ರಮ್ಯಾ ‘ಪ್ರೊಡಕ್ಷನ್‌ ಹೌಸ್‌’ ಲಾಂಚ್‌; ನಿನ್ನೆಯೇ ಸುದ್ದಿ ಪ್ರಕಟಿಸಿದ್ದ ‘ವಿಸ್ತಾರ ನ್ಯೂಸ್’! - Vistara News

ಸಿನಿಮಾ

ರಮ್ಯಾ ‘ಪ್ರೊಡಕ್ಷನ್‌ ಹೌಸ್‌’ ಲಾಂಚ್‌; ನಿನ್ನೆಯೇ ಸುದ್ದಿ ಪ್ರಕಟಿಸಿದ್ದ ‘ವಿಸ್ತಾರ ನ್ಯೂಸ್’!

ಗಣೇಶ ಚತುರ್ಥಿಯ ಶುಭದಿನವೇ ನಟಿ ರಮ್ಯಾ ಅಭಿಮಾನಿಗಳಿಗೆ ಸರ್ಪ್ರೈಸ್‌ ಕೊಟ್ಟಿದ್ದಾರೆ. ‘ಆ್ಯಪಲ್ ಬಾಕ್ಸ್‌ ಸ್ಟುಡಿಯೋಸ್’ ಹೆಸರಿನಲ್ಲಿ ನಟಿ ರಮ್ಯಾ ‘ಪ್ರೊಡಕ್ಷನ್‌ ಹೌಸ್‌’ ಲಾಂಚ್‌ ಮಾಡಿದ್ದಾರೆ.

VISTARANEWS.COM


on

ramya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೋಹಕ ತಾರೆ ರಮ್ಯಾ ಹೊಸ ಅವತಾರ ಕೊನೆಗೂ ರಿವೀಲ್‌ ಆಗಿದೆ. ಅವರು ತಮ್ಮದೇ ಪ್ರೊಡಕ್ಷನ್‌ ಹೌಸ್‌ ಮೂಲಕ ಸ್ಯಾಂಡಲ್‌ವುಡ್‌ಗೆ ರೀಎಂಟ್ರಿ ಕೊಟ್ಟಿದ್ದಾರೆ. ಬುಧವಾರ ಸಿಹಿಸುದ್ದಿ ನೀಡುವುದಾಗಿ ಮಂಗಳವಾರ ಟ್ವೀಟ್‌ ಮಾಡಿ ಸಂಚಲನ ಸೃಷ್ಟಿಸಿದ್ದ ರಮ್ಯಾ ಅಲಿಯಾಸ್‌ ದಿವ್ಯಸ್ಪಂದನ ಈಗ ನಿರ್ಮಾಪಕಿಯಾಗಿ ಹೊರಹೊಮ್ಮಿದ್ದಾರೆ.

ತಮ್ಮ ಪ್ರೊಡಕ್ಷನ್‌ ಹೌಸ್‌ ಅನ್ನು ಗಣೇಶ ಹಬ್ಬದಂದು ಲಾಂಚ್‌ ಮಾಡಿರುವ ನಟಿ ರಮ್ಯಾ, ‘ಆ್ಯಪಲ್ ಬಾಕ್ಸ್‌ ಸ್ಟುಡಿಯೋಸ್’ ‌ಎಂದು ಹೆಸರಿಟ್ಟಿದ್ದಾರೆ.

ರಮ್ಯಾ ಪ್ರೊಡಕ್ಷನ್‌ ಹೌಸ್

ಒಂದು ಕಾಲದಲ್ಲಿ ಚಂದನವನದಲ್ಲಿ ಮಿಂಚು ಹರಿಸಿದ್ದ ನಟಿ ರಮ್ಯಾ ಕೆಲಕಾಲ ಸ್ಯಾಂಡಲ್‌ವುಡ್‌ ಅಂಗಳದಿಂದ ಮರೆಯಾಗಿದ್ದರು. ಆದರೆ, ಇದೀಗ ಗ್ರ್ಯಾಂಡ್‌ ಕಂಬ್ಯಾಕ್‌ ಮಾಡಲು ನಟಿ ರಮ್ಯಾ ಕಹಳೆ ಮೊಳಗಿಸಿದ್ದಾರೆ. ‘ಆ್ಯಪಲ್ ಬಾಕ್ಸ್‌ ಸ್ಟುಡಿಯೋಸ್’ ‌ಹೆಸರಲ್ಲಿ ಗಣೇಶ ಚತುರ್ಥಿಯ ದಿನ ಶುಭ ಸಮಾಚಾರ ತಿಳಿಸಿದ್ದಾರೆ. ಸದ್ಯ ರಮ್ಯಾ ಟ್ವೀಟ್‌ ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಕ್ರಿಯೇಟ್‌ ಮಾಡುತ್ತಿದೆ.

