Monsoon diet | ಮಳೆಗಾಲದಲ್ಲಿ ಈ ತರಕಾರಿಗಳನ್ನು ತ್ಯಜಿಸಿದರೆ ಆರೋಗ್ಯ - Vistara News

ಆರೋಗ್ಯ

Monsoon diet | ಮಳೆಗಾಲದಲ್ಲಿ ಈ ತರಕಾರಿಗಳನ್ನು ತ್ಯಜಿಸಿದರೆ ಆರೋಗ್ಯ

ಮಳೆಗಾಲದಲ್ಲಿ ಕೆಲವು ಸೊಪ್ಪು, ಹಸಿರು ತರಕಾರಿಗಳನ್ನು ಸೇವಿಸಬಾರದು (monsoon diet) . ಅವು ಯಾವುವು ಮತ್ತು ಯಾಕೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

monsoon
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಳೆಗಾಲ ಬಂದಾಗ ದೇಹ ಮನಸ್ಸು ಎರಡೂ ತಂಪಾಗುತ್ತದೆ. ಆಗಷ್ಟೇ ಇದ್ದ ಬೇಸಗೆಯ ಬಿಸಿ ಮಾಯವಾಗಿ, ಮನಸ್ಸಿಗೆ ಉಲ್ಲಾಸ ತರುವ ಈ ಮಳೆಗಾಲ ತನ್ನೊಂದಿಗೆ ಸಹಜವಾಗಿ ಶೀತ, ನೆಗಡಿ, ಜ್ವರ ಇನ್ನಿತರ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನೂ ತರುತ್ತದೆ. ಉತ್ತಮ ಆರೋಗ್ಯಕ್ಕೆ, ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಕೆಲವು ತರಕಾರಿಗಳನ್ನು ಬಳಸುವುದು ಮುಖ್ಯವಾದರೆ, ಇನ್ನೂ ಕೆಲವದರ ಬಳಕೆಯನ್ನು ಬಿಡುವುದು. ಅಂತಹ ತರಕಾರಿಗಳ ಬಗ್ಗೆ ತಿಳಿಯೋಣ.

೧. ಸೊಪ್ಪು: ಸೊಪ್ಪಿನಲ್ಲಿರುವಷ್ಟು ಪೋಷಕಾಂಶಗಳನ್ನು ನಾವು ಇತರ ಆಹಾರಗಳಿಂದ ಪಡೆಯುದು ಕಷ್ಟ ಎಂಬ ಸತ್ಯ ನಮಗೆಲ್ಲ ಗೊತ್ತೇ ಇದೆ. ಆದರೆ ಮಳೆಗಾಲದಲ್ಲಿ ಸೊಪ್ಪು ಒಳ್ಳೆಯದಲ್ಲ ಎಂಬ ವಿಚಾರ ನಿಮಗೆ ಗೊತ್ತೇ? ಹೌದು. ಮಳೆಗಾಲದಲ್ಲಿ ಹೆಚ್ಚು ತೇವಾಶ ಇರುವುದರಿಂದ ಬ್ಯಾಕ್ಟೀರಿಯಾಗಳ ಸಂತತಿಯೂ ಬಹಳಷ್ಟು ವೃದ್ಧಿಯಾಗುತ್ತವೆ. ಹಸಿರು ಸೊಪ್ಪುಗಳೂ ಇಂತಹ ಬ್ಯಾಕ್ಟೀರಿಯಾಗಳ ತಾಣವಾಗಿರುವ ಸಾಧ್ಯತೆ ಹೆಚ್ಚಿರುವುದರಿಂದ ಮಳೆಗಾಲದಲ್ಲಿ ಸೊಪ್ಪು ತಿನ್ನುವುದನ್ನು ಅವಾಯ್ಡ್‌ ಮಾಡಬಹುದು.

೨. ದೊಣ್ಣೆ ಮೆಣಸಿನಕಾಯಿ: ದೊಣ್ಣೆ ಮೆಣಸಿನಕಾಯಿ/ಕ್ಯಾಪ್ಸಿಕಂ ಕೂಡಾ ಮಳೆಗಾಲದಲ್ಲಿ ಒಳ್ಳೆಯದಲ್ಲ. ಇದರಲ್ಲಿ ಗ್ಲುಕೋಸಿನೊಲೇಟ್ಸ್‌ಗಳು ಹೆಚ್ಚಿರುವುದರಿಂದ ಮಳೆಗಾಲದಲ್ಲಿ ಇದು ವಾಂತಿ, ತಲೆನೋವ ಮತ್ತಿತರ ತೊಂದರೆಗಳನ್ನು ತರಬಹುದು. ಉಸಿರಾಟ ಸಂಬಂಧಿ ತೊಂದರೆಗಳು ಕೂಡಾ ಬರುವ ಸಂಭವ ಇರುವುದರಿಂದ ದೊಣ್ಣೆ ಮೆಣಸಿನಕಾಯಿಯನ್ನು ಮಳೆಗಾಲ ಮುಗಿಯುವವರೆಗೆ ಬಳಸುವುದು ಒಳ್ಳೆಯದಲ್ಲ.

೩. ಹೂಕೋಸು: ಹೂಕೋಸು/ಕಾಲಿಫ್ಲವರ್‌ ಅನ್ನು ಎರಡು ಕಾರಣಗಳಿಗಾಗಿ ಮಳೆಗಾಲದಲ್ಲಿ ಉಪಯೋಗಿಸಬಾರದು. ಮಳೆಗಾಲದಲ್ಲಿ ಇದರ ಹೂವಿನಂಥ ಭಾಗಗಳೆಡೆಯಲ್ಲಿ ಫಂಗಸ್‌ ಕೂರುವುದರಿಂದ ಇದರಿಂದ ಆರೋಗ್ಯದಲ್ಲಿ ಏರುಪೇರುಗಳಾಗಬಹುದು. ಹೊಟ್ಟೆ ಕೆಟ್ಟ ಅನುಭವವಾಗುವುದು ಅಥವಾ ಗ್ಯಾಸ್‌ ತುಂಬಿದಂತನಿಸಿ, ಹೊಟ್ಟೆ ಉಬ್ಬರಿಸಬಹುದು.

೪. ಬದನೆಕಾಯಿ: ಬದನೆಕಾಯಿ ಕೂಡಾ ಮಳೆಗಾಲದಲ್ಲಿ ಬಳಸುವುದು ಒಳ್ಳೆಯದಲ್ಲ. ಮಳೆಗಾಲದಲ್ಲಿ ಬದನೆಕಾಯಿ, ಕೀಟಬಾಧೆಗೆ ಆತ್ಮರಕ್ಷಣೆಗಾಗಿ ತನ್ನೊಳಗೆ ಕೆಟ್ಟ ರಾಸಾಯನಿಕಗಳನ್ನು ಉತ್ಪತ್ತಿ ಮಾಡುತ್ತದೆ. ಈ ರಾಸಾಯನಿಕಗಳಿಂದ ಚರ್ಮದ ಅಲರ್ಜಿ, ಕಜ್ಜಿ, ತುರಿಕೆಗಳಂತ ಚರ್ಮದ ಸಮಸ್ಯೆಗಳು ತಲೆದೋರಬಹುದು.

