Ganesh Chaturthi 2022 | ಲಂಬೋದರ; ನಿನ್ನ ನಾಮದ ಮಹಿಮೆ ಅಪಾರ - Vistara News

ಗಣೇಶ ಚತುರ್ಥಿ

Ganesh Chaturthi 2022 | ಲಂಬೋದರ; ನಿನ್ನ ನಾಮದ ಮಹಿಮೆ ಅಪಾರ

ಸರ್ವಧರ್ಮೀಯರಿಂದಲೂ ಪೂಜೆಗೊಂಬ ಏಕೈಕದೇವತೆ ಶಿವಪಾರ್ವತಿಯರ ಪುತ್ರನಾದ ಶ್ರೀವಿನಾಯಕ. ಗಣಪತಿಗೆ ಇರುವ ಪ್ರತಿಯೊಂದು ಹೆಸರಿನ ಹಿಂದೆಯೂ ಮಹಿಮೆಯ ಕತೆಗಳಿವೆ. ಗಣಪತಿ ಹಬ್ಬದ (Ganesh Chaturthi 2022) ಅಂಗವಾಗಿ ಈ ಕುರಿತ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

Ganesh Chaturthi 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೇಧಾ ಪ್ರಹ್ಲಾದಾಚಾರ್ಯ ಜೋಶಿ
ಭಾರತ ದೇಶದ ಸರ್ವಮತ ಪಂಥಗಳ ಆರಾಧ್ಯ ದೈವ ಗಣಪತಿ. ಎಲ್ಲರ ಮನೆಗಳಲ್ಲಿಯೂ ಗಣಪತಿಯ ವಿಗ್ರಹ ಅಥವಾ ಚಿತ್ರಪಟವಾದರೂ ಇದ್ದೇ ಇರುತ್ತದೆ. ಸರ್ವಧರ್ಮೀಯರಿಂದಲೂ ಪೂಜೆಗೊಂಬ ಏಕೈಕದೇವತೆ ಶಿವಪಾರ್ವತಿಯರ ಪುತ್ರನಾದ ಶ್ರೀವಿನಾಯಕ. ಕೇವಲ ಹಿಂದೂಗಳಷ್ಟೇ ಅಲ್ಲದೇ ಬೌದ್ಧರೂ ಸಹ ಗಣಪತಿಯನ್ನು ಪೂಜಿಸುತ್ತಾರೆ. ಭಾದ್ರಪದ ಮಾಸದ ಶುಕ್ಲಪಕ್ಷದ ಚತುರ್ಥಿಯಂದು ”ಗಣೇಶಚೌತಿ”ಯ (Ganesh Chaturthi 2022) ಹಬ್ಬ.

Ganesh Chaturthi 2022
ಮೇಧಾ ಪ್ರಹ್ಲಾದಾಚಾರ್ಯ ಜೋಶಿ

ಗಣಪತಿಯ ಅವತಾರಕಥೆಗಳು ಅನೇಕಕಡೆಗಳಲ್ಲಿ ಉಲ್ಲೇಖವಾದರೂ ಮತ್ಸ್ಯಪುರಾಣೋಕ್ತ ಕಥೆ ಬಹಳ ಜಗಜ್ಜನಿತವಾಗಿದೆ. ಪಾರ್ವತಿಯು ತನ್ನ ರಕ್ತಚಂದನಯುಕ್ತವಾದ ಶರೀರದ ಮಣ್ಣಿನಿಂದ ಗಣಪತಿಯ ಸೃಷ್ಟಿಯನ್ನು ಮಾಡಿದಳು. ಆದ್ದರಿಂದ ಗಣಪತಿಯನ್ನು ”ರಕ್ತಾಂಬರೋ ರಕ್ತತನೂ ರಕ್ತಮಾಲ್ಯಾನುಲೇಪನಃ” ಎಂದು ವರ್ಣಿಸಿದ್ದಾರೆ.

ಗಣಪತಿಯ ದೇಹ, ಉಟ್ಟ ವಸ್ತ್ರ, ಧರಿಸಿದ ಮಾಲೆ, ಲೇಪಿಸಿದ ಗಂಧ ಎಲ್ಲವೂ ಕೆಂಪುವರ್ಣದ್ದು. ಗಣಪತಿಗೆ ದಾಸವಾಳ ಮೊದಲಾದ ಕೆಂಪುಹೂಗಳನ್ನು ಪೂಜೆಗೆ ಸಮರ್ಪಿಸುವುದು ವಿಶೇಷ.

ಗಜಮುಖನಿಗೆ ನಾಮ ಹಲವು
ಸಜ್ಜನರ ಸಕಲವಿಧವಾದ ವಿಘ್ನಗಳನ್ನು ಗಣಪತಿ ಪರಿಹರಿಸುತ್ತಾನೆ. ಅಂತೆಯೇ ದುಷ್ಟರಿಗೆ ವಿಘ್ನಗಳನ್ನು ಒದಗಿಸಲೂ ಸಮರ್ಥ. ಆದ್ದರಿಂದ ಅವನು ”ವಿಘ್ನೇಶ್ವರ”.

