ನ್ಯೂಯಾರ್ಕ್​ ಟೈಮ್ಸ್​​ಲ್ಲಿ ವರದಿ ಬಂದಿದ್ದಕ್ಕೇ ಸಿಬಿಐ ದಾಳಿ ಆಗಿದೆ ಎಂದ ಆಪ್​; ಪೇಡ್​ ಎಂದು ಟೀಕಿಸಿದ ಬಿಜೆಪಿ - Vistara News

ದೇಶ

ನ್ಯೂಯಾರ್ಕ್​ ಟೈಮ್ಸ್​​ಲ್ಲಿ ವರದಿ ಬಂದಿದ್ದಕ್ಕೇ ಸಿಬಿಐ ದಾಳಿ ಆಗಿದೆ ಎಂದ ಆಪ್​; ಪೇಡ್​ ಎಂದು ಟೀಕಿಸಿದ ಬಿಜೆಪಿ

ಇಂದು ಬೆಳಗ್ಗೆ ಎರಡು ಪ್ರಮುಖ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ದೆಹಲಿ ಶಿಕ್ಷಣ ವ್ಯವಸ್ಥೆ ಬಗ್ಗೆ ಸವಿಸ್ತಾರ ವರದಿ ಬಂದಿದೆ. ಅದೇ ಈಗ ಆಪ್​ -ಬಿಜೆಪಿ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದೆ.

VISTARANEWS.COM


on

NYT Report On Delhi Education
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೆಹಲಿಯಲ್ಲಿ ಆಪ್​ ಸರ್ಕಾರ ರೂಪಿಸಿರುವ ಶಿಕ್ಷಣ ವ್ಯವಸ್ಥೆ ಈಗಾಗಲೇ ವಿಶ್ವ ಮಟ್ಟದಲ್ಲಿ ಗಮನಸೆಳೆದಿದೆ. ಭಾರತದ ವಿವಿಧ ರಾಜ್ಯಗಳು ದೆಹಲಿ ಮಾದರಿ ಶಿಕ್ಷಣ ವ್ಯವಸ್ಥೆಯ ಅಧ್ಯಯನಕ್ಕಾಗಿ ಅಲ್ಲಿಗೆ ತಮ್ಮಲ್ಲಿಂದ ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳನ್ನೂ ಕಳಿಸುತ್ತಿದ್ದಾರೆ. ಹೀಗಿರುವಾಗ ದೆಹಲಿಯಲ್ಲಿರುವ ಶಿಕ್ಷಣ ವ್ಯವಸ್ಥೆ, ಅಲ್ಲಿನ ಶಾಲೆಗಳಲ್ಲಿರುವ ಸೌಲಭ್ಯ, ಶಿಕ್ಷಕರಿಗಾಗಿ ರೂಪಿಸಲಾದ ವಿಶೇಷ ತರಬೇತಿ ವ್ಯವಸ್ಥೆ, ಮಕ್ಕಳಿಗೆ ಒದಗಿಸಿಕೊಡಲಾದ ಶೈಕ್ಷಣಿಕ ವಾತಾವರಣದ ಬಗ್ಗೆ ಇಂದು ಬೆಳಗ್ಗೆ ನ್ಯೂಯಾರ್ಕ್​ ಟೈಮ್ಸ್​​ನ ಮೊದಲ ಪುಟದಲ್ಲಿ​ ಸುಮಾರು ಅರ್ಧಪುಟಗಳ ವರದಿ ಪ್ರಕಟಿಸಿದ್ದು Our Children Are Worth It ಎಂಬ ತಲೆ ಬರಹ ಕೊಟ್ಟಿದೆ. ಅದರಲ್ಲಿ ಶಿಕ್ಷಣ ಸಚಿವ ಮನೀಷ್​ ಸಿಸೋಡಿಯಾ ಅವರು ಮಕ್ಕಳೊಂದಿಗೆ ಇರುವ ಫೋಟೋ ಕೂಡ ಪ್ರಕಟವಾಗಿದೆ. ಹಾಗೇ ಕಾಕತಾಳೀಯವೆಂಬಂತೆ ಇಂದೇ, ಮನೀಷ್​ ಸಿಸೋಡಿಯಾಗೆ ಸೇರಿದ 20 ಸ್ಥಳಗಳ ಮೇಲೆ ಸಿಬಿಐ ದಾಳಿಯಾಗಿದೆ. ಅದೂ ಕೂಡ ನೂತನ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾರಣಕ್ಕೆ..!

