ಭಗತ್‌ ಸಿಂಗ್‌ ಪಾಠ ಕೈಬಿಟ್ಟಿದ್ದರೆ‌ ಗಲ್ಲಿಗೆ ಹಾಕಿ: ಸುಧಾಕರ್‌ ಸವಾಲು - Vistara News

ಶಿಕ್ಷಣ

ಭಗತ್‌ ಸಿಂಗ್‌ ಪಾಠ ಕೈಬಿಟ್ಟಿದ್ದರೆ‌ ಗಲ್ಲಿಗೆ ಹಾಕಿ: ಸುಧಾಕರ್‌ ಸವಾಲು

ಭಗತ್‌ ಸಿಂಗ್‌ ಕುರಿತಾದ ಪಾಠ, ನಾರಯಣಗುರು, ಹೆಡಗೆವಾರ್‌ ಹಾಗೂ ಸರ್ ಸೈಯದ್‌ ಅಹ್ಮದ್‌ ಖಾನ್‌ ಅವರ ಬಗ್ಗೆಯೂ ಪಠ್ಯದಲ್ಲಿ ಸೇರಿಸಲಾಗಿದೆ ಎನ್ನಲಾಗಿದೆ.

VISTARANEWS.COM


on

ಶಿಕ್ಷಣ ತಜ್ಞ ಸುಧಾಕರ್‌ ಹೊಸಹಳ್ಳಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ರಾಜ್ಯದಲ್ಲಿ ಪಠ್ಯ ಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ತಜ್ಞ ಸುಧಾಕರ್‌ ಹೊಸಹಳ್ಳಿ, ಪಠ್ಯದಲ್ಲಿ ಭಗತ್ ಸಿಂಗ್‌ ಪಾಠವನ್ನು ಸೇರಿಸಿಲ್ಲ‌ ಎಂದರೆ ನನ್ನನ್ನು ಗಲ್ಲಿಗೆ ಹಾಕಿ ಎಂದಿದ್ದಾರೆ. 10ನೇ ತರಗತಿಯ ಪುಸ್ತಕದಲ್ಲಿ ಭಗತ್‌ ಸಿಂಗ್‌ ಕುರಿತಾದ ಪಠ್ಯವನ್ನು ಕೈಬಿಡಲಾಗಿದೆ ಎಂದು ವಿವಾದ ಸೃಷ್ಟಿಯಾಗಿತ್ತು. ಈ ಬಗ್ಗೆ ಸುಧಾಕರ್‌ ಸ್ಪಷ್ಟನೆ ನೀಡಿದ್ದಾರೆ.

ಅನವಶ್ಯಕವಾಗಿ ಊಹಾಹಪೋಹ ವಿವಾದ ಸೃಷ್ಟಿಸಲಾಗುತ್ತಿದೆ. ಸರ್ಕಾರದ ಶಿಕ್ಷಣ ಕಾಯ್ದೆಯಡಿ ಪಠ್ಯ ಪರಿಷ್ಕರಣ ಮಾಡಲಾಗಿದೆ. ಭಗತ್‌ ಸಿಂಗ್‌ ಕುರಿತಾದ ಪಠ್ಯವನ್ನು ತೆಗೆದಿಲ್ಲ ಹಾಗೂ ಹೆಡಗೆವಾರ್‌ ಕುರಿತಾದ ಪಠ್ಯವನ್ನು ಸೇರಿಸಿಲ್ಲ. ಹೆಡಗೆವಾರ್‌ ಅವರು ನಾಯಕತ್ವದ ಕುರಿತು ಹೇಳಿರುವ ಲೇಖನವನ್ನು ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸುಧಾಕರ್‌ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ | ತಿಳಿಗೇಡಿ ಯುವಕನಿಂದ ಪಠ್ಯಪುಸ್ತಕ ಪರಿಷ್ಕರಣೆ ಎಂದ ಸಿದ್ದರಾಮಯ್ಯ

