Ghulam Nabi Azad | ರಾಹುಲ್ ಗಾಂಧಿ ವಿರುದ್ಧ ಗುಲಾಂ ನಬಿ ಆಜಾದ್ ಆರೋಪ ನಿರಾಧಾರ ಎಂದ ಸಿದ್ದರಾಮಯ್ಯ - Vistara News

ಕರ್ನಾಟಕ

Ghulam Nabi Azad | ರಾಹುಲ್ ಗಾಂಧಿ ವಿರುದ್ಧ ಗುಲಾಂ ನಬಿ ಆಜಾದ್ ಆರೋಪ ನಿರಾಧಾರ ಎಂದ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಗುಲಾಂ ನಬಿ ಆಜಾದ್ (Ghulam Nabi Azad) ಅವರು ರಾಹುಲ್ ಗಾಂಧಿ ವಿರುದ್ಧ ಮಾಡಿರುವ ಆರೋಪಗಳೆಲ್ಲ ನಿರಾಧಾರ- ಸಿದ್ದರಾಮಯ್ಯ

VISTARANEWS.COM


on

ಸಿದ್ದರಾಮಯ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಗುಲಾಂ ನಬಿ ಆಜಾದ್ (Ghulam Nabi Azad) ಅವರು ರಾಜೀನಾಮೆ ನೀಡಿರುವುದು ವಿಷಾದನೀಯ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಸುಮಾರು ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಆಜಾದ್ ಅವರು ಪಕ್ಷವನ್ನು ಕಟ್ಟಿ ಬೆಳೆಸಲು ನೀಡಿರುವ ಕೊಡುಗೆಯನ್ನು ಸ್ಮರಿಸುತ್ತಲೇ, ಅವರ ಈ ರಾಜೀನಾಮೆ ದಿಢೀರ್ ನಿರ್ಧಾರವನ್ನು ಖಂಡಿಸಬೇಕಾಗಿ ಬಂದಿದೆ. ರಾಹುಲ್ ಗಾಂಧಿ ವಿರುದ್ಧ ಆಜಾದ್ ಮಾಡಿರುವ ಎಲ್ಲ ಆರೋಪಗಳು ನಿರಾಧಾರ. ಅವರ ಮಾತುಗಳು ಬಿಜೆಪಿಯನ್ನುಸಂತುಷ್ಟಪಡಿಸುವ ರೀತಿಯಲ್ಲಿವೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇತ್ತೀಚಿನ ಚುನಾವಣೆಗಳಲ್ಲಿನ ಹಿನ್ನಡೆಯಿಂದಾಗಿ ಕಾಂಗ್ರೆಸ್ ಪಕ್ಷ ಕಷ್ಟದ ದಿನಗಳಲ್ಲಿದೆ. ಇದಕ್ಕಿಂತಲೂ ಮುಖ್ಯವಾಗಿ ಸರ್ವಾಧಿಕಾರಿ ಪ್ರಭುತ್ವದಿಂದಾಗಿ ದೇಶ ಕಷ್ಟದಲ್ಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಂಡಾಂತರದಲ್ಲಿದೆ. ಸಂವಿಧಾನದ ಒಂದೊಂದು ಸ್ತಂಭಗಳೇ ನಮ್ಮ ಕಣ್ಣೆದುರಿಗೆ ಉರುಳಿ ಬೀಳುತ್ತಿದೆ. ದೇಶಾದ್ಯಂತ ದಲಿತರು, ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಟ್ಟುಕೊಂಡು ಹಲ್ಲೆ-ದೌರ್ಜನ್ಯಗಳು ನಡೆಯುತ್ತಿವೆ. ಈ ಸಮುದಾಯಗಳ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಿತ್ತುಕೊಂಡು ಅವರನ್ನು ದುರ್ಬಲರನ್ನಾಗಿ ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಗುಲಾಂ ನಬೀ ಆಜಾದ್ ಅವರಂತಹ ಅಪಾರ ಅನುಭವ ಮತ್ತು ಸಂಘಟನಾ ಸಾಮರ್ಥ್ಯ ಹೊಂದಿರುವ ನಾಯಕರ ಅಗತ್ಯ ಖಂಡಿತ ಪಕ್ಷಕ್ಕೆ ಮಾತ್ರವಲ್ಲ ದೇಶಕ್ಕೂ ಕೂಡಾ ಇದೆ ಎನ್ನುವುದನ್ನು ನಿರಾಕರಿಸಲಾಗದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಿರಾಧಾರ ಆರೋಪಗಳು
ಕಾಂಗ್ರೆಸ್ ಪಕ್ಷವನ್ನು ತೊರೆದು ಅವರ ಪಾಡಿಗೆ ಅವರು ಹೋಗಿ ಬಿಟ್ಟಿದ್ದರೆ ಅವರಿಗೆ ಶುಭಕೋರಿ ಬೀಳ್ಕೊಡಬಹುದಿತ್ತೇನೋ? ಆದರೆ ಅವರು ತಮ್ಮ ನಿರ್ಗಮನದ ಜೊತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ ವಿರುದ್ದ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ, ಇದನ್ನು ಕಾಂಗ್ರೆಸ್ ಪಕ್ಷದಲ್ಲಿರುವ ಯಾರೂ ಒಪ್ಪಲು ಸಾಧ್ಯವೇ ಇಲ್ಲ ಎಂದಿದ್ದಾರೆ.

2004ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದಾಗ ಸೋನಿಯಾ ಗಾಂಧಿ ಅವರು ಮನಸ್ಸು ಮಾಡಿದ್ದರೆ ಸುಲಭದಲ್ಲಿ ಪ್ರಧಾನಿಯಾಗಬಹುದಿತ್ತು. ಆದರೆ, ಅವರು ಮನೆ ಬಾಗಿಲಿಗೆ ಬಂದಿದ್ದ ಅವಕಾಶವನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಮಾತ್ರವಲ್ಲ ವಿಶ್ವದ ಇತಿಹಾಸದಲ್ಲಿಯೇ ಅಪರೂಪದ ಘಟನೆ ಎಂದು ತಿಳಿಸಿದ್ದಾರೆ.

