Murder Attempt | ಮಂಗಳೂರಲ್ಲಿ ವ್ಯಕ್ತಿ ಮೇಲೆ ಗಾಂಜಾ ಗ್ಯಾಂಗ್‌ನಿಂದ ದಾಳಿ, ಕೊಲೆ ‌ಯತ್ನ - Vistara News

ಕರ್ನಾಟಕ

Murder Attempt | ಮಂಗಳೂರಲ್ಲಿ ವ್ಯಕ್ತಿ ಮೇಲೆ ಗಾಂಜಾ ಗ್ಯಾಂಗ್‌ನಿಂದ ದಾಳಿ, ಕೊಲೆ ‌ಯತ್ನ

Murder Attempt | ಅಂಗಡಿ ಬಂದಿದ್ದ ಬಾಲಕನೊಬ್ಬನ ಮೇಲೆ ಗಾಂಜಾ ಗ್ಯಾಂಗ್‌ವೊಂದು ದಾಳಿ ನಡೆಸಿದ್ದು, ಇದನ್ನು ತಪ್ಪಿಸಲು ಹೋದ ಆತನ ಮಾವನ ಮೇಲೆ ಹಲ್ಲೆ ನಡೆಸಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

crime
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಂಗಳೂರು: ಬಾಲಕನ ಮೇಲೆ ಹಲ್ಲೆಗೆ ಮುಂದಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ (Murder Attempt) ‌ಯತ್ನ ಮಾಡಿರುವ ಪ್ರಕರಣ ಹೊರವಲಯದ ವಲಚ್ಚಿಲ್ ಎಂಬಲ್ಲಿ ಶನಿವಾರ ನಡೆದಿದೆ.

ಆಸೀಫ್ (30) ಎಂಬಾತ ಮೇಲೆ ತಲವಾರು ದಾಳಿ ನಡೆದಿದ್ದು, ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕೊಬ್ಬನ ಮೇಲೆ ತಂಡವೊಂದು ಹಲ್ಲೆ ಮಾಡುವುದನ್ನು ತಡೆಯಲು ಮುಂದಾಗಿದ್ದಕ್ಕೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಏನಿದು ಪ್ರಕರಣ?

ಅಂಗಡಿಗೆ ಬಂದಿದ್ದ ‌ಮಿಫ್ತಾಹ್ (16) ಎಂಬ ಬಾಲಕನನ್ನು ಗಾಂಜಾ ಗ್ಯಾಂಗ್‌ವೊಂದು ತಡೆದಿದೆ. ಈ ವೇಳೆ ಆ ಬಾಲಕನ ಮೇಲೆ ತಂಡವು ಹಲ್ಲೆಗೆ ಮುಂದಾಗಿದೆ. ಆಗ ಮಿಫ್ತಾಹ್‌ ಮಾವ ಆಸೀಫ್ ದಾಳಿ ತಡೆಯಲು ಮುಂದಾಗಿದ್ದಾರೆ. ಆಗ ಆಸೀಫ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ.

ಮಿಸ್ತಾ, ಮನ್ಸೂರು ಯಾನೆ ಹುಸೈನ್ ಹಾಗೂ ಆಶಿಕ್ ಎಂಬವರಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಆದರೆ, ಈ ಯುವಕರ ತಂಡವು ಯಾವ ಕಾರಣಕ್ಕೆ ಬಾಲಕನ ಮೇಲೆ ದಾಳಿಗೆ ಮುಂದಾಗಿತ್ತು ಎಂಬ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | ಯುವಕ-ಯುವತಿಯ ಚಾಟಿಂಗ್ ಅವಾಂತರ; ಮಂಗಳೂರು ಏರ್‌ಪೋರ್ಟ್‌ನಲ್ಲಿ ಆತಂಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

Bengaluru News: ಬೆಂಗಳೂರಿನ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ 2 ದಿನಗಳ ಗ್ರೋಯಿಂಗ್ ಎಲೆಕ್ಟ್ರಾನಿಕ್ಸ್ ಟೆಕ್ನಾಲಜಿ ಓರಿಯೆಂಟೆಡ್ ಕಾಂಗ್ರೆಗೇಷನ್ ಸ್ಟೇಜ್ (GETOCS 4.0) ದಲ್ಲಿ ವಿದ್ಯಾರ್ಥಿಗಳು ಬೆಂಕಿ ನಂದಿಸುವ ಬಾಲ್‌ಗಳನ್ನು ಹೊಂದಿದ ಡ್ರೋನ್‌ಗಳನ್ನು ಬಳಸಿ ಅದ್ಭುತ ಮಾದರಿಯನ್ನು ಪ್ರದರ್ಶಿಸಿದರು.

