ಅಮೃತ ಮಹೋತ್ಸವ | 750 ಬಾಲಕಿಯರು ಸಿದ್ಧಪಡಿಸಿದ ಪೇಲೋಡ್‌‌, ತ್ರಿವರ್ಣಧ್ವಜ ಬಾಹ್ಯಾಕಾಶಕ್ಕೆ - Vistara News

ತಂತ್ರಜ್ಞಾನ

ಅಮೃತ ಮಹೋತ್ಸವ | 750 ಬಾಲಕಿಯರು ಸಿದ್ಧಪಡಿಸಿದ ಪೇಲೋಡ್‌‌, ತ್ರಿವರ್ಣಧ್ವಜ ಬಾಹ್ಯಾಕಾಶಕ್ಕೆ

ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಸಿದ್ಧವಾಗಿದೆ. ಇದರಲ್ಲಿ ದೇಶದ ಗ್ರಾಮೀಣ ಬಾಲಕಿಯರೂ ಸೇರಿರುವುದು ವಿಶೇಷ.

VISTARANEWS.COM


on

isro
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಸಿದ್ಧಪಡಿಸಿರುವ ಅತಿ ಸಣ್ಣ ವಾಣಿಜ್ಯ ರಾಕೆಟ್‌ ನಭ ಸೇರಲಿದ್ದು, ಅಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸಲಿದೆ. ಆಗಸ್ಟ್‌ 7ರಂದು ಈ ಅತಿ ಸಣ್ಣ ರಾಕೆಟ್‌ (Small Satellite Launch Vehicle (SSLV) ಅನ್ನು ಹಾರಿಬಿಡಲಾಗುತ್ತಿದೆ. ಇದರ ವಿಶೇಷತೆ ಏನೆಂದರೆ 75 ಗ್ರಾಮೀಣ ಸರಕಾರಿ ಶಾಲೆಗಳ 750 ವಿದ್ಯಾರ್ಥಿನಿಯರು ತಯಾರಿಸಿದ 75 ಪೇಲೋಡ್‌ಗಳನ್ನು ಇದರಲ್ಲಿ ಹಾರಿಬಿಡಲಾಗುವ ಉಪಗ್ರಹ ಹೊತ್ತಿರುತ್ತದೆ.

2018ರ ಆಗಸ್ಟ್‌ 15ರಂದು ಕೆಂಪುಕೋಟೆಯ ಮೇಲಿನಿಂದ ಮಾತಾಡುತ್ತಾ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಬಾಹ್ಯಾಕಾಶದಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸಲಾಗುತ್ತದೆ ಎಂದಿದ್ದರು. ಅವರ ಆಶಯವನ್ನು ನಿಜಗೊಳಿಸಲು ಇಸ್ರೋ ಶ್ರಮಿಸಿದೆ. ಎಸ್‌ಎಸ್‌ಎಸ್‌ಎಲ್‌ವಿಯ ಮೂಲಕ AzaadiSAT ಎಂಬ ಉಪಗ್ರಹವನ್ನೂ ಉಡಾಯಿಸಲಾಗುತ್ತಿದೆ. ಅದರಲ್ಲಿ ದೇಶದ 75 ಗ್ರಾಮೀಣ ಸರಕಾರಿ ಶಾಲೆಗಳ 750 ವಿದ್ಯಾರ್ಥಿನಿಯರು ಸಿದ್ಧಪಡಿಸಿದ 75 ಪೇಲೋಡ್‌ಗಳು ಇರುವುದು ವಿಶೇಷ. ಹೆಣ್ಣುಮಕ್ಕಳಲ್ಲಿ ವೈಜ್ಞಾನಿಜ ಹುಮ್ಮಸ್ಸು ಮೂಡಿಸಲು, ಬಾಹ್ಯಾಕಾಶ ವಿಜ್ಞಾನವನ್ನು ಗಂಭೀರವಾಗಿ ಪರಿಗಣಿಸುವಂತೆ ಮಾಡಲು ಈ ಉಪಕ್ರಮವನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: ರಾಕೆಟ್‌ ಉಡಾಯಿಸುವಷ್ಟು ಶಕ್ತಿಶಾಲಿ ಜೈವಿಕ ಇಂಧನ ಬ್ಯಾಕ್ಟೀರಿಯಾದಿಂದ ಸೃಷ್ಟಿ

SSLVಯು 120 ಟನ್‌ ತೂಕವಿದ್ದು, 500 ಕಿಲೋ ಭಾರವನ್ನು ಹೊರಬಲ್ಲುದು. ಇದರ ಎತ್ತರ 34 ಮೀಟರ್.‌

ಸಣ್ಣ ಉಪಗ್ರಹ ಉಡಾವಣೆ ರಾಕೆಟ್‌ಗಳು ಭವಿಷ್ಯದಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪಾತ್ರ ವಹಿಸಲಿವೆ. ಅಲ್ಪವೆಚ್ಚದ ಈ ವೆಹಿಕಲ್‌ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಸಿದ್ಧಪಡಿಸುವ ಸಾಮರ್ಥ್ಯವನ್ನು ಭಾರತ ಹೊಂದಿದ್ದು, ಈ ಮೂಲಕ ಜಾಗತಿಕ ಮಾರುಕಟ್ಟೆಯಲ್ಲಿ ಈ ವಲಯದಲ್ಲಿ ಮುನ್ನಡೆಯಲಿದೆ ಎಂದು ಇಸ್ರೋ ಚೇರ್‌ಮನ್‌ ಎಸ್.ಸೋಮನಾಥ್ ಅವರು ಹೇಳಿದ್ದಾರೆ.

ಈ ರಾಕೆಟ್‌ ಸಾಗಿಸುವ ಪೇಲೋಡ್‌ಗಳನ್ನು ಇಸ್ರೋದ ವಿದ್ಯಾರ್ಥಿ ತಂಡ Space Kidz India ಸಿದ್ಧಪಡಿಸಿದೆ. ಮೊದಲ ಬಾರಿಗೆ ಹೆಣ್ಣುಮಕ್ಕಳೇ ತಯಾರಿಸಿರುವ ಈ ಪೇಲೋಡ್‌ ತಯಾರಿಕೆಯ ಹಿಂದೆ, ಮಹಿಳೆಯರನ್ನು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌, ಗಣಿತ ವಲಯಗಳಲ್ಲಿ (STEM) ಇನ್ನಷ್ಟು ಒಳಗೊಳ್ಳುವ ಉಪಕ್ರಮವಿದೆ. ಹಾಗೂ ಈ ವರ್ಷದ ವಿಶ್ವಸಂಸ್ಥೆಯ ಥೀಮ್‌ ಕೂಡ ʼಬಾಹ್ಯಾಕಾಶದಲ್ಲಿ ಮಹಿಳೆಯರುʼ ಆಗಿದೆ.

