ಕರ್ನಾಟಕದ ಆರ್ಥಿಕತೆಯನ್ನು1 ಲಕ್ಷ ಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿ: ಸಿಎಂ ಬೊಮ್ಮಾಯಿ - Vistara News

ಪ್ರಮುಖ ಸುದ್ದಿ

ಕರ್ನಾಟಕದ ಆರ್ಥಿಕತೆಯನ್ನು1 ಲಕ್ಷ ಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿ: ಸಿಎಂ ಬೊಮ್ಮಾಯಿ

ವ್ಯಕ್ತಿಯೊಬ್ಬರಿಗೆ 75 ವರ್ಷ ಎನ್ನುವುದು ತಮ್ಮ ಜೀವನದ ಕೊನೆಯ ಹಂತ. ಆದರೆ ದೇಶವೊಂದಕ್ಕೆ ಇದು ಅತ್ಯಂತ ಯುವ ಸಮಯ. ಈ ಎಪ್ಪತ್ತೈದು ವರ್ಷಗಳಲ್ಲಿ ದೇಶ ಸಾಕಷ್ಟು ಏಳುಬೀಳುಗಳನ್ನು ಕಂಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

Sankalp se siddhi basavaraj bommai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶವನ್ನು 5 ಲಕ್ಷ ಕೋಟಿ ಡಾಲರ್‌ ಆರ್ಥಿಕ ಶಕ್ತಿಯಾಗಿಸುವ ಪ್ರಧಾನಿ ನರೇಂದ್ರ ಮೋದಿಯವರ ಗುರಿಯಲ್ಲಿ ಕರ್ನಾಟಕದಿಂದ 1 ಲಕ್ಷ ಕೋಟಿ ಡಾಲರ್‌ ಕೊಡುಗೆ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ಹಾಗೂ ಇಂಡಿಯಾ@75 ಫೌಂಡೇಷನ್‌ನಿಂದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಆಯೋಜಿಸಿದ್ದ 3ನೇ ಆವೃತ್ತಿಯ ʻಸಂಕಲ್ಪ್‌ ಸೆ ಸಿದ್ಧಿʼ ಕಾರ್ಯಕ್ರಮದಲ್ಲಿ ಮಾತನಾಡಿದರು.

ವ್ಯಕ್ತಿಯೊಬ್ಬರಿಗೆ 75 ವರ್ಷ ಎನ್ನುವುದು ತಮ್ಮ ಜೀವನದ ಕೊನೆಯ ಹಂತ. ಆದರೆ ದೇಶವೊಂದಕ್ಕೆ ಇದು ಅತ್ಯಂತ ಯುವ ಸಮಯ. ಈ ಎಪ್ಪತ್ತೈದು ವರ್ಷಗಳಲ್ಲಿ ದೇಶ ಸಾಕಷ್ಟು ಏಳುಬೀಳುಗಳನ್ನು ಕಂಡಿದೆ. ಅನೇಕ ಸಂತಸದ ಕ್ಷಣಗಳಿವೆ. ಪ್ರಜಾಪ್ರಭುತ್ವವನ್ನೇ ಸವಾಲಿಗೊಡ್ಡಿದ ಸಮಯಗಳನ್ನೂ ಕಂಡಿವೆ. ಈ ನಡುವೆ ನೀತಿಗಳಲ್ಲಿ ವೈಫಲ್ಯಗಳನ್ನೂ ಕಂಡಿದ್ದೇವೆ. ಆದರೆ ಈಗ ನಾವು ಮೇಕ್‌ ಇನ್‌ ಇಂಡಿಯಾ ನೀತಿ ಹೊಂದಿದ್ದೇವೆ. ನಮ್ಮ ದೇಶ ಮುಂದುವರಿಯಲು ಬೇಕಾಗಿರುವುದು ಸ್ವಯಂಸ್ಫೂರ್ತಿ. ಪ್ರಧಾನಮಂತ್ರಿಯವರು ಅಂತಹ ಸ್ಫೂರ್ತಿಯನ್ನು ನಮಗೆಲ್ಲ ನೀಡುತ್ತಿದ್ದಾರೆ ಎಂದರು.

ನಮಗೆ ದೂರದೃಷ್ಟಿಯುಳ್ಳ ನಾಯಕ, ಅದಕ್ಕೆ ತಕ್ಕಂತ ಸಿದ್ಧತೆ, ಜಾರಿಗೊಳಿಸುವ ನಾಯಕರು ಬೇಕಾಗಿದ್ದಾರೆ. ನಮ್ಮ ಬಳಿ ಈಗ ಪ್ರಧಾನಿ ನರೇಂದ್ರ ಮೋದಿಯವರಂತಹ ದೂರದೃಷ್ಟಿಯ ನಾಯಕ, ಉತ್ತಮ ನೀತಿ ಹಾಗೂ ಅಮಿತ್‌ ಷಾ ಅವರಂತಹ ನಾಯಕರು ಇದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ | ಭಾರತದ ಮೊಟ್ಟ ಮೊದಲ ಸ್ವದೇಶಿ ಸಮರ ನೌಕೆ ವಿಕ್ರಾಂತ್ ನೌಕಾಪಡೆಗೆ ಹಸ್ತಾಂತರ

