Ghulam Nabi Azad | ಜಮ್ಮು ಕಾಶ್ಮೀರಕ್ಕೆ ಹೊರಟ ಗುಲಾಂ ನಬಿ ಆಜಾದ್​​; ಇಂದು ಹೊಸ ಪಕ್ಷ ಘೋಷಣೆ - Vistara News

ದೇಶ

Ghulam Nabi Azad | ಜಮ್ಮು ಕಾಶ್ಮೀರಕ್ಕೆ ಹೊರಟ ಗುಲಾಂ ನಬಿ ಆಜಾದ್​​; ಇಂದು ಹೊಸ ಪಕ್ಷ ಘೋಷಣೆ

ಗುಲಾಂ ನಬಿ ಆಜಾದ್ ಈಗಾಗಲೇ ದೆಹಲಿಯಿಂದ ಹೊರಟಿದ್ದು ಬೆಳಗ್ಗೆ 11ಗಂಟೆ ಹೊತ್ತಿಗೆ ಜಮ್ಮು ಕಾಶ್ಮೀರ ತಲುಪಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

VISTARANEWS.COM


on

Ghulam Nabi Azad set to begin fresh political journey in Jammu Kashmir
ಗುಲಾಂ ನವಿ ಆಜಾದ್​
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಂಗ್ರೆಸ್​ ತೊರೆದ ಗುಲಾಂ ನಬಿ ಆಜಾದ್​ ಇಂದು (ಸೆಪ್ಟೆಂಬರ್​ 4) ಇಂದು ತಮ್ಮ ರಾಜಕೀಯ ಜೀವನದ ಹೊಸ ಅಧ್ಯಾಯ ಪ್ರಾರಂಭಿಸಲಿದ್ದಾರೆ. ತವರು ರಾಜ್ಯ ಜಮ್ಮು-ಕಾಶ್ಮೀರದಲ್ಲಿ ತಮ್ಮ ಹೊಸ ರಾಜಕೀಯ ಪಕ್ಷದ ಮೊದಲ ಘಟಕವನ್ನು ಆರಂಭ ಮಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಜಮ್ಮು-ಕಾಶ್ಮೀರ ತಲುಪಲಿರುವ ಆಜಾದ್​ರನ್ನು ಅವರ ಬೆಂಬಲಿಗರು ಏರ್​ಪೋರ್ಟ್​​ನಲ್ಲಿಯೇ ಸ್ವಾಗತಿಸಲಿದ್ದಾರೆ. ಅಲ್ಲಿಂದ ನೇರವಾಗಿ ಸೈನಿಕ್ ಕಾಲೋನಿಗೆ ತೆರಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು. ಆಜಾದ್​ ನಡೆಸಲಿರುವ ಱಲಿಯಲ್ಲಿ ಅಂದಾಜು 20 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಗುಲಾಂ ನಬಿ ಆಜಾದ್​ ಅವರು ಕಾಂಗ್ರೆಸ್ ಜತೆಗಿನ ಬಾಂಧವ್ಯವನ್ನು ಆಗಸ್ಟ್​ 26ರಂದು ಕಳಚಿಕೊಂಡಿದ್ದಾರೆ. ಇಡೀ ಪಕ್ಷ ಸಂಪೂರ್ಣವಾಗಿ ನಾಶವಾಗಿದೆ. ಇದಕ್ಕೆ ನೇರ ಹೊಣೆ ರಾಹುಲ್​ ಗಾಂಧಿ ಎಂದು ಆರೋಪ ಮಾಡಿ, ರಾಜೀನಾಮೆ ಕೊಟ್ಟಿದ್ದಾರೆ. ಸೋನಿಯಾ ಗಾಂಧಿಗೆ ಐದು ಪುಟಗಳ ರಾಜೀನಾಮೆ ಪತ್ರ ಸಲ್ಲಿಸಿ, ‘ಇಂದು ಕಾಂಗ್ರೆಸ್​ ಅಧಃಪತನಕ್ಕೆ ಇಳಿದಿದ್ದು ನಿಮ್ಮ ಪುತ್ರನಿಂದಲೇ’ ಎಂಬುದನ್ನು ನೇರವಾಗಿಯೇ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್​​ಗೆ ಪದೇಪದೆ ಹೊಡೆತ ಬೀಳುತ್ತಿದೆ. ಗಣ್ಯರು, ಹೆಸರು ಮಾತಿನ ನಾಯಕರೇ ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ಕಪಿಲ್ ಸಿಬಲ್​, ಅಶ್ವನಿ ಕುಮಾರ್​ ಮತ್ತಿತರ ಪ್ರಮುಖ ನಾಯಕರು ರಾಜೀನಾಮೆ ಕೊಟ್ಟಿದ್ದಕ್ಕಿಂತಲೂ ಈ ಬಾರಿ ಗುಲಾಂ ನಬಿ ಆಜಾದ್​ ಹೊರಟಿದ್ದು ಕೈಗೆ ಜಾಸ್ತಿ ಆಘಾತ ಕೊಟ್ಟಿದೆ.

