ದಾಂಪತ್ಯ ಕಲಹ; ಪತ್ನಿ, ಮಕ್ಕಳನ್ನು ಬಿಟ್ಟು ಮನೆಯಿಂದ ಹೊರಟುಹೋಗಿ ಎಂದು ಪತಿಗೆ ಸೂಚಿಸಿದ ಹೈಕೋರ್ಟ್​ - Vistara News

ದೇಶ

ದಾಂಪತ್ಯ ಕಲಹ; ಪತ್ನಿ, ಮಕ್ಕಳನ್ನು ಬಿಟ್ಟು ಮನೆಯಿಂದ ಹೊರಟುಹೋಗಿ ಎಂದು ಪತಿಗೆ ಸೂಚಿಸಿದ ಹೈಕೋರ್ಟ್​

ಮಹಿಳೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅದರ ವಿಚಾರಣೆ ಕೈಗೆತ್ತಿಕೊಳ್ಳುವವರೆಗೂ ಪತಿಯೊಂದಿಗೆ ಬದುಕಲು ಸಾಧ್ಯವಿಲ್ಲ ಎಂದು ಅವರು ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದರು.

VISTARANEWS.COM


on

To Leave The House Madras High Court Asks To Husband
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಕುಟುಂಬದಲ್ಲಿ ಶಾಂತಿ ಹಾಳು ಮಾಡುತ್ತಿರುವವನು ಪತಿ ಎಂದಾದ ಮೇಲೆ, ಅವನೇ ಮನೆ ಬಿಟ್ಟು ಹೋಗಬೇಕು ಎಂದು ಮದ್ರಾಸ್​ ಹೈಕೋರ್ಟ್​ ಹೇಳಿದೆ. ವೃತ್ತಿಯಲ್ಲಿ ವಕೀಲೆಯಾಗಿರುವ ವಿ. ಅನುಷಾ ಎಂಬುವರು ತಮ್ಮ ವಿವಾಹವನ್ನು ರದ್ದುಗೊಳಿಸಬೇಕು ಎಂದು ಚೆನ್ನೈನ ಕೌಟುಂಬಿಕ ಕೋರ್ಟ್​​ವೊಂದಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯನ್ನು ತುಂಬ ಸಮಯ ಕಳೆದರೂ ವಿಚಾರಣೆಗೆ ಕೈಗೆತ್ತಿಕೊಳ್ಳದಾಗ, ಮತ್ತೊಂದು ಮನವಿ ಅರ್ಜಿ ಸಲ್ಲಿಸಿ, ‘ನನ್ನ ವಿಚ್ಛೇದನಾ ಅರ್ಜಿ ವಿಚಾರಣೆಗೆ ಬರುವುದು ವಿಳಂಬ ಆಗುತ್ತದೆ ಎಂದಾದರೆ, ದಯವಿಟ್ಟು ನನ್ನ ಪತಿಗೆ ಮನೆ ಬಿಟ್ಟು ಹೋಗುವಂತೆ ಮಧ್ಯಂತರವಾಗಿ ಸೂಚನೆ ನೀಡಿ. ವಿಚ್ಛೇದನ ಸಿಗುವವರೆಗೂ ಆತನೊಂದಿಗೆ ಇರುವುದು ಕಷ್ಟವೆನಿಸುತ್ತದೆ. ಅವನಿಂದಾಗಿ ಇಡೀ ಮನೆ ವಾತಾವರಣ ಹಾಳಾಗಿದೆ. ನನ್ನ ಮಕ್ಕಳ ಹಿತದೃಷ್ಟಿಯಿಂದ ಅವನು ದೂರ ಇರುವುದು ಅತ್ಯಂತ ಅನಿವಾರ್ಯ’ ಎಂದು ಕೇಳಿಕೊಂಡಿದ್ದರು.

ಆದರೆ ಕೌಟುಂಬಿಕ ಕೋರ್ಟ್ ಈಕೆಯ ಪತಿಗೆ ಬುದ್ಧಿವಾದವಷ್ಟನ್ನೇ ಹೇಳಿತ್ತು ಹೊರತು ಮನೆಯಿಂದ ಹೊರ ಹೋಗಬೇಕು ಎಂದು ಸೂಚನೆ ನೀಡಿರಲಿಲ್ಲ. ‘ಮನೆಯಲ್ಲಿ ಮಕ್ಕಳೂ ಇದ್ದಾರೆಂಬುದು ಗಮನದಲ್ಲಿ ಇರಲಿ. ನಿಮ್ಮ ಯಾವುದೇ ಮಾತುಗಳು, ವರ್ತನೆ ಮನೆಯ ಶಾಂತಿಯನ್ನು ಕದಡುವಂತೆ ಇರಬಾರದು’ ಎಂದಷ್ಟೇ ಹೇಳಿತ್ತು. ಹೀಗಾಗಿ ಮಹಿಳೆ ಇದೇ ಅರ್ಜಿಯನ್ನು ಹಿಡಿದು, ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಿದ್ದರು.

