Amrit Mahotsav | ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್‌ ಬ್ಯಾನರ್‌ಗೆ ಹಾನಿ, ಕಾಂಗ್ರೆಸ್‌ ಪ್ರತಿಭಟನೆ - Vistara News

ಕರ್ನಾಟಕ

Amrit Mahotsav | ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್‌ ಬ್ಯಾನರ್‌ಗೆ ಹಾನಿ, ಕಾಂಗ್ರೆಸ್‌ ಪ್ರತಿಭಟನೆ

ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಳವಡಿಸಿದ್ದ ಬ್ಯಾನರ್‌ನಲ್ಲಿ ಟಿಪ್ಪು ಸುಲ್ತಾನ್‌ ಚಿತ್ರವನ್ನು ಹರಿದು ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

VISTARANEWS.COM


on

amrit mahotsav
ಬ್ಯಾನರ್ ಹರಿದ ಸ್ಥಳಕ್ಕೆ ಆಗಮಿಸಿದ್ದ ಡಿ ಕೆ. ಶಿವಕುಮಾರ್, ಡಿ.ಕೆ ಸುರೇಶ್‌ ಹಲವು ಕಾಂಗ್ರೆಸ್‌ ನಾಯಕರು ಆಗಮಿಸಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಬಳಿ ಕಾಂಗ್ರೆಸ್‌ ವತಿಯಿಂದ ಹಾಕಲಾಗಿದ್ದ ಟಿಪ್ಪು ಸುಲ್ತಾನ್‌ ಚಿತ್ರವಿದ್ದ ಬ್ಯಾನರ್ ಹರಿದು ಹಾಕಿರುವ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯವನ್ನು ಆಕ್ಷೇಪಿಸಿ ಡಿ.ಕೆ ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಧರಣಿ ನಡೆಸಿದರು.

ಕಾಂಗ್ರೆಸ್‌ ಆಯೋಜಿಸಿರುವ ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ. ಆರ್‌ ಸರ್ಕಲ್ ಹಾಗೂ ಹಡ್ಸನ್‌ ಸರ್ಕಲ್‌ ಬಳಿ ಟಿಪ್ಪು ಸುಲ್ತಾನ್ ಹಾಗೂ ಹಲವಾರು ಮುಖಂಡರ ಚಿತ್ರಗಳಿದ್ದ ಬ್ಯಾನರ್‌ ಅನ್ನು ಕಾಂಗ್ರೆಸ್ ಅಳವಡಿಸಿತ್ತು. ಅದರಲ್ಲಿ ಟಿಪ್ಪು ಚಿತ್ರವಿದ್ದ ಎರಡು ಬ್ಯಾನರ್‌ಗಳನ್ನು ಹರಿದು ಹಾಕಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಕಾಂಗ್ರೆಸ್‌ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು.

ರಾತ್ರಿ ವೇಳೆ ಸ್ಥಳಕ್ಕೆ ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್‌ ಸೇರಿದಂತೆ ನಾನಾ ಮುಖಂಡರು ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಮಾತನಾಡಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ರಾತ್ರಿ ೧೦.೩೦ರ ಬಳಿಕ ಘಟನೆ ನಡೆದಿದೆ. ಎರಡು ಕಡೆ ಕಿಡಿಗೇಡಿಗಳು ಬ್ಯಾನರ್‌ ಹರಿದಿದ್ದಾರೆ. ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೂರು ದಾಖಲಾಗಿಲ್ಲ,” ಎಂದು ಹೇಳಿದ್ದಾರೆ.

ಕಾನೂನು ಹೋರಾಟ ಮಾಡೋಣ ಎಂದ ಡಿ.ಕೆ ಶಿವಕುಮಾರ್‌

ಸ್ಥಳಕ್ಕೆ ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಾತನಾಡಿ “ನಾವು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಚರಿತ್ರೆ ಓದಿದವರು. ಹೀಗಾಗಿ ಟಿಪ್ಪು ಬ್ಯಾನರ್‌ ಅಳವಡಿಸಿದ್ದೇವೆ. ಕೇಂದ್ರ ಸರ್ಕಾರದ ಅಡಿಯಲ್ಲಿ‌ ಬರುವ ಭಾರತೀಯ ಪುರಾತತ್ವ ಇಲಾಖೆ ಟಿಪ್ಪು ಪ್ಯಾಲೆಸ್‌ಗೆ ದೀಪಾಲಂಕಾರ ಮಾಡಿದೆ. ಕೇಂದ್ರ ಸರ್ಕಾರವೂ ಗೌರವದಿಂದ ಕಾಣುತ್ತಿದೆ. ಅಂತೆಯೇ ಪೊಲೀಸರ ಕಾವಲಿನ ನಡುವೆಯೂ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ. ಎರಡೆರಡು ಕಡೆ ಬ್ಯಾನರ್ ಹರಿದು ಹಾಕಲಾಗಿದೆ. ಪೊಲೀಸರು ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಅಂತೆಯೇ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯದ್ದಾಗುತ್ತದೆ. ಈಗ ನಾವು ಶಾಂತಿಯುತ ಹೋರಾಟ ಮಾಡುತ್ತೇವೆ ಹಾಗೂ ಕಾನೂನು ಹೋರಾಟ ಮಾಡುತ್ತೇವೆ,’ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

ಮಾರಣ ಯಾಗಗಳು ಶತ್ರುವನ್ನು ನಾಶ ಮಾಡಲೆಂದೇ ನಡೆಲಾಗುತ್ತದೆ. ಶತ್ರು ಭೈರವಿ ಯಾಗ ಒಂದು ಬಗೆಯ ಮಾರಣ ಯಾಗವಾಗಿದೆ. ಇದರಲ್ಲಿ ಅಘೋರಿಗಳು, ಕಾಪಾಲಿಕರು, ಮಾಂತ್ರಿಕರು ಭಾಗವಹಿಸುತ್ತಿದ್ದಾರೆ.

