Fake note gang | ಬೆಂಗಳೂರಲ್ಲಿ ಖೋಟಾ ನೋಟು ಗ್ಯಾಂಗ್; ಚಾಲಾಕಿ ಲೇಡಿ ಬಂಧನ! - Vistara News

ಕರ್ನಾಟಕ

Fake note gang | ಬೆಂಗಳೂರಲ್ಲಿ ಖೋಟಾ ನೋಟು ಗ್ಯಾಂಗ್; ಚಾಲಾಕಿ ಲೇಡಿ ಬಂಧನ!

Fake note gang | ಜನಸಂದಣಿ ಪ್ರದೇಶಗಳನ್ನೇ ಟಾರ್ಗೆಟ್‌ ಮಾಡಿಕೊಳ್ಳುತ್ತಿರುವ ಈ ಜಾಲವು, ಅಲ್ಲಿನ ಬ್ಯಾಂಕ್‌ಗಳಲ್ಲಿ ಹಣ ಡೆಪಾಸಿಟ್‌ ಮಾಡಿ ಎಸ್ಕೇಪ್‌ ಆಗುತ್ತಲಿತ್ತು. ಈಗ ಮಹಿಳಾ ಆರೋಪಿಯೊಬ್ಬಳು ಸೆರೆಸಿಕ್ಕಿದ್ದಾಳೆ.

VISTARANEWS.COM


on

fake note banglore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಖೋಟಾ ನೋಟು (Fake note gang) ಚಲಾವಣೆ ಸದ್ದಿಲ್ಲದೆ ನಡೆಯುತ್ತಿದೆ. ಇದಕ್ಕಾಗಿ ಒಂದು ತಂಡವೇ ಗುಪ್ತಗಾಮಿನಿಯಂತೆ ಕೆಲಸ ಮಾಡುತ್ತಿದ್ದು, ಗರಿ ಗರಿ ನೋಟು ಕೊಟ್ಟು ಯಾಮಾರಿಸುತ್ತಿದೆ. ಜನಸಂದಣಿ ಇರುವ ಬ್ಯಾಂಕ್‌ಗಳೇ ಇವರ ಟಾರ್ಗೆಟ್‌ ಆಗಿದ್ದು, ಹಣ ಡೆಪಾಸಿಟ್‌ ಮಾಡಿ ಅಲ್ಲಿಂದ ಕಾಲ್ಕೀಳುತ್ತಾರೆ. ಈಗ ಈ ತಂಡದ ಮಹಿಳಾ ಆರೋಪಿಯೊಬ್ಬಳು ಪೊಲೀಸರ ಅತಿಥಿಯಾಗಿದ್ದಾಳೆ.

ಹೀಗೆ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಮಹಿಳೆ ಶೀಲಾ ಎಂಬಾಕೆಯನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಈಕೆ 10 ಸಾವಿರ ರೂಪಾಯಿಗೂ ಅಧಿಕ ಮೌಲ್ಯದ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದಾಳೆ. ಜಯನಗರದ ಕರ್ನಾಟಕ ಬ್ಯಾಂಕ್‌ನಲ್ಲಿ ಸಿಬ್ಬಂದಿಗೆ ಯಾಮಾರಿಸಿದ್ದ ಈಕೆ ಹಣವನ್ನು ಜಮೆ ಮಾಡಿದ್ದಳು. 100 ರೂ. ಮುಖಬೆಲೆಯ ನೋಟನ್ನು ಈಕೆ ಚಲಾವಣೆ ಮಾಡುತ್ತಿದ್ದಳು.