ನ್ಯೂಯಾರ್ಕ್​ ಟೈಮ್ಸ್​​ನ ಇದೇ ವರದಿಯನ್ನು ಹಿಡಿದು, ಆಪ್​ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಸಿಬಿಐ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ನ್ಯೂಯಾರ್ಕ್​ ಟೈಮ್ಸ್​ನ ವರದಿಯ ಫೋಟೋವನ್ನು ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡ ಅರವಿಂದ್ ಕೇಜ್ರಿವಾಲ್​ ‘ಅಮೆರಿಕದ ಅತಿದೊಡ್ಡ ಸುದ್ದಿಪತ್ರಿಕೆ ನ್ಯೂಯಾರ್ಕ್​ ಟೈಮ್ಸ್​​ನಲ್ಲಿ ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ ಲೇಖನ ಪ್ರಕಟಿಸಿ, ಶಿಕ್ಷಣ ಸಚಿವ ಮನೀಷ್​ ಸಿಸೋಡಿಯಾ ಫೋಟೋ ಪ್ರಕಟಗೊಂಡ ದಿನವೇ, ಕೇಂದ್ರ ಸರ್ಕಾರ ಸಿಸೋಡಿಯಾ ಮನೆಗೆ ಸಿಬಿಐನ್ನು ಕಳಿಸಿದೆ. ಕೇಂದ್ರ ಸರ್ಕಾರಕ್ಕೆ ದೆಹಲಿಯ ಅಭ್ಯುದಯ ಸಹಿಸಲು ಸಾಧ್ಯವಾಗುತ್ತಿಲ್ಲ. ದೆಹಲಿ ಇಡೀ ಭಾರತಕ್ಕೆ ಹೆಮ್ಮೆ ತಂದಿದೆ. ಮನೀಷ್​ ಸಿಸೋಡಿಯಾ ಅವರು ಸ್ವತಂತ್ರ ಭಾರತದ ಅತ್ಯುತ್ತಮ ಶಿಕ್ಷಣ ಸಚಿವ’ ಎಂದು ಬರೆದುಕೊಂಡಿದ್ದಾರೆ.

ಬರೀ ನ್ಯೂಯಾರ್ಕ್​ ಟೈಮ್ಸ್ ಅಷ್ಟೇ ಅಲ್ಲ, ಇಂದು ದುಬೈನ ಒಂದು ಪ್ರತಿಷ್ಠಿತ ಪತ್ರಿಕೆ ಖಲೀಜ್ ಟೈಮ್ಸ್​ನಲ್ಲೂ ಕೂಡ ದೆಹಲಿ ಶಿಕ್ಷಣ ವ್ಯವಸ್ಥೆಯನ್ನು ಹೊಗಳಿ ಲೇಖನ ಪ್ರಕಟಿಸಲಾಗಿದ್ದು, A Lesson For Political Parties (ರಾಜಕೀಯ ಪಕ್ಷಗಳಿಗೆ ಒಂದು ಪಾಠ) ಎಂದು ಹೆಡ್​​ಲೈನ್​ ಕೊಟ್ಟಿದೆ. ಹೀಗೆ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ದೆಹಲಿ ಶಿಕ್ಷಣ ವ್ಯವಸ್ಥೆ ಬಗ್ಗೆ ಹೊಗಳಿಕೆಯ ಲೇಖನ ಬರುತ್ತಿದ್ದಂತೆ ಸುದ್ದಿಗೋಷ್ಠಿ ಕರೆದು ಮಾತನಾಡಿದ ಆಪ್​ ಸಂಸದ ರಾಘವ್ ಛಡ್ಡಾ, ‘ದೆಹಲಿಯ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಆದರೆ ಅದೆರಡೂ ಕ್ಷೇತ್ರವನ್ನು ಅವ್ಯವಸ್ಥೆಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ಈಗಾಗಲೇ ಜೈಲು ಸೇರಿದ್ದಾರೆ. ಇದೀಗ ಶಿಕ್ಷಣ ಮಂತ್ರಿ ವಿರುದ್ಧವೂ ಷಡ್ಯಂತ್ರ ನಡೆಯುತ್ತಿದೆ’ ಎಂದು ಆರೋಪ ಮಾಡಿದ್ದಾರೆ.

