Loan App Fraud | 100 ಲೋನ್‌ ಅಪ್ಲಿಕೇಷನ್‌ ಬಳಸಿ 500 ಕೋಟಿ ರೂ. ವಂಚನೆ, ಕರ್ನಾಟಕದಲ್ಲೂ ಇತ್ತು ಈ ಜಾಲ! - Vistara News

ಕ್ರೈಂ

Loan App Fraud | 100 ಲೋನ್‌ ಅಪ್ಲಿಕೇಷನ್‌ ಬಳಸಿ 500 ಕೋಟಿ ರೂ. ವಂಚನೆ, ಕರ್ನಾಟಕದಲ್ಲೂ ಇತ್ತು ಈ ಜಾಲ!

100 ಲೋನ್‌ ಅಪ್ಲಿಕೇಷನ್‌ಗಳ ಮೂಲಕ (Loan App Fraud) ೫೦೦ ಕೋಟಿ ರೂ. ವಂಚಿಸಿದ್ದಲ್ಲದೆ, ಜನರ ವೈಯಕ್ತಿಕ ಮಾಹಿತಿಯನ್ನು ಚೀನಾಗೆ ನೀಡುತ್ತಿದ್ದ ಬೃಹತ್‌ ಜಾಲವೊಂದನ್ನು ಪೊಲೀಸರು ಭೇದಿಸಿದ್ದು, ದೇಶಾದ್ಯಂತ 22 ಜನರನ್ನು ಬಂಧಿಸಿದ್ದಾರೆ. ಕರ್ನಾಟಕದಲ್ಲೂ ಈ ಜಾಲವಿತ್ತು ಎಂಬುದು ಪ್ರಮುಖ ಅಂಶವಾಗಿದೆ.

VISTARANEWS.COM


on

China App
ಬಂಧಿತ ಆರೋಪಿಗಳು (Photo Courtesy NDTV)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸುಮಾರು ೧೦೦ ಲೋನ್‌ ಅಪ್ಲಿಕೇಷನ್‌ಗಳ ಮೂಲಕ (Loan App Fraud) ೫೦೦ ಕೋಟಿ ರೂ. ವಂಚಿಸಿದ್ದಲ್ಲದೆ, ಜನರ ವೈಯಕ್ತಿಕ ಮಾಹಿತಿಯನ್ನು ಚೀನಾಗೆ ನೀಡುತ್ತಿದ್ದ ಬೃಹತ್‌ ಜಾಲವೊಂದನ್ನು ಪೊಲೀಸರು ಭೇದಿಸಿದ್ದು, ದೇಶಾದ್ಯಂತ ೨೨ ಜನರನ್ನು ಬಂಧಿಸಿದ್ದಾರೆ. ಕರ್ನಾಟಕ ಸೇರಿ ಹಲವೆಡೆ ವಂಚನೆ ಜಾಲ ವ್ಯಾಪಿಸಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಲಖನೌ ಮೂಲದ ಗ್ಯಾಂಗ್‌ನಿಂದ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾಲ್‌ಸೆಂಟರ್‌ ತೆರೆದಿದ್ದ ದುಷ್ಕರ್ಮಿಗಳು ಜನರಿಗೆ ಕರೆ ಮಾಡಿ, ಈ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿಕೊಂಡರೆ ನಿಮಗೆ ಸಾಲ ನೀಡಲಾಗುವುದು ಎಂದು ಹೇಳುತ್ತಿದ್ದರು. ಜನ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿಕೊಂಡ ಬಳಿಕ ಅವರಿಂದ ವೈಯಕ್ತಿಕ ಮಾಹಿತಿ ಪಡೆಯಲು Access ಪಡೆಯುತ್ತಿದ್ದರು. ಸಾಲ ನೀಡಿದ ಬಳಿಕ ಜನರಿಂದ ಪಡೆದ ವೈಯಕ್ತಿಕ ಮಾಹಿತಿ, ಫೋಟೊ, ವಿಡಿಯೊ ತಿರುಚಿ, ಜಾಲತಾಣದಲ್ಲಿ ಅಪ್‌ಲೋಡ್‌ ಮಾಡುವುದಾಗಿ ಹೆದರಿಸುತ್ತಿದ್ದರು. ಮರ್ಯಾದೆಗೆ ಹೆದರಿ ಜನ ಇವರ ಖಾತೆಗಳಿಗೆ ಲಕ್ಷಾಂತರ ರೂ. ಜಮೆ ಮಾಡುತ್ತಿದ್ದರು. ಇಂತಹ ಜಾಲದ ಮೇಲೆ ಎರಡು ತಿಂಗಳಿಂದ ನಿಗಾ ಇಟ್ಟಿದ್ದ ದೆಹಲಿ ಪೊಲೀಸರು, ದೇಶದ ಹಲವೆಡೆ ೨೨ ಮಂದಿಯನ್ನು ಬಂಧಿಸಿದ್ದಾರೆ.

