ಮುರುಘಾಶ್ರೀ ಪ್ರಕರಣ | ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಮಠದಲ್ಲೇ ಮುರುಘಾಶರಣರ ಬಂಧನ - Vistara News

ಕರ್ನಾಟಕ

ಮುರುಘಾಶ್ರೀ ಪ್ರಕರಣ | ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಮಠದಲ್ಲೇ ಮುರುಘಾಶರಣರ ಬಂಧನ

ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾಶರಣರನ್ನು ಬಂಧಿಸಲಾಗಿದೆ.

VISTARANEWS.COM


on

ಮುರುಘಾಶ್ರೀಗಳಿಗೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾಶರಣರನ್ನು ಬಂಧಿಸಲಾಗಿದೆ. ಶ್ರೀಗಳನ್ನು ಬಿಗಿ ಭದ್ರತೆ ಮಧ್ಯೆಯೇ ಬಂಧಿಸಲಾಗಿದ್ದು, ಸದ್ಯ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಶ್ರೀಗಳ ವಿರುದ್ಧ ದೂರು ದಾಖಲಾದ ಆರು ದಿನಗಳ ಬಳಿಕ ಅವರನ್ನು ಬಂಧಿಸಲಾಗಿದೆ. ಬಂಧನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರ ಮೇಲೆ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣವು ಕೆಲವು ದಿನಗಳಿಂದ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಪೋಕ್ಸೊ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾದರೂ ಬಂಧಿಸದ ಕುರಿತು ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಶ್ರೀಗಳನ್ನು ಬಂಧಿಸಲಾಗಿದೆ. ಪೋಕ್ಸೊ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾದರೂ ಮುರುಘಾ ಶ್ರೀಗಳನ್ನು ಬಂಧಿಸಬೇಕು ಎಂದು ರಾಜ್ಯದ ಹಲವೆಡೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರೂ ಪ್ರತಿಭಟನೆ ನಡೆಸಲಾಗಿತ್ತು.

ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಪೋಕ್ಸೊ ಕಾಯಿದೆ ಅಡಿ ದಾಖಲಾದ ಪ್ರಕರಣದಲ್ಲಿ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಅವರು ಎರಡನೇ ಆರೋಪಿಯಾಗಿದ್ದಾರೆ. ಹಾಗೆಯೇ, ಶ್ರೀಗಳ ಆಪ್ತ ಪರಮಶಿವಯ್ಯ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶ್ರೀಗಳು ತಮ್ಮ ಬಂಧನದ ವಿರುದ್ಧ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರಾದರೂ ಕೋರ್ಟ್‌ ಇನ್ನೂ ಅದರ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಏನಿದು ಪ್ರಕರಣ?

ಮಠದ ಅಧೀನದಲ್ಲಿರುವ ಹೈಸ್ಕೂಲ್‌ನಲ್ಲಿ ೧೦ನೇ ತರಗತಿಯಲ್ಲಿ ಕಲಿಯುತ್ತಿರುವ, ಮಠದ್ದೇ ಹಾಸ್ಟೆಲ್‌ನಲ್ಲಿ ತಂಗಿದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಮುರುಘಾಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದಲ್ಲಿ ಶ್ರೀಗಳ ವಿರುದ್ಧ ಕೇಸ್‌ ದಾಖಲಾದ ಪ್ರಕರಣ ಇದಾಗಿದೆ. ಕೆಲವು ದಿನಗಳ ಹಿಂದೆ ಮೈಸೂರಿನ ನಜರ್‌ ಬಾದ್‌ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ಮುರುಘಾಶರಣರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಸಂತ್ರಸ್ತೆಯರು ಆರೋಪಿಸಿದ್ದರು.

