Vice President of India | ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಧನಕರ್ ಜಯಭೇರಿ​​, ನಿರೀಕ್ಷೆಗಿಂತ ಹೆಚ್ಚಿನ ಮತ - Vistara News

ದೇಶ

Vice President of India | ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಧನಕರ್ ಜಯಭೇರಿ​​, ನಿರೀಕ್ಷೆಗಿಂತ ಹೆಚ್ಚಿನ ಮತ

ಇಂದು ಬೆಳಗ್ಗೆ 10ಗಂಟೆಯಿಂದ ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆದಿತ್ತು. ಸಂಜೆ 5ಕ್ಕೆ ಮುಕ್ತಾಯವಾಗಿ, ಆರು ಗಂಟೆಯಿಂದ ಮತ ಎಣಿಕೆ ನಡೆದಿತ್ತು.

VISTARANEWS.COM


on

jagdeep dhankhar
ಜಗದೀಪ್​ ಧನಕರ್​​
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದ ನೂತನ ಉಪರಾಷ್ಟ್ರಪತಿಯಾಗಿ (Vice President of India) ಎನ್​ಡಿಎ ಒಕ್ಕೂಟದ ಅಭ್ಯರ್ಥಿ ಜಗದೀಪ್​ ಧನಕರ್​ ಆಯ್ಕೆಯಾಗಿದ್ದಾರೆ. ಜಗದೀಪ್​ ಧನಕರ್​ ವಿರುದ್ಧ ಪ್ರತಿಪಕ್ಷಗಳೆಲ್ಲ ಒಟ್ಟಾಗಿ ಕಾಂಗ್ರೆಸ್​​ನ ಹಿರಿಯ ನಾಯಕಿ ಮಾರ್ಗರೆಟ್ ಆಳ್ವಾರನ್ನು ಕಣಕ್ಕೆ ಇಳಿಸಿದ್ದವು. ಜಗದೀಪ್​ ಧನಕರ್​ಗೆ 528 ಮತಗಳು ಬಿದ್ದಿದ್ದರೆ, ಮಾರ್ಗರೆಟ್ ಆಳ್ವಾ 128 ವೋಟ್​ ಪಡೆದಿದ್ದಾರೆ. 15 ಮತಗಳು ಅಮಾನ್ಯಗೊಂಡಿವೆ. ಜಗದೀಪ್​ ಧನಕರ್​ ಅವರು ಉಪರಾಷ್ಟ್ರಪತಿ ಆಗುವ ಜತೆ ರಾಜ್ಯಸಭೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.

ಜಗದೀಪ್​ ಧನಕರ್​ ಗೆಲುವಿನ ಸಂಭ್ರಮಾಚರಣೆ ಬಿಜೆಪಿ ಪಾಳಯದಲ್ಲಿ ಈಗಾಗಲೇ ಪ್ರಾರಂಭವಾಗಿದೆ. ಅವರ ಹುಟ್ಟೂರಾದ ರಾಜಸ್ಥಾನದ ಜುಂಜುನುವಿನಲ್ಲಿ ಕೂಡ ಸ್ಥಳೀಯರು ಸಂಭ್ರಮ ಆಚರಣೆ ಮಾಡುತ್ತಿದ್ದಾರೆ. ಇನ್ನು ಕೆಲವೇ ಹೊತ್ತಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ ಅವರು ಜಗದೀಪ್​ ಧನಕರ್​ರನ್ನು ಭೇಟಿಯಾಗಲಿದ್ದಾರೆ. ಗೆಲುವು ಸಾಧಿಸಿದ ಜಗದೀಪ್​ ಧನಕರ್​​ರಿಗೆ ರಾಜಕೀಯ ಗಣ್ಯರೆಲ್ಲ ಶುಭ ಹಾರೈಸುತ್ತಿದ್ದಾರೆ.

ಯಾರು ಜಗದೀಪ್​ ಧನಕರ್​?
ಜಗದೀಪ್‌ ಧನಕರ್‌ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. ಆದರೆ ಇವರಿಗೂ-ರಾಜ್ಯ ಸರ್ಕಾರಕ್ಕೂ ಸದಾ ಜಟಾಪಟಿ ಆಗುತ್ತಿತ್ತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಡಳಿತ ಕ್ರಮದ ಕಟು ವಿಮರ್ಶಕರು ಇವರಾಗಿದ್ದರು. ಹಾಗಾಗಿ ತೃಣಮೂಲ ಕಾಂಗ್ರೆಸ್‌ ಕೂಡ ಜಗದೀಪ್‌ ಧನಕರ್‌ ಅವರನ್ನು ಬಿಜೆಪಿ ಏಜೆಂಟ್‌ ಎಂದೇ ಕರೆಯುತ್ತಿತ್ತು. ವೃತ್ತಿಯಲ್ಲಿ ವಕೀಲರಾಗಿರುವ ಜಗದೀಪ್‌ ಧನಕರ್‌ ರಾಜಕೀಯ ಪ್ರವೇಶ ಮಾಡಿದ್ದು 1989ರಲ್ಲಿ. ಇವರು ಜನತಾ ಪರಿವಾರದವರು. ಮಾಜಿ ಪ್ರಧಾನಿ ಚಂದ್ರಶೇಖರ್‌ ಸಚಿವ ಸಂಪುಟದಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ೭೧ ವರ್ಷದ ಜಗದೀಪ್‌ ಧನಕರ್‌, ರಾಜಸ್ಥಾನದ ಜುನ್‌ಜುನು ಲೋಕಸಭಾ ಕ್ಷೇತ್ರದಿಂದ ಆಗ ಆಯ್ಕೆಯಾಗಿದ್ದರು. ೧೯೯೩ರಿಂದ ೯೮ರ ವರೆಗೆ ಕಿಶಾನ್‌ಘರ್‌ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Vice Presidential Poll | ಉಪರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ; ಎಣಿಕೆ ಪ್ರಾರಂಭ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Summer Special Trains : ನೈರುತ್ಯ ರೈಲ್ವೆಯಿಂದ ಬೇಸಿಗೆ ವಿಶೇಷ ರೈಲುಗಳ ಸಂಚಾರ; ಪಟ್ಟಿ ಇಲ್ಲಿದೆ

Summer Special Trains : ನೈರುತ್ಯ ರೈಲ್ವೆಯಿಂದ ಈ ಸಲದ ಬೇಸಿಗೆ ಅವಧಿಯಲ್ಲಿ ವಿಶೇಷ ರೈಲು ಸಂಚಾರಗಳು ಇರಲಿದೆ. ಬೇಸಿಗೆಯ ಕಾಲದಲ್ಲಿ ಶಾಲಾ -ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸದ ಸಲುವಾಗಿ ಪ್ರಯಾಣದ ದಟ್ಟಣೆ ಹೆಚ್ಚು ಇರುವುದು ಸಾಮಾನ್ಯ. ಆದ್ದರಿಂದ ಇಲಾಖೆ ಹೆಚ್ಚುವರಿ ರೈಲುಗಳನ್ನು ದೇಶದಾದ್ಯಂತ ಬಿಡುತ್ತಿದೆ.