ಬ್ಯಾಂಕ್‌ ಸಿಬ್ಬಂದಿಗೆ ಅನುಮಾನ
ಬ್ಯಾಂಕ್‌ ಸಿಬ್ಬಂದಿಗೆ ಅನುಮಾನ ಬಂದು ಪರಿಶೀಲನೆ ವೇಳೆ ಪ್ರಕರಣ ಬಯಲಿಗೆ ಬಂದಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಕ್ಷಣ ಕಾರ್ಯೋನ್ಮುಖರಾದ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಶೀಲಾ, ಇನ್ನೊಬ್ಬಳ ಹೆಸರನ್ನು ಬಾಯಿಬಿಟ್ಟಿದ್ದು, ಆಕೆಯ ಶೋಧ ಕಾರ್ಯ ಮುಂದುವರಿದಿದೆ. ಅಲ್ಲದೆ, ಇದರ ಹಿಂದೆ ದೊಡ್ಡ ಜಾಲವೇ ಇದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | Honey trap | ಕ್ರೈಂ ಪೊಲೀಸರೆಂದು ₹ 14 ಲಕ್ಷ ಸುಲಿಗೆ ಮಾಡಿದ ದುಷ್ಕರ್ಮಿಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KMF Milk Production: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; ಕೆಎಂಎಫ್ ಸಾಧನೆ ಬಗ್ಗೆ ಸಿಎಂ ಮೆಚ್ಚುಗೆ‌

KMF Milk Production: ಕೆಎಂಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಕೆಎಂಎಫ್‌ ಸಾಧನೆ ಬಗ್ಗೆ ಮುಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

KMF Milk Production
Koo

ಬೆಂಗಳೂರು: ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್‌ನಲ್ಲಿ ದಿನವೊಂದಕ್ಕೆ 90 ಲಕ್ಷ ಲೀಟರ್ ಇತ್ತು. ಸದ್ಯ ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಇದು ಕೆಎಂಎಫ್ (KMF Milk Production) ಇತಿಹಾಸದಲ್ಲಿಯೇ ಮೈಲುಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಕೆಎಂಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಾಲಿನ ಸೊಸೈಟಿಗಳು ರೈತರ ಸಂಘಟನೆ

ಈ ಹಿಂದೆ ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೇರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅಲ್ಲಿಯವರೆಗೂ ಡೇರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.

ರೈತರಿಗೆ ನೆರವು

ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೇರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2 ರೂಪಾಯಿ ಹೆಚ್ಚಿಸಲಾಗಿದೆ ಎಂದರು.

ವಿಪಕ್ಷದ ಅಪಪ್ರಚಾರ

ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ ಎಂದರು.

2 ರೂ. ಇದ್ದ ಪ್ರೋತ್ಸಾಹಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಈ ಬಗ್ಗೆ ತಿಳಿಯದೆ ಮಾತನಾಡುತ್ತಾರೆ ಎಂದರು.

ಇದನ್ನೂ ಓದಿ | Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರಇದನ್ನೂ ಓದಿ |

ಹಾಲಿನ ದರ ಹೆಚ್ಚಳವಾಗಿಲ್ಲ

ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ ಎಂದು ಪುನರುಚ್ಚರಿಸಿದ ಮುಖ್ಯಮಂತ್ರಿಗಳು .
ಗ್ರಾಹಕರಿಗೆ ಪ್ರಮಾಣ ಹೆಚ್ಚು ಮಾಡಿ ಬೆಲೆ ನಿಗದಿ ಮಾಡಿದ್ದರೂ ಕೂಡ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಹಾಲಿನ ಬೆಲೆ ಕಡಿಮೆ ಇದೆ. ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ಹಾಲು ಕೊಡುತ್ತಿರುವುದು ಕರ್ನಾಟಕ ಮಾತ್ರ ಎಂದರು.

Continue Reading

ಕರ್ನಾಟಕ

Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

Bomb Blast: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಗುಂದ ಗ್ರಾಮದ ಬಳಿ ಪತ್ರಕರ್ತರ ಕಾರಿನಡಿ ನಾಡ ಬಾಂಬ್ ಸ್ಫೋಟವಾಗಿದೆ. ಜೋಯಿಡಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

