ಸವಿಸ್ತಾರ ಅಂಕಣ | ಇತಿಹಾಸದ ಕಣ್ತೆರೆಸಿ ಸ್ವಾತಂತ್ರ್ಯ ಜ್ಯೋತಿ ಬೆಳಗಿಸಿದವರು ಸಾವರ್ಕರ್ - Vistara News

ಅಂಕಣ

ಸವಿಸ್ತಾರ ಅಂಕಣ | ಇತಿಹಾಸದ ಕಣ್ತೆರೆಸಿ ಸ್ವಾತಂತ್ರ್ಯ ಜ್ಯೋತಿ ಬೆಳಗಿಸಿದವರು ಸಾವರ್ಕರ್

ನಮ್ಮ ದೇಶದ ನೈಜ ಇತಿಹಾಸವನ್ನು ತಿಳಿಯುವ, ಜನತೆಗೆ ತಿಳಿಸುವ ಪ್ರಯತ್ನ ಮಾಡಿದವರು ಸ್ವಾತಂತ್ರ್ಯವೀರ ಸಾವರ್ಕರ್‌. ಹೋರಾಟದಲ್ಲಿ ತಮ್ಮದೇ ಹಾದಿ ತುಳಿದ ಅವರು ನೀಡಿದ ಪ್ರೇರಣೆ ಸಣ್ಣದಲ್ಲ- ಎನ್ನುತ್ತಾರೆ ಹರಿಪ್ರಕಾಶ್‌ ಕೋಣೆಮನೆ.

VISTARANEWS.COM


on

Veer Savarkar Chapter In Uttar Pradesh Textbooks
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
savistara

“ಬ್ರಿಟಿಷರು, ಈಸ್ಟ್ ಇಂಡಿಯಾ ಕಂಪನಿ ಸೋಗಿನಲ್ಲಿ ಭಾರತಕ್ಕೆ ವ್ಯಾಪಾರಕ್ಕೆಂದು ಬಂದ್ರು. ಬಳಿಕ ಒಂದಿಷ್ಟು ಕಾಲ ಇಲ್ಲಿ ಆಡಳಿತ ನಡೆಸಿದರು ಕಣ್ರೀ. ಅವರಿಂದ ಸ್ವಲ್ಪ ಅನುಕೂಲನೂ ಆಯ್ತು!”

ಇತಿಹಾಸವನ್ನು ಹೀಗೆ ಸರಳೀಕರಿಸಿ ಉಡಾಫೆಯಿಂದ ಹೇಳುವವರೂ ನಮ್ಮ ನಡುವೆ ಇದ್ದಾರೆ. ಆದರೆ ಇತಿಹಾಸ ಅಷ್ಟು ಸರಳವೂ, ಸುಲಭವೂ ಅಗಿಲ್ಲ. ಬ್ರಿಟಿಷರಿಗಿಂತ ಮುಂಚೆಯೂ, ಭಾರತದ ಮೇಲೆ ಅನೇಕ ದಾಳಿಗಳು ನಡೆದಿವೆ. ಆದರೆ ಅವರ್ಯಾರಿಗೂ ಇಲ್ಲಿ ಶಾಶ್ವತವಾಗಿ ನೆಲೆಯೂರಲು ಈ ನೆಲ ಅವಕಾಶ ನೀಡಿಲ್ಲ. ಇಲ್ಲಿನ ರಾಜ ಮಹಾರಾಜರು, ಪಾಳೇಗಾರರು, ಸಾಮಂತರು, ದಳವಾಯಿಗಳು.. ಅಷ್ಟೇ ಏಕೆ ದೇಶದ ಶ್ರೀ ಸಾಮಾನ್ಯರು ಕೂಡ ದಾಳಿಕೋರರ ವಿರುದ್ಧ ಸೆಟೆದು ನಿಂತಿದ್ದಾರೆ. ಬಂದವರನ್ನು ಓಡಿಸಿದ್ದಾರೆ.

ಡಚ್ಚರು, ಫ್ರೆಂಚರಿಂದ ಮೊಘಲರವರೆಗೆ ಯಾರೂ ತಮ್ಮ ಸಾಮ್ರಾಜ್ಯದಲ್ಲಿ ನೆಮ್ಮದಿಯಿಂದ ಇದ್ದರು ಎಂಬ ಸ್ಥಿತಿಯೇ ಇತಿಹಾಸದಲ್ಲಿ ಇಲ್ಲ. ರಾಮಾಯಣ, ಮಹಾಭಾರತದ ಮೂಲಕ ಭಾವನಾತ್ಮಕವಾಗಿ ಮೊದಲಿನಿಂದಲೂ ಭರತ ದೇಶವಾಗಿಯೇ ಈ ನೆಲ ರೂಪುಗೊಂಡಿದೆ ಮತ್ತು ಎಲ್ಲ ಕಾಲದಲ್ಲೂ ದೇಶದ ಯಾವುದಾದರೊಂದು ಭಾಗ ದಬ್ಬಾಳಿಕೆಗೆ ಗುರಿಯಾಗಿದೆ. ಮಾತ್ರವಲ್ಲ, ಅದರ ವಿರುದ್ಧ ಪ್ರತಿರೋಧವನ್ನೂ ದಾಖಲಿಸಿದೆ !

ಹಾಗಾಗಿಯೇ ಇರಬೇಕು, ಭಾರತೀಯರ ಮನಸ್ಸಿನಲ್ಲಿ ಸುಮಾರು ಏಳು ಶತಮಾನ ಕಳೆದರೂ ಗುಲಾಮಿ ಮಾನಸಿಕತೆ ನೆಲೆಯೂರಲೇ ಇಲ್ಲ. ಜತೆಗೆ ಹೇಗಾದರೂ ಮಾಡಿ ಈ ಆಕ್ರಮಣಕಾರರನ್ನು ಹೊರದಬ್ಬಲೇಬೇಕು ಎಂಬ ಉತ್ಕಟ ಬಯಕೆ ತಲೆಮಾರುಗಳಿಂದ ತಲೆಮಾರುಗಳಿಗೆ ಹಸಿರಾಗಿ ಹರಿದು ಬಂದಿದೆ.

