ಅಂಜುಮಾನ್‌ ಸಂಸ್ಥೆಯ ಅರ್ಜಿ ವಜಾ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್‌ ಅಸ್ತು - Vistara News

Latest

ಅಂಜುಮಾನ್‌ ಸಂಸ್ಥೆಯ ಅರ್ಜಿ ವಜಾ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್‌ ಅಸ್ತು

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ನೀಡಬಾರದು ಎಂದು ಅಂಜುಮಾನ್‌ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಆಚರಣೆ ನಿರಾತಂಕವಾಗಿ ನಡೆಯಲಿದೆ.

VISTARANEWS.COM


on

hubballi Edgah maidan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿರೋಧಿಸಿ ಅಂಜುಮಾನ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಧಾರವಾಡದ ಸಂಚಾರಿ ಹೈಕೋರ್ಟ್‌ನ ಏಕಸದಸ್ಯ ಪೀಠ ವಜಾಗೊಳಿಸಿದೆ. ಹೀಗಾಗಿ ಅಲ್ಲಿನ ಮಹಾನಗರ ಪಾಲಿಕೆಯ ಆದೇಶದಂತೆ ಉತ್ಸವದ ಆಚರಣೆ ನಡೆಯಲಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಈ ಬಾರಿ ಗಣೇಶೋತ್ಸವ ನಡೆಸದೇ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಹಾಗೂ ಹೈಕೋರ್ಟ್‌ನಲ್ಲೇ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಸುಪ್ರೀಮ್‌ ಕೋರ್ಟ್‌ನ ತ್ರಿಸದಸ್ಯ ಪೀಠ ಮಂಗಳವಾರ ಸಂಜೆ ತೀರ್ಪು ನೀಡಿದ್ದ ಹಿನ್ನೆಲೆಯಲ್ಲಿ ಅಂಜುಮಾನ್‌ ಸಂಸ್ಥೆ ಮತ್ತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಹೀಗಾಗಿ ರಾತ್ರಿ ೧೦ ಗಂಟೆಗೆ ಆದ್ಯತೆ ಮೇರೆಗೆ ವಿಚಾರಣೆ ನಡೆಸಿದ ಕೋರ್ಟ್‌ ಹೊಸ ತೀರ್ಪು ಪ್ರಕಟಿಸಿದ್ದು, ಹೀಗಾಗಿ ಇದೇ ಮೊದಲ ಬಾರಿಗೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ನಡೆಯಲಿದೆ.

ಏನಿದು ಪ್ರಕರಣ?

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಬಹು ವರ್ಷದ ಬಳಿಕ ಇದೇ ಮೊದಲ ಬಾರಿಗೆ ಗಣೇಶೋತ್ಸವ ಆಚರಿಸಲು ಮಹಾನಗರ ಪಾಲಿಕೆ ಅವಕಾಶ ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಮತ್ತು ಅವಕಾಶ ನೀಡಬಾರದು ಎಂದು ಕೋರಿ ಹೈಕೋರ್ಟ್‌ನ ಮೊರೆ ಹೋಗಲಾಗಿತ್ತು. ಮಂಗಳವಾರ ಈ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠ ತೀರ್ಪನ್ನು ಕಾದಿರಿಸಿತ್ತು. ನ್ಯಾಯಮೂರ್ತಿ ಅಶೋಕ್‌ ಕಿಣಗಿ ಅವರ ಪೀಠದ ಮುಂದೆ ವಿಚಾರಣೆ ನಡೆದಿತ್ತು. ಚಾಮರಾಜಪೇಟೆ ಮೈದಾನದ ವಿಚಾರ ಸುಪ್ರೀಂಕೋರ್ಟ್‌ನಲ್ಲಿದ್ದು, ಅದರ ತೀರ್ಪು ಮಂಗಳವಾರವೇ ಬರಲಿರುವ ಹಿನ್ನೆಲೆಯಲ್ಲಿ ಅದನ್ನು ನೋಡಿಕೊಂಡು ತೀರ್ಮಾನ ಮಾಡೋಣ ಎಂದು ಅವರು ತಿಳಿಸಿದ್ದರು. ಹೀಗಾಗಿ ಬೆಳಗ್ಗಿನ ವಿಚಾರಣೆಯನ್ನು ಮುಂದೂಡಲಾಗಿತ್ತು.

ಸರಕಾರ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪರ ವಕೀಲರ ವಾದವೇನು?

  • ಈ ಮೈದಾನ ಅಂಜುಮನ್ ಸಂಸ್ಥೆಯ ವಶದಲ್ಲಿ ಇಲ್ಲವೇ ಇಲ್ಲ.
  • ಈಗಾಗಲೇ ಕೆಳ ಹಂತದ ನ್ಯಾಯಾಲಯ ಇದನ್ನು ಸಾರ್ವಜನಿಕವಾಗಿ ಬಳಸುವ ಮೈದಾನ ಎಂದು ಆದೇಶ ನೀಡಿದೆ.
  • ಈ ಮೈದಾನವನ್ನು ಬಳಸುವ ಹಕ್ಕು ಸಾರ್ವಜನಿಕರಿಗಿದೆ.
  • ಈ ಮೈದಾನ ಸಾರ್ವಜನಿಕರಿಗೆ ಮುಕ್ತವಾಗಿತ್ತು.
  • ಬಕ್ರೀದ್ ಮತ್ತು ರಂಜಾನ್ ಸಮಯದಲ್ಲಿ ಮಾತ್ರ ನಮಾಜ್ ಗೆ ಅವಕಾಶ ನೀಡಲಾಗಿತ್ತು.
  • ಅಂಜುಮಾನ್ ಅರ್ಜಿಯಲ್ಲಿ ಪರಿಗಣಿಸುವತಂಹ ವಿಚಾರಗಳು ಏನೂ ಇಲ್ಲ.
  • ಆ ಮೈದಾನ ಹಣ್ಣಿನ ಮಾರುಕಟ್ಟೆಯಾಗಿ ಚಾಲ್ತಿಯಲ್ಲಿದೆ.
  • ಈ ಎಲ್ಲ ಕಾರಣಗಳಿಂದಾಗಿ ಅಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದರೆ ತಪ್ಪೇನೂ ಇಲ್ಲ.

ಅರ್ಜಿದಾರರ ವಾದ ಏನಿತ್ತು?
ಮಹಾನಗರ ಪಾಲಿಕೆ ವಿಶೇಷ ಅನುಮತಿಯ ಮೂಲಕ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದ್ದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

ʻʻಈದ್ಗಾ ಮೈದಾನದಲ್ಲಿ ವಿಶೇಷ ಅನುಮತಿಯ ಮೂಲಕ ಧಾರ್ಮಿಕ ಆಚರಣಗೆ ಅವಕಾಶ ನೀಡಿದ್ದು ಸರಿಯಲ್ಲ. 1947 ರ ಬಳಿಕ ಇದುವರೆಗೂ ಯಾವುದೇ ಧಾರ್ಮಿಕ ಆಚರಣೆಯೂ ನಡೆದಿಲ್ಲ. ಕೇವಲ ಎರಡು ಬಾರಿ ಮಾತ್ರ ಪ್ರಾರ್ಥನೆಗೆ ಅವಕಾಶ ನೀಡಲಾಗಿತ್ತು. 1937 ರ ಧಾರ್ಮಿಕ ಕಾಯಿದೆ ಪ್ರಕಾರ ಅಲ್ಲಿಯ ವರೆಗೂ ಇದ್ದ ಧಾರ್ಮಿಕ ಆಚರಣೆ ಬದಲಾವಣೆಗೆ ಅವಕಾಶ ಇಲ್ಲʼʼ ಎಂದು ಅರ್ಜಿದಾರರು ವಾದಿಸಿದ್ದರು.

