Independence Day | ಫ್ರೀಡಂ ಪಾರ್ಕ್‌ ದಾಟಿ ಮುಂದೆ ಸಾಗಿದ ಕಾಂಗ್ರೆಸ್‌ ʻಫ್ರೀಡಂ ಮಾರ್ಚ್‌ʼ - Vistara News

ಪ್ರಮುಖ ಸುದ್ದಿ

Independence Day | ಫ್ರೀಡಂ ಪಾರ್ಕ್‌ ದಾಟಿ ಮುಂದೆ ಸಾಗಿದ ಕಾಂಗ್ರೆಸ್‌ ʻಫ್ರೀಡಂ ಮಾರ್ಚ್‌ʼ

ಬೆಂಗಳೂರಿನ ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿಯಿಂದ ಫ್ರೀಡಂ ಮಾರ್ಚ್‌ವರೆಗೆ ಕಾಂಗ್ರೆಸ್‌ ಪ್ರಾಯೋಜಿತ ಫ್ರೀಡಂ ಮಾರ್ಚ್‌ ರ‍್ಯಾಲಿ ಹೊರಟಿದೆ.

VISTARANEWS.COM


on

Congress rally 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ವಾತಂತ್ರ್ಯದ 75ನೇ ವರ್ಷಾಚರಣೆ ಪ್ರಯುಕ್ತ ಕರ್ನಾಟಕ ಕಾಂಗ್ರೆಸ್‌ ವತಿಯಿಂದ ಆಯೋಜಿಸಿರುವ ಫ್ರೀಡಂ ಮಾರ್ಚ್‌ನಲ್ಲಿ (ಸ್ವಾತಂತ್ರ್ಯ ನಡಿಗೆ) ಸಾವಿರಾರು ಜನ ಭಾಗವಹಿಸಿದ್ದಾರೆ. ಈಗಾಗಲೆ ಫ್ರೀಡಂ ಪಾರ್ಕ್‌ ದಾಟಿ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದತ್ತ ಸಾಗಿದೆ.

ಮಧ್ಯಾಹ್ನ 2.30ಕ್ಕೆ ಆರಂಭವಾದ ನಡಿಗೆಗೂ ಮುನ್ನವೇ ಸಾವಿರಾರು ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಜಮಾಯಿಸಿದ್ದರು. ಕೆಲವರು ತಮ್ಮ ಪಾಡಿಗೆ ತಾವು ನಡೆದು ನ್ಯಾಷನಲ್‌ ಕಾಲೇಜು ಮೈದಾನದತ್ತ ಸಾಗಿದರು. ರ‍್ಯಾಲಿ ಆರಂಭವಾದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಸೇರಿಕೊಂಡರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆರಂಭವಾದ ರ‍್ಯಾಲಿ, ಆನಂದ ರಾವ್‌ ವೃತ್ತದ ಮೇಲ್ಸೇತುವೆ ಮೂಲಕ ಸಾಗಿತು. ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು, ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಅವರಿದ್ದ ಕಡೆಗೇ ನುಗ್ಗುತ್ತಿದ್ದರಿಂದ ಕೆಲ ಕಾಲ ನೂಕಾಟ ತಳ್ಳಾಟ ನಡೆಯಿತು.

ಕಾಂಗ್ರೆಸ್‌ ಕಾರ್ಯಕರ್ತರಷ್ಟೆ ಅಲ್ಲದೆ, ಗ್ಲೋಬಲ್‌, ಮೆಡಿಕೇರ್‌ ಸೇರಿ ಅನೇಕ ಸಂಸ್ಥೆಯ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಕ್ಯಾಪ್‌, ತ್ರಿವರ್ಣ ಧ್ವಜವನ್ನು ಉಡುಗೊರೆಯಾಗಿ ನೀಡಲಾಗಿದೆ.

ರ‍್ಯಾಲಿಯಲ್ಲಿ ಟ್ರ್ಯಾಕ್ಟರ್‌ಗಳನ್ನೂ ತರಲಾಗಿದ್ದು, ಕೆಲ ಕಾಂಗ್ರೆಸ್‌ ನಾಯಕರು ಟ್ರ್ಯಾಕ್ಟರ್‌ ಹತ್ತಿ ಸವಾರಿ ಮಾಡಿದರು. ಕಾಂಗ್ರೆಸ್‌ ನಾಯಕರಾದ ವೀರಪ್ಪ ಮೊಯ್ಲಿ, ಶಾಸಕ ಜಮೀರ್‌ ಅಹ್ಮದ್‌, ಎಐಸಿಸಿ ಕಾರ್ಯದರ್ಶಿಗಳು, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಸೇರಿ ಅನೇಕರು ಭಾಗಿಯಾಗಿದ್ದಾರೆ.

