Left- Right | ಯಾವುದು ಎಡ? ಯಾವುದು ಬಲ? ಯಾವುದು ಸತ್ಯ? - Vistara News

ಅಂಕಣ

Left- Right | ಯಾವುದು ಎಡ? ಯಾವುದು ಬಲ? ಯಾವುದು ಸತ್ಯ?

ಎಡಪಂಥ, ಬಲ ಪಂಥ ಎಂಬ ಪದಗಳನ್ನು ಉಪಯೋಗಿಸುತ್ತೇವಲ್ಲ, ಅವುಗಳ ನಿಜವಾದ ಅರ್ಥವೇನು? ಎಲ್ಲಿಂದ ಅವು ಬಂದವು? ಉಪಯೋಗಿಸುವ ಮುನ್ನ ಅದನ್ನು ತಿಳಿದುಕೊಳ್ಳೋಣವೇ?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
pramod hegade

— ಪ್ರಮೋದ ಹೆಗಡೆ

ಎಡಪಂಥೀಯರ ವಿರುದ್ಧ ಬಲಪಂಥೀಯರ ವಾಗ್ದಾಳಿ, ಅದಕ್ಕೆ ಎಡಪಂಥೀಯರ ತಿರುಗೇಟು. ಇವೆಲ್ಲವೂ ಬಹು ಹಿಂದಿನಿಂದಲೇ ದೇಶದಲ್ಲಿ ನಡೆದುಕೊಂಡು ಬಂದಿದೆ. ಇವೆರಡೂ ತದ್ವಿರುದ್ಧ ಸಿದ್ಧಾಂತಗಳೆಂದು ಪ್ರಚಲಿತವಾಗಿದ್ದು ರಾಜಕೀಯ ಒಲವಿನ ವ್ಯಕ್ತಿಗಳು ತಮ್ಮನ್ನು ಯಾವುದಾದರೂ ಒಂದು ಸಿದ್ಧಾಂತಕ್ಕೆ ಬದ್ಧರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಹಾಗೆ ಯಾವುದಾದರೊಂದು ಪಂಥದಲ್ಲಿ ತೋರಿಸಿಕೊಳ್ಳಲೇಬೇಕಾದ ಸನ್ನಿವೇಶವೂ ಸೃಷ್ಟಿಯಾಗಿದೆ. ಆದರೆ, ಈ ಎರಡು ವಿಚಾರಗಳ ಬಗ್ಗೆ ಸರಿಯಾಗಿ ತಿಳಿಯದೇ ಅದನ್ನು ಅನುಸರಿಸುವುದು ಎಷ್ಟು ಸರಿ? ಯಾವುದೇ ರೂಢಿಯ ಬಗ್ಗೆ ತಿಳಿಯದೇ ಆಚರಿಸಿದರೆ ಅದು ಬೆಕ್ಕನ್ನು ಕಂಬಕ್ಕೆ ಕಟ್ಟಿ ಶ್ರಾದ್ಧ ಮಾಡುವ ಕಥೆಯಾಗುತ್ತದೆ ಹೊರತು ಉಪಯೋಗವಿಲ್ಲ. ಎಡಪಂಥಿ, ಬಲಪಂಥಿ ಎಂಬ ಶಬ್ದಗಳು ಬಂದಿದ್ದು ಎಲ್ಲಿಂದ? ನಮ್ಮ ದೇಶದಲ್ಲಿ ಇವುಗಳ ಸ್ಥಾನಮಾನವೇನು? ರಾಜಕೀಯವಾಗಿ, ಸಾಮಾಜಿಕವಾಗಿ ಈ ಎರಡೂ ಪಂಥಗಳ ನಿಲುವೇನು?

ಈ ಎರಡೂ ಸಿದ್ಧಾಂತಗಳು ಜನಿಸಿದ್ದು ಫ್ರಾನ್ಸ್‌ ದೇಶದಲ್ಲಿ!

ಅದು 18ನೇ ಶತಮಾನ. ಫ್ರಾನ್ಸ್‌ ದೇಶದಲ್ಲಿ ಕ್ರಾಂತಿ ನಡೆಯುತ್ತಿದ್ದ ಕಾಲಘಟ್ಟ. ಫ್ರಾನ್ಸ್‌ನಲ್ಲಿ ಆಗ ರಾಜಪ್ರಭುತ್ವ ಜಾರಿಯಲ್ಲಿತ್ತು. ಆಧುನಿಕತೆ ಬರತೊಡಗಿದಂತೆ ಕೆಲವರು ಈ ರಾಜಪ್ರಭುತ್ವದ ಆಳ್ವಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಕೆಲವರು ಈ ಪದ್ಧತಿಯ ಪರವಾಗಿದ್ದರು. ರಾಷ್ಟ್ರದ ಜನತೆ ಎರಡು ಗುಂಪಾಗಿ ವಿಭಾಗವಾಯಿತು. ಆ ಸಂದರ್ಭದಲ್ಲಿ ರಾಜ ಸಭೆ ನಡೆಸುವಾಗ ಸಹಜವಾಗಿ ರಾಜನ ಬಲಗಡೆ ಕೆಲವರು ಹಾಗೂ ಎಡಗಡೆ ಕೆಲವರು ಆಸೀನರಾಗಬೇಕಿತ್ತು. ರಾಜಪ್ರಭುತ್ವಕ್ಕೆ ಸಹಮತ ಸೂಚಿಸಿ, ರಾಜನನ್ನು ಬೆಂಬಲಿಸುವವರು ರಾಜನ ಬಲಗಡೆ ಕುಳಿತರು. ರಾಜಪ್ರಭುತ್ವವನ್ನು ವಿರೋಧಿಸಿ, ಪ್ರಜಾಪ್ರಭುತ್ವವನ್ನು ಒತ್ತಾಯಿಸಿದವರು ರಾಜನ ಎಡಗಡೆ ಪಂಕ್ತಿಯಲ್ಲಿ ಆಸೀನರಾದರು. ಅವರಿಗೆ ಆಗ ಇದ್ದ ರಾಜರ ಆಳ್ವಿಕೆಯಿಂದ ಮುಕ್ತಿ ಬೇಕಿತ್ತು ಹಾಗೂ ವ್ಯವಸ್ಥೆಯಲ್ಲಿ ಬದಲಾವಣೆ ಬೇಕಿತ್ತು. ಅಲ್ಲಿಂದ ಈ ಎಡ ಹಾಗೂ ಬಲ ಎಂಬ ಎರಡು ಸಿದ್ಧಾಂತಗಳ ಜನನವಾಯಿತು.

  1. ಎಡ– ಪ್ರಸ್ತುತ ಇದ್ದ ವ್ಯವಸ್ಥೆಯನ್ನು ನಿರಾಕರಿಸಿ ಹೊಸ ವ್ಯವಸ್ಥೆಯನ್ನು ಒತ್ತಾಯಿಸಿದ ಕಾರಣ ಇವರನ್ನು ಸುಧಾರಣಾವಾದಿ ಅಥವಾ ಕ್ರಾಂತಿಕಾರಿ ಎಂದು ಕರೆಯಲಾಯಿತು.
  2. ಬಲ– ಈ ಪಂಥದವರು ವ್ಯವಸ್ಥೆಯಲ್ಲಿ ಬದಲಾವಣೆಯನ್ನು ಅಪೇಕ್ಷಿಸದೆ ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯನ್ನು ಅನುಸರಿಸುವವರು. ಹೀಗಾಗಿ ಅವರನ್ನು ಸಂಪ್ರದಾಯವಾದಿ ಎಂದು ಕರೆಯಲಾಯಿತು.

ಎಡ ಮತ್ತು ಬಲ ಪಂಥಗಳ ಸಿದ್ಧಾಂತಗಳೇನು?

ಒಂದು ಕಾಲಘಟ್ಟದವರೆಗೆ ಈ ಎರಡೂ ಪಂಥಗಳು ರಾಜಕೀಯ ಪಕ್ಷಗಳಿಗೆ ಮಾತ್ರ ಸೀಮಿತವಾಗಿತ್ತು. ಎರಡೂ ಪಂಥಗಳು ಕೆಲವು ಧೋರಣೆಗಳನ್ನು ಅನುಸರಿರುತ್ತಿದ್ದವು.

ಎಡಪಂಥೀಯ ಧೋರಣೆ:

  1. ಸರ್ಕಾರ ಮತ್ತು ಧರ್ಮ ಪ್ರತ್ಯೇಕವಾಗಿರಬೇಕು
  2. ಸಲಿಂಗ ವಿವಾಹಕ್ಕೆ ಬೆಂಬಲ
  3. ಮರಣದಂಡನೆಗೆ ವಿರೋಧ
  4. ಹೊರದೇಶದ ವಲಸಿಗರಿಗೆ ಮಾರ್ಗ ತೆರವು
  5. ಶ್ರೀಮಂತರಿಗೆ ಹೆಚ್ಚು ತೆರಿಗೆ ನೀಡಲು ಒತ್ತಾಯ
  6. ಜಾಗತೀಕರಣಕ್ಕೆ ಬೆಂಬಲ
  7. ಸಮಾಜದಲ್ಲಿ ಸಮಾನತೆ
  8. ಕೇಂದ್ರ ಯೋಜನೆಗೆ ಬೆಂಬಲ
  9. ಆರ್ಥಿಕತೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇರಬೇಕು
  10. ಸಮಾಜಕಲ್ಯಾಣದ ವ್ಯವಸ್ಥೆ
  11. ಮುಕ್ತ/ಉಚಿತ ವ್ಯಾಪಾರಕ್ಕೆ ವಿರೋಧ

ಬಲಪಂಥೀಯ ಧೋರಣೆ:

  1. ಧರ್ಮ ಮತ್ತು ಸರ್ಕಾರಕ್ಕೆ ಹೊಂದಾಣಿಕೆ ಇರಬೇಕು
  2. ಭ್ರೂಣ ಹತ್ಯೆ ಮಾಡಬಾರದು
  3. ಕನಿಷ್ಠ ತೆರಿಗೆ ಇರಬೇಕು. ಇದರಿಂದ ಹೊಸ ಉದ್ಯಮಿಗಳಿಗೆ ಸಹಾಯವಾಗಬೇಕು.
  4. ಬಂಡವಾಳಶಾಹಿಯನ್ನು ಬೆಂಬಲಿಸಲಾಗುತ್ತದೆ
  5. ರಾಷ್ಟ್ರದ ಸಂಸ್ಕೃತಿಯನ್ನು ಉಳಿಸಲು ಹೊರದೇಶದ ವಲಸಿಗರಿಗೆ ತಡೆ
  6. ಜನರ ಜೀವನ ಮತ್ತು ಆರ್ಥಿಕತೆಯಲ್ಲಿ ಸರ್ಕಾರ ಸೀಮಿತ ಪಾತ್ರ ವಹಿಸಬೇಕು
  7. ರಾಷ್ಟ್ರೀಯತೆಯನ್ನು ಬೆಂಬಲಿಸುವವರು
  8. ಜನರಿಗೆ ವೈಯಕ್ತಿಕ ಸ್ವಾತಂತ್ರ್ಯ ಇರಬೇಕು
  9. ಧರ್ಮ ಮತ್ತು ಸಂಪ್ರದಾಯದ ಸುರಕ್ಷತೆಗೆ ಪ್ರಾಮುಖ್ಯತೆ
  10. ಅಲ್ಪಸಂಖ್ಯಾತರಿಗೆ ವಿಶೇಷ ಮನ್ನಣೆಯಿಲ್ಲ, ಎಲ್ಲರಿಗೂ ಸಮಾನ ಗೌರವ
  11. ಮರಣದಂಡನೆಗೆ ಬೆಂಬಲ
  12. ಅಭಿವೃದ್ಧಿಗಾಗಿ ಖಾಸಗಿ ಉದ್ಯೋಗಕ್ಕೆ ಪ್ರಾಮುಖ್ಯತೆ