ಚೀನಾ, ಹಾಂಕಾಂಗ್‌ಗೆ ಮಾಹಿತಿ ರವಾನೆ

ಸಾರ್ವಜನಿಕರಿಂದ ಪಡೆದ ಗೌಪ್ಯ ಮಾಹಿತಿಯನ್ನು ಲಖನೌ ಗ್ಯಾಂಗ್‌ನ ಸದಸ್ಯರು ಚೀನಾ ಹಾಗೂ ಹಾಂಕಾಂಗ್‌ಗೆ ರವಾನಿಸುತ್ತಿದ್ದರು ಎಂದು ಪೊಲೀಸ್‌ ತನಿಖೆಯಿಂದ ತಿಳಿದುಬಂದಿದೆ. ಚೀನಾದ ಏಳು ನಾಗರಿಕರು ವಂಚನೆಯಲ್ಲಿ ಭಾಗಿಯಾಗಿದ್ದು, ಇವರ ಆಣತಿ ಮೇರೆಗೇ ಆರೋಪಿಗಳು ಕಾರ್ಯನಿರ್ವಹಿಸುತ್ತಿದ್ದರು ಎಂದು ಪೊಲೀಸ್‌ ತನಿಖೆ ವೇಳೆ ಬಯಲಾಗಿದೆ.

ಯಾವ ಅಪ್ಲಿಕೇಷನ್‌ಗಳ ಬಳಕೆ?

ಜನರಿಗೆ ಸಾಲ ನೀಡಿ, ಅವರಿಂದ ಗೌಪ್ಯ ಮಾಹಿತಿ ಪಡೆಯಲು ಲಖನೌ ಗ್ಯಾಂಗ್‌ ನೂರು ಅಪ್ಲಿಕೇಷನ್‌ಗಳನ್ನು ಬಳಸಿದೆ. ಕ್ಯಾಶ್‌ಪೋರ್ಟ್‌, ರುಪಿ ವೇ, ಲೋನ್‌ ಕ್ಯುಬ್‌, ಕೌ ರುಪಿ, ಸ್ಮಾರ್ಟ್‌ ವ್ಯಾಲೆಟ್‌, ಹಾಯ್‌ ರುಪಿ, ಸ್ವಿಫ್ಟ್‌ ರುಪಿ, ವ್ಯಾಲೆಟ್ವಿನ್‌, ಫಿಶ್‌ಕ್ಲಬ್‌, ಮ್ಯಾಜಿಕ್‌ ಬ್ಯಾಲೆನ್ಸ್‌, ಯೊಕ್ಯಾಶ್‌, ಫಾರ್ಚ್ಯೂನ್‌ ಟ್ರೀ, ರೆಡ್‌ ಮ್ಯಾಜಿಕ್‌ ಸೇರಿ ಹಲವು ಅಪ್ಲಿಕೇಷನ್‌ ಬಳಸುತ್ತಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ | Online fraud : ಆನ್‌ಲೈನ್‌ ವಂಚನೆ ಜಾಲಕ್ಕೆ ಪೊಲೀಸರ ಬಲೆ, 70 ಜನ ವಶಕ್ಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Hassan Pen Drive Case: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

