Viral Video | ಪಂಜರದಲ್ಲಿರುವ ಮನುಷ್ಯರನ್ನು ನೋಡಲು ಬಂದು ನಿಲ್ಲುವ ಕಾಡು ಪ್ರಾಣಿಗಳು ! - Vistara News

ವೈರಲ್ ನ್ಯೂಸ್

Viral Video | ಪಂಜರದಲ್ಲಿರುವ ಮನುಷ್ಯರನ್ನು ನೋಡಲು ಬಂದು ನಿಲ್ಲುವ ಕಾಡು ಪ್ರಾಣಿಗಳು !

ಪಂಜರದಲ್ಲಿ ನಿಂತಿರುವ ಮನುಷ್ಯರನ್ನು ನೋಡಲೆಂದು ಹುಲಿಗಳು ಬಂದು ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು. ಅವು ಆ ಸರಳುಗಳಿಗೆ ಕಾಲುಕೊಟ್ಟು ನಿಂತಿವೆ.

VISTARANEWS.COM


on

Cage
ಮನುಷ್ಯರೆಲ್ಲ ಪಂಜರದಲ್ಲಿ, ಪ್ರಾಣಿಗಳೆಲ್ಲ ಹೊರಗೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಡಿನಲ್ಲಿರಬೇಕಾದ ಪ್ರಾಣಿಗಳನ್ನು ಹಿಡಿದುಕೊಂಡು ಹೋಗಿ ಪ್ರಾಣಿ ಸಂಗ್ರಹಾಲಯದಲ್ಲಿ ಪಂಜರದಲ್ಲಿ ಇಡುವುದು, ಅವುಗಳನ್ನು ನೋಡಲೆಂದು ಪ್ರವಾಸಿಗರು ಝೂಗೆ ಬರುವುದು ಸಾಮಾನ್ಯ. ಕಾಡಿಗೆ ಹೋಗಿ ನೋಡಲಾಗದ ಹುಲಿ, ಚಿರತೆ, ಆನೆ, ಸಿಂಹ, ಕರಡಿಗಳಂಥ ಹತ್ತು-ಹಲವು ಬಗೆಯ ಪ್ರಾಣಿಗಳನ್ನು ಇಲ್ಲಿ ನೋಡಿ, ಮನುಷ್ಯರು ಖುಷಿ ಪಡುತ್ತಾರೆ.
ಝೂ ಗೆ ಹೋದಾಗ ಪ್ರಾಣಿಗಳು ಪಂಜರದೊಳಗೆ ಇರುತ್ತವೆ, ನಾವು ಮನುಷ್ಯರು ಹೊರಗೆ ನಿಲ್ಲುತ್ತೇವೆ. ಪಂಜರದ ಬಲವಾದ ಸರಳುಗಳೇ ಮನುಷ್ಯರಿಗೆ ರಕ್ಷೆ. ಆದರೆ ಇದೀಗ ಟ್ವಿಟರ್​​ನಲ್ಲಿ ವೈರಲ್​ ಆಗುತ್ತಿರುವ ವಿಡಿಯೋ ವಿಚಿತ್ರವಾಗಿದೆ. ಅಲ್ಲಿ ಪ್ರಾಣಿಗಳೆಲ್ಲ ಕಾಡಿನಂಥ ಪ್ರದೇಶದಲ್ಲಿ ಅಡ್ಡಾಡಿಕೊಂಡಿದ್ದರೆ, ಮನುಷ್ಯರು ಒಂದು ಪಂಜರದಲ್ಲಿ ನಿಂತು, ಅವುಗಳನ್ನು ನೋಡುತ್ತಿದ್ದಾರೆ.

Tansu YEĞEN ಎಂಬುವರು ತಮ್ಮ ಟ್ವಿಟರ್​ ಅಕೌಂಟ್​​ನಲ್ಲಿ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ‘ಇದೊಂದು ಮಾನವ ಸಂಗ್ರಹಾಲಯ (ಮನುಷ್ಯರ ಝೂ). ಪಂಜರಗಳಲ್ಲಿರುವ ಅಪಾಯಕಾರಿ ಮನುಷ್ಯರನ್ನು, ಪ್ರಾಣಿಗಳು ನೋಡುತ್ತಿವೆ’ ಎಂದು ಕ್ಯಾಪ್ಷನ್​ ಬರೆದಿದ್ದಾರೆ. ಮನುಷ್ಯರು ಇರುವ ಪಂಜರದ ಸುತ್ತ ಹುಲಿಗಳು ಸುತ್ತುವುದನ್ನು, ಪಂಜರದ ಮೇಲೆ ಹತ್ತಿ ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು.