ಡಿಎನ್​ಎ ಬದಲಾಗದು !
ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್​​ಗೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಆ ಪಕ್ಷದ ನಾಯಕ ಜೈರಾಮ್​ ರಮೇಶ್​ ತೀವ್ರವಾಗಿ ಟೀಕಿಸಿದ್ದರು. ಟ್ವೀಟ್​ ಮಾಡಿದ್ದ ಅವರು, ‘ಆಜಾದ್ ಅವರ ಡಿಎನ್​ಎ ಮೋದಿ ಫೈಡ್​ (Modi Fied) ಆಗಿದೆ’ ಎಂದು ಹೇಳಿದ್ದರು. ಅದಕ್ಕೆ ಶನಿವಾರ (ಸೆಪ್ಟೆಂಬರ್​ 3) ತಿರುಗೇಟು ಕೊಟ್ಟ ಗುಲಾಂ ನಬಿ ಆಜಾದ್​ ‘ಪ್ರತಿಪಕ್ಷಗಳ ನಾಯಕರನ್ನು ಭೇಟಿಯಾಗಬಾರದು ಎಂಬ ನಿಯಮವಿಲ್ಲ. ಹಾಗೇ, ಮತ್ತೊಂದು ಪಕ್ಷದ ರಾಜಕೀಯ ನಾಯಕರನ್ನು ಭೇಟಿ ಮಾಡಿದಾಕ್ಷಣ ನಮ್ಮ ಡಿಎನ್​ಎ ಬದಲಾಗುವುದಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghulam Nabi Azad | ಗುಲಾಂ ನಬಿಗೆ ಬೆಂಬಲಿಸಿ ಜಮ್ಮುವಿನಲ್ಲಿ 20 ನಾಯಕರು ಕಾಂಗ್ರೆಸ್‌ಗೆ ವಿದಾಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

ಜಮೀನಿನಲ್ಲಿ ಕೆಲಸ ಮಾಡಲು ನಿರಾಕರಿಸಿದ ಮಹಿಳೆಯ ಮೇಲೆ ಹಲ್ಲೆ; ಖಾಸಗಿ ಅಂಗಕ್ಕೆ ಖಾರದ ಪುಡಿ ಎರಚಿ ವಿಕೃತಿ ಮೆರೆದ ಸಂಬಂಧಿಕರು

Viral News: 27 ವರ್ಷದ ಚೆಂಚು ಬುಡಕಟ್ಟು ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಅವರ ಖಾಸಗಿ ಅಂಗಗಳಿಗೆ ಮೆಣಸಿನ ಹುಡಿ ಎರಚಿ ವಿಕೃತಿ ಮೆರೆದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಈ ಅಮಾನುಷ ಘಟನೆ ಜೂನ್ 8ರಂದು ನಡೆದಿದ್ದು, ತಡವಾಗಿ ಅಂದರೆ ಜೂನ್ 19ರಂದು ಪೊಲೀಸರ ಗಮನಕ್ಕೆ ಬಂದಿದೆ. ಜೂನ್ 20ರಂದು ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ.

VISTARANEWS.COM


on

Viral News
Koo

ಹೈದರಾಬಾದ್‌: ತೆಲಂಗಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, 27 ವರ್ಷದ ಚೆಂಚು ಬುಡಕಟ್ಟು ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಅವರ ಖಾಸಗಿ ಅಂಗಗಳಿಗೆ ಮೆಣಸಿನ ಹುಡಿ ಎರಚಿ ವಿಕೃತಿ ಮೆರೆಯಲಾಗಿದೆ. ಹೈದರಾಬಾದ್‌ನಿಂದ ಸುಮಾರು 130 ಕಿ.ಮೀ. ದೂರದಲ್ಲಿರುವ ನಾಗರ್‌ಕರ್ನೂಲ್‌ (Nagarkurnool)ನಲ್ಲಿ ಈ ಅಮಾನುಷ ಘಟನೆ ನಡೆದಿದ್ದು, ಸದ್ಯ ಮಹಿಳೆ ನಿಜಾಮ್‌ನ ಆಸ್ಪತ್ರೆ (NIMS)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕಾ (Mallu Bhatti Vikramarka) ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು (Viral News).