ದಾರಿಯುದ್ದಕ್ಕೂ ಪ್ರತಿಯೊಬ್ಬರೂ ರಾಷ್ಟ್ರಧ್ವಜಗಳನ್ನು ಹಿಡಿದು ಸಂಭ್ರಮಿಸುತ್ತಿದ್ದಾರೆ. ಬೃಹತ್‌ ಸ್ಪೀಕರ್‌ಗಳ ಮೂಲಕ ದೇಶಭಕ್ತಿಗೀತೆಗಳನ್ನು ಪ್ರಸಾರ ಮಾಡಲಾಗುತ್ತಿದೆ. ಕೆ.ಆರ್‌. ವೃತ್ತ, ಕಾರ್ಪೊರೇಷನ್‌ ವೃತ್ತ, ಟೌನ್‌ ಹಾಲ್‌ ಮೂಲಕ ಹಾದು ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನವನ್ನು ತಲುಪಲಾಗುತ್ತದೆ.

ಡಿ.ಕೆ. ಘೋಷಣೆ ಬೇಡ ಎಂದ ಶಿವಕುಮಾರ್‌

ರ‍್ಯಾಲಿಯಲ್ಲಿ ಭಾಗವಹಿಸಿದ್ದವರೆಲ್ಲರೂ ಭಾರತ್‌ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಿದ್ದರು. ಈ ವೇಳೆ ಕೆಲವರು ಡಿ.ಕೆ., ಡಿ.ಕೆ. ಎಂದು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಈ ವೇಳೆ ಅವರತ್ತ ಕೈಸನ್ನೆ ಮಾಡಿದ ಡಿ.ಕೆ. ಶಿವಕುಮಾರ್‌, ತಮ್ಮ ಕುರಿತು ಘೋಷಣೆಗಳನ್ನು ಕೂಗಬಾರದು ಎಂದು ಸೂಚಿಸಿದರು.

ಇದನ್ನೂ ಓದಿ | ವಿಸ್ತಾರ Interview | ಅಪ್ರಸ್ತುತ ವ್ಯಕ್ತಿಗಳು ನೂರು ಫ್ರೀಡಂ ಮಾರ್ಚ್‌ ಮಾಡಿದರೂ ವೇಸ್ಟ್‌: ಡಾ. ಸಿ.ಎನ್‌. ಅಶ್ವತ್ಥನಾರಾಯಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

HD Devegowda: ಮೈತ್ರಿ ಸರ್ಕಾರವನ್ನು ನಡೆಸುವುದು ತುಂಬಾ ಕಷ್ಟ. ನಾನೂ ಮೈತ್ರಿ ಸರ್ಕಾರವನ್ನು ನಡೆಸಿದ್ದೇನೆ. ಆದರೆ ನರೇಂದ್ರ ಮೋದಿ ಉತ್ತಮವಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಸ್ಪೀಕರ್ ಆಯ್ಕೆಯಿಂದ ಹಿಡಿದು ಪ್ರಮುಖ ನಿರ್ಧಾರಗಳಲ್ಲಿ ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

VISTARANEWS.COM


on

HD Devegowda
Koo

ನವ ದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ಬಜೆಟ್‌ ಬಗ್ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾನು ಹೃದಯಪೂರ್ವಕವಾಗಿ ಬಜೆಟ್ ಬೆಂಬಲಿಸುತ್ತೇನೆ. ಮುಂದಿನ ಬಜೆಟ್ ಬಗ್ಗೆ ಮಾತಮಾಡುತ್ತೀನೋ, ಇಲ್ಲವೊ ಗೊತ್ತಿಲ್ಲ. ಹೀಗಾಗಿ ಬೆಂಗಳೂರು ನಗರ ಕುಡಿಯುವ ನೀರು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ರಾಜ್ಯಸಭೆ ಕಲಾಪದಲ್ಲಿ ಮಾತನಾಡಿರುವ ಅವರು, ನಾನು 1991 ರಲ್ಲಿ ಸಂಸತ್‌ಗೆ ಬಂದೆ, ಈಗ ನನಗೆ 92 ವರ್ಷ. ಮುಂದಿನ ಬಜೆಟ್ ಬಗ್ಗೆ ಮಾತಮಾಡುತ್ತೀನೋ, ಇಲ್ಲವೊ ಗೊತ್ತಿಲ್ಲ. ನಾನು ಎನ್‌ಡಿಎ ಭಾಗವಾಗಿದ್ದೇನೆ, ಅದಕ್ಕಾಗಿ ಜೆ.ಪಿ ನಡ್ಡಾ ಅವರಿಗೆ ಧನ್ಯವಾದಗಳು ಎಂದು ಹೇಳಿದರು.

ನಾನು ಕೃಷಿ ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಬದ್ಧತೆ ಇರುವ ವ್ಯಕ್ತಿಯನ್ನು ಕೃಷಿಗೆ ಸಚಿವರನ್ನಾಗಿ ಮಾಡಿದ್ದಾರೆ. ಉತ್ತಮ‌ ಅನುಭವ ಇರುವ ತಂಡವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮೋದಿ ಹತ್ತು ವರ್ಷ ಸಿಎಂ ಆಗಿದ್ದಾಗ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಬೇರೆ ರಾಜ್ಯಗಳಲ್ಲಿ ಹೋಲಿಸಿದರೆ ಗುಜರಾತ್ ಅತ್ಯುತ್ತಮ ಮಾದರಿ ರಾಜ್ಯವಾಗಿದೆ ಎಂದು ತಿಳಿಸಿದರು.