ಈ ವಿಡಿಯೋ ಕ್ಲಿಪ್​​, ಚೀನಾದ ಚಾಂಗ್​ಕಿಂಗ್​ ನಗರದಲ್ಲಿರುವ ಲೆಹೆ ಲೆಡು ಮೃಗಾಲಯದಲ್ಲಿ ಚಿತ್ರೀಕರಿಸಿದ್ದು ಎಂದು ಹೇಳಲಾಗಿದೆ. ಇದು ವಿಭಿನ್ನ ಝೂ. ಇಲ್ಲಿ ಪ್ರಾಣಿಗಳನ್ನು ಸೆರೆಯಲ್ಲಿಡುವ ಬದಲು, ಪ್ರವಾಸಿಗರೇ ಪಂಜರದಲ್ಲಿ ನಿಂತು ವನ್ಯಜೀವಿಗಳನ್ನು ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ. ಈ ಪಂಜರಗಳ ಬಳಿ ಮಾಂಸದ ತುಂಡು, ನೀರಿನ ಪಾಟ್​​ಗಳನ್ನು ಇಡಲಾಗಿದೆ. ಅವುಗಳ ಆಸೆಗೆ ಅಲ್ಲಿ ಪ್ರಾಣಿಗಳು ಸದಾ ಇರುತ್ತವೆ. ಹಾಗೇ ಪಂಜರದಲ್ಲೇ ಇದ್ದರೂ, ಎಚ್ಚರಿಕೆಯಿಂದ ಇರುವಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಪಂಜರದ ಸರಳುಗಳ ಮೇಲೆ ಕೈ ಇಡುವಂತಿಲ್ಲ, ಪಂಜರಕ್ಕೆ ದೇಹವನ್ನು ಒತ್ತಿಕೊಂಡು ನಿಲ್ಲುವಂತಿಲ್ಲ ಎಂಬ ಸೂಚನೆಯನ್ನು ಮುಂಚಿತವಾಗಿಯೇ ಕೊಡಲಾಗುತ್ತದೆ.

ಇದನ್ನೂ ಓದಿ: Viral Video | 30 ನಿಮಿಷದಲ್ಲಿ 21‌ ಪ್ಲೇಟ್ ಚೋಲೆ ಕುಲ್ಚೆ ತಿಂದ ತಿಂಡಿಪೋತನಿಗೆ ಸಿಕ್ಕ ಬಹುಮಾನ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಮದುವೆಗೆ ಬಂದ ಮಾಜಿ ಪ್ರಿಯಕರ; ಆಮೇಲೆ ನಡೆದಿದ್ದೇ ಬೇರೆ- ಸಿನಿಮಾ ಸ್ಟೈಲ್‌ನಲ್ಲಿ ಟ್ವಿಸ್ಟ್‌ ಎಂದ ನೆಟ್ಟಿಗರು

Viral Video: ನೂತನ ಜೋಡಿ ಜೊತೆಗೆ ಫೋಟೋ ತೆಗೆಸಿಕೊಳ್ಳಲೆಂದು ವೇದಿಕೆಗೆ ಬಂದಿದ ಮಾಜಿ ಪ್ರಿಯಕರ ಏಕಾಏಕಿ ವರನ ಮೇಲೆ ಹಲ್ಲೆ ನಡೆಸುತ್ತಾನೆ. ಮೂಖಾಮೂತಿ ನೋಡದೇ ವರನನ್ನು ಚಚ್ಚಿದ ಆ ಯುವಕನನ್ನು ಕಂಡು ಒಂದು ಕ್ಷಣಕ್ಕೆ ಎಲ್ಲರು ಗರ ಬಡಿದಂತೆ ನಿಂತಿದ್ದರು. ತಕ್ಷಣ ವಧು ಹಾಗೂ ಸಂಬಂಧಿಕರು ವರನನ್ನು ರಕ್ಷಿಸಲು ಪ್ರಯತ್ನಿಸುತ್ತಾರೆ.

VISTARANEWS.COM


on

Viral Video
Koo

ರಾಜಸ್ಥಾನ: ಸಾಮಾನ್ಯವಾಗಿ ಟಿವಿ ಸೀರಿಯಲ್‌ಗಳಲ್ಲಿ ತ್ರಿಕೋನ ಪ್ರೇಮಕಥೆಗಳು, ಇನ್ನೇನು ತಾಳಿ ಕಟ್ಟಬೇಕೆನ್ನುವ ವೇಳೆ ಮಾಜಿ ಪ್ರೇಯಸಿಯೋ ಅಥವಾ ಪ್ರಿಯಕರನೋ ಬಂದು ಮದುವೆ ನಿಲ್ಲಿಸೋದು ಹೀಗೆ ಚಿತ್ರ ವಿಚಿತ್ರ ಹೈಡ್ರಾಮಾಗಳನ್ನು ನೋಡಿರ್ತೇವೆ. ಇಂತಹದ್ದೇ ಒಂದು ಘಟನೆ ಇದೀಗ ರಾಜಸ್ಥಾನ(Rajasthan)ದಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಮದುವೆಗೆ ಹೋಗಿ ದಾಂಧಲೆ ಎಬ್ಬಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದ್ದು, ಹಲವು ರೀತಿಯಲ್ಲಿ ಕಮೆಂಟ್‌ಗಳು ಬಂದಿವೆ.

ವೈರಲ್‌ ವಿಡಿಯೋದಲ್ಲಿ ಏನಿದೆ?