ಇದಕ್ಕೆ ಸರಕಾರದ ಪರವಾಗಿ ಮಾಹಿತಿ ನೀಡಿದ ಸರ್ಕಾರದ ಪರ ಎಎಜಿ ಧ್ಯಾನ್ ಚಿನ್ನಪ್ಪ ಅವರು, ʻʻಚಾಮರಾಜಪೇಟೆ ಈದ್ಗಾ ಸಂಬಂಧ ದ್ವಿಸದಸ್ಯ ಪೀಠವು ಗಣೇಶೋತ್ಸವಕ್ಕೆ ಅವಕಾಶ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಷಯ ಎಂದು ಹೇಳಿದೆʼʼ ಎಂದಿದ್ದರು.

ಆಗ ನ್ಯಾಯಮೂರ್ತಿಗಳು ವಿಭಾಗೀಯ ಪೀಠದ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಆದೇಶ ನೋಡಿಕೊಂಡು ಆದೇಶ ಮಾಡುವುದಾಗಿ ಹೇಳಿದರು. ಹೀಗಾಗಿ ವಿಚಾರಣೆಯನ್ನು ಸಂಜೆ ೩.೩೦ಕ್ಕೆ ವಿಚಾರಣೆಯನ್ನು ಮುಂದೂಡಲಾಯಿತು.

೩.೩೦ಕ್ಕೆ ಹೈಕೋರ್ಟ್‌ನಲ್ಲಿ ಮತ್ತೆ ವಿಚಾರಣೆ ಆರಂಭಗೊಂಡಾಗಲೂ ಚಾಮರಾಜಪೇಟೆ ಮೈದಾನಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ತೀರ್ಪು ಬಂದಿರಲಿಲ್ಲ. ಅಲ್ಲಿನ ಪ್ರಕರಣವನ್ನು ದ್ವಿಸದಸ್ಯ ಪೀಠದಿಂದ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಪರಿಸ್ಥಿತಿಯನ್ನು ಅವಲೋಕಿಸಿದ ನ್ಯಾಯಮೂರ್ತಿ ಅಶೋಕ್‌ ಏಣಗಿ ಅವರು, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದರು. ಮತ್ತು ಗಣೇಶೋತ್ಸವ ಆಚರಣೆಗೆ ಕೋರಿ ಬರುವ ಅರ್ಜಿಗಳನ್ನು ಗಮನಿಸಿ ನಿರ್ಧರಿಸುವ ಅಧಿಕಾರವನ್ನು ಪಾಲಿಕೆ ಕಮಿಷನರ್‌ ಅವರಿಗೆ ನೀಡಿದರು.

ಒಂದೊಮ್ಮೆ ಸುಪ್ರೀಂಕೋರ್ಟ್‌ ಆದೇಶದ ನಂತರ, ಅರ್ಜಿದಾರರಿಗೆ ಮತ್ತೆ ಕೋರ್ಟ್‌ಗೆ ಬರಬೇಕು ಅನಿಸಿದರೆ ಬರಬಹುದು ಎಂಬ ಅವಕಾಶವನ್ನೂ ನ್ಯಾಯಮೂರ್ತಿಗಳು ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯ ತಿಥಿಯಾದ ಮೇ 21ರಂದು ಭಾರತದಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. 1991ರಲ್ಲಿ ಈ ದಿನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲಾಗಿತ್ತು. ಭಯೋತ್ಪಾದನಾ ವಿರೋಧಿ ದಿನದ (Anti Terrorism Day) ಇತಿಹಾಸ ಮತ್ತು ಅದರ ಆಚರಣೆ ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

By

Anti Terrorism Day
Koo

ಪ್ರತಿ ವರ್ಷ ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು (Anti Terrorism Day) ಆಚರಿಸಲಾಗುತ್ತದೆ. ಈ ದಿನ ಯುವಕರಿಗೆ ಭಯೋತ್ಪಾದನೆ (Terrorism) ಮತ್ತು ಇದರಿಂದಾಗುವ ಸಾವು ನೋವು ಮತ್ತು ಜೀವನದ ಮೇಲೆ ಅದರ ದುಷ್ಪರಿಣಾಮದ ಬಗ್ಗೆ ಜಾಗೃತಿ (awareness) ಮೂಡಿಸಲಾಗುತ್ತದೆ. ಈ ದಿನವು ಸಮಾಜ ವಿರೋಧಿ ಕೃತ್ಯದ ವಿರುದ್ಧ ಜನರಲ್ಲಿ ಅರಿವು ಮೂಡಿಸುತ್ತದೆ.

ರಾಷ್ಟ್ರೀಯ ಸಾಮರಸ್ಯವನ್ನು ಉತ್ತೇಜಿಸುವುದು, ಭಯೋತ್ಪಾದನೆಯನ್ನು ತಗ್ಗಿಸುವುದು ಮತ್ತು ಎಲ್ಲಾ ಜಾತಿ, ಧರ್ಮ, ಲಿಂಗಗಳ ಜನರನ್ನು ಒಂದುಗೂಡಿಸುವುದು ಭಯೋತ್ಪಾದನಾ ವಿರೋಧಿ ದಿನದ ಮುಖ್ಯ ಉದ್ದೇಶವಾಗಿದೆ. ವಿಶ್ವದಾದ್ಯಂತ ಹೆಚ್ಚುತ್ತಿರುವ ‘ಭಯೋತ್ಪಾದನೆ’ ಹಿನ್ನೆಲೆಯಲ್ಲಿ ಈ ದಿನವು ಈಗ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದೆ.

ಪ್ರತಿ ದಿನವೂ ವಿಶ್ವದ ಒಂದಲ್ಲ ಒಂದು ಕಡೆ ಭಯೋತ್ಪಾದಕ ಕೃತ್ಯದ ಬಗ್ಗೆ ಸುದ್ದಿಗಳು ಬರುತ್ತಲೇ ಇರುತ್ತವೆ. ಮೂಲಭೂತವಾಗಿ ಭಯೋತ್ಪಾದಕರು ಸಾಮಾನ್ಯ ಜನರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸಲು ಬಯಸುತ್ತಾರೆ. ಯಾವುದೇ ರೀತಿಯ ಪಶ್ಚಾತ್ತಾಪವಿಲ್ಲದೆ ಅವರು ಅಮಾಯಕ ಜನರ ಸಾವಿಗೆ ಕಾರಣರಾಗುತ್ತಾರೆ. ಇಂಥ ಭಯೋತ್ಪಾದನೆ ಚಟುವಟಿಕೆಗಳ ವಿರುದ್ಧ ಹೋರಾಡುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯಲು ಭಾರತ ಸರ್ಕಾರ ಪ್ರತಿ ವರ್ಷ ಭಯೋತ್ಪಾದನೆ ವಿರೋಧಿ ದಿನವನ್ನು ಆಚರಿಸುತ್ತಿದೆ.

ಮೇ 21ರಂದು ಈ ದಿನಾಚರಣೆ ಏಕೆ?