ಮಹಾರಾಜರ ಕೊಡುಗೆಯೂ ಸೇರಿ ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಸದಾ ಮುಂಚೂಣಿಯಲ್ಲಿದೆ. ಹೀಗಾಗಿ ವಿಶ್ವದೆಲ್ಲೆಡೆಯಿಂದ ಇಲ್ಲಿ ಹೂಡಿಕೆ ಮಾಡಿದ್ದಾರೆ. ಕರ್ನಾಟಕದಲ್ಲೂ ಒಂದು ಸಮಯದಲ್ಲಿ ಪರ್ಮಿಟ್‌ ರಾಜ್‌ ಇತ್ತು. ಆದರೆ ಮುಂಬರುವ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ಕಂಡು, ಪಶ್ಚಿಮದ ದೇಶಗಳು ಪ್ರಬಲವಾಗಿದ್ದ ತಂತ್ರಜ್ಞಾನ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದೇವೆ. ಈಗ ವಿಶ್ವಪ್ರಸಿದ್ಧ 400 ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಹೊಂದಿದ್ದೇವೆ. ವಿಶ್ವದ ಯಾವುದೇ ನಗರ ಇಷ್ಟು ಕೇಂದ್ರಗಳನ್ನು ಹೊಂದಿಲ್ಲ ಎಂದು ಬೊಮ್ಮಾಯಿ ವಿವರಿಸಿದರು.

ಕರ್ನಾಟಕಕ್ಕೆ ಪ್ರಕೃತಿಯ ಆಶೀರ್ವಾದವಿದ್ದು, ಇಲ್ಲಿ 10 ಕೃಷಿ ಪರಿಸರವಿದೆ. ಹೆಚ್ಚಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳು ಇಲ್ಲಿ ನಡೆಯುತ್ತವೆ. ಕೃಷಿಯಲ್ಲಿ 1% ಬೆಳವಣಿಗೆಯು ಉತ್ಪಾದನಾ ಕ್ಷೇತ್ರದಲ್ಲಿ 4% ಹಾಗೂ 10% ಸೇವಾ ಕ್ಷೇತ್ರದ ಬೆಳವಣಿಗೆಗೆ ಕಾರಣವಾಗುತ್ತದೆ. ಹಾಗಾಗಿ, ಕೃಷಿ ಕ್ಷೇತ್ರವನ್ನು ಕೇವಲ ಆಹಾರ ಭದ್ರತೆ ದೃಷ್ಟಿಯಿಂದ ಮಾತ್ರ ನೋಡಬಾರದು. ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಗಮನ ಹರಿಸಬೇಕು. ಆರ್ಥಿಕತೆಯ ಅಡಿಪಾಯ ಎಂದರೆ ಹಣವಲ್ಲ, ಜನರು. ಜನರ ಅಗತ್ಯಗಳನ್ನು ಮೂಲವಾಗಿಸಿಕೊಂಡು ಯೋಜನೆಗಳನ್ನು ರೂಪಿಸಬೇಕು. 1 ಟ್ರಿಲಿಯನ್‌ ಡಾಲರ್‌ ಕೊಡುಗೆ ನೀಡುವ ಯೋಜನೆ ಹೊಂದಿದ್ದೇವೆ. ಇದಕ್ಕೆ ಎಲ್ಲ ನೀಲಿನಕ್ಷೆ ಸಿದ್ಧವಾಗಿದೆ, ಸದ್ಯದಲ್ಲೆ ಜಾರಿ ಆರಂಭಿಸಲಿದ್ದೇವೆ ಎಂದರು.

ದೇಶದಲ್ಲಿ ಶಾಂತಿ ಮೂಡಿದೆ: ಕೇಂದ್ರ ಸಚಿವ ರೆಡ್ಡಿ

ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಶಾಂತಿ ಮೂಡಿಸಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್‌ ರೆಡ್ಡಿ ತಿಳಿಸಿದರು. ಕೋಮು ಸಂಘರ್ಷಗಳು ತಗ್ಗಿವೆ. ಈಶಾನ್ಯ ರಾಜ್ಯಗಳಲ್ಲಿ 15-20 ದಿನಗಳವರೆಗೆ ಬಂದ್‌ ಆಗುತ್ತಿದ್ದ ದಿನಗಳು ಈಗ ಇಲ್ಲವಾಗಿವೆ. ಅಲ್ಲಿನ ಎಂಟು ರಾಜ್ಯ ಸರ್ಕಾರಗಳೊಂದಿಗೆ ಸಂಪರ್ಕ ಸಾಧಿಸಿ ಈಗ ರಸ್ತೆ, ಮೂಲಸೌಕರ್ಯ, ವೈದ್ಯಕೀಯ, ರಾಜಕೀಯ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಬೆಳವಣಿಗೆ ಕಾಣುತ್ತಿದ್ದೇವೆ ಎಂದರು.