ಘರ್‌ ಕೇ ಕಲೇಶ್‌ ಎಂಬ ಸೋಶಿಯಲ್‌ ಮೀಡಿಯಾ ಹ್ಯಾಂಡ್ಲರ್‌ ಈ ವಿಡಿಯೋ ಶೇರ್‌ ಮಾಡಿದ್ದು, ಮದುವೆಯಲ್ಲಿ ಬಾಲಿವುಡ್‌ ಸಿನಿಮಾದಂತಹ ಟ್ವಿಸ್ಟ್‌ ಎಂದು ಬರೆದುಕೊಂಡಿದ್ದಾರೆ. ನೂತನ ಜೋಡಿ ಜೊತೆಗೆ ಫೋಟೋ ತೆಗೆಸಿಕೊಳ್ಳಲೆಂದು ವೇದಿಕೆಗೆ ಬಂದಿದ ಮಾಜಿ ಪ್ರಿಯಕರ ಏಕಾಏಕಿ ವರನ ಮೇಲೆ ಹಲ್ಲೆ ನಡೆಸುತ್ತಾನೆ. ಮೂಖಾಮೂತಿ ನೋಡದೇ ವರನನ್ನು ಚಚ್ಚಿದ ಆ ಯುವಕನನ್ನು ಕಂಡು ಒಂದು ಕ್ಷಣಕ್ಕೆ ಎಲ್ಲರು ಗರ ಬಡಿದಂತೆ ನಿಂತಿದ್ದರು. ತಕ್ಷಣ ವಧು ಹಾಗೂ ಸಂಬಂಧಿಕರು ವರನನ್ನು ರಕ್ಷಿಸಲು ಪ್ರಯತ್ನಿಸುತ್ತಾರೆ.

ಈ ವಿಡಿಯೋ ಸಾಮಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ. ಬಾಯ್‌ಫ್ರೆಂಡ್‌ ಮತ್ತು ವರನ ನಡುವೆ ಕಬೀರ್‌ ಸಿಂಗ್‌ನಂತಹ ಜಗಳ ರಾಜಸ್ಥಾನ ಬಿಲ್ವಾರಾದಲ್ಲಿ ಮದುವೆ ವೇದಿಕೆಯಲ್ಲಿ ನಡೆದಿದೆ ಎಂಬ ಬರಹದೊಂದಿಗೆ ಈ ವಿಡಿಯೋ ಶೇರ್‌ ಮಾಡಲಾಗಿದೆ. ಕೆಲವರು ಆ ವ್ಯಕ್ತಿಯನ್ನು ಹೇಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಇದೇ ರೀತಿಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿತ್ತು. ಮದುವೆ ಮಂಟಪದಲ್ಲೇ ವರನಿಗಾಗಿ ಇಬ್ಬರು ಯುವತಿಯರ ನಡುವೆ ಮಾರಾಮಾರಿ ನಡೆದಿದ್ದು, ಈ ಫೈಟ್‌ ಯಾವ WWFಗೂ ಕಡಿಮೆಯಿಲ್ಲ. ಈ ವೈರಲ್‌(Viral Video) ಆಗಿರುವ ವಿಡಿಯೋಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡಿದ್ದರು.

ಅನಿತಾ ಸುರೇಶ್‌ ಶರ್ಮಾ ಎಂಬ ಇನ್‌ಸ್ಟಾಗ್ರಾಂ ಬಳಕೆದಾರರೊಬ್ಬರು ಈ ವಿಡಿಯೋ ಹಂಚಿಕೊಂಡಿದ್ದು, ಇಬ್ಬರು ಯುವತಿಯರು ವೇದಿಕೆಯಲ್ಲೇ ಯುವಕನಿಗಾಗಿ ಹೊಡೆದಾಟ ನಡೆಸಿದ್ದಾರೆ. ಇಲ್ಲಿ ಮಧು ಮತ್ತು ವರನ ಪ್ರೇಯಸಿ ನಡುವೆ ಮಾರಾಮಾರಿ ನಡೆದಿದೆ. ಒಬ್ಬರನೊಬ್ಬರು ಬೈದಾಡಿಕೊಂಡು ಇಬ್ಬರು ಜುಟ್ಟು ಹಿಡಿ ಹೊಡೆದಾಟ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಯುವಕ ಇನ್ನೇನು ತಾಳಿ ಕಟ್ಟಬೇಕೆನ್ನುವ ಹೊತ್ತಲ್ಲಿ ಮದುವೆ ಮಂಟಪಕ್ಕೆ ಬಂದಿದ್ದ ಆತನ ಪ್ರೇಯಸಿ ತಕರಾರು ಮಾಡಿದ್ದಾಳೆ. ಆಗ ವೇದಿಕೆಯಲ್ಲಿದ್ದ ವಧು ಕೂಡ ಆಕೆಯ ಜೊತೆ ಜಗಳಕ್ಕಿಳಿದಿದ್ದಾಳೆ. ಇನ್ನು ಇಬ್ಬರು ಯುವತಿಯರೂ ಕೆಂಪು ಬಣ್ಣ ಮದುವೆ ಲೆಹಂಗಾ ತೊಟ್ಟಿದ್ದು, ಎಲ್ಲರೆದುರೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. ನಡುವಲ್ಲಿದ್ದ ವರ ಇಬ್ಬರನ್ನೂ ತಡೆಯಲು ಪ್ರಯತ್ನಿಸಿದ್ದನಾದರೂ ಯುವತಿಯರಿಬ್ಬರು ಯಾರ ಮಾತನ್ನು ಕಿವಿಗೆ ಹಾಕಿಕೊಳ್ಳಲೇ ಇಲ್ಲ. ಇನ್ನು ಮದುವೆ ಆಗಮಿಸಿದ ಅತಿಥಿಗಳಲ್ಲಿ ಒಬ್ಬರು ಈ ಘಟನೆ ವಿಡಿಯೋ ಮಾಡಿದ್ದು, ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಐದು ದಿನಗಳ ಹಿಂದೆ ಇನ್‌ಸ್ಟಾ ಗ್ರಾಂನಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, 1ಲಕ್ಷಕ್ಕೂ ಅಧಿಕ ಲೈಕ್ಸ್‌ ಬಂದಿದೆ.

