ಶಬ್ದಸ್ವಪ್ನ ಅಂಕಣ | ಭಾಷಾ ಬೋಧನೆಯ ಸೃಜನಶೀಲ ನೆಲೆಗಳು - Vistara News

ಅಂಕಣ

ಶಬ್ದಸ್ವಪ್ನ ಅಂಕಣ | ಭಾಷಾ ಬೋಧನೆಯ ಸೃಜನಶೀಲ ನೆಲೆಗಳು

ʼಉಪ್ಪುʼ ಎಂದಾಗ ನಮ್ಮ ಮನಸ್ಸಿನಲ್ಲಿ ಮೂಡುವ ಚಿತ್ರವೇ ಬೇರೆ, ʼಸಾಲ್ಟ್‌ʼ ಎಂದಾಗ ಮೂಡುವ ಚಿತ್ರಣವೇ ಬೇರೆ. ಭಾಷೆಯ ಕಲಿಕೆ ಎಂದರೆ ನೋಡಲು ಬಿಡುವುದು ಎನ್ನುತ್ತಾರೆ ಶ್ರೀಧರ ಬಳಗಾರ.

VISTARANEWS.COM


on

shabda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
balagar logo

ಭಾಷೆಯ ಕುರಿತಿರುವ ಅಪಾರ್ಥಗಳೇ ಅದನ್ನು ‘ಬೋಧಿಸುವ’ ಯತ್ನದಲ್ಲಿ ಅನುಸರಿಸಲಾದ ತಪ್ಪು ವಿಧಾನಗಳಿಗೆ ಬಹು ಮುಖ್ಯ ಕಾರಣವಾಗಿವೆ. ಭಾಷೆಯನ್ನು ಬೋಧಿಸಬಹುದಾದ ವಸ್ತು ಎಂಬ ಗ್ರಹಿಕೆ ಮೊದಲ ತಪ್ಪಾದರೆ ಅದೊಂದು ಮಾಧ್ಯಮ ಎಂಬ ನಂಬಿಕೆ ಎರಡನೆಯದು. ಹೇಯ್ಡೇಗರ್ ‘ಭಾಷೆ ಮಾನವನ ಗುಣವಲ್ಲ; ಮಾನವ ಭಾಷೆಯ ಗುಣ. ಮಾನವ ತನ್ನ ಸಾರ ಮಾತ್ರದಿಂದ ಭಾಷೆಗೆ ಯೋಗ್ಯವಾಗಿದ್ದಾನೆ. ಇರುವುದನ್ನು, ಅಂದರೆ ತನ್ನನ್ನು ಸಹ, ಇರುವಿಕೆಯಿಂದ ಪ್ರತ್ಯೇಕಿಸಿ ನೋಡುವ ಸಾಮರ್ಥ್ಯ ಹೊಂದಿದ್ದಾನೆ. ಇರುವುದನ್ನು ಹೇಳುವ-ತೋರಿಸುವ ವಿಶೇಷ ಸಾಮರ್ಥ್ಯ ಅವನಲ್ಲಿದೆ’ ಎಂದಿದ್ದಾನೆ. ಮನುಷ್ಯ ವ್ಯಕ್ತಿತ್ವದ ಸಾರ ಭಾಷೆ ಮತ್ತು ಅದರಿಂದ ತನ್ನ ಇರುವಿಕೆಯನ್ನು ಪ್ರತ್ಯೇಕಿಸಿ ನೋಡುವ ಸಾಮರ್ಥ್ಯ ಭಾಷೆ ಎಂಬ ಅವನ ಕಾಣ್ಕೆ ಭಾಷೆಯ ಅನನ್ಯ ಅಸ್ತಿತ್ವವನ್ನು ಎತ್ತಿ ತೋರಿಸುತ್ತದೆ.

ಆಲೋಚನೆ ಭಾಷೆಯ ಹೊರಗಿನ ವಿದ್ಯಮಾನ; ಭಾಷೆ ಆಲೋಚನೆಯ ನಂತರ ಬರುವಂಥದ್ದು; ಆಲೋಚನೆ ಮನಸಿನ ಕೆಲಸವೇ ಹೊರತು ಭಾಷೆಯ ಕೆಲಸವಲ್ಲ; ಭಾಷೆ ಆಲೋಚನೆಯ ಸಾಧನ…ಹೀಗೆ ಭಾಷೆ ಮತ್ತು ಆಲೋಚನೆಯನ್ನು ಪ್ರತ್ಯೇಕಿಸುವ ಕ್ರಮವನ್ನು ಅವನು ನಿರಾಕರಿಸಿದ. ಹಾಗಾದರೆ, ಆಲೋಚನೆ ಎಂದರೇನು? ಅದರ ಮೂಲಧಾತು ಯಾವುದು? ಆಲೋಚನೆ ಬಂದಿರುವುದು ‘ಆಲೋಚ್’ ಧಾತುವಿನಿಂದ. ‘ಲೋಚನ’ ಎಂದರೆ ಕಣ್ಣು. ಆಲೋಚನೆ ಎಂದರೆ ನೋಡುವುದು, ಕಾಣುವುದು ಎಂದರ್ಥ. ಏನನ್ನು ನೋಡುವುದು? ಹೇಯ್ಡೇಗರ್ ಪ್ರಕಾರ ‘ಆಲೋಚನೆ’ ನೋಡುವುದು ಇರುವಿಕೆಯ ಅಗಾಧ ಸಾಧ್ಯತೆಗಳನ್ನು. ಇರುವಿಕೆ ಮತ್ತು ಇರುವುದರ ಅಗಾಧತೆಯನ್ನು ತನ್ನ ಮೂಲರೂಪದಲ್ಲಿ ಅನಾವರಣಗೊಳಿಸುವುದೇ ಆಲೋಚನೆ.