1991ರ ಮೇ 21ರಂದು ಭಾರತದ ಏಳನೇ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಅನಂತರ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ಅಧಿಕೃತ ಘೋಷಣೆಯನ್ನು ಮಾಡಲಾಯಿತು. ಶ್ರೀಲಂಕಾದ ತಮಿಳು ಉಗ್ರರ ಸಂಚಿನಿಂದಾಗಿ ತಮಿಳುನಾಡಿನಲ್ಲಿ ರಾಜೀವ್‌ ಗಾಂಧಿ ಅವರು ಕೊಲ್ಲಲ್ಪಟ್ಟರು. ಬಳಿಕ ವಿ. ಪಿ. ಸಿಂಗ್ ನೇತೃತ್ವದ ಕೇಂದ್ರ ಸರ್ಕಾರವು ಮೇ 21 ಅನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಈ ದಿನದಂದು ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಗುತ್ತದೆ.


ಈ ದಿನದ ಹಿಂದಿನ ಇತಿಹಾಸ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ತಮಿಳುನಾಡಿನ ಶ್ರೀಪೆರಂಬದೂರ್‌ಗೆ ರ‍್ಯಾಲಿಯಲ್ಲಿ ಭಾಗವಹಿಸಲು ತೆರಳಿದ್ದರು. ಲಿಬರೇಶನ್ ಆಫ್ ತಮಿಳು ಟೈಗರ್ಸ್ ಈಳಂ (ಎಲ್‌ಟಿಟಿಇ) ಭಯೋತ್ಪಾದಕ ಗುಂಪಿನ ಸದಸ್ಯಳಾಗಿದ್ದ ಮಹಿಳೆಯೊಬ್ಬಳು ರಾಜೀವ್‌ ಗಾಂಧಿ ಮುಂದೆ ಅಭಿಮಾನದ ನಾಟಕ ಆಡಿದಳು. ಆಕೆ ತನ್ನ ಬಟ್ಟೆಯ ಒಳಗೆ ಸ್ಫೋಟಕಗಳನ್ನು ಇರಿಸಿಕೊಂಡಿದ್ದಳು. ರಾಜೀವ್‌ ಬಳಿಗೆ ಬಂದು ಅವರ ಪಾದಗಳನ್ನು ಸ್ಪರ್ಶಿಸಬೇಕೆಂದು ಬಾಗಿದಳು. ಇದ್ದಕ್ಕಿದ್ದಂತೆ ಬಾಂಬ್ ಸ್ಫೋಟ ಸಂಭವಿಸಿ ರಾಜೀವ್‌ ಸೇರಿದಂತೆ ಸುಮಾರು 25 ಮಂದಿ ಸಾವನ್ನಪ್ಪಿದರು.

ಹೇಗೆ ಆಚರಣೆ?

ಭಯೋತ್ಪಾದನೆ ಮತ್ತು ಹಿಂಸಾಚಾರದ ಅಪಾಯಗಳ ಕುರಿತು ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಚರ್ಚೆಗಳನ್ನು ಆಯೋಜಿಸಲಾಗುತ್ತದೆ. ಭಯೋತ್ಪಾದನೆಯ ದುಷ್ಪರಿಣಾಮಗಳು ಮತ್ತು ಅದರ ಅನಂತರದ ಪರಿಣಾಮಗಳನ್ನು ಎತ್ತಿ ತೋರಿಸಲು ಸಾಮೂಹಿಕ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಭಯೋತ್ಪಾದನೆಯ ಪರಿಣಾಮಗಳನ್ನು ಜನರಿಗೆ ತಿಳಿಸಲು ರ‍್ಯಾಲಿ ಮತ್ತು ಮೆರವಣಿಗೆಗಳನ್ನು ಆಯೋಜಿಸುತ್ತದೆ. ರಾಜೀವ್ ಗಾಂಧಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

ಆಚರಣೆಯ ಮಹತ್ವ

ಭೀಕರ ಭಯೋತ್ಪಾದಕ ದಾಳಿಯ ಹಿನ್ನೋಟ ಗಮನಿಸಿದರೆ ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರದ ಮೇಲಿನ ದಾಳಿಯನ್ನು ನಾವು ಮರೆಯಲು ಸಾಧ್ಯವಿಲ್ಲ. ಅದೇ ರೀತಿ ಮುಂಬಯಿ ಮೇಲಿನ ಪಾಕಿಸ್ತಾನ ಪ್ರೇರಿತ 26/11 ದಾಳಿ ಕೂಡ ಇದಕ್ಕಿಂತ ಹೊರತಾಗಿಲ್ಲ. ಇಂಥ ಭಯೋತ್ಪಾದನೆಯನ್ನು ವಿರೋಧಿಸಲು ಮತ್ತು ಮಾನವೀಯತೆಯೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸಲು ಭಯೋತ್ಪಾದನಾ ವಿರೋಧಿ ದಿನವು ಮಹತ್ವದ ಸಂದೇಶ ಸಾರುತ್ತದೆ. ಭಯೋತ್ಪಾದನೆಯು ಮನುಷ್ಯರ ಹಕ್ಕುಗಳ ಮೇಲಿನ ದಾಳಿ ಎಂಬುದರಲ್ಲಿ ಸಂದೇಹವಿಲ್ಲ. ಆದ್ದರಿಂದ ನಾವೆಲ್ಲ ಒಗ್ಗೂಡಿ ಪರಸ್ಪರ ಪ್ರೀತಿ, ಕಾಳಜಿ ತೋರುವ ಮೂಲಕ ಭಯೋತ್ಪಾದನೆ ಪಿಡುಗನ್ನು ಸಂಪೂರ್ಣವಾಗಿ ತೊಡೆದುಹಾಕಲು ಪ್ರಯತ್ನಿಸಬೇಕಿದೆ.

ಭಯೋತ್ಪಾದಕರಿಗೆ ಧರ್ಮವಿಲ್ಲ. ಅವರಿಗೆ ವಿನಾಶದ ಭಾಷೆ ಮಾತ್ರ ಅರ್ಥವಾಗುತ್ತದೆ. ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವು ಭಾರತದಲ್ಲಿ ಒಂದು ಪ್ರಮುಖ ದಿನವಾಗಿದೆ. ಏಕೆಂದರೆ ಇದು ಜನರು ತಮ್ಮ ದೈನಂದಿನ ಜೀವನದಲ್ಲಿ ಜಾಗರೂಕರಾಗಿರಲು ಪ್ರೇರೇಪಿಸುತ್ತದೆ. ಜನರು ತಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಸಾಮರಸ್ಯದಿಂದ ಸಹಬಾಳ್ವೆ ನಡೆಸಲು ಪ್ರೋತ್ಸಾಹಿಸುವ ಮೂಲಕ ಇದು ಶಾಂತಿಯನ್ನು ಉತ್ತೇಜಿಸುತ್ತದೆ. ಸಮಾಜವನ್ನು ಶಾಂತಿಯುತವಾಗಿ ಇಡುವುದು ಎಷ್ಟು ಮುಖ್ಯ ಎಂಬ ಅರಿವು ಮೂಡಿಸುತ್ತದೆ. ಭಯೋತ್ಪಾದನೆಯ ವಿರುದ್ಧ ನಾವೆಲ್ಲರೂ ಕೈಜೋಡಿಸೋಣ.