ಇದನ್ನೂ ಓದಿ: Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Continue Reading

ಕೊಡಗು

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Love Case : ಮಗಳನ್ನು ಪ್ರೀತಿಸುತ್ತಿದ್ದ ಯುವಕ ಮನೆಗೆ ಬಂದಿದ್ದಕ್ಕೆ ಮುಖಕ್ಕೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಸುಟ್ಟ ಗಾಯಗಳಿಂದ ಯುವ ಪ್ರೇಮಿ ಆಸ್ಪತ್ರೆ ಪಾಲಾಗಿದ್ದಾನೆ.

VISTARANEWS.COM


on

By

Love Case Father throws hot water on man who loved his daughter for coming home
Koo

ಕೊಡಗು: ಮಗಳನ್ನು ಪ್ರೀತಿಸುತ್ತಿದ್ದ (Love Case) ಯುವಕನಿಗೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ಘಟನೆ ನಡೆದಿದೆ. ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾದ ಪ್ರೇಮಿಯಾಗಿದ್ದಾನೆ.

ಸುಹೇಲ್‌ಗೆ ಮದೆನಾಡಿನ ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು. ಇಬ್ಬರು ಕೈ-ಕೈ ಹಿಡಿದು ಊರೆಲ್ಲ ಓಡಾಡಿದ್ದರು. ಇವರಿಬ್ಬರ ಪ್ರೀತಿ ವಿಚಾರವು ಯುವತಿ ಮನೆಯವರಿಗೆ ತಿಳಿದುಹೋಗಿತ್ತು. ಇವರಿಬ್ಬರ ಪ್ರೀತಿಗೆ ನಿರಾಕರಿಸಿದ್ದರು. ಇತ್ತ ಯುವತಿ ಸುಹೇಲ್‌ಗೆ ಫೋನ್‌ ಮಾಡಿ ಮನೆಯಲ್ಲಿ ಹಿಂಸೆಯಾಗುತ್ತಿದೆ. ಮನೆಗೆ ಬಂದು ನನ್ನನ್ನು ಕರೆದುಕೊಂಡು ಹೋಗು ಎಂದಿದ್ದಾಳೆ.

ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್‌ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್‌ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತ ಕುದಿಯುತ್ತಿದ್ದ ನೀರನ್ನು ಎರಚಿದ್ದಾರೆ. ಬಿಸಿ ನೀರು ಎರಚಿದ್ದರಿಂದ ಸುಹೇಲ್‌ನ ಮುಖ ಹಾಗೂ ಕುತ್ತಿಗೆ ಭಾಗವೆಲ್ಲ ಸುಟ್ಟು ಹೋಗಿದೆ.

ಸದ್ಯ ಸುಹೇಲ್‌ಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಾಶತ್‌ ಸುಹೇಲ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಟ್ಟುಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸದ್ಯ ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌

ಉತ್ತರಪ್ರದೇಶ: ಸೊಸೆ ಮೇಲೆ ಅತ್ತೆ ಮತ್ತು ನಾದಿನಿ ಸೇರಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಇಟಾ ಪ್ರದೇಶದಲ್ಲಿ ನಡೆದಿದೆ. ವಿಚಿತ್ರವೆಂದರೆ ಮಹಿಳೆಯ ಪತಿ, ತನ್ನ ತಾಯಿ ಮತ್ತು ತಂಗಿಯನ್ನು ತಡೆಯುವ ಬದಲು ವಿಡಿಯೋ ರೆಕಾರ್ಡ್‌(Video record) ಮಾಡಿದ್ದಾನೆ. ಬಿಟ್ಟು ಬಿಡುವಂತೆ ಎಷ್ಟೇ ಗೋಗರೆದರೂ ಕೇಳದೆ ಮಹಿಳೆ ಮೇಲೆ ಬಹಳ ಕ್ರೂರವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದೆ.