VISTARANEWS.COM


on

Shatru Bhairavi yaga ಶತ್ರು ಭೈರವಿ ಯಾಗ
Koo

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ಮಾಟ- ಮಂತ್ರ (Black Magic) ಪಾಲಿಟಿಕ್ಸ್ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರಿಗೆ ʼರಾಜಕಂಟಕʼ ತರಲು ಉದ್ದೇಶಿಸಿ ಕೇರಳದಲ್ಲಿ ʼಶತ್ರು ಭೈರವಿ ಯಾಗ’ (Shatru Bhairavi yaga) ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್‌ ನಿನ್ನೆ ಆರೋಪಿಸಿದ್ದರು. ಇದೀಗ ಪುರೋಹಿತರ ಸೂಚನೆಯಂತೆ, ಈ ಯಾಗದಿಂದ ಉಂಟಾಗಬಹುದಾದ ಹಾನಿಗೆ ರಕ್ಷಣಾ ಕವಚ ಮಾಡಿಸಲು ಡಿಕೆಶಿ ಮುಂದಾಗಿದ್ದಾರೆ.

ಡಿಸಿಎಂ ಅವರಿಂದ ಕೇರಳದಲ್ಲಿ ನಡೆಯುತ್ತಿರುವ ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ಸುಳಿವು ದೊರೆತಿತ್ತು. ʼʼನನ್ನ ಮತ್ತು ಸಿಎಂ ವಿರುದ್ಧ ದೊಡ್ಡ ವಾಮಾಚಾರ ಪ್ರಯೋಗ ನಡೆಯುತ್ತಿದೆ” ಎಂದು ಡಿಕೆಶಿ ಹೇಳಿದ್ದರು. ಡಿಸಿಎಂ ಹಾಗೂ ಸಿಎಂ ವಿರುದ್ಧ ಶತ್ರು ಭೈರವಿ ಯಾಗ ಕೇರಳದ ಯಾವುದೋ ಊರಿನ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸೇರಿದ ನಿರ್ಜನ ಪ್ರದೇಶದಲ್ಲಿ ನಡೆಯುತ್ತಿದೆ. ಆಘೋರಿಗಳ ಮೊರೆ ಹೋಗಿ ಈ ಯಾಗ ಮಾಡಿಸಲಾಗುತ್ತಿದೆ. ನನ್ನ ವಿರುದ್ಧ ಕೆಲವು ರಾಜಕಾರಣಿಗಳೇ ಮಾಡಿಸುತ್ತಿದ್ದಾರೆ ಎಂದಿದ್ದರು ಡಿಸಿಎಂ.

“ಈಗ ಯಾಗ ನಡೆಯುತ್ತಿದ್ದು, ಅವರ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಆದರೆ, ನಾವು ನಂಬಿದ ದೇವರು ನಮ್ಮನ್ನು ಕಾಪಾಡುತ್ತಾನೆ. ಎಲ್ಲ ಡೀಟೇಲ್ಸ್‌ ಅನ್ನು ಚೀಟಿ ಬರೆದುಕೊಟ್ಟಿದ್ದಾರೆ. ಯಾರು ಭಾಗಿಯಾಗಿದ್ದರೋ ಅವರೇ ನನಗೆ ಮಾಹಿತಿ ಕೊಟ್ಟಿದ್ದಾರೆ. ಇದೆಲ್ಲವನ್ನು ರಾಜಕೀಯದವರಲ್ಲದೆ ಬೇರೆ ಯಾರು ಮಾಡಲು ಸಾಧ್ಯ. ಆದರೆ, ಇದೆಲ್ಲವನ್ನು ನಾವು ನಂಬುವುದಿಲ್ಲ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದು ಶತ್ರು ನಾಶಕ್ಕಾಗಿಯೇ ಮಾಡುವ ಯಾಗ!

ಯಜ್ಞಕಾಂಡ ಹಾಗೂ ಪುರಾಣಗಳಲ್ಲಿ ಹಲವು ಬಗೆಯ ಯಾಗಗಳ ಉಲ್ಲೇಖವಿದೆ. ಒಳ್ಳೆಯ ಉದ್ದೇಶದಿಂದ ಹಾಗೂ ಕೆಟ್ಟ ಉದ್ದೇಶದಿಂದ ನಡೆಯುವ ಯಾಗಗಳೆಂದು ಎರಡು ವಿಧಗಳಿವೆ. ದುಷ್ಟ ಉದ್ದೇಶದ ಯಾಗಗಳಲ್ಲಿ ಸ್ತಂಭನ ಹಾಗೂ ಮಾರಣ ಯಾಗಗಳು ಪ್ರಮುಖವಾಗಿವೆ. ಸ್ತಂಭನ ಯಾಗಗಳು ವಾಮಾಚಾರದ ಭಾಗವಾಗಿದ್ದು, ಶತ್ರುಗಳಿಗೆ ಸಂಕಷ್ಟ ನೀಡುವ ಉದ್ದೇಶದಿಂದ ನಡೆಯುತ್ತವೆ. ಮಾರಣ ಯಾಗಗಳು ಶತ್ರುವನ್ನು ನಾಶ ಮಾಡಲೆಂದೇ ನಡೆಲಾಗುತ್ತದೆ. ಶತ್ರು ಭೈರವಿ ಯಾಗವು ಒಂದು ಬಗೆಯ ಮಾರಣ ಯಾಗವಾಗಿದೆ.

