ಚಿತ್ರದುರ್ಗ ಮಠದ ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಇಬ್ಬರು ವಿದ್ಯಾರ್ಥಿನಿಯರಿಂದ ದೂರು - Vistara News

ಕರ್ನಾಟಕ

ಚಿತ್ರದುರ್ಗ ಮಠದ ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಇಬ್ಬರು ವಿದ್ಯಾರ್ಥಿನಿಯರಿಂದ ದೂರು

ಚಿತ್ರದುರ್ಗದ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅವರು ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

VISTARANEWS.COM


on

murugha sharanaru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅವರು ತಮ್ಮ ಮಠ ನಡೆಸುವ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಮೈಸೂರಿನ ನಜರ್‌ ಬಾದ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಎಫ್‌ಐಆರ್‌ ದಾಖಲಾಗಿದೆ. ಕೋರ್ಟ್‌ನ ಮಾರ್ಗದರ್ಶನದಂತೆ ಇದೀಗ ಎಫ್‌ಐಆರ್‌ ಪ್ರತಿಯನ್ನು ಚಿತ್ರದುರ್ಗದ ಎಸ್‌ಪಿಗೆ ಕಳುಹಿಸಿರುವುದಾಗಿ ತಿಳಿದುಬಂದಿದೆ. ಸ್ವಾಮೀಜಿ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ (ಪೋಕ್ಸೊ) ಅಡಿ ಪ್ರಕರಣ ದಾಖಲಾಗಿದೆ.

ಏನಿದು ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮಠದ ಮೂಲಕ ನಡೆಸಲಾಗುವ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಾ, ವಸತಿ ಶಾಲೆಯಲ್ಲಿ ವಾಸ ಮಾಡುತ್ತಿರುವ ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದು, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಒಬ್ಬ ವಿದ್ಯಾರ್ಥಿನಿ ಮೇಲೆ ಮೂರು ವರ್ಷದಿಂದ ಇನ್ನೊಬ್ಬ ವಿದ್ಯಾರ್ಥಿನಿ ಮೇಲೆ ಒಂದೂವರೆ ವರ್ಷದಿಂದ ದೌರ್ಜನ್ಯ ನಡೆಯುತ್ತಿದೆ ಎನ್ನಲಾಗಿದೆ. ಅವರಿಬ್ಬರು ಮಹಿಳಾ ರಕ್ಷಣಾ ಸಮಿತಿ ಮತ್ತು ಸಾಂತ್ವನ ಕೇಂದ್ರವಾದ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದರು. ಸಂಸ್ಥೆಯು ಅವರಿಬ್ಬರನ್ನೂ ಕರೆಸಿಕೊಂಡು ಆಪ್ತ ಸಮಾಲೋಚನೆಯ ಮೂಲಕ ದೌರ್ಜನ್ಯದ ವಿವರಗಳನ್ನು ಪಡೆದುಕೊಂಡು ಇದೀಗ ಚಂದ್ರಕುಮಾರ್‌ ಎಂಬವರ ಮೂಲಕ ಪೊಲೀಸರಿಗೆ ದೂರು ನೀಡಿದೆ.

ಹೇಗೆ ದೌರ್ಜನ್ಯ, ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರಲ್ಲದೆ, ಅವರಿಗೆ ಸಹಕಾರ ನೀಡಿದ ಆರೋಪದಲ್ಲಿ ವಸತಿ ಶಾಲೆಯ ವಾರ್ಡನ್‌ ಆಗಿರುವ ರಶ್ಮಿ, ಮಠಕ್ಕೆ ಸಂಬಂಧಿಸಿದ ಬಸವಾದಿತ್ಯ, ಲಾಯರ್‌ ಗಂಗಾಧರ್‌ ಮತ್ತು ಲೀಡರ್‌ ಪರಮಶಿವಯ್ಯ ಅವರ ವಿರುದ್ಧ ದೂರು ದಾಖಲಾಗಿದೆ.

ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿಗಳ ಬಳಿಗೆ ಕಳುಹಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಸ್ವಾಮೀಜಿ ಬಳಿಗೆ ಹೋಗಲು ಒಪ್ಪದಿದ್ದರೆ ಹಾಸ್ಟೆಲ್ ಸಿಬ್ಬಂದಿಯೇ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು ಎನ್ನಲಾಗಿದೆ. ಅದಕ್ಕಿಂತಲೂ ಗಂಭೀರವಾದ ಇನ್ನೊಂದು ಆರೋಪವೆಂದರೆ ವಿದ್ಯಾರ್ಥಿನಿಯರನ್ನು ಹೀಗೆ ಲೈಂಗಿಕವಾಗಿ ಬಳಸಿಕೊಳ್ಳುವ ಮುನ್ನ ಕುಟುಂಬಸ್ಥರಿಗೆ ಸಹಾಯ ಹಸ್ತ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.
ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು, ಸಿಹಿಯಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಕಿರುಕುಳವನ್ನು ಪ್ರಶ್ನಿಸಿದ ಕಾರಣಕ್ಕೆ ಈ ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ನಿಂದ ಹೊರ ಹಾಕಲಾಗಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Actor Darshan: ಪವಿತ್ರ ಗೌಡ ಆಪ್ತೆ, ಶಾಸಕರ ಕಾರು ಚಾಲಕನಿಗೆ ಸಂಕಷ್ಟ; 2ನೇ ಬಾರಿ ವಿಚಾರಣೆ, ಬಂಧನ?

ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

VISTARANEWS.COM


on

karthik purohith samatha actor darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

ಇವರಲ್ಲಿ ಒಬ್ಬಾತ ಕಾರ್ತಿಕ್‌ ಪುರೋಹಿತ್.‌ ಈತನಿಗೆ ಇಂದು ಇಂದು ವಿಚಾರಣೆಗೆ ಹಾಜರಾಗಲು ನೊಟೀಸ್ ಹೋಗಿದೆ. ಶನಿವಾರ ಸುಮಾರು ನಾಲ್ಕೈದು ಗಂಟೆಗಳ ಕಾಲ ಪೊಲೀಸರು ವಿಚಾರಣೆ ಮಾಡಿದ್ದರು. ಶಾಸಕರೊಬ್ಬರ ಕಾರು ಚಾಲಕನಾಗಿರುವ ಕಾರ್ತಿಕ್ ಪುರೋಹಿತ್, ರೇಣುಕಾ ಸ್ವಾಮಿ ಮೃತದೇಹ ಬಿಸಾಡಿದ ಬಳಿಕ ಆರೋಪಿ ಪ್ರದೋಶ್ ಅನ್ನು ಪಿಕ್‌ಅಪ್ ಮಾಡಿದ್ದ. ತನ್ನದೇ ಕಾರಿನಲ್ಲಿ ಪ್ರದೋಶ್‌ನನ್ನು ಗಿರಿನಗರಕ್ಕೆ ಕರೆದುಕೊಂಡು ಬಂದಿದ್ದ.

ಹೀಗಾಗಿ ಆವತ್ತು ಏನೆಲ್ಲಾ ಆಯ್ತು, ಕೊಲೆಯ ಮಾಹಿತಿ ಕಾರ್ತಿಕ್‌ಗೆ ಇತ್ತೇ ಎಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಕೊಲೆ ಮಾಹಿತಿ ಇದ್ದೂ ಪೊಲೀಸರಿಗೆ ತಿಳಿಸಲಿಲ್ಲವಾದರೆ ಸಂಕಷ್ಟ ಗ್ಯಾರಂಟಿ ಆಗಿದೆ. ಜೊತೆಗೆ ಎರಡು ದಿನಗಳ ಕಾಲ ಆರೋಪಿಗೆ ಆಶ್ರಯ ಕೊಟ್ಟಿರುವ ಶಂಕೆ ಇದೆ. ಆಶ್ರಯದ ಜೊತೆಗೆ ಹಣಕಾಸು ಸಹಾಯವೂ ಮಾಡಿರುವ ಅನುಮಾನ ಇದೆ. ಹೀಗಾಗಿ ಇಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ.

ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ವಿಚಾರಣೆಗೆ ಹಾಜರಾದ್ದಾಳೆ. ಈಕೆ ಆರೋಪಿ ಧನರಾಜ್‌ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ. ಹೀಗಾಗಿ ಸಮತಾಳನ್ನು ಮತ್ತೆ ವಿಚಾರಣೆಗೆ ಪೊಲೀಸರು ಕರೆದಿದ್ದು, ಇಂದು ಹಾಜರಾಗಲು ಸೂಚಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯ ಎಸಿಪಿ ಕಚೇರಿಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಮುಂದೆ ಸಮತಾ ಹಾಜರಾಗಲಿದ್ದಾಳೆ.