ಇಟಾದಲ್ಲಿ ಈ ಘಟನೆ ನಡೆದಿದ್ದು, ಸೊಸೆಯನ್ನು ಅತ್ತೆ ಮತ್ತು ನಾದಿನಿ ಸೇರಿಕೊಂಡು ಚೆನ್ನಾಗಿ ಥಳಿಸಿದ್ದು, ಬಳಿಕ ಆಕೆಯನ್ನು ನೆಲದಲ್ಲಿ ಎಳೆದಾಡಿದ್ದಾರೆ. ಅಲ್ಲೇ ಇದ್ದ ಪತಿ ಮತ್ತು ಮಾವನ ಬಳಿ ಸಹಾಯಕ್ಕಾಗಿ ಆಕೆ ಎಷ್ಟೇ ಅಂಗಲಾಚಿದರೂ ಆಕೆ ಮೇಲೆ ನಡೆಯುತ್ತಿದ್ದ ಮಾರಣಾಂತಿಕ ಹಲ್ಲೆ ಮಾತ್ರ ನಿಲ್ಲುವುದೇ ಇಲ್ಲ. ಮಹಿಳೆಯ ಜೋರಾಗಿ ಕಿರುಚಿಕೊಂಡು ಬಿಟ್ಟು ಬಿಡಿ ಎಂದು ಬೇಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಕೈಹಿಡಿದು ರಕ್ಷಿಸಬೇಕಿದ್ದ ಪತಿಯೇ ಆಕೆಯ ಸಹಾಯಕ್ಕೆ ಬಾರದೇ ಬರೀ ವಿಡಿಯೋ ಮಾಡುತ್ತಾ ನಿಂತಿದ್ದ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ. ಇಂತಹ ಕ್ರೂರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪೊಲೀಸರು ಸ್ವಯಂಪ್ರೇರಿತರಾಗಿ ದೂರ ದಾಖಲಿಸಿಕೊಂಡು ಆರೋಪಿಗಳನ್ನು ತಕ್ಷಣ ಅರೆಸ್ಟ್‌ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Viral Video: ತೆಲಂಗಾಣದ ಪೆಟ್ರೋಲ್‌ ಬಂಕ್‌ನಲ್ಲಿ ಲಾರಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕೂಡಲೇ ಸಿಬ್ಬಂದಿ ಏಕಾಂಗಿಯಾಗಿ ನಂದಿಸಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸಿಬ್ಬಂದಿಯ ಸಮಯೋಚಿತ ನಿರ್ಧಾರವನ್ನು, ಧೈರ್ಯವನ್ನು ಹಲವರು ಮುಕ್ತಕಂಠದಿಂದ ಹೊಗಳಿದ್ದಾರೆ. ಈತನೇ ನಿಜವಾದ ಹೀರೋ ಎಂದು ಅನೇಕರು ಶ್ಲಾಘಿಸಿದ್ದಾರೆ.

VISTARANEWS.COM


on

Viral Video
Koo

ಹೈದರಾಬಾದ್‌: ದೇಶದಲ್ಲಿ ತಾಪಮಾನ ಹೆಚ್ಚಾಗುತ್ತಿದೆ. ಇತ್ತೀಚೆಗೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ತಾಪಮಾನ ಗಣನೀಯವಾಗಿ ಕಡಿಮೆಯಾಗುತ್ತಿಲ್ಲ. ಅತ್ಯಧಿಕ ಉಷ್ಣಾಂಶದ ಕಾರಣದಿಂದ ದೇಶದ ಹಲವೆಡೆ ನಿಲ್ಲಿಸಿದ್ದ, ಚಲಿಸುತ್ತಿರುವ ವಾಹನಗಳು ಬೆಂಕಿಗಾಹುತಿಯಾಗುವ ಘಟನೆ ಪದೇ ಪದೆ ಘಟಿಸುತ್ತಲೇ ಇದೆ. ಸದ್ಯ ಅಂತಹದ್ದೇ ಒಂದು ದುರಂತ ತೆಲಂಗಾಣದಲ್ಲಿ ನಡೆದಿದ್ದು, ಪೆಟ್ರೋಲ್‌ ಬಂಕ್‌ ಉದ್ಯೋಗಿಯೊಬ್ಬರ ಸಮಯಪ್ರಜ್ಞೆಯಿಂದ ಬಹು ದೊಡ್ಡ ಅನಾಹುತವೊಂದು ತಪ್ಪಿದೆ. ಸಿಬ್ಬಂದಿ ಬೆಂಕಿ ನಂದಿಸಲು ಏಕಾಂಗಿಯಾಗಿ ನಡೆಸುತ್ತಿರುವ ಪ್ರಯತ್ನ ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸದ್ಯ ವೈರಲ್‌ ಆಗಿದೆ (Viral Video).

ತೆಲಂಗಾಣದ ಯಾದಾದ್ರಿ ಭುವನಗಿರಿಯ ಉಪನಗರದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಇಂಧನ ಹಾಕಿಸಿಕೊಳ್ಳಲು ಟ್ರಕ್ಕೊಂದು ಪೆಟ್ರೋಲ್‌ ಬಂಕ್‌ ಪ್ರವೇಶಿಸುತ್ತದೆ. ಬಿಸಿಲಿನ ಝಳಕ್ಕೆ ಇದ್ದಕ್ಕಿದ್ದಂತೆ ಟ್ರಕ್‌ನ ಇಂಧನ ಟ್ಯಾಂಕ್‌ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಳ್ಳುತ್ತದೆ. ಚಾಲಕ ಮತ್ತು ನಿರ್ವಾಹಕ ಕೂಡಲೇ ಟ್ರಕ್‌ನಿಂದ ಜಿಗಿದು ಪಾರಾಗುತ್ತಾರೆ.