ಭಾಷಾ ವಿಜ್ಞಾನಿ ವಿಟ್ಗಿನ್‌ಸ್ಟನ್ ಭಾಷೆಯನ್ನು ಮೀರಿದ ಆಲೋಚನೆ ಎಂಬುದಿಲ್ಲ ಎಂದು ಪ್ರತಿಪಾದಿಸುತ್ತಾನೆ. ಭಾಷೆ ಆಲೋಚನೆಯ ನಂತರ ಬರುವುದಾದರೆ ಅಭಿವ್ಯಕ್ತಿಗಿಂತ ಮುಂಚೆ ಆಲೋಚನೆ ಎಲ್ಲಿತ್ತು? ಅಭಿವ್ಯಕ್ತಿಗಿಂತ ಮುಂಚೆ ಆಲೋಚನೆ ಏನನ್ನು ಒಳಗೊಂಡಿತ್ತು? ಹಾಗೆ ಆಲೋಚನೆ ಮತ್ತು ಭಾಷೆ ಪ್ರತ್ಯೇಕವಿರಲು ಸಾಧ್ಯವೇ ಇಲ್ಲ; ಆಲೋಚನೆಯನ್ನು ಅಭಿವ್ಯಕ್ತಿಯಿಂದ ಪ್ರತ್ಯೇಕಿಸಲು ಸಾಧ್ಯವೇ ಇಲ್ಲ. ಭಾಷೆಗೂ ಆಲೋಚನೆಗೂ ವ್ಯತ್ಯಾಸವಿಲ್ಲ ಎಂಬ ವಾದವನ್ನು ಒಪ್ಪಿದ ನಂತರ ವಿಭಿನ್ನ ಭಾಷೆಗಳು ವಿಭಿನ್ನವಾಗಿ ಆಲೋಚಿಸುತ್ತವೆ ಎಂದಂತಾಯಿತು. ಒಂದೇ ಆಲೋಚನೆಯನ್ನು ಭಿನ್ನ ಭಾಷೆಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರತಿ ಭಾಷೆಯೂ ತನ್ನದೇ ಆದ ವಿಶಿಷ್ಟ ರೀತಿಯಲ್ಲಿ ಆಲೋಚಿಸುತ್ತದೆ. ಅನುವಾದವೇನಿದ್ದರೂ ಸೀಮಿತ ಅರ್ಥದಲ್ಲಿ ಮಾತ್ರ ಜರುಗುತ್ತದೆ. ಉದಾಹರಣೆಗೆ ಸಾಲ್ಟ್ ಅನ್ನು ಉಪ್ಪು ಎಂದು ಭಾಷಾಂತರಿಸಿದರೆ ಅದರ ಅರ್ಥದ ಸಾರ-ಸಂದರ್ಭ ಭಿನ್ನವಾಗುತ್ತದೆ. ಉಪ್ಪಿನ ಅನುಭವದ ಸಹಯೋಗವೇ ಭಿನ್ನ. ಉಪ್ಪು ಎಂದರೆ ಶಾಲೆಯಲ್ಲಿ ಕನ್ನಡ ಪಾಠ ಮಾಡಿದ್ದ ಮಾಸ್ತರರ ‘ತಾಯಿಗಿಂತ ಬಂಧುವಿಲ್ಲ ಉಪ್ಪಿಗಿಂತ ರುಚಿಯಿಲ್ಲ’ ಎಂಬ ಗಾದೆ ಮಾತು ಕೇಳುತ್ತದೆ; ಮಣ್ಣಿನ ನೆಲದಲ್ಲಿ ಹಾಸಿದ ಬಾಳೆ ಎಲೆಯ ಮೇಲಿನ ಬಾಯಲ್ಲಿ ನೀರೂರಿಸುವ ಕೆಂಪು ಹರಳು ನೆನಪಾಗುತ್ತದೆ; ಅಮ್ಮನ ಅಕ್ಕರೆಯ ಉಪಚಾರ ರುಚಿಯಲ್ಲಿ ಬೆರೆಯುತ್ತದೆ; ಸಾಣೆಕಟ್ಟೆಯ ಉರಿ ಬಿಸಿಲಲ್ಲಿ ಬೆವರುತ್ತ ಉಪ್ಪಿನ ರಾಶಿ ಒಟ್ಟುವ ಗಂಜಿಯ ಬಡವರು ಪ್ರತ್ಯಕ್ಷರಾಗುತ್ತಾರೆ; ಉಪ್ಪಿನ ಸತ್ಯಾಗ್ರಹದ ಚಿತ್ರ ಮೂಡುತ್ತದೆ…ಸಾಲ್ಟ್ ಎಂದಾಕ್ಷಣ ಪ್ಲಾಸ್ಟಿಸ್ಟಿಕ್ ಚೀಲ, ಫ್ಯಾಕ್ಟರಿ, ಉಪ್ಪಿನ ಗುಣಗಾನ ಮಾಡುವ ಇಂಗ್ಲಿಶ್ ವಾಕ್ಯಗಳು, ಹೊಟೇಲ್ ಇತ್ಯಾದಿ ನೆನಪಾಗುತ್ತವೆ.

ಭಾಷಾ ವಿಜ್ಞಾನಿ ಬೋರೋಡಿಟಸ್ಕಿ ತನ್ನದೊಂದು ಪ್ರಯೋಗದಲ್ಲಿ ಇದನ್ನು ಇನ್ನಷ್ಟು ಖಚಿತವಾಗಿ ತೋರಿಸುತ್ತಾರೆ. ಸ್ಪಾನಿಶ್ ಮತ್ತು ಜರ್ಮನ್ ಭಾಷೆಯನ್ನು ಮಾತಾಡುವ ಎರಡು ಗುಂಪುಗಳಿಗೆ ಒಟ್ಟಿಗೆ ಕೆಲವೊಂದು ವಸ್ತುಗಳನ್ನು ತೊರಿಸಿ, ಅವುಗಳ ವರ್ಣನೆ ಮಾಡುವಂತೆ ಹೇಳುತ್ತಾರೆ. ಕೀಲಿಕೈಗೆ ಸ್ಪಾನಿಶ್ ಭಾಷೆ ಸ್ತ್ರೀಲಿಂಗ ಕೊಟ್ಟರೆ ಜರ್ಮನ್ ಭಾಷೆ ಪುಲ್ಲಿಂಗ ಕೊಡುತ್ತದೆ. ಪ್ರಯೋಗದಲ್ಲಿ ಸ್ಪಾನಿಶ್ ಗುಂಪು ಕೀಲಿಕೈಯನ್ನು ಸಣ್ಣದು, ಫಳಫಳಿಸುತ್ತಿರುವುದು, ಸುಂದರ ಎಂದೆಲ್ಲ ವರ್ಣಿಸಿದರೆ, ಜರ್ಮನ್ ಗುಂಪು ಗಟ್ಟಿ, ಭಾರ ಎಂದು ವರ್ಣಿಸಿತು. ಸ್ತ್ರೀ ಮತ್ತು ಪುರುಷರ ಸಾಮಾನ್ಯ ಕಲ್ಪನೆಗಳು ಈ ವಸ್ತುವಿಗೆ ನೀಡಿದ ಲಿಂಗದ ಕಾರಣ ವಸ್ತುವಿನ ವರ್ಣನೆ ಮೇಲೆ ಪರಿಣಾಮ ಬೀರುತ್ತದೆ.