ಶಿಕ್ಷಣ ಕ್ಷೇತ್ರವನ್ನು ಧರ್ಮ ಬೋಧನೆಗೆ ದಾಳವನ್ನಾಗಿ ಬಳಸಿಕೊಳ್ಳಲಾಗಿದೆ ಎಂದು ವಿರೋಧ ಪಕ್ಷದವರ ಆಕ್ಷೇಪಕ್ಕೆ ಸುಧಾಕರ್‌ ಉತ್ತರ ನೀಡಿ, ʼಸಂವಿಧಾನದ 21ನೇ ವಿಧಿ ಪ್ರಕಾರ ಸರ್ಕಾರ ಹಾಗೂ ಅನುದಾನಿತ ಶಾಲೆಗಳಲ್ಲಿ ಧಾರ್ಮಿಕ ವಿಚಾರ ಭೋದಿಸುವಂತಿಲ್ಲ. ಆದರೆ ನೀವು 9ನೇ ತರಗತಿಯ ಮೊದಲ ಪಾಠವಾಗಿ ಕ್ರೈಸ್ತ ಹಾಗೂ ಮುಸ್ಲಿಂ ಧರ್ಮದ ಪಠ್ಯ ಸೇರಿಸಿದ್ದೀರಿ. ಹಿಂದೂ ಧರ್ಮ ಕೈಬಿಟ್ಟು ಅನ್ಯ ಧರ್ಮಗಳ ಪಠ್ಯ ಸೇರಿಸಿದ್ದೀರಾ. ನೀವು ಮಕ್ಕಳಿಗೆ ಇಷ್ಟು ದಿನ ಸುಳ್ಳುಗಳನ್ನ ಕಲಿಸುತ್ತಾ ಬಂದಿದ್ದೀರʼ ಎಂದು ಆರೋಪಿಸಿದರು.

ಈ ಬಾರಿಯ ಪಠ್ಯದಲ್ಲಿ ಮಹಿಳಾ ಹೋರಾಟಗಾರರ ಬಗ್ಗೆ, ಭಗತ್ ಸಿಂಗ್ ಬಗ್ಗೆ, ಶ್ರೇಷ್ಠ ಬರಹಗಾರ ಗೋವಿಂದ ಪೈ ಅವರ ಬಗ್ಗೆ, ಅಗ್ರಗಣ್ಯ ಸಾಹಿತಿ ಭೈರಪ್ಪನವರ ಬಗ್ಗೆಯೂ ಪಠ್ಯವನ್ನು ಸೇರಿಸಲಾಗಿದೆ. ಸಾಂವಿಧಾನಿಕವಾಗಿಯೇ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಯಾವುದೇ ವಿವಾದ ಮಾಡಿದರೂ ಪರಿಷ್ಕರಣೆ ಮಾಡಿದ್ದು ಕಾನೂನಾತ್ಮಕವಾಗಿ ಸರಿಯಿದೆ ಎಂದು ತಿಳಿಸಲಾಗಿದೆ ಎಂದು ಹೇಳಿದರು.

ಭಗತ್‌ ಸಿಂಗ್‌

ಅಲ್ಲದೆ, ಈ ಬಾರಿಯ ಪುಸ್ತಕದಲ್ಲಿ ಹುಬ್ಬಳ್ಳಿಯ ಸಿದ್ಧಾರೂಢರ ಜಾತ್ರೆಯ ಕುರಿತ ಪಠ್ಯವನ್ನು ಸೇರ್ಪಡೆ ಮಾಡಲಾಗಿದೆ. ಉತ್ತರ ಕರ್ನಾಟಕದ ಆರಾಧ್ಯದೈವ ಶ್ರೀ ಸಿದ್ಧಾರೂಢರ ಜಾತ್ರೆಯ ಬಗ್ಗೆ ಪಾಠವನ್ನು ಸೇರಿಸಿರುವ ಕಾರಣ ಅಲ್ಲಿನ ಜನರಿಗೆ ಹಾಗೂ ಸಿದ್ಧಾರೂಢರ ಭಕ್ತರಿಗೆ ಅತ್ಯಂತ ಸಂತಸ ಮೂಡಿಸಿದೆ.

ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2 ರಲ್ಲಿ ನಾರಾಯಣ ಗುರುಗಳ ಬಗ್ಗೆಯೂ ಪಾಠವಿದೆ ಹಾಗೂ ಹಿಂದು-ಮುಸ್ಲಿಮರ ನಡುವೆ ಸಾಮರಸ್ಯ ತರಲು ಪ್ರಯತ್ನ ಮಾಡಿದ ಸರ್ ಸೈಯದ್‌ ಅಹ್ಮದ್‌ ಖಾನ್‌ ಬಗ್ಗೆಯೂ ಪಾಠವಿದೆ.