ಮುರುಘಾಶರಣರಿಗೆ ಹಾಸ್ಟೆಲ್‌ ವಾರ್ಡನ್‌ ರಶ್ಮಿ ಮತ್ತು ಇತರ ಮೂವರು ಸಹಕರಿಸಿದ್ದಾರೆ ಎಂದು ದೂರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್‌ ದಾಖಲಾಗಿ ಅದು ಚಿತ್ರದುರ್ಗ ಗ್ರಾಮೀಣ ಪೊಲೀಸ್‌ ಠಾಣೆಗೆ ರವಾನೆಯಾಗಿತ್ತು.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮುರುಘಾ ಮಠದ ಆಡಳಿತಾಧಿಕಾರಿ ಮಾಜಿ ಶಾಸಕ ಎಸ್‌.ಕೆ. ಬಸವರಾಜನ್‌ಗೆ ಗೇಟ್‌ಪಾಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Children Death: ಅವಳಿ ಮಕ್ಕಳಿಗೆ ಮೃತ್ಯುವಾದ ಐಸ್‌ಕ್ರೀಂ; ಸ್ಮೋಕ್‌ ಬಿಸ್ಕೆಟ್‌ ತಿಂದು ಮಗು ಆಸ್ಪತ್ರೆಪಾಲು

Children Death: ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು. ನಿನ್ನೆ ಸಂಜೆ ಗ್ರಾಮಕ್ಕೆ ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್‌ಕ್ರೀಂ ತಾಯಿ ಮತ್ತು ಮಕ್ಕಳು ಖರೀದಿಸಿ ತಿಂದಿದ್ದರು. ನಂತರ ಅಸ್ವಸ್ಥರಾಗಿದ್ದರು.

VISTARANEWS.COM


on

twin children death
Koo

ಮಂಡ್ಯ: ಬೇಸಿಗೆಯಲ್ಲಿ ಸ್ವಚ್ಛತೆಯಿಲ್ಲದ ಬೀದಿ ಬದಿಯ ಆಹಾರ (Road side food) ಸೇವಿಸಿ ಅಸ್ಸಸ್ಥಗೊಳ್ಳುವ ಹಾಗೂ ಮೃತಪಡುವ ಪ್ರಕರಣಗಳು ಕಂಡುಬರುತ್ತಿವೆ. ಮಂಡ್ಯ (Mandy news) ಹಾಗೂ ದಾವಣಗೆರೆಯಲ್ಲಿ (Davanagere news) ಇವು ವರದಿಯಾಗಿವೆ. ಐಸ್ ಕ್ರೀಂ (Ice cream) ತಿಂದು ಒಂದುವರೆ ವರ್ಷದ ಅವಳಿ ಮಕ್ಕಳು (Twin Children death) ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಈ ದಾರುಣ ಘಟನೆ ನಡೆದಿದೆ.

ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು. ನಿನ್ನೆ ಸಂಜೆ ಗ್ರಾಮಕ್ಕೆ ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್‌ಕ್ರೀಂ ತಾಯಿ ಮತ್ತು ಮಕ್ಕಳು ಖರೀದಿಸಿ ತಿಂದಿದ್ದರು. ನಂತರ ಅಸ್ವಸ್ಥರಾಗಿದ್ದರು. ಮಕ್ಕಳು ಮನೆಯಲ್ಲಿ ಸಾವಿಗೀಡಾದರೆ, ತೀವ್ರ ಅಸ್ವಸ್ಥಗೊಂಡ ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮಕ್ಕಳ ಮೃತ ದೇಹವನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ಕೊಡಿಸಲಾಗುತ್ತಿದೆ. ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ನಡೆಯುತ್ತಿದೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ಮೋಕ್‌ ಬಿಸ್ಕೆಟ್‌ ತಿಂದು ಮಗು ಅಸ್ವಸ್ಥ

ದಾವಣಗೆರೆ: ದಾವಣಗೆರೆಯಲ್ಲಿ ನಡೆಯುತ್ತಿದ್ದ ಎಕ್ಸಿಬಿಷನ್‌ನಲ್ಲಿ ಬಾಲಕನೊಬ್ಬ ಸ್ಮೋಕ್‌ ಬಿಸ್ಕೆಟ್‌ ತಿಂದು ಅಸ್ವಸ್ಥನಾಗಿದ್ದಾನೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಂಡಿದ್ದಾನೆ. ದಾವಣಗೆರೆ ನಗರದ ಅರುಣ್ ಸರ್ಕಲ್ ಬಳಿಯ ಎಕ್ಸಿಬಿಷನ್‌ನಲ್ಲಿ ಘಟನೆ ನಡೆದಿದೆ. ಮಕ್ಕಳ ಮನರಂಜನೆಗಾಗಿ ನಡೆಯುತ್ತಿರುವ ಎಕ್ಸಿಬಿಷನ್‌ನ ಸ್ಟಾಲ್ ಒಂದರಲ್ಲಿ ಸ್ಮೋಕ್ ಬಿಸ್ಕೆಟ್ ಕೊಡಲಾಗುತ್ತಿತ್ತು. ಅದನ್ನು ಏಕಾಏಕಿ ಸೇವಿಸಿ ಬಾಲಕ ಅಸ್ವಸ್ಥನಾಗಿದ್ದಾನೆ.

