ನಾಲ್ಕು ವರ್ಷ ಹಿಂದಿನ ಸಾವಿನ ಪ್ರಕರಣ: ಆದಿಕೇಶವುಲು ಪುತ್ರನಿಗೆ ಸಿಬಿಐ ಉರುಳು - Vistara News

ಕ್ರೈಂ

ನಾಲ್ಕು ವರ್ಷ ಹಿಂದಿನ ಸಾವಿನ ಪ್ರಕರಣ: ಆದಿಕೇಶವುಲು ಪುತ್ರನಿಗೆ ಸಿಬಿಐ ಉರುಳು

ಉದ್ಯಮಿ ಆದಿಕೇಶವುಲು ಆಪ್ತ ರಘುನಾಥ್ ಸಾವು ಪ್ರಕರಣದ ತನಿಖೆಯನ್ನು ಹೈಕೋರ್ಟ್‌ ಸಿಬಿಐಗೆ ವಹಿಸಿ ಆದೇಶ ನೀಡಿದೆ.

VISTARANEWS.COM


on

Rakshit Shetty Richard Anthony Produce By Hombale
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಲ್ಕು ವರ್ಷಗಳ ಹಿಂದಿನ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿರುವುದರಿಂದ ದಿವಂಗತ ಆದಿಕೇಶವುಲು ಪುತ್ರ ಡಿ.ಎ.ಶ್ರೀನಿವಾಸ್‌ಗೆ ಕಂಟಕ ಎದುರಾಗಿದೆ. ಉದ್ಯಮಿ ಆದಿಕೇಶವುಲು ಆಪ್ತನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಶ್ರೀನಿವಾಸ್ ಸೇರಿ ನಾಲ್ವರ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಏಕಸದಸ್ಯ ಪೀಠ, 6 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಮೂರು ಆಯಾಮಗಳಲ್ಲಿ ತನಿಖೆ ನಡೆಸುವಂತೆ ನ್ಯಾಯಪೀಠ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಲ್ಲಿಸಿರುವ ಬಿ. ರಿಪೋರ್ಟ್‌ನ ಯಾವುದೇ ಅಂಶಗಳನ್ನು ಸಿಬಿಐ ಪರಿಗಣಿಸಬಾರದು. ಇದೀಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿರುವ ಪ್ರಕರಣವನ್ನು ತನಿಖೆ ಮುಗಿಯುವ ತನಕ ಸ್ಥಗಿತಗೊಳಿಸಬೇಕು ನ್ಯಾಯಪೀಠ ಆದೇಶಿಸಿದೆ. ಹೀಗಾಗಿ ಪ್ರಕರಣದಲ್ಲಿ ಆದಿಕೇಶವುಲು ಪುತ್ರ ಶ್ರೀನಿವಾಸ್, ಪುತ್ರಿ ಕಲ್ಪಜ ಹಾಗೂ ದಾಮೋದರ್ ಸೇರಿ ನಾಲ್ವರು ಆರೋಪಿಗಳಿಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ | Car Accident | ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಏಳು ಜನರಿಗೆ ಗಾಯ

ಘಟನೆಯ ಹಿನ್ನೆಲೆ
2019ರ ಮೇನಲ್ಲಿ ವೈಟ್‌ ಫೀಲ್ಡ್ ಬಳಿಯ ಶ್ರೀನಿವಾಸ್ ಒಡೆತನದ ಫ್ಲ್ಯಾಟ್‌ನಲ್ಲಿ ಆದಿಕೇಶವುಲು ಆಪ್ತನಾಗಿದ್ದ ರಘುನಾಥ್ ಮೃತಪಟ್ಟಿದ್ದರು. ರಘುನಾಥ್ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪಿಸಿದ್ದರು. ರಘುನಾಥ್ ಅವರು ಮೃತಪಟ್ಟ ನಂತರ ಆದಿಕೇಶವುಲು ಪುತ್ರ ಡಿ.ಎ ಶ್ರೀನಿವಾಸ್ ಅವರು, ನಕಲಿ ಛಾಪಾ ಕಾಗದ ಬಳಸಿದ್ದರು. ಬಳಿಕ ರಘುನಾಥ್ ಹೆಸರಿನಲ್ಲಿ ನಕಲಿ ವಿಲ್ ತಯಾರಿಸಿ ಅವರ ಬಳಿ ಇರುವ ಆಸ್ತಿ ತಮಗೆ ಸೇರಬೇಕು ಎಂದು ಹೇಳಿದ್ದರು.

