8 ಬಾರಿ ಶಾಸಕ ಉಮೇಶ್‌ ಕತ್ತಿ ಇನ್ನು 8 ತಿಂಗಳು ಇದ್ದಿದ್ದರೆ ಧರ್ಮ ಸಿಂಗ್‌ ದಾಖಲೆ ಮುರಿಯುತ್ತಿದ್ದರು ! - Vistara News

ಉಮೇಶ್ ಕತ್ತಿ

8 ಬಾರಿ ಶಾಸಕ ಉಮೇಶ್‌ ಕತ್ತಿ ಇನ್ನು 8 ತಿಂಗಳು ಇದ್ದಿದ್ದರೆ ಧರ್ಮ ಸಿಂಗ್‌ ದಾಖಲೆ ಮುರಿಯುತ್ತಿದ್ದರು !

ರಾಜ್ಯದ ಇತರೆಡೆಗಳಲ್ಲಿ ಉಮೇಶ್‌ ಕತ್ತಿ ಅವರ ಮಾತುಗಳು ವ್ಯಂಗ್ಯ, ವಿರೋಧದ ಅಲೆಗಳನ್ನು ಎಬ್ಬಿಸುತ್ತಿದ್ದವಾದರೂ ಸ್ವಕ್ಷೇತ್ರ ಹುಕ್ಕೇರಿ ಹಾಗೂ ಬೆಳಗಾವಿ ಜಿಲ್ಲೆಯ ಜನರು ಮಾತ್ರ ಕತ್ತಿ ಅವರನ್ನು ಗಟ್ಟಿಯಾಗಿ ಅಪ್ಪಿಕೊಂಡಿದ್ದರು.

VISTARANEWS.COM


on

Umesh Katti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಅರಣ್ಯ ಖಾತೆ ಸಚಿವ ಉಮೇಶ್‌ ಕತ್ತಿ ನಿಧನರಾಗಿದ್ದಾರೆ. ಉಮೇಶ್‌ ಕತ್ತಿ ಎಂದ ಕೂಡಲೆ ಇತ್ತೀಚಿನ ದಿನಗಳಲ್ಲಿ, ಇತ್ತೀಚಿನ ವರ್ಷಗಳಲ್ಲಿ ನೆನಪಾಗುವುದು ಅವರ ಮಾತು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು, ನಾನು ಸಿಎಂ ಆಗುತ್ತೇನೆ ಎನ್ನುವ ಮಾತುಗಳು ವಿವಾದದ ಕಿಡಿಯನ್ನು ಹೊತ್ತಿಸುತ್ತಿದ್ದವು.

ಸರ್ಕಾರದ ಹಿರಿಯ ಸಚಿವರು ಎಂದು ಅವರನ್ನು ಹೇಳುವುದು ಅವರ ವಯಸ್ಸಿನ ಕಾರಣಕ್ಕಲ್ಲ, ಸುದೀರ್ಘ ಅವಧಿಯ ಚುನಾವಣೆ ಗೆಲುವಿನ ಕಾರಣಕ್ಕೆ. ಅವರಿಗೆ ಈಗ 61 ವರ್ಷ. ರಾಜಕಾರಣದಲ್ಲಿ 61 ಎನ್ನುವುದು ಹೆಚ್ಚಿನ ವಯಸ್ಸಲ್ಲ. ಬಿಜೆಪಿಯ ಅಘೋಷಿತ ನಿವೃತ್ತಿ ವಯೋಮಾನದ ಪ್ರಕಾರವೇ ಇನ್ನೂ ಒಂದೂವರೆ ದಶಕ ಅವರು ಸಕ್ರಿಯ ರಾಜಕಾರಣದಲ್ಲಿರಬಹುದಿತ್ತು.

ಹಿರಿತನ ಹಾಗೂ ೩೭ ವರ್ಷಗಳ ರಾಜಕೀಯ ಅನುಭವ ಹೊಂದಿದ್ದ ಅವರು ೧೯೮೫ರಲ್ಲಿ ಜನತಾ ಪಕ್ಷದ ಮೂಲಕ ರಾಜಕೀಯಕ್ಕೆ ಪ್ರವೇಶ ಪಡೆದುಕೊಂಡಿದ್ದರು. ಬಳಿಕ ಜೆಡಿಎಸ್‌, ಕಾಂಗ್ರೆಸ್‌ ಸೇರ್ಪಡೆಗೊಂಡು ಅಂತಿಮವಾಗಿ ಬಿಜೆಪಿ ಮೂಲಕ ರಾಜಕೀಯ ನೆಲೆಯನ್ನು ಗಟ್ಟಿಗೊಳಿಸಿದ್ದರು. ಒಟ್ಟಾರೆಯಾಗಿ ಅವರು ರಾಜ್ಯ ಕಂಡ ಅತ್ಯಂತ ಮುತ್ಸದ್ದಿ ನಾಯಕ ಎನಿಸಿಕೊಂಡಿದ್ದರು.

ಒಟ್ಟು ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗುವ ದಾಖಲೆ ಬರೆದಿದ್ದರು. ಕರ್ನಾಟಕದಲ್ಲಿ ಈ ದಾಖಲೆಯನ್ನು ಇಬ್ಬರು ಬರೆದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಒಂಭತ್ತು ಬಾರಿ ಜಯಿಸಿದ್ದರೆ ಮಾಜಿ ಸಿಎಂ ದಿವಂಗತ ಎನ್‌. ಧರ್ಮ ಸಿಂಗ್‌ ಅವರು ಎಂಟು ಬಾರಿ ಶಾಸಕರಾಗಿದ್ದರು. ಹುಕ್ಕೇರಿ ಕ್ಷೇತ್ರವನ್ನು ಎಂಟು ಬಾರಿ ಪ್ರತಿನಿಧಿಸಿದ್ದ ಉಮೇಶ್‌ ಕತ್ತಿ ಅವರೇ ಹೇಳಿಕೊಂಡಂತೆ ಇನ್ನೂ 15 ವರ್ಷ ಅವರು ಶಾಸಕರಾಗಿರುತ್ತಿದ್ದರು. 2023ರಲ್ಲಿ ಜಯಿಸಿದ್ದರೆ ಧರ್ಮ ಸಿಂಗ್‌ ಅವರ ದಾಖಲೆಯನ್ನು ಮುರಿದು ಮಲ್ಲಿಕಾರ್ಜುನ ಖರ್ಗೆ ಅವರ ಸರಿಸಾಟಿಯಾಗಿ ನಿಲ್ಲುತ್ತಿದ್ದರು.

