ಯೋಗಿ ಆದಿತ್ಯನಾಥ್‌ಗೆ ಬಾಂಬ್‌ ಬೆದರಿಕೆ, ಭದ್ರತೆ ಹೆಚ್ಚಳ, ವಾಟ್ಸ್‌ ಆ್ಯಪ್‌ನಲ್ಲಿ ಸಂದೇಶ ಕಳುಹಿಸಿದವನಿಗೆ ಶೋಧ - Vistara News

ಕ್ರೈಂ

ಯೋಗಿ ಆದಿತ್ಯನಾಥ್‌ಗೆ ಬಾಂಬ್‌ ಬೆದರಿಕೆ, ಭದ್ರತೆ ಹೆಚ್ಚಳ, ವಾಟ್ಸ್‌ ಆ್ಯಪ್‌ನಲ್ಲಿ ಸಂದೇಶ ಕಳುಹಿಸಿದವನಿಗೆ ಶೋಧ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ವಾಟ್ಸ್‌ಆ್ಯಪ್‌ ಮೂಲಕ ಬೆದರಿಕೆ ಒಡ್ಡಿದ ವ್ಯಕ್ತಿಗಾಗಿ ಶೋಧ ನಡೆಸಲಾಗುತ್ತಿದೆ. ಯೋಗಿ ಅವರ ಭದ್ರತೆ ಹೆಚ್ಚಿಸಲಾಗಿದೆ.

VISTARANEWS.COM


on

Yogi CM
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಬೆದರಿಕೆ ಸಂದೇಶವೊಂದು ಬಂದಿದ್ದು, ಇದಾದ ಬಳಿಕ ಮುಖ್ಯಮಂತ್ರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಲಖನೌನ ಪೊಲೀಸ್‌ ಕಂಟ್ರೋಲ್‌ ರೂಂನ ಸಹಾಯವಾಣಿ ವಾಟ್ಸ್‌ಆ್ಯಪ್‌ಗೆ ಬೆದರಿಕೆ ಸಂದೇಶ ಬಂದಿದೆ. ಇದಾದ ಕೂಡಲೇ ಇಡೀ ಪೊಲೀಸ್‌ ವ್ಯವಸ್ಥೆ ಎದ್ದು ನಿಂತಿದೆ. ಒಂದು ಕಡೆ ಭದ್ರತೆಯ ಹೆಚ್ಚಳ ಮಾಡಲಾಗಿದೆ. ಇನ್ನೊಂದು ಕಡೆಯಲ್ಲಿ ವಾಟ್ಸ್‌ಆ್ಯಪ್‌ನಲ್ಲಿ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ನಿಜವೆಂದರೆ, ಈ ಸಂದೇಶ ಬಂದಿರುವುದು ಆಗಸ್ಟ್‌ ೨ರಂದು. ಅದರಲ್ಲಿ ಮೂರು ದಿನಗಳಲ್ಲಿ ಮುಖ್ಯಮಂತ್ರಿಗಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿತ್ತು. ಹೀಗಾಗಿ ಆವತ್ತಿನಿಂದಲೇ ಸಿಎಂ ಭದ್ರತೆ ಮೇಲೆ ಹೆಚ್ಚು ನಿಗಾ ಇಡಲಾಗಿತ್ತು. ಈಗಲೂ ಅದು ಮುಂದುವರಿದಿದೆ. ಆದರೆ, ಈ ಮಾಹಿತಿಯನ್ನು ಸೋಮವಾರವಷ್ಟೇ ಬಹಿರಂಗಪಡಿಸಲಾಗಿದೆ.

ಲಖನೌನ ಸುಶಾಂತ್‌ ಗಾಲ್ಫ್‌ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಯೋಗಿ ಆದಿತ್ಯನಾಥ್‌ ಅವರಿಗೆ ೨೦೧೭ರಿಂದಲೇ ಝಡ್‌ ಪ್ಲಸ್‌ ಸೆಕ್ಯೂರಿಟಿ ನೀಡಲಾಗುತ್ತದೆ. ಜತೆಗೆ ಆಗಾಗ ಅವರ ಭದ್ರತೆಯನ್ನು ಅವಲೋಕಿಸಲಾಗುತ್ತಿದೆ. ಕಳೆದ ಜೂನ್‌ನಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರು ಎಂಬ ಕಾರಣಕ್ಕೆ ಕೆಲವು ಪೊಲೀಸರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮೈಸೂರು

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Mysuru News : ಪತ್ನಿಯ ಶೀಲ ಶಂಕಿಸಿದ ಪಾಪಿ ಪತಿಯೊಬ್ಬ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಗಂಭೀರ ಗಾಯಗೊಂಡಿದ್ದ ಮಹಿಳೆ ನರಳಾಡಿ (Murder case) ಮೃತಪಟ್ಟಿದ್ದಳು. ಇದೀಗ ಕೃತ್ಯ ನಡೆಸಿದ ಆರೋಪಿಗೆ 4 ವರ್ಷದ ನಂತರ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

VISTARANEWS.COM


on

By

Mysuru News
ಸಾಂದರ್ಭಿಕ ಚಿತ್ರ
Koo

ಮೈಸೂರು: ಪತ್ನಿ ಶೀಲ ಶಂಕಿಸಿ ಕೊಲೆ (Murder Case) ಮಾಡಿದ (Mysuru News) ಆರೋಪಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ಮೈಸೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ರವಿ ಜೀವಾವಧಿ ಶಿಕ್ಷೆಗೆ ಒಳಗಾದವನು. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇಬೂರು ಗ್ರಾಮದ ನಿವಾಸಿಯಾದ ರವಿ ಎಂಬಾತ ಪತ್ನಿ ಅಮುದಾಳ ಶೀಲ ಶಂಕಿಸಿ ಕೊಲೆ ಮಾಡಿದ್ದ.

ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ರವಿಗೆ ಐಪಿಸಿ ಸೆಕ್ಷನ್ 498(ಎ ) ಪ್ರಕಾರ 2 ವರ್ಷ ಕಠಿಣ ಶಿಕ್ಷೆ ಒಂದು ಸಾವಿರ ದಂಡ ಹಾಗೂ ಐಪಿಸಿ ಸೆಕ್ಷನ್ 302 ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ದಂಡ ಹಾಕಿ ಆದೇಶಿಸಿದೆ. ಮೈಸೂರು 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್ ತೀರ್ಪು ನೀಡಿದ್ದಾರೆ.

ಮಕ್ಕಳಿಬ್ಬರು ಅನಾಥ

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇಬೂರು ಗ್ರಾಮದ ಸುಬ್ಬ ಅಲಿಯಾಸ್‌ ರವಿ 10 ವರ್ಷದ ಹಿಂದೆ ನಂಜನಗೂಡು ಪಟ್ಟಣದ ರಾಜಾಜಿ ಕಾಲೋನಿಯ ನಂಜುಂಡ ಅವರ ಮಗಳು ಅಮುದಾರವರನ್ನು ಮದುವೆ ಆಗಿದ್ದ. ಈ ದಂಪತಿಗೆ 9 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದರು.

ಮದುವೆಯಾದ 2-3 ವರ್ಷಕ್ಕೆ ಆರೋಪಿ ರವಿ ತನ್ನ ವಾರೆಸೆ ಶುರು ಮಾಡಿದ್ದ. ಅಮುದಾಳಿಗೆ ನೀನು ಬೇರೆಯವರ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ಶೀಲ ಶಂಕಿಸಿ ಪ್ರತಿದಿನ ಕುಡಿದು ಬಂದು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ.

ಹೀಗೆ ಕಳೆದ 2020ರ ಡಿಸೆಂಬರ್‌ 6ರಂದು ಸಂಜೆ 4-30ರ ಸುಮಾರಿಗೆ ಕುಡಿದು ಬಂದ ರವಿ, ಅಮುದಾಳೊಂದಿಗೆ ಜಗಳ ತೆಗೆದಿದ್ದ. ಈ ವೇಳೆ ರವಿಗೆ ಊಟ ಬಡಿಸುತ್ತಿದ್ದಾಗ ಅಮುದಾ ಮೇಲೆ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಆಮುದಾಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಮುದಾ ಮೃತಪಟ್ಟಿದ್ದಳು.