ಮೂರು ಪ್ರಯೋಗಗಳು, ಪಂಚಬಲಿ

ತ್ರು ಭೈರವಿ ಎಂಬ ಶಕ್ತಿಯನ್ನು ಪ್ರಸನ್ನಗೊಳಿಸಲು ಈ ಮಾರಣ ಯಾಗ ನಡೆಯುತ್ತದೆ. ಶತ್ರು ಭೈರವಿಯನ್ನು ಬಲಿಗಳಿಂದ ಪ್ರಸನ್ನಗೊಳಿಸಿ, ವೈರಿ ನಾಶಕ್ಕಾಗಿ ಕಳಿಸಿಕೊಡಲಾಗುತ್ತದೆ. ಶತ್ರು ಭೈರವಿ ಯಾಗದಲ್ಲಿ ಮೂರು ಪ್ರಯೋಗಗಳು ನಡೆದಿವೆ. ಮಾರಣ, ಮೋಹನ, ಸ್ತಂಭನ ಎಂಬ ಮೂರು ಪ್ರಯೋಗಗಳು ಇವೆ. ರಾಜಕಂಟಕ ತರಲು ಈ ಭೈರವಿ ಯಾಗದಲ್ಲಿ ಮೂರು ಪ್ರಯೋಗಗಳು ಇರುತ್ತವೆ. ಮೂರು ಪ್ರಯೋಗಕ್ಕೆ 50 ಪ್ರಾಣಿಗಳ ಬಲಿ ಕೊಡಲಾಗಿದೆ.

21 ಕೆಂಪು ಬಣ್ಣದ ಮೇಕೆಗಳು, 3 ಎಮ್ಮೆಗಳು, 21 ಕಪ್ಪು ಬಣ್ಣದ ಕುರಿಗಳು, 5 ಹಂದಿಗಳನ್ನು ಬಲಿ ಕೊಡಲಾಗಿದೆ. ಈ ಯಾಗದಲ್ಲಿ ಎಂಟು ಮಂದಿ ವಾಮಾಚಾರ- ಅಭಿಚಾರ ಕರ್ಮಗಳನ್ನು ಬಲ್ಲ ಜ್ಯೋತಿಷಿಗಳು ಭಾಗವಹಿಸುತ್ತಿದ್ದಾರೆ. ಮದ್ಯ ಮಾಂಸಗಳನ್ನು ಯಥೇಚ್ಛವಾಗಿ ದೇವತೆಗೆ ಕೊಡಲಾಗುತ್ತಿದ್ದು, ದೇವತೆಯನ್ನು ರೊಚ್ಚಿಗೆಬ್ಬಿಸುವ ಪ್ರಕ್ರಿಯೆ ನಡೆಯುತ್ತಿದೆ. ಕೇರಳದಲ್ಲಿ ಜ್ಯೋತಿಷಿಗಳ ಸ್ವರೂಪದಲ್ಲಿರುವ ಹಲವು ಮಂದಿ ಅಘೋರಿಗಳಿದ್ದು, ಇದನ್ನು ನೆರವೇರಿಸುವಲ್ಲಿ ಪಳಗಿದ್ದಾರೆ. ಇವರು ಅನೇಕ ಯಾಗಗಳನ್ನು ಈ ಹಿಂದೆ ನೆರವೇರಿಸಿದ ನಿದರ್ಶನಗಳಿವೆ.

ಅಘೋರಿಗಳು, ಕಾಪಾಲಿಕರು ಮಾತ್ರ ಮಾಡುತ್ತಾರೆ

ಈ ಯಾಗವನ್ನು ಸಾಮಾನ್ಯ ಪುರೋಹಿತರಿಂದ ಮಾಡಲು ಸಾಧ್ಯವಿಲ್ಲ. ಅಘೋರಿಗಳನ್ನು ಕರೆಸಿ ಸ್ಮಶಾನದಲ್ಲಿ ಯಾಗ ನಡೆಸಲಾಗುತ್ತದೆ. ಸ್ಮಶಾನ ಕಾಳಿಯನ್ನು ಪ್ರಧಾನವಾಗಿಟ್ಟು ಅಷ್ಟ ಭೈರವಿಯನ್ನು ಕರೆದು ಯಾಗ ಮಾಡಿಸಲಾಗುತ್ತದೆ. ಮೊದಲು ಪ್ರಾಣಿಯ ಮೇಲೆ ನಡೆಯುತ್ತದೆ. ಪ್ರಾಣಿ ಸತ್ತು ಬೀಳುತ್ತದೆ. ಇದಕ್ಕೆ ಮಾಮೂಲಿ ತುಪ್ಪ, ಸಮಿತ್ತುಗಳನ್ನು ಬಳಸುವುದಿಲ್ಲ. ಹಂದಿ, ಎಮ್ಮೆ ತುಪ್ಪ ಬಳಕೆ ಮಾಡಲಾಗುತ್ತದೆ. ವಿಷಯುಕ್ತ ಮರದ ಚಕ್ಕೆಗಳನ್ನು ಹೋಮಕ್ಕೆ ಹಾಕಲಾಗುತ್ತದೆ. ಮಣ್ಣಿನ ದೇವಿ ಮೂರ್ತಿಗೆ ರಕ್ತ ನೀಡಿದಾಗ ರಕ್ತ ಹೀರುತ್ತದೆ. ಈ ಯಾಗ 9 ದಿನಗಳ ಕಾಲ ಪ್ರತಿ ರಾತ್ರಿ ನಡೆಯುತ್ತದೆ. ಕಾಪಾಲಿಕರು, ಅಘೋರಿಗಳು ನಡೆಸುವ ಈ ಯಾಗದಲ್ಲಿ ಶ್ರದ್ಧೆ ಅಥವಾ ಪ್ರಯೋಗದಲ್ಲಿ ಸ್ವಲ್ಪ ವ್ಯತ್ಯಾಸವಾದ್ರೂ ಮಾಡಿಸುವ ಕರ್ತೃ ಹಾಗೂ ಮಾಂತ್ರಿಕ ಇಬ್ಬರಿಗೂ ಮಾರಣಾಂತಿಕ ಹಾನಿ ಸಂಭವಿಸಬಹುದು. ಉನ್ನತ ತಂತ್ರ ವಿದ್ಯೆ ಗೊತ್ತಿರುವ ಮಂದಿಗೆ ಮಾತ್ರ ಈ ಯಾಗ ಮಾಡುವ ಕ್ರಮ ಗೊತ್ತಿದ್ದು, ಅದರ ಅರ್ಹತೆ- ಅಧಿಕಾರ ಪಡೆದಿದ್ದಾರೆ.

