Female pilots | ಅಮೆರಿಕಕ್ಕಿಂತಲೂ ದುಪ್ಪಟ್ಟು ಮಹಿಳಾ ಪೈಲಟ್‌ಗಳು ಭಾರತದಲ್ಲಿ! - Vistara News

ಪ್ರಮುಖ ಸುದ್ದಿ

Female pilots | ಅಮೆರಿಕಕ್ಕಿಂತಲೂ ದುಪ್ಪಟ್ಟು ಮಹಿಳಾ ಪೈಲಟ್‌ಗಳು ಭಾರತದಲ್ಲಿ!

ಅಮೆರಿಕಕ್ಕೆ ಹೋಲಿಸಿದರೆ ಭಾರತದಲ್ಲಿ ವಿಮಾನಗಳನ್ನು ಚಲಾಯಿಸುತ್ತಿರುವ ಮಹಿಳೆಯರ ಸಂಖ್ಯೆ ದುಪ್ಪಟ್ಟು. ಮಹಿಳೆಯರು ಹೆಚ್ಚು ಜಾಗರೂಕತೆಯಿಂದ ಕೆಲಸ ಮಾಡುತ್ತಾರೆ ಎಂಬುದು ಇವರ ಕುರಿತು ಇರುವ ತಾರೀಫು.

VISTARANEWS.COM


on

pilot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೂರು ದಶಕಗಳ ಹಿಂದೆ, ಅಂದರೆ ೧೯೮೯ರ ಸುಮಾರಿಗೆ, ನಿವೇದಿತಾ ಭಸಿನ್‌ ಅವರು ಭಾರತದಲ್ಲಿ ಮೊದಲ ಬಾರಿಗೆ ವಾಣಿಜ್ಯ ವಿಮಾನದ ಪೈಲಟ್‌ ಆಗಿ ಕಾರ್ಯನಿರ್ವಹಿಸಿದ್ದರು, ಮಾತ್ರವಲ್ಲ, ವಿಶ್ವದ ಕಿರಿಯ ವಾಣಿಜ್ಯ ವಿಮಾನ ಚಾಲಕರೆಂಬ ಹಿರಿಮೆಗೂ ಪಾತ್ರರಾಗಿದ್ದರು. ಆ ದಿನಗಳ ನೆನಪು ಸ್ಪಲ್ಪವೂ ಅಳಿಸದಂತೆ ಸ್ಪಷ್ಟವಾಗಿರುವ ನಿವೇದಿತ ಅವರಿಗೆ, ಮಹಿಳಾ ಚಾಲಕರನ್ನು ಕಂಡು ಪ್ರಯಾಣಿಕರು ಗಲಿಬಿಲಿಯಾಗದಂತೆ ಮಾಡಲು ಸಹೋದ್ಯೋಗಿಗಳು ಹೇಗೆ ತಮ್ಮನ್ನು ಕಾಕ್‌ಪಿಟ್‌ನೊಳಗೆ ತಳ್ಳುತ್ತಿದ್ದರು ಎಂಬುದೂ ನೆನಪಿದೆ. ಆದರೀಗ ವಿಮಾನಯಾನ ಕ್ಷೇತ್ರದಲ್ಲಿ ಪರಿಸ್ಥಿತಿ ಬಹಳ ಬದಲಾಗಿದ್ದು, ಒಟ್ಟು ಪೈಲಟ್‌ಗಳ ಪೈಕಿ ಶೇ. ೧೨.೪ರಷ್ಟು ಮಂದಿ ಮಹಿಳೆಯರು ಎಂಬುದು ಮಹತ್ವದ ಸಂಗತಿಯಾಗಿದೆ.

pilot
ಭಾರತದ ಮೊದಲ ವಾಣಿಜ್ಯ ಮಹಿಳಾ ಪೈಲಟ್‌ ನಿವೇದಿತಾ ಭಾಸಿನ್

ಆದರೆ ಇಲ್ಲೊಂದು ಚೋದ್ಯವೂ ಇದೆ. ವಿಶ್ವ ಆರ್ಥಿಕ ವೇದಿಕೆಯ ಪಟ್ಟಿಯಂತೆ, ಲಿಂಗ ಸಮಾನತೆಯನ್ನು ಸಾಧಿಸಿರುವ ೧೪೬ ದೇಶಗಳ ಪೈಕಿ ೧೩೫ನೇ ಸ್ಥಾನದಲ್ಲಿರುವ ಭಾರತ, ವೈಮಾನಿಕ ಕ್ಷೇತ್ರದಲ್ಲಿ ತನ್ನ ಮಹಿಳೆಯರಿಗೆ ಇಷ್ಟೊಂದು ಅವಕಾಶ ನೀಡಿರುವುದು ಹೇಗೆ? ವೈವಿಧ್ಯಮಯ ಸಿಬ್ಬಂದಿಗಳಿರುವ ಸಂಸ್ಥೆಗಳ ಕಾರ್ಯಕ್ಷಮತೆ ಹೆಚ್ಚು ಎಂಬುದು ಒಂದು ಸಾಮಾನ್ಯ ಅಂದಾಜು. ಇನ್ನೂ ಕೆಲವು ಅಧ್ಯಯನಗಳ ಪ್ರಕಾರ, ಮಹಿಳಾ ಪೈಲಟ್‌ಗಳಿರುವಲ್ಲಿ ಭದ್ರತಾ ಲೋಪದ ಸಾಧ್ಯತೆಗಳೂ ಕಡಿಮೆ. ಇದಲ್ಲದೆ, ಕೋವಿಡ್‌ ನಂತರದಿಂದ ಉಂಟಾಗಿರುವ ಚಾಲಕರು ಮತ್ತಿತರ ಸಿಬ್ಬಂದಿ ಕೊರತೆಯನ್ನು ತುಂಬಿಸಲು ಮಹಿಳೆಯರನ್ನು ನೇಮಿಸಿಕೊಳ್ಳುವುದು ಸೂಕ್ತ ಸಮಾಧಾನ. ಹೆಲಿಕಾಪ್ಟರ್‌ ಮತ್ತು ಸಾಗಾಣಿಕೆ ವಿಮಾನಗಳಿಗೆ ಮಹಿಳೆಯರ ನೇಮಕವನ್ನು ೯೦ರ ದಶಕದಲ್ಲೇ ಭಾರತೀಯ ವಾಯುಸೇನೆ ಆರಂಭಿಸಿತ್ತು. ಆದರೆ ಯುದ್ಧ ವಿಮಾನಗಳ ಚಾಲನೆಗೆ ಅವಕಾಶ ನೀಡಿರುವುದು ಈಗೊಂದು ವರ್ಷದಿಂದ ಈಚೆಗೆ.