ಇದನ್ನು ಸೂಕ್ಷ್ಮವಾಗಿ ಮೊದಲು ಗ್ರಹಿಸಿದವರು ಬ್ರಿಟಿಷರೇ ಇರಬೇಕು. ನಾವೆಲ್ಲರೂ ಒಂದೇ ದೇಶದವರೆಂಬ ಭಾರತೀಯರ ಮನೋಬಲವನ್ನು ಹೊಡೆದುಹಾಕಲು ಅವರು ನಿರ್ಧರಿಸಿದರು. ತೋಳ್ಬಲ, ಸೈನ್ಯ ಬಲದ ಜತೆಗೆ ಭಾರತೀಯರೆಂಬ ಮನೋಬಲವನ್ನು ಸೋಲಿಸಲು ಹೊಸ ಅಸ್ತ್ರಕ್ಕಾಗಿ ಹುಡುಕಾಟ ನಡೆಸಿದರು. ಈ ನಿಟ್ಟಿನಲ್ಲಿ ಅವರು‌ ಮಾಡಿದ ಮೊದಲ ಕೆಲಸ- ಇಲ್ಲಿನ ನಾಗರಿಕತೆಯ ವಿವಿಧ ಆಯಾಮಗಳ ಆಳ ಅಗಲದ ಅಧ್ಯಯನ.

beautiful tree

ಅಂದಹಾಗೆ, ಭಾರತದ ಅಂದಿನ ಜನಮಾನಸ ಹೇಗಿತ್ತು ಎನ್ನುವುದನ್ನು ನಾವೂ ಅಧ್ಯಯನ ಮಾಡಬಹುದು. ಖ್ಯಾತ ಗಾಂಧಿವಾದಿ ಧರ್ಮಪಾಲ್ ಅವರ ʼದಿ ಬ್ಯೂಟಿಫುಲ್ ಟ್ರೀʼ ಎಂಬ ಕೃತಿ ಒಂದರ್ಥದಲ್ಲಿ ಭಾರತೀಯರ ಜನಮಾನಸದ ಆತ್ಮಚರಿತ್ರೆ. ಭಾರತದ ಕುರಿತು ಬ್ರಿಟಿಷ್ ಮಾನಸಿಕತೆಯ ಇತಿಹಾಸಕಾರರು ಸೃಷ್ಟಿಸಿರುವ ಸುಳ್ಳುಗಳನ್ನೇ ಸುಳ್ಳಾಗಿಸಲು ಧರ್ಮಪಾಲ್ ಅವರು ತಮ್ಮ ಜೀವಮಾನದ ಅತ್ಯಮೂಲ್ಯ ಸಮಯವನ್ನು ವ್ಯಯಿಸಿದ್ದಾರೆ. ಬ್ರಿಟಿಷ್ ದಾಖಲೆಗಳ ಮೂಲಕವೇ ನಿರೂಪಿಸಿರುವ ಬ್ಯೂಟಿಫುಲ್ ಟ್ರೀ ಪುಸ್ತಕದ ಕನ್ನಡ ಅವತರಣಿಕೆ “ಚೆಲುವ ತರು” ಕೂಡ ಈಗ ಲಭ್ಯವಿದೆ.

ಭಾರತದ ನಾಗರಿಕತೆಯಲ್ಲಿ ಶ್ರೇಷ್ಠ ಎನ್ನಬಹುದಾದ ಅನೇಕ ವಿಚಾರಗಳಿವೆ. ಇದರಲ್ಲಿ ಶಿಕ್ಷಣವೂ ಒಂದು. ಆದರೆ, ಸಾಮಾನ್ಯವಾಗಿ ಇದುವರೆಗೂ ನಾವು‌ ಕೇಳುತ್ತಾ ಬಂದಿರುವುದು ಏನೆಂದರೆ- “ಭಾರತದಲ್ಲಿ ಶಿಕ್ಷಣವನ್ನು ಮೇಲ್ವರ್ಗದವರು ಮಾತ್ರವೇ ಪಡೆಯುತ್ತಿದ್ದರು. ತಳ ಸಮುದಾಯದವರಿಗೆ, ಅದರಲ್ಲೂ ವಿಶೇಷವಾಗಿ ಶೂದ್ರರಿಗೆ ಶಿಕ್ಷಣವೇ ಲಭಿಸುತ್ತಿರಲಿಲ್ಲ.”!

ಚೆಲುವ ತರು ಪುಸ್ತಕದಲ್ಲಿರುವ ದಾಖಲೆಯ ಪ್ರಕಾರ, 18ನೇ ಶತಮಾನದಲ್ಲಿ ಬ್ರಿಟನ್ನಿನ ಹೌಸ್ ಆಫ್ ಕಾಮನ್ಸ್‌ನಲ್ಲಿ, ಭಾರತದ ಶಿಕ್ಷಣ ವ್ಯವಸ್ಥೆ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಈ ಶಿಕ್ಷಣ ವ್ಯವಸ್ಥೆಯ ಸ್ವರೂಪ, ಅದರ‌ ಲಾಭ ನಷ್ಟಗಳ ಕುರಿತು ಬ್ರಿಟಿಷರು ತಮ್ಮ ಅಧಿಕಾರಿಗಳಿಂದ ಅಧ್ಯಯನ ವರದಿಗಳನ್ನು ತರಿಸಿಕೊಳ್ಳುತ್ತಿದ್ದರು. ಹೀಗೆ ಸಿದ್ಧಗೊಂಡಿರುವ ವರದಿಗಳು, ಭಾರತದಲ್ಲಿ ಬ್ರಾಹ್ಮಣ ಸಮುದಾಯದವರಿಗೆ ಮಾತ್ರವೇ ಶಿಕ್ಷಣ ಲಭಿಸುತ್ತಿತ್ತು, ಶೂದ್ರರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು ಎನ್ನುವುದಕ್ಕೆ ವ್ಯತಿರಿಕ್ತವಾದ ರಿಪೋರ್ಟ್ ನೀಡಿವೆ. ಇದಕ್ಕೆ ಧರ್ಮಪಾಲ್ ಬ್ರಿಟಿಷ್ ದಾಖಲೆಗಳನ್ನೇ ಮುಂದಿಟ್ಟಿದ್ದಾರೆ !