ಹಾಗಾದರೆ, ಈ ತರಕಾರಿಗಳನ್ನು ಬಿಟ್ಟು ಉಳಿದೆಲ್ಲ ತರಕಾರಿಗಳೂ ಉತ್ತಮವೇ ಆದರೂ ಈ ಕೆಳಗಿನ ನಾಲ್ಕು ತರಕಾರಿಗಳ ಉಪಯೋಗ ಇನ್ನಷ್ಟು ಒಳ್ಳೆಯದು.

೧. ಸೋರೆಕಾಯಿ: ಸೋರೆಕಾಯಿ ಮಳೆಗಾಲದಲ್ಲಿ ನಮ್ಮ ದೇಹಕ್ಕೆ ಅತ್ಯಂತ ಉತ್ತಮವಾದ ತರಕಾರಿ. ಇದರಲ್ಲಿ ನಾರಿನಂಶ ಹೆಚ್ಚಿದ್ದು, ಪೋಷಕಾಂಶಗಳಿಂದಲೂ ಸಮೃದ್ಧವಾಗಿದೆ. ನಮ್ಮ ಹೊಟ್ಟೆಯನ್ನು ತಂಪಾಗಿ, ಆರೋಗ್ಯವಾಗಿ ಇಟ್ಟುಕೊಳ್ಳುವಲ್ಲಿ ಸೋರೆಕಾಯಿಯ ಪಾತ್ರ ದೊಡ್ಡದು. ಇದು ಮಳೆಗಾಲದಲ್ಲಿ ಸದಾ ಕಾಡುವ ಶೀತ, ಕೆಮ್ಮು, ಜ್ವರದಂತ ಸಮಸ್ಯೆಗಳಿಂದ ಬಳಲುವಾಗಲೂ, ಬಹಳ ಉತ್ತಮ ಆಹಾರವಾಗಿದ್ದು, ಇದರಿಂದ ಬಲವರ್ಧನೆಯಾಗಿ, ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

ಇದನ್ನೂ ಓದಿ: Food | ನಮ್ಮ ಖಾಲಿ ದೋಸೆ ಅಮೆರಿಕದ ರೆಸ್ಟೋರೆಂಟ್‌ನಲ್ಲಿ ಚಿತ್ರಾನ್ನ!

೨. ಹಾಗಲಕಾಯಿ: ಕಹಿ ಎಂಬ ಕಾರಣಕ್ಕೆ ಹಾಗಲಕಾಯಿಯ ಹೆಸರು ಕೇಳಿದರೆ ಮೂಗು ಮುರಿಯುವವರೇ ಹೆಚ್ಚು. ಆದರೆ, ಇದು ಮಳೆಗಾಲಕ್ಕೆ ಹೇಳಿ ಮಾಡಿಸಿದಂತಹ ತರಕಾರಿ. ಇದರಲ್ಲಿ ಹೇರಳವಾಗಿ ವಿಟಮಿನ್‌ ಸಿ ಹಾಗೂ ಆಂಟಿ ಆಕ್ಸಿಡೆಂಟ್‌ಗಳು ಇರುವುದರಿಂದ, ಮಳೆಗಾಲದ ಸಾಮಾನ್ಯ ತೊಂದರೆಗಳಾದ ಶೀತ, ತಲೆನೋವು, ನೆಗಡಿ, ಕೆಮ್ಮು, ಜ್ವರ ಬಾರದಂತೆ ನೋಡಿಕೊಳ್ಳುತ್ತದೆ. ಮಧುಮೇಹಿಗಳಿಗೂ ಇದು ಅತ್ಯುತ್ತಮ ಆಹಾರವಾಗಿದ್ದು, ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸುತ್ತದೆ. ಹೊಟ್ಟೆಯಲ್ಲಿ ಬಾಧಿಸುವ ಹುಳದ ಸಮಸ್ಯೆ, ಬ್ಯಾಕ್ಟೀರಿಯಾ ತೊಂದರೆಗಳಿಗೂ ಇದರ ಸೇವನೆ ಉತ್ತಮ. ಜೀರ್ಣಾಂಗ ವ್ಯವಸ್ಥೆಯ ಆರೋಗ್ಯದಲ್ಲೂ ಹಾಗಲಕಾಯಿಗೆ ಪಾಲಿದೆ.

೩. ಬೀಟ್‌ರೂಟ್:‌ ರಕ್ತದಲ್ಲಿ ಹಿಮೋಗ್ಲೋಬಿನ್‌ ಕೊರತೆ ಅನುಭವಿಸುವ, ಅನೀಮಿಯಾ ತೊಂದರೆ ಇರುವ ಮಂದಿಗೆ ಬೀಟ್‌ರೂಟ್‌ ಬಹಳ ಅಗತ್ಯದ ತರಕಾರಿ. ಯಾವುದೇ ಇತರ ತರಕಾರಿಯೂ ಬೀಟ್‌ರೂಟ್‌ನಷ್ಟು ಮಟ್ಟದಲ್ಲಿ ಹಿಮೋಗ್ಲೋಬಿನ್‌ ಮಟ್ಟವನ್ನು ಏರಿಸುವಲ್ಲಿ ಸಹಾಯ ಮಾಡುವುದಿಲ್ಲ. ಇದಲ್ಲದೆ, ಇದರಲ್ಲಿ ಹೇರಳವಾಗಿ ಪೋಷಕಾಂಶಗಳಿದ್ದು ನಿತ್ಯವೂ, ಸಲಾಡ್‌, ಜ್ಯೂಸ್‌, ಪಲ್ಯ ಹಾಗೂ ಇನ್ನಿತರ ಮಾದರಿಯ ಮೂಲಕ ಸೇವಿಸುವುದರಿಂದ ರಕ್ತ ಪರಿಚಲನೆ ಸರಾಗವಾಗಿ, ರಕ್ತದೊತ್ತಡವನ್ನೂ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುವುದರಿಂದ ಮಳೆಗಾಲಕ್ಕೆ ತಿನ್ನಲೇಬೇಕಾದ ತರಕಾರಿಗಳಲ್ಲಿ ಇದೂ ಒಂದಾಗಿದೆ.

