Amrit Mahotsav | ಪಾಲಿಸ್ಟರ್‌ ರಾಷ್ಟ್ರಧ್ವಜ: ಖಾದಿ ನೇಕಾರರ ಕೊರಳಿಗೆ ಸರ್ಕಾರದ ಉರುಳು - Vistara News

ಪ್ರಮುಖ ಸುದ್ದಿ

Amrit Mahotsav | ಪಾಲಿಸ್ಟರ್‌ ರಾಷ್ಟ್ರಧ್ವಜ: ಖಾದಿ ನೇಕಾರರ ಕೊರಳಿಗೆ ಸರ್ಕಾರದ ಉರುಳು

Amrit Mahotsav ಸಂದರ್ಭದಲ್ಲಿ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್‌ ಧ್ವಜಗಳಿಗೆ ಅನುಮತಿ ನೀಡಿರುವುದು ಖಾದಿ ಧ್ವಜ ತಯಾರಿಕೆ ಉದ್ಯಮಕ್ಕೆ ಮಾಡಿದ ಅಪಾರ ಹಾನಿ, ಗಾಂಧಿ ಆಶಯಗಳಿಗೆ ಮಾಡಿದ ಧಕ್ಕೆ ಎನ್ನುತ್ತಾರೆ ಡಾ.ಎಸ್‌. ಬಿ. ಬಸೆಟ್ಟಿ.

VISTARANEWS.COM


on

Amrit Mahotsav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
  • ಡಾ. ಎಸ್. ಬಿ. ಬಸೆಟ್ಟಿ
basetti

ಕೇಂದ್ರ ಸರ್ಕಾರವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ( Amrit Mahotsav ) ಧ್ವಜ ಸಂಹಿತೆ- ೨೦೦೨ಕ್ಕೆ ತಿದ್ದುಪಡಿ ತಂದು ಖಾದಿ ಬಟ್ಟೆಯ ಬದಲು ಪಾಲಿಸ್ಟರ್ ಧ್ವಜಗಳಿಗೆ ಅನುಮತಿ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತವಾಗುತ್ತಿದೆ. ಸ್ವಾತಂತ್ರ್ಯ್ಯದ ಅಮೃತ ಮಹೋತ್ಸವ ಆಚರಣೆ ಸಂದರ್ಭದಲ್ಲಿಯೇ ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ಮಾಡುವ ಮೂಲಕ ಗಾಂಧಿ ಆಶಯಗಳಿಗೆ ಧಕ್ಕೆ ತರಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಕಾರ್ಯಕ್ರಮದ ಪರಿಣಾಮ ರಾಷ್ಟ್ರಧ್ವಜ ಖರೀದಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಹಾಗಾಗಿ, ಕೇಂದ್ರ ಸರ್ಕಾರ ಯೋಜನೆಗನುಸಾರ ರಾಷ್ಟ್ರಧ್ವಜಗಳನ್ನು ಪೂರೈಸಲು ಸಾಧ್ಯವಾಗುವಂತೆ ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿರುವುದು ಪ್ರಸ್ತುತ ವಿವಾದಕ್ಕೆ ಕಾರಣವಾಗಿದೆ.

ಸ್ವಾತಂತ್ರ್ಯೋತ್ತರ ೭೫ನೆಯ ವರ್ಷಾಚರಣೆ ನಿಮಿತ್ತ ಆಗಸ್ಟ್ ೧೧ರಿಂದ ೧೭ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಕಾರ್ಯಕ್ರಮವು ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲು ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೂಡಿದೆ. ಬರುವ ಸ್ವಾತಂತ್ರ್ಯೋತ್ಸವದಂದು ಕನಿಷ್ಠ ೨೦ ಕೋಟಿ ರಾಷ್ಟ್ರಧ್ವಜಗಳು ಹಾರಬೇಕೆಂಬ ನಿರೀಕ್ಷೆ ಸರ್ಕಾರದ್ದಾಗಿದೆ. ಭಾರತದ ರಾಷ್ಟ್ರಧ್ವಜ ಸಂಹಿತೆ ೨೦೦೨ರ ಪ್ರಕಾರ ಈ ಮೊದಲ ಕೈಮಗ್ಗ ಮತ್ತು ಕೈಯಿಂದ ನೇಯ್ದ ಖಾದಿ ಬಟ್ಟೆಗಳಿಂದ ಮಾತ್ರ ರಾಷ್ಟ್ರಧ್ವಜಗಳನ್ನು ತಯಾರಿಸಲು ಅನುಮತಿ ಇತ್ತು. ೨೦೨೧ರ ಡಿಸೆಂಬರ್ ೩೦ರಂದು ಈ ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ತರಲಾಯಿತು. ಕೈಮಗ್ಗ ಅಥವಾ ಕೈಯಿಂದ ತಯಾರಿಸಲಾದ ಬಟ್ಟೆಯಿಂದ ಮಾತ್ರವಲ್ಲದೆ ಯಂತ್ರದಿಂದ ತಯಾರಿಸಿದ ಹತ್ತಿ, ಪಾಲಿಯೆಸ್ಟರ್, ಉಣ್ಣೆ, ರೇಷ್ಮೆ, ಖಾದಿ ಬಟ್ಟೆಯಿಂದಲೂ ರಾಷ್ಟ್ರಧ್ವಜವನ್ನು ಮಾಡಬಹುದೆಂದು ಈ ತಿದ್ದುಪಡಿ ಹೇಳುತ್ತದೆ. ಆದರೆ ಈ ತಿದ್ದುಪಡಿಗೆ ಕೆಲವು ವಲಯಗಳಿಂದ ತೀವ್ರ ವಿರೋಧ ಸಹ ವ್ಯಕ್ತವಾಗಿದೆ.

ಭಾರತದ ಸ್ವಾತಂತ್ರ್ಯ್ಯದ ೭೫ನೇ ವರ್ಷವನ್ನು ಆಚರಿಸಲು ಮತ್ತು ‘ಹರ್ ಘರ್ ತಿರಂಗಾ’ (ಪ್ರತಿ ಮನೆಯಲ್ಲಿ ತಿರಂಗಾ) ಅಭಿಯಾನದ ಆರಂಭದ ಪೂರ್ವದಲ್ಲಿ ರಾಷ್ಟ್ರಧ್ವಜ ಸಂಹಿತೆಗೆ ಮಾಡಿದ ಬದಲಾವಣೆಯ ಪರಿಣಾಮವಾಗಿ ತ್ರಿವರ್ಣ ಧ್ವಜದ ವೆಚ್ಚವು ಕಡಿಮೆಯಾಗಬಹುದು ಎಂದು ಸರ್ಕಾರ ನಿರೀಕ್ಷಿಸುತ್ತದೆ. ಜನರು ರಾಷ್ಟ್ರಧ್ವಜವನ್ನು ಖರೀದಿಸುವುದರಿಂದ ಅವರಲ್ಲಿ ರಾಷ್ಟ್ರಾಭಿಮಾನ ಮೂಡುತ್ತದೆ ಎಂದು ಸರ್ಕಾರ ಹೇಳಿದೆ. ಇದೊಂದು ಕಾರ್ಯಕ್ರಮ ಪ್ರಸ್ತುತ ಶುಭ ಸಂದರ್ಭವನ್ನು ಸ್ಮರಣೀಯಗೊಳಿಸಲಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಇಂಥ ಸಂದರ್ಭದಲ್ಲಿ ರಾಷ್ಟ್ರಧ್ವಜಗಳಿಗೆ ಬೇಡಿಕೆ ಹೆಚ್ಚುವದು ಮಾತ್ರವಲ್ಲದೇ ಅದು ಬೆಲೆ ಏರಿಕೆಗೆ ಕೂಡ ಕಾರಣವಾಗಬಹುದು. ಈ ಎಲ್ಲ ಕಾರಣಗಳಿಗಿಯೇ ಬಹುಶಃ ಪಾಲಿಯೆಸ್ಟರ್ ರಾಷ್ಟ್ರಧ್ವಜ ಬಳಕೆಗೂ ಕೇಂದ್ರ ಅನುಮತಿ ನೀಡಿದೆ. ರಾಷ್ಟ್ರಧ್ವಜಗಳನ್ನು ಉಚಿತವಾಗಿ ವಿತರಿಸುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸದ ಕೇಂದ್ರ ಸರ್ಕಾರ ರಾಷ್ಟ್ರಧ್ವಜಗಳನ್ನು ಖರೀದಿಸಲು ಕೆಲವೇ ಕೌಂಟರ್‌ಗಳನ್ನು ಮಾತ್ರ ನಿಗದಿಪಡಿಸಿದೆ.