ಇಂತಹ ಶಿಕ್ಷಣ ಪಡೆದಿರುವ ಭಾರತೀಯರನ್ನು ಗೆಲ್ಲಬೇಕೆಂದರೆ, ಕೇವಲ ವ್ಯಾಪಾರಿ ಬಲ, ತೋಳ್ಬಲ ಇಲ್ಲವೇ ಸೈನ್ಯಬಲ ಸಾಕಾಗುವುದಿಲ್ಲ ಎಂಬ ನಿಕಷಕ್ಕೆ ಬ್ರಿಟಿಷರು ಬರುತ್ತಾರೆ. ಮೊದಲೇ ಹೇಳಿದಂತೆ, ಭಾರತದ‌ ನಾಗರಿಕತೆ, ಇಲ್ಲಿನ ಶಿಕ್ಷಣ ವ್ಯವಸ್ಥೆ ಬಗ್ಗೆ ಅಧ್ಯಯನಕ್ಕೆ ಇಳಿಯುತ್ತಾರೆ. ಬಳಿಕ ಸುದೀರ್ಘ ಚರ್ಚೆ ನಡೆಸಿ, ಮೆಕಾಲೆ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರುತ್ತಾರೆ ! ಈ ಸಂಗತಿಯನ್ನು ನಾವೆಲ್ಲರೂ ಓದಿದ್ದೇವೆ, ಕೇಳಿದ್ದೇವೆ‌.

ಮೆಕಾಲೆ ಶಿಕ್ಷಣ ಎಂದರೆ ಇನ್ನೇನೋ ಅಲ್ಲ. ತಾವೂ ಬ್ರಿಟಿಷರಂತೆ ಆಗಬೇಕು ಎಂಬ ಪ್ರಯತ್ನದಲ್ಲಿ ಭಾರತೀಯರು ತಮ್ಮತನವನ್ನು ಮರೆತು, ಸಂಬಳಕ್ಕೆ ದುಡಿಯುವ ಯಂತ್ರಗಳಂತೆ ಮಾಡುವುದೇ ಈ ಶಿಕ್ಷಣ ವ್ಯವಸ್ಥೆಯ ಉದ್ದೇಶ. ಇದರಿಂದ ಎರಡು ಕಾರ್ಯ ಈಡೇರುತ್ತದೆ. ಮೊದಲನೆಯದಾಗಿ ಭಾರತೀಯರು ತಮ್ಮತನವನ್ನು ಮರೆತು, ಬ್ರಿಟಿಷರ ವಿರುದ್ಧ ಯುದ್ಧ ಮಾಡುವ ಆಲೋಚನೆಯನ್ನು ಕೈಬಿಡುತ್ತಾರೆ. ಎರಡನೆಯದು, ಇಷ್ಟು ಬೃಹತ್ ದೇಶವನ್ನು ಆಳಲು ಅಧಿಕಾರಿಗಳಾಗಿ, ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುವ ಕೆಲಸದವರು ಸಿಗುತ್ತಾರೆ.

ಈ ಕಾರ್ಯಕ್ಕೆ ಮೊದಲಿಗೆ ಶಿಕ್ಷಣ ವ್ಯವಸ್ಥೆಗೇ ಬ್ರಿಟಿಷರು ಕೈಹಾಕಿದರು. ಅದರ ಪರಿಣಾಮವಾಗಿ ಮೊದಲಿಗೆ, ಭಾರತೀಯರು ತಮ್ಮ ಇತಿಹಾಸವನ್ನು ನೋಡುವ ಮಾನಸಿಕತೆಯನ್ನು ಬದಲಾಯಿಸಲಾಯಿತು. ಎಲ್ಲವನ್ನೂ ಪಾಶ್ಚಾತ್ಯ ಆಲೋಚನೆಯ ಬೂದುಗನ್ನಡಿಯಲ್ಲೇ ನೋಡುವುದನ್ನು ಕಲಿಸಲಾಯಿತು. ಉದಾಹರಣೆಗೆ, ನಾವೆಲ್ಲರೂ ಭೌಗೋಳಿಕವಾಗಿ ಮಾತನಾಡುವಾಗ ಮಧ್ಯಪ್ರಾಚ್ಯ ದೇಶಗಳು ಎಂದು ಕರೆಯುತ್ತೇವೆ. ನಾವು ಭೂಪಟದಲ್ಲಿ ನೋಡಿದರೆ ಮಧ್ಯಪ್ರಾಚ್ಯ ಎಂದು ಕರೆಯುವ ಈ ದೇಶಗಳು (ಸುಡಾನ್, ಸೌದಿ ಅರೇಬಿಯಾ, ಯೆಮನ್, ಮುಂತಾದವು) ಭಾರತದಿಂದ ಪಶ್ಚಿಮ ಭಾಗಕ್ಕಿವೆ. ನಮಗೆ ಪೂರ್ವ ಭಾಗದಲ್ಲಿರುವ ದೇಶಗಳೆಂದರೆ ಚೀನಾ, ತೈವಾನ್, ವಿಯೆಟ್ನಾಮ್ ಮುಂತಾದವು. ಮಧ್ಯ ಪ್ರಾಚ್ಯ ಎನ್ನುವುದು ಯುರೋಪಿಯನ್ನರ ದೃಷ್ಟಿಕೋನದಲ್ಲಿ ಮಿಡಲ್ ಈಸ್ಟ್ ಎಂದಾಗುತ್ತವೆ. ಅಂದರೆ ನಾವು ಎದುರಿಗೆ ಕಾಣುವ ಭೂಗೋಳದಲ್ಲಿರುವ ಸತ್ಯವನ್ನೂ ಮರೆಮಾಚಿ, ನಮ್ಮ ಪಶ್ಚಿಮಕ್ಕಿರುವ ದೇಶಗಳನ್ನು ಪೂರ್ವ ದೇಶಗಳು ಎಂದು ಸಂಬೋಧಿಸುತ್ತಿದ್ದೇವೆ !

ಅಂದ ಮೇಲೆ ಇತಿಹಾಸದಲ್ಲಿ ಘಟಿಸಿಹೋದ ಘಟನೆಗಳ ಕುರಿತು ನಾವು ಎಷ್ಟು ಅಜ್ಞಾನಿಗಳಾಗಿರಬಹುದು? ಅಥವಾ ನಮ್ಮ ಕಣ್ಣುಗಳನ್ನು ಬ್ರಿಟಿಷರು ಹಾಗೂ ಅವರು ಸಾಕಿ ಸಲುಹಿದ ಕಪ್ಪು ತೊಗಲಿನ ಬ್ರಿಟಿಷರು ಹೇಗೆ ಅದಕ್ಕೆ ಸಹಕರಿಸಿರಬಹುದು ಎಂದು ಊಹಿಸಬಹುದು. ಇಷ್ಟೊಂದು ಪೀಠಿಕೆ ಏಕೆ ನೀಡಬೇಕಾಯಿತು ಎಂದರೆ, ಭಾರತೀಯರ ಕಣ್ಣಿಗೆ ಅಂಟಿದ್ದ ಈ ಪೊರೆಯನ್ನು ಕಳಚುವ ಮಹಾನ್ ಕಾರ್ಯವನ್ನು ಮೊದಲು ಮಾಡಿದವರು ಸ್ವಾತಂತ್ರ್ಯ ವೀರ ಸಾವರ್ಕರ್ ಎಂದು ತಿಳಿಸಲು.

