ವಿಸ್ತಾರ Interview | ಅಪ್ರಸ್ತುತ ವ್ಯಕ್ತಿಗಳು ನೂರು ಫ್ರೀಡಂ ಮಾರ್ಚ್‌ ಮಾಡಿದರೂ ವೇಸ್ಟ್‌: ಡಾ. ಸಿ.ಎನ್‌. ಅಶ್ವತ್ಥನಾರಾಯಣ - Vistara News

ಕರ್ನಾಟಕ

ವಿಸ್ತಾರ Interview | ಅಪ್ರಸ್ತುತ ವ್ಯಕ್ತಿಗಳು ನೂರು ಫ್ರೀಡಂ ಮಾರ್ಚ್‌ ಮಾಡಿದರೂ ವೇಸ್ಟ್‌: ಡಾ. ಸಿ.ಎನ್‌. ಅಶ್ವತ್ಥನಾರಾಯಣ

ದೇಶಾದ್ಯಂತ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಡೆಯುತ್ತಿರುವ ಹರ್‌ ಘರ್‌ ತಿರಂಗಾ ಅಭಿಯಾನ, ಪ್ರತಿಪಕ್ಷಗಳ ಪೈಪೋಟಿ ಸೇರಿದಂತೆ ಅನೇಕ ವಿಚಾರಗಳ ಕುರಿತು ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ʼವಿಸ್ತಾರʼದ ಜತೆ ಮಾತನಾಡಿದ್ದಾರೆ.

VISTARANEWS.COM


on

Ashwath Narayan Interview
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಡಾ. ಸಿ.ಎನ್‌. ಅಶ್ವತ್ಥನಾರಾಯಣ

ರಮೇಶ ದೊಡ್ಡಪುರ, ಬೆಂಗಳೂರು
ರಾಜ್ಯ ರಾಜಕಾರಣದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ರಾಜಕಾರಣಿಗಳಲ್ಲಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರೂ ಪ್ರಮುಖರು. ಬೆಂಗಳೂರಿನ ಮಲ್ಲೇಶ್ವರ ಶಾಸಕರಾಗಿ ಕೈಗೊಂಡಿದ್ದ ಕಾರ್ಯಗಳ ಅನುಭವವನ್ನು ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಯಾಗಿ, ಉನ್ನತ ಶಿಕ್ಷಣ- ಐಟಿಬಿಟಿ ಸಚಿವರಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಗೆ ನೆಲೆಯೇ ಇಲ್ಲದ ರಾಮನಗರ ಭಾಗದಲ್ಲೂ ರಾಜಕೀಯ ಸಂಚಲನ ಮೂಡಿಸುತ್ತಿರುವ ಅಶ್ವತ್ಥನಾರಾಯಣ ಅವರು, ಸ್ವಾತಂತ್ರ್ಯದ 75ನೇ ವರ್ಷಾಚರಣೆ ಸಂಭ್ರಮದ ಸಂದರ್ಭದಲ್ಲಿ ಸ್ವಾತಂತ್ರ್ಯ, ಅಮೃತ ಕಾಲ, ರಾಜಕೀಯ ವಿಚಾರಗಳ ಕುರಿತು ʻವಿಸ್ತಾರ ನ್ಯೂಸ್‌ʼ ಜತೆ ಮುಕ್ತವಾಗಿ ಮಾತನಾಡಿದ್ದಾರೆ.

ಸ್ವಾತಂತ್ರ್ಯದ 75ನೇ ವರ್ಷಾಚರಣೆ ನಡೆಸುತ್ತಿದ್ದೇವೆ. ಈ ಹಿಂದೆಂದೂ ಸ್ವಾತಂತ್ರೋತ್ಸವದಲ್ಲಿ ಭಾಗವಹಿಸದಷ್ಟು ಸಂಭ್ರಮ ಜನಸಾಮಾನ್ಯರಲ್ಲಿದೆ. ಈ ಸಂಭ್ರಮಕ್ಕೆ ಏನು ಕಾರಣ?

-ಈ ವರ್ಷ ವಿಶೇಷವಾಗಿ ಅಮೃತಮಹೋತ್ಸವವಾಗಿರುವುದರಿಂದ, ದೇಶಭಕ್ತಿ ಹೆಚ್ಚಿಸುವ ಹಾಗೂ ದೇಶಕ್ಕೆ ಮರು ಸಮರ್ಪಣೆ ಮಾಡಿಕೊಳ್ಳಬೇಕಾದ ಸಮಯ ಇದು. ಜಾತಿ, ಧರ್ಮ, ಮೀರಿ ನಾವೆಲ್ಲರೂ ಒಂದು ಎಂಬ ಭಾವನೆಯನ್ನು ಹೆಚ್ಚಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಈ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಸ್ವತಃ ಪ್ರಧಾನಿಯವರು ಸಂಪೂರ್ಣ ಮೇಲುಸ್ತುವಾರಿ ವಹಿಸಿ ತೊಡಗಿಸಿಕೊಂಡಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಇಷ್ಟೊಂದು ಜನರು ಏಕೆ ಭಾಗವಹಿಸಿದರು? ಅವರಿಗೂ ಸ್ವಂತ ಜೀವನ ಇತ್ತಲ್ಲವೇ? ಅದೆಲ್ಲವನ್ನೂ ಇಂದು ನೆನೆಯಬೇಕು. ಇಂದು ಯಾವುದೇ ಸ್ವಾತಂತ್ರ್ಯ ಹೋರಾಟ ಇಲ್ಲ. ಆದರೆ ಹಿಂದಿನವರ ತ್ಯಾಗ, ಬಲಿದಾನಗಳನ್ನು ನೆನೆಯುವುದಕ್ಕಿಂತಲೂ ಹೆಚ್ಚಿನ ಮಹತ್ವವಾದ ಕೆಲಸ ಇನ್ನೇನಿದೆ? ಇದೆಲ್ಲ ವಿಚಾರಗಳನ್ನೂ ಹಿನ್ನೆಲೆಯಾಗಿಟ್ಟುಕೊಂಡು ರೂಪಿಸಿದ ಕಾರ್ಯಕ್ರಮವಾದ್ಧರಿಂದ ಈ ಜನಮನ್ನಣೆ ಲಭಿಸಿದೆ. ಅಮೃತ ಕಾಲವನ್ನು ನಾವೆಲ್ಲರೂ ಸಂಭ್ರಮಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವಕ್ಕೆ ಈ ಜನೋತ್ಸಾಹ ಲಭಿಸಿದೆ.

ಮುಂದಿನ 25 ವರ್ಷವನ್ನು ಅಮೃತ ಕಾಲ ಎಂದು ಪ್ರಧಾನಿ ಕರೆದಿದ್ದಾರೆ. ಈ ಅಮೃತ ಕಾಲಕ್ಕೆ ಜನರು ಸಿದ್ಧವಾಗಿದ್ದಾರೆ. ಆದರೆ ಸರ್ಕಾರಗಳು, ರಾಜಕಾರಣಿಗಳು ತಮ್ಮ ಎಂದಿನ ಭ್ರಷ್ಟಾಚಾರ, ಕುಟುಂಬ ರಾಜಕಾರಣದಿಂದ ಹೊರಬರಲು ತಯಾರಾಗಿದ್ದಾರೆಯೇ?

– ಸಮಾಜ ಹೊಸತನವನ್ನು ಬಯಸುತ್ತಿದೆ. ಈ ಕಾಲಕ್ಕೆ ಪ್ರಸ್ತುತವಾದ ವಿಚಾರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಜನರು ಆಶಾದಾಯಕವಾಗಿದ್ದಾರೆ. ಇನ್ನೊಂದೆಡೆ ಅದೇ ಜನರು ತಮ್ಮ ಪ್ರೀತಿ, ನಂಬಿಕೆಯನ್ನು, ಅನೇಕ ಯೋಗ್ಯವಲ್ಲದ ವ್ಯಕ್ತಿಗಳ ಮೇಲೆಯೂ ತೋರಿದ್ದಾರೆ. ಅಂಥವರನ್ನೂ ಗೆಲ್ಲಿಸಿದ್ದಾರೆ.

