ಮುರುಘಾಶ್ರೀ ಪ್ರಕರಣ | ಶ್ರೀಗಳನ್ನು ಕಟಕಟೆಯಲ್ಲಿ ನಿಲ್ಲಿಸಿದ ಜಡ್ಜ್‌, 4 ದಿನ ಕಸ್ಟಡಿ, ಆಸ್ಪತ್ರೆ ಹೈಡ್ರಾಮಾಕ್ಕೆ ತೆರೆ - Vistara News

ಕರ್ನಾಟಕ

ಮುರುಘಾಶ್ರೀ ಪ್ರಕರಣ | ಶ್ರೀಗಳನ್ನು ಕಟಕಟೆಯಲ್ಲಿ ನಿಲ್ಲಿಸಿದ ಜಡ್ಜ್‌, 4 ದಿನ ಕಸ್ಟಡಿ, ಆಸ್ಪತ್ರೆ ಹೈಡ್ರಾಮಾಕ್ಕೆ ತೆರೆ

ಮುರುಘಾ ಶ್ರೀಗಳನ್ನು ತನಗೆ ತಿಳಿಸದೆ ಆಸ್ಪತ್ರೆಗೆ ದಾಖಲಿಸಿದ್ದ ಕೋರ್ಟ್‌ ಗರಂ ಆಗಿದೆ. ತನ್ನ ಮುಂದೆ ತಕ್ಷಣ ಹಾಜರುಪಡಿಸುವಂತೆ ಸೂಚಿಸಿದ ನ್ಯಾಯಾಧೀಶರು ಶ್ರೀಗಳನ್ನು ಕಟಕಟೆಯಲ್ಲಿ ನಿಲ್ಲಿಸಿದ್ದಲ್ಲದೆ ನಾಲ್ಕು ದಿನಗಳ ಪೊಲೀಸ್‌ ಕಸ್ಟಡಿಗೆ ಕಳುಹಿಸಿದೆ.

VISTARANEWS.COM


on

murugha swameeji court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಗುರುವಾರ ರಾತ್ರಿ ಬಂಧಿತರಾದ ಇಲ್ಲಿನ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾಶರಣರನ್ನು ನಾಲ್ಕು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಅಂದರೆ ಅವರು ಸೆ.೫ರವರೆಗೆ ಪೊಲೀಸ್‌ ಕಸ್ಟಡಿಯಲ್ಲಿ ಇರಬೇಕಾಗುತ್ತದೆ. ಶ್ರೀಗಳನ್ನು ಅನಾರೋಗ್ಯದ ನೆಪ ಒಡ್ಡಿ ತನಗೆ ತಿಳಿಸದೆಯೇ ಆಸ್ಪತ್ರೆಗೆ ದಾಖಲಿಸಿದ್ದರಿಂದ ನ್ಯಾಯಾಧೀಶರು ಜೈಲು ಅಧೀಕ್ಷಕರ ವಿರುದ್ಧ ಕೋರ್ಟ್‌ ಗರಂ ಆದರು. ಈ ನಡುವೆ ವಿಚಾರಣೆ ವೇಳೆ ಶ್ರೀಗಳನ್ನು ಕಟಕಟೆಯಲ್ಲಿ ನಿಲ್ಲಿಸಿದ ಘಟನೆಯೂ ನಡೆಯಿತು.

ಮಠಕ್ಕೆ ಸೇರಿದ ಹೈಸ್ಕೂಲ್‌ನಲ್ಲಿ ಕಲಿಯುತ್ತಿದ್ದ, ಮಠದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರುಘಾಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದಾಗ ಅವರಿಗೆ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ನಡುವೆ, ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಅವರು ತಮಗೆ ಅಗತ್ಯವಿದ್ದು ಪೊಲೀಸ್‌ ಕಸ್ಟಡಿಗೆ ಒಪ್ಪಿಸುವಂತೆ ಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ಈ ಮಧ್ಯೆ ಕಾರಾಗೃಹದ ಅಧಿಕಾರಿಗಳು ಶ್ರೀಗಳನ್ನು ಕೋರ್ಟ್‌ನ ಗಮನಕ್ಕೆ ತಾರದೆ ಆಸ್ಪತ್ರೆಗೆ ದಾಖಲಿಸಿದ್ದು ನ್ಯಾಯಾಲಯವನ್ನು ಕೆರಳಿಸಿದ್ದು, ಕೂಡಲೇ ಅವರನ್ನು ತನ್ನ ಮುಂದೆ ಹಾಜರುಪಡಿಸುವಂತೆ ಸೂಚಿಸಿತ್ತು. ಹಾಜರುಪಡಿಸಿದ ವೇಳೆ ಅವರನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಧೀಶರು ಆದೇಶಿಸಿದರು. 2ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶೆ ಕೋಮಲಾ ಅವರು ಈ ಆದೇಶ ನೀಡಿದ್ದಾರೆ.