ನ್ಯೂಯಾರ್ಕ್​ ಟೈಮ್ಸ್​ ವರದಿ ಪೇಡ್​ ಎಂದ ಬಿಜೆಪಿ
ಇಂದು ನ್ಯೂಯಾರ್ಕ್​ ಟೈಮ್ಸ್​​ನಲ್ಲಿ ದೆಹಲಿ ಮಾದರಿ ಶಿಕ್ಷಣ ವ್ಯವಸ್ಥೆಯನ್ನು ಶ್ಲಾಘಿಸಿದ್ದನ್ನು ಸಹಿಸಲಾಗದೆ ಕೇಂದ್ರ ಸರ್ಕಾರ ಸಿಬಿಐನ್ನು ಮನೀಷ್​ ಸಿಸೋಡಿಯಾ ಮನೆಗೆ ಕಳಿಸಿದೆ ಎಂದು ಆಮ್​ ಆದ್ಮಿ ಪಕ್ಷ ಮಾಡಿರುವ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಬಿಜೆಪಿಯ ಐಟಿ ಸೆಲ್​ ಮುಖ್ಯಸ್ಥ ಅಮಿತ್ ಮಾಳ್ವಿಯಾ ಟ್ವೀಟ್ ಮಾಡಿ, ‘ಅದು ಹೇಗೆ ನ್ಯೂಯಾರ್ಕ್​ ಟೈಮ್ಸ್​ ಮತ್ತು ಖಲೀಜ್​ ಟೈಮ್ಸ್​ ಪತ್ರಿಕೆಗಳು ಒಂದೇ ದಿನ ಒಂದೇ ತರದ ವರದಿಯನ್ನು ಪ್ರಕಟಿಸಿ, ಒಂದೇ ರೀತಿಯ ಫೋಟೋಗಳನ್ನೂ ಹಾಕಿವೆ? ಈ ಎರಡೂ ಲೇಖನಗಳಲ್ಲಿನ ಪ್ರತಿ ಶಬ್ದ ನೋಡಿದಾಗಲೂ ಗೊತ್ತಾಗುತ್ತದೆ, ಅದನ್ನು ಒಬ್ಬನೇ ವ್ಯಕ್ತಿ ಬರೆದಿದ್ದಾನೆಂಬುದು. ಹಾಕಲಾದ ಫೋಟೋಗಳು ಕೂಡ ಒಂದೇ ತೆರನಾಗಿದ್ದು, ಅವು ಖಾಸಗಿ ಶಾಲೆಯೊಂದರದ್ದು. ಇದು ಮತ್ತೇನೂ ಅಲ್ಲ, ಪೇಡ್​ ಪ್ರಮೋಶನ್​ (ಹಣ ಕೊಟ್ಟು ತೆಗೆದುಕೊಂಡ ಪ್ರಚಾರ). ಅದನ್ನು ಹಿಡಿದು ಇವರು ತಮ್ಮ ಮಂತ್ರಿಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ಬಿಜೆಪಿ ಐಟಿ ಸೆಲ್​​ನ ದೆಹಲಿ ಘಟಕದ ಉಸ್ತುವಾರಿ ಪುನೀತ್​ ಅಗರ್​ವಾಲ್​ ಟ್ವೀಟ್​ ಮಾಡಿ, ‘ನ್ಯೂಯಾರ್ಕ್​ ಟೈಮ್ಸ್​ ಮತ್ತು ಖಲೀಜ್​ ಟೈಮ್ಸ್​​ಗಳು ಒಂದೇ ವಿಧದ ಲೇಖನವನ್ನು ಪ್ರಕಟಿಸಿವೆ. ಫೋಟೋಗಳೂ ಒಂದೇ ಇವೆ. ಇದನ್ನು ಯಾರೂ ಸುದ್ದಿ ಎನ್ನುವುದಿಲ್ಲ. ಜಾಹೀರಾತು ಎನ್ನುತ್ತಾರೆ. ಮನೀಷ್​ ಸಿಸೋಡಿಯಾ ಎಲ್ಲಿರಲು ಯೋಗ್ಯರೋ ಅಲ್ಲಿಗೇ ಹೋಗಬೇಕು. ಅಂದರೆ ಅವರಿರಬೇಕಾದ ಸ್ಥಳ ಜೈಲಿಗೆ ಹೋಗಲೇಬೇಕು’ ಎಂದಿದ್ದಾರೆ.

ದೆಹಲಿಯಲ್ಲಿ ಕಳೆದ ವರ್ಷ ಅನುಷ್ಠಾನಕ್ಕೆ ತರಲಾಗಿದ್ದ ನೂತನ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ, ಅದನ್ನು ಸಿಬಿಐಗೆ ವಹಿಸಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್​ ಕೇಂದ್ರ ಸರ್ಕಾರಕ್ಕೆ ದೂರು ನೀಡಿದ್ದರು. ಅದರಂತೆ ಈಗ ಸಿಬಿಐ ತನಿಖೆಯೂ ಪ್ರಾರಂಭವಾಗಿದೆ. ಅಬಕಾರಿ ನೀತಿಯಡಿ ಚಿಲ್ಲರೆ ವ್ಯಾಪಾರಿಗಳಿಗೆ ಪರವಾನಗಿ ನೀಡುವಾಗ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿದ್ದು, ಅದಕ್ಕೆ ಸಂಬಂಧಪಟ್ಟ ವ್ಯಕ್ತಿಗಳು, ಪ್ರದೇಶಗಳ ಮೇಲೆ ಸಿಬಿಐ ಕಣ್ಣಿಟ್ಟಿದೆ. ಮುಖ್ಯವಾಗಿ ಅಬಕಾರಿ ಇಲಾಖೆ ಜವಾಬ್ದಾರಿ ಹೊತ್ತ ಮನೀಷ್​ ಸಿಸೋಡಿಯಾ ಮತ್ತು ನಾಲ್ವರು ಪ್ರಮುಖ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲು ಮಾಡಿದೆ.

ಇದನ್ನೂ ಓದಿ: ಮದ್ಯ ನೀತಿ ತಂದಿಟ್ಟ ಸಂಕಷ್ಟ; ಮನೀಷ್​ ಸಿಸೋಡಿಯಾ ವಿರುದ್ಧ ಸಿಬಿಐ ತನಿಖೆಗೇನು ಕಾರಣಗಳು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

Mobile Phone Recharges: ಆಪರೇಟರ್ಸ್‌ಗಳ ಮೇಲಿನ ಸುಂಕವನ್ನು ಶೇ.25ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ. 5G ಲಾಭದಾಯಕ ಹೂಡಿಕೆ ಹೆಚ್ಚಾಗಿರುವುದರಿಂದ ಸರ್ಕಾರಕ್ಕೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಈ ಸುಂಕ ಏರಿಕೆ ಅಗತ್ಯವಾಗಿದೆ. ಟೆಲಿಕಾಂ ಇಲಾಖೆಯ ಈ ಕ್ರಮದಿಂದ ಗ್ರಾಮೀಣ ಮತ್ತು ನಗರದ ಗ್ರಾಹಕರ ಮೇಲೆ ಪರಿಣಾಮ ಬೀರಬಹುದಾಗಿದೆ. ಟೆಲಿಕಾಂ ಸೇವೆಗಳ ವೆಚ್ಚದಲ್ಲಿ ನಗರ ಪ್ರದೇಶದ ಗ್ರಾಹಕರು 3.2% ರಿಂದ 3.6%ಕ್ಕೆ ಏರಿಕೆ ಕಂಡರೆ, ಗ್ರಾಮೀಣ ಪ್ರದೇಶದ ಗ್ರಾಹಕರು 5.2% ರಿಂದ 5.9%ಕ್ಕೆ ಏರಿಕೆ ಕಾಣಬಹುದು.