ಆದರೆ ಪ್ರಧಾನಿ ನರೇಂದ್ರ ಮೋದಿಯವರು ಈ ಸನ್ನಿವೇಶವನ್ನು ಬದಲಾವಣೆ ಮಾಡುತ್ತಿದ್ದಾರೆ. ಡಿಜಿಟಲ್‌ ಎಕಾನಮಿ ಮೂಲಕ ಹಣವನ್ನು ಎಲ್ಲಿಂದ ಎಲ್ಲಿಯವರೆಗೆ ಬೇಕಾದರೂ ವರ್ಗಾವಣೆ ಮಾಡುವ ವಾತಾವರಣ ತಂದಿದ್ದಾರೆ. ಎಷ್ಟೇ ಭ್ರಷ್ಟಾಚಾರ ನಡೆಸಿದ್ದರೂ ಅದರ ಸಂಪೂರ್ಣ ಮೂಲವನ್ನು ಹುಡುಕಿ ಮಟ್ಟ ಹಾಕಬಹುದು ಎಂಬ ವಾತಾವರಣ ಇಂದು ಇದೆ. ಹಿಂದೆಲ್ಲ ಒಬ್ಬರೇ ಹತ್ತು ಪ್ಯಾನ್‌ ಕಾರ್ಡ್‌ ಹೊಂದಿದ್ದರು, ಇಂದು ಅದು ಸಾಧ್ಯವಿಲ್ಲ. ಡಿಜಿಟಲ್‌ ಪೇಮೆಂಟ್‌ ಮೂಲಕ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸಲಾಗುತ್ತಿದೆ.

ಆದರೆ ಇಷ್ಟೆಲ್ಲದರ ನಡುವೆಯೂ ಕೊಳಕು ಜನರು, ಕೊಳಕು ರಾಜಕಾರಣಿಗಳು, ಭ್ರಷ್ಟ ವ್ಯವಸ್ಥೆ ಇನ್ನೂ ಇದೆ. ಈ ಸಂಸ್ಕೃತಿಯನ್ನು ಕೆಲವರು ಬಯಸುತ್ತಿದ್ದಾರೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದರೆ ಜನರೂ ಜಾತಿ, ವ್ಯಕ್ತಿ, ಭಾಷೆಯನ್ನು ಮೀರಿ ಚುನಾವಣೆಯಲ್ಲಿ ಆಯ್ಕೆ ಮಾಡಬೇಕು. ಅದನ್ನು ಸರಿಪಡಿಸುವ ಪ್ರಯತ್ನಗಳು ದಿಟ್ಟವಾಗಿ ನಡೆಯುತ್ತಿವೆ. ಜಾತಿ, ಮತ ಮೀರಿ ಜನಮನ್ನಣೆ ಗಳಿಸಬಹುದು ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಉದಾಹರಣೆ. ಅಮೃತ ಕಾಲದ ಸನ್ನಿವೇಶದಲ್ಲಿ ನಾವೆಲ್ಲರೂ ಈ ನಿಟ್ಟಿನಲ್ಲಿ ನೋಡಲೇಬೇಕಿದೆ.

ಪ್ರಧಾನಿ ನರೇಂದ್ರ ಮೋದಿಯವರು ಚೆನ್ನಾಗಿ ಮಾರ್ಕೆಟಿಂಗ್‌ ಮಾಡುತ್ತಾರೆ ಎಂದು ಪ್ರತಿಪಕ್ಷಗಳು ಹೇಳುತ್ತವೆ. ಆಧಾರ್‌ ತಮ್ಮ ಯೋಜನೆ, ಅದರ ಕ್ರೆಡಿಟ್‌ ಬಿಜೆಪಿ ಪಡೆಯಿತು ಎಂದರು. ತ್ರಿವರ್ಣ ಧ್ವಜದ ಮೇಲೆ ಹಕ್ಕು ಕಾಂಗ್ರೆಸ್‌ಗೆ ಇದೆ, ಬಿಜೆಪಿಯವರು ಮಾರ್ಕೆಟಿಂಗ್‌ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆಯಲ್ಲ?

-ಆಧಾರ್‌ ಬಗ್ಗೆ ಜನರಿಗೆ ಏನು ತಿಳಿಸಲಾಗಿತ್ತು? ಅದನ್ನು ಸ್ಪಷ್ಟವಾಗಿ ಜನರಿಗೆ ತಿಳಿಸದೆ, ಜನರಲ್ಲಿ ನಂಬಿಕೆ ಮೂಡಿಸದೆ ನಾವೇ ಮಾಡಿದೆವು ಎನ್ನುತ್ತಾರೆ. ನರೇಂದ್ರ ಮೋದಿಯವರು ಅದನ್ನು ಕಡ್ಡಾಯ ಮಾಡಿದಾಗ ಇದೇ ಕಾಂಗ್ರೆಸ್‌ನವರು ಏಕೆ ವಿರೋಧಿಸಿದರು? ಇವರಲ್ಲಿ ಸ್ಪಷ್ಟತೆ ಇಲ್ಲ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ನಮ್ಮ ಅಧಿಕಾರದ ಸಮಯದಲ್ಲಿ ಪರಿಣಾಮಕಾರಿಯಾಗಿ ವಿಚಾರಗಳನ್ನು ಜನರಿಗೆ ತಿಳಿಸುತ್ತಿದ್ದೇವೆ. ಈ ಬದ್ಧತೆ, ನಾಯಕತ್ವ, ಸ್ಥೈರ್ಯ, ಕಾಳಜಿ ಅವರಿಗೆ ಇರಲಿಲ್ಲ, ನಮಗೆ ಇದೆ.

ತ್ರಿವರ್ಣ ಧ್ವಜ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದು ಎನ್ನುವುದು ಎಷ್ಟು ಚೀಪ್‌ ಆಲೋಚನೆ ಅಲ್ವ? ಹೀಗೆ ಹೇಳುವವರಿಗೆ ಬುದ್ಧಿ ಇದೆಯ? ತ್ರಿವರ್ಣ ಧ್ವಜವನ್ನು ಹಾರಿಸಲು ನಿರ್ಬಂಧ ವಿಧಿಸಿಕೊಂಡಿದ್ದರು ಇವರು. ನಿರ್ಬಂಧವನ್ನು ತೆರವುಗೊಳಿಸಿದ್ದರಿಂದ ಇಂದು ಜನರು ತಮ್ಮ ಮನೆಗಳ ಮೇಲೆ ಹಾರಿಸುತ್ತಿದ್ದಾರೆ. ಇಂದು ಕರ್ನಾಟಕದಲ್ಲಿ ಒಂದೂಕಾಲು ಕೋಟಿ ಮನೆಗಳಲ್ಲಿ ಧ್ವಜ ಹಾರಿಸುತ್ತಿದೆ. ಸಮಾಜಕ್ಕೆ ಯಾರಿಂದ ಒಳ್ಳೆಯದಾದರೂ ಸಂತೋಷ, ನಾವು ಇವರಿಗಿಂತ ಉತ್ತಮವಾಗಿ ಕೆಲಸ ಮಾಡೋಣ ಎನ್ನಬೇಕೆ ಹೊರತು, ಕೇವಲ ದೂಷಾರೋಪಣೆ ರಾಜಕೀಯ ಮಾಡುತ್ತಿದ್ದಾರೆ. ಇಂಥವರು ನಿಧಾನವಾಗಿ ಸಮಾಜದಲ್ಲಿ ಅಪ್ರಸ್ತುತವಾಗುತ್ತಾರೆ.

ಪ್ರಧಾನಿ ಮೋದಿಯವರು ಖಾದಿಗೆ ರಾಯಭಾರಿಯಾಗಿದ್ದಾರೆ. ಆದರೆ ಇಂದು ಪಾಲಿಸ್ಟರ್‌ ಧ್ವಜ ಬಳಕೆಗೆ ಅನುಮತಿ ನೀಡಲಾಗಿದೆ. ಒಂದೆರಡು ವರ್ಷ ಮುಂಚೆ ಯೋಚಿಸಿದ್ದರೆ, ದೇಶದ ಎಲ್ಲ ಜನರಿಗೂ ಖಾದಿ ಧ್ವಜವೇ ಲಭಿಸುವಂತೆ ಮಾಡುವ ಸುವರ್ಣ ಅವಕಾಶ ತಪ್ಪಿಹೋಗುತ್ತಿರಲಿಲ್ಲ ಅಲ್ಲವೇ?

