ವಾಕಿಂಗ್‌ ಚಿತ್ರಗಳು ಅಂಕಣ | ಮನಸ್ಸನ್ನು ಓದಿ ಕತೆ ಬರೆಯಬಲ್ಲ ಮೆಶೀನು! - Vistara News

ಅಂಕಣ

ವಾಕಿಂಗ್‌ ಚಿತ್ರಗಳು ಅಂಕಣ | ಮನಸ್ಸನ್ನು ಓದಿ ಕತೆ ಬರೆಯಬಲ್ಲ ಮೆಶೀನು!

ಮನಸ್ಸಿನ ಮಾತುಗಳನ್ನು ತಾನೇ ತಾನಾಗಿ ಅರ್ಥ ಮಾಡಿಕೊಂಡು (mind reading) ಅದನ್ನು ಕಾಗದಕ್ಕೋ ಕಂಪ್ಯೂಟರಿಗೋ ಇಳಿಸಬಲ್ಲ ಟೆಕ್ನಾಲಜಿ ಬಂದರೆ ಹೇಗಿರುತ್ತದೆ? ಅದೂ ಹತ್ತಿರಲ್ಲೇ ಇದೆಯಾ? ಮೇಘನಾ ಸುಧೀಂದ್ರ ಬರೆಯುತ್ತಾರೆ…

VISTARANEWS.COM


on

machine
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
meghana

ಈ ಅಂಕಣ ಬರೆಯೋಕೆ ಒಪ್ಪಿಕೊಂಡಾಗ ನಾನು ದಿನಕ್ಕೆ ಮಿನಿಮಮ್ 10 ಸಾವಿರ ಸ್ಟೆಪ್ಸ್ ನಡೆಯುತ್ತಿದ್ದೆ. 10 ಸಾವಿರ ಹೆಜ್ಜಗಳನ್ನು ಆಯಾಸ ಇಲ್ಲದೇ ಹಾಕುತ್ತಿದ್ದೆ. 10 ಸಾವಿರ ಹೆಜ್ಜೆಗಳು ನನಗೆ ನನ್ನ ವಯಸ್ಸಿನ ಅಲ್ಲದವರ ಗೆಳೆತನವನ್ನು ತಂದುಕೊಟ್ಟಿತ್ತು. ಬೆಳಗ್ಗೆ ಬೆಳಗ್ಗೆ ಬೇಗ ಪಾರ್ಕಿಗೆ ಹೋದರೆ ಸುಮ್ಮನೆ ಟೈಮ್ ಪಾಸ್ ಮಾಡುವವರು ಸಿಗೋದಿಲ್ಲ. ನಿಜವಾಗಿಯೂ ಒಂದು ಗುರಿ ಇಟ್ಟುಕೊಂಡು ವಾಕ್ ಮಾಡೋದಕ್ಕೆ ಬರುತ್ತಾರೆ. ಆ ಗುರಿ ಅವರ ತೂಕ ಕಡಿಮೆ ಮಾಡಿಕೊಳ್ಳೋದು ಆಗಿರಬಹುದು ಅಥವಾ ಒಳ್ಳೆ ಗಾಳಿ ಸೇವನೆ ಆಗಿರಬಹುದು ಅಥವಾ ವಿಟಮಿನ್ ಡಿಗೋಸ್ಕರ ಎಳೆ ಬಿಸಿಲೇ ಆಗಿರಬಹುದು, ಇವೆಲ್ಲವೂ ಅವಶ್ಯಕ ಎಂದು ಬಂದಿರುತ್ತಾರೆ. ಮೊದಲು ಕೆಲಸ ಆಮೇಲೆ ಮಾತು, ನಂತರ ಷುಗರ್‌ಲೆಸ್ ಕಾಫಿ. ಇದು ಬೆಳಗ್ಗೆ ಬೆಳಗ್ಗೆ ಬರುವವರ ಕಥೆ.

ಇನ್ನು ಸ್ವಲ್ಪ ಸೂರ‍್ಯ ನೆತ್ತಿಯ ಹತ್ತಿರತ್ತಿರ ಬರುವಾಗ ಬರುವವರು ಖಾಲಿ ಟೈಮ್ ಪಾಸೇ. ಮನೆಯ ವಿಷಯಗಳನ್ನು ಆಚೆ ಕಡೆ ಕಕ್ಕೋದಕ್ಕೆ ಬರುತ್ತಾರೆ. ಒಂದು 4 ದಿನ ಅದೇ ಸಮಯಕ್ಕೆ ನಾವೂ ವಾಕಿಂಗ್ ಹೋದರೆ ಅವರ ಮನೆಯ ಸೀರಿಯಲ್ ಕಥೆ ಗೊತ್ತಾಗತ್ತೆ. ನನಗೊಂದು ಅನುಭವ ಆಗಿತ್ತು. ಒಂದು ಅಂಕಲ್ ಎರಡು ವರ್ಷದ ಹಿಂದೆ ವಾಕಿಂಗ್ ಬರುತ್ತಿದ್ದರು. ನಾನು ಚಳಿಗಾಲದಲ್ಲಿ ಸೋಂಬೇರಿಯಾಗಿ ಲೇಟಾಗಿ ವಾಕಿಂಗ್ ಹೋಗುತ್ತಿದ್ದೆ. ಅಂಕಲ್ ಬಹಳ ಕಷ್ಟ ಪಟ್ಟು ಮೊದಲ ಮಗನಿಗೆ ಮದುವೆ ಮಾಡಿದ್ದರು. ಈಗ ಅವನು ಬೇರೆ ಮನೆಗೆ ಹೋಗುತ್ತೇನೆ ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ ಅಂತೆ. ಅದನ್ನು ಬೇಜಾರಿನಿಂದ ಹೇಳಿಕೊಳ್ಳುತ್ತಿದ್ದರು. “ಸೊಸೆ ಬಂದ ಮೇಲೆ ಮಗ ಬದಲಾಗಿಬಿಟ್ಟ” ಎಂದು ಕಣ್ಣೀರು ಹಾಕಿದ್ದರು. ಅದೇ ಸೇಮ್ ಅಂಕಲ್ ರೀಸೆಂಟಾಗಿ ಅವರ ಎರಡನೆಯ ಮಗನಿಗೂ ಮದುವೆ ಮಾಡಿದ್ದಾರೆ. 2 ತಿಂಗಳಲ್ಲೇ ಎರಡನೇ ಮಗನೂ ಇವರ ಮನೆಯಿಂದ ಬೇರೆ ಮನೆಗೆ ಹೋಗುತ್ತಾನಂತೆ ಎಂದು ಅಲವತ್ತುಕೊಳ್ಳುತ್ತಿದ್ದರು. “ಎರಡನೆಯ ಸೊಸೆಯೂ ಹಾಗೇನೆ” ಎಂದು ಹೇಳಿಕೊಳ್ಳುತ್ತಿದ್ದರು. ನನಗೆ ಇದೊಂದು ಅಪ್ಪಟ ಟ್ವಿಸ್ಟ್ ಇರುವ ಕಥೆ. ಲಾಜಿಕಲಿ ಯೋಚಿಸಿದರೆ ಇಲ್ಲಿ ದೊಡ್ಡವರದ್ದೇ ಏನೋ ಸಮಸ್ಯೆ ಇದೆ. ಅದಕ್ಕೆ ಎರಡಕ್ಕೆ ಎರಡೂ ವೇರಿಯಬಲ್ ಉಲ್ಟಾ ಹೊಡೆದಿದೆ. ಆದರೆ ಇದನ್ನು ಜನಕ್ಕೆ ಗೋಳಿನ ರೂಪದಲ್ಲಿ, ಅಸಹಾಯಕ ಪರಿಸ್ಥಿತಿಯಲ್ಲಿ ಮೊದಲು ತಾವೇ ಹೇಳಿಬಿಟ್ಟರೆ ಅಲ್ಲಿಗೆ ಅವರು ವಿಕ್ಟಿಮ್ ಆಗಿಬಿಡುತ್ತಾರೆ. ಹೇಳದೇ ಇರುವವರು ವಿಲನ್ನುಗಳು. ಇಂತಹ ಟ್ವಿಸ್ಟೆಡ್ ಸ್ಟೋರೀಸ್‌ಗಳ ಮಹಾಪೂರ ಕೆಲವೊಮ್ಮೆ ಕಿವಿಗೆ ಕೇಳಲು ಸಿಗುತ್ತದೆ. ಎಲ್ಲಿದ್ದರೂ ಒಂದು ಕಥೆ ಹುಡುಕುವ ನನ್ನಂಥವರಿಗೆ ಇದು ಹೇಳಿ ಮಾಡಿಸಿದ ಚಿತ್ರ.