ಆಸ್ಪತ್ರೆ ಡ್ರಾಮಾಕ್ಕೆ ಗರಂ ಆದ ನ್ಯಾಯಾಧೀಶರು
ಗುರುವಾರ ರಾತ್ರಿ ೧೦ ಗಂಟೆಯ ಹೊತ್ತಿಗೆ ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಚಿತ್ರದುರ್ಗದಿಂದ ೩೦ ಕಿ.ಮೀ. ದೂರದ ಚಳ್ಳಕೆರೆಯ ಡಿವೈಎಸ್‌ಪಿ ಕಚೇರಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ವಿಚಾರಣೆ ನಡೆಸಿದ್ದರು. ನಂತರ ರಾತ್ರಿ ೨ ಗಂಟೆಗೆ ನ್ಯಾಯಾಧೀಶೆ ಕೋಮಲಾ ಅವರ ಮನೆಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ರಾತ್ರಿಯೇ ಅವರನ್ನು ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗಿತ್ತು.

ಈ ನಡುವೆ ಮುಂಜಾನೆ ೯ ಗಂಟೆಯ ಹೊತ್ತಿಗೆ ಶ್ರೀಗಳಿಗೆ ಎದೆ ನೋವು ಕಾಣಿಸಿಕೊಂಡಿದೆ ಎಂದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆರೋಗ್ಯ ತಪಾಸಣೆ ವೇಳೆ ಅವರಿಗೆ ತೀವ್ರ ಸಮಸ್ಯೆ ಇದೆ ಎಂದು ಅಂದಾಜಿಸಿದ ವೈದ್ಯರು ಅವರನ್ನು ತೀವ್ರ ನಿಗಾ ಘಟಕ (ಐಸಿಯು)ಕ್ಕೆ ಸ್ಥಳಾಂತರ ಮಾಡಿದರು. ಇದರ ನಡುವೆಯೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಕರೆದೊಯ್ಯಲಾಗುತ್ತದೆ ಎಂಬ ಸುದ್ದಿ ಹರಡಿತು. ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವುದೇ ಅಥವಾ ಏರ್‌ಲಿಫ್ಟ್‌ ಮಾಡುವುದೇ ಎಂಬ ಚರ್ಚೆ ಜೋರಾಯಿತು. ಇಷ್ಟಾಗುವಾಗ ಬೆಂಗಳೂರಿನ ಜಯದೇವ ಸಂಸ್ಥೆ ಸ್ಪಷ್ಟೀಕರಣವೊಂದನ್ನು ನೀಡಿ ಶ್ರೀಗಳನ್ನು ಇಲ್ಲಿಗೆ ಕರೆ ತರಲಾಗುತ್ತಿಲ್ಲ. ತಮ್ಮನ್ನು ಯಾರೂ ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಇಷ್ಟೆಲ್ಲ ಹೈಡ್ರಾಮಾಗಳನ್ನು ಗಮನಿಸಿದ ೨ನೇ ಸತ್ರ ಮತ್ತು ಅಪರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾಗಿರುವ ಕೋಮಲಾ ಅವರು ಕಾರಾಗೃಹದ ಅಧೀಕ್ಷಕರಾದ ಎಂ.ಎಂ. ಮರಕಟ್ಟಿ ಅವರಿಗೆ ಮೆಮೊ ನೀಡಿದರು.
ʻʻರಾತ್ರಿ ೨ ಗಂಟೆಗೆ ನನ್ನನ್ನು ಎಬ್ಬಿಸಿದ್ದೀರಿ. ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ನೋಡಿದರೆ ಆಸ್ಪತ್ರೆಗೆ ಒಯ್ದಿದ್ದೀರಿ. ಬೇರೆ ಕಡೆಗೆ ಶಿಫ್ಟ್‌ ಮಾಡುವ ಮಾತೂ ಕೇಳಿಬರುತ್ತಿದೆ. ಏನಿದು? ಆಸ್ಪತ್ರೆಗೆ ಶಿಫ್ಟ್‌ ಮಾಡುವಾಗ ಕೋರ್ಟ್‌ಗೆ ಯಾಕೆ ತಿಳಿಸಿಲ್ಲʼʼ ಎಂದು ಗರಂ ಆದರು. ಆಗ ಜೈಲು ಅಧೀಕ್ಷಕರು ತುರ್ತು ಆರೋಗ್ಯ ಪರಿಸ್ಥಿತಿಯ ಕಾರಣದಿಂದ ಹೀಗೆ ಮಾಡಲಾಯಿತು ಎಂದು ವಿವರಿಸಿದರು. ಆದರೆ, ಅವರ ವಿವರಣೆಯನ್ನು ಕೇಳಲು ಒಪ್ಪದ ನ್ಯಾಯಾಧೀಶರು ಕೂಡಲೇ ತನ್ನ ಮುಂದೆ ಹಾಜರುಪಡಿಸುವಂತೆ ಆದೇಶಿಸಿದರು.

