Amrit Mahotsav | ಕತಾರ್‌ನ ಇಂಡಿಯನ್ ಕಲ್ಚರಲ್ ಸೆಂಟರ್‌ನಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ - Vistara News

ವಿದೇಶ

Amrit Mahotsav | ಕತಾರ್‌ನ ಇಂಡಿಯನ್ ಕಲ್ಚರಲ್ ಸೆಂಟರ್‌ನಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

ಭಾರತ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಕತಾರ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

VISTARANEWS.COM


on

ಆಜಾದಿ ಕಾ ಅಮೃತ್ ಮಹೋತ್ಸವ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೋಹಾ (ಕತಾರ್): ಇಂಡಿಯನ್ ಕಲ್ಚರಲ್ ಸೆಂಟರ್‌ನ ಮೆಗಾ ಕಲ್ಚರಲ್ ಕಾರ್ನಿವಲ್ ಇವೆಂಟ್‌ಗಳು ಭಾರತ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಸ್ಮರಣಾರ್ಥ “ಆಜಾದಿ ಕಾ ಅಮೃತ್ ಮಹೋತ್ಸವʼದ ಭಾಗವಾಗಿ ನಡೆಯುತ್ತಿವೆ.

ಆಚರಣೆಯ 5ನೇ ದಿನದಂದು ಭವ್ಯ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಸಚಿನ್ ದಿನಕರ್ ಸಂಕ್ಪಾಲ್ ಉದ್ಘಾಟನೆ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟದ ಮಹತ್ವ, ಇತಿಹಾಸ ಮತ್ತು ನಾಯಕರ ತ್ಯಾಗದ ಕುರಿತು ವಿವರಿಸಿದರು. ಇಂಡಿಯನ್ ಕಲ್ಚರಲ್ ಸೆಂಟರ್ ಅಧ್ಯಕ್ಷ ಪಿ.ಎನ್. ಬಾಬುರಾಜನ್, INCAS ಕತಾರ್ ಅಧ್ಯಕ್ಷ ಹೈದರ್ ಚುಂಗತಾರ ಹಾಜರಿದ್ದರು.

ಆಜಾದಿ ಕಾ ಅಮೃತ್ ಮಹೋತ್ಸವ

ಈ ಸಂದರ್ಭದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಗಳ ಅಧ್ಯಕ್ಷರಾದ ಎ ಪಿ ಮಣಿಕಂಠನ್, ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾದ ಮಹೇಶ್ ಗೌಡ ಮತ್ತು ಇತರ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

ಆಜಾದಿ ಕಾ ಅಮೃತ್ ಮಹೋತ್ಸವ

ಸಮಾರಂಭದಲ್ಲಿ ಭಾರತದ ಅನನ್ಯ ಪರಂಪರೆಯನ್ನು ಪ್ರದರ್ಶಿಸಲು ವಾದ್ಯಗಳ ಫ್ಯೂಷನ್ ಸಂಗೀತ, ಶಾಸ್ತ್ರೀಯ ನೃತ್ಯ, ಸಮೂಹ ನೃತ್ಯ, ಟ್ಯಾಬ್ಲೋ ಮತ್ತು ಅನೇಕ ಪ್ರದರ್ಶನಗಳು ನಡೆದವು. ಮಕ್ಕಳ ನೃತ್ಯ ಪ್ರದರ್ಶನವು ಭಾರತದ ತ್ರಿವರ್ಣವನ್ನು ಹಾರಿಸುವ ಮೂಲಕ ವಿಶಿಷ್ಟವಾಗಿ ನಡೆಯಿತು.