ಇದನ್ನೂ ಓದಿ: ವಿಸ್ತಾರ Explainer: ʼನಂಬಿʼ ಕೆಟ್ಟವರಲ್ಲ! ದೇಶ ಪ್ರೇಮಿ ವಿಜ್ಞಾನಿ ದೇಶ ದ್ರೋಹಿ ಆಗಿದ್ದು ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Zomato: ಜೊಮ್ಯಾಟೊ ಹೊಸ ತಂತ್ರಜ್ಞಾನ; ಮನೆ ಹೊರಗೆ ಕಾಲಿಡುವ ಮುನ್ನ ಇದನ್ನು ನೋಡಲೇಬೇಕು!

Zomato: ಜೊಮ್ಯಾಟೊದ ಹೊಸ ವೆಬ್‌ಸೈಟ್‌ ಎಲ್ಲರಿಗೂ ಉಚಿತವಾಗಿ ಲಭ್ಯವಿದೆ. ಜೊಮ್ಯಾಟೊ ಫುಡ್‌ ಡೆಲಿವರಿ ಅಗ್ರಿಗೇಟರ್‌ ಆಗಿದ್ದು, ಇಂತಹ ಅಗ್ರಿಗೇಟರ್‌ಗಳು ದೇಶಾದ್ಯಂತ ಜೊಮ್ಯಾಟೊದ ವೆಬ್‌ಸೈಟ್‌ ಮೂಲಕ ಹವಾಮಾನದ ಕುರಿತ ಮಾಹಿತಿಯನ್ನು ಅರಿತುಕೊಂಡು, ತಮ್ಮ ವ್ಯಾಪಾರ, ಡೆಲಿವರಿ ಮುಂದುವರಿಸಲು ಭಾರಿ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

VISTARANEWS.COM


on

Zomato
Koo

ನವದೆಹಲಿ: ಆನ್‌ಲೈನ್‌ ಮೂಲಕ ಆಹಾರ ಪೂರೈಕೆ ಮಾಡುವಲ್ಲಿ ದೇಶಾದ್ಯಂತ ಖ್ಯಾತಿಯಾಗಿರುವ ಜೊಮ್ಯಾಟೊ ಕಂಪನಿ ಈಗ ಹೊಸ ಸಾಹಸಕ್ಕೆ ಮುಂದಾಗಿದೆ. ಹೌದು, ಹವಾಮಾನದ ಕುರಿತು ನಿಖರ ಮಾಹಿತಿ ನೀಡುವ, ದೇಶದ ಮೊದಲ ಕ್ರೌಡ್‌-ಸಪೋರ್ಟೆಡ್‌ ವೆದರ್‌ ಇನ್‌ಫ್ರಾಸ್ಟ್ರಕ್ಚರ್‌ಗೆ (First Crowd-Supported Weather Infrastructure) ಜೊಮ್ಯಾಟೊ (Zomato) ಸಿಇಒ ದೀಪಿಂದರ್‌ ಗೋಯಲ್‌ (Deepinder Goyal) ಚಾಲನೆ ನೀಡಿದ್ದಾರೆ. ಇದರಿಂದ ದೇಶದ ಪ್ರಮುಖ ನಗರಗಳ ಹವಾಮಾನವನ್ನು ಪರಿಶೀಲನೆ ಮಾಡಬಹುದಾಗಿದೆ.

ವೆದರ್‌ಯುನಿಯನ್.ಕಾಮ್‌ (ಇಲ್ಲಿ ಕ್ಲಿಕ್‌ ಮಾಡಿ-Weatherunion.com) ಎಂಬ ವೆಬ್‌ಸೈಟ್‌ಗೆ ದೀಪಿಂದರ್‌ ಗೋಯಲ್‌ ಬುಧವಾರ (ಮೇ 8) ಚಾಲನೆ ನೀಡಿದ್ದಾರೆ. ದೇಶಾದ್ಯಂತ 650 ಹವಾಮಾನ ಸ್ಟೇಷನ್‌ಗಳನ್ನು ಸ್ಥಾಪಿಸಲಾಗಿದ್ದು, ಇದು ದೇಶದಲ್ಲಿಯೇ ಹವಾಮಾನ ಕುರಿತು ಮಾಹಿತಿ ಒದಗಿಸುವ ಮೊದಲ ಖಾಸಗಿ ಮೂಲ ಸೌಕರ್ಯ ಎಂದು ಹೇಳಲಾಗುತ್ತಿದೆ. ಇದು ಸಾಮಾನ್ಯ ಜನರ ಜತೆಗೆ ಉದ್ಯಮಿಗಳಿಗೆ, ಸ್ಟಾರ್ಟ್‌ಅಪ್‌ಗಳಿಗೆ ಭಾರಿ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.

45 ನಗರಗಳಲ್ಲಿ ಈಗ ಲಭ್ಯ

“ಜೊಮ್ಯಾಟೊ ಚಾಲನೆ ನೀಡಿರುವ ವೆದರ್‌ ವೆಬ್‌ಸೈಟ್‌ ಈಗ ಬೆಂಗಳೂರು ಸೇರಿ ದೇಶದ ಪ್ರಮುಖ 45 ನಗರಗಳಲ್ಲಿ ಲಭ್ಯವಿದೆ. Weatherunion.comಗೆ ಭೇಟಿ ನೀಡುವ ಮೂಲಕ ತಾಪಮಾನ, ಮಳೆ ಪ್ರಮಾಣ, ಸೆಕೆ, ಗಾಳಿಯ ವೇಗ, ಮಳೆ ಮುನ್ಸೂಚನೆ ಸೇರಿ ಹವಾಮಾನಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಒದಗಿಸಲಿದೆ. ಸದ್ಯ, 45 ನಗರಗಳಲ್ಲಿ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ದೇಶಾದ್ಯಂತ ವಿಸ್ತರಣೆ ಮಾಡುವ ಯೋಜನೆ ಇದೆ” ಎಂದು ಜೊಮ್ಯಾಟೊ ಸಂಸ್ಥಾಪಕರೂ ಆದ ದೀಪಿಂದರ್‌ ಗೋಯಲ್‌ ಮಾಹಿತಿ ನೀಡಿದ್ದಾರೆ.