ಆಗಸ್ಟ್‌ ಮೊದಲ ವಾರದಲ್ಲಿ ವಿಜಯಪುರದಲ್ಲಿ ಮಾತನಾಡಿದ್ದ ಕತ್ತಿ, ಈಗಲೂ ಹೇಳ್ತೀನಿ, ನಾನು ಸಿಎಂ ಆಕಾಂಕ್ಷಿ. 75 ವರ್ಷಕ್ಕೂ ನಾನು ಆಕಾಂಕ್ಷಿ. ನಸೀಬು ಇದ್ರೆ ನಾಳೆನೇ ಸಿಎಂ ಆಗಬಹುದು.. 15 ವರ್ಷ ಆದ್ಮೇಲೆಯೂ ಸಿಎಂ ಸೀಟ್ ಬರಬಹುದು..ʼʼ ಎಂದರು ಕತ್ತಿ. ಆದರೆ, ಈಗ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿಯನ್ನು ಕಿತ್ತು ಹಾಕಿ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಕೇಳುವವ ನಾನಲ್ಲ ಎಂದರು. ʻʻನನಗೆ ಇನ್ನೂ ೧೫ ವರ್ಷದ ಅವಕಾಶವಿದೆ. ಹಾಗಾಗಿ ಅವಸರವೇನೂ ಇಲ್ಲʼʼ ಎಂದಿದ್ದರು.

ಪ್ರತ್ಯೇಕ ರಾಜ್ಯಕ್ಕೆ ಲಾಜಿಕ್‌ !

ಉಮೇಶ್‌ ಕತ್ತಿ ಪ್ರತ್ಯೇಕ ರಾಜ್ಯದ ಮಾತನ್ನು ಆಡಿದ ಕೂಡಲೆ ವಿವಾದ ಭುಗಿಲೇಳುತ್ತಿತ್ತು. ಆದರೆ ಕತ್ತಿ ಎಂದಿಗೂ ಅದಕ್ಕೆ ನಗುನಗುತ್ತಲೇ ಉತ್ತರಿಸುತ್ತಿದ್ದರು. ಕತ್ತಿ ಅವರ ಸ್ನೇಹಿತರೂ ಆದ ಹಿರಿಯ ಸಚಿವ ಗೋವಿಂದ ಕಾರಜೋಳ ಅವರು ಹೇಳಿವಂತೆ, ಪ್ರತ್ಯೇಕ ರಾಜ್ಯದ ಬೇಡಿಕೆ ಎನ್ನುವುದನ್ನು ಗಂಭೀರವಾಗಿ ಹೇಳುತ್ತಿರಲಿಲ್ಲ. ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿಯಬಾರದು ಎನ್ನುವುದು ಅವರ ಮನದಾಳದ ಇಂಗಿತವಾಗಿತ್ತು. ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳೀದಿರುವುದಕ್ಕೆ ಪ್ರತ್ಯೇಕ ರಾಜ್ಯದ ಬೇಡಿಕೆ ಎನ್ನುತ್ತಿದ್ದ ಉಮೇಶ್‌ ಕತ್ತಿ ಇತ್ತೀಚೆಗೆ ಹೊಸ ಲಾಜಿಕ್‌ ಮುಂದಿಡುತ್ತಿದ್ದರು.

ಜೂನ್‌ನಲ್ಲಿ ಈ ಬಗ್ಗೆ ಮಾತನಾಡಿದ್ದ ಕತ್ತಿ, ದೇಶದಲ್ಲಿ 30 ರಾಜ್ಯಗಳಿವೆ. ಈ ಪೈಕಿ 50 ರಾಜ್ಯಗಳನ್ನಾಗಿ ಮಾಡಬೇಕು ಎನ್ನುವ ಚರ್ಚೆ ಆಗ್ತಿದೆ. ಉತ್ತರ ಪ್ರದೇಶದಲ್ಲಿ 21 ಕೋಟಿ ಜನಸಂಖ್ಯೆ ಇದ್ದು 4 ರಾಜ್ಯವಾಗಬೇಕು. ಮಹಾರಾಷ್ಟ್ರದಲ್ಲಿ 11 ಕೋಟಿ ಜನಸಂಖ್ಯೆ ಇದ್ದು ಅದನ್ನು 3 ರಾಜ್ಯ ಮಾಡಬೇಕು. ಅದರಂತೆ ಕರ್ನಾಟಕ ಆರೂವರೆ ಕೋಟಿ ಜನಸಂಖ್ಯೆ ಇದೆ. ಈ ಹಿನ್ನೆಲೆ ಎರಡು ರಾಜ್ಯಗಳಾಗಿ ವಿಂಗಡಣೆ ಆಗಬೇಕು ಎಂದಿದ್ದರು.

ನಾನು 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯವಾಗಬೇಕು. ಮುಂದೆಯೂ ಬಿಜೆಪಿಯಲ್ಲಿಯೇ ಇರುತ್ತೇನೆ. ಬಿಜೆಪಿಯಲ್ಲಿದ್ದು ಮುಖ್ಯಮಂತ್ರಿ ಆಗುವ ಅರ್ಹತೆ ನನಗಿದೆ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ. ಕರ್ನಾಟಕ ಎರಡು ಭಾಗ ಆಗಬೇಕು, ನಾವು ಕೂಡಾ ಕನ್ನಡ ಭಾಷೆಯನ್ನೇ ಮಾತನಾಡುತ್ತೇವೆ. ನಾವು ಅಚಲ ಕನ್ನಡಿಗರು ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದರು.