೪. ಸೌತೆಕಾಯಿ: ಬಹಳಷ್ಟು ಮಂದಿ ಮಳೆಗಾಲದಲ್ಲಿ ತಿನ್ನದ ತರಕಾರಿಯಿದು. ಆದರೆ, ಮಳೆಗಾಲದಲ್ಲೂ ಇದರ ಸೇವನೆ ಒಳ್ಳೆಯದೇ. ಹಸಿಯಾಗಿ ಅಥವಾ ಸ್ಯಾಂಡ್‌ವಿಚ್‌, ಸಲಾಡ್‌ಗಳ ಮೂಲಕ ಸೇವಿಸಬಹುದಾದ ರುಚಿಯಾದ ಈ ತರಕಾರಿಯ ಸೇವನೆಯಿಂದ ದೇಹ ತಂಪಾಗಿರುತ್ತದೆ. ಹೊಟ್ಟೆಯಲ್ಲಿರುವ ಕಲ್ಮಶಗಳನ್ನು ಇದು ಹೊರಗೆ ತಳ್ಳುತ್ತದೆ. ದೇಹವನ್ನು, ಚರ್ಮವನ್ನು ಶುದ್ಧವಾಗಿ ಅರೋಗ್ಯವಾಗಿಟ್ಟುಕೊಳ್ಳುವಲ್ಲಿ ಸಹಾಯ ಮಾಡುತ್ತದೆ.

ಇದನ್ನೂ ಓದಿ: Chromotherapy | ಬಣ್ಣದ ಔಷಧಿಯಲ್ಲ, ಬಣ್ಣವೇ ಔಷಧಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Vijayanagara News: ಹೊಸಪೇಟೆ ನಗರದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ನೀಡದೇ ಸಾವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಸಂಘ ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಎಸ್ಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.

VISTARANEWS.COM


on

private hospitals heads and health department officers Meeting at vijayanagara DC office
Koo

ಹೊಸಪೇಟೆ: ನಗರದ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ನೀಡದೇ ಸಾವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಸಂಘ ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಎಸ್ಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಡಿಸಿ ಕಚೇರಿ ಸಭಾಂಗಣದಲ್ಲಿ (Vijayanagara News) ಮಂಗಳವಾರ ಸಭೆ ನಡೆಯಿತು.

ಈ ವೇಳೆ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಮಾತನಾಡಿ, ಸರಿಯಾಗಿ ಚಿಕಿತ್ಸೆ ಸಿಗದೇ ಖಾಸಗಿ ಆಸ್ಪತ್ರೆಗಳಲ್ಲಿ ಸಾವುಗಳು ಸಂಭವಿಸುತ್ತಿವೆ ಎನ್ನುವ ದೂರಿನ ಬಗ್ಗೆ ಖಾಸಗಿ ಆಸ್ಪತ್ರೆಗಳು ಗಂಭೀರವಾಗಿ ಪರಿಗಣಿಸಬೇಕು. ಖಾಸಗಿ ಆಸ್ಪತ್ರೆಗಳಿಗೆ ಬರುವ ಯಾವುದೇ ರೋಗಿಗಳು ಮತ್ತು ಆ ರೋಗಿಯ ಸಂಬಂಧಿಕರೊಂದಿಗೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯು ಸಹನೆ, ಸಂಯಮ ಮತ್ತು ತಾಳ್ಮೆಯಿಂದ ನಡೆದುಕೊಳ್ಳಬೇಕು. ದುರ್ವರ್ತನೆ ತೋರಬಾರದು. ಮಾನವೀಯತೆಯಿಂದ ನಡೆದುಕೊಳ್ಳಬೇಕು. ಲೋಪ ಎಸಗಿರುವುದು ಕಂಡುಬಂದಲ್ಲಿ ಯಾರೇ ಆಗಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಮಾತನಾಡಿ, ವೈದ್ಯರನ್ನು ದೇವರ ಸಮಾನ ಎಂದು ನಮ್ಮ ಸಮಾಜವು ವೈದ್ಯರಿಗೆ ಗೌರವಯುತ ಸ್ಥಾನ ನೀಡಿದೆ. ಕೆಲವು ವೈದ್ಯರು ಮತ್ತು ಅವರ ಆಸ್ಪತ್ರೆಗಳಲ್ಲಿನ ಸಿಬ್ಬಂದಿ ತೋರುವ ನಿರ್ಲಕ್ಷ್ಯದಿಂದಾಗಿ ಸಾವುಗಳು ಸಂಭವಿಸಿ ಇಡೀ ವೈದ್ಯ ಸಮೂಹವನ್ನೇ ಕೆಟ್ಟ ದೃಷ್ಟಿಯಿಂದ ನೋಡುವಂತಾಗುತ್ತದೆ. ವೈದ್ಯರು ಮತ್ತು ಸಾರ್ವಜನಿಕ ಮಧ್ಯೆ ಇರುವ ನಂಬಿಕೆಗೆ ಧಕ್ಕೆ ಬಾರದ ಹಾಗೆ ಮತ್ತು ಸಾರ್ವಜನಿಕರಿಗೆ ವೈದ್ಯರ ಮೇಲೆ ವಿಶ್ವಾಸ ಬರುವ ಹಾಗೆ ಎಲ್ಲಾ ವೈದ್ಯರು ಮತ್ತು ಆಯಾ ಆಸ್ಪತ್ರೆಗಳಲ್ಲಿನ ಸಿಬ್ಬಂದಿಯು ಪ್ರಾಮಾಣಿಕಯಿಂದ, ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಡಿಎಚ್‌ಒ ಡಾ. ಶಂಕರ್‌ ನಾಯ್ಕ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯ ಅನುಸಾರವೇ ಇರಬೇಕು. ನೋಂದಣಿ ಸಮಯದಲ್ಲಿ ಯಾವ ವೈದ್ಯರು ಮತ್ತು ಯಾವ ಸಿಬ್ಬಂದಿಯನ್ನು ಡಿಕ್ಲೆರೇಷನ್ ಮಾಡಲಾಗಿರುತ್ತದವೋ ಅದೇ ರೀತಿಯ ವೈದ್ಯರು ಮತ್ತು ಅವಶ್ಯಕ ಸಿಬ್ಬಂದಿಯನ್ನು ಆಸ್ಪತ್ರೆಯು ಹೊಂದಿರಬೇಕು. ಇಲ್ಲದಿದ್ದರೆ ಪರವಾನಿಗೆ ರದ್ದುಪಡಿಸಲಾಗುವುದು.