ಇಂದು ಎಲ್ಲ ವಸ್ತುಗಳನ್ನೂ ಬಳಸಿ ಧ್ವಜ ತಯಾರಿಸಲಾಗುತ್ತಿದೆ. ನನ್ನ ಇಲಾಖೆಯ ಸ್ವಸಹಾಯ ಸಂಘಗಳಿಂದಲೇ ಮೂವತ್ತು ಲಕ್ಷ ಧ್ವಜ ತಯಾರಿಸಲಾಗಿದೆ. ಯಾವುದರಿಂದ ತಯಾರಿಸಬೇಕು ಎಂಬುದು ಚರ್ಚೆಯಾಗುತ್ತದೆ. ಆದರೆ ಎಲ್ಲರೂ ಧ್ವಜ ಹಾರಿಸಬೇಕು ಎಂಬ ಉದ್ದೇಶದಲ್ಲಿ ನಾವು ಸ್ಪಷ್ಟವಾಗಿದ್ದೇವೆ.

ನೆಹರೂ ಭಾವಚಿತ್ರವನ್ನು ಜಾಹೀರಾತಿನಲ್ಲಿ ಬಳಸಿಲ್ಲ ಎಂಬುದು ಒಂದೆಡೆಯಾದರೆ, ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್‌ ಫೋಟೊ ಬೇಡ ಎಂದು ಕೆಲವರು ಹೇಳುತ್ತಾರೆ, ಕೆಲವರು ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಹರಿಯುತ್ತಾರೆ. ಸ್ವಾತಂತ್ರ್ಯ ಲಭಿಸಿ 75 ವರ್ಷವಾದರೂ, ಸ್ವಾತಂತ್ರ್ಯ ಹೋರಾಟಗಾರರು ಯಾರು ಎಂದು ಫೈನಲ್‌ ಮಾಡುವುದರಲ್ಲೇ ಇದ್ದೇವೆಯೇ?

-ವಿಚಾರದಲ್ಲಿ ವ್ಯತ್ಯಾಸಗಳು ಸಮಾಜದಲ್ಲಿ ಇದ್ದೇ ಇರುತ್ತವೆ. ವೀರ ಸಾವರ್ಕರ್‌ ಬಗ್ಗೆ ಕಾಂಗ್ರೆಸ್‌ನವರಿಗೆ ಅಂತಹ ಅಭಿಪ್ರಾಯಗಳಿವೆ. ಸಾವರ್ಕರ್‌ ಅವರನ್ನು ಕೆಟ್ಟದಾಗಿ ಚಿತ್ರಿಸುವುದು, ಕಡೆಗಣಿಸುವುದು, ಅವಹೇಳನಕಾರಿ ಹೇಳಿಕೆ ನೀಡುವುದು ನಡೆದೇ ಇದೆ.

ನಾವು ಅಖಂಡ ಭಾರತದ ಬಗ್ಗೆ ಮಾತನಾಡುತ್ತೇವೆ. ಅಖಂಡ ಭಾರತವನ್ನು ವಿಭಜನೆ ಮಾಡಿದ ವ್ಯಕ್ತಿ ನೆಹರೂ ಅವರನ್ನು ಕೊಂಡಾಡುವ ಪ್ರಶ್ನೆಯೇ ಇಲ್ಲ. ಇದರಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಅಖಂಡ ಭಾರತ ವಿಭಜನೆ ಆದ ಸಂದರ್ಭದಲ್ಲಿ ಎಷ್ಟು ಜನ ಮಾನ, ಪ್ರಾಣ ಕಳೆದುಕೊಂಡರು, ಆ ಎಲ್ಲ ಸಾವು ನೋವುಗಳಿಗೆ ಯಾರು ಹೊಣೆ? ಅವರು ಸಾವರ್ಕರ್‌ ಕುರಿತು ಏನು ಬೇಕಾದರೂ ಹೇಳಬಹುದು, ನಾವು ನಿಜವಾದ ವಿಚಾರವನ್ನು ಜನರಿಗೆ ತಿಳಿಸಬಾರದೆ?

ಸಿದ್ದರಾಮೋತ್ಸವದ ಸಫಲತೆಯಿಂದ ಬಿಜೆಪಿಯಲ್ಲಿ ಆತಂಕ, ಎಚ್ಚರಿಕೆಯ ಲಕ್ಷಣಗಳೇನಾದರೂ ಇವೆಯೇ?

-ಸಿದ್ದರಾಮೋತ್ಸವದಿಂದ ಕಾಂಗ್ರೆಸ್‌ ಪಕ್ಷದ ಬಣ್ಣ ಸಂಪೂರ್ಣ ಬಯಲಾಯಿತು. ಕಾಂಗ್ರೆಸ್‌ ಪಕ್ಷಕ್ಕೆ ಇಷ್ಟು ಇತಿಹಾಸ ಇದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅಲ್ಲಿ ಸಿದ್ದರಾಮಯ್ಯ ಬಿಟ್ಟರೆ ಬೇರೆ ಯಾರೂ ನಾಯಕರಿಲ್ಲ ಎನ್ನುವುದು ಸಿದ್ದರಾಮೋತ್ಸವದಿಂದ ಸಾಬೀತಾಯಿತು. 75 ವರ್ಷ ತುಂಬಿದ್ದಕ್ಕೆ ಬೀಳ್ಕೊಡುಗೆ ಮಾಡಬೇಕಿತ್ತು. ನಿಮಗೆ 75 ವರ್ಷ ತುಂಬಿದೆ ಎಂದು ಹೇಳಬೇಕಿತ್ತು. 65 ವರ್ಷ ಆದಾಗಲೇ ಇನ್ನೈದು ವರ್ಷಕ್ಕೆ ನಿವೃತ್ತಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಅಲ್ಲಿಂದ ಇಲ್ಲಿಗೆ ಎಷ್ಟು ನಾಯಕರು ಆಗಿ ಹೋಗಿದ್ದಾರೆ, ಎಷ್ಟು ನೀರು ಹರಿದಿದೆ ಅಲ್ಲವೇ? ಈಗಿನ ಕಾಲಕ್ಕೆ ಇವರು ಎಷ್ಟು ಪ್ರಸ್ತುತವಾಗಿದ್ದಾರೆ ಎನ್ನುವುದನ್ನು ಅವರೇ ಯೋಚಿಸಬೇಕು.

ಕಾಂಗ್ರೆಸ್‌ನಿಂದ ಸಿದ್ದರಾಮೋತ್ಸವ, ಫ್ರೀಡಂ ಮಾರ್ಚ್‌. ಬಿಜೆಪಿಯಲ್ಲಿ ಕಾರ್ಯಕರ್ತರ ನಡುವೆ ಗೊಂದಲ, ನಾಯಕರುಗಳಿಂದ ಗೊಂದಲದ ಹೇಳಿಕೆಗಳು… 2023ರ ಚುನಾವಣೆಗೆ ಬಿಜೆಪಿ ಸಿದ್ಧವಾಗುತ್ತಿರುವ ರೀತಿ ಇದೇನಾ?