ಅಪ್ಪನಂಥ ಕಾರ್ಯಕ್ರಮ ಮಾಡಲೇ ಇಲ್ಲ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕುರಿತು ಆಗಾಗ್ಗೆ ಕಟುವಾಗಿ ಮಾತನಾಡುತ್ತಿದ್ದ ಉಮೇಶ್‌ ಕತ್ತಿ, ಆಗಸ್ಟ್‌ನಲ್ಲಿ ಮಾತನಾಡುವಾಗ ಸಿದ್ದರಾಮೋತ್ಸವದ ಕುರಿತು ಪ್ರತಿಕ್ರಿಯಿಸಿದ್ದರು. ʻʻಸಿದ್ದರಾಮೋತ್ಸವದಿಂದ ನಮಗ್ಯಾಕ್ರಿ ನಡುಕ ಹುಟ್ಟತದರೀ.. ಸಿದ್ದರಾಮಯ್ಯನ ಅಪ್ಪನಂತ ಕಾರ್ಯಕ್ರಮ ಹಿಂದೆಯೂ ಮಾಡಿದ್ದೇವೆ.. ಮುಂದೆಯೂ ಮಾಡ್ತೇವೆ.. ಕಾರ್ಯಕ್ರಮ ರೂಪಿಸುವ ಬಗ್ಗೆ ಪಕ್ಷ ಚಿಂತನೆ ನಡೆಸಲಿದೆ. ಪಕ್ಷದ ಅಧ್ಯಕ್ಷರಿದ್ದಾರೆ.. ಅವರು ಚಿಂತನೆ ಮಾಡ್ತಾರೆ. ಅವರು ಏನು ಮಾರ್ಗದರ್ಶ ಮಾಡ್ತಾರೋ ಹಾಗೆ ನಾವು ಮಾಡ್ತೇವೆʼʼ ಎಂದಿದ್ದರು.

ಆದರೆ ಬಿಜೆಪಿಯಿಂದ ಬೃಹತ್‌ ಕಾರ್ಯಕ್ರಮಗಳ ಸರಣಿಯಲ್ಲಿ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸೆಪ್ಟೆಂಬರ್‌ 8ರಂದು ನಡೆಯಬೇಕಿರುವ ಎರಡು ದಿನ ಮೊದಲು ಉಮೇಶ್‌ ಕತ್ತಿ ಇಹಲೋಕ ತ್ಯಜಿಸಿದ್ದಾರೆ. ಇನ್ನುಮುಂದೆ ಉಮೇಶ್‌ ಕತ್ತಿ ಅವರ ವಿಶೇಷ ಶೈಲಿಯ ʼಕತ್ತಿʼ ವರಸೆಯ ಹೇಳಿಕೆಗಳನ್ನು, ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತ ನಿಜವಾದ ಕಾಳಜಿಯುಳ್ಳ ವ್ಯಕ್ತಿಯನ್ನು ಕರ್ನಾಟಕ ಮಿಸ್‌ ಮಾಡಿಕೊಳ್ಳಲಿದೆ.

ಇದನ್ನೂ ಓದಿ | Umesh Katti | ಬುಧವಾರ ಸಚಿವ ಉಮೇಶ್‌ ಕತ್ತಿ ಅವರ ಅಂತ್ಯಕ್ರಿಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಮೇಶ್ ಕತ್ತಿ

ಅಧಿವೇಶನ | ಕತ್ತಿ ಅಜಾತಶತ್ರು, ಬೆಳಗಾವಿಗೆ ಹೋದಾಗ ಜತೆಗೇ ಊಟ ಕೂಡಾ ಮಾಡ್ತಾ ಇದ್ವಿ ಎಂದ ಸಿದ್ದರಾಮಯ್ಯ

ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಸಿದ್ದರಾಮಯ್ಯ ಅವರು ಉಮೇಶ್‌ ಕತ್ತಿ ಅವರ ಬಗ್ಗೆ ಮಾತನಾಡಿದರು.

VISTARANEWS.COM


on

election-2023-siddaramaiah to contest from only one constituency
Koo

ಬೆಂಗಳೂರು: ವಿಧಾನ ಮಂಡಲದ ಮಳೆಗಾಲದ ಅಧಿವೇಶನದ ಮೊದಲ ದಿನ ನಮ್ಮನ್ನು ಅಗಲಿದ ಮಾಜಿ ಸಚಿವರಾದ ಉಮೇಶ್‌ ಕತ್ತಿ, ಪ್ರಭಾಕರ ರಾಣೆ ಸೇರಿದಂತೆ ಹಲವು ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಂತಾಪ ಸೂಚಿಸಿ ಮಾತನಾಡಿದ ಮಾಜಿ ಸಿಎಂ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಉಮೇಶ್‌ ಕತ್ತಿ ನನಗೂ ಬಹಳ ಆತ್ಮೀಯ. ಲೋಕೋಪಯೋಗಿ ಸಚಿವನಾಗಿದ್ದಾಗ ನನ್ನ ಬಳಿ ಯಾವಾಗಲೂ ಬರುತ್ತಿದ್ದರು. ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ನಾನು ಬೆಳಗಾವಿಗೆ ಹೋಗಿದ್ದಾಗ ಊಟಕ್ಕೆ ಕರೆದಿದ್ದರು. ತುಂಬ ಹೊತ್ತು ರಾಜಕೀಯವಾಗಿ ಚರ್ಚೆ ಮಾಡಿದೆವುʼʼ ಎಂದು ನೆನಪಿಸಿಕೊಂಡರು.

ʻʻಬೆಳಗಾವಿ ರಾಜಕಾರಣದಲ್ಲಿ ತಮ್ಮದೇ ಆದ ಪ್ರಭಾವ ಬೆಳೆಸಿಕೊಂಡಿದ್ದ ಉಮೇಶ್‌ ಕತ್ತಿ ವರ್ಣರಂಜಿತ ರಾಜಕಾರಣಿ. ಆಡಳಿತ ಮತ್ತು ವಿಪಕ್ಷ ಶಾಸಕರ ಜತೆ ಸ್ನೇಹ ಜೀವಿಯಾಗಿ ಇದ್ದ ಅವರು ಅಜಾತಶತ್ರುʼʼ ಎಂದರು ಸಿದ್ದರಾಮಯ್ಯ. ಅವರು ಕಾಲಿಟ್ಟ ಎಲ್ಲ ರಂಗಗಳಲ್ಲೂ ಯಶಸ್ವಿ ಆಗಿದ್ದರು ಎಂದು ನೆನಪು ಮಾಡಿಕೊಂಡರು.