ಯಾವುದೇ ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯನ್ನು ಉಲ್ಲಂಘಿಸಿರುವುದು ಗೊತ್ತಾದಲ್ಲಿ ಅಂತಹ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಆಸ್ಪತ್ರೆಯಲ್ಲಿನ ಬಯೋಮೆಡಿಕಲ್ ತ್ಯಾಜ್ಯವನ್ನು ನಿಯಮಾನುಸಾರ ವಿಲೆಗೆ ಕ್ರಮವಹಿಸದಿದ್ದಲ್ಲಿ ಸಹ ಕ್ರಿಮಿನಲ್ ಮೊಕದ್ದಮೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಯ ಎಲ್ಲಾ ಕೋಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರವನ್ನು ಪ್ರದರ್ಶಿಸಿ ಅದೇ ರೀತಿ ಪಾಲನೆ ಮಾಡಬೇಕು. ನಿಗದಿಪಡಿಸಿದ ದರಕ್ಕಿಂತ ಅನವಶ್ಯಕವಾಗಿ ಹೆಚ್ಚಿನ ಹಣ ಪಡೆಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

ಅಪ್ರಾಪ್ತ ವಯಸ್ಸಿನ ಮಹಿಳೆಯು ಗರ್ಭಿಣಿ ಎಂದು ಗೊತ್ತಾದಲ್ಲಿ ಈ ಬಗ್ಗೆ ಕೂಡಲೇ 1098 ಅಥವಾ ಆರೋಗ್ಯ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕು. ಗಂಡಾಂತರ ಗರ್ಭಿಣಿ ಎಂದು ತಿಳಿದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಸಾಂಕ್ರಾಮಿಕ ರೋಗಗಳು, ನಾಯಿ ಕಡಿತ, ಹಾವು ಕಡಿತ ಪ್ರಕರಣಗಳ ಬಗ್ಗೆ ಸಹ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎನ್ನುವ ನಿಯಮವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ಸಿಬ್ಬಂದಿಯು ತಪ್ಪದೇ ಪಾಲನೆ ಮಾಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.

ಆಸ್ಪತ್ರೆಗಳಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಪ್ರಕರಣಗಳು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಕೆಪಿಎಂಇ ಕಾಯಿದೆ ಅನುಸಾರ ಕಾರ್ಯನಿರ್ವಹಿಸದೇ ನಿಯಮ ಉಲ್ಲಂಘಿಸಿ ಲೋಪ ಎಸಗಿರುವುದು ಕಂಡುಬಂದಲ್ಲಿ ಕೆಪಿಎಂಇ ಕಾಯಿದೆ ಅಡಿ ಕ್ರಮ ಜರುಗಿಸಲಾಗುವುದು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.

ಕೆಪಿಎಂಇ ಕಾಯಿದೆ ಅಡಿಯಲ್ಲಿ ನೋಂದಣಿ ಆಗಿರುವ ಸಂದರ್ಭದಲ್ಲಿ ಖಾಸಗಿ ಆಸ್ಪತ್ರಯ ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ ಮತ್ತು ವೇತನದ ವಿವರಗಳನ್ನು ಪರಿಶೀಲಿಸಲು ತಾಲೂಕುಮಟ್ಟದ ತಂಡಗಳನ್ನು ರಚಿಸಿ ಪರಿಶೀಲಿಸಿ ವರದಿಯನ್ನು ಸಲ್ಲಿಸುವಂತೆ ಸಹ ಸಭೆಯಲ್ಲಿ ಸೂಚಿಸಲಾಯಿತು.

ಇದನ್ನೂ ಓದಿ: Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಸಭೆಯಲ್ಲಿ ಐಎಂಎ ಅಧ್ಯಕ್ಷ ಡಾ. ಶ್ರೀನಿವಾಸ ದೇಶಪಾಂಡೆ ಹಾಗೂ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮತ್ತು ಇತರರು ಇದ್ದರು.

Continue Reading

ಆರೋಗ್ಯ

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ಊಟದ ಮೊದಲು, ಅನಂತರ ಚಹಾ, ಕಾಫಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಟೀ ಮತ್ತು ಕಾಫಿಯಲ್ಲಿ ಇರುವ ಕೆಫೀನ್ ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಕಾಫಿ, ಟೀ ಮೇಲಿನ ಅವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಐಸಿಎಂಆರ್ ಸಂಶೋಧಕರು (ICMR Dietary Guidelines) ತಿಳಿಸಿದ್ದಾರೆ.

VISTARANEWS.COM


on

By

ICMR Dietary Guidelines
Koo

ಊಟದ ಮೊದಲು ಮತ್ತು ಅನಂತರ (Before And After Meals) ಚಹಾ (tea) ಅಥವಾ ಕಾಫಿಯನ್ನು (coffee) ಸೇವಿಸಲೇಬಾರದು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ತನ್ನ ಆರೋಗ್ಯಕರ ಜೀವನಕ್ಕಾಗಿ ಆಹಾರ ಕ್ರಮದ ಕುರಿತಾಗಿ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ (ICMR Dietary Guidelines) ಹೇಳಿದೆ. ಟೀ ಮತ್ತು ಕಾಫಿಯಲ್ಲಿ ಇರುವ ಕೆಫೀನ್ (caffeine) ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಕಾಫಿ, ಟೀ ಮೇಲಿನ ಅವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಐಸಿಎಂಆರ್ ಸಂಶೋಧಕರು ತಿಳಿಸಿದ್ದಾರೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಂಶೋಧಕರು ಚಹಾ ಮತ್ತು ಕಾಫಿ ಸೇವನೆಯಲ್ಲಿ ಮಿತವಾಗಿರುವಂತೆ ಸಲಹೆ ನೀಡಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿರುವ ಈ ಎರಡು ಪಾನೀಯಗಳು ಆರೋಗ್ಯಕರ ಅಭ್ಯಾಸವಲ್ಲ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಸಂಸ್ಥೆಯು ಇತ್ತೀಚೆಗೆ 17 ಹೊಸ ಆಹಾರ ಮಾರ್ಗಸೂಚಿಗಳನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (NIN) ಸಹಭಾಗಿತ್ವದಲ್ಲಿ ಪರಿಚಯಿಸಿದೆ. ಇದು ಭಾರತದಾದ್ಯಂತ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಮಾರ್ಗಸೂಚಿಗಳು ವೈವಿಧ್ಯಮಯ ಆಹಾರ ಮತ್ತು ಸಕ್ರಿಯ ಜೀವನಶೈಲಿಯ ಮಹತ್ವವನ್ನು ಒತ್ತಿಹೇಳುತ್ತವೆ.

ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಗುರುತಿಸುವಾಗ, ವೈದ್ಯಕೀಯ ತಜ್ಞರು ಸಂಭಾವ್ಯ ಆರೋಗ್ಯದ ಕಾಳಜಿಯಿಂದಾಗಿ ಚಹಾ ಮತ್ತು ಕಾಫಿಯ ಅತಿಯಾದ ಸೇವನೆಯ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

ಯಾಕೆ ಒಳ್ಳೆಯದಲ್ಲ?

ಐಸಿಎಂಆರ್ ಸಂಶೋಧಕರು ಟೀ ಮತ್ತು ಕಾಫಿಯು ಕೆಫೀನ್ ಅನ್ನು ಒಳಗೊಂಡಿರುತ್ತದೆ, ಇದು ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಶಾರೀರಿಕ ಅವಲಂಬನೆಯನ್ನು ಪ್ರೇರೇಪಿಸುತ್ತದೆ ಎಂದು ವಿವರಿಸಿದ್ದಾರೆ.

