Sand policy | ಬಡವರು, ಮಧ್ಯಮ ವರ್ಗಕ್ಕೂ ಮರಳು ಸಿಗಬೇಕು: ನೀತಿಯಲ್ಲಿ ತಿದ್ದುಪಡಿ ಮಾಡಲು ಸಿಎಂ ಸೂಚನೆ - Vistara News

ಕರ್ನಾಟಕ

Sand policy | ಬಡವರು, ಮಧ್ಯಮ ವರ್ಗಕ್ಕೂ ಮರಳು ಸಿಗಬೇಕು: ನೀತಿಯಲ್ಲಿ ತಿದ್ದುಪಡಿ ಮಾಡಲು ಸಿಎಂ ಸೂಚನೆ

ರಾಜ್ಯದಲ್ಲಿ ಕೆಲವರ ಸ್ವತ್ತಾಗಿರುವ ಗಣಿಗಾರಿಕೆಯನ್ನು ಅವರ ಕೈಗಳಿಂದ ಮುಕ್ತಗೊಳಿಸಬೇಕು. ಎಲ್ಲರಿಗೂ ಮರಳು ಸುಲಭದಲ್ಲಿ ಸಿಗುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

VISTARANEWS.COM


on

sand mining
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಣಿಗಳ ಆಧುನೀಕರಣಕ್ಕೆ ಉನ್ನತ ಮಟ್ಟದ ಸಮಿತಿಯನ್ನು ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸೂಚಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜತೆಗೆ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಮರಳು ಸಿಗುವಂತೆ ನೀತಿಗೆ ತಿದ್ದುಪಡಿ ತರುವಂತೆ ಸೂಚಿಸಿದರು.

ವಿವಿಧ ದೇಶಗಳಲ್ಲಿ ಗಣಿಗಾರಿಕೆಯ ಪರಿಕಲ್ಪನೆ, ಯಂತ್ರೋಪಕರಣ ಹಾಗೂ ಖನಿಜಾನ್ವಷೇಣೆಯಲ್ಲಿ ಆಧುನೀಕರಣವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಗಂಭೀರವಾಗಿ ಚಿಂತನೆ ನಡೆಸಿ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಮರಳು ನೀತಿ ತಿದ್ದುಪಡಿಗೆ ಸೂಚನೆ
ಬಡವರು ಮತ್ತು ಮಧ್ಯಮವರ್ಗದವರಿಗೆ ಸಹಾಯವಾಗುವಂತೆ ಮರಳು ನೀತಿಯನ್ನು ತಿದ್ದುಪಡಿ ಮಾಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಕೆಲವರ ಕೈಯಲ್ಲಿರುವ ಮರಳು ಗಣಿಗಾರಿಕೆಯನ್ನು ಮುಕ್ತಗೊಳಿಸುವ ಅಗತ್ಯವಿದೆ ಎಂದರು.

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಎಂ ಎಸ್ ಎಂ ಈ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ| ಅಕ್ರಮ ಮರಳು ದಂಧೆ ಮಾಹಿತಿ ಕೊಟ್ಟ ವಿದ್ಯಾರ್ಥಿಗೆ ಚಿತ್ರಹಿಂಸೆ, ಜಿಲ್ಲಾಧಿಕಾರಿಗೆ ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bengaluru News: ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮನ್ನೋತ್ ಅಭಿಪ್ರಾಯಪಟ್ಟರು.

VISTARANEWS.COM


on

actor producer and Cow lover Mahendra Munnoth donated 51 lakh rupees to cow shelter
Koo

ಬೆಂಗಳೂರು: ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ತಾಯಿಯಂತೆ ನಮ್ಮನ್ನು ಪೊರೆಯುವ ಗೋಮಾತೆಯ ಋಣವನ್ನು ತೀರಿಸಲು ಖಂಡಿತಾ ಸಾಧ್ಯ ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮುನ್ನೋತ್ ತಿಳಿಸಿದರು.