Ghulam
ಗುಲಾಂ ನಬಿ ಆಜಾದ್ ಮತ್ತು ರಾಹುಲ್ ಗಾಂಧಿ

ರಾಹುಲ್ ಅಧಿಕಾರಕ್ಕೆ ಆಸೆಪಟ್ಟವರಲ್ಲ
2004ರಲ್ಲಿಯೇ ಮೊದಲ ಬಾರಿ ಲೋಕಸಭೆ ಪ್ರವೇಶಿಸಿದ್ದ ರಾಹುಲ್ ಗಾಂಧಿಯವರು ಇಚ್ಛೆ ಪಟ್ಟಿದ್ದರೆ ಕೇಂದ್ರದಲ್ಲಿ ಸಚಿವರಾಗಬಹುದಿತ್ತು. ಅವರನ್ನು ಯಾರೂ ಬೇಡ ಎಂದು ಹೇಳುತ್ತಿರಲಿಲ್ಲ. ಆದರೆ ಅಧಿಕಾರಕ್ಕಾಗಿ ಆಸೆ ಪಡದೆ ಪಕ್ಷಕ್ಕಾಗಿ ದುಡಿಯುವ ನಿರ್ಧಾರ ಕೈಗೊಂಡ ರಾಹುಲ್ ಅವರು ಹತ್ತು ವರ್ಷಗಳ ಯುಪಿಎ ಸರ್ಕಾರದ ಕಾಲದಲ್ಲಿ ಸಚಿವರಾಗದೆ ಪಕ್ಷದ ಬಲವರ್ಧನೆಗೆ ದುಡಿದದ್ದನ್ನು ದೇಶ ನೋಡಿದೆ. ರಾಹುಲ್ ಗಾಂಧಿ ಅವರು ತಾವು ಸಚಿವರಾಗದೆ, ಹಿರಿಯರಾದ ಗುಲಾಂ ನಬಿ ಆಜಾದ್ ಅವರಂತಹವರಿಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಈಗ ಇದೇ ಆಜಾದ್ ಅವರು ರಾಹುಲ್ ಗಾಂಧಿಯವರ ಮೇಲೆ ವೈಯಕ್ತಿಕ ಮಟ್ಟದ ದಾಳಿಗಿಳಿದಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಪಕ್ಷ ಸಾಕಷ್ಟು ನೀಡಿದೆ
ಸುಮಾರು ಐದು ದಶಕಗಳ ಸುದೀರ್ಘ ರಾಜಕೀಯ ಜೀವನವನ್ನುಕಾಂಗ್ರೆಸ್ ಪಕ್ಷದಲ್ಲಿ ಕಳೆದಿದ್ದಾರೆ. ಗುಲಾಂ ನಬೀ ಆಜಾದ್ ಅವರಿಗೆ ಕಾಂಗ್ರೆಸ್ ನೀಡಿರುವ ಕೊಡುಗೆ ಅಪಾರವಾದುದು. ಅದೇ ರೀತಿ, ಕಾಂಗ್ರೆಸ್ ಪಕ್ಷಕ್ಕೂ ಅವರ ಕೊಡುಗೆಯನ್ನು ಅಲ್ಲಗಳೆಯಲಾಗದು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿ.ವಿ.ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಸೇರಿದಂತೆ ನಾಲ್ವರು ಪ್ರಧಾನಿಗಳ ಸಂಪುಟದಲ್ಲಿ ದೀರ್ಘಕಾಲ ಸಚಿವರಾಗಿದ್ದ ಆಜಾದ್ ಅವರು ಪಕ್ಷದ ವಿವಿಧ ಘಟಕಗಳಲ್ಲಿ ಪ್ರಮುಖ ಪದಾಧಿಕಾರಿಯಾಗಿ, ನೀತಿ-ನಿರ್ಧಾರಗಳನ್ನು ಕೈಗೊಳ್ಳುವ ಸಂಸದೀಯ ಮಂಡಳಿ, ಕಾರ್ಯಕಾರಿ ಸಮಿತಿ ಮತ್ತು ಚುನಾವಣಾ ಸಮಿತಿಗಳಲ್ಲಿ ಸದಸ್ಯರಾಗಿ ಕೆಲಸ ಮಾಡುವ ಅವಕಾಶವನ್ನು ಪಡೆದಿದ್ದರು ಎಂದು ಅವರು ತಿಳಿಸಿದ್ದಾರೆ.

ಇದೇ ರೀತಿ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಮತ್ತು ಏಳು ವರ್ಷಗಳ ಕಾಲ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಒಬ್ಬ ಸಾಮಾನ್ಯ ಕಾರ್ಯಕರ್ತ ಪಕ್ಷದಿಂದ ಬಯಸುವ ಎಲ್ಲ ಹುದ್ದೆ ಮತ್ತು ಅವಕಾಶಗಳನ್ನು ಆಜಾದ್ ಅವರು ಪಡೆದಿದ್ದಾರೆ. ಅವರಷ್ಟೇ ದೀರ್ಘಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಕೂಡಾ ಇಷ್ಟೊಂದು ಅವಕಾಶಗಳನ್ನು ಪಡೆದಿರುವುದು ಅಪರೂಪ ಎಂದು ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದರಾೆ.