VISTARANEWS.COM


on

Hasan pen drive case
Koo

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading

ಕ್ರೈಂ

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

Medical Negligence: ಹಾವು ಕಡಿತದಿಂದ ಅಸ್ವಸ್ಥಗೊಂಡಿದ್ದ ಬಾಲಕನಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕ ಮೃತಪಟ್ಟಿದ್ದು, ಆಸ್ಪತ್ರೆ ವಿರುದ್ಧ ಹೋರಾಡಿದ ತಂದೆಗೆ ಕೊನೆಗೂ ನ್ಯಾಯ ಸಿಕ್ಕಿದೆ. ದೆಹಲಿಯ ರಾಷ್ಟ್ರೀಯ ಗ್ರಾಹಕ ನ್ಯಾಯಾಲಯವು ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ 10 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದೆ.

VISTARANEWS.COM


on

By

Medical Negligence
Koo

ನವದೆಹಲಿ: ಹಾವು ಕಡಿತದಿಂದ (snake bite) 12 ವರ್ಷದ ಬಾಲಕ (boy) ಮೃತಪಟ್ಟ 16 ವರ್ಷಗಳ ಬಳಿಕ ಬಾಲಕನ ತಂದೆಗೆ ದೆಹಲಿಯ (delhi) ರಾಷ್ಟ್ರೀಯ ಗ್ರಾಹಕ ನ್ಯಾಯಾಲಯವು ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ (Medical Negligence) 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಮಹಾರಾಷ್ಟ್ರದ (maharstra) ಮಹಾತ್ಮ ಗಾಂಧಿ ಮಿಷನ್ ಆಸ್ಪತ್ರೆಗೆ (Mahatma Gandhi Mission Hospital) ಆದೇಶ ನೀಡಿದೆ.

ಹಾವು ಕಡಿತದಿಂದ ಅಸ್ವಸ್ಥನಾಗಿದ್ದ ಮಹಾರಾಷ್ಟ್ರದ ಪರಶುರಾಮ್ ಲ್ಯಾಂಡ್ಗೆ ಅವರ ಮಗ ದೇವಾನಂದ್ 2007ರ ಅಕ್ಟೋಬರ್ ನಲ್ಲಿ ಮಹಾತ್ಮ ಗಾಂಧಿ ಮಿಷನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.

ಬಾಲಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣದ ವಿಚಾರಣೆ ನಡೆಸಿದ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು (NCDRC) ಆಸ್ಪತ್ರೆಯ ನಿರ್ಲಕ್ಷ್ಯವನ್ನು ಪರಿಗಣಿಸಿ ಲ್ಯಾಂಡ್ಗೆ ಅವರಿಗೆ ಪರಿಹಾರವನ್ನು ಏಪ್ರಿಲ್ 24 ರಂದು ಘೋಷಿಸಿದೆ.

ಇದನ್ನೂ ಓದಿ: Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

ಬಾಲಕನ ತಂದೆ ನೀಡಿರುವ ದೂರಿನ ಪ್ರಕಾರ ಆಸ್ಪತ್ರೆಯ ಡಾಕ್ಟರ್ ಶೀನು ಗುಪ್ತಾ ಅವರು ತಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದು, ದೇವಾನಂದ್ ನನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದರು ಎಂದು ಹೇಳಲಾಗಿದೆ.

ಮಗನ ಸ್ಥಿತಿ ಗಂಭೀರವಾದ ಕಾರಣ ಚಿಕಿತ್ಸೆ ಮುಂದುವರೆಸುವಂತೆ ಲ್ಯಾಂಡ್​ಗೆ ಅವರು ವೈದ್ಯರಲ್ಲಿ ಮನವಿ ಮಾಡಿದ ಬಳಿಕ ವೈದ್ಯರು 500 ರೂ. ಮೌಲ್ಯದ ಚುಚ್ಚುಮದ್ದನ್ನು ಸೂಚಿಸಿದ್ದರು. ಅವರು ಪತ್ನಿಯ ಚಿನ್ನಾಭರಣಗಳನ್ನು ಗಿರವಿ ಇಟ್ಟು ಚುಚ್ಚುಮದ್ದು ಸೇರಿದಂತೆ ವೈದ್ಯರು ಸೂಚಿಸಿರುವ ಹಲವಾರು ದುಬಾರಿ ಔಷಧಗಳನ್ನು ಖರೀದಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಆಸ್ಪತ್ರೆಗೆ ಹಿಂದಿರುಗಿ ಕೂಡಲೇ ಮಗನಿಗೆ ಚಿಕಿತ್ಸೆ ನೀಡುವಂತೆ ವಿನಂತಿಸಿದರು. ಆದರೂ ವೈದ್ಯರು ಹೆಚ್ಚಿನ ಹಣವನ್ನು ಠೇವಣಿ ಮಾಡುವವರೆಗೂ ಚಿಕಿತ್ಸೆ ಪ್ರಾರಂಭಿಸಲು ನಿರಾಕರಿಸಿದರು. ಇದರಿಂದ ದೇವಾನಂದ್ ರಾತ್ರಿ 8.30ರ ವೇಳೆಗೆ ನಿಧನನಾಗಿದ್ದಾನೆ.