VISTARANEWS.COM


on

By

Summer Special Trains
ಸಾಂದರ್ಭಿಕ ಚಿತ್ರ
Koo

ಬೆಂಗಳುರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳುವವರಿಗೆ, ಪ್ರವಾಸಕ್ಕೆ ಹೋಗುವವರಿಗಾಗಿ ನೈರುತ್ಯ ಇಲಾಖೆಯು ವಿಶೇಷ ರೈಲುಗಳನ್ನು (Summer Special Trains) ನಿಯೋಜನೆ ಮಾಡಿದೆ. ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮುಜಾಫರ್ಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಎರಡು ಹೆಚ್ಚುವರಿ ಟ್ರಿಪ್‌ಗಳನ್ನು ಓಡಿಸಲು ನೈರುತ್ಯ ಇಲಾಖೆ ನಿರ್ಧರಿಸಿದೆ.

ರೈಲು ಸಂಖ್ಯೆ 05271/05272 ಮುಜಾಫರ್ಪುರ-ಯಶವಂತಪುರ-ಮುಜಾಫರ್ಪುರ ಬೇಸಿಗೆ ವಿಶೇಷ ರೈಲು. ಈ ರೈಲು ಮೇ 24 ಮತ್ತು 31 ರಂದು ಮಧ್ಯಾಹ್ನ 03:30 ಗಂಟೆಗೆ ಮುಜಾಫರ್ಪುರದಿಂದ ಹೊರಟು ಭಾನುವಾರ ರಾತ್ರಿ 7 ಗಂಟೆಗೆ ಯಶವಂತಪುರಕ್ಕೆ ಆಗಮಿಸಲಿದೆ. ನಂತರ ರೈಲು ಸಂಖ್ಯೆ 05272 ಯಶವಂತಪುರದಿಂದ ಮೇ 27 ಮತ್ತು ಜೂನ್ 3 ರಂದು 07:30ಕ್ಕೆ ಹೊರಟು ಬುಧವಾರ ಮಧ್ಯಾಹ್ನ 12:00 ಗಂಟೆಗೆ ಮುಜಾಫರ್ಪುರ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಎರಡು ಮಾರ್ಗಗಳಲ್ಲಿ ಹಾಜಿಪುರ, ಪಾಟಲಿಪುತ್ರ, ಅರಾ, ಬಕ್ಸಾರ್, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ, ಪ್ರಯಾಗ್ರಾಜ್ ಚಿಯೋಕಿ, ಮಾಣಿಕ್ಪುರ, ಸತ್ನಾ, ಕಟ್ನಿ, ಜಬಲ್ಪುರ್, ನರಸಿಂಗಪುರ, ಪಿಪರಿಯಾ, ಇಟಾರ್ಸಿ, ನಾಗ್ಪುರ, ಬಲ್ಹಾರ್ಷಾ, ಸಿರ್ಪುರ್ ಕಾಖಜನಗರ್, ರಾಮಗುಂಡಂ, ಕಾಜಿಪೇಟ್, ಜಂಗಾಂವ್, ಕಾಚಿಗುಡ, ಶಾದ್ನಗರ್, ಜಡ್ ಚರ್ಲಾ, ಮಹಬೂಬ್ ನಗರ್ ಸೇರಿದಂತೆ ಗದ್ವಾಲ್, ಕರ್ನೂಲ್ ಸಿಟಿ, ಡೋನ್, ಗುತ್ತಿ, ಅನಂತಪುರ & ಧರ್ಮಾವರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಇದನ್ನು ಓದಿ: Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

ಇನ್ನೂ ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಭುವನೇಶ್ವರ ಮತ್ತು ಎಸ್ಎಂವಿಟಿ ಬೆಂಗಳೂರು-ಸಂಬಲ್ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಬೇಸಿಗೆ ವಿಶೇಷ ರೈಲುಗಳನ್ನು ನೈರುತ್ಯ ರೈಲ್ವೆ ಇಲಾಖೆಯು ನಿಯೋಜಿಸಿದೆ.

ರೈಲು ಸಂಖ್ಯೆ 06271/06272 ಎಸ್ಎಂವಿಟಿ ಬೆಂಗಳೂರು-ಭುವನೇಶ್ವರ ಸಮ್ಮರ್ ಸ್ಪೆಷಲ್ ಎಕ್ಸ್ ಪ್ರೆಸ್.. ಈ ರೈಲು (06271) ಮೇ 31 ರಂದು ಮಧ್ಯರಾತ್ರಿ 12:10 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ 04:00 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ. ರೈಲು ಸಂಖ್ಯೆ 06272 ಜೂನ್ 2 ರಂದು 06:30 ಗಂಟೆಗೆ ಭುವನೇಶ್ವರದಿಂದ ಹೊರಟು ಮರುದಿನ 09:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ಡಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲುಗಳು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ , ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ ಮತ್ತು ಖುರ್ದಾ ರೋಡ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ರೈಲು ಸಂಖ್ಯೆ 06279/06280 ಎಸ್ಎಂವಿಟಿ ಬೆಂಗಳೂರು-ಸಂಬಲ್ಪುರ-ಎಸ್ಎಂವಿಟಿ ಬೆಂಗಳೂರು ಸಮ್ಮರ್ ಸ್ಪೆಷಲ್ ಎಕ್ಸ್ ಪ್ರೆಸ್: ಈ ರೈಲು ಜೂನ್ 7 ರಂದು ಮಧ್ಯರಾತ್ರಿ 12:10 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ 05:00 ಗಂಟೆಗೆ ಸಂಬಲ್ಪುರವನ್ನು ತಲುಪಲಿದೆ. ರೈಲು ಸಂಖ್ಯೆ 06280 ಜೂನ್ 8 ರಂದು 11:35 ಗಂಟೆಗೆ ಸಂಬಲ್ಪುರದಿಂದ ಹೊರಟು ಮರುದಿನ 19:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ಡಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ , ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ , ರಾಜಮಂಡ್ರಿ, ದುವ್ವಾಡಾ, ಕೊತ್ತವಲಸ, ವಿಜಯನಗರಂ, ಬೊಬ್ಬಿಲಿ, ಪಾರ್ವತಿಪುರಂ, ರಾಯಗಡ, ಮುನಿಗುಡ, ಕೇಸಿಂಗಾ, ಟಿಟ್ಲಾಘರ್, ಬಾಲಂಗಿರ್ ಮತ್ತು ಬಾರ್ಘರ್ ರೋಡ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಇನ್ನೂ ಬುಕಿಂಗ್ ಮತ್ತು ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು www.enquiry.indianrail.gov.in ವೆಬ್ ಸೈಟ್‌ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Lok Sabha Election: ಬಿಜೆಪಿ ಗೆಲುವು ಖಚಿತ ಎಂದ ಯೋಗೇಂದ್ರ ಯಾದವ್‌; ಸ್ಥಾನಗಳಿಕೆ ಅಂದಾಜು ಹೀಗಿದೆ