ಯಾಗದಲ್ಲಿ ಭಾಗಿಯಾದವರಿಂದಲೇ ಡಿಸಿಎಂ ಡಿಕೆಶಿಗೆ ಈ ಬಗ್ಗೆ ಮಾಹಿತಿ ದೊರೆತಿದೆ ಎಂದು ಅವರು ಹೇಳಿದ್ದಾರೆ. ಮಾಹಿತಿ ಸಿಕ್ಕ ಬೆನ್ನಲ್ಲೇ ಅಲರ್ಟ್ ಆಗಿರುವ ಡಿಕೆ ಶಿವಕುಮಾರ್ ಪುರೋಹಿತರ ಮೊರೆ ಹೋಗಿದ್ದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸೂಕ್ತ ದಿಗ್ಬಂಧನಗಳನ್ನು ಮಾಡಿಸಿಕೊಳ್ಳುವುದು ಸೇರಿದಂತೆ ಒಂದಷ್ಟು ಮಹತ್ವದ ಸಲಹೆಗಳನ್ನು ಜ್ಯೋತಿಷಿಗಳು ಅವರಿಗೆ ನೀಡಿದ್ದಾರೆ. “ನನ್ನ ರಕ್ಷಣೆಗೆ ನನ್ನ ಶಕ್ತಿ ಇದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದು, ಈ ಶಕ್ತಿ ಹಾಗೂ ತಾವು ಕೈಗೊಳ್ಳುತ್ತಿರುವ ರಕ್ಷಣಾ ಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Continue Reading

ಪ್ರಮುಖ ಸುದ್ದಿ

Prajwal Revanna Case: ಇಂದು ರೇವಣ್ಣ ಕುಟುಂಬದ ಮೂವರಿಗೂ ಅಗ್ನಿಪರೀಕ್ಷೆ !

ಪ್ರಜ್ವಲ್‌ ರೇವಣ್ಣ (Hassan MP Prajwal revanna Case) ಅವರಿಗೆ ಜಾಮೀನೋ, ಜೈಲೋ ಎಂಬುದು ಇಂದು ನಿರ್ಧಾರವಾಗಲಿದೆ. ಜೊತೆಗೆ ಭವಾನಿ ರೇವಣ್ಣ (Bhavani Revanna) ಅವರ ಜಾಮೀನು ಅರ್ಜಿಯೂ ಇಂದೇ ವಿಚಾರಣೆಗೆ ಬರಲಿದೆ. ಎಚ್‌ಡಿ ರೇವಣ್ಣ (HD revanna) ಅವರು ತಮ್ಮ ಮೇಲಿನ ಎಫ್‌ಐಆರ್‌ ರದ್ದತಿಗೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಇಂದು ನಡೆಯಲಿದೆ.

VISTARANEWS.COM


on

Prajwal Revanna Case Another case against Revanna transferred to SIT Notice to Bhavani
Koo

ಬೆಂಗಳೂರು: ಇಂದು ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna) ಅವರ ಕುಟುಂಬದ ಮೂವರಿಗೂ ಅಗ್ನಿಪರೀಕ್ಷೆ ಕಾದಿದೆ. ಅಶ್ಲೀಲ ವಿಡಿಯೋ (obscene video) ಹಾಗೂ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (kempegowda international airport) ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal revanna Case) ಅವರಿಗೆ ಜಾಮೀನೋ, ಜೈಲೋ ಎಂಬುದು ಇಂದು ನಿರ್ಧಾರವಾಗಲಿದೆ. ಜೊತೆಗೆ ಭವಾನಿ ರೇವಣ್ಣ (Bhavani Revanna) ಅವರ ಜಾಮೀನು ಅರ್ಜಿಯೂ ಇಂದೇ ವಿಚಾರಣೆಗೆ ಬರಲಿದೆ. ಎಚ್‌ಡಿ ರೇವಣ್ಣ (HD revanna) ಅವರು ತಮ್ಮ ಮೇಲಿನ ಎಫ್‌ಐಆರ್‌ ರದ್ದತಿಗೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಇಂದು ನಡೆಯಲಿದೆ.

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ‌ ಅವರ ಪರ ವಕೀಲರು ಜನಪ್ರತಿನಿಧಿಗಳ ಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮೇ 29ರಂದೇ ನಿರೀಕ್ಷಣಾ ಜಾಮೀನಿಗೆ ವಕೀಲ ಅರುಣ್ ಮೂಲಕ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಪ್ರಜ್ವಲ್ ರೇವಣ್ಣ ಬಂಧನವಾಗಿರುವ ಹಿನ್ನೆಲೆಯಲ್ಲಿ ಇನ್ನು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ‌ ಅವಶ್ಯಕತೆ ಇಲ್ಲ. ಹಾಗಾಗಿ ಇಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್‌ ಮುಂದೆ ಸಲ್ಲಿಸಲಿದ್ದಾರೆ.

