ಸವಿಸ್ತಾರ ಅಂಕಣ | ಗಡಿಗಳ ಎಲ್ಲೆ ಮೀರಿ ಮನ್ನಣೆ ಗಳಿಸಿದ್ದ ಸಾವರ್ಕರ್! ಅವರ ಪರ ಹೋರಾಡಿದ್ದ ಮಾರ್ಕ್ಸ್ ಮೊಮ್ಮಗ! - Vistara News

ಅಂಕಣ

ಸವಿಸ್ತಾರ ಅಂಕಣ | ಗಡಿಗಳ ಎಲ್ಲೆ ಮೀರಿ ಮನ್ನಣೆ ಗಳಿಸಿದ್ದ ಸಾವರ್ಕರ್! ಅವರ ಪರ ಹೋರಾಡಿದ್ದ ಮಾರ್ಕ್ಸ್ ಮೊಮ್ಮಗ!

ಸ್ವಾತಂತ್ರ್ಯವೀರ ಸಾವರ್ಕರ್‌ ಅವರಿಂದ ನೇತಾಜಿ ಸುಭಾಶ್ಚಂದ್ರ ಬೋಸ್‌ ಹೋರಾಟದ ಪ್ರೇರಣೆ, ಮಾರ್ಗದರ್ಶನ ಪಡೆದಿದ್ದರು. ಕಾರ್ಲ್‌ ಮಾರ್ಕ್ಸ್‌ ಮೊಮ್ಮಗ ಇವರಿಂದ ಪ್ರೇರಿತನಾಗಿದ್ದ.

VISTARANEWS.COM


on

veer savarakar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
savistara logo

“ಸಾವರ್ಕರ್ ಅವರ ಬಂಧನ ಪ್ರಕ್ರಿಯೆಯಲ್ಲಿ ಎರಡು ರೀತಿಯ ಪ್ರಮಾದಗಳು ನಡೆದುಹೋಗಿವೆ. ಮೊದಲನೆಯದು, ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ʼಕಳ್ಳʼ ಎಂದು ಸಂಬೋಧಿಸಿರುವುದು. ಎರಡನೆಯದು, ಸಾವರ್ಕರ್ ಬಂಧನದ ಬಳಿಕ ಫ್ರಾನ್ಸಿನ ನೌಕಾ ಸಿಬ್ಬಂದಿಯೊಬ್ಬರು ಅವರನ್ನು ಮಾರ್ಸೆಲಸ್ ನಗರದ ಬಂದರಿನ ಕಮಿಷನರಿಗೆ(ಮುಖ್ಯಾಧಿಕಾರಿ) ಒಪ್ಪಿಸದೆ ಬ್ರಿಟಿಷ್ ಪೊಲೀಸರಿಗೆ ಒಪ್ಪಿಸಿರುವುದು!

— ಇದು 1910ರ ಜುಲೈ 13ರಂದು ಫ್ರಾನ್ಸಿನ ಎಲ್ ಹ್ಯೂಮನೈಟ್(ಅರ್ಥ: ಮಾನವೀಯತೆ) ಎಂಬ ಹೆಸರಿನ ಟ್ಯಾಬ್ಲಾಯ್ಡ್ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ. ಈ ಸುದ್ದಿ ಫ್ರಾನ್ಸಿನಲ್ಲಿ ಅಲ್ಲೋಲಕಲ್ಲೋಲವನ್ನೇ ಸೃಷ್ಟಿಸಿತ್ತು!

ಅಂದಹಾಗೆ, ಸಾವರ್ಕರ್ ಪರವಾಗಿ ಈ ಸುದ್ದಿಯನ್ನು ಬರೆದ ಪತ್ರಕರ್ತ ಜೀನ್ ಲಾಂಗೆಟ್. ಈ ಲಾಂಗೆಟ್ ಯಾರು ಗೊತ್ತೆ? ಕಮ್ಯುನಿಷ್ಟ್ ಸಿದ್ಧಾಂತದ ಜನಕ ಕಾರ್ಲ್ ಮಾರ್ಕ್ಸ್ ಮೊಮ್ಮಗ.

1910ರಲ್ಲಿ ಲಂಡನ್ನಿನಲ್ಲಿ ಬಂಧಿತರಾದ ಸಾವರ್ಕರ್, ತಮ್ಮ ಬಂಧನಕ್ಕೂ ಮೊದಲು ಹಾಗೂ ಬಳಿಕ ಬ್ರಿಟಿಷ್ ರಾಜಕಾರಣಿಗಳು, ಪತ್ರಕರ್ತರು ಹಾಗೂ ಅಧಿಕಾರಿಗಳ ನಡುವೆ ದೊಡ್ಡ ಮಟ್ಟದ ಚರ್ಚೆಯನ್ನೇ ಹುಟ್ಟುಹಾಕಿದ್ದರು. ಲಂಡನ್ ನಗರಿಯಿಂದ ಭಾರತಕ್ಕೆ ಅವರನ್ನು ಕರೆತರುವಾಗ, ಫ್ರಾನ್ಸಿನ ಮಾರ್ಸೆಲಸ್‌ನಲ್ಲಿ ತಪ್ಪಿಸಿಕೊಂಡು ಪರಾರಿಯಾಗಲು ಪ್ರಯತ್ನಿಸಿದರು. ಮಾತ್ರವಲ್ಲ, ತಮಗೆ ಆಶ್ರಯ ನೀಡಬೇಕೆಂದು ಫ್ರಾನ್ಸ್ ಸರಕಾರವನ್ನು ಕೋರಿಕೊಳ್ಳುವ ಮೂಲಕ, ಫ್ರಾನ್ಸ್ ಮತ್ತು ಬ್ರಿಟನ್ ನಡುವೆ ಅಂತಾರಾಷ್ಟ್ರೀಯ ಬಿಕ್ಕಟ್ಟನ್ನು ಸೃಷ್ಟಿಸಿದ್ದರು. ಸಾವರ್ಕರ್ ಎಂಬ ವ್ಯಕ್ತಿತ್ವದ ಕುರಿತು ಬ್ರಿಟನ್ ಮಾತ್ರವಲ್ಲ ಫ್ರಾನ್ಸಿನ ಅನೇಕ ಪತ್ರಿಕೆಗಳು ದೊಡ್ಡ ಮಟ್ಟದಲ್ಲಿ ಚರ್ಚೆಗಿಳಿದಿದ್ದವು.