ದೂರು ದಾಖಲು

ಈ ಕುರಿತು 2017ರಲ್ಲಿ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಲ್ಯಾಂಡ್ಗೆ ದೂರು ದಾಖಲಿಸಿದ್ದರು. ಆದರೆ, ಮೂರು ವರ್ಷಗಳ ಅನಂತರ ಮಹಾರಾಷ್ಟ್ರ ರಾಜ್ಯ ಗ್ರಾಹಕ ನ್ಯಾಯಾಲಯವು ವೈದ್ಯ ಗುಪ್ತಾ ಮತ್ತು ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ 10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿತ್ತು. ಇದರಿಂದ ಅಸಮಾಧಾನಗೊಂಡ ಆಸ್ಪತ್ರೆಯು ಎನ್‌ಸಿಡಿಆರ್‌ಸಿಗೆ ತೆರಳಿ ರಾಜ್ಯ ಗ್ರಾಹಕ ನ್ಯಾಯಾಲಯದ ಆದೇಶವು “ಕಾನೂನು ಅರ್ಹತೆಗಿಂತ ಹೆಚ್ಚಾಗಿ ಸಹಾನುಭೂತಿಯ ಆಧಾರದ ಮೇಲಿದೆ ಎಂದು ಆರೋಪಿಸಿ ದೂರು ನೀಡಿತ್ತು.

ಮಗನನ್ನು ಆಸ್ಪತ್ರೆಗೆ ಕರೆತರುವಲ್ಲಿ ದೂರುದಾರರು ಸರಿಸುಮಾರು ಅರ್ಧ ಗಂಟೆ ವಿಳಂಬ ಮಾಡಿರುವುದನ್ನು ರಾಜ್ಯ ಆಯೋಗವು ನಿರ್ಲಕ್ಷಿಸಿದೆ ಎಂದು ಆಸ್ಪತ್ರೆಯು ವಾದಿಸಿತು.

ಮಧ್ಯಾಹ್ನ 1.40 ರ ಸುಮಾರಿಗೆ ಬಾಲಕ ಆಸ್ಪತ್ರೆಯಲ್ಲಿದ್ದರೂ ಮಗನಿಗೆ ಚಿಕಿತ್ಸೆ ನೀಡಲಿಲ್ಲ ಎಂಬುದು ಲ್ಯಾಂಡ್ಗೆ ವಾದಿಸಿದ್ದರು. ಇದಕ್ಕೆ ಪ್ರತಿಯಾಗಿ ಆಸ್ಪತ್ರೆಯು ರೋಗಿಯ ಸ್ಥಿತಿ ಗಂಭೀರವಾಗಿತ್ತು ಎಂದು ಹೇಳಿದೆ.

ಇದಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ಪರಿಶೀಲಿಸಿದ ಬಳಿಕ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಲವಾದ ಪುರಾವೆಗಳು ದೊರೆತಿದೆ. ವೈದ್ಯಕೀಯ ಪೇಪರ್‌ಗಳನ್ನು ಪರೀಕ್ಷಿಸಿದಾಗ ವೈದ್ಯರು “ಸಕಾಲಿಕ ಚಿಕಿತ್ಸೆ” ನೀಡಲು ವಿಫಲವಾಗಿರುವುದು ತಿಳಿದು ಬಂದಿದೆ. ಇಷ್ಟು ಮಾತ್ರವಲ್ಲದೆ ಸಂಬಂಧವಿಲ್ಲದ ವ್ಯಕ್ತಿಯನ್ನು ಬಾಲಕನ ಅಜ್ಜ ಎಂದು ಹೇಳಿ ಹೆಚ್ಚಿನ ಅಪಾಯದ ಒಪ್ಪಿಗೆ ನಮೂನೆಗೆ ಸಹಿ ಹಾಕಿಸಲಾಗಿದೆ.