ಕಷ್ಟಕಾಲದಲ್ಲಿ ಪಕ್ಷ
ಕಾಂಗ್ರೆಸ್ ಪಕ್ಷ ಖಂಡಿತ ಈಗ ಕಷ್ಟದ ಕಾಲದಲ್ಲಿದೆ. ಪಕ್ಷದ ಒಳ್ಳೆಯ ದಿನಗಳಲ್ಲಿ ಅದರ ಜೊತೆ ಗುರುತಿಸಿಕೊಂಡು ಎಲ್ಲ ಅವಕಾಶಗಳನ್ನು ಪಡೆದ ಯಾವನೇ ವ್ಯಕ್ತಿ ಪಕ್ಷದ ಕಷ್ಟದ ಕಾಲದಲ್ಲಿ ಅದರ ಜೊತೆಗೆ ನಿಲ್ಲಬೇಕಾಗಿರುವುದು ಕರ್ತವ್ಯವಾಗಿದೆ. ಆದರೆ ಆಜಾದ್ ಅವರು ಪಕ್ಷದ ಕಷ್ಟದ ಕಾಲದಲ್ಲಿಯೇ ಕುಂಟುನೆಪಗಳನ್ನು ಮುಂದಿಟ್ಟು ಪಕ್ಷವನ್ನು ತ್ಯಜಿಸಿ ಹೋಗಿರುವುದು ಅತ್ಯಂತ ದುರದೃಷ್ಟಕರ ಬೆಳವಣಿಗೆ ಎಂದು ಸಿದ್ದರಾಮಯ್ಯ ಅವರು ವಿಶ್ಲೇಷಣೆ ಮಾಡಿದ್ದಾರೆ.

ಗುಲಾಂ ನಬೀ ಆಜಾದ್ ಅವರು ರಾಜೀನಾಮೆ ನೀಡಿರುವ ಹೊತ್ತು ಮತ್ತು ಅವರ ರಾಜೀನಾಮೆ ಪತ್ರದ ಒಕ್ಕಣೆಯನ್ನು ನೋಡಿದರೆ ತಮಗೆ ಆಗಿರುವ ನೋವನ್ನು ವ್ಯಕ್ತಪಡಿಸುವ ಸದುದ್ದೇಶಕ್ಕಿಂತಲೂ, ನಮ್ಮ ಪ್ರಮುಖ ಎದುರಾಳಿ ಪಕ್ಷವನ್ನು ಖುಷಿಪಡಿಸುವ ದುರುದ್ದೇಶ ಇದ್ದಂತೆ ಕಾಣುತ್ತಿದೆ. ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರ ಬಲವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಮೇಲೆ ಒಬ್ಬ ನಾಯಕರ ನಿರ್ಗಮನ ಯಾವ ಪರಿಣಾಮವನ್ನು ಬೀರದು ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ | ಗುಲಾಂ ನಬಿ ಆಜಾದ್‌ ಬಳಿಕ ಕೆ.ಎಚ್‌. ಮುನಿಯಪ್ಪ ಕಾಂಗ್ರೆಸ್‌ ಬಿಡ್ತಾರಾ?: ರಾಜಕೀಯ ವಲಯದಲ್ಲಿ ಬಿಸಿ ಚರ್ಚೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

Murder case : ಬೆಂಗಳೂರಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲುಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಗದಗನಲ್ಲಿ ಗ್ರಾ.ಪಂ ಸದಸ್ಯನ ಮನೆ ಮೇಲೆ ದಾಳಿ (assault Case) ಮಾಡಲಾಗಿದೆ. ಉಡುಪಿಯಲ್ಲಿ ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

murder case
Koo

ಬೆಂಗಳೂರು/ಗದಗ/ಉಡುಪಿ: ಬೆಂಗಳೂರಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಡೈರಿ ಸರ್ಕಲ್ ಬಳಿ ವ್ಯಕ್ತಿ ತಲೆ ಮೇಲೆ ಕಲ್ಲೆಸೆದು ಭೀಕರವಾಗಿ ಕೊಲೆ (Murder case) ಮಾಡಲಾಗಿದೆ. ನೇಪಾಳ ಮೂಲದ ಗಜೇಂದ್ರ ಸಿಂಗ್ ಕೊಲೆಯಾದವನು

ಕಳೆದ ಮೂರು ವರ್ಷದ ಹಿಂದೆ ನೇಪಾಳದಿಂದ ಬೆಂಗಳೂರಿಗೆ ಬಂದಿದ್ದ ಗಜೇಂದ್ರ ಸಿಂಗ್, ಯಲಹಂಕದ ತಿರುಪತಿ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಸಂತೋಷ್ ಜತೆ ಬಾರ್‌ಗೆ ಹೋಗಿದ್ದ.

ಇಬ್ಬರು ಕಂಠಪೂರ್ತಿ ಕುಡಿದು ಮನೆಗೆ ಹೋಗುವಾಗ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ಹೋಗಿ ಗಜೇಂದ್ರ ಸಿಂಗ್ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಿ ಸಂತೋಷ್‌ ಎಸ್ಕೇಪ್‌ ಆಗಿದ್ದಾನೆ. ಘಟನೆ ಸಂಬಂದ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೃತದೇಹವನ್ನು ಯಲಹಂಕ ‌ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

ಸೇಡಿಗಾಗಾಗಿ ಗ್ರಾಪಂ ಸದಸ್ಯನ ಮನೆ ಮೇಲೆ ದಾಳಿ

ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಸೇಡು ತೀರಿಸಿಕೊಳ್ಳಲು ರಾತ್ರೋರಾತ್ರಿ ಗ್ರಾಮ ಪಂಚಾಯಿತಿ ಸದಸ್ಯನ ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ದುಷ್ಕರ್ಮಿಗಳ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೇ 8ರ ಮಧ್ಯರಾತ್ರಿ ಘಟನೆ ನಡೆದಿದೆ.