ನಗರದ ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಹಮ್ಮಿಕೊಂಡಿದ್ದ ಗೋಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಅಲ್ಲದೇ ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು. ಅಂತಹ ಗೋವನ್ನು ಉಳಿಸಿದರೆ ಕೇವಲ ಗ್ರಾಮ ಮಾತ್ರವಲ್ಲ ಇಡೀ ದೇಶ ಸಮೃದ್ಧಿ, ಸಂಪದ್ಭರಿತ ಭೂಮಿಯಾಗುತ್ತದೆ. ಈ ನಂಬಿಕೆಯನ್ನು ಪ್ರತಿಯೊಬ್ಬ ಭಾರತೀಯನೂ ಅರ್ಥೈಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

ಬೆಂಗಳೂರಿನ ವಿಜಯನಗರ ಮಾರುತಿ ಮೆಡಿಕಲ್ಸ್‌ನ, ಗೋಸೇವಕ ಮಹೇಂದ್ರ ಮುನ್ನೋತ್, ಗೋಶಾಲೆಗಳ ಉಳಿವಿಗಾಗಿ ಮತ್ತು ಗೋವುಗಳ ಸಂರಕ್ಷಣೆಗಾಗಿ ದೇಣಿಗೆ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ತಮ್ಮ ವ್ಯಾಪಾರದಲ್ಲಿ ಸಂಗ್ರಹಿಸಿದ ಬಹುಪಾಲು ಹಣವನ್ನು ಗೋವುಗಳ ರಕ್ಷಣೆಗೆ, ಪಾಲನೆಗಾಗಿ ವ್ಯಯಿಸುತ್ತಿರುವ ಮಹೇಂದ್ರ ಮನ್ನೋತ್‌ ಅವರ ಕುಟುಂಬ. ಕಳೆದ ಹದಿನಾಲ್ಕು ವರ್ಷಗಳಿಂದ ಪ್ರತೀ ವರ್ಷ ಗೋಶಾಲೆಗಳಿಗೆ ಲಕ್ಷಾಂತರ ರೂಪಾಯಿಗಳನ್ನು ದೇಣಿಗೆ ನೀಡುತ್ತಾರೆ. ಈ ವರ್ಷ ಅವರು ನಾಡಿನ ವಿವಿಧ ಗೋಶಾಲೆಗಳಿಗೆ 51 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.

ನಾಡಿನಲ್ಲಿ ಅಕ್ರಮವಾಗಿ ಸಾಗಿಸಲ್ಪಡುವ ಗೋವುಗಳನ್ನು ಕಾನೂನಾತ್ಮಕವಾಗಿ ರಕ್ಷಿಸಿದ ನಂತರ ಆ ಗೋವುಗಳನ್ನು ಈ ಗೋಶಾಲೆಗಳಿಗೆ ತಂದು ಬಿಡಲಾಗುತ್ತದೆ. ಅಂತಹ ಗೋವುಗಳನ್ನು ಪೊರೆಯಲು ಗೋಶಾಲೆಗಳಿಗೆ ಶಕ್ತಿಯನ್ನು ತುಂಬವ ಕೆಲಸವನ್ನು ಮಹೇಂದ್ರ ಮುನ್ನೋತ್‌ ಅವರು ತಮ್ಮ ಮಾತಾಪಿತೃಗಳ ಪುಣ್ಯಸ್ಮರಣೆಯ ಹೆಸರಿನಲ್ಲಿ ಈ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ.

ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ 20ಕ್ಕೂ ಹೆಚ್ಚು ಗೋಶಾಲೆಯ ಮುಖ್ಯಸ್ಥರಿಗೆ ಚೆಕ್‌ ರೂಪದಲ್ಲಿ ಹಣವನ್ನು ನೀಡಲಾಯಿತು.

ಇದನ್ನೂ ಓದಿ: PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

ಈ ವೇಳೆ ಮಹೇಂದ್ರ ಮುನ್ನೋತ್‌ ಅವರ ಪತ್ನಿ ಸುರಕ್ಷಾ ಹಾಗೂ ಕುಟುಂಬದ ಸದಸ್ಯರು, ಗೋಶಾಲೆಯಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡುವುದರೊಂದಿಗೆ ಗೋಪೂಜೆಯನ್ನೂ ಮಾಡಲಾಯಿತು.