ವಕೀಲೆ ಅನುಷಾ ಅವರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಮಂಜುಳಾ, ‘ಅರ್ಜಿದಾರ ಮಹಿಳೆ ಮತ್ತು ಆಕೆಯ ಪತಿಯ ನಡುವೆ ಬಾಂಧವ್ಯ ಉತ್ತಮವಾಗಿಲ್ಲ. ಇವರಿಬ್ಬರಿಗೆ ಇಬ್ಬರು ಮಕ್ಕಳಿದ್ದು, ಮೊದಲ ಮಗುವಿಗೆ 10 ವರ್ಷ, ಇನ್ನೊಂದಕ್ಕೆ 6ವರ್ಷ. ಆದರೆ ಜಗಳ ಮಿತಿಮೀರಿದೆ. ಮನೆಯೆಂಬುದು ಯುದ್ಧಭೂಮಿಯೆಂಬಂತಾಗಿದೆ ಎಂಬುದು, ಮಹಿಳೆ ಸಲ್ಲಿಸಿದ ಅರ್ಜಿಯಿಂದ ಗೊತ್ತಾಗುತ್ತದೆ. ಅಷ್ಟೇ ಅಲ್ಲ, ತನ್ನ ಪತಿ ಒಬ್ಬ ಅಶಿಸ್ತಿನ ಮನುಷ್ಯ ಮತ್ತು ಕಠಿಣ ಸ್ವಭಾವದವನು ಎಂದು ಹೇಳಿಕೊಂಡಿದ್ದಾರೆ. ಆದರೆ ಅದಕ್ಕೆ ಪ್ರತಿಯಾಗಿ ಆಕೆಯ ಪತಿ, ತಾನು ಹಾಗಿಲ್ಲ. ಏನೂ ತೊಂದರೆ ಮಾಡುತ್ತಿಲ್ಲ, ಮಕ್ಕಳು ಮತ್ತು ಪತ್ನಿಗೆ ಬೆಂಬಲವಾಗಿ ಇದ್ದೇನೆ ಎಂದೂ ತಿಳಿಸಿದ್ದಾರೆ. ಒಬ್ಬರಿಗೊಬ್ಬರು ಮಾಡಿದ ಆರೋಪವನ್ನೇ ಆಧಾರವಾಗಿಟ್ಟುಕೊಂಡು, ಅದರ ಅರ್ಹತೆಯ ಮೇಲೆ ಏನೂ ಹೇಳಲು ಸಾಧ್ಯವಿಲ್ಲ. ಆದರೆ ಇವರಿಬ್ಬರ ಕೆಲವು ಮೂಲಭೂತ ನಡವಳಿಕೆಯನ್ನು ಆಧರಿಸಿ ತೀರ್ಪು ಕೊಡಬಹುದು’ ಎಂದು ಹೇಳಿದ್ದಾರೆ.

ಅದೆಷ್ಟೋ ದಂಪತಿಗಳು ತಮ್ಮ ದಾಂಪತ್ಯ ಜೀವನ ಹಳಸಿದ ಮೇಲೆ ಕೂಡ ಒಂದೇ ಸೂರಿನಡಿ ಬದುಕುತ್ತಿರುತ್ತಾರೆ. ತಮ್ಮ ವೈಯಕ್ತಿಕ ಜೀವನ ಹಾಳಾಗಿದ್ದರೂ, ಕುಟುಂಬದ ಶಾಂತಿ ಕದಡುವುದಿಲ್ಲ. ಮಕ್ಕಳೆದುರು ಸಭ್ಯತೆ ಮೀರುವುದಿಲ್ಲ. ಆದರೆ ಪ್ರಸ್ತುತ ಪ್ರಕರಣ ಹಾಗಿಲ್ಲ, ಇಲ್ಲಿ ಗಂಡನ ನಿರಂತರವಾದ ನಿಂದನಾತ್ಮಕ ಮಾತುಗಳು, ಜಗಳ, ಗಲಾಟೆ ಮಕ್ಕಳ ಮನಸಿನ ಮೇಲೆ ಕೆಟ್ಟ ಪ್ರಭಾವ ಬೀರುತ್ತಿದೆ. ಮಕ್ಕಳು ಮತ್ತು ಅರ್ಜಿದಾರ ಮಹಿಳೆ ಸದಾ ಭಯದಲ್ಲೇ ಬದುಕಲು ಸಾಧ್ಯವಿಲ್ಲ. ಮನೆಯ ಶಾಂತಿ-ವಾತಾವರಣ ಹಾಳಾಗಲು ಪತಿಯೇ ಕಾರಣ ಎಂದಾದರೆ, ಅವನನ್ನು ಮನೆ ಬಿಟ್ಟು ಹೋಗುವಂತೆ ಸೂಚಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಹೀಗಾಗಿ ಪತಿಯೇ ಮನೆಬಿಟ್ಟು ಹೋಗಲಿ’ ಎಂದೂ ನ್ಯಾಯಾಧೀಶರು ತಿಳಿಸಿದ್ದಾರೆ.

ಪತ್ನಿ ಸಲ್ಲಿಸಿದ ಅರ್ಜಿಗೆ ಪ್ರತಿ ಅರ್ಜಿ ಸಲ್ಲಿಸಿದ ಆಕೆಯ ಪತಿ ಮಹಿಳೆ ವಿರುದ್ಧವೂ ಹಲವು ಆರೋಪಗಳನ್ನು ಮಾಡಿದರು. ‘ಅವಳು ಮನೆಯಲ್ಲೇ ಇರುವುದಿಲ್ಲ. ಸದಾ ಹೊರಗೆ ತಿರುಗುತ್ತಿರುತ್ತಾಳೆ. ಇದರಿಂದ ನನಗೆ, ಮಕ್ಕಳಿಗೆ ಎಲ್ಲರಿಗೂ ಕಷ್ಟವಾಗುತ್ತಿದೆ’ ಎಂದೂ ಹೇಳಿದರು. ಆದರೆ ನ್ಯಾಯಾಧೀಶರು ಅದನ್ನು ತುಂಬ ಗಂಭೀರವಾಗಿ ಪರಿಗಣಿಸಲಿಲ್ಲ.

ಇದನ್ನೂ ಓದಿ: ಆಕೆ ತೊಟ್ಟಿದ್ದು ಲೈಂಗಿಕ ಪ್ರಚೋದನಕಾರಿ ಉಡುಪು; ಈ ಕಾರಣ ಕೊಟ್ಟು ಲೇಖಕನಿಗೆ ನಿರೀಕ್ಷಣಾ ಜಾಮೀನು​ ನೀಡಿದ ಕೋರ್ಟ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Pema Khandu: ಅರುಣಾಚಲ ಪ್ರದೇಶದ ಸಿಎಂ ಆಗಿ ಪೇಮಾ ಖಂಡು ಪ್ರಮಾಣ ವಚನ ಸ್ವೀಕಾರ

Pema Khandu: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿಯ ಪೇಮಾ ಖಂಡು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಸಿಎಂ ಹುದ್ದೆಗೆ ಏರುತ್ತಿರುವುದು ಇದು ಮೂರನೇ ಬಾರಿ ಎನ್ನುವುದು ವಿಶೇಷ. ಇವರ ಜತೆಗೆ ಉಪಮುಖ್ಯಮಂತ್ರಿಯಾಗಿ ಚೌವ್ನ ಮೇಯ್ನ್‌ ಪದಗ್ರಹಣ ಮಾಡಿದರು. ಇವರಲ್ಲದೆ 10 ಕ್ಯಾಬಿನೆಟ್‌ ಸಚಿವರಿಗೆ ಅರುಣಾಚಲ ಪ್ರದೇಶದ ರಾಜ್ಯಪಾಲ ಕೆ.ಟಿ.ಪರ್ನಾಯಕ್ ಪ್ರಮಾಣ ವಚನ ಬೋಧಿಸಿದರು.