ಮೇಲ್ನೋಟಕ್ಕೆ ಇವಿಷ್ಟು ವಿಷಯಗಳಲ್ಲಿ ಎರಡೂ ಪಂಥಗಳೂ ವಿರುದ್ಧ ದಿಕ್ಕಿಗೆ ಮುಖಮಾಡಿರುವಂತೆ ಕಂಡರೂ ಕೆಲವು ಸಂಗತಿಗಳನ್ನು ಎರಡೂ ಪಂಥಗಳು ಪಾಲಿಸುತ್ತವೆ. ಕೆಲವು ಬಲಪಂಥದ ಚಿಂತನೆಗಳನ್ನು ಎಡಪಂಥ ಸ್ವೀಕರಿಸುತ್ತದೆ ಹಾಗೂ ಎಡಪಂಥದ ಚಿತನೆಯನ್ನು ಬಲಪಂಥ ಅನುಸರಿಸುತ್ತದೆ. ಹೀಗಾಗಿ ಇನ್ನೆರಡು ಹೊಸ ಪಕ್ಷಗಳು ಜನಿಸಿಕೊಂಡವು.

  1. ಲೆಫ್ಟ್‌ ಲೀನಿಂಗ್‌ (ಹೆಚ್ಚು ಎಡಕ್ಕೆ ವಾಲಿರುವುದು) : ಈ ಪಕ್ಷಗಳು ಹೆಚ್ಚಾಗಿ ಎಡಪಂಥೀಯ ಧೋರಣೆಗಳನ್ನು ಒಳಗೊಂಡಿರುತ್ತವೆ ಹಾಗು ಕೆಲವು ಬಲ ಪಂಥದ ಧೋರಣೆಗಳಿರುತ್ತವೆ.
  2. ರೈಟ್‌ ಲೀನಿಂಗ್(ಹೆಚ್ಚು ಬಲಕ್ಕೆ ವಾಲಿರುವುದು) : ಈ ಪಕ್ಷಗಳು ಬಲಪಂಥೀಯ ಧೋರಣೆಗಳನ್ನು ಹೆಚ್ಚಾಗಿ ಪಾಲಿಸುತ್ತವೆ ಆದರೆ ಕೆಲವು ಎಡ ಪಂಥದ ಚಿಂತೆನಗಳು ಇರುತ್ತವೆ.

ಇನ್ನೂ ಯಾವ ರೀತಿ ವಿಂಗಡಿಸಬಹುದು?

ಸಾಮಾಜಿಕ ಹಾಗೂ ಆರ್ಥಿಕ ವಿಭಾಗದಲ್ಲಿಯೂ ಈ ಎರಡು ಸಿದ್ಧಾಂತಗಳಿವೆ. ಒಂದು ಪಕ್ಷ ಸಾಮಾಜಿಕ ಹಾಗೂ ಆರ್ಥಿಕವಾಗಿ ಹೇಗೆ ನಡೆದುಕೊಳ್ಳುತ್ತದೆ ಎಂಬುದರ ಮೇಲೆ ಈ ಎರಡು ಪಂಥಗಳನ್ನಾಗಿ ವಿಭಾಗಿಸಬಹುದು.

ಆರ್ಥಿಕ ಬಲ- ಆರ್ಥಿಕತೆಯಲ್ಲಿ ಸರ್ಕಾರದ ಹೆಚ್ಚಿನ ಹಸ್ತಕ್ಷೇಪ ಇಲ್ಲದಿದ್ದರೆ ಅದು ಆರ್ಥಿಕವಾಗಿ ಬಲಪಂಥೀಯ
ಆರ್ಥಿಕ ಎಡ- ಆರ್ಥಿಕತೆಯಲ್ಲಿ ಸರ್ಕಾರದ ಹೆಚ್ಚಿನ ಹಸ್ತಕ್ಷೇಪ ಇದ್ದರೆ ಅದು ಆರ್ಥಿಕವಾಗಿ ಎಡಪಂಥೀಯ.

ಸಾಮಾಜಿಕ ಬಲ: ಧರ್ಮ, ಸಂಸ್ಕೃತಿಯನ್ನು ರಕ್ಷಿಸುವ ಹಾಗೂ ಭ್ರೂಣ ಹತ್ಯೆ, ಸಲಿಂಗ ವಿವಾಹವನ್ನು ವಿರೋಧಿಸುವವರು.
ಸಾಮಾಜಿಕ ಎಡ: ಪ್ರಸ್ತುತ ವ್ಯವಸ್ಥೆಯಿಂದ ಕ್ರಾಂತಿಕಾರಿ ಬದಲಾವಣೆಯನ್ನು ಬಯಸುವವರು.

ಈಗ ಗಮನಿಸಿದರೆ ಈ ಎರಡೂ ಚಿಂತನೆಗಳು ಬದಲಾವಣೆಗೊಂಡ ರೀತಿ ಅಚ್ಚರಿ ಮೂಡಿಸುತ್ತದೆ. ಹಾಗೆ ನೋಡಿದರೆ ಅಮೆರಿಕದಲ್ಲಿ ಇವುಗಳನ್ನು ಒಂದು ಮಟ್ಟಕ್ಕೆ ಸರಿಯಾಗಿ ಆಚರಿಸಲಾಗುತ್ತಿದೆ ಎನ್ನಬಹುದು. ರಿಪಬ್ಲಿಕನ್ಸ್‌ ಹಾಗೂ ಡೆಮೊಕ್ರೆಟ್ಸ್‌ ಎಂಬ ಎರಡು ಪಕ್ಷಗಳು ಅಮೆರಿಕದಲ್ಲಿರುವ ಪ್ರಮುಖ ಪಕ್ಷಗಳಾಗಿವೆ. ಡೆಮಾಕ್ರೆಟ್ಸ್‌ ಎಡಪಂಥೀಯ ಸಿದ್ಧಾಂತವನ್ನ ಒಳಗೊಂಡಿದ್ದರೆ, ರಿಪಬ್ಲಿಕನ್ಸ್‌ ಪಕ್ಷವು ಬಲಪಂಥೀಯ.

ಈ ಎಡ ಮತ್ತು ಬಲ ಎಂಬ ಸಿದ್ಧಾಂತಗಳು ರಾಜಕಾರಣಕ್ಕೆ ಸೀಮಿತವಾಗಿದ್ದವೇ ಹೊರತು ಕಲೆ ಅಥವಾ ಸಾಹಿತ್ಯದೊಳಗೆ ಪ್ರವೇಶಿಸಿರುವುದಕ್ಕೆ ಯಾವುದೇ ಆಧಾರಗಳಿಲ್ಲ. ಈ ಪಂಥಗಳು ಹುಟ್ಟುಕೊಂಡಿದ್ದು ರಾಜಪ್ರಭುತ್ವ ಅಥವಾ ಪ್ರಜಾಪ್ರಭುತ್ವದ ಬೆಂಬಲಿಗರ ನಡುವೆ. ದೇವರ ಮೇಲಿನ ನಂಬಿಕೆಗಾಗಿ ಅಥವಾ ಒಂದು ಸಮುದಾಯದ ಬೆಂಬಲಕ್ಕಾಗಿ ಮಾಡಿದ ಪಂಥಗಳಲ್ಲ. ಹಾಗೆ ನೋಡಿದರೆ ಕೆಲವೊಮ್ಮೆ ಹಿಂದು ಹಾಗೂ ಮುಸ್ಲಿಂ ಎರಡು ಸಮುದಾಯದ ಜನರೂ ಒಂದೇ ಪಂಥಕ್ಕೆ ಸೇರಬಹುದು. ಬಲ ಪಂಥ ಹಾಗೂ ಎಡ ಪಂಥಗಳು ಹುಟ್ಟುಕೊಂಡಿದ್ದೇ ಪಾಶ್ಚಾತ್ಯ ದೇಶದಲ್ಲಿ. ಆರಂಭದಲ್ಲಿ ಇದಕ್ಕೂ ಮತಗಳಿಗೂ ಸಂಬಂಧವಿರಲಿಲ್ಲ.

ಭಾರತದಲ್ಲಿ ಎಡವೂ ಇಲ್ಲ, ಬಲವೂ ಇಲ್ಲ!

ಈ ಎಲ್ಲ ಧೋರಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಭಾರತ ದೇಶದಲ್ಲಿ ಯಾವ ಪಕ್ಷವೂ ಸಂಪೂರ್ಣ ಎಡಪಂಥೀಯ ಅಲ್ಲ, ಯಾವ ಪಕ್ಷವೂ ಬಲಪಂಥೀಯ ಅಲ್ಲ. ಈ ಎರಡು ಧೋರಣೆಗಳೊಳಗೆ ಭಾರತೀಯ ರಾಜಕೀಯ ಪಕ್ಷಗಳನ್ನು ಕೂರಿಸುವುದು ಕಷ್ಟವಾಗುತ್ತದೆ. ಈ ಎರಡೂ ಶಬ್ದಗಳು ಭಾರತದ ರಾಜಕೀಯಕ್ಕೆ ಹೊಂದುವುದಿಲ್ಲ ಅನಿಸುತ್ತದೆ. ನಾನು ಎಡ, ನಾನು ಬಲ ಎಂದು ಗಲಭೆ ಸೃಷ್ಟಿಸುವುದರಿಂದ ಯಾವುದೇ ಉಪಯೋಗವಿಲ್ಲ. ಪಕ್ಷಗಳೇ ಒಂದು ಪಂಥಕ್ಕೆ ಸೀಮಿತವಾಗಿರದ ಮೇಲೆ ಆ ಪಕ್ಷದ ಅನುಯಾಯಿಗಳು ಒಂದು ಪಂಥದಲ್ಲಿ ಗುರುತಿಸಿಕೊಂಡು ಹೊಡೆದಾಡಿಕೊಳ್ಳುವುದು ಅದೇಕೋ!