ಅಲ್ಲದೇ ಈ ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಲು ಆಸ್ಪತ್ರೆ ವಿಫಲವಾಗಿರುವುದು ಮತ್ತೊಂದು ಲೋಪವಾಗಿದೆ ಎಂದು ನ್ಯಾಯಾಲಯ ತಿಳಿಸಿದ್ದು, ಆಸ್ಪತ್ರೆಗೆ ದಂಡ ವಿಧಿಸಿದೆ.

Continue Reading

ಕರ್ನಾಟಕ

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Assault Case: ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಎಂದಿದ್ದಕ್ಕೆ ಟೀ ಶಾಪ್‌ ಯುವಕನಿಗೆ, ಮುಸ್ಲಿಂ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.

VISTARANEWS.COM


on

Assault Case
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಅಂದಿದ್ದಕ್ಕೆ ಅನ್ಯ ಧರ್ಮೀಯ ಯುವಕರು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರಿಂದ ಟೀ ಶಾಪ್ ಯುವಕನ ತಲೆಗೆ ಗಂಭೀರ ಗಾಯವಾಗಿದೆ.

ಚೇತನ್‌ ಹಲ್ಲೆಗೊಳಗಾದ ಯುವಕ. ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಎಂದಿದ್ದಕ್ಕೆ ಮುಸ್ಲಿಂ ಯುವಕರು, ಟೀ ಶಾಪ್‌ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೆಟ್ಟ ಪದ ಬಳಸಿದಕ್ಕೆ ಟೀ ಶಾಪ್ ಯುವಕ ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರು ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ನಂತರ ಬಿಯರ್ ಬಾಟಲಿನಿಂದ ಟೀ ಶಾಪ್ ಯುವಕನ ಮೇಲೆ ಅನ್ಯಧರ್ಮೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಗಲಾಟೆಯಲ್ಲಿ ಟೀ ಶಾಪ್‌ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಅನ್ಯಧರ್ಮಿಯ ಯುವಕರಿಗೂ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

ಅವಾಚ್ಯ ಪದಗಳ ಬಳಕೆ ಮಾಡಿ ಬಿಯರ್ ಬಾಟಲ್‌ನಿಂದ ಹಲ್ಲೆ ಮಾಡಿದ್ದಲ್ಲದೆ ಆಸ್ಪತ್ರೆಯಲ್ಲಿ ಮುಸ್ಲಿಂ ಯುವಕರು ಮತ್ತೆ ಧಮ್ಕಿ‌ ಹಾಕಿದ್ದಾರೆ. ಹಲ್ಲೆ ಮಾಡುವ ವೇಳೆ ತಡೆಯಲು ಬಂದ ಸ್ಥಳೀಯ ಯುವಕನ ಮೇಲೂ ಹಲ್ಲೆ ನಡೆಸಲಾಗಿದೆ. ಗಲಾಟೆ ನಂತರ ಎರಡು ಕಡೆಯಿಂದ ಕಾಟನ್ ಪೇಟೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಪೊಲೀಸರು ಸದ್ಯ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

Murder case in Belgavi

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು (murder Case) ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ.

