Rain News | ಮಳೆ ಅವಾಂತರದ ಮಾಹಿತಿ ಪಡೆದ ಸಿಎಂ, ರಾಮನಗರಕ್ಕೆ ಹೆಲಿಕಾಪ್ಟರ್‌ ಮೂಲಕ ಹೋಗಲು ನಿರ್ಧಾರ - Vistara News

ಕರ್ನಾಟಕ

Rain News | ಮಳೆ ಅವಾಂತರದ ಮಾಹಿತಿ ಪಡೆದ ಸಿಎಂ, ರಾಮನಗರಕ್ಕೆ ಹೆಲಿಕಾಪ್ಟರ್‌ ಮೂಲಕ ಹೋಗಲು ನಿರ್ಧಾರ

ರಾಜ್ಯದ 16 ಜಿಲ್ಲೆಗಳಲ್ಲಿ ಉಂಟಾಗಿರುವ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ಪಡೆದುಕೊಂಡಿದ್ದಾರೆ.

VISTARANEWS.COM


on

Male bus
ರಾಮನಗರ ಬಳಿಯ ಹೆದ್ದಾರಿಯಲ್ಲಿ ಬಸ್‌ಗಳು ಮಳೆ ನೀರಿನಲ್ಲಿ ಮುಳುಗಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಭಾರಿ ಮಳೆ ಅನಾಹುತ ಉಂಟಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ಪಡೆದುಕೊಂಡಿದ್ದು, ಅಲ್ಲಿಗೆ ಹೆಲಿಕಾಪ್ಟರ್‌ ಮೂಲಕ ಪ್ರಯಾಣಿಸಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಕೆರೆ ಕಟ್ಟೆಗಳು ಒಡೆದಿದೆ. ರಸ್ತೆ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ನೀರು ತುಂಬಿವೆ. ಹೀಗಾಗಿ ಬೆಂಗಳೂರು-ಮೈಸೂರು ನಡುವೆ ಸಂಚಾರವೇ ಸ್ತಬ್ಧಗೊಂಡಿವೆ. ಇದರ ಜತೆಗೆ ರಾಜ್ಯದ ಇತರ ಭಾಗಗಳಲ್ಲೂ ದೊಡ್ಡ ಮಟ್ಟದ ಮಳೆ ಹಾನಿ ಸಂಭವಿಸಿರುವ ಬಗ್ಗೆ ಸಿಎಂ ಮಾಹಿತಿ ಪಡೆದುಕೊಂಡಿದ್ದಾರೆ.

ʻʻರಾಜ್ಯದ ೧೬ ಜಿಲ್ಲೆಗಳಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆ ಅವಾಂತರದ ಬಗ್ಗೆ ಮಾಹಿತಿ ಪಡೆದಿದ್ದೇನೆ. ರಸ್ತೆಯಲ್ಲಿ ನೀರು ನಿಂತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪರ್ಯಾಯ ಮಾರ್ಗವಾಗಿ ವಾಹನಗಳು ಹೋಗಲು ಸೂಚನೆ ನೀಡಲಾಗಿದೆʼʼ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ʻʻತುರ್ತು ಕ್ರಮವಾಗಿ ಹೆದ್ದಾರಿಯಲ್ಲಿ ನಿಂತ ನೀರನ್ನು ಕ್ಲಿಯನ್‌ ಮಾಡಲು ಸೂಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ ಪರಿಹಾರ ಕೊಡಲು ಸೂಚನೆ ನೀಡಿದ್ದೇನೆ. ಮೈಸೂರು, ರಾಮನಗರ, ಮಂಡ್ಯ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಜತೆಗೆ ಉತ್ತರ ಕರ್ನಾಟಕ ಭಾಗದಲ್ಲಿಯೂ ಮಳೆ ಹಾನಿಗೆ ತುರ್ತು ಪರಿಹಾರ ನೀಡುವಂತೆ ತಿಳಿಸಲಾಗಿದೆʼʼ ಎಂದು ಸಿಎಂ ಹೇಳಿದರು.

ಕೆರೆ ಕಟ್ಟೆಗಳ ಮೇಲೆ ನಿಗಾ
ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಕೆರೆಗಳು ತುಂಬಿವೆ. ಇವುಗಳು ಒಡೆಯದಂತೆ ಸುರಕ್ಷಿತ ಕ್ರಮ ವಹಿಸಬೇಕಾಗಿದೆ. ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದ್ದಲ್ಲಿ ಜನರನ್ನು ಕೂಡಲೇ ಸ್ಥಳಾಂತರಿಸಲು, ಕಾಳಜಿ ಕೇಂದ್ರ ತೆರೆಯಲು ಆದೇಶವಾಗಿದೆ. ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ತುರ್ತು ಕೆಲಸಗಳಿಗಾಗಿ ೯೦೦ ಕೋಟಿ ನೀರು ಮೀಸಲು ಇಡಲಾಗಿದೆ.

ಮುಂದಿನ ತಿಂಗಳು ಪರಿಹಾರ
ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಸಂತ್ರಸ್ತ ರೈತರಿಗೆ ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ. ಮುಂದಿನ ತಿಂಗಳು ಪರಿಹಾರ ನೀಡಲು ಎಲ್ಲ ಸಿದ್ಧತೆಗಳು ನಡೆದಿವೆʼʼ ಎಂದು ಸಿಎಂ ತಿಳಿಸಿದರು.

ಎಚ್‌ಡಿಕೆ, ಅಶ್ವತ್ಥನಾರಾಯಣ ಜತೆ ಚರ್ಚೆ
ಈ ನಡುವೆ ಬೊಮ್ಮಾಯಿ ಅವರು ರಾಮನಗರ ಮತ್ತು ಚನ್ನಪಟ್ಟಣದ ಮಳೆ ಅವಾಂತರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರ ಜತೆ ಚರ್ಚೆ ನಡೆಸಿದರು. ರೇಸ್ ಕೋರ್ಸ್ ನಿವಾಸಕ್ಕೆ ಅಶ್ವಥ್ ನಾರಾಯಣ ಅವರನ್ನು ಕರೆಸಿಕೊಂಡು ಮಾಹಿತಿ ಪಡೆದರು. ಹೆಲಿಕಾಪ್ಟರ್‌ ಮೂಲಕ ರಾಮನಗರಕ್ಕೆ ತೆರಳಲು ನಿರ್ಧರಿಸಿರುವ ಸಿಎಂ ಅವರು ಎಲ್ಲೆಲ್ಲ ಭೇಟಿ ನೀಡಬೇಕು ಎನ್ನುವ ಬಗಗ್ಗೆ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ| RAIN NEWS: ಬೆಂಗಳೂರು-ಮೈಸೂರು ರೋಡ್‌ಗೆ ನುಗ್ಗಿದ ನೀರು, ಸಂಚರಿಸಬೇಡಿ ಎಂದು ಮನವಿ ಮಾಡಿದ ಎಚ್‌ಡಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
ದೇಶ14 hours ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ14 hours ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ17 hours ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ18 hours ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ18 hours ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest3 days ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest3 days ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest3 days ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