ಈ ಘಟನೆ ನಡೆದು ನೂರು ವರ್ಷಗಳ ಬಳಿಕವೂ ಸಾವರ್ಕರ್ ಏನು ಮಹಾ ಎಂದು ಇಂದಿಗೂ ಚರ್ಚಿಸುತ್ತಿರುವ ಭಾರತದಲ್ಲಿರುವ ಮಾರ್ಕ್ಸ್ ಚಿಂತನೆಯ ಬೌದ್ಧಿಕ ಮರಿಮಕ್ಕಳು, ಗಿರಿಮಕ್ಕಳ ವಾದ-ವಿವಾದ ನೋಡಿದಾಗ, ಮಾರ್ಕ್ಸ್‌ನ ನಿಜವಾದ ಮೊಮ್ಮಗ ಲಾಂಗೆಟ್ ನೆನಪಾದ.

ಇಷ್ಟಕ್ಕೂ ಸಾವರ್ಕರ್ ಬ್ರಿಟನ್‌ಗೆ ಹೋಗಿದ್ದೇಕೆ? ಫ್ರಾನ್ಸ್ ನೆಲದಲ್ಲಿ ಅವರು ನಡೆಸಿದ ಪಲಾಯನ ಸಾಹಸಕ್ಕೆ ಮುನ್ನ, ಲಂಡನ್ ಕಥಾನಕವನ್ನು ಅರಿಯೋಣ.

ಇದನ್ನೂ ಓದಿ | ಸವಿಸ್ತಾರ ಅಂಕಣ | ಇತಿಹಾಸದ ಕಣ್ತೆರೆಸಿ ಸ್ವಾತಂತ್ರ್ಯ ಜ್ಯೋತಿ ಬೆಳಗಿಸಿದವರು ಸಾವರ್ಕರ್

ಸಿಂಹವನ್ನು ಸಿಂಹದ ಗುಹೆಯಲ್ಲೇ ಎದುರಿಸುತ್ತೇನೆ ಎಂಬ ಗುಂಡಿಗೆಯನ್ನು ಹೊತ್ತೇ ಲಂಡನ್ನಿಗೆ ತೆರಳಿದ್ದರು ಸಾವರ್ಕರ್. ಲಂಡನ್ನಿನ ಲೈಬ್ರರಿಯಲ್ಲಿ ಕುಳಿತು, ಭಾರತದ ಇತಿಹಾಸದ ಪುಟಗಳನ್ನು ಬ್ರಿಟಿಷ್ ದಾಖಲೆಗಳ ಮೂಲಕವೇ ಬರೆದರು, ಮುಖ್ಯವಾಗಿ 1857ರಲ್ಲಿ ನಡೆದದ್ದು ಸಿಪಾಯಿ ದಂಗೆ ಎಂದು ನಂಬಿಸಿದ್ದ ಬ್ರಿಟಿಷ್ ಇತಿಹಾಸಕಾರರ ವಾದವನ್ನು ಸುಳ್ಳಾಗಿಸಿ, ಅದು ಭಾರತದ ಪ್ರಥಮ ಸಂಘಟಿತ ಸ್ವಾತಂತ್ರ್ಯ ಸಂಗ್ರಾಮ ಎನ್ನುವುದನ್ನು ದಾಖಲೆ ಸಹಿತ ನಿರೂಪಿಸಿದರು. ಬಹಳ ವರ್ಷಗಳ ಕಾಲ ಸೋಲಿನ ಇತಿಹಾಸ ಎಂದೇ ವ್ಯಾಖ್ಯಾನಿತ ಘಟನೆಯನ್ನು ವಿಜಯದ ಇತಿಹಾಸ ಎಂದು ಬ್ರಿಟಿಷರಿಗೆ ತಿವಿದು ಹೇಳಿದರು. ಇದಕ್ಕಿಂತಲೂ ಹೆಚ್ಚಾಗಿ ಭಾರತೀಯರಿಗೆ ವಿಜಯಗಾಥೆಯನ್ನು ಮನವರಿಕೆ ಮಾಡಿಕೊಟ್ಟರು.