ವರ್ಚ್ಯುವಲ್‌ ಹಾಜರಿಗೆ ಒಪ್ಪದ ಕೋರ್ಟ್‌
ಈ ನಡುವೆ ಜೈಲು ಅಧೀಕ್ಷಕರು ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹಾಗಾಗಿ ವರ್ಚ್ಯುವಲ್‌ ಆಗಿ ಹಾಜರುಪಡಿಸುವುದಾಗಿ ಕೇಳಿಕೊಂಡರು. ಆದರೆ, ಕೋರ್ಟ್‌ ಒಪ್ಪಲಿಲ್ಲ. ಬಳಿಕ ಶ್ರೀಗಳನ್ನು ಪೊಲೀಸ್‌ ವಾಹನದಲ್ಲಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಶ್ರೀಗಳು ಸ್ಟ್ರೆಚರ್‌ ಮೂಲಕ ಬಂದು ಬಳಿಕ ಮೆಟ್ಟಿಲು ಹತ್ತಿಕೊಂಡು ಕೋರ್ಟ್‌ಗೆ ಹೋದರು.

ವಿಚಾರಣೆಯ ಸಂದರ್ಭದಲ್ಲಿ ಶ್ರೀಗಳ ಪರ ವಕೀಲರು, ಶ್ರೀಗಳನ್ನು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದಲೇ ಡಿಸ್ಚಾರ್ಜ್‌ ಮಾಡಿಕೊಂಡು ಬಂದಿದ್ದೇವೆ. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹಾಗಾಗಿ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲು ಅವಕಾಶ ನೀಡಬೇಕು ಎಂದು ಕೇಳಿಕೊಂಡರು. ಆದರೆ, ಕೋರ್ಟ್‌ ಇದಕ್ಕೆ ಒಪ್ಪಲಿಲ್ಲ.

ಕಟಕಟೆ ಏರಿದ ಶ್ರೀಗಳು
ಶ್ರೀಗಳು ಪೊಲೀಸ್‌ ವಾಹನದಲ್ಲೇ ಕೋರ್ಟ್‌ಗೆ ಬಂದಿದ್ದಾರೆ. ಮೆಟ್ಟಿಲು ಹತ್ತಿದ್ದಾರೆ. ಹೀಗಾಗಿ ಆರೋಗ್ಯ ಸಮಸ್ಯೆ ತೀವ್ರವಾಗಿದೆ ಎಂದು ಒಪ್ಪಲಾಗದು ಎಂದರು. ಒಂದು ಹಂತದಲ್ಲಿ ಶ್ರೀಗಳನ್ನು ಕಟಕಟೆಯಲ್ಲಿ ಬಂದು ನಿಲ್ಲುವಂತೆ ನ್ಯಾಯಾಧೀಶರು ಆದೇಶಿಸಿದರು. ಆಗ ಶ್ರೀಗಳು ಅತ್ಯಂತ ಬೇಸರದಿಂದ ಕಟಕಟೆ ಏರಿ ನಿಂತರು.

