No marriage movement | ಮದುವೆ, ಮಕ್ಕಳು ಯಾವುದೂ ಬೇಡ: ಯುವತಿಯರಲ್ಲೀಗ ಹೊಸ ಟ್ರೆಂಡ್‌! - Vistara News

ಪ್ರಮುಖ ಸುದ್ದಿ

No marriage movement | ಮದುವೆ, ಮಕ್ಕಳು ಯಾವುದೂ ಬೇಡ: ಯುವತಿಯರಲ್ಲೀಗ ಹೊಸ ಟ್ರೆಂಡ್‌!

ಮದುವೆ ಬೇಡ, ಮಕ್ಕಳು ಬೇಡ, ಸಂಸಾರದ ಗೊಡವೆಯೇ ಬೇಡ ಎನ್ನುವ No marriage movement ಟ್ರೆಂಡ್‌ ಯುವಜನತೆಯಲ್ಲಿ ಹಬ್ಬುತ್ತಿದೆ. ಏನಿದರ ಕಾರಣ?

VISTARANEWS.COM


on

marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಿಲೇನಿಯಲ್‌ ಮಹಿಳೆಯರಲ್ಲೀಗ ಹೊಸ ಟ್ರೆಂಡ್‌ ಶುರುವಾಗಿದೆ! ʻಮದುವೆ ಒಕೆ, ಮಕ್ಕಳು ಬೇಡʼ, ʻಮದುವೆಯೂ ಬೇಡ, ಮಕ್ಕಳೂ ಬೇಡʼ ಇವೆರಡು ಬಗೆಯ ಟ್ರೆಂಡ್‌ಗಳು ಇದೀಗ ಭಾರತವೂ ಸೇರಿದಂತೆ ಪ್ರಪಂಚದ ಬಹುತೇಕ ಮುಂದುವರಿದ, ಮುಂದುವರಿಯುತ್ತಿರುವ ದೇಶಗಳಲ್ಲಿ ನಿಧಾನವಾಗಿ ಹಬ್ಬಿಕೊಳ್ಳುತ್ತಿದೆ. ನಮ್ಮ ಅಕ್ಕಪಕ್ಕದ ಹುಡುಗಿಯರೇ, ೨೮ಕ್ಕೆ ಮದುವೆಯಾಗಿ, ಬಿಂದಾಸ್‌ ಆಗಿ ಬೇಕಾದ ಹಾಗಿದ್ದುಕೊಂಡು ʻಮಕ್ಕಳ ಯೋಚನೆ ಮಾತ್ರ ನಮಗಿಲ್ಲʼ ಎಂದು ಹೇಳುವುದು ಕೂಡಾ ಈಗ ನಮಗೆ ಸಹಜ ಎನಿಸತೊಡಗಿದೆ.

ಹಾಗೆ ನೋಡಿದರೆ, ಪ್ರಪಂಚದ ಇತ್ತೀಚೆಗಿನ ಅಂಕಿ ಅಂಶಗಳನ್ನು ಗಮನಿಸಿದರೆ, ಬರ್ತ್‌ ರೇಟ್‌ (ಜನನ ಅನುಪಾತ) ಕುಗ್ಗುತ್ತಿದೆ. ಅತ್ಯಂತ ಹೆಚ್ಚು ಜನಸಂಖ್ಯೆಯ ಚೀನಾದ ಬರ್ತ್‌ ರೇಟ್‌ ೧.೭. ಅಂದರೆ, ಪ್ರತಿಯೊಬ್ಬ ಜೋಡಿಗೆ ೧.೭ ಮಕ್ಕಳಿದ್ದಂತೆ! ಭಾರತದಲ್ಲಿ ಇದು ೨.೧ಕ್ಕೆ ಇಳಿದಿದೆ. ಅಂದರೆ ಒಂದು ಕುಟುಂಬಕ್ಕೆ ಇಬ್ಬರು ಮಕ್ಕಳ ಅನುಪಾತ ಭಾರತದಲ್ಲಿದೆ. ದಕ್ಷಿಣ ಕೊರಿಯಾದಲ್ಲಿ ೧, ಸಿಂಗಾಪುರದಲ್ಲಿ ೧.೧, ಹಾಂಗ್‌ಕಾಂಗ್‌ನಲ್ಲಿ ೧.೧, ಸ್ಪೈನ್‌ನಲ್ಲಿ ೧.೩, ಇಟಲಿಯಲ್ಲಿ ೧.೩, ಕೆನಡಾದಲ್ಲಿ ೧.೫, ಯುಎಸ್‌ನಲ್ಲಿ ೧.೭ ಹೀಗೆ ಎಲ್ಲ ದೇಶಗಳಲ್ಲೂ ಹುಟ್ಟುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಂದರೆ, ನಿಧಾನವಾಗಿ, ಇಬ್ಬರು ಮಕ್ಕಳನ್ನು ಸಾಮಾನ್ಯವಾಗಿ ಬಯಸುವಲ್ಲಿ ಒಂದಕ್ಕೆ ಇಳಿದಿದ್ದರೆ, ಹಲವರು ಮಕ್ಕಳನ್ನು ಹೆರುವುದೆಂಬ ಜಂಜಡದಿಂದ ಹೊರಗುಳಿಯುತ್ತಿರುವ ಸಂಸ್ಕೃತಿ ಹೆಚ್ಚಾಗುತ್ತಿದೆ.