ಇದನ್ನೂ ಓದಿ: Hassan Shoot Out : ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ಇಬ್ಬರ ಹತ್ಯೆಗೈದ ಪಾತಕಿಗಳು!

ಮೃತಳ ಸಹೋದರ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ರವಿ ವಿರುದ್ಧ ಕಲಂ 498(ಎ), 302 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ಮಾಡಿ ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಲಕ್ಷ್ಮೀಕಾಂತ ತಳವಾರ್‌ರವರು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಯು ಅಪರಾಧ ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಆರೋಪಿಗೆ ಕಲಂ 498(ಎ) ಐಪಿಸಿ ಅಡಿಯ ಅಪರಾಧಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು ರೂ.1.000/- ದಂಡವನ್ನು ವಿಧಿಸಿದ್ದು ಮತ್ತು ಕಲಂ 302 ಐಪಿಸಿ ಅಡಿಯ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು ರೂ.5,000/- ದಂಡವನ್ನು ವಿಧಿಸಿ ತೀರ್ಪು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

Genitals Removed Case ಕಾಲ ಕೆಟ್ಟೋಗಿದೆ ಎಂದು ಆಗಾಗ ಹಿರಿಯರು ಹೇಳುತ್ತಿರುವ ಮಾತು ಈಗ ನಿಜವಾಗುತ್ತಿದೆ. ಈ ಕಾಲದಲ್ಲಿ ಯಾರನ್ನೂ ನಂಬದೇ ಇರುವಂತಹ ಪರಿಸ್ಥಿತಿ ಉಂಟಾಗಿದೆ. ಉತ್ತರ ಪ್ರದೇಶದ ಮುಜಾಹಿದ್ ಎಂಬ ಯುವಕನೊಬ್ಬನ ರಾತ್ರಿ ಬೆಳಗಾಗುವುದರೊಳಗೆ ಯುವತಿ ಆಗಿದ್ದಾನೆ. ಏನಿದು ಹುಚ್ಚಾಟ ಏನಿಸಬಹುದು ಆದರೆ ನಿಜ! ಈತನ ಪರಿಚಯದ ವ್ಯಕ್ತಿಯೊಬ್ಬ ಸ್ಥಳೀಯ ವೈದ್ಯಕೀಯ ಕಾಲೇಜಿನ ವೈದ್ಯರೊಂದಿಗೆ ಸೇರಿಕೊಂಡು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಮೋಸ ಮಾಡಿದ್ದಾನೆ.. ಹಾಗಾಗಿ ಈ ಪ್ರಕರಣದ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

VISTARANEWS.COM


on

Genitals Removed Case
Koo

ಮಲಗುವಾಗ ಪುರುಷನಾಗಿದ್ದ ವ್ಯಕ್ತಿ ನಿದ್ರೆಯಿಂದ ಎಚ್ಚರವಾಗುವಷ್ಟರಲ್ಲಿ ಮಹಿಳೆ(woman)ಯಾಗಿ ಬದಲಾದರೆ? ಈ ರೀತಿ ಲಿಂಗ ಬದಲಾಣೆಯಾದ (Genitals Removed Case) ಘಟನೆ ಇದೀಗ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮುಜಾಹಿದ್ ಎಂಬ 20 ವರ್ಷದ ಯುವಕ ಇಂತಹ ಘೋರ ಕೃತ್ಯಕ್ಕೆ ಒಳಗಾದ ವ್ಯಕ್ತಿ. ಈತನಿಗೆ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ಮುಜಾಫರ್ ನಗರದ ಸ್ಥಳೀಯ ವೈದ್ಯಕೀಯ ಕಾಲೇಜಿನ ವೈದ್ಯರೊಂದಿಗೆ ಸೇರಿಕೊಂಡು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಮೋಸ ಮಾಡಿದ್ದಾನೆ. ಇದು ಆತನ ಜೀವನಕ್ಕೊಂದು ಭಯಾನಕ ತಿರುವು ನೀಡಿದಂತಾಗಿದೆ. ಈ ಪ್ರಕರಣದ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಭಯಾನಕ ಕೃತ್ಯದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಯೂನಿಯನ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮುಜಾಹಿದ್ ಸಂಜಕ್ ಗ್ರಾಮದ ವ್ಯಕ್ತಿಯಾಗಿದ್ದ. ಓಂಪ್ರಕಾಶ್ ಎಂಬ ವ್ಯಕ್ತಿ ಮನ್ಸೂರ್ ಪುರದ ಬೇಗ್ರಾಜ್‌ಪುರ ವೈದ್ಯಕೀಯ ಕಾಲೇಜಿನ ವೈದ್ಯರಿಗೆ ಮುಜಾಹಿದ್‌ಗೆ ಶಸ್ತ್ರಚಿಕಿತ್ಸೆ ಮಾಡುವಂತೆ ಹೇಳಿದ್ದಾನೆ. ಆತನ ಮಾತು ಕೇಳಿ ವೈದ್ಯರು ಮುಜಾಹಿದ್‌ನ ಜನನಾಂಗವನ್ನು ತೆಗೆದುಹಾಕಿ ಬಲವಂತವಾಗಿ ಲಿಂಗ ಬದಲಾವಣೆ ಮಾಡಿದ್ದಾರೆ.