ಗ್ರಾಮ ಪಂಚಾಯಿತಿ ಸದಸ್ಯ ಮಿಲಿಂದ್ ಕಾಳೆ ಮನೆ ಮೇಲೆ ದಾಳಿ ಮಾಡಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವಿಂಡ್ ಫ್ಯಾನ್ ವ್ಯವಹಾರವಾಗಿ ಮಿಲಿಂದ್ ಕಾಳೆ, ಪ್ರಕಾಶ್ ನಿಡಗುಂದಿ ಮಧ್ಯದ ಮುನಿಸಿನಿಂದ ಗಲಾಟೆ ನಡೆದಿದೆ ಎನ್ನಲಾಗಿದೆ. ಮಿಲಿಂದ್ ಕಾಳೆ ಮೇಲಿನ ಸೇಡಿಗಾಗಿ ಲಾಂಗ್, ಮಚ್ಚು, ರಾಡ್‌, ಕಲ್ಲುಗಳಿಂದ ದಾಳಿ ನಡೆಸಿದ್ದಾರೆ.

ಈ ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಗದಗ ಗ್ರಾಮೀಣ ಠಾಣೆಯಲ್ಲಿ ಸುಮಾರು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಹಲವರನ್ನು ಬಂಧಿಸಿದ್ದು, ಪರಾರಿ ಆಗಿರುವ ಇನ್ನುಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಪ್ರಕರಣದ ಬೆನ್ನಲ್ಲೇ ಮೇ 9ರ ಮಧ್ಯಾಹ್ನ ಆರೋಪಿ ಪ್ರಕಾಶ್ ನಿಡಗುಂದಿ ಕಾರಿಗೆ ಬೆಂಕಿ ಹಾಗೂ ಮನೆ ಮೇಲೆ ದಾಳಿ ನಡೆಸಲಾಗಿದೆ. ಮಿಲಿಂದ್ ಕಾಳೆ ಮನೆ ಮೇಲೆ ದಾಳಿಯ ರಿವೇಂಜ್‌ಗೆ ಪ್ರಕಾಶ್‌ ನಿಡಗುಂದಿ ಕಾರಿಗೆ ಮಿಲಿಂದ ಕಾಳೆ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಎರಡೂ ಬಣದಿಂದ ಹಲವರನ್ನು ಬಂಧಿಸಲಾಗಿದೆ. ಎರಡು ಕಡೆಯಿಂದಲ್ಲೂ ಪ್ರತ್ಯೇಕ ದೂರು ದಾಖಲಾಗಿದೆ.

ಉಡುಪಿಯಲ್ಲಿ ಪೆಟ್ರೋಲ್‌ ವಿಚಾರಕ್ಕೆ ಕಿರಿಕ್‌

ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಪೆಟ್ರೋಲ್ ಬಂಕ್ ಒಂದರಲ್ಲಿ ನಡೆದಿದೆ. ಎರಡು ಬೈಕ್‌ಗಳಲ್ಲಿ ಮಧ್ಯರಾತ್ರಿ ಬಂದ ಯುವಕರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದಾರೆ. ಪೆಟ್ರೋಲ್ ಹಾಕಲು ಹೇಳಿದಾಗ ಸಿಬ್ಬಂದಿ ಬಂದ್ ಆಗಿದೆ ಎಂದಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಯುವಕ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಪ್ರದೀಪ್ ಕುಮಾರ್ (26) ಹಲ್ಲೆಗೊಳಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಉತ್ತರ ಪ್ರದೇಶದ ಮಹಿಳೆ ಮೇಲೆ ಕರ್ನಾಟಕದ ವ್ಯಕ್ತಿ ಅತ್ಯಾಚಾರ; ಆಕೆಯ ಮತಾಂತರಕ್ಕೂ ಯತ್ನ!

ಬಹ್ರೇನ್‌ನಲ್ಲಿ ಸೈಫುದ್ದೀನ್‌ ಎಂಬಾತ ನನ್ನ ಮೇಲೆ ಅತ್ಯಾಚಾರ ಎಸಗಿದ. ಅತ್ಯಾಚಾರದ ಬಳಿಕ ನಾನು ಗರ್ಭಿಣಿಯಾದೆ. ಗರ್ಭಪಾತ ಮಾಡಿಸಿಕೊ ಎಂದು ಪೀಡಿಸುವ ಜತೆಗೆ ಇಸ್ಲಾಂಗೆ ಮತಾಂತರವಾಗು ಎಂಬುದಾಗಿಯೂ ಒತ್ತಾಯ ಮಾಡಿದ. ಕೊನೆಗೆ ಆತನ ಕಿರುಕುಳ ತಾಳದೆ ಉತ್ತರ ಪ್ರದೇಶಕ್ಕೆ ಆಗಮಿಸಿದೆ ಎಂದು ಉತ್ತರ ಪ್ರದೇಶದ ಮಹಿಳೆ ದೂರಿದ್ದಾರೆ.

VISTARANEWS.COM


on

Woman
Koo

ಲಖನೌ: ಕರ್ನಾಟಕದ (Karnataka) ವ್ಯಕ್ತಿಯೊಬ್ಬ ಉತ್ತರ ಪ್ರದೇಶದ (Uttar Pradesh) ಮಹಿಳೆ ಮೇಲೆ ಬಹ್ರೇನ್‌ನಲ್ಲಿ ಅತ್ಯಾಚಾರ ಎಸಗಿ, ಆಕೆಯನ್ನು ಇಸ್ಲಾಂಗೆ ಮತಾಂತರಗೊಳಿಸಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಬಹ್ರೇನ್‌ನಿಂದ (Bahrain) ಉತ್ತರ ಪ್ರದೇಶದ ಲಖನೌಗೆ ಆಗಮಿಸಿದ ಮಹಿಳೆಯು ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