ಇದನ್ನೂ ಓದಿ| Har Ghar Tiranga | ಪ್ರಧಾನಿ ಮೋದಿ ಕರೆಕೊಟ್ಟ ಹರ್​ ಘರ್​ ತಿರಂಗಾಕ್ಕೆ ಭರ್ಜರಿ ಟ್ವಿಸ್ಟ್​ ಕೊಟ್ಟ ಕಾಂಗ್ರೆಸ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಿದೇಶ

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

TikTok star: ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ತಡರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

VISTARANEWS.COM


on

Koo

ಬಾಗ್ದಾದ್‌: ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌(TikTok star) ಓಂ ಫಹಾದ್‌(Om Fahad) ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ತಮ್ಮ ಎಸ್‌ಯುವಿ ಕಾರಿನಲ್ಲಿ ಕುಳಿತಿದ್ದ ಫಹಾದ್‌ ಮೇಲೆ ಕಪ್ಪು ಬಟ್ಟೆ ಧರಿಸಿ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಏಕಾಏಕಿ ಗುಂಡಿಕ್ಕಿ ಹತ್ಯೆ (Shot Dead) ಮಾಡಿದ್ದಾರೆ. ಇನ್ನು ಘಟನೆ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆಂತರಿಕ ವ್ಯವಹಾರಗಳ ಸಚಿವಾಲಯ( Ministry of Interior) ಈ ಭೀಕರ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ್ದು, ಸೂಕ್ತ ತನಿಖೆ ಕೈಗೊಳ್ಳುವುದಾಗಿ ತಿಳಿಸಿದೆ.

ಫಹಾದ್‌ ಅವರ ಮೂಲ ಹೆಸರು ಘುಫ್ರಾನ್‌ ಸವಧಿಯಾಗಿದ್ದು, ಅವರು ಟಿಕ್‌ಟಾಕ್‌ನಲ್ಲಿ ಪಾಪ್‌ ಸಂಗೀತಗಳಿಗೆ ಡಾನ್ಸ್‌ ಮಾಡಿರುವ ವಿಡೀಯೋಗಳನ್ನು ಶೇರ್‌ ಮಾಡುತ್ತಿದ್ದರು. ಸದ್ಯ ಅವರು 5 ಲಕ್ಷ ಫಾಲೋವರ್ಸ್‌ ಅನ್ನು ಹೊಂದಿದ್ದರು. ಇದೀಗ ಅವರ ಬರ್ಬರ ಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಪೊಲೀಸರ ತನಿಖೆ ಮುಂದುವರೆದಿದೆ. 2023ರಲ್ಲಿ ಮಾಡಿದ್ದ ಅಶ್ಲೀಲ ವಿಡಿಯೋಗಳು ಭಾರೀ ಸದ್ದು ಮಾಡಿದ್ದವು. ಆ ವಿಡಿಯೋಗಳು 1 ಮಿಲಿಯನ್‌ಗೂ ಅಧಿಕ ವ್ಯೂಸ್‌ ಪಡೆದಿದ್ದವು. ಇದಾದ ಬಳಿಕ ಆಕೆಯ ಬಂಧನವಾಗಿದ್ದು, ಕೋರ್ಟ್‌ ಆರು ತಿಂಗಳ ಜೈಲು ಶಿಕ್ಷೆಯನ್ನೂ ವಿಧಿಸಿತ್ತು. ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಇತರೆ ಐವರು ಆನ್‌ಲೈನ್‌ ಕಂಟೆಂಟ್‌ ಕ್ರಿಯೇಟರ್ಸ್‌ ಕೂಡ ಅರೆಸ್ಟ್‌ ಆಗಿ, ಎರಡು ವರ್ಷ ಶಿಕ್ಷೆಗೆ ಗುರಿಯಾಗಿದ್ದರು. ಈ ಬಗ್ಗೆ ಜಿನೀವಾ ಮೂಲದ ಯುರೋ-ಮೆಡ್ ಹ್ಯೂಮನ್ ರೈಟ್ಸ್ ಮಾನಿಟರ್ ಕಳೆದ ವರ್ಷ ವರದಿ ನೀಡಿದ್ದು, ಓಂ ಫಹಾದ್ ವಿರುದ್ಧ ದೋಷಾರೋಪಣೆಗೆ ಯಾವುದೇ ಆಧಾರವನ್ನು ಕಂಡು ಬಂದಿಲ್ಲ ಮತ್ತು ಅವರ ವಿಷಯವು ಅಭಿಪ್ರಾಯ, ಅಭಿವ್ಯಕ್ತಿ ಅಥವಾ ಸ್ವಾತಂತ್ರ್ಯದ ಹಕ್ಕುಗಳ ಮಿತಿಯನ್ನು ಮೀರುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಛಾಟಿತ ನಾಯಕ ಅರೆಸ್ಟ್‌