ʻʻಕತ್ತಿಗೆ ಪ್ರತ್ಯೇಕ ರಾಜ್ಯದ ಬೇಡಿಕೆ ಇಡಬೇಡ ಅಂತ ವೈಯಕ್ತಿಕ ಸಲಹೆ ಕೊಟ್ಟಿದ್ದೆ. ಉತ್ತರ ಕರ್ನಾಟಕ ಅಭಿವೃದ್ಧಿಗೆ ಬೇಡಿಕೆ ಇಡು, ಅಭಿವೃದ್ಧಿ ಬಗ್ಗೆ ಮಾತಾಡು, ಪ್ರತ್ಯೇಕತೆ ಮಾತು ಬೇಡ ಅಂದಿದ್ದೆʼʼ ಎಂದು ಸಿದ್ದರಾಮಯ್ಯ ಹೇಳಿದರು.

ಸಲೀಂ ಅಹ್ಮದ್ ಸಂತಾಪ
ಕಾಂಗ್ರೆಸ್‌ ಪಕ್ಷದ ಕಾರ್ಯಾಧ್ಯಕ್ಷರೂ ಆಗಿರುವ ಎಂಎಲ್‌ಸಿ ಸಲೀಂ ಅಹಮದ್‌ ಅವರು ವಿಧಾನಪರಿಷತ್‌ನಲ್ಲಿ ಮಾತನಾಡಿದರು. ʻʻಉಮೇಶ್‌ ಕತ್ತಿ ಅವರು ಅಪರೂಪದ ರಾಜಕಾರಣಿ, ಮೊನ್ನೆ ಸೆಪ್ಟೆಂಬರ್‌ ೧ರಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತಿಗೆ ಸಿಕ್ಕರು. ಎರಡು ಗಂಟೆಯಲ್ಲಿ ಅನೇಕ ವಿಚಾರಗಳು ಚರ್ಚೆ ಮಾಡಿದೆವು. ಅವರು ತುಂಬಾ ಜನರಿಗೆ ಉದ್ಯೋಗ ಕೊಟ್ಟರು. ಅವರ ನಿಧನವನ್ನು ಅರಗಿಸಿಕೊಳ್ಳಲಾಗುತ್ತಿಲ್ಲʼʼ ಎಂದರು.

Continue Reading

ಉಮೇಶ್ ಕತ್ತಿ

ಅಧಿವೇಶನ | ಎಲ್ಲ ಪಕ್ಷಗಳ ಬಿ ಫಾರಂ ನನ್ನ ಕಿಸೆಯಲ್ಲಿದೆ ಅಂತಿದ್ದರು ಕತ್ತಿ, ನೆನಪು ಮಾಡಿಕೊಂಡ ಬೊಮ್ಮಾಯಿ

ವಿಧಾನ ಮಂಡಲ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರಾಗಿದ್ದ ಉಮೇಶ್‌ ಕತ್ತಿ ಸೇರಿದಂತೆ ಈ ಅವಧಿಯಲ್ಲಿ ನಿಧನರಾದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

VISTARANEWS.COM


on

Umesh katti bommai
ಬೆಳಗಾವಿಯಲ್ಲಿ ನಡೆದ ಚುನಾವಣೆ ಸಂಬಂಧಿತ ಸಭೆಯಲ್ಲಿ ಉಮೇಶ್‌ ಕತ್ತಿ ಮತ್ತು ಸಿಎಂ ಬೊಮ್ಮಾಯಿ
Koo

ಬೆಂಗಳೂರು: ಉಮೇಶ್‌ ಕತ್ತಿ ಅವರು ತುಂಬಾ ಆತ್ಮೀಯ ನಡವಳಿಕೆಯ ವ್ಯಕ್ತಿ. ಕ್ಷೇತ್ರದ ಜನರಿಗೆ ಬಹಳ ಪ್ರೀತಿ ಪಾತ್ರರಾಗಿದ್ದರಲ್ಲದೆ, ಎಲ್ಲ ರಾಜಕೀಯ ನಾಯಕರ ಜತೆಗೂ ತುಂಬ ಒಳ್ಳೆಯ ಸಂಬಂಧ ಹೊಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸೋಮವಾರ ಆರಂಭಗೊಂಡ ವಿಧಾನಸಭಾ ಅಧಿವೇಶನದ ಆರಂಭದ ದಿನ ಉಮೇಶ್‌ ಕತ್ತಿ ಸೇರಿದಂತೆ ಹಲವು ನಾಯಕರು, ಗಣ್ಯರ ನಿಧನಕ್ಕೆ ಸಂತಾಪ ಸೂಚಿಸಿ ಅವರು ಮಾತನಾಡಿದರು.