VISTARANEWS.COM


on

engineering students have invented a unique fire extinguisher drone at bengaluru
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿಶ್ವದೆಲ್ಲೆಡೆ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲಾಗದ ಅದೆಷ್ಟೋ ಸಂದರ್ಭಗಳಲ್ಲಿ ಪ್ರಾಣ ನಷ್ಟ ಕೂಡ ಸಂಭವಿಸುತ್ತಿವೆ. ಹಲವು ಸಂದರ್ಭಗಳಲ್ಲಿ ಬೆಂಕಿ ನಂದಿಸುವ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ತಲುಪುವುದು ಕಷ್ಟವಾಗುತ್ತದೆ. ಹಾಗೆಯೇ ಅತೀ ಎತ್ತರದ ಕಟ್ಟಡಗಳಿಗೆ ಅಂಟಿಕೊಂಡ ಬೆಂಕಿಯನ್ನು ನಂದಿಸುವುದು ಸವಾಲಾಗಿಯೇ ಪರಿಣಮಿಸುತ್ತದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗೋಪಾಲನ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌‌ ಮತ್ತು ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ವಿಶಿಷ್ಟ ಡ್ರೋನ್‌ ಆವಿಷ್ಕರಿಸಿದ್ದು, ಆ ಮೂಲಕ ಯಶಸ್ವಿಯಾಗಿ ಬೆಂಕಿ (Bengaluru News) ನಂದಿಸಬಹುದಾಗಿದೆ.

ನಗರದಲ್ಲಿ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ ಎರಡು ದಿನಗಳ ಗ್ರೋಯಿಂಗ್ ಎಲೆಕ್ಟ್ರಾನಿಕ್ಸ್ ಟೆಕ್ನಾಲಜಿ ಓರಿಯೆಂಟೆಡ್ ಕಾಂಗ್ರೆಗೇಷನ್ ಸ್ಟೇಜ್ (GETOCS 4.0) ದಲ್ಲಿ ವಿದ್ಯಾರ್ಥಿಗಳು ಬೆಂಕಿ ನಂದಿಸುವ ಬಾಲ್‌ಗಳನ್ನು ಹೊಂದಿದ ಡ್ರೋನ್‌ಗಳನ್ನು ಬಳಸಿ ಅದ್ಭುತ ಮಾದರಿಯನ್ನು ಪ್ರದರ್ಶಿಸಿದರು.