2023ರಲ್ಲಿ ಇರಾಕಿ ಸರ್ಕಾರ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ವಿಡಿಯೋಗಳನ್ನು ಶೇರ್‌ ಮಾಡುವವರ ವಿರುದ್ಧ ಕ್ರಮಕ್ಕೆ ಮುಂದಾಗಿತ್ತು. ಓಂ ಫಹಾದ್‌ರಂತೆ ಕೌಟುಂಬಿಕ ಮತ್ತು ಸಾಮಾಜಿಕ ಸಂಪ್ರದಾಯಕ್ಕೆ ಸವಾಲೊಡ್ಡುವಂತಹ ಸೋಶಿಯಲ್‌ ಮೀಡಿಯಾ ಕಂಟೆಂಟ್‌ ಕ್ರಿಯೇಟರ್ಸ್‌ ಮೇಲೆ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿತ್ತು. ಅದಕ್ಕಾಗಿ ಒಂದು ಸಮಿತಿಯನ್ನು ಕೂಡ ರಚಿಸಿತ್ತು. ಅಲ್ಲದೇ ಅಂತಹ ಕಂಟೆಂಟ್‌ಗಳು ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಇರಾಕಿನ್‌ ಪ್ರಜೆಗಳಿಗೂ ಸರ್ಕಾ ಸೂಚಿಸಿತ್ತು. ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿತ್ತು. ಸಾವಿರಾರು ಜನ ಈ ಬಗ್ಗೆ ಉತ್ತಮ ಸ್ಪಂದನೆ ನೀಡಿದ್ದರು. ಇದಾದ ಬಳಿಕ ಕೆಲವೊಂದು ಕಂಟೆಂಟ್‌ ಕ್ರಿಯೇಟರ್ಸ್‌ ಬಹಿರಂಗವಾಗಿ ಕ್ಷಮೆಯಾಚಿಸಿ ತಮ್ಮ ತಮ್ಮ ಕಂಟೆಂಟ್‌ಗಳನ್ನು ಡಿಲೀಟ್‌ ಮಾಡಿದ್ದರು.

Continue Reading

ವಿದೇಶ

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಅಮೆರಿಕ ಮುಂದಾಗಿದೆ. ಉತ್ಪನ್ನಗಳನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ ನಂತರ ಈ ಬೆಳವಣಿಕೆ ಕಂಡು ಬಂದಿದೆ. ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

MDH, Everest Spices
Koo

ವಾಷಿಂಗ್ಟನ್‌: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳ ಮಾರಾಟವನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ್ದು, ಇದೀಗ ಅಮೆರಿಕವೂ ಕ್ರಮಕ್ಕೆ ಮುಂದಾಗಿದೆ. ಅಮೆರಿಕದ ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ (Food and Drug Administration) ಎಂಡಿಎಚ್ ಮತ್ತು ಎವರೆಸ್ಟ್‌ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದೆ.

“ಎಫ್‌ಡಿಎ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ” ಎಂದು ವಕ್ತಾರರು ತಿಳಿಸಿದ್ದಾರೆ. ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ಇತ್ತೀಚೆಗೆ ನಿಷೇಧಿಸಿತ್ತು. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿತ ಉತ್ಪನ್ನಗಳು.