Lok Sabha Election: ಭಾರತೀಯ ಜನತಾ ಪಕ್ಷದ ಪರವಾಗಿ ತಮ್ಮ ಭವಿಷ್ಯವಾಣಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಯಾದವ್‌ ಅಚ್ಚರಿ ಮೂಡಿಸಿದ್ದಾರೆ. ಯಾದವ್ ಪ್ರಕಾರ ಬಿಜೆಪಿ 240-260 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷಗಳು 34-45 ಸ್ಥಾನಗಳನ್ನು ಗೆಲ್ಲಬಹುದು. ಅಂದರೆ ಎನ್‌ಡಿಎ (NDA) ಒಟ್ಟು 275 ಮತ್ತು 305 ಸ್ಥಾನಗಳ ನಡುವೆ ಸುಳಿದಾಡಬಹುದು.

VISTARANEWS.COM


on

yogendra yadav lok sabha election 2024
Koo

ಹೊಸದಿಲ್ಲಿ: ಖ್ಯಾತ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಮತ್ತು ಯುಎಸ್ ರಾಜಕೀಯ ತಜ್ಞ ಇಯಾನ್ ಬ್ರೆಮ್ಮರ್ ನಂತರ, ಈ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ (BJP) ಗೆಲುವಿನ ಬಗ್ಗೆ ಸಾಮಾಜಿಕ ಹೋರಾಟಗಾರ, ಸ್ವರಾಜ್‌ ಇಂಡಿಯಾ ಪಕ್ಷದ ನಾಯಕ ಯೋಗೇಂದ್ರ ಯಾದವ್ (Yogendra Yadav) ಭವಿಷ್ಯವಾಣಿ ನುಡಿದಿದ್ದಾರೆ.

ಭಾರತೀಯ ಜನತಾ ಪಕ್ಷವು (ಬಿಜೆಪಿ) ಮತ್ತೊಂದು ಸಾರ್ವತ್ರಿಕ ಚುನಾವಣೆಯ ವಿಜಯವನ್ನು ಪಡೆಯುತ್ತದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಭಾರತೀಯ ಜನತಾ ಪಕ್ಷದ ಪರವಾಗಿ ತಮ್ಮ ಭವಿಷ್ಯವಾಣಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಯಾದವ್‌ ಅಚ್ಚರಿ ಮೂಡಿಸಿದ್ದಾರೆ. ಯಾದವ್ ಪ್ರಕಾರ ಬಿಜೆಪಿ 240-260 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷಗಳು 34-45 ಸ್ಥಾನಗಳನ್ನು ಗೆಲ್ಲಬಹುದು. ಅಂದರೆ ಎನ್‌ಡಿಎ (NDA) ಒಟ್ಟು 275 ಮತ್ತು 305 ಸ್ಥಾನಗಳ ನಡುವೆ ಸುಳಿದಾಡಬಹುದು.

ಇದು ಈ ಚುನಾವಣೆಯಲ್ಲಿ ಪುನರುಜ್ಜೀವನ ಹೊಂದುವ ಕಾಂಗ್ರೆಸ್ (Congress) ಪಕ್ಷದ ಭರವಸೆಯನ್ನು ನುಚ್ಚುನೂರು ಮಾಡಿದೆ. ಆದರೆ ಯಾದವ್‌ ಪ್ರಕಾರ ಈಗ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದು ಭರವಸೆಯ ಬೆಳ್ಳಿ ರೇಖೆ ಇದೆ. ಏನೆಂದರೆ ಅದರ ಸ್ಥಾನಗಳ ಸಂಖ್ಯೆ 100 ದಾಟಬಹುದು. ಕಳೆದ ಚುನಾವಣೆಯಲ್ಲಿ ಅದು ಎರಡಂಕಿಗಳಿಗೆ ಇಳಿದಿತ್ತು.

“ದೇಶದ ಚುನಾವಣೆಗಳು ಮತ್ತು ಸಾಮಾಜಿಕ-ರಾಜಕೀಯ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವವರಲ್ಲಿ ವಿಶ್ವಾಸಾರ್ಹ ಮುಖವಾಗಿರುವ ಯೋಗೇಂದ್ರ ಯಾದವ್ ಅವರು 2024ರ ಲೋಕಸಭೆ ಚುನಾವಣೆಯ “ಅಂತಿಮ ಮೌಲ್ಯಮಾಪನ” ಹಂಚಿಕೊಂಡಿದ್ದಾರೆ. ಯೋಗೇಂದ್ರಜಿ ಪ್ರಕಾರ ಬಿಜೆಪಿ 240-260 ಸ್ಥಾನಗಳನ್ನು ಪಡೆಯಬಹುದು ಮತ್ತು NDAಯ ಮಿತ್ರಪಕ್ಷಗಳು 35-45 ಸ್ಥಾನಗಳು. ಒಟ್ಟಾರೆ ಬಿಜೆಪಿ/ಎನ್‌ಡಿಎಗೆ ಲೋಕಸಭೆಯಲ್ಲಿ 303/323 ಸ್ಥಾನಗಳು. ಎನ್‌ಡಿಎ ಸರ್ಕಾರ ರಚಿಸಲು 272 ಸ್ಥಾನಗಳು ಬೇಕು. ಕಳೆದ ಬಾರಿ ಶಿವಸೇನೆ ಎನ್‌ಡಿಎಯ ಭಾಗವಾಗಿ 18 ಸ್ಥಾನ ಪಡೆದಿತ್ತು. ಆದರೆ ಈಗ ಅದು ಜೊತೆಗಿಲ್ಲ. ಈಗ ಯಾರ ಸರ್ಕಾರ ರಚನೆಯಾಗಲಿದೆ ಎಂಬುದನ್ನು ನೀವೇ ಮೌಲ್ಯಮಾಪನ ಮಾಡಿ” ಎಂದು ಪ್ರಶಾಂತ್‌ ಕಿಶೋರ್ ಬರೆದಿದ್ದಾರೆ.