-ದೇಶಭಕ್ತಿ ಎಂದ ಕೂಡಲೆ ಒಬ್ಬ ವ್ಯಕ್ತಿ, ನಂಬಿಕೆ, ನಾಯಕತ್ವ ಗುಣಗಳು, ಪಾರದರ್ಶಕತೆ ಎಲ್ಲವೂ ಇರಬೇಕು. ಈ ಉತ್ಸವಗಳನ್ನು ಮಾಡುತ್ತಿರುವವರಲ್ಲಿ ಅರ್ಹತೆ ಇದೆಯೇ? ನಂಬಿಕೆ ಇದೆಯೇ? ಒಮ್ಮೆ ಜನರಲ್ಲಿ ನಂಬಿಕೆಯನ್ನು ಕಳೆದುಕೊಂಡವರಿಂದ ಏನನ್ನು ಬಯಸುವುದು? ಇಂಥವರು ಎಂತಹ ಮಾರ್ಚ್‌, ರ‍್ಯಾಲಿ ಮಾಡಿದರೂ, ಅವರು ಹರಸಾಹಸಪಟ್ಟರೂ, ಪಲ್ಟಿ ಹೊಡೆದರೂ ಏನೂ ಆಗುವುದಿಲ್ಲ. ನಮ್ಮ ಬಳಿ ಹಣ, ಶಕ್ತಿ, ಏನೇ ಇದೆ ಎಂದು ಇವರು ಹೇಳಬಹುದು, ಇಂತಹ ಅಪ್ರಸ್ತುತ ವ್ಯಕ್ತಿಗಳು ನೂರು ಫ್ರೀಡಂ ಮಾರ್ಚ್‌, ರ‍್ಯಾಲಿ ಮಾಡಿದರೂ ಯಾವ ವ್ಯತ್ಯಾಸವೂ ಆಗುವುದಿಲ್ಲ.

ಕಾರ್ಯಕರ್ತರ ಅಸಮಾಧಾನದ ಬಗ್ಗೆ ಹೇಳುವುದಾದರೆ, ಅವರ ಆಕ್ಷೇಪಣೆಯಲ್ಲಿ ಯಾವುದೇ ತಪ್ಪಿಲ್ಲ. ಎರಡೂ ಕಡೆ ನಮ್ಮದೇ ಸರ್ಕಾರ ಇದ್ದರೂ ಕಾರ್ಯಕರ್ತರು ಸಾವಿಗೀಡಾಗುತ್ತಾರೆ ಎನ್ನುವ ಪ್ರಶ್ನೆ ಕೇಳುವಂತದ್ದೇ. ಇಂತಹ ಪ್ರಶ್ನೆಯನ್ನು ಅವರು ನಮ್ಮ ಬಳಿ ಕೇಳದೆ ಸಿದ್ದರಾಮಯ್ಯ, ಶಿವಕುಮಾರ್‌ ಬಳಿ ಕೇಳುವುದಕ್ಕಾಗುತ್ತದೆಯೇ? ಮನೆಯಲ್ಲಿ ತಂದೆ ಮಗನನ್ನು, ಮಗ ತಂದೆಯನ್ನು ಪ್ರಶ್ನಿಸುವುದು ಇದ್ದೇ ಇದ್ದೇ ಇರುತ್ತದೆ. ಈ ನಿಟ್ಟಿನಲ್ಲಿ ಸರಿಪಡಿಸುವ ಪ್ರಯತ್ನಗಳು ನಡೆದಿವೆ.

ಪರೇಶ್‌ ಮೇಸ್ತಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದವರಿಗೆ ವಕ್ಫ್‌ ಬೋರ್ಡ್‌ ಉಪಾಧ್ಯಕ್ಷನಾಗಿ ನೇಮಕ ಮಾಡಲಾಗಿದೆ. ಸಂಘಟನೆ ಹಾಗೂ ಸರ್ಕಾರದ ನಡುವೆ ಸಮನ್ವಯತೆ ಎಲ್ಲಿದೆ ಹಾಗಾದರೆ?

ಇಂತಹ ಸೂಕ್ಷ್ಮ ವಿಚಾರಗಳನ್ನು ಪರಿಶೀಲನೆ ಮಾಡುತ್ತೇವೆ. ನಾವೆಲ್ಲರೂ ಕಾರ್ಯಕರ್ತರಾಗಿಯೇ ಬೆಳೆದಿರುವವರು. ಗೊತ್ತೋ ಗೊತ್ತಿಲ್ಲದೆಯೇ ಅಂತಹದ್ದು ಆಗಿದ್ದರೆ ಮುಂದೆ ಸರಿಯಾಗುತ್ತದೆ.

ಇಲ್ಲಿವರೆಗೆ ಅನೇಕ ಬಿಜೆಪಿ ನಾಯಕರು ರಾಮನಗರ, ಮಂಡ್ಯದಲ್ಲಿ ಬಿಜೆಪಿ ಪರವಾಗಿ ಚುನಾವಣೆಗಳನ್ನು ನಡೆಸಿದ್ದಾರೆ. ಆದರೆ ಈಗ ನಿಮ್ಮ ವಿರುದ್ಧ ಪ್ರತಿಪಕ್ಷಗಳು ನಡೆಸಿದಷ್ಟು ದಾಳಿಯನ್ನು ಈ ಹಿಂದೆ ನಡೆಸಿರಲಿಲ್ಲ. ಇದಕ್ಕೆ ಕಾರಣ ಏನು?

-ನಾವು ಯಾರನ್ನೂ ದ್ವೇಷಿಸಬೇಕು, ಅಸಡ್ಡೆಯಾಗಿ ನಡೆದುಕೊಳ್ಳಬೇಕು ಎಂಬ ಉದ್ದೇಶವಿಲ್ಲ. ನಮ್ಮ ಮುಖ್ಯಮಂತ್ರಿಯವರು ಮೂರು ವರ್ಷದ ನಂತರ ನಮ್ಮ ಜಿಲ್ಲೆಗೆ ಭೇಟಿ ನೀಡಿದಾಗ ಯಾವ ರೀತಿ ವರ್ತನೆ ಇರಬೇಕಿತ್ತೋ ಹಾಗೆ ಅವರ ವರ್ತನೆ ಇರಲಿಲ್ಲ. ಇವರು ಅಸಡ್ಡೆಯಾಗಿ ನಡೆದುಕೊಂಡರೂ ಮುಖ್ಯಮಂತ್ರಿಯವರು ಗೌರವಯುತವಾಗಿ ನಡೆದುಕೊಂಡರು. ನಾನು ಮಾತನಾಡಿದ ಮೇಲೆ ಎಂಪಿ ಮಾತನಾಡಿ, ನಂತರ ಮುಖ್ಯಮಂತ್ರಿ ಮಾತನಾಡಿದರು. ಇದಕ್ಕಿಂತ ಇನ್ನೇನು ಗೌರವ ಕೊಡಬೇಕು ಅವರಿಗೆ? ಪ್ರತಿಮೆಗೆ ಮಾಲಾರ್ಪಣೆ ಸಂದರ್ಭದಲ್ಲಿ ನಾನು ಕೆಳಗೆ ಇಳಿದು ಅವರನ್ನೇ ಮೇಲೆ ಹತ್ತಿಸಿದೆ. ಆದರೆ ವೇದಿಕೆಗೆ ಬಂದ ಮೇಲೆಯೂ ಹಿಂಬಾಲಕರನ್ನು ಕೂರಿಸಿಕೊಂಡು ಗಲಾಟೆ ಮಾಡಿದರು.

ಹೇಗೆ ಬೇಕಾದರೂ ವರ್ತನೆ ತೋರಲು ಇದು ಅವರ ಮನೆಯೇ? ಸರ್ಕಾರ ತನ್ನ ಶಕ್ತಿಯನ್ನು ಇಂತಹ ಸಂದರ್ಭದಲ್ಲಿ ಮುಲಾಜಿಲ್ಲದೆಯೇ ತೋರಿಸಲೇಬೇಕಾಗುತ್ತದೆ. ಈ ರೀತಿ ವರ್ತನೆಯನ್ನು ಸಹಿಸಲು ನಾನು ಸಿದ್ಧನಾಗಿಲ್ಲ. ಅಸಹಾಯಕನಾಗಿ ಬಾಳುವುದರಲ್ಲಿ ಏನೂ ಅರ್ಥ ಇಲ್ಲ. ಇದೆಲ್ಲವನ್ನೂ ಬಿಟ್ಟು ಕೆಲಸದ ಮೂಲಕ ಅವರೇನು ಮಾಡಿದ್ದಾರೆ ಎನ್ನುವ ಗಂಡಸ್ತನವನ್ನು ತೋರಿಸಲಿ. ಅದನ್ನು ಬಿಟ್ಟು ವೇದಿಕೆಯಲ್ಲೇ ಡ್ಯಾಷ್‌ ಹೊಡೀತೀವಿ ಎನ್ನುವುದನ್ನು ನೋಡಲು ನಾವಿದ್ದೇವೆಯೇ?