ಜೂನ್‌ 8ರಂದು ನಡೆದಿದ್ದ ಘಟನೆ

ಈ ಅಮಾನುಷ ಘಟನೆ ಜೂನ್ 8ರಂದು ನಡೆದಿದ್ದು, ತಡವಾಗಿ ಅಂದರೆ ಜೂನ್ 19ರಂದು ಪೊಲೀಸರ ಗಮನಕ್ಕೆ ಬಂದಿದೆ. ಜೂನ್ 20ರಂದು ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಲಿಂಗಸ್ವಾಮಿ, ಲಕ್ಷ್ಮೀ, ಬಂಡಿ ವೆಂಕಟೇಶ್ ಮತ್ತು ಬಂಡಿ ಶಿವಮ್ಮ ಬಂಧಿತರು. ಅಚ್ಚರಿ ಎಂದರೆ ಲಕ್ಷ್ಮೀ ಮತ್ತು ಲಿಂಗಸ್ವಾಮಿ ಸಂತ್ರಸ್ತೆಯ ಸಹೋದರಿ ಮತ್ತು ಬಾವ (ಸಹೋದರಿಯ ಪತಿ). ಸಂತ್ರಸ್ತೆ ಕೆಲಸ ಮಾಡುತ್ತಿದ್ದ ಜಾಗದ ಮಾಲೀಕ ಬಂಡಿ ವೆಂಕಟೇಶ್ ಸೂಚನೆ ಮೇರೆಗೆ ಅವರು ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾನವೀಯತೆ ಮರೆತು ಹಲ್ಲೆ

ಜೂನ್‌ 8ರಂದು ಆರೋಪಿಗಳು ಮಹಿಳೆ ಮೇಲೆ ದಾಳಿ ನಡೆಸಿದರು. ದೊಣ್ಣೆಯಿಂದ ಮನಸೋಇಚ್ಛೆ ಧಳಿಸಿದ ಆರೋಪಿಗಳು ಬಳಿಕ ಮಹಿಳೆ ಕಣ್ಣು, ಮುಖ, ಖಾಸಗಿ ಅಂಗಗಳಿಗೆ ಖಾರದ ಪುಡಿ ಎರಚಿ ವಿಕೃತಿ ಮೆರೆದಿದ್ದಾರೆ. ಅಲ್ಲದೆ ಡೀಸೆಲ್‌ ಎರಚಿ ಅವರ ಮೇಲೆ ಬೆಂಕಿ ಹಚ್ಚಿದ್ದಾರೆ. ಬಳಿಕ ಕೂಡಿಟ್ಟಿದ್ದಾರೆ. ಸುಮಾರು 11 ದಿನ ಮಹಿಳೆ ನರಕಯಾತನೆ ಅನುಭವಿಸಿದ್ದಾರೆ.

ಕೊನೆಗೆ ಜೂನ್‌ 19ರಂದು ಊರವರ ಸಹಾಯದಿಂದ ಮಹಿಳೆಯನ್ನು ರಕ್ಷಿಸಲಾಗಿದೆ. ಪೊಲೀಸರು ಕೂಡಲೇ ಮಹಿಳೆಯನನು ಆಸ್ಪತ್ರೆಗೆ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರಣವೇನು?