ಒಂದು ಕಾಲದಲ್ಲಿ, ದಂಪತಿಗಳಲ್ಲಿ ಸಮಸ್ಯೆ ಯಾರಲ್ಲೇ ಇದ್ದರೂ, ಮಕ್ಕಳಾಗದಿದ್ದರೆ ಮಹಿಳೆಗೆ ಬಂಜೆ ಎಂಬ ಪಟ್ಟ ಕಟ್ಟಿ ಹೊಣೆಗಾರರಳನ್ನಾಗಿ ಮಾಡಲಾಗುತ್ತಿತ್ತು. ಕೇವಲ ಭಾರತದಲ್ಲಷ್ಟೇ ಅಲ್ಲ, ಪ್ರಪಂಚದ ಹಲವು ರಾಷ್ಟ್ರಗಳಲ್ಲಿ ಈ ನಡತೆಯೇ ಜಾರಿಯಲ್ಲಿತ್ತು. ರೋಮ್‌ನಲ್ಲಿ ಮಕ್ಕಳಾಗದಿದ್ದರೆ, ಆಕೆ ಹೆಂಡತಿಯಾಗಿರಲಿಕ್ಕೇ ನಾಲಾಯಕ್ಕು ಎಂದು ಆಕೆಯನ್ನು ತ್ಯಜಿಸಲಾಗುತ್ತಿತ್ತು. ಇಲ್ಲಿ ಬಂಜೆ ಎಂಬ ಹೆಸರ ಬದಲಾಗಿ ಅಲ್ಲಿ ಇನ್ನೊಂದು ಹೆಸರಿಡಲಾಗಿತ್ತು ಅಷ್ಟೇ. ಆಕೆಯನ್ನು ಕೆಟ್ಟ ಆತ್ಮ ಎಂಬಂತೆ ನೋಡಲಾಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಸಾಕಷ್ಟು ಬದಲಾಗಿದೆ. ಈ ಪಿಡುಗು ನಗರಗಳಲ್ಲಂತೂ ದೂರಾಗಿದ್ದು, ಬಹುತೇಕ ಹಳ್ಳಿಗಳಲ್ಲೂ ಜನರು ಅರ್ಥ ಮಾಡಿಕೊಳ್ಳಬಲ್ಲ ಪರಿಸ್ಥಿತಿಗೆ ಬರುತ್ತಿದ್ದಾರೆ. ಅಷ್ಟರಲ್ಲಿ ನಿಧಾನವಾಗಿ ಪರಿಸ್ಥಿತಿ ಬೇರೆಯದೇ ರೂಪ ತಳೆಯುತ್ತಿದೆ. ನಾನು ಮಕ್ಕಳನ್ನು ಮಾಡಿಕೊಳ್ಳುವುದಿಲ್ಲ ಎಂದು ಮದುವೆಯಾದ ಮಹಿಳೆ ಎಲ್ಲರೊಂದಿಗೆ ಹೇಳಿಕೊಳ್ಳುವಷ್ಟು ಕಾಲ ಬದಲಾಗಿದೆ.

ಇದನ್ನೂ ಓದಿ: Woman style | ಎಂಥ ಮಹಿಳೆಯರನ್ನು ಕಂಡರೆ ಪುರುಷರಿಗೆ ಇಷ್ಟವೇ ಆಗುವುದಿಲ್ಲ?!

ಭಾರತವೂ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಯುವಪೀಳಿಗೆಯಲ್ಲಿ ʻನೋ ಮ್ಯಾರೇಜ್‌ ಮೂವ್‌ಮೆಂಟ್‌ʼ ಶುರುವಾಗಿದೆ. ನಮಗೆ ನಮ್ಮ ವೃತ್ತಿಯೇ ಮುಖ್ಯ, ಮದುವೆ ಬೇಡ ಎಂದು ಬಂಡಾಯ ಹೂಡುವ ಮಿಲೇನಿಯಲ್‌ ಹುಡುಗಿಯರ ಸಂಖ್ಯೆ ಹೆಚ್ಚಾಗುತ್ತಿದೆ. ದಕ್ಷಿಣ ಕೊರಿಯಾ ಎಂಬ ಸಂಸ್ಕೃತಿ ಪರಂಪರೆಯ ದೇಶದಲ್ಲೂ ಕೂಡಾ ಇಂದಿಗೂ ಮಹಿಳೆಯರು ಎಷ್ಟೇ ವೃತ್ತಿಯೆಂದು ಹೊರಗೆ ಕಾಲಿಟ್ಟರೂ, ಮನೆಯೊಳಗಿನ ಆಗುಹೋಗುಗಳನ್ನು ತಮ್ಮ ಕೆಲಸದ ಜೊತೆಗೆ ನಡೆಸಿಕೊಂಡು ಹೋಗಬೇಕು ಎನ್ನುವ ಪರಿಸ್ಥಿತಿ ಇದೆ. ಇಂಥ ಜಾಗದಲ್ಲೂ ಇಂದು ಮಹಿಳೆಯರು ನಮಗೆ ʻಕರಿಯರ್‌ ಬೇಕು, ಮ್ಯಾರೇಜ್‌ ಬೇಡʼ ಎಂದು ನೇರವಾಗಿ ತಮ್ಮ ಆಯ್ಕೆಯನ್ನು ಮುಂದಿಡುತ್ತಿದ್ದಾರೆ.