ಕುಮಾರಸ್ವಾಮಿ ಅವರ ಬಗ್ಗೆ ಹೇಳುವುದಾದರೆ, ಮಾತೆತ್ತಿದರೆ ಫೇಕ್‌ ಮಾರ್ಕ್ಸ್‌ ಕಾರ್ಡ್‌, ಬಿಬಿಎಂಪಿ ಫೈಲ್‌ ಸುಟ್ಟವರು ಎನ್ನುತ್ತಾರೆ. ಯಾವ ಆಧಾರ ಇಟ್ಟುಕೊಂಡು ಇವರು ಮಾತನಾಡುತ್ತಾರೆ? ಮುಖ್ಯಮಂತ್ರಿಯಾಗಿದ್ದವನು ಒಂದು ಹೇಳಿಕೆ ಕೊಡುವ ಮುನ್ನ ಆಧಾರ ಇರಬೇಕಲ್ವ? ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾಗ ಇದನ್ನು ಏಕೆ ತನಿಖೆ ನಡೆಸಿಲ್ಲ? ನಾನು ಇವರ ರೀತಿ ರಾಜಕೀಯಕ್ಕೆ ಜೀವನೋಪಾಯಕ್ಕೆ ಬಂದಿಲ್ಲ. ಇನ್ನೊಬ್ಬರ ರಕ್ತ, ಹೆಸರಿನ ಮೇಲೆ ಬದುಕಬೇಕು ಎಂದು ಬಂದಿಲ್ಲ. ಸುಳ್ಳು ಹೇಳಿಕೊಂಡು ಅತ್ತು ಕರೆದು ಬದುಕುವಂತಹ ನೀಚ ನಾನಲ್ಲ. ಇದೆಲ್ಲವನ್ನೂ ಮೌನವಾಗಿ ಸಹಿಸಿಕೊಂಡಿದ್ದೇನೆ. ತೀಕ್ಷ್ಣವಾಗಿಯೂ ಉತ್ತರ ನೀಡಿದ್ದೇನೆ. ಈಗಾಗಲೆ ಅವರಿಗೆ ಲೀಗಲ್‌ ನೋಟಿಸ್‌ ಕೊಟ್ಟಿದ್ದೇನೆ. ಇವರ ರೀತಿ ನಾವು ಆಕ್ಸಿಡೆಂಟ್‌ ಕೇಸ್‌ಗಳಲ್ಲ. ಸ್ಪಷ್ಟವಾದ ಉದ್ದೇಶವನ್ನು ಇಟ್ಟುಕೊಂಡು ಬಂದಿದ್ದೇವೆ.

ಡಿ.ಕೆ. ಶಿವಕುಮಾರ್‌ ಅವರನ್ನು ಮಣಿಸಲು ಕುಮಾರಸ್ವಾಮಿ ಅವರು ನಿಮಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತಿತ್ತಲ್ಲ, ಅದು ಈಗ ಬದಲಾಗಲು ಕಾರಣ?

-ಶತ್ರುವಿನ ಶತ್ರು ಮಿತ್ರ ಎಂಬ ಭಾವನೆಯನ್ನು ಅವರು ಇಟ್ಟುಕೊಂಡಿದ್ದರು. ಆದರೆ ಒಮ್ಮೆ ಕಾರ್ಯಕ್ರಮದಲ್ಲಿ, ವಿಶ್ವದ ಒಕ್ಕಲಿಗರೆಲ್ಲ ನನ್ನ ಬಂಧುಗಳೇ ಎಂದು ನಾನು ಹೇಳಿದ ಕೂಡಲೆ ಅವರಿಗೆ ಉರಿದುಹೋಯಿತು. ಆಗಲೇ ಪ್ಲೇಟ್‌ ಚೇಂಜ್‌ ಆಗಿ ಹೋಯಿತು. ನಾನು ಅವರಿಗಿಂತಲೂ(ಡಿ.ಕೆ. ಶಿವಕುಮಾರ್‌ ಬ್ರದರ್ಸ್‌) ಡೇಂಜರಸ್‌ ಎನ್ನುವುದು ಅವರಿಗೆ ತಿಳಿದು ಹೀಗೆ ಮಾತನಾಡಿದರು. ಇವರ ಸರ್ಟಿಫಿಕೇಟ್‌ ಯಾರಿಗೆ ಬೇಕು? ನನಗೆ ಪಕ್ಷ, ಜನರ ಬೆಂಬಲ ಸಾಕು.

ರಾಮನಗರದಲ್ಲಿ ಸಕ್ರಿಯವಾಗಿರುವುದನ್ನು ಕಂಡು, ಮಲ್ಲೇಶ್ವರದಿಂದ ರಾಮನಗರಕ್ಕೆ ತೆರಳುತ್ತೀರ ಎಂಬ ಚರ್ಚೆ ಇತ್ತಲ್ಲ?

-ಮಲ್ಲೇಶ್ವರದ ಜನರು ನನ್ನನ್ನು ಪ್ರೀತಿಸಿ ಗೆಲ್ಲಿಸಿದ್ದಾರೆ. ಅವರನ್ನು ಬಿಟ್ಟು ನಾನ್ಯಾಕೆ ಹೋಗಬೇಕು? ನಿಜ ಹೇಳಬೇಕೆಂದರೆ, ಜಿಲ್ಲಾ ಉಸ್ತುವಾರಿ ಸಚಿವನಾಗಿ ರಾಮನಗರದಲ್ಲಿ ಕೆಲಸ ಮಾಡುತ್ತಿದ್ದೇನೆ. ಜವಾಬ್ದಾರಿಯುತ ಸಚಿವನಾಗಿ ಆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಮಾಡಬೇಕು. ಸ್ಥಳೀಯ ಜನಪ್ರತಿನಿಧಿಗಳ ಜತೆಗೆ ಕೆಲಸ ಮಾಡಬೇಕು ಎಂದು ಹೋಗಿದ್ದೇನೆ. ನನಗೆ ಯಾವುದೇ ವೈಮನಸ್ಯ, ಧ್ವೇಷ ಭಾವನೆ ಇಲ್ಲ. ಕೆಲವು ಸಂದರ್ಭದಲ್ಲಿ ನಡೆದ ಘಟನೆಗಳು ವ್ಯತಿರಿಕ್ತವಾಗಿದ್ದವು ಅಷ್ಟೆ. ಉಳಿದಂತೆ ನಮ್ಮ ಕೆಲಸಗಳನ್ನು ಪಕ್ಷಾತೀತವಾಗಿ ನಡೆಸುತ್ತಿದ್ದೇವೆ. ಅಲ್ಲಿ ಸ್ಪರ್ಧಿಸಬೇಕು ಎಂಬ ರಾಜಕೀಯ ಸ್ವಾರ್ಥದಿಂದ ನಾನು ರಾಮನಗರಕ್ಕೆ ಹೋಗಿಲ್ಲ.

ಬಿಬಿಎಂಪಿ ಅಭಿವೃದ್ಧಿಯಲ್ಲಿ, ಬಿಬಿಎಂಪಿ ಚುನಾವಣೆಯಲ್ಲಿ ನಿಮಗೆ ಅಗತ್ಯ ಅವಕಾಶಗಳನ್ನು ನೀಡುತ್ತಿಲ್ಲ ಎಂಬ ಮಾತುಗಳಿವೆಯಲ್ಲ?

-ಬೆಂಗಳೂರು ಉಸ್ತುವಾರಿ ಸಚಿವರಾಗಿ ಮುಖ್ಯಮಂತ್ರಿಯವರೇ ಇದ್ದಾರೆ. ಅದೇ ಜಿಲ್ಲೆಯ ಸಚಿವರು ಉಸ್ತುವಾರಿ ಆಗಿರಬಾರದು ಎನ್ನುವಂತಹ ನೀತಿಯಿಂದಾಗಿ ನಮಗೆ ಅವಕಾಶ ಸಿಕ್ಕಿಲ್ಲ. ಸಿಎಂ ಮಾರ್ಗದರ್ಶನದಲ್ಲಿ ಎಲ್ಲವೂ ನಡೆಯುತ್ತಿವೆ, ನಮ್ಮಿಂದ ಸಲಹೆಗಳನ್ನು ಪಡೆಯುತ್ತಾರೆ. ನಮ್ಮ ಪಾತ್ರ ಇಲ್ಲಿ ಸೀಮಿತವಾದದ್ದು.