shabda

ಬೆಂಜಮಿನ್ ಲೀ ವಾಫ್, ಬಳಸುವವನ ಕೈಯಲ್ಲಿ ಭಾಷೆ ಪಡೆಯುವ ಜೀವ ಮತ್ತು ಭಾಷೆಯ ಮೂಲಕ ಜಗತ್ತು ಪಡೆದುಕೊಳ್ಳುವ ಚಿತ್ತಾರಗಳ ಬಗ್ಗೆ ವಿವರಿಸುತ್ತಾರೆ. ಜಗತ್ತನ್ನು ಸೀಳಿ ಅಥವ ಜೋಡಿಸಿ, ಕತ್ತರಿಸಿ ಅಥವ ಹೆಣೆದು, ಗುಂಪಾಗಿಸುವ ಅಥವ ಬಿಡಿಯಾಗಿಸುವ ಕೆಲಸವನ್ನು ಭಾಷೆ ಮಾಡುತ್ತದೆ ಎಂಬುದರ ಬಗ್ಗೆ ಅನುಮಾನ ಉಳಿದಿಲ್ಲ. ವಾಫ್ ಹೇಳುವಂತೆ ʼʼನಮ್ಮ ಸ್ವಂತ ಭಾಷೆ ಹಾಕಿ ಕೊಡುವ ಗೆರೆಗಳ ಆಧಾರದ ಮೇಲೆ ನಾವು ಲೋಕವನ್ನು ವಿಭಜಿಸುತ್ತೇವೆ. ಜಗತ್ತು ಜಟಿಲವಾದ ಚರ್ವಿತಚರ್ವಣವಾದ ವರ್ಣಮಯ ಗುರುತುಗಳ ರಾಶಿಯನ್ನೇ ನಮಗೆ ನೀಡುತ್ತದೆ. ಇದಕ್ಕೆ ನಿರ್ದಿಷ್ಟ ರೂಪವನ್ನು ಒದಗಿಸುವ ಕೆಲಸವನ್ನು ನಮ್ಮ ಮನಸಿನ ಭಾಷಾ ವ್ಯವಸ್ಥೆಗಳು ಮಾಡುತ್ತವೆ. ಜಗತ್ತನ್ನು ಕತ್ತರಿಸಿ, ಪರಿಕಲ್ಪನೆಗಳ ಮೂಲಕ ಸಂಘಟಿಸಿ, ಅದಕ್ಕೆ ವಿಧ ವಿಧ ಮಹತ್ವವನ್ನು ಗೊತ್ತು ಮಾಡುವುದು ಭಾಷೆ ಎಂಬ ಸಾಮುದಾಯಿಕ ಒಪ್ಪಂದದ ಕಾರಣದಿಂದಾಗಿ. ಈ ಒಪ್ಪಂದ ಒದಗಿಸುವ ವಿಭಾಗೀಕರಣ ಅಥವ ಸಂಘಟನೆ ಇಲ್ಲದೆ ಹೋಗಿದ್ದರೆ ನಾವು ಮಾತನಾಡಲೂ ಸಾಧ್ಯವಾಗುತ್ತಿರಲಿಲ್ಲ.ʼ’
ಈ ವರ್ಣಚಿತ್ರದ ನಿರೂಪಣೆಯಲ್ಲಿ ವರ್ಣ ಮತ್ತು ಗೆರೆಗಳ ಉಲ್ಲೇಖವಿದೆ. ವರ್ಣ ಮತ್ತು ಗೆರೆ ಚಿತ್ರಕಲೆಯ ಭಾಷೆಯ ಅಂಗಗಳು. ಲೋಕಾನುಭವ ವರ್ಣವಾದರೆ ಮನಸಿನೊಳಗಿರುವುದು ಗೆರೆಗಳು. ಬಣ್ಣಕ್ಕೆ ರೂಪ ಕೊಟ್ಟು ಲೋಕಾಕಾರವನ್ನು ದೀಪ್ತಿಗೊಳಿಸುವುದೇ ಭಾಷೆ ಅಂದ ಹಾಗಾಯಿತಲ್ಲವೆ? ಚಿತ್ತಾರದಲ್ಲಿ ಬಣ್ಣ ಮತ್ತು ಗೆರೆಗಳು ಹಾಸುಹೊಕ್ಕಾಗಿರುವಂತೆ ಭಾಷೆ ಮತ್ತು ಆಲೋಚನೆ ಸಂಯೋಗ ಹೊಂದಿರುತ್ತವೆ. ಆದ್ದರಿಂದಲೇ ಒಂದು ಭಾಷೆಯ ಲಿಪಿ ಸಮೂಹವನ್ನು ವರ್ಣಮಾಲೆ ಎಂದು ಕರೆಯುತ್ತಿರಬಹುದೆ?