ಸ್ಮೋಕ್ ಬಿಸ್ಕೆಟ್ ಸ್ಟಾಲ್ ದೊಡ್ಡವರಿಂದ ಚಿಕ್ಕ‌ ಮಕ್ಕಳವರೆಗೂ ಗಮನ ಸೆಳೆದಿತ್ತು. ಒಂದು ಕಪ್‌ನಲ್ಲಿ 80 ರೂಪಾಯಿಗೆ ಐದು ಚಿಕ್ಕ‌ ಚಿಕ್ಕ ಬಿಸ್ಕೇಟ್ ನೀಡಲಾಗುತ್ತಿತ್ತು. ಹೀಗೆ ಕೊಟ್ಟ ಬಿಸ್ಕೇಟ್ ಅನ್ನು ಮಗು ಒಂದೇ ಸಲ ಬಾಯಿಗೆ ಹಾಕಿಕೊಂಡಿದೆ. ನಂತರ ನುಂಗಲೂ ಆಗದೇ ಉಗಿಯಲೂ ಆಗದೇ ಕಷ್ಟಪಟ್ಟಿದೆ.

ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿಗೆ ಚಿಕಿತ್ಸೆ ನೀಡಿದ ನಂತರ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಘಟನೆಯಿಂದ ಆಕ್ರೋಶಗೊಂಡ ಪೋಷಕರು ಎಕ್ಸಿಬಿಷನ್‌ನಲ್ಲಿ ಹಾಕಲಾಗಿದ್ದ ಸ್ಟಾಲ್ ಅನ್ನು ಕಿತ್ತು ಬಿಸಾಕಿದ್ದಾರೆ. ಇಂತಹ ಸ್ಮೋಕ್ ಬಿಸ್ಕೆಟ್ ಅನ್ನು ಮಕ್ಕಳಿಗೆ ಕೊಡಬೇಡಿ ಎಂದು ಎಚ್ಚರಿಸುವ ಆಡಿಯೋ ಹರಿಬಿಟ್ಟಿದ್ದಾರೆ. ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಗೆ ಪಾಲಕರು ದೂರು ನೀಡಿದ್ದಾರೆ.

ಇದನ್ನೂ ಓದಿ: Kids Care: ಪ್ರಯಾಣದ ವೇಳೆ ಮಕ್ಕಳು ಅಸ್ವಸ್ಥರಾಗದಂತೆ ನೋಡಿಕೊಳ್ಳಲು ಹೀಗೆ ಮಾಡಿ

Continue Reading

ಕ್ರೈಂ

Jai Shree Ram slogan: ರಾಮಭಕ್ತರ ಮೇಲೆ ಹಲ್ಲೆ ಮಾಡಿದ 4 ಮಂದಿಯ ಬಂಧನ, ಇಂದು ಬಿಜೆಪಿ ಪ್ರತಿಭಟನೆ

Jai Shree Ram slogan: ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

VISTARANEWS.COM


on

jai shree ram assault case
Koo

ಬೆಂಗಳೂರು: ‘ಜೈ ಶ್ರೀರಾಮ್‌’ ಘೋಷಣೆ (Jai Shree Ram slogan) ಕೂಗಿದ್ದಕ್ಕೆ ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣಕ್ಕೆ (Assault Case) ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು (Culprits) ಪೊಲೀಸರು ಬಂಧಿಸಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ (Hindu youth) ಮೇಲೆ ಬುಧವಾರ ಸಂಜೆ ಹಲ್ಲೆ ಮಾಡಿದ್ದವರ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಫರ್ಮಾನ್, ಎ2 ಸಮೀರ್ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಒಟ್ಟು ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

“ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರೋದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್. ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ” ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್ ಹೇಳಿಕೆ ನೀಡಿದ್ದಾರೆ.

“ಆರೋಪಿಗಳು ಬೈಕ್‌ನಲ್ಲಿ ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ಸು ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು?