ಅಟಲ್‌ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಸ್ವರ್ಣ ಚತುರ್ಭುಜ ಯೋಜನೆ ಮೂಲಕ ಹೈವೇಗಳ ಅಭಿವೃದ್ಧಿ ಆರಂಭವಾಗಿತ್ತು. ಆದರೆ ನಡುವೆ ಆಗಮಿಸಿದ ಸರ್ಕಾರದ ಸಮಯದಲ್ಲಿ ಈ ಯೋಜನೆ ನನೆಗುದಿಗೆ ಬಿದ್ದಿತು. ಈಗ ಮತ್ತೆ ದೇಶದಲ್ಲಿ ಅತ್ಯುತ್ತಮ ಹೈವೇಗಳು ಅಭಿವೃದ್ಧಿಯಾಗುತ್ತಿವೆ. ವಿಮಾನ ನಿಲ್ದಾಣಗಳ ಅಭಿವೃದ್ಧಿ ವೇಗ ಹೆಚ್ಚಾಗಿದೆ. ಮುಂದಿನ ನಾಲ್ಕು ವರ್ಷದಲ್ಲಿ 100 ವಿಮಾನ ನಿಲ್ದಾಣಗಳು ನಿರ್ಮಾಣವಾಗಲಿವೆ. ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ 100 ಹೆಲಿಪ್ಯಾಡ್‌ ನಿರ್ಮಾಣ ಆಗಲಿವೆ. ಅದೇ ರೀತಿ ರೈಲು, ಹಡಗು ಸಂಪರ್ಕದಲ್ಲೂ ಅನೇಕ ಯೋಜನೆಗಳು ಅನುಷ್ಠಾನವಾಗುತ್ತಿವೆ ಎಂದು ವಿವರಿಸಿದರು.

ದೇಶದ ವಿವಿಧೆಡೆಯೂ ಸರ್ಕಾರ ಹಾಗೂ ಕೈಗಾರಿಕಾ ಕ್ಷೇತ್ರದ ಸಹಭಾಗಿತ್ವದಿಂಧಾಗಿ ಅಭಿವೃದ್ಧಿ ಆಗುತ್ತಿದೆ. ಈಗಾಗಲೆ ಅನೇಕ ಕ್ಷೇತ್ರಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ಅನೇಕ ಕ್ಷೇತ್ರಗಳಲ್ಲಿ ಮೊದಲ ಸ್ಥಾನ ತಲುಪುವ ಮಾರ್ಗದಲ್ಲಿದ್ದೇವೆ. ವಿಶ್ವದಲ್ಲೇ ಅತಿ ಹೆಚ್ಚು ಹೂಡಿಕೆ ಆಕರ್ಷಿಸುವ ದೇಶವಾಗಿಸುವಲ್ಲಿ, ದೇಶವನ್ನು ವಿಶ್ವಗುರುವಾಗಿಸುವಲ್ಲಿ ಎಲ್ಲರೂ ಸಹಭಾಗಿತ್ವದಲ್ಲಿ ಪ್ರಯತ್ನ ನಡೆಸೋಣ ಎಂದರು.

ಕಿರ್ಲೋಸ್ಕರ್‌ ಸಂಸ್ಥೆಯ ವಿಕ್ರಂ ಕಿರ್ಲೋಸ್ಕರ್‌ ಮಾತನಾಡಿ, ಕೋವಿಡ್‌ ಸಮಯದಲ್ಲಿ ಪ್ರಧಾನಿ ಮೋದಿಯವರ ಮಾತು ಸಾಕಷ್ಟು ಉತ್ತೇಜನ ನೀಡಿತು. ಕೋವಿಡ್‌ ಸಮಯದಲ್ಲಿ, ಅಧಿಕಾರದಲ್ಲಿರುವವರಿಂದ ಸಾಮಾನ್ಯ ಜನರವರೆಗೂ ಎಲ್ಲರ ಸಹಭಾಗಿತ್ವದಿಂದಾಗಿ ಸುರಕ್ಷಿತವಾಗಿ ಹೊರಬರಲು ಕಾರಣರಾಗಿದ್ದಾರೆ ಎಂದು ಹೇಳಿದರು.