ಇದನ್ನೂ ಓದಿ: ಶಬ್ದಸ್ವಪ್ನ ಅಂಕಣ: ಸ್ಪರ್ಶದಲ್ಲಿ ಸರ್ವಸ್ವ

ಈ ಮೇಲಿನ ವಿವರಣೆ ತಾತ್ವಿಕ ಪ್ರತಿಪಾದನೆಯಲ್ಲ; ಬದಲಿಗೆ ಪ್ರತಿಯೊಬ್ಬನ ಬಾಲ್ಯ ಕಾಲದ ‘ಮಾತನಾಡು’ವ ವಿಸ್ಮಯ ಅನುಭವ. ಮಾತೊಂದು ಆಟ ಎಂಬುದು ಕವಿಸಮಯ ಮಾತ್ರವಾಗಬೇಕಿಲ್ಲ. ನೋಡುವ ವಸ್ತು, ಮಾಡುವ ಕೆಲಸವೇ ತಾನಾಗಿ ಬಿಡುವ ಅದ್ವೈತವೇ ಆಟ. ನಮ್ಮೊಳಗೆ ಭವ ಸಂಭವಿಸುವುದು ಭಾಷೆಯಿಂದ. ಭಾಷೆ ತೆರೆಯುತ್ತ ಇರುವ ಅನುಭವ ಅರಿವಿಗೆ ಬರುವುದು. ಇಲ್ಲಿ ಭಾಷೆ ಮಾಧ್ಯಮವೇ ಅಲ್ಲವೇ ಎಂಬ ಪ್ರಶ್ನೆಯೇ ಅನಗತ್ಯ. ಬದುಕುವ ಮತ್ತು ಭಾಷೆಯನ್ನು ಅನುಭವಿಸುವ ಕ್ರಿಯೆಯನ್ನು ವಿಂಗಡಿಸುವ ಯತ್ನ ಮಾಡದಿರುವುದರಿಂದ ಭಾಷೆಯನ್ನು ಕಲಿಯಲು ವ್ಯಾಕರಣ ಜ್ಞಾನ ಬೇಕು, ಕೌಶಲ್ಯವನ್ನು ರೂಢಿಸಿಕೊಳ್ಳಬೇಕು ಎಂಬಿತ್ಯಾದಿ ತಾಂತ್ರಿಕ ಸರ್ಕಸ್ಸಿನ ಉಸಾಬರಿಯನ್ನು ಮೈ ಮೇಲೆ ಎಳೆದುಕೊಳ್ಳುವುದಿಲ್ಲ. ಕೌಶಲ್ಯ ಸಾಧಿಸಿ, ಭಾಷೆ ಕಲಿತು, ಜ್ಞಾನ ಸಂಪಾದನೆ ಮಾಡುವುದು ಎಂಬುದನ್ನು ಬೋಧನೆ ಗುರುತಿಸಿದ ತಪ್ಪು ಹಾದಿಯೇ ವಿನಃ ಸುಪ್ತ ಸ್ತರದಲ್ಲಿ ಜರಗುವ ಭಾಷಾ ಕಲಿಕೆಗೆ ಸಂಬಂಧಿಸಿದ್ದಲ್ಲ. ಕೌಶಲ್ಯವನ್ನು ಅಭ್ಯಾಸದಿಂದ ಯಾರೂ ಉಪಯೋಗಿಸಬಹುದಾದ ಸಿದ್ಧ ಸಲಕರಣೆ ಎಂಬರ್ಥದಲ್ಲಿ ಸ್ವೀಕರಿಸಿರುವ ಕಾರಣ ಬೋಧನೆ ಮಾತೃಭಾಷಾ ಮಾಂತ್ರಿಕತೆಯನ್ನು ಮರೆತು ಪ್ರಮಾದ ಎಸಗುವಂತಾಯಿತು. ಭಾಷೆ ಜ್ಞಾನ ಭಂಡಾರವನ್ನು ತುಂಬಲಿರುವ ಮಾಯಾ ಪಾತ್ರೆ ಎಂಬ ಅಪಗ್ರಹಿಕೆಯೂ ಬೋಧನೆಯ ಹೆಸರಿನಲ್ಲಿ ನಡೆಯುತ್ತಿರುವ ತಪ್ಪು ಹೆಜ್ಜೆಯೇ.