ಘಟನೆ ಬಗ್ಗೆ ಮಾಹಿತಿ ನೀಡಿದ ಪೊಲೀಸರು ದಾಳಿ ಹಿಂದಿನ ಕಾರಣವನ್ನು ವಿವರಿಸಿದ್ದಾರೆ. ಮಹಿಳೆ ಮತ್ತು ಆಕೆಯ ಸಹೋದರಿ ಕುಟುಂಬದ ನಡುವೆ ಹಳೆ ವೈಶಮ್ಯವಿತ್ತು. ಈ ಮಧ್ಯೆ ಮಹಿಳೆ ಸ್ಥಳದ ಮಾಲೀಕ ಬಂಡಿ ವೆಂಕಟೇಶ್‌ ಬಳಿಯಿಂದ ಸಾಲ ಪಡೆದುಕೊಂಡಿದ್ದರು. ಸಾಲ ತೀರಿಸಲು ಆತನ ಜಮೀನಿನಲ್ಲಿ ಕೂಲಿ ಕೆಲಸ ಮಾಡಬೇಕು ಎನ್ನುವ ಒಪ್ಪಂದ ನಡೆದಿತ್ತು. ಆದರೆ ಸಂತ್ರಸ್ತೆ ಸಹೋದರಿಯೊಂದಿಗಿನ ಮನಸ್ತಾಪದಿಂದ ಕೆಲಸಕ್ಕೆ ಹೋಗಿರಲಿಲ್ಲ. ಹೀಗಾಗಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಒಂಟಿ ಮಹಿಳೆ ಮೇಲೆ ಪುರುಷರ ಗುಂಪಿನಿಂದ ಅಮಾನುಷ ಹಲ್ಲೆ; ಸಹಾಯಕ್ಕೆ ಬದಲು ಮೊಬೈಲ್‌ ಚಿತ್ರೀಕರಣ!

ಸದ್ಯ ಆಸ್ಪತ್ರೆಗೆ ಭೇಟಿ ನೀಡಿದ ಮಲ್ಲು ಭಟ್ಟಿ ವಿಕ್ರಮಾರ್ಕಾ ಅವರು, ಸಂತ್ರಸ್ತೆ ಚೇತರಿಸಿಕೊಳ್ಳುವವರೆಗೆ ಎಲ್ಲ ಚಿಕಿತ್ಸೆಯ ವೆಚ್ಚಗಳನ್ನು ರಾಜ್ಯ ಸರ್ಕಾರ ಭರಿಸುತ್ತದೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ ಮಹಿಳೆ ಸ್ವಂತ ಮನೆ ಹೊಂದಿಲ್ಲದಿದ್ದರೆ ಸರ್ಕಾರವು ಇಂದಿರಮ್ಮ ವಸತಿ ಯೋಜನೆಯಡಿ ಮನೆಯನ್ನು ಒದಗಿಸಲಿದೆ ಎಂದು ಹೇಳಿದ್ದಾರೆ. ಜತೆಗೆ ಮಕ್ಕಳಿಗೆ ಸರ್ಕಾರಿ ಸಮಾಜ ಕಲ್ಯಾಣ ಶಾಲೆಯಲ್ಲಿ ಶಿಕ್ಷಣ ಮತ್ತು ಕೃಷಿಗಾಗಿ ಭೂಮಿಯನ್ನು ನೀಡುವುದಾಗಿ ತಿಳಿಸಿದ್ದಾರೆ.

Continue Reading

ದೇಶ

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

LeT Associate killed: ಕೆಲವು ದಿನಗಳ ಹಿಂದೆಯಷ್ಟೇ ಅನಾಮಧೇಯ ದಾಳಿಕೋರರು ಮುಜಾಫರ್‌ಬಾದ್‌ನಲ್ಲಿ ಇದ್ರಿಸ್‌ ಮೇಲೆ ವಿಷಪೂರಿತ ಸೂಜಿಯಿಂದ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡ ಪರಿಣಾಮವಾಗಿ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.