VISTARANEWS.COM


on

Mobile Phone Recharges:
Koo

ನವದೆಹಲಿ: ಈಗಾಗಲೇ ಮೊಬೈಲ್‌ ರಿಚಾರ್ಜ್‌(Mobile Phone Recharges) ಮೊತ್ತವನ್ನು ಏರಿಕೆಯ ಬಿಸಿಗೆ ಗ್ರಾಹಕರು ಹೈರಾಗಿದ್ದಾರೆ. ತಿಂಗಳಾದ್ರೆ ಸಾಕು ಮೊಬೈಲ್‌ ರಿಚಾರ್ಜ್‌ ಮಾಡೋದೇ ಒಂದು ತಲೆನೋವು. ಈ ನಡುವೆ ಇದೀಗ ಗ್ರಾಹಕರಿಗೆ ಮತ್ತೆ ಶಾಕ್‌ ಕೊಡಲು ಟೆಲಿಕಾಂ(Telecom Department) ಮುಂದಾಗಿದೆ. ಲೋಕಸಭೆ ಚುನಾವಣೆ(Lok Sabha Election 2024) ಬಳಿಕ ನಾಲ್ಕನೇ ಹಂತದ ಸುಂಕ ಏರಿಕೆಗೆ ಟೆಲಿಕಾಂ ಇಲಾಖೆ ಮುಂದಾಗಿದೆ. ಹೀಗಾಗಿ ಮೊಬೈಲ್‌ ರಿಚಾರ್ಜ್‌ ಮೊತ್ತ ಏರಿಕೆ ಆಗುವ ಸಾಧ್ಯತೆ ಹೆಚ್ಚಾಗಿದೆ.

ಈ ಬಗ್ಗೆ ಬ್ರೋಕರೇಜ್‌ ಆಕ್ಸಿಸ್‌ ಕ್ಯಾಪಿಟಲ್‌ ಪ್ರತಿಕ್ರಿಯಿಸಿದ್ದು, ಆಪರೇಟರ್ಸ್‌ಗಳ ಮೇಲಿನ ಸುಂಕವನ್ನು ಶೇ.25ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ. 5G ಲಾಭದಾಯಕ ಹೂಡಿಕೆ ಹೆಚ್ಚಾಗಿರುವುದರಿಂದ ಸರ್ಕಾರಕ್ಕೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಈ ಸುಂಕ ಏರಿಕೆ ಅಗತ್ಯವಾಗಿದೆ. ಟೆಲಿಕಾಂ ಇಲಾಖೆಯ ಈ ಕ್ರಮದಿಂದ ಗ್ರಾಮೀಣ ಮತ್ತು ನಗರದ ಗ್ರಾಹಕರ ಮೇಲೆ ಪರಿಣಾಮ ಬೀರಬಹುದಾಗಿದೆ. ಟೆಲಿಕಾಂ ಸೇವೆಗಳ ವೆಚ್ಚದಲ್ಲಿ ನಗರ ಪ್ರದೇಶದ ಗ್ರಾಹಕರು 3.2% ರಿಂದ 3.6%ಕ್ಕೆ ಏರಿಕೆ ಕಂಡರೆ, ಗ್ರಾಮೀಣ ಪ್ರದೇಶದ ಗ್ರಾಹಕರು 5.2% ರಿಂದ 5.9%ಕ್ಕೆ ಏರಿಕೆ ಕಾಣಬಹುದು.

ನಗರಗಳಲ್ಲಿ ವಾಸಿಸುವ ಜನರು ತಮ್ಮ ಒಟ್ಟು ವೆಚ್ಚದ 3.2% ಅನ್ನು ಟೆಲಿಕಾಂಗಾಗಿ ಖರ್ಚು ಮಾಡುತ್ತಿದ್ದರು, ಇದು 3.6% ಕ್ಕೆ ಹೆಚ್ಚಾಗುತ್ತದೆ. ಗ್ರಾಮೀಣ ನಿವಾಸಿಗಳಿಗೆ ಟೆಲಿಕಾಂ ವೆಚ್ಚವು 5.2% ರಿಂದ 5.9% ಕ್ಕೆ ಹೆಚ್ಚಾಗುತ್ತದೆ. ಟೆಲಿಕಾಂ ಕಂಪನಿಗಳು ಮೂಲ ಯೋಜನೆಯ ಬೆಲೆಯನ್ನು 25% ಹೆಚ್ಚಿಸಿದರೆ, ಪ್ರತಿ ಬಳಕೆದಾರರಿಗೆ ಅವರ ಸರಾಸರಿ ಆದಾಯ (ಎಆರ್ಪಿಯು) 16% ಹೆಚ್ಚಾಗುತ್ತದೆ ಎಂದು ವರದಿ ಹೇಳಿದೆ. ಇದರರ್ಥ ಏರ್ಟೆಲ್ನ ಆದಾಯವು ಪ್ರತಿ ಬಳಕೆದಾರರಿಂದ 29 ರೂ.ಗೆ ಹೆಚ್ಚಾಗುತ್ತದೆ ಮತ್ತು ಜಿಯೋ ಆದಾಯವು ಪ್ರತಿ ಬಳಕೆದಾರರಿಂದ 26 ರೂ.ಗೆ ಹೆಚ್ಚಾಗುವ ಸಾಧ್ಯತೆ ಇದೆ.