ಬೆಂಗಳೂರಿನಲ್ಲಿ ಸಾರಿಗೆ, ಮೆಟ್ರೊ, ಸಬ್‌ಅರ್ಬನ್‌, ವೈಟ್‌ ಟಾಪಿಂಗ್‌, ನೀರು ಸರಬರಾಜು, ನೈರ್ಮಲ್ಯ, ವಿದ್ಯಾಸಂಸ್ಥೆಗಳು, 13 ಸಾವಿರ ಕಿಲೋಮೀಟರ್‌ ರಸ್ತೆ ಅಭಿವೃದ್ಧಿ ಆಗುತ್ತಿದೆ. ಈ ನಡುವೆ ಕೋವಿಡ್‌ ಸಮಸ್ಯೆ ಎದುರಾಯಿತು. ಜನರ ಜೀವ ಉಳಿಸಿದರೆ ಸಾಕು ಎನ್ನುವ ಸ್ಥಿತಿ ಇತ್ತು, ಹಾಗಾಗಿ ಕೆಲಸದಲ್ಲಿ ಸ್ವಲ್ಪ ನಿಧಾನವಾಗಿದೆ. ಕಸ ನಿರ್ವಹಣೆಗೆ ಇಂದೋರ್‌ಗಿಂತಲೂ ಉತ್ತಮ ಯೋಜನೆಯನ್ನು ಈಗಾಗಲೆ ಆರಂಭಿಸಲಾಗಿದೆ, ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ತಂದಿದ್ದೇವೆ, ಭೂಸುಧಾರಣೆ ತಂದಿದ್ದೇವೆ, ವಿಶೇಷ ಹೂಡಿಕೆ ಪ್ರದೇಶಗಳನ್ನು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವೇಗ ಪಡೆಯುತ್ತವೆ.

ಆಗಸ್ಟ್‌ 28ರಂದು ಜನೋತ್ಸವ ಮತ್ತೆ ನಿಗದಿ ಆಗಿದೆ. ಇದರ ನಂತರವಾದರೂ ಬಿಜೆಪಿ ಚುನಾವಣೆ ಮೂಡ್‌ಗೆ ಬರುತ್ತದೆಯೇ ಅಥವಾ ಈಗಿನಂತೆಯೇ ಗೊಂದಲಗಳು ಮುಂದುವರಿಯುತ್ತವೆಯೇ?

-ಸ್ಥಿರತೆ ಇರುವ ಪಕ್ಷ ಎಂದರೆ ಬಿಜೆಪಿ. ಪಕ್ಷಕ್ಕೆ ಆ ರೀತಿ ಶಕ್ತಿ, ಬದ್ಧತೆ ಇದೆ. ಗೊಂದಲ, ಸಮಸ್ಯೆಗಳು ಯಾವುದೂ ಇಲ್ಲ. ಬಿ.ಎಸ್‌. ಯಡಿಯೂರಪ್ಪನವರು ನಮ್ಮ ಸರ್ವೋಚ್ಚ ನಾಯಕರು. ವಯಸ್ಸಿನ ಕಾರಣಕ್ಕೆ ಸ್ವಯಿಚ್ಛೆಯಿಂದ ಹಿಂದೆ ಸರಿದಿದ್ದಾರೆ. ಅವರ ಸ್ಥಾನಕ್ಕೆ ಜ್ಞಾನಿಗಳು, ತಿಳಿವಳಿಕೆ ಉಳ್ಳವರು, ಸುದೀರ್ಘ ರಾಜಕೀಯ ಅನುಭವ ಇರುವ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಇದೆಲ್ಲದರ ನಡುವೆ ಕೆಲವೇ ವ್ಯಕ್ತಿಗಳು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಇವರ ಹೇಳಿಕೆ ಹಿಂದೆ ಅಜೆಂಡಾ ಇರುತ್ತವೆ. ಯಾರಾದರೂ ಪಕ್ಷದ ಶಿಸ್ತಿನ ಸಿಪಾಯಿಗಳು ಇಂತಹ ಹೇಳಿಕೆ ಕೊಡುತ್ತಾರ? ಗೊಂದಲ ನಿರ್ಮಾಣ ಮಾಡಬೇಕು ಎಂಬ ದುರುದ್ದೇಶ ಹೊಂದಿರುವವರನ್ನು ಖಂಡಿಸುತ್ತೇವೆ, ಪಕ್ಷ ಅದರ ಬಗ್ಗೆ ಕ್ರಮ ಕೈಗೊಳ್ಳುತ್ತದೆ. ಇದು ನಮ್ಮ ಪ್ರೈವೇಟ್‌ ಕಂಪನಿಯಲ್ಲ, ಪಕ್ಷದ ಜತೆಯಲ್ಲಿ ಜೋಡಿಸಿಕೊಳ್ಳಬೇಕು. ವ್ಯತ್ಯಾಸಗಳಿದ್ದವರು ಪಕ್ಷದಿಂದ ಹೊರಹೋಗುವುದು ಉತ್ತಮ.

ಸರ್ಕಾರ ಮೂರು ವರ್ಷ ಪೂರೈಸುತ್ತಿರುವುದನ್ನು ಜನರ ವಿಶ್ವಾಸದೊಂದಿಗೆ ಆಯೋಜನೆ ಮಾಡುತ್ತಿದ್ದೇವೆ, ಆಗಸ್ಟ್‌ 28ರ ನಂತರ ಇನ್ನಷ್ಟು ಒಗ್ಗಟ್ಟಿನಲ್ಲಿ, ಬಲಿಷ್ಠವಾಗಿ ಹೆಜ್ಜೆಗಳನ್ನು ಇಡುತ್ತೇವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲೆ/ಸಾಹಿತ್ಯ

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

ಸಕಲೇಶಪುರದ ಮಕ್ಕಿತಿಟ್ಟದಲ್ಲಿ ನಡೆದ ʼಕಥೆಕೂಟʼ ವಾಟ್ಸ್ಯಾಪ್‌ ಗುಂಪಿನ ಒಂಬತ್ತನೇ ವಾರ್ಷಿಕೋತ್ಸವ ಹಾಗೂ ಆರನೇ ಸಮಾವೇಶದ ಎರಡನೇ ದಿನ ನಡೆದ ‘ಮುಕ್ತಕಥಾ’ ಸಂವಾದ ಕಾರ್ಯಕ್ರಮದಲ್ಲಿ ಟಿಎನ್ನೆಸ್ ಮತ್ತು ಡುಂಡಿರಾಜ್ ತಮ್ಮ ಕಥಾಜೀವನ- ಕಾವ್ಯಜೀವನದ ಅಂತರಂಗವನ್ನು ತೆರೆದಿಟ್ಟರು.