Bomb Blast
Koo

ಕಾರವಾರ: ಪತ್ರಕರ್ತರು ಸಾಗುತ್ತಿದ್ದ ಕಾರಿನ ಕೆಳಗೆ ನಾಡ ಬಾಂಬ್ ಸ್ಫೋಟವಾಗಿರುವ (Bomb Blast) ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಗುಂದ ಗ್ರಾಮದ ಬಳಿ ಮಂಗಳವಾರ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂದೇಶ್ ದೇಸಾಯಿ ಎನ್ನುವ ಪತ್ರಕರ್ತರಿಗೆ ಸೇರಿದ ಕಾರಿನಲ್ಲಿ ಮೂವರು ಪತ್ರಕರ್ತರು, ಶಾಸಕ ಆರ್.ವಿ. ದೇಶಪಾಂಡೆ ಸಭೆಗೆ ತೆರಳುತ್ತಿದ್ದರು. ಜೋಯಿಡಾದ ಗುಂದ ಗ್ರಾಮದ ಬಳಿ ಕಾರಿನ ಟಯರ್‌ಗೆ ಸಿಕ್ಕಿ ಬಾಂಬ್ ಸ್ಫೋಟವಾಗಿದೆ. ಅದೃಷ್ಟವಶಾತ್ ಪತ್ರಕರ್ತರು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ | Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Sandalwood theft : ಶ್ರೀಗಂಧ ಕದಿಯಲು ಬಂದವನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

ಕೋಲಾರ : ಅರಣ್ಯ ಪ್ರದೇಶದಲ್ಲಿ ಶ್ರೀಗಂಧವನ್ನು ಕದಿಯಲು (Sandalwood theft) ಬಂದವನು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗುಂಡೇಟು ತಿಂದಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿ (Kashipura Forest) ಘಟನೆ ನಡೆದಿದೆ.

ತಾಯಲೂರು ಗ್ರಾಮದ ಭತ್ಯಪ್ಪ ಎಂಬಾತ ಕಾಲಿಗೆ ಗುಂಡು ತಗುಲಿದೆ. ಅರಣ್ಯ ಇಲಾಖೆ ರಕ್ಷಕ ಅನಿಲ್ ಗುಂಡು ಹಾರಿಸಿದ್ದಾರೆ. ಶ್ರೀಗಂಧ ಕಳ್ಳತನಕ್ಕೆ ಆಂಧ್ರಪ್ರದೇಶದ ಐದಾರು ಮಂದಿ ಜತೆಗೆ ಭತ್ಯಪ್ಪ ಬಂದಿದ್ದ. ಈ ವೇಳೆ ರಕ್ಷಕ ಅನಿಲ್ ಮೇಲೆ ಹಲ್ಲೆಗೆ ಮುಂದಾಗಿದ್ದ.

ರಕ್ಷಣೆಗಾಗಿ ಭತ್ಯಪ್ಪ ಹಾಗೂ ಮತ್ತೋರ್ವನಿಗೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಭತ್ಯಪ್ಪ ಸಿಕ್ಕಿಬಿದ್ದರೆ ಉಳಿದವರು ಕಾಲ್ಕಿತ್ತಿದ್ದಾರೆ. ಗಾಯಾಳು ಭತ್ಯಪ್ಪಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

ಕೋರ್ಟ್‌ ಆವರಣದಲ್ಲೇ ಡೆಡ್ಲಿ ಅಟ್ಯಾಕ್‌

ಕಲಬುರಗಿ ಕೋರ್ಟ್ ಆವರಣದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯ ಬೆನ್ನತ್ತಿ ದುಷ್ಕರ್ಮಿಗಳು ತಲವಾರ್‌ನಿಂದ ದಾಳಿ ನಡೆಸಿದ್ದಾರೆ. ಧೀರಜ್ ಎಂಬಾತನ ಮೇಲೆ ತಲವಾರ್‌‌ನಿಂದ ದಾಳಿ ನಡೆಸಿದ್ದಾರೆ.