ಬದಲಾದ ಸಾಮಾಜಿಕ ಪರಿಸ್ಥಿತಿಗಳು, ಕೌಟುಂಬಿಕ ನೆರವು, ಕಂಪನಿಗಳ ಬದಲಾದ ಮನಸ್ಥಿತಿಗಳು ಮುಂತಾದ ಕಾರಣಗಳಿಂದ ಈ ಕ್ಷೇತ್ರವನ್ನು ಪ್ರವೇಶಿಸಲು ಮಹಿಳೆಯರಿಗೆ ಸಾಧ್ಯವಾಗಿದೆ. ದುಬಾರಿಯೆನಿಸಿರುವ ವೈಮಾನಿಕ ಚಾಲನಾ ತರಬೇತಿ ಪಡೆಯಲು ಕೆಲವು ರಾಜ್ಯ ಸರಕಾರಗಳು ನೆರವು ನೀಡುತ್ತಿವೆ. ಹೊಂಡಾ ಮೋಟರ್ಸ್‌ ನಂತಹ ಸಂಸ್ಥೆಗಳು ೧೮ ತಿಂಗಳ ಸಂಪೂರ್ಣ ವಿದ್ಯಾರ್ಥಿ ವೇತನವನ್ನೂ ಮಹಿಳೆಯರಿಗೆ ನೀಡುತ್ತಿವೆ. ಇಂತಹ ಹಲವು ಕಾರಣಗಳಿಂದ, ವೈಮಾನಿಕ ಕ್ಷೇತ್ರದಲ್ಲಿ ಮಹಿಳೆಯರನ್ನು ನೇಮಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ. ಭಾರತದ ಒಟ್ಟು ಪೈಲಟ್‌ಗಳ ಪೈಕಿ ಶೇ. ೧೨.೪ ಮಂದಿ ಮಹಿಳೆಯರಿದ್ದರೆ, ಈ ಪ್ರಮಾಣ ಅಮೆರಿಕದಲ್ಲಿ ಶೇ. ೫.೫ ಮತ್ತು ಬ್ರಿಟನ್‌ನಲ್ಲಿ ೪.೭ರಷ್ಟಿದೆ.‌

ಇದನ್ನೂ ಓದಿ: ಮೊದಲ ಬಾರಿಗೆ ಮುಟ್ಟಿನ ಬಗ್ಗೆ ತಿಳಿದುಕೊಂಡ ಕ್ಷಣ ವಿವರಿಸಿದ ದೀಪಿಕಾ ಪಡುಕೋಣೆ

ಭಾರತದ ಅತಿದೊಡ್ಡ ವಾಣಿಜ್ಯ ವಿಮಾನಯಾನ ಸಂಸ್ಥೆ ಇಂಡಿಗೊ ತನ್ನ ಮಹಿಳಾ ಸಿಬ್ಬಂದಿಗೆ ಹಲವಾರು ಅನುಕೂಲಗಳನ್ನು ಕಲ್ಪಿಸಿರುವುದಾಗಿ ಹೇಳಿಕೊಂಡಿದೆ. ಪೈಲಟ್‌ ಮತ್ತು ಇತರ ಸಿಬ್ಬಂದಿಗಳು ಗರ್ಭಾವಸ್ಥೆಯಲ್ಲಿ ಹಾರಾಟ ನಡೆಸುವ ಬದಲು, ಇತರ ಸೇವೆಗಳನ್ನು ಆಯ್ದುಕೊಳ್ಳಬಹುದು. ೨೬ ವಾರಗಳವರೆಗೆ ಸಂಬಳ ಸಹಿತ ತಾಯ್ತನದ ರಜೆ ನೀಡುವುದಲ್ಲದೆ, ಶಿಶುವಿಹಾರಗಳ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಇಂಥ ಎಲ್ಲಾ ಸೌಲಭ್ಯಗಳನ್ನು ತಾನೂ ನೀಡುತ್ತಿರುವುದಾಗಿ ಟಾಟಾ ಮತ್ತು ಸಿಂಗಪೂರ್‌ ಏರ್‌ವೇಸ್‌ ಜಂಟಿ ಒಡೆತನದ ವಿಸ್ತಾರ ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ. ಇದಲ್ಲದೆ, ಮಹಿಳಾ ಸಿಬ್ಬಂದಿಯನ್ನು ಪಿಕ್-ಡ್ರಾಪ್‌ ಮಾಡುವ ವ್ಯವಸ್ಥೆಯನ್ನು ಹಲವಾರು ಸಂಸ್ಥೆಗಳು ಹೊಂದಿದ್ದು, ಹಲವು ಬಗೆಯಲ್ಲಿ ಸುರಕ್ಷತೆಯನ್ನು ಗಮನದಲ್ಲಿ ಇರಿಸಿಕೊಳ್ಳಲಾಗುತ್ತಿದೆ ಎಂಬುದು ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಹಲವು ಮಹಿಳೆಯರ ಅಭಿಪ್ರಾಯ.