ಈ ವೇಳೆ, ಶ್ರೀಗಳನ್ನು ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಪೊಲೀಸರು ಸಲ್ಲಿಸಿದ ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶರು ಆರೋಪಿ ಸಂಖ್ಯೆ ೧ನ್ನು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು. ಹೀಗಾಗಿ ಶ್ರೀಗಳು ಸೆಪ್ಟೆಂಬರ್‌ ೫ರವರೆಗೆ ಪೊಲೀಸ್‌ ಕಸ್ಟಡಿಯಲ್ಲಿ ಇರಬೇಕಾಗುತ್ತದೆ.

ಈಗ ಹುಟ್ಟಿಕೊಂಡಿರುವ ಮತ್ತೊಂದು ಪ್ರಶ್ನೆ ಎಂದರೆ ಶ್ರೀಗಳನ್ನು ಯಾವ ಪೊಲೀಸ್‌ ಠಾಣೆಯಲ್ಲಿ ಇಟ್ಟುಕೊಳ್ಳುತ್ತಾರೆ, ಜಿಲ್ಲಾ ಕಾರಾಗೃಹದಲ್ಲೇ ಇಟ್ಟುಕೊಳ್ಳುತ್ತಾರಾ? ಅಥವಾ ಅಜ್ಞಾತವಾದ ಬೇರೆ ಜಾಗದಲ್ಲಿ ಇಟ್ಟು ವಿಚಾರಣೆ ನಡೆಸುತ್ತಾರಾ ಎನ್ನುವುದು.

ಇದನ್ನೂ ಓದಿ| ಮುರುಘಾಶ್ರೀ ಪ್ರಕರಣ | ಸುದ್ದಿಯಲ್ಲಿ ಮುರುಘಾ ಮಠ; ಇದರ ಇತಿಹಾಸವೇನು ಗೊತ್ತೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Electric Shock: ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ವಿದ್ಯುತ್‌ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ವ್ಯಕ್ತಿಗಳು ಸುಟ್ಟು ಕರಕಲಾಗಿದ್ದಾರೆ.

VISTARANEWS.COM


on

By

Electric shock Electronic City
Koo

ಬೆಂಗಳೂರು: ಪಲ್ಲಕ್ಕಿ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ (Electric Shock) ಇಬ್ಬರು ದುರ್ಮರಣ ಹೊಂದಿದ್ದಾರೆ . ಈ ದಾರುಣ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ (Electronic City) ಸಮೀಪದ ಗೊಲ್ಲಹಳ್ಳಿಯಲ್ಲಿ (Gollahalli) ನಡೆದಿದೆ. ವೀರಸಂದ್ರ ವಾಸಿ ರಂಗನಾಥ(33), ಯಾರಂಡಹಳ್ಳಿ ವಾಸಿ ಹರಿಬಾಬು(25) ಮೃತ ದುರ್ದೈವಿಗಳು.

ಗೊಲ್ಲಹಳ್ಳಿ ಗ್ರಾಮದ ಜಾತ್ರೆಯಲ್ಲಿ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುವಾಗ ಚಾಲಕನಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಚಾಲಕನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನಿಗೂ ವಿದ್ಯುತ್‌ ಶಾಕ್‌ ಆಗಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿಯಿಂದ ರಕ್ಷಣೆಗೆ ಧಾವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

ಮೈಸೂರಿನಲ್ಲಿ ಕಣ್ಣಿದ್ದು ಕುರುಡಾದ ಸೆಸ್ಕ್ ಸಿಬ್ಬಂದಿ

ಮೈಸೂರಿನಲ್ಲಿ ಸೆಸ್ಕ್ ಸಿಬ್ಬಂದಿ ಕಣ್ಣಿದ್ದು ಕುರುಡಾಗಿದ್ದಾರೆ. ವಿದ್ಯುತ್ ವೈಯರ್ ಮೇಲೆ ಒಣ ಮರ ಬಿದ್ದಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಕಳೆದ 15 ದಿನಗಳ ಹಿಂದೆ ಬಿರುಗಾಳಿ ಸಹಿತ ಸುರಿದ ಮಳೆಗೆ ಮರ ಬಿದ್ದಿದ್ದು, ತೆರವು ಮಾಡುವಲ್ಲಿ ಸೆಸ್ಕ್ ಸಿಬ್ಬಂದಿ ಮೀನಾಮೇಷ ಎಣಿಸುತ್ತಿದ್ದಾರೆ.