ಆದರೆ ಎರಡನೆಯ ವಾಕಿಂಗ್ ಚಿತ್ರ ಬರೆಯುವಷ್ಟರಲ್ಲೇ ನನ್ನ ವಾಕಿಂಗ್ ನಿಂತು ಹೋಯಿತು. ಮೊದಲನೆಯ ಕಾರಣ ಬೆಂಗಳೂರಿನಲ್ಲಿ ಸುರಿಯುತ್ತಿದ್ದ ಧಾರಾಕಾರ ಮಳೆ. ಬೆಳಗ್ಗೆ, ರಾತ್ರಿ ಯಾವ ವ್ಯತ್ಯಾಸವೂ ಗೊತ್ತಾಗದೇ ಗಡ ಗಡ ನಡುಗುವ ಛಳಿಯಲ್ಲಿ ಬೆಂಗಳೂರು ಮಳೆಯಲ್ಲಿ ನೆಂದಿತ್ತು. ಈ ಧಾರಾಕಾರ ಮಳೆಯಲ್ಲಿ ವಾಕಿಂಗ್ ಬಂದರೆ ಕಷ್ಟ ಎಂದು ಈ ಬಿಬಿಎಂಪಿಯವರು ಪಾರ್ಕಿನ ಗೇಟುಗಳಿಗೆ ಬೀಗ ಹಾಕಿಬಿಟ್ಟಿದ್ದರು. ಇದೊಂಥರ ಮಳೆ ಬಂದರೆ ಏನೂ ಕೆಲಸ ಮಾಡದೇ ಮನೆಯಲ್ಲಿ ಇರಿ ಎಂದು ಹೇಳಿದ ಹಾಗಾಯಿತು. ಇನ್ನೊಂದು ಒಂದು ಹೊಸ ಪುಸ್ತಕ ಬರೆಯಲು ಒಪ್ಪಿಕೊಂಡಿದ್ದು. ದಿನಕ್ಕೆ ಸಲೀಸಾಗಿ 10 ಸಾವಿರ ಸ್ಟೆಪ್ಸ್ ಹಾಕುತ್ತಿದ್ದವಳು ಒಂದಷ್ಟು ಸಾವಿರ ಪದಗಳನ್ನ ಬರೆಯಬೇಕಾದರೆ ಮಾಡುವ ಸರ್ಕಸ್ಸುಗಳು ಒಂದೆರಡಲ್ಲ.

ಬೆಳಗ್ಗೆ ಬೆಳಗ್ಗೆ ಎದ್ದು ಒಂದು ಲೆಕ್ಕಾಚಾರ ಹಾಕಿ ಪ್ಯೂರ್ ಡೇಟಾ ಸೈಂಟಿಸ್ಟ್ ಹಾಗೆ ಒಟ್ಟು ಇಷ್ಟು ಪದಗಳು, ಒಂದು ದಿನಕ್ಕೆ ಇಷ್ಟಾದರೂ ಪದಗಳು ಬರೆಯಬೇಕು, ಅದಕ್ಕೆ ಅಧ್ಯಯನ ಎರಡು ಗಂಟೆ ಬೇಕು, ಹೀಗೆ ಲೆಕ್ಕ ಹಾಕಿಕೊಂಡು ಯಾವ ರೇಂಜಿಗೆ ತಯಾರಾದೆ ಎಂದರೆ ನನ್ನ ಪಿಯೂಸಿ ಎಕ್ಸಾಮಿಗೂ ಈ ರೀತಿ ಟೈಮ್ ಟೇಬಲ್ ಹಾಕಿಕೊಂಡು ಎಕ್ಸೈಟ್ ಆಗಿದ್ದೆ. ಆದರೆ ದಿನಕ್ಕೆ ಇಷ್ಟು ಶಬ್ದಗಳನ್ನು ಬರೆಯಬೇಕು ಎಂಬ ನನ್ನ ಸ್ತ್ರಿಕ್ಟ್ ವಾಕಿಂಗ್ ರೆಜೀಮಿನ ಹಾಗಿನ ಪ್ಲಾನ್ ಎರಡನೇ ದಿನಕ್ಕೆ ಮಟಾಶ್ ಆಯಿತು. ನಡಿಗೆಯಷ್ಟು ಸುಲಭವೇ ಬರಹ? ಒಂದು ಹೆಜ್ಜೆಯ ನಂತರ ಇನ್ನೊಂದು ಹೆಜ್ಜೆ ಬಂದೇ ಬರುತ್ತದೆ. ಆದರೆ ಒಂದು ಪದದ ನಂತರ ಇನ್ನೊಂದು ಪದ ಬರೋಕೆ ಬಹಳ ಸರ್ಕಸ್ ಮಾಡಬೇಕು. ಅಂತಹ ಒಂದು ಸಂದರ್ಭದಲ್ಲಿ ಪುಸ್ತಕ ಬರೆಯಲು ಒಪ್ಪಿಕೊಂಡ ಕೆಲವು ಗೆಳೆಯರು ಪಬ್ಲಿಷರ್ ಜೊತೆ ಮಾತಾಡಿ 20 ದಿನಕ್ಕೆ ಪುಸ್ತಕ ಕೊಟ್ಟು ಬಿಟ್ಟರು. ಎಂತಹ ಲೇಟ್ ಲತೀಫ್ ನಾನು ಎಂದು ಬೈದುಕೊಂಡೆ.

ಇದನ್ನೂ ಓದಿ | ವಾಕಿಂಗ್‌ ಚಿತ್ರಗಳು ಅಂಕಣ: ಸ್ಮಾರ್ಟ್‌ ವಾಚಿಗೆ ಯಾಮಾರಿಸೋ ಪ್ರೋಗ್ರಾಂಗಳು

ನನ್ನ ಗೆಳೆಯನೊಬ್ಬ ಏನ್ ಪ್ರಾಬ್ಲಂ ಎಂದು ಕೇಳಿದಾಗ, “ಮನಸ್ಸಲ್ಲಿ ಆಲೋಚನೆ ಎಲ್ಲಾ ಬರತ್ತೆ ಮಾರಾಯ, ಕಥೇನೂ ತಲೆಯಲ್ಲಿ ಓಡತ್ತೆ, ಆದರೆ ಅದನ್ನ ಅಕ್ಷರರೂಪಕ್ಕಿಳಿಸೋವಾಗ ಬಹಳ ಟೈಮ್ ಲ್ಯಾಗ್ ಆಗತ್ತೆ” ಎಂದು ಹೇಳುತ್ತಿದ್ದೆ. ಒಂದು ರೀತಿ ನನ್ನ ಆಲೋಚನೆಯನ್ನು ಅಕ್ಷರ ರೂಪಕ್ಕಿಳಿಸೋದಕ್ಕೆ ನನಗೊಂದು ಮೆಷೀನ್ ಬೇಕು ಎಂದು ಹೊಳೆಯಿತು. ನಾವು ಯೋಚಿಸಿದ್ದನ್ನು ಮಾತಾಡಿದರೆ ಟೈಪ್ ಮಾಡುವ ಸಾಧನಗಳೇನೋ ಇದೆ. ಆದರೆ ಇಲ್ಲಿ ಅದನ್ನು ಮಾತಿಗೆ ಇಳಿಸುವಾಗಲೂ ತುಂಬಾ ಭಾವನೆಗಳು ಕಳೆದುಹೋಗುತ್ತವೆ. ಹೀಗಿದ್ದಾಗ ನಮ್ಮ ನ್ಯೂರಾನುಗಳು ಮಾಡುವ ಕೆಲಸವನ್ನು ಒಂದು ಮೆಷೀನ್ ಓದಿದರೆ ಎಷ್ಟು ಆರಾಮ್ ಜೀವನ ಅಲ್ಲವೇ.