ಮೈತ್ರಿ ಸರ್ಕಾರವನ್ನು ನಡೆಸುವುದು ತುಂಬಾ ಕಷ್ಟ. ನಾನೂ ಮೈತ್ರಿ ಸರ್ಕಾರವನ್ನು ನಡೆಸಿದ್ದೇನೆ. ಆದರೆ ನರೇಂದ್ರ ಮೋದಿ ಉತ್ತಮವಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಸ್ಪೀಕರ್ ಆಯ್ಕೆಯಿಂದ ಹಿಡಿದು ಪ್ರಮುಖ ನಿರ್ಧಾರಗಳಲ್ಲಿ ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ. ಕರ್ನಾಟಕದಲ್ಲಿ ಎರಡು ಸೀಟು ಮಾತ್ರ ನಮ್ಮ ಶಕ್ತಿ. ಆದಾಗ್ಯೂ ಒಂದು ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ ಎಂದು ಹೇಳಿದರು.

ಇದು ವೈಜ್ಞಾನಿಕ ಬಜೆಟ್ ಆಗಿದ್ದು, ಮಹಿಳೆಯರು, ಬಡವರು, ಯುವಕರು, ರೈತರ ಪರವಾದ ಬಜೆಟ್ ಅನ್ನು ಕೇಂದ್ರ ಮಂಡಿಸಿದೆ. ಕೃಷಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಒತ್ತು ನೀಡಿದೆ, ಹಂಚಿಕೆ ಸರಪಳಿ ಬಲಿಷ್ಠಗೊಳಿಸಲು ಕ್ರಮ ತೆಗೆದುಕೊಂಡಿದೆ. ಯುವಕರಿಗೆ ಇಂರ್ಟರ್ನ್‌ಶಿಪ್‌ನಲ್ಲಿ ಮೊದಲ ತಿಂಗಳ ಸಂಬಳ ನೀಡಲಾಗುತ್ತಿದೆ. ಉದ್ಯೋಗ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಿದೆ. ಯುವಕರನ್ನು ಕೌಶಲ್ಯಯುತರಾಗಿ ಮಾಡಲು ಹಣ ವ್ಯಯ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ | DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ನಾನು ಯಾರನ್ನು ಟೀಕಿಸಲು ಹೋಗುವುದಿಲ್ಲ, ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಬೆಂಗಳೂರು ಬೆಳೆಯುತ್ತಿರುವ ನಗರ, ಅದಕ್ಕೆ ಕುಡಿಯುವ ನೀರು ಬೇಕು. ಇತ್ತೀಚೆಗೆ ಒಂದು ಟಿಎಂಸಿ ನೀರು ಹರಿಸಲು ಹೇಳಲಾಗಿತ್ತು. ಈಗ ಮಳೆಯಿಂದ ಎಲ್ಲವೂ ಸುಗಮವಾಗಿದೆ, ಸಹಾಯವಾಗಿದೆ. ಮಳೆ ಬಾರದಿದ್ದರೇ ಪರಿಸ್ಥಿತಿ ಏನು ಹೇಳಿ? ನೀರಿನ ಸಮಸ್ಯೆ ಹಿನ್ನೆಲೆ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಜನರು ಎನ್‌ಡಿಎ ಮೈತ್ರಿಕೂಟ ಬೆಂಬಲಿಸಿದ್ದಾರೆ. ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಇದೇ ಆಧಾರ. ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಒಪ್ಪಿಕೊಂಡಿದೆ. ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

Paris Olympics 2024 : ಕ್ವಾರ್ಟರ್ ಫೈನಲ್​ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿರುವ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಈಗ ಇಂಡೋನೇಷ್ಯಾ ವಿರುದ್ಧದ ಮುಂಬರುವ ಪಂದ್ಯದತ್ತ ಗಮನ ಹರಿಸಲಿದ್ದು, ಗುಂಪು ಹಂತವನ್ನು ಉನ್ನತ ಮಟ್ಟದಲ್ಲಿ ಮುಗಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕಕ್ಕಾಗಿ ತಮ್ಮ ಪ್ರಭಾವಶಾಲಿ ಓಟ ಮತ್ತು ಸವಾಲನ್ನು ಮುಂದುವರಿಸಲು ಭಾರತೀಯ ಜೋಡಿ ಉತ್ಸುಕವಾಗಿದೆ.