ʻʻಎಲ್ಲವೂ ಸರಿ ಇದ್ದಿದ್ದರೆ ಇಂದು ಉಮೇಶ್ ಕತ್ತಿ ನಮ್ಮ ಜತೆ ಇರಬೇಕಿತ್ತು. ಮೊದಲ ಸಾಲಿನಲ್ಲಿ ಅವರು ಕೂರಬೇಕಿತ್ತುʼʼ ಎಂದು ಹೇಳಿದ ಬೊಮ್ಮಾಯಿ ಅವರು, ಉಮೇಶ್‌ ಕತ್ತಿ ಅವರು ಎಲ್ಲ ಪಾರ್ಟಿಗಳ ಬಿ ಫಾರಂ ನನ್ನ ಕಿಸೆಯಲ್ಲಿದೆ ಎಂದು ಹೇಳ್ತಿದ್ದರುʼʼ ಎಂದರು. ೧೯೮೫ರಲ್ಲಿ ಮೊದಲ ಬಾರಿ ಶಾಸಕರಾದ ಕತ್ತಿ ಅವರು ಬಳಿಕ ಆರು ಪಕ್ಷಗಳಲ್ಲಿ ಹುಕ್ಕೇರಿ ಕ್ಷೇತ್ರದಲ್ಲಿ ಚುನಾವಣೆಗೆ ನಿಂತು ಎಂಟು ಬಾರಿ ಗೆದ್ದು ಶಾಸಕರಾಗಿದ್ದಾರೆ. ೧೯೮೫ರಲ್ಲಿ ಜನತಾ ಪಕ್ಷದಿಂದ, ೧೯೮೯, ೧೯೯೪ರಲ್ಲಿ ಜನತಾ ದಳದಿಂದ, ೧೯೯೯ರಲ್ಲಿ ಸಂಯುಕ್ತ ಜನತಾದಳದಿಂದ, ೨೦೦೪ರಲ್ಲಿ ಕಾಂಗ್ರೆಸ್‌ನಿಂದ (ಆಗ ಸೋತಿದ್ದರು) ಸ್ಪರ್ಧಿಸಿದ್ದರು. ೨೦೦೪ರಲ್ಲಿ ಮತ್ತೆ ಜೆಡಿಎಸ್‌ಗೆ ಬಂದರಾದರೂ ಗೆದ್ದ ಬಳಿಕ ಆಪರೇಷನ್‌ ಕಮಲದ ಮೂಲಕ ಬಿಜೆಪಿ ಸೇರಿದ್ದರು. ಅಲ್ಲಿಂದ ಬಳಿಕ ಅವರು ಬಿಜೆಪಿಯಲ್ಲೇ ಇದ್ದಾರೆ.

ಸಹಕಾರಿ ಸಕ್ಕರೆ ಕಾರ್ಖಾನೆ ಜನಕ
ʻʻಬೆಳಗಾವಿ ಜಿಲ್ಲೆಯಲ್ಲಿ ಇಷ್ಟೊಂದು ಸಕ್ಕರೆ ಕಾರ್ಖಾನೆಗಳು ಬೆಳೆಯಲು, ಈ ಮಟ್ಟಕ್ಕೆ ಅಭಿವೃದ್ಧಿ ಕಾಣಲು ಉಮೇಶ್‌ ಕತ್ತಿ ಅವರೇ ಕಾರಣ. ಅದರಲ್ಲೂ ಸಹಕಾರಿ ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಇವರೇ ಮೂಲ ಪುರುಷರುʼʼ ಎಂದು ಹೇಳಿದರು ಬಸವರಾಜ ಬೊಮ್ಮಾಯಿ.

ಕತ್ತಿ ಅವರು ಜನರ ಜತೆ ಸೇರಿ ಬೆಳೆದ ರಾಜಕಾರಣಿ ಎಂದು ಹೇಳಿದ ಬೊಮ್ಮಾಯಿ ಅವರು ಹುಕ್ಕೇರಿ ಕ್ಷೇತ್ರವನ್ನು ದಾಟಿ ಹೋಗುವಾಗ ಬೆಲ್ಲದ ಚಹ ಕುಡಿದು ಸ್ನೇಹಯುತವಾಗಿ ಮಾತನಾಡಿಸಿಕೊಂಡೇ ಹೋಗಬೇಕಾಗಿತ್ತು ಎಂದು ನೆನಪು ಮಾಡಿಕೊಂಡರು.

ʻʻದೇವೇಗೌಡರು ಮೊದಲ ಬಾರಿ ಸಂಪುಟ ರಚನೆ ಮಾಡಿದಾಗ ಅವಕಾಶ ಕೊಡಲಿಲ್ಲ ಸಹಜವಾಗಿ ಬೇಸರ ವ್ಯಕ್ತಪಡಿಸಿದರು. ನಂತರ ನಡೆದ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ತಮ್ಮ ಟೀಮನ್ನು ಪ್ರತ್ಯೇಕವಾಗಿ ಗೆಲ್ಲಿಸಿಕೊಂಡುಬಂದರು. ಜೈಲು ಖಾತೆ ಕೊಟ್ಟಾಗ ಕಾಯಂ ಆಗಿ ನನ್ನನ್ನು ಜೈಲಿಗೆ ಹಾಕುವ ಯೋಚನೆ ಮಾಡಿದ್ದೀರಾ ಎಂದು ಹಾಸ್ಯ ಮಾಡಿದರು. ಖಾತೆಯನ್ನು ಚೆನ್ನಾಗಿ ನಿಭಾಯಿಸಿದರುʼʼ ಎಂದರು ಬೊಮ್ಮಾಯಿ.

ರಾಗಿ, ಜೋಳ, ಸಿರಿಧಾನ್ಯದ ಮೂಲಕ ಪಡಿತರ ಕ್ರಾಂತಿ
ʻʻಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವರಾದ ಬಳಿಕ ಪಡಿತರಕ್ಕೆ ರಾಗಿ ಮತ್ತು ಜೋಳ ಸೇರಿಸಬೇಕು ಎಂಬ ಪ್ರಸ್ತಾವನೆಯನ್ನು ಮುಂದಿಟ್ಟರು. ಇವತ್ತು ರಾಜ್ಯದ ಪಡಿತರ ವ್ಯವಸ್ಥೆಯಲ್ಲಿ ರಾಗಿ ಮತ್ತು ಜೋಳ ಇದ್ದರೆ, ಸಿರಿಧಾನ್ಯ ಇದ್ದರೆ ಅದಕ್ಕೆ ಕಾರಣ ಉಮೇಶ್‌ ಕತ್ತಿʼʼ ಎಂದು ಶ್ಲಾಘಿಸಿದರು ಬೊಮ್ಮಾಯಿ.