ಇದನ್ನೂ ಓದಿ | ಡಿಂಪಲ್‌ ಕ್ವೀನ್‌ ಕೊಡೋ ಸ್ವೀಟ್‌ ನ್ಯೂಸ್‌ ಏನು? ರಿವೀಲ್‌ ಆಯ್ತಾ ರಮ್ಯಾ ಹೊಸ ಪ್ಲ್ಯಾನ್!

ಫ್ಯಾನ್ಸ್‌ಗೆ ಗಿಫ್ಟ್..!
ಪವರ್‌ ಸ್ಟಾರ್‌ ಡಾ. ಪುನೀತ್‌ ರಾಜ್‌ಕುಮಾರ್‌ ಜತೆ ʼಅಭಿʼ ಸಿನಿಮಾ ಮೂಲಕ ರಮ್ಯಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ರಮ್ಯಾ ಹಿಂದಿರುಗಿ ನೋಡಿದ್ದೇ ಇಲ್ಲ. ಬಳಿಕ ಎಕ್ಸ್‌ಕ್ಯೂಸ್‌ಮಿ, ಅಮೃತಧಾರೆ, ಆಕಾಶ್‌, ಅರಸು, ಜಸ್ಟ್‌ ಮಾತ್‌ ಮಾತಲ್ಲಿ, ಸಂಜು ವೆಡ್ಸ್‌ ಗೀತಾ ಸೇರಿದಂತೆ ಅನೇಕ ಸೂಪರ್‌ ಹಿಟ್‌ ಮತ್ತು ಬ್ಲಾಕ್‌ ಬಸ್ಟರ್‌ ಸಿನಿಮಾಗಳಲ್ಲಿ ನಟಿಸಿದ್ದರು.

2014ರ ಬಳಿಕ ರಮ್ಯಾ ಸಿನಿಮಾ ಜೀವನ ನಿಧಾನಗತಿಯಲ್ಲಿ ಸಾಗಿತ್ತು. ಬಳಿಕ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟು, ಸಂಸದೆಯೂ ಆಗಿದ್ದರು. ಈ ನಂತರ ರಮ್ಯಾ ಸಿನಿಮಾ ಜೀವನದಿಂದ ಬಹಳವೇ ದೂರ ಉಳಿದಿದ್ದರು. ಆದರೆ, ಈಗ ನಿರ್ಮಾಣ ಕ್ಷೇತ್ರಕ್ಕೆ ಕಾಲಿಡುವ ಮೂಲಕ ಮತ್ತೆ ಸಿನಿಜರ್ನಿಯನ್ನು ಆರಂಭ ಮಾಡಿದ್ದು, ಅಭಿಮಾನಿಗಳಿಗೆ ಬಿಗ್‌ ಗಿಫ್ಟ್‌ ಕೊಟ್ಟಿದ್ದಾರೆ.