ಇನ್ನು ಕೌಟುಂಬಿಕವಾಗಿಯೂ ಮಹಿಳೆಯರಿಗೆ ಮೊದಲಿಗಿಂತ ಹೆಚ್ಚಿನ ಬೆಂಬಲ ದೊರೆಯುತ್ತಿದೆ. ಬೆಂಗಳೂರಿನಿಂದ ಸ್ಯಾನ್‌ಫ್ರಾನ್ಸಿಸ್ಕೊಗೆ ಹಾರಿದ ಮೊದಲ ತಡೆರಹಿತ ಮತ್ತು ಮಹಿಳಾ ಸಿಬ್ಬಂದಿಯನ್ನು ಮಾತ್ರವೇ ಹೊಂದಿದ್ದ ವಿಮಾನದ ಪೈಲಟ್‌ ಆಗಿದ್ದ ಜೋಯಾ ಅಗರ್ವಾಲ್‌ ಈ ಬಗ್ಗೆ ತಮ್ಮ ಅಭಿಪ್ರಾಯ ಹೇಳಿಕೊಳ್ಳುವುದು ಹೀಗೆ- ʻನಮ್ಮ ಪಾಲಕರಿಂದ ಬೆಂಬಲ ದೊರೆಯುತ್ತಿರುವುದು ರಹಸ್ಯವೇನಲ್ಲ. ಇದರಿಂದ ನನ್ನಂಥ ಮಹಿಳೆಯರು ಐದು ದಿನಗಳ ಕಾಲ ಸ್ಯಾನ್‌ಪ್ರಾನ್ಸಿಸ್ಕೊ ಗೂ ಹೋಗಿ-ಬರಬಹುದು, ಮನೆಯಲ್ಲೇನಾಗುತ್ತಿದೆ ಎಂಬ ಚಿಂತೆಯನ್ನು ಬಿಟ್ಟು. ನಮಗೆ ಆ ಸೌಲಭ್ಯವಿದೆʼ

ಸಾಮಾನ್ಯ ವೈಮಾನಿಕ ಅಪಘಾತಗಳಲ್ಲಿ ಪುರುಷ ಅಥವಾ ಮಹಿಳಾ ಪೈಲಟ್‌ಗಳಿದ್ದರೆ ಆಗುವ ವ್ಯತ್ಯಾಸದ ಬಗ್ಗೆ ಅಧ್ಯಯನವೊಂದನ್ನು ನಡೆಸಲಾಗಿತ್ತು. ೧೯೮೩ರಿಂದ ೧೯೯೭ವರೆಗಿನ ವಿಮಾನ ಮತ್ತು ಹೆಲಿಕಾಪ್ಟರ್‌ ಅಪಘಾತಗಳ ಅಧ್ಯಯನ ನಡೆಸಿದಾಗ, ಪುರುಷ ಚಾಲಕರಿಗಿಂತ ಮಹಿಳಾ ಚಾಲಕರು ಹೆಚ್ಚು ಜಾಗರೂಕತೆಯಿಂದ ಕಾರ್ಯನಿರ್ವಹಿಸುವುದು ಸಾಬೀತಾಗಿದೆ.

ಇದನ್ನೂ ಓದಿ: ಎನ್‌ಸಿಸಿಯಿಂದ ಸೂಪರ್ ಮಾಡೆಲ್‌, ನೃತ್ಯದಿಂದ ಕನ್ನಡ ಹೀರೋಯಿನ್:‌ ಇದು ಆಶಾ ಭಟ್‌ ಲೈಫ್‌ ಸ್ಟೋರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

Covishield Vaccine: ಕೊರೊನಾ ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮವನ್ನು ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಎಂದು ಹೇಳಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

VISTARANEWS.COM


on

Covishield Vaccine
Koo

ನವದೆಹಲಿ: ಕೊರೊನಾ (Covid 19) ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟು ಮಾಡಬಹುದು ಎಂದು ಲಸಿಕೆ ತಯಾರಕರು ಇಂಗ್ಲೆಂಡ್‌ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ನಂತರ ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಇರಬಹುದು ಎಂಬ ಅನುಮಾನ ಕಾಡಿದ್ದು, ಅದಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

ವೇಣುಗೋಪಾಲನ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 2021ರಲ್ಲಿ ಇವರ ಪುತ್ರಿ 20 ವರ್ಷದ ಕಾರುಣ್ಯ ಕೋವಿಶೀಲ್ಡ್ ಪಡೆದ ಬಳಿಕ ಸಾವನ್ನಪ್ಪಿದ್ದರು. ಆಸ್ಟ್ರಾಜೆನಿಕಾ ಸಂಸ್ಥೆ ಬಹಳ ತಡವಾಗಿ ಅಂದರೆ ಹಲವರು ಜೀವ ಕಳೆದುಕೊಂಡ ನಂತರ ತನ್ನ ಲಸಿಕೆಯ ಲೋಪದೋಷಗಳನ್ನು ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿ ದೇಶದಲ್ಲಿ ವ್ಯಾಪಕವಾಗಿ ಹಂಚಿತ್ತು.

ರಕ್ತ ಹೆಪ್ಪುಗಟ್ಟುವಿಕೆಯ ಕಾರಣ ನೀಡಿ 15 ಯುರೋಪಿಯನ್ ದೇಶಗಳು ಕೋವಿಶೀಲ್ಡ್‌ ಬಳಕೆಗೆ ನಿಷೇಧ ಹೇರಿದ ಬಳಿಕವಾದರೂ ಸೆರಂ ಇನ್‌ಸ್ಟಿಟ್ಯೂಟ್‌ ಈ ಲಸಿಕೆಯ ಪೂರೈಕೆಯನ್ನು ಸ್ಥಗಿತಗೊಳಿಸಬೇಕಿತ್ತು. ಆದರೆ ಇದರಿಂದ ತೊಂದರೆಗೊಳಗಾಗಿ ತಮ್ಮವರನ್ನು ಕಳೆದುಕೊಂಡ ಅನೇಕ ಪೋಷಕರು ನ್ಯಾಯಾಲಯಗಳಲ್ಲಿ ಹೋರಾಟ ಮಾಡಿದ್ದರೂ ನ್ಯಾಯ ಸಿಕ್ಕಿಲ್ಲ ಎಂದು ವೇಣುಗೋಪಾಲನ್ ಹೇಳಿದ್ದಾರೆ. ಈಗಾಗಲೇ ಈ ಲಸಿಕೆಯಿಂದ ಜೀವ ಕಳೆದುಕೊಂಡ ಸಂತ್ರಸ್ತರ 8 ಕುಟುಂಬಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.