VISTARANEWS.COM


on

ಕಥೆಕೂಟ literature meet
Koo

ಬೆಂಗಳೂರು: ನಾನು ಸಾಹಿತ್ಯ ಸಿನಿಮಾ ಎಂದು ಬೆಂಗಳೂರಿನಲ್ಲಿ ಬದುಕು ಹುಡುಕಿಕೊಳ್ಳುತ್ತಿದ್ದಾಗ ತಂದೆ ಊರಿನಲ್ಲಿ ನನಗಾಗಿ ಜಮೀನು ಮಾಡಿಟ್ಟು ಊರಿಗೆ ಬಾ ಎಂದು ಕರೆದರು. ನಾನು, ನಿಮ್ಮ ಜಮೀನು ನನಗೆ ಬೇಕಿಲ್ಲ ಎಂದು ಉತ್ತರಿಸಿ ಪತ್ರ ಬರೆದೆ. ಇದಾದ ತಿಂಗಳೊಳಗೆ ಅವರು ಕಾಯಿಲೆ ಉಲ್ಬಣಿಸಿ ತೀರಿಕೊಂಡರು. ಊರಿಗೆ ಹೋದೆ. ತಂದೆ ನನ್ನ ಪತ್ರ ತಲುಪಿದ ಬಳಿಕ ಕೊರಗಿನಲ್ಲಿ ತಮ್ಮ ಮಾತ್ರೆಗಳನ್ನು ಸೇವಿಸಿರಲಿಲ್ಲ ಎಂದು ಗೊತ್ತಾಯಿತು. ತಂದೆಯ ಸಾವಿಗೆ ಕಾರಣವಾದೆ ಎಂಬ ಪಶ್ಚಾತ್ತಾಪದಿಂದ ದಗ್ಧನಾದೆ. ಮುಂದೆ ಇದೇ ಘಟನೆಯನ್ನಿಟ್ಟುಕೊಂಡು ಒಂದು ನಾಟಕ ಬರೆದೆ. ಅದೇ ‘ಬದುಕ ಮನ್ನಿಸು ಪ್ರಭುವೆ’. ಇದಕ್ಕೆ ಲಂಕೇಶ್, ರಾಮಚಂದ್ರ ಶರ್ಮ ಅವರೆಲ್ಲ ಸ್ಪರ್ಧಿಸಿದ್ದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಬಂತು. ಅದು ನನ್ನ ಕಣ್ಣೀರಿನಿಂದ ಮೂಡಿದ ಕೃತಿ. ನಮ್ಮ ನಮ್ಮ ಕಣ್ಣೀರುಗಳನ್ನು, ನಿಟ್ಟುಸಿರುಗಳನ್ನು ಹಿಂಬಾಲಿಸುತ್ತ ಹೋದರೆ ನೈಜ ಕತೆಗಳೋ ಕಾದಂಬರಿಗಳೋ ಬರೆಸಿಕೊಳ್ಳುತ್ತವೆ.

  • ಟಿಎನ್ ಸೀತಾರಾಮ್ ಹೀಗೆ ತಮ್ಮ ಬದುಕಿನಿಂದ ಆಯ್ದ ಒಂದು ಘಟನೆಯನ್ನು ಎತ್ತಿಕೊಂಡು, ಅದಕ್ಕೂ ತಮ್ಮ ಸೃಜನಶೀಲತೆಗೂ ಇದ್ದ ಸಂಬಂಧವನ್ನು ವಿವರಿಸುತ್ತಾ ಇದ್ದರೆ ಎದುರು ಕುಳಿತ ಕಥೆಕೂಟಿಗರು ಮಂತ್ರಮುಗ್ಧ.

ಸಕಲೇಶಪುರದ ಮಕ್ಕಿತಿಟ್ಟದಲ್ಲಿ ನಡೆದ ʼಕಥೆಕೂಟʼ ವಾಟ್ಸ್ಯಾಪ್‌ ಗುಂಪಿನ ಒಂಬತ್ತನೇ ವಾರ್ಷಿಕೋತ್ಸವ ಹಾಗೂ ಆರನೇ ಸಮಾವೇಶದ ಎರಡನೇ ದಿನ ನಡೆದ ‘ಮುಕ್ತಕಥಾ’ ಸಂವಾದ ಕಾರ್ಯಕ್ರಮದಲ್ಲಿ ಟಿಎನ್ನೆಸ್ ಮತ್ತು ಡುಂಡಿರಾಜ್ ತಮ್ಮ ಕಥಾಜೀವನ- ಕಾವ್ಯಜೀವನದ ಅಂತರಂಗವನ್ನು ತೆರೆದಿಟ್ಟರು.

ನಾವು ನೊಂದ ನೋವಿನಲ್ಲಿ ನಮ್ಮ ಜೀವವಿರುತ್ತದೆ. ನಮ್ಮ ಕಣ್ಣೀರು ನಿಟ್ಟುಸಿರನ್ನು ಹಿಂಬಾಲಿಸಿದಾಗಲೇ ನಾವು ಬರೆಯಬೇಕಾದ ಕತೆ ಸಿಗುತ್ತದೆ. ಹಾಗಾಗಿ ನಾನು ಬರೆಯುವ ಕತೆಗಳಲ್ಲಿ ನಿಜವಾದ ನಾನು ಇರುತ್ತೇನೆ. ಹೊರತು, ನಿಮ್ಮ ಜೊತೆ ಒಡನಾಡುತ್ತಿರುವ ನಾನು ಸುಳ್ಳಿರಬಹುದು. ಆದರೆ ನನ್ನ ಕತೆಗಳು ಸುಳ್ಳಲ್ಲ. ನನ್ನ ಕತೆಯೇ ಸತ್ಯ ಎಂದರು ಟಿಎನ್ನೆಸ್. ನಾನು ಇದುವರೆಗೂ ಸೀರಿಯಲ್‌ಗಳಿಗಾಗಿ ಪ್ರತಿದಿನದಂತೆ ಸುಮಾರು 7000 ಕತೆಗಳನ್ನು ಬರೆದಿದ್ದೇನೆ. ಮನುಷ್ಯ ಮೂಲಭೂತವಾಗಿ ಕತೆ ಕಟ್ಟುವವನಾದ್ದರಿಂದ ಇದು ಸಾಧ್ಯವಾಗಿದೆ ಎಂದವರ ಮಾತು.

ಹಾಸ್ಯಕವನ, ಹನಿಕವನ ಬರೆಯುವುದು ನನ್ನ ಆಯ್ಕೆಯಾಗಿರಲಿಲ್ಲ. ಅದು ಅನಿವಾರ್ಯ ಆಗಿತ್ತು. ಮಾಧ್ಯಮಗಳೂ ಕೆಲವೊಮ್ಮೆ ಅದನ್ನೇ ಬಯಸುತ್ತಿದ್ದವು. ನನಗೆ ಗಂಭೀರ ಕಾವ್ಯ ರಚನೆ ಇಷ್ಟವೇ. ಹಲವು ಗಂಭೀರ ಕಾವ್ಯ ರಚಿಸಿದ್ದೇನೆ ಕೂಡಾ. ಆದರೆ ಜನರ ಗಮನ ಹೆಚ್ಚು ಸೆಳೆದದ್ದು ಹನಿಗವನಗಳು ಎಂಬುದು ಡುಂಡಿರಾಜ್ ಮಾತಾಗಿತ್ತು. ಹಾಲು ಮಾರಲು ಬರುತ್ತಿದ್ದ ಹುಡುಗಿಯ ಬಗ್ಗೆ ಬರೆದ ಮೊದಲ ಕವನ ನೆನಪಿಸಿಕೊಂಡರು ಡುಂಡಿ.

ಗಂಭೀರ ಕವನ ಬರೆಯಲು ಸಾಕಷ್ಟು ಜನರಿದ್ದಾರೆ; ಆದರೆ ಹನಿಗವನ ಬರೆಯುವುದರಲ್ಲಿ ನಿನಗೆ ಸ್ಪರ್ಧಿಗಳಿಲ್ಲ ಎಂದು ಗೆಳೆಯ ಬಿಆರೆಲ್ ತನಗೆ ಒತ್ತಾಸೆಯಾಗಿ ನಿಂತುದನ್ನು ಡುಂಡಿ ನೆನಪಿಸಿಕೊಂಡರು. ಆತ್ಮತೃಪ್ತಿಯ ರಚನೆಗಳು ಮತ್ತು ಜನಪ್ರಿಯ ರಚನೆಗಳು- ಎರಡರ ನಡುವೆ ಭೇದ ಇದ್ದೇ ಇರುತ್ತದೆ. ಹೊಟ್ಟೆಪಾಡಿನ ಪ್ರಶ್ನೆ ಬಂದಾಗ ಜನಪ್ರಿಯ ರಚನೆಗಳು ಅನಿವಾರ್ಯವಾಗುತ್ತವೆ; ಆತ್ಮತೃಪ್ತಿ ಬದಿಗೆ ಸರಿಯುತ್ತದೆ ಎಂಬುದು ಇಬ್ಬರ ಒಕ್ಕೊರಲ ಉತ್ತರವಾಗಿತ್ತು.