Continue Reading

ಕರ್ನಾಟಕ

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Bengaluru News: ಶ್ರೀ ಸಂಸ್ಥಾನ ಶ್ರೀ ರಾಮಚಂದ್ರಾಪುರ ಮಠ ವಿರಚಿತ “ಭಾವರಾಮಾಯಣ ರಾಮಾವತರಣ” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ನಗರದ ಹೊಸಕೆರೆಹಳ್ಳಿಯ ಪಿ.ಇ.ಎಸ್‌. ವಿಶ್ವವಿದ್ಯಾಲಯದ ಜಿ.ಜೆ.ಬಿ.ಸಿ. ಸಭಾಂಗಣದಲ್ಲಿ ಇದೇ ಜೂ. 29ರಂದು ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.

VISTARANEWS.COM


on

Bhaavaramayana Ramavatarana book release programme on June 29 in Bengaluru
Koo

ಬೆಂಗಳೂರು: ಶ್ರೀ ಸಂಸ್ಥಾನ ಶ್ರೀ ರಾಮಚಂದ್ರಾಪುರ ಮಠ ವಿರಚಿತ ʼಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ (Book Release) ಕಾರ್ಯಕ್ರಮವನ್ನು ನಗರದ ಹೊಸಕೆರೆಹಳ್ಳಿಯ ಪಿ.ಇ.ಎಸ್‌. ವಿಶ್ವವಿದ್ಯಾಲಯದ ಜಿ.ಜೆ.ಬಿ.ಸಿ. ಸಭಾಂಗಣದಲ್ಲಿ ಇದೇ ಜೂ. 29ರಂದು ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕಾರ್ಯಕ್ರಮದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾರು ಹಾಗೂ ಶ್ರೀಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸುವರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಮತ್ತು ಪಿ.ಇ.ಎಸ್‌. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎಂ.ಆರ್‌. ದೊರೆಸ್ವಾಮಿ ಉಪಸ್ಥಿತರಿರುವರು.

ಇದನ್ನೂ ಓದಿ: Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

ಸಂಜೆ 5 ಗಂಟೆಗೆ ಕಲಾಸ್ನೇಹಿ ಹಾಗೂ ನರ್ತನಯೋಗ ಸಂಸ್ಥೆಯ ನಿರ್ದೇಶಕಿ ಸ್ನೇಹಾ ನಾರಾಯಣ ಮತ್ತು ಯೋಗೇಶ್‌ ಕುಮಾರ್‌ ಅವರಿಂದ ಭರತನಾಟ್ಯ, ಸಂಜೆ 5.30 ಕ್ಕೆ ನೂರಕ್ಕೂ ಹೆಚ್ಚು ಗಣ್ಯರಿಂದ ಪುಸ್ತಕ ಲೋಕಾರ್ಪಣೆ, ಶ್ರೀಸಂಸ್ಥಾನದವರೊಂದಿಗೆ ಸಂವಾದ, ಎನ್. ರವಿಶಂಕರ್‌ ಸಂವಾದಕರಾಗಿ ಪಾಲ್ಗೊಳ್ಳುವರು. ಮಂತ್ರಾಲಯ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮ ಜರುಗಲಿದೆ.

Continue Reading

ಕ್ರೈಂ

Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ!

Honey Trap: ಹನಿಟ್ರ್ಯಾಪ್ ಮಾಡಿ ಕೋಟ್ಯಾಂತರ ರೂ. ಹಣಕ್ಕೆ ಬೆಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವವಿಧೆಡೆ ಇಂತಹ ಕೃತ್ಯಗಳನ್ನು ಎಸಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಬೆಂಗಳೂರಿನ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