ಸಾಮಾಜಿಕವಾಗಿ: ಧರ್ಮ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಮೂರು ಪ್ರಮುಖ ಪಕ್ಷಗಳು ಬಲ ಪಂಥದಲ್ಲಿ ಗುರತಿಸಿಕೊಳ್ಳುತ್ತವೆ. ಭಾರತೀಯ ಜನತಾ ಪಾರ್ಟಿ, ಶಿವ ಸೇನಾ ಹಾಗೂ ಆಲ್‌ ಇಂಡಿಯಾ ಮಜೀಸ್-ಎ-ಇತ್ತೆಹಾದುಲ್‌ ಮುಸ್ಲಿಮೀನ್‌(AIMIM).

ಕಾಂಗ್ರೆಸ್‌, ಜನತಾ ದಳ-ಯುನೈಟೆಡ್‌, ಆಲ್‌ ಇಂಡಿಯಾ ತೃಣಮೂಲ ಕಾಂಗ್ರೆಸ್‌, ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ- ಮಾಕ್ಸಿಸ್ಟ್‌ ಪಕ್ಷಗಳು ಸಾಮಾಜಿಕ ಧೋರಣೆಗಳಲ್ಲಿ ಎಡಪಂಥೀಯ.

ಆರ್ಥಿಕವಾಗಿ: ದೇಶದ ಆರ್ಥಿಕ ಚಿಂತನೆಯಲ್ಲಿ ಎಲ್ಲ ಪಕ್ಷಗಳೂ ಎಡ ಪಂಥಕ್ಕೆ ಸೇರಿದ್ದು. ಎಲ್ಲ ಪಕ್ಷಗಳೂ ತೆರಿಗೆ ಹೆಚ್ಚಿಸಬೇಕು, ಸಬ್ಸಿಡಿ ನೀಡಬೇಕು ಎಂಬ ಉದ್ದೇಶವನ್ನಿಟ್ಟುಕೊಂಡಿರುವುದು ಕಾಣುತ್ತದೆ. ಹೀಗಿರುವಾಗ ಆರ್ಥಿಕ ದೃಷ್ಟಿಕೋನದಲ್ಲಿ ಎಲ್ಲ ಪಕ್ಷಗಳೂ ಎಡ ಪಂಥದ ಚಿಂತನೆ ಹೊಂದಿರುವುದು ಕಾಣುತ್ತದೆ.

ಇದನ್ನೂ ಓದಿ | ಸವಿಸ್ತಾರ ಅಂಕಣ | ಗಡಿಗಳ ಎಲ್ಲೆ ಮೀರಿ ಮನ್ನಣೆ ಗಳಿಸಿದ್ದ ಸಾವರ್ಕರ್! ಅವರ ಪರ ಹೋರಾಡಿದ್ದ ಮಾರ್ಕ್ಸ್ ಮೊಮ್ಮಗ!

ಸೂಕ್ಷ್ಮವಾಗಿ ನೋಡಿದರೆ ಬಿಜೆಪಿ ಎಂದ ಮಾತ್ರಕ್ಕೆ ಅದು ಬಲ ಪಂಥವಾಗುವುದಿಲ್ಲ. ಅದೇ ರೀತಿ, ಕಾಂಗ್ರೆಸ್‌ ಎಂದ ಮಾತ್ರಕ್ಕೆ ಅದು ಎಡ ಪಂಥವಾಗುವುದಿಲ್ಲ. ವಿಚಾರಗಳಿಗೆ ತಕ್ಕಂತೆ ಪಂಥಗಳು ಉಂಟಾಗುತ್ತವೆ.

ಯಾವುದು ಉತ್ತಮ? ಎಡವೋ? ಬಲವೋ?

ಸೈದ್ಧಾಂತಿಕವಾಗಿ ನೋಡಿದರೆ ಎರಡೂ ಪಂಥಗಳು ಹುಟ್ಟಿಕೊಂಡಿದ್ದು ಜನರ ಒಳಿತಿನ, ದೇಶದ ಅಭಿವೃದ್ಧಿಯ ಚಿಂತನೆಯಿಂದ. ಆದರೆ, ಕಾಲಕ್ರಮೇಣ ಜನತೆಯ ಚಿಂತನೆಗಳಲ್ಲಿ ಆದ ಬದಲಾವಣೆಗಳಿಂದ ಸಂಕರಗೊಂಡಿದೆ ಎನ್ನಬಹುದು. ಎರಡೂ ಸಿದ್ಧಾಂತಗಳಲ್ಲಿರುವ ಒಳ್ಳೆಯದನ್ನು ಮಾತ್ರ ಸ್ವೀಕರಿಸಿದರೆ ʼನಡುʼವಲ್ಲಿ ಸುರಕ್ಷಿತವಾಗಿ ದೇಶವನ್ನು ಸಾಗಿಸಬಹುದು. ಒಂದು ಬ್ಯಾಟರಿ ಸರಿಯಾಗಿ ಕೆಲಸ ಮಾಡಬೇಕಿದ್ದರೆ ಅದಕ್ಕೆ ಪಾಸಿಟಿವ್‌ ಹಾಗೂ ನೆಗಟಿವ್‌ ಎರಡೂ ಬೇಕಾಗುತ್ತದೆ.

ಕೇವಲ ಎಡಪಂಥೀಯ ಧೋರಣೆ ಇಟ್ಟುಕೊಂಡು ಹೊರಟ ಚೀನಾ, ರಷ್ಯಾ ರಾಷ್ಟ್ರಗಳಲ್ಲಿ ಸಾಮೂಹಿಕ ಹತ್ಯೆಗಳು ನಡೆದಿದ್ದು ತಿಳಿದಿದೆ. ಅದು ಸರಿ ಎಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಮಧ್ಯಮ-ಪೂರ್ವ ಭಾಗದ ರಾಷ್ಟ್ರಗಳಲ್ಲಿ ಕೇವಲ ಬಲಪಂಥೀಯ ಧೋರಣೆಗಳಿದ್ದರೂ ಜನರು ಹಿಂಸೆಗೆ ಒಳಗಾದ ಸಾಕ್ಷಿಗಳಿವೆ. ಈ ಎರಡೂ ಘಟನೆಗಳಲ್ಲಿ ಮಾನವೀಯತೆಗೆ ಧಕ್ಕೆ ಉಂಟಾಗಿದ್ದು ಕಂಡುಬರುತ್ತದೆ.

ಆರ್ಥಿಕತೆ ವಿಷಯದಲ್ಲಿ ಬಲ ಪಂಥದ ಧೋರಣೆ ಅನುಕೂಲ. ಇದರಿಂದ ಮಾರುಕಟ್ಟೆ ತೆರೆದಿರುತ್ತದೆ, ದೇಶ ಅಭಿವೃದ್ಧಿಯತ್ತ ಬೆಳೆಯುತ್ತದೆ. ತೆರಿಗೆಯ ವಿಷಯದಲ್ಲಿ ಕೆಲವೊಮ್ಮೆ ಎಡ ಪಂಥದ ಧೋರಣೆ ಅನುಕೂಲವಾಗುತ್ತದೆ. ವಲಸಿಗರನ್ನು ದೇಶದೊಳಗೆ ಬಿಟ್ಟುಕೊಳ್ಳುವುದರಲ್ಲಿ ಬಲ ಪಂಥದ ವಿಚಾರ ಸರಿ ಎಂಬ ಅಭಿಪ್ರಾಯ ಇದೆ. ಹೀಗೆ ಎಡ, ಬಲಗಳಲ್ಲಿ ಪೂರಕ ಮತ್ತು ಮಾರಕ ಎರಡೂ ಅಂಶಗಳಿವೆ. ಹಾಗಾಗಿ ಈ ಪಂಥವೇ ಸರಿ, ಈ ಪಂಥ ತಪ್ಪು ಎಂದು ಗೆರೆ ಎಳೆಯಲಾಗದು!

ಇದನ್ನೂ ಓದಿ: ಕೇರಂ ಬೋರ್ಡ್‌ ಅಂಕಣ | ಅಂಡರ್‌ಪಾಸ್‌ಗಳಲ್ಲಿ ಪಿಸುಗುಡುವ ಕಡಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

ರಾಜಮಾರ್ಗ ಅಂಕಣ: ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು.

VISTARANEWS.COM


on

Michel Phelps ರಾಜಮಾರ್ಗ ಅಂಕಣ
Koo

ಜಗತ್ತಿನ ಮಹೋನ್ನತ ಸ್ವಿಮ್ಮರ್ ನೀರಿಗೆ ಇಳಿದರೆ ದಾಖಲೆ ಮತ್ತು ದಾಖಲೆಗಳೇ ನಿರ್ಮಾಣ ಆಗುತ್ತಿದ್ದವು!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಒಲಿಂಪಿಕ್ಸ್ (Olympics) ವೇದಿಕೆಗಳಲ್ಲಿ ಒಂದೋ ಅಥವಾ ಎರಡೋ ಪದಕಗಳನ್ನು (medals) ಗೆಲ್ಲುವ ಕನಸು ಕಂಡವರು, ಅದನ್ನು ಸಾಧನೆ ಮಾಡಿದವರು ಲೆಜೆಂಡ್ ಅಂತ ಅನ್ನಿಸಿಕೊಳ್ಳುತ್ತಾರೆ. ಆದರೆ ಈ ಅಮೇರಿಕನ್ ಈಜುಗಾರ (Swimmer) ಒಟ್ಟು ನಾಲ್ಕು ಒಲಿಂಪಿಕ್ ಕೂಟಗಳಲ್ಲಿ ಭಾಗವಹಿಸಿ ಗೆದ್ದದ್ದು ಬರೋಬ್ಬರಿ 28 ಒಲಿಂಪಿಕ್ ಪದಕಗಳನ್ನು ಅಂದರೆ ನಂಬಲು ಸಾಧ್ಯವೇ ಇಲ್ಲ! ಅದರಲ್ಲಿ ಕೂಡ 23 ಹೊಳೆಯುವ ಚಿನ್ನದ ಪದಕಗಳು! ಆತನು ನೀರಿಗೆ ಇಳಿದರೆ ಸಾಕು ದಾಖಲೆಗಳು ಮತ್ತು ದಾಖಲೆಗಳು ಮಾತ್ರ ನಿರ್ಮಾಣ ಆಗುತ್ತಿದ್ದವು.

ಆತನು ಅಮೇರಿಕಾದ ಮಹೋನ್ನತ ಈಜುಗಾರ ಮೈಕೆಲ್ ಫೆಲ್ಪ್ಸ್ (Michel Phelps).

ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು. ಸತತವಾಗಿ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಆತ ಭಾಗವಹಿಸಿದ್ದು ಮಾತ್ರವಲ್ಲ ಪ್ರತೀ ಬಾರಿ ನೀರಿಗೆ ಇಳಿದಾಗ ಒಂದಲ್ಲ ಒಂದು ದಾಖಲೆ, ಒಂದಲ್ಲ ಒಂದು ಪದಕ ಗೆಲ್ಲದೆ ಆತ ಮೇಲೆ ಬಂದ ಉದಾಹರಣೆಯೇ ಇಲ್ಲ!

ಬಾಲ್ಟಿಮೋರ್‌ನ ಬುಲ್ಲೆಟ್!