“ಬಹ್ರೇನ್‌ನಲ್ಲಿ ಸೈಫುದ್ದೀನ್‌ ಎಂಬಾತ ನನ್ನ ಮೇಲೆ ಅತ್ಯಾಚಾರ ಎಸಗಿದ. ಅತ್ಯಾಚಾರದ ಬಳಿಕ ನಾನು ಗರ್ಭಿಣಿಯಾದೆ. ಗರ್ಭಪಾತ ಮಾಡಿಸಿಕೊ ಎಂದು ಪೀಡಿಸುವ ಜತೆಗೆ ಇಸ್ಲಾಂಗೆ ಮತಾಂತರವಾಗು ಎಂಬುದಾಗಿಯೂ ಒತ್ತಾಯ ಮಾಡಿದ. ಕೊನೆಗೆ ಆತನ ಕಿರುಕುಳ ತಾಳದೆ ಉತ್ತರ ಪ್ರದೇಶಕ್ಕೆ ಆಗಮಿಸಿದೆ” ಎಂಬುದಾಗಿ ಮಹಿಳೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸೈಫುದ್ದೀನ್‌, ಕರ್ನಾಟಕದ ಬೀದರ್‌ ಜಿಲ್ಲೆಯವನಾಗಿದ್ದು, ಬಹ್ರೇನ್‌ನಲ್ಲಿ ವಾಸಿಸುತ್ತಿದ್ದಾನೆ. ಈತನಿಗೆ ಈಗಾಗಲೇ ಹುಡುಗಿ ನಿಶ್ಚಯವಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

Uttar Pradesh Police

ಬಹ್ರೇನ್‌ನಲ್ಲಿ ಮಹಿಳೆಯು ಕಳೆದ 7 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಬಹ್ರೇನ್‌ನಲ್ಲಿದ್ದಾಗ ಕರ್ನಾಟಕ ಮೂಲದ ಸೈಫುದ್ದೀನ್‌ನನ್ನು ಮಹಿಳೆ ಪರಿಚಯ ಮಾಡಿಕೊಂಡಿದ್ದಾರೆ. ಪರಿಚಯದ ಸಲುಗೆಯನ್ನು ದುರುಪಯೋಗಪಡಿಸಿಕೊಂಡ ವ್ಯಕ್ತಿಯು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಮಹಿಳೆಯು ಐದು ತಿಂಗಳ ಗರ್ಭಿಣಿ ಎಂಬುದನ್ನು ತಿಳಿದು, ಗರ್ಭಪಾತ ಮಾಡಿಸಿಕೊ ಎಂಬುದಾಗಿ ಕಿರುಕುಳ ನೀಡಿದ್ದಾನೆ. ಇಸ್ಲಾಂ ಧರ್ಮಕ್ಕೂ ಮತಾಂತರವಾಗು ಎಂದು ಪೀಡಿಸಿದ್ದಾನೆ ಎಂಬುದಾಗಿ ಮಹಿಳೆ ಆರೋಪಿಸಿದ್ದಾರೆ.

“ನನ್ನ ಮೇಲೆ ಅತ್ಯಾಚಾರ ಎಸಗಿದ ಸೈಫುದ್ದೀನ್‌ ವಿರುದ್ಧ ಬಹ್ರೇನ್‌ನಲ್ಲಿಯೇ ಕೇಸ್‌ ದಾಖಲಿಸಿದ್ದೇನೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಾನು ನೀಡಿದ ದೂರು ಹಿಂಪಡೆಯುವಂತೆ ಸೈಫುದ್ದೀನ್‌ ಕುಟುಂಬಸ್ಥರು ಕಿರುಕುಳ ನೀಡಿದರು. ನಾನು ಐದು ತಿಂಗಳ ಗರ್ಭಿಣಿಯಾಗಿದ್ದಾಗ ಮೋಸ ಮಾಡಿದರು. ನಾನು 2024ರ ಫೆಬ್ರವರಿ 13ರಂದು ಮದುವೆಯಾದ. ಇಸ್ಲಾಂ ಕಾನೂನಿನಂತೆ ಮದುವೆ ಮಾಡಲಾಯಿತು. ಇದಾದ ಬಳಿಕ ನನ್ನನ್ನು ಮತಾಂತರ ಮಾಡಲು ಯತ್ನಿಸಿದರು. ಅಲ್ಲದೆ, ವೈದ್ಯರ ಬಳಿ ತಪಾಸಣೆ ಮಾಡಿಸಿಕೊ ಎಂಬುದಾಗಿ ಮುಂಬೈಗೆ ಕಳುಹಿಸಿದರು. ಆದರೆ, ವೈದ್ಯರು ನನಗೆ ಗೊತ್ತಿಲ್ಲದೆ ಗರ್ಭಪಾತ ಮಾಡಿದರು” ಎಂಬುದಾಗಿ ಮಹಿಳೆ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

Continue Reading

ಬೆಂಗಳೂರು

DK Shivakumar: ದೇವರಾಜೇಗೌಡ ಮೆಂಟಲ್‌ ಕೇಸ್‌; 100 ಕೋಟಿ ರೂ. ಆಫರ್‌ ಮಾಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಡಿಕೆಶಿ

DK Shivakumar: ತಮಗೆ 100 ಕೋಟಿ ರೂಪಾಯಿ ಆಫರ್‌ ನೀಡಿದ್ದಾರೆ ಎಂಬ ವಕೀಲ ದೇವರಾಜೇಗೌಡ ಆರೋಪಕ್ಕೆ ಡಿಕೆಶಿ ಗರಂ ಆಗಿದ್ದಾರೆ. ಮೆಂಟಲ್ ಕೇಸ್ ಅವನು. ಆತ ಏನು ಮಾತನಾಡುತ್ತಾನೋ, ಮಾತನಾಡಲಿ. ಏನು ಮಾಡುತ್ತಾನೋ ಮಾಡಲಿ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ನಾನು ಆಫರ್ ಮಾಡಿದರೆ ದೇವರಾಜೇಗೌಡ ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ ಎಂದು ಸವಾಲು ಹಾಕಿದ್ದಾರೆ.