ವಿವಾದದ ಬಳಿಕ ಎವರೆಸ್ಟ್ ಸಂಸ್ಥೆ ಪ್ರತಿಕ್ರಿಯಿಸಿ, ʼʼತನ್ನ ಮಸಾಲೆಗಳು ಸೇವನೆಗೆ ಸುರಕ್ಷಿತʼʼ ಎಂದು ಹೇಳಿದೆ. ಆದರೆ ಎಂಡಿಎಚ್ ಇದುವರೆಗೆ ತನ್ನ ಉತ್ಪನ್ನಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಕಂಪನಿಗಳ ಉತ್ಪನ್ನಗಳನ್ನು ಅಮೆರಿಕ, ಯುರೋಪ್‌, ಇಂಗ್ಲೆಂಡ್‌ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಇತ್ತ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಗುಣಮಟ್ಟ ತಪಾಸಣೆಗೆ ಭಾರತೀಯ ಆಹಾರ ಸುರಕ್ಷತಾ ನಿಯಂತ್ರಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸೋಮವಾರ ಆದೇಶ ಹೊರಡಿಸಿದೆ.

ʼʼಹಾಂಕಾಂಗ್ ಮತ್ತು ಸಿಂಗಾಪುರದ ಅಧಿಕಾರಿಗಳಿಂದ ಎಂಡಿಎಚ್ ಮತ್ತು ಎವರೆಸ್ಟ್ ಉತ್ಪನ್ನಗಳ ರಫ್ತು ಬಗ್ಗೆ ಮಾಹಿತಿ ಕೋರಲಾಗಿದೆ. ಗುಣಮಟ್ಟದ ಸಮಸ್ಯೆಗಳ ಮೂಲ ಕಾರಣವನ್ನು ಕಂಡುಹಿಡಿಯಲು ಕಂಪನಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆʼʼ ಎಂದು ಭಾರತದ ಮಸಾಲೆ ಮಂಡಳಿ ಬುಧವಾರ ತಿಳಿಸಿದೆ.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

ಏನಿದು ವಿವಾದ?

ಕೆಲವು ದಿನಗಳ ಹಿಂದೆ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಹಿಂಪಡೆಯಲು ಸಿಂಗಾಪುರ ಆದೇಶಿಸಿತ್ತು. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಅದು ಆರೋಪಿಸಿತ್ತು. ಅನುಮತಿಸಲಾದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು ಕಾರಣ ತಿಳಿಸಿತ್ತು. ಅದಾದ ಬಳಿಕ ಹಾಂಕಾಂಗ್‌ನಲ್ಲೂ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿತ್ತು. ಹಾಗಾಗಿ ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ.

Continue Reading

ದೇಶ

Road Accident: ಅಮೆರಿಕದಲ್ಲಿ ಭೀಕರ ಅಪಘಾತ, 20 ಅಡಿ ಎತ್ತರ ಜಿಗಿದ ಕಾರು; 3 ಭಾರತೀಯ ಮಹಿಳೆಯರ ಸಾವು

Road Accident: ಗ್ರೀನ್‌ವಿಲ್ಲೆ ಕೌಂಟಿ ಕರೋನರ್ ಆಫೀಸ್‌ನ ಪ್ರಕಾರ, ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ SUV, ಎಲ್ಲಾ ಲೇನ್‌ಗಳನ್ನು ದಾಟಿ, ಒಡ್ಡುಗಳನ್ನು ಏರಿತು ಮತ್ತು ಗಾಳಿಯಲ್ಲಿ ಕನಿಷ್ಠ 20 ಅಡಿಗಳಷ್ಟು ಮೇಲೆ ಹಾರಿ ಸೇತುವೆಯ ಎದುರು ಭಾಗದಲ್ಲಿರುವ ಮರಗಳಿಗೆ ಅಪ್ಪಳಿಸಿತು.