ಎಲ್ಲರಿಗೂ ಫ್ರೀ ಫ್ರೀ

ಜೊಮ್ಯಾಟೊದ ಹೊಸ ವೆಬ್‌ಸೈಟ್‌ ಎಲ್ಲರಿಗೂ ಉಚಿತವಾಗಿ ಲಭ್ಯವಿದೆ. ಜೊಮ್ಯಾಟೊ ಫುಡ್‌ ಡೆಲಿವರಿ ಅಗ್ರಿಗೇಟರ್‌ ಆಗಿದ್ದು, ಇಂತಹ ಅಗ್ರಿಗೇಟರ್‌ಗಳು ದೇಶಾದ್ಯಂತ ಜೊಮ್ಯಾಟೊದ ವೆಬ್‌ಸೈಟ್‌ ಮೂಲಕ ಹವಾಮಾನದ ಕುರಿತ ಮಾಹಿತಿಯನ್ನು ಅರಿತುಕೊಂಡು, ತಮ್ಮ ವ್ಯಾಪಾರ, ಡೆಲಿವರಿ ಮುಂದುವರಿಸಲು ಭಾರಿ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಹವಾಮಾನ ಕುರಿತು ಮಾಹಿತಿ ಒದಗಿಸುವ ಅಪ್ಲಿಕೇಶನ್‌ಗಳು, ವೆಬ್‌ಸೈಟ್‌ಗಳು ಇದ್ದರೂ, ವಿಭಿನ್ನವಾದ ಹಾಗೂ ವೇಗವಾದ ಮಾಹಿತಿ ನೀಡಲು ಜೊಮ್ಯಾಟೊ ವೆಬ್‌ಸೈಟ್‌ ಅಭಿವೃದ್ಧಿಪಡಿಸಿದೆ ಎನ್ನಲಾಗಿದೆ. ಒಂದು ನಿಮಿಷಕ್ಕೊಮ್ಮೆ ಹವಾಮಾನದ ಕುರಿತು ಮಾಹಿತಿ ಒದಗಿಸುವ ಸೌಲಭ್ಯವಿದ್ದು, ವೆದರ್‌ ಸ್ಟೇಷನ್‌ಗಳ ಸಂಖ್ಯೆಯನ್ನೂ ಇನ್ನಷ್ಟು ಹೆಚ್ಚಿಸುವ ಗುರಿ ಹೊಂದಿದೆ.

ಇದನ್ನೂ ಓದಿ: Zomato Pure Veg: ʼಜೊಮ್ಯಾಟೋ ಪ್ಯೂರ್‌ ವೆಜ್‌ʼ ಡೆಲಿವರಿಗೆ ಅಪಹಾಸ್ಯ? ʼಜಾಹೀರಾತು ಮಾಲೀಕ ನಾನಲ್ಲʼ ಎಂದ ಸ್ವಿಗ್ಗಿ!

Continue Reading

ಗ್ಯಾಜೆಟ್ಸ್

Apple New Products: ಐಪ್ಯಾಡ್ ಪ್ರೊನಿಂದ ಪೆನ್ಸಿಲ್ ಪ್ರೊವರೆಗೆ; 2024ರ ಆಪಲ್‌ ಹೊಸ ಉತ್ಪನ್ನಗಳಿವು

2024ರ ಆವೃತ್ತಿಯಲ್ಲಿ ಆಪಲ್ ಹಲವು ಉತ್ಪನ್ನಗಳ ಮಾರಾಟಕ್ಕೆ ಮುಂದಾಗಿದೆ. ಇದರ ಮೊದಲ ಹಂತವಾಗಿ
ಆಪಲ್ ನ ಐಪ್ಯಾಡ್ ಏರ್, ಐಪ್ಯಾಡ್ ಪ್ರೊ, M4 ಚಿಪ್, ಆಪಲ್ ಪೆನ್ಸಿಲ್ ಪ್ರೊ, ಮ್ಯಾಜಿಕ್ ಕೀಬೋರ್ಡ್ ಗಳು ಶೀಘ್ರದಲ್ಲೇ ಮಾರುಕಟ್ಟೆ (Apple New Products) ಪ್ರವೇಶಿಸಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Apple New Products
Koo

ಆಪಲ್‌ನ (Apple New Products) ಐಪ್ಯಾಡ್ ಏರ್ (iPad Air), ಐಪ್ಯಾಡ್ ಪ್ರೊ (iPad Pro), M4 ಚಿಪ್ (M4 chip), ಆಪಲ್ ಪೆನ್ಸಿಲ್ ಪ್ರೊ (Apple Pencil Pro), ಮ್ಯಾಜಿಕ್ ಕೀಬೋರ್ಡ್‌ಗಳಿಗೆ (Magic Keyboard) ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಮುಂದಿನ ವಾರದಿಂದ ಗ್ರಾಹಕರನ್ನು ತಲುಪಲು ಇದು ಸಜ್ಜಾಗಿದೆ. ಕ್ಯಾಲಿಫೋರ್ನಿಯಾದ (California) ಕ್ಯುಪರ್ಟಿನೊದಲ್ಲಿ ನಡೆದ ಆಪಲ್ ‘ಲೆಟ್ ಲೂಸ್’ ಕಾರ್ಯಕ್ರಮದಲ್ಲಿ ಸಿಇಒ ತಂಡ ಈ ಕುರಿತು ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

2024ರ ಆವೃತ್ತಿಯಲ್ಲಿ ಆಪಲ್ ಹಲವು ಉತ್ಪನ್ನಗಳ ಮಾರಾಟಕ್ಕೆ ಮುಂದಾಗಿದೆ. ಇದರ ಮೊದಲ ಹಂತವಾಗಿ
ಆಪಲ್ ನ ಐಪ್ಯಾಡ್ ಏರ್, ಐಪ್ಯಾಡ್ ಪ್ರೊ, M4 ಚಿಪ್, ಆಪಲ್ ಪೆನ್ಸಿಲ್ ಪ್ರೊ, ಮ್ಯಾಜಿಕ್ ಕೀಬೋರ್ಡ್ ಗಳು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.


1. ಐಪ್ಯಾಡ್ ಏರ್ (2024)

ಹೊಸ iPad Air M2 ಚಿಪ್‌ನೊಂದಿಗೆ ಮಾರುಕಟ್ಟೆಗೆ ಬರಲು ಸಜ್ಜಾಗಿದೆ. ಹಿಂದಿನ M1 ಏರ್‌ಗಿಂತ ಶೇ. 50ರಷ್ಟು ವೇಗವಾಗಿ ಇದು ಕಾರ್ಯ ನಿರ್ವಹಿಸಲಿದೆ. ಉತ್ತಮ ಕಾರ್ಯಕ್ಷಮತೆಯೊಂದಿಗೆ ಐಪ್ಯಾಡ್ ಏರ್ ಅನ್ನು ಲ್ಯಾಂಡ್‌ಸ್ಕೇಪ್ ಓರಿಯಂಟೇಶನ್‌ಗಾಗಿ ಮಾಡಲಾಗಿದೆ. ಲ್ಯಾಂಡ್‌ಸ್ಕೇಪ್ ಮೋಡ್‌ನಲ್ಲಿ ಸ್ಟಿರಿಯೊ ಸ್ಪೀಕರ್‌ಗಳೊಂದಿಗೆ ಇದು ಹೊಸ ನೀಲಿ ಮತ್ತು ನೇರಳೆ ಬಣ್ಣದಲ್ಲಿ ಬರುತ್ತಿದೆ. ಜೊತೆಗೆ ಪರಿಚಿತ ಸ್ಟಾರ್ಲೈಟ್ ಮತ್ತು ಸ್ಪೇಸ್ ಗ್ರೇ ಬಣ್ಣಗಳಲ್ಲೂ ಬರಲಿದೆ. ಐಪ್ಯಾಡ್ ಏರ್ (2024) ವಾಸ್ತವವಾಗಿ ಎರಡು ಗಾತ್ರಗಳಲ್ಲಿ ಬರಲಿದೆ. 11 ಇಂಚಿನ ಮತ್ತು 13 ಇಂಚಿನ ಐಪ್ಯಾಡ್ ಏರ್ ಲಭ್ಯವಾಗಲಿದೆ. 13 ಇಂಚಿನ ಮಾದರಿಯು ಶೇ. 30ರಷ್ಟು ಹೆಚ್ಚಿನ ಸ್ಕ್ರೀನ್ ರಿಯಲ್ ಎಸ್ಟೇಟ್ ಅನ್ನು ಹೊಂದಿದೆ. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ವೈಶಿಷ್ಟ್ಯಗಳೊಂದಿಗೆ ಆಪಲ್ ಐಪ್ಯಾಡ್ ಏರ್ ನಾಲ್ಕು ವಿಶೇಷತೆಗಳನ್ನು ಒಳಗೊಂಡಿದೆ. ಲ್ಯಾಂಡ್‌ಸ್ಕೇಪ್ ಸ್ಟಿರಿಯೊ ಆಡಿಯೋ, ಮ್ಯಾಜಿಕ್ ಕೀಬೋರ್ಡ್, 5G ಸಂಪರ್ಕ, 12MP ಕೆಮರಾ ಮತ್ತು 1TB ವರೆಗೆ ಸಂಗ್ರಹಣೆಯೊಂದಿಗೆ 11 ಇಂಚಿನ ರೂಪಾಂತರವು 599 ಡಾಲರ್ ನಿಂದ ಪ್ರಾರಂಭವಾಗುತ್ತದೆ. 13 ಇಂಚಿನ ಮಾದರಿಯು 799 ಡಾಲರ್ (67,000 ರೂ.) ಬೆಲೆಯದ್ದಾಗಿದೆ.