ಯಾದವ್, ಕಾಂಗ್ರೆಸ್ 85ರಿಂದ 100 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಬಿಜೆಪಿಯನ್ನು ಎದುರಿಸಿ ತಲೆಯತ್ತಿ ನಿಲ್ಲುವ ಆಶಯ ಹೊಂದಿರುವ ಇಂಡಿಯಾ ಬ್ಲಾಕ್ 120-135 ಸ್ಥಾನಗಳಿಗೆ ಉಳಿಯುವ ಸಾಧ್ಯತೆಯಿದೆ ಎಂದಿದ್ದಾರೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದಿತ್ತು.

ಕಿಶೋರ್, ಈ ವಾರ ಸಂದರ್ಶನವೊಂದರಲ್ಲಿ, ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ಗಮನಾರ್ಹ ಅತೃಪ್ತಿ ಇಲ್ಲದ ಕಾರಣ ಬಿಜೆಪಿ ಆರಾಮವಾಗಿ ಬಹುಮತದ ಅಂಕವನ್ನು ದಾಟುತ್ತದೆ ಎಂದು ಹೇಳಿದ್ದರು. “ನಿರಾಶೆಗಳು, ಈಡೇರದ ಆಕಾಂಕ್ಷೆಗಳು ಇರಬಹುದು. ಆದರೆ ವ್ಯಾಪಕ ಕೋಪದ ಬಗ್ಗೆ ಯಾವುದೇ ಸುಳಿವು ಇಲ್ಲ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದರು. “ಬಿಜೆಪಿ ತನ್ನ ಮಹತ್ವಾಕಾಂಕ್ಷೆಯ 370 ಸ್ಥಾನ ಗುರಿಯನ್ನು ಸಾಧಿಸಲು ಸಾಧ್ಯವಾಗದಿರಬಹುದು” ಎಂದು ಸುಳಿವು ನೀಡಿದ್ದರು.

ಬಿಜೆಪಿ 295ರಿಂದ 315 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಮೆರಿಕದ ರಾಜಕೀಯ ತಜ್ಞ ಇಯಾನ್ ಬ್ರೆಮ್ಮರ್ ಈ ಹಿಂದೆ ತಿಳಿಸಿದ್ದಾರೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 303 ಲೋಕಸಭಾ ಸ್ಥಾನಗಳನ್ನು ಗೆದ್ದು, ಹಿಂದಿ ಹೃದಯ ರಾಜ್ಯಗಳಲ್ಲಿ ʼಮೋದಿ ಅಲೆ’ಯ ಮೇಲೆ ಸವಾರಿ ಮಾಡಿತ್ತು. 370 ಸೀಟುಗಳನ್ನು ಗೆಲ್ಲಬೇಕಾದರೆ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಪಕ್ಷಕ್ಕೆ ಭರ್ಜರಿ ಜಯಗಳಿಸಬೇಕು.

ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌

ಲೋಕಸಭೆ ಚುನಾವಣೆಗೆ (Lok Sabha Election 2024) ಎರಡು ವಾರಗಳ ಮೊದಲು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಅವರು ಕಾಂಗ್ರೆಸ್ (Congress) ಮತ್ತು ಇಂಡಿಯಾ ಬ್ಲಾಕ್‌ (INDIA Bloc) ಮೈತ್ರಿಕೂಟಕ್ಕೆ ರೆಡ್ ಅಲರ್ಟ್ ನೀಡಿದ್ದರು. ಆರು ಪೂರ್ವ ಮತ್ತು ದಕ್ಷಿಣ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಭಾರತೀಯ ಜನತಾ ಪಕ್ಷ (BJP) ಭಾರಿ ಪ್ರದರ್ಶನ ನೀಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. “ಆಡಳಿತ ಪಕ್ಷವು ಅಜೇಯವಲ್ಲ. ಆದರೆ ಪ್ರತಿಪಕ್ಷಗಳು ಇನ್ನಷ್ಟು ಅವಕಾಶಗಳನ್ನು ಕಳೆದುಕೊಳ್ಳುತ್ತಿವೆ. ನೀವು ಕ್ಯಾಚ್‌ಗಳನ್ನು ಕೈಬಿಟ್ಟರೆ, ಬ್ಯಾಟರ್ ಶತಕ ಗಳಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷಗಳಿಗೆ ಪ್ರಶಾಂತ್ ಕಿಶೋರ್ ಎಚ್ಚರಿಕೆ

“ಬಿಜೆಪಿ ತೆಲಂಗಾಣದಲ್ಲಿ ಮೊದಲಿಗರು ಅಥವಾ ಎರಡನೆಯವರಾಗಲಿದ್ದಾರೆ. ಒಡಿಶಾದಲ್ಲಿ ನಂಬರ್ 1 ಆಗುತ್ತಾರೆ. ಇನ್ನೊಂದು ಆಶ್ಚರ್ಯಕರ ಬೆಳವಣಿಗೆ ಎಂದರೆ, ಬಿಜೆಪಿ ಬಂಗಾಳದಲ್ಲಿ ನಂಬರ್ 1 ಆಗಲಿದೆ” ಎಂದು ಕಿಶೋರ್ ಹೇಳಿದ್ದಾರೆ. “ತಮಿಳುನಾಡಿನಲ್ಲಿ ಪಕ್ಷವು ಎರಡಂಕಿ ಪ್ರಮಾಣದ ಮತಗಳನ್ನು ಗಳಿಸಬಹುದು” ಎಂದಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮತ ಹಂಚಿಕೆ ಇಲ್ಲಿ 3.6 ಶೇಕಡಾ ಮತ್ತು 2021ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 2.6 ಶೇಕಡಾ ಇತ್ತು.

ಈ ಹಿಂದೆ ಬಿಜೆಪಿ ಇಲ್ಲಿ ಅಸ್ತಿತ್ವಕ್ಕಾಗಿ ಸಾಕಷ್ಟು ಹೆಣಗಾಡಿದೆ. ಆದರೆ ಮತದಾರರು ಬಿಜೆಪಿಯ ಹಾರ್ಡ್‌ಕೋರ್‌ ಸಿದ್ಧಾಂತದತ್ತ ಒಲಿದಿಲ್ಲ. 2014 ಮತ್ತು 2019ರಲ್ಲಿ ತೆಲಂಗಾಣ, ಒಡಿಶಾ, ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳದಾದ್ಯಂತದ 164 ಸ್ಥಾನಗಳಲ್ಲಿ ಏಳು ಮತ್ತು 30 ಸ್ಥಾನಗಳನ್ನು ಮಾತ್ರ ಗೆದ್ದಿದೆ.

ಕರ್ನಾಟಕದಲ್ಲಿ 2019ರಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆದ್ದುದು ಮಾತ್ರ ಅಪವಾದವಾಗಿದೆ. ಕಳೆದ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ದೊಡ್ಡ ಗೆಲುವಿನ ನಂತರ ಇಲ್ಲಿ ಪಕ್ಷವು ದುರ್ಬಲಗೊಂಡಿದೆ ಎಂದು ಹಲವರು ನಂಬುತ್ತಾರೆ.