VISTARANEWS.COM


on

car accident USA
Koo

ನ್ಯೂಯಾರ್ಕ್‌: ಅಮೇರಿಕಾದಲ್ಲಿ (US) ನಡೆದ ಭೀಕರ ಕಾರು ಅಪಘಾತ ಒಂದರಲ್ಲಿ (Road Accident) ಗುಜರಾತ್‌ನ ಮೂವರು ಮಹಿಳೆಯರು (Women killed) ಸಾವನ್ನಪ್ಪಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ನಡೆದ ಅಪಘಾತದಲ್ಲಿ (Car accident) ಮೃತಪಟ್ಟವರು.

ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ಅವರು ವೇಗವಾಗಿ ಎಸ್‌ಯುವಿ ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಗ್ರೀನ್‌ವಿಲ್ಲೆ ಕೌಂಟಿ ಕರೋನರ್ ಆಫೀಸ್‌ನ ಪ್ರಕಾರ, ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ SUV, ಎಲ್ಲಾ ಲೇನ್‌ಗಳನ್ನು ದಾಟಿ, ಒಡ್ಡುಗಳನ್ನು ಏರಿತು ಮತ್ತು ಗಾಳಿಯಲ್ಲಿ ಕನಿಷ್ಠ 20 ಅಡಿಗಳಷ್ಟು ಮೇಲೆ ಹಾರಿ ಸೇತುವೆಯ ಎದುರು ಭಾಗದಲ್ಲಿರುವ ಮರಗಳಿಗೆ ಅಪ್ಪಳಿಸಿತು.

“ಅವರು ನಿಗದಿಪಡಿಸಲಾದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿ ಪ್ರಯಾಣಿಸುತ್ತಿದ್ದರು ಎಂಬುದು ಸ್ಪಷ್ಟವಾಗಿದೆ” ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದರು. ಬೇರೆ ಯಾವುದೇ ಕಾರುಗಳು ಅಪಘಾತದಲ್ಲಿ ಭಾಗಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾರು ಮರದ ಮೇಲೆ ಸಿಲುಕಿಕೊಂಡಿದ್ದು, ಹಲವು ತುಂಡುಗಳಾಗಿ ಛಿದ್ರಗೊಂಡಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚೂರುಗಳು ಚೆಲ್ಲಿದ್ದು, ಡಿಕ್ಕಿ ಹೊಡೆದ ವೇಗಕ್ಕೆ ಸಾಕ್ಷಿಯಾಗಿದೆ.

“ರಸ್ತೆಮಾರ್ಗವನ್ನು ಅತಿ ವೇಗದಲ್ಲಿ ಬಿಟ್ಟು ಜಿಗಿಯುವ ವಾಹನಗಳು ವಿರಳ. ಇದು 4-6 ಲೇನ್ ಟ್ರಾಫಿಕ್ ಅನ್ನು ದಾಟಿದೆ ಮತ್ತು ಸುಮಾರು 20 ಅಡಿ ಎತ್ತರದ ಮರಗಳ ಮೇಲೆ ಕೂತಿದೆ. ವಾಹನವು ಹಲವು ಲೇನ್ ಟ್ರಾಫಿಕ್ ಅನ್ನು ಹಾರಿದಾಗ, ಅದು ಬಹುಶಃ ನೆಲದಿಂದ ಕನಿಷ್ಠ 20 ಅಡಿಗಳಷ್ಟು ಎತ್ತರದಲ್ಲಿ ಮರಗಳಿಗೆ ಡಿಕ್ಕಿ ಹೊಡೆದಿದೆ” ಎಂದು ಎಲ್ಲಿಸ್‌ ತಿಳಿಸಿದರು.