ಇದಲ್ಲದೆ, Q4 FY24 ರ ಅಂತ್ಯದಲ್ಲಿ, Jio ನ ಒಟ್ಟು ಆಸ್ತಿಯು ₹ 4,87,405 ಕೋಟಿಗಳಷ್ಟಿದ್ದರೆ, ಜನವರಿಯಿಂದ ಮಾರ್ಚ್‌ವರೆಗಿನ ನಿವ್ವಳ ಲಾಭವು ₹ 4,716 ಕೋಟಿಗಳಿಂದ ₹ 5,337 ಕೋಟಿಗಳಿಗೆ ಏರಿತು.
ಭಾರ್ತಿ ಏರ್‌ಟೆಲ್‌ನ ಏಕೀಕೃತ Q4 ಆದಾಯವು ₹37,599 ಕೋಟಿಗಳಷ್ಟಿದ್ದು, ನಿವ್ವಳ ಲಾಭವು ಒಂದು ವರ್ಷದ ಹಿಂದಿನ ವರ್ಷಕ್ಕೆ ಹೋಲಿಸಿದರೆ 31.1% ಕಡಿಮೆಯಾಗಿದೆ.

ಇದನ್ನೂ ಓದಿ:Bomb Threat: ದೆಹಲಿ, ಅಹಮದಾಬಾದ್‌ ಬಳಿಕ ಕಾನ್ಪುರ ಶಾಲೆಗಳಿಗೂ ಬಾಂಬ್‌ ಬೆದರಿಕೆ; ಇಮೇಲ್‌ ಮೂಲಕ ಸಂದೇಶ

ಲೋಕಸಭಾ ಚುನಾವಣೆಯ ನಂತರ ಮೊಬೈಲ್ ಬಳಕೆದಾರರು ದೊಡ್ಡ ಹಿನ್ನಡೆಯನ್ನು ಎದುರಿಸಬಹುದು ಎಂದು ಬ್ರೋಕರೇಜ್‌ ಆಕ್ಸಿಸ್‌ ಕ್ಯಾಪಿಟಲ್‌ ಹೇಳಿದೆ. ದೇಶದಲ್ಲಿ ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಜೂನ್ 1 ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.


Continue Reading

ದೇಶ

Bomb Threat: ದೆಹಲಿ, ಅಹಮದಾಬಾದ್‌ ಬಳಿಕ ಕಾನ್ಪುರ ಶಾಲೆಗಳಿಗೂ ಬಾಂಬ್‌ ಬೆದರಿಕೆ; ಇಮೇಲ್‌ ಮೂಲಕ ಸಂದೇಶ

Bomb Threat: ದೆಹಲಿ, ಬೆಂಗಳೂರು, ಚೆನ್ನೈ, ಅಹಮದಾಬಾದ್‌ ಶಾಲೆಗಳ ನಂತರ ಇದೀಗ ಕಾನ್ಪುರ ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ. ಕಾನ್ಪುರದ ಸುಮಾರು 10 ಶಾಲೆಗಳು ಬುಧವಾರ ಬೆದರಿಕೆ ಕರೆಗಳನ್ನು ಸ್ವೀಕರಿಸಿವೆ ಎಂದು ಮೂಲಗಳು ತಿಳಿಸಿವೆ. ಇಮೇಲ್‌ ಮೂಲಕ ಈ ಬೆದರಿಕೆ ಬಂದಿದೆ. ಕೆಲವು ದಿನಗಳ ಹಿಂದೆ ದೆಹಲಿ-ಎನ್‌ಸಿಆರ್‌, ಅಹಮದಾಬಾದ್‌ ಶಾಲೆಗಳಿಗೆ ಬಂದ ರಷ್ಯಾದ ಅದೇ ಸರ್ವರ್‌ಗೆ ಲಿಂಕ್ ಮಾಡಲಾದ ಇಮೇಲ್ ಮೂಲಕ ಕಾನ್ಪುರ ಶಾಲೆಗಳಿಗೆ ಬೆದರಿಕೆ ಒಡ್ಡಲಾಗಿದೆ ಎಂದು ವರದಿ ಹೇಳಿದೆ.

VISTARANEWS.COM


on

Bomb Threat
Koo

ಲಕ್ನೋ: ದೆಹಲಿ, ಬೆಂಗಳೂರು, ಚೆನ್ನೈ, ಅಹಮದಾಬಾದ್‌ ಶಾಲೆಗಳ ನಂತರ ಇದೀಗ ಕಾನ್ಪುರ ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ (Bomb Threat). ಕಾನ್ಪುರದ ಸುಮಾರು 10 ಶಾಲೆಗಳು ಬುಧವಾರ ಬೆದರಿಕೆ ಕರೆಗಳನ್ನು ಸ್ವೀಕರಿಸಿವೆ ಎಂದು ಮೂಲಗಳು ತಿಳಿಸಿವೆ. ಇಮೇಲ್‌ ಮೂಲಕ ಈ ಬೆದರಿಕೆ ಬಂದಿದೆ.