ತಲವಾರ್ ದಾಳಿಯಿಂದ ಧೀರಜ್‌ ಎಂಬಾತ ಗಾಯಗೊಂಡಿದ್ದು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ದುಷ್ಕರ್ಮಿಗಳನ್ನು ಸಾರ್ವಜನಿಕರು ಹಾಗೂ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಪ್ರಶಾಂತ್ ಪಾಟೀಲ್ (20), ವಿರೇಶ್ ಪಾಟೀಲ್ (19), ರಾಮು ಪಾಟೀಲ್ (38) ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಲಬುರಗಿ ನಗರದ ಬಾಪುನಗರ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Karnataka Weather Forecast :ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ (Rain News) ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಡಗಿನಲ್ಲಿ ಗುಡ್ಡ ಕುಸಿದರೆ, ಮಂಗಳೂರಲ್ಲಿ ರಸ್ತೆ ಕುಸಿದಿದೆ. ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿಯಾಗಿದೆ. ಇನ್ನೊಂದು ವಾರವು ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದ್ದು, ಉತ್ತರ ಒಳನಾಡಿನಲ್ಲಿ (Karnataka Weather Forecast) ದುರ್ಬಲಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗಿವೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೋಟ, ಆಗುಂಬೆಯಲ್ಲಿ ತಲಾ 8 ಸೆಂ.ಮೀ ಹಾಗೂ ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಆರಿದ್ರಾ ಮಳೆ ಎಫೆಕ್ಟ್‌ ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲಿ ಸುರಿದ ಆರಿದ್ರಾ ಮಳೆಯ ಎಫೆಕ್ಟ್‌ನಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ ಬೆಟ್ಟದ ಮಣ್ಣು ಕುಸಿದು ಮನೆ ಮತ್ತು ದೇವಸ್ಥಾನಕ್ಕೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾಲೆಮಾಡುವಿನಲ್ಲಿ ಘಟನೆ ನಡೆದಿದೆ. ಪಾಲೆಮಾಡುವಿನ ಎಂಆರ್ ಕಾಳಪ್ಪ ಅವರ ಮನೆಯ ಸಮೀಪದ ಮಣ್ಣು ಕುಸಿದಿದೆ. ದೇವಸ್ಥಾನದ ಗೋಡೆ ಪಕ್ಕದಲ್ಲಿ ಮತ್ತು ವಾಸದ ಮನೆಯ ಪಕ್ಕದಲ್ಲಿ ರಾಶಿ ಮಣ್ಣು ತುಂಬಿದೆ.

ಇದನ್ನೂ ಓದಿ: Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

ಮಂಗಳೂರಿನ ಬಂಗ್ರ ಕೂಳೂರಿನಲ್ಲೂ ರಸ್ತೆ ಕುಸಿತ

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ರಸ್ತೆ ಕುಸಿದಿದೆ. ಎ ಜೆ ಇಂಜಿನಿಯರಿಂಗ್ ಕಾಲೇಜಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಮಣ್ಣಿನ ಸವೆತಕ್ಕೆ ಕ್ಷಣ ಕ್ಷಣಕ್ಕೂ ರಸ್ತೆಯು ಕುಸಿಯುತ್ತಿದೆ.

350 ಮೀಟರ್ ಉದ್ದದ ಈ ರಸ್ತೆಯಲ್ಲಿ ರಾಜಕಾಲುವೆಯು ಹೊಂದಿಕೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ರಸ್ತೆ ಪಕ್ಕದ 10ಕ್ಕೂ ಹೆಚ್ಚು ಮನೆಗಳು ಕೂಡ ಅಪಾಯದಲ್ಲಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರಿ ಮಳೆಗೆ ಶಾಲಾ ಕಟ್ಟಡವೊಂದು ಶಿಥಿಲಾವಸ್ಥೆಗೊಂಡಿದೆ. ಸರ್ಕಾರಿ ಶಾಲೆಯ ಚಾವಣಿಗೆ ಹಾನಿಯಾಗಿದ್ದು, ಗೋಡೆಯ ಮಣ್ಣು ಉದುರುತ್ತಿದೆ. ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಶಿಥಿಲಾವಸ್ಥೆ ಗೊಂಡಿರುವ ಚಾವಣಿ ಸರಿಪಡಿಸಲು ಕ್ರಮವಹಿಸಲು ಸೂಚಿಸಿದರು.