ಪವಿತ್ರ ಮುನಿಸು ತಣಿಸಲು ʼಕಂದಾಯ‌ʼ ಕಟ್ಟುತ್ತಿದ್ದ ದರ್ಶನ್

ದರ್ಶನ್‌ (Actor Darshan) ಹಾಗೂ ಪವಿತ್ರಾ (Pavithra Gowda) ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಕೊಲೆ ಪ್ರಕರಣಕ್ಕೂ ಮುಂಚೆ ದರ್ಶನ್‌ಗೆ ಪವಿತ್ರಾ ಗೌಡಳ ಮುನಿಸು ಹಲವು ಬಾರಿ ಆಪತ್ತು ತಂದು ಒಡ್ಡಿದೆ. ಪವಿತ್ರಾಗೌಡ ಮುನಿಸು ಶಮನ‌‌ ಮಾಡೋದೇ ಒಂದು ಚಾಲೇಂಜ್‌ ಆಗಿತ್ತು ದರ್ಶನ್‌ಗೆ. ಒಂದೊಂದು ಬಾರಿ ಕೋಪಿಸಿಕೊಂಡಾಗಲೂ ಒಂದೊಂದು ರೀತಿಯ ಪರಿಹಾರ ಕೊಡಬೇಕಿತ್ತು. ಲಕ್ಷ ,ಕೋಟಿ ಬೆಲೆ ಬಾಳುವ ವಸ್ತುಗಳೇ ಪವಿತ್ರಗೌಡ ಕೋಪ ಕಡಿಮೆಯಾಗಲು ಬೇಕಿತ್ತು.

ಕೆಲವೇ ದಿನಗಳ ಹಿಂದೆ ಒಂದು ಕಾರ್ ಕೂಡ ದರ್ಶನ್‌ ಅವರು ಪವಿತ್ರಾಗೆ ಗಿಫ್ಟ್‌ ಕೊಟ್ಟಿದ್ದರು ಎನ್ನಲಾಗಿದೆ. ಅನಂತರ‌ ಮತ್ತೊಂದು ಕಾರ್ ಗಿಫ್ಟ್ ಕೂಡ ಪವಿತ್ರಾ ಕೇಳಿದ್ದರಂತೆ. ದರ್ಶನ್ ದುಬೈ ಟ್ರಿಪ್ ಮುಗಿಸಿ ಬರುತ್ತಿದ್ದಂತೆ ಕೋಟಿ ಬೆಲೆಯ ಕಾರಿಗೆ ತೀವ್ರವಾದ ಬೇಡಿಕೆ ಇಟ್ಟಿದ್ದರು. ಕಾರು ಕೊಟ್ಟ ಬಳಿಕ ಇದೀಗ ಒಂದು ಪ್ರಾಣವೇ ಗಿಫ್ಟ್ ಕೊಟ್ಟಂತಾಗಿದೆ.

ದರ್ಶನ್‌ ಪವಿತ್ರಾ ಮುನಿಸು ಶಮನಕ್ಕೆ‌ ರೇಣುಕಾಸ್ವಾಮಿ ಕಿಡ್ನಾಪ್ ಅಸ್ತ್ರವಾಗಿತ್ತು ಎನ್ನಲಾಗಿದೆ. ಆರಂಭದಲ್ಲಿ‌ ಕಾರು ಕೊಡಿಸೋದಕ್ಕೆ ನಟ‌ ದರ್ಶನ್ ನಿರಾಕರಿಸಿದ್ದರು ಎಂಬ ಮಾಹಿಯೂ ಇದೆ. ಅಷ್ಟು ದೊಡ್ಡ ಮಟ್ಟದ ಹಣ ಸದ್ಯ ಇಲ್ಲವೆಂಬ ಕಾರಣ‌ ನೀಡಿ ಕಾರು ಕೊಡಿಸಲು ಬ್ರೇಕ್ ಕೂಡ ಹಾಕಕಿದ್ದರು. ಇದರಿಂದಾಗಿ ಕೋಪಗೊಂಡ ಪವಿತ್ರಾ ಬಹುತೇಕ ಒಂದು ತಿಂಗಳ ಕಾಲ ದರ್ಶನ್ ಬಳಿ ಮಾತು ಬಿಟ್ಟಿದ್ದಳು.