ಹಾಗಾದರೆ, ಪರಿಸ್ಥಿತಿ ಹೀಗಾಗಲು ಕಾರಣವೇನು? ಇಂದಿನ ಯುವಜನಾಂಗ ಮದುವೆ, ಮಕ್ಕಳ ಹೆಸರೆತ್ತಿದರೆ ಬೆನ್ನು ತಿರುಗಿಸುವುದ್ಯಾಕೆ ಎಂದು ಕೆದಕ ಹೊರಟರೆ ಕಾರಣಗಳು ಹಲವಾರು. ಅವುಗಳಲ್ಲಿ ಮುಖ್ಯವಾದದ್ದು ಎಂದರೆ ಶಿಕ್ಷಣ ಹಾಗೂ ಅವಕಾಶಗಳು. ಇಂದು ಮಹಿಳೆಯರು ಉತ್ತಮ ಶಿಕ್ಷಣ ಪಡೆಯುತ್ತಿದ್ದು ತಮ್ಮ ಜೀವನ ತಾವೇ ರೂಪಿಸಿಕೊಳ್ಳುವ ಕನಸು ಕಾಣುತ್ತಿದ್ದಾರೆ. ಓದು ಮುಗಿದ ತಕ್ಷಣ ಮದುವೆ ಎಂಬ ಚಿಂತನೆಯಿಂದ ಮಹಿಳೆಯರು ಮುಂದೆ ಹೋಗಿದ್ದಾರೆ. ತಮ್ಮ ಕನಸಿನ ಓದಿನ ನಂತರ ಕನಸಿನ ಉದ್ಯೋಗ, ಉದ್ಯೋಗದಲ್ಲಿ ಯಶಸ್ಸು, ಪ್ರಪಂಚ ಸುತ್ತಿ ನೋಡುವ ಕನಸು ಮಹಿಳೆಯರಲ್ಲಿ ಗರಿಗೆದರಿವೆ. ಮದುವೆಯಾಗಿ ಕೂಡಲೇ ಮಕ್ಕಳನ್ನು ಹೆರುವುದು, ಕುಟುಂಬ ಬೆಳೆಸುವುದು ಮತ್ತಿತರ ಯೋಚನೆಗಳು ಇದೀಗ ಮೂಲೆ ಸೇರುತ್ತಿವೆ.

ಮಹಿಳೆಗೆ ದಕ್ಕಿದ ಆರ್ಥಿಕ ಸ್ವಾತಂತ್ರ್ಯ ಆಕೆಯ ರೆಕ್ಕೆಗಳನ್ನು ಇನ್ನಷ್ಟು ವಿಸ್ತರಿಸಿದೆ. ಮಿಲೇನಿಯಲ್‌ ಗಂಡು ಹೆಣ್ಣು ಪರಸ್ಪರ ಮಾತನಾಡಿಕೊಂಡು ಮದುವೆಯೆಂಬ ಬಂಧಕ್ಕೆ ಮುಂದಡಿಯಿಟ್ಟರೂ, ಹಲವರು ಮಕ್ಕಳು ಮಾತ್ರ ಬೇಡ ಎಂಬ ನಿರ್ಧಾರಕ್ಕೆ ಬರುತ್ತಿದ್ದಾರೆ. ಮಹಿಳೆಯ ಮದುವೆಯ ವಯಸ್ಸೂ ೨೮ರ ಆಸುಪಾಸಿಗೆ ಏರುತ್ತಿದ್ದು, ಮಕ್ಕಳನ್ನು ಮಾಡಿಕೊಳ್ಳುವ ವಯಸ್ಸು ಇನ್ನೂ ಮುಂದಕ್ಕೆ ಹೋಗುತ್ತಿದೆ. ನಮ್ಮ ಒತ್ತಡದ ಜೀವನದಲ್ಲಿ ಮಕ್ಕಳಿಗೆ ನೀಡಬೇಕಾದ ಸಮಯಕ್ಕೆ ನಮಗೆ ಪುರುಸೊತ್ತಿಲ್ಲʼ ಎಂಬುದು ಗಂಡ ಹೆಂಡಿರ ಒಮ್ಮತದ ನಿರ್ಧಾರವಾದರೆ, ಇನ್ನೂ ಕೆಲವರದ್ದು, ʻಸೆಲ್ಫ್‌ ಲವ್‌ʼ ಹೆಸರಿನಡಿ, ʻಇರುವುದೊಂದೇ ಜೀವನ. ಇರುವ ಅಮೂಲ್ಯ ಜೀವನವನ್ನು ನಮ್ಮ ಆಸಕ್ತಿಗಳಿಗೆ ಬಳಸಬೇಕು. ಮಕ್ಕಳು ಎಂಬ ಸಂಸಾರ ಬಂಧನದಲ್ಲಿ ಸಿಲುಕಿದರೆ, ಅಲ್ಲಿಯೂ ನ್ಯಾಯ ಸಲ್ಲಿಸಲಾಗದೆ, ನಮಗೂ ನಾವು ನ್ಯಾಯ ನೀಡಲಾಗದೆ ಅನುಭವಿಸುವ ಮಾನಸಿಕ ತುಮುಲ ಯಾಕೆ ಬೇಕು? ಅದಕ್ಕಾಗಿ, ಇನ್ನೊಂದು ಜೀವವನ್ನು ಜಗತ್ತಿಗೆ ಪರಿಚಯಿಸಿ ಅವರಿಗೆ ಅನ್ಯಾಯವೆಸಗುವ ಬದಲಾಗಿ ನಮಗೆ ನಾವೇ ನ್ಯಾಯ ಕೊಟ್ಟುಕೊಳ್ಳುತ್ತೇವೆʼ ಎಂಬ ವಾದ ಮುಂದಿಡುತ್ತಿದ್ದಾರೆ.