ದೇಶವನ್ನು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕೆ ಸಿದ್ಧಪಡಿಸಬೇಕೆಂದರೆ ಮೊದಲು ಭಾರತೀಯರಲ್ಲಿರುವ ಇಂಥಾ ಗೊಂದಲಗಳನ್ನು ಬಗೆಹರಿಸಿ, ಮಾನಸಿಕವಾಗಿ ಅವರನ್ನು ಸಜ್ಜುಗೊಳಿಸಬೇಕಿತ್ತು. ಹೋರಾಟಕ್ಕೆ ಧುಮುಕುವ ನಾಯಕನಿಗೆ ಮಾತ್ರವಲ್ಲ, ಆತನನ್ನು ಹಿಂಬಾಲಿಸುವ ಜನ ಸಮುದಾಯಕ್ಕೂ ನಾವೇನು ಮಾಡುತ್ತಿದ್ದೇವೆ ಮತ್ತು ಯಾಕೆ ಮಾಡುತ್ತಿದ್ದೇವೆ ಎಂಬುದರ ಕುರಿತು ಒಂದು ಸ್ಪಷ್ಟತೆ(ಕ್ಲಾರಿಟಿ) ಬೇಕು. ಸಾವರ್ಕರ್ ಅವರಿಗೆ ಈ ಖಚಿತತೆ ಇತ್ತು.

ನೈಜ ಇತಿಹಾಸವನ್ನು ತಿಳಿಸುವ ಸಾವರ್ಕರ್ ಅವರ ಪ್ರಯತ್ನದಲ್ಲಿ ಪ್ರಮುಖ ಮೂರು ಅಂಶಗಳನ್ನು ನೋಡೋಣ.

೧. ಖಿಲಾಫತ್ ಚಳವಳಿ

khilafat
ಖಿಲಾಫತ್‌ ಚಳವಳಿ

ಇಡೀ ದೇಶದ ಎಲ್ಲ ಜನರೂ ಒಟ್ಟಾಗಿ ಹೋರಾಟ ನಡೆಸದೆ ಇದ್ದರೆ ಭಾರತಕ್ಕೆ ಸ್ವಾತಂತ್ರ್ಯ ಲಭಿಸುವುದಿಲ್ಲ ಎನ್ನುವುದು ಮಹಾತ್ಮಾ ಗಾಂಧೀಜಿಯವರ ಗಾಢ ನಂಬಿಕೆ. ಅಂದರೆ, ಬ್ರಾಹ್ಮಣರು, ಕ್ಷತ್ರಿಯರು, ವೈಶ್ಯರು, ಶೂದ್ರರು, ಹಳ್ಳಿಗರು, ನಗರವಾಸಿಗಳು, ಮಹಿಳೆಯರು, ಮಕ್ಕಳು… ಹೀಗೆ ಎಲ್ಲರೂ ಹೋರಾಟದಲ್ಲಿ ಭಾಗವಹಿಸಬೇಕು ಎಂಬುದು ಗಾಂಧಿ ಚಿಂತನೆ.

ಅಂತೆಯೇ, ದೇಶದ ಹಳ್ಳಿಹಳ್ಳಿಗಳಲ್ಲಿ, ನಗರ ಪಟ್ಟಣಗಳಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ಪಸರಿಸಲು ಗಾಂಧೀಜಿ ಕಾರಣರಾದರು. ದಂಡಿ ಸತ್ಯಾಗ್ರಹ, ಸ್ವದೇಶಿ ಚಳವಳಿ, ಅಸಹಕಾರ ಚಳವಳಿಯಂತಹ ಅನೇಕ ಅಹಿಂಸಾತ್ಮಕ ಮಾರ್ಗಗಳನ್ನು ಅನುಸರಿಸಿದರು. ಆದರೆ ಈ ಚಳವಳಿಗಳು ನಡೆದ ಕೂಡಲೆ ಬ್ರಿಟಿಷ್ ಸರ್ಕಾರದಲ್ಲಾಗಲಿ, ಅವರ ಆಡಳಿತದಲ್ಲಾಗಲಿ ಬದಲಾವಣೆ ಆಗುತ್ತಿರಲಿಲ್ಲ. ಗಾಂಧೀಜಿಯವರಿಗೆ ಅದು ಮುಖ್ಯವೂ ಆಗಿರಲಿಲ್ಲ. ಮುಖ್ಯವಾಗಿ ದೇಶದ ಜನರಲ್ಲಿ ಸ್ವಾತಂತ್ರ್ಯದ ಅರಿವು ಮೂಡಲಿ ಎಂದೇ ಬಾಪೂಜಿ ಭಾವಿಸಿದ್ದರು.‌

ಈ ಎಲ್ಲರೂ ಎನ್ನುವುದರಲ್ಲಿ, ಮುಸ್ಲಿಮರೂ ಇದ್ದರು. ಅವರನ್ನೂ ತಮ್ಮ ಜತೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಕೊಂಡೊಯ್ಯಬೇಕೆನ್ನುವುದು ಗಾಂಧೀಜಿಯವರ ದೃಢನಿಶ್ಚಯವಾಗಿತ್ತು. ಪ್ರಾರಂಭದಿಂದಲೂ ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲ ಸಮುದಾಯದವರೂ ಭಾಗವಹಿಸುತ್ತಿದ್ದರು, ಗಾಂಧೀಜಿಯವರ ಕರೆಗೆ ಓಗೊಟ್ಟು ಅನೇಕರು ಹೋರಾಟಕ್ಕೆ ಧುಮುಕಿದರು. ಬ್ರಿಟಿಷರು ಹಿಂದು-ಮುಸ್ಲಿಮರನ್ನು ಒಡೆಯಲು ಪ್ರಯತ್ನ ನಡೆಸುತ್ತಿದ್ದು, ಈ ಸಮಸ್ಯೆಗೆ ಪರಿಹಾರವೂ ಹಿಂದು-ಮುಸ್ಲಿಂ ಐಕ್ಯತೆಯೇ ಎಂದು ನಂಬಿದ್ದರು ಗಾಂಧೀಜಿ.

ಗಾಂಧೀಜಿಯವರ ಈ ನಿರ್ಧಾರವನ್ನೇ ಮೊಹಮ್ಮದ್ ಆಲಿ ಹಾಗೂ ಶೌಕತ್ ಆಲಿ ಸಹೋದರರು ದುರುಪಯೋಗಪಡಿಸಿಕೊಳ್ಳಲು ಮುಂದಾದರು.