ಕೆಲವು ದಿನಗಳ ಹಿಂದೆ ದೆಹಲಿ-ಎನ್‌ಸಿಆರ್‌, ಅಹಮದಾಬಾದ್‌ ಶಾಲೆಗಳಿಗೆ ಬಂದ ರಷ್ಯಾದ ಅದೇ ಸರ್ವರ್‌ಗೆ ಲಿಂಕ್ ಮಾಡಲಾದ ಇಮೇಲ್ ಮೂಲಕ ಕಾನ್ಪುರ ಶಾಲೆಗಳಿಗೆ ಬೆದರಿಕೆ ಒಡ್ಡಲಾಗಿದೆ ಎಂದು ವರದಿ ತಿಳಿಸಿದೆ. ಸದ್ಯಕ್ಕೆ ಶಾಲೆಗಳಿಂದ ಎಲ್ಲರನ್ನೂ ತೆರವು ಮಾಡಲಾಗಿದ್ದು, ಹೊರಗಿನವರ ಪ್ರವೇಶವನ್ನು ನಿಷೇಧಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆಗೆ ನಡೆಸುತ್ತಿದ್ದಾರೆ. ಶಾಲೆಗಳ ಆವರಣದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. ಅದಾಗ್ಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಸುಮಾರು ಎರಡು ವಾರಗಳ ಅಂತರದಲ್ಲಿ ದೇಶದ ವಿವಿಧ ನಗರಗಳಿಗೆ ಈ ರೀತಿಯ ಹುಸಿ ಬಾಂಬ್‌ ಬೆದರಿಕೆ ಕರೆಗಳು ಬಂದಿವೆ. ದೆಹಲಿ, ನೋಯ್ಡಾ, ಲಕ್ನೋ, ಅಹಮದಾಬಾದ್‌ ಬಳಿಕ ಈ ಪಟ್ಟಿಗೆ ಇದೀಗ ಕಾನ್ಪುರ ಕೂಡ ಸೇರಿಕೊಂಡಿದೆ. ಇದು ಆರಂಭವಾಗಿದ್ದು ಮೇ 1ರಿಂದ. ಅಂದು ದೆಹಲಿ, ನೋಯ್ಡಾ ಮತ್ತು ಲಕ್ನೋದ ಸುಮಾರು 100 ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿತ್ತು. ಭೀಕರ ಸ್ಫೋಟ ನಡೆಸುವುದಾಗಿ ಎಚ್ಚರಿಸಲಾಗಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿತ್ತು. ಬಳಿಕ ಇದು ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.

ಬಳಿಕ ಮೇ 6ರಂದು ಗುಜರಾತ್‌ನ ಅಹಮದಾಬಾದ್‌ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕವೇ ಬೆದರಿಕೆ ಬಂದಿತ್ತು. ರಾಜ್ಯ ಪೊಲೀಸ್ ಮತ್ತು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (Bomb Detection and Disposal Squad) ತಂಡಗಳು ಶಾಲೆಗಳಲ್ಲಿ ವ್ಯಾಪಕ ಶೋಧ ನಡೆಸಿದ್ದವು. ಶಾಲೆಗಳ ಆವರಣದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡು ಬಂದಿರಲಿಲ್ಲ. ರಷ್ಯಾದ ಡೊಮೇನ್ mail.ruನಿಂದಲೇ ಈ ಬೆದರಿಕೆಯನ್ನೂ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ

ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೂ ಇಮೇಲ್‌ ಮೂಲಕ ಮಂಗಳವಾರ (ಮೇ 14) ಹುಸಿ ಬಾಂಬ್‌ ಕರೆ ಬಂದಿತ್ತು. ದೀಪ್‌ ಚಂದ್‌ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್‌ ಆಸ್ಪತ್ರೆ ಮತ್ತು ಹೆಡ್ಗೇವಾರ್‌ ಆಸ್ಪತ್ರೆಗಳಿಗೆ ಅನಾಮಧೇಯ ಇ ಮೇಲ್‌ ಬಂದಿದ್ದು, ಬಾಂಬ್‌ ಸ್ಫೋಟಿಸುವುದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ದಿಲ್ಲಿ ಪೊಲೀಸರು ಈ ಬೆದರಿಕೆ ಇಮೇಲ್‌ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದು, ನಾಲ್ಕು ಆಸ್ಪತ್ರೆಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ದೆಹಲಿ, ಅಹಮದಾಬಾದ್‌ ಸೇರಿ ಹಲವೆಡೆ ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಿದ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವಾಲಯವು, ಕಳೆದ ವಾರ ಈ ಕುರಿತು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿತ್ತು. ಅದರಲ್ಲೂ, ಈ ಕುರಿತು ದೆಹಲಿ ಪೊಲೀಸರು ತಪ್ಪು ಮಾಹಿತಿ ತಡೆದು, ಅನಗತ್ಯ ಆತಂಕವನ್ನು ನಿವಾರಿಸಲು ದೆಹಲಿ ಪೊಲೀಸರು ಹಾಗೂ ಶಾಲೆಗಳ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿತ್ತು.