ಇದನ್ನೂ ಓದಿ:ಆರ್‌ಎಸ್‌ಎಸ್‌ ವಿರೋಧಿಗಳು ತುಂಡಾಸುರರು ಎಂದು ಬಣ್ಣಿಸಿದ ವಸಂತಕುಮಾರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Education News : ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದ್ದು, ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಆದರೆ ನೀಟ್ ಪರೀಕ್ಷೆ ಬಳಿಕವೇ ಎಂಜಿನಿಯರ್ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

VISTARANEWS.COM


on

By

education News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೀಟ್‌ ಪರೀಕ್ಷೆ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಈ ಬಾರಿ ಎಷ್ಟೆಂದು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

KCET Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2024 ಫಲಿತಾಂಶ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

VISTARANEWS.COM


on

KCET Result 2024
Koo

ಬೆಂಗಳೂರು: 2024ನೇ ಸಾಲಿನ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET Result 2024) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಇಟಿ ಪರೀಕ್ಷೆಯನ್ನು (KCET Exam) ಏಪ್ರಿಲ್ 18, 19 ಹಾಗೂ 20ರಂದು ನಡೆಸಿತ್ತು. ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿ ಕೊಂಡಿದ್ದರು. ಜೂನ್‌ ಮೊದಲ ವಾರದಲ್ಲಿ (KCET Result 2024) ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಇದೀಗ ಅಧಿಕೃತವಾಗಿ ಕೆಇಎ ಫಲಿತಾಂಶ ಬಿಡುಗಡೆ ಮಾಡಿದೆ.

ಸಿಇಟಿ ಫಲಿತಾಂಶವನ್ನು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ದ್ವಿತೀಯ ಪಿಯುಸಿ 2ರ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದರು. ಕಳೆದ ಮೇ 21ರಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವು ಪ್ರಕಟಗೊಂಡಿತ್ತು.

ಇದನ್ನೂ ಓದಿ | Spoken English Classes : ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ; ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿ ಶನಿವಾರ ಇಂಗ್ಲಿಷ್‌ ಕ್ಲಾಸ್‌!

ಪಿಯುಸಿ ಪರೀಕ್ಷೆಯ ಯಾವ ಅಂಕ ಪರಿಗಣನೆ?

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಹೇಗೆ?

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ. ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.

ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.

ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.

ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳ ಫೋನ್‌ ನಂಬರ್‌ಗೆ ಫಲಿತಾಂಶದ ಮಸೇಜ್‌ ಬರಲಿದೆ.

ನಾರಾಯಣ ಒಲಿಂಪಿಯಾಡ್‌ ಶಾಲೆಯ ಹರ್ಷ ಪ್ರಥಮ

ಸಿಇಟಿ 2024ರಲ್ಲಿ ಬೆಂಗಳೂರಿನ ಸಹಕಾರ ನಗರದ ನಾರಾಯಣ ಒಲಿಂಪಿಯಾಡ್‌ ಶಾಲೆಯ ವಿದ್ಯಾರ್ಥಿ ಹರ್ಷ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಮಾರತ್‌ಹಳ್ಳಿಯ ಚೈತನ್ಯ ಟೆಕ್ನೋ ಶಾಲೆಯ ಮನೋಜ್ ದ್ವಿತೀಯ ಸ್ಥಾನ, ಜಯನಗರ ನೆಹರು ಸ್ಮಾರಕ ವಿದ್ಯಾಲಯದ ಅಭಿನವ್ ತೃತೀಯ ಸ್ಥಾನ ಪಡೆದಿದ್ದಾರೆ.

Continue Reading

ಬೆಂಗಳೂರು

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

KCET Result 2024 : ಇಂಜಿನಿಯರಿಂಗ್‌ (Engineering) ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಕೆ-ಸಿಇಟಿ (Karnataka CET 2024) ಪರೀಕ್ಷೆ ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಬಹುತೇಕ ಜೂನ್‌ ಮೊದಲ ವಾರವೇ ಪರೀಕ್ಷೆ ಫಲಿತಾಂಶವು ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

By

KCET Result 2024
Koo

ಬೆಂಗಳೂರು: 2024ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (CET Result) ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಇಟಿ ಪರೀಕ್ಷೆಯನ್ನು (KCET Exam) ಏಪ್ರಿಲ್ 18, 19 ಹಾಗೂ 20ರಂದು ನಡೆಸಿತ್ತು. ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿ ಕೊಂಡಿದ್ದರು. ಇದೀಗ ಇವರೆಲ್ಲರ ಭವಿಷ್ಯವು ಜೂನ್‌ ಮೊದಲ ವಾರದಲ್ಲೇ (KCET Result 2024) ನಿರ್ಧಾರವಾಗಲಿದೆ.