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

ಗುರುವಾರ ಬೆಳಗ್ಗೆ ವಿದ್ಯಾರಣ್ಯಪುರ ಠಾಣೆ ಎದುರು ಪ್ರತಿಭಟನೆ

ವಿದ್ಯಾರಣ್ಯಪುರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ, ಹಲ್ಲೆಗೊಳಗಾದ ಯುವಕರ ಯೋಗಕ್ಷೇಮ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಈ ವೇಳೆ ಘಟನೆ ಖಂಡಿಸಿ ಗುರುವಾರ (ಏ.18) ಬೆಳಗ್ಗೆ 10 ಗಂಟೆಗೆ ವಿದ್ಯಾರಣ್ಯಪುರ ಪೋಲಿಸ್ ಠಾಣೆ ಮುಂಭಾಗ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಸಂಸದೆ ಹೇಳಿದ್ದಾರೆ.

ಯಾರೇ ಆಗಲಿ ಚುನಾವಣೆ ಸಂದರ್ಭದಲ್ಲಿ ಈ ರೀತಿ ಗಲಭೆ ಹೆಚ್ಚಿಸುವ ಪ್ರಯತ್ನ ಮಾಡಬಾರದು. ಅದೂ ನಮ್ಮ ಕ್ಷೇತ್ರದಲ್ಲಿ‌ ಕೆಲವರ ಕುಮ್ಮಕ್ಕಿನಿಂದ ಗಲಭೆ ಮಾಡಿರಬಹುದು. ಇದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಸಹ ಇರಬಹುದು. ಪೊಲೀಸರು ಈ ಪ್ರಕರಣದಲ್ಲಿ ಬೇಜವಾಬ್ದಾರಿಯಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಕಮೀಷನರ್‌ಗೆ ಮನವಿ ಮಾಡ್ತೀನಿ. ಕೂಡಲೇ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಏನಿದು ಪ್ರಕರಣ?

ಬುಧವಾರ ಸಂಜೆ ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ (Jai Shri Ram Slogan) ಕಾರಿನಲ್ಲಿ ಹೋಗುತ್ತಿದ್ದ ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದರು. ವಿದ್ಯಾರಣ್ಯಪುರದ ಚಿಕ್ಕ ಬೆಟ್ಟಳ್ಳಿ ಮಸೀದಿ ಬಳಿ ಘಟನೆ ನಡೆದಿತ್ತು. ರಾಮನವಮಿ (Ram Navami) ಹಿನ್ನೆಲೆ ಜೈ ಶ್ರೀರಾಮ್ ಎಂದು ಹೇಳುತ್ತಾ ಹಿಂದು ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ, ಅವರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಲಾಗಿತ್ತು.

ಶ್ರೀ ರಾಮನವಮಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಹಿಂದು ಯುವಕರು ತೆರಳುತ್ತಿದ್ದಾಗ, ಜೈ ಶ್ರೀರಾಮ್ ಎಂದು ಕೂಗಿದ್ದರು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮುಸ್ಲಿಂ ಯುವಕರು, “ಜೈ ಶ್ರೀರಾಮ್‌ ಹೇಳಬಾರದು, ಅಲ್ಲಾಹ್ ಅಂತ ಹೇಳಬೇಕು” ಎಂದು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬೈಕ್‌ನಲ್ಲಿ ಬಂದಿದ್ದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿದ್ದರು. ಅಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಇದೇ ವೇಳೆ ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡುತ್ತೀವಾ ಎಂದು ಹಿಂದು ಯುವಕರು ಪ್ರಶ್ನೆ ಮಾಡಿದ್ದರು.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲು

ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹಿತರಾದ ವಿನಾಯಕ ಮತ್ತು ರಾಹುಲ್ ಜತೆ ಚಿಕ್ಕಬೆಟ್ಟಹಳ್ಳಿ ರಸ್ತೆಯಲ್ಲಿ ಮಧ್ಯಾಹ್ನ ಕಾರಿನಲ್ಲಿ ಹೋಗುತ್ತಿದ್ದೆ. ಕಾರಿನ ಮುಂದೆ ಶ್ರೀರಾಮನ ಧ್ವಜ ಕಟ್ಟಿದ್ದನ್ನು ನೋಡಿದ ಇಬ್ಬರು ಮುಸ್ಲಿಂ ಯುವಕರು, ನಮ್ಮ ಬಳಿ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಅಲ್ಲಾ ಹು ಅಕ್ಬರ್” ಎಂದು ಕೂಗಬೇಕು ಎಂದು ಒತ್ತಾಯಿಸಿದರು. ನಾವು ಹಾಗೆ ಕೂಗುವುದಿಲ್ಲವೆಂದು ಹೇಳಿದಾಗ, ನಮ್ಮ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ರಾಹುಲ್ ತಲೆಗೆ ಪೆಟ್ಟು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಹೇಗೋ ನಾವು ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ | Road Accident: ವಾಟರ್‌ ಟ್ಯಾಂಕರ್‌ಗೆ ಡಿಕ್ಕಿಯಾಗಿ ಬೈಕ್‌ ಹಿಂಬದಿ ಸವಾರ ಸಾವು; ಬೆಚ್ಚಿ ಬೀಳಿಸುವ ಅಪಘಾತದ ದೃಶ್ಯ!

Continue Reading

ಕರ್ನಾಟಕ

Karnataka Weather: ಇಂದು ದಕ್ಷಿಣ ಕನ್ನಡ, ಬೆಳಗಾವಿ ಸೇರಿ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಮಳೆ!

Karnataka Weather: ಏ.18 ರಿಂದ 20 ಏಪ್ರಿಲ್ ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain fall) ಸಾಧ್ಯತೆಯಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 18ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಏಪ್ರಿಲ್ 18 ರಿಂದ 21 ರವರೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜೊತೆಗೆ ಮಾರುತಗಳು ಬಲವಾಗಿ ಬೀಸುವ ಸಾಧ್ಯತೆಯಿದೆ. ಏಪ್ರಿಲ್ 19ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಇದೇ ರೀತಿಯ ಸ್ಥಿತಿ ಇರಲಿದೆ.

ಇದನ್ನೂ ಓದಿ | Karnataka Weather : ರಭಸವಾದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ; ಇನ್ನೊಂದು ವಾರ ಈ ಜಿಲ್ಲೆಗಳಿಗೆ ಅಲರ್ಟ್‌

ಏ.23ರವರೆಗೆ ಮುಂದುವರಿಯಲಿದೆ ಮಳೆ

ಏ.19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು & ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ಬೀದರ್, ಗದಗ, ಕಲಬುರ್ಗಿ, ರಾಯಚೂರು & ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಅದೇ ರೀತಿ ಏ. 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏ. 21ರಂದು ಬೆಳಗಾವಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
22ನೇ ಏಪ್ರಿಲ್ 2024 : ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏ. 23ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ತಾಪಮಾನದ ಮುನ್ಸೂಚನೆ

ಏ.19 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು ಕ್ರಮೇಣ 2-3°C ಯಷ್ಟು ಏರುತ್ತದೆ.

ಇದನ್ನೂ ಓದಿ | Eye Protection: ಡಿಜಿಟಲ್ ಪರದೆಗಳಿಂದ ಕಣ್ಣುಗಳನ್ನು ಕಾಪಾಡಿಕೊಳ್ಳುವುದು ಹೇಗೆ?

ಏ.19ರವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 24 ಗಂಟೆಗಳು ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳು ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Continue Reading

ಪ್ರಮುಖ ಸುದ್ದಿ

Jai Shree Ram slogan: ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರ ಬಂಧನ

Jai Shree Ram slogan: ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

VISTARANEWS.COM


on

Jai Shree Ram slogan
Koo

ಬೆಂಗಳೂರು: ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣಕ್ಕೆ (Jai Shree Ram slogan) ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ ಮೇಲೆ ಬುಧವಾರ ಸಂಜೆ ಹಲ್ಲೆ ಮಾಡಿದ್ದವರ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಎ1 ಫರ್ಮಾನ್, ಎ2 ಸಮೀರ್ ಹಾಗೂ ಅಪ್ರಾಪ್ತನನ್ನು ಬಂಧಿಸಲಾಗಿದೆ. ಒಟ್ಟು ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಉಳಿದ ಆರೋಪಿಗಾಗಿ(ಅಪ್ರಾಪ್ತ) ವಿದ್ಯಾರಣ್ಯಪುರ ಪೊಲೀಸರಿಂದ ಹುಡುಕಾಟ ಮುಂದುವರಿದಿದ್ದು, ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು?