ಇನ್ನೂ ಕೆಲವರು, ಮುಂದುವರಿದ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಯಿಂದ ಮಕ್ಕಳ ಶಿಕ್ಷಣ ಎಂದರೆ ಇಂದು ಮಧ್ಯಮ ವರ್ಗಕ್ಕೆ ಕೈಗೆಟುಕದ ಸೊತ್ತಾಗಿ ಪರಿಣಮಿಸುತ್ತಿದೆ. ಜೊತೆಗೆ ಮಕ್ಕಳನ್ನು ಹೊಂದಿರುವವರ ಮುಂದಿರುವ ಸವಾಲುಗಳು, ಅವರು ಪಡುವ ಕಷ್ಟಗಳು ನಮಗೆ ಬೇಡ ಎಂದು ಮಕ್ಕಳೆಂಬ ಉಸಾಬರಿಗೆ ಕೈಮುಗಿವವರೂ ಇದ್ದಾರೆ. ಇನ್ನೂ ಕೆಲವರು, ಸದ್ಯ ಜಗತ್ತಿಗೇ ನುಂಗಲಾರದ ತುತ್ತಾಗಿ ಪರಿಣಮಿಸಿದ ಕೊರೋನಾದಂತಹ ಕಾಯಿಲೆಗಳು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಮಕ್ಕಳು ಸದ್ಯಕ್ಕೆ ಬೇಡ ಎಂದು ಧೈರ್ಯ ಮಾಡುತ್ತಿಲ್ಲ ಎಂಬುದು ತಿಳಿದು ಬಂದಿದೆ.

ಒಟ್ಟಾರೆ ಕಳೆದ ೫೦ ವರ್ಷಗಳಿಗೆ ಹೋಲಿಸಿದರೆ, ಭಾರತವೂ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇಂದು ಜನನ ಅನುಪಾತ ಇಳೆಕೆಯತ್ತ ಮುಖ ಮಾಡಿದ್ದು, ಇದು ಹೀಗೆಯೇ ಮುಂದುವರಿದರೆ, ಮುಂದಿನ ೫೦ ವರ್ಷಗಳಲ್ಲಿ ಇದು ನಿಜಕ್ಕೂ ಕಳವಳವನ್ನೇ ತಂದೊಡ್ಡಲಿದೆ ಎಂಬ ಲೆಕ್ಕಾಚಾರಗಳೂ ಈಗ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ನನ್ನ ಗೆಳೆಯ ಸ್ವಿಜರ್​ಲ್ಯಾಂಡ್​ಗೆ ಹೋದರೆ ಉಳಿಯೋದಿಲ್ಲ, ಅವನನ್ನು ತಡೆಯಿರಿ: ಹೈಕೋರ್ಟ್​ ಮೆಟ್ಟಿಲೇರಿದ ಮಹಿಳೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

VISTARANEWS.COM


on

ಬೆಂಗಳೂರು: ಕನ್ನಡ ಭಾಷೆಗೆ ಶುದ್ಧ ಸುದ್ದಿವಾಹಿನಿ ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಶುಭಾರಂಭಗೊಂಡಿದೆ. ಬಿಜಿಎಸ್‌ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ ಅವರು ಇಂದು ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಜನರ ಕಷ್ಟಕಾರ್ಪಣ್ಯಗಳಿಗೆ ಧ್ವನಿಯಾಗಲಿ ಮತ್ತು ನ್ಯಾಯಪರವಾಗಲಿ ಎಂದು ಹೇಳಿದರು.

ಯಾವುದೇ ಸಂಸ್ಥೆಯನ್ನು ಕಟ್ಟಿಬೆಳೆಸುವುದು ಸುಲಭವಲ್ಲ. ಶ್ರೀ ಧರ್ಮೇಶ್‌ ಅವರು ಪಿಎನ್‌ ಎಸ್‌ ವಿಸ್ತಾರ ಚಾನೆಲ್‌ ಗೆ ಬಂಡವಾಳ ಹೂಡಿದ್ದಾರೆ. ಅವರ ಸಾಹಸವನ್ನು ಮೆಚ್ಚಲೇಬೇಕು. ಹೊಸ ಚಾನೆಲ್‌ ನಲ್ಲಿ ಕೆಲಸ ನಿರ್ವಹಿಸುವ ಎಲ್ಲ ಸಿಬ್ಬಂದಿ ಸಂಸ್ಥೆಯ ಗೌರವಕ್ಕೆ ಚ್ಯುತಿ ಬಾರದಂತೆ ಧರ್ಮೇಶ್‌ ಅವರ ಆಶಯಗಳಿಗೆ ತಕ್ಕಂತೆ ಕೆಲಸ ಮಾಡುವುಂತೆ ಕರೆ ನೀಡಿದರು.


ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಓ) ಎಚ್.ಜಿ. ಪವಿತ್ರಾಗೌಡ ಅವರು ಜವಬ್ದಾರಿ ವಹಿಸಿಕೊಂಡಿದ್ದಾರೆ. ವೃತ್ತಿಯಿಂದ ಉದ್ಯಮಿ ಮತ್ತು ಪ್ರವೃತ್ತಿಯಲ್ಲಿ ಸಾಮಾಜಿಕ ಕಾರ್ಯಕರ್ತೆಯಾಗಿರುವ ಅವರು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಶ್ರೀಸಾಮಾನ್ಯನ ಧ್ವನಿಯಾಗಲು ಪಣ ತೊಟ್ಟಿದ್ದಾರೆ. ಅವರ ನಿರೀಕ್ಷೆಗಳಿಗೆ ತಕ್ಕಂತೆ ಸಿಬ್ಬಂದಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ನಲ್ಲಿ ಅನುಭವಿ ಪತ್ರಕರ್ತರ ತಂಡ ಇರುವುದು ಕಂಡು ಬರುತ್ತಿದೆ. ಸಂಸ್ಥೆಗೆ ಕೆಟ್ಟ ಹೆಸರು ಬಾರದಂತೆ ಮನಸ್ಸು ಮೆಚ್ಚುವಂತಹ ಕೆಲಸ ಮಾಡುತ್ತೀರಿ ಎಂದು ಭಾವಿಸುವುದಾಗಿಯೂ ಪರಮ ಪೂಜ್ಯ ಶ್ರೀ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಚುಟುಕಾಗಿ ತಮ್ಮ ಅನಿಸಿಗಳನ್ನು ಹಂಚಿಕೊಂಡ ಸಿಇಓ ಪವಿತ್ರಾ ಗೌಡ ಅವರು, ಎಲ್ಲರೂ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ಹಿಸುತ್ತಾ ಬೆಂಬಲ ನೀಡುವಂತೆ ಕೋರಿದರು.
ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ವ್ಯವಸ್ಥಾಪಕ ನಿರ್ದಶಕರಾದ ಧರ್ಮೇಶ್‌ ಸೇರಿದಂತೆ ಬಿಜೆಪಿ ಹಿರಿಯ ನಾಯಕ ಎನ್‌.ಆರ್‌.ರಮೇಶ್‌, ಇಂಡಿಯನ್‌ ಎಕ್ಸ್‌ಪ್ರೆಕ್ಸ್‌ನ ಜನರಲ್‌ ಮ್ಯಾನೇಜರ್‌ ಸುರೇಶ್‌ ಅವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Continue Reading

ಸುವಚನ

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

VISTARANEWS.COM


on

ಜೈ ಶ್ರೀ ಗುರುದೇವ್