VISTARANEWS.COM


on

DevarajeGowda mental case Rs 100 crore If offered he should file a complaint with Lokayukta says DK Shivakumar
Koo

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಪರವಾಗಿರಲು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ತಮಗೆ 100 ಕೋಟಿ ರೂಪಾಯಿ ಆಫರ್‌ ನೀಡಿದ್ದಾರೆ ಎಂಬ ವಕೀಲ ದೇವರಾಜೇಗೌಡ (Devarajegowda) ಆರೋಪಕ್ಕೆ ಡಿಕೆಶಿ ಗರಂ ಆಗಿದ್ದಾರೆ. ಮೆಂಟಲ್ ಕೇಸ್ ಅವನು. ಆತ ಏನು ಮಾತನಾಡುತ್ತಾನೋ, ಮಾತನಾಡಲಿ. ಏನು ಮಾಡುತ್ತಾನೋ ಮಾಡಲಿ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ನಾನು ಆಫರ್ ಮಾಡಿದರೆ ದೇವರಾಜೇಗೌಡ ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನೀವು ಬುದ್ಧಿವಂತರು, ಜಾಣರಿದ್ದೀರಿ. ಆ ದೇವರಾಜೇಗೌಡನಂಥವರು ಯಾರೋ ಏನೋ ಹೇಳುತ್ತಾರೆಂದರೆ ಅದನ್ನು ಹಾಕಿಬಿಡುವುದಾ? ನಮಗೆ ರೆಪ್ಯುಟೇಷನ್ ಇದೆ. ಏನಾದರೂ ಆಧಾರ ಇದ್ದರೆ ಹಾಕಬೇಕು. ತಲೆ ಕೆಟ್ಟ, ಆಸ್ಪತ್ರೆಗೆ ಸೇರಬೇಕಾದವರ ಬಗ್ಗೆ ಮಾತನಾಡುತ್ತೀರಾ ಎಂದು ಮಾಧ್ಯಮದವರನ್ನು ಪ್ರಶ್ನೆ ಮಾಡಿದರು.

ನಾನು ಆಫರ್ ಮಾಡಿದರೆ ದೇವರಾಜೇಗೌಡ ಅವರು ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ. ಎಲ್ಲ ಪೆನ್ ಡ್ರೈವ್ ಬಗ್ಗೆ ಮಾತನಾಡಿದ್ದಾರೆ. ಸಂತ್ರಸ್ತೆಯರ ಬಗ್ಗೆ ಯಾರೂ ಏನೂ ಮಾತನಾಡುತ್ತಿಲ್ಲ ಏಕೆ? ಈ ವಿಚಾರದಲ್ಲಿ ನಾನು ಹೆಚ್ಚು ಏನೂ ಮಾತನಾಡಲ್ಲ ಎಂದು ಡಿ.ಕೆ. ಶಿವಕುಮಾರ್‌ ಗರಂ ಆಗಿಯೇ ಹೇಳಿದರು.

ನನ್ನ ಹೆಸರನ್ನು ಕೆಲವರು ಉಪಯೋಗಿಸಿಕೊಳ್ಳುತ್ತಾರೆ‌. ನೀವು ನನ್ನ ಹೆಸರು ಬಳಸಿಕೊಳ್ಳುತ್ತೀರಾ? ನನ್ನ ಹೆಸರು ಬಳಸಿಕೊಂಡರೆ ನಾನು ಯಾಕೆ ತಲೆ ಕೆಡಿಸಿಕೊಳ್ಳಬೇಕು? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತಮ್ಮ 93ನೇ ಹುಟ್ಟುಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಹೋಗಿದ್ದಾರೆ, ಇದು ಬಹಳ ಒಳ್ಳೆಯದು. ಅವರ ಹುಟ್ಟುಹಬ್ಬ, ಸಂತೋಷ ಕೊಡಲಿ, ದುಃಖವನ್ನು ದೂರ ಮಾಡಲಿ. ಆರೋಗ್ಯ ಆಯಸ್ಸನ್ನು ದೇವರು‌ ಕರುಣಿಸಲಿ ಎಂದು ನಮ್ಮ ಸರ್ಕಾರದ ಪರವಾಗಿ ಹಾರೈಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಅಲ್ಲೋಲ ಕಲ್ಲೋಲ ಸೃಷ್ಟಿಸಿದ ದೇವರಾಜೇಗೌಡ ಬಾಂಬ್‌

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಡಿ.ಕೆ. ಶಿವಕುಮಾರ್‌ ಶುಕ್ರವಾರ ಹೇಳಿದ್ದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದ್ದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದ್ದರು.

ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದ್ದರು.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ನನ್ನ ಮೇಲೆ ಸುಳ್ಳು ಕೇಸ್‌

ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ ಎಂದು ದೇವರಾಜೇಗೌಡ ಆರೋಪ ಮಾಡಿದ್ದರು.

Continue Reading

ಬೆಂಗಳೂರು

Namma Metro: ಮೆಟ್ರೋಗೆ ಕನೆಕ್ಟ್‌ ಆಗಲಿದೆ ನಮ್ಮ ಯಾತ್ರಿ; ಇನ್ಮುಂದೆ ಆಟೋ ಹಿಡಿಯೋ ಟೆನ್ಷನ್‌ ಇಲ್ಲ

Namma Yatri: ಬೆಂಗಳೂರಿನಲ್ಲಿ ಈಗಾಗಲೇ ಆಟೋ ಸೇವೆ ಮೂಲಕ ಜನಪ್ರಿಯವಾಗಿರುವ ನಮ್ಮ ಯಾತ್ರಿ ಸಂಸ್ಥೆ, ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ (Namma Metro) ಬಿಎಂಆರ್‌ಸಿಎಲ್ ( BMRCL) ಜತೆಗೆ ಕೈ ಜೋಡಿಸಲು ಮುಂದಾಗುತ್ತಿದೆ.