veer savarkar
ಅಧ್ಯಯನಶೀಲ ವೀರ ಸಾವರ್ಕರ್

“ಬ್ರಿಟಿಷ್ ಅಧಿಕಾರಿಗಳ ಬಗ್ಗೆ, ಅವರು ರೂಪಿಸಿದ ಕಾನೂನುಗಳ ಬಗ್ಗೆ ಗೊಣಗುವುದರಲ್ಲಿ ಏನು ಅರ್ಥವಿದೆ? ಅದಕ್ಕೆ ಕೊನೆ ಮೊದಲಿಲ್ಲ. ನಮ್ಮ ಚಳವಳಿ, ಹೋರಾಟ ಯಾವುದೇ ನಿರ್ದಿಷ್ಟ ಕಾನೂನನ್ನು ವಿರೋಧಿಸುವುದಕ್ಕಷ್ಟೇ ಸೀಮಿತವಾಗಬಾರದು. ಬದಲಿಗೆ, ಆ ನಾವೇ ಕಾನೂನುಗಳನ್ನು ರಚಿಸಿ, ಜಾರಿಗೆ ತರುವ ಹಕ್ಕಿಗಾಗಿ ಇರಬೇಕು. ಅರ್ಥಾತ್, ಸಂಪೂರ್ಣ ರಾಜಕೀಯ ಸ್ವಾತಂತ್ರ್ಯವೇ ನಮ್ಮ ಗುರಿಯಾಗಬೇಕು. ಅದಕ್ಕಾಗಿ ಬ್ರಿಟಿಷರನ್ನು ಹೊರದಬ್ಬಬೇಕು,” ಎಂದು ಯುವಕರಲ್ಲಿ ಪ್ರೇರಣೆ ತುಂಬುವ ಕೆಲಸ ಮಾಡಿದರು. ಸ್ವರಾಜ್ಯವೇ ನಮ್ಮ ಹಕ್ಕು, ಅದೇ ಸ್ವಾತಂತ್ರ್ಯದ ಪರಮ ಗುರಿ ಎಂಬುದನ್ನು ಸಾವರ್ಕರ್ ಅವರು, ತಿಲಕರು ಮತ್ತು ಗಾಂಧೀಜಿ ಅವರಿಗಿಂತ ಅದೆಷ್ಟೋ ವರ್ಷಗಳ ಮೊದಲೇ ಹೇಳಿದ್ದರು!

ಲಂಡನ್‌ನಲ್ಲಿ ಸ್ವತಂತ್ರ ಭಾರತ ಸಮಾಜ (ಫ್ರೀ ಇಂಡಿಯಾ ಸೊಸೈಟಿ), ಅಭಿನವ ಭಾರತ ಎಂಬ ಸಂಸ್ಥೆಗಳನ್ನು ಸ್ಥಾಪಿಸಿ, ಭಾರತೀಯ ಹಬ್ಬ-ಹರಿದಿನಗಳನ್ನು, ಸ್ವಾತಂತ್ರ್ಯ ಸಂಗ್ರಾಮದ ಮೈಲುಗಲ್ಲುಗಳನ್ನೂ (1857ರ ಸಂಗ್ರಾಮದ ಬೆಳ್ಳಿಹಬ್ಬ) ಆಚರಿಸುತ್ತಿದ್ದರು. ಭಾರತದ ಸ್ವಾತಂತ್ರ್ಯದ ಬಗ್ಗೆ ಮಾತುಕತೆಗಳಿಗಾಗಿ ಮುಡಿಪಾಗಿದ್ದ ಈ ಸಂಸ್ಥೆಯ ಮೇಲೆ ಬ್ರಿಟಿಷ್ ಸತ್ತೆಯ ಕೆಂಗಣ್ಣು ಬೀಳಲು ತಡವಾಗಲಿಲ್ಲ. ಈ ಸಭೆಗಳಿಗೆ ಆಗಮಿಸುತ್ತಿದ್ದ ತರುಣರು, ಇಲ್ಲಿಂದ ಪ್ರೇರಣೆ ಪಡೆದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕುತ್ತಿದ್ದರು.

ಸಾವರ್ಕರರೇನೋ ಸ್ವಾತಂತ್ರ್ಯ ಲಕ್ಷ್ಮಿಯ ಪ್ರಾಪ್ತಿಯ ಹೋರಾಟಕ್ಕೆ ಲಂಡನ್ನಿಗೆ ಹೋಗಿದ್ದರು. ಆದರೆ ಎಲ್ಲರೂ ಅದೇ ರೀತಿ ಇರಲಿಲ್ಲ. ಮನೆಯಲ್ಲಿ ಸ್ಥಿತಿವಂತರಾಗಿದ್ದ ಭಾರತೀಯರಿಗೆ, ಅವರ ಮಕ್ಕಳಿಗೆ, ಲಂಡನ್ನಿಗೆ ಹೋಗುವುದು ಜೀವನಶೈಲಿಯಾಗಿತ್ತು. ಅಲ್ಲಿನ ಬಿಳಿ ಚರ್ಮದ ಹುಡುಗಿಯರ ಮುಂದೆ ಶೋಕಿ ಮಾಡುತ್ತ, ತಾವು ಅನಾದಿಕಾಲದ ಭಾರತೀಯರಲ್ಲ, ನಿಮ್ಮ ರೀತಿಯಲ್ಲೆ ʼನಾಗರಿಕರುʼ ಎಂದು ತೋರಿಸಿಕೊಳ್ಳುವ ಬಯಕೆಯವರು ಇದ್ದರು. ಬ್ರಿಟಿಷರಿಗಿಂತಲೂ ಹೆಚ್ಚು ಬ್ರಿಟಿಷರಾಗುವ ಬಯಕೆ ಅವರಲ್ಲಿತ್ತು. ಈಗಲೂ ಅಂತವರಿಗೇನೂ ಕಡಿಮೆ ಇಲ್ಲ, ಅಲ್ಲವೇ?