VISTARANEWS.COM


on

honey trap harish gowda
ಆರೋಪಿ ಸಂತೋಷ್‌, ಶಾಸಕ ಹರೀಶ್‌ ಗೌಡ
Koo

ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ ಗೌಡ (MLA Harish Gowda) ಸೇರಿದಂತೆ ಹಲವು ವಿಐಪಿಗಳಿಗೆ ಹನಿಟ್ರ್ಯಾಪ್‌ (Honey Trap) ಗಾಳ ಹಾಕಿದ್ದ ಖತರ್‌ನಾಕ್‌ ಗ್ಯಾಂಗನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಇವರು ವಿಶಿಷ್ಟ ವಿಧಾನ ಅನುಸರಿಸಿ, ಹೋಟೆಲ್‌ಗಳ ರೂಮಿನಲ್ಲಿ ಉಳಿದುಕೊಳ್ಳುತ್ತಿದ್ದ ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ (Blackmail) ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದ ಶಾಸಕರು, ಸಚಿವರು, ಉದ್ಯಮಿಗಳು, ವಿಶ್ವ ವಿದ್ಯಾಲಯಗಳ ಕುಲಪತಿಗಳು ಸೇರಿ ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ, ನಂತರ ಅವರದ್ದೇ ವಿಡಿಯೋ ಎನ್ನುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ. ಈ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ.

ಸಮಾಜದ ಗಣ್ಯ ವ್ಯಕ್ತಿಗಳಿಗೆ ಹನಿಟ್ರಾಪ್ ಮೂಲಕ ಬ್ಲಾಕ್ ಮೇಲ್ ಮಾಡ್ತಿದ್ದವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೀಗೆ, ಹನಿಟ್ರ್ಯಾಪ್ ಮಾಡಿ ಕೋಟ್ಯಾಂತರ ರೂ. ಹಣಕ್ಕೆ ಬೆಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವವಿಧೆಡೆ ಇಂತಹ ಕೃತ್ಯಗಳನ್ನು ಎಸಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಬೆಂಗಳೂರಿನ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಸಕರು ನೀಡಿದ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ.

ವಿಶ್ವವಿದ್ಯಾಲಯದ ಉಪಕುಲಪತಿಗಳೊಬ್ಬರು ಹೀಗೆ ಬ್ಲಾಕ್‌ಮೇಲ್‌ಗೆ ಒಳಗಾಗಿದ್ದು, ಈ ಬಗ್ಗೆ ಶಾಸಕ ಶಾಸಕ ಹರೀಶ್ ಗೌಡ ಅವರಿಗೆ ಮಾಹಿತಿ ನೀಡಿದ್ದರು. ಉಪಕುಲಪತಿಗಳ ಬೆಂಬಲಕ್ಕೆ ನಿಂತ ಶಾಸಕ ಹರೀಶ್‌ ಗೌಡ, ದೂರು ನೀಡಿ ಧೈರ್ಯ ಹೇಳಿದ್ದರು. ಆರೋಪಿಗಳ ಗ್ಯಾಂಗ್ ಪುನಃ ಶಾಸಕ ಹರೀಶ್‌ ಗೌಡ ವಿರುದ್ಧವೇ ಸುಳ್ಳು ಹನಿಟ್ರ್ಯಾಪ್ ಮಾದರಿ ವಿಡಿಯೋ ಸೃಜಿಸಿ ಬೆದರಿಕೆ ಹಾಕಲು ಮುಂದಾಗಿದೆ. ಈ ಪ್ರಕರಣ ಬೇಧಿಸಿದ ಸಿಸಿಬಿ ಪೊಲೀಸರಿಗೆ ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಎಂಬ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್ ಗ್ಯಾಂಗ್‌ನಲ್ಲಿ ಒರ್ವ ಯುವತಿ ಕೂಡ ಭಾಗಿಯಾಗಿದ್ದಾಳೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಆರೋಪಿಗಳು ಪ್ರಭಾವಿಗಳ ಸಂಪರ್ಕ ಮಾಡಿ ಅವರನ್ನು ಫಾಲೋ ಮಾಡುತ್ತಿದ್ದರು. ಬಳಿಕ ವಿಐಪಿಗಳನ್ನು ಭೇಟಿ ಮಾಡಿ ನಂಬರ್ ಪಡೆದುಕೊಳ್ಳುತ್ತಿದ್ದರು. ನಂತರ, ವಿಐಪಿಗಳ ಚಲನವಲನದ ಮೇಲೆ ಹದ್ದಿನ ಕಣ್ಣಿಡುತ್ತಿದ್ದ ಆರೋಪಿಗಳು ವಿಐಪಿಗಳು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್‌ಗಳ ರೂಮು ಬುಕಿಂಗ್, ಚೆಕ್-ಇನ್ ಹಾಗೂ ಚೆಕ್-ಔಟ್ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ವಿಐಪಿಗಳು ಹೋಟೆಲ್‌ನ ರೂಮು ಖಾಲಿ ಮಾಡಿಕೊಂಡು ಹೋದ ನಂತರ ಅವರು ಉಳಿದುಕೊಂಡಿದ್ದ ರೂಮ್ ಅನ್ನು ಬಾಡಿಗೆ ಪಡೆದು ಈ ಆರೋಪಿಗಳು ಅಲ್ಲಿ ಉಳಿದುಕೊಳ್ಳುತ್ತಿದ್ದರು.

ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಯುವತಿಯನ್ನು ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿರುವ ರೀತಿಯಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ಬಳಿಕ ಆ ರೂಮಿನಲ್ಲಿ ಉಳಿದುಕೊಂಡಿದ್ದ ವಿಐಪಿ ಈ ಯುವತಿಯನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ಕ್ರಿಯೇಟ್ ಮಾಡಿ ಅದನ್ನು ವಿಐಪಿಗಳಿಗೆ ಕಳಿಸುತ್ತಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹಾಗೂ ಪೊಲೀಸರಿಗೆ ಕೊಡುವುದಾಗಿ ಬೆದರಿಕೆ ಒಡ್ಡಿ ಹಣ ಪೀಕುತ್ತಿದ್ದರು.

ಇದನ್ನೂ ಓದಿ: Honey trap : ಉದ್ಯಮಿಯ ಬೆತ್ತಲೆ ವಿಡಿಯೊ ತೆಗೆದು Honey trap; ಮುಸ್ಲಿಂ ಮಹಿಳೆ ಸಹಿತ ಮೂವರ ಸೆರೆ

Continue Reading

ಕಲಬುರಗಿ

Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

Kalaburagi News: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಶ್ರೀ ದತ್ತಾತ್ರೇಯ ದೇವಾಸ್ಥಾನದ ಅಭಿವೃದ್ಧಿಯನ್ನು ಪಂಢರಪುರ, ತುಳಜಾಪುರ ಮಾದರಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಹೇಳಿದರು.

VISTARANEWS.COM


on

Development of Gaanagapura kshethra on Pandharpur, Thulajapur model says DC Fauzia Tarannum
Koo