ಮುಜಾಹಿದ್ ಗೆ ವೈದ್ಯಕೀಯ ಸಮಸ್ಯೆ ಇದೆ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಕಳೆದ ಎರಡು ವರ್ಷಗಳಿಂದ ಓಂಪ್ರಕಾಶ್ ಕಿರುಕುಳ ನೀಡುತ್ತಿದ್ದ. ತನ್ನನ್ನು ಆಸ್ಪತ್ರೆಗೆ ಕರೆತಂದು ನಂತರ ಅರವಳಿಕೆ ಇಂಜೆಕ್ಷನ್ ನೀಡಿ ಲಿಂಗ ಬದಲಾವಣೆಯ ಸರ್ಜರಿ ಮಾಡಿದ್ದಾರೆ ಎಂದು ಮುಜಾಹಿದ್ ಆರೋಪಿಸಿದ್ದಾನೆ. ಅಷ್ಟೇ ಅಲ್ಲದೇ ಇನ್ನು ಮುಂದೆ ತನ್ನ ಕುಟುಂಬದವರು ತನ್ನನ್ನು ಸ್ವೀಕರಿಸುವುದಿಲ್ಲ. ಹಾಗಾಗಿ ತನ್ನ ಜೊತೆ ಇರುವಂತೆ , ತನ್ನನ್ನೇ ಮದುವೆಯಾಗುವಂತೆ ಓಂಪ್ರಕಾಶ್ ಬೆದರಿಕೆ ಹಾಕಿರುವುದಾಗಿ ಮುಜಾಹಿದ್ ತಿಳಿಸಿದ್ದಾನೆ.

ಈ ಬಗ್ಗೆ ರೈತ ಮುಖಂಡರು, ಕಿಸಾನ್‌ ಸಂಘದ ಕಾರ್ಯಕರ್ತರು ವೈದ್ಯಕೀಯ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳಲ್ಲಿ ನಡೆಯುವ ಮಾನವ ಅಂಗಗಳ ಕಳ್ಳಸಾಗಾಣಿಕೆಯಂತಹ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಅದಕ್ಕಾಗಿ ಓಂಪ್ರಕಾಶ್ ಮತ್ತು ವೈದ್ಯಕೀಯ ಕಾಲೇಜಿನ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಮುಜಾಹಿದ್ ಗೆ ಕನಿಷ್ಠ 2 ಕೋಟಿ ಪರಿಹಾರ ನೀಡಬೇಕೆಂದು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಶ್ಲೀಲ ವಿಡಿಯೊ ಚಟ; ಮಗಳನ್ನೇ ಲೈಂಗಿಕಕ್ರಿಯೆಗೆ ಒತ್ತಾಯಿಸಿ ಕೊಂದ ಪಾಪಿ ತಂದೆ

ಈ ಬಗ್ಗೆ ಮುಜಾಹಿದ್ ಪೊಲೀಸರಿಗೆ ದೂರು ನೀಡಿದ ಕಾರಣ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓಂಪ್ರಕಾಶ್ ನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Continue Reading