ಈ ವಿನೂತನ ಮಾದರಿಯು ತೀವ್ರವಾದ ಬೆಂಕಿಯನ್ನು ತ್ವರಿತವಾಗಿ ನಂದಿಸುವಲ್ಲಿ ಸಫಲವಾಗುತ್ತದೆ. ಇದರಿಂದಾಗಿ ಜೀವಗಳನ್ನು ರಕ್ಷಿಸುವುದರ ಜತೆಗೆ ಕಟ್ಟಡಗಳಿಗೆ ಆಗುವ ಹಾನಿಯನ್ನು ಕೂಡಾ ತಡೆಯುತ್ತದೆ ಮತ್ತು ಪರಿಸರವನ್ನು ರಕ್ಷಿಸುತ್ತದೆ. ಈ ಡ್ರೋನ್‌ಗಳ ಕ್ಷಿಪ್ರ ನಿಯೋಜನೆಯಿಂದ ಹತ್ತಿರದ ಪ್ರದೇಶಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾದ ಮಾದರಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಮೂಲಕ ವಿಶಾಲ ಪ್ರದೇಶವನ್ನು ಕವರ್‌ ಮಾಡಬಹುದಾಗಿದೆ. ಪ್ರದರ್ಶಿಸಲಾದ ಈ ಮಾದರಿಯನ್ನು ನೋಡಿದ ತಜ್ಞರು, ನಾವು ನೋಡಿದ ಅತ್ಯುತ್ತಮ ಪ್ರಾತ್ಯಕ್ಷಿಕೆ ಇದಾಗಿದೆ ಎಂದು ವಿದ್ಯಾರ್ಥಿಗಳ ಈ ಅನ್ವೇಷಣೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ಎಲ್‌ಆರ್‌ಡಿಇ, ಡಿಆರ್‌ಡಿಒ ನಿವೃತ್ತ ಹೆಚ್ಚುವರಿ ನಿರ್ದೇಶಕ ಪ್ರೊ. ಹರ್ಜಿಂದರ್ ಸಿಂಗ್ ಭಾಟಿಯಾ ಅವರು ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಶೈಕ್ಷಣಿಕ ಅನ್ವೇಷಣೆಗಳ ಹೊರತಾಗಿ, ಎಲೆಕ್ಟ್ರಾನಿಕ್ಸ್ ಹಾರ್ಡ್‌ವೇರ್ ಯೋಜನೆಗಳು ಪ್ರಸ್ತುತ ಸಮಾಜದ ಅಗತ್ಯ ಮತ್ತು ಸವಾಲುಗಳನ್ನು ಪ್ರತಿನಿಧಿಸುವಂತಾಗಬೇಕು. ಇವುಗಳು ಕಡಿಮೆ ವೆಚ್ಚದ ವೈದ್ಯಕೀಯ ಸಾಧನಗಳನ್ನು ಅಭಿವೃದ್ಧಿಪಡಿಸುವುದಾಗಲಿ, ಪರಿಸರ ಮೇಲ್ವಿಚಾರಣಾ ವ್ಯವಸ್ಥೆಗಳನ್ನು ಹೆಚ್ಚಿಸುವುದಾಗಲಿ ಅಥವಾ ಗ್ರಾಹಕ ಬಳಕೆಯ ವಿನೂತನ ಎಲೆಕ್ಟ್ರಾನಿಕ್ಸ್ ಉಪಕರಣ ಅನ್ವೇಷಿಸುವುದಾಗಿರಲಿ, ಈ ಯೋಜನೆಗಳು ನಮ್ಮ ಸುತ್ತಲಿನ ಜನರ ಜೀವನದ ಮೇಲೆ ಅರ್ಥಪೂರ್ಣ ಪರಿಣಾಮವನ್ನು ಬೀರುವ ಸಾಮರ್ಥ್ಯವನ್ನು ಹೊಂದಿರಬೇಕು.

ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಎಂಜಿನಿಯರ್‌ ಸಂಸ್ಥೆಯಲ್ಲಿ (IETE) ಸದಸ್ಯತ್ವ ಪಡೆಯುವುದರಿಂದ, ISRO, DRDO, LRDE ಮತ್ತು ಇತರ ಸಂಸ್ಥೆಗಳ ವಿವಿಧ ಉಚಿತ ಕೋರ್ಸ್‌ಗಳ ಪ್ರಯೋಜನ ಪಡೆಯಬಹುದಾಗಿದೆ. ಮುಂಬರುವ ವರ್ಷಗಳಲ್ಲಿ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಅದ್ಭುತ ಭವಿಷ್ಯ ಅಡಗಿದೆ ಎಂಬುದನ್ನು ಒತ್ತಿ ಹೇಳುತ್ತೇನೆ ಎಂದು ತಿಳಿಸಿದರು.

GETOCS 4.0, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (EC) ವಿಭಾಗವು ನಡೆಸಿದ ಕಾರ್ಯಕ್ರಮವಾಗಿದ್ದು, ದಾಖಲಾತಿಗಳ ಪ್ರಸ್ತುತಿ, ರೊಬೊಟಿಕ್ ಸ್ಪರ್ಧೆಗಳು, ಸರ್ಕ್ಯೂಟ್ ಡೀಬಗ್ ಮಾಡುವುದು, ಪ್ರಾಜೆಕ್ಟ್ ಪ್ರದರ್ಶನಗಳು, ತಾಂತ್ರಿಕ ರಸಪ್ರಶ್ನೆ ಮತ್ತು ಚರ್ಚೆಗಳಂತಹ ವಿವಿಧ ಚಟುವಟಿಕೆಗಳ ಮೂಲಕ ಭಾಗವಹಿಸುವವರು ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸಿತ್ತು.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಗುರುವಾರ ಮುಕ್ತಾಯಗೊಂಡ ಈ ವಾರ್ಷಿಕ ಎರಡು ದಿನಗಳ ಕಾರ್ಯಕ್ರಮವು ಯಾವುದೇ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿ ಕೊಟ್ಟಿತ್ತು. GETOCS 4.0ನ ಪ್ರಾಥಮಿಕ ಕಾರ್ಯಸೂಚಿಯು ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸುವುದು, ಸಾಮಾಜಿಕ ಆರೋಗ್ಯವನ್ನು ಹೆಚ್ಚಿಸುವುದು ಮತ್ತು ಹೆಚ್ಚಿನ ಸಂಶೋಧನೆ-ಆಧಾರಿತ ಯೋಜನೆಗಳನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.