VISTARANEWS.COM


on

By

Namma Metro
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ (Namma Metro) ಇಳಿದು ಸ್ಟೇಷನ್‌ನಿಂದ (Metro Station) ಹೊರ ಬಂದ ಕೂಡಲೇ ಆಟೋ ಹಿಡಿಯೋದು ದೊಡ್ಡ ಸಮಸ್ಯೆ. ಯಾಕೆಂದರೆ ಕೆಲ ಚಾಲಕರು ಬರಲ್ಲ ಅನ್ನೋದು, ಕೆಲವರು ಜಾಸ್ತಿ ರೇಟು ಕೇಳೋದು ಮೊದಲಾದ ಸಮಸ್ಯೆಗಳನ್ನು ಮೆಟ್ರೋ ಪ್ರಯಾಣಿಕರು ಅನುಭವಿಸುತ್ತಲೇ ಇರುತ್ತಾರೆ. ಮೆಟ್ರೋ ಫೀಡರ್‌ ಬಸ್‌ಗಳು ಇದ್ದರೂ, ಪ್ರಯಾಣಿಕರು ತಾವು ತಲುಪಬೇಕಾದ ಜಾಗಕ್ಕೆ ಹೋಗಲು ಆಗದೆ ಹೆಚ್ಚು ಹಣ ಕೊಟ್ಟು ಆಟೋದಲ್ಲೇ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಮೆಟ್ರೋ ಮಿತ್ರ ಇದ್ದರೂ ಅದು ಹಲವು ದೋಷದಿಂದ ಸೈಡ್‌ಲೈನ್‌ ಆಗಿದೆ. ಸದ್ಯ ಈ ಎಲ್ಲ ಸಮಸ್ಯೆಗಳಿಗೆ ಶೀಘ್ರದಲ್ಲೆ ಪರಿಹಾರ ಸಿಗಲಿದೆ. ಯಾಕೆಂದರೆ ಬೆಂಗಳೂರಿನಲ್ಲಿ ಈಗಾಗಲೇ ಹೆಸರು ಮಾಡಿರುವ ‘ನಮ್ಮ ಯಾತ್ರಿ’ (Namma yatri) ಸಂಸ್ಥೆ ಶೀಘ್ರದಲ್ಲೇ ನಮ್ಮ ಮೆಟ್ರೋ (BMRCL) ಜತೆಗೆ ಒಪ್ಪಂದಕ್ಕೆ ಸಹಿ ಹಾಕಲಿದೆ.

ಮೆಟ್ರೋ ಪ್ರಯಾಣಿಕರಿಗಾಗಿ ಪ್ರಾಯೋಗಿಕ ಅಪ್ಲಿಕೇಶನ್ ಆಧಾರಿತ ಆಟೋ ರಿಕ್ಷಾ ಸೇವೆಯನ್ನು ಪ್ರಾರಂಭಿಸಲಿದೆ. ಮೆಟ್ರೋ ರೈಲು ನಿಲ್ದಾಣಗಳಿಗೆ ಕೊನೆಯ ಮೈಲಿ ಸಂಪರ್ಕ ಸೌಲಭ್ಯ ಕಲ್ಪಿಸಲು ನಮ್ಮ ಯಾತ್ರಿಯಿಂದ ಆಟೋರಿಕ್ಷಾ ಸೇವೆಗಳನ್ನು ಒದಗಿಸಲಾಗುತ್ತದೆ. ಮೆಟ್ರೋ ಪ್ರಯಾಣಿಕರಿಗಾಗಿ ಪ್ರಾಯೋಗಿಕ ಅಪ್ಲಿಕೇಶನ್ ಆಧಾರಿತ ಆಟೋ-ರಿಕ್ಷಾ ಸೇವೆಯನ್ನು ಪ್ರಾರಂಭಿಸಲು ನಮ್ಮ ಯಾತ್ರಿ ಮತ್ತು ಬೆಂಗಳೂರು ಟ್ರಾಫಿಕ್ ಪೊಲೀಸರೊಂದಿಗೆ ಬಿಎಂಆರ್‌ಸಿಎಲ್ ಕೈಜೋಡಿಸಿದೆ. ಮೆಟ್ರೋ ಪ್ರಯಾಣಿಕರಿಗಾಗಿ ಸುರಕ್ಷಿತ, ಕೈಗೆಟುಕುವ ಬೆಲೆಯಲ್ಲಿ ಸೇವೆ ನೀಡಲು ಯೋಜನೆ ರೂಪಿಸುತ್ತಿದೆ.

ಮೂವಿಂಗ್ ಟೆಕ್ ಇನ್ನೋವೇಶನ್ಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿರುವ ನಮ್ಮ ಯಾತ್ರಿ, ಮೇ ಅಂತ್ಯದ ವೇಳೆಗೆ ಇಂದಿರಾನಗರ ಮೆಟ್ರೋ ನಿಲ್ದಾಣದಲ್ಲಿ ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಚಿಂತಿಸುತ್ತಿದೆ. ಈ ಸೇವೆಯು ಆಟೋ ರಿಕ್ಷಾ ಚಾಲಕರು ‘ಕ್ಯೂ’ ವ್ಯವಸ್ಥೆಯನ್ನು ಬಳಸಿಕೊಂಡು ಮೆಟ್ರೋ ನಿಲ್ದಾಣಗಳಿಂದ ಸೇವೆ ನೀಡುತ್ತಾರೆ. ಸರದಿಯಲ್ಲಿ ಯಾವುದೇ ಗ್ರಾಹಕರು ಇಲ್ಲದಿದ್ದರೆ, ಚಾಲಕರು ಸಾಮಾನ್ಯ ರೈಡ್ ಕೂಡ ತೆಗೆದುಕೊಳ್ಳಬಹುದು.