ಎಂಐಟಿಯ ಜಾಣರು ಇಂತಹ ಒಂದು ಪ್ರಯೋಗವನ್ನು ಮಾಡಿ ಮುಗಿಸಿದ್ದಾರೆ. ಪ್ರೈವೆಸಿಯ ವಯೋಲೇಷನ್ ಎಂದು ಇನ್ನೂ ಬಳಸಲು ಅನುಮತಿ ಸಿಕ್ಕಿಲ್ಲ. ಅವರ ಪ್ರಯೋಗ ಬಹಳ ಅರ್ಥಪೂವಾದದ್ದು. ಮುಖಕ್ಕೆ ಮೌಂಟ್ ಮಾಡಬಹುದಾದ ಒಂದು ಡಿವೈಸ್ ಹಾಕಿ ಅದರಲ್ಲಿರುವ ಎಲೆಕ್ಟ್ರೋಡ್ಸ್, ಮೆದುಳು ಮುಖಕ್ಕೆ ಕಳಿಸುವ ನ್ಯೂರೋ ಮಸ್ಕ್ಯುಲರ್ ಸಂದೇಶಗಳನ್ನು ಅದು ಓದಿ ಅರ್ಥ ಮಾಡಿಕೊಂಡು ಅದನ್ನು ಬರಹವನ್ನಾಗಿ ಮಾರ್ಪಡಿಸುತ್ತದೆ. ಇದು ಹೈ ಫಂಡಾ. ಒಂದೊಂದು ನ್ಯೂರೋ ಮಸ್ಕ್ಯುಲರ್ ಸಂದೇಶ ಒಂದೊಂದು ಮನಸ್ಸಿನ ಚಿತ್ರಗಳಿಗೆ ಮ್ಯಾಪ್ ಆಗಿರುತ್ತದೆ. ಮೊದಲು ಆ ಡೇಟಾವನ್ನು ನಾವು ಕ್ರೋಢೀಕರಿಸಿ ನಂತರ ಒಬ್ಬೊಬ್ಬರ ಮೆದುಳು ಒಂದೊಂದು ರೀತಿ ಕೆಲಸ ಮಾಡುವುದರಿಂದ ಆ ಮಾಹಿತಿಯನ್ನು ಪರ್ಸನಲೈಸ್ ಮಾಡಿದರೆ ಕೆಲಸ ಮುಗಿಯಿತು. ಒಂದು ಡಿವೈಸ್ ಹಾಕಿಕೊಂಡು ಯೋಚನೆ ಮಾಡುತ್ತಾ ಕುಳಿತರೆ ಒಂದು ಕಥೆ ಟಕ್ ಎಂದು ಬರೆಯಬಹುದು. ಅಥವಾ ಬರೆಸಬಹುದು. ಸದ್ಯಕ್ಕೆ 92% ಅಕ್ಯುರೇಟ್ ಆಗಿ ಈ ಡಿವೈಸ್ ಕೆಲಸ ಮಾಡುತ್ತಿದೆ ಮತ್ತು 15 ನಿಮಿಷಗಳ ಕಾಲ ತಪ್ಪಿಲ್ಲದೇ ಕೆಲಸ ಮಾಡಬಲ್ಲದು. ಇದು ಪ್ರಾಯಶಃ ನಮ್ಮ ಬರೆವಣಿಗೆಗೆ ಸಹಾಯ ಆಗುತ್ತದೆ. ನನ್ನ ಡೆಡ್‌ಲೈನಿಗೆ ಅರಾಮಾಗಿ ಸೆಟ್ ಆಗುತ್ತದೆ, ಇದು ಕ್ವಿಕ್ ಫಿಕ್ಸ್ ಎಂದು ಅನ್ನಿಸಿದರೂ, ಇದು ಬಹಳಷ್ಟು ವೈದ್ಯಕೀಯ ಚಿಕಿತ್ಸೆಗಳಿಗೆ ಉಪಯೋಗವಾಗಬಹುದು ಎಂದು ಹೊಳೆಯಿತು.

ಇದನ್ನೂ ಓದಿ | ಸಾಲಭಂಜಿಕೆ ಅಂಕಣ: ಚೋಮನ ದುಡಿಯೂ ನಮ್ಮ ನುಡಿಯೂ

ಎಪಿಲೆಪ್ಸಿ ಪೇಷೆಂಟುಗಳಿಗೆ ಎಲೆಕ್ಟ್ರೋಡುಗಳನ್ನು ನೇರವಾಗಿ ಮೆದುಳಿನ ಮೇಲ್ಮೈಯಲ್ಲಿ ಅಳವಡಿಸಲಾಗುತ್ತದೆ. ವಿಜ್ಞಾನಿಗಳು ಆ ಎಲೆಕ್ಟ್ರೋಡುಗಳನ್ನು ಶ್ರವಣೇಂದ್ರಿಯ ಕಾರ್ಟೆಕ್ಸ್‌ನಲ್ಲಿ ಮೆದುಳಿನ ಅಲೆಗಳನ್ನು ಮೇಲ್ವಿಚಾರಣೆ ಮಾಡುವ ಕೆಲಸಕ್ಕೆ ಬಳಸಿದರು. ಅವರು ಆ ಡೇಟಾವನ್ನು ತೆಗೆದುಕೊಂಡು ಡಿಕೋಡ್ ಮಾಡಲು ಅಲ್ಗಾರಿದಂಗಳನ್ನು ಬಳಸಿದರು. ಮೆದುಳಿನಲ್ಲಿ ಬರುವ ಸಂಕೀರ್ಣ ಸಮಸ್ಯೆಗಳನ್ನು ಅಥವಾ ಏನಾಗಿದೆ ಎಂದು ಅರಿಯಲು ಇನ್ನು ಮುಂದೆ ಈ ವೇರಬಲ್ ಡಿವೈಸ್‌ಗಳನ್ನು ಬಳಸಬಹುದು. ಈಗಾಗಲೇ ಮೈಕ್ರೋಸಾಫ್ಟ್ ತನ್ನ ಕಂಪ್ಯೂಟರ್ ಅಪ್ಲಿಕೇಷನ್ನುಗಳ ವಾಲ್ಯೂಮ್ ಕಡಿಮೆ ಮಾಡಲು ಒಂದು ಕೀ ಒತ್ತದೆ, ಮೌಸ್ ಕ್ಲಿಕ್ ಮಾಡದೇ “ಸೌಂಡ್ ಕಡಿಮೆ ಮಾಡು” ಎಂದು ಮನಸ್ಸಲ್ಲಿ ಅಂದುಕೊಂಡರೆ ಕಡಿಮೆ ಆಗುವಷ್ಟು ಟೆಕ್ನಾಲಜಿಯನ್ನು ತಂದಿದೆ. ಯಾವಾಗಲೂ ನಿಮ್ಮ ಮನಸಲ್ಲಿ ಏನಿದೆ ಎಂದು ಕೇಳುವ ಫೇಸ್‌ಬುಕ್ ನಮ್ಮ ಮನಸ್ಸಲ್ಲಿರುವ ಹೆಸರನ್ನು ತಿಳಿದುಕೊಂಡು ಅದರ ಮೆಸೆಂಜರಿನಲ್ಲಿ ಮೆಸೇಜು ಕಳಿಸುವ ಟೆಕ್ನಾಲಜಿಯನ್ನು ಅಭಿವೃದ್ಧಿ ಪಡಿಸುತ್ತಿದೆ. ಇನ್ನು ನ್ಯೂರಬಲ್ ಎಂಬ ಕಂಪೆನಿ ಒಂದು AR/VR ಡಿವೈಸ್ ಅಭಿವೃದ್ಧಿಪಡಿಸುತ್ತಿದ್ದೆ. ಅದರಲ್ಲಿ ನಾವು ನೋಡುವ ಸಿನಿಮಾದಲ್ಲಿ ವಿಲನ್ ಏನಾದರೂ ಹೀರೋಯಿನ್ನಿಗೆ ಕಾಟ ಕೊಡುತ್ತಿದ್ದರೆ ಅವಳನ್ನು ಕಾಪಾಡಲು ಹೀರೋ ಬರುವ ಮುಂಚೆ, ನಾವೇ ಮನಸ್ಸಲ್ಲಿ, “ಅವನಿಗೆ ಎರಡು ತದುಕು ಎಂದೋ, ಇಲ್ಲ ಹಿಂದೆ ಕಲ್ಲಿದೆ ಅವನ ಮೇಲೆ ಎತ್ತಾಕುʼʼ ಎಂದು ಹೇಳಿದರೆ ಆ ಕೆಲಸ ಪರದೆಯ ಮೇಲೆ ಆಗುತ್ತದೆ.