ಆರ್‌.ಪಿ. ಸಂಜೀವ್‌ ಗೋಯೆಂಕಾ ಗ್ರೂಪ್‌ನ ಸಂಜೀವ್‌ ಗೋಯೆಂಕಾ “”ಭಾರತದ ಸಾಮರ್ಥ್ಯವನ್ನು ಅರಿಯುವವರಲ್ಲಿ ಪ್ರಧಾನಿ ಮೋದಿಯವರು ಮುಂಚೂಣಿಯಲ್ಲಿದ್ದಾರೆ. ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಘೋಷಣೆ ಮೂಲಕ ದೇಶವನ್ನು ಮುನ್ನಡೆಸುತ್ತಿದ್ದಾರೆ. ಕೈಗಾರಿಕೆ ಹಾಗೂ ಎಲ್ಲರೂ ಸೇರಿ ಭಾರತವನ್ನು ಮುನ್ನಡೆಸೋಣ, ಹರ್‌ ಘರ್‌ ತಿರಂಗಾ ಅಭಿಯಾನದಲ್ಲೂ ನಾವು ಭಾಗಿಯಾಗುತ್ತಿದ್ದೇವೆʼʼ ಎಂದರು.

ಬಜಾಜ್‌ ಫೈನಾನ್ಸ್‌ನ ಸಂಜೀವ್‌ ಬಜಾಜ್‌ ಮಾತನಾಡಿ “”ಕೊರೊನಾ ಸಮಯದಲ್ಲಿ ಎದುರಾದ ಸಂಕಷ್ಟಗಳು ನಮಗೆ ಅನೇಕ ಅವಕಾಶಗಳನ್ನು ಕಲ್ಪಿಸಿಕೊಟ್ಟಿವೆ. ಇದಕ್ಕಾಗಿ ನಾವು ನಮ್ಮ ಉತ್ಪಾದನೆಯನ್ನು ನಾಲ್ಕೈದು ಪಟ್ಟು ಹೆಚ್ಚಳ ಮಾಡಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶಕ್ಕೆ ಹೊಸ ಗುರಿಯನ್ನು ನಿಗದಿಪಡಿಸುತ್ತಿರುವುದು ಸಂತಸವಾಗುತ್ತಿದೆ. ಮುಂದಿನ ಇಪ್ಪತ್ತೈದು ವರ್ಷದಲ್ಲಿ ಕನಿಷ್ಠ 8-10% ಜಿಡಿಪಿ ಬೆಳವಣಿಗೆ ಆಗಲೇಬೇಕಿದೆ. ಅಮೆರಿಕ ಹಾಗೂ ಚೀನಾ ಜತೆಗೂಡಿದಕ್ಕಿಂತಲೂ ಹೆಚ್ಚಿನ ಪ್ರಮಾಣದ ಆನ್‌ಲೈನ್‌ ವಹಿವಾಟನ್ನು ಭಾರತ ನಡೆಸುತ್ತಿದೆ. ಭಾರತದಲ್ಲಿ ಹೆಚ್ಚೆಚ್ಚು ಜನರನ್ನು ಔಪಚಾರಿಕ ಆರ್ಥಿಕ ವ್ಯಾಪ್ತಿಗೆ ತರಲು ತಂತ್ರಜ್ಞಾನ ಸಹಾಯ ಮಾಡಲಿದೆʼʼ ಎಂದರು.

ಇದನ್ನೂ ಓದಿ | Modi Rally : ತೆಲಂಗಾಣ ಮಂದಿಗೆ ಡಬಲ್‌ ಎಂಜಿನ್‌ ಅಭಿವೃದ್ಧಿ ಹಂಬಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ಹಿಂದುಗಳಿಗೆ ಅವಮಾನ ಖಂಡಿಸಿ ದೇಗುಲದ ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಫೋಟೊ; ಇಲ್ಲಿದೆ Video

Rahul Gandhi: ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ದೇವಾಲಯವೊಂದರ ಆಡಳಿತ ಮಂಡಳಿಯು ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಿದೆ. ದೇಗುಲಕ್ಕೆ ತೆರಳುವ ಭಕ್ತರು ರಾಹುಲ್‌ ಗಾಂಧಿ ಅವರ ಫೋಟೊ ಇರುವ ಡೋರ್‌ಮ್ಯಾಟ್‌ಅನ್ನು ತುಳಿದುಕೊಂಡು ಹೋಗುತ್ತಿರುವ ವಿಡಿಯೊ ಲಭ್ಯವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ.

VISTARANEWS.COM


on

Rahul Gandhi
Koo

ಮುಂಬೈ: ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ (Rahul Gandhi) ಅವರು ಹಿಂದುಗಳ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೂಡ ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ಹಿಂದುಗಳ ಕುರಿತು ರಾಹುಲ್‌ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದ ದೇಗುಲದ (Maharashtra Temple) ಡೋರ್‌ ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಲಾಗಿದೆ. ಈ ವಿಡಿಯೊ (Viral Video) ಈಗ ವೈರಲ್‌ ಆಗಿದೆ.

ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ದೇವಾಲಯದ ಆಡಳಿತ ಮಂಡಳಿಯು ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಿದೆ. ದೇಗುಲಕ್ಕೆ ತೆರಳುವ ಭಕ್ತರು ರಾಹುಲ್‌ ಗಾಂಧಿ ಅವರ ಫೋಟೊ ಇರುವ ಡೋರ್‌ಮ್ಯಾಟ್‌ಅನ್ನು ತುಳಿದುಕೊಂಡು ಹೋಗುತ್ತಿರುವ ವಿಡಿಯೊ ಲಭ್ಯವಾಗಿದೆ. ಅಷ್ಟೇ ಅಲ್ಲ, ಡೋರ್‌ ಮ್ಯಾಟ್‌ ಮೇಲೆ, “ಹಿಂದುಗಳನ್ನು ಹಿಂಸಾವಾದಿಗಳು ಎಂಬುದಾಗಿ ಕರೆಯಲು ನಿಮಗೆ ಎಷ್ಟು ಧೈರ್ಯ” ಎಂದು ಕೂಡ ಬರೆಯಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಪರ-ವಿರೋಧ ಚರ್ಚೆಯಾಗುತ್ತಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

“ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ” ಎಂದು ರಾಹುಲ್‌ ಗಾಂಧಿ ಸಂಸತ್‌ನಲ್ಲಿ ಜುಲೈ 1ರಂದು ಹೇಳಿದ್ದರು.

ಮೋದಿ ತಿರುಗೇಟು ಕೊಟ್ಟಿದ್ದರು

ರಾಹುಲ್‌ ಗಾಂಧಿ ಹೇಳಿಕೆಗೆ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿಯೇ ತಿರುಗೇಟು ಕೊಟ್ಟಿದ್ದರು. “ಸ್ವಾಮಿ ವಿವೇಕಾನಂದರು ಯಾವ ಧರ್ಮದ ಕುರಿತು ಅಭಿಮಾನದಿಂದ ಹೇಳಿದ್ದರೋ, ಯಾವ ಧರ್ಮದ ಮಹತ್ವ, ಸಹಿಷ್ಣುತೆಯನ್ನು ಜಗತ್ತಿಗೇ ತಿಳಿಸಿದ್ದರೋ, ಅದೇ ಧರ್ಮದವರು ನಾವು. ಹಿಂದು ಧರ್ಮವು ಎಂದಿಗೂ ದ್ವೇಷ, ಹಿಂಸೆಯನ್ನು ಪ್ರಚೋದಿಸಿಲ್ಲ. ಬಿಜೆಪಿಯು ಇಂತಹ ಧರ್ಮದಲ್ಲಿ ನಂಬಿಕೆ ಇರಿಸಿದ್ದು, ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್‌ ಹಿಂದುಗಳನ್ನು ಅವಮಾನಿಸುತ್ತಿದೆ. ಹಿಂದುಗಳು ಕಾಂಗ್ರೆಸ್‌ನ ಈ ಷಡ್ಯಂತ್ರವನ್ನು ತಿಳಿಯಬೇಕು. ದೇಶದಲ್ಲಿ ಹಿಂದುಗಳು ಕಾಂಗ್ರೆಸ್‌ ಬಗ್ಗೆ ಎಚ್ಚರದಿಂದ ಇರಬೇಕು” ಎಂದು ಹೇಳಿದ್ದರು.

“ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರು ಸುಳ್ಳುಗಳನ್ನು ಹರಡಿಸುತ್ತಿದ್ದಾರೆ. ಹಿಂದುಗಳು ಹಿಂಸಾವಾದಿಗಳು ಎಂದು ಹೇಳುವ ಮೂಲಕ ಪ್ರಚೋದನೆ ನೀಡುತ್ತಿದೆ. ಇದು ಕಾಂಗ್ರೆಸ್‌ ಹಾಗೂ ಕಾಂಗ್ರೆಸ್‌ ನಾಯಕನ ಸಂಸ್ಕೃತಿ, ಇದು ನಿಮ್ಮ ವ್ಯಕ್ತಿತ್ವ, ಇವು ನಿಮ್ಮ ಕೆಟ್ಟ ವಿಚಾರಗಳು, ಹಿಂದುಗಳ ಮೇಲೆ ನೀವು ಹೊಂದಿರುವ ದ್ವೇಷ, ನಿಮ್ಮ ಚಟುವಟಿಕೆಗಳು ಹಿಂದುಗಳ ವಿರೋಧಿಯಾಗಿವೆ. ಇದನ್ನು ಹಿಂದುಗಳು ಗಮನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading

ದೇಶ

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

NEET UG 2024: ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ಸೇರಿ ಹಲವು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನೀಟ್ ಯುಜಿ 2024 (NEET-UG 2024)ರ ಕೌನ್ಸೆಲಿಂಗ್ ಅನ್ನು ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ. ಇದರಿಂದ ಜುಲೈ 6 ಪ್ರಾರಂಭವಾಗಬೇಕಿದ್ದ ನೀಟ್ ಯುಜಿ ಅಖಿಲ ಭಾರತ ಕೋಟಾ (AIQ) ಸೀಟು ಕೌನ್ಸೆಲಿಂಗ್ ವಿಳಂಬವಾಗಿದೆ. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದ್ದು, ಅಕ್ರಮ ನಡೆದಿರುವುದು ಢಾಳಾಗಿದೆ ಎಂದು ತಿಳಿಸಿದೆ.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು (Supreme Court), ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ. ಜುಲೈ 11ರಂದು ಅಂತಿಮ ವಿಚಾರಣೆ ನಡೆಯಲಿದ್ದು, ಅಂದಿನ ತೀರ್ಪು ಮಹತ್ವ ಪಡೆದಿದೆ.