VISTARANEWS.COM


on

LeT Associate killed
Koo

ಹೊಸದಿಲ್ಲಿ: ಕುಖ್ಯಾತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT Associate killed) ಯೊಂದಿಗೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್‌(Qari Idris) ಅನುಮಾನಾಸ್ಪದ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಖ್ವಾರಿ ಇದ್ರಿಸ್‌ ಅಲಿಯಾಸ್ ಘಾಜಿ ಇದ್ರಿಸ್ ಎಂದೂ ಕರೆಯಲ್ಪಡುವ ಇದ್ರಿಸ್, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (PoJK) ಕೋಟ್ಲಿ-ಮಿರ್‌ಪುರ್ ವಿಭಾಗದಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಅನಾಮಧೇಯ ದಾಳಿಕೋರರು ಮುಜಾಫರ್‌ಬಾದ್‌ನಲ್ಲಿ ಇದ್ರಿಸ್‌ ಮೇಲೆ ವಿಷಪೂರಿತ ಸೂಜಿಯಿಂದ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡ ಪರಿಣಾಮವಾಗಿ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಖ್ವಾರಿ ಇದ್ರಿಸ್‌ ಪ್ರದೇಶದಾದ್ಯಂತ ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕೆ ಹೆಸರುವಾಸಿಯಾದ ಲಷ್ಕರ್-ಎ-ತೈಬಾದೊಂದಿಗೆ ದೀರ್ಘಕಾಲದ ಒಡನಾಟವನ್ನು ಹೊಂದಿರುವ ತೀವ್ರಗಾಮಿ ಬೋಧಕರಾಗಿದ್ದ. ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಭಯೋತ್ಪಾದಕ ಬಣಗಳ ನಡುವೆ ನಡೆಯುತ್ತಿರುವ ಸಂಘರ್ಷದ ಕಾರಣಗಳಿಂದಾಗಿದೆ ಇದ್ರಿಸ್‌ ಹತ್ಯೆ ಯಾಗಿದೆ ಎಂದು ಹಲವರು ಶಂಕಿಸಿದ್ದಾರೆ.ಕೆಲವು ದಿನಗಳ ಹಿಂದೆಯಷ್ಟೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮಾಜಿ ಸದಸ್ಯ, ಜಮಾತ್-ಇ-ಇಸ್ಲಾಮಿ J&K ನಾಯಕ ಮತ್ತು ಹುರಿಯತ್ ಚಳವಳಿಯ ಪ್ರಮುಖ ವ್ಯಕ್ತಿ ಮೌಲಾನಾ ಗುಲಾಂ ನಬಿ ನೌಶ್ರಿ ಕೂಡ ನಿಗೂಢವಾಗಿ ಸಾವನ್ನಪ್ಪಿದ್ದ.

ಕಳೆದ ವಾರ, ಪಾಕಿಸ್ತಾನ ಪಂಜಾಬ್‌ನ ಝೀಲಂ ಪ್ರದೇಶದ ಲಿಲ್ಲಾ ಇಂಟರ್‌ಚೇಂಜ್‌ನಲ್ಲಿ ಪಾಕಿಸ್ತಾನದ ನಿವೃತ್ತ ಸೇನಾ ಬ್ರಿಗೇಡಿಯರ್ ಅಮೀರ್ ಹಮ್ಜಾನನ್ನು ಅಪರಿಚಿತ ಬಂದೂಕುಧಾರಿಗಳು ಮಾರಣಾಂತಿಕವಾಗಿ ಹೊಡೆದುರುಳಿಸಿದ್ದರು. ಬ್ರಿಗೇಡಿಯರ್ ಹಮ್ಜಾ ತನ್ನ ಪತ್ನಿ ಮತ್ತು ಮಗಳೊಂದಿಗೆ ಪ್ರಯಾಣಿಸುತ್ತಿದ್ದಾಗ ನಡೆದ ದಾಳಿಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

Continue Reading

ಕರ್ನಾಟಕ

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

Udhayanidhi Stalin: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇಂದು (ಜೂನ್‌ 25) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಉದಯನಿಧಿ ಸ್ಟಾಲಿನ್ ಕಳೆದ ವರ್ಷ ನೀಡಿದ್ದ ಹೇಳಿಕೆ ಸಂಬಂಧ ಪರಮೇಶ್ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

VISTARANEWS.COM


on

Udhayanidhi Stalin
Koo

ಬೆಂಗಳೂರು: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇಂದು (ಜೂನ್‌ 25) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಉದಯನಿಧಿ ಸ್ಟಾಲಿನ್ ಕಳೆದ ವರ್ಷ ನೀಡಿದ್ದ ಹೇಳಿಕೆ ಸಂಬಂಧ ಪರಮೇಶ್ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕೋರ್ಟ್‌ ಸಮನ್ಸ್ ಜಾರಿ ಮಾಡಿತ್ತು. ಹೀಗಾಗಿ ಉದಯನಿಧಿ ಸ್ಟಾಲಿನ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಉದಯನಿಧಿ ಸ್ಟಾಲಿನ್ ಆಗಮನದ ಹಿನ್ನೆಲೆಯಲ್ಲಿ ಕೋರ್ಟ್‌ ಆವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೂವರು ಇನ್ಸ್‌ಪೆಕ್ಟರ್‌ ಸೇರಿದಂತೆ 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಏನಿದು ವಿವಾದ?