ಅನಂತ ಕುಣಿಗಲ್ ಚುರುಕಾದ ಪ್ರಶ್ನೆಗಳ ಮೂಲಕ ಈ ಕಾರ್ಯಕ್ರಮ ನಡೆಸಿಕೊಟ್ಟರು. ಕವಿತಾ ಹೆಗಡೆ ಅಭಯಂ ಕಾರ್ಯಕ್ರಮವನ್ನು ನಿರ್ವಹಿಸಿದರು. ಜೋಗಿ, ಗೋಪಾಲಕೃಷ್ಣ ಕುಂಟಿನಿ ಉಪಸ್ಥಿತರಿದ್ದರು.

ಇದನ್ನೂ ಓದಿ: Pustaka Sante : ವೀರಲೋಕ ಪುಸ್ತಕ ಸಂತೆ ಅದ್ಧೂರಿ ಆರಂಭ, ವೆರಿ ಗುಡ್ ಎಂದು ಬೆನ್ನುತಟ್ಟಿದ ಸಿಎಂ ಸಿದ್ದರಾಮಯ್ಯ

Continue Reading

ಕರ್ನಾಟಕ

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

CM Siddaramaiah: ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಅವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ವಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಅಭಿನಂದನೆ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.

ಹಾಲಿನ ಉತ್ಪಾದನೆ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ

ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಮಾರುಕಟ್ಟೆ ಅಗತ್ಯವಿದೆ, ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕದರವನ್ನಷ್ಟೇ ನಿಗದಿ ಮಾಡಲಾಗಿದೆ ಎಂದರು.

ಹಾಲಿನ ದರ ಏರಿಕೆಯಾಗಿಲ್ಲ: ಕಾಫಿ, ಟೀ ದರಗಳ ಹೆಚ್ಚಳ ಸಲ್ಲದು

ಹೋಟೆಲ್ ಮಾಲೀಕರ ಸಂಘದವರು ಸಭೆ ಸೇರಿ ಕಾಫಿ‌, ಟೀ ದರಗಳನ್ನು ಹೆಚ್ಚಿಸಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹೇಗೆ ಹೆಚ್ಚಿಸುತ್ತಾರೆ, ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು ಎಂದರು.

ಇದನ್ನೂ ಓದಿ | CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

ರೈತರಿಂದ ಹಾಲು ಕೊಳ್ಳಬೇಕು

ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಳ್ಳಬೇಕೆ ಹೊರತು ಚೆಲ್ಲಲಾಗುವುದಿಲ್ಲ. ಕೊಳ್ಳುವವವರಿಗೆ ಹಾಲು ಹೆಚ್ಚಾಗಿ ದೊರೆಯುತ್ತಿದ್ದು ಜನ ಹಾಲನ್ನು ಕೊಳ್ಳಬೇಕು ಎಂದರು. ಇದೇ ವೇಳೆ ಸಂಸದರ ಸಭೆಗೆ ದೆಹಲಿಗೆ ತೆರಳುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹೋಗುವಾಗ ಹೇಳುತ್ತೇನೆ ಎಂದರು.

Continue Reading

ಕರ್ನಾಟಕ

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Self Harming: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾರ್ಮೆಂಟ್ಸ್‌ನಲ್ಲಿ ಕೆಲಸದಿಂದ ತೆಗೆದು ಬೇರೆಲ್ಲೂ ಕೆಲಸ ಸಿಗದಂತೆ ಕಿರುಕುಳ ನೀಡಲಾಗಿದೆ ಎಂದು ಡೆತ್‌ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.

VISTARANEWS.COM


on

Self Harming
Koo

ಮೈಸೂರು: ಕಂಪನಿಯಲ್ಲಿ ಕೆಲಸದಿಂದ ತೆಗೆದು ಕಿರುಕುಳ ನೀಡಿದ್ದಾರೆ ಎಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಿ.ನರಸೀಪುರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ಯುವಕ.

ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್‌ನಲ್ಲಿ ಯುವಕ ಕಿರಣ್‌ ಕೆಲಸ ಮಾಡುತ್ತಿದ್ದ. ಆದರೆ, ಕಂಪನಿಯಲ್ಲಿ ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎ.ಜಿ.ಎಂ ಲೋಕೇಶ್‌ ಹಾಗೂ ಎಚ್.ಆರ್. ಎ.ಜಿ.ಎಂ ಅನಿಲ್ ಕಾರಣ ಎಂದು ಡೆತ್‌ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.

ನನ್ನನ್ನು ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಲೋಕೇಶ್‌ ಮತ್ತು ಅನಿಲ್‌ ಅವರಿಂದ ಕೆಲಸ ಸಿಗದ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಮೃತ ಕಿರಣ್ ಉಲ್ಲೇಖ ಮಾಡಿದ್ದಾನೆ. ಈ ಬಗ್ಗೆ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Life threat

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್‌ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಈ ಬಗ್ಗೆ ಟರ್ಮಿನಲ್‌ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್‌ ಕುಮಾರ್‌ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯ

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ನಗರದ ಕಾಶಿಪುರದಲ್ಲಿ ನಡೆದಿದೆ. ಗಣೇಶ್ ಹಾಗೂ ರಾಜು ಗಾಯಾಳುಗಳು.

ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ಪಕ್ಕದಲ್ಲೇ ಇದ್ದ ವಿದ್ಯುತ್ ತಂತಿಯನ್ನು ರಾಜು ಮುಟ್ಟಿದ್ದಾನೆ. ರಾಜುವನ್ನು ರಕ್ಷಿಸಲು ಹೋಗಿ ಗಣೇಶ್‌ಗೂ ಶಾಕ್‌ ಹೊಡೆದಿದೆ. ಹೀಗಾಗಿ ಗಾಯಗೊಂಡ ಇಬ್ಬರನ್ನೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

ಕ್ರೈಂ

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Robbery Case: ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಜುವೆಲ್ಲರಿ ಶಾಪ್‌ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ.

VISTARANEWS.COM


on

jewellery robbery case
Koo

ಬೆಂಗಳೂರು: ರಾಜಧಾನಿಯ ಚಿನ್ನಾಭರಣದ (Jewelry) ಅಂಗಡಿಗೆ ನುಗ್ಗಿದ ಕಳ್ಳರು ಮಾಲೀಕರಿಗೆ ಗನ್ (gun point) ತೋರಿಸಿ ಕೇವಲ 30 ಸೆಕೆಂಡುಗಳಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದು (Robbery Case) ಪರಾರಿಯಾಗಿರುವ ಘಟನೆ ಬೆಂಗಳೂರಿನ (Bangalore Crime) ಮಾದನಾಯಕನಹಳ್ಳಿಯ ಲಕ್ಷ್ಮಿಪುರದಲ್ಲಿ ನಡೆದಿದೆ.

ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಜುವೆಲ್ಲರಿ ಶಾಪ್‌ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ.

ಒಬ್ಬ ಕಳ್ಳ ಗನ್ ಹಿಡಿದು ಮಾಲೀಕರಿಗೆ ಬೆದರಿಕೆ ಹಾಕಿದ್ದು, ಮತ್ತೊಬ್ಬ ಚಿನ್ನಭಾರಣಗಳನ್ನು ಚೀಲಕ್ಕೆ ತುಂಬಿಕೊಂಡಿದ್ದ. ಇನ್ನೊಬ್ಬ ಕಳ್ಳ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ. ಕೆಲವೇ ಸೆಕೆಂಡಿನಲ್ಲಿ ಚಿನ್ನಾಭರಣಗಳನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ. 750 ಗ್ರಾಂಗಿಂತ ಹೆಚ್ಚು ಚಿನ್ನ ಕದ್ದು ಅಲ್ಲಿಂದ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಎಸ್ಕೇಪ್‌ ಆಗಿದ್ದಾರೆ. ಈ ದರೋಡೆಕೋರರ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ, ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್‌ ಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್‌ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.

ಈ ಬಗ್ಗೆ ಟರ್ಮಿನಲ್‌ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್‌ ಕುಮಾರ್‌ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

Continue Reading
Advertisement
Lok Sabha Speaker
ದೇಶ3 mins ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್6 mins ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ14 mins ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

ಕಥೆಕೂಟ literature meet
ಕಲೆ/ಸಾಹಿತ್ಯ22 mins ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ25 mins ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್28 mins ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ53 mins ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ57 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್1 hour ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ1 hour ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