ಗಣಪತಿಯು ಜಾಗ್ರದವಸ್ಥಾಪ್ರೇರಕನಾದ ಭಗವಂತನ ವಿಶ್ವಂಭರರೂಪದ ಉಪಾಸನೆಯನ್ನು ಮಾಡುತ್ತಾನೆ. ಹತ್ತೊಂಬತ್ತು ಮುಖಗಳನ್ನು ಹೊಂದಿದ ವಿಶ್ವಂಭರನ ಮಧ್ಯಮುಖ ಗಜಮುಖ. ಅದರ ವಿಶೇಷೋಪಾಸನೆಯಿಂದಲೇ ಗಣಪತಿಯು ”ಗಜಮುಖ”ನಾಗಿದ್ದು.

ಒಮ್ಮೆ ಚಂದ್ರನು ಗಣಪತಿಯನ್ನು ನೋಡಿ ಅಪಹಾಸಮಾಡಿ ನಕ್ಕನು. ಗಣಪತಿಯು ಕೋಪದಿಂದ ತನ್ನ ಒಂದು ದಂತವನ್ನು ಕಿತ್ತಿ ಚಂದ್ರನ ಮೇಲೆ ಎಸೆದೆನೆಂದು ಉಲ್ಲೇಖವಿದೆ. ಅಂದಿನಿಂದ ಗಣಪತಿಯು ”ಏಕದಂತ”ನಾದ. ಈ ಕಥೆಯ ಹಿನ್ನೆಲೆಯಲ್ಲಿಯೇ ಚೌತಿ ಚಂದ್ರನನ್ನು ನೋಡಿದವರಿಗೆ ಮಿಥ್ಯಾಪವಾದ ಬರಲಿ ಎಂದು ಗಣಪತಿಯು ಚಂದ್ರನಿಗೆ ಶಾಪವನ್ನು ಕೊಡುತ್ತಾನೆ. ಅದಕ್ಕಾಗಿ ಇಂದಿಗೂ ಚೌತಿ ಚಂದ್ರನನ್ನು ನೊಡಬಾರದೆಂದು ಮತ್ತು ನೋಡಿದರೆ ಅದರ ಪರಿಹಾರಕ್ಕಾಗಿ ”ಸ್ಯಮಂತಕೋಪಾಖ್ಯಾನದ” ಶ್ರವಣವನ್ನು ಮಾಡಬೇಕೆಂದು ಪುರಾಣಗಳಲ್ಲಿ ಉಲ್ಲಿಖತವಾಗಿದೆ.

ಶ್ರೀಕೃಷ್ಣನು ಚೌತಿಚಂದ್ರನನ್ನು ನೋಡಿದ್ದಕ್ಕಾಗಿ ಸ್ಯಮಂತಕಮಣಿಯ ಕಳ್ಳತನದ ಮಿಥ್ಯಾರೋಪವನ್ನು ಪಡೆದನು. ಸೃಷ್ಟಿಕರ್ತನಾದ ಸಾಕ್ಷಾತ್ ನಾರಾಯಣನಿಗೆ ಚಂದ್ರದರ್ಶನದಿಂದ ಯಾವ ದೋಷವೂ ಇಲ್ಲ. ಆದರೂ ವಿಘ್ನನಿವಾರಕನ ಶಾಪ ಎಂದಿಗೂ ಸುಳ್ಳಾಗಬಾರದೆಂದು ತನ್ನನ್ನೇ ದೃಷ್ಟಾಂತವನ್ನಾಗಿಸಿ ಜಗತ್ತಿಗೆ ತೋರಿಸಿದ. ಚೌತಿಚಂದ್ರದರ್ಶನದ ಪರಿಹಾರಕ್ಕಾಗಿ ಪಠಿಸುವ ಮಂತ್ರ-
ಸಿಂಹಃ ಪ್ರಸೇನಮವಧೀತ್ ಸಿಂಹೋ ಜಾಂಬವತಾ ಹತಃ |
ಸುಕುಮಾರಕ ಮಾ ರೋಧೀಃ ತವ ಹ್ಯೇಷಃ ಸ್ಯಮಂತಕಃ ||

ಕೃಷ್ಣಾವತಾರದಲ್ಲಿ ಗಣಪತಿಯು ”ಚಾರುದೇಷ್ಣ” ಎಂಬ ಹೆಸರಿನಿಂದ ಶ್ರೀಕೃಷ್ಣರುಕ್ಮಿಣಿಯರಲ್ಲಿ ಅವತರಿಸಿದ. ಶ್ರೀಕೃಷ್ಣನ ಆಜ್ಞೆಯಂತೆ ಸಾಂಬಮೊದಲಾದ ಅನೇಕ ಅಸುರಸಂಹಾರವನ್ನು ಮಾಡಿದನು.