ರಾಜ್‌ ಬಿ. ಶೆಟ್ಟಿ ನಿರ್ದೇಶನದಲ್ಲಿ ಮೊದಲ ಚಿತ್ರ?
ಇದರ ಬೆನ್ನಲ್ಲೇ ಮತ್ತೊಂದು ಸುದ್ದಿ ದಟ್ಟವಾಗಿದೆ. ‘ಆ್ಯಪಲ್ ಬಾಕ್ಸ್‌ ಸ್ಟುಡಿಯೋಸ್’ನ ಪ್ರಥಮ ಸಿನಿಮಾಗೆ ರಾಜ್ ಬಿ. ಶೆಟ್ಟಿ ನಿರ್ದೇಶನ ಮಾಡುವ ನಿರೀಕ್ಷೆ ಇದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಹೇಳಿಕೆ ಲಭ್ಯವಾಗಿಲ್ಲ. ಆದರೆ ಗಾಂಧಿನಗರ ಗಲ್ಲಿಗಳಲ್ಲಿ ನಟಿ ರಮ್ಯಾ ತೀರ್ಮಾನ ಸಖತ್‌ ಸದ್ದು ಮಾಡುತ್ತಿದೆ. ಸದ್ಯದಲ್ಲೇ ರಮ್ಯಾ ತಮ್ಮ ಮೊದಲ ಪ್ರಾಜೆಕ್ಟ್‌ ಲಾಂಚ್‌ ಮಾಡಲಿದ್ದಾರೆ.

ಇದನ್ನೂ ಓದಿ | ‘ಕೆಜಿಎಫ್-2’ ಸರಿಯಿಲ್ಲ ಎಂದಿದ್ದ ವಿವಾದಾತ್ಮಕ ಸಿನಿಮಾ ವಿಮರ್ಶಕ ಜೈಲುಪಾಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna: ಮಹಿಳೆ ಹಸಿದಾಗ ಬಾಯಿಗೆ ಆಹಾರ ಹಾಕಿ…ʻಅದಲ್ಲʼ! ನಟಿಯ ಪೋಸ್ಟ್‌ ವೈರಲ್‌!

Prajwal Revanna: ರಶ್ಮಿ ಗೌತಮ್ ಪ್ರಜ್ವಲ್‌ ರೇವಣ್ಣ ಅವರನ್ನು‌ ಗುರಿಯಾಗಿಸಿಕೊಂಡೇ ಪೋಸ್ಟ್‌ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ನಟಿ ಪೂನಂ ಕೌರ್ (Poonam Kaur) ,ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ನಿರೂಪಕಿ, ನಟಿ ರಶ್ಮಿ ಗೌತಮ್‌ ಇನ್‌ಸ್ಟಾ ಸ್ಟೋರಿ ವೈರಲ್‌ ಆಗಿದೆ.ರಶ್ಮಿ ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ ಚಿತ್ರ ತೆಲುಗಿಗೆ ಡಬ್ ಆದ ನಂತರ, ರಮ್ಯಾ ಮಾಡಿದ್ದ ಪಾತ್ರವನ್ನ ನಿರ್ವಹಿಸಿದ್ದರು.

VISTARANEWS.COM


on

Prajwal Revanna related post By Rashmi Goutham
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ನಟಿ ಪೂನಂ ಕೌರ್ (Poonam Kaur) ,ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ನಿರೂಪಕಿ, ನಟಿ ರಶ್ಮಿ ಗೌತಮ್‌ ಇನ್‌ಸ್ಟಾ ಸ್ಟೋರಿ ವೈರಲ್‌ ಆಗಿದೆ.

ರಶ್ಮಿ ಗೌತಮ್ ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ, ಖ್ಯಾತ ಲೇಖಕಿ ರಾಚೆಲ್ ಮೋರನ್ ​ಅವರ ಸಾಲುಗಳನ್ನ ಹಂಚಿಕೊಂಡಿದ್ದಾರೆ. ʻʻಮಹಿಳೆ ಬಡತನದಲ್ಲಿರುವಾಗ ಮತ್ತು ಹಸಿವಿನಿಂದ ಬಳಲುತ್ತಿರುವಾಗ ನಾವು ಮನುಷ್ಯರಾಗಿ ಅವರ ಬಾಯಿಗೆ ಆಹಾರ ಇಡಬೇಕೇ ಹೊರತು ಖಾಸಗಿ ಅಂಗವಲ್ಲʼʼ ಎಂಬ ಸಾಲುಗಳು ಅವು. ರಶ್ಮಿ ಗೌತಮ್ ಹಂಚಿಕೊಂಡ ಈ ವಿಚಾರಕ್ಕೂ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್‌ಗೂ ಏನಾದರೂ ಸಂಬಂಧ ಇದೆಯಾ ಅನ್ನುವ ಅನುಮಾನ ಅನೇಕರನ್ನ ಕಾಡುತ್ತಿದೆ.