ಈ ಸಮಯದಲ್ಲಿಯೇ ರೇಣುಕಾಸ್ವಾಮಿ‌‌ ಮೆಸೇಜ್ ಅತಿರೇಕವಾಗಿತ್ತು. ಮಾತು ಬಿಟ್ಟಿದ್ದ ಕಾರಣ ದರ್ಶನ್‌‌ಗೆ ವಿಷಯ ತಿಳಿಸದ ಪವಿತ್ರಾ ಗೌಡ, ಈ ವಿಚಾರವನ್ನು ಪವನ್ ಬಳಿ ತಿಳಿಸಿದ್ದಳು. ಆದರೆ ಪವನ್‌ ಈ ವಿಚಾರವನ್ನು ದರ್ಶನ್‌ ಬಳಿ ನೇರವಾಗಿ ಹೇಳಿದ್ದ. ಆ ನಂತರ ನಡೆದದ್ದೇ ರೇಣುಕಾಸ್ವಾಮಿ ಕಿಡ್ನಾಪ್ ಮತ್ತು ಕೊಲೆ‌ ಪ್ರಕರಣ.

ಇದನ್ನೂ ಓದಿ: Actor Darshan: ದರ್ಶನ್‌ಗಾಗಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ? ಅಸಲಿ ಕಥೆ ಬೇರೆಯೇ ಇದೆ!

Continue Reading

ಕ್ರೈಂ

Robbery Case: ಬೆಂಗಳೂರಿನ ಎಟಿಎಂಗಳಲ್ಲಿ ಹರ್ಯಾಣದ ಗ್ಯಾಂಗ್‌ಗಳಿಂದ ದರೋಡೆ!

Robbery Case: ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ನಿನ್ನೆ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

VISTARANEWS.COM


on

ATM Robbery case
Koo

ಬೆಂಗಳೂರು: ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ (ATM theft) ಗ್ಯಾಂಗ್ ಬಗ್ಗೆ ಪೊಲೀಸರು ಇದೀಗ ತಲೆಕೆಡಿಸಿಕೊಂಡಿದ್ದಾರೆ. ಹರ್ಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ (Robbery Case) ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ನಿನ್ನೆ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇವರ ಖತರ್‌ನಾಕ್‌ ಬುದ್ಧಿ ಒಂದೆರಡಲ್ಲ. ಕಳ್ಳತನ ವೇಳೆ ಎಟಿಎಂನಲ್ಲಿರುವ ಸಿಸಿಟಿವಿ ಕ್ಯಾಮೆರಾ ಲೆನ್ಸ್‌ಗೆ ಕಪ್ಪು ಪೇಂಟ್‌ ಬಳಿಯುತ್ತಾರೆ. ಅಲ್ಲಿಗೆ ಅದೂ ಮಟಾಶ್.‌ ಬಳಿಕ ಗ್ಯಾಸ್ ಕಟರ್ ಬಳಸಿ ಎಟಿಎಂ ಓಪನ್ ಮಾಡಿ ಲಕ್ಷಾಂತರ ರೂಪಾಯಿ ಹಣ ದರೋಡೆ ಮಾಡುತ್ತಾರೆ. ಬೆಳ್ಳಂದೂರಿನಲ್ಲಿ ಜೂ. 6ರಂದು ಬೆಳಗಿನ ಜಾವ 3.30ಕ್ಕೆ ಕೃತ್ಯ ನಡೆಸಲಾಗಿದೆ. ಸದ್ಯ ಸಿಸಿಟಿವಿಯಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದೆ.

ಈ ಸಂಬಂಧ ಏಜೆನ್ಸಿ ಸಿಬ್ಬಂದಿ ಕಿರಣ್ ಎಂಬುವವರಿಂದ ದೂರು ದಾಖಲಾಗಿದೆ. ಬೆಳ್ಳಂದೂರು ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪ್ರತಿನಿತ್ಯ ರಾತ್ರಿ ವೇಳೆ ನಗರದ ಎಟಿಎಂಗಳ ಸುತ್ತಮುತ್ತಲೂ ಹೆಚ್ಚಾಗಿ ಗಸ್ತಿಗೆ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.