Ganesh Chaturthi 2022

ಗಣಪತಿ ಆಕಾಶತತ್ವಕ್ಕೆ ಅಭಿಮಾನಿ. ಶಬ್ದಗಳ ಅಭಿವ್ಯಕ್ತಿಯಾಗವುದು ಆಕಾಶದಲ್ಲಿ. ವಾಕ್ ಮತ್ತು ಅರ್ಥಗಳು ಶಿವಪಾರ್ವತಿಯರೆಂತೆ ಅನ್ಯೋನ್ಯತೆಯನ್ನು ಹೊಂದಿವೆ. ಶಬ್ದಗಳ ಅಭಿವ್ಯಕ್ತಿಯು ಅರ್ಥದಿಂದ ಕೂಡಿರಬೇಕು. ಅರ್ಥವನ್ನು ಅಭಿವ್ಯಕ್ತಿಗೊಳಿಸಲು ಶಬ್ದಗಳ ಸಹಾಯಬೇಕು. ಇವೆರಡರ ಸಿದ್ಧಿಗೆ ಗಣಪತಿಯ ಅನುಗ್ರಹವು ಬಹುಮುಖ್ಯ. ಆದ್ದರಿಂದಲೇ ಗಣಪತಿಯು ”ವಿದ್ಯಾಭಿಮಾನಿ” ಆದ್ದರಿಂದ ಎಲ್ಲ ಶಾಲೆಗಳಲ್ಲಿ ನೂತನವಾಗಿ ಪಾಠಪ್ರಾರಂಭಿಸುವಾಗ ಮೊದಲು ಗಣಪತಿಯ ಪ್ರಾರ್ಥನೆ ಮತ್ತು ಪೂಜೆಗಳನ್ನು ಮಾಡುತ್ತಾರೆ.

ಪಂಚಮವೇದವೆನಿಸಿದ ಮಹಾಭಾರತವನ್ನು ಬರೆಯಲು ಶ್ರೀವೇದವ್ಯಾಸರು ಗಣಪತಿಗೆ ಆಜ್ಞಾಪಿಸಿದರು. ‘ಮಧ್ಯದಲ್ಲಿ ಎಲ್ಲಿಯೂ ನಿಲ್ಲಿಸದಂತೆ ಹೇಳಬೇಕೆಂದು’ ಗಣಪತಿ ವ್ಯಾಸರಿಗೆ ಪ್ರಾರ್ಥಿಸಿದಾಗ ‘ಆಗಲಿ, ಆದರೆ ನಾವು ಹೇಳುವದನ್ನೆಲ್ಲ ಅರ್ಥೈಸಿಕೊಂಡೇ ಬರೆಯಬೇಕು’ ಎಂದು ವ್ಯಾಸರು ಹೇಳಿದರು. ಹೀಗೆ ಗಣಪತಿ ಕೇವಲ ಮಹಾಭಾರತದ ಲೇಖಕನಷ್ಟೇ ಅಲ್ಲದೇ ಸಾಕ್ಷಾತ್ ವೇದವ್ಯಾಸರಿಂದ ಮಹಾಭಾರತವನ್ನು ಕೇಳಿ ಅರ್ಥೈಸಿಕೊಂಡ ಮಹಾನುಭಾವ. ಆದ್ದರಿಂದ ದಾಸವರೇಣ್ಯರಾದ ಜಗನ್ನಾಥದಾಸರು ವಿನಾಯಕನನ್ನು “ಲೇಖಕಾಗ್ರಣೀ”ಎಂದು ಕೊಂಡಾಡಿದ್ದಾರೆ.

ಗಣಪತಿಗೆ ಇಬ್ಬರು ಪತ್ನಿಯರು. ಸಿದ್ಧಿ ಹಾಗೂ ಬುದ್ಧಿ. ಅವರಿಗೆ ಇಬ್ಬರು ಮಕ್ಕಳು ಶುಭ ಮತ್ತು ಲಾಭ. ಹೆಂಡಿತಿ ಎಂದರೆ ಬುದ್ಧಿಯೆಂದು ಶಾಸ್ತ್ರದ ಪರಿಭಾಷೆ. ಬುದ್ಧಿಯ ಪ್ರಚೋದನೆ ಸರಿಯಾದ ಮಾರ್ಗದಲ್ಲಿದ್ದರೆ ಸತ್ಕಾರ್ಯಗಳ ಸಿದ್ಧಿಯು ಪರಿಪೂರ್ಣವಾಗಿ ಫಲಿಸುತ್ತದೆ. ಅಂತಹ ಫಲವು ಎಂದಿಗೂ ಶುಭವಾಗಿ ಮತ್ತು ಲಾಭವಾಗಿರುತ್ತದೆ ಎಂಬುದು ಇದರ ಸಾಂಕೇತಿಕ ಅರ್ಥ. ಆದ್ದರಿಂದ ಕಾರ್ಯಸಿದ್ಧಿಗಾಗಲಿ ಸದ್ಬುದ್ಧಿಗಾಗಲಿ ಗಣಪತಿಯ ಅನುಗ್ರಹವೇ ಆಗಬೇಕು.