ಭಾಷೆಯನ್ನು ಬೋಧಿಸುವ ವಸ್ತು ಎಂಬ ಗ್ರಹಿಕೆಯಿಂದ ಕಲಿಕೆಯ ಸಹಜ ಪ್ರವೃತ್ತಿಯನ್ನು ಪ್ರತಿರೋಧಿಸುವ ಯತ್ನಕ್ಕೆ ಶಿಕ್ಷಕ ಅರಿವಿಲ್ಲದೆ ಮುಂದಾಗುತ್ತಾನೆ. ಬೋಧಿಸುವ ಅತಿಯಾದ ಉತ್ಸಾಹದಲ್ಲಿ ಭಾಷೆ ಎಂದರೆ ಸಂವಹನ ಮಾಧ್ಯಮ ಮತ್ತು ಜ್ಞಾನಾರ್ಜನೆಯ ಸಾಧನ ಎಂದೇ ಭಾವಿಸಲಾಗುತ್ತದೆ. ಇವೆರಡನ್ನು ಕೆಲವು ಮನಶಾಸ್ತ್ರೀಯ ಮತ್ತು ಸಾಮಾಜಿಕ ತಂತ್ರೋಪಾಯಗಳನ್ನು ಪರಿಚಯಿಸಿಕೊಂಡು ಪ್ರಯೋಗಿಸಿದರೆ ಸಂಪಾದಿಸಬಹುದು ಎಂದು ತಾನೇ ಹೆಚ್ಚು ಸಕ್ರಿಯನಾಗುತ್ತಾನೆ. ವಿದ್ಯಾರ್ಥಿಗಳನ್ನು ನಿಷ್ಕ್ರಿಯ ಗ್ರಾಹಕರ ಸ್ಥಾನದಲ್ಲಿರಿಸುತ್ತಾನೆ. ಭಾಗವಹಿಸಲು ಅವಕಾಶ ನೀಡುವುದರ ಬದಲು ಅವರನ್ನು ತಟಸ್ಥ ವೀಕ್ಷಕರಾಗಿರುವಂತೆ ನಿಯಂತ್ರಿಸುತ್ತಾನೆ. ಬೋಧಿಸುವವನ ನಂಬಿಕೆ ಏನೆಂದರೆ ಅತ್ಯಂತ ಶಿಸ್ತಿನಿಂದ, ವ್ಯವಸ್ಥಿತವಾಗಿ ಭಾಷಾ ಕಲಿಕೆಗೆ ಬೇಕಾದ ಅಗತ್ಯ ತಂತ್ರೋಪಾಯಗಳನ್ನು ಅವನು ರವಾನಿಸುತ್ತಿದ್ದಾನೆ; ತೀರ ಗಂಭೀರ ಮತ್ತು ಪ್ರಾಮಾಣಿಕ ಕಳಕಳಿಯಿಂದ ಶಿಕ್ಷಕ ವಿದ್ಯಾರ್ಥಿಯ ಪರವಾಗಿ ಕಲಿಕಾ ಚಟುವಟಿಕೆಗಳನ್ನು ನಿರ್ವಹಿಸುತ್ತಿರುತ್ತಾನೆ; ಈ ಏಕಪಾತ್ರ ಅಭಿನಯ ಸಾರಭೂತ ಆಲೋಚನೆಯನ್ನು ಉದ್ದೀಪಿಸುವ ಉದ್ದೇಶ ಹೊಂದಿರದೆ ಕೇವಲ ಮೇಲ್ಪದರಿನ, ಹೊರ ಸುತ್ತಿನ ಯಾಂತ್ರಿಕ ಕ್ರಿಯೆಯಾಗಿ ಪರಿಣಮಿಸುತ್ತದೆ. ಅಚ್ಚರಿ ಎಂದರೆ ಬೋಧಿಸುವವನ ನಿಷ್ಫಲ ಪ್ರಯತ್ನೆಗಳೆಲ್ಲ ನಿರರ್ಗಳ ಭಾಷಾ ಕಲಿಕೆಗೆ ಅಡಚಣೆಯಾಗಿ, ಕಲಿಕೆ ಕಷ್ಟದಾಯಕವಾಗಿಸುವುದು ಗಮನಕ್ಕೆ ಬಾರದೆ ಇರುವುದು! ಅರಿವಿಲ್ಲದೆ ಸ್ವವಿರೋಧಿ ಪ್ರಮಾದದಲ್ಲಿ ಭಾಗಿಯಾಗುವ ಶಿಕ್ಷಕ ಅದೆಷ್ಟು ಮೈಮರೆತು ಬೋಧನೆಯಲ್ಲಿ ತಲ್ಲೀನನಾಗಿರುತ್ತಾನೆಂದರೆ ವಿದ್ಯಾರ್ಥಿಯ ಕಲಿಕಾ ಸಾಮರ್ಥ್ಯವನ್ನೇ ಅವನು ನಂಬಲಾರ. ಈ ಅಪನಂಬಿಕೆ ವಿದ್ಯಾರ್ಥಿಯ ಸ್ವಂತ, ಸ್ವತಂತ್ರ, ಸ್ವಾಯತ್ತ ಕಲಿಕಾ ಕಂಪನ ಚೈತನ್ಯವನ್ನು ಹಾಳುಗರೆಯುತ್ತದೆ. ತಾನು ತಿಳಿಸುವ, ವಿದ್ಯಾರ್ಥಿ ತಿಳಿದುಕೊಳ್ಳುವ ಪ್ರಕ್ರಿಯೆಯೇ ಬೋಧನೆ ಎಂದು ಭ್ರಮೆಯಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿಯರ ಪಾತ್ರ ವ್ಯಾಖ್ಯಾನ ತಪ್ಪಾಗಿ ಪರಿಣಮಿಸುತ್ತದೆ. ತನಗೆ ಬೇಕಾದ ರೀತಿಯಲ್ಲಿ ಕಲಿಕಾರ್ಥಿಯನ್ನು ರೂಪಿಸುವ ಹಠದಲ್ಲಿ ಕಲಿಕಾರ್ಥಿಗೂ ಸತ್ವವಿದೆ, ನೆನಪಿನ ಕಣಜವಿದೆ, ಸೂಕ್ಷ್ಮ ಪಂಚೇಂದ್ರಿಯಗಳ ಸಂವೇದನಾಶೀಲತೆಯಿದೆ, ಅಗಾಧ ಕಲ್ಪನಾ ಪ್ರತಿಭೆಯಿದೆ ಎಂಬ ವಾಸ್ತವ ನಿರಾಕರಿಸಲ್ಪಡುತ್ತದೆ. ಪರಿಣಾಮದಲ್ಲಿ ವಿದ್ಯಾರ್ಥಿಯನ್ನು ಟೀಚರ್, ಟೆಕ್ಸ್ಟ್‌ ಮತ್ತು ಟೆಸ್ಟ್ ಈ ಮೂರು ವಿಧಿಗಳನ್ನು ಅತಿಯಾಗಿ ಅವಲಂಬಿಸುವ ಪರಾವಲಂಬಿ ಜೀವಿಗಳನ್ನಾಗಿ ಪರಿವರ್ತಿಸಲಾಗಿದೆ.