ಎಸ್‌ಐಟಿ ಕೂಡ ಇಂದು ಅಗತ್ಯ ಮೆಡಿಕಲ್‌ ಟೆಸ್ಟ್‌ಗಳ ಬಳಿಕ ಪ್ರಜ್ವಲ್‌ ಅವರನ್ನು ಕೋರ್ಟ್‌ ಮುಂದೆ ಹಾಜರುಪಡಿಸಬೇಕಿದೆ. ನ್ಯಾಯಾಲಯಕ್ಕೆ‌ ಹಾಜರುಪಡಿಸಿ ಕನಿಷ್ಠ 14 ದಿನಗಳ ಕಸ್ಟಡಿಗೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ. ಯಾಕೆಂದರೆ ಅಷ್ಟೊಂದು ಅಗಾಧ ಪ್ರಮಾಣದ ತನಿಖೆ ನಡೆಯಬೇಕಿದೆ. ಪ್ರಕರಣದ ಗಂಭೀರತೆ ಹೆಚ್ಚು ಇರುವುದರಿಂದ ಎಸ್ಐಟಿ ಅಧಿಕಾರಿಗಳ ವಶಕ್ಕೆ ಪ್ರಜ್ವಲ್‌ ಅವರನ್ನು ನೀಡುವ ಸಾಧ್ಯತೆಯೇ ಅಧಿಕವಾಗಿದೆ.

ಭವಾನಿಗೂ ಕಷ್ಟ

ಅತ್ತ ಭವಾನಿ ರೇವಣ್ಣ ಅವರಿಗೂ ಇಂದು ಜಾಮೀನು ಟೆನ್ಷನ್ ಇದೆ. ಕೆ.ಆರ್‌.ನಗರ ತಾಲೂಕಿನ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಜನಪ್ರತಿನಿಧಿಗಳ ಕೋರ್ಟ್​ ಜಡ್ಜ್ ಇಂದು ಬೇಲ್ ಅರ್ಜಿ ತೀರ್ಪು ಪ್ರಕಟಿಸಲಿದ್ದಾರೆ. ಸಂತ್ರಸ್ತೆಯ ಅಪಹರಣದ ಆರೋಪದಲ್ಲಿ SIT ಪರ ವಕೀಲ ಹಾಗೂ ಭವಾನಿ ಪರ ವಕೀಲರ ವಾದವನ್ನು ಆಲಿಸಿದ್ದ ಕೋರ್ಟ್​ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಂದ ತೀರ್ಪು ಹೊರಬೀಳಲಿದೆ.

ರೇವಣ್ಣ ಎಫ್‌ಐಆರ್‌ ರದ್ದು ಅರ್ಜಿ

ಎಫ್ಐಆರ್ ರದ್ದು ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿ ಸಹ ಇಂದು ವಿಚಾರಣೆ ನಡೆಯಲಿದೆ. ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ತಮ್ಮ ಮೇಲಿರುವ ದೂರನ್ನು ಕೈಬಿಡಲು ರೇವಣ್ಣ ಕೋರಿದ್ದಾರೆ. ಅಪಹರಣ ಪ್ರಕರಣದಲ್ಲೂ, ಹೊಳೆನರಸೀಪುರ (Holenarasipura) ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಜಾಮೀನು (Bail) ಮಂಜೂರಾಗಿದೆ. ಆದರೆ ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಆದೇಶವನ್ನು ಪ್ರಶ್ನೆ ಮಾಡಲಿದೆ.

ಎಚ್‌ಡಿಕೆ ಎಲ್ಲಿದ್ದಾರೆ?

ಅತ್ತ ಪ್ರಜ್ವಲ್ ರಾಜ್ಯಕ್ಕೆ ಎಂಟ್ರಿ ಆಗುತ್ತಾರೆ ಅನ್ನುವ ಸುದ್ದಿ ಬಂದ ತಕ್ಷಣ ಎಚ್‌ಡಿ ಕುಮಾರಸ್ವಾಮಿ ಹಾಗೂ ಕುಟುಂಬ ಬೆಂಗಳೂರು ಬಿಟ್ಟು ಹೊರ ಹೋಗಿದ್ದು, ಜಂಗಲ್‌ ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಪ್ರತಿಯೊಂದು ಕಾನೂನು ಹೋರಾಟದ ವಿವರಗಳನ್ನು ಪಡೆದುಕೊಳ್ಳುತ್ತಿದ್ದು, ರಾಜಕೀಯವಾಗಿಯೂ ಈ ಪ್ರಕರಣದಲ್ಲಿ ಮುಂದಿನ ನಡೆ ಹೇಗೆ ಎಂಬ ಬಗ್ಗೆ ಪಕ್ಷದ ಮುಖಂಡರು ಹಾಗೂ ಆಪ್ತರ ಜೊತೆ ಚರ್ಚಿಸುತ್ತಿದ್ದಾರೆ.

ಪ್ರಜ್ವಲ್‌ ಪುರುಷತ್ವ ಪರೀಕ್ಷೆ

ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಇಂದು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಎಸ್‌ಐಟಿ ಮುಂದಾಗಿದೆ. ಆರೋಪಿ ತನಿಖೆಗೆ ಸಹಕರಿಸಲು ದೈಹಿಕ- ಮಾನಸಿಕವಾಗಿ ಸಿದ್ಧನಾಗಿದ್ದಾನೆಯೇ ಎಂಬುದನ್ನು ಈ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ.

ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌ಐಟಿ ನಡೆಸಿದೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ತಾನು ಅತ್ಯಾಚಾರ ಮಾಡಿಲ್ಲ ಎಂದು ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಸಾಧ್ಯತೆಯೂ ಇರುವುದರಿಂದ, ಮುಂದಿನ ಹಂತದಲ್ಲಿ ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆಯನ್ನು ಎಸ್‌ಐಟಿ ಮಾಡಿಸಲಿದೆ.

ನಂತರ ಹಾಸನ ಸಂಸದರ ನಿವಾಸದಲ್ಲಿ ಸಂಗ್ರಹಿಸಲಾದ ಹಾಸಿಗೆ- ಹೊದಿಕೆ ಇತ್ಯಾದಿಗಳಲ್ಲಿ ಕಂಡುಬಂದಿರುವ ಡಿಎನ್‌ಎಗೂ, ಪ್ರಜ್ವಲ್‌ ಡಿಎನ್‌ಎಗೂ ಮ್ಯಾಚ್‌ ಮಾಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈ ಹಿಂದೆಯೂ ಅನೇಕರಿಗೆ ಅತ್ಯಾಚಾರ ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಸ್ವಾಮಿ ನಿತ್ಯಾನಂದ, ಮುರುಘಾ ಶ್ರೀ, ಅಸಾರಾಂ ಬಾಪು ಸೇರಿದಂತೆ ಹಲವರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು.

ಇದನ್ನೂ ಓದಿ: Prajwal Revanna Case: ವಿದೇಶದಲ್ಲಿಯೇ ಮೊಬೈಲ್‌ ನಾಶ ಮಾಡಿದರಾ ಪ್ರಜ್ವಲ್?

Continue Reading

ಪ್ರಮುಖ ಸುದ್ದಿ

Prajwal Revanna Case: ವಿದೇಶದಲ್ಲಿಯೇ ಮೊಬೈಲ್‌ ನಾಶ ಮಾಡಿದರಾ ಪ್ರಜ್ವಲ್?

Prajwal Revanna Case: ಏಪ್ರಿಲ್‌ 26ರಂದು ತರಾತುರಿಯಲ್ಲಿ ವಿದೇಶಕ್ಕೆ ಹಾರಿದ್ದ ಪ್ರಜ್ವಲ್‌, ಮೊಬೈಲ್‌ ಅನ್ನೂ ಜೊತೆಗೆ ಕೊಂಡೊಯ್ದಿದ್ದರು. ಇದೀಗ ಪ್ರಜ್ವಲ್‌ ಜೇಬಿನಲ್ಲಿ ಎಸ್‌ಐಟಿ ಅಧಿಕಾರಿಗಳು ಮೊದಲಿಗೆ ತಡಕಾಡಿರುವುದೇ ಮೊಬೈಲ್‌ಗಾಗಿ. ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್‌ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದು, ಅದು ಇನ್ನೂ ಎಸ್‌ಐಟಿ ಅಧಿಕಾರಿಗಳಿಗೆ ದೊರೆತಿಲ್ಲ ಎನ್ನಲಾಗುತ್ತಿದೆ.

VISTARANEWS.COM


on

prajwal revanna case mobile
Koo

ಬೆಂಗಳೂರು: ಬೆಂಗಳೂರು: ಅಶ್ಲೀಲ ವಿಡಿಯೋ (obscene video) ಹಾಗೂ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (kempegowda international airport) ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal revanna Case) ಅವರಿಂದ ಪ್ರಕರಣದ ವಿಚಾರಣೆಗೆ ಅಗತ್ಯವಾಗಿರುವ ಸಾಕ್ಷ್ಯಗಳನ್ನು (ವಶಪಡಿಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್‌ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದು, ಅದು ಇನ್ನೂ ಎಸ್‌ಐಟಿ ಅಧಿಕಾರಿಗಳಿಗೆ ದೊರೆತಿಲ್ಲ ಎನ್ನಲಾಗುತ್ತಿದೆ.

ಏಪ್ರಿಲ್‌ 26ರಂದು ತರಾತುರಿಯಲ್ಲಿ ವಿದೇಶಕ್ಕೆ ಹಾರಿದ್ದ ಪ್ರಜ್ವಲ್‌, ಮೊಬೈಲ್‌ ಅನ್ನೂ ಜೊತೆಗೆ ಕೊಂಡೊಯ್ದಿದ್ದರು. ಇದೀಗ ಪ್ರಜ್ವಲ್‌ ಜೇಬಿನಲ್ಲಿ ಎಸ್‌ಐಟಿ ಅಧಿಕಾರಿಗಳು ಮೊದಲಿಗೆ ತಡಕಾಡಿರುವುದೇ ಮೊಬೈಲ್‌ಗಾಗಿ. ವಿಡಿಯೋಗಳನ್ನು ಈಗಾಗಲೇ ನಾಶ ಮಾಡಿರಬಹುದಾದರೂ, ಮೊಬೈಲ್‌ ಸಿಕ್ಕಿದರೆ ಅವುಗಳನ್ನು ರಿಟ್ರೀವ್‌ ಮಾಡುವ ಅವಕಾಶ ಇದೆ. ಸಾಧನವೇ ಸಿಗದೇ ಹೋದರೆ ಏನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಮೊಬೈಲ್‌ ಅಧಿಕಾರಿಗಳ ಕೈಗೆ ಸಿಗದಂತೆ ಪ್ರಜ್ವಲ್‌ ಎಚ್ಚರ ವಹಿಸಿರಬಹುದು ಎನ್ನಲಾಗಿದೆ.