ಭಾರತದ ಧ್ವಜ ಸಂಹಿತೆ

ರಾಷ್ಟ್ರಧ್ವಜ ಸಂಹಿತೆಯು ಭಾರತದ ರಾಷ್ಟ್ರಧ್ವಜದ ಪ್ರದರ್ಶನಕ್ಕೆ ಅನ್ವಯವಾಗುವ ಕಾನೂನುಗಳು, ಆಚರಣೆಗಳು ಮತ್ತು ಸಂಪ್ರದಾಯಗಳ ಒಂದು ವಿವರಣೆ. ರಾಷ್ಟ್ರಧ್ವಜದ ಪ್ರದರ್ಶನವನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯಿದೆ, ೧೯೫೦(೧೯೫೦ ರ ನಂ. ೧೨) ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ ಕಾಯಿದೆ, ೧೯೭೧(ನಂ. ೬೯ರ ನಿಬಂಧನೆಗಳು, ೧೯೭೧), ಭಾರತದ ಧ್ವಜ ಸಂಹಿತೆ, ೨೦೦೨ ಮುಂತಾದ ಕಾನೂನುಗಳು, ಆಚರಣೆಗಳು ಮತ್ತು ಸೂಚನೆಗಳ ಮೂಲಕ ನಿಯಂತ್ರಿಸಲಾಗಿತ್ತು.

ಈ ಧ್ವಜ ಸಂಹಿತೆಯನ್ನು ಮೂರು ಭಾಗವಾಗಿ ವಿಂಗಡಿಸಲಾಗಿದೆ.
• ಮೊದಲ ಭಾಗದಲ್ಲಿ: ರಾಷ್ಟ್ರಧ್ವಜದ ಸಾಮಾನ್ಯ ವಿವರಣೆ.
• ಎರಡನೆ ಭಾಗದಲ್ಲಿ: ಸಾರ್ವಜನಿಕ, ಖಾಸಗಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಇತ್ಯಾದಿಗಳಿಂದ ರಾಷ್ಟ್ರಧ್ವಜದ ಹಾರಾಟ.
• ಮೂರನೇ ಭಾಗದಲ್ಲಿ: ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಮತ್ತು ಅದರ ಸಂಸ್ಥೆಗಳು ಮತ್ತು ಏಜೆನ್ಸಿಗಳಿಂದ ರಾಷ್ಟ್ರಧ್ವಜದ ಪ್ರದರ್ಶನ.

ಭಾರತದ ರಾಷ್ಟ್ರಧ್ವಜದ ಘನತೆ ಮತ್ತು ಗೌರವವನ್ನು ಕಾಪಾಡಲು ಈ ಸಂಹಿತೆಗಳನ್ನು ರೂಪಿಸಲಾಗಿದೆ. ಸೂರ್ಯಾಸ್ತದ ಬಳಿಕ, ರಾತ್ರಿ ಹೊತಿನಲ್ಲಿ ರಾಷ್ಟ್ರಧ್ವಜ ಹಾರಾಟ ನಿರ್ಬಂಧಿಸಲಾಗಿದೆ. ಜತೆಗೆ, ಹರಿದ ಮತ್ತು ವಿಕೃತಗೊಂಡ ರಾಷ್ಟ್ರಧ್ವಜ ಬಳಕೆಗೆ ಅವಕಾಶ ಇಲ್ಲ. ಆದರೆ, ಸಾರ್ವಜನಿಕ, ಖಾಸಗಿ ಸಂಸ್ಥೆಗಳು ಮತ್ತು ಕಟ್ಟಡಗಳ ಮೇಲೆ ಹಗಲು ಮತ್ತು ರಾತ್ರಿ ರಾಷ್ಟ್ರಧ್ವಜ ಹಾರಾಟಕ್ಕೆ ಕೇಂದ್ರ ಸರಕಾರದ ಗೃಹ ಸಚಿವಾಲಯ ೨೦೦೯ರಲ್ಲಿ ಒಪ್ಪಿಗೆ ನೀಡಿದೆ. ಭಾರತದ ರಾಷ್ಟ್ರಧ್ವಜದ ಘನತೆ ಮತ್ತು ಗೌರವಕ್ಕೆ ಚ್ಯುತಿ ಬಾರದಂತೆ ಸಾರ್ವಜನಿಕ, ಖಾಸಗಿ ಸಂಸ್ಥೆಗಳು ಅಥವಾ ಶಿಕ್ಷಣ ಸಂಸ್ಥೆಗಳು ಎಲ್ಲ ದಿನಗಳಲ್ಲಿ, ವಿಶೇಷ ಸಂದರ್ಭಗಳಲ್ಲಿ, ಉದ್ಘಾಟನೆ ಸಂದರ್ಭದಲ್ಲಿ ಅಥವಾ ನಿರಂತರವಾಗಿ ರಾಷ್ಟ್ರಧ್ವಜಾರೋಹಣ ಮಾಡಬಹುದು. ಧ್ವಜಾರೋಹಣಕ್ಕೆ ಪ್ರೇರಣೆ ನೀಡುವುದಕ್ಕಾಗಿ ತ್ರಿವರ್ಣ ಧ್ವಜ ಆರೋಹಣಕ್ಕೆ ಶಾಲೆ, ಕಾಲೇಜು, ಕ್ರೀಡಾ ಅವರಣ ಹಾಗೂ ಸ್ಕೌಟ್ ಕ್ಯಾಂಪಸ್‌ಗಳಲ್ಲಿ ಸಂಹಿತೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

೧೯೫೦ ಹಾಗೂ ೧೯೭೧ರಲ್ಲಿ ತಂದ ಕೆಲ ತಿದ್ದುಪಡಿಗಳಿಗನುಸಾರ ರಾಷ್ಟ್ರ ಗೌರವಕ್ಕೆ ಅವಮಾನ ತಪ್ಪಿಸುವ ಉದ್ದೇಶದಿಂದ ಕೆಲ ನಿರ್ಬಂಧಗಳನ್ನು ಹೇರಲಾಗಿದೆ. ತ್ರಿವರ್ಣ ಧ್ವಜವನ್ನು ಯಾವುದೇ ವಾಣಿಜ್ಯ ಉದ್ದೇಶಕ್ಕಾಗಿ ಬಳಸುವಂತಿಲ್ಲ. ಹರಿದ ಅಥವಾ ಹೊಲಸಾದ ಧ್ವಜವನ್ನು ಉಪಯೋಗಿಸುವಂತಿಲ್ಲ. ಹಾಗೆಯೇ ತ್ರಿವರ್ಣ ಧ್ವಜವನ್ನು ಇತರ ಧ್ವಜಗಳೊಂದಿಗೆ ಏಕಕಾಲದಲ್ಲಿ ಹಾರಿಸುವಂತಿಲ್ಲ. ತ್ರಿವರ್ಣ ಧ್ವಜದ ಪಕ್ಕದಲ್ಲಿ ಒಂದೇ ಎತ್ತರದಲ್ಲಿ ಇನ್ನಿತರ ಯಾವುದೇ ವಸ್ತುಗಳು ಇರಬಾರದು. ಧ್ವಜವನ್ನು ಯಾವುದೇ ಉತ್ಸವಕ್ಕಾಗಿ ಅಥವಾ ಅಲಂಕಾರಕ್ಕಾಗಿ ಬಳಸುವಂತಿಲ್ಲ.

ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ, ಕ್ರೀಡಾಕೂಟಗಳೇ ಮುಂತಾದ ಸಂದಭಗಳಲ್ಲಿ ಪ್ಲಾಸ್ಟಿಕ್, ಪೇಪರ್ ತ್ರಿವರ್ಣ ಧ್ವಜಗಳನ್ನು ಹೇಗೆಂದರೆ ಹಾಗೆ ಬಿಸಾಡುವಂತಿಲ್ಲ. ಅಂಥ ಧ್ವಜಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಅದಿಕೃತ ಧ್ವಜಪ್ರದರ್ಶನಕ್ಕಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ ನಿಗದಿಪಡಿಸಿದ ನಿಯಮಗಳಿಗೆ ಅನುಗುಣವಾಗಿರುವ ಮತ್ತು ಅವುಗಳ ಗುರುತು ಹೊಂದಿರುವ ಧ್ವಜಗಳನ್ನು ಮಾತ್ರ ಬಳಸಬಹುದು. ೨೦೦೨ರ ಭಾರತ ಧ್ವಜ ಸಂಹಿತೆಯ ಕೆಲ ಸೆಕ್ಷನ್ಗಳ ಅನುಸಾರ ರಾಷ್ಟ್ರಧ್ವಜದಲ್ಲಿ ಕೇಸರಿ, ಬಿಳಿ ಮತ್ತು ಹಸಿರು ವರ್ಣಗಳು ಹಾಗೂ ಅಶೋಕ ಚಕ್ರ ಹೊರತು ಬೇರೆ ಯಾವುದೇ ಬರಹವಿರಬಾರದು. ಹಾಗೆ ಬರೆದರೆ ಅದು ಅಪಮಾನವಾಗುತ್ತದೆ, ಅಲ್ಲದೇ ರಾಷ್ಟ್ರಧ್ವಜವನ್ನು ವಿರೂಪಗೊಳಿಸುವುದು, ಸುಡುವದು, ಹರಿದು ಹಾಕುವದು ಸೇರಿದಂತೆ ಯಾವುದೇ ರೂಪದಲ್ಲಿ ಅವಮಾನಗೊಳಿಸಿದರೆ ೨೦೦೩ ‘ಪ್ರಿವೆನ್ಷನ್ ಆಫ್ ಇನ್‌ಸಲ್ಟ್ ಟು ನ್ಯಾಷನಲ್ ಆನರ್ ಆಕ್ಟ್’ ಅನುಸಾರ ಮೂರು ವರ್ಷ ಜೈಲು ಶಿಕ್ಷೆಗೂ ಅವಕಾಶವಿದೆ.

flag

ಧ್ವಜ ಸಂಹಿತೆಗೆ ತಿದ್ದುಪಡಿ ಸರಿಯೇ?