ಜಗತ್ತಿನಲ್ಲಿ ತಂತ್ರಜ್ಞಾನದ ನೆರೆವಿನಿಂದ ಎಲ್ಲವೂ ಕೈಗೆಟಕುತ್ತಿದೆ. ಇದೇ ತಂತ್ರಜ್ಞಾನವನ್ನು ಬಳಸಿ ಆರೋಗ್ಯಕರ ಸಮಾಜದ ಸ್ಥಾಪನೆಗೆ ಪಿಎನ್‌ಎಸ್‌ ವಿಸ್ತಾರ ಚಾನಲ್‌ ಮುಂದಾಗಿರುವುದು ಶ್ಲಾಘನೀಯ. ಸಮಾಜದ ಈ ಸುಧಾರಣೆಯ ದಾರಿಯಲ್ಲಿ ಮಾಧ್ಯಮಗಳ ಪಾತ್ರ ಹೆಚ್ಚಿದೆ. ಅನ್ಯಾಯಗಳನ್ನು ವಿರೋಧಿಸಿ ನ್ಯಾಯ ಒದಗಿಸುವುದು ಸಾಮಾಜಿಕ ನ್ಯಾಯ ದೊರಕಿಸುವುದು ಹಾಗೂ ಬಡವರು, ದೀನ-ದಲಿತರು, ರೈತರು ಹಾಗೂ ಶೋಷಿತರ ದನಿಯಾಗಬೇಕಿದೆ. ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ಇದೇ ಧ್ಯೇಯದೊಂದಿಗೆ ನಿಮ್ಮ ಮುಂದೆ ಬರುತ್ತಿದೆ.
ವಿದ್ಯುನ್ಮಾನ ಕ್ಷೇತ್ರದಲ್ಲಿ ಈವರೆಗೆ ನಡೆದುಕೊಂಡು ಬಂದ ಸಂಪ್ರದಾಯ ಕೊಡವಿ ಧನಾತ್ಮಕ ಪ್ರಯೋಗಗಳ ಮೂಲಕ ಸಮಾಜವನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ ಹೆಜ್ಜೆ ಇಟ್ಟಿರುವುದು ಅಭಿನಂದನೀಯ. ರಾಜ್ಯದ ಮೂಲೆ ಮೂಲೆಗಳ ಸಮಸ್ಯೆ, ಕುಂದುಕೊರತೆಗಳನ್ನು ಪ್ರಸಾರ ಮಾಡಿ ಪರಿಹಾರ ಒದಗಿಸುವ ಜವಾಬ್ದಾರಿ ನಮ್ಮ ಪಿಎನ್‌ಎಸ್‌ ವಿಸ್ತಾರ ಚಾನೆಲ್‌ನ ಆದ್ಯತೆಯಾಗಿದೆ. ಪಕ್ಷ, ಪಂಥ, ಪಂಗಡಗಳಿಂದ ಪ್ರತ್ಯೇಕವಾಗಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ನುರಿತ ತಂಡ ಸೈನಿಕರಂತೆ ಕಾರ್ಯನಿರ್ವಹಿಸಲಿದ್ದಾರೆ.
ನಮ್ಮ ಚಾನೆಲ್‌ ವಿಶ್ಲೇಷಣೆ, ಮನರಂಜನೆ ಹಾಗೂ ಮಾಹಿತಿ ನೀಡುವ ಮುಖೇನ ನಾಡಿನ ಮೂಲೆ ಮೂಲೆ ತಲುಪಲು ಕಾರ್ಯೋನ್ಮುಖವಾಗಲಿದೆ. ಯಾವುದೇ ವಿಚಾರದಲ್ಲಿ ರಾಜಿಯಾಗದೇ ಜನಪರವಾಗಿ ಕೆಲಸ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದು ನಮ್ಮ ಧ್ಯೇಯವಾಗಿದೆ. ಪಿಎನ್‌ಎಸ್‌ ವಿಸ್ತಾರ ಚಾನೆಲ್‌ನ  ಈ ಧ್ಯೇಯವನ್ನು ಸಮಸ್ತ ಕನ್ನಡನಾಡಿನ ನಾಗರಿಕರು ಪ್ರೋತ್ಸಾಹಿಸುತ್ತಾರೆ ಎಂದು ಭಾವಿಸುತ್ತೇವೆ. ನಾಡಿನ ಸಮಸ್ತ ಜನರಿಗೆ ಪಿಎನ್‌ಎಸ್‌ ವಿಸ್ತಾರ ಬಳಗದಿಂದ ಅನಂತಾನಂತ ಧನ್ಯವಾದಗಳು.
ಶುಭ ಆಶೀರ್ವಾದಗಳೊಂದಿಗೆ
ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ
ವ್ಯವಸ್ಥಾಪಕ ನಿರ್ದೇಶಕರು, ಬಿಜಿಎಸ್‌ & ಎಸ್‌ಜೆಬಿ ಗ್ರೂಪ್‌ ಆಫ್‌ ಇನ್ಸ್‌ಟಿಟ್ಯೂಷನ್‌ ಮತ್ತು ಆಸ್ಪತ್ರೆಗಳು