ಪ್ರಜ್ವಲ್ ರೇವಣ್ಣ ತಾವು ಬಳಸುತ್ತಿದ್ದ ಮೊಬೈಲ್ ಅನ್ನು ವಿದೇಶದಲ್ಲಿಯೇ ನಾಶ ಮಾಡಿರುವ ಸಾಧ್ಯತೆ ಇದೆ. ಪ್ರಕರಣ ದಾಖಲಾಗಿ ಎಸ್‌ಐಟಿ ರಚನೆಯಾಗುತ್ತಿದ್ದಂತೆಯೇ ಇದರ ತೀವ್ರತೆ ಅರಿತುಕೊಂಡ ಪ್ರಜ್ವಲ್‌, ಜರ್ಮನಿಯಲ್ಲಿಯೇ ಅಡಗಿಕೊಂಡಿದ್ದರು. ಅಲ್ಲಿಯೇ ಮೊಬೈಲ್ ಬಿಸಾಕಿರುವ ಸಾಧ್ಯತೆ ಇದೆ. ಮೊಬೈಲ್‌ ಬಚ್ಚಿಟ್ಟಿದ್ದರೆ ಅದನ್ನು ಆನ್‌ ಮಾಡಿದಾಗ ಲೊಕೇಶನ್‌ ಪತ್ತೆಯಾಗಲಿದೆ. ಹೀಗಾಗಿ ಮೊಬೈಲ್‌ ಅನ್ನು ನಾಶ ಮಾಡಿರುವ ಸಾಧ್ಯತೆಯೇ ಅಧಿಕವಾಗಿದೆ. ಈ ಎಲ್ಲದರ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸಲಿದೆ.

ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯಲ್ಲಿ ಸಾಕಷ್ಟು ಹಿನ್ನೆಡೆ ಆಗಿತ್ತು. ಇಂದಿನಿಂದ ಪ್ರಜ್ವಲ್ ರೇವಣ್ಣ ಅಸಲಿ ತನಿಖೆ ಶುರುವಾಗಲಿದೆ. ಈಗಾಗಲೇ ಬಂಧಿತರಾಗಿರುವ ಪ್ರಜ್ವಲ್‌ರನ್ನು ನೇರವಾಗಿ ಎಸ್ಐಟಿ ಕಚೇರಿಗೆ ಕರೆತಂದಿರುವ ಅಧಿಕಾರಿಗಳು, ಇಂದು ಬೆಳಗ್ಗೆ ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದು, ಆರೋಪಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಆರೋಪಿ ತನಿಖಾಧಿಕಾರಿಗಳ ಮುಂದೆ ನೀಡುವ ಹೇಳಿಕೆಗಳನ್ನು ಪೂರ್ಣ ಮಾನಸಿಕ ಆರೋಗ್ಯದ ಸ್ಥಿತಿಯಲ್ಲಿ ನೀಡಿದ್ದಾನೆ ಎಂದು ಇವು ಖಚಿತಪಡಿಸಲಿವೆ.

ಈಗಾಗಲೇ ಪ್ರಜ್ವಲ್ ರೇವಣ್ಣ ಬಳಿ ಇರುವ ವಸ್ತುಗಳುನ್ನು, ವಿಮಾನದಲ್ಲಿ ಬಂದ ಲಗ್ಗೇಜ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಜ್ವಲ್‌ ಬಳಸುತ್ತಿದ್ದ ಮೊಬೈಲ್ ಸೇರಿ ಆತನ ಬಳಿ ಇದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಇದು ಯಾವ ಮೊಬೈಲ್‌ ಎಂದು ಗೊತ್ತಾಗಿಲ್ಲ. ನಿನ್ನೆ ರಾತ್ರಿ ಎಸ್‌ಐಟಿ ಕಚೇರಿಯಲ್ಲಿಯೇ ಕಳೆದಿರುವ ಪ್ರಜ್ವಲ್‌ ಅವರನ್ನು ಇಂದು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಜ್ವಲ್‌ ಪರ ವಕೀಲರು ಈಗಾಗಲೇ ಪೊಲೀಸ್‌ ಕಸ್ಟಡಿ ನಿರಾಕರಿಸುವ ವಾದಗಳನ್ನು ಸಿದ್ಧ ಮಾಡಿಕೊಂಡಿದ್ದಾರೆ.

ಇಂದು ನಡೆಯಲಿದೆ ಪುರಯಷತ್ವ ಪರೀಕ್ಷೆ

ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌ಐಟಿ ನಡೆಸಿದೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ತಾನು ಅತ್ಯಾಚಾರ ಮಾಡಿಲ್ಲ ಎಂದು ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಸಾಧ್ಯತೆಯೂ ಇರುವುದರಿಂದ, ಮುಂದಿನ ಹಂತದಲ್ಲಿ ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆಯನ್ನು ಎಸ್‌ಐಟಿ ಮಾಡಿಸಲಿದೆ.

ನಂತರ ಹಾಸನ ಸಂಸದರ ನಿವಾಸದಲ್ಲಿ ಸಂಗ್ರಹಿಸಲಾದ ಹಾಸಿಗೆ- ಹೊದಿಕೆ ಇತ್ಯಾದಿಗಳಲ್ಲಿ ಕಂಡುಬಂದಿರುವ ಡಿಎನ್‌ಎಗೂ, ಪ್ರಜ್ವಲ್‌ ಡಿಎನ್‌ಎಗೂ ಮ್ಯಾಚ್‌ ಮಾಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈ ಹಿಂದೆಯೂ ಅನೇಕರಿಗೆ ಅತ್ಯಾಚಾರ ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಸ್ವಾಮಿ ನಿತ್ಯಾನಂದ, ಮುರುಘಾ ಶ್ರೀ, ಅಸಾರಾಂ ಬಾಪು ಸೇರಿದಂತೆ ಹಲವರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು.