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಶ್ರೀ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿಯನ್ನು ಪಂಢರಪುರ, ತುಳಜಾಪುರ ಮಾದರಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ (Kalaburagi News) ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ದತ್ತಾತ್ತೇಯ ದೇವಸ್ಥಾನದ ಹಾಗೂ ದೇವಸ್ಥಾನದ ವ್ಯಾಪ್ತಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ತಯಾರಿಸಲಾದ ಮಾಸ್ಟರ್ ಪ್ಲಾನ್‌ಗೆ ಮಂಜೂರಾತಿ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಜತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಗಾಣಗಾಪುರ ಕ್ಷೇತ್ರ ಈ ಭಾಗದ ದೊಡ್ಡ ಕ್ಷೇತ್ರವಾಗಿದೆ. ಪ್ರತಿನಿತ್ಯ ನೂರಾರು ಭಕ್ತರು ದರುಶನ ಪಡೆಯಲು ಆಗಮಿಸುತ್ತಾರೆ. ಇದನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಅದರಂತೆ ಕೆಲಸ ಮಾಡಲಾಗುವುದು. ಭಕ್ತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗತ್ತದೆ ಎಂದರು.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಅಫಜಲಪುರ ಶಾಸಕ ಎಂ.ವೈ. ಪಾಟೀಲ ಮಾತನಾಡಿ, ಪ್ರಸಾದ ಯೋಜನೆ ಅಡಿಯಲ್ಲಿ ಪ್ತಸ್ತಾಪಿಸಲಾದ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಸರ್ಕಾರಕ್ಕೆ ಕಳುಹಿಸಿ ಅನುಮೋದನೆ ಪಡೆಯಬೇಕು. ಎಲ್ಲಾ ಅಧಿಕಾರಿಗಳು ತಮಗೆ ನೀಡಿದ ಕೆಲಸ ಕಾರ್ಯಗಳನ್ನು ಜವಬ್ದಾರಿಯಿಂದ ನಿರ್ವಹಿಸಬೇಕು ಎಂದು ಸಭೆಯ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಮಾತನಾಡಿ, ದತ್ತಾತ್ತೇಯ ದೇವಸ್ಥಾನಕ್ಕೆ ಬಂದಂತಹ ಭಕ್ತರಿಗೆ ನಿತ್ಯ ಅಭಿಷೇಕ, ಪೂಜೆ ಮಾಡಲು ಪ್ರತ್ಯೇಕ ಅಭಿಷೇಕ ಕೋಣೆ ವ್ಯವಸ್ಥೆ ಮಾಡಬೇಕು, ಬಸ್ ಸ್ಟ್ಯಾಂಡ್‍ವರೆಗೆ ಹಾಗೂ ದೇವಸ್ಥಾನದಿಂದ ಹನುಮಾನ ದೇವಸ್ಥಾನದವರೆಗೆ ವಾಕ್ ವೇವ್ ಅಭಿವೃದ್ಧಿ ಮಾಡಬೇಕು ಎಂಬ ವಿಷಯವನ್ನು ಅಧಿಕಾರಿಗಳು ಚರ್ಚಿಸಿದರು.

ದತ್ತಾತ್ತೇಯ ದೇವಸ್ಥಾನದಲ್ಲಿ ವ್ಯಾಪ್ತಿಯಲ್ಲಿ ಬರುವ ಸಂಗಮ ದೇವಸ್ಥಾನ, ಕಲ್ಲೇಶ್ವರ ದೇವಸ್ಥಾನ ಹಾಗೂ ಚಿದಾನಂದ ದೇವಸ್ಥಾನಗಳ ಭದ್ರತಾ ಹಿತದೃಷ್ಟಿಯಿಂದ ಪ್ರತ್ಯೇಕ ಪೊಲೀಸ್ ಸಿಬ್ಬಂದಿಗಳನ್ನು ಪಂಢರಾಪುರ, ತುಳಜಾಪುರ ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಜಿ ಶಾಸಕ ಮಾಲೀಕಯ್ಯ ವಿ. ಗುತ್ತೇದಾರ ಹೇಳಿದರು.

ದೇವಸ್ಥಾನಕ್ಕೆ ಬೇಕಾಗುವ ಎಲ್ಲ ರೀತಿಯಾಗಿ ಪ್ಲ್ಯಾನ್ ಮಾಡಿ, ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಇದನ್ನೂ ಓದಿ: Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

ತಾಪಡೇ ಧರ್ಮಶಾಲೆಯ ಹತ್ತಿರ ಪಂಚಾಯತ್ ಜಾಗವಿದ್ದು, ಬಂದಂತಹ ಭಕ್ತರಿಗೆ ನೆರವಾಗುವಂತೆ ಶೌಚಾಲಯ ನಿರ್ಮಾಣ ಮಾಡಬೇಕು. ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ದರ್ಶನಕ್ಕಾಗಿ ನಿರ್ಮಿಸಲಾದ ಕಿಂಡಿಯ ಕಿರಿದಾಗಿದ್ದು, ಭಕ್ತರಿಗೆ ದೇವರು ಕಾಣುವಂತೆ ದೊಡ್ಡದಾಗಿ ಮಾರ್ಪಡಿಸುವುದು ದೇವಸ್ಥಾನದ ಅರ್ಚಕರೊಂದಿಗೆ ಚರ್ಚಿಸಿ, ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದರು.