2. ಐಪ್ಯಾಡ್ ಪ್ರೊ

ಐಪ್ಯಾಡ್ ಪ್ರೊ ಆಪಲ್‌ನ ಅತ್ಯಂತ ತೆಳುವಾದ ಉತ್ಪನ್ನವಾಗಿದೆ. ಒಳಗೆ ಪ್ಯಾಕ್ ಮಾಡಲಾದ ಎರಡು OLED ಪ್ಯಾನೆಲ್‌ಗಳನ್ನು ಇದು ಒಳಗೊಂಡಿದೆ. ಐಪ್ಯಾಡ್ ಪ್ರೊ ಆಪಲ್ ಎಂ4 ಚಿಪ್‌ಸೆಟ್ ಅನ್ನು ಒಳಗೊಂಡಿರುವ ಮೊದಲ ಸಾಧನವಾಗಿದೆ. ಐಪ್ಯಾಡ್ ಪ್ರೊಗೆ ಅದರ ತೆಳುವಾದ ವಿನ್ಯಾಸ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಹೊಸ ಪ್ರೊಸೆಸರ್ ಅಗತ್ಯ ಎಂದು ಆಪಲ್ ಹೇಳುತ್ತದೆ.
ಹೊಸ ಐಪ್ಯಾಡ್ ಪ್ರೊ ಎರಡು ಗಾತ್ರಗಳಲ್ಲಿ 11 ಇಂಚು ಮತ್ತು 13 ಇಂಚುಗಳಲ್ಲಿ ಬರಲಿದೆ. ಇದು ಬೆಳ್ಳಿ ಮತ್ತು ಕಪ್ಪು ಎರಡು ಬಣ್ಣಗಳಲ್ಲಿ ಲಭ್ಯವಾಗಲಿದೆ. ಹೊಸ 10 ಕೋರ್ GPUನೊಂದಿಗೆ ಬರುವ ಇದು ರೇಟ್ರೇಸಿಂಗ್ ಅನ್ನು ಬೆಂಬಲಿಸುತ್ತದೆ. ಇದರಲ್ಲೂ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ನ ಸೇವೆಗಳು ಇರಲಿವೆ. 11 ಇಂಚಿನದ್ದು 999 ಡಾಲರ್ (83,000 ರೂ.) ಮತ್ತು 13 ಇಂಚಿನದ್ದು 1299 (1 ಲಕ್ಷ 8 ಸಾವಿರ ರೂ.) ಡಾಲರ್‌ಗೆ ಸಿಗಲಿವೆ.


3. M4 ಚಿಪ್

M4 ಪ್ರೊಸೆಸರ್ ಎರಡನೇ ತಲೆಮಾರಿನ 3nm ತಂತ್ರಜ್ಞಾನ, ಸಂಪೂರ್ಣವಾಗಿ ಮರುನಿರ್ಮಿಸಲಾದ ಡಿಸ್ ಪ್ಲೇ , ರೇ ಟ್ರೇಸಿಂಗ್ ಸಾಮರ್ಥ್ಯಗಳೊಂದಿಗೆ 10 ಕೋರ್ GPU ಮತ್ತು M2 ಚಿಪ್‌ಗಿಂತ ನಾಲ್ಕು ಪಟ್ಟು ತ್ವರಿತ ಕಾರ್ಯಕ್ಷಮತೆಯನ್ನು ನೀಡುವ ಮೂಲಕ ತೆಳುವಾದ ವಿನ್ಯಾಸ ಮತ್ತು ಟಂಡೆಮ್ OLED ಪ್ರದರ್ಶನದೊಂದಿಗೆ ಬರಲಿದೆ.
ಇದು ಎಂ3 ಚಿಪ್‌ನ ಮೇಲೆ ಅಪ್‌ಗ್ರೇಡ್ ಆಗಿದೆ. M2 ಗಿಂತ ಶೇ. 50ರಷ್ಟು CPU ವೇಗವನ್ನು ನೀಡುತ್ತದೆ. ಇದು ಹೊಸ 10 ಕೋರ್ GPU ನೊಂದಿಗೆ ಬರುತ್ತದೆ.ರೇಟ್ರೇಸಿಂಗ್ ಅನ್ನು ಬೆಂಬಲಿಸುವ ಮೊದಲ ಸಾಧನವಾಗಿ iPad Pros ಅನ್ನು ಮಾಡುತ್ತದೆ.