ಮನಸ್ಸಿನ ಮಾತನ್ನು ಹೇಳದೆಯೇ ಕೇಳಲು ಮತ್ತು ಅರ್ಥ ಮಾಡಿಕೊಳ್ಳಲು ಇನ್ನು ಮುಂದೆ ನಲ್ಲನೇ ಬೇಕಿಲ್ಲ, ಒಂದು ಕಿರೀಟದಂತಿರುವ ಮೆಷೀನು ಸಾಕು !

(ಅಂಕಣಕಾರ್ತಿ ಮೇಘನಾ ಸುಧೀಂದ್ರ ಕೃತಕ ಬುದ್ಧಿಮತ್ತೆ (AI) ವಲಯದಲ್ಲಿ ಉದ್ಯೋಗಿ. ಇವರ ಜಯನಗರದ ಹುಡುಗಿ, ಲಿಪಿಯ ಪತ್ರಗಳು, ಪ್ರೀತಿ ಗೀತಿ ಇತ್ಯಾದಿ, ಎಐ ಕತೆಗಳು ಕೃತಿಗಳು ಜನಪ್ರಿಯವಾಗಿವೆ. ಓದು, ಚಾರಣ, ಶಾಸ್ತ್ರೀಯ ಸಂಗೀತ ಹವ್ಯಾಸಗಳು. ʼಕನ್ನಡ ಗೊತ್ತಿಲ್ಲʼ ಸಂಸ್ಥೆಯಲ್ಲಿ ಕನ್ನಡೇತರರಿಗೆ ಭಾಷೆ ಕಲಿಸುವ ಕಾಯಕದಲ್ಲಿ ಸಕ್ರಿಯರು.)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಧವಳ ಧಾರಿಣಿ ಅಂಕಣ: ಕಾಮವೆನ್ನುವುದು ಎಂತಹವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುತ್ತಾನೆ.

VISTARANEWS.COM


on

king dasharatha kaikeyi dhavala dharini column
Koo

ಪ್ರಾಣಕ್ಕಿಂತ ಪ್ರಿಯಳಾದ ಸತಿಯಿಂದ ಪ್ರಾಪ್ತವಾದ ಪುತ್ರ ವಿಯೋಗ

dhavala dharini by Narayana yaji

ಧವಳ ಧಾರಿಣಿ ಅಂಕಣ: ಸ ಕೈಕೇಯ್ಯಾ ಗೃಹಂ ಶ್ರೇಷ್ಠಂ ಪ್ರವಿವೇಶ ಮಹಾಯಶಾಃ
ಪಾಣ್ಡುರಾಭ್ರಮಿವಾಕಾಶಂ ರಾಹುಯುಕ್ತಂ ನಿಶಾಕರಃ ৷৷ಅ.ಯೋ.10.11৷৷

ಬಿಳಿಯದಾದ ಮೋಡಗಳಿಂದ ಕೂಡಿದ ಆಕಾಶದಲ್ಲಿ ರಾಹುವಿಗೆ ಗ್ರಾಸವಾಗುವ ಸಲುವಾಗಿ ಚಂದ್ರನು ಪ್ರವೇಶಿಸುವಂತೆ ಮಹಾಯಶೋವಂತನಾದ ರಾಜನು ಭವ್ಯವಾದ ಕೈಕೇಯಿಯ ಅಂತಃಪುರವನ್ನು ಪ್ರವೇಶಿಸಿದನು.

ಕವಿಸಮಯವೆನ್ನುವದು ರಾಮಾಯಣ ಕಾವ್ಯದ ವಿಶೇಷ. ವಾಲ್ಮೀಕಿ ಕಾವ್ಯವನ್ನು ಕೇವಲ ಉಅಪದೇಶಕ್ಕಾಗಿಯಲ್ಲ, ಅದನ್ನು ತಾಳವಾದ್ಯಗಳೊಂದಿಗೆ ರಾಗವಾಗಿ ಹಾಡಲು ಅನುಕೂಲವಾಗುವಂತೆ ಬರೆದಿದ್ದಾನೆ. ಹಾಡುಗಾರಿಕೆಯಲ್ಲಿ ವರ್ಣನೆಗೆ ಮಹತ್ವ ಬರುತ್ತದೆ. ಕಾವ್ಯದ ಮುಂಗಾಣ್ಕೆ ಅಲ್ಲಲ್ಲಿ ವ್ಯಕ್ತವಾಗುತ್ತಾ ಹೋಗುತ್ತದೆ. ಕೈಕೇಯಿಯ ಅರಮನೆಗೆ ಹೋಗುವ ರಾಜನ ಕುರಿತು ವರ್ಣಿಸುವಾಗ ಬಿಳಿಯದಾದ ಮೋಡ, ರಾಹು, ಆಕಾಶ, ಚಂದ್ರ ಎನ್ನುವ ಉಪಮೆಗಳ ಮೂಲಕ ಹೇಳಿದ್ದಾನೆ. ಆಕಾಶ ಎನ್ನುವುದು ಮನಸ್ಸಿನಲ್ಲಿ ಆಸೆಗಳ ವಿಸ್ತಾರದವನ್ನು ಸೂಚಿಸಿದೆ. ಬಿಳಿಯದಾದ ಮೋಡವೆನ್ನುವದು ಅರ್ಥಪೂರ್ಣವಾದ ಉಪಮೆ. ನೀರಿನಿಂದ ಯುಕ್ತವಾದ ಮೋಡ ಕಪ್ಪಾಗಿರುತ್ತದೆ. ಮನಸ್ಸಿನಲ್ಲಿ ತನ್ನ ಮಗನ ಪಟ್ಟಾಭಿಷೇಕದ ಕುರಿತು ಯಾವ ಆಸೆಯನ್ನೇ ಇರಿಸಿಕೊಳ್ಳಲಿ, ಅದೆಲ್ಲವೂ ನೀರಿಲ್ಲದ ಮೋಡದಂತೆ ವ್ಯರ್ಥವಾಗಿ ಹಾರಿಹೋಗುತ್ತದೆ ಎನ್ನುವುದನ್ನು ಹೇಳುತ್ತಾನೆ. ರಾಹು ಮತ್ತು ಕೇತುಗಳು ಭಾರತೀಯ ಖಗೋಳಶಸ್ತ್ರದ ಪ್ರಕಾರ ಎರಡು ವಿರುದ್ಧದಿಕ್ಕುಗಳಲ್ಲಿರುವ ಬಿಂದುಗಳು. ಈ ಬಿಂದುವಿಗೆ ಸೂರ್ಯಚಂದರು ಬಂದಾಗ ಗ್ರಹಣವಾಗುತ್ತದೆ. ಚಂದ್ರ ಮನಸ್ಸಿನ ಕಾರಕ. ಸಂತೊಷ ಮತ್ತು ಕಾಮವಿಕಾರಗಳು ಮನಸ್ಸಿನಲ್ಲಿ ಉತ್ಪನ್ನವಾಗುವಂತವು. ಚಂದ್ರ ತನ್ನ ಪರಿಭ್ರಮಣದಲ್ಲಿ ರಾಹುವಿನ ಬಿಂದುವಿಗೆ ಬಂದಾಗ ಗ್ರಹಣವಾಗಿ ತನ್ನ ಕಾಂತಿಯನ್ನು ಕಳೆದುಕೊಳ್ಳುತ್ತಾನೋ ಅದೇರಿತಿ ರಾಜ ತನ್ನೆಲ್ಲ ಕನಸನ್ನು ಕಳೆದುಕೊಂಡು ನಿಶ್ಚಿತವಾಗಿ ಮರಣದತ್ತ ಸಾಗಲು ಬಂದಿದ್ದಾನೆ ಎನ್ನುವುದನ್ನು ಉಪಮಾಮಲಂಕಾರದಲ್ಲಿ ಕವಿ ವರ್ಣಿಸಿದ್ದಾನೆ.