ಸ್ಫೋಟದ ಶಬ್ದಕ್ಕೆ ಎಲ್ಲರೂ ದಂಗಾಗಿ ನಿಲ್ಲುತ್ತಾರೆ. ಈ ವೇಳೆ ಕೂಡಲೆ ಎಚ್ಚೆತ್ತುಕೊಳ್ಳುವ ಪೆಟ್ರೋಲ್‌ ಬಂಕ್‌ ಸಿಬ್ಬಂದಿಯೋರ್ವರು ಧೈರ್ಯದಿಂದ ಮುನ್ನುಗ್ಗಿ ಅಗ್ನಿಶಾಮಕ ಯಂತ್ರ (Fire extinguisher)ವನ್ನು ಹಿಡಿದು ಉರಿಯುತ್ತಿರುವ ಟ್ರಕ್ ಕಡೆಗೆ ಧಾವಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಾರೆ.

ಅವರ ಆರಂಭಿಕ ಪ್ರಯತ್ನಗಳ ಹೊರತಾಗಿಯೂ, ಅಗ್ನಿಶಾಮಕ ಸಿಲಿಂಡರ್ ಖಾಲಿಯಾದ ನಂತರ ಬೆಂಕಿ ಮತ್ತೆ ಹೊತ್ತಿಕೊಂಡಿತು. ಕೂಡಲೇ ಅವರು ಮತ್ತೊಂದು ಅಗ್ನಿಶಾಮಕವನ್ನು ತಂದು ಬೆಂಕಿಯನ್ನು ನಿಯಂತ್ರಿಸುವ ಸಾಹಸವನ್ನು ಮುಂದುವರಿಸಿದರು. ಅವರ ಧೈರ್ಯದಿಂದ ಪ್ರೇರಿತರಾಗಿ ಬಂಕ್‌ನಲ್ಲಿದ್ದ ಇತರರು ಸಹ ಕೈ ಜೋಡಿಸತೊಡಗಿದರು. ಎಲ್ಲರ ಪ್ರಯತ್ನದ ಫಲವಾಗಿ, ಸತತ ಹೋರಾಟದ ನಂತರ ಬೆಂಕಿ ನಿಯಂತ್ರಣಕ್ಕೆ ಬಂತು. ಈ ಮೂಲಕ ಸಂಭವಿಸಬಹುದಾದ ದೊಡ್ಡ ಅನಾಹುತವೊಂದು ತಪ್ಪಿತು. ಅದು ಪೆಟ್ರೋಲ್‌ ಬಂಕ್‌ ಆಗಿರುವ ಕಾರಣ ತುಸು ಹೆಚ್ಚು ಕಡಿಮೆಯಾಗಿದ್ದರೂ ಬಹು ದೊಡ್ಡ ಸ್ಫೋಟ ಸಂಭವಿಸುವ ಸಾಧ್ಯತೆ ಇತ್ತು. ಸಿಬ್ಬಂದಿಯ ಸಮಯೋಚಿತ ಕಾರ್ಯದಿಂದಾಗಿ ಆಪತ್ತು ಕೂದಲೆಳೆ ಅಂತರದಲ್ಲಿ ತಪ್ಪಿತು.

ನೆಟ್ಟಿಗರಿಂದ ಮೆಚ್ಚುಗೆ

ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಅಪ್‌ಲೋಡ್‌ ಅದ ಕೆಲವೇ ಕ್ಷಣಗಳಲ್ಲಿ ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಹಲವು ಲೈಕ್‌ ಬಟನ್‌ ಒತ್ತಿದರೆ ಇನ್ನು ಕೆಲವರು ಸಿಬ್ಬಂದಿಯ ಸಮಯೋಚಿತ ನಿರ್ಧಾರವನ್ನು, ಧೈರ್ಯವನ್ನು ಮುಕ್ತಕಂಠದಿಂದ ಹೊಗಳಿದ್ದಾರೆ.

ʼʼಬೆಂಕಿ ನಂದಿಸಲು ಏಕಾಂಗಿಯಾಗಿ ಹೋರಾಡಿದ ಸಿಬ್ಬಂದಿಗೆ ಅತ್ಯಂತ ಶೂರ ಎನ್ನುವ ಅವಾರ್ಡ್‌ ಕೊಡಬೇಕು. ಒಂದು ವೇಳೆ ಸ್ಥಳದಲ್ಲಿ ನಾನು ಇದ್ದಿದ್ದರೆ ಇತರರಂತೆ ಓಡಿ ಹೋಗುತ್ತಿದ್ದೆʼʼ ಎಂದು ಒಬ್ಬರು ಪ್ರಾಮಾಣಿಕವಾಗಿ ಹೇಳಿಕೊಂಡಿದ್ದಾರೆ.