ಗಣಪತಿಯು ಒಂದು ಕೈಯಲ್ಲಿ ಅಂಕುಶವನ್ನು ಮತ್ತೊಂದು ಕೈಯಲ್ಲಿ ಪಾಶವನ್ನು ಹಿಡಿದಿರುವನು. ಸಂಸಾರದಲ್ಲಿಯ ಸುಖಭೋಗಗಳು ಪಾಶದಂತೆ ಎಲ್ಲರನ್ನು ಬಂಧಿಸುತ್ತವೆ. ಆದರೆ ಅವುಗಳಿಗೆ ತಕ್ಷಣದಲ್ಲಿಯೇ ಅಂಕುಶವನ್ನು ಹಾಕಬೇಕು. ಎಲ್ಲ ಸಾಂಸಾರಿಕ ಸುಖಭೋಗಕ್ಕೂ ಒಂದು ಇತಿಮಿತಿ ಇರಲಿ ಎಂದು ಈ ಅಂಕುಶವು ಸೂಚಕವಾಗಿದೆ. ಆದ್ದರಿಂದ ಗಣಪತಿ ”ಪಾಶಾಂಕುಶಧರ”.

”ಕಲೌ ದುರ್ಗಾವಿನಾಯಕೌ” ಎಂದು ಶ್ರೀಮನ್ಮಧ್ವಾಚಾರ್ಯರು ತಂತ್ರಸಾರಸಂಗ್ರಹದಲ್ಲಿ ಹೇಳಿದ್ದಾರೆ. ಕಲಿಯುಗದಲ್ಲಿ ಸಾಧನೆಗೆ ಶೀಘ್ರಫಲಪ್ರದರು ದುರ್ಗೆ ಮತ್ತು ಗಣಪತಿ. ಆದ್ದರಿಂದ ಗಣಪತಿಗೆ ”ಕ್ಷಿಪ್ರಪ್ರಸಾದ” ಎಂದು ಕರೆಯುತ್ತಾರೆ.

ಗಣಪತಿಯು ಆದಿಪೂಜಿತನಾಗಿದ್ದಾನೆ. ಸೇತುಬಂಧನ ಮಾಡುವಾಗ ಸಾಕ್ಷಾತ್ ಶ್ರೀರಾಮಚಂದ್ರನು ಗಣಪತಿಯನ್ನು ಪೂಜಿಸಿದ್ದಾನೆ. ಮಹಾಭಾರತದ ಯುದ್ಧಪ್ರಾರಂಭದಲ್ಲಿ ಶ್ರೀಕೃಷ್ಣನ ಆಜ್ಞೆಯಂತೆ ಧರ್ಮರಾಜನೂ ಸಹ ಮೊದಲು ಗಣಪತಿಯನ್ನು ಪೂಜಿಸಿದ್ದಾನೆ. ದೈತ್ಯರನ್ನು ಸಂಹರಿಸಲು ದೇವೆಂದ್ರನೂ ಸಹ ಗಣಪತಿಯ ಪೂಜೆಯನ್ನು ಮಾಡಿದ್ದಾನೆ. ಹೀಗೆ ತನಗಿಂತಲೂ ಶ್ರೇಷ್ಠರಾದ ದೇವತೆಗಳಿಂದ ಮತ್ತು  ಶ್ರೀರಾಮಚಂದ್ರನಿಂದ ಪೂಜೆಗೊಂಡ ಉನ್ನತ ಸ್ಥಾನ ಗಣಪತಿಯದ್ದು. ಆದ್ದರಿಂದ ಎಲ್ಲ ಶುಭಕಾರ್ಯಗಳಲ್ಲಿ ಗಣಪತಿಯನ್ನು ಪೂಜಿಸುತ್ತಾರೆ. ಅನೇಕ ದಾಸವರೇಣ್ಯರು ಗಣಪತಿಯನ್ನು ”ಮೊದಲೊಂದಿಪೆ ನಿನಗೆ ಗಣನಾಥ” ಎಂದು ಕೊಂಡಾಡಿದ್ದಾರೆ.

ವಿದ್ಯಾಭಿಮಾನಿಯಾದ ಗಣಪತಿಯಲ್ಲಿ ಸದಾ ಸದ್ಭುದ್ಧಿ ವಿದ್ಯೆಗಳಿಗಾಗಿಯೇ ಪ್ರಾರ್ಥಿಸಬೇಕು. ಸಜ್ಜನರ ಸನ್ಮಾರ್ಗದಲ್ಲಿ ಬರುವ ವಿಘ್ನಗಳನ್ನು ಆ ವಿಘ್ನಹರ್ತನು ಸದಾ ಪರಿಹರಿಸುವ.