Continue Reading

ಪ್ರಮುಖ ಸುದ್ದಿ

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

VISTARANEWS.COM


on


ಜೈ ಶ್ರೀ ಗುರುದೇವ್‌,
ನಾಡಿನ ಎಲ್ಲಾ ಕನ್ನಡದ ಸೃಜನಶೀಲ ಮನಸುಗಳಿಗೆ ನಮಸ್ಕಾರ.
ಭಾಷೆ ನಮ್ಮ ಬದುಕು, ಭಾಷೆಯೊಂದಿಗೆ ಅನುಸಂಧಾನ ಮಾಡಿಕೊಂಡು ಕೆಲಸ ಮಾಡುವ ಮಾಧ್ಯಮವೇ ಪತ್ರಿಕೋದ್ಯಮ. ಪತ್ರಿಕಾ ಮಾಧ್ಯಮದಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ನನ್ನ ಹಲವು ಕಾಲದ ಅಭಿಲಾಷೆಯಾಗಿತ್ತು. ಪರಮಾತ್ಮನ ದಯೆಯಿಂದ ಹಾಗೂ ಗುರುಗಳ ಕೃಪೆಯಿಂದ ಆ ಸದವಕಾಶ ಈಗ ಒದಗಿ ಬಂದಿದೆ. ಕನ್ನಡಿಗರ ಧ್ವನಿಯಾಗಿ ಮುಖ್ಯವಾಹಿನಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಲು ನಾವು ʻಪಿಎನ್‌ಎಸ್‌ ವಿಸ್ತಾರʼ ಸುದ್ದಿವಾಹಿನಿಯನ್ನು ಪುನರಾರಂಭಿಸುತ್ತಿದ್ದೇವೆ. ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ಕನ್ನಡ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಈಗಾಗಲೆ ತನ್ನದೇ ಆದ ಒಂದು ಬ್ರಾಂಡ್‌ ಸೃಷ್ಟಿಸಿಕೊಂಡಿದ್ದ ಸುದ್ದಿ ವಾಹಿನಿ, ಕಾರಣಾಂತರಗಳಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಒಂದು ವಿಶೇಷ ಹಾಗೂ ವಿಭಿನ್ನ ಕಾರ್ಯಯೋಜನೆಯೊಂದಿಗೆ ನಾವು ಮರಳಿ ಬರುತ್ತಿದ್ದೇವೆ. ಕನ್ನಡ ನಾಡಿನ ಬಂಧುಗಳ ಕಷ್ಟ-ನಷ್ಟಗಳ ಕುರಿತು ವಸ್ತುನಿಷ್ಟ ವರದಿ ಮಾಡಲು, ಕನ್ನಡ ನಾಡಿನ ಸಂಸ್ಕೃತಿ ಸಾರಗಳನ್ನು ಜಗತ್ತಿನಾದ್ಯಂತ ಪಸರಿಸಲು, ಕನ್ನಡದ ನುಡಿಸಿರಿಯ ವೈವಿಧ್ಯತೆಯನ್ನು ವರ್ಣಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸುದ್ದಿ ಜಗತ್ತಿನ ನಿಖರ ವರ್ತಮಾನಗಳನ್ನು ನಿರ್ಭೀತಿಯಿಂದ ನಿಮ್ಮ ಮುಂದಿಡಲು ನಾವು ಸಿದ್ಧರಾಗಿದ್ದೇವೆ. ಜನಸಾಮಾನ್ಯರ ಪ್ರತಿನಿಧಿಯಾಗಿ ಆಳುವ ಪ್ರಭುತ್ವವನ್ನು ಧೈರ್ಯದಿಂದ ಪ್ರಶ್ನಿಸಲು ನಾವು ಸಿದ್ಧರಾಗಿದ್ದೇವೆ. ಕರ್ನಾಟಕದ ನಾಡು-ನುಡಿ, ನೆಲ, ಜಲ, ಸಂಸ್ಕೃತಿಗಳ ಹಿತರಕ್ಷಣೆಗಾಗಿ ಸಂಕಲ್ಪಿಸಿಕೊಂಡಿದ್ದೇವೆ. ನಾವು ಕೇವಲ ಸುದ್ದಿಗಳನ್ನು ಪ್ರಾಮಾಣಿಕವಾಗಿ ವರದಿ ಮಾಡುತ್ತೇವೆ. ಮಾಹಿತಿಯೊಂದಿಗೆ ಮನೋರಂಜನೆ ಎಂಬ ವಿಶೇಷ ಆಯಾಮವನ್ನು ನಮ್ಮ ಮಾಧ್ಯಮದಲ್ಲಿ ಪ್ರಸ್ತುತ ಪಡಿಸಲಿದ್ದೇವೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿರುವ ಹಿರಿಯ, ಅನುಭವಿ, ಪ್ರಾವೀಣ್ಯತೆ ಹೊಂದಿರುವ ತಂಡ ನಮ್ಮೊಂದಿಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ವಿದ್ಯಮಾನ, ರಾಜಕೀಯ, ಸಿನಿಮಾ-ಕಲೆ, ಕ್ರೀಡೆ, ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ, ಜೀವನಶೈಲಿ, ಇತಿಹಾಸ-ಪುರಾಣ, ಪದ್ಧತಿ-ಪರಂಪರೆ, ಭಾಷೆಯ ಸೊಗಡು ಮತ್ತು ಆಹಾರ ಕ್ರಮಗಳು, ನದಿ- ಪರಿಸರ ಅರಣ್ಯ- ಜೀವವೈವಿಧ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ನಾವು ನಮ್ಮ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮ ಮುಂದೆ ತರಲಿದ್ದೇವೆ. ನಮ್ಮ ನಾಡಿನ ಕ್ರಿಯಾಶೀಲ, ಸೃಜನಶೀಲ ಮನಸುಗಳಿಗೆ ಅತ್ಯಂತ ಆಹ್ಲಾದಕಾರಿ ಸುದ್ದಿ ಸಂಗತಿಗಳನ್ನು ಉಣಬಡಿಸಬೇಕು ಅನ್ನುವುದಷ್ಟೆ ನಮ್ಮ ಕಳಕಳಿ. ಈ ನಿಟ್ಟಿನಲ್ಲಿ ನಮ್ಮ ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ತಂಡ ಕಳೆದ ಕೆಲವು ತಿಂಗಳಿನಿಂದ ಕಠಿಣ ಪರಿಶ್ರಮ ನಡೆಸುತ್ತಿದೆ. ಎಲ್ಲಾ ವಯೋಮಾನದವರ, ಎಲ್ಲಾ ವರ್ಗದವರ ಮತ್ತು ಎಲ್ಲಾ ರೀತಿಯ ಮನಸ್ಥಿತಿಯ ಜನಸಮುದಾಯವನ್ನು ತಲುಪಬೇಕು ಅನ್ನುವುದು ನಮ್ಮ ಹಿರಿಯಾಸೆ. ಕನ್ನಡಿಗರ ಆದ್ಯತೆಯ ವಿಷಯಗಳನ್ನು ಆಯ್ದು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡಲು ಕಾರ್ಯಯೋಜನೆ ರೂಪಿಸಿಕೊಂಡಿದ್ದೇವೆ. ಈಗ ಬೇಕಿರುವುದು ನಿಮ್ಮ ಶುಭ ಹಾರೈಕೆ ಮಾತ್ರ. ನೀವು ನಮ್ಮೊಂದಿಗಿರಿ ಸಾಕು, ನಾವು ನಿಮಗಾಗಿ ದಿನದ ೨೪ ಗಂಟೆ, ವಾರದ ೭ ದಿನ, ವರ್ಷದ ೩೬೫ ದಿನಗಳು ಸೇವೆ ಸಲ್ಲಿಸಲು ಶತಸಿದ್ಧ.