ಕಾರಿನ ಮೇಲೆ ಕಾಡಾನೆ ದಾಳಿ, ಕುಟುಂಬ ಪಾರು

ಕೊಡಗು: ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild animal attack) ಉಪಟಳ ಹೆಚ್ಚಾಗುತ್ತಿದ್ದು, ಕೊಡಗಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ (Elephant attack) ನಡೆಸಿದೆ. ಕಾರಿನೊಳಗೆ ಇದ್ದ ಕುಟುಂಬವೊಂದು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ವೀರಾಜಪೇಟೆಯ ಯಶವಂತ್ ಅವರ ಕುಟುಂಬವು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಯಶವಂತ್‌ ತಮ್ಮ ಕುಟುಂಬದೊಂದಿಗೆ ಟಿ.ಶೆಟ್ಟಿಗೇರಿಯಿಂದ ಇರ್ಪು ಕಡೆ ತೆರಳುತ್ತಿದ್ದಳು. ಈ ವೇಳೆ ಪೊನ್ನಂಪೇಟೆ ತಾಲೂಕಿನ ಕುರ್ಚಿ ಗ್ರಾಮದಲ್ಲಿ ಅಡ್ಡಗಟ್ಟಿದ ಆನೆಯು ಏಕಾಏಕಿ ದಾಳಿ ಮಾಡಿದೆ. ಆನೆ ಹತ್ತಿರ ಬರುತ್ತಿದ್ದಂತೆ ಕಾರಿನಿಂದ ಇಳಿದು ಓಡಿದ್ದಾರೆ. ಈ ವೇಳೆ ಆನೆಯು ಕಾರು ಜಖಂಗೊಳಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡಾನೆ ಹಾವಳಿಗೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿನಿತ್ಯ ಗ್ರಾಮದಲ್ಲಿ ಕಾಡಾನೆಗಳು ಅಡ್ಡಾಡುತ್ತಿದ್ದರೂ ಸೆರೆಹಿಡಿಯದೆ ಸುಮ್ಮನಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ

ರಾಯಚೂರು: ಕಾಡುಪ್ರಾಣಿಗಳ ಹಾವಳಿ (Wild Animal Attackಹೆಚ್ಚಾಗಿದ್ದು, ಜನ-ಸಾಮಾನ್ಯರು ಆತಂಕದಲ್ಲೇ ಓಡಾಡುವಂತಾಗಿದೆ. ಆಹಾರ ಅರಸಿ ನಾಡಿಗೆ ಕಾಲಿಡುತ್ತಿರುವ ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಜತೆಗೆ ಸಾಕುಪ್ರಾಣಿಗಳನ್ನು ಕೊಂದು ಎತ್ತಿಕೊಂಡು ಹೋಗುತ್ತಿವೆ. ಸದ್ಯ ರಾಯಚೂರಿನ ದೇವದುರ್ಗ ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಮೂವರ ಮೇಲೆ ಚಿರತೆ (Leopard attack) ದಾಳಿ ನಡೆಸಿದೆ.

ಚಿರತೆ ದಾಳಿಯಿಂದಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮಲ್ಲಣ್ಣ, ರಂಗನಾಥ್‌, ಹನಮೇಶ ಕಮದಾಳ ಗಾಯಾಳುಗಳು. ಸದ್ಯ ಗಾಯಾಳುಗಳನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಮೂವರು ಜಮೀನಿಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಚಿರತೆಯು ಮೂವರ ಮೇಲೂ ಎರಗಿ ದಾಳಿ ಮಾಡಿ ಗಾಯಗೊಳಿಸಿದೆ.

ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಇನ್ನೂ ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಮದಾಳು,ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಸೆರೆಹಿಡಿಯುವಂತೆ ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Wild Animals Attack: ವಿಜಯನಗರ: ನಾಡಿಗೆ ನುಗ್ಗಿದ ಕರಡಿಯನ್ನು ರಾತ್ರೋರಾತ್ರಿ ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Rain News: ಬೆಂಗಳೂರಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಇಂದು ಕರಾವಳಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯ ಉತ್ತರಕನ್ನಡದಲ್ಲಿ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

Dengue Scare: ಸಣ್ಣ ವಯಸ್ಸಿನ ಮಕ್ಕಳಿಗೂ ಡೆಂಗ್ಯೂ ರೋಗ ಬರುತ್ತಿದೆ. ಅಧಿಕಾರಿಗಳು ಕೊಠಡಿ ಬಿಟ್ಟು ಹೊರಗೆ ಬರುತ್ತಿಲ್ಲ. ಸರ್ಕಾರ ಡೆಂಗ್ಯೂ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರೆ ಮಾತ್ರ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ. ಬೆಂಗಳೂರು ಸೇರಿದಂತೆ ಅನೇಕ ಕಡೆ ಕಸದ ರಾಶಿ ಬಿದ್ದಿದೆ. ಅದನ್ನು ಸ್ವಚ್ಛ ಮಾಡಲು ಸರ್ಕಾರ ಗಮನಹರಿಸಬೇಕು ಎಂದು ಆರ್.ಅಶೋಕ್‌ ಒತ್ತಾಯಿಸಿದರು.

VISTARANEWS.COM


on

Dengue Scare
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಿಂದ ಈವರೆಗೂ ಡೆಂಗ್ಯೂನಿಂದ (Dengue Cases) 6 ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ, “ರಾಜ್ಯ ಸರ್ಕಾರವೇ ಜನರಿಗೆ ಉಚಿತವಾಗಿ ಡೆಂಗ್ಯೂ ಪರೀಕ್ಷೆ (Dengue Scare) ಮಾಡಿಸಬೇಕು” ಎಂಬುದಾಗಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಆಗ್ರಹಿಸಿದ್ದಾರೆ.

ಆರ್‌.ಅಶೋಕ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಸೌಲಭ್ಯ ಪರಿಶೀಲಿಸಿದ ಬಳಿಕ ಮಾತನಾಡಿದರು. “ಡೆಂಗ್ಯೂ ರೋಗ ಹೀಗೆ ಹರಡುವಾಗ ಸರ್ಕಾರ ಪ್ರತಿ ತಾಲೂಕಿನಲ್ಲಿ ಟಾಸ್ಕ್‌ ಫೋರ್ಸ್‌ ರಚಿಸಿ ಔಷಧಿ ಪೂರೈಸುವ, ರೋಗ ನಿಯಂತ್ರಿಸುವ ಕ್ರಮಗಳನ್ನು ವಹಿಸಬೇಕಿತ್ತು. ಇವ್ಯಾವುದನ್ನೂ ಸರ್ಕಾರ ಮಾಡಿಲ್ಲ. ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಡೆಂಗ್ಯೂಗೆ ಒಳಗಾಗಿದ್ದಾರೆ. ಇವರಿಗೆ ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ತೈಲ ದರ ಏರಿಕೆ ಸೇರಿದಂತೆ ವಿವಿಧ ತೆರಿಗೆಗಳನ್ನು ಸರ್ಕಾರ ಹಾಕಿರುವಾಗ ಜನರಿಗೆ ಉಚಿತ ಪರೀಕ್ಷೆ ಮಾಡಿಸಲು ಸಾಧ್ಯವಿಲ್ಲವೇ? ಉಚಿತ ಪರೀಕ್ಷೆ ಮಾಡಿದರೆ ಸುಮಾರು 10 ಕೋಟಿ ರೂ. ಖರ್ಚಾಗಬಹುದು. ಅಷ್ಟು ಹಣವನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲವೇ? ಅದಕ್ಕೂ ತೆರಿಗೆ ಹಾಕಬೇಕೆ? ಕೆಲ ಆರೋಗ್ಯ ಕೇಂದ್ರಗಳು 1,000 ರೂ.ವರೆಗೂ ಪರೀಕ್ಷಾ ಶುಲ್ಕ ವಿಧಿಸುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ವೆಚ್ಚವನ್ನು ಭರಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ಡೆಂಗ್ಯೂ ರೋಗ ವೇಗವಾಗಿ ಹರಡುತ್ತಿದ್ದು, ಪ್ರತಿ ದಿನ ಮೂರರಿಂದ ನಾಲ್ಕು ಜನರು ಸಾವಿಗೀಡಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಎಲ್ಲ ಭಾಗಗಳಲ್ಲಿ ಜನರು ಭಯಕ್ಕೊಳಗಾದರೂ ಸರ್ಕಾರಕ್ಕೆ ಇದರ ಭಯ ಬಂದಿಲ್ಲ. 100 ಮಾದರಿ ಪರೀಕ್ಷೆ ಮಾಡಿದರೆ 13-14 ರಲ್ಲಿ ಡೆಂಗ್ಯೂ ಲಕ್ಷಣ ಕಂಡುಬರುತ್ತಿದೆ. ಬೇರೆ ರೋಗಗಳಿರುವ ವ್ಯಕ್ತಿಗಳಿಗೆ ಡೆಂಗ್ಯೂ ಬಂದರೆ ಸಾವಿನ ಸಾಧ್ಯತೆ ಹೆಚ್ಚಿರುತ್ತದೆ. ಎಲ್ಲೆಡೆ ಕಸದ ರಾಶಿ ಇದೆ, ಮಳೆಯಿಂದಾಗಿ ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿದೆ. ಆದರೂ ಸರ್ಕಾರ ಏನೂ ಕ್ರಮ ವಹಿಸಿಲ್ಲ ಎಂದು ದೂರಿದರು.