ವಾಹನ ಸವಾರರ ಮೇಲೆ ಬಿದ್ದು ಅನಾಹುತ ಸಂಭವಿಸವುದಕ್ಕೂ ಮುನ್ನ ತೆರವು ಮಾಡುತ್ತಾರಾ? ಅಥವಾ ಅನಾಹುತ ಆದಮೇಲೆ ತೆರವು ಮಾಡುತ್ತಾರಾ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿ ಟೋಲ್ ಗೇಟ್‌ನಿಂದ ಪಡುವಾರಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಘಟನೆ ನಡೆದಿದೆ. ಬಿರುಗಾಳಿಗೆ ಒಣ ಮರ ಸಂಪೂರ್ಣ ವಿದ್ಯುತ್ ತಂತಿ ಮೇಲೆ ಬಿದ್ದಿದ್ದರೂ ಯಾರೊಬ್ಬರು ತಲೆ ಕೆಡಿಸಿಕೊಂಡಿಲ್ಲ.

ಇದನ್ನೂ ಓದಿ: Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

Continue Reading

ಪ್ರಮುಖ ಸುದ್ದಿ

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Udupi Pocso case: ವಿದ್ಯಾರ್ಥಿನಿಯರ ಮೇಲೆ ಯುವ ಉದ್ಯಮಿ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ಈ ಬಗ್ಗೆ ಪೋಕ್ಸೊ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.

VISTARANEWS.COM


on

Udupi Pocso case
Koo

ಉಡುಪಿ: ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು (Physical Abuse) ಬೆಳಕಿಗೆ ಬಂದಿದೆ. ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಸೊ ಪ್ರಕರಣ (Udupi Pocso case) ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.

ಉದ್ಯಮಿ ಶ್ರೇಯಸ್ ನಾಯ್ಕ (25) ಆರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆ ದೃಶ್ಯಗಳನ್ನು ಸೆರೆಹಿಡಿದುಕೊಂಡಿದ್ದಾನೆ. ಬಾಲಕಿ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೇ 18 ರಂದು ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್‌ಗಾಗಿ ಬಂಧನಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.

ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಈತನ ಟಾರ್ಗೆಟ್

ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಆರೋಪಿ ಶ್ರೇಯಸ್‌ ಟಾರ್ಗೆಟ್ ಆಗಿದ್ದು, 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ಯವಾಗಿದೆ. ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೊಗಳನ್ನು ಆರೋಪಿ ಸೆರೆಹಿಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯರು, ಯುವತಿಯರ ಜತೆಗಿನ ವಿಡಿಯೊಗಳನ್ನು ಸೆರೆಹಿಡಿದು ತನ್ನ ಲ್ಯಾಪ್‌ಟಾಪ್‌ನಲ್ಲಿ ಆಸಾಮಿ ಇರಿಸಿಕೊಳ್ಳುತ್ತಿದ್ದ.

ಶಾಲೆ, ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ಈ ವಿಕೃತ ಕಾಮಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ನಂತರ ಯುವತಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ.

ಇದನ್ನೂ ಓದಿ | Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

ಆರೋಪಿಯ ಲ್ಯಾಪ್‌ಟಾಪ್‌ ವಶಕ್ಕೆ ಪಡೆದ ಸೈಬರ್ ಪೊಲೀಸ್

ಆರೋಪಿ ಶ್ರೇಯಸ್‌ ಲ್ಯಾಪ್‌ಟಾಪ್‌ ಅನ್ನು ಸೈಬರ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲ್ಯಾಪ್‌ಟಾಪ್‌ಗೆ ಆರೋಪಿ ಪಾಸ್ ವರ್ಡ್ ಇಟ್ಟಿದ್ದು, ಸುಮಾರು 50ಕ್ಕೂ ಅಧಿಕ ವಿಡಿಯೊಗಳು ಇರುವ ಶಂಕೆ ವ್ಯಕ್ತವಾಗಿದೆ. ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಮನೆಯಿಂದ ಲ್ಯಾಪ್‌ಟಾಪ್‌ ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ಶಾಲಾ, ಕಾಲೇಜಿನ 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಶಂಕೆ ವ್ಯಕ್ತವಾಗಿದ್ದು, ಯಾರಾದರೂ ಸಂತ್ರಸ್ತೆಯರಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Continue Reading