ಆದರೆ, ಶ್ರೀನಿವಾಸ್ ಅಕ್ರಮವಾಗಿ ರಘುನಾಥ್‌ನನ್ನು ಕೂಡಿಟ್ಟು ಹಿಂಸೆ ಕೊಟ್ಟು ಸಾಯಿಸಿದ್ದಾರೆಂದು ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಹೀಗಾಗಿ ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿತ್ತು. ತನಿಖೆ ನಡೆಸಿದ್ದ ಎಸ್‌ಐಟಿ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿತ್ತು. ಆದರೆ ರಘುನಾಥ್‌ ಕುಟುಂಬಸ್ಥರು ಬಿ ರಿಪೋರ್ಟ್‌ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿ, ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿದ್ದರು. ಬೇನಾಮಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ರಘುನಾಥ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ | ಎಣ್ಣೆ ಕಿಕ್ಕಲ್ಲಿ ಟೀಚರ್‌ ಕಿರಿಕ್ಕು: ಕುಡಿದೇ ಪಾಠ ಮಾಡುವ ಶಿಕ್ಷಕಿ ಅಮಾನತು, ಟೇಬಲ್‌ ಒಳಗೇ ಸಿಕ್ತು ಮದ್ಯದ ಬಾಟಲ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಆರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದರು. ನಿಯಮಬಾಹಿರವಾಗಿ 85 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ, ಅದನ್ನು ಪ್ರಶ್ನಿಸಿದ್ದಕ್ಕೆ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅದರಲ್ಲಿ ಆರೋಪಿಸಿದ್ದರು. ಡೆತ್ ನೋಟ್‌ನಲ್ಲಿ, ʼಸಚಿವರ ಮೌಖಿಕ ಆದೇಶ ಮೇಲೆ ಹಣ ವರ್ಗಾವಣೆʼ ವಿಚಾರ ಪ್ರಸ್ತಾಪವಿದೆ.

VISTARANEWS.COM


on

self harming chandrashekar ವಾಲ್ಮೀಕಿ
Koo

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ (Self Harming) ಪ್ರಕರಣದಲ್ಲಿ ಮೂರು ಜನ ಅಧಿಕಾರಿಗಳ (Officers) ವಿರುದ್ಧ ಪ್ರಕರಣ (FIR) ದಾಖಲಿಸಲಾಗಿದೆ. ಚಂದ್ರಶೇಖರ್‌ ಬರೆದಿಟ್ಟಿರುವ ಡೆತ್‌ ನೋಟ್‌ನಲ್ಲಿ (Death note) ಒಬ್ಬರು ಸಚಿವರ (minister) ಉಲ್ಲೇಖ ಕಂಡುಬಂದಿದೆ.

ಶಿವಮೊಗ್ಗ (Shivamogga news) ನಗರದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್, ಬ್ಯಾಂಕ್ ಅಧಿಕಾರಿ ಸುಚಿಸ್ಥನಾ ಎಂಬವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ನಿಗಮದಲ್ಲಿ ನಿಯಮಬಾಹಿರವಾಗಿ 85 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವನ್ನು ಡೆತ್ ನೋಟ್‌ನಲ್ಲಿ ನೌಕರ ಮಾಡಿದ್ದಾರೆ.

ಚಂದ್ರಶೇಖರ್‌ ಅವರು ಆರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದರು. ನಿಯಮಬಾಹಿರವಾಗಿ 85 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ, ಅದನ್ನು ಪ್ರಶ್ನಿಸಿದ್ದಕ್ಕೆ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅದರಲ್ಲಿ ಆರೋಪಿಸಿದ್ದರು. ಡೆತ್ ನೋಟ್‌ನಲ್ಲಿ, ʼಸಚಿವರ ಮೌಖಿಕ ಆದೇಶ ಮೇಲೆ ಹಣ ವರ್ಗಾವಣೆʼ ವಿಚಾರ ಪ್ರಸ್ತಾಪವಿದೆ. ಸಚಿವರ ಹೆಸರು ಬರೆಯದೇ ಮೌಖಿಕ ಆದೇಶ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದು, ಈ ಸಚಿವರು ಯಾರು ಎಂಬ ಪ್ರಶ್ನೆ ಹಾಗೇ ಉಳಿದಿದೆ.