ಹಾಗೆಯೇ, ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಹಾಗೂ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಸಿಜೆಐ ಚಂದ್ರಚೂಡ್‌ ಅವರಿದ್ದ ನ್ಯಾಯಪೀಠವು ತಿಳಿಸಿತು. ಹಾಗೆಯೇ, ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮದ ಕುರಿತಂತೆ ಮಹತ್ವದ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೀಟ್‌ ಮೂರು ನಿರ್ದೇಶನಗಳನ್ನು ನೀಡಿದೆ. ಹಾಗೆಯೇ, ತನಿಖೆಯ ವರದಿ ನೀಡಬೇಕು ಎಂಬುದಾಗಿ ಸಿಬಿಐಗೂ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನಿರ್ದೇಶನಗಳು

  1. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಯಾವಾಗ ಎಂಬುದರ ಮಾಹಿತಿ ಕೊಡಿ
  2. ಯಾವ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬುದರ ಮಾಹಿತಿ ಪ್ರತ್ಯೇಕವಾಗಿ ಇರಲಿ
  3. ಪ್ರಶ್ನೆಪತ್ರಿಕೆ ಸೋರಿಕೆಯಾದ ದಿನ ಹಾಗೂ ಪರೀಕ್ಷೆ ನಡೆದ ದಿನದ ನಡುವೆ ಎಷ್ಟು ಸಮಯದ ಅಂತರವಿತ್ತು ಎಂಬುದರ ಮಾಹಿತಿ ಕೊಡಿ

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಹೇಳಿದ್ದಿಷ್ಟು…

  1. ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ
  2. ಅಕ್ರಮ ನಡೆದಿರುವುದು ನೋಡಿದರೆ ನೀಟ್‌ ಪರೀಕ್ಷೆಯ ಘನತೆ, ಮೌಲ್ಯಕ್ಕೆ ಧಕ್ಕೆಯಾಗಿದೆ
  3. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ನಮಗೆ ಎನ್‌ಟಿಎ ಹಾಗೂ ಸಿಬಿಐ ನಿಖರ ಮಾಹಿತಿ ನೀಡಬೇಕು
  4. ಹಾಗೊಂದು ವೇಳೆ, ಅಕ್ರಮ ಎಸಗಿದವರು ಯಾರೆಂಬುದು ಗೊತ್ತಾಗದಿದ್ದರೆ ಮರು ಪರೀಕ್ಷೆ ನಿಶ್ಚಿತ

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

Continue Reading

ಕರ್ನಾಟಕ

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

OPS News: ಅರ್ಹ ನೌಕರರನ್ನು ಖಚಿತಪಡಿಸಿಕೊಂಡು ಜುಲೈ 31ರೊಳಗೆ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ (ಒಪಿಎಸ್‌) ಒಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಥಿಕ ಇಲಾಖೆ ಸೂಚಿಸಿದೆ.

VISTARANEWS.COM


on

OPS News
Koo

ಬೆಂಗಳೂರು: ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (Old Pension Scheme) ಮರು ಜಾರಿ ಮಾಡಬೇಕು ಎಂದು ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬಂದಿರುವ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 2006ಕ್ಕೂ ಮುನ್ನ ನೇಮಕಾತಿಯಾದ ನೌಕರರನ್ನು ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ(ಒಪಿಎಸ್‌) ಒಳಪಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅರುಳ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ. ಅರ್ಹ ನೌಕರರನ್ನು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

2006ರ ಏಪ್ರಿಲ್‌ 1ಕ್ಕೂ ಮೊದಲು ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ, 006ರ ಏಪ್ರಿಲ್‌ 1ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ-ಎನ್‌ಪಿಎಸ್‌) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ(OPS) ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

ಈ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ ಜೂನ್ 30‌ ಆಗಿತ್ತು. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ಆಗಸ್ಟ್‌ 31ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸಬೇಕು.

ಇದನ್ನೂ ಓದಿ | CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

ಆದರೆ, ಪ್ರಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸು ಮಾಡದೇ, ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸದೇ, ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ, 2024ರ ಜ.1ರ ಆದೇಶದನ್ವಯ ಎನ್.ಪಿ.ಎಸ್.ನಿಂದ ಒಪಿಎಸ್‌ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ನೌಕರರುಗಳ ಕ್ರೋಡೀಕೃತ ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ಆಗಸ್ಟ್‌ 31ರೊಳಗೆ ಸಲ್ಲಿಸುವಂತೆ ಕೋರಿದ್ದಾರೆ.