ಕೇಂದ್ರ ಸರ್ಕಾರ ತನ್ನ ಅಭಿಯಾನದ ಉದ್ದೇಶಕ್ಕೆ ಪೂರಕವಾಗಿ ರಾಷ್ಟ್ರಧ್ವಜ ಸಂಹಿತೆಯ ನಿಯಮಗಳನ್ನು ಬದಲಿಸಿರುವುದು ಸರಿಯೇ ಎಂಬ ಪ್ರಶ್ನೆ ಎದ್ದಿದೆ. ಭಾರತದ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ನಿಯಮಗಳನ್ನು ಆಗಾಗ ಬದಲಿಸಿರುವುದರಿಂದ ಅದಕ್ಕಿರುವ ಗೌರವ ಮತ್ತು ಘನತೆಯನ್ನು ತಗ್ಗಿಸಲಾಗಿದೆ ಎಂಬ ಆರೋಪ ವ್ಯಾಪಕವಾಗಿದೆ. ಕೇಂದ್ರ ಸರ್ಕಾರವು ತಾನು ಹಮ್ಮಿಕೊಂಡಿರುವ ಅಭಿಯಾನದ ಕುರಿತು ಸಾಕಷ್ಟು ಮೊದಲೇ ಘೋಷಣೆ ಮಾಡಿದ್ದರೆ ಧ್ವಜ ಉತ್ಪಾದಿಸುವ ಖಾದಿ ಕೇಂದ್ರಗಳು ಬೇಡಿಕೆಗೆ ತಕ್ಕಷ್ಟು ಉತ್ಪಾದಿಸಲು ಸಾಧ್ಯವಾಗುತ್ತಿತ್ತು. ಕೇಂದ್ರ ಸರ್ಕಾರದ ಮುಂದಾಲೋಚನೆಯ ಕೊರತೆಯಿಂದಾಗಿ ಮತ್ತು ಎಂಥದೇ ಪರಿಸ್ಥಿತಿಯಲ್ಲಿ ತನ್ನ ಅಭಿಯಾನವನ್ನು ಯಶಸ್ವಿಗೊಳಿಸುವುದಕ್ಕಾಗಿ ರಾಷ್ಟ್ರಧ್ವಜ ಸಂಹಿತೆಯ ನಿಯಮಗಳನ್ನು ಬದಲಿಸಿ ಪಾಲಿಯೆಸ್ಟರ್ ರಾಷ್ಟ್ರಧ್ವಜಗಳ ಬಳಕೆಗೆ ಅವಕಾಶ ನೀಡಿರುವುದು ಸರಿಯಲ್ಲ ಎಂಬ ವಾದ ಬಲವತ್ತರವಾಗಿದೆ. ಸಾಕಷ್ಟು ಕಠಿಣ ನಿಯಮಗಳಿದ್ದಾಗ್ಯೂ, ರಾಷ್ಟ್ರಧ್ವಜದ ಘನತೆಯನ್ನು ಕುಂದಿಸುವಂಥ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಹಾಗಿರುವಾಗ ನಿಯಮಗಳನ್ನು ಸಡಿಲ ಮಾಡಿದ್ದರಿಂದ ಅಸಮರ್ಪಕ ಬಳಕೆಗೆ ರಹದಾರಿ ಮಾಡಿಕೊಟ್ಟಂತಾಗಿದೆ.

ಪಾಲಿಸ್ಟರ್ ಧ್ವಜಕ್ಕೆ ಜಿಎಸ್‌ಟಿ ಇಲ್ಲ

ಪಾಲಿಸ್ಟರ್‌ನಿಂದ ತಯಾರಿಸಿದ ರಾಷ್ಟ್ರಧ್ವಜ ಮಾರಾಟದ ಮೇಲೆ ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆಯಿಂದ ವಿನಾಯಿತಿ ನೀಡಿದೆ. ಹತ್ತಿ, ರೇಷ್ಮೆ, ಉಣ್ಣೆ ಅಥವಾ ಖಾದಿಯಿಂದ ತಯಾರಾದ ರಾಷ್ಟ್ರಧ್ವಜಗಳು ಈಗಾಗಲೇ ತೆರಿಗೆಗಳ ವ್ಯಾಪ್ತಿಯಿಂದ ಹೊರಗಿದ್ದವು. ಡಿಸೆಂಬರ್ ೨೦೨೧ರಲ್ಲಿ ಮಾಡಲಾದ ತಿದ್ದುಪಡಿಗಳನ್ನು ಒಳಗೊಂಡಂತೆ ಧ್ವಜ ಸಂಹಿತೆ ೨೦೦೨ರಡಿಯಲ್ಲಿ ಭಾರತೀಯ ರಾಷ್ಟ್ರೀಯ ಧ್ವಜಕ್ಕೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗುತ್ತದೆ ಎಂದು ಹಣಕಾಸು ಸಚಿವಾಲಯದ ಕಂದಾಯ ಇಲಾಖೆ ಶುಕ್ರವಾರ ಜ್ಞಾಪಕ ಪತ್ರದಲ್ಲಿ ತಿಳಿಸಿದೆ. ಇದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಟ್ವೀಟರ್ ಪೋಸ್ಟ್‌ಗೆ ಜ್ಞಾಪಕ ಪತ್ರ ಲಗತ್ತಿಸಿ ಸ್ಪಷ್ಟಪಡಿಸಿದ್ದಾರೆ.

ಅಭಿಯಾನದ ಭಾಗವಾಗಿ, ಅಗಸ್ಟ್ ೧೧-೧೭ರ ವರೆಗೆ ಒಂದು ವಾರದಲ್ಲಿ ನಾಗರಿಕರು ತಮ್ಮ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರೋತ್ಸಾಹಿಸಲಾಗುತ್ತದೆ. ಜನರ ಹೃದಯಗಳಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸುವದು ಈ ಉಪಕ್ರಮದ ಹಿಂದಿನ ಆಲೋಚನೆಯಾಗಿದೆ. ಪಾಲಿಸ್ಟರ್ ರಾಷ್ಟ್ರಧ್ವಜಗಳ ಮಾರಾಟವನ್ನು ಕೇಂದ್ರ ಸರ್ಕಾರ ಜಿಎಸ್‌ಟಿ ಮುಕ್ತಗೊಳಿಸಿದೆ. ಚರಕದಿಂದ ತಯಾರಿಸಲ್ಪಡುವ ಹತ್ತಿ ಬಟ್ಟೆ, ರೇಷ್ಮೆ, ಉಣ್ಣೆ ಮತ್ತು ಖಾದಿ ಧ್ವಜಗಳ ಮಾರಾಟವನ್ನು ಈಗಾಗಲೇ ಜಿಎಸ್‌ಟಿ ಮುಕ್ತಗೊಳಿಸಿದೆ.

ಮೈಸೂರಲ್ಲಿ ತಿದ್ದುಪಡಿಗೆ ನೇಕಾರರ ಪ್ರತಿಭಟನೆ

‘ರಾಷ್ಟ್ರಧ್ವಜ ಸಂಹಿತೆ’ ತಿದ್ದುಪಡಿ ಮಾಡಿರುವುದು ಗಾಂಧಿ ತತ್ವ ಮತ್ತು ಆಶಯಗಳಿಗೆ ವಿರುದ್ಧದ ನಡೆ. ಗ್ರಾಮೋದ್ಯೋಗವನ್ನು ನಾಶ ಮಾಡಲು ಅಧಿಕಾರ ವರ್ಗ ಹಾತೊರೆಯುತ್ತಿದೆ. ಗ್ರಾಮ ಸ್ವರಾಜ್ಯದ ಸಂಕೇತವಾದ ಖಾದಿಯನ್ನು ತ್ಯಜಿಸುವ ಮಾತೇ ಇಲ್ಲ ಎಂದು ಮೈಸೂರಿನ ರಂಗಕರ್ಮಿ ಪ್ರಸನ್ನ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖಾದಿ ಬಟ್ಟೆಯ ಬದಲು ಪಾಲಿಯೆಸ್ಟರ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳಿಗೆ ಅನುಮತಿ ನೀಡಿ ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ‘ಮೈಸೂರು ಖಾದಿ ನೂಲುಗಾರರ ಬಳಗ’ ಮಕ್ಕಳು ಮತ್ತು ನಾಗರಿಕರಿಗೆ ಖಾದಿ ನೂಲು ನೇಯುವ ಕಾರ್ಯಾಗಾರ ಮತ್ತು ಮೌನ ಪ್ರತಿಭಟನೆಯ ಮೂಲಕ ಇತ್ತೀಚೆಗೆ ವಿಭಿನ್ನ ಪ್ರತಿರೋಧ ವ್ಯಕ್ತಪಡಿಸಿತು.