ಸೆರಮ್ ಇಸ್ಟಿಟ್ಯೂಟ್‌ನ ಪೂನಾವಾಲಾ ಅವರು ತಾವು ಮಾಡಿದ ಪಾಪಗಳಿಗೆ ಉತ್ತರ ನೀಡಬೇಕು. ಅವರ ತಪ್ಪಿನಿಂದ ಬಲಿಯಾದ ಜೀವಗಳಿಗೆ ಉತ್ತರ ನೀಡಬೇಕು ಎಂದು ಗೋವಿಂದನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಈ ಲಸಿಕೆಗೆ ಅನುಮೋದನೆ ನೀಡಿದ ಸರ್ಕಾರಿ ಅಧಿಕಾರಿಗಳ ಬಗ್ಗೆಯೂ ಅವರು ಕಿಡಿ ಕಾರಿದ್ದಾರೆ. ಹಾಗೆಯೇ 2021ರಲ್ಲಿ ರಚನಾ ಗಂಗು ಎಂಬವರು ಕೂಡ ತಮ್ಮ 18 ವರ್ಷದ ಮಗಳು ರಿತೈಕಾಳನ್ನು ಕಳೆದು ಕೊಂಡಿದ್ದು, ಇದಕ್ಕೂ ಕೋವಿಶೀಲ್ಡ್‌ ಕಾರಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಈ ಹಿಂದೆಯೂ ಅನುಮಾನ ಮೂಡಿಸಿದ್ದವು. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಂಸ್ಥೆಯು ಈ ವಿವಾದದ ಕುರಿತು ಇನ್ನೂ ಹೇಳಿಕೆ ನೀಡಿಲ್ಲ.

Continue Reading

ಕ್ರೀಡೆ

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

ICC Women’s T20 World Cup: ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ(ICC Women’s T20 World Cup) ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡ ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

VISTARANEWS.COM


on

ICC Women's T20 World Cup
Koo

ದುಬೈ: ಒಂಬತ್ತನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ(ICC Women’s T20 World Cup) ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡ ಹಾಲಿ ಚಾಂಪಿಯನ್​ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​ ಮತ್ತು ಪಾಕಿಸ್ತಾನ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ವರ್ಷದ ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ಟೂರ್ನಿ ನಡೆಯಲಿದೆ. ಸಿಲ್ಹೆಟ್‌ನಲ್ಲಿ ತಮ್ಮ ಎಲ್ಲಾ ಗುಂಪು ಪಂದ್ಯಗಳು ನಡೆಯಲಿದ್ದು, ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ವನಿತೆಯರು ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದ್ದಾರೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ. ಒಂದು ಪಂದ್ಯ ಕ್ವಾಲಿಫೈಯರ್​ನಲ್ಲಿ ಗೆದ್ದು ಬಂದ ತಂಡದ ವಿರುದ್ಧ ಆಡಲಿದೆ. ಆತಿಥೇಯ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

ಟೂರ್ನಮೆಂಟ್‌ನಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದೆ. ಸೆಮಿಫೈನಲ್​ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಫೈನಲ್​ ಪಂದ್ಯ ಅಕ್ಟೋಬರ್​ 20 ರಂದು ಢಾಕಾದಲ್ಲಿ ನಡೆಯಲಿದೆ ಎಂದು ಐಸಿಸಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಅರ್ಹತಾ ಸುತ್ತಿನಲ್ಲಿ ಫೈನಲ್​ ಪ್ರವೇಶಿಸಿದ 2 ತಂಡಗಳು ಪ್ರಧಾನ ಸುತ್ತಿನಲ್ಲಿ ಆಡಲಿದೆ.

ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳನ್ನು ಆಡಲಾಗುತ್ತದೆ. 19 ದಿನ ಪಂದ್ಯಾವಳಿ ಸಾಗಲಿದೆ. ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಲೀಗ್​ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ.

Continue Reading

ರಾಜಕೀಯ

Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

Prajwal Revanna Case: ಎಚ್‌.ಡಿ. ರೇವಣ್ಣ ಅವರ ಬಂಧನ ಕ್ರಮ ಸರಿಯಾಗಿಯೇ ಇದೆ. ಪೊಲೀಸರು ಅವರ ಕೆಲಸವನ್ನು ಮಾಡುತ್ತಿದ್ದಾರೆ. ರೇವಣ್ಣ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು. ಈಗಾಗಲೇ ಈ ಬಗ್ಗೆ ಮಾಜಿ ಸಿಎಂ, ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೂ ಹೇಳಿದ್ದಾರೆ. ಇದು ತಮ್ಮ ಕುಟುಂಬ ಹಾಗೂ ಜೆಡಿಎಸ್‌ ಪಕ್ಷದ ವಿಚಾರವಾಗಿದೆ. ಇದಕ್ಕೂ ಬಿಜೆಪಿಗೂ ಸಂಬಂಧ ಇಲ್ಲ ಅಂತ ಹೇಳಿದ್ದಾರೆ ಎಂದು ಆರ್‌. ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Prajwal Revanna Case HD Revanna arrest is correct says R Ashok
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಮಾಜಿ ಸಚಿವ ಎಚ್.‌ಡಿ. ರೇವಣ್ಣ ಅವರ ಬಂಧನ ಕ್ರಮ ಸರಿ ಇದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.‌ ಅಶೋಕ್‌, ಎಚ್‌.ಡಿ. ರೇವಣ್ಣ ಅವರ ಬಂಧನ ಕ್ರಮ ಸರಿಯಾಗಿಯೇ ಇದೆ. ಪೊಲೀಸರು ಅವರ ಕೆಲಸವನ್ನು ಮಾಡುತ್ತಿದ್ದಾರೆ. ರೇವಣ್ಣ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು. ಈಗಾಗಲೇ ಈ ಬಗ್ಗೆ ಮಾಜಿ ಸಿಎಂ, ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೂ ಹೇಳಿದ್ದಾರೆ. ಇದು ತಮ್ಮ ಕುಟುಂಬ ಹಾಗೂ ಜೆಡಿಎಸ್‌ ಪಕ್ಷದ ವಿಚಾರವಾಗಿದೆ. ಇದಕ್ಕೂ ಬಿಜೆಪಿಗೂ ಸಂಬಂಧ ಇಲ್ಲ ಅಂತ ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಪ್ರಜ್ವಲ್‌ ರೇವಣ್ಣ ಪಾತಾಳದಲ್ಲಿದ್ದರೂ ಹುಡುಕಿಕೊಂಡು ತರುತ್ತೇವೆ ಎಂದು ಸಚಿವ ಎಂ.ಬಿ. ಪಾಟೀಲ್‌ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ಪ್ರಜ್ವಲ್‌ ರೇವಣ್ಣ ಭೂಮಿ ಮೇಲೆ ಇದ್ದಾಗಲೇ ವಿದೇಶಕ್ಕೆ ಹೋಗಲು ಇವರು ಬಿಟ್ಟಿದ್ದಾರೆ. ಇನ್ನು ಪಾತಾಳಕ್ಕೆ ಹೋಗಬೇಕಾದರೆ ಸಬ್ ಮೆರಿನ್‌ನಲ್ಲಿ ಹೋಗಬೇಕು ಎಂದು ವ್ಯಂಗ್ಯವಾಡಿದರು.