ಗಣಪತಿಯನ್ನು ಲಂಬೋದರ, ಗರಿವದನ, ಗಿರಿಶೃಂಗ, ಗೌರಿಜ, ಗೌರೀಪುತ್ರ, ದಂತಿಮುಖ, ದಾಕ್ಷಾಯಣೀ ಪುತ್ರ, ನವನೀತ ಗಣಪ, ಪೃಥ್ವಿಗರ್ಭ, ಬೆನಕ, ಮಹಾಗಣಪತಿ, ಮಹಾಗಣಾಧಿಪತಿ, ಮೂಷಿಕ ವಾಹನ, ಮೂಷಿಕ-ವಾಹನ, ಮೂಷಿಕರಥ, ಮೂಷಿಕವಾಹನ, ಮೊರಗಿವಿದಯ, ವಕ್ರತುಂಡ, ವಿಘ್ನಹರ, ವಿಘ್ನಾದಿಪ, ವಿಘ್ನೇಶ್ವರ, ವಿದ್ಯಾದೀಶ, ವಿದ್ಯಾನಾಥ, ವಿದ್ಯಾಪ್ರದಾಯಕ, ವಿನಾಯಕ, ವೃಷಧ್ವಜ, ಶಿವಸುತ, ಶುಂಡಾಲ, ಶೂರ್ಪಕರ್ಣ, ಶ್ರೀಗಣೇಶ, ಸರ್ವವಿದ್ಯಾಪ್ರದಾಯಕ, ಸಿದ್ಧಿಗಣಪತಿ, ಸಿದ್ಧಿವಿನಾಯಕ, ಸುಂಡಿಲಮೊಗ, ಸುಮುಖ, ಸುಮುಖ ಗಣಪತಿ, ಸ್ಕಂದಪೂರ್ವಜ, ಹೇರುಂಬ ಎಂದೆಲ್ಲಾ ಕರೆಯಲಾಗುತ್ತದೆ.

ಗಣೇಶನನ್ನು ಅಲ್ಲಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕೂಡಿಸಿ ಪಾಶ್ಚಾತ್ಯಸಂಗೀತದೊಂದಿಗೆ ಕಂಡಂತೆ ಕುಣಿಯುವುದು ಎಂದಿಗೂ ಆಚರಣೆಯಾಗುವದಿಲ್ಲ. ಇದೊಂದು ದೇವತಾಪೂಜೆ. ಪ್ರಸಾದ ಹಂಚುವುದು, ಅನ್ನದಾನ, ಶಾಸ್ತ್ರೀಯಸಂಗೀತ, ಶಾಸ್ತ್ರೀಯ ನೃತ್ಯಸೇವೆ, ಭಕ್ತಿಗೀತೆ ಇವುಗಳೆಲ್ಲ ವಿಹಿತ. ಆಚರಣೆಯ ಹೆಸರಿನಲ್ಲಿ ಭಾರತೀಯ ಸಂಪ್ರದಾಯಕ್ಕೆ ಆಗುವ ಅವಮಾನಗಳಿಗೆ ತಡೆಯೊಡ್ಡಬೇಕು. ನಮ್ಮ ಆಚರಣೆಗಳು ಧರ್ಮದ ಚೌಕಟ್ಟಿನಲ್ಲಿರಲಿ. ಆಚರಣೆಯ ನೆಪದಲ್ಲಿ ವಿಡಂಬನೆ ಬೇಡ.

-ಲೇಖಕರು ಹವ್ಯಾಸಿ ಬರಹಗಾರರು

ಇದನ್ನೂ ಓದಿ| Ganesh Chaturthi 2022 | ಗಣಪತಿಗೆ ಇಷ್ಟವಾದ ಮೋದಕ, ಲಡ್ಡು, ಕಜ್ಜಾಯ ಮಾಡುವುದು ಹೀಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಗಣಪತಿ ವಿಸರ್ಜನೆ ಮಾಡುವಾಗ ನೀರಲ್ಲಿ ಮುಳುಗಿ ಬಾಲಕ ಸಾವು

Drowned in River : ಸ್ನೇಹಿತರೊಂದಿಗೆ ಗಣೇಶ ವಿಸರ್ಜನೆ (Ganesha chaturthi) ಮಾಡುವಾಗ ಬಾಲಕನೊರ್ವ ಹಳ್ಳದಲ್ಲಿ ನೀರಿನ ಆಳ ಅರಿಯದೇ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

VISTARANEWS.COM


on

By

nishal tej
ಮೃತ ಬಾಲಕ ನಿಶಾಲ್‌ ತೇಜ್
Koo

ಚಿಕ್ಕಬಳ್ಳಾಪುರ : ಇಲ್ಲಿನ ಚಿಕ್ಕಕಾಡಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀರಾಮಕುಂಟೆ ಹಳ್ಳದಲ್ಲಿ (Drowned) ಗಣಪತಿ ವಿಸರ್ಜನೆ (Ganesha chathurthi) ಮಾಡಲು ಹೋಗಿ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಡಶೀಗೇನಹಳ್ಳಿ ಗ್ರಾಮದ ನಿಶಾಲ್ ತೇಜ್ (12) ಮೃತ ಬಾಲಕ.