ಮಾರ್ಗಸೂಚಿಗಳು ಜನಪ್ರಿಯ ಪಾನೀಯಗಳ ಕೆಫೀನ್ ಅಂಶದ ಮೇಲೆ ಬೆಳಕು ಚೆಲ್ಲಿದೆ. 150 ಮಿಲಿ ಕಪ್ ಕುದಿಸಿದ ಕಾಫಿಯು 80 – 120 ಮಿಲಿ ಗ್ರಾಂ ಕೆಫೀನ್ ಅನ್ನು ಹೊಂದಿರುತ್ತದೆ. ಇನ್ ಸ್ಟೆಂಟ್ ಕಾಫಿ 50 – 65 ಮಿಲಿ ಗ್ರಾಂ ಮತ್ತು ಚಹಾವು 30 – 65 ಮಿಲಿ ಗ್ರಾಂ ಕೆಫೀನ್ ಹೊಂದಿರುತ್ತದೆ ಎಂದು ಐಸಿಎಂಆರ್ ತಿಳಿಸಿದೆ.


ಎಷ್ಟು ಸೇವಿಸಬಹುದು?

ಐಸಿಎಂಆರ್ ಪ್ರತಿದಿನ ಕೇವಲ 300 ಮಿಲಿ ಗ್ರಾಂ ಕೆಫೀನ್ ಸೇವನೆ ಮಾಡಬಹುದು ಎಂದು ಹೇಳಿದೆ. ಟೀ, ಕಾಫಿಯಲ್ಲಿರುವ ಕೆಫೀನ್ ಅಂಶ ದೇಹದಲ್ಲಿ ಕಬ್ಬಿಣವನ್ನು ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುವ ಕಾರಣ ಊಟಕ್ಕೆ ಮೊದಲು ಮತ್ತು ಅನಂತರ ಕನಿಷ್ಠ ಒಂದು ಗಂಟೆ ಚಹಾ ಅಥವಾ ಕಾಫಿಯನ್ನು ತ್ಯಜಿಸಲು ವೈದ್ಯಕೀಯ ಸಂಸ್ಥೆ ಸಲಹೆ ನೀಡಿದೆ.

ಕೆಫೀನ್‌ಗಳು ಹೊಟ್ಟೆಯಲ್ಲಿ ಕಬ್ಬಿಣವನ್ನು ಹಿಡಿದಿಟ್ಟುಕೊಳ್ಳುತ್ತದೆ. ಇದರಿಂದ ದೇಹಕ್ಕೆ ಕಬ್ಬಿಣವನ್ನು ಸರಿಯಾಗಿ ಹೀರಿಕೊಳ್ಳಲು ಕಷ್ಟವಾಗುತ್ತದೆ. ಇದು ಕಬ್ಬಿಣದ ಕೊರತೆ ಮತ್ತು ರಕ್ತಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅತಿಯಾದ ಕಾಫಿ ಸೇವನೆಯು ಅಧಿಕ ರಕ್ತದೊತ್ತಡ ಮತ್ತು ಹೃದಯದ ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಹೇಳಿದೆ.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಬ್ಲ್ಯಾಕ್‌ ಚಹಾದಿಂದ ಪ್ರಯೋಜನ

ಹಾಲು ಇಲ್ಲದೆ ಚಹಾವನ್ನು ಕುಡಿಯುವುದರಿಂದ ರಕ್ತ ಪರಿಚಲನೆಯಲ್ಲಿ ಸುಧಾರಣೆ, ರಕ್ತನಾಳಗಳ ಸಮಸ್ಯೆ ಮತ್ತು ಹೊಟ್ಟೆಯ ಕ್ಯಾನ್ಸರ್‌ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಐಸಿಎಂಆರ್ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಆಹಾರದಲ್ಲಿ ಏನಿರಬೇಕು?

ಆಹಾರಗಳಲ್ಲಿ ಹಣ್ಣು, ತರಕಾರಿ, ಧಾನ್ಯ, ನೇರ ಮಾಂಸ ಮತ್ತು ಸಮುದ್ರಾಹಾರವನ್ನು ಶಿಫಾರಸು ಮಾಡಿರುವ ಐಸಿಎಂಆರ್ ಸಂಶೋಧಕರು ತೈಲ, ಸಕ್ಕರೆ ಮತ್ತು ಉಪ್ಪಿನ ಸೇವನೆಯನ್ನು ಸೀಮಿತಗೊಳಿಸುವಂತೆ ಸೂಚಿಸಿದ್ದಾರೆ.

Continue Reading

ದೇಶ

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Crowd Funding: ರಾಜಸ್ಥಾನದ ಜೈಪುರದಲ್ಲಿ ಮಗುವಿನ ಚಿಕಿತ್ಸೆಗೆ ಸಾರ್ವಜನಿಕರು ಅಭೂತಪೂರ್ವಾಗಿ ಸ್ಪಂದಿಸಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ 17.5 ಕೋಟಿ ರೂ. ಬೇಕಾಗಿತ್ತು. ಸುಮಾರು 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ. ಸದ್ಯ ಸಾರ್ವಜನಿಕರ ಮಾನವೀಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Crowd Funding
Koo

ಜೈಪುರ: ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ರಾಜಸ್ಥಾನದ 22 ತಿಂಗಳ ಮಗುವಿನ ಚಿಕಿತ್ಸೆಗೆ ಸ್ಪಂದಿಸಿದ ಅನೇಕರು ಭರಪೂರ ದೇಣಿಗೆ ನೀಡಿದ್ದಾರೆ. ಕ್ರಿಕೆಟ್‌ ಅಟಗಾರರಿಂದ ಹಿಡಿದು, ನಟರು, ತರಕಾರಿ ಮಾರುವವರು, ಬೀದಿಬದಿ ವ್ಯಾಪಾರಿಗಳು ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ ಸುಮಾರು 17.5 ಕೋಟಿ ರೂ. ಮೊತ್ತದ ಇಂಜೆಕ್ಷನ್‌ ನೀಡಬೇಕಾಗಿದ್ದು, ಇದಕ್ಕಾಗಿ ಇವರೆಲ್ಲ ಒಂದಾಗಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡಿ ಮಗುವಿನ ನೆರವಿಗೆ ಧಾವಿಸಿದ್ದಾರೆ (Crowd Funding).