ಧಾರಾಕಾರ ಮಳೆಗೆ ಧುಮ್ಮಿಕ್ಕಿದ ಜೋಗ್‌ ಫಾಲ್ಸ್‌

ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನ ಸೋತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

R Ashok: ಲೂಟಿಯಾದ ದಲಿತರ ಹಣವನ್ನು ಸಿದ್ದರಾಮಯ್ಯ ಜೇಬಿನಿಂದ ಕೊಡ್ತಾರಾ? ಆರ್‌. ಅಶೋಕ್‌ ಪ್ರಶ್ನೆ

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Valmiki Development Corporation Scam Opposition party leader R Ashok has demanded that CM Siddaramaiah should resign
Koo

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok), ನೈತಿಕತೆಯ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್‌ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರಬಂದಿದೆ. ಈಗ ಇದನ್ನು ಮುಚ್ಚಿಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಸಿಎಂ ಸಿದ್ದರಾಮಯ್ಯ ಈ ಹಗರಣ ಮಾಡಿಯೇ ತಮ್ಮ ಸ್ಥಾನ ಭದ್ರ ಮಾಡಿಕೊಳ್ಳಲು ನೋಡಿದ್ದರು. ಹೈಕಮಾಂಡ್‌ಗೆ ಕಪ್ಪ ಸಲ್ಲಿಸದೇ ಇದ್ದಲ್ಲಿ ಸಿಎಂ ಸ್ಥಾನ ಕಳೆದುಕೊಂಡು ಅದನ್ನು ಡಿ.ಕೆ. ಶಿವಕುಮಾರ್‌ಗೆ ಬಿಟ್ಟುಕೊಡಬೇಕಾಗಿತ್ತು. ಅದನ್ನು ತಪ್ಪಿಸಲು ದಲಿತರ ಹಣವನ್ನು ದುರ್ಬಳಕೆ ಮಾಡಿದ್ದಾರೆ. ಸಚಿವ ಬಿ.ನಾಗೇಂದ್ರ ಅವರಿಂದ ರಾಜೀನಾಮೆ ಪಡೆದು ತಮ್ಮ ತಲೆಯನ್ನು ಉಳಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ.

ದಲಿತರ ಹಣ ಯಾರು ಕೊಡುತ್ತಾರೆ?

ದಲಿತರಿಗೆ ಸೇರಿದ ಒಟ್ಟು 187 ಕೋಟಿ ರೂಪಾಯಿಯನ್ನು ಬೇನಾಮಿ ಐಟಿ ಕಂಪನಿಗಳ ಖಾತೆಗೆ ವರ್ಗಾಯಿಸಲಾಗಿದೆ. ಈವರೆಗೆ ಆರೋಪಿಗಳಿಂದ 14 ಕೋಟಿ ರೂ, ಬ್ಯಾಂಕ್‌ ಖಾತೆಗಳಿಂದ 10 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಉಳಿದ ಹಣವನ್ನು ಸಿಎಂ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ ಅಥವಾ ಕೆಪಿಸಿಸಿ ಬ್ಯಾಂಕ್‌ ಖಾತೆಯಿಂದ ಪಡೆಯಲಾಗುವುದೇ ಎಂಬ ಬಗ್ಗೆ ಮಾಹಿತಿ ಇಲ್ಲ. ನಷ್ಟವಾದ ಈ ಹಣ ದಲಿತರಿಗೆ ಸೇರಿದ್ದು, ಇದನ್ನು ವಾಪಸ್‌ ಪಡೆಯಲು ಏನು ಮಾಡುತ್ತಾರೆ ಎಂದು ಸರ್ಕಾರ ಸ್ಪಷ್ಟ ಮಾಹಿತಿ ನೀಡಬೇಕಿದೆ ಎಂದು ಆರ್‌.ಅಶೋಕ ಒತ್ತಾಯಿಸಿದ್ದಾರೆ.