ರೌಲತ್ ಕಾಯಿದೆ ಮೂಲಕ ಬ್ರಿಟಿಷರು ಭಾರತೀಯರ ಮೇಲೆ ಮತ್ತಷ್ಟು ಹಿಡಿತ ಸಾಧಿಸಿದರು ಎನ್ನುವುದನ್ನು ಪ್ರಧಾನವಾಗಿಸಿಕೊಂಡು ಗಾಂಧೀಜಿ ಅಸಹಕಾರ ಚಳವಳಿ ರೂಪಿಸಲು ಮುಂದಾದರು. ಬ್ರಿಟಿಷರ ಎಲ್ಲ ಆಫೀಸುಗಳು ಮತ್ತು ಫ್ಯಾಕ್ಟರಿಗಳನ್ನು ಮುಚ್ಚಬೇಕು, ಬ್ರಿಟಿಷ್ ಪೊಲೀಸ್ ಇಲಾಖೆ, ಸೇನೆ ಮತ್ತು ನಾಗರಿಕ ಸೇವೆಗಳಿಂದ ಮತ್ತು ಮಕ್ಕಳನ್ನು ಶಾಲೆಗಳಿಂದ ಹಿಂತೆಗೆಯಬೇಕು ಎಂದು ಕರೆ ನೀಡಿದರು. ಎಲ್ಲ ಪ್ರತಿಭಟನಕಾರರೂ ಬಂಧಿತನಾಗಬೇಕು ಹಾಗೂ ಪೊಲೀಸರು ಹೊಡೆದರೆ ಹೊಡೆತ ಸಹಿಸಬೇಕೆ ಹೊರತು ತಿರುಗಿ ಹೊಡೆಯಬಾರದೆಂದರು. ಗಾಂಧೀಜಿಯವರ ಸಲಹೆಗೆ ಕಾಂಗ್ರೆಸ್‌ನಲ್ಲೇ ವಿರೋಧವಿದ್ದರೂ ದೇಶದ ಜನರು ಈ ಭಾವನೆಯನ್ನು ಬೆಂಬಲಿಸಿದ್ದರಿಂದ ಕಾಂಗ್ರೆಸ್ ನಾಯಕರೂ ಮರುಮಾತಿಲ್ಲದೆ ಒಪ್ಪಿಕೊಂಡರು.

ಇದೇ ಅವಕಾಶವನ್ನು ಕಾಯುತ್ತಿದ್ದ ಆಲಿ ಸಹೋದರರು, ದೂರದ ಟರ್ಕಿಯಲ್ಲಿ ತಮ್ಮ ಖಲೀಫನನ್ನು ಪದಚ್ಯುತಗೊಳಿಸಲಾಗಿದ್ದು, ಅದನ್ನು ವಿರೋಧಿಸಲು ನಮಗೆ ಬೆಂಬಲ ನೀಡಿದರೆ ನಾವು ಸ್ವಾತಂತ್ರ್ಯ ಹೋರಾಟವನ್ನು ಬೆಂಬಲಿಸುತ್ತೇವೆ ಎಂದರು. ಟರ್ಕಿಯಲ್ಲಿ ಖಲೀಫನನ್ನು ಪದಚ್ಯುತಗೊಳಿಸಲು ಅಲ್ಲಿನ ಜನರೇ ನಿರ್ಧರಿಸಿದ್ದರು. ಮತ್ತು ಯಾವುದೇ ರೀತಿಯಲ್ಲಿ ಇದು ಭಾರತಕ್ಕೆ ಸಂಬಂಧಿಸಿದ ವಿಷಯವೇ ಆಗಿರಲಿಲ್ಲ. ಆದರೆ ಆಲಿ ಸಹೋದರರ ಷರತ್ತಿಗೆ ಒಪ್ಪದಿದ್ದರೆ ಮುಸ್ಲಿಮರು ಸ್ವಾತಂತ್ರ್ಯ ಹೋರಾಟದಿಂದ ಹಿಂದೆ ಸರಿಯುತ್ತಾರೆ ಎಂಬ ಆತಂಕದಲ್ಲಿ ಗಾಂಧೀಜಿ ಒಪ್ಪಿಕೊಂಡರು. ಅಸಹಕಾರ ಹಾಗೂ ಖಿಲಾಫತ್ ಚಳವಳಿಯ ನಂತರ ಕೇವಲ ಒಂದೇ ವರ್ಷದಲ್ಲಿ ಸ್ವಾತಂತ್ರ್ಯ ಸಿಗುತ್ತದೆ ಎಂಬುದು ಗಾಂಧೀಜಿ ನಂಬಿಕೆಯಾಗಿತ್ತು.

ಇದನ್ನೂ ಓದಿ | ಸವಿಸ್ತಾರ ಅಂಕಣ | ನಮ್ಮ ನ್ಯಾಷನಲ್‌ ಹೀರೊಗಳನ್ನು ನಾವು ಗೌರವಿಸುವುದು ತಪ್ಪಾ?

ಈ ಸಮಯದಲ್ಲಿ ಗಾಂಧೀಜಿಯವರ ಮಾತಿಗೆ ವಿರುದ್ಧವಾಗಿ ಮಾತನಾಡುವ ಧೈರ್ಯ ಯಾರಿಗೂ ಇರಲಿಲ್ಲ. ಆದರೆ, ಸಾವರ್ಕರ್ ಇದೆಲ್ಲವೂ ಸಲ್ಲದು ಎಂದು ಎಚ್ಚರಿಕೆ ನೀಡಿದರು. ಈ ಚಳವಳಿಯು ಭೀಕರವಾಗಿ ಪರಿಣಮಿಸುವ ಎಲ್ಲ ಲಕ್ಷಣಗಳೂ ಇವೆ ಎಂದು ಕಿವಿಮಾತು ಹೇಳಿದರು. ಯಾವುದೇ ಸಮುದಾಯದ ಜನರನ್ನು ವಿರೋಧಿಸದ ಸಾವರ್ಕರರು, ಇತಿಹಾಸವನ್ನು ಬಲ್ಲವರಾಗಿದ್ದರು. ಇತಿಹಾಸವನ್ನು ಸರಿಯಾಗಿ ತಿಳಿದವರು ಮಾತ್ರ ಭವಿಷ್ಯವನ್ನು ಕಲ್ಪಿಸಿಕೊಳ್ಳಬಲ್ಲರು ಎಂಬಂತೆ, ಮುಂದೆ ಆಗಬಹುದಾದ ಅನಾಹುತವನ್ನು ಎಲ್ಲರ ಮುಂದೆ ಇಟ್ಟರು. ಆದರೆ ಈ ಮಾತನ್ನು ಕೇಳುವ ಸ್ಥಿತಿಯಲ್ಲಿ ಯಾರೂ ಇರಲಿಲ್ಲ.