ಅಂಥದ್ದೇ ಮಾನಸಿಕತೆಯ ಮದನ್ ಲಾಲ್ ಧಿಂಗ್ರಾ, ಅಚಾನಕ್ ಆಗಿ ಸಾವರ್ಕರ್ ಸಂಪರ್ಕಕ್ಕೆ ಬಂದ. 1907ರಲ್ಲಿ ಭಾರತ ಭವನದಲ್ಲಿ ಸಾವರ್ಕರ್ ಹಾಗೂ ಸಂಗಡಿಗರು ಸೇರಿ 1857ರ ಸ್ವಾತಂತ್ರ್ಯ ಸಂಗ್ರಾಮದ ಸ್ಮರಣೆ ಕಾರ್ಯಕ್ರಮ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ಹೊರಗಿನ ಪ್ರದೇಶದಲ್ಲಿ ಗ್ರಾಮಾಫೋನ್‌ಗಳಲ್ಲಿ ಪಾಶ್ಚಾತ್ಯ ಸಂಗೀತದೊಂದಿಗೆ ಸ್ನೇಹಿತರ ಜತೆಗೂಡಿದ್ದ ಧಿಂಗ್ರಾ, ಕುಣಿಯುತ್ತಿದ್ದ. ಇದರಿಂದ ಕೋಪಗೊಂಡ ಸಾವರ್ಕರ್, ಅಲ್ಲಿ ದೇಶ ಗುಲಾಮಗಿರಿಯಲ್ಲಿದ್ದರೆ ನೀನು ಸಂತಸಪಡುತ್ತಿದ್ದೀಯೇ ಎಂದು ಗದರಿ ಹೋದರು. ಅದು ಏಕೊ ಧಿಂಗ್ರಾನ ಮನಸ್ಸಿಗೆ ನಾಟಿತು. ಕೆಲ ದಿನಗಳ ಬಳಿಕ ತಾನೇ ತಾನಾಗಿ ಭಾರತ ಭವನಕ್ಕೆ ಬಂದು ಸಾವರ್ಕರರನ್ನು ಸಂಪರ್ಕಿಸಿದ, ಅವರ ಜತೆಗೇ ಸೇರಿಕೊಂಡ. ಭಾರತ ಭವನದಲ್ಲಿ ನಡೆಯುತ್ತಿದ್ದ ಮಾತುಕತೆಗಳು, ಮುಖ್ಯವಾಗಿ ಸಾವರ್ಕರ್ ಮಾಡುತ್ತಿದ್ದ ದೇಶಭಕ್ತಿಪೂರಿತ ಭಾಷಣಗಳು ಧಿಂಗ್ರಾನ ಜೀವನದ ದಿಕ್ಕನ್ನೇ ಬದಲಿಸಿಬಿಟ್ಟಿದ್ದವು. ದೇಶದಲ್ಲಿ ಬ್ರಿಟಿಷರು ನಡೆಸುತ್ತಿರುವ ದೌರ್ಜನ್ಯಗಳಿಗೆ ಬ್ರಿಟಿಷ್ ನೆಲದಲ್ಲೇ ಉತ್ತರ ನೀಡಲು ಹೊರಟ. ಇಂಪೀರಿಯಲ್ ಇನ್ಸ್ಟಿಟ್ಯೂಟ್‌ನಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮಕ್ಕೆ ತೆರಳಿ, ಮಾಜಿ ಬ್ರಿಟಿಷ್ ಅಧಿಕಾರಿ ಕರ್ಜನ್ ವೈಲಿಯನ್ನು ತುಂಬಿದ ಸಭೆಯಲ್ಲಿ ಗುಂಡಿಕ್ಕಿ ಕೊಂದ. ನಂತರ ಎಂದಿನಂತೆ ನೆಪಮಾತ್ರಕ್ಕೆ ವಿಚಾರಣೆ ನಡೆಸಿದ ಬ್ರಿಟಿಷರು ಧಿಂಗ್ರಾನನ್ನು 1909ರಲ್ಲಿ ಅದೇ ದೇಶದಲ್ಲಿ ಗಲ್ಲಿಗೇರಿಸಿದರು.

ಇದನ್ನೂ ಓದಿ | ಸವಿಸ್ತಾರ ಅಂಕಣ | ನಮ್ಮ ನ್ಯಾಷನಲ್‌ ಹೀರೊಗಳನ್ನು ನಾವು ಗೌರವಿಸುವುದು ತಪ್ಪಾ?

ಸಾವರ್ಕರ್‌ರಿಂದ ಕಿರಿಯರಷ್ಟೆ ಅಲ್ಲ, ಹಿರಿಯರೂ ಪ್ರೇರಣೆ ಪಡೆದಿದ್ದರು, ಬೆಂಬಲವಾಗಿ ನಿಂತಿದ್ದರು. ವಿದೇಶದದಲ್ಲಿದ್ದರೂ ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದ ಮೇಡಂ ಭಿಕಾಜಿ ಕ್ಯಾಮ, ಶ್ಯಾಮ್ ಜಿ ಕೃಷ್ಣವರ್ಮ, ವೀರೇಂದ್ರನಾಥ ಚಟ್ಟೋಪಾಧ್ಯಾಯ ಸೇರಿ ಅನೇಕರು ಸಾವರ್ಕರ್ ಚಟುವಟಿಕೆಗಳ ಬೆನ್ನೆಲುಬಾಗಿದ್ದರು.

ಈ ನಡುವೆ 1909ರ ಡಿಸೆಂಬರ್ 21ರಂದು ಮಹಾರಾಷ್ಟ್ರದಲ್ಲಿ ತುಂಬಿದ ಸಭಾಂಗಣದಲ್ಲಿ ಬ್ರಿಟಿಷ್ ಅಧಿಕಾರಿ ಎ.ಎಂ.ಟಿ. ಜಾಕ್ಸನ್‌ನನ್ನು 17 ವರ್ಷದ ಅನಂತ ಲಕ್ಷ್ಮಣ ಕಾನ್ಹರೆ ಗುಂಡಿಟ್ಟು ಕೊಂದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವರ್ಕರರನ್ನು ಲಂಡನ್ನಿನಲ್ಲಿ ಬಂಧಿಸಿದ ಬ್ರಿಟಿಷರು ಅವರನ್ನು ಹಡಗಿನ ಮೂಲಕ ಭಾರತಕ್ಕೆ ಕರೆತರುತ್ತಿದ್ದರು.