ಬಾಕಿ ಹಣ ಎಲ್ಲಿ ಹೋಯಿತು? ಅಂದರೆ ಅದನ್ನು ಗುಳುಂ ಮಾಡಲಾಗಿದೆಯೇ? ನಿಗಮದ ಹಣ ಪಕ್ಕದ ತೆಲಂಗಾಣ ರಾಜ್ಯದ ಚಿನ್ನಾಭರಣ ಅಂಗಡಿಗಳು, ಮದ್ಯದ ಅಂಗಡಿಗಳು ಸೇರಿದಂತೆ ನೂರಾರು ಖಾತೆಗಳಿಗೆ ವರ್ಗಾವಣೆ ಆಗಿದೆ. ಅದು ಸಹ ಮಾರ್ಚ್ ತಿಂಗಳ ಅಂತ್ಯದಲ್ಲಿ ನಡೆದಿದೆ. ಅಂತರರಾಜ್ಯ ವಹಿವಾಟು ಆಗಿರುವ ಇಷ್ಟೊಂದು ದೊಡ್ಡ ಬಹುಕೋಟಿ ಹಗರಣವನ್ನು ಸಿಬಿಐಗೆ ಕೊಡಲು ಹಿಂದೇಟು ಯಾಕೆ? ಈ ಹಗರಣಕ್ಕೂ ತೆಲಂಗಾಣ ಚುನಾವಣೆಗೂ ಇರುವ ನಂಟು ಹೊರಬರಬಹುದು ಎಂಬ ಭಯವೇ? ಎಂದು ಅವರು ಮುಖ್ಯಮಂತ್ರಿಯವರನ್ನು ಪ್ರಶ್ನೆ ಮಾಡಿದ್ದಾರೆ.

ವಿಶೇಷ ತನಿಖಾ ದಳ ಯಾರು ಯಾರನ್ನೋ ವಿಚಾರಣೆ ಮಾಡುತ್ತಿದೆ. ಆದರೆ ಈವರೆಗೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂರಿಸಿ ವಿಚಾರಣೆ ನಡೆಸಿಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಬಳಿ ಪೊಲೀಸರು ಯಾವುದೇ ಪ್ರಶ್ನೆಗಳನ್ನು ಕೇಳಿಲ್ಲ. ಹಣಕಾಸು ಇಲಾಖೆಯ ಗಮನಕ್ಕೆ ಬಾರದೆ ಇದು ನಡೆದಿಲ್ಲ ಎಂದಾದ ಮೇಲೆ ಸಿದ್ದರಾಮಯ್ಯ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

ಸಿಎಂ ನಿವಾಸಕ್ಕೆ ಮುತ್ತಿಗೆ

ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಲಿಪಶು ಮಾಡಿ ದೊಡ್ಡ ತಲೆಗಳನ್ನು ರಕ್ಷಿಸಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಜುಲೈ 3 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನಾನು ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ. ಬುಧವಾರ ಬೆಳಗ್ಗೆ 9.30ಕ್ಕೆ ಕುಮಾರಕೃಪಾ ಅತಿಥಿ ಗೃಹದಿಂದ ಮೆರವಣಿಗೆಯಲ್ಲಿ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಆರ್‌.ಅಶೋಕ್‌ ತಿಳಿಸಿದ್ದಾರೆ.

Continue Reading
Advertisement
Agniveer
ರಾಜಕೀಯ5 mins ago

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

Hathras Stampede
ಪ್ರಮುಖ ಸುದ್ದಿ7 mins ago

Hathras Stampede : ಹತ್ರಾಸ್​ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ

KMF Milk Production
ಕರ್ನಾಟಕ21 mins ago

KMF Milk Production: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; ಕೆಎಂಎಫ್ ಸಾಧನೆ ಬಗ್ಗೆ ಸಿಎಂ ಮೆಚ್ಚುಗೆ‌

Narendra Modi
ದೇಶ38 mins ago

Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Printed Handbags Fashion
ಫ್ಯಾಷನ್55 mins ago

Printed Handbags Fashion: ಉದ್ಯೋಗಸ್ಥ ಮಹಿಳೆಯರನ್ನು ಸೆಳೆಯುತ್ತಿರುವ ಪ್ರಿಂಟೆಡ್‌ ಹ್ಯಾಂಡ್‌ ಬ್ಯಾಗ್ಸ್

Bomb Blast
ಕರ್ನಾಟಕ1 hour ago

Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

Pune Porsche Crash
ಪ್ರಮುಖ ಸುದ್ದಿ1 hour ago

Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

K Annamalai
ರಾಜಕೀಯ1 hour ago

K Annamalai: ಕೆ ಅಣ್ಣಾಮಲೈ ಯುಕೆ ಫೆಲೋಶಿಪ್‌ಗೆ ಆಯ್ಕೆ; ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ?

karnataka weather Forecast
ಮಳೆ1 hour ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Snake Bites
ವೈರಲ್ ನ್ಯೂಸ್1 hour ago

Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 hour ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