ಸತೀಶ್‌ ಜಾರಕಿಹೊಳಿ ಆಪ್ತನ ಮೇಲೆ ಫೈರಿಂಗ್‌ ಮಾಡಿದವನ ಕೊಲೆ! - Vistara News

ಚಿಕ್ಕೋಡಿ

ಸತೀಶ್‌ ಜಾರಕಿಹೊಳಿ ಆಪ್ತನ ಮೇಲೆ ಫೈರಿಂಗ್‌ ಮಾಡಿದವನ ಕೊಲೆ!

ಕಳೆದ ವರ್ಷ ಸತೀಶ ಜಾರಕಿಹೊಳಿ ಆಪ್ತನ ಮೇಲೆ ಫೈರಿಂಗ್‌ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

VISTARANEWS.COM


on

ಕೊಲೆಯಾದ ವಿನಾಯಕ ಹೊರಕೇರಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಾಡ ಪಿಸ್ತೂಲಿನಿಂದ ಶಾಸಕ ಸತೀಶ್‌ ಜಾರಕಿಹೊಳಿ ಆಪ್ತನ ಮೇಲೆ ಕಳೆದ ವರ್ಷ ಫೈರಿಂಗ್ ಮಾಡಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ವಿನಾಯಕ ಹೊರಕೇರಿ(31) ಕೊಲೆಯಾದ ವ್ಯಕ್ತಿ. ಕಳೆದ ವರ್ಷ ಸತೀಶ ಜಾರಕಿಹೊಳಿ ಆಪ್ತನ ಮೇಲೆ ವಿನಾಯಕ ಎಂಬಾತ ಫೈರಿಂಗ್‌ ಮಾಡಿ ಪರಾರಿಯಾಗಿದ್ದ. ಪೊಲೀಸರು ಆತನನ್ನು ಬಂಧಿಸಿದ ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ. ಭಾನುವಾರ ರಾತ್ರಿ ವಿನಾಯಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Accident | ಕೆಎಸ್‌ಆರ್‌ಟಿಸಿ ಬಸ್‌- ಬೈಕ್‌ ಡಿಕ್ಕಿ; ಪ್ರಾಣಾಪಾಯದಿಂದ ಪಾರಾದ 21ಮಂದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

Karnataka Weather Forecast : ಮತ್ತೆ ವಿಪರೀತ ತಾಪಮಾನವು ಜನರ ತಲೆಕೆಡಿಸಿದೆ. ಕೆಲವಡೆ ಮಳೆಯು ಅಬ್ಬರಿಸಿದ್ದರೂ, ಅದರ ದುಪ್ಪಟ್ಟು ಎಂಬಂತೆ ಬಿಸಿಲ ಧಗೆಯು ಹೆಚ್ಚಾಗಿದೆ. ಕರ್ನಾಟಕದಲ್ಲಿ ಹೀಟ್‌ ವೇವ್‌ ಹೆಚ್ಚುತ್ತಿದ್ದು ಹವಾಮಾನ ತಜ್ಞರು ಯೆಲ್ಲೋ ಅಲರ್ಟ್‌ ಘೋಷಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರವು (rain News) ಕಡಿಮೆ ಆಗಿದ್ದು, ಶುಷ್ಕ ವಾತಾವರಣವು (Dry Weather) ಮುಂದುವರಿದಿದೆ. ಏ.26ರಂದು ಶುಕ್ರವಾರ ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಇರಲಿದೆ. ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲ ಧಗೆಯು ಹೆಚ್ಚಾಗಿ ಇರಲಿದೆ.

ತಾಪಮಾನ ಎಚ್ಚರಿಕೆ

ಕರ್ನಾಟಕದ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಿರಲಿದೆ. ಏ. 26 ರಂದು ಕರಾವಳಿ ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಹೀಟ್‌ ವೇವ್‌ ಇರಲಿದೆ. ಏ. 28 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

ಹೀಟ್‌ವೇವ್‌ ವಾರ್ನಿಂಗ್‌

ಹೀಟ್‌ ವೇವ್ಸ್‌ ಅಥವಾ ಶಾಖದ ಅಲೆಯ ಸಮಯದಲ್ಲಿ ಮಾಡಬೇಕಾದದ್ದು ಮತ್ತು ಮಾಡಬಾರದ ಕೆಲಸಗಳ ಕುರಿತು ಹವಾಮಾನ ತಜ್ಞರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಹೀಟ್‌ ವೇವ್ಸ್‌ನಿಂದಾಗಿ ಅತಿಯಾದ ಒತ್ತಡ ಉಂಟಾಗಿ ಇದು ಸಾವಿಗೆ ಕಾರಣವಾಗಬಹುದು.

1.ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

2.ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

3.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

4.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.

5.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

6.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗಿನ ಕೆಲಸ ಮಾಡುವುದನ್ನು ತಪ್ಪಿಸಿ.

7.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ.

8.ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.

9.ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

10.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ

11.ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

12.ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹವನ್ನು ತಂಪಾಗಿ ಇರಲು ಸಹಾಯ ಮಾಡುತ್ತದೆ.

13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.