Continue Reading

ಆರೋಗ್ಯ

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

ಒಂದು ಕಪ್ ಎಳನೀರಿನಲ್ಲಿ ಎಷ್ಟು ಪೋಷ್ಟಿಕಾಂಶ ಇದೆ ಗೊತ್ತೇ? ಎಳನೀರು ಸೇವನೆಯಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಎಂಬುದು ತಿಳಿದಿದೆಯೇ ? ಹೆಚ್ಚು ಎಳನೀರು ಸೇವನೆ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬಿರುವುದು ಎನ್ನುವ ಕುರಿತು ಮಾಹಿತಿ (Nutrition Alert) ಇಲ್ಲಿದೆ.

VISTARANEWS.COM


on

By

Nutrition Alert
Koo

ವ್ಯಾಯಾಮದ ಬಳಿಕ ಸುಸ್ತಾಗಿದ್ದೀರಾ, ಕೂಡಲೇ ರಿಫ್ರೆಶ್ (refreshing beverage) ಆಗಬೇಕು ಎಂದುಕೊಂಡು ಅತ್ಯಧಿಕ ಪೌಷ್ಠಿಕಾಂಶವುಳ್ಳ (Nutrition Alert) ನೈಸರ್ಗಿಕವಾದ ದಾರಿಯನ್ನು ಹುಡುಕುತ್ತಿರುವಾಗ ನೆನಪಿಗೆ ಬರುವುದು ತೆಂಗಿನ ನೀರು (coconut water). ಎಳೆಯ ಹಸಿರು ತೆಂಗಿನಕಾಯಿಗಳಿಂದ ಪಡೆದ ಈ ಪಾನೀಯವು ಇತ್ತೀಚಿನ ವರ್ಷಗಳಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ.

ರುಚಿಕರವಾದ ತೆಂಗಿನ ನೀರು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಎಲೆಕ್ಟ್ರೋಲೈಟ್‌ಗಳನ್ನು ಮರುಪೂರಣಗೊಳಿಸುವುದರಿಂದ ಹಿಡಿದು ಜೀರ್ಣಕ್ರಿಯೆಗೆ ಸಹಾಯ ಮಾಡುವವರೆಗೆ ಈ ನೈಸರ್ಗಿಕ ಮೂಲವು ದೇಹಕ್ಕೆ ಬೇಕಾದ ಎಲ್ಲ ಶಕ್ತಿಯನ್ನು ತುಂಬಿಸುವ ಮೂಲವಾಗಿದೆ. ಬೇಸಿಗೆಯ ತಿಂಗಳುಗಳಲ್ಲಿ ತೇವಾಂಶವನ್ನು ಉಳಿಸಿಕೊಳ್ಳಲು ತೆಂಗಿನ ನೀರು ಅತ್ಯುತ್ತಮ ಆಯ್ಕೆಯಾಗಿದೆ. ತೆಂಗಿನ ನೀರಿನಲ್ಲಿರುವ ಎಲೆಕ್ಟ್ರೋಲೈಟ್ ಅಂಶವು ಬೆವರುವಿಕೆಯ ಮೂಲಕ ಕಳೆದುಹೋದದ್ದನ್ನು ಪುನಃ ತುಂಬಲು ಸಹಾಯ ಮಾಡುತ್ತದೆ. ಇದು ಹೊರಾಂಗಣ ಚಟುವಟಿಕೆಗಳ ಅನಂತರ ಅಥವಾ ಬಿಸಿ ವಾತಾವರಣದಲ್ಲಿ ವ್ಯಾಯಾಮದ ಬಳಿಕ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.

ಎಳನೀರಿನಲ್ಲಿರುವ ಪೌಷ್ಟಿಕಾಂಶ ಏನೇನು?

240 ಮಿಲಿ (ಒಂದು ಕಪ್) ಎಳನೀರಿನಲ್ಲಿ ಕ್ಯಾಲೋರಿಗಳು ಸುಮಾರು 45 ಕೆ.ಕೆ.ಎಲ್, ಕಾರ್ಬೋಹೈಡ್ರೇಟ್ ಗಳು ಸುಮಾರು 9 ಗ್ರಾಂ, ಸಕ್ಕರೆಗಳು ಪ್ರಾಥಮಿಕವಾಗಿ ಗ್ಲೂಕೋಸ್, ಫ್ರಕ್ಟೋಸ್ ಮತ್ತು ಸುಕ್ರೋಸ್ ಪ್ರೋಟೀನ್ 1 ಗ್ರಾಂಗಿಂತ ಕಡಿಮೆ, ಕೊಬ್ಬು ಅತ್ಯಲ್ಪ, ಸಾಮಾನ್ಯವಾಗಿ 1 ಗ್ರಾಂಗಿಂತ ಕಡಿಮೆ ಸೋಡಿಯಂ ಸುಮಾರು 45 ಮಿಗ್ರಾಂ, ಪೊಟ್ಯಾಸಿಯಮ್ ಸರಿಸುಮಾರು 600 ಮಿಗ್ರಾಂ ಅನ್ನು ಒಳಗೊಂಡಿದೆ. ಸೂಕ್ಷ್ಮ ಪೋಷಕಾಂಶಗಳು, ಸಣ್ಣ ಪ್ರಮಾಣದ ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ ಮತ್ತು ವಿಟಮಿನ್ ಸಿ ಅನ್ನು ಎಳನೀರು ಹೊಂದಿರುತ್ತದೆ.

ಎಳನೀರಿನಿಂದ ಆರೋಗ್ಯ ಪ್ರಯೋಜನಗಳು ಹಲವು. ಎಳನೀರು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ:

ಹೈಡ್ರೇಶನ್ ಮಾಡುತ್ತದೆ:

ಎಳನೀರು ದೇಹದಲ್ಲಿ ನೀರಿನ ಅಂಶ ಇರುವಂತೆ ಮಾಡುತ್ತದೆ. ಇದು ವ್ಯಾಯಾಮದ ನಂತರ ಅಥವಾ ಬಿಸಿ ವಾತಾವರಣದಲ್ಲಿ ನಿರ್ಜಲೀಕರಣ ದೂರ ಮಾಡುತ್ತದೆ.

ದೇಹಕ್ಕೆ ಚೈತನ್ಯ

ಎಳನೀರಿನಲ್ಲಿರುವ ಪೊಟ್ಯಾಸಿಯಮ್ ಅಂಶವು ಬೆವರಿನ ಮೂಲಕ ಕಳೆದುಹೋದ ಚೈತನ್ಯವನ್ನು ಪುನಃ ತುಂಬಲು ಸಹಾಯ ಮಾಡುತ್ತದೆ. ಸ್ನಾಯುಗಳಿಗೆ ಶಕ್ತಿ ತುಂಬುತ್ತದೆ ಮತ್ತು ಸೆಳೆತವನ್ನು ತಡೆಯುತ್ತದೆ.

ರಕ್ತದೊತ್ತಡ ನಿಯಂತ್ರಣ

ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಪೊಟ್ಯಾಸಿಯಮ್ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಅಧಿಕ ರಕ್ತದೊತ್ತಡದ ಅಪಾಯವನ್ನು ಸಂಭಾವ್ಯವಾಗಿ ಕಡಿಮೆ ಮಾಡುತ್ತದೆ.