VISTARANEWS.COM


on

Pema Khandu
Koo

ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿಯ ಪೇಮಾ ಖಂಡು (Pema Khandu) ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಸಿಎಂ ಹುದ್ದೆಗೆ ಏರುತ್ತಿರುವುದು ಇದು ಮೂರನೇ ಬಾರಿ ಎನ್ನುವುದು ವಿಶೇಷ. ಇವರ ಜತೆಗೆ ಉಪಮುಖ್ಯಮಂತ್ರಿಯಾಗಿ ಚೌವ್ನ ಮೇಯ್ನ್‌ (Chowna Mein) ಪದಗ್ರಹಣ ಮಾಡಿದರು.

ಇವರಲ್ಲದೆ 10 ಕ್ಯಾಬಿನೆಟ್‌ ಸಚಿವರಿಗೆ ಅರುಣಾಚಲ ಪ್ರದೇಶದ ರಾಜ್ಯಪಾಲ ಕೆ.ಟಿ.ಪರ್ನಾಯಕ್ ಪ್ರಮಾಣ ವಚನ ಬೋಧಿಸಿದರು. ಇಟಾನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ನಿಂಗ್‌, ಜೆ.ಪಿ.ನಡ್ಡಾ, ಕಿರಣ್‌ ರಿಜಿಜು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಮತ್ತಿತರರು ಪಾಲ್ಗೊಂಡಿದ್ದಾರೆ.

ಬಿಯುರಾಮ್ ವಾಘೆ, ನ್ಯಾಟೊ ಡುಕಾಮ್, ಗ್ಯಾನ್ರಿಯಲ್ ಡೆನ್ವಾಂಗ್ ವಾಂಗ್ಸು, ವಾಂಕಿ ಲೋವಾಂಗ್, ಪಸಾಂಗ್ ದೋರ್ಜಿ ಸೋನಾ, ಮಾಮಾ ನಾತುಂಗ್, ದಸಾಂಗ್ಲು ಪುಲ್, ಬಾಲೊ ರಾಜಾ, ಕೆಂಟೊ ಜಿನಿ ಮತ್ತು ಓಜಿಂಗ್ ತಾಸಿಂಗ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು. ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಕಲಿಖೋ ಪುಲ್ ಅವರ ಪತ್ನಿ ದಸಾಂಗ್ಲು ಪುಲ್ ಅವರು ದಶಕಗಳ ನಂತರ ಆಯ್ಕೆಯಾದ ಏಕೈಕ ಸಚಿವೆ ಎನಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಯೊಂದಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 60 ಸೀಟುಗಳ ಪೈಕಿ ಬಿಜೆಪಿ 46 ಕಡೆ ಜಯ ಗಳಿಸಿ ಬಹುಮತ ಪಡೆದು ಸರ್ಕಾರ ರಚಿಸಿದೆ. ವಿಶೇಷ ಎಂದರೆ 10 ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ಮುಕ್ತೋ ಕ್ಷೇತ್ರದಲ್ಲಿ ಪೇಮಾ ಖಂಡು, ಬೊಮ್ಡಿಲದಲ್ಲಿ ಡೊಂಗ್ರು ಸಿಯೊಂಗ್ಜು, ಚೌಕಂನಲ್ಲಿ ಚೌನಾ ಮೇ ಹಯುಲಿಯಾಂಗ್‌ನಲ್ಲಿ ದಸಾಂಗ್ಲು ಪುಲ್, ಇಟಾನಗರದಲ್ಲಿ ಟೆಚಿ ಕಾಸೊ, ರೋಯಿಂಗ್‌ದಲ್ಲಿ ಮುಚ್ಚು ಮಿಥಿ, ಸಾಗಲೀ ಕ್ಷೇತ್ರದಲ್ಲಿ ರತು ಟೆಚಿ, ತಾಲಿ ಕ್ಷೇತ್ರದಲ್ಲಿ ಜಿಕ್ಕೆ ಟಾಕೊ, ತಾಲಿಹಾದಲ್ಲಿ ನ್ಯಾತೋ ದುಕಮ್ ಜಿರೋ, ಹಾಪೋಲಿ ಕ್ಷೇತ್ರದಲ್ಲಿ ಹಗೆ ಅಪ್ಪಾ ಅವಿರೋಧವಾಗಿ ಆಯ್ಕೆಯಾದ ಶಾಸಕರು.

44 ವರ್ಷದ ಪೇಮಾ ಖಂಡು ಮೊದಲು ಕಾಂಗ್ರೆಸ್‌ನಲ್ಲಿದ್ದರು. ಬಳಿಕ ಕೇಸರಿ ಪಾಳಯದತ್ತ ಮುಖ ಮಾಡಿದರು. 2016ರಲ್ಲಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಅದೇ ವರ್ಷದ ಕೊನೆಯಲ್ಲಿ ಖಂಡು ನೇತೃತ್ವದ 43 ಶಾಸಕರು ಕಾಂಗ್ರೆಸ್‌ನಿಂದ ಬಿಜೆಪಿ ಮಿತ್ರ ಪಕ್ಷವಾದ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (PPA)ಕ್ಕೆ ಪಕ್ಷಾಂತರಗೊಂಡರು. ಇದರ ನಂತರ 33 ಪಿಪಿಎ ಶಾಸಕರು ಬಿಜೆಪಿಗೆ ಸೇರಿದ ಬಳಿಕ ಪೇಮಾ ಖಂಡು ಮುಖ್ಯಮಂತ್ರಿಯಾಗಿ ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಸಾಬೀತುಪಡಿಸಿದರು. 2019ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಚುಕ್ಕಾಣಿ ಹಿಡಿಯಿತು. ಆಗಲೂ ಮುಖ್ಯಮಂತ್ರಿಯಾಗಿ ಪೇಮಾ ಖಂಡು ಆಯ್ಕೆಯಾಗಿದರು.