ʼʼಈ ಸಿಬ್ಬಂದಿಯ ಧೈರ್ಯಕ್ಕೆ ಹ್ಯಾಟ್ಸಾಫ್‌ʼʼ ಎಂದು ಮತ್ತೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ʼʼಬೆಂಕಿ ಆಕಸ್ಮಿಕದಿಂದ ಪಾರಾಗುವುದು ಹೇಗೆ ಎನ್ನುವ ಬಗ್ಗೆ ಈತನಿಗೆ ತರಬೇತಿ ಸಿಕ್ಕಿರಬೇಕು. ಅದಕ್ಕೆ ಆತ ಧೈರ್ಯವಾಗಿ ಮುನ್ನುಗ್ಗಿದ್ದಾನೆʼʼ ಎಂದು ಇನ್ನೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ʼʼಆತನ ಧೈರ್ಯಕ್ಕೆ ಪ್ರಶಸ್ತಿ ಕೊಡಲೇಬೇಕುʼʼ ಎಂದು ಮಗದೊಬ್ಬರು ಆಗ್ರಹಿಸಿದ್ದಾರೆ. ಈತನೇ ನಿಜವಾದ ಹೀರೋ ಎಂದು ಅನೇಕರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:Weight Lose: ತೂಕ ಇಳಿಸಲು ಬಯಸುವಿರಾ? ಈ ಸಂಗತಿ ತಿಳಿದಿರಲಿ

Continue Reading

ವೈರಲ್ ನ್ಯೂಸ್

Chudidar Gang: ಚಡ್ಡಿ ಗ್ಯಾಂಗ್ ಆಯ್ತು, ಈಗ ದರೋಡೆಕೋರರ ಚೂಡಿದಾರ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ; ಹುಷಾರ್! ವಿಡಿಯೊ ನೋಡಿ

Chudidar Gang:ಎಸ್‌.ಆರ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಜೆಕ್‌ ಕಾಲೋನಿಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದಕ್ಕೆ ಶನಿವಾರ ನುಗ್ಗಿದ್ದ ಈ ಗ್ಯಾಂಗ್‌ ದರೋಡೆ ನಡೆಸಿತ್ತು. ಕೆ. ವೆಂಕಟರಾವ್‌ ಎಂಬವರಿಗೆ ಸೇರಿದ್ದ ಅಪಾರ್ಟ್‌ಮೆಂಟ್‌ ಇದಾಗಿದ್ದು, ದರೋಡೆ ವೇಳೆ ಅವರು ಮತ್ತು ಅವರ ಕುಟುಂಬಸ್ಥರು ಬೇರೆ ಊರಿಗೆ ತೆರಳಿದ್ದರು. ಬೆಳಗ್ಗೆ ಮನೆಗೆಲಸದವಳು ಬಂದಾಗ ಮನೆಯ ಬೀಗ ಒಡೆದಿರುವುದು ಗಮನಕ್ಕೆ ಬಂದಿತ್ತು.

VISTARANEWS.COM


on

Viral video
Koo

ಹೈದರಾಬಾದ್‌: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರನ್ನು ನಿದ್ದೆಗೆಡಿಸಿದ್ದ ಚಡ್ಡಿ ಗ್ಯಾಂಗ್‌ನಂತಹದ್ದೇ ಮತ್ತೊಂದು ಗ್ಯಾಂಗ್‌ ತೆಲಂಗಾಣದ ಹೈದರಾಬಾದ್‌(Hyderabad)ನಲ್ಲಿ ಜನರನ್ನು ಆತಂಕಕ್ಕೀಡು ಮಾಡಿದೆ. ಆದರೆ ಇದು ಚಡ್ಡಿ ಗ್ಯಾಂಗ್‌(Chaddi Gang) ಅಲ್ಲ.. ಇದು ಚೂಡಿದಾರ್‌ ಗ್ಯಾಂಗ್‌. ಮಹಿಳೆಯರಂತೆ ಚೂಡಿದಾರ್‌(Chudidar gang), ಬುರ್ಖಾ ಮತ್ತು ಹಿಜಾಬ್‌ ಧರಿಸಿ ಮನೆಮನೆಗಳಿಗೆ ನುಗ್ಗುವ ಈ ಗ್ಯಾಂಗ್‌ ಚಲನವಲನ ಸಿಸಿಟಿವಿಯಲ್ಲಿ ಪತ್ತೆ ಆಗಿದೆ. ಬಹುತೇಕ ಅಪಾರ್ಟ್‌ಮೆಂಟ್‌ಗಳನ್ನೇ ಟಾರ್ಗೆಟ್‌ ಮಾಡುವ ಈ ಗ್ಯಾಂಗ್‌ ಜನರ ನಿದ್ದೆಗೆಡಿಸಿದೆ

ಎಸ್‌.ಆರ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಜೆಕ್‌ ಕಾಲೋನಿಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದಕ್ಕೆ ಶನಿವಾರ ನುಗ್ಗಿದ್ದ ಈ ಗ್ಯಾಂಗ್‌ ದರೋಡೆ ನಡೆಸಿತ್ತು. ಕೆ. ವೆಂಕಟರಾವ್‌ ಎಂಬವರಿಗೆ ಸೇರಿದ್ದ ಅಪಾರ್ಟ್‌ಮೆಂಟ್‌ ಇದಾಗಿದ್ದು, ದರೋಡೆ ವೇಳೆ ಅವರು ಮತ್ತು ಅವರ ಕುಟುಂಬಸ್ಥರು ಬೇರೆ ಊರಿಗೆ ತೆರಳಿದ್ದರು. ಬೆಳಗ್ಗೆ ಮನೆಗೆಲಸದವಳು ಬಂದಾಗ ಮನೆಯ ಬೀಗ ಒಡೆದಿರುವುದು ಗಮನಕ್ಕೆ ಬಂದಿತ್ತು.