ಹೃದಯದ ಆರೋಗ್ಯ

ಕೆಲವು ಅಧ್ಯಯನಗಳು ತೆಂಗಿನ ನೀರಿನಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುವ ಮೂಲಕ ಮತ್ತು ರಕ್ತ ಹೆಪ್ಪುಗಟ್ಟುವಿಕೆಯ ರಚನೆಯನ್ನು ಕಡಿಮೆ ಮಾಡುವ ಮೂಲಕ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರೋಗ ನಿರೋಧಕ ಗುಣಲಕ್ಷಣಗಳು

ತೆಂಗಿನ ನೀರಿನಲ್ಲಿ ವಿಟಮಿನ್ ಸಿ ನಂತಹ ಉತ್ಕರ್ಷಣ ನಿರೋಧಕಗಳಿವೆ. ಇದು ಸ್ವತಂತ್ರ ರಾಡಿಕಲ್ ಗಳನ್ನು ತಟಸ್ಥಗೊಳಿಸಲು ಮತ್ತು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮಧುಮೇಹಿಗಳು ಎಳನೀರು ಸೇವಿಸಬಹುದೇ?

ಅನೇಕ ಹಣ್ಣಿನ ರಸಗಳಿಗೆ ಹೋಲಿಸಿದರೆ ತೆಂಗಿನ ನೀರಿನಲ್ಲಿ ಸಕ್ಕರೆಯ ಅಂಶ ಗಮನಾರ್ಹವಾಗಿ ಕಡಿಮೆಯಿದ್ದರೂ ಇದು ಇನ್ನೂ ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ. ಅದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಆದಾಗ್ಯೂ, ಅದರ ಗ್ಲೈಸೆಮಿಕ್ ಇಂಡೆಕ್ಸ್ (GI) ಹೆಚ್ಚಿನ ಹಣ್ಣಿನ ರಸಗಳು ಮತ್ತು ಸೋಡಾಗಳಿಗಿಂತ ಕಡಿಮೆಯಾಗಿದೆ. ಅಂದರೆ ಇದು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ನಿಧಾನಗತಿಯ ಏರಿಕೆಗೆ ಕಾರಣವಾಗುತ್ತದೆ. ಎಳನೀರು ಸೇವಿಸುವ ಮಧುಮೇಹಿಗಳು ತಮ್ಮ ಸೇವನೆಯನ್ನು ಪ್ರಮಾಣದಲ್ಲಿ ಎಚ್ಚರಿಕೆ ವಹಿಸಬೇಕು.


ಗರ್ಭಿಣಿಯರಿಗೆ ಇದು ಪ್ರಯೋಜನಕಾರಿಯೇ?

ತೆಂಗಿನ ನೀರು ಅದರ ನಮ್ಮನ್ನು ಹೈಡ್ರೇಟ್ ಮಾಡುವುದರಿಂದ ಮತ್ತು ಇದು ಅನೇಕ ಪೌಷ್ಟಿಕಾಂಶಗಳನ್ನು ಹೊಂದಿರುವುದರಿಂದ ಗರ್ಭಿಣಿಯರಿಗೆ ಪ್ರಯೋಜನಕಾರಿಯಾಗಿದೆ.

ಗರ್ಭಾವಸ್ಥೆಯಲ್ಲಿ, ಹೈಡ್ರೀಕರಿಸಿದ ಸ್ಥಿತಿಯಲ್ಲಿರುವುದು ತಾಯಿಯ ಆರೋಗ್ಯ ಮತ್ತು ಮಗುವಿನ ಬೆಳವಣಿಗೆ ಎರಡಕ್ಕೂ ಮುಖ್ಯವಾಗಿದೆ. ತೆಂಗಿನ ನೀರಿನಲ್ಲಿರುವ ಎಲೆಕ್ಟ್ರೋಲೈಟ್‌ಗಳು ನಿರ್ಜಲೀಕರಣವನ್ನು ತಡೆಗಟ್ಟಲು ಮತ್ತು ವಾಕರಿಕೆ ಮತ್ತು ಮಲಬದ್ಧತೆಯಂತಹ ಸಾಮಾನ್ಯ ಗರ್ಭಧಾರಣೆಯ ಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ ಅದರ ನೈಸರ್ಗಿಕ ಮಾಧುರ್ಯವು ಸಕ್ಕರೆ ಪಾನೀಯಗಳ ಕಡುಬಯಕೆಗಳನ್ನು ಪೂರೈಸುತ್ತದೆ, ಆರೋಗ್ಯಕರ ಪ್ರಯೋಜನವನ್ನು ಒದಗಿಸುತ್ತದೆ.

ಇದನ್ನೂ ಓದಿ: Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳು

ಅಲರ್ಜಿಗಳು

ತೆಂಗಿನಕಾಯಿಂದಾಗುವ ಅಲರ್ಜಿಗಳು ವಿರಳವಾಗಿದ್ದರೂ, ಅಲರ್ಜಿಯನ್ನು ಹೊಂದಿರುವ ವ್ಯಕ್ತಿಗಳು ಎಚ್ಚರ ವಹಿಸಬೇಕು. ತೆಂಗಿನ ಉತ್ಪನ್ನಗಳನ್ನು ಸೇವಿಸುವ ಮೊದಲು ಇದರ ಬಗ್ಗೆ ಗಮನ ಹರಿಸಬೇಕು. ಬಹುತೇಕ ಜನರಿಗೆ ಎಳನೀರು ಸೇವನೆಯಿಂದ ಯಾವುದೇ ಅಲರ್ಜಿ ಆಗುವುದಿಲ್ಲ.

ಸಕ್ಕರೆ ಅಂಶ

ತೆಂಗಿನ ನೀರು ನೈಸರ್ಗಿಕ ಸಕ್ಕರೆಗಳನ್ನು ಹೊಂದಿದ್ದರೂ ಇದು ಪ್ಯಾಕೆಟ್ ಜ್ಯೂಸ್ ಗಳಿಗಿಂತ ಕಡಿಮೆ ಸಕ್ಕರೆ ಅಂಶವನ್ನು ಹೊಂದಿದೆ. ಆದಾಗ್ಯೂ, ಮಧುಮೇಹಿಗಳು ಈ ಬಗ್ಗೆ ಎಚ್ಚರಿಕೆ ವಹಿಸಿದರೆ ಒಳ್ಳೆಯದು.

ಅತಿಯಾದ ಬಳಕೆ

ಅಧಿಕ ಪ್ರಮಾಣದಲ್ಲಿ ತೆಂಗಿನ ನೀರನ್ನು ಕುಡಿಯುವುದರಿಂದ ಹೆಚ್ಚು ಪೊಟ್ಯಾಸಿಯಮ್ ಸಂಗ್ರಹವಾಗುತ್ತದೆ. ಇದು ಹೈಪರ್‌ಕೆಲೆಮಿಯಾಕ್ಕೆ ಕಾರಣವಾಗಬಹುದು. ಹೈಪರ್‌ಕಲೇಮಿಯಾದ ಲಕ್ಷಣಗಳು ಸ್ನಾಯು ದೌರ್ಬಲ್ಯ, ಅನಿಯಮಿತ ಹೃದಯ ಬಡಿತ ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಹೃದಯ ಸ್ತಂಭನಕ್ಕೆ ಕಾರಣವಾಗಿರುವುದರಿಂದ ಮಿತವಾಗಿ ಸೇವಿಸುವುದು ಒಳ್ಳೆಯದು.