ಸೆ.29ರಂದು ಸ್ನೇಹಿತರೊಂದಿಗೆ ನಿಶಾಲ್‌ ತೇಜ್‌ ಗಣಪತಿ ವಿಸರ್ಜನೆಗೆ ತೆರಳಿದ್ದ. ಈ ವೇಳೆ ಗಣೇಶ ವಿಸರ್ಜನೆ ಮಾಡುವ ಉತ್ಸಾಹದಲ್ಲಿ ಹಳ್ಳದ ಆಳ ಅರಿಯದೇ ನೀರಿಗೆ ಇಳಿದಿದ್ದಾನೆ. ಆದರೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಆತನ ಮೃತದೇಹವು ಕೂಗಳತೆ ದೂರದಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Doctor death : ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯೆ ನಿಗೂಢ ಸಾವು; ಪಕ್ಕದಲ್ಲೇ ಸಿರಿಂಜ್‌ ಪತ್ತೆ!

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿ ದಾರುಣ ಸಾವು

ಹಾಸನ: ಇಲ್ಲಿನ ಅರಕಲಗೂಡು ತಾಲ್ಲೂಕಿನ ಮಧುರನಹಳ್ಳಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಆಟವಾಡುವಾಗ ಬಾಲಕಿ ಕಾಲು ಜಾರಿ ನಾಲೆ ಬಿದ್ದು (Drowned In Canal) ಮೃತಪಟ್ಟಿರುವ ಘಟನೆ ನಡೆದಿದೆ. ಸುಪ್ರೀತಾ (5) ಮೃತ ದುರ್ದೈವಿ.

ಗ್ರಾಮದ ರೇವಣ್ಣ-ಭಾಗ್ಯ ದಂಪತಿ ಪುತ್ರಿ ಸುಪ್ರೀತಾ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇತ್ತು. ಹೀಗಾಗಿ ಗ್ರಾಮದ ಸಮೀಪವಿರುವ ನಾಲೆಯ ಬಳಿ ಸ್ನೇಹಿತರೊಂದಿಗೆ ಸುಪ್ರೀತಾ ಆಟವಾಡುತ್ತಿದ್ದಳು. ಈ ವೇಳೆ ಅಚಾನಕ್‌ ಆಗಿ ಕಾಲುಜಾರಿ ನಾಲೆಗೆ ಬಿದ್ದಿದ್ದಾಳೆ. ನಾಲೆಯಲ್ಲಿ ಹರಿಯುತ್ತಿದ್ದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ಹಾರಂಗಿ ಬಲದಂಡೆ ನಾಲೆಯಲ್ಲಿ ಮುಳುಗಿರುವ ಬಾಲಕಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಈಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿ 6 ಕಿ.ಮೀವರೆಗೂ ಶೋಧಕಾರ್ಯ ನಡೆಸಿದ್ದಾರೆ. ಆದರೆ ಮೃತದೇಹವು ಪತ್ತೆಯಾಗಿಲ್ಲ. ಹಳ್ಳಿ ಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Tumkur News : ತುಮಕೂರಲ್ಲಿ ಗಣೇಶ ವಿಸರ್ಜನೆ (Ganesh Chaturthi) ವೇಳೆ ಪ್ರಸಾದ ಸೇವಿಸಿದ 20ಕ್ಕೂ ಹೆಚ್ಚು ಜನರು (Food Poisoning) ಅಸ್ವಸ್ಥಗೊಂಡಿದ್ದಾರೆ. ಹಲವರು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

By

Food Poisoning
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು
Koo

ತುಮಕೂರು: ಇಲ್ಲಿನ ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.24) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

6 ಮಂದಿ ಆರೋಗ್ಯವು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20ಕ್ಕೂ ಹೆಚ್ಚು ಜನರಿಗೆ ಗೂಳೂರು ಪ್ರಾಥಮಿಕ ವೈದ್ಯರಿಂದ ಗ್ರಾಮದಲ್ಲೇ ಚಿಕಿತ್ಸೆ ಮುಂದುವರಿದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 54 ಮನೆಗಳಿದ್ದು, ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಿನ್ನೆ ಬೆಳಗ್ಗೆ (ಸೆ.25) 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ವೇಳೆ ಎಚ್ಚತ್ತ ಆರೋಗ್ಯ ಅಧಿಕಾರಿಗಳು ವೈದ್ಯರ ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಇದುವರೆಗೆ ಸುಮಾರು 28ಮಂದಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡಿರುವವರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಅಣಬೆ ಸೇವಿಸಿದ್ದ ಬಗ್ಗೆಯೂ ಶಂಕೆ ಇದೆ. ಮೇಲ್ನೋಟಕ್ಕೆ ಕುಡಿಯುವ ನೀರು ಕಲುಷಿತಗೊಂಡಿರಬಹುದು, ಆಹಾರದಲ್ಲಿ ವ್ಯತ್ಯಾಸಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಬಳಿಕ ಪ್ರಕರಣದ ಸತ್ಯಸಂಗತಿ ಹೊರಬರಲಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಆತಂಕವು ಹೆಚ್ಚಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಗಣೇಶ ಚತುರ್ಥಿ