ದಕ್ಷಿಣ ಕೆರೊಲಿನಾ ಹೈವೇ ಪೆಟ್ರೋಲ್, ಗ್ಯಾಂಟ್ ಫೈರ್ ಮತ್ತು ಪಾರುಗಾಣಿಕಾ ತಂಡಗಳು ಮತ್ತು ಗ್ರೀನ್‌ವಿಲ್ಲೆ ಕೌಂಟಿ ಇಎಂಎಸ್ ಘಟಕಗಳು ಸೇರಿದಂತೆ ತುರ್ತು ಪ್ರತಿಕ್ರಿಯೆ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಅವರ ಆರೋಗ್ಯ ಸ್ಥಿತಿ ಅನಿಶ್ಚಿತವಾಗಿದೆ. ವಾಹನದ ಪತ್ತೆ ವ್ಯವಸ್ಥೆಯು ಅಪಘಾತದ ಬಗ್ಗೆ ಕೆಲವು ಕುಟುಂಬ ಸದಸ್ಯರಿಗೆ ಅಲಾರ್ಮ್‌ ನೀಡಿತು. ನಂತರ ಅವರು ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Continue Reading

ವಿದೇಶ

Miss Universe Buenos Aires: ಈಕೆ ಬ್ಯೂನಸ್‌ ಐರಿಸ್‌ ವಿಶ್ವ ಸುಂದರಿ; ಇವಳ ವಯಸ್ಸು ನೀವೇ ಊಹಿಸಿ!

Miss Universe Buenos Aires: ಅರ್ಜೆಂಟೀನಾದ ಬ್ಯೂನಸ್ ಐರಿಸ್ ಪ್ರಾಂತ್ಯದ ರಾಜಧಾನಿ ಲಾ ಪ್ಲಾಟಾದಿಂದ ಬಂದ ರೋಡ್ರಿಗಸ್ ಕೇವಲ ಸೌಂದರ್ಯ ರಾಣಿಯಲ್ಲ. ಅವರು ಅನುಭವಿ ವಕೀಲರು ಮತ್ತು ಪತ್ರಕರ್ತರು. ಸಮಕಾಲೀನ ಸೌಂದರ್ಯದ ಬಹುಮುಖಿ ಸ್ವಭಾವವನ್ನು ಪ್ರದರ್ಶಿಸಿದ್ದಾರೆ. ಅವರ ಗೆಲುವು ಸೌಂದರ್ಯದ ಹಾಗೂ ವಯಸ್ಸಿನ ವಯಸ್ಸಿನ ಸಾಂಪ್ರದಾಯಿಕ ಮಾನದಂಡಗಳನ್ನು ಮರು ವ್ಯಾಖ್ಯಾನಿಸುವಂತೆ ಮಾಡಿದೆ.

VISTARANEWS.COM


on

miss universe Buenos Aires
Koo

ಹೊಸದಿಲ್ಲಿ: ಅರ್ಜೆಂಟೀನಾದ (Argentina) ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ (Alejandra Marisa Rodriguez) ಅವರು `ಬ್ಯೂನಸ್ ಐರಿಸ್ ವಿಶ್ವ ಸುಂದರಿ’ (Miss Universe Buenos Aires) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಈ ಸೌಂದರ್ಯ ಸ್ಪರ್ಧೆ (Beauty Pageant) ಗೆಲ್ಲಲು ಅಗತ್ಯವಾದ ಯವ್ವನದ ಬಗೆಗಿನ ಸ್ಟಿರಿಯೋಟೈಪ್‌ಗಳನ್ನು ಮುರಿದಿದ್ದಾರೆ. ಅಂದ ಹಾಗೆ ಈಕೆಯ ವಯಸ್ಸು 60 ವರ್ಷ!

ಈ ಮೂಲಕ ಈ ಆಂಟಿ ಇತಿಹಾಸ ಬರೆದಿದ್ದಾರೆ. ಬುಧವಾರ ನಡೆದ ಸ್ಪರ್ಧೆಯಲ್ಲಿ ಈಕೆಯ ಗೆಲುವು ಘೋಷಿಸಲಾಯಿತು. ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆ ವೈವಿಧ್ಯತೆಯನ್ನು ಅಳವಡಿಸಿಕೊಳ್ಳುತ್ತಿರುವುದರತ್ತವೂ ಇದು ಗಮನ ಸೆಳೆದಿದೆ.