Continue Reading

ದೇಶ

M‌ine Lift Collapse: ರಾಜಸ್ಥಾನ ಲಿಫ್ಟ್‌ ದುರಂತ: ಟ್ರ್ಯಾಪ್‌ ಆಗಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ದಾರುಣ ಸಾವು

M‌ine Lift Collapse: ರಾಜಸ್ಥಾನದ ಜುಂಜೌನ್‌ ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿತ್ತು. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು.

VISTARANEWS.COM


on

M‌ine Lift Collapse
Koo

ಜೈಪುರ: ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ಕೋಲಿಹಾನ್ ತಾಮ್ರದ ಗಣಿಯಲ್ಲಿ (copper mine) ಲಿಫ್ಟ್ ಕುಸಿದು (M‌ine Lift Collapse) ಪಾತಾಳದಲ್ಲಿ ಸಿಲುಕಿದ್ದ 15 ವಿಜಿಲೆನ್ಸ್‌ ಅಧಿಕಾರಿಗಳಲ್ಲಿ 14 ಮಂದಿಯನ್ನು ರಕ್ಷಿಸಲಾಗಿದ್ದು, ಒಬ್ಬ ಅಧಿಕಾರಿ ದಾರುಣವಾಗಿ ಮೃತಪಟ್ಟಿದ್ದಾರೆ. ಇವರು ಪಿಎಸ್‌ಯು ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ (Hindustan copper Ltd) 14 ಅಧಿಕಾರಿಗಳು ಹಾಗೂ ವಿಜಿಲೆನ್ಸ್ ತಂಡದ ಸದಸ್ಯರಾಗಿದ್ದು, ಮಂಗಳವಾರ ರಾತ್ರಿ ಲಿಫ್ಟ್‌ ಕುಸಿದು ದುರಂತ ಸುಮಾರು 577 ಮೀಟರ್‌ ಆಳದಲ್ಲಿ ಸಿಲುಕಿಕೊಂಡಿದ್ದರು.

ರಾಜಸ್ಥಾನದ ಜುಂಜೌನ್‌ ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿತ್ತು. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಘಟನೆ ವರದಿಯಾದ ಕೂಡಲೇ ಬಿಜೆಪಿ ಶಾಸಕ ಧರ್ಮಪಾಲ್ ಗುರ್ಜರ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಈ ಕಂಪನಿಯ ಹಿರಿಯ ಅಧಿಕಾರಿಗಳೊಂದಿಗೆ ವಿಜಿಲೆನ್ಸ್ ತಂಡವು ಪರಿಶೀಲನೆಗಾಗಿ ಗಣಿ ಒಳಗೆ ಹೋದಾಗ ಈ ಘಟನೆ ಸಂಭವಿಸಿದೆ. ಅವರು ಮೇಲಕ್ಕೆ ಬರಲು ಮುಂದಾದಾಗ, ಶಾಫ್ಟ್ ಅಥವಾ ʼಪಂಜರ’ದ ಹಗ್ಗ ಮುರಿದು ಸುಮಾರು 14 ಜನರು ಕೆಳಗೆ ಸಿಲುಕಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟು 14 ಅಧಿಕಾರಿಗಳನ್ನು ಸರಕ್ಷಿತವಾಗಿ ಹೊರತೆಗೆಯಾಗಿತ್ತು. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಂತದಲ್ಲಿ ಹಿರಿಯ ಅಧಿಕಾರಿ ಉಪೇಂದ್ರ ಪಾಂಡೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು. ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಇನ್ನುಳಿದ ಅಧಿಕಾರಿಗಳ ಕೈ ಕಾಲುಗಳಿಗೆ ಗಂಭೀರ ಏಟುಗಳು ಬಿದ್ದಿವೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯ ಪ್ರವೀಣ್‌ ಶರ್ಮಾ ಮಾಹಿತಿ ನೀಡಿದ್ದಾರೆ.

.

Continue Reading

ರಾಜಕೀಯ

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ ಕೃಷ್ಣ ಜನ್ಮಭೂಮಿ ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ.

VISTARANEWS.COM


on

By

Himanta Biswa Sarma
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok sabha election) ಈ ಬಾರಿ ಹಲವು ನಿರ್ಣಾಯಕ ಕಾರಣಗಳಿಗಾಗಿ ಭಾರತೀಯ ಜನತಾ ಪಕ್ಷಕ್ಕೆ (BJP) ಸಂಸತ್ತಿನಲ್ಲಿ (Parliament) 400 ಸ್ಥಾನಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ (ayodhya) ರಾಮಮಂದಿರವನ್ನು (ram mandir) ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ (Mathura) ಕೃಷ್ಣ ಜನ್ಮಭೂಮಿ (Krishna Janmabhoomi) ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ (Gyanvapi Mosque) ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರವನ್ನು (ಪಿಒಜೆಕೆ) ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತದಲ್ಲಿ ಸೇರಿಸಲಾಗುವುದು ಎಂದು ಹೇಳಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ ಎಂದು ದೂರಿದ್ದಾರೆ.