ಇದೀಗ ಕೆಲವರು ಈ ಬಗ್ಗೆ ರಶ್ನಿ ಗೌತಮ್‌ ಅವರು ಪ್ರಜ್ವಲ್‌ ರೇವಣ್ಣ ಅವರನ್ನು‌ ಗುರಿಯಾಗಿಸಿಕೊಂಡೇ ಪೋಸ್ಟ್‌ ಹಂಚಿಕೊಂಡಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಇರುವುದನ್ನು ನೇರವಾಗಿ ಹೇಳಿ ಹೆಸರನ್ನು ಉಲ್ಲೇಖಿಸಿಬೇಕಿತ್ತು ಎಂದು ಕಮೆಂಟ್‌ ಮಾಡಿದ್ದಾರೆ. ರಶ್ಮಿ ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ ಚಿತ್ರ ತೆಲುಗಿಗೆ ಡಬ್ ಆದ ನಂತರ, ರಮ್ಯಾ ಮಾಡಿದ್ದ ಪಾತ್ರವನ್ನ ನಿರ್ವಹಿಸಿದ್ದರು.

ಇದನ್ನೂ ಓದಿ: Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ 24 ಗಂಟೆಯೊಳಗೆ ವಿಚಾರಣೆಗೆ ಹಾಜಾರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಒಂದು ವೇಳೆ ಗಡುವಿನೊಳಗೆ ವಿಚಾರಣೆಗೆ ಹಾಜರಾಗದೇ ಇದ್ದರೆ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇದೆ. ಇಲ್ಲವೇ ಇನ್ನೂ ಎರಡು ಬಾರಿ ನೋಟಿಸ್‌ ನೀಡಿ ಕಾಯಬಹುದಾಗಿದೆ. ಈ ಎಲ್ಲವೂ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟ ವಿಷಯವಾಗಿದೆ.

ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ.

ಸದ್ಯ ಆರೋಪಿಗಳು ವಿಚಾರಣೆಗೆ ಬರುವ ನಿರೀಕ್ಷೆಯಲ್ಲಿ ಎಸ್ಐಟಿ ಇದೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನೋಟಿಸ್‌ನಲ್ಲಿ ಸಮಯ ನಿಗದಿ ಮಾಡಲಾಗಿಲ್ಲ.

Continue Reading

ಸಿನಿಮಾ

Salman Khan: ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

Salman Khan:ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿರುವ ಅನೂಜ್‌ ತಾಪನ್‌ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Salman Khan
Koo

ನವದೆಹಲಿ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌(Salman Khan) ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿ(Police custody)ಯಲ್ಲೇ ಆತ್ಮಹತ್ಯೆ(Suicide)ಗೆ ಶರಣಾಗಿದ್ದಾನೆ. ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿರುವ ಅನೂಜ್‌ ತಾಪನ್‌ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ.

ಘಟನೆ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರನ್ನು ಸಿಐಡಿ ತನಿಖೆಗೆ ಹಾಜರು ಪಡಿಸಲಾಗಿದೆ. ಸಾಮಾನ್ಯವಾಗಿ ಲಾಕ್‌ ಅಪ್‌ನಲ್ಲಿ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ತೀವ್ರ ನಿಗಾವಹಿಸುತ್ತಾರೆ. ಹಾಗಿದ್ದರೂ ಕೆಲವು ಆರೋಪಿಗಳು ತಾವು ಧರಿಸಿರುವ ಪೈಜಾಮಾದಿಂದ ಗಂಟು ಹಾಕಿ ಅದರ ಸಹಾಯದಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳು ಈ ದಾಳಿ ನಡೆಸಿದ್ದರು. ಇವರನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಲಾಗಿದ್ದು,. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಪೊಲೀಸರು ಘೋಷಿಸಿದ್ದರು.

2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆ ಎಂದು ಹೇಳಿದ್ದ.

ಇದನ್ನೂ ಓದಿ:Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ ಎಂದು ಹೇಳಿದ್ದ.

Continue Reading

ಸ್ಯಾಂಡಲ್ ವುಡ್

Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Kantara Movie: ‘ಕಾಂತಾರ: ಚಾಪ್ಟರ್ 1’ ಚಿತ್ರೀಕರಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಇತ್ತೀಚಿನ ವರದಿಗಳ ಪ್ರಕಾರ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 20 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ವರದಿಯಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ.