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

ಗುರುವಾರ ಬೆಳಗ್ಗೆ ವಿದ್ಯಾರಣ್ಯಪುರ ಠಾಣೆ ಎದುರು ಪ್ರತಿಭಟನೆ

ವಿದ್ಯಾರಣ್ಯಪುರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ, ಹಲ್ಲೆಗೊಳಗಾದ ಯುವಕರ ಯೋಗಕ್ಷೇಮ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಈ ವೇಳೆ ಘಟನೆ ಖಂಡಿಸಿ ಗುರುವಾರ (ಏ.18) ಬೆಳಗ್ಗೆ 10 ಗಂಟೆಗೆ ವಿದ್ಯಾರಣ್ಯಪುರ ಪೋಲಿಸ್ ಠಾಣೆ ಮುಂಭಾಗ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಸಂಸದೆ ಹೇಳಿದ್ದಾರೆ.

ಯಾರೇ ಆಗಲಿ ಚುನಾವಣೆ ಸಂದರ್ಭದಲ್ಲಿ ಈ ರೀತಿ ಗಲಭೆ ಹೆಚ್ಚಿಸುವ ಪ್ರಯತ್ನ ಮಾಡಬಾರದು. ಅದೂ ನಮ್ಮ ಕ್ಷೇತ್ರದಲ್ಲಿ‌ ಕೆಲವರ ಕುಮ್ಮಕ್ಕಿನಿಂದ ಗಲಭೆ ಮಾಡಿರಬಹುದು. ಇದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಸಹ ಇರಬಹುದು. ಪೊಲೀಸರು ಈ ಪ್ರಕರಣದಲ್ಲಿ ಬೇಜವಾಬ್ದಾರಿಯಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಕಮೀಷನರ್‌ಗೆ ಮನವಿ ಮಾಡ್ತೀನಿ. ಕೂಡಲೇ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಏನಿದು ಪ್ರಕರಣ?

ಬುಧವಾರ ಸಂಜೆ ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ (Jai Shri Ram Slogan) ಕಾರಿನಲ್ಲಿ ಹೋಗುತ್ತಿದ್ದ ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದರು. ವಿದ್ಯಾರಣ್ಯಪುರದ ಚಿಕ್ಕ ಬೆಟ್ಟಳ್ಳಿ ಮಸೀದಿ ಬಳಿ ಘಟನೆ ನಡೆದಿತ್ತು. ರಾಮನವಮಿ (Ram Navami) ಹಿನ್ನೆಲೆ ಜೈ ಶ್ರೀರಾಮ್ ಎಂದು ಹೇಳುತ್ತಾ ಹಿಂದು ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ, ಅವರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಲಾಗಿತ್ತು.

ಶ್ರೀ ರಾಮನವಮಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಹಿಂದು ಯುವಕರು ತೆರಳುತ್ತಿದ್ದಾಗ, ಜೈ ಶ್ರೀರಾಮ್ ಎಂದು ಕೂಗಿದ್ದರು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮುಸ್ಲಿಂ ಯುವಕರು, “ಜೈ ಶ್ರೀರಾಮ್‌ ಹೇಳಬಾರದು, ಅಲ್ಲಾಹ್ ಅಂತ ಹೇಳಬೇಕು” ಎಂದು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ | Road Accident: ವಾಟರ್‌ ಟ್ಯಾಂಕರ್‌ಗೆ ಡಿಕ್ಕಿಯಾಗಿ ಬೈಕ್‌ ಹಿಂಬದಿ ಸವಾರ ಸಾವು; ಬೆಚ್ಚಿ ಬೀಳಿಸುವ ಅಪಘಾತದ ದೃಶ್ಯ!

ಬೈಕ್‌ನಲ್ಲಿ ಬಂದಿದ್ದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿದ್ದರು. ಅಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಇದೇ ವೇಳೆ ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡುತ್ತೀವಾ ಎಂದು ಹಿಂದು ಯುವಕರು ಪ್ರಶ್ನೆ ಮಾಡಿದ್ದರು.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲು

ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹಿತರಾದ ವಿನಾಯಕ ಮತ್ತು ರಾಹುಲ್ ಜತೆ ಚಿಕ್ಕಬೆಟ್ಟಹಳ್ಳಿ ರಸ್ತೆಯಲ್ಲಿ ಮಧ್ಯಾಹ್ನ ಕಾರಿನಲ್ಲಿ ಹೋಗುತ್ತಿದ್ದೆ. ಕಾರಿನ ಮುಂದೆ ಶ್ರೀರಾಮನ ಧ್ವಜ ಕಟ್ಟಿದ್ದನ್ನು ನೋಡಿದ ಇಬ್ಬರು ಮುಸ್ಲಿಂ ಯುವಕರು, ನಮ್ಮ ಬಳಿ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಅಲ್ಲಾ ಹು ಅಕ್ಬರ್” ಎಂದು ಕೂಗಬೇಕು ಎಂದು ಒತ್ತಾಯಿಸಿದರು. ನಾವು ಹಾಗೆ ಕೂಗುವುದಿಲ್ಲವೆಂದು ಹೇಳಿದಾಗ, ನಮ್ಮ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ರಾಹುಲ್ ತಲೆಗೆ ಪೆಟ್ಟು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಹೇಗೋ ನಾವು ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

Continue Reading
Advertisement
twin children death
ಕ್ರೈಂ6 mins ago

Children Death: ಅವಳಿ ಮಕ್ಕಳಿಗೆ ಮೃತ್ಯುವಾದ ಐಸ್‌ಕ್ರೀಂ; ಸ್ಮೋಕ್‌ ಬಿಸ್ಕೆಟ್‌ ತಿಂದು ಮಗು ಆಸ್ಪತ್ರೆಪಾಲು

jai shree ram assault case
ಕ್ರೈಂ43 mins ago

Jai Shree Ram slogan: ರಾಮಭಕ್ತರ ಮೇಲೆ ಹಲ್ಲೆ ಮಾಡಿದ 4 ಮಂದಿಯ ಬಂಧನ, ಇಂದು ಬಿಜೆಪಿ ಪ್ರತಿಭಟನೆ

Karnataka Weather
ಕರ್ನಾಟಕ1 hour ago

Karnataka Weather: ಇಂದು ದಕ್ಷಿಣ ಕನ್ನಡ, ಬೆಳಗಾವಿ ಸೇರಿ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಮಳೆ!

EVM
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಮತ್ತೆ ಮತಪತ್ರಗಳ ‘ಶಿಲಾಯುಗ’ಕ್ಕೆ ಹೋಗಲಾಗದು! ಆಧಾರರಹಿತವಾಗಿ ಮತಯಂತ್ರ ದೂಷಣೆ ಸರಿಯಲ್ಲ

Baking Powder
ಆಹಾರ/ಅಡುಗೆ2 hours ago

Baking Powder: ಬೇಕಿಂಗ್‌ ಪುಡಿ ಹುಟ್ಟಿದ ಕತೆ ಕುತೂಹಲಕರ! ಅಡುಗೆ ಮಾಡುವ ಇದರ ಹಿನ್ನೆಲೆ ಗೊತ್ತಿರಲಿ

daily horoscope predictions for April 18 2024
ಭವಿಷ್ಯ3 hours ago

Dina Bhavishya : ಈ ರಾಶಿಯವರು ಇಂದು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ!

DD News Logo
ದೇಶ8 hours ago

DD News Logo: ರಾಮನವಮಿ ದಿನವೇ ಡಿಡಿ ನ್ಯೂಸ್‌ ಲೋಗೊ ಕೇಸರಿಮಯ; ತೀವ್ರವಾಯ್ತು ಚರ್ಚೆ!

Jai Shree Ram slogan
ಪ್ರಮುಖ ಸುದ್ದಿ8 hours ago

Jai Shree Ram slogan: ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರ ಬಂಧನ

Union Minister Pralhad Joshi election campaign in Hubli
ಹುಬ್ಬಳ್ಳಿ9 hours ago

Lok Sabha Election 2024: ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಸ್ವಚ್ಛ ಆಡಳಿತ: ಪ್ರಲ್ಹಾದ್‌ ಜೋಶಿ

Times Influential list 2024
ಕ್ರೀಡೆ9 hours ago

Times Influential list 2024: ಟೈಮ್ಸ್‌ ಪ್ರಭಾವಿ ಪಟ್ಟಿಯಲ್ಲಿ ಸ್ಥಾನ ಪಡೆದ ಸಾಕ್ಷಿ ಮಲಿಕ್,ಆಲಿಯಾ ಭಟ್

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20243 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