85 ಕೋಟಿ ರೂ. ಹಣ ವರ್ಗಾವಣೆ ವಿಚಾರದಲ್ಲಿ ಚಂದ್ರಶೇಖರ್‌ ಭಯಗೊಂಡಿದ್ದರು ಎಂದು ಗೊತ್ತಾಗಿದೆ. ಹಣ ಯಾರ ಅಕೌಂಟ್‌ಗೆ ಕಳಿಸಿದ್ದಾರೆ ಎಂದು ತಿಳಿಯದೇ ಆತಂಕಗೊಂಡಿದ್ದರು. ಬ್ಯಾಂಕ್ ಅಧಿಕಾರಿಗೆ ಈ ಬಗ್ಗೆ ಮಾಹಿತಿ ಕೇಳಿದರೂ ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿರಲಿಲ್ಲ. 85 ಕೋಟಿ ವರ್ಗಾವಣೆ ಆಗಿದ್ದು ಎಲ್ಲಿಗೆ ಎಂಬುದನ್ನು ಬ್ಯಾಂಕ್‌ ಅಧಿಕಾರಿ ತಿಳಿಸಬೇಕಿದೆ. ಮೌಖಿಕ ಆದೇಶ ನೀಡಿದ ಸಚಿವರು ಯಾರು ಎಂಬುದನ್ನು ಚಂದ್ರಶೇಖರ್‌ ಅವರ ಮೇಲಧಿಕಾರಿಗಳು ತಿಳಿಸಬೇಕಿದೆ.

ಕಣ್ಣೀರಿಟ್ಟ ಚಂದ್ರಶೇಖರ್ ಪತ್ನಿ

“ನನ್ನ ಗಂಡನ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕು. ನಾನು ಎರಡು ಮಕ್ಕಳನ್ನು ಇಟ್ಟುಕೊಂಡು ಹೇಗೆ ಬದುಕೋದು ಸರ್” ಎಂದು ಗಂಡನನ್ನು ನೆನೆದು ಚಂದ್ರಶೇಖರ್ ಪತ್ನಿ ಕವಿತಾ ಕಣ್ಣೀರಿಟ್ಟಿದ್ದಾರೆ. ʼʼನನ್ನ ಗಂಡನ ಸಾವಿಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಆಗಬೇಕು. ಮೂವರು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರು ಒಂದು ರೂಪಾಯಿ ಲಂಚ ಪಡೆದಿಲ್ಲ. ನಾನು ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡ್ತಾ ಇದ್ದೀನಿ” ಎಂದು ಶಿವಮೊಗ್ಗದಲ್ಲಿ ಚಂದ್ರಶೇಖರ್ ಪತ್ನಿ ಕವಿತಾ ಹೇಳಿಕೆ ನೀಡಿದ್ದಾರೆ.

“ಸಚಿವರನ್ನು ವಜಾ ಮಾಡಿ”

“ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರು ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ. ನಾನು ಹೇಡಿಯಲ್ಲ ಎಂದು ಸಹ ಅವರು ಬರೆದಿದ್ದಾರೆ. ಸೂಪರಿಂಟೆಂಡೆಂಟ್ ಪರಿಸ್ಥಿತಿ ಹೀಗಾದರೆ ಸಾಮಾನ್ಯ ಅಧಿಕಾರಿಗಳ ಪರಿಸ್ಥಿತಿ ಏನು? ಕೋಟ್ಯಾಂತರ ರೂಪಾಯಿ ಹಣ ಸಚಿವರ ಮೌಖಿಕ ಆದೇಶದ ಮೂಲಕ ಹಣ ವರ್ಗಾವಣೆ ಆಗಿದೆ. ಸರ್ಕಾರದ ಅಧಿಕಾರಿಗಳಿಗೆ ಈ ಪರಿಸ್ಥಿತಿ ಬರುತ್ತೆ ಅಂದರೆ ನಾವು ಯಾವ ವಾತಾವರಣದಲ್ಲಿದ್ದೇವೆ? ಇಡೀ ಪ್ರಕರಣ ನೋಡಿದರೆ ಏನೂ ನಡೆದೇ ಇಲ್ಲ ಎಂಬಂತೆ ಸರ್ಕಾರ ಇದೆ. ಕುಟುಂಬಗಳು ಅನಾಥವಾಗುತ್ತಿವೆ” ಎಂದು ಶಿವಮೊಗ್ಗದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್ ಟೀಕಿಸಿದ್ದಾರೆ.