1985ನೇ ಜೂನ್ 30ರಂದು ಅಮೇರಿಕಾದ ಬಾಲ್ಟಿಮೋರ್ ಎಂಬ ಪ್ರಾಂತ್ಯದಲ್ಲಿ ಹುಟ್ಟಿದ ಆತ ತನ್ನ ಒಂಬತ್ತನೇ ವಯಸ್ಸಿಗೆ ಅಪ್ಪ ಮತ್ತು ಅಮ್ಮನ ಪ್ರೀತಿಯಿಂದ ವಂಚಿತವಾದನು. ಅದಕ್ಕೆ ಕಾರಣ ಅವರ ವಿಚ್ಛೇದನ. ಅದರಿಂದಾಗಿ ಆತನಿಗೆ ಮಾನಸಿಕ ನೆಮ್ಮದಿ ಹೊರಟುಹೋಯಿತು. ಆತನಿಗೆ Attention Deficit Hyper active Disorder (ADHD) ಎಂಬ ಮಾನಸಿಕ ಸಮಸ್ಯೆಯು ಬಾಲ್ಯದಿಂದಲೂ ತೊಂದರೆ ಕೊಡುತ್ತಿತ್ತು. ರಾತ್ರಿ ನಿದ್ದೆ ಬಾರದೆ ಆತ ಒದ್ದಾಡುತ್ತಿದ್ದನು. ಈ ಸಮಸ್ಯೆಗಳಿಂದ ಹೊರಬರಲು ಆತ ಆರಿಸಿಕೊಂಡ ಮಾಧ್ಯಮ ಎಂದರೆ ಅದು ಸ್ವಿಮ್ಮಿಂಗ್ ಪೂಲ್! ತನ್ನ ಏಳನೇ ವಯಸ್ಸಿಗೆ ನೀರಿಗೆ ಇಳಿದ ಆತನಿಗೆ ಬಾಬ್ ಬೌಮಾನ್ ಎಂಬ ಕೋಚ್ ಸಿಕ್ಕಿದ ನಂತರ ಆತನ ಬದುಕಿನ ಗತಿಯೇ ಬದಲಾಯಿತು. ಆತ ದಿನದ ಹೆಚ್ಚು ಹೊತ್ತನ್ನು ನೀರಿನಲ್ಲಿಯೇ ಕಳೆಯಲು ತೊಡಗಿದನು.

ಆತನ ಕಣ್ಣ ಮುಂದೆ ಇಬ್ಬರು ಸ್ವಿಮ್ಮಿಂಗ್ ಲೆಜೆಂಡ್ಸ್ ಇದ್ದರು. ಒಬ್ಬರು ಒಂದೇ ಒಲಿಂಪಿಕ್ ಕೂಟದಲ್ಲಿ ಏಳು ಚಿನ್ನದ ಪದಕಗಳನ್ನು ಗೆದ್ದ ಮಾರ್ಕ್ ಸ್ಪಿಟ್ಜ್ (1972). ಇನ್ನೊಬ್ಬರು ಆಸ್ಟ್ರೇಲಿಯಾದ ಸ್ವಿಮಿಂಗ್ ದೈತ್ಯ ಇಯಾನ್ ತೋರ್ಪ್. ಅವರಿಂದ ಸ್ಫೂರ್ತಿ ಪಡೆದ ಆತ ಮುಂದೆ ಮಾಡಿದ್ದು ಎಲ್ಲವೂ ವಿಶ್ವ ದಾಖಲೆಯ ಸಾಧನೆಗಳೇ ಆಗಿವೆ. ಜನರು ಆತನನ್ನು ಬಾಲ್ಟಿಮೋರದ ಬುಲೆಟ್ ಎಂದು ಪ್ರೀತಿಯಿಂದ ಕರೆದರು.

ಸತತ ನಾಲ್ಕು ಒಲಿಂಪಿಕ್ಸ್ – 28 ಪದಕಗಳು – ಅದರಲ್ಲಿ 23 ಚಿನ್ನದ ಪದಕಗಳು!

2004ರ ಅಥೆನ್ಸ್ ಒಲಿಂಪಿಕ್ಸ್ – ಒಟ್ಟು ಎಂಟು ಪದಕಗಳು.
2008 ಬೀಜಿಂಗ್ ಒಲಿಂಪಿಕ್ಸ್ – ಒಟ್ಟು ಎಂಟು ಚಿನ್ನದ ಪದಕಗಳು.
2012 ಲಂಡನ್ ಒಲಿಂಪಿಕ್ಸ್ – ನಾಲ್ಕು ಚಿನ್ನ ಮತ್ತು ಎರಡು ಬೆಳ್ಳಿಯ ಪದಕಗಳು.
2016 ರಿಯೋ ಒಲಿಂಪಿಕ್ಸ್ – ಐದು ಚಿನ್ನದ ಪದಕ ಮತ್ತು ಒಂದು ಬೆಳ್ಳಿ.

ಅಂದರೆ ಸತತ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಭಾಗವಹಿಸಿ ಒಟ್ಟು 28 ಪದಕಗಳನ್ನು ಬೇರೆ ಯಾರೂ ಕಲ್ಪನೆ ಕೂಡ ಮಾಡಲು ಸಾಧ್ಯವಿಲ್ಲ! ಬಟರ್ ಫ್ಲೈ, ಮೆಡ್ಲಿ, ಫ್ರೀ ಸ್ಟೈಲ್, ಬ್ಯಾಕ್ ಸ್ಟ್ರೋಕ್ಸ್…ಹೀಗೆ ಪ್ರತೀಯೊಂದು ವಿಭಾಗಳಲ್ಲಿಯೂ ಮೈಕೆಲ್ ಒಂದರ ಮೇಲೊಂದು ಪದಕಗಳನ್ನು ಗೆಲ್ಲುತ್ತಾ ಹೋಗಿದ್ದಾನೆ! ಆ 16 ವರ್ಷಗಳ ಅವಧಿಯಲ್ಲಿ ಆತನಿಗೆ ಸ್ಪರ್ಧಿಗಳೇ ಇರಲಿಲ್ಲ ಎನ್ನಬಹುದು!

ಮೈಕೆಲ್ ಎಂಬ ಚಿನ್ನದ ಮೀನಿನ ಜಾಗತಿಕ ದಾಖಲೆಗಳು

೧) ಆತನು ತನ್ನ ಜೀವಮಾನದಲ್ಲಿ ಗೆದ್ದ ಒಟ್ಟು ಅಂತಾರಾಷ್ಟ್ರೀಯ ಪದಕಗಳ ಸಂಖ್ಯೆ ಬೆರಗು ಹುಟ್ಟಿಸುತ್ತದೆ. ಒಟ್ಟು 82 ಪದಕಗಳು. ಅದರಲ್ಲಿ 65 ಚಿನ್ನ, 14 ಬೆಳ್ಳಿ ಮತ್ತು 3 ಕಂಚು!
೨) ಒಟ್ಟು 20 ಗಿನ್ನೆಸ್ ದಾಖಲೆಗಳು ಆತನ ಹೆಸರಿನಲ್ಲಿ ಇವೆ!
೩) ಒಟ್ಟು 39 ವಿಶ್ವದಾಖಲೆಗಳು ಆತನ ಹೆಸರಿನಲ್ಲಿ ಇವೆ. ಅದರಲ್ಲಿ 29 ವೈಯಕ್ತಿಕ ಮತ್ತು 10 ರಿಲೇ ಸ್ಪರ್ಧೆಗಳದ್ದು!
೪) 2004ರಿಂದ 2018ರವರೆಗೆ ನಡೆದ ವಿಶ್ವ ಈಜು ಚಾಂಪಿಯನಶಿಪ್ ಸ್ಪರ್ಧೆಗಳಲ್ಲಿ ಆತ ಪದಕಗಳ ಗೊಂಚಲು ಗೆಲ್ಲದೆ ಹಿಂದೆ ಬಂದ ನಿದರ್ಶನವೇ ಇಲ್ಲ!
೫) ಒಟ್ಟು ಎಂಟು ಬಾರಿ ಅವನಿಗೆ ‘ವರ್ಲ್ಡ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೬) ಒಟ್ಟು 11 ಬಾರಿ ‘ಅಮೇರಿಕನ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೭) ಒಂದೇ ಒಲಿಂಪಿಕ್ ಕೂಟದಲ್ಲಿ ಆತ ಎಂಟು ಚಿನ್ನದ ಪದಕಗಳನ್ನು (2008 ಬೀಜಿಂಗ್) ಗೆದ್ದ ದಾಖಲೆಯನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲವೇ ಇಲ್ಲ!
೮) ಆತನಿಗೆ ಜಾಗತಿಕ ಒಲಿಂಪಿಕ್ ಸಮಿತಿಯು ಜಗತ್ತಿನ ಅತ್ಯುತ್ತಮ ಸ್ವಿಮ್ಮರ್ ಪ್ರಶಸ್ತಿ ನೀಡಿ ಗೌರವಿಸಿದೆ!
೯) 100 ಮೀಟರ್ ಬಟರ್ ಫ್ಲೈ, 200 ಮೀಟರ್ ಬಟರ್ ಫ್ಲೈ, 200 ಮೀಟರ್ ಇಂಡಿವಿಜುವಲ್ ಮೆಡ್ಲಿ, 400 ಮೀಟರ್ ಇಂಡಿವಿಜುವಲ್ ಮೆಡ್ಲಿ ಈ ವಿಭಾಗದಲ್ಲಿ ಆತ ಮಾಡಿದ ಜಾಗತಿಕ ದಾಖಲೆಗಳನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲ ಎಂದು ಭಾವಿಸಲಾಗುತ್ತಿದೆ!

ಈ ಎಲ್ಲಾ ಸಾಧನೆಗಳಿಗೆ ಕಾರಣ ಆತನ ಈಜುವ ಪ್ಯಾಶನ್!

ಆತನ ಆತ್ಮಚರಿತ್ರೆಯ ಪುಸ್ತಕವನ್ನು ಒಮ್ಮೆ ತಿರುವಿ ಹಾಕಿದಾಗ ಆತನ ಸ್ವಿಮ್ಮಿಂಗ್ ಪ್ಯಾಶನ್ ಬಗ್ಗೆ ಹಲವು ಉದಾಹರಣೆಗಳು ದೊರೆಯುತ್ತವೆ.