VISTARANEWS.COM


on

Kantara Movie Massive Set Constructed In Kundapura
Koo

ಬೆಂಗಳೂರು: ʼಕಾಂತಾರʼ ಪ್ಯಾನ್‌ (Kantara Movie) ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಹೀಗಾಗಿ ಪ್ರೀಕ್ವೆಲ್ ಕೂಡ ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್‌ ಲುಕ್‌ ಪೋಸ್ಟರ್‌ ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್‌ (Hombale Films) ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ‘ಕಾಂತಾರ: ಚಾಪ್ಟರ್ 1’ ಚಿತ್ರೀಕರಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಇತ್ತೀಚಿನ ವರದಿಗಳ ಪ್ರಕಾರ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ.

ಒಂದು ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆ ಇದ್ದು, 20 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ವರದಿಯಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ.

ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

ಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

ಕಾಂತಾರ ಒಂದು ದಂತಕಥೆʼ ಎಂದರೆ ಮೊದಲ ಭಾಗ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗಿತ್ತು. ಇದೀಗ ಪ್ರೀಕ್ವೆಲ್ ರೈಟ್ಸ್ ಕೂಡ ಅಮೇಜಾನ್ ಪ್ರೈಂ ವಿಡಿಯೋ ಪಾಲಾಗಿದೆ. ಕೆಲವು ಮೂಲಗಳ ಪ್ರಕಾರ ಚಿತ್ರದಲ್ಲಿ ಒಂದಕ್ಕಿಂತ ಹೆಚ್ಚು ನಾಯಕಿಯ ಪಾತ್ರ ಇರಲಿದೆ ಎನ್ನಲಾಗಿದೆ. ಇನ್ನು ಕೆಲವು ವರದಿಗಳು ನಾಯಕಿಯಾಗಿ ರುಕ್ಮಿಣಿ ವಸಂತ್‌ ಆಯ್ಕೆಯಾಗಿದ್ದಾರೆ ಎಂದಿವೆ. ಚಿತ್ರತಂಡ ಇನ್ನೂ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿಲ್ಲ.

ಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Continue Reading

ಕಿರುತೆರೆ

Rupali Ganguly: ನಾನು ಮೋದಿಯ ʻಡೈ ಹಾರ್ಡ್‌ ಫ್ಯಾನ್‌ʼ ಎಂದು ಬಿಜೆಪಿ ಸೇರಿದ ಖ್ಯಾತ ಕಿರುತೆರೆ ನಟಿ!

Rupali Ganguly: ರೂಪಾಲಿ ಗಂಗೂಲಿ (Rupali Ganguly) ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. 1990ರ ಸಮಯದಲ್ಲಿ ನಟಿ ರೂಪಾಲಿ ಗಂಗೂಲಿಯವರು ಧಾರಾವಾಹಿ ಕ್ಷೇತ್ರದಲ್ಲಿ ಬಹಳಷ್ಟು ಹೆಸರು ಮಾಡಿದ್ದರು. ಹಲವಾರು ವಿಭಿನ್ನವಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡ ಇವರು ತಮ್ಮ ನಟನೆಯ ಮೂಲಕ ಮನೆ ಮಾತಾಗಿದ್ದರು. ರೂಪಾಲಿ ಗಂಗೂಲಿ ರಾಜಕೀಯ ವೃತ್ತಿಜೀವನವನ್ನು ಘೋಷಿಸಿದ್ದರೂ, 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ ಎಂದು ಅವರು ಇನ್ನೂ ಖಚಿತಪಡಿಸಿಲ್ಲ.

VISTARANEWS.COM


on

Rupali Ganguly Of Anupamaa Fame Joins BJP
Koo

ಬೆಂಗಳೂರು: ದೂರದರ್ಶನ ನಟಿ ರೂಪಾಲಿ ಗಂಗೂಲಿ (Rupali Ganguly) ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಮೇ 1ರಂದು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. 1990ರ ಸಮಯದಲ್ಲಿ ನಟಿ ರೂಪಾಲಿ ಗಂಗೂಲಿಯವರು ಧಾರಾವಾಹಿ ಕ್ಷೇತ್ರದಲ್ಲಿ ಬಹಳಷ್ಟು ಹೆಸರು ಮಾಡಿದ್ದರು. ಹಲವಾರು ವಿಭಿನ್ನವಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡ ಇವರು ತಮ್ಮ ನಟನೆಯ ಮೂಲಕ ಮನೆ ಮಾತಾಗಿದ್ದರು.