4. ಪ್ರೊ ಅಪ್ಲಿಕೇಶನ್‌ನಲ್ಲಿ ನವೀಕರಣಗಳು

ಹೊಸ M4 ಪ್ರೊಸೆಸರ್ ಫೈನಲ್ ಕಟ್ ಪ್ರೊನಲ್ಲಿ ರೆಂಡರಿಂಗ್ ಅನ್ನು ಹೆಚ್ಚಿಸುತ್ತದೆ. M1ಗಿಂತ ಎರಡು ಪಟ್ಟು ವೇಗವನ್ನು ಹೊಂದಿದೆ. ಇದಲ್ಲದೆ, ಹೊಸ ಲೈವ್ ಮಲ್ಟಿಕ್ಯಾಮ್ ಮೋಡ್ ಬಳಕೆದಾರರಿಗೆ ಏಕಕಾಲದಲ್ಲಿ ನಾಲ್ಕು ಕ್ಯಾಮರಾಗಳನ್ನು ಸಂಪರ್ಕಿಸಲು ಮತ್ತು ಮೌಲ್ಯಮಾಪನ ಮಾಡಲು ಅನುವು ಮಾಡಿಕೊಡುತ್ತದೆ. ಇದಲ್ಲದೆ ಐಫೋನ್ ಮತ್ತು ಐಪ್ಯಾಡ್‌ಗಾಗಿ ಉದ್ದೇಶಿಸಲಾದ ಹೊಸ ಫೈನಲ್ ಕಟ್ ಕ್ಯಾಮರಾವು ಲೈವ್ ಮಲ್ಟಿಕ್ಯಾಮ್ ಸೆಷನ್‌ಗಳಲ್ಲಿ ಹೆಚ್ಚುವರಿಯಾಗಿ ಸೆರೆಹಿಡಿಯುತ್ತದೆ. ಫೂಟೇಜ್ ರೆಕಾರ್ಡ್ ಮಾಡಲು ಫೈನಲ್ ಕಟ್ ಕ್ಯಾಮರಾ ಅಪ್ಲಿಕೇಶನ್ ಅನ್ನು ಸ್ವತಂತ್ರ ಕ್ಯಾಮರಾ ಅಪ್ಲಿಕೇಶನ್ ಆಗಿ ಬಳಸಬಹುದು. ಐಪ್ಯಾಡ್‌ಗಳಿಗಾಗಿ ಹೊಸ ಫೈನಲ್ ಕಟ್ ಕ್ಯಾಮರಾ ವೈಶಿಷ್ಟ್ಯವನ್ನು ಪರಿಚಯಿಸುವುದು ಅತ್ಯಂತ ಗಮನಾರ್ಹವಾದ ವರ್ಧನೆಗಳಲ್ಲಿ ಒಂದಾಗಿದೆ. ವಿಡಿಯೋ ಚಿತ್ರೀಕರಣದ ಸಮಯದಲ್ಲಿ ಲೈವ್ ಕ್ಯಾಮೆರಾಗಳಂತೆ ಇವುಗಳ ಬಳಕೆಯನ್ನು ಸಕ್ರಿಯಗೊಳಿಸುತ್ತದೆ.


5. ಆಪಲ್ ಪೆನ್ಸಿಲ್ ಪ್ರೊ

ಹೊಸ ಆಪಲ್ ಪೆನ್ಸಿಲ್ ಪ್ರೊ ಬ್ಯಾರೆಲ್‌ನಲ್ಲಿ ಸಂವೇದಕವನ್ನು ಹೊಂದಿದ್ದು ಅದು ಟೂಲ್ ಮೆನುವನ್ನು ಪ್ರವೇಶಿಸಲು ಬಳಕೆದಾರರಿಗೆ ಸ್ಕ್ವೀಜ್ ಮಾಡಲು ಅನುಮತಿಸುತ್ತದೆ. ಇದು ಕಾರ್ಯಾಚರಣೆಯ ಸಮಯದಲ್ಲಿ ಸ್ಪರ್ಶ ಪ್ರತಿಕ್ರಿಯೆಗಳನ್ನು ನೀಡಲು ಬಲವಂತದ ಪ್ರತಿಕ್ರಿಯೆಯನ್ನು ಹೊಂದಿದೆ ಮತ್ತು ಈಗ ಆಪಲ್‌ನ “ನನ್ನನ್ನು ಹುಡುಕಿ” ತಂತ್ರಜ್ಞಾನವನ್ನು ಬೆಂಬಲಿಸುತ್ತದೆ, ಇದು ತಪ್ಪಾಗಿದ್ದರೆ ಅದನ್ನು ಪತ್ತೆಹಚ್ಚಲು ಸುಲಭವಾಗುತ್ತದೆ.
ಟೂಲ್‌ಸೆಟ್ ಅನ್ನು ತರಲು ಪೆನ್ಸಿಲ್ ಅನ್ನು ಹಿಂಡಬಹುದು. ಪೆನ್ಸಿಲ್ ಕಾರ್ಯ ನಿರ್ವಹಿಸಿದೆ ಎಂಬುದನ್ನು ತಿಳಿಸಲು ಹ್ಯಾಪ್ಟಿಕ್ ಎಂಜಿನ್ ಕಂಪನವನ್ನು ನೀಡುತ್ತದೆ. ಇದು ಟಿಲ್ಟಿಂಗ್ ಮತ್ತು ತಿರುಗುವಿಕೆಯನ್ನು ಪತ್ತೆಹಚ್ಚಲು ನಿರ್ಮಿಸಲಾದ ಗೈರೊಸ್ಕೋಪ್ ಅನ್ನು ಹೊಂದಿದೆ.

ಪೆನ್ಸಿಲ್ ಮೆನುಗಳನ್ನು ಪ್ರವೇಶಿಸಲು ಸ್ಕ್ವೀಜ್ ವೈಶಿಷ್ಟ್ಯ, ಸ್ಪರ್ಶ ಪ್ರತಿಕ್ರಿಯೆಗಾಗಿ ಹ್ಯಾಪ್ಟಿಕ್ ಪ್ರತಿಕ್ರಿಯೆ, ಬ್ರಷ್ ಆಕಾರಗಳನ್ನು ಬದಲಾಯಿಸಲು ಪೆನ್ಸಿಲ್ ಅನ್ನು ರೋಲ್ ಮಾಡುವ ಸಾಮರ್ಥ್ಯ ಮತ್ತು ಹೆಚ್ಚಿನ ಅನುಕೂಲಕ್ಕಾಗಿ ಫೈಂಡ್ ಮೈ ನೊಂದಿಗೆ ಏಕೀಕರಣದಂತಹ ಹೊಸ ಕಾರ್ಯಗಳನ್ನು ನೀಡುತ್ತದೆ. ಆಪಲ್ ಪೆನ್ಸಿಲ್ ಪ್ರೊ ಬೆಲೆ 129 ಡಾಲರ್ ಆಗಿದೆ.

ಇದನ್ನೂ ಓದಿ: High-tech Gadget: ಸೆಕೆಗೆ ಎಸಿ, ಫ್ಯಾನ್‌, ಕೂಲರ್‌ ಸಾಕಾಗ್ತಿಲ್ವಾ..? ಹಾಗಿದ್ರೆ ಇಲ್ಲಿದೆ ನೋಡಿ ಹೈಟೆಕ್‌ ಗ್ಯಾಜೆಟ್‌


6. ಮ್ಯಾಜಿಕ್ ಕೀಬೋರ್ಡ್

ಹಲವು ಪ್ರಮುಖ ವೈಶಿಷ್ಟ್ಯಗಳನ್ನು ಉಳಿಸಿಕೊಂಡು ಸ್ಲೀಕರ್ ವಿನ್ಯಾಸ ಪರಿಕಲ್ಪನೆಯೊಂದಿಗೆ ನವೀಕರಿಸಿದ ಮ್ಯಾಜಿಕ್ ಕೀಬೋರ್ಡ್ ಅನ್ನು ಪರಿಚಯಿಸಲಾಗುತ್ತಿದೆ. ಹೊಸ ಆವೃತ್ತಿಯು ಫಂಕ್ಷನ್ ರೋ, ಅಲ್ಯೂಮಿನಿಯಂ ಪಾಮ್ ರೆಸ್ಟ್ ಮತ್ತು ಹ್ಯಾಪ್ಟಿಕ್ ಪ್ರತಿಕ್ರಿಯೆಯೊಂದಿಗೆ ಟ್ರ್ಯಾಕ್‌ಪ್ಯಾಡ್ ಅನ್ನು ಒಳಗೊಂಡಿದೆ, ಇದು ಮ್ಯಾಕ್‌ಬುಕ್ ಅನ್ನು ಬಳಸುವಂತಹ ಅನುಭವವನ್ನು ನೀಡುತ್ತದೆ. ಮ್ಯಾಜಿಕ್ ಕೀಬೋರ್ಡ್‌ಗಳು 299 (25,000 ರೂ. ) ಮತ್ತು 329 (27,475 ರೂ.) ಡಾಲರ್‌ಗೆ ಲಭ್ಯವಿದೆ.