ಸಿಇಟಿ ಫಲಿತಾಂಶವನ್ನು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ದ್ವಿತೀಯ ಪಿಯುಸಿ 2ರ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದರು. ಕಳೆದ ಮೇ 21ರಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವು ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳ ಚಿತ್ತ ಸಿಇಟಿ ಫಲಿತಾಂಶದತ್ತ ನೆಟ್ಟಿದೆ.

ಪಿಯುಸಿ ಪರೀಕ್ಷೆಯ ಯಾವ ಅಂಕ ಪರಿಗಣನೆ?

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಹೇಗೆ?

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ. ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.

ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.

ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.

ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳ ಫೋನ್‌ ನಂಬರ್‌ಗೆ ಫಲಿತಾಂಶದ ಮಸೇಜ್‌ ಬರಲಿದೆ.

ಇದನ್ನೂ ಓದಿ: Liquor Ban : ಡ್ರೈ ಡೇ ಎಫೆಕ್ಟ್‌; ನಾಳೆ ಸಂಜೆಯಿಂದಲೇ ಮದ್ಯ ಮಾರಾಟ ಬಂದ್‌

ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5 ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿತ್ತು.

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Old Students Association: ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ, ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಆದೇಶ

Old Students Association:
ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪಿಸಲು ಹಾಗೂ ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ.ಕಾವೇರಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

Old Students Association
Koo

ಬೆಂಗಳೂರು: ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ (Old Students Association) ಸ್ಥಾಪಿಸಲು ಹಾಗೂ ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆಯ (Education Department) ಆಯುಕ್ತೆ ಬಿ.ಬಿ.ಕಾವೇರಿ ಸೂಚಿಸಿದ್ದಾರೆ.

ಈ ಬಗ್ಗೆ ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ.ಕಾವೇರಿ ಅವರು, ಸರ್ಕಾರದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪಿಸಲು ಹಾಗೂ ಅದಕ್ಕೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಗ್ರೂಪ್ ಮಾಡಿ ಹಳೆಯ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ಮಾಡಿಕೊಳ್ಳಲು ತಿಳಿಸಲಾಗಿತ್ತು. ಈಗಾಗಲೇ 25,007 ಶಾಲೆಗಳು ವಿದ್ಯಾರ್ಥಿಗಳ ಸಂಘ ಸ್ಥಾಪಿಸಿಕೊಂಡಿದ್ದು, ಅವುಗಳಲ್ಲಿ 15,170 ಶಾಲೆಗಳು ವಾಟ್ಸ್‌ಆ್ಯಪ್‌ ಗ್ರೂಪನ್ನು ರಚಿಸಿಕೊಂಡಿವೆ ಎಂದು ಹೇಳಿದ್ದಾರೆ.

ಈಗಾಗಲೇ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪಿಸಿರುವ ಎಲ್ಲಾ ಶಾಲೆಗಳು ಕೂಡಲೇ ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಿಕೊಂಡು ಸದಸ್ಯರ ಸಂಖ್ಯೆ ಹೆಚ್ಚಿಸುವುದು ಹಾಗೂ ಇಲ್ಲಿಯವರೆಗೆ ಸಂಘ ರಚಿಸಿಕೊಳ್ಳದೇ ಇರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಒಂದುವಾರದೊಳಗೆ ಕಡ್ಡಾಯವಾಗಿ ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಿ, ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಿಕೊಂಡು, ಕಚೇರಿಯಿಂದ ನೀಡಿರುವ ಗೂಗಲ್ ಫಾರ್ಮ್‌ನಲ್ಲಿ ಮಾಹಿತಿ ಭರ್ತಿ ಮಾಡಬೇಕು ಎಂದು ಸೂಚಿಸಿದ್ದಾರೆ.