ರಾಜ್ಯ ಇಂಟೆಲಿಜೆನ್ಸ್‌ ವಿಫಲ

ಪ್ರಜ್ವಲ್‌ ರೇವಣ್ಣ ಅವರು ಡಿಪ್ಲೊಮ್ಯಾಟಿಕ್ ವೀಸಾ ಮೇಲೆ ವಿದೇಶಕ್ಕೆ ಹೋಗಿದ್ದಾರೆ. ಆದರೆ, ಈಗ ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್‌ನವರು ಬೊಟ್ಟು ಮಾಡುತ್ತಿದ್ದಾರೆ. ಡಿಪ್ಲೊಮ್ಯಾಟಿಕ್ ವೀಸಾವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೊಡುವುದಿಲ್ಲ. ಇನ್ನು ನಮ್ಮ ರಾಜ್ಯ ಸರ್ಕಾರದ ಇಂಟಲಿಜೆನ್ಸ್ ಈ ಪ್ರಕರಣದಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಇಲ್ಲಿಂದ ವರದಿ ನೀಡಿದ್ದರೆ ಏರ್‌ಪೋರ್ಟ್‌ನಲ್ಲಿಯೇ ತಡೆಯುತ್ತಿದ್ದರು ಎಂದು ರಾಜ್ಯ ಸರ್ಕಾರದ ವಿರುದ್ಧ ಆರ್.‌ ಅಶೋಕ್‌ ಗುಡುಗಿದರು. ‌

ಅಮಿತ್‌ ಶಾ – ಎಚ್‌ಡಿಕೆ ಮಧ್ಯೆ ಮಾತುಕತೆ

ಬಿಜೆಪಿ – ಜೆಡಿಎಸ್‌ ಮೈತ್ರಿಯು ಹೈಕಮಾಂಡ್ ಮಟ್ಟದಲ್ಲಿ ಹೊಂದಾಣಿಕೆ ಆಗಿದೆ. ಅವರೇ ನಿರ್ಧಾರ ತೆಗೆದುಕೊಳ್ಳಬೇಕು. ಅವರ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ (ಶನಿವಾರ – ಮೇ 4) ರಾತ್ರಿ ಮಾತನಾಡಿದ್ದಾರೆ. ಅವರು ಏನು ಮಾತನಾಡಿದ್ದಾರೆ ಎಂಬ ಮಾಹಿತಿ ನನಗೆ ಇಲ್ಲ ಎಂದು ಆರ್.‌ ಅಶೋಕ್ ಹೇಳಿದರು.

ಕಪಾಳಕ್ಕೆ ಹೊಡೆಯುವುದು ಡಿಕೆಶಿ ಸ್ಟೈಲ್

ಕಾಂಗ್ರೆಸ್‌ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಕಪಾಳಮೋಕ್ಷ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ಅದು ಅವರ ಸ್ಟೈಲ್. ಇದು ಮೊದಲ ಬಾರಿ ಏನಲ್ಲ. ಅನೇಕ ಬಾರಿ ಕಾರ್ಯಕರ್ತರಿಗೆ ಹೀಗೆ ಹೊಡೆದಿದ್ದಾರೆ ಎಂದು ಹೇಳಿದರು.

ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಪ್ರಜ್ವಲ್‌ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚನೆ ಮಾಡಿದ್ದಾರೆ. ಅವರು ಅತ್ಯಾಚಾರಿ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಈಗ ಬಿಜೆಪಿ ತಿರುಗೇಟು ನೀಡಿದೆ. ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಈ ಬಗ್ಗೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ಪರ ಸಿದ್ದರಾಮಯ್ಯ ಮತಯಾಚನೆ ಮಾಡಿದ್ದಾರೆ. ಈಗ ಇದಕ್ಕೆ ಸಿಎಂ ಉತ್ತರ ಕೊಡಲಿ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.‌ ಅಶೋಕ್‌, 2019ರ ಚುನಾವಣೆ ವೇಳೆ ಸಿದ್ದರಾಮಯ್ಯ ಅವರ ಭಾಷಣದ ವಿಡಿಯೊವನ್ನು ಪ್ಲೇ ಮಾಡಿದ್ದಾರೆ. 2019ರ ಏಪ್ರಿಲ್ 17ರಂದು ಕಡೂರಿನ ಎಪಿಎಂಸಿಯಲ್ಲಿ ಸ್ವತಃ ಪ್ರಜ್ವಲ್ ರೇವಣ್ಣ ಅವರನ್ನು ಸಿದ್ದರಾಮಯ್ಯ ಪಕ್ಕದಲ್ಲಿ ಕೂರಿಸಿಕೊಂಡು ಪ್ರಚಾರ ಮಾಡಿದ್ದರು.