“ಖಾದಿಯಿಂದ ದೇಶದ ಆರ್ಥಿಕತೆಗೆ ಯಾವುದೇ ಲಾಭವಿಲ್ಲ. ನೀವು ಚರಕದಿಂದ ನೂತ ಖಾದಿ ನಮಗೆ ಬೇಕಿಲ್ಲವೆಂದು ಪರೋಕ್ಷವಾಗಿ ಸರ್ಕಾರ ಹೇಳಿದಂತಿದೆ. ಧ್ವಜದಿಂದಲೇ ಖಾದಿಯನ್ನು ಕಿತ್ತು ಹಾಕಲು ಸರ್ಕಾರ ಮುಂದಾಗಿದೆ. ಹೀಗೇ ಮುಂದುವರಿದರೆ ಶಿವಪುರ ಸತ್ಯಾಗ್ರಹದ ಚಳವಳಿ ಮಾದರಿಯಲ್ಲಿ ಬೆಂಗಳೂರು, ಧಾರವಾಡಗಳಲ್ಲಿ ಧ್ವಜ ಸತ್ಯಾಗ್ರಹದ ಚಳವಳಿ ಮಾಡುತ್ತೇವೆ” ಎಂದು ಪ್ರಸನ್ನ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿ ಖಾದಿ ಧ್ವಜ ನಿರ್ಮಾಣ ಸಂಸ್ಥೆಗೆ ಕುತ್ತು!

flag

ಪ್ರಸ್ತುತ ತಿದ್ದುಪಡಿ ಕಾರಣದಿಂದ ದೇಶದ ಏಕೈಕ ರಾಷ್ಟ್ರಧ್ವಜ ತಯಾರಿಕಾ ಕೇಂದ್ರವಾದ ಹುಬ್ಬಳ್ಳಿ ತಾಲೂಕಿನ ಬೆಂಗೇರಿಯಲ್ಲಿರುವ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಮಾನಕ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಈ ಕೇಂದ್ರದಲ್ಲಿ ಪ್ರತಿ ವರ್ಷ ಸುಮಾರು ೩ರಿಂದ ೩.೫ ಕೋಟಿ ರೂಪಾಯಿಗಳ ವಹಿವಾಟು ನಡೆಯುತ್ತಿತ್ತು. ಅಂದರೆ ಸುಮಾರು ೭೦ ಸಾವಿರ ತ್ರಿವರ್ಣ ಧ್ವಜಗಳು ಮಾರಾಟವಾಗುತ್ತಿದ್ದವು. ಈ ಬಾರಿಯೂ ಅದೇ ಮಟ್ಟದ ವಹಿವಾಟು ನಡೆಯಬಹುದೆಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಈ ಸಂಸ್ಥೆಯವರ ಆಸೆ ಆಸೆಯಾಗಿಯೇ ಉಳಿಯುವ ಪ್ರಸಂಗ ಎದುರಾಗಿದೆ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ತಮ್ಮ ಸಿಬ್ಬಂದಿಗಳಿಗೆ ರಾಷ್ಟ್ರಧ್ವಜ ತಯಾರಿಕೆಗೆ ಬೇಕಾದ ಕಚ್ಚಾವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳಿ ಎಂದು ಆದೇಶ ನೀಡಿತ್ತು. ಈ ಬಾರಿ ೫ ಕೋಟಿಗಿಂತಲೂ ಹೆಚ್ಚಿನ ಲಾಭವಾಗುತ್ತದೆ ಅಂದುಕೊಂಡಿದ್ದರು. ಆದರೆ ಇದೀಗ ಸರ್ಕಾರ ತಂದಿರುವ ತಿದ್ದುಪಡಿಯಿಂದ ನಮ್ಮ ವಹಿವಾಟು ಸಂಪೂರ್ಣವಾಗಿ ಕುಸಿಯುತ್ತದೆ. ಇದನ್ನು ಪ್ರಜಾತಾಂತ್ರಿಕ ಮಾದರಿಯಲ್ಲಿ ವಿರೋಧಿಸಲಿದ್ದೇವೆ ಎಂದು ಎಂದು ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಸ್ಥೆಯ ಕಾರ್ಯದರ್ಶಿ ಶಿವಾನಂದ ಮಠಪತಿ ತಿಳಿಸಿದ್ದಾರೆ.

ಸತ್ಯಾಗ್ರಹ

ಪಾಲಿಸ್ಟರ್ ರಾಷ್ಟ್ರಧ್ವಜದ ಉತ್ಪಾದನೆ ಮತ್ತು ಆಮದಿಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರದ ನಿರ್ಣಯ ವಿರೋಧಿಸಿ ಖಾದಿ ರಾಷ್ಟ್ರಧ್ವಜ ತಯಾರಿಕೆಗೆ ಖ್ಯಾತಿ ಪಡೆದ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ ಒಂದು ದಿನದ ಸತ್ಯಾಗ್ರಹ ನಡೆಸಿತು. ಪಾಲಿಯೆಸ್ಟರ್‌ ಧ್ವಜ ವಿರೋಧಿಸಿ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿಗಳು, ಸರ್ವೋದಯ ಕಾರ್ಯಕರ್ತರು, ಖಾದಿ ಪ್ರೇಮಿಗಳು, ರಾಜ್ಯದ ಖಾದಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಧ್ವಜ ತಯಾರಿಸುವ ಕೆಲಸಗಾರರು ಸತ್ಯಾಗ್ರಹದಲ್ಲಿ ಭಾಗವಹಿಸಿದರು.

ಹರ್ ಘರ್ ತಿರಂಗಾ ಯಶಸ್ಸಿಗೆ ಗೈಡ್‌ಲೈನ್

ಸ್ವಾತಂತ್ರ್ಯ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗಾ’ ಘೋಷವಾಕ್ಯದೊಂದಿಗೆ ಆ. ೧೧ರಿಂದ ೧೭ರವರೆಗೆ ದೇಶದ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸುವ ಅಭಿಯಾನವನ್ನು ಯಶಸ್ವಿಯಾಗಿ ನಡೆಸುವಂತೆ ಸೂಚಿಸಿ ಪಂಚಾಯತ್‌ರಾಜ್ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ.

ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಾದ ಪಂಚಾಯತ್‌ರಾಜ್ ಸಂಸ್ಥೆಗಳು/ ಸ್ವಸಹಾಯ ಸಂಘಗಳು-ಒಕ್ಕೂಟಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಉಪ ಕೇಂದ್ರ, ಸಹಕಾರಿ ಸಂಘಗಳು, ಉಪ ಅಂಚೆ ಕಚೇರಿಗಳಲ್ಲಿ, ಆಶಾ ಕಾರ್ಯಕರ್ತೆಯರು , ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ರೋಜ್ಗಾರ್ ಸೇವಕರು, ಶಿಕ್ಷಕರನ್ನು ಉತ್ತೇಜಿಸಿ ರಾಷ್ಟ್ರಧ್ವಜ ಹಾರಿಸುವಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಹತ್ತಿ, ಪಾಲಿಯೆಸ್ಟರ್, ರೇಷ್ಮೆ, ಉಣ್ಣೆ ಮತ್ತು ಖಾದಿ ಬಟ್ಟೆಯಿಂದ ಕೈಯಲ್ಲಿ ಸಿದ್ದಪಡಿಸಿರುವ, ಯಂತ್ರದಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸಬಹುದು. ಅಭಿಯಾನದ ಬಗ್ಗೆ ಸ್ಥಳೀಯ ಭಾಷೆಯಲ್ಲಿ ಕರಪತ್ರ, ಬ್ಯಾನರ್ ಮೂಲಕ ಪ್ರಚಾರ ನೀಡಬೇಕು. ಗ್ರಾಮ ಪಂಚಾಯತಿಗಳು ರಾಷ್ಟ್ರಧ್ವಜವನ್ನು ಬೃಹತ್ ಮಟ್ಟದಲ್ಲಿ ಖರೀದಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲಿ ಧ್ವಜಗಳ ಹಂಚಿಕೆ ಮತ್ತು ಮಾರಾಟ ಸ್ಥಳಗಳನ್ನು ಗುರುತಿಸಬೇಕು. ನ್ಯಾಯಬೆಲೆ ಅಂಗಡಿಗಳನ್ನು ಧ್ವಜ ವಿತರಣೆ/ಮಾರಾಟದ ಕೇಂದ್ರವಾಗಿ ಬಳಸಬಹುದು.