ಎಲ್ಲಾ ಶಾಲೆಗಳು ಸಂಘ ಸ್ಥಾಪಿಸುವಂತೆ ಹಾಗೂ ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಿಕೊಳ್ಳುವಂತೆ ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ) ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | PGCET 2024: ಪಿಜಿಸಿಇಟಿ 2024ಕ್ಕೆ ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭ; ಪರೀಕ್ಷೆ ಯಾವಾಗ, ಇಲ್ಲಿದೆ ವೇಳಾಪಟ್ಟಿ

ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿ ಶನಿವಾರ ಇಂಗ್ಲಿಷ್‌ ಕ್ಲಾಸ್‌!

Spoken English Classes

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ (Spoken English Classes) ಶುರು ಮಾಡಲು ತಯಾರಿ ನಡೆದಿದೆ. How to Make English Easy ಎಂಬ ಪರಿಕ್ಪನೆಯೊಂದಿಗೆ ಈ ಯೋಜನೆಯನ್ನು ರೂಪಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪ್ರತಿ ಶನಿವಾರ ನಡೆಸಲು ಸಿದ್ಧತೆ ನಡೆದಿದೆ.

ಈ ಹಿಂದೆ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರು ಮಾಡಿರುವುದು ಸಾಕಷ್ಟು ಸದ್ದು ಮಾಡಿತ್ತು. ಇದೀಗ ರಾಜ್ಯದಲ್ಲೂ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಇಂಗ್ಲಿಷ್‌ ಕಲಿಯುವ ಅವಕಾಶ ಕಲ್ಪಿಸಲು ಮುಂದಾಗಿದೆ.

2024-25ರ ಶೈಕ್ಷಣಿಕ ವರ್ಷದಿಂದ ಸ್ಪೋಕನ್ ಕ್ಲಾಸ್ ಶುರುವಾಗಲಿದೆ. ಸರ್ಕಾರಿ ಶಾಲೆಗಳಲ್ಲಿರುವ ಇಂಗ್ಲಿಷ್ ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್ ಪಾಠ ಮಾಡಲಾಗುತ್ತದೆ. ಈ ಬಗ್ಗೆ ವಿಶೇಷ ತರಬೇತಿಯನ್ನು ನೀಡಲಾಗಿದ್ದು, ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿ ಶುರು ಮಾಡಲಾಗುತ್ತದೆ. ಈ ಮೂಲಕ ಸರಕಾರಿ ಶಾಲೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ ಆಗಿರುವ ಇಂಗ್ಲಿಷ್ ಭಾಷೆಯನ್ನು ಕರಗತಗೊಳಿಸಲು ಇದು ಸಹಕಾರಿ ಆಗಲಿದೆ.

ಎಸ್‌ಎಸ್‌ಎಲ್‌ಸಿ ಮುಗಿದ ಮೇಲೆ ಇಂಗ್ಲಿಷ್‌ ಬರಲ್ಲ ಎಂಬ ಕಾರಣಕ್ಕೆ ವಿಜ್ಞಾನ ಬಿಟ್ಟು ಬೇರೆ ಬೇರೆ ಕೋರ್ಸ್‌ ಸೇರುವ ಅವಶ್ಯಕತೆಯು ಇರುವುದಿಲ್ಲ. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಮುಗಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ(JEE), ಎನ್ ಇಇಟಿ(NEET), ಸಾಮಾನ್ಯ ಪ್ರವೇಶ ಪರೀಕ್ಷೆ(CET)ಗಳನ್ನು ಎದುರಿಸಲು ವೃತ್ತಿಪರಕೋರ್ಸ್‌ಗಳಾದ ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ಗೆ ಪ್ರವೇಶ ಪಡೆಯಲು ಇಂಗ್ಲೀಷ್ ಭಾಷೆ ಅಗತ್ಯವಿದ್ದ ಕಾರಣ ವಿದ್ಯಾರ್ಥಿಗಳು ಹೆದರುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಾಲೆಗಳ ಹಂತದಲ್ಲೇ ಸ್ಪೋಕನ್ ಇಂಗ್ಲೀಷ್ ತರಬೇತಿಯನ್ನು ನೀಡಿದರೇ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಎದುರಿಸಲು ಸಹಕಾರಿಯಾಗುತ್ತದೆ ಎಂದು ಶಿಕ್ಷಣ ಇಲಾಖೆ ಈ ಮಹತ್ವದ ಹೆಜ್ಜೆ ಇಟ್ಟಿದೆ.