ಗೋಪಾಲನ್ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಸಿ. ಪ್ರಭಾಕರ್ ಮಾತನಾಡಿ, ನಮ್ಮ ವಿದ್ಯಾರ್ಥಿಗಳು ಕೈಗಾರಿಕೆಗಳಿಗೆ ಪ್ರಯೋಜನಕಾರಿಯಾದ ನವೀನ ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ನಾವು ಗುಣಮಟ್ಟದ ಯೋಜನೆಗಳತ್ತ ಗಮನಹರಿಸುತ್ತಿದ್ದೇವೆ ಮತ್ತು ರಾಷ್ಟ್ರಕ್ಕೆ ನೆರವಾಗುವಂತಹ ಯೋಜನೆಗಳಿಗೆ ಆರ್ಥಿಕ ಸಹಾಯ ಮಾಡುತ್ತಿದ್ದೇವೆ. ಹೆಚ್ಚುವರಿಯಾಗಿ, ನಾವು 30 ಲಕ್ಷ ರೂ.ದೊಂದಿಗೆ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಇಂಟೆಲ್ ಪ್ರಯೋಗಾಲಯವನ್ನು ಸ್ಥಾಪಿಸುತ್ತಿದ್ದೇವೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಗಳ ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಕೂಡಾ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.

ಗೋಪಾಲನ್ ಇನ್‌ಸ್ಟಿಟ್ಯೂಷನ್ಸ್ ಸಿಇಒ ಡಾ. ಭಾಸ್ಕರ್ ರೆಡ್ಡಿ ಸಿ.ಎಂ. ಮಾತನಾಡಿ, ” GETOCS.4.0 ಕಾರ್ಯಕ್ರಮವನ್ನು ಇಸಿಇ ವಿಭಾಗವು ಆಯೋಜಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ. ಈ ರೀತಿಯ ಕಾರ್ಯಕ್ರಮವು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಜ್ಞಾನವನ್ನು ಒರೆಗೆ ಹಚ್ಚುತ್ತದೆ ಎಂದರು.

ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌‌ ಮತ್ತು ಮ್ಯಾನೇಜ್‌ ಮೆಂಟ್‌ನ ಪ್ರಾಂಶುಪಾಲ ಡಾ. ಅರುಣ್ ವಿಕಾಸ್ ಸಿಂಗ್ ಮಾತನಾಡಿ, ಪ್ರತಿಷ್ಠಿತ ಕಂಪನಿಗಳಲ್ಲಿ ವಿದ್ಯಾರ್ಥಿಗಳ ಉದ್ಯೋಗಾವಕಾಶವನ್ನು ಹೆಚ್ಚಿಸಲು ನಿಯಮಿತ ಶೈಕ್ಷಣಿಕ ತರಗತಿಗಳ ಜತೆಗೆ ಹೆಚ್ಚುವರಿ ಕೌಶಲ್ಯಗಳನ್ನು ಪಡೆದುಕೊಳ್ಳುವ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ನಾವು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆಯ ಕೌಶಲ್ಯದ ಬಗ್ಗೆ ತರಬೇತಿ ನೀಡುತ್ತೇವೆ, ಇದರಿಂದ ಅವರು ಉದ್ಯೋಗಿಗಳಾಗದೆ ಉದ್ಯೋಗದಾತರಾಗಬಹುದು ಎಂದು ಹೇಳಿದರು.