ಖಾದಿ ಬಾವುಟಕ್ಕೆ ಪ್ರೋತ್ಸಾಹ ನೀಡಬೇಕಿತ್ತು

ಪ್ರತಿ ಮನೆಯ ಮೇಲೆ ಖಾದಿ ಬಾವುಟವನ್ನೇ ಹಾರಿಸಿದ್ದರೆ ಲಕ್ಷಾಂತರ ನೂಲು ಸುತ್ತುವ ಬಡ ಮಹಿಳೆಯರಿಗೆ ಕೆಲಸ ಒದಗಿಸಿದಂತಾಗುತ್ತಿರಲಿಲ್ಲವೇ? ಹಾಗೆ ಮಾಡಿದ್ದರೆ ಈ ಸರ್ಕಾರದ ತಲೆಯ ಮೇಲೊಂದು ಗರಿ ಮೂಡುತ್ತಿತ್ತಲ್ಲವೇ? ಆದರೆ, ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿಯೇ ಖಾದಿ ಬಾವುಟವನ್ನು ಅಧಿಕೃತವಾಗಿ ಕೆಳಗಿಳಿಸಲಾಗಿದೆ. ಹೀಗೆ ಮಾಡಿ, ದೇಶದ ಬಾವುಟ ಮತ್ತು ಗ್ರಾಮೀಣ ಕೈ ಉತ್ಪಾದಕರ ನಡುವೆ ಇದ್ದ ಖಾದಿ ಎಂಬ ಸಂಬಂಧವನ್ನು ಹರಿದು ಹಾಕಲಾಗಿದೆ. ಇದೊಂದು ದುರಂತವೇ ಸರಿ. ಈಗಾಗಲೇ ಖಾದಿ ಮತ್ತು ಗ್ರಾಮೀಣ ಕೈ ಉತ್ಪನ್ನಗಳು ಸತ್ತೇ ಹೋಗಿವೆ. ಆಧುನಿಕ ಸಂದರ್ಭದಲ್ಲಿ ವಾಸ್ತವವಾಗಿ ಆಗಿ ಹೋಗಿರುವ ಈ ದುರಂತವನ್ನು ಹೀಗೆ ಮಾಡುವ ಸರಕಾರವೇ ಸ್ಥಿರಗೊಳಿಸಿದಂತಾಗಲಿಲ್ಲವೇ? ‘ಹರ್ ಘರ್ ತಿರಂಗಾ’ ಯೋಜನೆ ರೂಪಿಸಿದ ಸಂದರ್ಭದಲ್ಲಿ ಬಾವುಟದ ಅಗತ್ಯತೆ ಕುರಿತು ಬೇಡಿಕೆ ಇಟ್ಟಿದ್ದರೆ, ಸಾಕಾಗುವಷ್ಟು ಉತ್ಪಾದಿಸಲು ಖಾದಿ ಸಂಸ್ಥೆಗಳು ಸಿದ್ಧವಿದ್ದವು. ಖಾದಿ ಗೋದಾಮಿನಲ್ಲಿ ಲಕ್ಷಾಂತರ ಮೀಟರ್ ಬಟ್ಟೆ ಖರ್ಚಾಗದೆ ಉಳಿದಿದೆ. ಅದನ್ನು ಯಾರು ಬಳಸುತ್ತಾರೆ? ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ಮಾಡುವ ಮೂಲಕ ಗಾಂಧಿ ಆಶಯಗಳಿಗೆ ಧಕ್ಕೆ ತರಲಾಗಿದೆ. ಸರ್ಕಾರವೇ ಹೀಗೆ ಮಾಡಿದರೆ ನಾಳೆ ಖಾದಿ ಸಂಸ್ಕೃತಿಯನ್ನು ಕಾಪಾಡುವವರು ಯಾರು?

(ಲೇಖಕರು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಗಾಂಧಿ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರು)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರಿಗೆ ರಹಸ್ಯ ಕಾರ್ಯಗಳಿಂದಲೂ ಸಿಗುತ್ತೆ ಯಶಸ್ಸು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಭಾನುವಾರ ತುಲಾ ರಾಶಿಯಲ್ಲೆ ನೆಲಸಲಿದ್ದಾನೆ. ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ತುಲಾ ರಾಶಿಯವರು ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಏಕಾದಶಿ 13:49 ವಾರ: ಭಾನುವಾರ
ನಕ್ಷತ್ರ: ಹಸ್ತಾ 27:15 ಯೋಗ: ವಜ್ರ 11:22
ಕರಣ: ವಿಷ್ಟಿ (ಭದ್ರ) 13:49 ಅಮೃತ ಕಾಲ: ಸಂಜೆ 04:16ರಿಂದ 06:04
ದಿನದ ವಿಶೇಷ: ತಲಕಾವೇರಿ ಜಾತ್ರೆ, ವರದರಾಜ ರಥೋತ್ಸವ ಸರ‍್ವೇಷಾಮೇಕಾದಶೀ

ಸೂರ್ಯೋದಯ : 05:54   ಸೂರ್ಯಾಸ್ತ : 06:39

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ:ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗಲಿದ್ದಾರೆ. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರರ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪ ಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳುಮಾಡುವ ಸಾಧ್ಯತೆ ಇದೆ, ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

ಈ ಅಪರಾಧಗಳ ನಡುವೆ ಎದ್ದು ಕಾಣಿಸುತ್ತಿರುವುದು, ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಹೆಚ್ಚಳ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ಇತ್ತೀಚಿನ ನಿದರ್ಶನಗಳಾಗಿವೆ. ಇನ್ನೂ ಹತ್ತು ಹಲವನ್ನು ಉದಾಹರಿಸಬಹುದು. ರಾಜ್ಯದಲ್ಲಿ ಪೊಲೀಸ್ ಇಲಾಖೆ ಹಿಂದೆಂದೂ ಇಲ್ಲದಷ್ಟು ದುರ್ಬಲವಾದಂತೆ ಕಾಣುತ್ತಿದೆ.

VISTARANEWS.COM


on

Karnataka Police
Koo

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National crime records bureau- NCRB) ಇತ್ತೀಚೆಗಿನ ಅಪರಾಧಗಳ ಅಂಕಿ ಅಂಶವನ್ನು ಪ್ರಕಟಿಸಿದ್ದು, ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ (crimes) ಸಂಖ್ಯೆ ಮಿತಿ ಮೀರಿ ಹೆಚ್ಚಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಕಳೆದ ಜನವರಿಯಿಂದ ಏಪ್ರಿಲ್‌ವರೆಗೆ ಏರಿಕೆ ಪ್ರಮಾಣದಲ್ಲಿ ಕೊಲೆ (murder), ಅತ್ಯಾಚಾರ (physical abuse), ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು (Pocso) ನಡೆದಿವೆ. 2024ರ ಜನವರಿಯಿಂದ ಏಪ್ರಿಲ್ 30ರವರೆಗೆ ಅಂದರೆ 4 ತಿಂಗಳಲ್ಲಿ ಸುಮಾರು 430 ಕೊಲೆಗಳು (Murder), 198 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2327 ಮಹಿಳೆಯರ ಮೇಲೆ ದೌರ್ಜನ್ಯ, 1262 ಮಕ್ಕಳ ಮೇಲೆ ದೌರ್ಜನ್ಯ, 7421 ಸೈಬರ್ ಕ್ರೈಂ, 450 ರಾಬರಿಗಳು ಸಂಭವಿಸಿವೆ. ಲೈಂಗಿಕ ದೌರ್ಜನ್ಯ ಹಾಗೂ ಸೈಬರ್ ವಂಚನೆ (cyber crime) ಗಗನಕ್ಕೆ ಏರಿವೆ. ಹಲ್ಲೆ, ಮಾರಣಾಂತಿಕ ಹಲ್ಲೆ ಕೇಸ್‌ಗಳು ಅಧಿಕವಾಗುತ್ತಾ ಸಾಗುತ್ತಿವೆ. ಇದು ಆತಂಕಕ್ಕೆ ಕಾರಣವಾಗಿದೆ.

ಎಂದಿನಂತೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಈ ಅಸ್ತ್ರವನ್ನು ಹಿಡಿದುಕೊಂಡು ಸರ್ಕಾರದ ಮೇಲೆ ದಾಳಿಗೆ ಇಳಿದಿವೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡೊಂಬೊಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ. ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯಾ?” ಎಂದು ವಿಪಕ್ಷ ನಾಯಕರು ಟೀಕಿಸಿದ್ದಾರೆ. ಜನಸಾಮಾನ್ಯರ ಮನದಲ್ಲಿರುವ ಪ್ರಶ್ನೆಯನ್ನೇ ಅವರು ಕೇಳಿದ್ದಾರೆ ಎನ್ನಬೇಕು. ಈ ಪ್ರಶ್ನೆಯನ್ನು ಕೇಳಿ ಅರ್ಧದಲ್ಲೇ ಕೈಬಿಡಬಾರದು. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವತ್ತ ಪ್ರಯತ್ನಿಸಬೇಕು. ಗೃಹ ಸಚಿವರು, ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಮಾಡಬೇಕು.

ಆದರೆ ಗೃಹ ಸಚಿವರು ಇದನ್ನು ಒಂದು ವಿಷಯವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. “ಒಂದೊಂದು ಘಟನೆಗೂ ಒಂದೊಂದು ಕಾರಣ ಅಂತ ಇರುತ್ತದೆ. ಅವರ (ಪ್ರತಿಪಕ್ಷದ) ಕಾಲದಲ್ಲಿ ಎಷ್ಟು ಮರ್ಡರ್ ಆಗಿತ್ತು ಅಂತೆ ಹೇಳಿದರೆ ಯಾವ ಸರ್ಕಾರದಲ್ಲಿ ಸುರಕ್ಷತೆ ಇತ್ತು ಅನ್ನೋದು ತಿಳಿಯುತ್ತೆ” ಎಂದಿದ್ದಾರೆ. “ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಇವರನ್ನು ಹೇಳ್ಕೊಂಡು, ಕೇಳ್ಕೊಂಡು ಸರ್ಕಾರ ಕಾನೂನು ಸುವ್ಯವಸ್ಥೆ ಮಾಡೋಕೆ ಆಗೊಲ್ಲ. ಏನು ಕ್ರಮ ಬೇಕಾದ್ರೂ ತಗೊಳ್ತೇವೆ” ಎಂದಿದ್ದಾರೆ. ಇದು ಒಬ್ಬರು ಇನ್ನೊಬ್ಬರ ಮೇಲೆ ದೂರು ಹಾಕಿ ಮುಗಿಸಬೇಕಾದ ಸಂಗತಿಯಲ್ಲ. ಯಾರೂ ಇಂಥ ವಿಚಾರಗಳಲ್ಲಿ ಸುಮ್ಮಸುಮ್ಮನೆ ಆರೋಪ ಮಾಡುವುದಿಲ್ಲ. ಮೇಲಾಗಿ, ಇದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಒದಗಿಸಿದ ಅಂಕಿಸಂಖ್ಯೆಗಳನ್ನು ಆಧರಿಸಿದೆ. ಹೀಗಾಗಿ ಆಳುವವರು ಇದನ್ನು ಗಂಭೀರವಾಗಿಯೇ ಪರಿಗಣಿಸಬೇಕಿದೆ.