ಆದರೂ, ಐದು ವರ್ಷಗಳ ಆಡಳಿತದಿಂದ ಈ ಪ್ರದೇಶಗಳಲ್ಲಿ ಬಿಜೆಪಿಯ ನಿರಂತರ ಪ್ರಭಾವ ದೊಡ್ಡ ಲಾಭಾಂಶವನ್ನು ನೀಡಬಹುದು. ಇದು ಸೀಟುಗಳಾಗಿ ಸಿಗದಿದ್ದರೂ ಸಹ ಮುಂಬರುವ ವಿಧಾನಸಭೆ ಚುನಾವಣೆಗಳಿಗೆ ಪಕ್ಷದ ಪ್ರೊಫೈಲ್ ಅನ್ನು ಹೆಚ್ಚಿಸಬಹುದು. ಈ ಆರು ರಾಜ್ಯಗಳಲ್ಲಿ ಮೂರು- ಬಂಗಾಳ, ಕೇರಳ ಮತ್ತು ತಮಿಳುನಾಡು- 2026ರಲ್ಲಿ ಮತ ಚಲಾಯಿಸುತ್ತವೆ.

ಈ ರಾಜ್ಯಗಳಲ್ಲಿ ಬಿಜೆಪಿ ವಿಸ್ತರಣೆಯ ಪ್ರಮುಖ ಹೆಜ್ಜೆಗಳನ್ನು ಇಟ್ಟಿದೆ. ಪಕ್ಷದ ಎರಡು ದೊಡ್ಡ ಹಿಟ್ಟರ್‌ಗಳಾದ ಪ್ರಧಾನಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಪುನರಾವರ್ತಿತ ಭೇಟಿಗಳನ್ನು ಪಿಕೆ ಸೂಚಿಸಿದ್ದಾರೆ. “ಕಳೆದ ಐದು ವರ್ಷಗಳಲ್ಲಿ ಪ್ರಧಾನಿಯವರು ತಮಿಳುನಾಡಿಗೆ ನೀಡಿದ ಭೇಟಿಗಳು ರಾಹುಲ್ ಗಾಂಧಿ ಅಥವಾ ಸೋನಿಯಾ ಗಾಂಧಿ ಅಥವಾ ಯಾವುದೇ ವಿರೋಧ ಪಕ್ಷದ ನಾಯಕರ ಭೇಟಿಗಳಿಗಿಂತ ಅಧಿಕ.”

ಹಿಂದಿ ಹೃದಯಭಾಗದ ಲಾಭ

ಹಿಂದಿ ಹೃದಯಭಾಗವೆನಿಸಿದ ಉತ್ತರ ಮತ್ತು ಪಶ್ಚಿಮ ರಾಜ್ಯಗಳಲ್ಲಿ 239 ಸ್ಥಾನಗಳಿವೆ. ಇಲ್ಲಿಯವರೆಗೆ ಈ ರಾಜ್ಯಗಳಲ್ಲಿ ಬಿಜೆಪಿ ಪ್ರಬಲವಾಗಿದ್ದು, ಇಲ್ಲಿ ನುಗ್ಗಲು ಪ್ರತಿಪಕ್ಷ ವಿಫಲವಾಗಿದೆ. ಮೋದಿಯವರು ಪಕ್ಷಕ್ಕೆ 370+ ಸೀಟುಗಳಿಗೆ, ಮೈತ್ರಿಕೂಟದ ಪಾಲುದಾರರು ಸೇರಿದಂತೆ 400ಕ್ಕೂ ಅಧಿಕ ಸ್ಥಾನ ಗೆಲ್ಲಲು ಯೋಜಿಸಿದ್ದಾರೆ. ಇದರ ದೊಡ್ಡ ಭಾಗವು ಗುಜರಾತ್, ರಾಜಸ್ಥಾನ, ಹರಿಯಾಣ, ಬಿಹಾರ, ಮಧ್ಯಪ್ರದೇಶ, ಹಾಗೆಯೇ ಜಾರ್ಖಂಡ್, ಛತ್ತೀಸ್‌ಗಢ ಮತ್ತು ಉತ್ತರಾಖಂಡಗಳನ್ನು ಒಳಗೊಂಡಿರುವ ಹೃದಯಭಾಗದ ರಾಜ್ಯಗಳಿಂದ ಬರುತ್ತದೆ.

ಇನ್ನಷ್ಟು ಹೃದಯಭಾಗದಲ್ಲಿ – ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರ – 149 ಸ್ಥಾನಗಳಿವೆ. 2019ರಲ್ಲಿ ಇಲ್ಲಿ ಬಿಜೆಪಿ 107, ಕಾಂಗ್ರೆಸ್ ಮೂರು ಸೇರಿ ಪ್ರಸ್ತುತ ಮಿತ್ರಪಕ್ಷಗಳು ಎಂಟು ಗೆದ್ದಿದ್ದವು. ಕಾಂಗ್ರೆಸ್ ಕಳೆದ ವರ್ಷ ಮೂರು ರಾಜ್ಯಗಳಲ್ಲಿ- ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶ – ಅಧಿಕಾರ ಕಲೆದುಕೊಂಡರೆ, ಇತರ ಮೂರು – ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗುಜರಾತ್ – ರಾಜ್ಯಗಳಲ್ಲಿ ಹಿಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಸೋತಿದೆ.

“ನಿಮ್ಮ ಹೋರಾಟ ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಲ್ಲಿದೆ. ಆದರೆ ನೀವು ಮಣಿಪುರ ಮತ್ತು ಮೇಘಾಲಯ ಪ್ರವಾಸ ಮಾಡುತ್ತಿದ್ದೀರಿ. ನೀವು ಹೇಗೆ ಯಶಸ್ವಿಯಾಗುತ್ತೀರಿ?” ಎಂದು ರಾಹುಲ್‌ ಗಾಂಧಿ ಅವರ ʼಭಾರತ್ ಜೋಡೋ ನ್ಯಾಯ ಯಾತ್ರೆʼಗೆ ಸಂಬಂಧಿಸಿ ಕಿಶೋರ್ ಕೇಳಿದ್ದಾರೆ. ಮಣಿಪುರ ಮತ್ತು ಮೇಘಾಲಯ ಒಟ್ಟು ನಾಲ್ಕು ಲೋಕಸಭಾ ಸ್ಥಾನಗಳನ್ನು ಹೊಂದಿವೆ.

ಇದನ್ನೂ ಓದಿ: Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Continue Reading

ಪ್ರಮುಖ ಸುದ್ದಿ

Lok Sabha Election: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್;‌ ಮತಕ್ಕಾಗಿ ಸರ್ಟಿಫಿಕೇಟ್ ಪಡೆದ ಜೈಶಂಕರ್‌!