೨. ಮೋಪ್ಲಾ ಕಾಂಡ

mopla
ಮೋಪ್ಲಾ ದಂಗೆಯ ಬಂದಿಗಳು

ಅಸಹಕಾರದ ಜತೆಜತೆಗೇ ಆರಂಭವಾದ ಖಿಲಾಫತ್ ಚಳವಳಿ ನಂತರ ಬಣ್ಣ ಬದಲಾಯಿಸಿತು. ಅಸಹಕಾರ ಚಳವಳಿಯನ್ನೇ ನುಂಗಿಕೊಂಡು, ಮೂಲಭೂತವಾದಿಗಳ ಹಿಡಿತಕ್ಕೆ ಸಿಲುಕಿತು. ಕೇರಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಮಾಪಿಳ್ಳೆಗಳ ಪ್ರದೇಶ ಸೇರಿ ಎಲ್ಲ ಕಡೆಯೂ ಕಾಂಗ್ರೆಸ್ ಹಾಗೂ ಖಿಲಾಫತ್ ಧ್ವಜಗಳನ್ನು ಹಾರಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರೆಲ್ಲ ಖಿಲಾಫತ್ ಸ್ವಯಂ ಸೇವಕರಾಗಿಬಿಟ್ಟರು. ನಿಜವಾಗಿ ಬ್ರಿಟಿಷರ ವಿರುದ್ಧ ನಡೆಯಬೇಕಿದ್ದ ಚಳವಳಿ, ಸ್ಥಳೀಯರ ಮೇಲೆ, ವಿಶೇಷವಾಗಿ ಹಿಂದುಗಳ ಮೇಲೆ ನಡೆಯಲಾರಂಭಿಸಿತು. ಕಂಡಕಂಡಲ್ಲಿ ಕತ್ತಿ ಝಳಪಿಸಿದ ಮಾಪಿಳ್ಳೆಗಳು (ಮೋಪ್ಲಾ) ಅನೇಕರನ್ನು ಕೊಚ್ಚಿಹಾಕಿದರು. ಸರ್ವೆಂಟ್ಸ್ ಆಫ್ ಇಂಡಿಯಾ ಸಂಸ್ಥೆಯ ವರದಿಯ ಪ್ರಕಾರ ಒಂದು ಸಾವಿರ ಹಿಂದುಗಳು ಕೊಲೆಯಾದರು, ಇಪ್ಪತ್ತು ಸಾವಿರ ಜನರು ಮತಾಂತರಗೊಂಡರು, ಸಾವಿರಾರು ಮಹಿಳೆಯರು ಅತ್ಯಾಚಾರಕ್ಕೊಳಗಾದರು, ಮೂರು ಕೋಟಿ ರೂಪಾಯಿಗೂ ಹೆಚ್ಚು ಹಣ ಲೂಟಿಯಾಯಿತು. ಮೋಪ್ಲಾ ಕಾಂಡವನ್ನು ಸ್ವಾತಂತ್ರ್ಯ ಹೋರಾಟ ಎಂದು ಬಣ್ಣಿಸುವ ಕಮ್ಯುನಿಸ್ಟ್ ಇತಿಹಾಸಕಾರರ ಲೆಕ್ಕದಲ್ಲಿಯೂ ಮೋಪ್ಲಾಗಳು ನೂರು ದೇವಸ್ಥಾನಗಳನ್ನು ಒಡೆದರು, ಐನೂರು ಜನರು ಕೊಲೆಯಾದರು, ಎರಡೂವರೆ ಸಾವಿರ ಜನರು ಮತಾಂತರವಾದರು.

ಈ ಹತ್ಯಾಕಾಂಡದ ಕುರಿತು ಭಾರತವೇ ಮೌನವಾಗಿತ್ತು. ಆದರೆ ಸಾವರ್ಕರರು ಮೋಪ್ಲಾ ಕಾಂಡದ ಕೃತಿಯನ್ನು ಕಾದಂಬರಿ ರೂಪದಲ್ಲಿ ಬರೆದರು. ಅದರ ಸ್ವರೂಪ ಕಾದಂಬರಿ ರೂಪದಲ್ಲಿದೆ. ಸಾವರ್ಕರ್ ಹಾಗೇಕೆ ಬರೆದರು? ಅವರ ಉದ್ದೇಶ ಓದುಗರಿಗೆ ಸತ್ಯ ಮುಟ್ಟಿಸುವುದು ಮತ್ತು ಎಚ್ಚರಿಸುವುದು ಆಗಿತ್ತಷ್ಟೆ.

ಇಂತಹ ಧೈರ್ಯ ತೋರಿ ಮೊದಲಿಗೆ, ಭಾರತದ ನಿಜವಾದ ದುರಂತವೊಂದನ್ನು ಹೊರತಂದವರು ಸಾವರ್ಕರ್. ಇಂತಹ ಇತಿಹಾಸಗಳನ್ನು ನಾವು ತಿಳಿಯದಿದ್ದರೆ ಭವಿಷ್ಯದಲ್ಲೂ ಇದೇ ತಪ್ಪನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.