Continue Reading

ಆಟೋಮೊಬೈಲ್

Nissan India : ಉಚಿತ ಏಸಿ ರಿಪೇರಿ ಮಾಡಿಸಿಕೊಳ್ಳಲು ನಿಸ್ಸಾನ್ ಕಾರು ಮಾಲೀಕರಿಗೆ ಇಲ್ಲಿದೆ ಅವಕಾಶ

Nissan India: ಉಚಿತ ಏಸಿ ತಪಾಸಣಾ ಕಾರ್ಯಾಗಾರ ಏಪ್ರಿಲ್ 15ರಿಂದಲೇ ಆರಂಭಗೊಂಡಿದ್ದು ಜೂನ್ 15ರವರೆಗೆ ನಡೆಯಲಿದೆ. ನಿಸ್ಸಾನ್ ಗ್ರಾಹಕರು ವಿವಿಧ ಶ್ರೇಣಿಗಳ ಸರ್ವೀಸ್ ಗಳು ಮತ್ತು ರಿಯಾಯಿತಿ ಪಡೆಯುವ ಭಾರತದಾದ್ಯಂತ ಇರುವ ಎಲ್ಲಾ ನಿಸ್ಸಾನ್ ಅಧಿಕೃತ ಸರ್ವೀಸ್ ವರ್ಕ್ ಶಾಪ್ ಗಳಲ್ಲಿ ಈ ಸೌಲಭ್ಯ ಲಭ್ಯವಿದೆ.

VISTARANEWS.COM


on

Nissan India
Koo

ಬೆಂಗಳೂರು: ನಿಸ್ಸಾನ್ ಮೋಟಾರ್ ಇಂಡಿಯಾ (Nissan India) ದೇಶಾದ್ಯಂತ ಇರುವ ತನ್ನ ಗ್ರಾಹಕರಿಗೆ ಎರಡು ತಿಂಗಳ ಕಾಲ ಉಚಿತ ಏಸಿ ತಪಾಸಣಾ ಕಾರ್ಯಾಗಾರ ಆಯೋಜಿಸಿದೆ. ಆ ಮೂಲಕ ಗ್ರಾಹಕ ತೃಪ್ತಿಯನ್ನು ಬಯಸು ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ನಿಸ್ಸಾನ್ ಉಚಿತ ಏಸಿ ತಪಾಸಣಾ ಕಾರ್ಯಾಗಾರ ಏಪ್ರಿಲ್ 15ರಿಂದಲೇ ಆರಂಭಗೊಂಡಿದ್ದು ಜೂನ್ 15ರವರೆಗೆ ನಡೆಯಲಿದೆ. ನಿಸ್ಸಾನ್ ಗ್ರಾಹಕರು ವಿವಿಧ ಶ್ರೇಣಿಗಳ ಸರ್ವೀಸ್ ಗಳು ಮತ್ತು ರಿಯಾಯಿತಿ ಪಡೆಯುವ ಭಾರತದಾದ್ಯಂತ ಇರುವ ಎಲ್ಲಾ ನಿಸ್ಸಾನ್ ಅಧಿಕೃತ ಸರ್ವೀಸ್ ವರ್ಕ್ ಶಾಪ್ ಗಳಲ್ಲಿ ಈ ಸೌಲಭ್ಯ ಲಭ್ಯವಿದೆ. ನಿಸ್ಸಾನ್‌ನ ನುರಿತ ಮತ್ತು ತರಬೇತಿ ಪಡೆದ ಸರ್ವೀಸ್ ಉದ್ಯೋಗಿಗಳು ನಿಸ್ಸಾನ್ ನಿಜವಾದ ಬಿಡಿಭಾಗಗಳನ್ನು ಬಳಸಿಕೊಂಡು ಏಸಿ ತಪಾಸಣೆ ಶಿಬಿರವನ್ನು ನಡೆಸಿಕೊಡುತ್ತಾರೆ.

ಎಲ್ಲಾ ನಿಸ್ಸಾನ್ ಮತ್ತು ಡಾಟ್ಸನ್ ವಾಹನ ಮಾಲೀಕರು ನಿಸ್ಸಾನ್ ಒನ್ ಆ್ಯಪ್ ಅಥವಾ ನಿಸ್ಸಾನ್ ಮೋಟಾರ್ ಇಂಡಿಯಾ ವೆಬ್‌ಸೈಟ್ (www.nissan.in) ಮೂಲಕ ತಪಾಸಣೆ ಪಡೆಯಲು ಸರ್ವೀಸ್ ಅಪಾಯಿಂಟ್‌ಮೆಂಟ್ ಅನ್ನು ಪಡೆಯಬಹುದು. ಇದರಿಂದಾಗಿ ಗ್ರಾಹಕರು ಯಾವುದೇ ತೊಂದರೆ ಇಲ್ಲದೆ ನಿಸ್ಸಾನ್ ಮಾಲೀಕತ್ವವನ್ನು ಅನುಭವಿಸುವ ಸೌಕರ್ಯ ಪಡೆಯುವುದಲ್ಲದೆ, ಈ ಉಪಕ್ರಮವು ಬ್ರಾಂಡ್ ಮೇಲೆ ಗ್ರಾಹಕರು ಇಟ್ಟಿರುವ ವಿಶ್ವಾಸಕ್ಕೆ ಸಣ್ಣ ಪ್ರಮಾಣದ ಕೊಡುಗೆಯೂ ಆಗಿದೆ. ಈ ಸರ್ವೀಸ್ ಶಿಬಿರಗಳು ಎಲ್ಲಾ ನಿಸ್ಸಾನ್ ಮತ್ತು ಡಾಟ್ಸನ್ ಬ್ರಾಂಡ್ ವಾಹನಗಳಿಗೆ ಸರ್ವೀಸ್ ಒದಗಿಸುವ ಕಂಪನಿಯ ವ್ಯಾಪಕವಾದ 120 ಸರ್ವೀಸ್ ವರ್ಕ್ ಶಾಪ್ ಗಳಲ್ಲಿಯೂ ನಡೆಯಲಿದೆ.