ಇದನ್ನೂ ಓದಿ: Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ SKMಗೆ ಪ್ರಚಂಡ ಗೆಲುವು

ಚುನಾವಣೆಯಲ್ಲಿ ಬಹುಮತ ಪಡೆದ ಬಳಿಕ ಜೂನ್‌ 3ರಂದು ಪೇಮಾ ಖಂಡು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮತದಾರರಿಗೆ ಧನ್ಯವಾದ ಅರ್ಪಿಸಿದ್ದರು. ʼʼಮತ ಚಲಾಯಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ರಾಜ್ಯದ ಅಭಿವೃದ್ಧಿ ಮತ್ತು ಜನರ ಉನ್ನತಿಗಾಗಿ ಹಗಲಿರುಳು ಶ್ರಮಿಸುತ್ತೇನೆʼʼ ಎಂದು ಅವರು ಭರವಸೆ ನೀಡಿದ್ದರು.

Continue Reading

ಪ್ರಮುಖ ಸುದ್ದಿ

NEET UG : 1563 ಅಭ್ಯರ್ಥಿಗಳ ಗ್ರೇಸ್ ಮಾರ್ಕ್​ ರದ್ದು, ಜೂನ್​ 23ರಂದು ಮರುಪರೀಕ್ಷೆ

NEET UG : ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

VISTARANEWS.COM


on

NEET UG
Koo

ನವದೆಹಲಿ: ನೀಟ್​ ಯುಜಿ (NEET UG) ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್​ (ಕೃಪಾಂಕ) ಪಡೆದಿರುವ 1,563 ಅಭ್ಯರ್ಥಿಗಳಿಗೆ ಜೂನ್​ 23ರಂದು ಮರು ಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರ ಮತ್ತು ಎನ್​ಟಿಎ (National Testing Agency) ಗುರುವಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್​ಗಳ ಪ್ರವೇಶಕ್ಕಾಗಿ ನೀಟ್-ಯುಜಿ, 2024 ಪರೀಕ್ಷೆಗೆ ಸಂಬಂಧಿಸಿದ ವಿವಾದಕ್ಕೆ ಕುರಿತ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಪೀಠಕ್ಕೆ ಕೇಂದ್ರ ಸರ್ಕಾರ ಹಾಗೂ ಎನ್​ಟಿಎ ಮಾಹಿತಿ ನೀಡಿದೆ.

ಗ್ರೇಸ್ ಅಂಕಗಳನ್ನು ನೀಡಿದ 1,563 ನೀಟ್-ಯುಜಿ 2024 ಅಭ್ಯರ್ಥಿಗಳ ಸ್ಕೋರ್ ಕಾರ್ಡ್​ಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಸಮಿತಿ ತೆಗೆದುಕೊಂಡಿದೆ. ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳುವ ಆಯ್ಕೆಯನ್ನು ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್​ಗೆ ಏಜೆನ್ಸಿ ತಿಳಿಸಿದೆ. ಪರೀಕ್ಷೆಗಳನ್ನು ಜೂನ್ 23 ರಂದು ನಡೆಸಲಾಗುವುದು ಮತ್ತು ಜೂನ್ 30 ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಎನ್​​ಟಿಎ ಸುಪ್ರೀಂ ಕೋರ್ಟ್​​ಗೆ ತಿಳಿಸಿದೆ.

ಜುಲೈ 6ರಿಂದ ಕೌನ್ಸೆಲಿಂಗ್​

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್​​ಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಜುಲೈ 6 ರಿಂದ ಪ್ರಾರಂಭವಾಗಲಿದೆ ಎಂದು ಎನ್​ಟಿಎ ತಿಳಿಸಿದೆ. ಮರುಪರೀಕ್ಷೆಗೆ ಸಂಬಂಧಿಸಿದಂತೆ ಎನ್​ಟಿಎ ಕೊಟ್ಟಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಂಡಿದೆ. ಇವೆಲ್ಲದರ ನಡುವೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಕೌನ್ಸೆಲಿಂಗ್ ಮುಂದುವರಿಯುತ್ತದೆ ಮತ್ತು ನಾವು ಅದನ್ನು ನಿಲ್ಲಿಸುವುದಿಲ್ಲ. ಪರೀಕ್ಷೆ ನಡೆದ ಬಳಿಕ ಎಲ್ಲವೂ ಒಟ್ಟಾಗಿ ನಡೆಯುತ್ತದೆ. ಆದ್ದರಿಂದ ಭಯಪಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಯ ನೀಡಿದೆ.

ಬಹು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳ ನಡುವೆ ಮೇ 5 ರಂದು ಪರೀಕ್ಷೆಯನ್ನು ನಡೆಸಲಾಯಿತು ಎಂದು ಎನ್​​ಟಿಎ ವಿರುದ್ಧ ಸುಪ್ರೀಂ ಕೋರ್ಟ್​​ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆಯು ಸಂವಿಧಾನದ 14 ನೇ ವಿಧಿಯ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಿದೆ. ಏಕೆಂದರೆ ಇದು ನ್ಯಾಯಯುತ ರೀತಿಯಲ್ಲಿ ಪರೀಕ್ಷೆ ಬರೆದ ಇತರ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತೆ. ಅಲ್ಲದೆ ಅಕ್ರಮವಾಗಿ ಬರೆದ ಅಭ್ಯರ್ಥಿಗಳಿಗೆ ಅನಗತ್ಯ ಪ್ರಯೋಜನವನ್ನು ನೀಡುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ನೀಟ್​ ಪರೀಕ್ಷೆಯಲ್ಲಿ ಅಕ್ರಮ