ಕೊಡಗು

Building Collapse : ಗೋಣಿಕೊಪ್ಪದಲ್ಲಿ ಏಕಾಏಕಿ ಕುಸಿದು ಬಿದ್ದ ಹೋಟೆಲ್‌ ಕಟ್ಟಡ; ಊಟಕ್ಕೆ ಬಂದವರು ನರಳಾಟ

Building Collapse : ಗೋಣಿಕೊಪ್ಪದಲ್ಲಿರುವ ಅಂಬೂರು ಬಿರಿಯಾನಿ ಸೆಂಟರ್ ಏಕಾಏಕಿ ಕುಸಿದು ಬಿದ್ದಿದೆ. ಕಟ್ಟಡದಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

VISTARANEWS.COM


on

By

building collapses in Gonikoppa
Koo

ಕೊಡಗು: ಕೊಡಗಿನ ಗೋಣಿಕೊಪ್ಪಲು ಪಟ್ಟಣದಲ್ಲಿ (Gonikoppa News) ಏಕಾಏಕಿ ಕಟ್ಟಡವೊಂದು ಕುಸಿದು (Building Collapse) ಬಿದ್ದಿದೆ. ಕಟ್ಟಡದೊಳಗೆ ಹಲವರು ಸಿಲಿಕಿರುವ ಶಂಕೆ ಇದೆ. ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿದ್ದ ಅಂಬೂರು ಬಿರಿಯಾನಿ ಸೆಂಟರ್ ಇದ್ದ ಕಟ್ಟಡ ಕುಸಿದು ಬಿದ್ದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಕಟ್ಟಡದೊಳಗೆ ಸಿಲುಕಿಕೊಂಡಿರುವವರನ್ನು ಹೊರ ತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಲ್ಲಿ ನೆರೆದಿರುವ ನೂರಾರು ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕಟ್ಟಡದಡಿಯಲ್ಲಿ ಸಿಲುಕಿದ್ದ ಐವರನ್ನು ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳನ್ನು ಗೋಣಿಕೊಪ್ಪ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ ಮುಂದುವರಿದಿದೆ. ಅಂಬೂರು ಬಿರಿಯಾನಿ ಸೆಂಟರ್‌ಗೆ ಮಧ್ಯಾಹ್ನ ಊಟಕ್ಕೆಂದು ಬಂದಿದ್ದಾಗ ಈ ದುರ್ಘಟನೆ ನಡೆದಿದೆ.

ಗೋಣಿಕೊಪ್ಪದ ಉತ್ತಯ, ತಿಮ್ಮಯ್ಯ ಇಬ್ಬರಿಗೆ ಸೇರಿದ ಕಟ್ಟಡ ಇದಾಗಿದ್ದು, ಶಿಥಿಲಾವಸ್ಥೆಯಲ್ಲಿದ್ದ ಹಳೆಯದಾದ ಕಟ್ಟಡ‌ ಇದಾಗಿದೆ. ಗೋಣಿಕೊಪ್ಪ ಮೈಸೂರು ಮುಖ್ಯ ರಸ್ತೆ ಬಂದ್ ಮಾಡಿ ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ. ಮುಖ್ಯ ರಸ್ತೆ ಬಂದ್‌ ಆಗಿರುವುದರಿಂದ ಬೈ ಪಾಸ್ ರಸ್ತೆ ಮೂಲಕ ವಾಹನಗಳು ಸಂಚರಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Murder Case: ಅಶ್ಲೀಲ ವಿಡಿಯೊ ಚಟ; ಮಗಳನ್ನೇ ಲೈಂಗಿಕಕ್ರಿಯೆಗೆ ಒತ್ತಾಯಿಸಿ ಕೊಂದ ಪಾಪಿ ತಂದೆ