ಸಿಎಂ ಕೂಡಲೇ ತಮ್ಮ ವಾಲ್ಮೀಕಿ ನಿಗಮದ ಮಂತ್ರಿಯನ್ನು ವಜಾಗೊಳಿಸಬೇಕು. ಈ ಘಟನೆಗಳನ್ನು ರಾಜ್ಯದ ಜನ ಗಮನಿಸುತ್ತಾರೆ. ಕೂಡಲೇ ಸಂಬಂಧ ಪಟ್ಟ ಮಂತ್ರಿಯ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದ ಉಸ್ತುವಾರಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಸರ್ಕಾರಿ ನೌಕರನ ಸಾವಿಗೆ ಕಾರಣರಾದವರ ಹೆಸರನ್ನು ಸಹ ಎಫ್ಐಆರ್‌ನಲ್ಲಿ ಸೇರಿಸಬೇಕು. ಅಧಿಕಾರಿಗಳು ಹೆದರಿಕೊಂಡು ಕೆಲಸ ಮಾಡುವ ಪರಿಸ್ಥಿತಿ ಬಂದಿದೆ. ಆತ್ಮಹತ್ಯೆ ಆಗಿ ಎರಡು ದಿನ ಆದರೂ ಸರ್ಕಾರ ಸುಮ್ಮನಿರುವುದನ್ನು ನೋಡಿ ಅನುಮಾನ ಬರುತ್ತಿದೆ” ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

Continue Reading

ಕರ್ನಾಟಕ

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಚೇತನ್, ನವೀನ್ ಗೌಡ ಎಸ್ಐಟಿ ವಶಕ್ಕೆ

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇದ್ದ ಕಾರಣ ಹೈಕೋರ್ಟ್‌ಗೆ ಬಂದಿದ್ದ ಚೇತನ್‌ ಹಾಗೂ ನವೀನ್‌ಗೌಡನನ್ನು ಮಂಗಳವಾರ ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Chetan and Naveen gowda
ಚೇತನ್‌ ಮತ್ತು ನವೀನ್‌ ಗೌಡ
Koo

ಬೆಂಗಳೂರು: ಪೆನ್ ಡ್ರೈವ್ ಹಂಚಿಕೆ ಪ್ರಕರಣದ (Prajwal Revanna Case) ಆರೋಪಿಗಳಾದ ಚೇತನ್, ನವೀನ್ ಗೌಡನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇದ್ದ ಕಾರಣ ಹೈಕೋರ್ಟ್‌ಗೆ ಬಂದಿದ್ದ ಇಬ್ಬರನ್ನೂ ಮಂಗಳವಾರ ವಶಕ್ಕೆ ಪಡೆಯಲಾಗಿದೆ.

ಹೈಕೋರ್ಟ್‌ನಿಂದ ಹೊರಗೆ ಬರುತ್ತಿದ್ದಂತೆ ಪಾರ್ಕಿಂಗ್‌ ಲಾಟ್‌ ಬಳಿ ಚೇತನ್, ನವೀನ್ ಗೌಡ ಸಿಕ್ಕಿಬಿದ್ದಿದ್ದು, ಅವರ ಜತೆ ಇದ್ದ ಶ್ಯಾಂ ಸುಂದರ್ ಎಂಬಾತನನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ವಿಚಾರಣೆ ನಡೆಸಲು ಸಿಐಡಿ ಕಚೇರಿಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

ಪೆನ್‌ಡ್ರೈವ್‌ ಹಂಚಿಕೆ ಆರೋಪದಲ್ಲಿ ಏ.23ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ 6 ಮತ್ತು 7 ನೇ ಆರೋಪಿಗಳಾಗಿ ಇತ್ತೀಚೆಗೆ ಚೇತನ್ ಹಾಗೂ ಲಿಖಿತ್ ಬಂಧನವಾಗಿತ್ತು. ಇದೀಗ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಕೇಸ್‌ ದಾಖಲಾದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಾದ ನವೀನ್ ಗೌಡ, ಚೇತನ್ ಹಾಗೂ ಪುಟ್ಟಿ ಆಲಿಯಾಸ್ ಪುಟ್ಟರಾಜ್ ತಲೆಮರೆಸಿಕೊಂಡಿದ್ದರಿಂದ ವಶಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ. ಇದೀಗ ಅವರೇ ವಿಚಾರಣೆಗಾಗಿ ಕೋರ್ಟ್‌ ಬಳಿ ಬಂದಾಗ ಸಿಕ್ಕಿಬಿದ್ದಿದ್ದಾರೆ.