ಇದನ್ನೂ ಓದಿ: Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

ಶಿಬಿರವು ಉಚಿತ ಕಾರ್ ಟಾಪ್ ವಾಶ್ ಅನ್ನು ಕೂಡ ಒಳಗೊಂಡಿದೆ. ಜೊತೆಗೆ ಸಮಗ್ರ 20-ಪಾಯಿಂಟ್ ತಪಾಸಣೆಯನ್ನು ಮಾಡಲಾಗುತ್ತದೆ. ಪಿಎಂಎಸ್ (ಪೀರಿಯಾಡಿಕಲ್ ಮೇಂಟನೆನ್ಸ್ ಸರ್ವೀಸ್) ಆಯ್ಕೆ ಮಾಡುವ ಗ್ರಾಹಕರಿಗೆ ಉಚಿತ ಪಿಕ್-ಅಪ್ ಮತ್ತು ಡ್ರಾಪ್ ಸೌಲಭ್ಯ ಕೂಡ ನೀಡಲಾಗುತ್ತದೆ. ಹೆಚ್ಚುವರಿಯಾಗಿ, ಗ್ರಾಹಕರು ಶೇ.20ರವರೆಗೆ ಭಾಗಗಳು/ಪರಿಕರಗಳ ಮೇಲೆ ರಿಯಾಯಿತಿ (ಡೀಲರ್ ತೀರ್ಮಾನದ ಪ್ರಕಾರ) ಪಡೆಯಬಹುದು. ಕಾರ್ಮಿಕ ಶುಲ್ಕಗಳ ಮೇಲೆ 20% ವರೆಗೆ ಮತ್ತು ಮೌಲ್ಯವರ್ಧಿತ ಸೇವೆಗಳ ಮೇಲೆ (ವಿಎಎಸ್) 10% ವರೆಗೆ ರಿಯಾಯಿತಿ ಪಡೆಯಬಹುದು. ಕಂಪನಿಯು ಎಲ್ಲಾ ನಿಸ್ಸಾನ್ ಮತ್ತು ಡಾಟ್ಸನ್ ವಾಹನಗಳು ಈ ವಿಶೇಷ ಕೊಡುಗೆಗಳ ಲಾಭವನ್ನು ಪಡೆಯಬೇಕು ಮತ್ತು ಅದರಿಂದ ವಾಹನಗಳ ಕಾರ್ಯಕ್ಷಮತೆ ಉತ್ತಗೊಳಿಸಬೇಕು, ವಾಹನಗಳು ಆಯುಷ್ಯ ಹೆಚ್ಚಿಸಬೇಕು ಎಂದು ಹೇಳಿದೆ.

Continue Reading

ಆಟೋಮೊಬೈಲ್

Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

ಕಾರಿನಲ್ಲಿರುವ ಏರ್ ಪ್ಯೂರಿಫೈಯರ್ ಗಾಳಿಯ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ಆರೋಗ್ಯವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳು (Air Purifier) ಅಗತ್ಯವಾಗಿರುವುದಕ್ಕೆ ಕೆಲವು ಪ್ರಮುಖ ಕಾರಣಗಳೂ ಇವೆ. ಕಾರಿನಲ್ಲಿ ಓಡಾಡುವವರಿಗೆ ಏರ್‌ ಪ್ಯೂರಿಫೈಯರ್‌ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Air Purifier
Koo

ವಾಯು ಮಾಲಿನ್ಯವು (Air pollution) ಈಗ ಜಾಗತಿಕವಾಗಿ ಒಂದು ಸಮಸ್ಯೆಯಾಗಿದೆ. ಹೊರಾಂಗಣ ಪರಿಸರವನ್ನು ಮಾತ್ರವಲ್ಲದೆ ಇದು ನಮ್ಮ ಮನೆ (home) ಮತ್ತು ವಾಹನಗಳ (vehicles) ಒಳಗಿನ ಗಾಳಿಯ ಮೇಲೂ ಪರಿಣಾಮ ಬೀರುತ್ತಿದೆ. ಒಳಾಂಗಣ ವಾಯು ಮಾಲಿನ್ಯವನ್ನು ಎದುರಿಸಲು ಅನೇಕ ಜನರು ತಮ್ಮ ಮನೆಗಳಲ್ಲಿ ಏರ್ ಪ್ಯೂರಿಫೈಯರ್‌ಗಳನ್ನು (Air Purifier) ಬಳಸಲು ಪ್ರಾರಂಭಿಸಿದ್ದಾರೆ. ಆದರೆ ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳ ಅಗತ್ಯವನ್ನು ಸಾಮಾನ್ಯವಾಗಿ ಹೆಚ್ಚಿನವರು ಕಡೆಗಣಿಸುತ್ತಾರೆ.

ಕಲುಷಿತ ಗಾಳಿಯು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಜಾಗೃತಿ ಹೆಚ್ಚಾಗುತ್ತಿದ್ದು, ವಾಹನಗಳಲ್ಲಿ ಏರ್ ಪ್ಯೂರಿಫೈಯರ್ ಗಳ ಪ್ರಾಮುಖ್ಯತೆಯು ಎಲ್ಲರ ಗಮನ ಸೆಳೆಯುತ್ತಿದೆ. ಸ್ವಂತ ವಾಹನ ಚಾಲನೆ ಮಾಡುವಾಗ ವಿಶೇಷವಾಗಿ ಭಾರೀ ವಾಹನ ದಟ್ಟಣೆಯ ಪ್ರದೇಶಗಳಲ್ಲಿ ಸುತ್ತಮುತ್ತ ನಿರಂತರವಾಗಿ ಹಾನಿಕಾರಕ ಅನಿಲಗಳು ಮತ್ತು ಕಣಗಳು ಹೊರಸೂಸುತ್ತಿರುತ್ತದೆ. ಈ ಮಾಲಿನ್ಯಕಾರಕಗಳು ಕಾರಿನ ಕ್ಯಾಬಿನ್ ಅನ್ನು ಪ್ರವೇಶಿಸಬಹುದು. ಇದು ಒಳಗೆ ಕಲುಷಿತ ಗಾಳಿಯ ಸಂಗ್ರಹಕ್ಕೆ ಕಾರಣವಾಗುತ್ತದೆ. ಪರಿಸರದಲ್ಲಿರುವ ಧೂಳು, ಹೊಗೆ, ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಅಲರ್ಜಿನ್‌ಗಳಂತಹ ಅಂಶಗಳಿಂದ ಇದು ಮತ್ತಷ್ಟು ಹದಗೆಡುತ್ತದೆ.
ಕಾರಿನಲ್ಲಿರುವ ಏರ್ ಪ್ಯೂರಿಫೈಯರ್ ಗಾಳಿಯ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ಆರೋಗ್ಯವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳು ಅಗತ್ಯವಾಗಿರುವುದಕ್ಕೆ ಕೆಲವು ಪ್ರಮುಖ ಕಾರಣಗಳೂ ಇವೆ.