Lok Sabha Election 2024: ದಿಲ್ಲಿಯ ಗಣ್ಯ ಮತಗಟ್ಟೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿ ಮತ ಚಲಾಯಿಸಿದರು. ಇನ್ನೊಂದು ಮತಗಟ್ಟೆಯಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮತ ಚಲಾಯಿಸಿ, ಇಂಕ್‌ ಹಾಕಿದ ತಮ್ಮ ಬೆರಳುಗಳನ್ನು ಪ್ರದರ್ಶಿಸಿದರು. ಪ್ರಿಯಾಂಕ ಗಾಂಧಿ ಅವರ ಮಕ್ಕಳಾದ ರೆಹಾನ್‌ ಮತ್ತು ಮಿರಾಯಾ ಕೂಡ ತಮ್ಮ ಮತಗಳನ್ನು ಚಲಾಯಿಸಿದರು.

VISTARANEWS.COM


on

lok sabha election 2024 jaishankar rahul sonia murmu
Koo

ಹೊಸದಿಲ್ಲಿ: ಇಂದು ನಡೆಯುತ್ತಿರುವ ಲೋಕಸಭೆ ಚುನಾವಣೆ (Lok Sabha Election 2024) 6ನೇ ಹಂತದ ಮತದಾನದಲ್ಲಿ (voting) ಈವರೆಗೆ ಹಲವು ಗಣ್ಯರು ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu), ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಕಾಂಗ್ರೆಸ್‌ ಮುಖಂಡರಾದ ಸೋನಿಯಾ ಗಾಂಧಿ (Sonia Gandhi), ರಾಹುಲ್‌ ಗಾಂಧಿ (Rahul Gandhi) ತಮ್ಮ ಮತ ಚಲಾಯಿಸಿದರು.

ದಿಲ್ಲಿಯ ಗಣ್ಯ ಮತಗಟ್ಟೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿ ಮತ ಚಲಾಯಿಸಿದರು. ಇನ್ನೊಂದು ಮತಗಟ್ಟೆಯಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮತ ಚಲಾಯಿಸಿ, ಇಂಕ್‌ ಹಾಕಿದ ತಮ್ಮ ಬೆರಳುಗಳನ್ನು ಪ್ರದರ್ಶಿಸಿದರು. ಪ್ರಿಯಾಂಕ ಗಾಂಧಿ ಹಾಗೂ ಅವರ ಮಕ್ಕಳಾದ ರೆಹಾನ್‌ ಮತ್ತು ಮಿರಾಯಾ ಕೂಡ ತಮ್ಮ ಮತಗಳನ್ನು ಚಲಾಯಿಸಿದರು.

ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಮತ ಚಲಾಯಿಸಿ, “ಮತದಾನವು ಒಂದು ಜವಾಬ್ದಾರಿ ಮತ್ತು ಅಧಿಕಾರವಾಗಿದೆ. ಭಾರತವು ವಿಶ್ವದ ಅತ್ಯಂತ ವೈವಿಧ್ಯಮಯ, ಸಕ್ರಿಯ ಮತ್ತು ಪರಿಣಾಮಕಾರಿ ಪ್ರಜಾಪ್ರಭುತ್ವವಾಗಿದೆ” ಎಂದು ಹೇಳಿದರು. ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರೂ ಮತ ಹಾಕಿದರು.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ದೆಹಲಿಯಲ್ಲಿ ಮತ ಚಲಾಯಿಸಿದರು. ತಮ್ಮ ಗೊತ್ತುಪಡಿಸಿದ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರರಾಗಿದ್ದ ಕಾರಣ ಅವರು ಈ ಮತದಾನಕ್ಕಾಗಿ ಪ್ರಮಾಣಪತ್ರವನ್ನು ಸಹ ಪಡೆದರು. “ಈ ಬೂತ್‌ನಲ್ಲಿ ನಾನು ಮೊದಲ ಪುರುಷ ಮತದಾರನಾಗಿದ್ದೇನೆ” ಎಂದು ಜೈಶಂಕರ್ ತಮ್ಮ ಪ್ರಮಾಣಪತ್ರವನ್ನು ಹಿಡಿದುಕೊಂಡು ಫೋಟೋ ತೆಗೆಸಿಕೊಂಡರಲ್ಲದೆ, ಛಾಯಾಚಿತ್ರವನ್ನು ತಮ್ಮ x ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದಕ್ಕೂ ಮುನ್ನ ಅವರ ಮತಗಟ್ಟೆಯ ವಿಚಾರದಲ್ಲಿ ಗೊಂದಲ ಉಂಟಾಯಿತು. ಮೊದಲು ಬೇರೆ ಮತಗಟ್ಟೆಗೆ ತೆರಲಿದ ಅವರು, ನಂತರ ಸರಿಯಾದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದರು. “”ದೇಶಕ್ಕೆ ಇದು ನಿರ್ಣಾಯಕ ಕ್ಷಣವಾಗಿರುವುದರಿಂದ ಜನರು ಹೊರಗೆ ಬಂದು ಮತ ಚಲಾಯಿಸಬೇಕೆಂದು ನಾವು ಬಯಸುತ್ತೇವೆ. ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನನಗೆ ವಿಶ್ವಾಸವಿದೆ” ಎಂದು ಅವರು ಮತದಾನದ ನಂತರ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ, ಪಿಡಿಪಿ ಮುಖ್ಯಸ್ಥೆ ಮತ್ತು ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೆಹಬೂಬಾ ಮುಫ್ತಿ (Mehabuba Mufti) ಅವರು ಪಕ್ಷದ ಮುಖಂಡರು ಮತ್ತು ಬೆಂಬಲಿಗರೊಂದಿಗೆ ತಮ್ಮ ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಚುನಾವಣೆಗಳಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿದರು. PDP ಪೋಲಿಂಗ್ ಏಜೆಂಟ್‌ಗಳು ಮತ್ತು ಕಾರ್ಯಕರ್ತರನ್ನು ಯಾವುದೇ ಕಾರಣವಿಲ್ಲದೆ ಬಂಧಿಸಲಾಗಿದೆ ಎಂದು ಮುಫ್ತಿ ಹೇಳಿಕೊಂಡಿದ್ದಾರೆ.