ಮೊದಲ ಪ್ರಯೋಗವನ್ನು ಇಂದಿರಾ ನಗರ ಮೆಟ್ರೋ ಸ್ಟೇಷನ್‌ನಲ್ಲಿ ನಡೆಯಲಿದೆ. ಇಂದಿರಾನಗರ ಮೆಟ್ರೊ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಮತ್ತು ಸೇವೆಯನ್ನು ಪ್ರಾರಂಭಿಸಲು ನಮ್ಮ ಯಾತ್ರಿ ಬಿಎಂಆರ್‌ಸಿಎಲ್‌ಗೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಯಶಸ್ಸಿನ ಆಧಾರದ ಮೇಲೆ ಈ ಸೌಲಭ್ಯವನ್ನು ಇತರ ಮೆಟ್ರೋ ನಿಲ್ದಾಣಗಳಿಗೂ ವಿಸ್ತರಿಸಲಾಗುವುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road Accident : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

ಕಳೆದ ವರ್ಷ, ಆಟೋ ರಿಕ್ಷಾ ಚಾಲಕರ ಒಕ್ಕೂಟವು ಲಾಸ್ಟ್ ಮೈಲಿ ಸಂಪರ್ಕ ಸಮಸ್ಯೆಗಳನ್ನು ಪರಿಹರಿಸಲು ಮೆಟ್ರೋ ಮಿತ್ರವನ್ನು ಪ್ರಾರಂಭಿಸಿತು. ಆದರೆ ಸಾಕಷ್ಟು ಕಾರ್ಯಾಚರಣೆಯ ಸವಾಲುಗಳನ್ನು ಎದುರಿಸಿತು. ನಮ್ಮ ಯಾತ್ರಿ ಸೇವೆ ವಿಭಿನ್ನವಾಗಿದ್ದು ಯಶಸ್ವಿಯಾಗುವ ನಿರೀಕ್ಷೆ ಇದೆ ಎಂದರು.

ನಿತ್ಯಾ 40 ಲಕ್ಷ ಮಂದಿ ನಮ್ಮ ಮೆಟ್ರೋಗಳಲ್ಲಿ ಪ್ರಯಾಣಿಸುತ್ತಾರೆ. ಆದರೆ, 134 ಮೆಟ್ರೋ ಫೀಡರ್ ಬಸ್‌ಗಳಲ್ಲಿ 76,000 ಪ್ರಯಾಣಿಕರು ಮಾತ್ರ ಬಳಸುತ್ತಾರೆ. ಸಾಮಾನ್ಯವಾಗಿ ಆಟೋ ರಿಕ್ಷಾ ಚಾಲಕರು ಕಡಿಮೆ ದೂರಕ್ಕೆ ಹೆಚ್ಚಿನ ದರ ವಿಧಿಸುವುದರಿಂದ ಪ್ರಯಾಣಿಕರು ಸಮಸ್ಯೆಗಳನ್ನು ಎದುರಿಸುತ್ತಾರೆ. ಹಿಂದಿನ ಪ್ರಿಪೇಯ್ಡ್ ಆಟೋ ಸೇವೆಗಳು ಹೆಚ್ಚು ಜನಪ್ರಿಯವಾಗದಿರಲು ಇದು ಕೂಡ ಒಂದು ಕಾರಣ. ಹೀಗಾಗಿ ‘ನಮ್ಮ ಯಾತ್ರಿ’ ಜತೆಗೆ ಮೆಟ್ರೋ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ಮುಂದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
murder case
ಕ್ರೈಂ3 mins ago

Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

Pavitra Jayaram Relationship With Chandu Shilpa Prema statement
ಕಿರುತೆರೆ29 mins ago

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Money Guide
ಮನಿ-ಗೈಡ್31 mins ago

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

T20 World Cup 2024
ಕ್ರೀಡೆ34 mins ago

T20 World Cup 2024: ಮೇ 25ಕ್ಕೆ ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್​

Mallikarjun Kharge
Lok Sabha Election 202436 mins ago

Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Woman
ದೇಶ39 mins ago

ಉತ್ತರ ಪ್ರದೇಶದ ಮಹಿಳೆ ಮೇಲೆ ಕರ್ನಾಟಕದ ವ್ಯಕ್ತಿ ಅತ್ಯಾಚಾರ; ಆಕೆಯ ಮತಾಂತರಕ್ಕೂ ಯತ್ನ!

DevarajeGowda mental case Rs 100 crore If offered he should file a complaint with Lokayukta says DK Shivakumar
ಬೆಂಗಳೂರು48 mins ago

DK Shivakumar: ದೇವರಾಜೇಗೌಡ ಮೆಂಟಲ್‌ ಕೇಸ್‌; 100 ಕೋಟಿ ರೂ. ಆಫರ್‌ ಮಾಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಡಿಕೆಶಿ

Aishwarya Rai stopping blue gown at Cannes 2024
ಬಾಲಿವುಡ್1 hour ago

Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

Maruti Swift
ಪ್ರಮುಖ ಸುದ್ದಿ1 hour ago

Maruti Swift : ಹೊಸ ಮಾರುತಿ ಸ್ವಿಫ್ಟ್​ ಕಾರಿನಲ್ಲಿದೆ 50ಕ್ಕೂ ಹೆಚ್ಚು ಫೀಚರ್​ಗಳು

RCB vs CSK
ಕ್ರೀಡೆ1 hour ago

RCB vs CSK: 11 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದರೆ ಆರ್​ಸಿಬಿಗೆ ಇಂದು ಗೆಲುವು ಖಚಿತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ21 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