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi : ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ವಾಹನ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.

VISTARANEWS.COM


on

By

Ganesh Chaturthi Vehicular traffic on this route to be restricted tomorrow
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Ganesh Chaturthi: ನಾಳೆ ಗಣೇಶ ಮೂರ್ತಿಗಳ ವಿಸರ್ಜನೆ; ‌ಬೆಂಗಳೂರಿನ ಹಲವೆಡೆ ರಸ್ತೆ ಮಾರ್ಗ ಬದಲಾವಣೆ

Ganesh Chaturthi: ಬೆಂಗಳೂರಿನ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸೆ.21ರಂದು ಸಂಜೆ 6 ಗಂಟೆಯಿಂದ ಸೆ.22 ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

VISTARANEWS.COM


on

Ganesh visarjan
Koo

ಬೆಂಗಳೂರು: ನಗರದಲ್ಲಿ ಸೆ.21ರಂದು ಗಣೇಶ ಮೂರ್ತಿಗಳ ವಿಸರ್ಜನೆ (Ganesh Chaturthi) ‌ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸುಗಮ ಸಂಚಾರಕ್ಕಾಗಿ ಹಲವೆಡೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಗುರುವಾರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಅದ್ದರಿಂದ ವಾಹನ ಸವಾರರು ಬದಲಿ‌ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ | Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ಎಲ್ಲಾ ಮಾದರಿಯ ವಾಹನಗಳು ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದ್ದು, ಇದಕ್ಕಾಗಿ ಸಂಚಾರ ಪೋಲಿಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸೂಕ್ತ ಸ್ಥಳಗಳಲ್ಲಿ ಅಧಿಕಾರಿಗಳ ನಿಯೋಜನೆ ಮತ್ತು ಬಂದೋಬಸ್ತ್ ಮಾಡಲಾಗಿದೆ.

ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾದ ರಸ್ತೆಗಳ ವಿವರ

  1. ದಿಣ್ಣೂರು ಮುಖ್ಯರಸ್ತೆ
  2. ಆರ್.ಟಿ ನಗರ ಮುಖ್ಯರಸ್ತೆ.
  3. ಸಿಬಿಐ ಮುಖ್ಯರಸ್ತೆ.

ಮಾರ್ಗ ಬದಲಾವಣೆ ವಿವರಗಳು

1.ಸುಲ್ತಾನ್ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್‌ಮೆಂಟ್ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್‌-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ – ಎಡ ತಿರುವು- ಟಿ.ವಿ ಟವರ್ – ಎಡ ತಿರುವು-ಜಯಮಹಲ್ ಮುಖ್ಯರಸ್ತೆ- ರಸ್ತೆಯಲ್ಲಿ ನೇರವಾಗಿ ಕಂಟೋನೆಂಟ್ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

2.ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ -ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ -ಬಲ ತಿರುವು- ಮಠದಹಳ್ಳಿ ಮುಖ್ಯರಸ್ತೆ- ಗುಂಡೂರಾವ್ ಸರ್ಕಲ್ – ಎಡ ತಿರುವು – ತರಳಬಾಳು ರಸ್ತೆ – ಎಡತಿರುವು- ಬೆಂಗಳೂರು ಬಳ್ಳಾರಿ ರಸ್ತೆ ಮೇಕ್ರಿ ಸರ್ಕಲ್ – ಬೆಂಗಳೂರು ನಗರದ ಕಡೆಗೆ ಸಂಚರಿಸಬಹುದಾಗಿದೆ.

    3.ಕಂಟೋನ್ಸೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು. – ಸುಲ್ತಾನ್ ಪಾಳ್ಯ – ಕಾವಲ್‌ ಭೈರಸಂದ್ರ ಕಡೆಗೆ:

    ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ – ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) – ವಾಟರ್ ಟ್ಯಾಂಕ್ ಜಂಕ್ಷನ್ – ಬಲ ತಿರುವು – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ ತಿರುವು -ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      4.ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

      ಮೇಕ್ರಿ ಸರ್ಕಲ್‌- ಜಯಮಹಲ್ ಮುಖ್ಯರಸ್ತೆ – ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್‌ ಟ್ಯಾಂಕ್ ಜಂಕ್ಷನ್ – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೇಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ- ತಿರುವು ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      5.ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು:

      ಮೇಕಿ ಸರ್ಕಲ್- ಬಲ ತಿರುವು – ಜಯಮಹಲ್‌ ಮುಖ್ಯರಸ್ತೆ ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್ ಟ್ಯಾಂಕ್ ಜಂಕ್ಷನ್‌ – ಎಡ ತಿರುವು ಮಠದಹಳ್ಳಿ ಮುಖ್ಯ ರಸ್ತೆ – ಸರ್ಕಲ್ – ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಸಂಚರಿಸಬಹುದು.

      6.ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು – ಸಂಚರಿಸಬೇಕಾದ ಮಾರ್ಗಗಳು:

      ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ – ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್‌ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆ ಎಡತಿರುವು- ದೇಸ್ವರಾಜ್ ರಸ್ತೆ -ಗುಂಡೂರಾವ್ ಸರ್ಕಲ್ ಬಲತಿರುವು- 1 – ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್‌ ಎಡ ತಿರುವು -ಪಿ.ಆರ್.ಟಿ.ಸಿ ಜಂಕ್ಷನ್ – ದೇವೆಗೌಡ ರಸ್ತೆ – ದಿಣ್ಣೂರು ಸಂಚರಿಸಬಹುದು. – ಎಡ ತಿರುವು ದಿಣ್ಣೂರು ಜಂಕ್ಷನ್ ಬಲ ತಿರುವು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ.

        Continue Reading
        Advertisement
        Prajwal should appear before SIT and face probe says Nikhil Kumaraswamy
        ಕರ್ನಾಟಕ6 mins ago

        Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

        Karnataka Rain
        ಮಳೆ9 mins ago

        Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

        Survival Story
        ವಿದೇಶ20 mins ago

        Survival Story: ಆ 17 ದಿನಗಳು…ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿಬಿದ್ದ 13 ಮಂದಿಯ ರಕ್ಷಣೆಯ ರೋಚಕ ಕಹಾನಿ

        Lok Sabha Election 2024
        ದೇಶ20 mins ago

        Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

        ಲಕ್ಕೂರು ಆನಂದ lakkuru Anand
        ಶ್ರದ್ಧಾಂಜಲಿ43 mins ago

        ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

        Prajwal Revanna Case Shivarame Gowdas Deve Gowda suicide statement says Nikhil Kumaraswamy
        ರಾಜಕೀಯ46 mins ago

        Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

        murder case in Belgavi
        ಬೆಳಗಾವಿ59 mins ago

        Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

        rave party telugu actress hema
        ಕ್ರೈಂ1 hour ago

        ‌Rave Party: ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ ತೆಲುಗು ನಟಿ; ಐವರ ಬಂಧನ

        Payal Rajput Accuses Rakshana Producers Of Not Clearing Her Dues
        ಟಾಲಿವುಡ್1 hour ago

        Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

        Salman Khan Ultimate Sex Symbol Says Malaika Arora
        ಬಾಲಿವುಡ್1 hour ago

        Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

        Sharmitha Gowda in bikini
        ಕಿರುತೆರೆ8 months ago

        Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

        Kannada Serials
        ಕಿರುತೆರೆ7 months ago

        Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

        Bigg Boss- Saregamapa 20 average TRP
        ಕಿರುತೆರೆ7 months ago

        Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

        galipata neetu
        ಕಿರುತೆರೆ6 months ago

        Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

        Kannada Serials
        ಕಿರುತೆರೆ8 months ago

        Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

        Kannada Serials
        ಕಿರುತೆರೆ8 months ago

        Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

        Bigg Boss' dominates TRP; Sita Rama fell to the sixth position
        ಕಿರುತೆರೆ7 months ago

        Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

        geetha serial Dhanush gowda engagement
        ಕಿರುತೆರೆ5 months ago

        Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

        varun
        ಕಿರುತೆರೆ6 months ago

        Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

        Kannada Serials
        ಕಿರುತೆರೆ8 months ago

        Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

        Karnataka Rain
        ಮಳೆ9 mins ago

        Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

        Karnataka Rain
        ಮಳೆ22 hours ago

        Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

        Karnataka rain
        ಮಳೆ23 hours ago

        Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

        Karnataka Rain
        ಮಳೆ24 hours ago

        Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

        Prajwal Revanna Case JDS calls CD Shivakumar pen drive gang
        ರಾಜಕೀಯ3 days ago

        Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

        Karnataka weather Forecast
        ಮಳೆ3 days ago

        Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

        Dina Bhavishya
        ಭವಿಷ್ಯ3 days ago

        Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

        Karnataka Weather Forecast
        ಮಳೆ4 days ago

        Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

        Drowned in water
        ಹಾಸನ4 days ago

        Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

        Suspicious Case
        ಬೆಂಗಳೂರು4 days ago

        Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

        ಟ್ರೆಂಡಿಂಗ್‌