ಅರ್ಜೆಂಟೀನಾದ ಬ್ಯೂನಸ್ ಐರಿಸ್ ಪ್ರಾಂತ್ಯದ ರಾಜಧಾನಿ ಲಾ ಪ್ಲಾಟಾದಿಂದ ಬಂದ ರೋಡ್ರಿಗಸ್ ಕೇವಲ ಸೌಂದರ್ಯ ರಾಣಿಯಲ್ಲ. ಅವರು ಅನುಭವಿ ವಕೀಲರು ಮತ್ತು ಪತ್ರಕರ್ತರು. ಸಮಕಾಲೀನ ಸೌಂದರ್ಯದ ಬಹುಮುಖಿ ಸ್ವಭಾವವನ್ನು ಪ್ರದರ್ಶಿಸಿದ್ದಾರೆ. ಅವರ ಗೆಲುವು ಸೌಂದರ್ಯದ ಹಾಗೂ ವಯಸ್ಸಿನ ವಯಸ್ಸಿನ ಸಾಂಪ್ರದಾಯಿಕ ಮಾನದಂಡಗಳನ್ನು ಮರು ವ್ಯಾಖ್ಯಾನಿಸುವಂತೆ ಮಾಡಿದೆ.

ಇಂತಹ ಪ್ರತಿಷ್ಠಿತ ಸೌಂದರ್ಯ ಪ್ರಶಸ್ತಿಯನ್ನು ಪಡೆದ ಈ ವಯಸ್ಸಿನ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಕೆಯ ಸೊಬಗು, ಚರಿಷ್ಮಾ ಮತ್ತು ಸಾಂಕ್ರಾಮಿಕ ನಗು ನ್ಯಾಯಾಧೀಶರು ಮತ್ತು ಪ್ರೇಕ್ಷಕರನ್ನು ಸಮಾನವಾಗಿ ಆಕರ್ಷಿಸಿತು.

ಮೇ 2024ರಂದು ನಡೆಯಲಿರುವ ʼಮಿಸ್ ಯೂನಿವರ್ಸ್ ಅರ್ಜೆಂಟೀನಾʼಗೆ ಮುಂಬರುವ ರಾಷ್ಟ್ರೀಯ ಆಯ್ಕೆಯಲ್ಲಿ ಬ್ಯೂನಸ್ ಐರಿಸ್ ಅನ್ನು ಪ್ರತಿನಿಧಿಸಲು ಈಕೆ ತಯಾರಿ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವೀಡಿಯೊಗಳು ಆಕೆಯ ನಿರ್ಣಯವನ್ನು ಬಹಿರಂಗಪಡಿಸಿವೆ. ಅವರು ಅಲ್ಲಿ ವಿಜಯಶಾಲಿಯಾದರೆ, ʼಮಿಸ್ ಯೂನಿವರ್ಸ್ ವರ್ಲ್ಡ್‌ʼನ ಜಾಗತಿಕ ವೇದಿಕೆಯಲ್ಲಿ ರೋಡ್ರಿಗಸ್ ಅರ್ಜೆಂಟೀನಾದ ಧ್ವಜವನ್ನು ಹಾರಿಸಲಿದ್ದಾರೆ. ಸ್ಪರ್ಧೆಯನ್ನು ಸೆಪ್ಟೆಂಬರ್ 28, 2024ರಂದು ಮೆಕ್ಸಿಕೋದಲ್ಲಿ ನಿಗದಿಪಡಿಸಲಾಗಿದೆ.