ಸನ್‌ಸ್ಟ್ರೋಕ್‌ ಚಿಕಿತ್ಸೆಗಾಗಿ ಸಲಹೆಗಳು

-ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ.
-ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
-ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ರೈತರು/ಕೃಷಿ ಕಾರ್ಮಿಕರು

ಹೊಲದಲ್ಲಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿ ಬಳಸಿ. ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಇನ್ನೂ ಪ್ರಯಾಣಿಸುವಾಗ ನಿಮ್ಮೊಂದಿಗೆ ನೀರನ್ನು ಒಯ್ಯಿರಿ. ಕ್ರೀಡಾಪಟು ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Karnataka Weather Forecast : ಸುಳಿಗಾಳಿ ಪ್ರಭಾವದಿಂದಾಗಿ ಹಲವೆಡೆ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವೆಡೆ ರಭಸವಾಗಿ ಗಾಳಿ ಬೀಸಲಿದೆ. ಗುಡುಗು, ಮಿಂಚಿನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ (Rain News) ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಗುಡುಗುನೊಂದಿಗೆ ಮಳೆ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯ ಶುಷ್ಕ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

ಆರೆಂಜ್ ಮತ್ತು ಯೆಲ್ಲೋ ಅಲರ್ಟ್

ಕೆಲವೆಡೆ ಮಳೆ ನಡುವೆಯು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಬುಧವಾರ ಬೆಳಗ್ಗೆವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಲ್ಕು ದಿನಗಳಿಗೆ ಹೀಟ್‌ ವೇವ್‌ ಅಲರ್ಟ್‌

ಮೊದಲ ದಿನ 24ರಂದು ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

25ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

26ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

27ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಏಪ್ರಿಲ್ 24 ರಿಂದ 27 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Karnataka Weather Forecast : ಬಿರುಗಾಳಿ ಸಹಿತ ಸುರಿದ ಮಳೆಗೆ (Rain News) ಬೀದರ್‌, ವಿಜಯನಗರ, ದಾವಣಗೆರೆ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಸೋಲ ಮಾಡಿ ಖರೀದಿಸಿದ್ದ ಎತ್ತುಗಳು ಸಿಡಿಲಿಗೆ ಬಲಿಯಾದರೆ, ನೀರಿಲ್ಲದಿದ್ದರೂ ಟ್ಯಾಂಕರ್‌ ಮೂಲಕ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯು ನೆಲಕಚ್ಚಿದೆ. ಸದ್ಯ ಬುಧವಾರದಂದು ಎಲ್ಲೆಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರಕ್ಕೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಇನ್ನೂ 30-40 ಕಿಮೀ ವೇಗದಲ್ಲಿ ಬಿರುಸಿನ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಸಿಡಿಲಿಗೆ ಎತ್ತುಗಳು ಬಲಿ

ಬೀದರ್‌ನ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿಯಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ಸಾಗರ ಬಸವರಾಜ ಪಾಟೀಲ ಎಂಬುವವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ.

ವಿಜಯನಗರದಲ್ಲಿ ಗಾಳಿ-ಮಳೆಗೆ ಹಾರಿದ ಶಾಮಿಯಾನ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಗ್ರಾಮದ ಬಳಿಯ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿ ನಿಮಿತ್ತ ಶಾಮಿಯಾನ, ಲೈಟಿಂಗ್ ಹಾಕಲಾಗಿತ್ತು. ಆದರೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಶಾಮಿಯಾನ, ಲೈಟಿಂಗ್ಸ್‌ ಹಾರಿ ಹೋಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿತ್ತು.

ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕೆ ಉರುಳಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ 5 ಎಕರೆ ಪಪ್ಪಾಯಿ ಬೆಳೆ ಹಾಳಾಗಿದೆ. ಇದರಿಂದ ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಇದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಕುಸುಮ ಅವರ 4 ಎಕರೆ ಪಪ್ಪಾಯಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಬಾಳೆ ಬೆಳೆ ನಾಶ

ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿವೆ. ದಾವಣಗೆರೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ಜಮ್ಮಪುರ, ಹರಿಶಿನಗುಂಡಿ ಸೇರಿದಂತೆ ಹಲವು ಕಡೆ ಬೆಳೆ ನಾಶವಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ಸಿದ್ದಮ್ಮ, ಬಸವರಾಜಪ್ಪ ಎಂಬುವರಿಗೆ ಸೇರಿದ 20 ಎಕರೆ ಬಾಳೆ ತೋಟ ನೆಲಕಚ್ಚಿದೆ. ಬರಗಾಲದಲ್ಲಿ ಟ್ಯಾಂಕರ್ ನೀರು ಖರೀದಿ ಮಾಡಿ ಬಾಳೆ ಬೆಳೆಸಿದ್ದರು. ಆದರೆ ಗಾಳಿ ಮಳೆಗೆ ಬಾಳೆಯು ನೆಲಸಮವಾಗಿದೆ. ಕೂಡಲೇ ಹಾನಿಗೊಂಡ ಬೆಳೆಗೆ ಸರ್ಕಾರ ಪರಿಹಾರ ‌ನೀಡುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ramanagara News
ಕರ್ನಾಟಕ1 hour ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ1 hour ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ1 hour ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ1 hour ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ2 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ2 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ2 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest2 hours ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ5 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ7 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ7 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