ಇದನ್ನೂ ಓದಿ: Tata Motors: ಪಂಚ್. ಇವಿ, ನೆಕ್ಸಾನ್.ಇವಿಗೆ ಭಾರತ್-ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್

ಕಾರ್ಯಕ್ರಮದಲ್ಲಿ ಗೋಪಾಲನ್ ಆರ್ಗ್ಯಾನಿಕ್ಸ್ ನ ನಿರ್ದೇಶಕಿ ಸುನೀತಾ ಪ್ರಭಾಕರ್‌, ಎಸ್. ಅನಂತ ಪದ್ಮನಾಭಂ, ಇಸಿಇ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಕುಮಾರ್, ಕಾರ್ಯಕ್ರಮ ಸಂಘಟನಾ ಸಮಿತಿಯ ಮುಖ್ಯಸ್ಥ ಡಾ. ಕೆ.ಸುರೇಶ್, ಉಜಿರೆಯ ಧರ್ಮಸ್ಥಳ ಎಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಮಧುಸೂದನ್, ಬಿಎಂಎಸ್ ಪ್ರಾಧ್ಯಾಪಕ ಡಾ. ಪುರುಷೋತ್ತಮ್, ಏರೋನಾಟಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಕೆ. ನಟರಾಜನ್, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ ಮತ್ತು ಮ್ಯಾನೇಜ್ಮೆಂಟ್‌ನ ಪ್ರಧಾನ ವಿಜ್ಞಾನಿ ಮತ್ತು ಇಸಿಇ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಸುರೇಶ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ತುಮಕೂರು

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Shira News: ಶಿರಾ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯ ಚಾವಣಿ ಕುಸಿದು ಶಿಕ್ಷಕಿಯ ತಲೆಗೆ ಪೆಟ್ಟಾಗಿದ್ದು, ಅದೃಷ್ಟವಶಾತ್‌ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ನಗರದ ಮಧುಗಿರಿ ರಸ್ತೆಯ ಸಮೀಪದ ವಾರ್ಡ್ ನಂ. 21ರಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

VISTARANEWS.COM


on

Government urdu school roof collapse in Shira
Koo

ಶಿರಾ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯ ಚಾವಣಿ ಕುಸಿದು ಶಿಕ್ಷಕಿಯ ತಲೆಗೆ ಪೆಟ್ಟಾಗಿದ್ದು, ಅದೃಷ್ಟವಶಾತ್‌ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿರುವ ಘಟನೆ ನಗರದ ಮಧುಗಿರಿ ರಸ್ತೆಯ ಸಮೀಪದ ವಾರ್ಡ್ ನಂ 21ರಲ್ಲಿ ಗುರುವಾರ (Shira News) ಮಧ್ಯಾಹ್ನ ನಡೆದಿದೆ.

ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯ ಚಾವಣಿಯ ಗಾರೆ ಕುಸಿದು ಬಿದ್ದು, ಪಾಠ ಮಾಡುತ್ತಿದ್ದ ಶಿಕ್ಷಕಿ ಫರೀದಾಬಾನು ತಲೆಗೆ ಪೆಟ್ಟಾಗಿದೆ. ಶಿಕ್ಷಕಿ ಫರೀದಾಬಾನು ಎಂದಿನಂತೆ ಶಾಲೆಗೆ ಬಂದು ಪಾಠ ಮಾಡುತ್ತಿದ್ದರು. ಆದರೆ ಮಧ್ಯಾಹ್ನದ ವೇಳೆ ಇದ್ದಕ್ಕಿದ್ದಂತೆ ಪಾಠ ಮಾಡುತ್ತಿದ್ದ ಕೊಠಡಿಯ ಚಾವಣಿಯ ಗಾರೆ ಕುಸಿದು ಶಿಕ್ಷಕಿಯ ತಲೆಗೆ ಪೆಟ್ಟಾಗಿದೆ. ಆದರೆ ಅದೃಷ್ಟವಶಾತ್ ಶಾಲಾ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14 ಕೊಠಡಿಗಳು ಇದ್ದು, ಇದರಲ್ಲಿ ಸುಮಾರು 10 ಕೊಠಡಿಗಳು ಶಿಥಿಲಾವಸ್ಥೆ ತಲುಪಿವೆ. ಸುಮಾರು 240 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲಾ ಕಟ್ಟಡವು ಬಹಳ ಹಳೆಯದಾಗಿದ್ದು ಶಿಥಿಲಾವಸ್ಥೆ ತಲುಪಿದೆ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲೇ ನಿತ್ಯ ಪಾಠ, ಬೋಧನೆ ನಡೆಯುತ್ತಿದೆ. ಶಾಲೆಯ ಕೊಠಡಿಗಳು ಶಿಥಿಲಾವಸ್ಥೆ ತಲುಪಿರುವ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ, ಯಾರೊಬ್ಬರೂ ಎಚ್ಚೆತ್ತುಕೊಳ್ಳದಿರುವುದಕ್ಕೆ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆ; ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮ ತತ್ತರ