ಕೆಲವೊಂದು ಸಮಸ್ಯೆಗಳಿಂದಾಗಿ 1,563 ಅಭ್ಯರ್ಥಿಗಳಿಗೆ ಸಮಯ ನಷ್ಟವಾಗಿದೆ ಎಂದು ಕೃಪಾಂಕವನ್ನು ನೀಡಲಾಗಿತ್ತು. ಅಲ್ಲದೆ ಈ ಅಂಕಗಳನ್ನು ಪಡೆದ ಅಭ್ಯರ್ಥಿಗಳ ಗರಿಷ್ಠ ರ್ಯಾಂಕ್​ಗಳನ್ನು ಪಡೆದಿದ್ದರು. ಇದು ಅನುಮಾನಕ್ಕೆ ಕಾರಣವಾಯಿತು. ಪೂರ್ವಯೋಜಿತ ಕೃತ್ಯ ಹಾಗೂ ಪ್ರಶ್ನಾ ಪತ್ರಿಕೆಯ ಸೋರಿಕೆ ಎಂಬುದಾಗಿ ಗದ್ದಲವೆದ್ದಿತು. ದೇಶಾದ್ಯಂತ ಪರೀಕ್ಷೆ ಬರೆದ ಅಭ್ಯರ್ಥಿಗಳು ಮೋಸ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಈ ಅಕ್ರಮಗಳನ್ನು ಎತ್ತಿ ತೋರಿಸಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆ ನಡೆಸಬೇಕೆಂದು ಎಎಪಿ ಒತ್ತಾಯಿಸಿದೆ.

ಇದನ್ನೂ ಓದಿ: Tollgates: ಇನ್ನು ಫಾಸ್ಟ್‌ಟ್ಯಾಗ್‌‌ ಮರೆತುಬಿಡಿ; ಟೋಲ್‌ ಸಂಗ್ರಹಕ್ಕೆ ಬರುತ್ತಿದೆ ಸ್ಯಾಟಲೈಟ್‌ ಆಧಾರಿತ ವ್ಯವಸ್ಥೆ: ಏನಿದರ ಪ್ರಯೋಜನ?

ಈ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, “ಲಕ್ಷಾಂತರ ಮಕ್ಕಳು ನೀಟ್ ನಂತಹ ಪರೀಕ್ಷೆಗಳಿಗೆ ಕಠಿಣ ತಯಾರಿ ನಡೆಸುತ್ತಾರೆ/ ಅದಕ್ಕಾಗಿ ತಯಾರಿ ನಡೆಸಲು ತಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳನ್ನು ಕಳೆಯುತ್ತಾರೆ. ಇಡೀ ಕುಟುಂಬವು ಅವರ ಬೆನ್ನಿಗೆ ನಿಲ್ಲುತ್ತದೆ. ಆದರೆ ವರ್ಷದಿಂದ ವರ್ಷಕ್ಕೆ ಈ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಫಲಿತಾಂಶಗಳಿಗೆ ಸಂಬಂಧಿಸಿದ ಅಕ್ರಮಗಳು ವರದಿಯಾಗುತ್ತಿವೆ ಎಂದು ಹೇಳಿದ್ದರು.

Continue Reading

ದೇಶ

G7 Summit: ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೋದಿ ಮೊದಲ ವಿದೇಶ ಪ್ರವಾಸ ಇಂದು; ಇಟಲಿಯ ಜಿ7 ಶೃಂಗಸಭೆಯಲ್ಲಿ ಭಾಗಿ

G7 Summit: ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ತಮ್ಮ ಮೊದಲ ವಿದೇಶ ಪ್ರವಾಸವನ್ನು ಗುರುವಾರ (ಜೂನ್‌ 13) ಕೈಗೊಂಡಿದ್ದಾರೆ. ಇಟಲಿಯಲ್ಲಿ ಆಯೋಜಿಸಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ. ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ಜೂನ್‌ 13ರಿಂದ 15ರವರೆಗೆ ಈ ಬಾರಿಯ, 50ನೇ ಜಿ7 ಶೃಂಗಸಭೆಯನ್ನು ಆಯೋಜಿಸಲಾಗಿದೆ.

VISTARANEWS.COM


on

G7 Summit
Koo

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ತಮ್ಮ ಮೊದಲ ವಿದೇಶ ಪ್ರವಾಸವನ್ನು ಗುರುವಾರ (ಜೂನ್‌ 13) ಕೈಗೊಂಡಿದ್ದಾರೆ. ಇಟಲಿಯಲ್ಲಿ ಆಯೋಜಿಸಿರುವ ಜಿ7 ಶೃಂಗಸಭೆ (G7 Summit)ಯಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ.

ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ಜೂನ್‌ 13ರಿಂದ 15ರವರೆಗೆ ಈ ಬಾರಿಯ, 50ನೇ ಜಿ7 ಶೃಂಗಸಭೆಯನ್ನು ಆಯೋಜಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಅವರನ್ನು ಒಳಗೊಂಡಿರುವ ಉನ್ನತ ಮಟ್ಟದ ನಿಯೋಗವು ಪ್ರಧಾನಿ ಅವರೊಂದಿಗೆ ಇರಲಿದೆ. ಜೂನ್‌ 14ರಂದು ಸಭೆಯಲ್ಲಿ ಮೋದಿ ಅವರು ಪಾಲ್ಗೊಂಡು ಅಂದೇ ಭಾರತಕ್ಕೆ ಹಿಂದಿರುಗಲಿದ್ದಾರೆ.

ಚರ್ಚಾ ವಿಷಯ

ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ವಿಚಾರವು ಜಿ7 ಶೃಂಗಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾದ ಆಕ್ರಮಣದ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ. ಜತೆಗೆ ಭಾರತ ರಕ್ಷಣಾ ಮತ್ತು ಸಮುದ್ರ ಮಾರ್ಗದಲ್ಲಿನ ಸಹಕಾರದ ಬಗ್ಗೆ ಪ್ರಸ್ತಾವಿಸಲಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕ, ಇಂಗ್ಲೆಂಡ್‌, ಕೆನಡಾ, ಜರ್ಮನಿ, ಇಟಲಿ, ಜಪಾನ್, ಫ್ರಾನ್ಸ್ ಮತ್ತು ಯುರೋಪಿಯನ್ ಒಕ್ಕೂಟದ ಏಳು ಸದಸ್ಯ ರಾಷ್ಟ್ರಗಳ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ʼʼವಿಶೇಷ ಆಹ್ವಾನಿತರಾಗಿರುವ ಪ್ರಧಾನಿ ಮೋದಿ ಗುರುವಾರ ಉನ್ನತ ಮಟ್ಟದ ನಿಯೋಗದೊಂದಿಗೆ ಇಟಲಿಗೆ ತೆರಳಲಿದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಮರಳಿದ ನಂತರ ಇದು ಅವರ ಮೊದಲ ವಿದೇಶ ಪ್ರವಾಸʼʼ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ತಿಳಿಸಿದ್ದಾರೆ. ʼʼಭಾರತದ ಜಿ20 ಅಧ್ಯಕ್ಷತೆಯ ಅವಧಿಯಲ್ಲಿ ಚರ್ಚಿಸಲಾದ ಕೆಲವು ಪ್ರಮುಖ ವಿಷಯಗಳ ಬಗ್ಗೆ ಅವರು ಪ್ರಸ್ತಾವಿಸಲಿದ್ದಾರೆʼʼ ಎಂದೂ ಹೇಳಿದ್ದಾರೆ.