ಒಮ್ಮೆ ಏನಾಯಿತೆಂದರೆ 2001 ಸೆಪ್ಟೆಂಬರ್ 11ರಂದು ಅಮೆರಿಕದ ಟ್ವಿನ್ ಟವರ್ ಮೇಲೆ ಭಯೋತ್ಪಾದಕ ಧಾಳಿ ನಡೆದು ಇಡೀ ಟವರ್ ಕುಸಿದು ಹೋದದ್ದು, ಇಡೀ ಅಮೇರಿಕಾ ನಲುಗಿ ಹೋದದ್ದು ನಮಗೆಲ್ಲ ಗೊತ್ತಿದೆ. ಸರಿಯಾಗಿ ಅದೇ ಹೊತ್ತಿಗೆ ಮೈಕೆಲ್ ಸ್ವಿಮ್ಮಿಂಗ್ ಪೂಲನಲ್ಲಿ ಈಜುತ್ತಾ ತನ್ನ ಕೋಚಗೆ ಕಾಲ್ ಮಾಡಿ ಕೇಳಿದ್ದನಂತೆ- ಸರ್, ಎಲ್ಲಿದ್ದೀರಿ? ನಾನು ಪೂಲಲ್ಲಿ ಪ್ರಾಕ್ಟೀಸ್ ಮಾಡ್ತಾ ಇದ್ದೇನೆ!

ಮೈಕೆಲ್ ಫೆಲ್ಫ್ಸ್ ಇಷ್ಟೊಂದು ವಿಶ್ವ ದಾಖಲೆಗಳನ್ನು ಕ್ರಿಯೇಟ್ ಮಾಡಿದ್ದು ಸುಮ್ಮನೆ ಅಲ್ಲ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

ರಾಜಮಾರ್ಗ ಅಂಕಣ: ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

VISTARANEWS.COM


on

ರಾಜಮಾರ್ಗ ಅಂಕಣ Kargil Vijay Diwas 2024
Koo

ಇಂದು ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತವು ಗೆದ್ದ ಅತ್ಯಂತ ಕಠಿಣ ಯುದ್ಧ (Kargil Vijay Diwas) ಅದು! 1999ರಲ್ಲಿ ಭಾರತೀಯ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ವಿ.ಪಿ ಮಲಿಕ್ ಬರೆದಿರುವ ‘KARGIL – FROM SURPRISE TO VICTORY’ ಓದುತ್ತಾ ಹೋದಂತೆ ನಾನು ಹಲವಾರು ಬಾರಿ ಬೆಚ್ಚಿಬಿದ್ದಿದ್ದೇನೆ! ಯಾಕೆಂದರೆ ಅದು ಭಾರತವು ಎದುರಿಸಿದ ಅತ್ಯಂತ ಕಠಿಣವಾದ ಯುದ್ಧ (India0 Pakistan War) ಮತ್ತು ದೀರ್ಘಕಾಲದ ಯುದ್ಧ. ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

ಯುದ್ಧದ ಹಿನ್ನೆಲೆ – ಮುಷರಫ್ ಕುತಂತ್ರ

ಆಗಷ್ಟೇ ಭಾರತವು ಅಣುಪರೀಕ್ಷೆ ಮಾಡಿ ಜಗತ್ತಿನ ಕಣ್ಣು ಕೋರೈಸುವ ಸಾಧನೆಯನ್ನು ಮಾಡಿತ್ತು. ಪಾಕ್ ಕೂಡ ಅಮೇರಿಕಾದ ನೆರವು ಪಡೆದು ತನ್ನ ಬಳಿ ಅಣುಬಾಂಬು ಇದೆ ಎಂದು ಹೇಳಿಕೊಂಡಿತ್ತು. ಆಗ ಭಾರತದ ಪ್ರಧಾನಿ ಆಗಿದ್ದ ವಾಜಪೇಯಿ (Atal Bihari Vajpayee) ಅವರು ತುಂಬಾ ಮೃದು ನಿಲುವಿನ ನಾಯಕ ಎಂದು ಪಾಕ್ ನಂಬಿ ಕುಳಿತಿತ್ತು. ಪಾಕಿಸ್ಥಾನಕ್ಕೆ ಜಗತ್ತಿನ ಅತೀ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ (Siachin) ವಶಪಡಿಸಿಕೊಳ್ಳಬೇಕು ಎಂಬ ದುರಾಸೆ. ಅಲ್ಲಿಂದ ಮುಂದೆ ಕಾರ್ಗಿಲ್ ಮತ್ತು ಮುಂದೆ ಇಡೀ ಕಾಶ್ಮೀರವನ್ನು ಕಬಳಿಸಬೇಕು ಎನ್ನುವ ಮಾಸ್ಟರ್ ಪ್ಲಾನ್! ಆಗ ಪಾಕಿಸ್ತಾನದ ಸೇನಾ ನಾಯಕ ಪರ್ವೇಜ್ ಮುಷರಫ್ (Parvez Musharraf) ಹೊಂಚು ಹಾಕಿ ಕುಳಿತ ಕಾಲ ಅದು.

ಅದಕ್ಕೆ ಪೂರಕವಾಗಿ 1998ರ ಜೂನ್ ತಿಂಗಳಿಂದಲೇ ಪಾಕಿಸ್ಥಾನದ 5000ರಷ್ಟು ಸೈನಿಕರು ಲೈನ್ ಆಫ್ ಕಂಟ್ರೋಲ್ ದಾಟಿ ಭಾರತದ 4-10 ಕಿ.ಮೀ. ಒಳಗೆ ಬಂದು ಎತ್ತರದ ಪ್ರದೇಶದಲ್ಲಿ ಜಮಾವಣೆ ಆಗತೊಡಗಿದ್ದರು! ಅವರ ಬಳಿಗೆ ಆಧುನಿಕ ಶಸ್ತ್ರಾಸ್ತ್ರಗಳು ಬಂದು ತಲುಪಿದ್ದವು. ಆದರೆ 1999ರ ಮೇ 18ರವರೆಗೆ ಭಾರತ ಸರಕಾರಕ್ಕೆ ಇದರ ಬಗ್ಗೆ ಮಾಹಿತಿಯೇ ಇರಲಿಲ್ಲ. ಭಾರತೀಯ ಸೇನಾ ಗೂಢಚಾರ ಸಂಸ್ಥೆಯವರು ಇನ್ನೂ ಸ್ವಲ್ಪ ದಿನ ಮೈಮರೆತಿದ್ದರೆ…! ಆ ಕುರಿಗಾಹಿ ಹುಡುಗರು ಆ ನುಸುಳುಕೋರ ಸೈನಿಕರ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ಕೊಡದೇ ಹೋಗಿದ್ದರೆ…! ನಾನು ಬೆಚ್ಚಿ ಬಿದ್ದದ್ದು ಆಗ.

ಭಾರತದ ಸೈನಿಕರ ಬಳಿ ಯುದ್ಧದ ಸಿದ್ಧತೆಗೆ ಸಮಯ ಇರಲಿಲ್ಲ

ಗಡಿಯ ಒಳಗೆ ಅಷ್ಟು ದೊಡ್ಡ ಸಂಖ್ಯೆಯ ಸೈನಿಕರು ನುಸುಳಿಬಂದ ವಿಷಯ ಭಾರತಕ್ಕೆ ಗೊತ್ತಾಯಿತು ಅಂದಾಗ ಮುಷರಫ್ ಅಲರ್ಟ್ ಆದರು. ಅವರು ನಮ್ಮ ಸೈನಿಕರೇ ಅಲ್ಲ, ಯಾವುದೋ ಭಯೋತ್ಪಾದಕ ಸಂಘಟನೆಯವರು ಎಂದು ಬಿಟ್ಟರು ಮುಷರಫ್! ಆದರೆ ಈಗ ಭಾರತದ ಪ್ರಧಾನಿ ವಾಜಪೇಯಿ, ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸೇನಾ ಮುಖ್ಯಸ್ಥರನ್ನು ಕರೆಸಿ ಯುದ್ಧ ಘೋಷಣೆ ಮಾಡಿಬಿಟ್ಟರು. ಆದರೆ ಭಾರತೀಯ ಸೈನ್ಯಕ್ಕೆ ಆ ಯುದ್ಧಕ್ಕೆ ಸಿದ್ಧತೆ ಮಾಡಲು ದೊರೆತದ್ದು 24 ಘಂಟೆ ಮಾತ್ರ! ಆದರೂ 1999ರ ಮೇ 3ರಂದು ಭಾರತ ಯುದ್ಧ ಘೋಷಣೆ ಮಾಡಿ ಆಗಿತ್ತು!

ಆರಂಭದಲ್ಲಿ ಭಾರತಕ್ಕೆ ಹಿನ್ನಡೆ ಆದದ್ದು ನಿಜ. ಆದರೆ ಮೇ 30 ಆಗುವಾಗ ಭಾರತದ 30,000 ಸೈನಿಕರು ಟೈಗರ್ ಹಿಲ್ ಬಳಿ ಬಂದು ಜಮಾವಣೆ ಮಾಡಿ ಆಗಿತ್ತು. ಭಾರತದ ಭೂಸೈನ್ಯ ಮತ್ತು ವಾಯು ಸೈನ್ಯಗಳು ವೀರಾವೇಶದಿಂದ ಹೋರಾಟಕ್ಕೆ ಇಳಿದಿದ್ದವು. ಎರಡೂ ಕಡೆಯ ಸೈನಿಕರು, ಬಾಂಬುಗಳು, ಮದ್ದುಗುಂಡುಗಳು, ಶೆಲ್‌ಗಳು ಸಿಡಿಯುತ್ತ ಕಾರ್ಗಿಲ್ ಯುದ್ಧಭೂಮಿಯು ರಕ್ತದಲ್ಲಿ ಒದ್ದೆಯಾಗುತ್ತಾ ಹೋಯಿತು. ಟೈಗರ್ ಹಿಲ್ ಏರಿ 10 ಪಾಕ್ ಸೈನಿಕರ ಹತ್ಯೆಯನ್ನು ನಮ್ಮ ಸೈನಿಕರು ಮಾಡಿದಾಗ ಭಾರತವು ಯುದ್ಧದಲ್ಲಿ ಸಣ್ಣ ಮೇಲುಗೈ ಸಾಧಿಸಿತು.

ಅಲ್ಲಿಂದ ಮುಂದೆ ಭಾರತದ ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸ್ವತಃ ಯುದ್ಧಭೂಮಿಗೆ ಬಂದು ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಿದ್ದು, ಪ್ರಧಾನಿ ವಾಜಪೇಯಿ ವಾರ್ ರೂಮಿನಲ್ಲಿ ಕುಳಿತು ಸೈನ್ಯಕ್ಕೆ ನಿರ್ದೇಶನವನ್ನು ಕೊಟ್ಟದ್ದು ಭಾರತವನ್ನು ಗೆಲ್ಲಿಸುತ್ತಾ ಹೋದವು. 75 ದಿನಗಳ ಘನಘೋರ ಯುದ್ಧದ ನಂತರ ಭಾರತ ಜುಲೈ 26ರಂದು ದ್ರಾಸ್ ಪರ್ವತದ ತಪ್ಪಲಲ್ಲಿ ಇದ್ದ ಕೊನೆಯ ಪಾಕ್ ಸೈನಿಕನನ್ನೂ ಹೊಸಕಿ ಹಾಕಿದಾಗ ಭಾರತ ವಿಜಯೋತ್ಸವ ಆಚರಣೆ ಮಾಡಿತು. ಕಾರ್ಗಿಲ್ ಮೈದಾನದಲ್ಲಿ ಸೈನಿಕರ ನಡುವೆ ತ್ರಿವರ್ಣಧ್ವಜ ಹಾರಿಸಿದ ಕ್ಷಣವೇ ಕಾರ್ಗಿಲ್ ವಿಜಯ ದಿನ.