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ಕ್ರೈಂ

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Gold Seized: ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಸುಮಾರು 70 ಲಕ್ಷ ರೂ. ಮೌಲ್ಯದ ಚಿನ್ನವನ್ನು ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಇಂಟೆಲಿಜೆನ್ಸ್ ಯೂನಿಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Gold Seized
Koo

ತಿರುಚಿರಾಪಳ್ಳಿ: ದುಬೈ ನಿಂದ (dubai) ಆಗಮಿಸಿದ ಪ್ರಯಾಣಿಕನೊಬ್ಬ ಗುದನಾಳದಲ್ಲಿ (Rectum) ಬಚ್ಚಿಟ್ಟುಕೊಂಡು ತಂದಿದ್ದ 24 ಕ್ಯಾರೆಟ್ ನ ಒಟ್ಟು 997 ಗ್ರಾಂ ಚಿನ್ನವನ್ನು (Gold Seized) ಶನಿವಾರ ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 70.58 ಲಕ್ಷ ರೂ. ಗಳಾಗಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ (Air India Express) ದುಬೈನಿಂದ ತಿರುಚ್ಚಿಗೆ (Trichy) ಆಗಮಿಸಿದ ಪ್ರಯಾಣಿಕ ಗುದನಾಳದಲ್ಲಿ ಮೂರು ಪ್ಯಾಕೆಟ್‌ಗಳಲ್ಲಿ ಚಿನ್ನವನ್ನು 1081 ಗ್ರಾಂ ಪೇಸ್ಟ್‌ ಮಾಡಿ ಬಚ್ಚಿಟ್ಟು ತಂದಿದ್ದು, ಆತನನ್ನು ಏರ್ ಇಂಟೆಲಿಜೆನ್ಸ್ ಯೂನಿಟ್ ನ ಅಧಿಕಾರಿಗಳು ವಶಕ್ಕೆ ಪಡೆದಿದ್ದರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.


ಚೆನ್ನೈ ನಲ್ಲಿ 1.25 ಕೆಜಿ ಚಿನ್ನ ವಶ

ಮತ್ತೊಂದು ಘಟನೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಂತಾರಾಷ್ಟ್ರೀಯ ಟರ್ಮಿನಲ್‌ನ ಆಗಮನದ ಲಾಂಜ್‌ನಲ್ಲಿರುವ ಶೌಚಾಲಯದಲ್ಲಿ 85 ಲಕ್ಷ ರೂಪಾಯಿ ಮೌಲ್ಯದ 1.25 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ರೆಸ್ಟ್ ರೂಂನಲ್ಲಿ ಕಸದ ತೊಟ್ಟಿಯಲ್ಲಿ ಪ್ಯಾಕೇಜ್ ಇರುವುದನ್ನು ಗಮನಿಸಿದ ಸ್ವಚ್ಛತಾ ಸಿಬ್ಬಂದಿ ಸಿಐಎಸ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಯಾವುದೇ ಸ್ಫೋಟಕ ವಸ್ತು ಇರಬಹುದೆಂದು ಪಾರ್ಸೆಲ್ ಅನ್ನು ಸ್ಕ್ಯಾನ್ ಮಾಡಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ ಒಳಗೆ ಅಡಗಿಸಿಟ್ಟ ಚಿನ್ನವನ್ನು ಪತ್ತೆ ಹಚ್ಚಿ ಅನಂತರ ಹೆಚ್ಚುವರಿ ತನಿಖೆಗಾಗಿ ಕಸ್ಟಮ್ಸ್ ಅಧಿಕಾರಿಗಳಿಗೆ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಪ್ರಯಾಣಿಕನೊಬ್ಬ ಮುಖ ಮುಚ್ಚಿಕೊಂಡು ಪಾರ್ಸೆಲ್ ಅನ್ನು ಡಸ್ಟ್‌ಬಿನ್‌ನಲ್ಲಿ ಹಾಕಿರುವುದನ್ನು ತೋರಿಸಿದೆ.

ಈ ವರ್ಷದ ಮಾರ್ಚ್‌ನಲ್ಲಿ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಎಐಯು ಅಧಿಕಾರಿಗಳು 410 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದರು.