೩. ಮೊದಲ ಸ್ವಾತಂತ್ರ್ಯ ಸಂಗ್ರಾಮ

1857 war

ಬ್ರಿಟಿಷರ ವಿರುದ್ಧ ಸಂಗ್ರಾಮ ನಡೆಯುತ್ತಿದ್ದಾಗ, ಈ ಹೋರಾಟಕ್ಕೆ ಅತ್ಯಂತ ನಿರ್ಣಾಯಕ ನೇತೃತ್ವ ನೀಡಿದ್ದು 1857ರ ಸಂಗ್ರಾಮ. ಇಂದು ಈ ವಾಕ್ಯವನ್ನು ಅತ್ಯಂತ ಸಲೀಸಾಗಿ ಹೇಳಿಬಿಡುತ್ತೇವೆ. ಆದರೆ ಈ ಸ್ವಾತಂತ್ರ್ಯ ಸಂಗ್ರಾಮ ನಡೆದು ಐವತ್ತು ವರ್ಷ ಕಳೆಯುವವರೆಗೂ ಅದನ್ನು ಎಲ್ಲರೂ ಕರೆಯುತ್ತಿದ್ದದ್ದು ಸಿಪಾಯಿ ದಂಗೆ ಎಂಬ ಹೆಸರಿನಿಂದಲೆ. ಬ್ರಿಟಿಷರಿಗೆ ಇದು ಸಿಪಾಯಿ ದಂಗೆಯಾಗಿತ್ತು, ಅದನ್ನೇ ಭಾರತೀಯರಲ್ಲೂ ನಂಬಿಸಿದ್ದರು. ಉನ್ನತ ವ್ಯಾಸಂಗದ ನೆಪದಲ್ಲಿ ಲಂಡನ್ನಿಗೆ ತೆರಳಿದ ಸಾವರ್ಕರರು ಅಲ್ಲಿನ ಬ್ರಿಟಿಷ್ ಲೈಬ್ರರಿಯನ್ನು ತಡಕಾಡಿದರು. ಇದರಿಂದ ಅವರಿಗೆ ತಿಳಿದಿದ್ದು ಏನೆಂದರೆ, 1857ರಲ್ಲಿ ನಡೆದದ್ದು ಸಿಪಾಯಿ ದಂಗೆಯಲ್ಲ, ಅದು ಭಾರತದ ಮೊದಲ ಸ್ವಾತಂತ್ರ್ಯ ಹೋರಾಟವೇ ಆಗಿತ್ತು ಎನ್ನುವ ಸಂಗತಿ !

ಇದರಲ್ಲಿ ಭಾರತೀಯರು ಹೀನಾಯವಾಗಿ ಸೋಲಲಿಲ್ಲ, ವೀರೋಚಿತವಾಗಿ ಸೆಣೆಸಿದರು. ಹಾಗೆ ನೋಡಿದರೆ ಹೋರಾಟದಲ್ಲಿ ಬ್ರಿಟಿಷರ ಕೈ ಮೇಲಾಗಲಿಲ್ಲ, ಭಾರತೀಯರಲ್ಲಿ ಸ್ವಾತಂತ್ರ್ಯ ಪಡೆಯುವ ಕಿಚ್ಚು ಜಾಗೃತವಾಗಿದೆ ಎನ್ನುವುದು ಆ ಹೋರಾಟದಲ್ಲಿ ವೇದ್ಯವಾಗಿತ್ತು.

ಅಲ್ಲಿಯವರೆಗೆ ಬ್ರಿಟಿಷರು ಮುಚ್ಚಿಟ್ಟಿದ್ದ ಎಲ್ಲ ದಾಖಲೆಗಳನ್ನೂ ಸಂಗ್ರಹಿಸಿದ ಸಾವರ್ಕರ್, 1857ರ ಸ್ವಾತಂತ್ರ್ಯ ಸಂಗ್ರಾಮ ಕೃತಿಯನ್ನು ರಚಿಸಿದರು. ಅದು ಹೇಗೊ ಪೊಲೀಸರಿಗೆ ಗೊತ್ತಾಗಿ, ಪುಸ್ತಕ ಮುದ್ರಣವಾಗುವ ಮೊದಲೇ ನಿಷೇಧಿಸಿಬಿಟ್ಟರು. ಆದರೇನಂತೆ, ಸಾವರ್ಕರರು ತಮ್ಮ ಚಾಕಚಕ್ಯತೆಯಿಂದ ಇಂಗ್ಲಿಷ್ ಪುಸ್ತಕವನ್ನು ಹಾಲೆಂಡಿನಲ್ಲಿ ಮುದ್ರಣವಾಗುವಂತೆ ನೋಡಿಕೊಂಡರು. ಬಳಿಕ ಅದಕ್ಕೆ ಭಿನ್ನ ಭಿನ್ನ ಕಾದಂಬರಿಗಳ ಮುಖಪುಟವನ್ನು ಹೊದಿಸಿ ಭಾರತಕ್ಕೆ ಕಳುಹಿಸಿದರು. ಫ್ರಾನ್ಸ್, ಜರ್ಮನಿ, ಇಂಗ್ಲೆಂಡ್ ಇಲ್ಲೆಲ್ಲವೂ ಅಪಾರ ಸಂಖ್ಯೆಯ ಭಾರತೀಯರು ಈ ಪುಸ್ತಕವನ್ನು ಕೊಂಡುಕೊಂಡರು. ಭಾರತದಲ್ಲಂತೂ ಇದರ ಅಧ್ಯಯನ ರಾಷ್ಟ್ರೀಯ ಕಾರ್ಯ ಎಂಬಂತೆ ಆಯಿತು. ಬ್ರಿಟಿಷರು ಸದಾ ಗೆಲ್ಲುವ ಕುದುರೆಗಳೇನೂ ಅಲ್ಲ. ಭಾರತೀಯರು ಅವರನ್ನು ಸೋಲಿಸಿದ್ದರು ಎನ್ನುವ ಸಂಗತಿ ತರುಣರಿಗೆ ಅರಿವಾಗುತ್ತಿದ್ದಂತೆ ಅವರ ಆತ್ಮವಿಶ್ವಾಸ ಹೆಚ್ಚಾಯಿತು.

ಇದನ್ನೂ ಓದಿ | ಧೀಮಹಿ ಅಂಕಣ | ಕಾಲದೇಶದ ಸ್ಮರಣೆಯ ಮಹಾಸಂಕಲ್ಪ

ಈ ಕೃತಿಯ ಮೂರನೇ ಮುದ್ರಣ ಪ್ರಕಾಶನಗೊಂಡಿದ್ದು ಗದರ್ ಕ್ರಾಂತಿಕಾರಿಗಳ ಮೂಲಕ. ನಾಲ್ಕನೇ ಮುದ್ರಣವನ್ನು ಭಗತ್‌ಸಿಂಗ್ ಮತ್ತವರ ಮಿತ್ರರು ಸೇರಿ ಮಾಡಿಸಿದರು. 1940ರ ಆಸುಪಾಸಿನಲ್ಲಿ ನೇತಾಜಿ ಸುಭಾಷ್‌ಚಂದ್ರ ಬೋಸರು ಐದನೇ ಮುದ್ರಣಕ್ಕೆ ಕಾರಣವಾದರು. ಅಪಾರ ಸಂಖ್ಯೆಯಲ್ಲಿರುವ ತಮಿಳು ಸೈನಿಕರಿಗೆ ಪ್ರೇರಣೆ ಸಿಗಲೆಂದು ಕೃತಿಯನ್ನು ತಮಿಳು ಭಾಷೆಗೂ ಅನುವಾದ ಮಾಡಿಸಿದರು. ಸಾವರ್ಕರ್ ಪುಸ್ತಕ ಮೊದಲು ಪ್ರಕಟಗೊಂಡಿದ್ದು 1909ರಲ್ಲಿ. ಇದು ಐದನೇ ಮುದ್ರಣ ಕಂಡಿದ್ದು ಸುಮಾರು 1942ರಲ್ಲಿ. ಹೆಚ್ಚು ಕಡಿಮೆ ಮೂರೂವರೆ ದಶಕಗಳ ಕಾಲ ಈ ಕೃತಿ ಭಾರತದಲ್ಲಿನ ಕ್ರಾಂತಿ ಕಾರ್ಯಕ್ಕೆ ಭೂಮಿಕೆ ಒದಗಿಸಿತು.