ರಾಜ್ಯ ವಿಭಾಗ ಆಗಬೇಕು ಅನ್ನೋ ನಿಲುವಲ್ಲ ಅವರದು
ಕತ್ತಿ ಅಂದ ಕೂಡಲೇ ಪ್ರತ್ಯೇಕ ರಾಜ್ಯ ಕೇಳುವವರು ಎಂಬ ಪ್ರತೀತಿ ಇದೆ. ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಇದಕ್ಕೆ ಬೇರೆ ಆಯಾಮ ನೀಡಿದರು.
ʻʻಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಆಗಬೇಕು ಅನ್ನೋ ಆಸೆ ಅವರಿಗೆ ಇತ್ತು. ಹೀಗಾಗಿಯೇ ಅವರು ಕೆಲವು ಸಲ ವಿವಾದಾತ್ಮಕ ಹೇಳಿಕೆ ಕೊಡುತ್ತಿದ್ದರು. ಆದರೆ, ಮೂಲತಃ ಅವರಿಗೆ ರಾಜ್ಯ ಎರಡಾಗಬೇಕು ಎನ್ನುವ ಯಾವುದೇ ಅಭಿಪ್ರಾಯ ಇರಲಿಲ್ಲ. ಅಭಿವೃದ್ಧಿಯ ಸಲುವಾಗಿ ನಿರಂತರ ಒತ್ತಡ ಇರಬೇಕು ಎಂದು ಭಾವಿಸಿದ್ದರುʼʼ ಎಂದು ಹೇಳಿದರು.

ʻʻಆನೆಗಳು ಊರಿನ ಒಳಗೆ ಬರುತ್ತಿವೆ ಏನು ಮಾಡಬೇಕುʼʼ ಎಂದು ಕೇಳಿದಾಗ ʻʻಜನ ಅರಣ್ಯಕ್ಕೆ ಹೋಗವುದನ್ನು ಬಿಡಲಿ. ಆನೆ ನಾಡಿಗೆ ಬರಲ್ಲʼʼ ಎಂದು ನೇರವಾಗಿ ಹೇಳುವಷ್ಟು ಖಡಕ್‌ತನ ಅವರಲ್ಲಿತ್ತು ಎಂದರು ಬೊಮ್ಮಾಯಿ.

Continue Reading

ಉಮೇಶ್ ಕತ್ತಿ

Umesh Katti | ಕತ್ತಿ ನಿವಾಸಕ್ಕೆ ಅರುಣ್‌ ಸಿಂಗ್‌ ಸೇರಿ ಬಿಜೆಪಿ ನಾಯಕರ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಮುನಿರತ್ನ, ಎಂಟಿಬಿ ನಾಗರಾಜ್, ಭೈರತಿ ಬಸವರಾಜ್, ಜೆ.ಸಿ.ಮಾಧುಸ್ವಾಮಿ ಉಮೇಶ್‌ ಕತ್ತಿ‌ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

VISTARANEWS.COM


on

Umesh Katti
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ದಿವಂಗತ ಸಚಿವ ಉಮೇಶ್‌ ಕತ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ವಿವಿಧ ಸಚಿವರು ಭೇಟಿ ನೀಡಿದ್ದರು.
Koo

ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ದಿ. ಸಚಿವ ಉಮೇಶ್‌ ಕತ್ತಿ (Umesh Katti) ಅವರ ನಿವಾಸಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಮುನಿರತ್ನ, ಎಂಟಿಬಿ ನಾಗರಾಜ್, ಭೈರತಿ ಬಸವರಾಜ್, ಜೆ.ಸಿ.ಮಾಧುಸ್ವಾಮಿ ಗುರುವಾರ ಭೇಟಿ ನೀಡಿ ‌ಸಾಂತ್ವನ ಹೇಳಿದರು.

ಉಮೇಶ್ ಕತ್ತಿ ಪತ್ನಿ ಶೀಲಾ, ಸಹೋದರ ರಮೇಶ್ ಕತ್ತಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮುಖಂಡರು, ಕತ್ತಿ ಅವರೊಂದಿಗೆ ಕಳೆದ ಕ್ಷಣಗಳನ್ನು ಮೆಲುಕು ಹಾಕಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿ, ಉಮೇಶ್‌ ಕತ್ತಿ ನನ್ನ ಆತ್ಮೀಯ ಮಿತ್ರ. ಬೆಳಗಾವಿ, ಬೆಂಗಳೂರು, ದೆಹಲಿಯಲ್ಲಿ ಭೇಟಿಯಾದಾಗ ರಾಜ್ಯದ ಅಭಿವೃದ್ಧಿ, ಪಕ್ಷ ಸಂಘಟನೆ ಬಗ್ಗೆ ಹಲವು ಸಲಹೆ ನೀಡುತ್ತಿದ್ದರು. ಉಮೇಶ್‌ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದ ಪಕ್ಷ, ರಾಜ್ಯಕ್ಕೆ ಅಪಾರ ನಷ್ಟವಾಗಿದೆ ಎಂದರು.‌

ಇದನ್ನೂ ಓದಿ | Rain News | ವಿಜಯನಗರ ಜಿಲ್ಲೆಯಲ್ಲಿ ವಿವಿಧೆಡೆ ಮನೆಗಳಿಗೆ ಹಾನಿ, ಅಪಾರ ಪ್ರಮಾಣದ ಬೆಳೆ ನಷ್ಟ

ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ದೂರದೃಷ್ಟಿ, ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ. ಕತ್ತಿ ಅವರ ರಾಜಕೀಯ ಜೀವನವು ಪುಸ್ತಕದ ರೂಪದಲ್ಲಿ ಹೊರ ಬರಬೇಕು ಎಂದರು.

ಆರೋಗ್ಯ ಸಚಿವ ಕೆ.ಸುಧಾಕರ್ ಮಾತನಾಡಿ, ಉಮೇಶ್‌ ಕತ್ತಿ ಅಕಾಲಿಕ ನಿಧನದಿಂದ ರಾಜ್ಯಕ್ಕೆ ನಷ್ಟವಾಗಿದೆ. ಕತ್ತಿ ಆಸ್ಪತ್ರೆಗೆ ದಾಖಲಾದಾಗ ನನಗೆ ಗೊತ್ತಾಯಿತು. ವೈದ್ಯರನ್ನು ಕರೆಸಿ ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಯಿತು. ಆದರೆ ವಿಧಿ ಆಟದ ಮುಂದೆ ನಮ್ಮ ಪ್ರಯತ್ನ ಫಲಿಸಲಿಲ್ಲ ಎಂದರು.

