೆಂಡರ್‌ಗಳ ಬಗ್ಗೆ ಪಾಠಗಳನ್ನು ಇರಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದು ತಾರತಮ್ಯ ಮತ್ತು ಕಿರುಕುಳದಿಂದ ಮುಕ್ತವಾದ ಶೈಕ್ಷಣಿಕ ವಾತಾವರಣದ ಹಕ್ಕನ್ನು ಒದಗಿಸುತ್ತದೆ. ಬೆದರಿಸಿ ಅಥವಾ ಶಾಪ ಹಾಕಿ ಹಣ ವಸೂಲಿ ಮಾಡುವ ಕಾರ್ಯವನ್ನು ಮಂಗಳಮುಖಿಯರು ನಿಲ್ಲಿಸಬೇಕು ಎಂದೂ ಅವರು ಸಲಹೆ ನೀಡಿದರು.

ಟ್ರಾನ್ಸ್‌ಜೆಂಡರ್‌ಗಳನ್ನು ಬಲವಂತವಾಗಿ ಕರೆದೊಯ್ಯುವ ಮತ್ತು ಅವರಿಗೆ ಕಿರುಕುಳ ನೀಡುವ ಜನರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದೂ ಅವರು ಪ್ರತಿಪಾದಿಸಿದರು.

Continue Reading

ವಿದೇಶ

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Covid 19: ಸಿಂಗಾಪುರದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೆ ಜಾಸ್ತಿಯಾಗುತ್ತಿವೆ. ಕೊರೊನಾ ಹೊಸ ಅಲೆಯ ಆರಂಭಿಕ ಹಂತದಲ್ಲಿ ನಾವಿದ್ದೇವೆ. ಎರಡರಿಂದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗಲಿದೆ ಎಂಬುದಾಗಿ ವರದಿಗಳು ತಿಳಿಸಿವೆ ಎಂದು ಸಿಂಗಾಪುರ ಆರೋಗ್ಯ ಸಚಿವ ತಿಳಿಸಿದ್ದಾರೆ.

VISTARANEWS.COM


on

Covid 19
Koo

ಸಿಂಗಾಪುರ: ಭಾರತ ಸೇರಿ ಜಗತ್ತನ್ನೇ ಪಿಡುಗಿನಂತೆ ಕಾಡಿದ ಕೊರೊನಾ ಸೋಂಕು (Covid 19) ಈಗ ಸಿಂಗಾಪುರದಲ್ಲಿ ಹೊಸದೊಂದು ಅಲೆ ಸೃಷ್ಟಿಸಿದೆ. ಸಿಂಗಾಪುರದಲ್ಲಿ (Singapore) ಕಳೆದ ಒಂದು ವಾರದಲ್ಲಿಯೇ (ಮೇ 5-11) 25,900 ಪ್ರಕರಣಗಳು ದಾಖಲಾಗಿದ್ದು, ಪ್ರತಿಯೊಬ್ಬರೂ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವ ಓಂಗ್‌ ಯೆ ಕುಂಗ್‌ (Ong Ye Kung) ಅವರು ಖಡಕ್‌ ಆದೇಶ ಹೊರಡಿಸಿದ್ದಾರೆ. ಸಿಂಗಾಪುರದಲ್ಲಿ ಏಕಾಏಕಿ ಮಹಾಮಾರಿಯ ಹೊಸ ಅಲೆ ಸೃಷ್ಟಿಯಾಗಿರುವುದರಿಂದ ಭಾರತಕ್ಕೂ ಭೀತಿ ಎದುರಾಗಿದೆ.

“ಸಿಂಗಾಪುರದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೆ ಜಾಸ್ತಿಯಾಗುತ್ತಿವೆ. ಕೊರೊನಾ ಹೊಸ ಅಲೆಯ ಆರಂಭಿಕ ಹಂತದಲ್ಲಿ ನಾವಿದ್ದೇವೆ. ಎರಡರಿಂದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗಲಿದೆ ಎಂಬುದಾಗಿ ವರದಿಗಳು ತಿಳಿಸಿವೆ. ಜೂನ್‌ ಅಂತ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ವಿಪರೀತವಾಗಿ ಏರಿಕೆಯಾಗುವ ಸಾಧ್ಯತೆ ಇದೆ. ಇದಕ್ಕಾಗಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿಯೊಬ್ಬರೂ ಮಾಸ್ಕ್‌ ಧರಿಸುವ ಜತೆಗೆ ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕನ್ನು ನಿಗ್ರಹಿಸಲು ಸೂಚಿಸಲಾಗಿದೆ” ಎಂದು ಓಂಗ್‌ ಯೆ ಕುಂಗ್‌ ತಿಳಿಸಿದ್ದಾರೆ.

ಮೇ 5ಕ್ಕಿಂತ ಮೊದಲಿನ ಒಂದು ವಾರದಲ್ಲಿ ಸಿಂಗಾಪುರದಲ್ಲಿ 13,700 ಕೇಸ್‌ಗಳು ದಾಖಲಾಗಿದ್ದವು. ಆದರೆ, ಒಂದೇ ವಾರದ ಅಂತರದಲ್ಲಿ ಪ್ರಕರಣಗಳ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗಿದೆ. ಒಂದು ವಾರದಲ್ಲಿ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ 181ರಿಂದ 250ಕ್ಕೆ ಏರಿಕೆಯಾಗಿದೆ. ಪ್ರತಿ ದಿನ ಸರಾಸರಿ ಮೂವರು ಸೋಂಕಿತರು ಐಸಿಯು ಸೇರುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿರುವ ಕಾರಣ ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ ಸೇರಿ ಹಲವು ವೈದ್ಯಕೀಯ ಸೌಕರ್ಯಗಳನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಭಾರತಕ್ಕೂ ಇದೆ ಹೊಸ ಅಲೆಯ ಭೀತಿ

ಸಿಂಗಾಪುರದಿಂದ ಭಾರತಕ್ಕೆ ಬರುವವರ ಸಂಖ್ಯೆ ಜಾಸ್ತಿ ಇರುವುದರಿಂದ ಭಾರತಕ್ಕೂ ಹೊಸ ಸೋಂಕಿನ ಅಲೆಯ ಭೀತಿ ಇದ್ದೇ ಇದೆ. ಹಾಗೊಂದು ವೇಳೆ, ಸಿಂಗಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟ ಜಾಸ್ತಿಯಾದರೆ ಭಾರತಕ್ಕೆ ಬರುವವರ ಮೇಲೆ ಹೆಚ್ಚಿನ ನಿಗಾ ಇರಿಸುವುದು ಸೇರಿ ಹಲವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮದ ಕುರಿತು ವರದಿಗಳು ಬಹಿರಂಗವಾದ ಬೆನ್ನಲ್ಲೇ ಹೊಸ ತಳಿಯ ಸೋಂಕು ಹರಡುವ ಭೀತಿಯು ಜನರನ್ನು ಆತಂಕಕ್ಕೀಡು ಮಾಡಿದೆ.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

Continue Reading
Advertisement
RCB vs CSK
ಕ್ರೀಡೆ43 seconds ago

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

Road Accident
ಕರ್ನಾಟಕ12 mins ago

Road Accident: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

Russia Tourism
ಪ್ರವಾಸ17 mins ago

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Constitution
ದೇಶ18 mins ago

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Rain News Boy dies after being struck by lightning in Banavasi Heavy rains lash Chikkamagaluru and Hassan
ಮಳೆ24 mins ago

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Election Icon
Lok Sabha Election 202425 mins ago

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

Virat Kohli
ಕ್ರೀಡೆ46 mins ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Covid 19
ವಿದೇಶ47 mins ago

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Inspirational Story
ಶಿಕ್ಷಣ50 mins ago

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

MLC Election Withdrawal of nomination paper says Suresh Sajjan
ಕರ್ನಾಟಕ51 mins ago

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