ಪ್ರಜ್ವಲ್‌ ರೇವಣ್ಣ ಯಂಗ್ ಸ್ಟಾರ್‌ ಇದ್ದಾನೆ. ಪ್ರತಿಭಾವಂತ ಇದ್ದಾನೆ. ಹಾಗಾಗಿ ನಮ್ಮ ಮೈತ್ರಿ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ ಗೆಲ್ಲಿಸಿಕೊಡಿ. ಹಾಸನದ ಅಭಿವೃದ್ಧಿಗೆ ಕೆಲಸ‌ ಮಾಡುತ್ತೇವೆ. ಕಾಂಗ್ರೆಸ್, ಜೆಡಿಎಸ್‌ ಪಕ್ಷಕ್ಕೆ ಶಕ್ತಿ ನೀಡಿ, ತೆನೆ ಹೊತ್ತ ಮಹಿಳೆಗೆ ಮತ ನೀಡಿ ಅಂತ ಮನವಿ ಮಾಡಿ (17-4-2019ರಲ್ಲಿ) ಟ್ವೀಟ್ ಮಾಡಿದ್ದರು. ನಾನು ಹೇಳಿದರೆ ಸುಳ್ಳು ಎಂದು ಹೇಳುತ್ತಾರೆ. ಇಲ್ಲಿ ನೋಡಿ ಅವರದ್ದೇ ಟ್ವೀಟ್ ಇದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಪ್ರದರ್ಶನ ಮಾಡಿದರು.

ಈಗ ಹೇಳಿ ಸಿದ್ದರಾಮಯ್ಯ ಅವರೇ!

ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಈ ಹಿಂದಿನ ಭಾಷಣವನ್ನು ಸಹ ಮಾಧ್ಯಮದವರ ಮುಂದೆ ಪ್ಲೇ ಮಾಡಿದರು. ಈಗ ದಾಖಲೆ ಬಿಡುಗಡೆ ಮಾಡಿದ್ದೇನೆ. ಈಗ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡಬೇಕು. ಯಂಗ್ ಮತ್ತು ವಿಷನ್ ಲೀಡರ್ ಅಂತ ಹೇಳಿದ್ದೀರಿ. ನಮ್ಮದು ಮುಂದಿನ ಐದು ವರ್ಷಗಳ ವಿಷನ್‌ ಇದೆ. ಪ್ರಜ್ವಲ್‌ ಗೆದ್ದರೆ ಅದನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಿರಲ್ಲವೇ? ಪ್ರಜ್ವಲ್‌ ಅವರನ್ನು ಜೆಡಿಎಸ್‌ನಿಂದ ಈಗಾಗಲೇ ಅಮಾನತು ಮಾಡಲಾಗಿದೆ. ಅವರು ಕಳೆದ ಬಾರಿ ನಮ್ಮ‌ ಹೊಂದಾಣಿಕೆಯಿಂದ ಗೆದ್ದಿಲ್ಲ. ನಿಮ್ಮ ಮೈತ್ರಿ ಅಭ್ಯರ್ಥಿಯಾಗಿ ಗೆದ್ದಿದ್ದಾರೆ ಎಂದು ಕಿಡಿಕಾರಿದರು.

ಎಚ್.ಡಿ. ರೇವಣ್ಣ ಮೊಬೈಲ್‌ ವಶಕ್ಕೆ? ಟೆಕ್ನಿಕಲ್‌ ಎವಿಡೆನ್ಸ್‌ ಕಲೆ ಹಾಕಲು ಮುಂದಾದ ಎಸ್‌ಐಟಿ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ. ಅಲ್ಲದೆ, ಅವರ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿರುವುದರಿಂದ ಎಸ್‌ಐಟಿ ಅಧಿಕಾರಿಗಳು ಸಾಕಷ್ಟು ಮುಂಜಾಗ್ರತೆಯನ್ನು ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧವಾಗಲೀ ಅಥವಾ ಎಸ್‌ಐಟಿ ವಿರುದ್ಧವಾಗಲೀ ಯಾರೂ ಬೊಟ್ಟು ಮಾಡಬಾರದು ಎಂಬ ನಿಟ್ಟಿನಲ್ಲಿ ತನಿಖೆಯ ಜತೆ ಜತಗೆ ಸಾಕ್ಷ್ಯಗಳ ಸಂಗ್ರಹಕ್ಕೂ ಮುಂದಾಗಲಾಗಿದೆ.

ಈ ಸಂಬಂಧ ಈಗ ಎಸ್.ಐ.ಟಿ ಅಧಿಕಾರಿಗಳಿಂದ ಎಚ್.ಡಿ. ರೇವಣ್ಣ ಅವರ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಎಚ್‌.ಡಿ. ರೇವಣ್ಣ ಅವರ ಮೊಬೈಲ್ ಸೀಜ್ ಮಾಡಿ ಡೇಟಾ ಪರಿಶೀಲನೆ ಮಾಡಲಾಗುತ್ತಿದೆ. ರೇವಣ್ಣ ಮೊಬೈಲ್ ಚಾಟಿಂಗ್, ಕಾಲ್ ಸಿಡಿಆರ್ ಪರಿಶೀಲನೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಈಗ ಎಚ್‌.ಡಿ. ರೇವಣ್ಣ ಅವರನ್ನು ಕಿಡ್ನ್ಯಾಪ್‌ ಕೇಸ್ ಅಡಿ ಬಂಧಿಸಿರುವುದರಿಂದ ಟೆಕ್ನಿಕಲ್ ಎವಿಡೆನ್ಸ್ ಅನ್ನು ಸಂಗ್ರಹ ಮಾಡಬೇಕಾಗುತ್ತದೆ. ಹೀಗಾಗಿ ಮೊಬೈಲ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಈ ಮೊಬೈಲ್‌ನಲ್ಲಿ ಡಿಲಿಟ್‌ ಆಗಿರುವ ಡೇಟಾಗಳನ್ನೂ ರಿಟ್ರೀವ್‌ ಮಾಡಿ ಅವುಗಳನ್ನು ಸಾಕ್ಷ್ಯವೆಂದು ಪರಿಗಣಿಸಲು ನಿರ್ಧಾರ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್‌ ಪರಿಶೀಲನೆಯಲ್ಲಿ ಈಗ ಎಸ್‌ಐಟಿ ತಂಡವಿದೆ.

ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್‌ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್‌ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.

ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

Prajwal Revanna Case: ಪ್ರಜ್ವಲ್‌ ರೇವಣ್ಣ ಯಂಗ್ ಸ್ಟಾರ್‌ ಇದ್ದಾನೆ. ಪ್ರತಿಭಾವಂತ ಇದ್ದಾನೆ. ಹಾಗಾಗಿ ನಮ್ಮ ಮೈತ್ರಿ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ ಗೆಲ್ಲಿಸಿಕೊಡಿ. ಹಾಸನದ ಅಭಿವೃದ್ಧಿಗೆ ಕೆಲಸ‌ ಮಾಡುತ್ತೇವೆ. ಕಾಂಗ್ರೆಸ್, ಜೆಡಿಎಸ್‌ ಪಕ್ಷಕ್ಕೆ ಶಕ್ತಿ ನೀಡಿ, ತೆನೆ ಹೊತ್ತ ಮಹಿಳೆಗೆ ಮತ ನೀಡಿ ಅಂತ ಮನವಿ ಮಾಡಿ (17-4-2019ರಲ್ಲಿ) ಟ್ವೀಟ್ ಮಾಡಿದ್ದರು. ನಾನು ಹೇಳಿದರೆ ಸುಳ್ಳು ಎಂದು ಹೇಳುತ್ತಾರೆ. ಇಲ್ಲಿ ನೋಡಿ ಅವರದ್ದೇ ಟ್ವೀಟ್ ಇದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಪ್ರದರ್ಶನ ಮಾಡಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Prajwal Revanna Case Siddaramaiah tweets vote for Prajwal Full class from BJP!
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜಕೀಯವಾಗಿ ಆರೋಪ – ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಪ್ರಜ್ವಲ್‌ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚನೆ ಮಾಡಿದ್ದಾರೆ. ಅವರು ಅತ್ಯಾಚಾರಿ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಈಗ ಬಿಜೆಪಿ ತಿರುಗೇಟು ನೀಡಿದೆ. ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಈ ಬಗ್ಗೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ಪರ ಸಿದ್ದರಾಮಯ್ಯ ಮತಯಾಚನೆ ಮಾಡಿದ್ದಾರೆ. ಈಗ ಇದಕ್ಕೆ ಸಿಎಂ ಉತ್ತರ ಕೊಡಲಿ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.‌ ಅಶೋಕ್‌, 2019ರ ಚುನಾವಣೆ ವೇಳೆ ಸಿದ್ದರಾಮಯ್ಯ ಅವರ ಭಾಷಣದ ವಿಡಿಯೊವನ್ನು ಪ್ಲೇ ಮಾಡಿದ್ದಾರೆ. 2019ರ ಏಪ್ರಿಲ್ 17ರಂದು ಕಡೂರಿನ ಎಪಿಎಂಸಿಯಲ್ಲಿ ಸ್ವತಃ ಪ್ರಜ್ವಲ್ ರೇವಣ್ಣ ಅವರನ್ನು ಸಿದ್ದರಾಮಯ್ಯ ಪಕ್ಕದಲ್ಲಿ ಕೂರಿಸಿಕೊಂಡು ಪ್ರಚಾರ ಮಾಡಿದ್ದರು.

ಪ್ರಜ್ವಲ್‌ ರೇವಣ್ಣ ಯಂಗ್ ಸ್ಟಾರ್‌ ಇದ್ದಾನೆ. ಪ್ರತಿಭಾವಂತ ಇದ್ದಾನೆ. ಹಾಗಾಗಿ ನಮ್ಮ ಮೈತ್ರಿ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ ಗೆಲ್ಲಿಸಿಕೊಡಿ. ಹಾಸನದ ಅಭಿವೃದ್ಧಿಗೆ ಕೆಲಸ‌ ಮಾಡುತ್ತೇವೆ. ಕಾಂಗ್ರೆಸ್, ಜೆಡಿಎಸ್‌ ಪಕ್ಷಕ್ಕೆ ಶಕ್ತಿ ನೀಡಿ, ತೆನೆ ಹೊತ್ತ ಮಹಿಳೆಗೆ ಮತ ನೀಡಿ ಅಂತ ಮನವಿ ಮಾಡಿ (17-4-2019ರಲ್ಲಿ) ಟ್ವೀಟ್ ಮಾಡಿದ್ದರು. ನಾನು ಹೇಳಿದರೆ ಸುಳ್ಳು ಎಂದು ಹೇಳುತ್ತಾರೆ. ಇಲ್ಲಿ ನೋಡಿ ಅವರದ್ದೇ ಟ್ವೀಟ್ ಇದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಪ್ರದರ್ಶನ ಮಾಡಿದರು.

ಈಗ ಹೇಳಿ ಸಿದ್ದರಾಮಯ್ಯ ಅವರೇ!

ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಈ ಹಿಂದಿನ ಭಾಷಣವನ್ನು ಸಹ ಮಾಧ್ಯಮದವರ ಮುಂದೆ ಪ್ಲೇ ಮಾಡಿದರು. ಈಗ ದಾಖಲೆ ಬಿಡುಗಡೆ ಮಾಡಿದ್ದೇನೆ. ಈಗ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡಬೇಕು. ಯಂಗ್ ಮತ್ತು ವಿಷನ್ ಲೀಡರ್ ಅಂತ ಹೇಳಿದ್ದೀರಿ. ನಮ್ಮದು ಮುಂದಿನ ಐದು ವರ್ಷಗಳ ವಿಷನ್‌ ಇದೆ. ಪ್ರಜ್ವಲ್‌ ಗೆದ್ದರೆ ಅದನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಿರಲ್ಲವೇ? ಪ್ರಜ್ವಲ್‌ ಅವರನ್ನು ಜೆಡಿಎಸ್‌ನಿಂದ ಈಗಾಗಲೇ ಅಮಾನತು ಮಾಡಲಾಗಿದೆ. ಅವರು ಕಳೆದ ಬಾರಿ ನಮ್ಮ‌ ಹೊಂದಾಣಿಕೆಯಿಂದ ಗೆದ್ದಿಲ್ಲ. ನಿಮ್ಮ ಮೈತ್ರಿ ಅಭ್ಯರ್ಥಿಯಾಗಿ ಗೆದ್ದಿದ್ದಾರೆ ಎಂದು ಕಿಡಿಕಾರಿದರು.