“ಅತಿ ಸಣ್ಣ ವಯಸ್ಸಿನ ಮಕ್ಕಳಿಗೂ ಡೆಂಗ್ಯೂ ರೋಗ ಬರುತ್ತಿದೆ. ಅಧಿಕಾರಿಗಳು ಕೊಠಡಿ ಬಿಟ್ಟು ಹೊರಗೆ ಬರುತ್ತಿಲ್ಲ. ಸರ್ಕಾರ ಡೆಂಗ್ಯೂ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರೆ ಮಾತ್ರ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ. ಬೆಂಗಳೂರು ಸೇರಿದಂತೆ ಅನೇಕ ಕಡೆ ಕಸದ ರಾಶಿ ಬಿದ್ದಿದೆ. ಅದನ್ನು ಸ್ವಚ್ಛ ಮಾಡಲು ಸರ್ಕಾರ ಗಮನಹರಿಸಬೇಕು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರನ್ನು ಬಳಸಿಕೊಂಡು ಮನೆ ಮನೆಗೆ ಹೋಗಿ ಪರೀಕ್ಷೆ ಮಾಡಬೇಕು. ಪ್ರತಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಒಂದು ವಾರ್ಡ್‌ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

ಆತಂಕ ನಿವಾರಿಸಿ

“ಜನರಲ್ಲಿ ಡೆಂಗ್ಯೂ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು. ಉದ್ಯಾನ, ಸಾರ್ವಜನಿಕ ಸ್ಥಳ, ನೀರು ನಿಲ್ಲುವ ಸ್ಥಳ ಸೇರಿದಂತೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಮಾಡಿಸಬೇಕು. ಆರೋಗ್ಯ ಸಚಿವರು ಎಲ್ಲ ಜಿಲ್ಲೆಗಳಿಗೆ ಹೋಗಿ ಜನರನ್ನು ಭೇಟಿ ಮಾಡಬೇಕು. ಕಾಂಗ್ರೆಸ್‌ನ ಎಲ್ಲ ಸಚಿವರು, ಶಾಸಕರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಬೇಕು” ಎಂದು ಸಲಹೆ ನೀಡಿದರು.

“ಇದರ ಜತೆಗೆ ಝೀಕಾ, ಕಾಲರಾ ಕೂಡ ಕಂಡುಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಈ ಮೂರು ರೋಗಗಳಿಂದ ಜನರನ್ನು ಕಾಪಾಡಲು ಸರ್ಕಾರ ಹೆಚ್ಚು ಗಮನಹರಿಸಬೇಕು. ಬಿಬಿಎಂಪಿ ಆಯುಕ್ತರಿಗೇ ಸೊಳ್ಳೆ ಕಚ್ಚಿ ಡೆಂಗ್ಯೂ ಬಂದಿರುವುದಾಗ ಬಿಬಿಎಂಪಿ ಬೇರೆಯವರನ್ನು ಕಾಪಾಡಲು ಸಾಧ್ಯವಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸಭೆ ಮಾಡುವುದರಿಂದ ಏನೂ ಆಗುವುದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಕೆಲಸ ಮಾಡಬೇಕು. ನಗರದಲ್ಲಿ ಬಿದ್ದಿರುವ ರಾಶಿ ಕಸವನ್ನು ವಿಲೇವಾರಿ ಮಾಡಲು ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಬೇಕು. ಹೆಚ್ಚು ಹಣ ನೀಡಬೇಕು” ಎಂದರು.