ಶಿಕ್ಷಕನಿಂದ ಭಾಷೆಯನ್ನು ಕಲಿಯಲು ಸಾಧ್ಯ ಎಂಬುದೇ ಅಸತ್ಯ. ಕಲಿಕಾ ಪ್ರವೃತ್ತಿಗೆ ಪೂರಕವಾಗಿ ಪ್ರೇರಕನಾಗಿ ಅವನು ಹಿನ್ನೆಲೆಯಲ್ಲಿರಬಹುದಷ್ಟೆ. ಮಕ್ಕಳಲ್ಲಿ ಭಾಷೆಯ ಬೆಳಕನ್ನು ತಡೆಯುವ ತಡೆಗೋಡೆಯಾಗಿ ನಿಲ್ಲುವ ಸಾಧ್ಯತೆಯೇ ಹೆಚ್ಚು. ನಿಜವಾದ ಶಿಕ್ಷಕ ಬೋಧಿಸುವುದೇ ಇಲ್ಲ ಎಂಬ ಮಹರ್ಷಿ ಅರವಿಂದರ ಮಾತನ್ನೊ ಶಾಲೆಯಲ್ಲಿ ಶಿಕ್ಷಕರು ಬೋಧಿಸಿದ್ದನ್ನೆಲ್ಲ ಮರೆತ ನಂತರ ಮಕ್ಕಳ ಮನಸಿನಲ್ಲಿ ಉಳಿದಿರುವುದೇ ನಿಜವಾದ ಶಿಕ್ಷಣ ಎಂದ ಐನ್‌ಸ್ಟೈನ್ ಮತ್ತು ಮಾರ್ಕ್‌ ಟ್ವೇನ್ ಅವರ ಮಾತಿನಾರ್ಥವನ್ನು ತಿಳಿದುಕೊಂಡು ಶಿಕ್ಷಕರು ತಮ್ಮ ಹಸ್ತಕ್ಷೇಪವನ್ನು ನಿಲ್ಲಿಸಿ, ವಿದ್ಯಾರ್ಥಿಗಳನ್ನು ಅನಿಷ್ಟವಾಗಿಸಿದ ಮೂರು ‘ಟಿ’ಗಳಿಂದ ಬಿಡುಗಡೆಗೊಳಿಸುವುದು ಜರೂರಾಗಿದೆ. ಪಠ್ಯ ಪುಸ್ತಕಗಳು ಮಾಹಿತಿಗಳ ಸಂಗ್ರಹವೇ ವಿನಃ ಅವು ತಮ್ಮಷ್ಟಕ್ಕೆ ತಾವು ಜ್ಞಾನಭಂಡಾರಗಳೇನಲ್ಲ. ವಿದ್ಯಾರ್ಥಿಗಳ ಬೌದ್ಧಿಕ ಉದ್ದೀಪನೆಗೆ ಅವುಗಳನ್ನು ಸೂಚಕಗಳನ್ನಾಗಿ ಬಳಸಬಹುದೇ ಹೊರತು ಮೂಲ ಸಾರವನ್ನಾಗಲ್ಲ. ಅನೇಕ ಸಲ ಪ್ರಕೃತಿ ಅಥವ ಪರಿಸರದ ವಿಸ್ಮಯಗಳನ್ನು ತಮ್ಮ ನಿರ್ಜೀವ, ಯಾಂತ್ರಿಕ ಜಡತ್ವದಿಂದ ಮಂಕಾಗಿಸುವ ಹೊರೆಯಾಗಿಯೇ ಅವು ನಿಲ್ಲುತ್ತವೆ. ಪಠ್ಯ ವಸ್ತು ಜಡವಾಗಿದ್ದರೂ ಅದನ್ನು ಮರುಜೋಡಣೆಯ ಮೂಲಕ ಜೀವಂತಗೊಳಿಸುವ ಒಳನೋಟದ ಅಗತ್ಯವನ್ನು ಶಿಕ್ಷಕ ಮನಗಾಣಬೇಕಿದೆ. ತನ್ನ ಪ್ರತಿಭೆಯನ್ನು ಜಾಗ್ರತಗೊಳಿಸಿಕೊಂಡು ಪಠ್ಯವಸ್ತುವನ್ನು ಹೊಸ ವಿನ್ಯಾಸದಲ್ಲಿ ಪುನರ‍್ರಚಿಸುವ, ಶೋಧಿಸುವ ಸಂದರ್ಭಸೃಷ್ಟಿ ಸವಾಲಿನದು. ಪರೀಕ್ಷೆಗಳೆಂದರೆ ಬೋಧಿಸಿದ ವಿಷಯಗಳನ್ನು ವಿದ್ಯಾರ್ಥಿಗಳು ಎಷ್ಟರ ಮಟ್ಟಿಗೆ ತಿಳಿದುಕೊಂಡಿದ್ದಾರೆಂದು ಪತ್ತೆ ಹಚ್ಚಲು ಬಳಸುವ ಮಾನದಂಡವಲ್ಲ; ಪ್ರಶ್ನೆಗಳ ರೂಪದಲ್ಲಿ ಮಂಥನಕ್ಕೆ ಒಳಪಡುವ ಪರೀಕ್ಷೆಗಳು ಸಿಲೆಬಸ್‌ನ್ನು ಮುಗಿಸಿದ ನಂತರ ಕೈಗೊಳ್ಳುವ ರಿಚುವಲ್ ಮಾತ್ರವಲ್ಲ. ಪ್ರತಿಕ್ಷಣದ ಅರಿಯುವಿಕೆಯ ಮೆಟ್ಟಿಲುಗಳು ಅವು.

ಶಾಲೆಗಳಲ್ಲಿ ಸಿಲೆಬಸ್‌ನ್ನು ವಿಷಯ ಮತ್ತು ಭಾಷೆಗಳು ಎಂದು ವರ್ಗೀಕರಿಸುವುದೇ ಅತ್ಯಂತ ಅಸಹಜ ನಡೆಯಾಗಿದೆ. ವಿಷಯ ಬೋಧಿಸುವ ಶಿಕ್ಷಕರು ಭಾಷೆಯ ಬಗ್ಗೆ ಉದಾಸೀನತೆಯಿಂದಿರುವುದೂ ಭಾಷಾ ಶಿಕ್ಷಕರು ವಿಷಯ ಜ್ಞಾನ ಸಂಪಾದನೆ ತಮ್ಮ ಕ್ಷೇತ್ರವಲ್ಲವೆಂದೂ ತಿಳಿಯುವುದೇ ಅವೈಜ್ಞಾನಿಕವಾದದು. ವಿಷಯವೆಂದರೆ ಸಮಾಜ ವಿಜ್ಞಾನ, ಭೌತಶಾಸ್ತ್ರ, ಗಣಿತ ಇತ್ಯಾದಿ; ಭಾಷೆಗಳೆಂದರೆ ಕನ್ನಡ, ಇಂಗ್ಲಿಶ್, ಹಿಂದಿ ಇತ್ಯಾದಿ. ಭಾಷೆ ಮತ್ತು ವಿಷಯಯಗಳು ಹೀಗೆ ವಿಭಜನೆ ಮಾಡಿದಷ್ಟು ಸರಳವಾದವುಗಳಲ್ಲ. ಆದರೆ, ಭೌತಶಾಸ್ತ್ರ ಬೋಧಿಸುವ ಶಿಕ್ಷಕನಿಗೆ ಭೌತಶಾಸ್ತ್ರಕ್ಕೇ ವಿಶಿಷ್ಟವಾದ ಭಾಷೆ ಗೊತ್ತಿಲ್ಲದಿದ್ದರೆ ಅವನು ಅದನ್ನು ಅರ್ಥೈಯಿಸಲಾರ. ಅಂತಯೇ ಕನ್ನಡ ಬೋಧಿಸುವ ಶಿಕ್ಷಕ ವಿವಿಧ ವಿಷಯಗಳ ಸಂಚಯವಾದ ಪಠ್ಯವನ್ನು ಕೇವಲ ವ್ಯಾವಹಾರಿಕ ಭಾಷೆಯಿಂದ ಅರ್ಥೈಯಿಸಲಾರ. ವಿಷಯ ಅಂತರ್ಗತವಾಗಿರದೆ ಭಾಷೆಯಾಗಲಿ ಮತ್ತು ಭಾಷಾಭಿವ್ಯಕ್ತಿಯ ಹೊರಗೇ ಇರುವ ವಿಷಯವಾಗಲಿ ಇರಲು ಸಾಧ್ಯವಿಲ್ಲ. ಎಲ್ಲ ವಿಷಯ ಶಿಕ್ಷಕರು ಭಾಷಾ ಶಿಕ್ಷಕರೇ ಮತ್ತು ಎಲ್ಲ ಭಾಷಾ ಶಿಕ್ಷಕರು ವಿಷಯ ಶಿಕ್ಷಕರೇ.