Continue Reading

Latest

First Night Video: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

First Night Video: ಮೊದಲ ರಾತ್ರಿ ಈ ಪದ ಕೇಳುತ್ತಲೇ ಕೆಲವರ ಕೆನ್ನೆ ಕೆಂಪಾಗುತ್ತದೆ. ನಾಚಿಕೆಯಾಗುವುದು ಸಾಮಾನ್ಯ. ಆದರೆ ಈ ದಂಪತಿ ತಮ್ಮ ಮೊದಲ ರಾತ್ರಿಯ ವಿಡಿಯೊವನ್ನು ಯಾವುದೇ ನಾಚಿಕೆ ಇಲ್ಲದೇ ತೋರಿಸಿದ್ದಾರೆ. ತಾವು ಮಲಗುವ ಕೋಣೆ, ಹಾಸಿಗೆ ಇವೆಲ್ಲದರ ವಿಡಿಯೊ ತೋರಿಸುವುದರ ಜೊತೆಗೆ ವಧುವಿನ ಬಳಿ ಮೊದಲ ರಾತ್ರಿಯ ಅನುಭವದ ಬಗ್ಗೆ ವರನು ಪ್ರಶ್ನೆ ಕೇಳಿದ್ದಾನೆ. ನೆಟ್ಟಿಗರು ಮಾತ್ರ ಇವರಿಬ್ಬರ ವಿಡಿಯೊ ನೋಡಿ ಹೌಹಾರಿದ್ದಾರೆ!

VISTARANEWS.COM


on

First Night Video
Koo

ಹೊಸದಾಗಿ ಮದುವೆಯಾದ ದಂಪತಿಗೆ ತಮ್ಮ ಹೊಸ ಜೀವನ ಶುರುಮಾಡಲು ಮೊದಲ ರಾತ್ರಿಯನ್ನು ಏರ್ಪಡಿಸುವುದು ಸಂಪ್ರದಾಯ. ಈ ದಿನ ಅವರು ಮಲಗುವ ಕೋಣೆಯನ್ನು ಸುಗಂಧ ದ್ರವ್ಯಗಳಿಂದ, ಹೂಗಳು, ಹಣ್ಣುಗಳಿಂದ ಅಲಂಕರಿಸುವುದು ಸಹಜ. ಸಾಮಾನ್ಯವಾಗಿ ದಂಪತಿ ತಮ್ಮ ಮೊದಲ ರಾತ್ರಿಯ ಅನುಭವವನ್ನು ಹಂಚಿಕೊಳ್ಳಲು ಮುಜುಗರಪಡುತ್ತಾರೆ. ಕೆಲವರು ಸೂಚ್ಯವಾಗಿ ತಮ್ಮ ಅನುಭವವನ್ನು ಆತ್ಮೀಯರಲ್ಲಿ ಹಂಚಿಕೊಂಡಿರಬಹುದು. ಆದರೆ ಯಾರೂ ಆ ರಾತ್ರಿ ಕಳೆದ ಕ್ಷಣವನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಿಲ್ಲ. ಅಂತಹದರಲ್ಲಿ ಇಲ್ಲಿ ಒಂದು ದಂಪತಿ ತಮ್ಮ ಮೊದಲ ರಾತ್ರಿಯ (First Night Video) ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದು ವೈರಲ್ ಆಗಿದೆ. ಸಾಕಷ್ಟು ಟೀಕೆಗಳಿಗೆ ಕಾರಣವಾಗಿದೆ.

ಈ ವೈರಲ್ ಆಗಿರುವ ವೀಡಿಯೊದಲ್ಲಿ, ದಂಪತಿ ತಮ್ಮ ವಿವಾಹ ಸಮಾರಂಭದ ನಂತರದ ಕ್ಷಣಗಳ ಬಗ್ಗೆ ತಮ್ಮ ಅನುಭವವನ್ನು ಚರ್ಚಿಸುತ್ತಿರುವುದನ್ನು ತೋರಿಸುತ್ತದೆ. ದಂಪತಿ ಅವರ ಮಲಗುವ ಕೋಣೆಯ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಇದರಲ್ಲಿ ವರನು ವಧುವನ್ನು ಆಕೆಯ ‘ಮೊದಲ ರಾತ್ರಿಯ’ ಅನುಭವದ ಬಗ್ಗೆ ಕೇಳುತ್ತಾನೆ. ಆಕೆ ಅದು ಇನ್ನೂ ನಡೆದಿಲ್ಲ ಎಂದು ಉತ್ತರಿಸಿದ್ದಾಳೆ. ನಂತರ ದಂಪತಿ ತಮ್ಮ ಮಲಗುವ ಕೋಣೆಯ ಅಲಂಕಾರಗಳನ್ನು ಪ್ರದರ್ಶನ ಮಾಡಿದ್ದಾರೆ.