Lok Sabha Election 2024

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

Traffic Advisory : ಜೂನ್‌ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಅಂದು ಮತ ಎಣಿಕೆ ನಡೆಯುವ ಕೇಂದ್ರದ ಸುತ್ತಮುತ್ತ ಬೆಂಗಳೂರಿನಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಅದರ ಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Traffic Advisory
Koo

ಬೆಂಗಳೂರು: ಜೂನ್‌ 4ರ ಮಂಗಳವಾರದಂದು ಲೋಕಸಭಾ ಚುನಾವಣೆ 2024ರ (Lok sabha election 2024) ಮತ ಎಣಿಕೆ ನಡೆಯಲಿದೆ. ಹೀಗಾಗಿ ಮತ ಎಣಿಕೆ ನಡೆಯುವ ಕೇಂದ್ರಗಳ ಸುತ್ತಮುತ್ತ ನಿಷೇಧ (Traffic Advisory) ಹೇರಲಾಗಿದೆ. ಜೂ.4 ಬೆಳಗ್ಗೆ 6 ಗಂಟೆಯಿಂದ ಮತ ಎಣಿಕೆ ಮುಗಿಯುವವರೆಗೂ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ. ಬೆಂಗಳೂರಿನ ಸೇಂಟ್‌ ಜೋಸೆಪ್‌ ಕಾಲೇಜು, ಎಸ್ಎಸ್ಎಂಆರ್‌ವಿ ಕಾಲೇಜು ಹಾಗೂ ಮೌಂಟ್ ಕಾರ್ಮೆಲ್ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಸಂಚಾರವನ್ನು (Traffic Advisory) ನಿರ್ಬಂಧಿಸಲಾಗಿದೆ.

ಸೇಂಟ್‌ ಜೋಸೆಫ್‌ ಕಾಲೇಜು ಸುತ್ತಮುತ್ತ ಪಾರ್ಕಿಂಗ್ ನಿಷೇಧ

ವಿಠಲ್‌ ಮಲ್ಯ ರಸ್ತೆಯಲ್ಲಿರುವ ಸೇಂಟ್ ಜೋಸೆಫ್‌ ಕಾಲೇಜಿನ ಸುತ್ತಮುತ್ತಲಿನ ರಸ್ತೆಗಳಲ್ಲಿ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ. ಸಾರ್ವಜನಿಕರು ರಸ್ತೆಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದೇ ಬದಲೀ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಲು ಕೋರಲಾಗಿದೆ. ವಾಹನಗಳ ಪಾರ್ಕಿಂಗ್ ಮಾಡಲು ನಿಷೇಧಿಸಿರುವ ರಸ್ತೆಗಳು ಹೀಗಿವೆ.
-ವಿಠಲ್ ಮಲ್ಯ ರಸ್ತೆ :- ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಚಂಡ್ ಜಂಕ್ಷನ್‌ವರೆಗೆ
-ಆರ್.ಆರ್.ಎಂ.ಆರ್ ರಸ್ತೆ- ರಿಚ್ಚಂಡ್ ಸರ್ಕಲ್‌ನಿಂದ ಹಡ್ರನ್ ಜಂಕ್ಷನ್‌ವರೆಗೆ
-ಎನ್ ಆರ್ ರಸ್ತೆ: ಹಡ್ನನ್ ಸರ್ಕಲ್‌ನಿಂದ ಟೌನ್ ಹಾಲ್ ಜಂಕ್ಷನ್‌ವರೆಗೆ
-ಕೆ ಬಿ ರಸ್ತೆ: ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವೀನ್ಸ್ ಜಂಕ್ಷನ್‌ವರೆಗೆ
-ಕೆ ಜಿ ರಸ್ತೆ ಪೊಲೀಸ್ ಕಾರ್ನರ್ ಜಂಕ್ಷನ್‌ನಿಂದ ಮೈಸೂರು ಬ್ಯಾಂಕ್ ಜಂಕ್ಷನ್‌ವರೆಗೆ
-ನೃಪತುಂಗ ರಸ್ತೆ : ಕೆ ಆರ್ ಜಂಕ್ಷನ್‌ನಿಂದ ಪೊಲೀಸ್ ಕಾರ್ನರ್‌ವರೆಗೆ
-ಕ್ವೀನ್ಸ್ ರಸ್ತೆ: ಬಾಳೇಕುಂದ್ರಿ ಸರ್ಕಲ್‌ನಿಂದ ಸಿ.ಟಿ.ಓ ಸರ್ಕಲ್‌ವರೆಗೆ
-ಸೆಂಟ್ರಲ್‌ ಸ್ಟ್ರೀಟ್‌ ರಸ್ತೆ- ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್‌ ಕುಂಬ್ಳೆ ವೃತ್ತದ ವರೆಗೆ
-ಎಂ.ಜಿ ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್‌ ಜಂಕ್ಷನ್‌ವರೆಗೆ