ದಶರಥನ ಪಾತ್ರವನ್ನು ವಿವೇಚಿಸುವಾಗ ಮೊದಲಿನಿಂದಲೂ ಕಂಡುಬಂದ ಅಂಶವೆಂದರೆ ಮಹಾನ್ ರಾಜರ್ಶಿಯಾಗಿದ್ದ ದೊರೆ ರಾಮನ ಕುರಿತು ಕಡುಲೋಭಿಯಾಗಿ ಪರಿವರ್ತನೆಯಾಗಿರುವುದನ್ನು ಗಮನಿಸಬಹುದು. ದಶರಥನ ವ್ಯಕ್ತಿತ್ವವೆನ್ನುವುದು ಸಂಕೀರ್ಣವೇನೂ ಅಲ್ಲ. ಶೂರನಾಗಿದ್ದ; ಸೂರ್ಯವಂಶದ ಧ್ಯೇಯೋದ್ಧಶವಾದ ಧರ್ಮಸ್ಥಾಪನೆಯ ವಿಷಯದಲ್ಲಿ ಸದಾ ನಿರತನಾಗಿದ್ದ. ಅದೇ ಕಾಲಕ್ಕೆ ಅಯೋಧ್ಯೆಯ ಸಿಂಹಾಸನವೆನ್ನುವುದು ಗಣತಂತ್ರವ್ಯವಸ್ಥೆಯಲ್ಲಿ ಇತ್ತು. ರಾಜರಾಗುವವರು ಯಾರೇ ಆದರೂ ಅದಕ್ಕೆ ಪ್ರಜೆಗಳ ಒಪ್ಪಿಗೆ ಪಡೆಯಬೇಕಾಗಿತ್ತು. ಪ್ರಾಚೀನ ಗ್ರೀಸಿನಲ್ಲಿದ್ದ ರೀತಿಯ ಗಣತಂತ್ರವ್ಯವಸ್ಥೆ ಅಯೋಧ್ಯೆಯಲ್ಲಿ ಇತ್ತು ಎನ್ನುವುದಕ್ಕೆ ವಾಲ್ಮೀಕಿಯ ರಾಮಾಯಣವನ್ನು ಮತ್ತು ಮತ್ತು ಪ್ಲೇಟೋವಿನ “The Republic” ಕೃತಿಯನ್ನು ತುಲನೆ ಮಾಡಿದಾಗ ಅನಿಸುತ್ತದೆ. ಅದನ್ನು ಕೇವಲ ತೋರಿಕೆಗಾಗಿ ಆಚರಣೆಯಲ್ಲಿ ಇಟ್ಟು ತನಗೆ ಬೇಕಾದಂತೆ ಉತ್ತರಾಧಿಕಾರಿಯನ್ನು ಆರಿಸುವ ತಂತ್ರವನ್ನು ದಶರಥ ಅನುಸರಿಸಿರುವುದು ರಾಮನಿಗೆ ಪಟ್ಟಗಟ್ಟಬೇಕೆನ್ನುವ ಸಂದರ್ಭದಲ್ಲಿ ಕಾಣಬಹುದು. ಆತನ ಚಾಣಾಕ್ಷನಡೆಯ ಒಳಗಿರುವದು ತನ್ನದು ಎನ್ನುವ ಮೋಹದ ಅರಿವು ಎನ್ನುವುದು ಯಾರ ಗಮನಕ್ಕೂ, ಹೆಚ್ಚೇನು ರಾಮನ ಅರಿವಿಗೂ ಬಾರದ ಹಾಗೆ ನಡೆದುಕೊಂಡಿದ್ದಾನೆ. ಪರಿಪೂರ್ಣ ವ್ಯಕ್ತಿತ್ವದ ರಾಮನಂತಹ ದೊರೆ ತಮಗೆ ಸಿಗುತ್ತಾನೆ ಎನ್ನುವ ಕಾರಣಕ್ಕೆ ಪ್ರಜೆಗಳು ಸಂಭ್ರಮಿಸುವುದು ಸಹಜವೇ ಆಗಿದೆ. ತಾನು ಅಶ್ವಪತಿಗೆ ಕೊಟ್ಟ ಮಾತುಗಳು ಹೀಗೆ ಮರೆಯಾದ ಕಾರಣ ಅದು ದೊರೆಗೆ ಅಪರಿಮಿತ ಸಂತೋಷವನ್ನು ಕೊಟ್ಟಿದೆ. ಇಳಿವಯಸ್ಸಿನಲ್ಲಿ ಕಿರಿಯ ಚಲುವೆಯಾದ ಕೈಕೇಯಿಯ ಹಿಂದೆ ಬಿದ್ದಿದ್ದ ದೊರೆಗೆ ವೃದ್ದಾಪ್ಯದಲ್ಲಿ ಮಕ್ಕಳಾದ ಮೇಲೆ ರಾಮ ಎನ್ನುವ ಕುರುಡು ಮೋಹ ಆವರಿಸಿಕೊಂಡಿತ್ತು. ಆತನ ಕುರಿತು ಮಂಥರೆ ಹೇಳುವ ಮಾತು

ಧರ್ಮವಾದೀ ಶಠೋ ಭರ್ತಾ ಶ್ಲಕ್ಷ್ಣವಾದೀ ಚ ದಾರುಣಃ
ಶುದ್ಧಭಾವೇ ನ ಜಾನೀಷೇ ತೇನೈವ ಮತಿಸಂಧಿತಾ৷৷ಬಾ.ಕಾಂ.7.24৷৷

ನಿನ್ನ ಗಂಡನು ಮೇಲೆಮೇಲೆ ಧರ್ಮಸಮ್ಮತವಾದ ಮಾತುಗಳನ್ನು ಆಡುತ್ತಿದ್ದರೂ ಅಂತರಂಗದಲ್ಲಿ ಬಹಳ ಕಪಟಸ್ವಭಾವದವನು. ಬಾಯಲ್ಲಿ ಮೃದುವಾದ ಮಾತುಗಳನ್ನು ಆಡುತ್ತಿದ್ದರೂ ನಂಬಿಸಿ ಮೋಸಮಾಡುವುದು ಹೇಗೆಂದು ಯೋಚಿಸುತ್ತಿರುತ್ತಾನೆ. ಕರುಣೆಯೆನ್ನುವುದೇ ಇಲ್ಲ, ಬಹಳ ಋಜುಸ್ವಭಾವದವಳಾದ ನೀನು ಆತನ ಕಪಟವನ್ನು ಅರಿಯದೇ ಹೋದೆಯಲ್ಲವೇ.