Kargil Vijay Diwas 2024
Kargil Vijay Diwas 2024

ಹುತಾತ್ಮರಾದವರು ಭಾರತದ 527 ಸೈನಿಕರು!

ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಸೈನಿಕರ ಬಲಿದಾನ ಭಾರತಕ್ಕೆ ಒಂದು ದೊಡ್ಡ ವಿಜಯವನ್ನು ತಂದುಕೊಟ್ಟಿತ್ತು. ಅದರಲ್ಲಿ ಕರ್ನಾಟಕದ 21 ಸೈನಿಕರೂ ಇದ್ದರು. ಸಾವಿರಾರು ಯೋಧರು ತೀವ್ರವಾಗಿ ಗಾಯಗೊಂಡರು. ಪಾಕಿಸ್ತಾನವೂ ದೊಡ್ಡ ಸಂಖ್ಯೆಯ ಸೈನಿಕರನ್ನು ಕಳೆದುಕೊಂಡಿತ್ತು.

ನಮ್ಮ ಸೈನಿಕರಾದ ಸಿಯಾಚಿನ್ ಹೀರೋ ನಾಯಬ್ ಸುಬೇದಾರ್ ಬಾಣಾ ಸಿಂಗ್, ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮೇಜರ್ ಪದ್ಮಪಾಣಿ ಆಚಾರ್ಯ, ಗ್ರೆನೆಡಿಯರ್ ಯೋಗೇಂದರ್ ಸಿಂಘ್ ಯಾದವ್, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಕ್ಯಾಪ್ಟನ್ ಅನುಜ್ ನಯ್ಯರ್, ಲೆಫ್ಟಿನೆಂಟ್ ಬಲವಾನ್ ಸಿಂಘ್, ರೈಫಲ್ ಮ್ಯಾನ್ ಸಂಜಯ ಕುಮಾರ್, ಕ್ಯಾಪ್ಟನ್ ವಿಜಯವಂತ್ ಥಾಪರ್, ಮೇಜರ್ ಸೋನಂ ವಾಂಗಚುಕ್, ಲೆಫ್ಟಿನೆಂಟ್ ಕರ್ನಲ್ ವೈ.ಕೆ. ಜೋಷಿ ಇವರೆಲ್ಲರೂ ನಿಜವಾದ ಕಾರ್ಗಿಲ್ ಹೀರೋಗಳು. ಅದರಲ್ಲಿ ಹೆಚ್ಚಿನವರು ಹುತಾತ್ಮರಾದವರು. ಅವರಿಗೆಲ್ಲ ವಿವಿಧ ಸೇನಾ ಶೌರ್ಯ ಪ್ರಶಸ್ತಿಗಳನ್ನು ನೀಡಿ ಭಾರತ ಸರಕಾರವು ಗೌರವಿಸಿತು.

ಕಾರ್ಗಿಲ್ ಯುದ್ಧದ ಫಲಶ್ರುತಿ ಏನೆಂದರೆ ಮುಂದೆ ಭಾರತವು ಎಂದಿಗೂ ಪಾಕಿಸ್ತಾನವನ್ನು ನಂಬಲಿಲ್ಲ ಮತ್ತು ಪಾಕಿಸ್ತಾನ ಯಾವತ್ತೂ ಭಾರತದ ಮೇಲೆ ಮತ್ತೆ ದಂಡೆತ್ತಿ ಬರುವ ಸಾಹಸವನ್ನು ಮಾಡಲಿಲ್ಲ!

ಜೈ ಹಿಂದ್.

ಇದನ್ನೂ ಓದಿ: ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

Continue Reading

ಅಂಕಣ

ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

ರಾಜಮಾರ್ಗ ಅಂಕಣ: ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಈ ವರ್ಷ ಅವರ ಜನ್ಮ ಶತಮಾನೋತ್ಸವ.

VISTARANEWS.COM


on

ರಾಜಮಾರ್ಗ ಅಂಕಣ
Koo

ಈ ವರ್ಷ (2024) ಲೇಖಕ ನಿರಂಜನರ ಜನ್ಮ ಶತಮಾನೋತ್ಸವ

Rajendra-Bhat-Raja-Marga-Main-logo

ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ (Niranjana) ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಅವರು 71 ವರ್ಷಗಳ ಕಾಲ ಬದುಕಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು. ಕನ್ನಡದ ಮೊದಲ ಮತ್ತು ಜನಪ್ರಿಯ ಅಂಕಣ ಲೇಖಕರು ಅಂದರೆ ಅದು ನಿರಂಜನ! (ರಾಜಮಾರ್ಗ ಅಂಕಣ)

ಬಾಲ್ಯದಿಂದಲೂ ಬರವಣಿಗೆ

1924 ಜೂನ್ 15ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಳಕುಂದ ಎಂಬ ಗ್ರಾಮದಲ್ಲಿ ಜನಿಸಿದ ಅವರು ಸಣ್ಣ ಪ್ರಾಯದಲ್ಲಿ ಪತ್ರಿಕೆಗಳಿಗೆ ಬರೆಯಲು ತೊಡಗಿದರು. ಮೊದಲು ಕಂಠೀರವ ಪತ್ರಿಕೆ ಅವರಿಗೆ ಬರೆಯಲು ಅವಕಾಶ ಕೊಟ್ಟಿತು. ಮುಂದೆ ಕನ್ನಡದ ಎಲ್ಲ ಪ್ರಸಿದ್ಧ ಪತ್ರಿಕೆಗಳಿಗೆ ಅವರು ಅಂಕಣಗಳನ್ನು ಬರೆಯುತ್ತಾ ಹೋದರು. ರಾಷ್ಟ್ರಬಂಧು ಎಂಬ ಪತ್ರಿಕೆಯ ಪ್ರಮುಖ ಲೇಖಕರಾಗಿ ಅವರು ಸಾವಿರಾರು ಅಂಕಣಗಳನ್ನು ಬರೆದರು. ಅವರ ಅಂಕಣ ಲೇಖನಗಳು ಎಂಟು ಕೃತಿಗಳಾಗಿ ಹೊರಬಂದು ಅವರಿಗೆ ಅಪಾರ ಜನಪ್ರಿಯತೆ ಕೊಟ್ಟವು. ಅವರು ಕನ್ನಡದ ಮೊದಲ ಅಂಕಣಕಾರ ಎಂಬ ದಾಖಲೆಯೂ ನಿರ್ಮಾಣವಾಯಿತು.

ಪ್ರಭಾವಶಾಲಿ ಸಣ್ಣ ಕಥೆಗಳು

ಸಣ್ಣ ಕಥೆಗಳು ಅವರಿಗೆ ಇಷ್ಟವಾದ ಇನ್ನೊಂದು ಪ್ರಕಾರ. ಅವರ 156 ಸಣ್ಣ ಕಥೆಗಳ ಸಂಗ್ರಹವಾದ ‘ಧ್ವನಿ’ ಕನ್ನಡದ ಶ್ರೇಷ್ಠ ಕೃತಿ ಆಗಿದೆ. ಕಾರಂತರ ಸಂಪರ್ಕ, ಲೆನಿನ್ ಬಗ್ಗೆ ಓದು ಅವರನ್ನು ಬೆಳೆಸುತ್ತಾ ಹೋದವು.

ಬಾಪೂಜಿ ಬಾಪು ಅವರ ಅತ್ಯಂತ ಶ್ರೇಷ್ಟವಾದ ಸಣ್ಣ ಕಥೆ. ಗಾಂಧೀಜಿ ಬದುಕಿದ್ದಾಗಲೇ ಅವರು ಸತ್ತಂತೆ ಕಲ್ಪಿಸಿಕೊಂಡು ಬರೆದ ಕಥೆ ಇದು! ರಕ್ತ ಸರೋವರ ಕಾಶ್ಮೀರದ ದಾಲ್ ಸರೋವರದ ಹಿನ್ನೆಲೆಯಲ್ಲಿ ಅರಳಿದ ಅದ್ಭುತವಾದ ಕಥೆ.
ತಿರುಕಣ್ಣನ ಮತದಾನ ರಾಜಕೀಯ ವಿಡಂಬನೆಯ ಕಥೆ. ಅವರ ಸಣ್ಣ ಕಥೆಗಳು ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ, ಬೇರೆ ಬೇರೆ ಸಂಸ್ಕೃತಿಯಲ್ಲಿ ಅರಳಿದ ಕಥೆಗಳು. ಕನ್ನಡದಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ನಂತರ ಇಷ್ಟೊಂದು ವೈವಿಧ್ಯಮಯವಾದ ಸಣ್ಣ ಕಥೆಗಳನ್ನು ಬರೆದವರು ನಿರಂಜನ ಮಾತ್ರ ಅಂದರೆ ಅದು ಅತಿಶಯೋಕ್ತಿ ಅಲ್ಲ!

ಕಾದಂಬರಿಕಾರರಾಗಿ ನಿರಂಜನರು

ಅವರು ಬರೆದದ್ದು ಒಟ್ಟು 21 ಕಾದಂಬರಿಗಳು. ವರ್ಗ ಸಂಘರ್ಷ ಮತ್ತು ಸಾಮಾಜಿಕ ಸಮಾನತೆ ಅವರ ಹೆಚ್ಚಿನ ಕಾದಂಬರಿಗಳ ಹೂರಣ. 700 ಪುಟಗಳ ಬೃಹತ್ ಕಾದಂಬರಿ ಮೃತ್ಯುಂಜಯ ಅದೊಂದು ಮಾಸ್ಟರಪೀಸ್ ಕಲಾಕೃತಿ. ವಿಮೋಚನೆ, ಬನಶಂಕರಿ, ಅಭಯ, ಚಿರಸ್ಮರಣೆ, ರಂಗಮ್ಮನ ವಟಾರ ಮೊದಲಾದ ಕಾದಂಬರಿಗಳು ಒಮ್ಮೆ ಓದಿದರೆ ಮರೆತುಹೋಗೋದಿಲ್ಲ. ಸುಳ್ಯ ಮತ್ತು ಮಡಿಕೇರಿ ಪ್ರದೇಶದಲ್ಲಿ ಕಲ್ಯಾಣಸ್ವಾಮಿ ಎಂಬಾತ ನಡೆಸಿದ ರಕ್ತಕ್ರಾಂತಿಯ ಹಸಿಹಸಿ ಕಥೆಯನ್ನು ಹೊಂದಿರುವ ಒಂದು ಶ್ರೇಷ್ಟವಾದ ಕಾದಂಬರಿ ಅವರು ಬರೆದಿದ್ದಾರೆ. ನಿರಂಜನರು ಬರೆದ ನಾಟಕಗಳೂ ಜನಪ್ರಿಯವಾಗಿವೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನೇಪಥ್ಯಕ್ಕೆ ಸರಿದ ರಂಗ ನಿರ್ದೇಶಕ ಸದಾನಂದ ಸುವರ್ಣ