ಪಿಒಕೆ ನಮ್ಮದು ಎಂಬ ಚರ್ಚೆಯೇ ಆಗಿಲ್ಲ

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ, ಒಂದು ಕಾಶ್ಮೀರ ಭಾರತದಲ್ಲಿ ಮತ್ತು ಇನ್ನೊಂದು ಪಾಕಿಸ್ತಾನದಲ್ಲಿದೆ ಎಂದು ನಮಗೆ ಹೇಳಲಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹೊಂದಿದೆ ಎಂದು ನಮ್ಮ ಸಂಸತ್ತಿನಲ್ಲಿ ಎಂದಿಗೂ ಚರ್ಚಿಸಲಾಗಿಲ್ಲ, ಅದು ನಿಜವಾಗಿ ನಮ್ಮದು. ಇದೀಗ ಪಿಒಕೆಯಲ್ಲಿ ಪ್ರತಿದಿನ ಆಂದೋಲನ ನಡೆಯುತ್ತಿದ್ದು, ಜನರು ತಮ್ಮ ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಪಾಕಿಸ್ತಾನದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಮೋದಿಜೀ 400 ಸೀಟುಗಳನ್ನು ಪಡೆದರೆ ಪಿಒಕೆ ಕೂಡ ಭಾರತಕ್ಕೆ ಸೇರುತ್ತದೆ. ಇದು ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರವು ಮೀಸಲಾತಿಗೆ ಹೆಚ್ಚಿನ ಬಲವನ್ನು ನೀಡಲು ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ ಅವರು, ಪ್ರಧಾನಿ ಮೋದಿ ಸ್ವತಃ ಒಬಿಸಿ ವರ್ಗದಿಂದ ಬಂದವರು. ಬಿಜೆಪಿ 10 ವರ್ಷ ಅಧಿಕಾರದಲ್ಲಿದೆ. ನಮ್ಮ ಸರ್ಕಾರ ಮೀಸಲಾತಿಗೆ ಹೆಚ್ಚಿನ ಬಲ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ಆರಂಭಿಸಿರುವ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಮತ್ತು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (ಪಿಒಜೆಕೆ) ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಇದು ಭಾರತವಾಗಿದೆ ಮತ್ತು ಯಾವಾಗಲೂ ಇರುತ್ತದೆ ಎಂದು ಪುನರುಚ್ಚರಿಸಿದ್ದಾರೆ.

ಪಿಒಕೆ ಜನರು ತಮ್ಮ ಪರಿಸ್ಥಿತಿಯನ್ನು ಹೋಲಿಸಿ ನೋಡಬೇಕು. ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುತ್ತಿರುವ ಜನರು ಸ್ಪಷ್ಟ ಪ್ರಗತಿಯನ್ನು ಸೂಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

ಪಾಕಿಸ್ತಾನದ ಅರೆಸೈನಿಕ ರೇಂಜರ್‌ಗಳು ಸೋಮವಾರ, ಪಿಒಜೆಕೆ ನಲ್ಲಿ ಕಾನೂನುಬಾಹಿರವಾಗಿ ನಿಯೋಜಿಸಲ್ಪಟ್ಟರು. ಹಲವಾರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದರು ಮತ್ತು ಇದರಿಂದ ಅನೇಕ ಮಂದಿ ತೀವ್ರವಾಗಿ ಗಾಯಗೊಂಡರು. ಈ ಘಟನೆಯು ಪ್ರದೇಶದ ಹಲವಾರು ಸ್ಥಳೀಯರನ್ನು ಗಾಯಗೊಳಿಸಿತು. ಸಾವಿರಾರು ಸ್ಥಳೀಯರು ವಿದ್ಯುತ್ ಬಿಲ್‌ಗಳ ಮೇಲಿನ ತೆರಿಗೆಗಳು, ಸಬ್ಸಿಡಿಗಳಲ್ಲಿ ಕಡಿತ ಮತ್ತು ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳ ಸವಲತ್ತುಗಳು ಮತ್ತು ಸವಲತ್ತುಗಳನ್ನು ಕೊನೆಗೊಳಿಸುವುದರ ವಿರುದ್ಧ ತಮ್ಮ ಬೇಡಿಕೆಗಳನ್ನು ಎತ್ತಲು ಬೀದಿಗಿಳಿದಿದ್ದರು.

Continue Reading
Advertisement
Mobile Phone Recharges:
ದೇಶ5 mins ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ17 mins ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

blackmail case kgf
ಕೋಲಾರ20 mins ago

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Madhuri Dixit birthday extend wishes
ಬಾಲಿವುಡ್33 mins ago

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Prajwal Revanna Case Can women trust your government Writers open letter to Siddaramaiah
ರಾಜಕೀಯ41 mins ago

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Acharya Shankara Jayanthyutsava programme at Ranebennur
ಹಾವೇರಿ46 mins ago

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Miyazaki Mango
ಪ್ರಮುಖ ಸುದ್ದಿ1 hour ago

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

Bomb Threat
ದೇಶ2 hours ago

Bomb Threat: ದೆಹಲಿ, ಅಹಮದಾಬಾದ್‌ ಬಳಿಕ ಕಾನ್ಪುರ ಶಾಲೆಗಳಿಗೂ ಬಾಂಬ್‌ ಬೆದರಿಕೆ; ಇಮೇಲ್‌ ಮೂಲಕ ಸಂದೇಶ

M‌ine Lift Collapse
ದೇಶ2 hours ago

M‌ine Lift Collapse: ರಾಜಸ್ಥಾನ ಲಿಫ್ಟ್‌ ದುರಂತ: ಟ್ರ್ಯಾಪ್‌ ಆಗಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ದಾರುಣ ಸಾವು

Cannes 2024 seven Indian Films To Be Screened
ಸಿನಿಮಾ2 hours ago

Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ10 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ20 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202422 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