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

ಇದನ್ನೂ ಓದಿ: Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

Continue Reading

ಕ್ರೈಂ

Prajwal Revanna Case: ಪ್ರಜ್ವಲ್ ರೇವಣ್ಣಗೆ ಮೊದಲು ನಡೆಯೋದೇ ಆ ಟೆಸ್ಟ್‌ ! ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

Prajwal Revanna Case: ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌ಐಟಿ ನಡೆಸಿದೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

VISTARANEWS.COM


on

prajwal revanna case airport arrest
Koo

ಬೆಂಗಳೂರು: ಅಶ್ಲೀಲ ವಿಡಿಯೋ (obscene video) ಹಾಗೂ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (kempegowda international airport) ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal revanna Case) ಅವರನ್ನು ಇಂದು ಮೊದಲು ವೈದ್ಯಕೀಯ ಪರೀಕ್ಷೆಗೆ (Medical test) ಒಳಪಡಿಸಲು ಎಸ್‌ಐಟಿ (SIT) ಮುಂದಾಗಿದೆ. ಆರೋಪಿ ತನಿಖೆಗೆ ಸಹಕರಿಸಲು ದೈಹಿಕ- ಮಾನಸಿಕವಾಗಿ ಸಿದ್ಧನಾಗಿದ್ದಾನೆಯೇ ಎಂಬುದನ್ನು ಈ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ.

ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌ಐಟಿ ನಡೆಸಿದೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ತಾನು ಅತ್ಯಾಚಾರ ಮಾಡಿಲ್ಲ ಎಂದು ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಸಾಧ್ಯತೆಯೂ ಇರುವುದರಿಂದ, ಮುಂದಿನ ಹಂತದಲ್ಲಿ ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆಯನ್ನು ಎಸ್‌ಐಟಿ ಮಾಡಿಸಲಿದೆ.

ನಂತರ ಹಾಸನ ಸಂಸದರ ನಿವಾಸದಲ್ಲಿ ಸಂಗ್ರಹಿಸಲಾದ ಹಾಸಿಗೆ- ಹೊದಿಕೆ ಇತ್ಯಾದಿಗಳಲ್ಲಿ ಕಂಡುಬಂದಿರುವ ಡಿಎನ್‌ಎಗೂ, ಪ್ರಜ್ವಲ್‌ ಡಿಎನ್‌ಎಗೂ ಮ್ಯಾಚ್‌ ಮಾಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈ ಹಿಂದೆಯೂ ಅನೇಕರಿಗೆ ಅತ್ಯಾಚಾರ ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಸ್ವಾಮಿ ನಿತ್ಯಾನಂದ, ಮುರುಘಾ ಶ್ರೀ, ಅಸಾರಾಂ ಬಾಪು ಸೇರಿದಂತೆ ಹಲವರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು.

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

ಇದನ್ನೂ ಓದಿ: Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

Continue Reading
Advertisement
Viral Video
ವೈರಲ್ ನ್ಯೂಸ್1 min ago

Viral Video: KSRTC ಬಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯರು! ಡ್ರೈವರ್‌ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

Donald Trump
ವಿದೇಶ7 mins ago

ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Nandamuri Balakrishna pushed incident Anjali breaks silence
South Cinema16 mins ago

Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

T20 World Cup 2024
ಕ್ರಿಕೆಟ್16 mins ago

T20 World Cup 2024: ಟಿ20 ವಿಶ್ವಕಪ್​ ಪಂದ್ಯ ನಡೆಯುವ ತಾಣ,ಭಾರತದ ಪಂದ್ಯಗಳ ಪ್ರಸಾರದ ಮಾಹಿತಿ ಹೀಗಿದೆ

Shatru Bhairavi yaga ಶತ್ರು ಭೈರವಿ ಯಾಗ
ರಾಜಕೀಯ37 mins ago

ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

T20 World Cup 2024
ಕ್ರಿಕೆಟ್53 mins ago

T20 World Cup 2024: ಟಿ20 ವಿಶ್ವಕಪ್​ಗೆ ಕ್ಷಣಗಣನೆ; ಭಾರತ ಸೇರಿ ಬಲಿಷ್ಠ ತಂಡಗಳ ಪಂದ್ಯದ ವೇಳಾಪಟ್ಟಿ ಇಲ್ಲಿದೆ

Shilpa Shetty Shares Special Video From KD Kannada Movie
ಸ್ಯಾಂಡಲ್ ವುಡ್55 mins ago

Shilpa Shetty: ʻಕೆಡಿʼಸಿನಿಮಾ ಶೂಟಿಂಗ್‌ ಮುಗಿಸಿ ಹೊಸ ವಿಡಿಯೊ ಹಂಚಿಕೊಂಡ ಶಿಲ್ಪಾ ಶೆಟ್ಟಿ!

World No Tobacco Day
ಆರೋಗ್ಯ1 hour ago

World No Tobacco Day: ಇಂದು ವಿಶ್ವ ತಂಬಾಕು ರಹಿತ ದಿನ; ತಂಬಾಕು ಸೇವನೆಯಿಂದ ವರ್ಷಕ್ಕೆ 60 ಲಕ್ಷ ಜನರ ಸಾವು!

Air India Flight
ದೇಶ1 hour ago

Air India Flight: ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

PM Narendra Modi
ದೇಶ1 hour ago

PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ21 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