ಅದೇ ರೀತಿ ಬೆಲ್ಲದ ಬಾಗೇವಾಡಿಯ ಉಮೇಶ್ ಕತ್ತಿ ನಿವಾಸಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡ ಭೇಟಿ ನೀಡಿ ಕತ್ತಿ ಪತ್ನಿ, ಮಕ್ಕಳಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಪ್ರಲ್ಹಾದ್‌ ಜೋಶಿ, ಉಮೇಶ್ ಕತ್ತಿ ಕಳೆದ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಭೇಟಿಯಾಗಿದ್ದರು. ಅವರ ಅಕಾಲಿಕ ಸಾವು ನೋವು ತಂದಿದೆ ಎಂದರು.

ಬಾಲಚಂದ್ರ ಜಾರಕಿಹೊಳಿ ಭೇಟಿ
ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೂಡ ಉಮೇಶ್‌ ಕತ್ತಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಾಲಚಂದ್ರ ಜಾರಕಿಹೊಳಿ ಜತೆ ಅಣ್ಣನ ಇತ್ತೀಚಿನ ಸ್ವಾರಸ್ಯಕರ ಸಂಗತಿಗಳ ಬಗ್ಗೆ ರಮೇಶ್‌ ಕತ್ತಿ ಮಾಹಿತಿ ಹಂಚಿಕೊಂಡರು.

“ಒಂದು ತಿಂಗಳ ಅವಧಿಯಲ್ಲಿ ಕ್ಷೇತ್ರದ ಎಲ್ಲ ಹಳ್ಳಿಗಳಿಗೆ ಅಣ್ಣ ಉಮೇಶ್ ಕತ್ತಿ ಸಂಚಾರ ಮಾಡಿದ್ದಾರೆ. ಅಲ್ಲಿ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಪ್ರತಿ ಹಳ್ಳಿ ಸುತ್ತಿ ಕುಡಿಯುವ ನೀರು, ಕೃಷಿಗೆ ನೀರಾವರಿ, ಸಮುದಾಯ ಭವನ ಸೌಲಭ್ಯವನ್ನು ಕಲ್ಪಿಸಿರುವೆ. ಇನ್ನೂ ಏನಾದರೂ ಕಡಿಮೆ ಆಗಿದ್ದರೆ ಹೇಳಿ” ಎಂದು ಜನರ ಬಳಿಯೇ ಕೇಳುತ್ತಿದ್ದರು ಎಂದು ರಮೇಶ್‌ ಕತ್ತಿ ಸ್ಮರಿಸಿದ್ದಾರೆ.

ಬಳಿಕ ತೇರದಾಳ ಶಾಸಕ ಸಿದ್ದು ಸವದಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೂಡ ಆಗಮಿಸಿ ಉಮೇಶ್‌ ಕತ್ತಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಕತ್ತಿ ನಿವಾಸದತ್ತ ಅಭಿಮಾನಿಗಳ ದಂಡು
ಉಮೇಶ್ ಕತ್ತಿ ಕುಟುಂಬವರಿಗೆ ಸಾಂತ್ವನ ಹೇಳಲು ಬೆಲ್ಲದ ಬಾಗೇವಾಡಿಯತ್ತ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಧಾವಿಸಿದ್ದು, ಕತ್ತಿ ಕುಟಂಬದ ನೋವಿನಲ್ಲಿ ಭಾಗಿಯಾಗಿದ್ದಾರೆ. ಅಣ್ಣ ಅಗಲಿದ ನೋವಲ್ಲಿ ಕಣ್ಣೀರು ಹಾಕುತ್ತಿರುವ ರಮೇಶ್ ಕತ್ತಿಯನ್ನು ಅಭಿಮಾನಿಗಳು ತಬ್ಬಿಕೊಂಡು ಸಮಾಧಾನ ಪಡಿಸಿದ್ದಾರೆ.

ಇದನ್ನೂ ಓದಿ | Bharath jodo| ಭಾರತ್‌ ಜೋಡೋ ಒಳ್ಳೆಯ ಕಾರ್ಯಕ್ರಮ: ಪಾಕಿಸ್ತಾನ, ಬಾಂಗ್ಲಾವನ್ನೂ ಜೋಡಿಸಲಿ ಎಂದ ಈಶ್ವರಪ್ಪ

Continue Reading

ಉಮೇಶ್ ಕತ್ತಿ

Umesh katti ತಮ್ಮ ರಮೇಶ್‌ ಕತ್ತಿ ಆರೋಗ್ಯದಲ್ಲಿ ಏರುಪೇರು, ಹೃದಯ ತಪಾಸಣೆ

ಮಂಗಳವಾರ ರಾತ್ರಿ ನಿಧನರಾದ ಸಚಿವ ಉಮೇಶ್‌ ಕತ್ತಿ ಅವರ ಅಂತ್ಯಕ್ರಿಯೆಗೆ ಸಿದ್ಧತೆಗಳು ನಡೆಯುತ್ತಿದೆ. ಈ ನಡುವೆ ಅವರ ತಮ್ಮ ರಮೇಶ್‌ ಕತ್ತಿ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ.

VISTARANEWS.COM


on

Ramesh katti
Koo

ಬೆಳಗಾವಿ: ಮಾಜಿ ಸಚಿವ ಉಮೇಶ್‌ ಕತ್ತಿ ಅವರ ಅಕಾಲಿಕ ನಿಧನದಿಂದ ಕಂಗಾಲಾಗಿರುವ ಅವರ ತಮ್ಮ ರಮೇಶ್‌ ಕತ್ತಿ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗಿನ ಏರುಪೇರು ಕಂಡುಬಂದಿದೆ. ಕೂಡಲೇ ಅವರ ಹೃದಯ ತಪಾಸಣೆ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ‌ಬೆಲ್ಲದ ಬಾಗೇವಾಡಿ ಗ್ರಾಮದ ವಿಶ್ವರಾಜ್ ಶುಗರ್ಸ್ ನಲ್ಲಿ ಉಮೇಶ್‌ ಕತ್ತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ವೇಳೆ ರಮೇಶ್‌ ಕತ್ತಿ ಅವರ ಆರೋಗ್ಯದಲ್ಲೇ ಏರುಪೇರಾಗಿದೆ.