ಈ ಅಪರಾಧಗಳ ನಡುವೆ ಎದ್ದು ಕಾಣಿಸುತ್ತಿರುವುದು, ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಹೆಚ್ಚಳ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ಇತ್ತೀಚಿನ ನಿದರ್ಶನಗಳಾಗಿವೆ. ಇನ್ನೂ ಹತ್ತು ಹಲವನ್ನು ಉದಾಹರಿಸಬಹುದು. ಹುಬ್ಬಳ್ಳಿಯಲ್ಲಿ ಕೊಲೆ ಮಾಡಿದವನು ಅಂಜಲಿ ಕೊಲೆ ಮಾಡಿದವನು, ತಾನು ನೇಹಾ ಕೊಲೆ ಮಾದರಿಯಲ್ಲಿ ಕೊಲ್ಲುತ್ತೇನೆ ಎಂದು ಮೊದಲೇ ಹೇಳಿಯೇ ಇದನ್ನು ಮಾಡುತ್ತಾನೆ. ಇದನ್ನು ಪೊಲೀಸರ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುವುದಿಲ್ಲ. ಅಂದರೆ ಇಲ್ಲಿ ಪೊಲೀಸರು ಎಷ್ಟು ಕಾರ್ಯಪ್ರವೃತ್ತರಾಗಿದ್ದಾರೆ ಎಂಬ ಅಂದಾಜು ಸಿಗುತ್ತದೆ. ಬಡವರು ಅನ್ಯಾಯಕ್ಕೊಳಗಾದರೆ ಕೇಳುವವರೇ ಇಲ್ಲವೇ? ಇಲ್ಲಿ ಪ್ರಜ್ವಲ್‌ ರೇವಣ್ಣನಂಥ ಪ್ರಭಾವಿ ಅಪರಾಧಿಗಳನ್ನು ರಾಜಕೀಯ ಕಾರಣಗಳಿಗಾಗಿ ಬೆನ್ನು ಹತ್ತಲಾಗುತ್ತದೆ; ಆದರೆ ಶ್ರೀಸಾಮಾನ್ಯರಿಗೆ ಇಲ್ಲಿ ಯಾವ ರಕ್ಷಣೆಯೂ ಇಲ್ಲವೇ? ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ನೂರಾರು ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಹರಿಬಿಡಲಾಗಿದೆ. ನೂರಾರು ಕುಟುಂಬಗಳನ್ನು ಛಿದ್ರಗೊಳಿಸುವಂತಹ ಇಂಥ ಅಪರಾಧಿಗಳ ಮೇಲೆ ಯಾವ ಕ್ರಮವೂ ಇಲ್ಲ! ಬದಲಾಗಿ ಅವರನ್ನು ರಕ್ಷಿಸಲಾಗುತ್ತಿದೆ.

ಇವೆಲ್ಲವೂ ಅಪಾಯಕಾರಿ ಬೆಳವಣಿಗೆ. “ಹೆಣ್ಣು ನಡುರಾತ್ರಿಯಲ್ಲಿ ಒಬ್ಬಳೇ ಓಡಾಡುವಂತಾದರೆ ದೇಶ ಸ್ವತಂತ್ರವಾದುದಕ್ಕೆ ಸಾರ್ಥಕ” ಎಂದು ಗಾಂಧೀಜಿ ಹೇಳಿದ್ದರಂತೆ. ನಡುರಾತ್ರಿಯಲ್ಲಿ ಬೇಡ, ನಡುಹಗಲಿನಲ್ಲಾದರೂ ಸುರಕ್ಷಿತವಾಗಿ ಓಡಾಡುವಂತಾದರೆ ಸಾಕು! ಕಾಲೇಜಿಗೆ ಹೋಗುವುದು, ಮನೆಯಲ್ಲಿರುವುದು ಮುಂತಾದ ಸರಳ ಕ್ರಿಯೆಗಳ ಸಂದರ್ಭದಲ್ಲಿ ಕೂಡ ಪಾತಕಿಗಳು ದಾಳಿ ನಡೆಸುತ್ತಾರೆ ಎಂದರೆ ಏನು ಹೇಳೋಣ? ಬೆಂಗಳೂರಿನ ಬೀದಿಗಳಲ್ಲಿ ರೌಡಿ ಶೀಟರ್‌ಗಳು ಯಾರ ಭಯವಿಲ್ಲದೆ ಗ್ಯಾಂಗ್‌ ಕಟ್ಟಿಕೊಂಡು ಹೊಡೆದಾಡುವುದು, ಸರ ಎಗರಿಸುವುದು, ಹಲ್ಲೆ, ಬೈಕ್‌ ವ್ಹೀಲಿಂಗ್‌ ನಡೆಸುತ್ತಿದ್ದಾರೆ. ಗೃಹ ಇಲಾಖೆ ದುರ್ಬಲವಾದಾಗ, ಪುಂಡರಿಗೆ ರಾಜಕಾರಣಿಗಳೇ ಕುಮ್ಮಕ್ಕು ನೀಡಿದಾಗ ಇಂಥ ಪ್ರವೃತ್ತಿ ಹೆಚ್ಚುತ್ತದೆ. ಇದಕ್ಕೆ ಈಗಲೇ ಕಡಿವಾಣ ಹಾಕದೆ ಹೋದರೆ ಮುಂದಿನ ದಿನಗಳ ದುರ್ಭರವಾಗಲಿವೆ.

ಇದನ್ನೂ ಓದಿ: Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Continue Reading

ದೇಶ

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

Jammu Kashmir: ಉಗ್ರರ ದಾಳಿಯ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಶೋಪಿಯಾನ್‌ ಜಿಲ್ಲೆಯ ಹುರ್ಪುರ ಗ್ರಾಮದಲ್ಲಿ ಉಗ್ರರ ದಾಳಿಯಲ್ಲಿ ಮಾಜಿ ಸರ್ಪಂಚ್‌ ಐಜಾಜ್‌ ಅಹ್ಮದ್‌ ಶೇಖ್‌ ಎಂಬುವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Jammu Kashmir
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಲೋಕಸಭೆ ಚುನಾವಣೆಯ (Lok Sabha Election) 5ನೇ ಹಂತದ ಮತದಾನಕ್ಕೆ ಎರಡು ದಿನಗಳು ಬಾಕಿ ಇರುವಾಗಲೇ ಉಗ್ರರ ದಾಳಿ ನಡೆದಿದೆ. ಒಂದೇ ದಿನ ಎರಡು ಕಡೆ ಉಗ್ರರು ನಾಗರಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಶೋಪಿಯಾನ್‌ (Shopian) ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಾಜಿ ಸರ್ಪಂಚ್‌ ಒಬ್ಬರು ಹತರಾದರೆ, ಅನಂತನಾಗ್‌ ಜಿಲ್ಲೆಯಲ್ಲಿ ರಾಜಸ್ಥಾನದ ದಂಪತಿಯು ಗಾಯಗೊಂಡಿದ್ದಾರೆ.

ಉಗ್ರರ ದಾಳಿಯ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಶೋಪಿಯಾನ್‌ ಜಿಲ್ಲೆಯ ಹುರ್ಪುರ ಗ್ರಾಮದಲ್ಲಿ ಉಗ್ರರ ದಾಳಿಯಲ್ಲಿ ಮಾಜಿ ಸರ್ಪಂಚ್‌ ಐಜಾಜ್‌ ಅಹ್ಮದ್‌ ಶೇಖ್‌ ಎಂಬುವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಅನಂತನಾಗ್‌ನಲ್ಲಿಯೂ ಉಗ್ರರ ದಾಳಿ ನಡೆದಿದ್ದು, ರಾಜಸ್ಥಾನದ ಪತಿ-ಪತ್ನಿ ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಮೂಲ ನಿವಾಸಿಗಳು ಅಲ್ಲ ಎಂಬುದನ್ನು ಗುರುತಿಸಿ ಉಗ್ರರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಟೂರಿಸ್ಟ್‌ ಕ್ಯಾಂಪ್‌ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಪರ್ಹಾ ಹಾಗೂ ಅವರ ಪತಿ ತಬ್ರೇಜ್‌ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ಕಡೆ ದಾಳಿ ಮಾಡಿದವರು ಯಾವ ಸಂಘಟನೆಗೆ ಸೇರಿದವರು ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಉಗ್ರರು ದಾಳಿ ನಡೆಸಿದ ಕಾರಣ ಭದ್ರತಾ ಸಿಬ್ಬಂದಿಯು ಎರಡೂ ಜಿಲ್ಲೆಗಳಲ್ಲಿ ಉಗ್ರರು ನಡೆಸಿದ ದಾಳಿಯ ಪ್ರದೇಶಗಳ ಸುತ್ತ ಸುತ್ತುವರಿದಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಜಾಸ್ತಿಯಾಗಿವೆ. ಕಳೆದ ಏಪ್ರಿಲ್‌ನಲ್ಲಿ ಶೋಪಿಯಾನ್‌ ಜಿಲ್ಲೆಯಲ್ಲಿ ಸ್ಥಳೀಯನಲ್ಲದ ಟೂರಿಸ್ಟ್‌ ಗೈಡ್‌ ಒಬ್ಬನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ಶ್ರೀನಗರದಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು ಉಗ್ರರು ಹತ್ಯೆ ಮಾಡಿದ್ದರು.