Murder Case: ಮಗಳ ಪಾಲಿಗೆ ಅಪ್ಪನೇ ಮೊದಲ ಹೀರೋ. ಹೆಣ್ಣುಮಕ್ಕಳು ನಂಬುವ ಮೊದಲ ಜೀವ. ಆದರೆ ಇಲ್ಲಿ ಮಗಳ ಪಾಲಿಗೆ ಹೀರೋ ಆಗಬೇಕಿದ್ದ ಅಪ್ಪನೇ ವಿಲನ್ ಆಗಿದ್ದಾನೆ. ಪೋರ್ನ್ ವಿಡಿಯೊ ನೋಡುವ ಚಟವಿರುವ ಅಪ್ಪ ತನ್ನ ಸ್ವಂತ ಮಗಳ ಜೀವವನ್ನೇ ಬಲಿ ತೆಗೆದುಕೊಂಡಿದ್ದಾನೆ. ನೀಚ ತಂದೆಯೊಬ್ಬ ತನ್ನ ಜೊತೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ 13 ವರ್ಷದ ಮಗಳನ್ನು ದಾರುಣವಾಗಿ ಕೊಂದಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ನಾಡಿಗಡ್ಡ ತಾಂಡಾದಲ್ಲಿ ನಡೆದಿದೆ.

VISTARANEWS.COM


on

Murder Case
Koo

ಹೈದರಾಬಾದ್ : ತಾಯಿ ಜೀವ ಕೊಟ್ಟರೆ ತಂದೆ ಜೀವನ ಕೊಡುತ್ತಾನೆ ಎಂಬ ಮಾತಿದೆ. ಹಾಗಾಗಿ ತಂದೆ ತಾಯಿಯನ್ನು ದೇವರೆಂದು ಪರಿಗಣಿಸುತ್ತಾರೆ. ಅದರಲ್ಲೂ ಹೆಣ್ಣು ಮಕ್ಕಳು ತಮ್ಮ ತಂದೆ ತಮ್ಮ ರಕ್ಷಕನೆಂದೇ ಭಾವಿಸುತ್ತಾರೆ. ತಂದೆ ಕೆಟ್ಟವರ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳದಂತೆ ರಕ್ಷಿಸುತ್ತಾನೆ ಎಂಬ ನಂಬಿಕೆ ಇದೆ. ಹಾಗಾಗಿ ಹೆಣ್ಣುಮಕ್ಕಳು ತಮ್ಮ ತಂದೆಯೊಂದಿಗೆ ಧೈರ್ಯದಿಂದ ಇರುತ್ತಾರೆ. ಆದರೆ ಇಂತಹ ತಂದೆಯೇ ತನ್ನ ಮಗಳ ಮೇಲೆ ನೀಚತನ ತೋರಿದರೆ ಆಕೆಯನ್ನು ಕಾಪಾಡುವವರು ಯಾರು? ಇಂತಹ ನೀಚ ತಂದೆಯೊಬ್ಬ ಕಾಮದಾಹಕ್ಕೆ ತನ್ನ ಮಗಳನ್ನೇ ಕೊಲೆ (Murder Case )ಮಾಡಿದ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ.

ಹೈದರಾಬಾದ್‌ನ ನಾಡಿಗಡ್ಡ ತಾಂಡಾದಲ್ಲಿ 35 ವರ್ಷದ ನೀಚ ತಂದೆಯೊಬ್ಬ ತನ್ನ ಜೊತೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ 13 ವರ್ಷದ ಮಗಳನ್ನು ದಾರುಣವಾಗಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.
ಮಹಬೂಬಾಬಾದ್ ಜಿಲ್ಲೆಯ ನಿವಾಸಿ ನರೇಶ್ (35) ಆರೋಪಿ ತಂದೆ. ಈತ ಕಿರಾಣಿ ಕಂಪನಿಯಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡಲು ತನ್ನ ಪತ್ನಿ ಹಾಗೂ ಮಗಳ ಜೊತೆ ನಗರಕ್ಕೆ ಬಂದಿದ್ದ. ಈತನಿಗೆ ಅಶ್ಲೀಲ ವಿಡಿಯೊ ನೋಡುವ ಚಟವಿತ್ತು. ಹಾಗಾಗಿ ಲೈಂಗಿಕತೆಯ ಬಗ್ಗೆ ಕೀಳು ಆಸಕ್ತಿ ಹೊಂದಿದ್ದ ಆತ ತನ್ನ ಚಟವನ್ನು ತೀರಿಸಿಕೊಳ್ಳಲು ತನ್ನ ಮಗಳ ಮೇಲೆಯೇ ಕಣ್ಣು ಹಾಕಿದ. ಅದಕ್ಕಾಗಿ ಆಕೆಯನ್ನು ಕಟ್ಟಿಗೆ ತರುವ ಹತ್ತಿರದ ಕಾಡಿಗೆ ಕರೆದೊಯ್ದ. ಅಲ್ಲಿ ಆಕೆಯ ಜೊತೆ ಲೈಂಗಿಕ ಸಂಬಂಧ ಹೊಂದಲು ಪ್ರಯತ್ನಿಸಿದಾಗ ಆಕೆ ಅದನ್ನು ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಆತ ಆಕೆಯ ತಲೆಯನ್ನು ಬಂಡೆಗೆ ಅಪ್ಪಳಿಸಿ ಕೊಲೆ ಮಾಡಿ ಮನೆಗೆ ಮರಳಿದ್ದಾನೆ.