ಶೃಂಗಸಭೆಯಲ್ಲಿ ರಷ್ಯಾ-ಉಕ್ರೇನ್ ಸಂಘರ್ಷ ಚರ್ಚೆಯ ವಿಷಯಗಳಲ್ಲಿ ಒಂದಾಗುವ ನಿರೀಕ್ಷೆಯಿದೆ. ಸಂಘರ್ಷವನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆ ಉತ್ತಮ ಆಯ್ಕೆಯಾಗಿದೆ ಎಂದು ಭಾರತ ಪುನರುಚ್ಚರಿಸಿದೆ. “ಸಂಘರ್ಷ, ಸಂವಾದ ಮತ್ತು ರಾಜತಾಂತ್ರಿಕತೆಯ ಅಗತ್ಯತೆಯ ಬಗ್ಗೆ ಮಾತ್ರವಲ್ಲ, ಸಂಘರ್ಷವು ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಬೀರುವ ಪರಿಣಾಮ ಬೀರುವ ಬಗ್ಗೆಯೂ ಮಾತನಾಡಲಿದ್ದೇವೆ” ಎಂದು ಕ್ವಾತ್ರಾ ತಿಳಿಸಿದ್ದಾರೆ.

ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರೂ ಪಾಲ್ಗೊಳ್ಳುತ್ತಿದ್ದು, ಮೋದಿ ಅವರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆ ಇದೆ. ಜತೆಗೆ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಒಪ್ಪಂಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

ಗ್ರೂಪ್ ಆಫ್ ಸೆವೆನ್ (ಜಿ 7) ಏಳು ಪ್ರಮುಖ ದೇಶಗಳನ್ನು ಒಳಗೊಂಡಿರುವ ಅಂತರ್ ಸರ್ಕಾರಿ ಸಂಸ್ಥೆಯಾಗಿದೆ. ಆರ್ಥಿಕ ನೀತಿ, ಜಾಗತಿಕ ಭದ್ರತೆ ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಸಮನ್ವಯಗೊಳಿಸಲು ಈ ದೇಶಗಳು ವಾರ್ಷಿಕವಾಗಿ ಸಭೆ ಸೇರುತ್ತವೆ. 

Continue Reading

ದೇಶ

Tollgates: ಇನ್ನು ಫಾಸ್ಟ್‌ಟ್ಯಾಗ್‌‌ ಮರೆತುಬಿಡಿ; ಟೋಲ್‌ ಸಂಗ್ರಹಕ್ಕೆ ಬರುತ್ತಿದೆ ಸ್ಯಾಟಲೈಟ್‌ ಆಧಾರಿತ ವ್ಯವಸ್ಥೆ: ಏನಿದರ ಪ್ರಯೋಜನ?

Tollgates: ವಾಹನ ಸವಾರರಿಗೆ ಗುಡ್‌ನ್ಯೂಸ್‌. ಇನ್ನು ಹೆದ್ದಾರಿಯಲ್ಲಿ ಟೋಲ್‌ ಕಟ್ಟಲು ಕಾಯುವ ಕಿರಿಕಿರಿ ತಪ್ಪಲಿದೆ. ಫಾಸ್ಟ್‌ಟ್ಯಾಗ್‌‌ ಟೋಲ್‌ ಸಂಗ್ರಹಕ್ಕಿಂತ ಭಿನ್ನವಾದ, ಸ್ಯಾಟಲೈಟ್‌ ಆಧಾರಿತ ಟೋಲ್‌ ಸಿಸ್ಟಂ ಜಾರಿಗೆ ತರುವುದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಹೊಸ ತಂತ್ರಜ್ಞಾನದಿಂದ ಏನೆಲ್ಲ ಪ್ರಯೋಜನಗಳಿವೆ, ಸವಾಲುಗಳೇನು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Tollgates
Koo

ನವದೆಹಲಿ: ಕೇಂದ್ರ ಸರ್ಕಾರ ಹೆದ್ದಾರಿಗಳಲ್ಲಿನ ಟೋಲ್‌ ಸಂಗ್ರಹ (Tollgates) ವ್ಯವಸ್ಥೆಯ ಬದಲಾವಣೆಗೆ ಚಿಂತನೆ ನಡೆಸಿದೆ. ಕಳೆದ ವರ್ಷವೇ ಸರ್ಕಾರ ಈ ಬಗ್ಗೆ ಸೂಚನೆ ನೀಡಿದೆ. ಫಾಸ್ಟ್‌ಟ್ಯಾಗ್‌‌ (FASTag) ಟೋಲ್‌ ಸಂಗ್ರಹಕ್ಕಿಂತ ಭಿನ್ನವಾದ, ಸ್ಯಾಟಲೈಟ್‌ ಆಧಾರಿತ ಟೋಲ್‌ ಸಿಸ್ಟಂ ಜಾರಿಗೆ ತರುವುದು ಸರ್ಕಾರದ ಯೋಜನೆ. ಉಪಗ್ರಹ ಆಧಾರಿತವಾಗಿ ಇದು ಕಾರ್ಯ ನಿರ್ವಹಿಸಲಿದೆ (Satellite Based Toll System). ಉಪಗ್ರಹ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ವಿವಿಧ ಜಾಗತಿಕ ಸಂಸ್ಥೆಗಳ ಜತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NationalHighway aAuthority of India) ಚರ್ಚೆ ನಡೆಸಿದೆ. ಈ ಹೊಸ ತಂತ್ರಜ್ಞಾನದಿಂದ ಏನೆಲ್ಲ ಪ್ರಯೋಜನಗಳಿವೆ, ಸವಾಲುಗಳೇನು ಎನ್ನುವ ವಿವರ ಇಲ್ಲಿದೆ.