ಎಸ್.ಎಸ್. ಮೋರಿಯಾ ಹೆಸರಿನ ಹಡಗಿನಲ್ಲಿ ಆಗಮಿಸುತ್ತಿದ್ದ ಸಾವರ್ಕರ್, ಈ ಆರೋಪದಲ್ಲಿ ಬ್ರಿಟಿಷರು ತಮ್ಮನ್ನು ಕರೆದುಕೊಂಡು ಹೋಗಿ ಕಾರಾಗೃಹಕ್ಕೆ ತಳ್ಳುತ್ತಾರೆ. ಜೈಲಿನಲ್ಲಿದ್ದು ಸ್ವಾತಂತ್ರ್ಯ ಹೋರಾಟ ಮಾಡುವುದೆಂತು ಎಂದು ಯೋಚಿಸಿ ಪರಾರಿಯಾಗುವ ಉಪಾಯ ಹೂಡಿದರು. ಮೇಡಂ ಕ್ಯಾಮಾ ಅವರಿಗೆ ವಿಚಾರವನ್ನು ತಿಳಿಸಿದರು. ತಾಂತ್ರಿಕ ಕಾರಣಗಳಿಗಾಗಿ ಈ ಹಡಗು ಫ್ರಾನ್ಸ್‌ನ ಮಾರ್ಸೆಲೆಸ್ ಎಂಬ ಪಟ್ಟಣದಲ್ಲಿ ಕೆಲಕಾಲ ನಿಲ್ಲುತ್ತದೆ ಎಂಬ ಅರಿವು ಸಾವರ್ಕರ್ ಅವರಿಗಿತ್ತು. ಹಾಗೂ ಅದಕ್ಕಿಂತಲೂ ಹೆಚ್ಚಾಗಿ, ಫ್ರಾನ್ಸ್ ಹಾಗೂ ಬ್ರಿಟಿಷ್ ನಡುವಿನ ಅಂತರದ ವಿಚಾರ ತಿಳಿದಿತ್ತು. ಫ್ರಾನ್ಸ್ ನೆಲದಲ್ಲಿ ಬ್ರಿಟಿಷ್ ಪೊಲೀಸರ ಆಟ ನಡೆಯುವುದಿಲ್ಲವಾದ್ದರಿಂದ ತಪ್ಪಿಸಿಕೊಳ್ಳಬಹುದು ಎಂದು ಯೋಜನೆ ರೂಪಿಸಿದರು.

ಅದರಂತೆಯೇ, ಶೌಚಾಲಯದಲ್ಲಿದ್ದ ಸಣ್ಣ ಕಿಟಕಿಯ ಮೂಲಕ ಸಮುದ್ರಕ್ಕೆ ಜಿಗಿದು ಈಜಿ ದಡವನ್ನೂ ಸೇರಿದರು. ಎಲ್ಲವೂ ಯೋಜನೆಯಂತೆಯೇ ನಡೆಯುತ್ತಿತ್ತು, ಆದರೆ ಅಲ್ಲಿಂದ ಕರೆದೊಯ್ಯಲು ಮೇಡಂ ಕ್ಯಾಮಾ ಮತ್ತಿತರರು ಆಗಮಿಸುವುದು ಸ್ವಲ್ಪ ತಡವಾಯಿತು. ಈ ಸಮಯದಲ್ಲಿ ಬಂದರಿನಲ್ಲಿ ಓಡುತ್ತಿದ್ದ ಸಾವರ್ಕರರನ್ನು ಬ್ರಿಟಿಷ್ ಪೊಲೀಸರು ಹಿಂಬಾಲಿಸಿದರು. ಕಳ್ಳ ಓಡುತ್ತಿದ್ದಾನೆ, ಕಳ್ಳ ಓಡುತ್ತಿದ್ದಾನೆ ಎಂದು ಕೂಗಿದರು. ಇದನ್ನು ಕಂಡ ಮಾರ್ಸೆಲೆಸ್ ಬಂದರಿನ ಪೊಲೀಸರು ಸಾವರ್ಕರರನ್ನು ಹಿಡಿದು ಬ್ರಿಟಿಷರಿಗೊಪ್ಪಿಸಿದರು. ಅಲ್ಲಿಂದ ಮತ್ತೆ ಹಡಗಿಗೆ ಹತ್ತಿಸಿಕೊಂಡು ಭಾರತಕ್ಕೆ ಕರೆತಂದರು, ಅಲ್ಲಿಂದ ಕರಿನೀರಿನ ಶಿಕ್ಷೆಗೆ ಗುರಿಯಾದರು.

ಇದನ್ನೂ ಓದಿ | Ramakrishna Hegde Birth Day | ರಾಮಕೃಷ್ಣ ಹೆಗಡೆ ನೆನಪಿಸುವ ಹತ್ತು ಮೌಲ್ಯಗಳು

13 ಜುಲೈ 1910ರಂದು ಫ್ರೆಂಚ್ ಪತ್ರಿಕೆಯಲ್ಲಿ ಪ್ರಕಟವಾಗಿದ್ದ
ಸಾವರ್ಕರ್ ಫೋಟೊ ಸಹಿತ ವರದಿ.