ಸಿಂಗಾಪುರದಿಂದ ಬಂದಿದ್ದ ಪ್ರಯಾಣಿಕರೊಬ್ಬರಿಂದ 26.62 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. 24 ಕ್ಯಾರೆಟ್ ನ ಈ ಚಿನ್ನವು 330 ಗ್ರಾಂ ಆಗಿತ್ತು. ಪೇಸ್ಟ್ ರೂಪದಲ್ಲಿ ತರಲಾಗಿತ್ತು. 22 ಸಾವಿರ ಮೌಲ್ಯದ 80 ಗ್ರಾಂ ಚಿನ್ನವನ್ನು ಸಿಂಗಾಪುರದಿಂದ ತಿರುಚ್ಚಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಬಟ್ಟೆಯೊಳಗೆ ಬಚ್ಚಿಟ್ಟುಕೊಂಡು ತಂದಿದ್ದ.

ತಮಿಳುನಾಡಿನ ವಾಹನದಲ್ಲಿ ಬರುತ್ತಿದ್ದ ಚಿನ್ನಾಭರಣ ವಶಕ್ಕೆ

ಇತ್ತೀಚೆಗಷ್ಟೇ ಬೆಂಗಳೂರು ನಗರದಲ್ಲಿ ಭಾರಿ ಮೊತ್ತದ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. 7.999 ಕೆ.ಜಿ. ಚಿನ್ನಾಭರಣ ಹಾಗು 46.700 ಕೆಜಿ ಬೆಳ್ಳಿ ಸೇರಿ ಸುಮಾರು ಐದು ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ಬೆಂಗಳೂರಿನ ವಿವೇಕ್​ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೀಝ್​ ಮಾಡಲಾಗಿತ್ತು.

ವಿವೇಕ್ ​ನಗರದ ಗಾಂಧಿ ಪ್ರತಿಮೆ ಬಳಿ ಇರುವ ಚೆಕ್​ ಪೋಸ್ಟ್​ ಬಳಿ ಚುನಾವಣಾ ಅಧಿಕಾರಿಗಳು ವಾಹನ ಪರಿಶೀಲನೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ಈಶರ್​ ವಾಹನದಲ್ಲಿ ಚಿನ್ನಾಭರಣ ಸಿಕ್ಕಿತ್ತು.

ಒಂದೇ ಒಂದು ಪತ್ರವನ್ನು ಹಿಡಿದಿದ್ದ ಮೂವರು ವ್ಯಕ್ತಿಗಳು, ಗಾಡಿಯಲ್ಲಿ ಚಿನ್ನಾಭರಣವಿದ್ದು ಅದನ್ನು ನಗರದ ವಿವಿಧೆಡೆ ವಿತರಿಸಲು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ಹೇಳಿದ್ದರು.

ತಮಿಳುನಾಡಿನ ಉದ್ಯಮಿಯೊಬ್ಬನ ಸೂಚನೆಯ ಮೇರೆಗೆ ಹಾಗೂ ಆತ ಕೊಟ್ಟ ಫೋನ್​ ನಂಬರ್​ನಲ್ಲಿರುವ ವ್ಯಕ್ತಿಯನ್ನು ಸಂಪರ್ಕ​​ ಮಾಡಿ ಚಿನ್ನಾಭರಣ ತಲುಪಿಸಲು ಅವರು ಬಂದಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಿವೇಕ್ ​ನಗರ ಪೊಲೀಸರು ವಶಕ್ಕೆ ಪಡೆದಿದ್ದರು.

Continue Reading
Advertisement
Hassan Pen Drive Case
ಪ್ರಮುಖ ಸುದ್ದಿ14 mins ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್19 mins ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Modi in Karnataka
ಪ್ರಮುಖ ಸುದ್ದಿ49 mins ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ1 hour ago

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ2 hours ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

TCS World 10K
ಬೆಂಗಳೂರು2 hours ago

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

Lok Sabha Election 2024 special kit for the polling staff
ಉತ್ತರ ಕನ್ನಡ2 hours ago

Lok Sabha Election 2024: ಲೋಕಸಭಾ ಚುನಾವಣೆ ಸಿಬ್ಬಂದಿಗೆ ತಯಾರಾಗಿದೆ ವಿಶೇಷ ಕಿಟ್

virat kohli
ಪ್ರಮುಖ ಸುದ್ದಿ2 hours ago

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

MDH, Everest Spices
ವಿದೇಶ3 hours ago

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

Zameer Ahmed Khan‌
ಕರ್ನಾಟಕ3 hours ago

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20247 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ11 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ18 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