ರಾಜಸ್ಥಾನದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನರೇಶ್‌ ಶರ್ಮಾ ಅವರ ಪುತ್ರ ಹೃದಯಾಂಶ್‌ ಶರ್ಮಾ (22 ತಿಂಗಳು) ಅಪರೂಪದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (Spinal muscular atrophy) ಎಂಬ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಕಾರಣದಿಂದ ಆತನ ಸೊಂಟದ ಕೆಳಭಾಗ ಸಂಪೂರ್ಣ ನಿಷ್ಕ್ರೀಯವಾಗಿತ್ತು. ಇದನ್ನು ವಾಸಿ ಮಾಡಲು, ಸಂಪೂರ್ಣ ಗುಣಮುಖನಾಗಲು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಜೀನ್ ಥೆರಪಿ ಇಂಜೆಕ್ಷನ್‌ ಜೊಲ್ಗೆನ್ಸ್ಮಾ (Zolgensma)ದ ಸಿಂಗಲ್ ಡೋಸ್ ಪಡೆದುಕೊಳ್ಳಬೇಕು ಎಂದು ವೈದ್ಯರು ಸೂಚಿಸಿದ್ದರು. ಅತ್ಯಂತ ದುಬಾರಿಯಾದ ಇದರ ಬೆಲೆ ಅಂದಾಜು 17.5 ಕೋಟಿ ರೂ.

ದೇಣಿಗೆ ಸಂಗ್ರಹಕ್ಕೆ ಮುಂದಾದ ಪೊಲೀಸರು

ಇಷ್ಟೊಂದು ದುಬಾರಿ ಮೊತ್ತ ಭರಿಸಲು ನರೇಶ್‌ ಶರ್ಮಾ ಅವರ ಕುಟುಂಬಕ್ಕೆ ಸಾಧ್ಯವಿರಲಿಲ್ಲ. ಈ ಹಿನ್ನೆಲೆಯಲ್ಲಿ ನೆರವಿಗೆ ಧಾವಿಸಿದ ರಾಜಸ್ಥಾನ ಪೊಲೀಸರು ಸಾವರ್ಜನಿಕ ದೇಣಿಗೆ ಸಂಗ್ರಹಕ್ಕೆ ಮುಂದಾದರು. ಮಗುವಿಗೆ 2 ವರ್ಷ ತುಂಬುವ ಮೊದಲೇ ಈ ಚಿಕಿತ್ಸೆ ನಡೆಯಬೇಕಿರುವುದರಿಂದ ಪೊಲೀಸರು ಫೆಬ್ರವರಿಯಲ್ಲಿ ಕ್ರೌಡ್‌ ಫಡಿಂಗ್‌ ಅಭಿಯಾನ ಆರಂಭಿಸಿದರು. ಈ ಅಭಿಯಾನಕ್ಕೆ ಸೂಕ್ತ ಸ್ಪಂದನೆ ದೊರೆಯಿತು. ಸೆಲೆಬಿಟಿಗಳಾದ ಕ್ರಿಕೆಟಿಗ ದೀಪಕ್‌ ಚಹರ್‌ ಮತ್ತು ಬಾಲಿವುಡ್‌ ನಟ, ಬಹಭಾಷಾ ಕಲಾವಿದ ಸೋನು ಸೂದ್‌ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ವಿಚಾರವನ್ನು ಹಂಚಿಕೊಂಡು ನೆರವು ನೀಡಲು ಮನವಿ ಮಾಡಿದರು.

ಹರಿದು ಬಂದ ನೆರವು

ಬಳಿಕ ಜೈಪುರದ ವಿವಿಧ ಕಡೆಗಳಿಂದ ನೆರವು ಹರಿದು ಬರತೊಡಗಿತು. ಅಂಗಡಿಯವರು, ವಿದ್ಯಾರ್ಥಿಗಳು, ಗೃಹಣಿಯರು, ತರಕಾರಿ, ಹಣ್ಣು ಮಾರಾಟಗಾರರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲರೂ ನೆರವಿನ ಹಸ್ತ ಚಾಚಿದರು. ವಿವಿಧ ಎನ್‌ಜಿಒಗಳು ಮತ್ತು ಸಂಸ್ಥೆಗಳು ಕೂಡ ಈ ಅಭಿಯಾನಕ್ಕೆ ಕೈ ಜೋಡಿಸಿದವು. ʼʼರಾಜಸ್ಥಾನದಲ್ಲಿ ಕ್ರೌಡ್‌ ಫಡಂಗ್‌ಗೆ ಈ ರೀತಿಯ ಸ್ಪಂದನೆ ದೊರೆಯುತ್ತಿರುವುದು ಇದು ಮೊದಲ ಬಾರಿʼʼ ಎಂದು ಅಭಿಯಾನದಲ್ಲಿ ತೊಡಗಿಸಿಕೊಂಡಿರುವವರು ಅಭಿಪ್ರಾಯಪಡುತ್ತಾರೆ.

3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

3 ತಿಂಗಳ ಅವಧಿಯಲ್ಲಿ ಸುಮಾರು 9 ಕೋಟಿ ರೂ. ಸಂಗ್ರಹವಾಗಿದೆ. ಇದೀಗ ಜೈಪುರದ ಜೆ.ಕೆ. ಲಾನ್‌ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಇಂಜೆಕ್ಷನ್‌ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.

ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ ಎನ್ನುವುದು ಆನುವಂಶಿಕ ಅಸ್ವಸ್ಥತೆಯಾಗಿದ್ದು, ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ಕೊರತೆಯೊಂದಾಗಿ ವ್ಯಕ್ತಿಗೆ ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೂ ಪರಿಣಾಮ ಬೀರುತ್ತದೆ. ಇದರ ಚಿಕಿತ್ಸೆಗಾಗಿ ಬಳಸುವ ಜೊಲ್ಗೆನ್ಸ್ಮಾ ಇಂಜೆಕ್ಷನ್‌ ಅನ್ನು ಸ್ವಿಸ್ ಫಾರ್ಮಾ ದೈತ್ಯ ನೊವಾರ್ಟಿಸ್ (Novartis) ತಯಾರಿಸುತ್ತದೆ.

ಇದನ್ನೂ ಓದಿ: kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

Continue Reading

ಆರೋಗ್ಯ

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

ಮಾನಸಿಕ ಒತ್ತಡ ಹೆಚ್ಚಿದಾಗ ದೇಹದ ನಾನಾ ಭಾಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಅಂಥವುಗಳಲ್ಲಿ ಒಂದು ಕುತ್ತಿಗೆ ನೋವು. ಒತ್ತಡ (neck pain) ಶಮನ ಮಾಡುವುದರ ಜೊತೆಗೆ, ಇನ್ನೂ ಕೆಲವು ತಂತ್ರಗಳು ನೋವಿನಿಂದ ಮುಕ್ತಿ ನೀಡಬಲ್ಲವು. ಕುತ್ತಿಗೆ ನೋವಿನಿಂದ ಪಾರಾಗುವ (Health Tips in Kannada) ಉಪಾಯ ಇಲ್ಲಿದೆ.