ಕರುನಾಡಿನ ಸಮಸ್ತ ಕನ್ನಡಿಗರಿಗೆ ನನ್ನ ಧನ್ಯವಾದಗಳು

ಸದಾ ನಿಮ್ಮ ಸೇವೆಯಲ್ಲಿ.
-ಹೆಚ್.ಜಿ ಪವಿತ್ರ ಗೌಡ, ‌ಸಿಇಒ, ಪಿಎನ್‌ಎಸ್‌ ವಿಸ್ತಾರ ನ್ಯೂಸ್

Continue Reading

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for november 4 2024

ಚಂದ್ರನು ಸೋಮವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೀನ ರಾಶಿಯವರಿಗೆ ಒತ್ತಡದ ಕೆಲಸದಿಂದ ಮುಕ್ತಿ.ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (4-11-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ 23:23 ವಾರ: ಸೋಮವಾರ
ನಕ್ಷತ್ರ: ಅನುರಾಧ 08:03 ಯೋಗ: ಶೋಭನ 11:42
ಕರಣ: ತೈತುಲ 10:47 ಅಮೃತಕಾಲ: ಮಧ್ಯರಾತ್ರಿ 12:20 ರಿಂದ 02:03

ಸೂರ್ಯೋದಯ : 06:12   ಸೂರ್ಯಾಸ್ತ : 05:54

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ
1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠತೆ.ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಒತ್ತಡ.ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ.ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ.ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ.ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ.ಸಾಮಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ.ಉದ್ಯೋಗಿಗಳಿಗೆ ಒತ್ತಡ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ.ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ.ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ.ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ.ಉದ್ಯೋಗಿಗಳಿಗೆ ಶುಭ ಫಲ.ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ.ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ.ಅಗತ್ಯ ವಸ್ತುಗಳ ಖರೀದಿ.ಸಹದ್ಯೋಗಿಗಳ ಬೆಂಬಲ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಮಾನಸಿಕ ಆರೋಗ್ಯ ಸದೃಢ.ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ.ಉದ್ಯೋಗಿಗಳಿಗೆ ಸಹಕಾರ.ಆರೋಗ್ಯ ಉತ್ತಮ.ಕೌಟುಂಬಿಕ ಕಲಹಗಳಿಗೆ ದ್ವನಿ ಆಗುವುದು ಬೇಡ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ.ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ.ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ.ಆರೋಗ್ಯದ ಕುರಿತು ಕಾಳಜಿ ಇರಲಿ.ಉದ್ಯೋಗಿಗಳಿಗೆ ಯಶಸ್ಸು.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ.ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ.ಆರ್ಥಿಕ ಪ್ರಗತಿ ಸಾಧಾರಣ.ಹರಟೆಯಿಂದ ಕಾಲ ಹರಣ ಮಾಡುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು.ಸಕರಾತ್ಮಕ ಆಲೋಚನೆ.ವ್ಯಾಪರ ವ್ಯವಹಾರದಲ್ಲಿ ಪ್ರಗತಿ.ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ.ಆರೋಗ್ಯ ಉತ್ತಮಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ.ಆರೋಗ್ಯ ಮಧ್ಯಮ.ಆರ್ಥಿಕ ಪ್ರಗತಿ ಸಾಧಾರಣ..ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಬಾಗಿ, ಪ್ರಯಾಣ ಮಾಡುವ ಸಾಧ್ಯತೆ.ಆರ್ಥಿಕ ಪ್ರಗತಿ ಉತ್ತಮ.ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ.ಯಾರೊಂದಿಗೂ ಅತಿಯಾದ ಸಲುಗೆ ಬೇಡ.ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ.ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತಿ.ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Latest22 minutes ago

ತಾಯಿ ನಿಧನದ ಶೋಕದಲ್ಲೂ ತಂಡಕ್ಕಾಗಿ ಕಣಕ್ಕಿಳಿದ ಮುಖೇಶ್ ಚೌಧರಿ! ಗೆಲುವನ್ನು ಅರ್ಪಿಸಿ ಮಾನವೀಯತೆ ಮೆರೆದ ನಾಯಕ ಗಾಯಕ್ವಾಡ್

HD Revanna
Latest16 hours ago

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

Latest17 hours ago

ಮತದಾನಕ್ಕೆ ಕ್ಯೂನಲ್ಲಿ ನಿಂತರೂ ಕಷ್ಟ; ನಿಲ್ಲದಿದ್ದರೂ ಕಷ್ಟ: ಹಾಗಾದ್ರೆ ನಟ ಕಮಲ್‌ ಹಾಸನ್‌ ಏನು ಮಾಡಬೇಕಿತ್ತು?

Latest17 hours ago

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

Latest17 hours ago

ಸಮಂತಾ ಕೇಳಿದ ಪ್ರಶ್ನೆಗೆ ದಿಗಂತ್ ಶಾಕ್! ‘ದೂದ್ ಪೇಡ’ ಅಂದ್ರೆ ಯಾರು ಎಂದಿದ್ದಕ್ಕೆ ‘ಚಾಕೊಲೇಟ್ ಹೀರೊ’ ನೀಡಿದ ರಿಯಾಕ್ಷನ್ ಹೇಗಿತ್ತು?

Latest17 hours ago

ಮಹಿಳಾ ಮೀಸಲಾತಿ: ಡಿಎಂಕೆ ಹುನ್ನಾರಕ್ಕೆ ರಾಜ್ಯ ಬಲಿ ಕೊಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ಆರೋಪ

Latest17 hours ago

ಬೆಸ್ಕಾಂ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ; ಹೆಚ್‌ಟಿ ಗ್ರಾಹಕರಿಗೆ ಅನುಕೂಲ

Latest18 hours ago

ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಭಾರತಕ್ಕೆ ಅವಮಾನ: ಭಾರತ-ಚೀನಾ ‘ನರಕ’ ಎಂದ ಮೈಕೆಲ್ ಸ್ಯಾವೇಜ್ ಪೋಸ್ಟ್ ಹಂಚಿಕೊಂಡ ಅಧ್ಯಕ್ಷ

HD DeveGowda Wont celebrate 92nd birthday
Latest18 hours ago

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

Latest18 hours ago

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ; ಥಳಿಸಿದ ಗ್ರಾಮಸ್ಥರು

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