ಇದನ್ನೂ ಓದಿ: Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

Continue Reading

ಕ್ರೀಡೆ

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

RCB vs CSK: ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು. ಆದರೆ ಈ ಮೊತ್ತವನ್ನು ಬಾರಿಸಲು ಅವಕಾಶ ಕೊಡದೆ ಪ್ಲೇ ಆಫ್​ಗೆ ಲಗ್ಗೆಯಿಟ್ಟಿತು.

VISTARANEWS.COM


on

RCB vs CSK
Koo

ಬೆಂಗಳೂರು: ಈ ಬಾರಿ ಹೊಸ ಅಧ್ಯಾಯ ಎಂದು ಹೇಳಿಕೊಂಡು ಆರಂಭಿಕ ಹಂತದಲ್ಲಿ ಸತತ ಸೋಲಿಗೆ ಸಿಲುಕಿ ಇನ್ನೇನು ಟೂರ್ನಿಯಿಯಿಂದ ಹೊರಬೀಳಬೇಕು ಎನ್ನುವಷ್ಟರಲ್ಲಿ ಪುಟಿದೆದ್ದ ಆರ್​ಸಿಬಿ(RCB vs CSK), ಇದೀಗ ಯಾರೂ ಊಹಿಸಿದ, ಪವಾಡ ಸಂಭವಿಸಿದ ರೀತಿಯಲ್ಲಿ 4ನೇ ತಂಡವಾಗಿ ಪ್ಲೇ ಆಫ್​ಗೆ ಅಧಿಕೃತ ಎಂಟ್ರಿ ಕೊಟಿದೆ. ಪ್ಲೇ ಆಫ್​ ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ 27 ರನ್​ ಗಳ ಗೆಲುವು ಸಾಧಿಸಿ ಈ ಅಭೂತಪೂರ್ವ ಸಾಧನೆ ಮಾಡಿದೆ. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಚೆನ್ನೈಗೆ ಆಲ್​ರೌಂಡರ್​ ಗ್ಲೆನ್​ ಮ್ಯಾಕ್ಸ್​ವೆಲ್​ ಮೊದಲ ಎಸೆತದಲ್ಲೇ ಆಘಾತವಿಕ್ಕಿದರು. ನಾಯಕ ಋತುರಾಜ್​ ಗಾಯಕ್ವಾಡ್​​ ಅವರನ್ನು ಶೂನ್ಯಕ್ಕೆ ಔಟ್​ ಮಾಡಿದರು. ಈ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಚೆನ್ನೈ ಡೇಂಜಸರ್​ ಬ್ಯಾಟರ್​ ಡೇರಿಯಲ್​ ಮಿಚೆಲ್(4)​ ಅವರ ವಿಕೆಟ್​ ಕೂಡ ಕಳೆದುಕೊಂಡಿತು. ಆರ್​ಸಿಬಿ ಪಾಳಯದಲ್ಲಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿತು. ಆದರೆ ಈ ಸಂಭ್ರಮ ಹೆಚ್ಚು ಹೊತ್ತು ಸಾಗಲಿಲ್ಲ. ಮೂರನೇ ವಿಕೆಟ್​ಗೆ ರಹಾನೆ ಮತ್ತು ರಚಿನ್ ರವೀಂದ್ರ​ ಸೇರಿಕೊಂಡು ಉತ್ತಮ ಜತೆಯಾಟವೊಂದನ್ನು ಸಂಘಟಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ನಿಂದ ತಂಡಕ್ಕೆ 10 ಸರಾಸರಿಯಲ್ಲಿ ರನ್​ ಹರಿದುಬಂತು.

ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಫರ್ಗುಸನ್​ ಕೊನೆಗೂ ಬೇರ್ಪಡಿಸಿದರು. 33 ರನ್​ ಗಳಿಸಿದ ವೇಳೆ ರಹಾನೆ ವಿಕೆಟ್​ ಕಳೆದುಕೊಂಡರು. ರಹಾನೆ ಮತ್ತು ರಚಿನ್​ ಸೇರಿಕೊಂಡು ಮೂರನೇ ವಿಕೆಟ್​ಗೆ 66 ರನ್​ ಒಟ್ಟುಗೂಡಿಸಿದರು. ಕರ್ನಾಟಕ ಮೂಲದವರೇ ಆದ ನ್ಯೂಜಿಲ್ಯಾಂಡ್​ ಆಟಗಾರ ರಚಿನ್​ ರವೀಂದ್ರ ಅರ್ಧಶತಕ ಬಾರಿಸುವ ಮೂಲಕ ಕನ್ನಡಿಗರಿಗೇ ಕಂಟಕವಾಗುವ ಸೂಚನೆ ನೀಡಿದರು. ಆದರೆ ಇವರ ಬ್ಯಾಟಿಂಗ್​ ಅಬ್ಬರಕ್ಕೆ ಸ್ವಪ್ನಿಲ್ ಸಿಂಗ್​ ಬ್ರೇಕ್​ ಹಾಕಿದರು. ಮ್ಯಾಕ್ಸ್​ವೆಲ್​ ಓವರ್​ನಲ್ಲಿ ಜೀವದಾನ ಪಡೆದರೂ ಕೂಡ ಇದೇ ಓವರ್​ನಲ್ಲಿ ಇಲ್ಲದ ರನ್​ ಕದಿಯಲು ಹೋಗಿ ರನೌಟ್​ ಬಲೆಗೆ ಬಿದ್ದರು. ರಚಿನ್​ 37 ಎಸೆತಗಳಿಂದ 61 ರನ್(5 ಬೌಂಡರಿ, 3 ಸಿಕ್ಸರ್​) ಬಾರಿಸಿದರು. ಈ ವಿಕೆಟ್​ ಪತನದ ಬಳಿಕ ಶಿವಂ ದುಬೆ(7) ವಿಕೆಟ್​ ಕೂಡ ಬಿತ್ತು.

ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರೂ ಕೂಡ ಇದು ಸಾಧ್ಯವಾಗಲಿಲ್ಲ. ಧೋನಿ ಕ್ರೀಸ್​ನಲ್ಲಿ ಇರುತ್ತಿದ್ದರೆ ಚೆನ್ನೈಗೆ ಗೆಲುವು ಖಚಿತವಾಗಿರುತ್ತಿತ್ತು. 6 ಎಸೆತಗಳಲ್ಲಿ 17 ರನ್​ ಬೇಕಿದ್ದಾಗ ಧೋನಿ ಯಶ್​ ದಯಾಳ್​ ಅವರ ಮೊದಲ ಎಸೆತವನ್ನೇ ಸ್ಟೇಡಿಯಂನಿಂದ ಹೊರಗೆಡೆ ಬಾರಿಸಿ 6 ರನ್​ ಕಲೆಹಾಕಿದರು. ಈ ಸಿಕ್ಸರ್​ 110 ಮೀಟರ್​ ದೂರಕ್ಕೆ ಸಿಡಿಯಿತು. ಆದರೆ ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಇಲ್ಲಿಗೆ ಚೆನ್ನೈ ಸೋಲು ಕೂಡ ಖಚಿತಗೊಂಡಿತು. ಅಂತಿಮ 2 ಎಸೆತದಲ್ಲಿ 10 ರನ್​ ಗಳಿಸುವ ಯತ್ನದಲ್ಲಿ ಜಡೇಜಾ ವಿಫಲರಾದರು. ಧೋನಿ 13 ಎಸೆತಗಳಿಂದ 25 ರನ್​ ಚಚ್ಚಿದರು.

18ರ ಅದೃಷ್ಟ ಗೆದ್ದ ಆರ್​ಸಿಬಿ


ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿತ್ತು. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿತ್ತು. ಹೀಗಾಗಿ ಇಂದು ಕೂಡ ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆಯಾಗಿತ್ತು. ಅದರಂತೆ ಆರ್​ಸಿಬಿ ಗೆಲುವು ಸಾಧಿಸಿ ಅಭಿಮಾನಿಗಳ ನಂಬಿಕೆಯನ್ನು ಉಳಿಸಿಕೊಂಡಿದೆ. ಮೇ 18ರಂದು ಆರ್​ಸಿಬಿ ವಿರುದ್ಧ ಚೆನ್ನೈ 3ನೇ ಸೋಲಿಗೆ ತುತ್ತಾಯಿತು.