VISTARANEWS.COM


on

Health Tips in Kannada
Koo

ಮಾನಸಿಕ ಒತ್ತಡವು ದೇಹದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಬಲ್ಲದು. ಜೀರ್ಣಾಂಗಗಳ ಆರೋಗ್ಯದಲ್ಲಿ ಏರುಪೇರು, ಬೆನ್ನು ನೋವು, ಕುತ್ತಿಗೆ ನೋವು- ಹೀಗೆ ತರಹೇವಾರಿ ಸಮಸ್ಯೆಗಳನ್ನು ಹುಟ್ಟುಹಾಕಬಲ್ಲದು. ಅದರಲ್ಲೂ ತೀವ್ರವಾದ ಆತಂಕ ಮತ್ತು ಒತ್ತಡವು ಅಷ್ಟೇ ತೀವ್ರವಾದ ಕುತ್ತಿಗೆ ನೋವನ್ನು ಸೃಷ್ಟಿಸಬಲ್ಲದು. ಮಾನಸಿಕ ಒತ್ತಡ ಹೆಚ್ಚಾದಷ್ಟೂ ಸ್ನಾಯುಗಳ ಮೇಲಿನ ಒತ್ತಡವೂ ಹೆಚ್ಚುತ್ತದೆ. ಇದರಿಂದ ನೋವು ಮತ್ತು ಕಿರಿಕಿರಿ ಇನ್ನಷ್ಟು (Health Tips in Kannada) ಏರುತ್ತದೆ.

Neck Pain

ಒತ್ತಡಕ್ಕೂ ಕುತ್ತಿಗೆಗೂ…:

ಸಂಬಂಧ ಇದೆ ಎನ್ನುವುದನ್ನು ಅಧ್ಯಯನಗಳು ದೃಢಪಡಿಸಿವೆ. ನಮ್ಮ ದೇಹದಲ್ಲಿ ಒತ್ತಡ ಹೆಚ್ಚಾದಷ್ಟಕ್ಕೂ ಶರೀರ ಫೈಟ್‌-ಫ್ಲೈಟ್‌ ಎನ್ನುವ ಅವಸ್ಥೆಗೆ ತಲುಪುತ್ತದೆ. ಹೀಗಿರುವಾಗ ಸ್ನಾಯುಗಳ ಮೇಲಿನ ಒತ್ತಡ ಏರುತ್ತದೆ. ದೀರ್ಘ ಕಾಲ ಒತ್ತಡ ಶಮನಕ್ಕೆ ಯಾವುದೇ ಮಾರ್ಗವನ್ನು ಅನುಸರಿಸದಿದ್ದರೆ, ತಡೆಯಲಾರದಂಥ ಕುತ್ತಿಗೆ ನೋವು ಕಾಡುತ್ತದೆ. ಮಾತ್ರವಲ್ಲ, ಒತ್ತಡ ಹೆಚ್ಚಿದಾಗ ನಿದ್ದೆಗೆಡುವುದು, ಉರಿಯೂತ ಹೆಚ್ಚುವಂಥ ಆಹಾರಗಳನ್ನು ತಿನ್ನುವುದು, ಯಾವ್ಯಾವುದೋ ಭಂಗಿಗಳಲ್ಲಿ ಕುಳಿತುಕೊಳ್ಳುವುದು ಸಹ ಹೆಚ್ಚಾಗುತ್ತದೆ. ಇವೆಲ್ಲವುಗಳ ಕೃಪೆಯಿಂದ ಕುತ್ತಿಗೆ ನೋವು ಅಸಹನೀಯ ಎನ್ನುವಷ್ಟಾಗುತ್ತದೆ. ಇದಕ್ಕೆ ಮದ್ದುಂಟೇ?

ಭಂಗಿ

ಮೊದಲಿಗೆ ಕುಳಿತುಕೊಳ್ಳುವ, ಮಲಗುವ ಭಂಗಿಗಳ ಬಗ್ಗೆ ಗಮನ ಕೊಡಿ. ದಿನವಿಡೀ ಕಂಪ್ಯೂಟರ್‌ನಲ್ಲಿ ಕೆಲಸ ಮಾಡುವವರಾಗಿದ್ದರೆ ಕಣ್ಣಿನ ಮಟ್ಟಕ್ಕೇ ಪರದೆ ಇರಿಸಿಕೊಳ್ಳಿ. ಭುಜಗಳನ್ನು ನಿರಾಳವಾಗಿ ಇರಿಸಿಕೊಳ್ಳಿ. ಕೂರುವ ಕುರ್ಚಿ ನಿಮ್ಮ ಎತ್ತರಕ್ಕೆ ಸರಿಯಾಗಿರಲಿ. ಮಲಗುವಾಗಲೂ ಸರಿಯಾಗ ಭಂಗಿಗಳು ಅಗತ್ಯ. ಬೆನ್ನು, ಕುತ್ತಿಗೆ ನೋವಿನ ಸಂದರ್ಭಗಳಲ್ಲಿ ಸೂಕ್ತ ಎತ್ತರದ ದಿಂಬುಗಳಿರಲಿ.

Pain pressure irritation in neck muscles Excessive Use Of Electronic Gadgets

ಸ್ಟ್ರೆಚ್‌ ಮಾಡಿ

ತಾಸುಗಟ್ಟಲೆ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳುವುದು ಅಥವಾ ನಿಲ್ಲುವುದು ಸರಿಯಲ್ಲ. ಇದರಿಂದ ಸ್ನಾಯುಗಳ ಮೇಲಿನ ಒತ್ತಡ ದ್ವಿಗುಣಗೊಳ್ಳುತ್ತದೆ. ಸದಾ ಒಂದೇ ಭಂಗಿಯಲ್ಲಿ ಕೂರುವ ಬದಲು ತಾಸಿಗೊಮ್ಮೆ ಕೆಲವು ನಿಮಿಷಗಳ ವಿರಾಮ ತೆಗೆದುಕೊಳ್ಳಿ. ಬೆನ್ನು, ಕುತ್ತಿಗೆ ಮತ್ತು ತೋಳುಗಳನ್ನು ಚೆನ್ನಾಗಿ ಸ್ಟ್ರೆಚ್‌ ಮಾಡಿ. ಇದರಿಂದ ನೋವು ಹೆಚ್ಚಾಗುವುದನ್ನು ತಡೆಯಬಹುದು.

ತೂಕ ಎತ್ತದಿರಿ

ದೇಹದಲ್ಲಿ ಯಾವುದೇ ಭಾಗದಲ್ಲಿ ನೋವಿದ್ದರೆ, ತೂಕ ಎತ್ತುವ ಸಾಹಸಕ್ಕೆ ಕೈ ಹಾಕಬೇಡಿ. ಹೀಗೆಂದರೆ ಜಿಮ್‌ಗೆ ಹೋಗಿ ತೂಕ ಎತ್ತುವವರಿಗೆ ಮಾತ್ರವೇ ಇದು ಅನ್ವಯಿಸುತ್ತದೆ ಎಂದು ಭಾವಿಸುವಂತಿಲ್ಲ. ಮನೆಯಲ್ಲೇ ಗ್ರೈಂಡರ್‌ ಎತ್ತುವುದು, ಮಂಚ, ಕುರ್ಚಿ-ಮೇಜುಗಳನ್ನು ಜರುಗಿಸುವುದು- ಇಂಥವೆಲ್ಲ ಬೆನ್ನು ಮತ್ತು ಕುತ್ತಿಗೆಯ ಮೇಲೆ ಒತ್ತಡ ಹೆಚ್ಚಿಸುತ್ತವೆ.