ಸವಾರರು ವಾಹನಗಳನ್ನು ಪಾರ್ಕಿಂಗ್ ಮಾಡಬೇಕಾದರೆ ಸೇಂಟ್ ಜೋಸೆಫ್ ಕಾಲೇಜು ಮೈದಾನ, ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬಹುದು.

ಜಯನಗರ ಟಿ ಬ್ಲ್ಯಾಕ್‌ ಸಂಚಾರ ನಿರ್ಬಂಧ

ಮೈಕೋಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಲೋಕಸಭೆ ಚುನಾವಣೆ-2024ರ ಮತ ಎಣಿಕೆ ನಡೆಯಲಿದೆ. ಮತ ಎಣಿಕೆಯ ಸ್ಥಳದಲ್ಲಿ ಸೂಕ್ತ ಸಂಚಾರ ಬಂದೋಬಸ್ತ್ ಏರ್ಪಡಿಸುವ ಸಲುವಾಗಿ ಸಂಚಾರ ಮಾರ್ಪಾಡು ಮಾಡಲಾಗಿದೆ.

ಜೂನ್‌ 4 ರಂದು ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಬೆಳಗ್ಗೆ 06 ಗಂಟೆಯಿಂದ ಮತ ಎಣಿಕೆ ಮುಗಿಯುವವರೆಗೆ ಜಯನಗರ ಟಿ ಬ್ಲಾಕ್‌ ನಿರ್ಬಂಧಿಸಲಾಗಿದೆ. 18ನೇ ಮುಖ್ಯ ರಸ್ತೆ ಮತ್ತು 28ನೇ ಮುಖ್ಯ ರಸ್ತೆಯ ಮಧ್ಯದಲ್ಲಿ ಬರುವ 36ನೇ ಕ್ರಾಸ್ ಹಾಗೂ 32ನೇ ಇ ಕ್ರಾಸ್ ರಸ್ತೆ ಮತ್ತು 39ನೇ ಕ್ರಾಸ್ ರಸ್ತೆ ಜಂಕ್ಷನ್ ನಡುವೆ ಬರುವ 26ನೇ ಮುಖ್ಯ ರಸ್ತೆಯನ್ನು ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

-ಈಸ್ಟ್ ಎಂಡ್ ಮುಖ್ಯ ರಸ್ತೆ, 39ನೇ ಕ್ರಾಸ್ ರಸ್ತೆ, 18ನೇ ಮುಖ್ಯ ರಸ್ತೆ, 32ನೇ ಇ ಕ್ರಾಸ್ ರಸ್ತೆಗಳನ್ನು ಬಳಸಬಹುದಾಗಿರುತ್ತದೆ.

ಮೌಂಟ್‌ ಕಾರ್ಮೆಲ್‌ ಕಾಲೇಜು ಸುತ್ತಮುತ್ತ ಸಂಚಾರ ನಿರ್ಬಂಧ

ಬೆಂಗಳೂರಿನ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಕೇಂದ್ರದಲ್ಲಿ ಲೋಕಸಭಾ ಚುನಾವಣೆ 2024ರ ಮತ ಎಣಿಕೆ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಸೇರುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಅರಮನೆ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತಿದೆ.

ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ನಿಂದ ಮಿನುಗುತಾರೆ ಕಲ್ಪನಾ ಜಂಕ್ಷನ್‌ ಹಾಗೂ ಮಿನುಗುತಾರೆ ಕಲ್ಪನಾ ಜಂಕ್ಷನ್‌ನಿಂದ ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ವರೆಗೆ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು

-ಪ್ಯಾಲೇಸ್ ರಸ್ತೆಯಿಂದ ಎಂಸಿಸಿ ಕಾಲೇಜು, ಕಲ್ಪನಾ ಜಂಕ್ಷನ್ ಮತ್ತು ಚಂದ್ರಿಕಾ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು- ಪ್ಯಾಲೇಸ್ ರಸ್ತೆ- ಎಡ ತಿರುವು ಪಡೆದು ಚಕ್ರವರ್ತಿ ಲೇಔಟ್- ಮುಖ್ಯ ಪ್ಯಾಲೇಸ್- ವಸಂತನಗರ ಅಂಡರ್ ಬ್ರಿಡ್ಜ್ ಎಡ ತಿರುವು ಪಡೆದು ಎಂ.ವಿ.ಜಯರಾಮ ರಸ್ತೆ, ಹಳೆ ಉದಯ ಟಿವಿ ಜಂಕ್ಷನ್-ಎಡ ತಿರುವು-ಕಂಟೋನ್ಸೆಂಟ್ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.

ಬಸವೇಶ್ವರ ಜಂಕ್ಷನ್ ಕಡೆಯಿಂದ ಉದಯ ಟಿವಿ ಜಂಕ್ಷನ್ ಮತ್ತು ಜಯಮಹಲ್ ರಸ್ತೆಯ ಕಡೆಗೆ ಸಂಚರಿಸುವವರು ಬಸವೇಶ್ವರ ಜಂಕ್ಷನ್ – ಓಲ್ಡ್ ಹೈಗೌಂಡ್ ಜಂಕ್ಷನ್, ಕಲ್ಪನಾ ಜಂಕ್ಷನ್ ಬಲ ತಿರುವು-ಚಂದ್ರಿಕಾ ಜಂಕ್ಷನ್-ಎಡ ತಿರುವು ಅಯ್ಯಪ್ಪಸ್ವಾಮಿ ಟೆಂಪಲ್ ಉದಯ ಟಿವಿ ಜಂಕ್ಷನ್ ಕಡೆಯಿಂದ ಎಡ ತಿರುವು-ಎಂ ವಿ ಜಯರಾಂ ರಸ್ತೆ, ಅಥವಾ ನೇರ -ಜಯಮಹಲ್ ರಸ್ತೆ ಅಥವಾ ಬಲ ತಿರುವು ರೈಲ್ವೆ ಸ್ಪಷನ್ ರಸ್ತೆ-ಕಂಟೋನ್ಮಂಟ್ ಮೂಲಕ ಫ್ರೀಜರ್ ಟೌನ್ ಅಥವಾ ಕ್ವೀನ್ಸ್‌ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Education News : ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದ್ದು, ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಆದರೆ ನೀಟ್ ಪರೀಕ್ಷೆ ಬಳಿಕವೇ ಎಂಜಿನಿಯರ್ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

VISTARANEWS.COM


on

By

education News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೀಟ್‌ ಪರೀಕ್ಷೆ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಈ ಬಾರಿ ಎಷ್ಟೆಂದು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Electric shock Electronic City
ಬೆಂಗಳೂರು ಗ್ರಾಮಾಂತರ10 mins ago

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Udupi Pocso case
ಪ್ರಮುಖ ಸುದ್ದಿ12 mins ago

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Aaron Jones
ಕ್ರಿಕೆಟ್28 mins ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್32 mins ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 202440 mins ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

education News
ಬೆಂಗಳೂರು52 mins ago

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Sushant Singh Rajput's sister cries as she visits Kedarnath
ಬಾಲಿವುಡ್57 mins ago

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

PM Narendra Modi
ದೇಶ1 hour ago

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

Muthyala Maduvu Waterfalls
ಪ್ರವಾಸ1 hour ago

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

CAN vs USA
ಕ್ರೀಡೆ1 hour ago

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು21 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