ಕೇಂದ್ರ ಸರ್ಕಾರವು 2021ರಿಂದ ಫಾಸ್ಟ್‌ಟ್ಯಾಗ್‌ ಕಡ್ಡಾಯಗೊಳಿಸಿದ್ದು, ಇದರಿಂದ ಟೋಲ್‌ಗೇಟ್‌ಗಳಲ್ಲಿ ಜನರ ಅರ್ಧ ಸಮಯ ಉಳಿತಾಯವಾಗಿದೆ. ರಸ್ತೆಯ ಉದ್ದಕ್ಕೂ ಕ್ಯೂ ನಿಲ್ಲುವ ಪ್ರಮೇಯ ತಪ್ಪಿದೆ. ಅದಾಗ್ಯೂ ಕಾಯುವ ಕಿರಿಕಿರಿ ಪೂರ್ತಿಯಾಗಿ ತಪ್ಪಿಲ್ಲ. ಇದೀಗ ಹೊಸ ವ್ಯವಸ್ಥೆ ಮೂಲಕ ಈ ಎಲ್ಲ ಸಮಸ್ಯೆ ಪರಿಹಾರವಾಗಲಿದೆ ಎನ್ನುವ ನಿರೀಕ್ಷೆ ಇದೆ.

ಜಿಪಿಎಸ್‌ ಆಧಾರಿತ ಟೋಲ್‌ ಸಿಸ್ಟಮ್‌ ಹೇಗೆ ಕಾರ್ಯ ನಿರ್ವಹಿಸುತ್ತದೆ?

ಭಾರತದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಜಿಪಿಎಸ್ ಅಥವಾ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಫಾಸ್ಟ್‌ಟ್ಯಾಗ್‌ ಐಡಿಗಳನ್ನು ಸ್ಕ್ಯಾನ್ ಮಾಡುವ ಬದಲು, ವಾಹನದ ನಂಬರ್ ಪ್ಲೇಟ್ ಅನ್ನು ಸ್ಕ್ಯಾನ್ ಮಾಡಲಾಗುತ್ತದೆ. ಇದಕ್ಕಾಗಿ ಹೆದ್ದಾರಿಗಳನ್ನು ವರ್ಚುವಲ್ ಟೋಲ್‌ನಿಂದ ಸಜ್ಜುಗೊಳಿಸಲಾಗುತ್ತದೆ. ಇದರಲ್ಲಿನ ಕ್ಯಾಮೆರಾ ಚಲಿಸುತ್ತಿರುವ ವಾಹನಗಳ ನಂಬರ್‌ ಪ್ಲೇಟ್‌ ಅನ್ನು ಗುರುತಿಸುತ್ತದೆ. ಬಳಿಕ ವಾಹನ ಪ್ರಯಾಣಿಸಿದ ದೂರವನ್ನು ಆಧರಿಸಿ ಬ್ಯಾಂಕ್ ಖಾತೆಯಿಂದ ಟೋಲ್ ಮೊತ್ತವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸಲಾಗುತ್ತದೆ. ಜತೆಗೆ ವಿವಿಧ ವಿವರಗಳನ್ನು ಮೇಲ್ವಿಚಾರಣೆ ನಡೆಸಲು ಜಿಪಿಎಸ್ ಅನ್ನು ಬಳಸಲಾಗುತ್ತದೆ. ಒಟ್ಟಿನಲ್ಲಿ ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯು ಜಾರಿಗೆ ಬಂದರೆ ಸಮಯದ ಜತೆಗೆ ಹಣವೂ ಉಳಿತಾಯವಾಗುತ್ತದೆ. ಟೋಲ್‌ ಸಂಗ್ರಹ ಇರುವ ಹೆದ್ದಾರಿಯಲ್ಲಿ ನಾವು ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಟೋಲ್‌ ಶುಲ್ಕ ಪಾವತಿಸದರೆ ಸಾಕಾಗುತ್ತದೆ.

ಅನುಕೂಲಗಳೇನು?

ಈ ಹೊಸ ಟೋಲ್ ಸಂಗ್ರಹ ವ್ಯವಸ್ಥೆಯ ಕಾಯುವ ಸಮಯವನ್ನು ಕಡಿಮೆ ಮಾಡುತ್ತದೆ. ಇದು ಸರಾಸರಿ ಕಾಯುವ ಸಮಯವನ್ನು 714 ಸೆಕೆಂಡುಗಳಿಂದ (ಸುಮಾರು 11 ನಿಮಿಷ) 47 ಸೆಕೆಂಡುಗಳಿಗೆ ಇಳಿಸುತ್ತದೆ. ಅಂತಿಮವಾಗಿ ಪ್ರಯಾಣದ ಸಮಯವನ್ನೂ ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಈ ವಿಧಾನವು ಸಂಚಾರ ದಟ್ಟಣೆಯನ್ನು ಇಳಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ ವಿಶೇಷ ಟೋಲ್ ಲೇನ್‌ಗಳನ್ನು ನಿರ್ಮಿಸುವ ಅಗತ್ಯವಿಲ್ಲ. ಟೋಲ್‌ ಬೂತ್‌ಗಳನ್ನು ತೆಗೆದುಹಾಕುವುದರಿಂದ ಇವುಗಳ ನಿರ್ವಹಣೆ ಮತ್ತು ನಿರ್ಮಾಣ ವೆಚ್ಚಗಳನ್ನು ಉಳಿಸಬಹುದು. ಇದಲ್ಲದೆ, ಬಿಲ್ಲಿಂಗ್ ಪ್ರಕ್ರಿಯೆಯು ಸುಲಭವಾಗುತ್ತದೆ. ಏಕೆಂದರೆ ಬಳಕೆದಾರರು ಅವರು ಪ್ರಯಾಣಿಸುವ ದೂರಕ್ಕೆ ಮಾತ್ರ ಪಾವತಿಸಿದರೆ ಸಾಕು. ಅಂದರೆ ಈಗ ನಾವು ಟೋಲ್‌ ಗೇಟ್‌ ನಂತರ ಅರ್ಧ ಕಿಲೋಮೀಟರ್‌ ಇದ್ದರೂ, ಪೂರ್ತಿ ಹಣವನ್ನು ಪಾವತಿಸಬೇಕು. ಆದರೆ ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೆ ಬಂದರೆ, ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಹಣ ಪಾವತಿ ಮಾಡಿದರಾಯ್ತು.