ಆದರೆ ಈ ನಡುವೆ ಫ್ರಾನ್ಸ್‌ನಲ್ಲಿ ಕಿಡಿಯೊಂದು ಹೊತ್ತಿಕೊಂಡಿತು. ಫ್ರಾನ್ಸಿನ ಎಲ್ ಹ್ಯೂಮನೈಟ್ ಪತ್ರಿಕೆಯಲ್ಲಿ ಪತ್ರಕರ್ತನಾಗಿದ್ದವನು ಜೀನ್ ಲಾಂಗೆಟ್. ಈತ ಕಾರ್ಲ್ ಮಾರ್ಕ್ಸ್ ಪುತ್ರಿ ಜೆನ್ನಿ ಕ್ಯಾರೊಲಿನ್ ಮಾರ್ಕ್ಸ್ ಅವರ ಪುತ್ರ. ತಾನು ಪ್ರತಿಪಾದಿಸುತ್ತಿದ್ದ ಸಿದ್ಧಾಂತ ಕಮ್ಯುನಿಸಂ, ಆದರೆ ಹಡಗಿನಲ್ಲಿ ತಪ್ಪಿಸಿಕೊಂಡ ಭಾರತದ ಸ್ವಾತಂತ್ರ್ಯ ಹೋರಾಟಗಾರ ಹಿಂದುತ್ವವಾದಿ, ರಾಷ್ಟ್ರೀಯವಾದಿ. ಆದರೆ ಈ ಅಂತರಗಳು ಜೀನ್ ಲಾಂಗೆಟ್ ಹಾದಿಗೆ ಅಡ್ಡಲಾಗಲಿಲ್ಲ.

ಒಬ್ಬ ಕ್ರಾಂತಿಕಾರಿ, ಯಾವುದೇ ದೇಶದವನಾದರೂ ಕ್ರಾಂತಿಕಾರಿಯೇ. ಇದೂ ಸಾವರ್ಕರ್ ಮಾರ್ಗವೇ ಅಲ್ಲವೇ? ಅಲ್ಲೆಲ್ಲೊ ಇಟಲಿಯಲ್ಲಿ ಏಕೀಕರಣಕ್ಕೆ ಹೋರಾಡಿದ ಜೋಸೆಫ್ ಮ್ಯಾಜಿನಿಯಿಂದಲೂ ಪ್ರೇರಣೆ ಪಡೆದವರು ಸಾವರ್ಕರ್. ಜೀನ್ ಲಾಂಗೆಟ್, ಸಾವರ್ಕರ್ ಬಂಧನದ ವಿಚಾರವನ್ನು ಅಲ್ಲಿಗೇ ಬಿಡಲಿಲ್ಲ. ಸ್ವತಃ ಫ್ರಾನ್ಸ್ ಸರ್ಕಾರದ ವಿರುದ್ಧವೇ ಸಮರ ಸಾರಿದ. ಸರಣಿ ಲೇಖನಗಳನ್ನು ಪ್ರಕಟಿಸಿದ. ಫ್ರಾನ್ಸ್ ಪೊಲೀಸರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕು. ಕೂಡಲೆ ಬ್ರಿಟಿಷರಿಗೆ ಪತ್ರ ಬರೆದು, ಸಾವರ್ಕರ್ ಅವರನ್ನು ಫ್ರಾನ್ಸ್‌ಗೆ ಒಪ್ಪಿಸಲು ಸೂಚಿಸಬೇಕು. ಇದು ಫ್ರಾನ್ಸ್ ನೆಲದಲ್ಲಿ ಬ್ರಿಟಿಷರು ನಡೆಸಿರುವ ಅನಧಿಕೃತ ಚಟುವಟಿಕೆ ಎನ್ನುತ್ತ ಫ್ರೆಂಚ್ ಸರ್ಕಾರದ ನಿದ್ದೆಗೆಡಿಸಿದರು. ಸ್ವತಃ ವಕೀಲನೂ ಆಗಿದ್ದ ಲಾಂಗೆಟ್, ಹೇಗ್ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲೂ ಸಾವರ್ಕರ್ ಪರ ವಾದ ಮಂಡಿಸಿದ. ಲಾಂಗೆಟ್ ಪ್ರಯತ್ನಕ್ಕೆ ಎಲ್ಲ ರೀತಿಯ ನೆರವನ್ನೂ ನೀಡಿದವರು ಮತ್ತದೇ ಮೇಡಂ ಕಾಮಾ. ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವುದು ಬೇರೆಯ ಮಾತು. ಬ್ರಿಟಿಷರ ಕಾಲದ ನ್ಯಾಯವ್ಯವಸ್ಥೆ ಎಲ್ಲರಿಗೂ ತಿಳಿದೇ ಇತ್ತು. ಆದರೆ ಸಮಾಜಕ್ಕೆ ಇದರಿಂದ ನೀಡಬೇಕಾದ ಸಂದೇಶವನ್ನು ನೀಡಿಯಾಗಿತ್ತು. ವಿಶ್ವದೆಲ್ಲೆಡೆ ಬ್ರಿಟಿಷರ ಬಣ್ಣ ಬಯಲಾಗಿತ್ತು.

ಸಾವರ್ಕರ್ ಅವರು ಬರೆದ 1857ರ ಸ್ವಾತಂತ್ರ್ಯ ಸಂಗ್ರಾಮದ ಕೃತಿಯನ್ನು ಮುದ್ರಿಸಿ ಯುವಕರಿಗೆ ಹಂಚಿದವರಲ್ಲಿ ಕ್ರಾಂತಿಕಾರಿ ಭಗತ್ ಸಿಂಗ್ ಸಹ ಇದ್ದರು. 1924ರಲ್ಲಿ ಮತವಾಲಾ ಎಂಬ ಹಿಂದಿ ಪತ್ರಿಕೆಯಲ್ಲಿ ವಿಶ್ವಪ್ರೇಮ ಎಂಬ ಶೀರ್ಷಿಕೆಯಲ್ಲಿ ಲೇಖನವೊಂದು ಪ್ರಕಟವಾಯಿತು. “ಇಡೀ ವಿಶ್ವವನ್ನೇ ಪ್ರೀತಿಸುವ ಅವರನ್ನು ನಾವು ಧೈರ್ಯವಂತ, ವೀರ ಎಂದು ಸಂಬೋಧಿಸಲು ಹಿಂಜರಿಯುವುದಿಲ್ಲ, ಅವರೇ ವೀರ ಸಾವರ್ಕರ್” ಎಂದು ಬರೆಯಲಾಗಿತ್ತು. ಈ ಲೇಖನದ ಲೇಖಕರ ಹೆಸರು ಬಲವಂತ ಸಿಂಗ್ ಎಂದು ಪ್ರಕಟಿಸಲಾಗಿತ್ತು. ಆದರೆ ಅಸಲಿಗೆ ಇದನ್ನು ಗುಪ್ತನಾಮದಲ್ಲಿ ಬರೆದವರು ಭಗತ್ ಸಿಂಗ್. ಭಗತ್ ಸಿಂಗ್, ರಾಜಗುರು, ಸುಖದೇವ್ ಅವರನ್ನು ಗಲ್ಲಿಗೇರಿಸಿದಾಗಲೂ ನೊಂದುಕೊಂಡು ಕವಿತೆ ಬರೆದವರು ಸಾವರ್ಕರ್.