9 ಗಂಟೆವರೆಗಿನ ಮತದಾನ ಪ್ರಮಾಣ ಹೀಗಿದೆ:

ಬಿಹಾರ : 9.66
ಹರಿಯಾಣ : 8.31
ಜಮ್ಮು & ಕಾಶ್ಮೀರ : 8.89
ಜಾರ್ಖಂಡ್ : 11.74
ದಿಲ್ಲಿ : 8.94
ಒಡಿಶಾ : 7.43
ಉತ್ತರ ಪ್ರದೇಶ : 12.33
ಪಶ್ಚಿಮ ಬಂಗಾಳ : 16.54

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

ಇದನ್ನೂ ಓದಿ: Lok Sabha Election: 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ ಆರಂಭ; ಜೈಶಂಕರ್‌ ಮತಗಟ್ಟೆ ಗೊಂದಲ, ಮುಫ್ತಿ ಪ್ರತಿಭಟನೆ

Continue Reading

Lok Sabha Election 2024

Lok Sabha Election: 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ ಆರಂಭ; ಜೈಶಂಕರ್‌ ಮತಗಟ್ಟೆ ಗೊಂದಲ, ಮುಫ್ತಿ ಪ್ರತಿಭಟನೆ

Lok Sabha Election: ಸಾರ್ವತ್ರಿಕ ಚುನಾವಣೆಯ ಆರನೇ ಹಂತದಲ್ಲಿ ವಿದೇಶಾಂಗ ವ್ಯವಹಾರ ಸಚಿವ ಡಾ. ಎಸ್. ಜೈಶಂಕರ್ (S Jaishankar) ಅವರು ತಮ್ಮ ಮತಗಟ್ಟೆಯಲ್ಲಿ ಮೊದಲಿಗರಾಗಿ ಮತದಾನ ಮಾಡಿದರು. ಇದಕ್ಕೂ ಮುನ್ನ ಅವರ ಮತಗಟ್ಟೆಯ ವಿಚಾರದಲ್ಲಿ ಗೊಂದಲ ಉಂಟಾಯಿತು.

VISTARANEWS.COM


on

lok sabha election 2024 jaishankar mufti
Koo

ಬೆಂಗಳೂರು: ರಾಜಧಾನಿ ದಿಲ್ಲಿ (Delhi) ಸೇರಿದಂತೆ ಎಂಟು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆ (Lok Sabha Election 2024) 6ನೇ ಹಂತದ ಮತದಾನ (voting) ಇಂದು ಮುಂಜಾನೆ 7 ಗಂಟೆಯಿಂದ ಆರಂಭವಾಗಿದೆ. 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವ್ಯಾಪ್ತಿಯ 58 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ಆರಂಭವಾಯಿತು.

ಸಾರ್ವತ್ರಿಕ ಚುನಾವಣೆಯ ಆರನೇ ಹಂತದಲ್ಲಿ ವಿದೇಶಾಂಗ ವ್ಯವಹಾರ ಸಚಿವ ಡಾ. ಎಸ್. ಜೈಶಂಕರ್ (S Jaishankar) ಅವರು ತಮ್ಮ ಮತಗಟ್ಟೆಯಲ್ಲಿ ಮೊದಲಿಗರಾಗಿ ಮತದಾನ ಮಾಡಿದರು. ಇದಕ್ಕೂ ಮುನ್ನ ಅವರ ಮತಗಟ್ಟೆಯ ವಿಚಾರದಲ್ಲಿ ಗೊಂದಲ ಉಂಟಾಯಿತು. ನಂತರ ಸರಿಯಾದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದರು. “ನಾವು ನಮ್ಮ ಮತವನ್ನು ಚಲಾಯಿಸಿದ್ದೇವೆ. ಈ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರ ಎಂಬ ಸವಲತ್ತು ನನಗೆ ಸಿಕ್ಕಿತು. ಪ್ರತಿಯೊಬ್ಬರೂ ತಮ್ಮ ಮತ ಚಲಾಯಿಸುವ ಮೂಲಕ ದೇಶಕ್ಕಾಗಿ ಈ ನಿರ್ಣಾಯಕ ಕ್ಷಣದಲ್ಲಿ ಭಾಗವಹಿಸಬೇಕು” ಎಂದವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ, ಪಿಡಿಪಿ ಮುಖ್ಯಸ್ಥೆ ಮತ್ತು ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೆಹಬೂಬಾ ಮುಫ್ತಿ (Mehabuba Mufti) ಅವರು ಪಕ್ಷದ ಮುಖಂಡರು ಮತ್ತು ಬೆಂಬಲಿಗರೊಂದಿಗೆ ತಮ್ಮ ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಚುನಾವಣೆಗಳಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿದರು. PDP ಪೋಲಿಂಗ್ ಏಜೆಂಟ್‌ಗಳು ಮತ್ತು ಕಾರ್ಯಕರ್ತರನ್ನು ಯಾವುದೇ ಕಾರಣವಿಲ್ಲದೆ ಬಂಧಿಸಲಾಗಿದೆ ಎಂದು ಮುಫ್ತಿ ಹೇಳಿಕೊಂಡಿದ್ದಾರೆ.

ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌, ಮನೋಹರ ಲಾಲ್‌ ಖಟ್ಟರ್‌, ಕನ್ಹಯ್ಯ ಕುಮಾರ್‌ ಸೇರಿ ಹಲವು ಪ್ರಮುಖ ನಾಯಕರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದೆ.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

6ನೇ ಹಂತದಲ್ಲಿ ಕಣಕ್ಕಿಳಿದ ಪ್ರಮುಖ ಅಭ್ಯರ್ಥಿಗಳು

ಬಾನ್ಸುರಿ ಸ್ವರಾಜ್: ನವದೆಹಲಿ ಕ್ಷೇತ್ರ
ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ ಅವರು ನವದೆಹಲಿ ಲೋಕಸಭಾ ಅಭ್ಯರ್ಥಿಯಾಗಿದ್ದು, ಎಎಪಿಯ ಸೋಮನಾಥ್ ಭಾರ್ತಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಹಾಲಿ ಸಂಸದೆ ಮೀನಾಕ್ಷಿ ಲೇಖಿ ಬದಲು ಬಾನ್ಸುರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮನೇಕಾ ಗಾಂಧಿ: ಸುಲ್ತಾನ್‌ಪುರ
ಮನೇಕಾ ಗಾಂಧಿ ಸುಲ್ತಾನ್‌ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷದ ರಾಮ್ ಭುಲ್ ನಿಶಾದ್ ಮತ್ತು ಬಹುಜನ ಸಮಾಜ ಪಕ್ಷದ ಉದಯ್ ರಾಜ್ ವರ್ಮಾ ವಿರುದ್ಧ ಕಣಕ್ಕಿಳಿದಿದ್ದಾರೆ.