ಮೇಲಿನ ಮೂರು ಘಟನಾವಳಿಗಳಲ್ಲಿ ಕಾಣಸಿಗುವ ಸಾವರ್ಕರ್ ಎಂಥವರಾಗಿದ್ದರು ? ಎದುರಾಗುವ ಸವಾಲಿನ ಕುರಿತು ಅವರಿಗಿದ್ದ ತಿಳಿವಳಿಕೆ, ಅದನ್ನು ಬುದ್ಧಿವಂತಿಕೆಯಿಂದ ಎದುರಿಸುವ ಬಗೆ, ಚಾಕಚಕ್ಯತೆಯ ಪ್ರಯೋಗ, ಅಂತಾರಾಷ್ಟ್ರೀಯವಾಗಿಯೂ ನೆರವು ಪಡೆಯುವ ಕುಶಲತೆ- ಹೀಗೆ ಹತ್ತಾರು ಸ್ಫೂರ್ತಿ ಪ್ರೇರಣೆಗಳನ್ನು ಪಟ್ಟಿ ಮಾಡಬಹುದಲ್ಲವೇ ?

ಅವರು‌ ಗಾಂಧಿ, ಗೋಖಲೆ ಅವರಂತೆ ಅಹಿಂಸೆಯ ಮಾರ್ಗ ತುಳಿಯಲಿಲ್ಲ. ಆದರೆ, ಅವರಿಬ್ಬರಂತೆ ಹಿಂದೂ ಸಮಾಜದ ಅನಿಷ್ಟ ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ್ದರು. ಮಾತ್ರವಲ್ಲ, ಅದರ ನಿವಾರಣೆಗಾಗಿ ರತ್ನಗಿರಿ ಜಿಲ್ಲೆಯಲ್ಲಿ ರಚನಾತ್ಮಕ ಕಾರ್ಯ ಕೈಗೊಂಡಿದ್ದರು. ಅವರ ಪ್ರೇರಣೆ ದೊಡ್ಡದು.

ಆದರೆ, ಇಂಥ ಸಾವರ್ಕರ್ ಜೀವಮಾನವಿಡಿ ದೈಹಿಕವಾಗಿ, ಮಾನಸಿಕವಾಗಿ ಅಪಮಾನಗಳನ್ನು ಅನುಭವಿಸಿದರು. ಅಂಡಮಾನಿನ ಜೈಲಿನಲ್ಲಿ ಕರಿನೀರಿನ ಶಿಕ್ಷೆ ಅನುಭವಿಸಿದರು. ಯಾವ ಭಾರತೀಯರಿಗಾಗಿ ತಮ್ಮ ಕುಟುಂಬವೆಲ್ಲವನ್ನೂ ತ್ಯಾಗ ಮಾಡಿ ಶ್ರಮಿಸಿದರೊ ಅದೇ ಭಾರತೀಯರಿಂದ ತೆಗಳಲ್ಪಟ್ಟರು. ಇದೆಲ್ಲವೂ ಅವರು ಸ್ವಾತಂತ್ರ್ಯಕ್ಕಾಗಿ ವೈಯಕ್ತಿಕವಾಗಿ ನಡೆಸಿದ ಹೋರಾಟಗಳು. ಆದರೆ ಅವರು ತಮ್ಮ ಬರವಣಿಗೆ ಮೂಲಕ ಲಕ್ಷಾಂತರ ಜನರಿಗೆ ಸ್ಪೂರ್ತಿಯಾದರು.

ಸಾವರ್ಕರರ ಸಂಪರ್ಕಕ್ಕೆ ಬಂದ ಯುವಕರು ಸ್ವಾತಂತ್ರ್ಯ ಹೋರಾಟದಲ್ಲಿ ಹೇಗೆ ಧುಮುಕಿದರು, ಯಾವ ರೀತಿ ಪ್ರೇರಣೆ ಪಡೆದರು ಎನ್ನುವುದನ್ನು ಮುಂದಿನ ಭಾಗದಲ್ಲಿ ನೋಡೋಣ.

(ಗ್ರಂಥ ಋಣ: ಆತ್ಮಾಹುತಿ- ಶಿವರಾಮು, ಚೆಲುವ ತರು- ಧರ್ಮಪಾಲ್‌, 1857ರ ನಿಂದಕರು- ನೀ.ರ. ವರ್ಹಾಡಪಾಂಡೆ, ಮೋಪ್ಲಾ ಕಾಂಡ- ಸಾವರ್ಕರ್, 1857ರ ಸಂಗ್ರಾಮ-ಚಕ್ರವರ್ತಿ ಸೂಲಿಬೆಲೆ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Rachita Taneja
ದೇಶ3 mins ago

Rachita Taneja: ಭಾರತದ ಕಾರ್ಟೂನಿಸ್ಸ್ ರಚಿತಾ ತನೇಜಾಗೆ ಕೋಫಿ ಅನ್ನಾನ್‌ ಪ್ರಶಸ್ತಿ ಗರಿ

Rahul Gandhi
ಪ್ರಮುಖ ಸುದ್ದಿ6 mins ago

Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Prajwal Revanna Case Kidnapping case filed against Revanna Anticipatory bail plea postponed
ಕ್ರೈಂ8 mins ago

Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

Prajwal Revanna Case HD Revanna ready to leave the country SIT issues lookout notice
ಕ್ರೈಂ35 mins ago

Prajwal Revanna Case: ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

IPL 2024
Latest40 mins ago

IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

Faisal Raza Abidi
ದೇಶ46 mins ago

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

Wonderla Bengaluru
ಕರ್ನಾಟಕ54 mins ago

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

training for election duty staff in Karwar
ಉತ್ತರ ಕನ್ನಡ57 mins ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ1 hour ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Rohith Vemula
ದೇಶ2 hours ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ5 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ16 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