ಸಂತ್ರಸ್ತೆಯರಲ್ಲಿ ಜೆಡಿಎಸ್‌ ಕಾರ್ಯಕರ್ತರೆಯರೇ ಹೆಚ್ಚಾಗಿದ್ದಾರೆ: ನವೀನ್‌ ಗೌಡ

Prajwal Revanna Case

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರು ಬರಲಿ ವಿಚಾರಣೆ ಎದುರಿಸಲಿ. ಸಂತ್ರಸ್ತೆಯರಲ್ಲಿ ಜೆಡಿಎಸ್‌ ಕಾರ್ಯಕರ್ತರೆಯರೇ ಹೆಚ್ಚಾಗಿದ್ದಾರೆ. ಅವರಿಗೆಲ್ಲ ನ್ಯಾಯ ದೊರಕಬೇಕು. ಪ್ರಜ್ವಲ್‌ ಕೇಸ್‌ನಿಂದ (Prajwal Revanna Case) ಎಷ್ಟೋ ಜನ ಹೆಣ್ಣು ಮಕ್ಕಳು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಎಸ್‌ಐಟಿ ಮುಂದೆ ವಿಚಾರಣೆಗೆ ಅವರೂ ಬರಲಿ, ನಾನೂ ಹಾಜರಾಗುತ್ತೇನೆ ಎಂದು ಅಶ್ಲೀಲ ವಿಡಿಯೊ ವೈರಲ್‌ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನವೀನ್‌ ಗೌಡ ಹೇಳಿದ್ದ.

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31ರಂದು ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ಹೇಳಿದ ಬೆನ್ನಲ್ಲೇ ನವೀನ್‌ ಗೌಡ ವಿಸ್ತಾರ ನ್ಯೂಸ್‌ಗೆ ಸೋಮವಾರ ಪ್ರತಿಕ್ರಿಯೆ ನೀಡಿದ್ದ.

ಅಶ್ಲೀಲ ವಿಡಿಯೊ ಆರೋಪದಲ್ಲಿ ಏ. 23ರಂದು ನನ್ನ ಮೇಲೆಯೂ ಎಫ್‌ಐಆರ್‌ ದಾಖಲಿಸಿದ್ದಾರೆ. ಹಾಸನದಲ್ಲಿ ಕಳೆದ 10 ವರ್ಷದಲ್ಲಿ ಎಷ್ಟು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ನಾಪತ್ತೆಯಾಗಿದ್ದಾರೆ ಎಂಬುವುದು ಮರು ತನಿಖೆಯಾಗಬೇಕಿದೆ. ಈ ಆತ್ಮಹತ್ಯೆಗಳಿಗೂ ಕೂಡ ಪ್ರಜ್ವಲ್‌ ರೇವಣ್ಣಗೆ ಸಂಬಂಧವಿದೆ. ಎಸ್‌ಐಟಿಯವರುವ ವಿಚಾರಣೆಗೆ ನನ್ನನ್ನು ಕರೆದಿಲ್ಲ. ಅವರು ಕರೆದರೆ ನಾನು ಹೋಗುತ್ತೇನೆ. ನಾನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಕೇಸ್‌ ಹಾಕಿದ್ದಾರೆ ಹೇಳಿದ್ದ.

ಅಶ್ಲೀಲ ವಿಡಿಯೊ ವಿಷಯ ಬಹಿರಂಗಪಡಿಸದಂತೆ ನನಗೂ ಪ್ರಜ್ವಲ್‌ ರೇವಣ್ಣ ಅವರು ಆಮಿಷ ಒಡ್ಡಿದ್ದರು. ಅವರ ಸಹಚರನನ್ನು ನನ್ನ ಭೇಟಿಯಾಗಲು ಕಳುಹಿಸಿದ್ದರು ಎಂದು ಆರೋಪಿಸಿದ್ದ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತರಾಗಿದ್ದರು. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ನವೀನ್ ಗೌಡ ಮೇಲೆ ಏ.23ರಂದು ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷವಾಗಿ ಶಾಸಕ ಎ. ಮಂಜು ವಿರುದ್ಧ ಪೋಸ್ಟ್ ಹಾಕಿ ಕೆಲವೇ ಸಮಯದ ಬಳಿಕ ಡಿಲೀಟ್‌ ಮಾಡಿದ್ದ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ, ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿ, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದ. ನಂತರ ಸುಳ್ಳು ಆರೋಪ ಮಾಡಿದ್ದಾರೆ ಎಂದು ನವೀನ್‌ ಗೌಡ ವಿರುದ್ಧ ಶಾಸಕ ಎ. ಮಂಜು ಅವರು ಎಸ್‌ಐಟಿಗೆ ದೂರು ನೀಡಿದ್ದರು.