ನಿರಂಜನ ಅವರ ಸಂಪಾದನಾ ಗ್ರಂಥಗಳು

ಇಂದು ಕನ್ನಡ ನಾಡು ನಿರಂಜನರನ್ನು ನೆನಪಿಟ್ಟುಕೊಳ್ಳಲೇ ಬೇಕಾದ ಮುಖ್ಯ ಕಾರಣ ಎಂದರೆ ಅವರ ಸಂಪಾದನೆಯ ಗ್ರಂಥಗಳು. 25 ಸಂಪುಟಗಳ ವಿಶ್ವ ಕಥಾಕೋಶ, ಜ್ಞಾನಗಂಗೋತ್ರಿ ಹೆಸರಿನ ಎಳೆಯರ ಏಳು ಸಂಪುಟಗಳ ವಿಶ್ವ
ಜ್ಞಾನಕೋಶ, ಪುರೋಗಾಮಿ ಪ್ರಕಾಶನದ ಎಂಟು ಪುಸ್ತಕಗಳು, ಜನತಾ ಸಾಹಿತ್ಯಮಾಲೆಯ 25 ಪುಸ್ತಕಗಳು….ಹೀಗೆ ಲೆಕ್ಕ ಮಾಡುತ್ತಾ ಹೋದರೆ ಸಾವಿರಾರು ಪುಟಗಳ ಅದ್ಭುತ ಜ್ಞಾನಕೋಶಗಳು ಅರಳಿದ್ದು ನಿರಂಜನರ ಸಂಪಾದಕತ್ವದಲ್ಲಿ! ಅವರ ಇಡೀ ಜೀವನವನ್ನು ನಿರಂಜನರು ಅಧ್ಯಯನ ಮತ್ತು ಬರವಣಿಗೆಯಲ್ಲಿಯೇ ಕಳೆದರು.

ಇಡೀ ಕುಟುಂಬವು ಸಾಹಿತ್ಯಕ್ಕೆ ಮೀಸಲು

ನಿರಂಜನರ ಪತ್ನಿ ಅನುಪಮಾ ನಿರಂಜನ ಕನ್ನಡದ ಸ್ಟಾರ್ ಕಾದಂಬರಿಕಾರರು. ಹೆಣ್ಣು ಮಕ್ಕಳಾದ ತೇಜಸ್ವಿನಿ ಮತ್ತು ಸೀಮಂತಿನಿ ಇಬ್ಬರೂ ಕನ್ನಡದ ಪ್ರಭಾವೀ ಲೇಖಕರಾಗಿ ಗುರುತಿಸಿಕೊಂಡವರು. ಹಾಗೆ ನಿರಂಜನರ ಇಡೀ ಕುಟುಂಬವು ಕನ್ನಡದ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿತು.

ಕರ್ನಾಟಕ ವಿವಿಯಿಂದ ಗೌರವ ಡಾಕ್ಟರೇಟ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಅವರಿಗೆ ದೊರೆತವು. 1995ರಲ್ಲಿ ಅವರು ನಮ್ಮನ್ನು ಅಗಲಿದರು. ಕನ್ನಡ ಸಾಹಿತ್ಯಲೋಕವನ್ನು ಚಂದವಾಗಿ ಬೆಳೆಸಿದ ನಿರಂಜನರ ಜನ್ಮ ಶತಮಾನೋತ್ಸವದ ಈ ವರ್ಷ ಕನ್ನಡ ಸಾರಸ್ವತ ಲೋಕ ಒಂದು ಸ್ಮರಣೀಯ ಕಾರ್ಯಕ್ರಮವನ್ನು ಅವರ ನೆನಪಿನಲ್ಲಿ ಮಾಡಬೇಕು ಎನ್ನುವುದು ನಮ್ಮೆಲ್ಲರ ಆಗ್ರಹ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಆಲ್ಫೀ ಹೆವೆಟ್ಟ್- ವೀಲ್ ಚೇರ್ ಮೇಲಿನ ಟೆನ್ನಿಸ್ ಬೆರಗು

Continue Reading

ಅಂಕಣ

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Guru Purnima 2024: ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು, ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು, ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಹೀಗೆ ಗುರು-ಶಿಷ್ಯರಿಗೆ ಪರಂಪರೆಗಳ ಐತಿಹ್ಯವಿದೆ.

VISTARANEWS.COM


on

Guru Purnima 2024
Koo

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)

ಆಷಾಢ ಮಾಸ ಶುಕ್ಲ ಪಕ್ಷದಲ್ಲಿ ಬರುವ “ಕಡ್ಲಿಗರ ಹುಣ್ಣಿಮೆ”ಯನ್ನು ನಾವು ಆಚರಿಸ್ಪಡುವ, ಶ್ರೇಷ್ಠವಾದ ಪರ್ವವೆಂದರೆ ಅದು “ಗುರು ಪೂರ್ಣಿಮೆ”.
ಈ ದಿನ ನಾವು ನಂಬಿದ ನಮ್ಮಲ್ಲಿಯ ಅಂಧಕಾರವನ್ನು ತೊಲಗಿಸಿ ಜ್ಞಾನ ಸಾಕ್ಷಾತ್ಕಾರ ಮಾಡಿಸಿದ ನಮ್ಮ ಗುರುಗಳಿಗೆ ವಂದನೆ (Guru Purnima 2024) ಸಲ್ಲಿಸುವ ದಿನ. ಆ ಗುರುವನ್ನು ನೆನೆದು ಅವರ ಮಹತ್ವವನ್ನು ಸಾರುವ ದಿನ. ಗುರುಗಳು ನಮಗೆ ನಮ್ಮ ಜೀವನಕ್ಕೆ ಸರಿಯಾದ ಮಾರ್ಗ ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ ದಿಕ್ಸೂಚಿ,ದಾರಿದೀಪ. ಪರಮಾತ್ಮನ, ಪರಮಾರ್ಥದ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮಜ್ಯೋತಿಯನ್ನು ಜ್ಞಾನವೆಂಬ ತೈಲ ಹಾಕಿ ಬೆಳುಗುವಂತೆ ಮಾಡಿ ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ. ಆಧ್ಯಾತ್ಮದ ಜತೆಗೆ ಲೌಕಿಕ ಪ್ರಪಂಚದ ಹಾದಿಯಲ್ಲಿ ನಮ್ಮನ್ನು ನಡೆಸಿ, ನಮ್ಮ ಗುರಿ ಮುಟ್ಟವ ತನಕ ಸಹಾಯ ಮಾಡುವವನೇ “ ಶ್ರೇಷ್ಠಗುರು”.

ಅಲೆದು ಅಲೆದು ಹುಡಕಿದರೆ ಸಿಗುವವನಲ್ಲ ಗುರು, ನಮ್ಮನ್ನು ಹುಡುಕಿ, ನಾವು ಗುರುವನ್ನು ಕಾಣುವ ಮಟ್ಟಿಗೆ ಸಾಧನೆ ಮಾಡಿದ್ದರೆ ತಾನಾಗೇ ನಮ್ಮ ಬಳಿಗೆ ಬರುವವನು. ನಾವುಗಳೆಲ್ಲರೂ ಆ ಗುರುವಿನ ಮುಖಾಂತರವೇ ಪರಮಾತ್ಮನ ಅರಿವು, ಪ್ರಪಂಚದ ಅರಿವು, ಅರಿಯಬೇಕಾಗಿರುವುದರಿಂದ, ನಾವು ಪ್ರತಿ ಆಷಾಢ ಮಾಸದ ಈ ಪೌರ್ಣಿಮೆಯಂದು ಮಾತ್ರ ಗುರುವನ್ನು ಪೂಜಿಸದೆ.. ಅನು ದಿನ, ಅನು ಕ್ಷಣ, ಗುರುವನ್ನು ನಮ್ಮ ಅಂತರಂಗದಲ್ಲೇ ಪ್ರತಿಷ್ಠಾಪಿಸಿ ಪೂಜಿಸುತ್ತಾ ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹೀಗೆ ನನ್ನದೇನೂ ಇಲ್ಲ ಎಂದು ಅಂತಹ ಗುರುವಿಗೆ ಶರಣಾದಾಗ ಮಾತ್ರ ನಮ್ಮ ಗುರಿ ಮುಟ್ಟುವ ಪ್ರಯತ್ನ ಫಲಪ್ರದವಾಗುತ್ತದೆ.

ಉಪನಿಷತ್ತಿನಲ್ಲಿ ಗುರು

ಉಪನಿಷತ್ತಿನಲ್ಲಿ ಗುರು ಎಂಬುದನ್ನು ಈ ರೀತಿಯಾಗಿ ವಿವರಿಸಿದ್ದಾರೆ. “ಗು” ಎಂದರೆ ಅಂಧಕಾರವೆಂದು “ರು” ಎಂದರೆ ದೂರೀಕರಿಸುವ ಅಥವಾ ಅಜ್ಞಾನದ ಅಂಧಕಾರವನ್ನು ನಿವಾರಿಸಿ ಜ್ಞಾನದ ಹಾದಿಯ ಕಡೆಗೆ ನಡೆಸುವ ಎಂಬ ಅರ್ಥವಾಗುತ್ತದೆ. ಸಂಸ್ಕೃತದಲ್ಲಿ “ಗುರು” ಪದಕ್ಕೆ ಭಾರವಾದ ಎನ್ನುವ ಅರ್ಥವೂ ಇದೆಯೆನ್ನುತ್ತಾರೆ. ಯಾರು ಜ್ಞಾನದಿಂದ ಭಾರವಾಗಿರುವನೋ ಅವನೇ ನಿಜವಾದ ಗುರು ಎಂದು ಅರ್ಥೈಸಬಹುದೇನೋ ಎಂಬ ಅಭಿಪ್ರಾಯ.