ತಮಿಳುನಾಡಿನ ಸಿಎಂ ಎಂ.ಕೆ.‌ ಸ್ಟಾಲಿನ್ ಪುತ್ರ ಹಾಗೂ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್‌ 2023ರ ಸೆ. 4ರಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.

ಉದಯನಿಧಿ ಸ್ಟಾಲಿನ್‌ ಅವರು ಈ ಹೇಳಿಕೆ ನೀಡಿದ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು. ಬಿಜೆಪಿ ನಾಯಕರಂತೂ ಉದಯನಿಧಿ ಸ್ಟಾಲಿನ್‌ ಅವರ ಮೇಲೆ ಮುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೇ, “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲೆಂದೇ ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಎಂಬ ಒಕ್ಕೂಟ ರಚಿಸಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಉದಯನಿಧಿ ಸ್ಟಾಲಿನ್‌, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಕಾನೂನು ಹೋರಾಟಕ್ಕೂ ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು.

ಈ ವಿವಾದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಉದಯನಿಧಿ ಸ್ಟಾಲಿನ್‌ ಹಾಗೂ ತಮಿಳುನಾಡು ಸರ್ಕಾರ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿತ್ತು. ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‌, ಮತ್ತೊಬ್ಬ ಸಚಿವ ಎ. ರಾಜಾ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿತ್ತು. ಇವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರ ಹಾಗೂ 15 ಜನರಿಗೆ ನೋಟಿಸ್‌ ಜಾರಿಗೊಳಿಸಿತ್ತು. ಎ.ರಾಜಾ ಕೂಡ ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇವರ ವಿರುದ್ಧ ಚೆನ್ನೈ ಮೂಲದ ಬಿ. ಜಗನ್ನಾಥ್‌ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: Udhayanidhi Stalin: ಸಂಸತ್‌ಗೆ ಮುರ್ಮುರನ್ನು ಆಹ್ವಾನಿಸದಿರುವುದೇ ಸನಾತನ ಧರ್ಮ ಎಂದ ಉದಯನಿಧಿ

Continue Reading

ದೇಶ

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

Mamata Banerjee: ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಮತ್ತೊಂದು ಸುತ್ತಿನ ಜಿದ್ದಾಜಿದ್ದಿ ಆರಂಭವಾಗಿದೆ. ನೀರು ಹಂಚಿಕೆ ಕುರಿತು ಬಾಂಗ್ಲಾದೇಶದೊಂದಿಗೆ ಕೇಂದ್ರ ನಡೆಸಿದ ಮಾತುಕತೆಗೆ ಆಕ್ಷೇಪ ವ್ಯಕ್ತಪಡಿಸಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

VISTARANEWS.COM


on

Mamata Banerjee
Koo

ಕೋಲ್ಕತ್ತಾ: ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ನಡುವೆ ಮತ್ತೊಂದು ಸುತ್ತಿನ ಜಿದ್ದಾಜಿದ್ದಿ ಆರಂಭವಾಗಿದೆ. ನೀರು ಹಂಚಿಕೆ ಕುರಿತು ಬಾಂಗ್ಲಾದೇಶದೊಂದಿಗೆ ಕೇಂದ್ರ ನಡೆಸಿದ ಮಾತುಕತೆಗೆ ಆಕ್ಷೇಪ ವ್ಯಕ್ತಪಡಿಸಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ.

ತೀಸ್ತಾ ನೀರು ಹಂಚಿಕೆ ಮತ್ತು 1996ರ ಗಂಗಾ ಜಲ ಒಪ್ಪಂದವನ್ನು ನವೀಕರಿಸುವ ಕೇಂದ್ರದ ಪ್ರಸ್ತಾಪವನ್ನು ತಿರಸ್ಕರಿಸಿದ ಅವರು, “ಸಮಾಲೋಚನೆ ಮತ್ತು ರಾಜ್ಯ ಸರ್ಕಾರದ ಅಭಿಪ್ರಾಯವಿಲ್ಲದೆ ಇಂತಹ ಏಕಪಕ್ಷೀಯ ಚರ್ಚೆಗಳು ಮತ್ತು ಚರ್ಚೆಗಳು ಸ್ವೀಕಾರಾರ್ಹವಲ್ಲ” ಎಂದು ಎಂದು ಹೇಳಿದ್ದಾರೆ. ಬಾಂಗ್ಲಾದೇಶದ ಜತೆ ನಡೆದ ಮಾತುಕತೆಗೆ ಪಶ್ಚಿಮ ಬಂಗಾಳ ಸರ್ಕಾರವನ್ನು ಆಹ್ವಾನಿಸಿಲ್ಲ ಎಂದೂ ಅವರು ಆರೋಪಿಸಿದ್ದಾರೆ.