ಮಂಥರೆ ಇಲ್ಲಿ ಕೈಕೇಯಿಯ ಮನಸ್ಸನ್ನು ತಿರುಗಿಸಲು ಹೇಳಿರುವಳಾದರೂ ಪಾಯಸವನ್ನು ತನ್ನ ರಾಣಿಯರಿಗೆ ಹಂಚುವಲ್ಲಿಂದ ಹಿಡಿದು ರಾಮಪಟ್ಟಾಭಿಷೇಕದ ವರೆಗೆ ದಶರಥ ಏಕಪಕ್ಷೀಯವಾಗಿ ತೆಗೆದುಕೊಂಡ ತೀರ್ಮಾನವನ್ನು ಗಮನಿಸಿದಾಗ ನಮ್ಮ ದೌರ್ಬಲ್ಯ ಶತ್ರುಗಳಿಗೆ ಆಯುಧ ಎನ್ನುವ ನೀತಿಶಾಸ್ತ್ರದ ಮಾತನ್ನು ನೆನಪಿಸುತ್ತದೆ. ಅಂತೂ ತನ್ನ ಕಾರ್ಯವಾದ ರಾಮನ ಪಟ್ಟಾಭಿಷೇಕದ ವಿಷಯದಲ್ಲಿ ಯಾವ ತೊಂದರೆಯಿಲ್ಲದೇ ಸಾಂಗವಾಗಿ ನಡೆಯುವುದು ಎನ್ನುವ ನಂಬಿಕೆಯೊಂದಿಗೆ ಸಂತೊಷವೆನ್ನುವುದು ಅತಿರೇಕಕ್ಕೆ ಹೋಗಿತ್ತು. ಸಂತೋಷ ಅತಿರೇಕಕ್ಕೆ ಹೋದಾಗ ಅದು ಮದಕ್ಕೆ ತಿರುಗುತ್ತದೆ. ಮದವೆನ್ನುವುದು ಕಾಮಕ್ಕೆ ಮೂಲ. ಅದನ್ನು ಇಳಿಸಿಕೊಳ್ಳಲು ಸಂಗಾತಿಯನ್ನು ಹುಡಿಕಿಕೊಳ್ಳುವುದು ಜೀವಿಗಳ ಸಹಜ ಕ್ರಿಯೆ. ಅರಸನಿಗೆ ತನ್ನ ಆಲೋಚನೆಯನ್ನು ಹಂಚಿಕೊಳ್ಳುವ ಸಂಗಾತಿಯ ಅಗತ್ಯ ತುರ್ತಾಗಿ ಎದುರಾಯಿತು. ವಶಿಷ್ಠರಲ್ಲಿಯಾಗಲಿ, ವಾಮದೇವರಲ್ಲಿಯಾಗಲಿ ಇದನ್ನೆಲ್ಲವನ್ನು ಹಂಚಿಕೊಳ್ಳಲು ಅವರೇನು ಸಾಮಾನ್ಯದವರಾಗಿರಲಿಲ್ಲ.

ರಾಮ ಯುವರಾಜ ಪಟ್ಟಕ್ಕೆ ಅರ್ಹನಾಗಿದ್ದರೂ, ಅಯೋಧ್ಯೆಯಲ್ಲಿ ಆ ಸಾಯಂಕಾಲ ನಡೆದ ಸಿದ್ಧತೆ ದಶರಥನ ವೈಯಕ್ತಿಕ ಕಾಮನೆಯ ಫಲವಾಗಿತ್ತು. ಪ್ರಜೆಗಳು ರಾಮನನ್ನು ರಾಜನ್ನಾಗಿ ನೋಡಲು ಬಯಸಿದ್ದರೆನ್ನುವುದು ನಿಜವಾದರೂ ಇಲ್ಲಿಮೊದಲ ಸಾರಿ ರಾಮನ ಪಟ್ಟಾಭಿಷೇಕಕ್ಕಾಗಿ ದಶರಥ ಹೇಗೆಲ್ಲಾ ಮಂಡಿಗೆಯನ್ನು ಹಾಕಿದ್ದ ಎನುವುದನ್ನು ಹಿಂದಿನ ಭಾಗಗಳಲ್ಲಿ ನೋಡಿದ್ದೇವೆ. ರಾಮನನ್ನು ಕೇವಲ ಮಗನಾಗಿ ಮಾತ್ರ ನೋಡಿದ್ದಾನೆಯೇ ಹೊರತು ವಿಶ್ವಾಮಿತ್ರ, ವಶಿಷ್ಠರು, ಪರಶುರಾಮ ಮೊದಲಾದವರಿಗೆ ರಾಮನ ಅವತಾರದ ಹಿಂದಿರುವ ದೈವತ್ವದ ದರ್ಶನ ಅರಸನಿಗೆ ಸಾಯುವವರೆಗೂ ಆಗಲೇ ಇಲ್ಲ. ರಾಮನಿಗೆ ಪಟ್ಟಗಟ್ಟುವ ತನ್ನ ಮನಸ್ಸಿನ ಮಂಡಿಗೆ ಯಶಸ್ವಿಯಾದ ವಿಷಯವನ್ನು ವಿವರವಾಗಿ ವರ್ಣಿಸಿ ಹೇಳಲು ಕಿರಿಯ ರಾಣಿಯಷ್ಟು ಆಪ್ತರು ಬೇರೆ ಯಾರೂ ಇಲ್ಲ. ಕೌಸಲ್ಯೆಗೆ ಹೇಳಿದರೆ ಆಕೆಗೆ ಸಂತೋಷವೇನೋ ಆಗಬಹುದಾದರೂ ಆಕೆಯಲ್ಲಿ ಕಾಮದ ಆಕರ್ಷಣೆ ದೊರೆಗೆ ಬತ್ತಿಹೋಗಿತ್ತು. ಸುಮಿತ್ರೆಯೂ ಅಷ್ಟೇ. ಚಿಕ್ಕವಯಸ್ಸಿನ ಕೈಕೆಯಿಯನ್ನು ಚೆನ್ನಾಗಿ ಮರಳುಮಾಡಿ ಇಟ್ಟುಕೊಂಡಿದ್ದ. ತನಗೆ ಬೇಕಾದ ಹಾಗೆ ಸುಖವನ್ನು ಅವಳಿಂದ ಪಡೆಯುತ್ತಿದ್ದ. ಆಕೆ ರಾಜನಿಗೋಸ್ಕರ ಅಲಂಕರಿಸಿಕೊಂಡು ನಗುಮುಖದಿಂದ ಯಾವತ್ತಿಗೂ ಸ್ವಾಗತಿಸಲು ಸಿದ್ಧಳಾಗಿರುತ್ತಿದ್ದಳು. ಕೈಕೇಯಿ ಮಂಥರೆಯ ಮಾತಿನಿಂದ ಪ್ರಭಾವಿತಳಾಗಿ ರಾಜನನ್ನು ಮಣಿಸಲೇ ಬೇಕೆಂದು ಕೋಪಾಗಾರವನ್ನು ಸೇರಿದರೆ ಇಳಿವಯಸ್ಸಿನ ರಾಜ “ರಾಮಾಭಿಷೇಕದ ಸಂತೋಷದ ವಾರ್ತೆಯನ್ನು ಕೈಕೇಯಿಗೆ ತಿಳಿಸಿ ರತಿಸುಖವನ್ನು ಪಡೆಯಬೇಕೆಂದು ಬಯಸಿ ಅತ್ಯಾಸೆಯಿಂದ ಕೈಕೇಯಿಯ ಅಂತಃಪುರಕ್ಕೆ ಧಾವಿಸಿ ಬರುತ್ತಾನೆ”.

ಕೈಕೇಯಿ ಅಂತಃಪುರದಲ್ಲಿ ಇಲ್ಲವಾಗಿರುವುದನ್ನು ಕಂಡವನಿಗೆ ವ್ಯಾಕುಲವಾಯಿತು. ಪ್ರತಿಹಾರಿ ಹೇಳಿದ “ದೇವ ದೇವಿ ಬೃಶಂ ಕ್ರುದ್ಧಾ ಕ್ರೋಧಾಗಾರಮಭಿದ್ರುತಾ-ಪರಮ ಕ್ರುದ್ಧೆಯಾಗಿ ದೇವಿ ಕೋಪಾಗಾರವನ್ನು ಸೇರಿದ್ದಾಳೆ” ಎನ್ನುವ ಮಾತನ್ನು ಕೇಳಿ ಕಂಗಾಲಾದ. ಕೋಪಾಗಾರಕ್ಕೆ ಧಾವಿಸಿ ನೋಡಿದರೆ ತನ್ನ ಪ್ರೇಯಸಿ ಅಸ್ತವ್ಯಸ್ತವಾಗಿ ನೆಲದ ಮೇಲೆ ಮಲಗಿದ್ದಾಳೆ. ಪ್ರಿಯತಮೆಯನ್ನು ಆಕಾಶದಿಂದ ಚ್ಯುತಳಾದ ಅಪ್ಸರೆಯಂತೆ ಕಂಡವನಿಗೆ ಎದೆಯೊಡೆದು ಹೋಯಿತು. “ನಿಷ್ಕಳಂಕನಾದ ದಶರಥ ಪಾಪಸಂಕಲ್ಪವನ್ನು ಹೊತ್ತ ಕೈಕೇಯಿಯನ್ನು ಕಂಡ” ಎನ್ನುವ ಮಾತು ಇಲ್ಲಿ ಬರುತ್ತದೆ. ಸಂಕಲ್ಪವೆನ್ನುವುದು ಹೊಸ ಕಾರ್ಯಕ್ಕೆ ಹೇತು. ಮುಂದಿನ ಘಟನೆಗೆ ಇಲ್ಲಿ ನಾಂದಿಯಾಗುತ್ತಿದೆ. ಧರ್ಮಮಾರ್ಗದಲ್ಲಿ ಸದಾ ನಡೆಯುತ್ತಿದ್ದ ಅರಸ ಕಾಮಮೋಹಿತನಾಗಿ ಕೈಕೇಯಿಯನ್ನು ಸಮಾಧಾನ ಮಾಡಲು ಹೇಳುವ ಮಾತುಗಳು ಸೂರ್ಯವಂಶಕ್ಕೆ ಹೇಳಿಸಿದ್ದಲ್ಲ.