ಸವಾಲುಗಳೇನು?

ಇನ್ನು ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೆ ಹಲವು ಸವಾಲುಗಳಿವೆ. ಪ್ರಸ್ತುತ ಬಳಸಲಾಗುವ ಫಾಸ್ಟ್‌ಟ್ಯಾಗ್‌ಗೆ ಹೋಲಿಸಿದರೆ ಇದು ಮುಂದುವರಿದಿದ ತಂತ್ರಜ್ಞಾನವಾಗಿದ್ದರೂ ಈ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆ ಅಗತ್ಯ. ಉದಾಹರಣೆಗೆ, ವಾಹನ ದಟ್ಟಣೆ ಇರುವ ಸ್ಥಳಗಳಲ್ಲಿ ನಿಖರವಾದ ಡೇಟಾವನ್ನು ಸಂಗ್ರಹಿಸಲು ಸಿಸ್ಟಮ್‌ಗೆ ಸಾಧ್ಯವಾಗದಿರಬಹುದು. ಈ ಸಮಸ್ಯೆಗಳು ಗ್ರಾಮೀಣ ಭಾಗಗಳು ಅಥವಾ ಭೌಗೋಳಿಕವಾಗಿ ಸವಾಲಿನ ಭೂ ಪ್ರದೇಶವನ್ನು ಹೊಂದಿರುವ ಪ್ರದೇಶಗಳಲ್ಲಿ ನಿರಂತರವಾಗಿರಬಹುದು. ಈ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಅಲ್ಲದೆ ಇದು ಗ್ರಾಹಕರ ಗೌಪ್ಯತೆಯ ಬಗ್ಗೆಯೂ ಪ್ರಶ್ನೆ ಏಳುವಂತೆ ಮಾಡುತ್ತದೆ.

ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಯಲ್ಲಿರುವ ದೇಶಗಳಿವು

ಈ ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆಯನ್ನು ಈಗಾಗಲೇ ಹಲವು ದೇಶಗಳು ಬಳಸುತ್ತಿವೆ. ಜರ್ಮನಿ, ರಷ್ಯಾ ಮತ್ತು ಸ್ಲೋವಾಕಿಯಾದಂತಹ ಯುರೋಪಿಯನ್‌ ರಾಷ್ಟ್ರಗಳು ತಮ್ಮ ಹೆದ್ದಾರಿಗಳಲ್ಲಿ ಪ್ರಯಾಣವನ್ನು ಸುಗಮಗೊಳಿಸಲು ಈ ವ್ಯವಸ್ಥೆಯನ್ನು ಯಶಸ್ವಿಯಾಗಿ ಬಳಸುತ್ತಿವೆ. ಈ ದೇಶಗಳಲ್ಲಿನ ಸಾವಿರಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಭಾರತದಲ್ಲಿ ಯಾವಾಗ ಜಾರಿಗೆ ಬರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Money Guide: ಫಾಸ್ಟ್‌ಟ್ಯಾಗ್‌ ಇದ್ದರೂ ದಂಡ ಕಟ್ಟುತ್ತಿದ್ದೀರಾ?; ಪರಿಹಾರ ಇಲ್ಲಿದೆ

Continue Reading
Advertisement
Actor Darshan case ram gopal varma Reaction
ಸ್ಯಾಂಡಲ್ ವುಡ್5 mins ago

Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

Gold Rate Today
ಚಿನ್ನದ ದರ17 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Karnataka Rain Effect
ಮಳೆ17 mins ago

Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

Lionel Messi Retirement
ಕ್ರೀಡೆ31 mins ago

Lionel Messi Retirement: ನಿವೃತ್ತಿಯ ಸುಳಿವು ನೀಡಿದ ಲಿಯೋನೆಲ್​ ಮೆಸ್ಸಿ

wild elephant attack
ಪ್ರಮುಖ ಸುದ್ದಿ36 mins ago

Wild Elephant Attack : ನಾಡಿಗೆ ಬಂದ ಕಾಡಾನೆಯಿಂದ ರೈತನ ಮೇಲೆ ದಾಳಿ, ಕಾಲು ಮುರಿತ

Pema Khandu
ದೇಶ52 mins ago

Pema Khandu: ಅರುಣಾಚಲ ಪ್ರದೇಶದ ಸಿಎಂ ಆಗಿ ಪೇಮಾ ಖಂಡು ಪ್ರಮಾಣ ವಚನ ಸ್ವೀಕಾರ

Duniya Vijay nagaratna Divorce case verdict to be announced
ಸ್ಯಾಂಡಲ್ ವುಡ್56 mins ago

Duniya Vijay: ಇಂದು ದುನಿಯಾ ವಿಜಯ್‌-ನಾಗರತ್ನ ವಿಚ್ಛೇದನ ತೀರ್ಪು, ಕೀರ್ತಿ ಗೌಡ ಜತೆಗಿನ ದಾಂಪತ್ಯಕ್ಕೆ ಸಿಗುವುದೇ ಅಂಕಿತ?

Priyanka Chopra’s Brother-In-Law Kevin Jonas Diagnosed With Skin Cancer
ಸಿನಿಮಾ1 hour ago

Priyanka Chopra: ಪ್ರಿಯಾಂಕಾ ಚೋಪ್ರಾ ಮೈದುನ, ಗಾಯಕ ಕೆವಿನ್​ ಜೋನಸ್‌ಗೆ ಕ್ಯಾನ್ಸರ್!

Actor Darshan
ಮಂಡ್ಯ1 hour ago

Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

Sonakshi Sinha Zaheer Iqbal confirm their wedding in leaked audio
ಬಾಲಿವುಡ್1 hour ago

Sonakshi Sinha: ಸೋನಾಕ್ಷಿ ಸಿನ್ಹಾ – ಜಹೀರ್ ಇಕ್ಬಾಲ್ ಮದುವೆಯ ಆಮಂತ್ರಣದ ಆಡಿಯೊ ಕ್ಲಿಪ್‌ ಲೀಕ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