ಘಟನೆ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ನಗರಸಭೆ ಸದಸ್ಯ ಇರ್ಷಾದ್ ಚಾಂದ್ ಭಾಷಾ ಸೇರಿದಂತೆ ಹಲವರು ಭೇಟಿ ನೀಡಿ, ಪರಿಶೀಲನೆ ನಡೆಸಿ ತಾತ್ಕಾಲಿಕವಾಗಿ ಶಾಲೆಗೆ ಬದಲಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

Kannada Short Movie: ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಿದ ಅನುಭವ ಇರುವ ಸುನಯನಾ ಸುರೇಶ್ ಇದೀಗ ನಿರ್ದೇಶನದತ್ತ ಧುಮುಕಿದ್ದಾರೆ. ‘ಮೌನ ರಾಗ’ ಎಂಬ ಕಿರುಚಿತ್ರಕ್ಕೆ ಬರಹಗಾರರಾಗಿ, ನಿರ್ಮಾಪಕಿ ಮತ್ತು ನಿರ್ದೇಶಕರಾಗುತ್ತಿದ್ದಾರೆ.

VISTARANEWS.COM


on

Journalist Sunayana Suresh is now a director
Koo

ಬೆಂಗಳೂರು: ಟೈಮ್ಸ್ ಆಫ್ ಇಂಡಿಯಾ, ಡಿಎನ್‌ಎ, ಡೆಕ್ಕನ್ ಕ್ರಾನಿಕಲ್ ಮತ್ತು ಮಿಡ್ ಡೇ ನಂತಹ ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಿದ ಅನುಭವ ಇರುವ ಸುನಯನಾ ಸುರೇಶ್ ಇದೀಗ ನಿರ್ದೇಶನದತ್ತ ಧುಮುಕಿದ್ದಾರೆ. ‘ಮೌನ ರಾಗ’ ಎಂಬ ಕಿರುಚಿತ್ರಕ್ಕೆ (Kannada Short Movie) ಬರಹಗಾರರಾಗಿ, ನಿರ್ಮಾಪಕಿ ಮತ್ತು ನಿರ್ದೇಶಕರಾಗುತ್ತಿದ್ದಾರೆ.

ಸಿನಿಮಾ ನಿರ್ಮಾಣಕ್ಕೆ ಹೊಸಬರಲ್ಲದ ಸುನಯನಾ, ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು ಮತ್ತು ಕೆಲವು ಚಿತ್ರಗಳಿಗೆ ಸ್ಕ್ರಿಪ್ಟ್ ಕೆಲಸದಲ್ಲಿ, ಮೀಡಿಯಾ ಸ್ಟ್ರಾಟೆಜಿಸ್ಟ್ ಮತ್ತು ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಕೆಲಸ ಮಾಡಿದ್ದಾರೆ. ಈಗ ಇದೇ ಸುನಯನಾ, ‘ಮೌನ ರಾಗ’ ಎಂಬ ಕಿರುಚಿತ್ರಕ್ಕೆ ಬರಹಗಾರರಾಗಿ, ನಿರ್ಮಾಪಕಿ ಮತ್ತು ನಿರ್ದೇಶಕರಾಗುತ್ತಿದ್ದಾರೆ.

ಇದನ್ನೂ ಒದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ಈ ಹೊಸ ಹೆಜ್ಜೆಯ ಬಗ್ಗೆ ಮಾತನಾಡುವ ಅವರು, “2000 ರ ದಶಕದ ಆರಂಭದಲ್ಲಿ ಇಂಡೀ ಫಿಲ್ಮ್ ಮೇಕಿಂಗ್ ಅಲೆಯು ಸಿನಿಮಾ ಮತ್ತು ಸಿನಿಮಾ ನಿರ್ಮಾಣದ ಮೇಲಿನ ನನ್ನ ಪ್ರೀತಿಯನ್ನು ಮತ್ತಷ್ಟು ಹೆಚ್ಚಿಸಿತು. ನಾಗೇಶ್ ಕುಕುನೂರ್ ಅವರಂತಹ ಹೆಸರುಗಳಿಂದ ಸಿನಿಮಾ ನನ್ನನ್ನು ಸೆಳೆಯಿತು. ಮಾಧ್ಯಮ ಪ್ರತಿನಿಧಿಯಾಗಿ ಮತ್ತು ಸಿನಿಮಾ ವಿಮರ್ಶಕಿಯಾಗಿ ಎರಡು ದಶಕಗಳ ಕಾಲ ಸಿನಿಮಾ ಮತ್ತು ಸಿನಿಮಾ ನಿರ್ಮಾಣವನ್ನು ಸೂಕ್ಷ್ಮವಾಗಿ ಗಮನಿಸಿದೆ” ಎಂದಿದ್ದಾರೆ ಸುನಯನಾ.