Continue Reading

ಬೆಂಗಳೂರು

Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

Traffic Violation : ಟ್ರಾಫಿಕ್‌ ಇರುವ ಪ್ರಮುಖ ರಸ್ತೆಗಳಲ್ಲಿ ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ಏನಾದರೂ ವಾಹನ ನಿಂತುಬಿಟ್ಟರೆ ಬೆಂಗಳೂರು ಸಂಚಾರಿ ಪೊಲೀಸರು ಚಾಲಕನ ಮೇಲೆ ಕೇಸ್ ದಾಖಲಿಸಲಿದ್ದಾರೆ. ಜತೆಗೆ ಮಕ್ಕಳ ಅಪಾಯಕಾರಿ ವ್ಹೀಲಿಂಗ್‌ ಶೋಕಿಗೆ ಪೋಷಕರ ತಲೆದಂಡವಾಗಲಿದೆ.

VISTARANEWS.COM


on

By

Traffic Violation Case filed against driver if petrol runs out and vehicle stops on road
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಲ್ಲಿ ಟ್ರಾಫಿಕ್‌ ಸಮಸ್ಯೆಯನ್ನು ತಪ್ಪಿಸಲು ಸಂಚಾರಿ ಪೊಲೀಸರ (Traffic Violation) ಸರ್ಕಸ್ ಮುಂದುವರಿದಿದೆ. ಸದ್ಯ ಗಾಡಿ ಓಡಿಸುವಾಗ ಪೆಟ್ರೋಲ್‌ ಇಲ್ಲದೆ ರಸ್ತೆ ಮಧ್ಯೆ ಏನಾದರೂ ನಿಂತರೆ ಕೇಸ್‌ ಬೀಳುವುದು ಗ್ಯಾರಂಟಿ.. ಹೌದು ಅತಿ ಹೆಚ್ಚು ಟ್ರಾಫಿಕ್‌ ಇರುವ ರಸ್ತೆಗಳಲ್ಲಿ ಏನಾದರೂ ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ, ಚಾಲಕನ ಮೇಲೆ ಕೇಸ್ ಹಾಕಲಾಗುತ್ತದೆ.

ಸೆಕ್ಷನ್ 283ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲು ಬೆಂಗಳೂರು ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಪೆಟ್ರೋಲ್‌ ಖಾಲಿಯಾಗಿ ಗಾಡಿಗಳು ನಿಂತು ಹೋದರೆ, ಇದರಿಂದ ಇನ್ನಷ್ಟು ಟ್ರಾಫಿಕ್‌ ಜಾಮ್‌ ಉಂಟಾಗುತ್ತದೆ. ಹೀಗಾಗಿ ಟ್ರಾಫಿಕ್‌ ಸಮಸ್ಯೆಯನ್ನು ಸೃಷ್ಟಿಸಿದ ಗಾಡಿ ಚಾಲಕನ ಮೇಲೆ ಕೇಸ್ ದಾಖಲು ಮಾಡಲು ಮುಂದಾಗಿದ್ದಾರೆ.

ಪ್ರಮುಖವಾಗಿ ಹೆಬ್ಬಾಳ, ಏರ್‌ಪೋಟ್‌ ರೋಡ್, ಗೋರಗುಂಟೆ ಪಾಳ್ಯ ರೋಡ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೇಟ್ರೋಲ್ ಇಲ್ಲದೆ ನಿಂತು ಹೋದಲ್ಲಿ ಪ್ರಕರಣ ದಾಖಲಿಸಿವುದಾಗಿ, ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: School Reopen: ನಾಳೆಯಿಂದ ಶಾಲೆ ಮರು ಆರಂಭ; ಮೊದಲ ದಿನವೇ ಮಕ್ಕಳಿಗೆ ಸಿಹಿ ಸುದ್ದಿ