ಕೊಹ್ಲಿ-ಡುಪ್ಲೆಸಿಸ್​ ಉತ್ತಮ ಜತೆಯಾಟ


ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ಮೊದಲ ಓವರ್​ನಲ್ಲಿ ಕೇವಲ 2 ರನ್​ ಮಾತ್ರ ಗಳಿಸಿತು. ಆ ಬಳಿಕದ 2 ಓವರ್​ನಲ್ಲಿ ಸಿಡಿದು ನಿಂತ ಕೊಹ್ಲಿ ಮತ್ತು ಡುಪ್ಲೆಸಿಸ್​ 29 ರನ್​ ಬಾಚಿದರು. 3 ಓವರ್​ಗೆ 31 ರನ್​ ಹರಿದು ಬಂತು. ಇದೇ ವೇಳೆ ಮಳೆ ಕೂಡ ಸುರಿಯಿತು. ಕೆಲ ಕಾಲ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಮಳೆ ನಿಂತ ಮೇಲೆ ಪಿಚ್ ವರ್ತನೆ ಕೊಂಚ ಬದಲಾಯಿತು. ಸ್ಪಿನ್ನರ್​ಗಳು ನಿಯಂತ್ರ ಸಾಧಿಸಿದರು. ಇದರಿಂದ ಆರ್​ಸಿಬಿಯ ರನ್​ ಗಳಿಕೆಯೂ ಕೆಲ ಕಾಲ ನಿಧಾನಗತಿಯಿಂದ ಸಾಗಿತು.

ಪಿಚ್​ ವರ್ತನೆಯನ್ನು ಅರಿತುಕೊಂಡ ಬಳಿಕ ಕೊಹ್ಲಿ ಮತ್ತು ಡು ಪ್ಲೆಸಿಸ್​ ಮತ್ತೆ ಬಿರುಸಿನ ಬ್ಯಾಟಿಂಗ್​ಗೆ ಮುಂದಾದರು. ಅನುಭವಿ ರವೀಂದ್ರ ಜಡೇಜಾಗೆ ಡು ಪ್ಲೆಸಿಸ್​ ಸತತವಾಗಿ 2 ಸಿಕ್ಸರ್​ ಚಚ್ಚಿದರು. ಉತ್ತಮವಾಗಿ ಆಡುತ್ತಿದ್ದ ವಿರಾಟ್​ ಕೊಹ್ಲಿ ಬೌಂಡರಿ ಲೈನ್​ನಲ್ಲಿ ಡ್ಯಾರಿಲ್​ ಮಿಚೆಲ್ ಹಿಡಿದ ಅಸಾಮಾನ್ಯ ಕ್ಯಾಚ್​ಗೆ ಬಲಿಯಾದರು. 47 ರನ್​ ಗಳಿಸಿ ಕೇವಲ 3 ರನ್​ ಅಂತರದಲ್ಲಿ ಅರ್ಧಶತಕ ವಂಚಿತರಾದರು. ಅವರ ಈ ಸೊಗಸಾದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್​ ದಾಖಲಾಯಿತು. ಕೊಹ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದರು.​ ಕೊಹ್ಲಿ ಒಟ್ಟು 36 ಸಿಕ್ಸರ್​ ಬಾರಿಸಿದ್ದಾರೆ. ಲಕ್ನೋ ತಂಡ ನಿಕೋಲಸ್​​ ಪೂರನ್​ ಕೂಡ 36 ಸಿಕ್ಸರ್​ ಬಾರಿಸಿದ್ದಾರೆ. ಇದು ಮಾತ್ರವಲ್ಲದೆ ಕೊಹ್ಲಿ ಈ ಬಾರಿ 700 ರನ್​ಗಳ ಗಡಿ ದಾಟಿದರು.

ಇದನ್ನೂ ಓದಿ IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

ಕೊಹ್ಲಿ ವಿಕೆಟ್​ ಪತನದ ಬಳಿಕ ಆಡಲಿಳಿದ ರಜತ್​ ಪಾಟೀದಾರ್​ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತ ನೀಡಿದರು. ಆದರೆ ಸ್ಟ್ರೇಟ್​ ಡ್ರೈ ಮಾಡುವ ಯತ್ನದಲ್ಲಿ ನಾನ್​ ಸ್ಟ್ರೈಕರ್​ನಲ್ಲಿದ್ದ ಡು ಪ್ಲೆಸಿಸ್​ ಅವರನ್ನು ರನೌಟ್​ ಆಗುವಂತೆ ಮಾಡಿದರು. ಪಾಟಿದಾರ್​ ಹೊಡೆದ ಚೆಂಡು ಸ್ಯಾಂಟ್ನರ್​ ಅವರ ಕೈಗೆ ತಗುಲಿ ನೇರವಾಗಿ ವಿಕೆಟ್​ಗೆ ತಗುಲಿತು. ಕ್ರೀಸ್​ ಬಿಟ್ಟು ನಿಂತಿದ್ದ ಡು ಪ್ಲೆಸಿಸ್​ ರನೌಟ್​ ಸಂಕಟಕ್ಕೆ ಸಿಲುಕಿದರು. ಡು ಪ್ಲೆಸಿಸ್​ ತಲಾ ಮೂರು ಸಿಕ್ಸರ್​ ಮತ್ತು ಬೌಂಡರಿ ನೆರವಿನಿಂದ 54 ರನ್​ ಬಾರಿಸಿದರು.

ಜೀವದಾನ ಪಡೆದ ಗ್ರೀನ್​


ಮೂರನೇ ವಿಕೆಟ್​ಗೆ ಜತೆಯಾದ ಕ್ಯಾಮರೂನ್​ ಗ್ರೀನ್​ ಮತ್ತು ಪಾಟಿದಾರ್​ ಕೂಡ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದರು. ಇದೇ ವೇಳೆ ಗ್ರೀನ್​ ಅವರು ನಾಯಕ ಋತುರಾಜ್​ ಗಾಯಕ್ವಾಡ್​ ಅವರಿಂದ ಕ್ಯಾಚ್​ ಕೈ ಚೆಲ್ಲಿ ಜೀವದಾನವೊಂದನ್ನು ಪಡೆದರು. ಈ ವೇಳೆ ಗ್ರೀನ್​ 18 ರನ್​ ಗಳಿಸಿದ್ದರು. ಸಿಕ್ಕ ಈ ಅವಕಾಶವನ್ನು ಎರಡೂ ಕೈಗಳಿಂದ ಬಾಚಿದ ಗ್ರೀನ್​ ಅಜೇಯ 38 ರನ್​ ಬಾರಿಸಿ ಚೆನ್ನೈಗೆ ಕಂಟಕವಾದರು. ಪಾಟಿದಾರ್​ ಮತ್ತು ಗ್ರೀನ್​ 3ನೇ ವಿಕೆಟ್​ಗೆ ಅತ್ಯಮೂಲ್ಯ 71 ರನ್​ಗಳ ಜತೆಯಾಟ ನಿಭಾಯಿಸಿದರು. ಪಾಟಿದಾರ್​ ಕೂಡ ಕೊಹ್ಲಿಯಂತೆ ಮಿಚೆಲ್​ ಕ್ಯಾಚ್​ಗೆ ವಿಕೆಟ್​ ಕಳೆದುಕೊಂಡರು. 23 ಎಸೆತ ಎದುರಿಸಿ 41 ರನ್​ ಬಾರಿಸಿದರು. ಈ ವೇಳೆ 4 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಯಿತು. ಬಳಿಕ ಬಂದ ದಿನೇಶ್​ ಕಾರ್ತಿಕ್​(14) ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​(16) ರನ್​ ಬಾರಿಸಿ ವಿಕೆಟ್​ ಕಳೆದುಕೊಂಡರು. ಚೆನ್ನೈ ಪರ ಶಾರ್ದೂಲ್​ ಠಾಕೂರ್​ 2 ವಿಕೆಟ್​ ಪಡೆದರೂ ಕೂಡ 61 ರನ್​ ಬಿಟ್ಟು ಕೊಟ್ಟು ದುಬಾರಿಯಾದರು. ಅನುಭವಿ ರವೀಂದ್ರ ಜಡೇಜಾ ವಿಕೆಟ್​ ಲೆಸ್​ ಎನಿಸಿಕೊಂಡರು.

Continue Reading
Advertisement
Dina bhavishya
ಭವಿಷ್ಯ14 mins ago

Dina Bhavishya : ಈ ರಾಶಿಯವರಿಗೆ ರಹಸ್ಯ ಕಾರ್ಯಗಳಿಂದಲೂ ಸಿಗುತ್ತೆ ಯಶಸ್ಸು

Karnataka Police
ಸಂಪಾದಕೀಯ5 hours ago

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

Jammu Kashmir
ದೇಶ5 hours ago

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

RCB vs CSK
ಕ್ರೀಡೆ5 hours ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ5 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Narendra Modi
ದೇಶ6 hours ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ6 hours ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ6 hours ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Priyanka Vadra
ಪ್ರಮುಖ ಸುದ್ದಿ7 hours ago

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Kangana Ranaut
ದೇಶ8 hours ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