ಕಳೆದೆರಡು ವರ್ಷಗಳಿಂದ ಸಿನಿಮಾ ನಿರ್ಮಾಣ, ಕಾಸ್ಟಿಂಗ್, ಸ್ಕ್ರಿಪ್ಟ್ ಡಾಕ್ಟರಿಂಗ್ ಮತ್ತು ಪಬ್ಲಿಸಿಟಿಯ ವಿವಿಧ ಆಯಾಮಗಳನ್ನು ಅವಲೋಕಿಸಿದೆ. ಅದರಂತೆ ಈಗ ಮೌನ ರಾಗದ ಮೂಲಕ ಚಿತ್ರ ನಿರ್ಮಾಪಕಿಯಾಗಿದ್ದೇನೆ, ಇದು ನಾನು ಪ್ರೀತಿಯಿಂದ ಬರೆದು ನಿರ್ದೇಶಿಸಿದ ಕಿರುಚಿತ್ರ ಎಂದು ಸುನಯನಾ ತಿಳಿಸಿದ್ದಾರೆ.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಮೌನ ರಾಗ ಕಿರುಚಿತ್ರಕ್ಕೆ ಪ್ರೀತಾ ಜಯರಾಮನ್ ಛಾಯಾಗ್ರಾಹಕರಾಗಿದ್ದಾರೆ. ಶ್ರುತಿ ಹರಿಹರನ್ ನಾಯಕಿ. ಇವರಲ್ಲದೆ ಬಾದಲ್ ನಂಜುಂಡಸ್ವಾಮಿ ಅವರ ಕಲಾ ನಿರ್ದೇಶನ ಮತ್ತು ಆಲ್ ಓಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಚಿತ್ರದಲ್ಲಿ ಅಗ್ನಿವ್ ಪ್ರಮುಖ ಪಾತ್ರದಲ್ಲಿದ್ದಾರೆ. ಈ ಚಿತ್ರದಲ್ಲಿ ನಟಿಯರಾದ ಸಂಯುಕ್ತಾ ಹೊರ್ನಾಡ್, ಸೂರಜ್ ಗೌಡ, ರಾಜಶ್ರೀ ಪೊನ್ನಪ್ಪ, ಅನಿರುದ್ಧ್ ಆಚಾರ್ಯ, ಹರ್ಷಿಲ್ ಕೌಶಿಕ್ ಮತ್ತು ಆಲ್ ಓಕೆ ನಟಿಸಲಿದ್ದಾರೆ.

Continue Reading

ಕರ್ನಾಟಕ

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Road Accident: ಕೊಲ್ಹಾಪುರದಿಂದ ಬೆಳಗಾವಿಗೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಬೆಳಗಾವಿಯ ‌ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Road Accident
Koo

ಬೆಳಗಾವಿ: ಟಿಪ್ಪರ್ ಹಾಗೂ ಕಾಲೇಜು ಬಸ್ ಡಿಕ್ಕಿಯಾಗಿ (Road Accident) ಪ್ರವಾಸಕ್ಕೆ ಬಂದಿದ್ದ ಸುಮಾರು 40ಕ್ಕೂ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಕೊಲ್ಹಾಪುರದಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದಾಗ ಅಪಘಾತ ನಡೆದಿದೆ.

ರಾಣಿ ಚೆನ್ನಮ್ಮ ಮಿನಿ ಜೂಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳು ಬಂದಿದ್ದರು. ಜೂ ನೋಡಿ ವಾಪಸಾಗುವ ವೇಳೆ ಹೆದ್ದಾರಿಯಲ್ಲಿ ಕಾಲೇಜು ಬಸ್ ಯು ಟರ್ನ್ ಮಾಡುವಾಗ ಟಿಪ್ಪರ್ ಡಿಕ್ಕಿಯಾಗಿದೆ. ಇದರಿಂದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಬೆಳಗಾವಿ ‌ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ರಾಯಚೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. 2021 ರಲ್ಲಿ ರಾಯಚೂರಿನ ಲಿಂಗಸುಗೂರು ತಾಲೂಕಿನಲ್ಲಿ ಘಟನೆ ನಡೆದಿತ್ತು.