Maneka Gandhi

ನವೀನ್ ಜಿಂದಾಲ್: ಕುರುಕ್ಷೇತ್ರ
6ನೇ ಹಂತದ ಚುನಾವಣೆಯಲ್ಲಿ ಹರಿಯಾಣದ ಕುರುಕ್ಷೇತ್ರ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಬಿಜೆಪಿ ಅಭ್ಯರ್ಥಿ ನವೀನ್ ಜಿಂದಾಲ್, ಎಎಪಿಯ ಸುಶೀಲ್ ಗುಪ್ತಾ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳದ (ಐಎನ್‌ಎಲ್‌ಡಿ) ಅಭಯ್ ಸಿಂಗ್ ಚೌಟಾಲಾ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಂದಾಲ್ ಬಂದಿದ್ದಾರೆ

ಅಭಿಜಿತ್ ಗಂಗೋಪಾಧ್ಯಾಯ: ತಮ್ಲುಕ್ ಕ್ಷೇತ್ರ
ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿ. ಟಿಎಂಸಿಯ ದೇಬಂಗ್ಶು ಭಟ್ಟಾಚಾರ್ಯ ಮತ್ತು ಸಿಪಿಐ(ಎಂ) ನಿಂದ ಸಯಾನ್ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿದ್ದಾರೆ. ಗಂಗೋಪಾಧ್ಯಾಯ ಅವರು ಕೋಲ್ಕೊತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು.

ಪ್ರವೀಣ್ ನಿಶಾದ್: ಸಂತ ಕಬೀರ ನಗರ
ಸಂತ ಕಬೀರ್ ನಗರದಲ್ಲಿ ಬಿಜೆಪಿ ಉಸ್ತುವಾರಿ ಪ್ರವೀಣ್ ನಿಶಾದ್, ಸಮಾಜವಾದಿ ಪಕ್ಷದ ಲಕ್ಷ್ಮೀಕಾಂತ್ ಅಲಿಯಾಸ್ ಪಪ್ಪು ನಿಶಾದ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಮನೋಜ್ ತಿವಾರಿ VS ಮತ್ತು ಕನ್ಹಯ್ಯ ಕುಮಾರ್
ಈಶಾನ್ಯ ದೆಹಲಿ ಕ್ಷೇತ್ರದಲ್ಲಿ ಇಬ್ಬರು ಪ್ರಮುಖ ಅಭ್ಯರ್ಥಿಗಳ ವಿರುದ್ಧ ಕದನ ನಡೆಯಲಿದೆ. ಹಾಲಿ ಸಂಸದ ಮನೋಜ್ ತಿವಾರಿ ಮತ್ತು ಕಾಂಗ್ರೆಸ್‌ನ ಕನ್ಹಯ್ಯ ಕುಮಾರ್ ಕಣದಲ್ಲಿದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದ ಏಳು ಸಂಸದರ ಪೈಕಿ ಎಲ್ಲ ಆರು ಸಂಸದರನ್ನು ಕೈಬಿಟ್ಟರೆ, ತಿವಾರಿ ಮಾತ್ರ ಕಣದಲ್ಲಿದ್ದಾರೆ.

Kanhaiya Kumar

ಸಂಬಿತ್ ಪಾತ್ರಾ: ಪುರಿ ಕ್ಷೇತ್ರ
ಒಡಿಶಾದ ಪುರಿ ಕ್ಷೇತ್ರದಿಂದ ಸಂಬಿತ್ ಪಾತ್ರ ಸ್ಪರ್ಧಿಸುತ್ತಿದ್ದಾರೆ. ಬಿಜೆಡಿಯ ಅರೂಪ್ ಪಟ್ನಾಯಕ್ ಮತ್ತು ಕಾಂಗ್ರೆಸ್‌ನ ಜಯನಾರಾಯಣ ಪಟ್ನಾಯಕ್ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.

ದಿನೇಶ್ ಲಾಲ್ ಯಾದವ್ VS ಧರ್ಮೇಂದ್ರ ಯಾದವ್
ಅಜಂಗಢ ಕ್ಷೇತ್ರದಲ್ಲಿ ಸಂಸದ ದಿನೇಶ್ ಲಾಲ್ ಯಾದವ್ ನಿರಾಹುವಾ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಸೋದರ ಸಂಬಂಧಿ ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಅಜಂಗಢ ಕ್ಷೇತ್ರವನ್ನು ಅಖಿಲೇಶ್ ಯಾದವ್ ಗೆದ್ದಿದ್ದರು.

ಮನೋಹರ್ ಲಾಲ್ ಖಟ್ಟರ್: ಕರ್ನಾಲ್
ಬಿಜೆಪಿ ಅಭ್ಯರ್ಥಿ ಮತ್ತು ಹರಿಯಾಣದ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್, ಕರ್ನಾಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ದಿವ್ಯಾoಶು ಬುಧಿರಾಜ ವಿರುದ್ಧ ಸ್ಪರ್ಧಿಸಿದ್ದಾರೆ.

ಅನಂತ್ ನಾಗ್ -ರಾಜೌರಿ ಕ್ಷೇತ್ರ
ಜಮ್ಮು – ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ಇಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಬಿಜೆಪಿಯು ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇದನ್ನೂ ಓದಿ: Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Continue Reading
Advertisement
Summer Special Trains
ಬೆಂಗಳೂರು6 mins ago

Summer Special Trains : ನೈರುತ್ಯ ರೈಲ್ವೆಯಿಂದ ಬೇಸಿಗೆ ವಿಶೇಷ ರೈಲುಗಳ ಸಂಚಾರ; ಪಟ್ಟಿ ಇಲ್ಲಿದೆ

Lockup Death
ಕರ್ನಾಟಕ6 mins ago

Lockup Death: ದಾವಣಗೆರೆ ಯುವಕನ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ, ಎಫ್ಐಆರ್ ಇಲ್ಲದೆ ಕರೆ ತಂದಿದ್ದು ತಪ್ಪು ಎಂದ ಸಿಎಂ

Hardik Pandya
ಕ್ರೀಡೆ31 mins ago

Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

Prajwal Revanna Case Why did Deve Gowda write a letter to Prajwal and HD Kumaraswamy reveals secret
ರಾಜಕೀಯ32 mins ago

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Murder case in Mysuru
ಮೈಸೂರು35 mins ago

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Gold Rate Today
ಚಿನ್ನದ ದರ37 mins ago

Gold Rate Today: ಚಿನ್ನದ ದರ ಇಂದು ಯಥಾಸ್ಥಿತಿ; 22K- 24K ಬಂಗಾರದ ದರಗಳು ಹೀಗಿವೆ

Shreerastu Shubhamastu Serial Netra Jadhav out
ಕಿರುತೆರೆ49 mins ago

Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

Road Accident
ಕ್ರೈಂ1 hour ago

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Sreenath Bhasi Movie Shashidhar direction new Movie
ಸ್ಯಾಂಡಲ್ ವುಡ್1 hour ago

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

IPL Final 2024
ಕ್ರಿಕೆಟ್1 hour ago

IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