VISTARANEWS.COM


on

Paris Olympics 2024 :Satwik-Chirag reach men's doubles quarter-finals
Koo

ಬೆಂಗಳೂರು: ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಕ್ವಾರ್ಟರ್ ಫೈನಲ್ಸ್​​ ತಲುಪಿದ್ದಾರೆ. ಈ ಮೂಲಕ ಅವರು ಒಲಿಂಪಿಕ್ಸ್​ನಲ್ಲಿ ಎಂಟರ ಘಟ್ಟಕ್ಕೇರಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುಂಪು ಹಂತದಲ್ಲಿ ಇವರಿಬ್ಬರ ಪ್ರಭಾವಶಾಲಿ ಪ್ರದರ್ಶನವು ಪ್ಯಾರಿಸ್ ಒಲಿಂಪಿಕ್ಸ್ ನ ಕೊನೆಯ ಎಂಟರಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿತು. ಸಾತ್ವಿಕ್-ಚಿರಾಗ್ ಜರ್ಮನಿಯ ಮಾರ್ಕ್ ಲ್ಯಾಮ್ಸ್ಫಸ್ ಮತ್ತು ಮಾರ್ವಿನ್ ಸೀಡೆಲ್ ಅವರನ್ನು ಎದುರಿಸಬೇಕಿತ್ತು, ಆದರೆ ಲ್ಯಾಮ್ಸ್ಫಸ್ ಅವರ ಗಾಯದಿಂದಾಗಿ ಜರ್ಮನ್ ಜೋಡಿ ಹಿಂದೆ ಸರಿದರು. ಹೀಗಾಗಿ ಕ್ವಾರ್ಟರ್​ ಫೈನಲ್ ಸ್ಥಾನ ಖಚಿತಪಡಿಸಿಕೊಂಡರು.

ವಿಶ್ವದ 3ನೇ ಶ್ರೇಯಾಂಕಿತ ಜೋಡಿ ಪ್ಯಾರಿಸ್ 2024ರ ಅಭಿಯಾನವನ್ನು 40ನೇ ಶ್ರೇಯಾಂಕಿತ ಫ್ರಾನ್ಸ್ನ ಲ್ಯೂಕಾಸ್ ಕಾರ್ವಿ ಮತ್ತು ರೋನನ್ ಲಾಬರ್ ವಿರುದ್ಧ ಜಯಗಳಿಸುವ ಮೂಲಕ ಆರಂಭಿಸಿತು. ಕಾರ್ವಿ ಮತ್ತು ಲಾಬರ್ ನಂತರ ವಿಶ್ವದ 7 ನೇ ಶ್ರೇಯಾಂಕದ ಇಂಡೋನೇಷ್ಯಾದ ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಮತ್ತು ಫಜರ್ ಅಲ್ಫಿಯಾನ್ ವಿರುದ್ಧ ಸೋತರು. ಎರಡು ಸೋಲುಗಳೊಂದಿಗೆ ಫ್ರೆಂಚ್ ಜೋಡಿ ನಿರ್ಗಮಿಸಿದ್ದು, ಚಿರಾಗ್-ಸಾತ್ವಿಕ್ ಮತ್ತು ಅರ್ಡಿಯಾಂಟೊ-ಅಲ್ಫಿಯಾನ್ ಸಿ ಗುಂಪಿನ ಅಗ್ರ ಎರಡು ಸ್ಥಾನಗಳನ್ನು ಪಡೆಯುವುದು ಖಚಿತವಾಗಿದೆ. ಗುಂಪಿನ ಅಗ್ರ ಸ್ಥಾನಕ್ಕಾಗಿ ಭಾರತ ಮತ್ತು ಇಂಡೋನೇಷ್ಯಾ ಜೋಡಿಗಳು ಮಂಗಳವಾರ ಸ್ಪರ್ಧಿಸಲಿವೆ.

ಇದನ್ನೂ ಓದಿ: Paris Olympics 2024 : ಭಾರತಕ್ಕೆ ಶೂಟಿಂಗ್​ನಲ್ಲಿ ಕಂಚಿನ ಪದಕ ಜಸ್ಟ್​ ಮಿಸ್​!

ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಭಾರತದ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ 21-11, 21-12 ಅಂತರದಲ್ಲಿ ವಿಶ್ವದ 4ನೇ ಶ್ರೇಯಾಂಕಿತ ಜಪಾನ್​​ ನಮಿ ಮತ್ಸುಯಾಮಾ ಮತ್ತು ಚಿಹಾರು ಶಿಡಾ ವಿರುದ್ಧ ಸೋತು ನಿರ್ಗಮಿಸುವ ಅಂಚಿನಲ್ಲಿದ್ದಾರೆ. ಪ್ರಸ್ತುತ ಸಿ ಗುಂಪಿನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಭಾರತದ ಜೋಡಿ ತನ್ನ ಆರಂಭಿಕ ಪಂದ್ಯದಲ್ಲಿ ಎಂಟನೇ ಶ್ರೇಯಾಂಕದ ಕಿಮ್ ಸೊ-ಯೊಂಗ್ ಮತ್ತು ದಕ್ಷಿಣ ಕೊರಿಯಾದ ಕಾಂಗ್ ಹೀ-ಯೊಂಗ್ ವಿರುದ್ಧ 21-18, 21-10 ಅಂತರದಲ್ಲಿ ಸೋತಿತ್ತು. ವಿಶ್ವ ರ್ಯಾಂಕಿಂಗ್​​ನಲ್ಲಿ 19ನೇ ಸ್ಥಾನದಲ್ಲಿರುವ ಕ್ರಾಸ್ಟೊ-ಪೊನ್ನಪ್ಪ ಮಂಗಳವಾರ ನಡೆಯಲಿರುವ ಅಂತಿಮ ಗ್ರೂಪ್ ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸೆಟ್ಯಾನಾ ಮಾಪಾಸಾ ಮತ್ತು 26ನೇ ಶ್ರೇಯಾಂಕದ ಏಂಜೆಲಾ ಯು ಅವರನ್ನು ಎದುರಿಸಲಿದ್ದಾರೆ.