Water-Sleep-Exercise For Neck Pain

ದಿಂಬು

ಮಲಗುವಾಗ ಹಾಕುವ ದಿಂಬಿನ ಎತ್ತರದ ಬಗ್ಗೆ ಗಮನ ನೀಡಿ. ತೀರಾ ಎತ್ತರದ ದಿಂಬು ಮತ್ತು ದಿಂಬೇ ಇಲ್ಲದಿರುವುದು- ಈ ಎರಡೂ ವಿಷಯಗಳು ಕುತ್ತಿಗೆ ನೋವನ್ನು ಹೆಚ್ಚಿಸುತ್ತವೆ. ಮೆಮರಿ ಫೋಮ್‌ ದಿಂಬುಗಳು ಕುತ್ತಿಗೆ ನೋವಿನ ತೀವ್ರತೆಯನ್ನು ಗಣನೀಯವಾಗಿ ತಗ್ಗಿಸುತ್ತವೆ. ಖರೀದಿಸುವಾಗ ದುಬಾರಿ ಎನಿಸಿದರೂ, ನಿಮ್ಮ ಕುತ್ತಿಗೆಯ ಆರೋಗ್ಯಕ್ಕಾಗಿ ಇದೇನು ದೊಡ್ಡದೆನಿಸದು.

ಫಿಸಿಯೊಥೆರಪಿ

ಕುತ್ತಿಗೆ ನೋವಿಗೆ ಫಿಸಿಯೊಥೆರಪಿ ಉತ್ತಮ ಮದ್ದಾಗಬಲ್ಲದು. ಈ ಬಗ್ಗೆ ವೈದ್ಯರ ಸಲಹೆ ಕೇಳಿ ಮುಂದುವರಿಯುವುದು ಒಳ್ಳೆಯದು. ನೋವಿಗೆ ಕಾರಣವೇನೆಂದು ಪತ್ತೆ ಮಾಡಿ, ಅದಕ್ಕೆ ಸರಿ ಹೊಂದುವ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಜೊತೆಗೆ ವ್ಯಾಯಾಮ, ಮಸಾಜ್‌ ಮುಂತಾದವು ಬಿಗಿದ ಸ್ನಾಯುಗಳನ್ನು ಸಡಿಲ ಮಾಡುತ್ತದೆ.

Hot Pack For Neck Pain

ಬಿಸಿ-ತಣ್ಣಗಿನ ಪ್ಯಾಕ್‌

ಕುತ್ತಿಗೆಯ ಸ್ನಾಯುಗಳ ಬಿಗಿತ ಅಥವಾ ಉರಿಯೂತವನ್ನು ಶಮನ ಮಾಡುವುದಕ್ಕೆ ಬಿಸಿ ಇಲ್ಲವೇ ತಣ್ಣಗಿನ ಪ್ಯಾಕ್‌ಗಳು ಸಹಾಯ ಮಾಡುತ್ತವೆ. ಹೀಟಿಂಗ್‌ ಪ್ಯಾಡ್‌, ಬಿಸಿ ನೀರಿನ ಬಟ್ಟೆ ಮುಂತಾದವು ೧೫ ನಿಮಿಷಗಳ ಕುತ್ತಿಗೆಯ ಮೇಲಿದ್ದರೆ ಆರಾಮ ನೀಡಬಲ್ಲವು. ಪ್ರತಿಯಾಗಿ, ತಣ್ಣನೆಯ ಪ್ಯಾಡ್‌ ಅಥವಾ ತಣ್ಣೀರು ಬಟ್ಟೆಯೂ ಅನುಕೂಲವಾಗುತ್ತದೆ.

ಇದನ್ನೂ ಓದಿ: Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

ಒತ್ತಡ ನಿರ್ವಹಣೆ

ಇದು ಎಲ್ಲಕ್ಕಿಂತ ಅತ್ಯಂತ ಮಹತ್ವದ್ದು. ಯೋಗ, ಪ್ರಾಣಾಯಾಮ, ದೀರ್ಘ ಉಸಿರಾಟ, ಧ್ಯಾನ, ಸಂಗೀತ ಕೇಳುವುದು ಅಥವಾ ಇನ್ಯಾವುದೇ ರೀತಿಯ ಒತ್ತಡ ನಿರ್ವಹಣೆಯ ತಂತ್ರಗಳು ನೋವಿನಿಂದ ಮುಕ್ತಿ ನೀಡಬಲ್ಲವು.

Continue Reading
Advertisement
V. Sunil Kumar latest statemetn
ಬೆಂಗಳೂರು6 mins ago

V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

private hospitals heads and health department officers Meeting at vijayanagara DC office
ವಿಜಯನಗರ16 mins ago

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Ram Pothineni Double iSmart teaser with Sanjay Dutt
ಟಾಲಿವುಡ್18 mins ago

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Prajwal Revanna Case Deve Gowda lashes out at Bhavani
ರಾಜಕೀಯ19 mins ago

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Wedding men's jewel Fashion Artificial pearl necklace has entered
ಫ್ಯಾಷನ್19 mins ago

Wedding men’s jewel Fashion: ವೆಡ್ಡಿಂಗ್‌ ಮೆನ್ಸ್‌ ಜ್ಯುವೆಲರಿ ಫ್ಯಾಷನ್‌ಗೆ ಕಾಲಿಟ್ಟ ಆರ್ಟಿಫಿಶಿಯಲ್‌ ಪರ್ಲ್‌ ಹಾರ!

Team India Coach Applications
ಕ್ರೀಡೆ24 mins ago

Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಪಜೀತಿಗೆ ಸಿಲುಕಿದ ಬಿಸಿಸಿಐ

CAA
ದೇಶ29 mins ago

CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Kannada New Movie swapna mantapa shooting compleated
ಸ್ಯಾಂಡಲ್ ವುಡ್51 mins ago

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

ಫ್ಯಾಷನ್51 mins ago

Star saree fashion: ಯುವತಿಯರನ್ನು ಸೆಳೆಯುತ್ತಿದೆ ನಟಿ ಭಾವನಾ ರಾವ್‌ ಸ್ಯಾಟೀನ್‌ ಸಿಲ್ಕ್‌ ಸೀರೆ

Google
ವಿದೇಶ1 hour ago

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ12 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ22 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