ಕಾರ್ಯಕ್ರಮವೊಂದರಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್‌ ಜತೆಗೆ ವೀರ ಸಾವರ್ಕರ್‌.

ಹಾಂ, ಸುಭಾಷ್ ಮತ್ತು ಸಾವರ್ಕರ್ ಬಗ್ಗೆಯೂ ತಥಾಕಥಿತ ಸೆಕ್ಯೂಲರ್ ವಾದಿಗಳು ಬೇರೆಯದ್ದೇ ಆದ ಕಥೆ ಕಟ್ಟಿದ್ದಾರೆ. ಆದರೆ, ಬೆಳಕಿಗೆ ಬರುತ್ತಿರುವ ವಾಸ್ತವ ಚರಿತ್ರೆ ಏನು ಗೊತ್ತೆ? ಸ್ವತಃ ನೇತಾಜಿ ಸುಭಾಷ್ ಚಂದ್ರ ಬೋಸರಿಗೂ ಸಾವರ್ಕರ್ ಪ್ರೇರಣೆ ನೀಡಿದ್ದರು.

ಸಾವರ್ಕರರನ್ನು ಭೇಟಿ ಮಾಡಿದ ಸುಭಾಷರು ಮಾತನಾಡುತ್ತಿದ್ದಾಗ, ಬ್ರಿಟಿಷರ ವಿರುದ್ಧ ಏನು ಚಟುವಟಿಕೆ ಮಾಡುತ್ತೀರ ಎಂದು ಸಾವರ್ಕರ್ ಪ್ರಶ್ನಿಸಿದರು. ದೇಶದ ಎಲ್ಲ ನಗರಗಳಲ್ಲಿ ಬ್ರಿಟಿಷರು ತಮ್ಮ ಪ್ರತಿಮೆಗಳನ್ನು ಸ್ಥಾಪಿಸಿ ಭಾರತೀಯರ ಗುಲಾಮಗಿರಿಗೆ ಅಧಿಕೃತ ಮುದ್ರೆ ಒತ್ತುತ್ತಿದ್ದಾರೆ. ಇದೆಲ್ಲವನ್ನೂ ನೆಲಸಮ ಮಾಡುತ್ತೇನೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಸಾವರ್ಕರ್, ನೀವು ಹೀಗೆ ಮಾಡಿದರೆ ಬ್ರಿಟಿಷರು ಜೈಲಿಗೆ ಅಟ್ಟುತ್ತಾರೆ. ಅಲ್ಲಿಂದ ಹೊರಬರುವ ವೇಳೆಗೆ ಸಾಕಾಗಿ ಹೋಗುತ್ತದೆ. ನಿಮ್ಮ ಉದ್ದೇಶ ಈಡೇರುವುದಿಲ್ಲ ಎನ್ನುತ್ತಾರೆ. ಹಾಗಾದರೆ ಏನು ಮಾಡಲಿ ಎಂದು ಸುಭಾಷ್ ಕೇಳುತ್ತಾರೆ. ನೀವು ವಿದೇಶಕ್ಕೆ ತೆರಳಿ ಬ್ರಿಟಿಷ್ ಸರ್ಕಾರದ ವಿರುದ್ಧ ಸೈನ್ಯ ಸಂಘಟಿಸಿ ಯುದ್ಧ ಸಾರಿ. ದೇಶದ ಒಳಗಿಂದ ಹಾಗೂ ಹೊರಗಿಂದಲೂ ದಾಳಿಗಳು ನಡೆದರೆ ಬ್ರಿಟಿಷರು ಕಾಲ್ಕೀಳುತ್ತಾರೆ ಎಂಬ ಉಪಾಯ ನೀಡಿದರು. ಇದನ್ನು ಸ್ವೀಕರಿಸಿದ ಸುಭಾಷರು ನಂತರ ಐಎನ್ಎ ಸ್ಥಾಪಿಸಿದರು. ಈ ಮಾತನ್ನು ರೇಡಿಯೋ ಸಂದೇಶದ ಮೂಲಕ ಸ್ವತಃ ಸುಭಾಷರೇ ಹೇಳಿದ್ದಾರೆ!

ಅದು ಭಾರತದಲ್ಲೇ ಇರಲಿ, ದೂರದ ಫ್ರಾನ್ಸ್‌ನಲ್ಲೇ ಇರಲಿ, ವಿಶ್ವದ ವಿವಿಧೆಡೆಯ ಕ್ರಾಂತಿಕಾರಿಗಳು ಒಂದೇ. ಈ ಎಲ್ಲ ಸಮಕಾಲೀನ ಕ್ರಾಂತಿಕಾರಿಗಳ ಮನಗೆದ್ದವರು ಸಾವರ್ಕರ್. ಕ್ರಾಂತಿಕಾರಿಗಳ ರಾಜಕುಮಾರ ಸಾವರ್ಕರ್, ಅವರ ದೇಶಪ್ರೇಮಕ್ಕೆ ಸಿದ್ಧಾಂತ, ಲಿಂಗ, ಪ್ರದೇಶ, ದೇಶದ ಗಡಿಗಳ ವ್ಯತ್ಯಾಸವಿಲ್ಲ.