ಇದನ್ನೂ ಓದಿ: Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

Continue Reading
Advertisement
Mumbai rain
ಪ್ರಮುಖ ಸುದ್ದಿ2 mins ago

Mumbai Rain : ಭಾನುವಾರ ರಾತ್ರಿ ಪೂರ್ತಿ ಸುರಿದ ಮಳೆಗೆ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತ

Mumbai hit and run
ದೇಶ7 mins ago

Mumbai Hit And Run: ಹಿಟ್‌ ಆ್ಯಂಡ್‌ ರನ್‌ಗೂ ಮುನ್ನ ಪಬ್‌ಗೆ ಹೋಗಿದ್ದ ಆರೋಪಿ; ವೈರಲ್‌ ಆಗ್ತಿದೆ ಈ ವಿಡಿಯೋ

Yuzvendra Chahal
ಕ್ರಿಕೆಟ್28 mins ago

Yuzvendra Chahal : ಪತ್ನಿ ಧನಶ್ರೀ ವರ್ಮಾಗೆ ವಿಶ್ವ ಕಪ್​ ಪದಕ ಅರ್ಪಿಸಿದ ಯಜ್ವೇಂದ್ರ ಚಹಲ್​

Rahul Gandhi
ರಾಜಕೀಯ36 mins ago

Rahul Gandhi: ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಗೆ ಇರುವ ಅಧಿಕಾರ ಏನೇನು?

karthik purohith samatha actor darshan
ಕ್ರೈಂ38 mins ago

Actor Darshan: ಪವಿತ್ರ ಗೌಡ ಆಪ್ತೆ, ಶಾಸಕರ ಕಾರು ಚಾಲಕನಿಗೆ ಸಂಕಷ್ಟ; 2ನೇ ಬಾರಿ ವಿಚಾರಣೆ, ಬಂಧನ?

Kashmir Encounter
ಪ್ರಮುಖ ಸುದ್ದಿ49 mins ago

Terrorists Killed : ನಕಲಿ ಬಂಕರ್​ನಲ್ಲಿ ಅಡಗಿ ಕುಳಿತಿದ್ದ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾ ಪಡೆ

ATM Robbery case
ಕ್ರೈಂ1 hour ago

Robbery Case: ಬೆಂಗಳೂರಿನ ಎಟಿಎಂಗಳಲ್ಲಿ ಹರ್ಯಾಣದ ಗ್ಯಾಂಗ್‌ಗಳಿಂದ ದರೋಡೆ!

Abhishek Sharma
ಪ್ರಮುಖ ಸುದ್ದಿ1 hour ago

Abhishek Sharma : ಅಭಿಷೇಕ್ ಶರ್ಮಾ ದಾಖಲೆಯ ಶತಕ ಬಾರಿಸಿದ್ದು ಶುಭ್​​ಮನ್ ಗಿಲ್​ ಬ್ಯಾಟ್​ನಲ್ಲಿ!

Ghee benefits
ಲೈಫ್‌ಸ್ಟೈಲ್2 hours ago

How to spot fake ghee: ನಾವು ಖರೀದಿಸಿದ ತುಪ್ಪ ಶುದ್ಧವೋ ಕಲಬೆರಕೆಯೋ ಪರೀಕ್ಷಿಸುವುದು ಹೇಗೆ?

ರಾಜಮಾರ್ಗ ಅಂಕಣ bola akshta pujari
ಅಂಕಣ2 hours ago

ರಾಜಮಾರ್ಗ ಅಂಕಣ: ದಕ್ಷಿಣ ಆಫ್ರಿಕಾದಲ್ಲಿ ಚಿನ್ನದ ಪದಕ ಗೆದ್ದ ಕಾರ್ಕಳದ ಬೋಳ ಅಕ್ಷತಾ ಪೂಜಾರಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ13 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ15 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ16 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