ಬಿಜೆಪಿ ಸೇರ್ಪಡೆ ಬಳಿಕ ನಟಿ ಮಾಧ್ಯಮದವರೊಂದಿಗೆ ಮಾತನಾಡಿ “ನಾನು ಬಿಜೆಪಿಗೆ ಸೇರ್ಪಡೆಯಾಗಿರುವುದು ತುಂಬಾ ಗೌರವ ಎಂದೆನಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದಾರೆ. ನಾನು ಪ್ರಧಾನಿ ಮೋದಿಯವರ ದೊಡ್ಡ ಅಭಿಮಾನಿ. ಬಿಜೆಪಿ ಉತ್ತಮ ಕೆಲಸ ಮಾಡುತ್ತಿದೆ. ಹಾಗಾಗಿ ನಾನು ಬಿಜೆಪಿ ಸೇರಲು ಬಯಸುತ್ತೇನೆ. ನಾನು ಪಕ್ಷಕ್ಕೆ ತುಂಬಾ ಕೃತಜ್ಞನಾಗಿದ್ದೇನೆʼʼ ಎಂದು ಹೇಳಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ಮುಖಂಡ ವಿನೋದ್ ತಾವ್ಡೆ ಮತ್ತು ಅನಿಲ್ ಬಲುನಿ ಕೂಡ ಇದ್ದರು. ನಟಿ ರೂಪಾಲಿ ಗಂಗೂಲಿ ಅವರು ‘ಸುಕನ್ಯಾ’ ಧಾರಾವಾಹಿ ಮೂಲಕ ಕಿರುತೆರೆ ಕ್ಷೇತ್ರಕ್ಕೆ ಕಾಲಿಟ್ಟರು. ನಂತರ ‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ಧಾರಾವಾಹಿಯಿಂದ ಬಹಳಷ್ಟು ಮನೆ ಮಾತಾಗಿದ್ದರು. ವೈವಾಹಿಕ ಜೀವನಕ್ಕೆ ಕಾಲಿಟ್ಟ ಮೇಲೆ ಒಂದು ದೊಡ್ಡ ಬ್ರೇಕ್ ತೆಗೆದುಕೊಂಡಿರುವ ನಟಿ ರೂಪಾಲಿ ಗಂಗೂಲಿ ‘ಅನುಪಮಾ’ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟರು. ʻಅನುಪಮಾʼ ಧಾರಾವಾಹಿ ಕೂಡ ಪ್ರೇಕ್ಷಕರ ಮೆಚ್ಚಿನ ಧಾರಾವಾಹಿಯಾಗಿ ಹೊರಹೊಮ್ಮಿತು.

ಇದನ್ನೂ ಓದಿ: Mallikarjuna Kharge: ಶಿವ, ಶ್ರೀರಾಮನ ಬಗ್ಗೆ ಖರ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕಿಡಿ

ರೂಪಾಲಿ ಗಂಗೂಲಿ ರಾಜಕೀಯ ವೃತ್ತಿಜೀವನವನ್ನು ಘೋಷಿಸಿದ್ದರೂ, 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ ಎಂದು ಅವರು ಇನ್ನೂ ಖಚಿತಪಡಿಸಿಲ್ಲ.

ತಿಂಗಳ ಮುಂಚೆ ಮೋದಿಯವರನ್ನು ಭೇಟಿಯಾಗಿದ್ದ ನಟಿ!