ಅವಧ್ಯೋ ವಧ್ಯತಾಂ ಕೋ ವಾ ವಧ್ಯಃ ಕೋವಾ ವಿಮುಚ್ಯತಾಮ್.
ದರಿದ್ರಃ ಕೋ ಭವದಾಢ್ಯೋ ದ್ರವ್ಯವಾನ್ಕೋSಪ್ಯಕಿಂಚನಃ৷৷ಅ. ಕಾಂ.10.33৷৷

ಕಾಮವೆನ್ನುವುದು ಎಂತವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುವ ಮಾತುಗಳು ದೊರೆತನಕ್ಕೆ ತಕ್ಕುದಲ್ಲ. ಆತ ಅವಳನ್ನು ಸಮಾಧಾನಿಸುತ್ತಾ “ಪ್ರಿಯತಮೆಯಲ್ಲಿ ನನಗೆ ನಿನಗಿಂತ- ಮನುಜರಲ್ಲಿ ರಾಮನಿಗಿಂತ ಹೆಚ್ಚಿನವರು ಯಾರೂ ಇಲ್ಲ” ಎನ್ನುವಲ್ಲಿ ರಾಮನ ಹೆಸರನ್ನು ಕೇಳಿದ ಆಕೆಗೆ ಮತ್ತುಷ್ಟು ಉರಿ ಹತ್ತಿತು. ದೊರೆ ಮನ್ಮಥನ ಬಾಣಕ್ಕೆ ಈಡಾಗಿರುವುದನ್ನು ಪಕ್ಕಾ ಮಾಡಿಕೊಂಡಳು. ಸ್ವಲ್ಪ ಹೊತ್ತು ಕಾಡಿಸಬೇಕು ಎಂದು ಸುಮ್ಮನಾದವಳು. ದಶರಥನಿಗೆ ಸಹಿಸಲಾಗಿಲ್ಲ. ಆಕೆಯ ರೂಪಲಾವಣ್ಯಕ್ಕೆ ಸೋತಿದ್ದ. ಅವಳ ನೋವನ್ನು ಬಗೆಹರಿಸುವುದು ತನ್ನ ಆದ್ಯ ಕರ್ತವ್ಯವೆಂದು ಬಗೆದ.. ಅದು ತನಕ ತಾನು ಗಳಿಸಿದ ಸುಕೃತದ ಮೇಲೆ ಆಣೆಯಿಟ್ಟು ಅವಳ ಬಯಕೆಯನ್ನು ಈಡೇರಿಸುವೆ ಎಂದು ಅಂಗಲಾಚಿದ.

dhavala dharini king dasharatha

ಆದರೂ ಸುಮ್ಮನಿದ್ದ ಕೈಕೇಯಿಗೆ ಕೊನೆಯದಾಗಿ “ನನ್ನ ರಾಮನಾಣೆಗೂ ನೀನು ಹೇಳುವ ಕಾರ್ಯವನ್ನು ಮಾಡುತ್ತೇನೆ” ಎಂದು ಪ್ರತಿಜ್ಞೆ ಮಾಡಿಬಿಟ್ಟ. ಗಾಳದಲ್ಲಿ ಚಿಕ್ಕಮೀನನ್ನು ಚುಚ್ಚಿ ದೊಡ್ಡಮೀನನ್ನು ಸೆಳೆಯುವಂತೆ ಚಕ್ರವರ್ತಿಯನ್ನು ಮಟ್ಟುಹಾಕಿ ತನ್ನ ಕಾರ್ಯಸಾಧಿಸಲು ಇದೇ ಸಮಯವೆಂದು ತಿಳಿದ ಕೈಕೇಯಿ ಬಯಕೆಯನ್ನು ಹೇಳುವ ಮುನ್ನ ರಾಜನಲ್ಲಿನ ಧರ್ಮಪ್ರಜ್ಞೆಯನ್ನು ಜಾಗ್ರತಗೊಳಿಸಲು “ನೀನು ಮಾಡಿದ ಈ ಪ್ರತಿಜ್ಞೆಯನ್ನು ಮೂವತ್ತುಮೂರು ಕೋಟಿ ದೇವತೆಗಳು ಕೇಳಲಿ, ಚಂದ್ರಸೂರ್ಯರೂ ಕೇಳಲಿ, ಆಕಾಶವೂ ಇದಕ್ಕೆ ಸಾಕ್ಷಿಯಾಗಲಿ, ನವಗ್ರಹಗಳು, ಹಗಲು-ರಾತ್ರಿಗಳು, ಎಂಟುದಿಕ್ಕುಗಳು,ಗಂಧರ್ವರಾಕ್ಷಸರನ್ನೊಳಗೊಂಡಿರುವ ಸ್ವರ್ಗ-ಮರ್ತ್ಯ-ಪಾತಾಳ, ನಿಶಾಚರರೂ, ಪಿಶಾಚಗಳೂ, ಭೂತಗಣಗಳೂ, ಗೃಹದೇವತೆಗಳೂ ಸಹಿತ ಎಲ್ಲರೂ ನೀನು ಹೇಳಿದ ಈ ಪ್ರತಿಜ್ಞಾವಾಕ್ಯಕ್ಕೆ ಸಾಕ್ಷಿಗಳಾಗಲಿ” ಎಂದವಳೇ ಆತನನ್ನು ಸಂಪೂರ್ಣವಾಗಿ ಖೆಡ್ಡಾಕ್ಕೆ ತೋಡುವ ಈ ಮಾತನ್ನು ಆಡುತ್ತಾಳೆ.

ಸತ್ಯಸಂಧೋ ಮಹಾತೇಜಾಃ ಧರ್ಮಜ್ಞಃ ಸುಸಮಾಹಿತಾಃ.
ವರಂ ಮಮ ದದಾತ್ಯೇಷಃ ತನ್ಮೇ ಶ್ರೃಣ್ವನ್ತು ದೈವತಾಃ৷৷ಅಯೋ.11.16৷৷

ಎಲೈ ದೇವತೆಗಳಿರಾ! ನೀವೆಲ್ಲರೂ ಕೇಳಿರಿ. ಸತ್ಯಸಂಧನಾದ ಮಹಾತೇಜಸ್ವಿಯಾದ, ಧರ್ಮಜ್ಞನಾದ ಧಶರಥನು ಸಮಾಧಾನಚಿತ್ತನಾಗಿ ತಾನು ಪ್ರತಿಜ್ಞೆ ಮಾಡಿರುವಂತೆ ನನಗೆ ವರವನ್ನು ದಯಪಾಲಿಸಲಿದ್ದಾನೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು

ವ್ಯಾಧನ ಧ್ವನಿಯಿಂದ ಆಕರ್ಷಿತಳಾಗಿ ಬಲೆಗೆ ಬೀಳುವ ಜಿಂಕೆಯಂತೆ ರಾಜನು ತನ್ನ ವಿನಾಶಕ್ಕಾಗಿ ಧರ್ಮಪಾಶವನ್ನು ಕುತ್ತಿಗೆಗೆ ಬಿಗಿದುಕೊಂಡಿದ್ದು ಹೀಗೆ. ಅವನಿಗೆ ಮುಂದೆ ಮಾತಾಡಲು ಅವಕಾಶಕೊಡದಂತೆ ಆತನನ್ನು ಬಿಗಿದಪ್ಪಿ ತನಗೆ ಹಿಂದೆ ಕೊಟ್ಟಿದ್ದ ವರಗಳನ್ನು ಅಪೇಕ್ಷಿಸಿ ಅದಕ್ಕೆ ರಾಜ ಬೇರೆ ಏನನ್ನಾದರೂ ಹೇಳಬಾರದೆಂದು, “ರಾಮನಿಗೆ ಪಟ್ಟಾಭಿಷೇಕಕ್ಕೆ ಯಾವೆಲ್ಲಾ ಸಿದ್ಧತೆಗಳಾಗಿವೆಯೋ ಅದೇ ಸಾಂಬಾರಪದಾರ್ಥಗಳಿಂದ ಭರತನಿಗೆ ಪಟ್ಟಾಭಿಷೇಕವಾಗಬೇಕು. ಎರಡನೇಯ ವರವನ್ನೂ ಹೇಳಿಯೇಬಿಡುವೆ.