ಇದನ್ನೂ ಓದಿ: Vijayanagara News : ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

ಇಂಗ್ಲಿಷ್‌ನಲ್ಲೇ ಮಾತಾಡಬೇಕು!

ಪ್ರತಿ ಶನಿವಾರದ 3ನೇ ತರಗತಿಯನ್ನು ಸ್ಪೋಕನ್ ಇಂಗ್ಲಿಷ್‌ಗೆ ಮೀಸಲಿಡಲಾಗುತ್ತದೆ. ಸುಮಾರು 40 ನಿಮಿಷದ ಅವಧಿಯಲ್ಲಿ ಮಕ್ಕಳು ಇಂಗ್ಲಿಷ್‌ನಲ್ಲಿ ಮಾತ್ರ ಮಾತನಾಡಬೇಕು. ಈ ಮೂಲಕ ವಿದ್ಯಾರ್ಥಿಗಳು, ಸಹಜವಾಗಿ ಇಂಗ್ಲಿಷ್ ಕಲಿಯಲು ಪೂರಕ ವಾತಾವರಣವನ್ನು ಸೃಷ್ಟಿಸಬೇಕೆಂಬ ಸೂಚನೆ ನೀಡಲಾಗಿದೆ.

ಇಂಗ್ಲಿಷ್ ತರಗತಿ ಹೇಗಿರಲಿದೆ?

ಶಾಲೆಯಲ್ಲಿ ವಿದ್ಯಾರ್ಥಿಗಳ ತಂಡವೊಂದು ರಚಿಸಲಾಗುತ್ತದೆ. ಸಂಭಾಷೆ, ನಾಟಕ, ಕಥೆ ಹೇಳುವುದು, ಅನುಭವಗಳನ್ನು ಹಂಚಿಕೆಕೊಳ್ಳುವುದೆಲ್ಲವೂ ಸ್ಪೋಕನ್‌ ಇಂಗ್ಲಿಷ್‌ ಕ್ಲಾಸ್‌ನಲ್ಲಿ ಇರಲಿದೆ. ಶಾಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಂದಲೇ ಇಂಗ್ಲಿಷ್‌ನಲ್ಲಿ ನಿರೂಪಣೆ ಮಾಡಿಸಲಾಗುತ್ತದೆ. ಇಂಗ್ಲಿಷ್‌ನಲ್ಲಿ ನಿರ್ವಹಣೆ ಮಾಡುವುದು ಹೇಗೆ ಎಂದು ತಿಳಿಸಿಕೊಡಲಾಗುತ್ತದೆ. ಎಲ್‌ಕೆಜಿಯಿಂದ ನಲಿ-ಕಲಿ ತರಗತಿಗಳಿಗೆ ವಿವಿಧ ರೀತಿಯ ಚಾರ್ಟ್ ರಚಿಸುವುದು. ಮಾನವನ ಶರೀರದ ಭಾಗಗಳು, ಹಣ್ಣು- ತರಕಾರಿಗಳು, ಬಣ್ಣಗಳು, ವಾಹನಗಳು ಸೇರಿ ಇತರೆ ಚಿತ್ರ/ಭಾಗಗಳನ್ನು ಗುರುತಿಸಿ ದಾಖಲಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Aaron Jones
ಕ್ರಿಕೆಟ್7 mins ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್12 mins ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 202419 mins ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

education News
ಬೆಂಗಳೂರು31 mins ago

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Sushant Singh Rajput's sister cries as she visits Kedarnath
ಬಾಲಿವುಡ್36 mins ago

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

PM Narendra Modi
ದೇಶ40 mins ago

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

Muthyala Maduvu Waterfalls
ಪ್ರವಾಸ56 mins ago

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

CAN vs USA
ಕ್ರೀಡೆ1 hour ago

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

Raveena Tandon attacked In Mumbai After Being Accused Of Rash Driving
ಬಾಲಿವುಡ್1 hour ago

Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

gold rate today
ಕರ್ನಾಟಕ1 hour ago

Gold Rate Today: ಬಂಗಾರ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು20 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