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಗ್ಗೆ ನಟಿ ಮಾರ್ಚ್‌ನಲ್ಲಿ ಇನ್‌ಸ್ಟಾ ಮೂಲಕ ಹೇಳಿಕೊಂಡಿದ್ದರು. ʻʻ ನನ್ನ ಕನಸು ನನಸಾಯಿತು…ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಅವರನ್ನು ಭೇಟಿ ಮಾಡುವ ದಿನ. ಇದು ನಿಜಕ್ಕೂ ಅಭಿಮಾನಿ ಹುಡುಗಿಯ ಕ್ಷಣ! 14 ವರ್ಷಗಳ ಕಾಲ ನಾನು ಅಂತಹ ಒಂದು ದೊಡ್ಡ ವೇದಿಕೆ ಹಂಚಿಕೊಳ್ಳಬೇಕು ಎಂದು ಕಾಯುತ್ತಿದ್ದೆʼʼಎಂದು ಸಂತಸ ವ್ಯಕ್ತಪಡಿಸಿದ್ದರು.

ಹೆಚ್ಚು ಕಮ್ಮಿ ಆರರಿಂದ ಏಳು ವರ್ಷಗಳ ಕಾಲ ಯಾವುದೇ ನಟನೆಯಲ್ಲಿ ಕಾಣಿಸಿಕೊಳ್ಳದ ನಟಿ ರೂಪಾಲಿ ಗಂಗೂಲಿ ʻಅನುಪಮಾʼ ಮೂಲಕ ಮತ್ತೆ ಕಿರುತೆರೆಗೆ ಬಂದಿದ್ದರು. ʻʻದಶಕಗಳ ಹಿಂದೆ ನಮ್ಮ ಮನೆಯಲ್ಲಿ ಆರ್ಥಿಕ ಸಂಕಷ್ಟವಿತ್ತು. ನನ್ನ ತಂದೆ ಆರೋಗ್ಯ ಸರಿ ಇರಲಿಲ್ಲ. ಯಾವುದೇ ವ್ಯವಸ್ಥೆ ಇಲ್ಲದ ಸರ್ಕಾರಿ ಆಸ್ಪತ್ರೆಯಲ್ಲಿ ಅವರನ್ನು ಸೇರಿಸಲು ನನಗೆ ಇಷ್ಟವಿರಲಿಲ್ಲ. ಹಾಗಾಗಿ ನಾನು ಧಾರಾವಾಹಿ ಕ್ಷೇತ್ರಕ್ಕೆ ಕಾಲಿಟ್ಟೆ. ಆಗ ಬರುತ್ತಿದ್ದ ಹಣ ನನಗೆ ಬಹಳ ಮುಖ್ಯವಾಗಿತ್ತು ಎಂದು ರೂಪಾಲಿ ಈ ಹಿಂದೆ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

Continue Reading
Advertisement
karnataka weather Forecast
ಮಳೆ8 mins ago

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Lottery
ವೈರಲ್ ನ್ಯೂಸ್9 mins ago

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Prajwal Revanna Case What is diplomatic passport
ಹಾಸನ23 mins ago

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Money Guide
ಮನಿ-ಗೈಡ್33 mins ago

Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

T20 World Cup 2024
ಕ್ರೀಡೆ43 mins ago

T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

Blackmail Case
ಬೆಂಗಳೂರು44 mins ago

Blackmail Case: ಸಹಪಾಠಿಯಿಂದ 35 ಲಕ್ಷ ರೂ. ಚಿನ್ನಾಭರಣ ದೋಚಿದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರ ಬಂಧನ

Wedding Eye Makeup Tips
ಫ್ಯಾಷನ್1 hour ago

Wedding Eye Makeup Tips: ಮದುವೆಯಲ್ಲಿ ಮದುಮಗಳ ಐ ಮೇಕಪ್‌ಗೆ 5 ಸಿಂಪಲ್‌ ಸೂತ್ರ

Assault case In Bengaluru
ಬೆಂಗಳೂರು1 hour ago

Assault Case: ಶವದ ಮುಂದೆ ಎರಡು ಗುಂಪುಗಳ ಹೊಡಿಬಡಿ; 12 ಮಂದಿ ಅರೆಸ್ಟ್‌

Hassan Pen Drive Case Prajwal seeks 7 days time to appear for questioning
ಕ್ರೈಂ1 hour ago

Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

T20 World Cup
ಕ್ರೀಡೆ1 hour ago

T20 World Cup: ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆದ ಚಹಲ್​ಗೆ ಪತ್ನಿಯಿಂದ ವಿಶೇಷ ಹಾರೈಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