ಇತ್ತ ಕೇಂದ್ರ ಸರ್ಕಾರ ಈ ಆರೋಪವನ್ನು ತಳ್ಳಿ ಹಾಕಿದ್ದು, 1996ರ ಜಲ ಒಪ್ಪಂದದ ಆಂತರಿಕ ಪರಿಶೀಲನೆ ನಡೆಸಲು ಉದ್ದೇಶಿಸಿರುವ ಸಮಿತಿಗೆ ನಾಮನಿರ್ದೇಶಿತರನ್ನು ಕಳುಹಿಸುವಂತೆ ಕಳೆದ ವರ್ಷ ಜುಲೈಯಲ್ಲಿ ಬಂಗಾಳ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಎಂದು ತಿರುಗೇಟು ನೀಡಿದೆ. ಆಗಸ್ಟ್‌ನಲ್ಲಿ ರಾಜ್ಯವು ನೀರಾವರಿ ಮತ್ತು ಜಲಮಾರ್ಗಗಳ ನಿರ್ದೇಶನಾಲಯದ ಮುಖ್ಯ ಎಂಜಿನಿಯರ್ ಅವರನ್ನು ನಾಮನಿರ್ದೇಶನ ಮಾಡಿತು. ಈ ವರ್ಷದ ಏಪ್ರಿಲ್ 5ರಂದು ನೀರಾವರಿ ಮತ್ತು ಜಲಮಾರ್ಗಗಳ ಇಲಾಖೆಯ ಬಂಗಾಳದ ಜಂಟಿ ಕಾರ್ಯದರ್ಶಿ ಮುಂದಿನ 30 ವರ್ಷಗಳವರೆಗೆ ರಾಜ್ಯದ ಒಟ್ಟು ಬೇಡಿಕೆಯನ್ನು ತಿಳಿಸಿದ್ದರು ಎಂದು ಮೂಲಗಳು ಹೇಳಿವೆ.

ಗಂಗಾ ಜಲ ಒಪ್ಪಂದವನ್ನು ನವೀಕರಿಸುವ ಮತ್ತು ತೀಸ್ತಾ ನೀರು ಹಂಚಿಕೆಯ ಬಗ್ಗೆ ಭಾರತ-ಬಾಂಗ್ಲಾದೇಶದ ನಡುವೆ ಶನಿವಾರ ಚರ್ಚೆ ನಡೆಯಿತು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ದೆಹಲಿಗೆ ಆಗಮಿಸಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

“ಕೇಂದ್ರ ಸರ್ಕಾರವು ಭಾರತ-ಬಾಂಗ್ಲಾದೇಶದ 1996 ಫರಕ್ಕಾ ಒಪ್ಪಂದ (Farakka Treaty)ವನ್ನು ನವೀಕರಿಸಲು ಮುಂದಾಗಿದೆ ಎನ್ನುವುದನ್ನು ಅರ್ಥ ಮಾಡಿಕೊಂಡಿದ್ದೇನೆ. ಈಗಿನ ಒಪ್ಪಂದ 2026ರಲ್ಲಿ ಮುಕ್ತಾಯಗೊಳ್ಳಲಿದೆ. ಈ ಒಪ್ಪಂದವನ್ನು ನವೀಕರಿಸಿದರೆ ಪಶ್ಚಿಮ ಬಂಗಾಳದ ಜನರ ಮೇಲೆ ಭಾರಿ ಪರಿಣಾಮಗಳನ್ನು ಬೀರುತ್ತದೆ” ಎಂದು ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಒಪ್ಪಂದದಿಂದ ಬಂಗಾಳದ ಜನರು ತೊಂದರೆ ಅನುಭವಿಸಲಿದ್ದಾರೆ ಎಂದೂ ಹೇಳಿದ್ದಾರೆ.