ಇದನ್ನೂ ಓದಿ: ಸಾಲಭಂಜಿಕೆ ಅಂಕಣ: ಚೋಮನ ದುಡಿಯೂ ನಮ್ಮ ನುಡಿಯೂ

ಭಾಷೆಯ ಆಯ್ಕೆ ಕೇವಲ ಮಾಧ್ಯಮದ ಪ್ರಶ್ನೆಯಲ್ಲ ಎಂಬ ವಾಸ್ತವಕ್ಕೆ ಕರ್ನಾಟಕದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ನಡೆದ ವಿದ್ಯಮಾನಗಳೇ ಸಾಕ್ಷಿ. ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದು ಕಡ್ಡಾಯ ಎಂಬ ಸರ್ಕಾರಿ ಕಾನೂನಿನ ಸುತ್ತೋಲೆಯನ್ನು ಪ್ರಶ್ನಿಸಿ ಕೆಲ ಖಾಸಗಿ ವಿದ್ಯಾ ಸಂಸ್ಥೆಗಳು ಕೋರ್ಟ್‌ ಮೆಟ್ಟಿಲೇರಿದವು. ಅವರ ವಾದವನ್ನು ಗಮನಿಸಿದ ನ್ಯಾಯಾಲಯ ಭಾಷಾ ಆಯ್ಕೆಯ ಹಕ್ಕು ವಿದ್ಯಾರ್ಥಿ ಮತ್ತು ಅವರ ಪಾಲಕರದ್ದೇ ವಿನಃ ಸರ್ಕಾರ ಕಡ್ಡಾಯಗೊಳಿಸುವುದು ಸಂವಿಧಾನ ಬಾಹಿರ ಎಂದು ತೀರ್ಪು ನೀಡಿತು. ಆಧುನಿಕ ಪ್ರಪಂಚದಲ್ಲಿ ಉದ್ಯೋಗ ಅವಕಾಶಕ್ಕೆ ಇಂಗ್ಲಿಶ್ ಕಲಿಕೆ ಅಗತ್ಯವೆಂದೂ ಇದರಿಂದ ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ಇಷ್ಟು ದಿನಗಳವರೆಗೆ ಅವುಗಳಿಂದ ವಂಚಿತರಾದವರಿಗೆ ಒದಗಿಸಬಹುದೆಂದೂ ಖಾಸಗಿ ವಿದ್ಯಾಸಂಸ್ಥೆಗಳನ್ನು ನಡೆಸುವವರು ಪ್ರತಿಪಾದಿಸಿದರು. ಭಾಷೆಗೂ ಆರ್ಥಿಕ ಸ್ವಾವಲಂಬನೆಗೂ ಇರುವ ಆಂತರಿಕ ಸಂಬಂಧ ಭಾಷೆಯನ್ನು ಕೇವಲ ಮಾಧ್ಯಮದ ನೆಲೆಯಲ್ಲಿ ನೋಡುವುದನ್ನು ಈ ವಾದ ನಿರಾಕರಿಸುತ್ತದೆಯಲ್ಲವೆ?

ಸಾಮಾನ್ಯವಾಗಿ ಶಾಲೆಗೆ ಬರುವಷ್ಟರಲ್ಲಿ ಮಕ್ಕಳು ಒಂದು ಅಥವ ಎರಡು ಭಾಷೆಗಳನ್ನು ಬಳಸಬಲ್ಲವರಾಗಿರುತ್ತಾರೆ. ಉದಾಹರಣೆಗೆ, ಕನ್ನಡವು ಮಗುವೊಂದರ ಮಾತೃಭಾಷೆಯಾಗಿದ್ದ ಪಕ್ಷದಲ್ಲಿ, ಅದಾಗಲೇ ಆ ಮಗು ವ್ಯಾವಹಾರಿಕ ಸಂವಹನಕ್ಕೆ ಅಗತ್ಯವಿರುವಷ್ಟು ಕನ್ನಡವನ್ನು ಉಪಯೋಗಿಸುವ ಸಾಮರ್ಥ್ಯ ಹೊಂದಿರುವಾಗ ಶಾಲೆಯಲ್ಲಿ ಅದೇ ಭಾಷೆಯನ್ನು ಕಲಿಯುವ ಸನ್ನಿವೇಶವನ್ನು ಯಾಕೆ ಸೃಷ್ಟಿಸಬೇಕು? ಇಲ್ಲಿ ಭಾಷೆಯನ್ನು ಬಳಸುವುದೆಂದರೆ ಆಲೋಚಿಸುವುದು ಎಂದರ್ಥವಲ್ಲವೆ? ಭಾಷೆಯ ಮೂಲಕ ಆಲೋಚಿಸುವುದಲ್ಲ; ಭಾಷೆಯನ್ನು ದೀಪ್ತಿಗೊಳಿಸುವುದೆಂದರೆ ಆಲೋಚಿಸುವ ಕ್ರಮವೆಂದೇ ಅರ್ಥ. ಮೊದಲು ಭಾಷೆಯನ್ನು ಕಲಿಯೋಣ; ಅನಂತರ ವಿಷಯಜ್ಞಾನ ಪಡೆಯೋಣ ಎಂಬ ನಂಬಿಕೆಯನ್ನು ಆಧರಿಸಿದ ಸಾಂಪ್ರದಾಯಿಕ ಬೋಧನೆ ಅನಗತ್ಯ ಬಿಕ್ಕಟ್ಟನ್ನು ಸ್ವಯಂ ಅಪರಾಧದಿಂದ ಸೃಷ್ಟಿಸಿಕೊಂಡಿದೆ. ಮೊದಲಿಗೆ ಯೋಚಿಸುತ್ತೇನೆ; ಆಮೇಲೆ ಯೋಚನೆಗೆ ಯೋಗ್ಯವಾದ ನುಡಿರೂಪಗಳನ್ನು ಅಭಿವ್ಯಕ್ತಿಯ ಪರಿಕರಗಳನ್ನಾಗಿ ತೊಡಿಸುತ್ತೇನೆ ಎಂಬುದು ಸುಳ್ಳು. ವ್ಯಾಕರಣ ತಿಳಿಸುವುದರಿಂದ ಭಾಷೆಯನ್ನು ಕಲಿಸಬಹುದು ಎಂಬುದು ಇನ್ನೊಂದು ಪ್ರಮಾದ. ವಿಷಯವನ್ನು ವೈವಿಧ್ಯಪೂರ್ಣವಾಗಿ ಯೋಚಿಸುವ ರೀತಿಯಲ್ಲೇ ಭಾಷೆಯ ಹಲವು ಆಯಾಮಗಳು ಗೋಚರಿಸತೊಡಗುತ್ತವೆ. ಭಾಷೆ ಎಂದರೆ ಆಲೋಚಿಸುವುದು; ಆಲೋಚಿಸುವುದೆಂದರೆ ಮೂರ್ತವಾಗಿ ನೋಡುವುದು ಎಂದು ಹೇಯ್ಡೇಗೆರ್‌ ಹೇಳಿಲ್ಲವೆ? ಏನನ್ನು ನೋಡುವುದು? ನಮ್ಮ ಇರುವಿಕೆಯನ್ನು ನೋಡುವುದು; ನೋಡಿದ್ದನ್ನು ಹೇಳುವುದು. ಸೂಕ್ಷ್ಮ ನೋಡುವಿಕೆಯೇ ಭಾಷೆ. ಬೋಧನೆ ಎಂದರೆ ನೋಡಲು ಮಗುವನ್ನು ಬಿಡುವುದು; ಎಲ್ಲವನ್ನು ಶಿಕ್ಷಕನೇ ತೋರಿಸುವುದಲ್ಲ.