ನವ ಪಞ್ಚ ಚ ವರ್ಷಾಣಿ ದಣ್ಡಕಾರಣ್ಯಮಾಶ್ರಿತಃ
ಚೀರಾಜಿನಜಟಾಧಾರೀ ರಾಮೋ ಭವತು ತಾಪಸಃ.

ಹದಿನಾಲ್ಕು ವರುಷಗಳ ಕಾಲ ರಾಮನು ದಂಡಕಾರಣ್ಯಕ್ಕೆ ಹೋಗಿ ಅಲ್ಲಿ ಅವನು ಜಟಾಧಾರಿಯಾಗಿ ನಾರಮುಡಿಯನ್ನುಟ್ಟು ಕೃಷ್ಣಾಜಿನವನ್ನು ಧರಿಸಿ ತಾಪಸನಂತೆ ಇರಬೇಕು.

ಕೈಕೇಯಿ ಇಷ್ಟಕ್ಕೇ ನಿಲ್ಲಿಸುವುದಿಲ್ಲ. “ಆದ್ಯ ಚೈವ ಹಿ ಪಶ್ಯೇಯಂ ಪ್ರಯಾನ್ತಂ ರಾಘವಂ ವನಮ್- ರಾಘವನು ಚೀರಾಜಿನ-ಜಟಾಧಾರಿಯಾಗಿ ಕಾಡಿಗೆ ಹೋಗುವುದನ್ನು ಈಗಲೇ ನಾನು ನೋಡಬೇಕು, ಸತ್ಯವಚನನಾದ ನೀನು ಈಗಲೇ ನಡೆಸಿಕೊಡು” ತನ್ನ ಇಬ್ಬರು ಪ್ರಿಯರಲ್ಲಿ ಒಬ್ಬನಾದ ರಾಮನಿಗೆ ಆಘಾತಕಾರಿಯಾದ ವಿಷಯಗಳನ್ನು ಹೇಳುವ ಮಾತುಗಳು ದಶರಥನ ಕಾಮದ ಪಿತ್ಥವನ್ನು ಜರ್ರನೆ ಇಳಿಸಿಯೇಬಿಟ್ಟಿತು; ಜೊತೆಗೆ ಆತನ ಮನೋಧೈರ್ಯವನ್ನೂ ಸಹ! ಲೋಕದ ಎಲ್ಲಾ ರಾಜರನ್ನು, ಪ್ರಜೆಗಳನ್ನು ಮತ್ತು ವಶಿಷ್ಠರಾದಿಯಾಗಿರುವ ಎಲ್ಲಾ ಋಷಿಗಳನ್ನು ತನ್ನ ಇಷ್ಟಕ್ಕೆ ಒಗ್ಗಿಕೊಳ್ಳುವಂತೆ ತಂತ್ರವನ್ನು ಹೂಡಿದ ಅರಸನ ಇಚ್ಛೆ ಇಲ್ಲಿ ತರಗೆಲೆಗಳಂತೆ ಗಾಳಿಗೆ ಹಾರಿಹೋಯಿತು. ಯಾವ ಉದ್ಧೇಶಕ್ಕಾಗಿ ಕೈಕೇಯಿಯ ಅರಮನೆಗೆ ಬಂದಿದ್ದನೋ ಅವೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತೆ ಕದಡಿಹೋಯಿತು. ಅವನ ಜೀವನದಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿವದೊಂದೇ ಗುರಿ ಇದ್ದಿದ್ದು. ತನ್ನ ಪ್ರೀತಿಯ ರಾಣಿಯಿಂದಲೇ ಹೀಗೆ ವಿಘ್ನಬರಬಹುದೆಂದು ರಾಜ ಎಣಿಸಿರಲಿಲ್ಲ. ಅಂಥ ಸ್ವಲ್ಪ ಅನುಮಾನ ಬಂದಿದ್ದರೂ ಆತ ಕೈಕೇಯಿಯ ಅರಮನೆಗೆ ಬರುತ್ತಲೇ ಇರಲಿಲ್ಲ. ಒಮ್ಮೆಲೇ ಎಚ್ಚರತಪ್ಪಿ ಬಿದ್ದ. ತನ್ನ ರಾಜತ್ವಕ್ಕೆ ಧಿಕ್ಕಾರ ಹಾಕಿಕೊಂಡ. ಕೊನೆಗೆ ಅನಿವಾರ್ಯವಾಗಿ ಕೈಕೇಯಿಗೆ ನಮಸ್ಕರಿಸಿಕೊಂಡು “ನಿನ್ನ ಕಾಲನ್ನು ಬೇಕಾದರೂ ಹಿಡಿಯುತ್ತೇನೆ, ರಾಮನನ್ನು ರಕ್ಷಿಸು. ವರದಾನವೆನ್ನುವ ಒಂದು ಪ್ರತಿಜ್ಞೆಯಲ್ಲಿ ನನ್ನನ್ನು ಸಿಕ್ಕಿಹಾಕಿಸಿ ನಿರಪರಾಧಿಯನ್ನು ಕಾಡಿಗಟ್ಟಿದ ದೋಷ ನನಗೆ ಬಾರದಿರಲಿ” ಎಂದು ನೆಲದಲ್ಲಿ ಹೊರಳಾಡತೊಡಗಿದ.

ಮೂಂದಿನ ಭಾಗದಲ್ಲಿ ತನ್ನ ಕರ್ಮಫಲವನ್ನು ತಾನು ಉಂಡ ಮಹಾರಾಜ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading
Advertisement
PBKS vs CSK
ಕ್ರೀಡೆ2 mins ago

PBKS vs CSK: ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ; ಗಾಯಕ್ವಾಡ್​ಗೆ ಸೇಡಿನ ಪಂದ್ಯ

Road Accident in bagalakote
ಬಾಗಲಕೋಟೆ2 mins ago

Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

MTR Karunadu Svada food festival inauguration in Bengaluru
ಕರ್ನಾಟಕ2 mins ago

MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

Vijay Devarakonda announces new film
ಕಿರುತೆರೆ4 mins ago

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Amruthadhare Serial Bhumika-Gautham angryness has melted like ice
ಕಿರುತೆರೆ6 mins ago

Amruthadhare Serial : ಐಸ್ ಥರ ಕರಗಿಹೋಯ್ತು ಭೂಮಿಕಾ-ಗೌತಮ್‌ ಮುನಿಸು!

Gold smuggling
ದೇಶ9 mins ago

Gold Smuggling: ಜ್ಯಾಕೆಟ್‌, ಲೆಗ್ಗಿನ್ಸ್‌ನಲ್ಲಿ, ಬೆಲ್ಟ್‌ನಲ್ಲಿ 25 ಕೆ.ಜಿ ಚಿನ್ನ; ಆಫ್ಘಾನ್‌ ರಾಜತಾಂತ್ರಿಕ ಅಧಿಕಾರಿ ಕಸ್ಟಮ್ಸ್‌ ಬಲೆಗೆ

Prajwal Revanna Case
ಕರ್ನಾಟಕ15 mins ago

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Money Guide
ಮನಿ-ಗೈಡ್25 mins ago

Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

mangaluru airport bomb threat
ದಕ್ಷಿಣ ಕನ್ನಡ37 mins ago

Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Elvish Yadav
ದೇಶ1 hour ago

Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ24 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