ವಿಶೇಷವಾಗಿ ದೇವಸ್ಥಾನಕ್ಕೆ ಪ್ರತಿ ಹುಣ್ಣೆಮೆಯ ದಿನದಂದು ನಾನಾ ರಾಜ್ಯಗಳಿಂದ ಭಕ್ತರು ದೇವರ ದರ್ಶನಕ್ಕಾಗಿ ಬರುತ್ತಾರೆ. ಬಂದಂತಹ ಭಕ್ತರು ತಮ್ಮ ಭಕ್ತಿ ಸೇವೆಯನ್ನು ಹಣದ ಮೂಲಕ ಸಂದಾಯ ಮಾಡುತ್ತಿದ್ದು, ಧಾರ್ಮಿಕ ದತ್ತಿ ಇಲಾಖೆಗೆ ಸರಿಯಾಗಿ ಪಾವತಿಯಾಗದೇ ಇರುವ ಕುರಿತು ಭಕ್ತಾಧಿಗಳು ದೂರು ನೀಡಿದ್ದು, ಪ್ರತಿ ಹುಣ್ಣೆಮೆಯಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ದೇವಾಲಯದ ವತಿಯಿಂದ ವಿಶೇಷ ದರ್ಶನಕ್ಕೆ ಪಾಳಿ ಪ್ರಕಾರ ರಸೀದಿಗಳನ್ನು ನೀಡಲಾಗುತ್ತಿದೆ. ಕೆಲವು ಸಂದರ್ಭಗಳಲ್ಲಿ ಮಧ್ಯವರ್ತಿಗಳು ಕಂಡುಬರುತ್ತಾರೆ, ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಕ್ರಮ ಜರುಗಿಸಲು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಪೊಲೀಸರು ತಮಗೆ ನೀಡಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಕರ್ತವ್ಯ ಲೋಪ ಆಗದಂತೆ ಕ್ರಮವಹಿಸಬೇಕು. ದೇವಸ್ಥಾನದ ಹುಂಡಿ ಪೆಟ್ಟಿಗೆಯ ಎಣಿಕೆ ಕಾರ್ಯವನ್ನು ದೇವಸ್ಥಾನದ ಸಿಬ್ಬಂದಿ ಬದಲಾಗಿ ಬ್ಯಾಂಕ್ ಸಿಬ್ಬಂದಿ ಮುಖಾಂತರ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.

ಇದನ್ನೂ ಓದಿ: IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

ಸಭೆಯಲ್ಲಿ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಆಫ್ರೀನ್, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ದೇವಾಲಯದ ಆರ್ಚಕರು, ತಾಲೂಕು ಪಂಚಾಯಿತಿ ಅಧ್ಯಕ್ಷರು, ಸಮಾಜದ ಮುಖಂಡರು ಭಾಗವಹಿಸಿದ್ದರು.

Continue Reading
Advertisement
Lok Sabha Speaker
ದೇಶ55 seconds ago

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

actor producer and Cow lover Mahendra Munnoth donated 51 lakh rupees to cow shelter
ಬೆಂಗಳೂರು2 mins ago

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bhaavaramayana Ramavatarana book release programme on June 29 in Bengaluru
ಕರ್ನಾಟಕ4 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ8 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Hijab Ban
ದೇಶ8 mins ago

Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

honey trap harish gowda
ಕ್ರೈಂ14 mins ago

Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ!

Kangana Ranaut Chirag Paswan In Parliament
ಬಾಲಿವುಡ್26 mins ago

Kangana Ranaut: ಸಂಸತ್ತಿನ ಹೊರಗೆ ಕೈ ಕುಲುಕಿ ಸಂತಸದ ಕ್ಷಣ ಹಂಚಿಕೊಂಡ ಚಿರಾಗ್ ಪಾಸ್ವಾನ್-ಕಂಗನಾ!

Viral Video
Latest44 mins ago

Viral Video: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

Terrorist Killed
ದೇಶ44 mins ago

Terrorist Killed: ಮುಂದುವರಿದ ಉಗ್ರರ ಬೇಟೆ; ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Viral Video
Latest48 mins ago

Viral Video: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