ಇದನ್ನೂ ಓದಿ: ಧೀಮಹಿ ಅಂಕಣ: ಈ ನೆಲದ ಮೊದಲ ವೈದಿಕ ರಾಷ್ಟ್ರಗೀತೆ ಇದು! ಅಂದಿನ ಆಡಳಿತ ಹೀಗಿತ್ತು

ಉಲ್ಲೇಖಗಳು:
1 Word and Sentence: Two Perspectives, Bhartrari and Wittegenstein; edited by Sibajiban Bhattacharyya.
2 Indian Philosophy and Philosophy of Science, Sundar Sarukkai; PHISPC.
3 Language, Thought, and Reality by Benjamin Lee Whorf.
4 How the Language We Speak Shapes the Way We Think; Lera Boroditsky.

  1. ಭಾಷೆಗಳ ಭಿನ್ನ ಆಲೋಚನಾ ಕ್ರಮ, ಸಹನಾ ಉಡುಪ; ದೇಶ ಕಾಲ ೧೪ನೇ ಸಂಚಿಕೆ.

ಅಂಕಣಕಾರರ ಪರಿಚಯ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬಳಗಾರಿನಲ್ಲಿ ಜನಿಸಿದ ಶ್ರೀಧರ ಬಳಗಾರ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಟೀಚರ್ ಎಜ್ಯುಕೇಟರ್ ಆಗಿ ಪಾಠ ಮಾಡುತ್ತ ಸದ್ಯ ಕುಮಟಾದಲ್ಲಿ ನೆಲೆಸಿದ್ದಾರೆ. ಅಧೋಮುಖ (೧೯೯೫), ಮುಖಾಂತರ (೧೯೯೮), ಇಳೆ ಎಂಬ ಕನಸು (೨೦೦೩೦), ಒಂದು ಫೋಟೋದ ನೆಗೆಟೀವ್ (೨೦೦೮), ಈಸಾಡತಾವ ಜೀವ (೨೦೧೫)- ಕಥಾ ಸಂಕಲನಗಳು. ಕೇತಕಿಯ ಬನ (೨೦೦೩), ಆಡುಕಳ (೨೦೧೪), ಮೃಗಶಿರ (೨೦೧೯)ಕಾದಂಬರಿಗಳು. ರಥಬೀದಿ (೨೦೦೯), ಕಾಲಪಲ್ಲಟ (೨೦೧೧)- ಅಂಕಣ ಬರೆಹಗಳು. ಮೊಳದಷ್ಟು ಹೂವು (೨೦೧೯೦) ಲೇಖನ ಸಂಗ್ರಹ. ಕುವೆಂಪು ಭಾಷಾಭಾರತಿಗೆ ಪೀಟರ್ ವ್ಯಾಟ್ಸನ್ ಮತ್ತು ನಿರ್ಮಲ್ ವರ್ಮಾರವರ ಆಯ್ದ ಬರೆಹಗಳ ಅನುವಾದ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಸ್ವಾತಂತ್ರ್ಯೋತ್ತರ ಕನ್ನಡ ಚಿಂತನಾತ್ಮಕ ಲೇಖನಗಳ ಸಂಪಾದನೆ ಮಾಡಿದ್ದಾರೆ. ಮೂರು ಸಲ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ, ಮಾಸ್ತಿ ಪುರಸ್ಕಾರ, ನಿರಂಜನ ಸಾಹಿತ್ಯ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದ ಯು. ಆರ್. ಅನಂತಮೂರ್ತಿ ಕಥಾ ಪ್ರಶಸ್ತಿ, ದ. ರಾ. ಬೇಂದ್ರೆ ಸಾಹಿತ್ಯ ಪುರಸ್ಕಾರ, ವಾರಂಬಳ್ಳಿ ಪ್ರತಿಷ್ಠಾನ ಕಥಾ ಪ್ರಶಸ್ತಿ, ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ, ಡಾ. ಬೆಸಗರಹಳ್ಳಿ ರಾಮಣ್ಣ ಸಂಸ್ಮರಣಾ ಸಾಹಿತ್ಯ ಪ್ರಶಸ್ತಿ, ಅಜೂರ ಪುಸ್ತಕ ಪ್ರತಿಷ್ಠಾನ ಪ್ರಶಸ್ತಿ, ‘ಅಮ್ಮ’ ಪ್ರಶಸ್ತಿ, ಬರಗೂರು ಪುಸ್ತಕ ಪ್ರಶಸ್ತಿ ಪುರಸ್ಕೃತರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Rain News
ಕರ್ನಾಟಕ3 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ3 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ4 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ4 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ4 hours ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ4 hours ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Pakistan
ವಿದೇಶ4 hours ago

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

T20 World Cup
ಪ್ರಮುಖ ಸುದ್ದಿ4 hours ago

T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

Health Tips Kannada
ಆರೋಗ್ಯ5 hours ago

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Meeting with representatives of various political parties about MLC election in Hosapete
ವಿಜಯನಗರ5 hours ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ11 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ22 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