ಪದಕದ ಮೇಲೆ ಕಣ್ಣು: ಭಾರತ ಬ್ಯಾಡ್ಮಿಂಟನ್

ಕ್ವಾರ್ಟರ್ ಫೈನಲ್​ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿರುವ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಈಗ ಇಂಡೋನೇಷ್ಯಾ ವಿರುದ್ಧದ ಮುಂಬರುವ ಪಂದ್ಯದತ್ತ ಗಮನ ಹರಿಸಲಿದ್ದು, ಗುಂಪು ಹಂತವನ್ನು ಉನ್ನತ ಮಟ್ಟದಲ್ಲಿ ಮುಗಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕಕ್ಕಾಗಿ ತಮ್ಮ ಪ್ರಭಾವಶಾಲಿ ಓಟ ಮತ್ತು ಸವಾಲನ್ನು ಮುಂದುವರಿಸಲು ಭಾರತೀಯ ಜೋಡಿ ಉತ್ಸುಕವಾಗಿದೆ.

ಇವರಿಬ್ಬರ ಸಾಧನೆಯು ಭಾರತೀಯ ಬ್ಯಾಡ್ಮಿಂಟನ್​ಗೆ ಮಹತ್ವದ ಮೈಲಿಗಲ್ಲಾಗಿದೆ. ಇದು ಅಭಿಮಾನಿಗಳಲ್ಲಿ ಅಪಾರ ಉತ್ಸಾಹವನ್ನು ಸೃಷ್ಟಿಸಿದೆ. ಒಲಿಂಪಿಕ್ಸ್​ನಲ್ಲಿ ಇತಿಹಾಸವನ್ನು ಸೃಷ್ಟಿಸಲು ಎದುರು ನೋಡುತ್ತಿರುವ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಅವರಿಗಾಗಿ ಇಡೀ ದೇಶವು ಬೆನ್ನೆಲುಬಾಗಿದೆ.

ಲಕ್ಷ್ಯ ಸೇನ್​ಗೆ ಜಯ

ಲಾ ಚಾಪೆಲ್ ಅರೆನಾದಲ್ಲಿ ನಡೆದ ಪುರುಷರ ಸಿಂಗಲ್ಸ್ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತದ ಲಕ್ಷ್ಯ ಸೇನ್ ಬೆಲ್ಜಿಯಂನ ಜೂಲಿಯನ್ ಕರಾಗಿ ವಿರುದ್ಧ 21-19, 21-14 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್​​ನಲ್ಲಿ 18ನೇ ಸ್ಥಾನದಲ್ಲಿರುವ ಸೇನ್ ಮೊದಲ ಗೇಮ್​​​ನಲ್ಲಿ ಕಠಿಣ ಪ್ರದರ್ಶನ ನೀಡಿ ನಂತರದ ಹಂತಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ನಂತರ ಅವರು ಎರಡನೇ ಗೇಮ್ ನಲ್ಲಿ ವಿಶ್ವದ 52 ನೇ ಶ್ರೇಯಾಂಕದ ಜೂಲಿಯನ್ ಕರಾಗ್ಗಿ ಅವರನ್ನು ಸೋಲಿಸಿ ಬಲವಾದ ಗೆಲುವು ಸಾಧಿಸಿದರು.

ಲಕ್ಷ್ಯ ಸೇನ್ ಗ್ವಾಟೆಮಾಲಾದ ಕೆವಿನ್ ಕಾರ್ಡನ್ ವಿರುದ್ಧ ಜಯಗಳಿಸುವ ಮೂಲಕ ತಮ್ಮ ಒಲಿಂಪಿಕ್ ಅಭಿಯಾನವನ್ನು ಪ್ರಾರಂಭಿಸಿದ್ದರು.

Continue Reading

ಪ್ರಮುಖ ಸುದ್ದಿ

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಆಗಸ್ಟ್ 12ರಿಂದ ಕೆಪಿಎಸ್‌ಸಿ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಬಿ.ವಿ.ಎಸ್‌ಸಿ, ಬಿ.ವಿ.ಎಸ್‌ಸಿ & ಎಎಚ್‌ ಪದವೀಧರರು ಅರ್ಹರಾಗಿದ್ದು, ವಯೋಮಿತಿ, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

veterinary officer recruitment
Koo

ಬೆಂಗಳೂರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್-ಎ ದರ್ಜೆಯ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ (veterinary officer recruitment) ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 12ರಿಂದ ಅನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಬೇಕಾದ ಅರ್ಹತೆಗಳು, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ಹುದ್ದೆಯ ಹೆಸರು: ಪಶು ವೈದ್ಯಾಧಿಕಾರಿ
ಹುದ್ದೆಗಳ ಸಂಖ್ಯೆ: 342 (ಉಳಿಕೆ ಮೂಲ ವೃಂದ) + 58 (ಬ್ಯಾಕ್‌ಲಾಗ್‌)
ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್‌ 12
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆ.12