ಲಿಂಗಸುಗೂರು ತಾಲೂಕಿನ ನೀರಲಕೆರೆಯ ಹುಲ್ಲಪ್ಪ ಶಿಕ್ಷೆಗೊಳಗಾದ ಆರೋಪಿ. ಆರೋಪಿ ಮೇಲಿನ ಆಪಾದನೆ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟವಾಗಿದೆ. 20 ವರ್ಷ ಕಠಿಣ ಜೈಲು ಶಿಕ್ಷೆ, 15 ಸಾವಿರ ರೂಪಾಯಿ ದಂಡ ವಿಧಿಸಿ ಲಿಂಗಸುಗೂರಿನ 3 ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕ್ಸೊ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಇದನ್ನೂ ಓದಿ | Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ 9 ಲಕ್ಷ ರೂ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಡೊ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆ ಪ್ರಕಟವಾಗಿದೆ.

ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

Bus Accident

ಗದಗ: ಬಸ್‌ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆ ಸುತ್ತು ಬಂದಿದ್ದು, ನಿಯಂತ್ರಣ ತಪ್ಪಿ ರಸ್ತೆಯಿಂದ ಜಮೀನಿಗೆ ಬಸ್‌ಗೆ ನುಗ್ಗಿದ (Bus Accident) ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಟೋಲ್ ಗೇಟ್ ಬಳಿ ಘಟನೆ ನಡೆದಿದೆ.

ಸಾರಿಗೆ ಸಂಸ್ಥೆಯ ಬಸ್‌ವೊಂದು ಮುಂಡರಗಿ ಪಟ್ಟಣದಿಂದ ಹಮ್ಮಿಗಿ ಗ್ರಾಮಕ್ಕೆ ತೆರಳುತ್ತಿತ್ತು. ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನಿಗೆ ತಲೆ ಸುತ್ತು ಬಂದಿದೆ. ನೋಡ ನೋಡುತ್ತಿದ್ದಂತೆ ರಸ್ತೆ ಬದಿ ಜಮೀನಿಗೆ ಬಸ್‌ ನುಗ್ಗಿದೆ.

ಇದನ್ನೂ ಓದಿ: Self Harming : ಒಂದೇ ದಿನ ನಾಲ್ವರು ಗೃಹಿಣಿಯರ ಆತ್ಮಹತ್ಯೆ; ಅವರಲ್ಲಿಬ್ಬರು ಯೋಧರ ಪತ್ನಿಯರು

ಅದೃಷ್ಟವಶಾತ್‌ ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಮೀನಿಗೆ ಬಿದ್ದಿದ್ದ ಬಸ್‌ ಅನ್ನು ತೆರವು ಮಾಡಲಾಗಿದೆ.

Continue Reading
Advertisement
engineering students have invented a unique fire extinguisher drone at bengaluru
ಕರ್ನಾಟಕ3 mins ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ3 mins ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Government urdu school roof collapse in Shira
ತುಮಕೂರು8 mins ago

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Journalist Sunayana Suresh is now a director
ಕರ್ನಾಟಕ12 mins ago

Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

Road Accident
ಕರ್ನಾಟಕ48 mins ago

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Narendra Modi
ದೇಶ1 hour ago

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Bagalkot News
ಕರ್ನಾಟಕ1 hour ago

Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

Petrodollar Deal
ವಿದೇಶ1 hour ago

Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

Raaj Kumar Anand
ದೇಶ2 hours ago

Raaj Kumar Anand: ಆಪ್‌ ಮಾಜಿ ಸಚಿವ ರಾಜ್‌ ಕುಮಾರ್‌ ಆನಂದ್‌ ಶಾಸಕ ಸ್ಥಾನದಿಂದಲೂ ಅನರ್ಹ; ಕಾರಣ ಇಲ್ಲಿದೆ

Star Saree Fashion
ಫ್ಯಾಷನ್2 hours ago

Star Saree Fashion: ರೇಷ್ಮೆ ಸೀರೆಯಲ್ಲಿ ನಟಿ ಕೀರ್ತಿ ಸುರೇಶ್‌ರಂತೆ ಗ್ಲಾಮರಸ್‌ ಆಗಿ ಕಾಣಿಸಬೇಕೆ? 5 ಟಿಪ್ಸ್ ಫಾಲೋ ಮಾಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