“ಪಶ್ಚಿಮ ಬಂಗಾಳವು ಈ ಹಿಂದೆ ಹಲವು ವಿಷಯಗಳಲ್ಲಿ ಬಾಂಗ್ಲಾದೇಶಕ್ಕೆ ಸಹಕಾರ ನೀಡಿದೆ. ಎರಡೂ ಸರ್ಕಾರಗಳು ಜತೆಯಾಗಿ ಕೆಲಸ ಮಾಡಿವೆ. ಆದರೆ ನೀರಿನ ವಿಷಯದಲ್ಲಿ ಯಾವುದೇ ರಾಜಿಮಾಡಿಕೊಳ್ಳಲು ಸಾಧ್ಯವಿಲ್ಲ. ನೀರು ಜನರ ಜೀವನಾಡಿ. ಜನರ ಮೇಲೆ ತೀವ್ರ ಮತ್ತು ಪ್ರತಿಕೂಲ ಪರಿಣಾಮ ಬೀರುವ ಇಂತಹ ಸೂಕ್ಷ್ಮ ವಿಷಯದ ಬಗ್ಗೆ ನಾವು ರಾಜಿ ಮಾಡಿಕೊಳ್ಳಲು ತಯಾರಿಲ್ಲ” ಎಂದು ಅವರು ಪಟ್ಟು ಹಿಡಿದಿದ್ದಾರೆ.

ಉತ್ತರ ಬಂಗಾಳದ ತೀಸ್ತಾ ನದಿಯ ನೀರನ್ನು ಹಂಚಿಕೊಳ್ಳುವ ಪ್ರಸ್ತಾಪವನ್ನು ಉಲ್ಲೇಖಿಸಿದ ಅವರು, ʼʼಸಿಕ್ಕಿಂನ ಜಲವಿದ್ಯುತ್ ಯೋಜನೆಗಳ ಮತ್ತು ನದಿಯ ಜಲಾನಯನ ಪ್ರದೇಶದಲ್ಲಿನ ಅರಣ್ಯನಾಶದಿಂದಾಗಿ ತೀಸ್ತಾ ನದಿಯಲ್ಲಿ ಈಗ ಹಂಚಿಕೊಳ್ಳಲು ಸಾಕಷ್ಟು ನೀರು ಇಲ್ಲ. ತೀಸ್ತಾ ನೀರನ್ನು ಬಾಂಗ್ಲಾದೇಶದೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲʼʼ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: Bangladesh election: ಬಾಂಗ್ಲಾದೇಶದಲ್ಲಿ 5ನೇ ಅವಧಿಗೆ ಚುನಾವಣೆ ಗೆದ್ದ ಶೇಖ್ ಹಸೀನಾ!

Continue Reading
Advertisement
Gold Rate Today
ಚಿನ್ನದ ದರ9 mins ago

Gold Rate Today: ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

milk price hike
ಪ್ರಮುಖ ಸುದ್ದಿ27 mins ago

Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

Viral News
ಕ್ರೈಂ36 mins ago

ಜಮೀನಿನಲ್ಲಿ ಕೆಲಸ ಮಾಡಲು ನಿರಾಕರಿಸಿದ ಮಹಿಳೆಯ ಮೇಲೆ ಹಲ್ಲೆ; ಖಾಸಗಿ ಅಂಗಕ್ಕೆ ಖಾರದ ಪುಡಿ ಎರಚಿ ವಿಕೃತಿ ಮೆರೆದ ಸಂಬಂಧಿಕರು

AFG vs BAN
ಕ್ರೀಡೆ38 mins ago

AFG vs BAN: ‘ನಿಧಾನವಾಗಿ ಆಡಿ, ಮಳೆ ಬರುತ್ತೆ’; ಆಫ್ಘನ್​ ಆಟಗಾರರಿಗೆ ಸಲಹೆ ನೀಡಿದ ಕೋಚ್​; ವಿಡಿಯೊ ವೈರಲ್​

cm siddaramaiah DK Shivakumar power fight
ಪ್ರಮುಖ ಸುದ್ದಿ1 hour ago

CM Siddaramaiah: ಡಿಸಿಎಂ ವಿಚಾರದಲ್ಲಿ ಮತ್ತೆ ಒಡೆದುಹೋದ ಕಾಂಗ್ರೆಸ್‌; ಸಿದ್ದು- ಡಿಕೆಶಿ ಬಣದ ನಡುವೆ ಡಿಶುಂ ಡಿಶುಂ

Viral Video
Latest1 hour ago

Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

LeT Associate killed
ದೇಶ1 hour ago

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

Udhayanidhi Stalin
ಕರ್ನಾಟಕ2 hours ago

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

AFG vs BAN
ಕ್ರೀಡೆ2 hours ago

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

Mamata Banerjee
ದೇಶ2 hours ago

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