ವಿದ್ಯಾರ್ಹತೆ

ಪಶು ವೈದ್ಯಕೀಯ ವಿಜ್ಞಾನ (BVSc), ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ (B.V.Sc. & AH) ಪದವೀಧರರು ಅರ್ಜಿ ಸಲ್ಲಿಸಬಹುದು. (ಕೆವಿಸಿ/ಐವಿಸಿಯಲ್ಲಿ ನೋಂದಣಿಯಾಗಿರಬೇಕು)

ವಯೋಮಿತಿ

ಅರ್ಜಿ ಸಲ್ಲಿ..ಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ – 18 ವರ್ಷಗಳ ವಯೋಮಾನದವರಾಗಿರಬೇಕು ಹಾಗೂ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ಅರ್ಹತೆ: 35 ವರ್ಷ
ಒಬಿಸಿ (2ಎ, 2ಬಿ, 3ಎ, 3ಬಿ): 38 ವರ್ಷ
ಎಸ್‌ಸಿ, ಎಸ್‌ಟಿ, ಪ್ರವರ್ಗ-1: 40 ವರ್ಷ

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600 ರೂ.
ಒಬಿಸಿ (2ಎ, 2ಬಿ, 3ಎ, 3ಬಿ): 300 ರೂ.
ಮಾಜಿ ಸೈನಿಕರಿಗೆ : 50 ರೂ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1, ವಿಶೇಷ ಚೇತನರು: ಶುಲ್ಕ ಪಾವತಿಯಿಂದ ವಿನಾಯಿತಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಆಯ್ಕೆ ವಿಧಾನ

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:
ಈ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮ ಉಪ ನಿಯಮ-7 ರಲ್ಲಿ ನಿರ್ದಿಷ್ಟ ಪಡಿಸಲಾದಂತೆ, ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ.. ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು ಎಸ್.ಎಸ್.ಎಲ್.ಸಿ. ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು.

ವಿಶೇಷ ಸೂಚನೆ: ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರನ್ವಯ ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 29-11-2022ರಂದು ಮತ್ತು ಆ ನಂತರದಲ್ಲಿ ನಡೆಸಿರುವ ಕನ್ನಡ ಭಾಷಾ ಪರೀಕ್ಷೆಗಳಿಗೆ ಹಾಜರಾಗಿ ಉರ್ತೀರ್ಣರಾಗಿದ್ದಲ್ಲಿ ಅದರ ಫಲಿತಾಂಶವನ್ನು ಈ ಅಧಿಸೂಚನೆಯಲ್ಲಿನ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೂ ಪರಿಗಣಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್ ಲೈನ್ ಅರ್ಜಿಯಲ್ಲಿನ ನಿಗದಿತ ಅಂಕಣದಲ್ಲಿ ಕನ್ನಡ ಭಾಷಾ ಪರೀಕ್ಷೆ ಕುರಿತಂತೆ ಕೇಳಿರುವ ಮಾಹಿತಿಯನ್ನು ತಪ್ಪದೇ ನಮೂದಿಸಬೇಕು.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಸ್ಪರ್ಧಾತ್ಮಕ ಪರೀಕ್ಷಾ ವಿಧಾನ

ಈ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತು ನಿಮ್ಮ ಬಹು ಆಯ್ಕೆ ಮಾದರಿಯಲ್ಲಿ ಇರುತ್ತವೆ. ಪ್ರತಿಯೊಂದು ಪ್ರಶ್ನೆಯು ಋಣಾತ್ಮಕ (Negative) ಅಂಕದ ಸ್ವರೂಪದ್ದಾಗಿದ್ದು, ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
Paper 1- ಸಾಮಾನ್ಯ ಪತ್ರಿಕೆ(General Paper): 300 ಅಂಕ
Paper 2- ನಿರ್ದಿಷ್ಟ ಪತ್ರಿಕೆ(Specific Paper): 300 ಅಂಕ



    Continue Reading

    ಪ್ರಮುಖ ಸುದ್ದಿ

    Paris Olympics 2024 : ಮತ್ತೊಂದು ಗೆಲವು ಕಂಡ ಷಟ್ಲರ್ ಲಕ್ಷ್ಯ ಸೇನ್​

    parisl Olympics 2024: ಲಕ್ಷ್ಯ ಸೇನ್ ಪಂದ್ಯದ ಮೊದಲ ಗೇಮ್ ನಲ್ಲಿ ಮುಂದುವರಿಯಲು ಸ್ವಲ್ಪ ಸಮಯ ತೆಗೆದುಕೊಂಡರು. ಜೂಲಿಯನ್ ಕರಾಗ್ಗಿ ಅವರ ಅದ್ಭುತ ಸ್ಟ್ರೋಕ್ ಪ್ಲೇಯಿಂದಾಗಿ ಮೊದಲ ಗೇಮ್ ನ ಬಹುಪಾಲು ಹಿನ್ನಡೆ ಅನುಭವಿಸಿದ ನಂತರ, ಲಕ್ಷ್ಯ ಸರಿಯಾದ ಸಮಯದಲ್ಲಿ ತಮ್ಮ ಆಟದ ವೇಗವನ್ನು ಹೆಚ್ಚಿಸಿದರು.