ಆದಿಗುರು ಶ್ರೀ ಶಂಕರಭಗವತ್ಪಾದಚಾರ್ಯರು ಗುರು ಮಹಿಮೆ ಕುರಿತು ಹೀಗೆ ಸ್ತೋತ್ರವನ್ನು ಹೇಳಿದ್ದಾರೆ:

ಗುರುರ್ಬ್ರಹ್ಮಾ ಗುರುರ್ವಿಷ್ಣುಃ | ಗುರುರ್ದೇವೋ ಮಹೇಶ್ವರಃ |
ಗುರುಸ್ಸಾಕ್ಶಾತ್ ಪರಬ್ರಹ್ಮಃ | ತಸ್ಮೈ ಶ್ರೀ ಗುರವೇ ನಮಃ ||

ಗುರುವು ತ್ರೀಮೂರ್ತಿ ಸ್ವರೂಪಿಯಾಗಿದ್ದು, ಅದಕ್ಕೂ ಮಿಗಿಲಾದ ಪರಬ್ರಹ್ಮ ತತ್ತ್ವವೇ ಆಗಿದ್ದಾನೆ. ಅಂಥ ಗುರುವಿಗೆ ಪ್ರಣಾಮಗಳು ಎಂಬ ಅರ್ಥವಾಗುತ್ತದೆ. ಸ್ಕಂದ ಪುರಾಣದ “ಗುರುಗೀತೆ”ಯಲ್ಲಿ ಗುರುವನ್ನು ನಂದಾದೀಪದಂತೆ ಬೆಳಗುವ ಜ್ಯೋತಿಯಂತೆ ಎಂದು ಗುರುವಿನ ಹಿರಿಮೆಯನ್ನು ವಿಸ್ತಾರವಾಗಿ ತಿಳಿಸಲ್ಪಟಿದೆ :

ಅಖಂಡ ಮಂಡಲಾಕಾರಂ ವ್ಯಾಪ್ತಂ ಯೇನಾ ಚರಾಚರಂ।
ತತ್ಪದಂ ದರ್ಶಿತಂ ಯೇನಾ ತಸ್ಮೈ ಶ್ರೀಗುರವೇ ನಮಃ॥
ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ।
ಚಕ್ಷುರುನ್ಮೀಲಿತಂ ಯೇನ
ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ನಮ್ಮಲ್ಲಿರುವ ಅಜ್ಞಾನವೆಂಬ ಕಣ್ಣಿಗೆ ಅಂಟಿದ ಅಂಧಕಾರವನ್ನು ಜ್ಞಾನವೆಂಬ ಕಡ್ಡಿಯಿಂದ ಗುಣಪಡಿಸಿ, ಶಿಷ್ಯನ ಏಳ್ಗಿಗೆ ಬೇಕಾದ ಸೋಪಾನವನ್ನು ಹತ್ತಿಸುವ ಹಾಗೂ ಸಾಧನೆಯ ಮಾರ್ಗದರ್ಶನ ಮಾಡುವ ಶ್ರೀ ಗುರುವಿಗೆ ವಂದನೆಗಳು.
ಹೀಗೆ ನಮ್ಮ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಗುರುವಿನ ಮಹತ್ವವನ್ನು ಸಾರುತ್ತಾ ಬಂದಿದ್ದಾರೆ..

ನ ಗುರೋರಧಿಕಂ ತತ್ವಂ, ನ ಗುರೋರಧಿಕಂ ತಪಃ।
ತತ್ವ ಜ್ಞಾನಾತ್ ಪರಂ ನಾಸ್ತಿ, ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ಗುರುವಿಗಿಂತ ಮೀರಿದ ತತ್ವ, ತಪಸ್ಸು ಯಾವುದೂ ಇಲ್ಲ. ಜ್ಞಾನವೆಂಬ ದಾರಿದೀಪವಾಗಿರುವ ಶ್ರೀ ಗುರುವೇ ನಿನಗೆ ವಂದನೆಗಳು ಎಂದು ಹೇಳಿದ್ದಾರೆ. ಶಾಶ್ವತವಾದ ಆನಂದವನ್ನು ಪಡೆಯುವುದು ಆ ಸದ್ಗುರುವಿನಿಂದಲೆ ಮಾತ್ರವೇ ಸಾಧ್ಯ ಎಂದು ಶ್ರೀ ಶಂಕರಾಚಾರ್ಯರು ತಮ್ಮ “ಗುರ್ವಷ್ಟಕಮ್” ಎಂಬ ಸ್ತೂತ್ರದಲ್ಲಿ ಹೀಗೆ ಹೇಳಿದ್ದಾರೆ :
ಶರೀರಂ ಸುರೂಪಂ ತಥಾ ವಾ ಕಲತ್ರಂ ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ।

ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂಗೃಹಂ ಬಾಂಧವಾಃ ಸರ್ವಮೇತದ್ಧಿ ಜಾತಮ್।।

ನಮಗೆ ಸುಂದರ ಶರೀರ, ಅಪಾರ ಅಂತಸ್ತು, ಕೀರ್ತಿ, ಸಂಸಾರ ಎಲ್ಲವೂ ಇದ್ದರೂ ಗುರುವಿನ ಚರಣಗಳಲ್ಲಿ ಭಕ್ತಿ, ಶ್ರದ್ಧೆ ಇಲ್ಲದವನಿಗೆ ಮೋಕ್ಷವಿಲ್ಲ ಎಂದು.ಏನೆಲ್ಲ ಸಾಧಿಸಿದ್ದರೂ, ತ್ಯಜಿಸಿದ್ದರೂ,ಗುರುವಿನ ಕರುಣೆಯಿಲ್ಲದೆ ಎಲ್ಲವೂ ವ್ಯರ್ಥ ಎಂದು ತಿಳಿಯುತ್ತದೆ.ಗುರುವಿನ ಪಾದಗಳಲ್ಲಿ ಮನಸ್ಸನ್ನು ನಿಲ್ಲಿಸದಿದ್ದರೆ ನಮ್ಮ ಸಾಧನೆ ಕಷ್ಟಸಾದ್ಯ ಎನ್ನುತ್ತಾ ಗುರುವಿನ ಮಹತ್ವನ್ನು ವಿವರಿಸುತ್ತಾರೆ ಆಚಾರ್ಯರು.

ನಮ್ಮ ಈ ಸನಾತನ ಪರಂಪರೆಯಲ್ಲಿ ಈಗಿರುವ “ಗುರುವಿನ ಗುರುವಿಗೆ ಪರಮಗುರು”ಎಂದೂ, “ಪರಮ ಗುರುವಿನ ಗುರುವನ್ನು ಪರಾಪರ ಗುರು”ಎಂದೂ,”ಪರಾಪರ ಗುರುವಿನ ಗುರುವನ್ನು ಪರಮೇಷ್ಠಿ ಗುರು”ಎಂದೂ ಗುರುತಿಸಲ್ಪಡುತ್ತಾರೆ. “ಗುರು ಪೂರ್ಣಿಮೆ’ಯಂದು ಸಮಸ್ತ ಗುರು ಪರಂಪರೆಯೇ ಪೂಜಿಸಲ್ಪಡುತ್ತದೆ. ವೇದದಲ್ಲಿನ ಬ್ರಹ್ಮ ತತ್ವವನ್ನು ಅರಿತಿದ್ದ ವಿಷ್ಣುವಿನ ಅವತಾರ ವಂದೇ ಕರೆಯಲ್ಪಡುವ ಶ್ರೀ ವೇದವ್ಯಾಸರನ್ನ ನಾವು ವಿಶೇಷವಾಗಿ ನಮ್ಮ ಗುರು ಪರಂಪರೆಯ ಜತೆಗೇ “ಗುರು ಪೂರ್ಣಿಮೆ”ಯಂದು ಪೂಜಿಸುತ್ತೇವೆ. ಲೋಕಗುರು, ಪರಮಗುರು ಎಂದೇ ಪ್ರಖ್ಯಾತರಾಗಿದ್ದರು ಶ್ರೀ ವೇದವ್ಯಾಸರು. ವೇದಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿದ್ದರಿಂದ ಇವರನ್ನು ವೇದವ್ಯಾಸರೆಂದು ಕರೆದರು. ಇಡೀ ಮಾನವ ಕುಲಕ್ಕೇ ಒಳಿತಾಗಲೆಂದು ಮತ್ತು ವೇದಗಳ ರಹಸ್ಯ ಸಾಮಾನ್ಯರೂ ಅರಿಯುವಂತಾಗ ಬೇಕೆಂದು ಅವರು ನಮಗಾಗಿ “ಮಹಾಭಾರತ”ವೆಂಬ ಲಕ್ಷ್ಯ ಶ್ಲೋಕಗಳಿರುವ “ಪಂಚಮವೇದ”ವನ್ನು ರಚಿಸಿ ಕೊಟ್ಟರು. ಜತೆಗೇ ಭಾಗವತವನ್ನೂ ಮತ್ತು ಹದಿನೆಂಟು ಪುರಾಣಗಳನ್ನೂ ರಚಿಸಿಕೊಟ್ಟರು. ಇಂತಹ ಪುಣ್ಯಾತ್ಮರು ವೇದವ್ಯಾಸರು. ಆದ್ದರಿಂದಲೇ ಅವರನ್ನು ಲೋಕಗುರುವೆಂದು ಕರೆದು ಶ್ರದ್ಧೆ ಹಾಗೂ ಭಕ್ತಿಯಿಂದ ಗುರು ಪೂರ್ಣಿಮೆಯಂದು ಪೂಜಿಸುತ್ತೇವೆ. “ಗುರು” ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು ವ್ಯತ್ಯಾಸವಾಗಿದ್ದರೂ ಅವರೆಲ್ಲರ ಒಳಗಿನ “ಗುರು ತತ್ವ” ಮಾತ್ರ ಒಂದೇ ಆಗಿರುತ್ತದೆ. ಅವೆರೆಲ್ಲರೂ ಹೊರ ಹೊಮ್ಮಿಸುವ, ಪಸರಿಸುವ ಲಹರಿಗಳು ತುಂಬ ಚೈತನ್ಯದಾಯಕವಾಗಿರುತ್ತದೆ.

ಗುರುವಿಗೆ ಯಾವಾಗಲೂ ಶಿಷ್ಯನ ಉನ್ನತಿಯ, ಬೆಳವಣಿಗೆಯ ಚಿಂತನೆಯೇ ಆಗಿರುತ್ತದೆ. ಗುರು ತನ್ನ ಶಿಷ್ಯನನ್ನು ತಾನೇ ಹುಡುಕಿ ಕೊಳ್ಳುತ್ತಾನೆ. ಶಿಷ್ಯ ಸಿಕ್ಕಿದ ಕ್ಷಣವೇ ಗುರು ಶಿಷ್ಯನ ಏಳಿಗೆಯ “ ಸಿದ್ಧ ಸಂಕಲ್ಪ” ಮಾಡಿಕೊಂಡು ಬಿಟ್ಟಿರುತ್ತಾನೆ. ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು ,ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು,ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಇವರೆಲ್ಲ ಗುರು – ಶಿಷ್ಯರ ಸಂಬಂಧಕ್ಕೆ ಅತಿ ಸೂಕ್ತವಾದ ನಿದರ್ಶನಗಳು.

ಗುರುವಿನ ಬಗೆಗೆ ವರ್ಣಿಸುತ್ತಾ ಹೊರಟರೆ ಅದು ಸಾಗರದಷ್ಟು ಆಳ, ಅಗಲ. ಆಗಸದಷ್ಟು ವಿಶಾಲ, ವಿಸ್ತಾರ. ಗುರು ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಅದ್ಬುತ ಶಕ್ತಿ ಎಂದು ಅರ್ಥೈಸಿ ತಿಳಿದುಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ….

ಇದನ್ನೂ ಓದಿ: Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Continue Reading
Advertisement
Paris Olympics 2024
ಪ್ರಮುಖ ಸುದ್ದಿ27 mins ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ37 mins ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ47 mins ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ1 hour ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ1 hour ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ2 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ2 hours ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ2 hours ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ3 hours ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ3 hours ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ10 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ11 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