ಉಮೇಶ್‌ ಕತ್ತಿ ಅವರು ಅಸ್ವಸ್ಥರಾಗಿದ್ದಾರೆ ಎಂಬ ಮಾಹಿತಿ ಸಿಗುತ್ತಿದ್ದಂತೆಯೇ ಮಂಗಳವಾರ ರಾತ್ರಿಯೇ ರಮೇಶ್‌ ಕತ್ತಿ ಅವರು ಬೆಳಗಾವಿಯಿಂದ ಬೆಂಗಳೂರಿಗೆ ಧಾವಿಸಿದ್ದರು. ಮತ್ತು ರಾತ್ರಿ ನಿಧನದ ಸುದ್ದಿ ತಿಳಿಯುತ್ತಲೇ ತುಂಬ ನೋವು ಅನುಭವಿಸಿದ್ದರು. ರಾತ್ರಿ ಇಡೀ ನಿದ್ದೆ ಮಾಡದೆ ಅಣ್ಣನ ಜತೆಗಿದ್ದ ರಮೇಶ್‌ ಕತ್ತಿ ಅವರು ಮಧ್ಯಾಹ್ನ ಪಾರ್ಥಿವ ಶರೀರದೊಂದಿಗೆ ಬೆಳಗಾವಿಗೆ ಮರಳಿದ್ದರು.

ಅದಾದ ಬಳಿಕ ವಿಶ್ವರಾಜ್ ಶುಗರ್ಸ್ ನಲ್ಲಿ ಉಮೇಶ್‌ ಕತ್ತಿ ಅವರ ಪಾರ್ಥಿವ ಶರೀರದ ದರ್ಶನ ನಡೆಯುತ್ತಿದ್ದಾಗ ಅಲ್ಲೇ ಇದ್ದರು. ಈ ಹೊತ್ತಲ್ಲಿ ಅವರಲ್ಲಿ ಸಣ್ಣ ಮಟ್ಟದ ಅಸ್ವಸ್ಥತೆ ಕಾಣಿಸಿಕೊಂಡಿತು. ಹೀಗಾಗಿ ಹೊರಗಡೆ ಅಣ್ಣನ ಪಾರ್ಥಿವ ಶರೀರದ ಅಂತಿಮ ದರ್ಶನ ನಡೆಯುತ್ತಿದ್ದಾಗಲೇ ಒಳಗೆ ರಮೇಶ್‌ ಕತ್ತಿ ಅವರ ಆರೋಗ್ಯ ತಪಾಸಣೆ ನಡೆಯಿತು. ಅಲ್ಲೇ ಅವರಿಗೆ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ. ಅವರ ಹೃದಯದ ಇಸಿಜಿ ಮಾಡಲಾಗಿದೆ. ಈಗ ಅವರ ಆರೋಗ್ಯ ಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ ಎಂದು ತಿಳಿದುಬಂದಿದೆ.

ರಮೇಶ್ ಕತ್ತಿ ಅವರು ಈ ಹಿಂದೆ ಸಂಸದರಾಗಿದ್ದು, ಪ್ರಸಕ್ತ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ| Umesh Katti | ಬೆಲ್ಲದ ಬಾಗೇವಾಡಿಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ: ಸಿಎಂ, ಮಾಜಿ ಸಿಎಂ ಆಗಮನ

Continue Reading
Advertisement
World Malaria Day
ಆರೋಗ್ಯ60 mins ago

World Malaria Day: ಭಾರತದಲ್ಲಿ ಮಲೇರಿಯಾಗೆ ಪ್ರತಿವರ್ಷ 20 ಸಾವಿರ ಬಲಿ; ಸೊಳ್ಳೆಗಳು ಭಾರಿ ಡೇಂಜರ್‌!

dina bhavishya read your daily horoscope predictions for April 25 2024
ಭವಿಷ್ಯ5 hours ago

Dina Bhavishya : ಇಂದು ಈ ನಾಲ್ಕು ರಾಶಿಯವರಿಗೆ 4 ಲಕ್ಕಿ ನಂಬರ್!

PM
ದೇಶ6 hours ago

ಪ್ರಧಾನಿ ವಿರುದ್ಧ ಪಿತೂರಿ ನಡೆಸುವುದು ದೇಶದ್ರೋಹ; ದೆಹಲಿ ಹೈಕೋರ್ಟ್ ಮಹತ್ವದ ಆದೇಶ

Union Minister Pralhad Joshi Statement in Unakal
ಹುಬ್ಬಳ್ಳಿ6 hours ago

Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

DC vs GT
ಕ್ರೀಡೆ7 hours ago

DC vS GT: ಗುಜರಾತ್​ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು ; ಪ್ಲೇ ಆಫ್​ ರೇಸ್ ಜೀವಂತ

PUBG Love
ದೇಶ7 hours ago

PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

Nada Gheethe
ಪ್ರಮುಖ ಸುದ್ದಿ7 hours ago

‌Nada Geethe: ನಾಡಗೀತೆ ವಿವಾದ; ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್

Sachin Tendulkar Birthday
ಕ್ರೀಡೆ7 hours ago

Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

PM Narendra Modi
ಕರ್ನಾಟಕ7 hours ago

PM Narendra Modi: ಪ್ರಧಾನಿ ಮೋದಿಗೆ ‘ಪ್ರಾಮಿಸ್ಡ್ ನೇಷನ್’ ಪುಸ್ತಕ ಅರ್ಪಣೆ

Chikkaballapur Lok Sabha Constituency Congress candidate Raksha Ramaiah election campaign in Nelamangala
ಚಿಕ್ಕಬಳ್ಳಾಪುರ8 hours ago

Lok Sabha Election 2024: ನೆಲಮಂಗಲದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