    VISTARANEWS.COM


    on

    Parisl Olympics 2024
    Koo

    ಪ್ಯಾರಿಸ್ : ಒಲಿಂಪಿಕ್ಸ್ 2024 ರ ಎರಡನೇ ಗ್ರೂಪ್​ ಹಂತದ ಪಂದ್ಯದಲ್ಲಿ ಭಾರತದ ಲಕ್ಷ್ ಸೇನ್ ಗೆಲುವು ಸಾಧಿಸಿದ್ದಾರೆ. ಬೆಲ್ಜಿಯಂನ ಜೂಲಿಯನ್ ಕರಾಗಿ ಅವರನ್ನು 21-19, 21-14 ನೇರ ಗೇಮ್​ಗಳಿಂದ ಸೋಲಿಸಿದ 22 ವರ್ಷದ ಆಟಗಾರ ತಮ್ಮ ಅಭಿಯಾನವನ್ನು ಮುಂದುವರಿಸಿದರು. ಲಾ ಚಾಪೆಲ್ ಅರೆನಾ ಅಂಗಣದಲ್ಲಿ ನಡೆದ ಪಂದ್ಯದಲ್ಲಿ ಲಕ್ಷ್ಯ ಸೇನ್ ವಿಶ್ವದ ವಿಶ್ವದ 52 ಶ್ರೇಯಾಂಕದ ಆಟಗಾರನನ್ನು ಸೋಲಿಸಿದರು.

    ಸಾಮಾನ್ಯವಾಗಿ ತನ್ನ ಕೌಶಲ್ಯ ಮತ್ತು ಅನಿರೀಕ್ಷಿತ ಸ್ಟ್ರೋಕ್ ಪ್ಲೇಗೆ ಹೆಸರುವಾಸಿಯಾದ ಲಕ್ಷ್ಯಗೆ ಇದು ತುಂಬಾ ವಿಭಿನ್ನ ರೀತಿಯ ಆಟವಾಗಿತ್ತು. ಸೋಮವಾರ ಲಕ್ಷ್ಯ ತನ್ನ ಮೇಲೆ ಒತ್ತಡ ಹೆಚ್ಚಾದಾಗಲೆಲ್ಲಾ ಹಿಂದಿನಿಂದ ಮುಂದೆ ಸರಿಯುವ ಮೂಲಕ ಪ್ರಬಲ ಪೈಪೋಟಿ ನೀಡಿದರು. ರಕ್ಷಣಾತ್ಮಕ ಹೊಡೆತಗಳಲ್ಲಿ ಅದ್ಭುತ ಯಶಸ್ಸು ಕಂಡ ಅವರು ಪೂರ್ಣ ಅಂಕಗಳನ್ನು ಗಳಿಸಿದರು. ಕಳೆದ 12-15 ತಿಂಗಳುಗಳಿಂದ ಪುರುಷರ ಸಿಂಗಲ್ಸ್​​ನಲ್ಲಿ ಅಗ್ರ 10 ರ್ಯಾಂಕಿಂಗ್​​ನಲ್ಲಿ ಸ್ಥಾನ ಪಡೆದಿರುವ ವಿಶ್ವದ 19 ನೇ ಶ್ರೇಯಾಂಕಿತ ಆಟಗಾರ ಬೆಲ್ಜಿಯಂ ಆಟಗಾರನನ್ನು ಸೋಲಿಸುವಲ್ಲಿ ತಮ್ಮ ಅಸಾಧಾರಣ ವ್ಯಾಪ್ತಿ ತೋರಿಸಿದರು.

    ಲಕ್ಷ್ಯ ಸೇನ್ ಪಂದ್ಯದ ಮೊದಲ ಗೇಮ್ ನಲ್ಲಿ ಮುಂದುವರಿಯಲು ಸ್ವಲ್ಪ ಸಮಯ ತೆಗೆದುಕೊಂಡರು. ಜೂಲಿಯನ್ ಕರಾಗ್ಗಿ ಅವರ ಅದ್ಭುತ ಸ್ಟ್ರೋಕ್ ಪ್ಲೇಯಿಂದಾಗಿ ಮೊದಲ ಗೇಮ್ ನ ಬಹುಪಾಲು ಹಿನ್ನಡೆ ಅನುಭವಿಸಿದರು. ಲಕ್ಷ್ಯ ಸರಿಯಾದ ಸಮಯದಲ್ಲಿ ತಮ್ಮ ಹೋರಾಟ ಹೆಚ್ಚಿಸಿದರು. ಮೊದಲ ಗೇಮ್ ನ 18ನೇ ಪಾಯಿಂಟ್ ವರೆಗೆ ಹಿನ್ನಡೆ ಅನುಭವಿಸಿದ ಅವರು ಎದುರಾಳಿಯನ್ನು ಮಣಿಸಿದರು. ಅವರು ತಮ್ಮ ಸಂಯಮವನ್ನು ಕಾಪಾಡಿಕೊಂಡು ಮೊದಲ ಗೇಮ್ ಅನ್ನು 21-19 ರಿಂದ ಗೆದ್ದರು.