1. ಮಾಲಿನ್ಯಕಾರಕಗಳನ್ನು ಕಡಿಮೆ ಮಾಡುತ್ತದೆ

ಗಾಳಿಯ ಶುದ್ಧೀಕರಣವು ಕಾರಿನೊಳಗಿನ ಗಾಳಿಯಿಂದ ಧೂಳು, ಹೊಗೆ, ಪರಾಗ, ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳಂತಹ ಮಾಲಿನ್ಯಕಾರಕಗಳನ್ನು ಪರಿಣಾಮಕಾರಿಯಾಗಿ ಫಿಲ್ಟರ್ ಮಾಡುತ್ತದೆ. ಚಾಲನೆ ಮಾಡುವಾಗ ನೀವು ಉಸಿರಾಡುವ ಹಾನಿಕಾರಕ ಕಣಗಳ ಸಾಂದ್ರತೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

2. ಅಲರ್ಜಿಕಾರಕಗಳನ್ನು ತೆಗೆದು ಹಾಕುತ್ತದೆ

ಅಲರ್ಜಿ ಅಥವಾ ಆಸ್ತಮಾದಂತಹ ಉಸಿರಾಟದ ತೊಂದರೆ ಹೊಂದಿರುವ ವ್ಯಕ್ತಿಗಳಿಗೆ ಕಲುಷಿತ ಗಾಳಿಯು ಅಸ್ವಸ್ಥತೆ ಮತ್ತು ಆರೋಗ್ಯ ಸಮಸ್ಯೆಗಳನ್ನು ಪ್ರಚೋದಿಸುತ್ತದೆ. ಏರ್ ಪ್ಯೂರಿಫೈಯರ್ ಗಾಳಿಯಿಂದ ಅಲರ್ಜಿಯನ್ನು ತೆಗೆದುಹಾಕುತ್ತದೆ. ಸೂಕ್ಷ್ಮ ವ್ಯಕ್ತಿಗಳಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸುತ್ತದೆ.

3. ವಾಸನೆ ತೊಡೆದು ಹಾಕುವುದು

ಮಾಲಿನ್ಯಕಾರಕಗಳ ಜೊತೆಗೆ ಏರ್ ಪ್ಯೂರಿಫೈಯರ್‌ಗಳು ಕಾರಿನೊಳಗಿನ ಅಹಿತಕರ ವಾಸನೆಯನ್ನು ತೆಗೆದು ಹಾಕುತ್ತದೆ. ಅದು ಹೊಗೆ, ಆಹಾರ ಅಥವಾ ಇತರ ವಾಸನೆಯ ಪದಾರ್ಥಗಳು ತೊಡೆದು ಹಾಕಿ ಗಾಳಿ ಶುದ್ಧೀಕರಣ ಮಾಡಿ ಸುವಾಸನೆಯನ್ನು ಬೀರುತ್ತದೆ. ವಾಹನ ಚಾಲನೆಯ ಅನುಭವವನ್ನು ಹೆಚ್ಚಿಸುತ್ತದೆ.

4. ಆರೋಗ್ಯದ ಅಪಾಯಗಳ ವಿರುದ್ಧ ರಕ್ಷಣೆ

ಕಲುಷಿತ ಗಾಳಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಉಸಿರಾಟದ ಸಮಸ್ಯೆಗಳು, ಅಲರ್ಜಿಗಳು, ಆಸ್ತಮಾ ಮತ್ತು ಹೃದಯರಕ್ತನಾಳದ ಕಾಯಿಲೆಗಳು ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಕಾರಿನೊಳಗಿನ ಗಾಳಿಯನ್ನು ಶುದ್ಧೀಕರಿಸುವ ಮೂಲಕ ಈ ಆರೋಗ್ಯದ ಅಪಾಯಗಳನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ಚಾಲನಾ ವಾತಾವರಣವನ್ನು ಉತ್ತೇಜಿಸಲು ಏರ್ ಪ್ಯೂರಿಫೈಯರ್ ಸಹಾಯ ಮಾಡುತ್ತದೆ.

5. ಚಾಲನಾ ಸೌಕರ್ಯವನ್ನು ಹೆಚ್ಚಿಸುವುದು

ಕಾರಿನೊಳಗೆ ಶುದ್ಧ ಮತ್ತು ತಾಜಾ ಗಾಳಿಯು ಹೆಚ್ಚು ಆರಾಮದಾಯಕ ಮತ್ತು ಆನಂದದಾಯಕ ಚಾಲನಾ ಅನುಭವಕ್ಕೆ ಕೊಡುಗೆ ನೀಡುತ್ತದೆ. ವಿಶೇಷವಾಗಿ ದೀರ್ಘ ಪ್ರಯಾಣದ ಸಮಯದಲ್ಲಿ ಅಥವಾ ಸವಾಲಿನ ಚಾಲನಾ ಪರಿಸ್ಥಿತಿಗಳಲ್ಲಿ ಇದು ಗಮನ ಮತ್ತು ಜಾಗರೂಕತೆಯನ್ನು ಸುಧಾರಿಸುತ್ತದೆ.

ಇದನ್ನೂ ಓದಿ: Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

6. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌

ಕಾರು ತಯಾರಕರು ಈಗ ತಮ್ಮ ವಾಹನದ ವೈಶಿಷ್ಟ್ಯಗಳ ಭಾಗವಾಗಿ ಇನ್‌ಬಿಲ್ಟ್‌ ಆಗಿ ಏರ್ ಪ್ಯೂರಿಫೈಯರ್‌ಗಳನ್ನು ನೀಡುತ್ತಿದ್ದಾರೆ. ಹೆಚ್ಚುವರಿಯಾಗಿ ಕಾರುಗಳಲ್ಲಿ ಬಳಸಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾದ ಪೋರ್ಟಬಲ್ ಮತ್ತು ಕಾಂಪ್ಯಾಕ್ಟ್ ಏರ್ ಪ್ಯೂರಿಫೈಯರ್‌ಗಳು ಇವೆ. ಚಾಲಕರು ತಮ್ಮ ವಾಹನದ ಮಾದರಿಯನ್ನು ಲೆಕ್ಕಿಸದೆಯೇ ಶುದ್ಧ ಗಾಳಿಯನ್ನು ಆನಂದಿಸಲು ಇದು ಅನುವು ಮಾಡಿಕೊಡುತ್ತದೆ.

Continue Reading
Advertisement
SSLC Result 2024 what is the reason for most of the students fail in SSLC
ಕರ್ನಾಟಕ14 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Aavesham Releases On OTT Fahadh Faasil Hit Malayalam Film
ಮಾಲಿವುಡ್23 mins ago

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Sslc exam Result 2024
ಶಿಕ್ಷಣ25 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

T20 World Cup 2024
ಕ್ರೀಡೆ31 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

Sunita Williams
ವಿದೇಶ40 mins ago

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Ananya Panday Aditya Roy Kapur parties with Sara Ali Khan
ಬಾಲಿವುಡ್41 mins ago

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

SSLC Result 2024 secret behind 20 percent grace marks
ಕರ್ನಾಟಕ52 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

gold rate today sreeleela
ಚಿನ್ನದ ದರ1 hour ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

SSLC Result 2024 78 schools get zero results in SSLC exams
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

Viral video
ವೈರಲ್ ನ್ಯೂಸ್1 hour ago

Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ14 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ25 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ52 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