ಮಕ್ಕಳ ವ್ಹೀಲಿಂಗ್‌ ಶೋಕಿಗೆ ಪೋಷಕರಿಗೆ ದಂಡ

ವ್ಹೀಲಿಂಗ್‌ ಶೋಕಿಗೆ (Bike Wheeling) ಪೋಷಕರು ಶಿಕ್ಷೆ ಅನುಭವಿಸಬೇಕಾಗುತ್ತದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹೊರವಲಯದಲ್ಲಿ ಬೈಕ್ ವ್ಹೀಲಿಂಗ್ (Wheeling Stunt) ಮಿತಿ ಮೀರಿದೆ. ಮೀಸೆ ಚಿಗುರದ ಯುವಕರ ಹುಚ್ಚಾಟಕ್ಕೆ ವಾಹನ ಸವಾರರು ಕಿರಿಕಿರಿ ಅನುಭವಿಸುತ್ತಿದ್ದು ಮಾತ್ರವಲ್ಲ, ಅದೆಷ್ಟೋ ಅಮಾಯಕರು ಪ್ರಾಣಬಿಟ್ಟಿದ್ದಾರೆ.

ನಗರದಲ್ಲಿ ಪುಂಡರ ವ್ಹೀಲಿಂಗ್ ಶೋಕಿ ಇನ್ನೂ ನಿಲ್ಲುತ್ತಲೇ ಇಲ್ಲ. ಮುಖ್ಯ ರಸ್ತೆಯಲ್ಲೇ ಯುವಕರು ವ್ಹೀಲಿಂಗ್ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್​ ಮಾಡುವುದು ಹೆಚ್ಚಾಗಿದೆ. ವ್ಹೀಲಿಂಗ್‌ ಮಾಡುವ ಸವಾರರ ವಿರುದ್ಧ ಪೊಲೀಸರು ಅದೆಷ್ಟೇ ಕಾರ್ಯಾಚರಣೆ ನಡೆಸಿದರೂ, ಪುಂಡರು ಡೋಂಟ್‌ ಕೇರ್‌ ಅಂತಿದ್ದರು.

ಬೈಕ್ ಜತೆ ಸರ್ಕಸ್ ಮಾಡುತ್ತಾ, ಜನಸಂದಣಿಯಿರುವ ರಸ್ತೆಯಲ್ಲೇ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಟಾರ್ಚರ್ ಕೊಡುತ್ತಿದ್ದರು. ವ್ಹೀಲಿಂಗ್ ಮಾಡುತ್ತಿರುವ ಪುಂಡರ ಹಾವಳಿಗೆ ಸಾರ್ವಜನಿಕರು ಭಯಭೀತರಾಗಿದ್ದರು. ಸದ್ಯ ಬೆಂಗಳೂರಿನಲ್ಲಿ ವ್ಹೀಲಿಂಗ್‌ ಪುಂಡಾಟ ಮಾಡುತ್ತಿದ್ದವರಿಗೆ ಸಂಚಾರಿ ಪೊಲೀಸರು ಶಾಕ್ ಕೊಟ್ಟಿದ್ದಾರೆ.

ವ್ಹೀಲಿಂಗ್‌ಗೆ ಬ್ರೇಕ್‌ ಹಾಕಲು ಹೊಸ ಮಾರ್ಗವನ್ನು ಕಂಡು ಕೊಂಡಿರುವ ಸಂಚಾರಿ ಪೊಲೀಸರು, ವ್ಹೀಲಿಂಗ್‌ ಕೇಸ್‌ನಲ್ಲಿ ಅಪ್ರಾಪ್ತರು ಕಂಡು ಬಂದರೆ ಪೋಷಕರ ಮೇಲೆ ಕೇಸ್ ದಾಖಲಾಗುತ್ತದೆ. ಜೆಜೆ ಆಕ್ಟ್ ಅಡಿಯಲ್ಲಿ ಪೋಷಕರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Arvind Kejriwal:ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿತ್ತು. ಇದೀಗ ತಮ್ಮ ಆರೋಗ್ಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಜಾಮೀನು ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು.