ಮರುದಿನ ತಾನು ತಪ್ಪಿಸಿಕೊಳ್ಳಲು ಪೊಲೀಸ್ ಠಾಣೆಗೆ ತೆರಳಿ ಮಗಳು ಕಾಣೆಯಾದ ಬಗ್ಗೆ ದೂರು ನೀಡಿದ್ದಾನೆ. ತನಿಖೆಯ ವೇಳೆ ಪೊಲೀಸರಿಗೆ ಮಗಳ ಶವ ಸಮೀಪದ ಕಾಡಿನಲ್ಲಿ ಸಿಕ್ಕಿದೆ. ತಾಯಿಯ ಮೂಲಕ ಅದು ಅವರ ಮಗಳೆಂದು ಪತ್ತೆ ಮಾಡಿದ ಬಳಿಕ ಪೊಲೀಸರು ಸಿಸಿಟಿವಿಯನ್ನು ಪರಿಶೀಲಿಸಿದ್ದಾರೆ. ಅದರಲ್ಲಿ ಹೋಗುವಾಗ ತಂದೆ ಮಗಳ ಜೊತೆ ಇದ್ದರೆ, ವಾಪಾಸು ಬರುವಾಗ ತಂದೆ ಒಬ್ಬನೇ ಬಂದಿರುವುದು ಕಂಡುಬಂದಿದೆ. ಹಾಗಾಗಿ ಅನುಮಾನಗೊಂಡ ಪೊಲೀಸರು ತಂದೆಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ಸತ್ಯ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ: Actor Darshan: ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಆರ್ಯವರ್ಧನ್ ಭವಿಷ್ಯ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ತಂದೆಯ ಮೇಲೆ ಐಪಿಸಿ ಸೆಕ್ಷನ್ ಗಳು ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯಕ್ಕೆ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂಬುದಾಗಿ ತಿಳಿದುಬಂದಿದೆ.

Continue Reading
Advertisement
Citroen C3 Aircross
ಪ್ರಮುಖ ಸುದ್ದಿ17 seconds ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು2 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ8 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest20 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ28 mins ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Genitals Removed Case
Latest31 mins ago

Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

UGC-NET
ದೇಶ32 mins ago

UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

Niveditha Gowda new reels after divorce
ಸಿನಿಮಾ40 mins ago

Niveditha Gowda: ಡಿವೋರ್ಸ್‌ ಬಳಿಕ ಹೊಸ ರೀಲ್ಸ್‌ ಹಂಚಿಕೊಂಡ ನಿವೇದಿತಾ: ಲೈಕ್ಸ್‌ ಸುರಿಮಳೆ!

Darshan Arrested
ಕರ್ನಾಟಕ41 mins ago

Darshan Arrested: ರೇಣುಕಾಸ್ವಾಮಿ ಕೊಲೆ ಕೇಸ್;‌ ಪವಿತ್ರಾ ಗೌಡಗೆ ಜೈಲು, ದರ್ಶನ್‌ ಪೊಲೀಸ್‌ ಕಸ್ಟಡಿಗೆ

Road Construction
ಕರ್ನಾಟಕ1 hour ago

Road Construction: ವಿಶ್ವಬ್ಯಾಂಕ್‌ನಿಂದ ಸಾಲ ತಂದು ಗ್ರಾಮೀಣ ರಸ್ತೆಗಳ ಅಭಿವೃದ್ಧಿ; ಸಿದ್ದರಾಮಯ್ಯ ಸರ್ಕಾರ ನಿರ್ಧಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