ತಕ್ಷಣ ವೆಂಕಟರಾವ್‌ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಆಗ ಇಬ್ಬರು ದರೋಡೆಕೋರರು ಮನೆಯೊಳಗೆ ನುಗ್ಗಿರುವುದು ಖಚಿತವಾಗಿದೆ. ಇನ್ನು ಇಬ್ಬರು ಕಳ್ಳರ ಚೂಡಿದಾರ ಧರಿಸಿದ್ದು, ಮುಖಕ್ಕೆ ಮಾಸ್ಕ್‌ ಹಾಕಿರುವುದು ಸಿಸಿಟಿವಿ ದೃಶ್ಯದಲ್ಲಿ ಸಾಬೀತಾಗಿದೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಜನ ಎಚ್ಚರದಿಂದ ಇರುವಂತೆ ಪೊಲೀಸರು ಜನರಿಗೆ ಎಚ್ಚರಿಸಿದ್ದಾರೆ. ಅಲ್ಲದೇ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ದರೋಡೆಕೋರರು 3,90,000 ನಗದಿನ ಜೊತೆಗೆ ಎಸ್ಕೇಪ್‌ ಆಗಿದ್ದಾರೆ. ಅವರ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ರಾತ್ರಿ ದಾರಿಹೋಕರನ್ನು ಅಡ್ಡಗಟ್ಟಿ ದೋಚುವ, ಮನೆಮನೆಗೆ ನುಗ್ಗಿ ಕಳವು (Theft case) ಮಾಡುವ ಅಪಾಯಕಾರಿ ಚಡ್ಡಿ ಗ್ಯಾಂಗ್‌ (Chaddi gang) ಬೆಂಗಳೂರಿಗೆ ಎಂಟ್ರಿ ಕೊಟ್ಟಿತ್ತು. ಇವರ ಚಲನವಲನ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದವು. ಮುಖಕ್ಕೆ ಮುಖಗವುಸು ಹಾಕಿಕೊಂಡು ಗುರುತು ಮರೆ ಮಾಡಿ, ಚಡ್ಡಿ ತೊಟ್ಟಿರುವ ಐದಾರು ಜನ ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ರಾತ್ರಿ ನಿರ್ಜನ ಬೀದಿಯಲ್ಲಿ ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹೈಟೆಕ್‌ ಏರಿಯಾಗಳೇ ಈ ಗ್ಯಾಂಗ್‌ನ ಟಾರ್ಗೆಟ್ ಆಗಿದೆ ಎಂದು ಭಾವಿಸಲಾಗಿದೆ. ಯಾಕೆಂದರೆ ಸರ್ಜಾಪುರ ರಸ್ತೆ ಸುತ್ತಮುತ್ತಲಿನ ಅಪಾರ್ಟ್‌ಮೆಂಟ್, ವಿಲ್ಲಾಗಳ ಬಳಿ ಇವರ ಓಡಾಟ ದಾಖಲಾಗಿದೆ.
ಇದನ್ನೂ ಓದಿ:ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

Continue Reading
Advertisement
DK Shivakumar statement in KPCC. no leadership if the booth lead is not given DK Shivakumar warns leaders
ರಾಜಕೀಯ2 mins ago

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

Mysuru News actress Vidhya Nandish congress leader killed by her husband
ಕ್ರೈಂ22 mins ago

Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Anant Ambani Radhika 2nd pre wedding bash
ಬಾಲಿವುಡ್31 mins ago

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

NIA raid rameshwaram cafe blast
ಪ್ರಮುಖ ಸುದ್ದಿ38 mins ago

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Viral Video
ವೈರಲ್ ನ್ಯೂಸ್47 mins ago

Viral Video: ಮದುವೆಗೆ ಬಂದ ಮಾಜಿ ಪ್ರಿಯಕರ; ಆಮೇಲೆ ನಡೆದಿದ್ದೇ ಬೇರೆ- ಸಿನಿಮಾ ಸ್ಟೈಲ್‌ನಲ್ಲಿ ಟ್ವಿಸ್ಟ್‌ ಎಂದ ನೆಟ್ಟಿಗರು

Love Case Father throws hot water on man who loved his daughter for coming home
ಕೊಡಗು56 mins ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

RCB IPL Records
ಕ್ರೀಡೆ1 hour ago

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

Emirates Flight
ದೇಶ1 hour ago

Emirates Flight: ವಿಮಾನ ಡಿಕ್ಕಿ ಹೊಡೆದು 36 ಫ್ಲೆಮಿಂಗೊ ಪಕ್ಷಿಗಳಿಗೆ ದಾರುಣ ಅಂತ್ಯ

Actress Nayanthara twin sons on auto ride
ಕಾಲಿವುಡ್1 hour ago

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Mallikarjuna Kharge siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ಖರ್ಗೆಯೂ ಪಿಎಂ ಆಗಲ್ಲ! ಸಿದ್ದರಾಮಯ್ಯ ಯಾಕಿಂಥಾ ಮಾತಾಡಿದ್ರು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