“ಸೌಂದರ್ಯ ಸ್ಪರ್ಧೆಗಳಲ್ಲಿ ಈ ಹೊಸ ಮಾದರಿ ರೂಪಿಸುವುದರ ಮೂಲಕ ನಾನು ರೋಮಾಂಚನಗೊಂಡಿದ್ದೇನೆ. ನಾವು ಹೊಸ ಹಂತವನ್ನು ಉದ್ಘಾಟಿಸುತ್ತಿದ್ದೇವೆ. ಇದರಲ್ಲಿ ಮಹಿಳೆಯರು ಕೇವಲ ದೈಹಿಕ ಸೌಂದರ್ಯವಲ್ಲ. ಮೌಲ್ಯಗಳ ಮತ್ತೊಂದು ಮಾದರಿ” ಎಂದು ಅವರು ಗೆದ್ದ ನಂತರ ಮಾಧ್ಯಮಗಳಿಗೆ ಹೇಳಿದರು.

“ಮಿಸ್ ಯೂನಿವರ್ಸ್ ಸ್ಪರ್ಧೆಯು ಇನ್ನು ಮುಂದೆ ಸ್ಪರ್ಧಿಗಳಿಗೆ ವಯಸ್ಸಿನ ಮಿತಿಗಳನ್ನು ಹೊಂದಿರುವುದಿಲ್ಲ” ಎಂದು ಕಳೆದ ವರ್ಷ ಘೋಷಿಸಲಾಗಿತ್ತು. ಈ ವರ್ಷದಿಂದ 18 ವರ್ಷ ಮೇಲ್ಪಟ್ಟ ಯಾವುದೇ ಮಹಿಳೆ ಸ್ಪರ್ಧಿಸಲು ಅರ್ಹರಾಗಿರುತ್ತಾರೆ. ಹಿಂದೆ, 18-28 ವರ್ಷ ವಯಸ್ಸಿನ ಮಹಿಳೆಯರು ಮಾತ್ರ ಸ್ಪರ್ಧೆಯನ್ನು ಪ್ರವೇಶಿಸಬಹುದಾಗಿತ್ತು. ಮಿಸ್ ಯೂನಿವರ್ಸ್ 2024ರಲ್ಲಿ ಡೊಮಿನಿಕನ್ ರಿಪಬ್ಲಿಕ್ ಅನ್ನು ಪ್ರತಿನಿಧಿಸುವ 47 ವರ್ಷದ ಹೈಡಿ ಕ್ರೂಜ್, ಈ ರೀತಿ ವಯಸ್ಸಿನ ಅಡೆತಡೆ ಮೀರಿದ ಇನ್ನೊಬ್ಬ ಸೌಂದರ್ಯ ಸ್ಪರ್ಧಿ.

ಇದನ್ನೂ ಓದಿ: Harnaaz Sandhu | ಮಿಸ್‌ ಯುನಿವರ್ಸ್‌ ವೇದಿಕೆ ಮೇಲೆ ಎಡವಿದ ಮಾಜಿ ಭುವನ ಸುಂದರಿ ಹರ್ನಾಜ್‌ ಸಂಧು, ವಿಡಿಯೊ ವೈರಲ್

Continue Reading
Advertisement
ದೇಶ9 mins ago

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Crime News
ವೈರಲ್ ನ್ಯೂಸ್15 mins ago

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Pakistan Cricket
ಕ್ರಿಕೆಟ್20 mins ago

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Amit Shah
ದೇಶ22 mins ago

Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

Samantha Ruth Prabhu announces new film Bangaram
ಟಾಲಿವುಡ್40 mins ago

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Aamir Khan talks about power of namaste
ಬಾಲಿವುಡ್44 mins ago

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

IPL 2024
ಕ್ರೀಡೆ50 mins ago

IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

Mohan Bhagwat
ದೇಶ1 hour ago

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Congress instigates bombers We are crushing traitors through NIA PM Narendra Modi
Lok Sabha Election 20241 hour ago

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Election Commission
ದೇಶ1 hour ago

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 20242 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ8 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