ಈ ವಿಡಿಯೊವನ್ನು ಸುನಂದಾ ರಾಯ್ ಅವರು ಇದನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಈ ವೀಡಿಯೊ ನೆಟ್ಟಿಗರಿಂದ ಟೀಕೆಗೆ ಒಳಗಾಗಿದೆ. ಅನೇಕರು ಇವರ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಇವರು ತಮ್ಮ ಗಡಿಗಳನ್ನು ದಾಟಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಈ ಬಗ್ಗೆ ಅಪನಂಬಿಕೆಯನ್ನು ವ್ಯಕ್ತಪಡಿಸಿ, ಕೇವಲ ಹಣಕ್ಕಾಗಿ, ಜನರು ಈಗ ತಮ್ಮ ವೈಯಕ್ತಿಕ ಜೀವನವನ್ನು ಮಾರಾಟ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದರು.ಇನ್ನೊಬ್ಬರು, ಅವರು ಮದುವೆಯ ರಾತ್ರಿ ಹಾಸಿಗೆಯನ್ನು ತೋರಿಸುತ್ತಿದ್ದಾರೆ, ಆಗ ನೋಡಲು ಇನ್ನೇನು ಉಳಿದಿದೆ? ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕದ್ದುಮುಚ್ಚಿ ಸರಸವಾಡುತ್ತಿದ್ದ ಮಹಿಳೆ ಸಿಕ್ಕಿಬಿದ್ದಾಗ ಗಂಡನನ್ನೇ ಕೊಂದಳು!

ಇಂತಹ ನಾಚಿಕೆಗೇಡಿನ ಕೆಲಸಗಳು ಇತ್ತೀಚಿನ ದಿನಗಳಲ್ಲಿ ಸರ್ವೇಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ಸೋಶಿಯಲ್ ಮೀಡಿಯಾದಲ್ಲಿ ಇಂತಹ ಘಟನೆಗಳನ್ನು ಒಂದಲ್ಲ ಒಂದು ಪೋಸ್ಟ್ ಆಗುತ್ತಿರುತ್ತದೆ. ಅದೇರೀತಿ ಈ ವರ್ಷದ ಜನವರಿಯಲ್ಲಿ ಅಮೆರಿಕದ ನ್ಯೂಯಾರ್ಕ್‍ನಲ್ಲಿ ದಂಪತಿ ಸಾರ್ವಜನಿಕ ಉದ್ಯಾನವನದಲ್ಲಿ ಲೈಂಗಿಕ ಕೃತ್ಯದಲ್ಲಿ ತೊಡಗಿರುವುದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾ ಬಳಕೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ತೆರೆದ ಪ್ರದೇಶದಲ್ಲಿ ದಂಪತಿಯ ಕೃತ್ಯವನ್ನು ಹಲವಾರು ಜನರು ಟೀಕಿಸಿದ್ದರು.

Continue Reading
Advertisement
Dengue Cases
ರಾಜಕೀಯ11 seconds ago

Dengue Cases: ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ನೀರಿನ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

Mahanati Show bindu honnali not selected
ಕಿರುತೆರೆ5 mins ago

Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

PGET 2024 Online application for PGET can be submitted till July 10
ಶಿಕ್ಷಣ26 mins ago

PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

Suryakumar Yadav
ಕ್ರೀಡೆ28 mins ago

Suryakumar Yadav: 8 ವರ್ಷಗಳ ಹಿಂದೆಯೇ ಅದ್ಭುತ ಕ್ಯಾಚ್​ ಹಿಡಿದೆ ಎಂದು ವಿವಾಹ ವಾರ್ಷಿಕೋತ್ಸವ ಆಚರಿಸಿದ ಸೂರ್ಯಕುಮಾರ್

Rahul Gandhi
ದೇಶ33 mins ago

Rahul Gandhi: ಹಿಂದುಗಳಿಗೆ ಅವಮಾನ ಖಂಡಿಸಿ ದೇಗುಲದ ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಫೋಟೊ; ಇಲ್ಲಿದೆ Video

Manvita Kamath Honeymoon in baali
ಸ್ಯಾಂಡಲ್ ವುಡ್40 mins ago

Manvita Kamath: ಪತಿ ಅರುಣ್ ಜತೆ ಬಾಲಿಯಲ್ಲಿ ಸಖತ್‌ ಎಂಜಾಯ್‌ ಮಾಡುತ್ತಿರುವ ಮಾನ್ವಿತಾ ಕಾಮತ್!

NEET UG 2024
ದೇಶ52 mins ago

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

OPS News
ಕರ್ನಾಟಕ52 mins ago

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಕ್ರೀಡೆ1 hour ago

Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

First Night Video
Latest1 hour ago

First Night Video: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ2 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು6 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ21 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ24 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಟ್ರೆಂಡಿಂಗ್‌