    ಇದನ್ನೂ ಓದಿ: Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

    ಲಕ್ಷ್ಯ ಎರಡನೇ ಗೇಮ್ ನಲ್ಲಿ ವೇಗದ ರ್ಯಾಲಿಗಳ ಆಟ ನಡೆಯಿತು. ಈ ವೇಳೆ ಡಿಫೆನ್ಸ್ ನಲ್ಲಿ ತಮ್ಮ ದೃಢತೆಯನ್ನು ಕಾಯ್ದುಕೊಂಡರು. ದ್ವಿತೀಯಾರ್ಧದ ಮೊದಲಾರ್ಧದಲ್ಲಿ 22ರ ಹರೆಯದ ಆಟಗಾರ್ತಿ 11-4ರ ಮುನ್ನಡೆ ಸಾಧಿಸಿದ್ದರು. ಆಟದ ದ್ವಿತೀಯಾರ್ಧದಲ್ಲಿ ಅದನ್ನು ಸ್ವಲ್ಪ ಸಡಿಲಗೊಂಡಿದ್ದರು. ಬಲವಂತದ ತಪ್ಪುಗಳನ್ನು ಮಾಡಿದರು. ಕರಾಗಿಗೆ 8 ಅಂಕಗಳನ್ನು ಮರಳಿ ಪಡೆಯಲು ಅವಕಾಶ ನೀಡಿದದ ನಂತರ, ಲಕ್ಷ್ಯ ಮತ್ತೊಮ್ಮೆ ತಮ್ಮ ಆಟದ ವೇಗ ಹೆಚ್ಚಿಸಿ 21-12 ರಿಂದ ಮುಗಿಸಿದರು.

    ಲಕ್ಷ್ಯ ಮುಂದಿನ ಪಂದ್ಯದಲ್ಲಿ ಇಂಡೊನೆಷ್ಯಾದ ಜೊನಾಟಥನ್​ ಕ್ರಿಸ್ಟಿ ವಿರುದ್ಧ ಆಡಲಿದ್ದಾರೆ. ಅವರು ಪ್ರಬಲ ಆಟಗಾರನಾಗಿದ್ದು ವಿಶ್ವದ 11ನೇ ರ್ಯಾಂಕ್ ಹೊಂದಿದ್ದಾರೆ.

    Continue Reading
    Advertisement
    Russia Ukraine War
    ದೇಶ31 mins ago

    Russia-Ukraine War: ಕೆಲಸ ಕೊಡಿಸ್ತೇವೆ ಅಂತಾ ಸೇನೆಗೆ ತಳ್ಳಿದ್ರು..ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಭಾರತೀಯ ಯುವಕ ಸಾವು

    HD Devegowda
    ಕರ್ನಾಟಕ33 mins ago

    HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

    Dengue Fever
    ಆರೋಗ್ಯ39 mins ago

    Dengue Fever: ಡೆಂಗ್ಯೂ ಜ್ವರ ಕಡಿಮೆ ಆದ ಮೇಲೆ ಎಚ್ಚರ ತಪ್ಪಿದರೆ ಪ್ರಾಣಾಪಾಯ!

    Paris Olympics 2024 :Satwik-Chirag reach men's doubles quarter-finals
    ಪ್ರಮುಖ ಸುದ್ದಿ46 mins ago

    Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

    veterinary officer recruitment
    ಪ್ರಮುಖ ಸುದ್ದಿ57 mins ago

    Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ

    Parisl Olympics 2024
    ಪ್ರಮುಖ ಸುದ್ದಿ1 hour ago

    Paris Olympics 2024 : ಮತ್ತೊಂದು ಗೆಲವು ಕಂಡ ಷಟ್ಲರ್ ಲಕ್ಷ್ಯ ಸೇನ್​

    Bollywood Divorce Case
    Latest1 hour ago

    Bollywood Divorce Case: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

    Rahul Gandhi
    ದೇಶ1 hour ago

    Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

    Star Shirt Saree Fashion
    ಫ್ಯಾಷನ್1 hour ago

    Star Shirt Saree Fashion: ಏನಿದು ಶರ್ಟ್‌ ಸೀರೆ? ಹೊಸ ಟ್ರೆಂಡ್‌ ಬಗ್ಗೆ ನಟಿ ತಾರಾ ಏನಂತಾರೆ?

    Shravan 2024
    Latest2 hours ago

    Shravan 2024: ಶ್ರಾವಣ ಮಾಸದಲ್ಲಿ ಯಾವ ಹಬ್ಬ, ಯಾವ ದಿನ? ಈ ತಿಂಗಳ ಮಹತ್ವ ಏನು?

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka Rain
    ಮಳೆ4 hours ago

    Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

    Elephant combing Makna elephant captured near Bannerghatta
    ಬೆಂಗಳೂರು ಗ್ರಾಮಾಂತರ5 hours ago

    Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

    karnataka rain
    ಮಳೆ8 hours ago

    Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

    Tungabhadra Dam
    ಕೊಪ್ಪಳ1 day ago

    Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

    Elephant attack
    ಮಳೆ1 day ago

    Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

    karnataka Rain
    ಮಳೆ1 day ago

    Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

    karnataka Rain
    ಮಳೆ1 day ago

    Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

    Karnataka weather Forecast
    ಮಳೆ2 days ago

    Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

    ramanagara news
    ರಾಮನಗರ2 days ago

    Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

    karnataka rain
    ಮಳೆ2 days ago

    Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

    ಟ್ರೆಂಡಿಂಗ್‌