Continue Reading

ದೇಶ

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Driving Licence New Rules: ಚಾಲನಾ ಪರವಾನಗಿ ಪಡೆಯಲು ಸರ್ಕಾರ ನಿಯಮಾವಳಿಗಳನ್ನು ಬದಲಾಯಿಸಿದೆ. ಈ ನಿಯಮ ಸಮರ್ಪಕವಾಗಿ ಜಾರಿಗೆ ಬಂದರೆ ಪ್ರಾದೇಶಿಕ ಸಾರಿಗೆ ಕಚೇರಿಗೇ ಹೋಗಿ ಚಾಲನಾ ಪರೀಕ್ಷೆಯನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಬದಲಾಗಿ ಖಾಸಗಿ ಚಾಲನಾ ತರಬೇತಿ ಸಂಸ್ಥೆಗಳಿಗೆ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಅಂತಿಮವಾಗಿ ಪ್ರಮಾಣಪತ್ರ ನೀಡುವ ನಿಯಂತ್ರಣ ಸಾರಿಗೆ ಇಲಾಖೆಗೇ ಇರುತ್ತದೆ.

VISTARANEWS.COM


on

By

Driving Licence New Rules
Koo

ಇನ್ನು ಮುಂದೆ ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ (Driving Licence New Rules) ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು (New Rules) ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ.

ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು ಹಂತಹಂತವಾಗಿ ತೆಗೆದುಹಾಕುವುದೂ ಹೊಸ ನಿಯಮಾವಳಿಯ ಗುರಿಗಳಲ್ಲಿ ಒಂದಾಗಿದೆ.

ಅತೀ ವೇಗದ ಚಾಲನೆಗೆ ದಂಡ 1000ರಿಂದ 2000 ರೂ. ಏರಿಕೆ, ಅಪ್ರಾಪ್ತರು ವಾಹನ ಚಾಲನೆ ಮಾಡಿ ಸಿಕ್ಕಿಬಿದ್ದರೆ 25,000 ರೂ. ದಂಡ ತೆರಬೇಕಾಗುತ್ತದೆ. ವಾಹನದ ಮಾಲೀಕರ ಡ್ರೈವಿಂಗ್ ನೋಂದಣಿ ಕಾರ್ಡ್ ಅನ್ನು ರದ್ದುಗೊಳಿಸಲಾಗುವುದು ಮತ್ತು ಅಪ್ರಾಪ್ತರು 25 ವರ್ಷ ವಯಸ್ಸಿನವರೆಗೆ ಪರವಾನಗಿ ಪಡೆಯಲು ಸಾಧ್ಯವಾಗುವುದಿಲ್ಲ.

ರಸ್ತೆಗಳು ಮತ್ತು ಹೆದ್ದಾರಿಗಳ ಸಚಿವಾಲಯವು ಹೊಸ ಚಾಲನಾ ಪರವಾನಗಿಗೆ ಅಗತ್ಯವಿರುವ ದಾಖಲಾತಿಗಳನ್ನು ನವೀಕರಿಸಿದೆ. ಹೊಸ ನಿಯಮಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಚಾಲಕರ ಅವಶ್ಯಕತೆಗಳಿಗೆ ಸ್ಪಂದಿಸುವಂತಿದೆ. ಈ ಬದಲಾವಣೆಯು ಆರ್‌ಟಿಒಗಳಲ್ಲಿ ದೈಹಿಕ ಪರೀಕ್ಷೆಗಳ ಅಗತ್ಯವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಸರಳಗೊಳಿಸಲಾಗುತ್ತಿದೆ.

ತರಬೇತಿ ನೀಡುವವರಿಗೆ ಹೊಸ ನಿಯಮಗಳು ಏನೇನು?

ಖಾಸಗಿ ಚಾಲನಾ ತರಬೇತಿ ಕೇಂದ್ರಗಳು ಕನಿಷ್ಠ 1 ಎಕರೆ ಭೂಮಿಯನ್ನು ಹೊಂದಿರಬೇಕು. 4 ಚಕ್ರ ವಾಹನಗಳ ಚಾಲನಾ ಕೇಂದ್ರಗಳಲ್ಲಿ ಹೆಚ್ಚುವರಿ 2 ಎಕರೆ ಭೂಮಿ ಅಗತ್ಯವಿದೆ. ಡ್ರೈವಿಂಗ್ ತರಬೇತಿ ಕೇಂದ್ರವು ಸೂಕ್ತವಾದ ಪರೀಕ್ಷಾ ಸೌಲಭ್ಯಕ್ಕೆ ಪ್ರವೇಶವನ್ನು ಹೊಂದಿರಬೇಕು.

ತರಬೇತುದಾರರು ಕನಿಷ್ಠ ಹೈಸ್ಕೂಲ್ ಡಿಪ್ಲೊಮಾ ಅಥವಾ ತತ್ಸಮಾನ ಶಿಕ್ಷಣವನ್ನು ಹೊಂದಿರಬೇಕು. ಹೆಚ್ಚುವರಿಯಾಗಿ, ಅವರು ಕನಿಷ್ಠ 5 ವರ್ಷಗಳ ಚಾಲನಾ ಅನುಭವವನ್ನು ಹೊಂದಿರಬೇಕು. ತರಬೇತುದಾರರು ಬಯೋಮೆಟ್ರಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳ ಮೂಲಭೂತ ಅಂಶಗಳನ್ನು ತಿಳಿದಿರಬೇಕು.

ಕನಿಷ್ಠ 29 ಗಂಟೆಗಳ ತರಬೇತಿಯೊಂದಿಗೆ ಲಘು ವಾಹನ ತರಬೇತಿಯನ್ನು 4 ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಈ ತರಬೇತಿಯನ್ನು ಕನಿಷ್ಠ ಎರಡು ವಿಭಾಗಗಳಾಗಿ ವಿಂಗಡಿಸಬೇಕು: ಥಿಯರಿ ಮತ್ತು ಪ್ರಾಯೋಗಿಕ. ಥಿಯರಿ ಘಟಕವು 8 ಗಂಟೆಗಳನ್ನು ಒಳಗೊಳ್ಳಬೇಕು. ಆದರೆ ಪ್ರಾಯೋಗಿಕ ಘಟಕವು 21 ಗಂಟೆಗಳ ಕಾಲ ವ್ಯಾಪಿಸಬೇಕು.

ಭಾರೀ ಮೋಟಾರು ವಾಹನಗಳಿಗೆ 8 ಗಂಟೆಗಳ ಬೋಧನೆ ಮತ್ತು 31 ಗಂಟೆಗಳ ಪ್ರಾಯೋಗಿಕ ತಯಾರಿಯನ್ನು ಒಳಗೊಂಡ 38 ಗಂಟೆಗಳ ತರಬೇತಿ ಇರುತ್ತದೆ. ಈ ತರಬೇತಿಯನ್ನು 6 ವಾರಗಳಲ್ಲಿ ಪೂರ್ಣಗೊಳಿಸಬೇಕು.

ಈ ನಿಯಮಾವಳಿಗಳು ಖಾಸಗಿ ಚಾಲನಾ ತರಬೇತಿ ಕೇಂದ್ರಗಳು ಲಘು ಮತ್ತು ಭಾರೀ ವಾಹನಗಳ ಚಾಲಕರಿಗೆ ಉನ್ನತ ಗುಣಮಟ್ಟದ ಶಿಕ್ಷಣ ಮತ್ತು ಸೂಕ್ತ ತಯಾರಿಯನ್ನು ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ.


ಶುಲ್ಕ ಎಷ್ಟಿದೆ?