ಸ್ವಾತಂತ್ರ್ಯ ಪೂರ್ವದ ಕ್ರಾಂತಿಕಾರಿಗಳಲ್ಲೇ ಇಲ್ಲದ ಭಿನ್ನಾಭಿಪ್ರಾಯಗಳನ್ನು ಈಗ ಮೂಡಿಸುವ ಪ್ರಯತ್ನವನ್ನು ಕೆಲವು ಉದಾರವಾದಿಗಳು ಪ್ರಜ್ಞಾಪೂರ್ವಕವಾಗಿ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರನ್ನು ಎತ್ತಿಕಟ್ಟುವ, ಮತ್ತೊಬ್ಬರನ್ನು ಕೀಳಾಗಿ ಕಾಣುವ ರೋಗಪೀಡಿತ ಪ್ರವೃತ್ತಿಯನ್ನು ಬಿತ್ತಲಾರಂಭಿಸಿದ್ದಾರೆ. ಆದರೆ, ಹೊಸ ಪೀಳಿಗೆ ಎಲ್ಲವನ್ನೂ ಸುಲಭವಾಗಿ ಒಪ್ಪುತ್ತಿಲ್ಲ. ನಂಬಿದ ತತ್ತ್ವ ಸಿದ್ಧಾಂತಗಳ ಮೂಗಿನ ನೇರಕ್ಕೆ ಬರೆದಿರುವ ಇತಿಹಾಸದ ನೈಜತೆಯನ್ನು ಒರೆಗಲ್ಲಿಗೆ ಹಚ್ಚುತ್ತಿದ್ದಾರೆ. ಹಾಗಾಗಿಯೇ ಸತ್ಯ ಹೊರಬರಲಾರಂಭಿಸಿದೆ!

ಹಾಗೆ ನೋಡಿದರೆ, ಭಾರತದ ಸ್ವಾತಂತ್ರ್ಯಕ್ಕೆ ಹೋರಾಟ ನಡೆಸಿದ ಕ್ರಾಂತಿಕಾರಿಗಳು ಹಾಗೂ ಮಂದಗಾಮಿಗಳ ಉದ್ದೇಶ ಮತ್ತು ಗುರಿ ಒಂದೇ ಆಗಿತ್ತು. ಇದನ್ನು ಪಡೆಯಲು ಎರಡೂ ಗುಂಪುಗಳು ಸವೆಸಿದ ಮಾರ್ಗ ಬೇರೆ ಬೇರೆಯದೇ ಆಗಿತ್ತು. ಆದರೆ, ಈ ಎರಡೂ ಗುಂಪುಗಳ ಪರಸ್ಪರರ ನಡುವಿನ ಗೌರವ ಕಡಿಮೆಯಾಗಿರಲಿಲ್ಲ. ಹಾಗಾಗಿ, ಆ ಎರಡೂ ಗುಂಪುಗಳನ್ನು ಗೌರವಿಸುತ್ತಲೇ, ಸ್ವಾತಂತ್ರ್ಯದ ಪೂರ್ವಸೂರಿಗಳನ್ನು ನಾವು ನೆನೆಯಬೇಕಿದೆ.

(ಗ್ರಂಥ ಋಣ: ಆತ್ಮಾಹುತಿ- ಶಿವರಾಮು, 1857ರ ನಿಂದಕರು- ನೀ.ರ. ವರ್ಹಾಡಪಾಂಡೆ, ಸಾವರ್ಕರ್ ಬಂಧನ ಫ್ರಾನ್ಸ್ ಸ್ಪಂದನ: (ಫ್ರೆಂಚ್) ಜೀನ್ ಲಾಂಗೆಟ್)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Saanya Iyer
ಫ್ಯಾಷನ್13 mins ago

Saanya Iyer: ಗ್ರ್ಯಾಂಡ್‌ ಲೆಹೆಂಗಾದಲ್ಲಿ ರಾಣಿಯಂತೆ ಕಂಗೊಳಿಸಿದ ನಟಿ ಸಾನ್ಯಾ ಅಯ್ಯರ್‌

Bharti Singh admitted to hospital
ಬಾಲಿವುಡ್18 mins ago

Bharti Singh: ಬಾಲಿವುಡ್‌ ಖ್ಯಾತ ನಿರೂಪಕಿ ಆಸ್ಪತ್ರೆಗೆ ದಾಖಲು

RCB vs GT
ಕ್ರೀಡೆ28 mins ago

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

Kidnap case in Bengaluru
ಬೆಂಗಳೂರು30 mins ago

Kidnap Case : ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Costly wedding gift
ವಾಣಿಜ್ಯ38 mins ago

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

kareena kapoor out from yash starrer toxic
ಬಾಲಿವುಡ್48 mins ago

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Shrirasthu Shubhamasthu serial will be end
ಕಿರುತೆರೆ49 mins ago

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Stock Market
ದೇಶ52 mins ago

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Bengaluru Rains
ಮಳೆ60 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Smrithi Irani
ರಾಜಕೀಯ1 hour ago

Smirthi Irani: ಅಮೇಥಿಯಲ್ಲಿ ಕಾಂಗ್ರೆಸ್‌ ಸೋಲನ್ನು ಒಪ್ಪಿಕೊಂಡಿದೆ; ಸ್ಮೃತಿ ಇರಾನಿ ವ್ಯಂಗ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ60 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ12 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ22 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