VISTARANEWS.COM


on

Aravind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಭಾರೀ ಹಿನ್ನಡೆಯಾಗಿದೆ. ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ಮತ್ತಷ್ಟು ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿತ್ತು. ಇದೀಗ ತಮ್ಮ ಆರೋಗ್ಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಜಾಮೀನು ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಕೆ.ವಿ ವಿಶ್ವನಾಥನ್‌ ಇದ್ದ ನ್ಯಾಯಪೀಠ, ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ್ದು, ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮುಂದಿನ ದಿನಗಳಲ್ಲಿ ನಡೆಸಲಿದ್ದಾರೆ ಎಂದು ಹೇಳಿದೆ. ಅಲ್ಲದೇ ಈ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರಿಗೆ ಹಸ್ತಾಂತರಿಸಿದೆ. ಹೀಗಾಗಿ ಜಾಮೀನು ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಕೇಜ್ರಿವಾಲ್‌ ಜೂ.2ರಂದು ತಿಹಾರ್‌ ಜೈಲಿಗೆ ಮರಳಬೇಕಾಗಿದೆ.

ನಿನ್ನೆಯಷ್ಟೇ ದೆಹಲಿ ಸಚಿವೆ ಆತಿಶಿ (Atishi) ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯದ ಕುರಿತು ಮಾಹಿತಿಯೊಂದನ್ನು ನೀಡಿದ್ದು, ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಕ್ಯಾನ್ಸರ್‌ ಇದೇಯೇ ಎಂಬ ಪ್ರಶ್ನೆ ಮೂಡಿಸಿದೆ. ಹಾಗಾಗಿ, ಜೂನ್‌ 2ರಂದು ದೆಹಲಿ ಸಿಎಂ ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಹೇಳಲಾಗುತ್ತಿತ್ತು.

“ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಅವರ ಕೇಟೊನ್‌ ಪ್ರಮಾಣವು ಜಾಸ್ತಿಯಾಗಿದೆ. ಏಕಾಏಕಿ ತೂಕ ಕಡಿಮೆಯಾಗುವುದು, ಜಾಸ್ತಿಯಾಗುವುದನ್ನು ನೋಡಿದರೆ ಅವರಿಗೆ ಗಂಭೀರ ಕಾಯಿಲೆ ಇರುವ ಸಾಧ್ಯತೆ ಇದೆ. ಕಿಡ್ನಿ ಸಮಸ್ಯೆ ಅಥವಾ ಕ್ಯಾನ್ಸರ್‌ ಸೇರಿ ಯಾವುದೇ ಗಂಭೀರ ಕಾಯಿಲೆ ಇರಬಹುದು. ಹಾಗಾಗಿ, ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಿಗೆ ಹೋಗುವ ಬದಲು ಜೂನ್‌ 9ರಂದು ತೆರಳುವ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಲಾಗಿದೆ” ಎಂಬುದಾಗಿ ಆತಿಶಿ ತಿಳಿಸಿದ್ದರು.

ಏನಿದು ಅಬಕಾರಿ ನೀತಿ ಹಗರಣ?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ:Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು.

Continue Reading
Advertisement
T20 World Cup 2024
ಕ್ರೀಡೆ21 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

Viral Video
ವೈರಲ್ ನ್ಯೂಸ್21 mins ago

Viral Video: ವಿಮಾನದ ರೆಕ್ಕೆ ಮೇಲೆ ನಡೆದುಕೊಂಡು ಹೊರ ಬಂದ ಪ್ರಯಾಣಿಕರು; ವೈರಲಾಯ್ತು ವಿಡಿಯೋ

self harming chandrashekar ವಾಲ್ಮೀಕಿ
ಪ್ರಮುಖ ಸುದ್ದಿ26 mins ago

ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

Chetan and Naveen gowda
ಕರ್ನಾಟಕ39 mins ago

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಚೇತನ್, ನವೀನ್ ಗೌಡ ಎಸ್ಐಟಿ ವಶಕ್ಕೆ

Pushpa 2
ಸಿನಿಮಾ1 hour ago

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Traffic Violation Case filed against driver if petrol runs out and vehicle stops on road
ಬೆಂಗಳೂರು1 hour ago

Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

Aravind Kejriwal
ದೇಶ1 hour ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Success Story
ಕೃಷಿ2 hours ago

Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

Radhika Pandit
ಸ್ಯಾಂಡಲ್ ವುಡ್2 hours ago

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

chakravarthy sulibele
ಬೆಂಗಳೂರು2 hours ago

Chakravarthy Sulibele: ಮೈಸೂರಿನಲ್ಲಿ ಇಂದು ಸಂಜೆ ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್‌ ಸಮ್ಮಾನ್‌ ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ21 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