ವಿವಿಧ ರೀತಿಯ ಚಾಲನಾ ಪರವಾನಿಗೆಗಳ ಸರ್ಕಾರಿ ಶುಲ್ಕ ಈ ಕೆಳಗಿನಂತಿರುತ್ತದೆ.
ಕಲಿಕಾ ಪರವಾನಿಗೆಗೆ 200 ರೂ., ಕಲಿಕಾ ಪರವಾನಗಿ ನವೀಕರಣಕ್ಕೆ 200 ರೂ., ಅಂತಾರಾಷ್ಟ್ರೀಯ ಪರವಾನಿಗೆಗೆ 1,000 ರೂ., ಶಾಶ್ವತ ಪರವಾನಗಿಗೆ 200 ರೂ.

ಅರ್ಜಿ ಸಲ್ಲಿಸುವ ವಿಧಾನ

ಚಾಲಕ ಪರವಾನಗಿಗೆ ಅರ್ಜಿ ಸಲ್ಲಿಸಲು https://parivahan.gov.in ಪೋರ್ಟಲ್‌ಗೆ ಭೇಟಿ ನೀಡಿ. ಮುಖಪುಟದಲ್ಲಿ ಒಮ್ಮೆ “ಚಾಲನಾ ಪರವಾನಗಿ ಅನ್ವಯಿಸು” ಆಯ್ಕೆಯನ್ನು ಪತ್ತೆ ಮಾಡಿ ಮತ್ತು ಕ್ಲಿಕ್ ಮಾಡಿ. ಇದು ಅರ್ಜಿ ನಮೂನೆಯನ್ನು ತೆರೆಯುತ್ತದೆ. ಅಗತ್ಯವಿದ್ದರೆ ನೀವು ಅದನ್ನು ಮುದ್ರಿಸಲು ಆಯ್ಕೆ ಮಾಡಬಹುದು.

ಇದನ್ನೂ ಓದಿ: Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

Continue Reading

ವಿದೇಶ

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

ಇರಾನ್ ಅಧ್ಯಕ್ಷರ ಸಾವು ವಿಶ್ವದಲ್ಲೇ ರಾಜಕೀಯ ನಾಯಕರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ಮಾಡಿದೆ. ವಿಮಾನ, ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ರಾಜಕೀಯ ನಾಯಕರ ಸಾವು ಇದೇ ಮೊದಲಲ್ಲ. ವಿಶ್ವದ ಹತ್ತು ಪ್ರಮುಖ ನಾಯಕರು ಈ ರೀತಿಯ ದುರಂತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Air Crashes
Koo

ಇರಾನ್ ಅಧ್ಯಕ್ಷ (Iran President) ಇಬ್ರಾಹಿಂ ರೈಸಿ (Ebrahim Raisi) ಅವರು ಭಾನುವಾರ ರಾತ್ರಿ ದೇಶದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ಸಾವನ್ನಪ್ಪಿದ್ದಾರೆ. ರೈಸಿ ಅವರ ದಣಿವರಿಯದ ಸ್ಫೂರ್ತಿಯ ಸೇವೆಯ ಮಾರ್ಗದಲ್ಲಿ ಮುಂದುವರಿಯುವುದಾಗಿ ಇರಾನ್‌ ಆಡಳಿತ ರಾಷ್ಟ್ರದ ಜನರಿಗೆ ಭರವಸೆ ನೀಡಿದೆ. ವಿಮಾನ ದುರಂತಗಳಲ್ಲಿ ರಾಜಕೀಯ ನಾಯಕರು ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ರಾಷ್ಟ್ರಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಕುರಿತ ಹಿನ್ನೋಟ ಇಲ್ಲಿದೆ.


ಸ್ವೀಡನ್ ಪ್ರಧಾನಿ ಅರ್ವಿಡ್ ಲಿಂಡ್‌ಮನ್ (1936)

ಸ್ವೀಡನ್‌ನ ಹಿಂದಿನ ಅಡ್ಮಿರಲ್ ಮತ್ತು ಎರಡು ಬಾರಿ ಸ್ವೀಡನ್‌ನ ಪ್ರಧಾನಮಂತ್ರಿ ಆಗಿದ್ದ ಸಾಲೋಮನ್ ಅರ್ವಿಡ್ ಅಚಾಟೆಸ್ ಲಿಂಡ್‌ಮನ್ ಪ್ರಭಾವಿ ಸಂಪ್ರದಾಯವಾದಿ ರಾಜಕಾರಣಿಯಾಗಿದ್ದರು. 1936ರ ಡಿಸೆಂಬರ್ 9ರಂದು ಲಿಂಡ್‌ಮನ್ ಅವರು ಪ್ರಯಾಣಿಸುತ್ತಿದ್ದ ಡಗ್ಲಾಸ್ ಡಿಸಿ-2 ಯುನೈಟೆಡ್ ಕಿಂಗ್‌ಡಂನ ಕ್ರೊಯ್ಡಾನ್ ವಿಮಾನವು ನಿಲ್ದಾಣದ ಬಳಿ ದಟ್ಟವಾದ ಮಂಜಿನಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಮನೆಗಳಿಗೆ ಅಪ್ಪಳಿಸಿದಾಗ ಮೃತಪಟ್ಟರು.

ಫಿಲಿಪೈನ್ಸ್ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ (1957)

ಫಿಲಿಪೈನ್ಸ್‌ನ ಏಳನೇ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರು ತಮ್ಮ ಬಲವಾದ ಭ್ರಷ್ಟಾಚಾರ ವಿರೋಧಿ ನಿಲುವು ಮತ್ತು ಜನಪ್ರಿಯ ಕಾರ್ಯಕ್ಕೆ ಹೆಸರುವಾಸಿಯಾಗಿದ್ದರು. ಅವರ ಅಧ್ಯಕ್ಷತೆಯು 1957ರ ಮಾರ್ಚ್ 17ರಂದು ಥಟ್ಟನೆ ಕೊನೆಗೊಂಡಿತು. “ಮೌಂಟ್ ಪಿನಾಟುಬೊ” ಎಂದು ಕರೆಯಲ್ಪಡುವ ಅವರ ಸಿ-47 ವಿಮಾನವು ಸೆಬು ನಗರದ ಮನುಂಗಲ್ ಪರ್ವತಕ್ಕೆ ಅಪ್ಪಳಿಸಿತು. ಆಗ ಮ್ಯಾಗ್ಸೆಸೆ ಮೃತಪಟ್ಟರು. 25 ಪ್ರಯಾಣಿಕರ ಪೈಕಿ ಒಬ್ಬರು ಮಾತ್ರ ಬದುಕುಳಿದಿದ್ದರು.


ಬ್ರೆಜಿಲ್ ಅಧ್ಯಕ್ಷ ನೆರೆಯು ರಾಮೋಸ್ (1958)

ಬ್ರೆಜಿಲ್‌ನ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನೆರೆಯು ರಾಮೋಸ್ ಅವರು 1958ರ ಜೂನ್ 16ರಂದು ನಿಧನರಾದರು. ರಾಮೋಸ್ ಅವರು ಕ್ರೂಝೈರೊ ಡೊ ಸುಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪರಾನಾ ರಾಜ್ಯದ ಕುರಿಟಿಬಾ ಅಫೊನ್ಸೊ ಪೆನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟರು.

ಇರಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಆರಿಫ್ (1966)

ಇರಾಕ್‌ನ ಎರಡನೇ ಅಧ್ಯಕ್ಷರಾದ ಅಬ್ದುಲ್ ಸಲಾಂ ಆರಿಫ್ ರಾಜಪ್ರಭುತ್ವವನ್ನು ಉರುಳಿಸಿದ 1958ರ ಕ್ರಾಂತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. 1966ರ ಏಪ್ರಿಲ್ 13ರಂದು ಆರಿಫ್ ಅವರ ಇರಾಕಿ ಏರ್ ಫೋರ್ಸ್ ವಿಮಾನ, ಡಿ ಹ್ಯಾವಿಲ್ಯಾಂಡ್ ಡಿಹೆಚ್ 104 ಡೋವ್, ಬಸ್ರಾ ಬಳಿ ಅಪಘಾತಕ್ಕೀಡಾದಾಗ ನಿಧನರಾದರು. ಅವರ ಸಹೋದರ ಅಬ್ದುಲ್ ರಹಮಾನ್ ಆರಿಫ್ ಅವರ ಅನಂತರ ಅಧ್ಯಕ್ಷರಾದರು.


ಬ್ರೆಜಿಲ್ ಅಧ್ಯಕ್ಷ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ (1967)

ಬ್ರೆಜಿಲ್‌ನ 26ನೇ ಅಧ್ಯಕ್ಷ ಮತ್ತು ಮಾಜಿ ಮಿಲಿಟರಿ ಸರ್ವಾಧಿಕಾರದ ಪ್ರಮುಖ ವ್ಯಕ್ತಿಯಾಗಿದ್ದ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ 1967ರ ಜುಲೈ 18ರಂದು ನಿಧನರಾದರು. ಅವರ ಅಧ್ಯಕ್ಷೀಯ ಅವಧಿ ಮುಗಿದ ಸ್ವಲ್ಪ ಸಮಯದ ಅನಂತರ ಕ್ಯಾಸ್ಟೆಲೊ ಬ್ರಾಂಕೋ ಅವರ ಪೈಪರ್ ಪಿಎ -23 ಅಜ್ಟೆಕ್ ವಿಮಾನ ಬ್ರೆಜಿಲಿಯನ್ ವಾಯುಪಡೆ ವಿಮಾನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿತು. ಅವರ ಸಾವು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇಂದಿರಾ ಗಾಂಧಿ ಮಗ ಸಂಜಯ್ ಗಾಂಧಿ (1980)

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ 1980ರ ಜೂನ್ 23ರಂದು ವಿಮಾನ ಅಪಘಾತದಲ್ಲಿ ನಿಧನರಾದರು. ದೆಹಲಿಯ ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ತಾವು ಚಲಾಯಿಸುತ್ತಿದ್ದ ವಿಮಾನದ ನಿಯಂತ್ರಣವನ್ನು ಕಳೆದುಕೊಂಡು ದುರಂತ ಸಾವು ಕಂಡರು.


ಲೆಬನಾನ್ ಪ್ರಧಾನಿ ರಶೀದ್ ಕರಾಮಿ (1987)

ಲೆಬನಾನ್‌ನ ಅತಿ ಹೆಚ್ಚು ಬಾರಿ ಚುನಾಯಿತರಾದ ಪ್ರಧಾನಮಂತ್ರಿ ರಶೀದ್ ಕರಾಮಿ ಅವರು ಲೆಬನಾನಿನ ಅಂತರ್ಯುದ್ಧದ ಸಮಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. 1987ರ ಜೂನ್ 1ರಂದು, ಬೈರುತ್‌ಗೆ ಹೋಗುವ ಮಾರ್ಗದಲ್ಲಿ ಅವರ ಹೆಲಿಕಾಪ್ಟರ್‌ನಲ್ಲಿ ಬಾಂಬ್ ಸ್ಫೋಟಗೊಂಡು ಕರಾಮಿ ಕೊಲ್ಲಲ್ಪಟ್ಟರು.

ಪಾಕಿಸ್ತಾನದ ಅಧ್ಯಕ್ಷ ಮುಹಮ್ಮದ್ ಜಿಯಾ-ಉಲ್-ಹಕ್ (1988)

ಪಾಕಿಸ್ತಾನದ ಆರನೇ ಅಧ್ಯಕ್ಷರಾದ ಜನರಲ್ ಮುಹಮ್ಮದ್ ಜಿಯಾ-ಉಲ್-ಹಕ್ ಅವರು 1988ರ ಆಗಸ್ಟ್ 17ರಂದು ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಸಿ-130 ಹರ್ಕ್ಯುಲಸ್ ವಿಮಾನವು ಬಹವಾಲ್‌ಪುರದಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಅಪಘಾತಕ್ಕೀಡಾಯಿತು. ಅಪಘಾತದ ಕಾರಣವು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?


ಕಾಂಗ್ರೆಸ್‌ ನಾಯಕ ಮಾಧವರಾವ್ ಸಿಂಧಿಯಾ (2001)

ಮಾಧವರಾವ್ ಸಿಂಧಿಯಾ ಭಾರತದ ಪ್ರಮುಖ ರಾಜಕಾರಣಿ ಮತ್ತು ಕಾಂಗ್ರೆಸ್ ನಾಯಕರಾಗಿದ್ದರು. 2001ರ ಸೆಪ್ಟೆಂಬರ್ 30ರಂದು ವಿಮಾನ ಅಪಘಾತದಲ್ಲಿ ದಾರುಣ ಅಂತ್ಯ ಕಂಡರು. ಉತ್ತರ ಪ್ರದೇಶದ ಮೈನ್‌ಪುರಿ ಬಳಿ ಅವರ ಖಾಸಗಿ ಬೀಚ್‌ಕ್ರಾಫ್ಟ್ ಕಿಂಗ್ ಏರ್ ಸಿ 90 ಗಾಳಿಯಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತ ಸಂಭವಿಸಿತ್ತು.

ಚಿಲಿಯ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ (2024)

ಚಿಲಿಯ ಮಾಜಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಮೆರಾ ಅವರು ಫೆಬ್ರವರಿ 2024ರಲ್ಲಿ ನಿಧನರಾದರು. ಪಿನೆರಾ ಅವರ ಹೆಲಿಕಾಪ್ಟರ್ ದಕ್ಷಿಣ ಚಿಲಿಯ ಸರೋವರಕ್ಕೆ ಅಪ್ಪಳಿಸಿತು. ಈ ದುರಂತದಲ್ಲಿ ಅವರು ಪ್ರಾಣ ಕಳೆದುಕೊಂಡರು. ಅವರು ಸತತ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ವೈ ಎಸ್‌ ರಾಜಶೇಖರ್‌ ರೆಡ್ಡಿ ಅವರೂ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

Continue Reading
Advertisement
Prashant Kishor
ದೇಶ2 mins ago

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Ujjivan Small Finance Bank
ವಾಣಿಜ್ಯ2 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Kempegowda International Airport parking
ಬೆಂಗಳೂರು18 mins ago

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Abhijit Gangopadhyay
ದೇಶ23 mins ago

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

2nd Puc Result
ಬೆಂಗಳೂರು38 mins ago

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

L2 Empuraan first look poster shared by Prithviraj Sukumaran
South Cinema48 mins ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Shane Watson Apologize
ಕ್ರಿಕೆಟ್1 hour ago

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Viral Video
ವೈರಲ್ ನ್ಯೂಸ್1 hour ago

Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

DK Shivakumar speaks about KPCC president post
ಬೆಂಗಳೂರು1 hour ago

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

Chitta Ranjan Dash
ದೇಶ2 hours ago

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