ಎಚ್.ಡಿ. ರೇವಣ್ಣ ಮೊಬೈಲ್‌ ವಶಕ್ಕೆ? ಟೆಕ್ನಿಕಲ್‌ ಎವಿಡೆನ್ಸ್‌ ಕಲೆ ಹಾಕಲು ಮುಂದಾದ ಎಸ್‌ಐಟಿ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ. ಅಲ್ಲದೆ, ಅವರ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿರುವುದರಿಂದ ಎಸ್‌ಐಟಿ ಅಧಿಕಾರಿಗಳು ಸಾಕಷ್ಟು ಮುಂಜಾಗ್ರತೆಯನ್ನು ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧವಾಗಲೀ ಅಥವಾ ಎಸ್‌ಐಟಿ ವಿರುದ್ಧವಾಗಲೀ ಯಾರೂ ಬೊಟ್ಟು ಮಾಡಬಾರದು ಎಂಬ ನಿಟ್ಟಿನಲ್ಲಿ ತನಿಖೆಯ ಜತೆ ಜತಗೆ ಸಾಕ್ಷ್ಯಗಳ ಸಂಗ್ರಹಕ್ಕೂ ಮುಂದಾಗಲಾಗಿದೆ.

ಈ ಸಂಬಂಧ ಈಗ ಎಸ್.ಐ.ಟಿ ಅಧಿಕಾರಿಗಳಿಂದ ಎಚ್.ಡಿ. ರೇವಣ್ಣ ಅವರ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಎಚ್‌.ಡಿ. ರೇವಣ್ಣ ಅವರ ಮೊಬೈಲ್ ಸೀಜ್ ಮಾಡಿ ಡೇಟಾ ಪರಿಶೀಲನೆ ಮಾಡಲಾಗುತ್ತಿದೆ. ರೇವಣ್ಣ ಮೊಬೈಲ್ ಚಾಟಿಂಗ್, ಕಾಲ್ ಸಿಡಿಆರ್ ಪರಿಶೀಲನೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಈಗ ಎಚ್‌.ಡಿ. ರೇವಣ್ಣ ಅವರನ್ನು ಕಿಡ್ನ್ಯಾಪ್‌ ಕೇಸ್ ಅಡಿ ಬಂಧಿಸಿರುವುದರಿಂದ ಟೆಕ್ನಿಕಲ್ ಎವಿಡೆನ್ಸ್ ಅನ್ನು ಸಂಗ್ರಹ ಮಾಡಬೇಕಾಗುತ್ತದೆ. ಹೀಗಾಗಿ ಮೊಬೈಲ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಈ ಮೊಬೈಲ್‌ನಲ್ಲಿ ಡಿಲಿಟ್‌ ಆಗಿರುವ ಡೇಟಾಗಳನ್ನೂ ರಿಟ್ರೀವ್‌ ಮಾಡಿ ಅವುಗಳನ್ನು ಸಾಕ್ಷ್ಯವೆಂದು ಪರಿಗಣಿಸಲು ನಿರ್ಧಾರ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್‌ ಪರಿಶೀಲನೆಯಲ್ಲಿ ಈಗ ಎಸ್‌ಐಟಿ ತಂಡವಿದೆ.

ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್‌ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್‌ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.

ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading
Advertisement
Covishield Vaccine
ದೇಶ3 mins ago

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

ICC Women's T20 World Cup
ಕ್ರೀಡೆ21 mins ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

Pakistan
ವಿದೇಶ41 mins ago

Pakistan: ಪಾಕಿಸ್ತಾನಕ್ಕೂ ಕಾಲಿಟ್ಟ ಯೋಗ; ಅಧಿಕೃತವಾಗಿ ತರಗತಿ ಆರಂಭ

Prajwal Revanna Case HD Revanna arrest is correct says R Ashok
ರಾಜಕೀಯ2 hours ago

Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

Vicky Pedia New reels about heat in Karnataka
ವೈರಲ್ ನ್ಯೂಸ್2 hours ago

Vicky Pedia: ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ: ಫ್ಯಾನ್ಸ್‌ ಫಿದಾ!

Lok Sabha Election 2024
Lok Sabha Election 20242 hours ago

Lok Sabha Election 2024: ಬಿಜೆಪಿಯ ʼಮೊಟ್ಟೆʼ ವಿಡಿಯೊ ವಿರುದ್ಧ ಕಾಂಗ್ರೆಸ್‌ ಕೆಂಡಾಮಂಡಲ; ಅಂತಹದ್ದೇನಿದೆ?

Prajwal Revanna Case Siddaramaiah tweets vote for Prajwal Full class from BJP!
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

bajrang punia Suspended
ಕ್ರೀಡೆ2 hours ago

Bajrang Punia: ಬಜರಂಗ್​ಗೆ ಅಮಾನತು ಶಿಕ್ಷೆ ವಿಧಿಸಿದ ರಾಷ್ಟ್ರೀಯ ಉದ್ದೀಪನ ನಿಗ್ರಹ ಸಂಸ್ಥೆ; ಪ್ಯಾರಿಸ್ ಒಲಿಂಪಿಕ್ಸ್​ಗೆ ಹಿನ್ನಡೆ

Kannada New Movie Adhipatra audio rights
ಸಿನಿಮಾ2 hours ago

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

assault case
Lok Sabha Election 20242 hours ago

Assault Case : ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